Sachin Tendulkar Birthday: ಈ ಬಾರಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್‌ ತೆಂಡೂಲ್ಕರ್‌; ವಿಡಿಯೊ ವೈರಲ್​ - Vistara News

ಕ್ರೀಡೆ

Sachin Tendulkar Birthday: ಈ ಬಾರಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್‌ ತೆಂಡೂಲ್ಕರ್‌; ವಿಡಿಯೊ ವೈರಲ್​

Sachin Tendulkar Birthday: ಸಚಿನ್‌ ಸಾಧನೆ ನಿಜಕ್ಕೂ ಒಂದು ಅದ್ಭುತವೇ ಸರಿ. ಕ್ರಿಕೆಟ್​ ಬಾಳ್ವೆಯ ಆರಂಭದಿಂದ ಹಿಡಿದು ಕಡೇಯ ದಿನದವರೆಗೂ ಯಾವುದೇ ವಿವಾದವಿಲ್ಲದೆ ಸವ್ಯಸಾಚಿಯಾಗಿದ್ದ ಸಚಿನ್​ ಎಲ್ಲ ಕ್ರಿಕೆಟ್​ ಆಟಗಾರರಿಗೂ ಸ್ಫೂರ್ತಿಯಾಗಿದ್ದಾರೆ.

VISTARANEWS.COM


on

Sachin Tendulkar Birthday
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬಯಿ: ವಿಶ್ವ ಕಂಡ ಶ್ರೇಷ್ಠ ಬ್ಯಾಟ್ಸ್‌ಮನ್‌, ಲೆಜೆಂಡರಿ ಕ್ರಿಕೆಟರ್‌, ಕ್ರಿಕೆಟ್‌ ದೇವರು ಎಂದೆಲ್ಲ ನಾಮಾಂಕಿತರಾದ ಸಚಿನ್‌ ತೆಂಡೂಲ್ಕರ್‌(Sachin Tendulkar Birthday) ಅವರು ಎಪ್ರಿಲ್​ 24ರಂದು ತಮ್ಮ 51ನೇ ವರ್ಷದ ಹುಟ್ಟು ಹಬ್ಬವನ್ನು ‘ಸಚಿನ್​ ತೆಂಡೂಲ್ಕರ್​ ಫೌಂಡೇಶನ್‌’ನ(sachin tendulkar foundation) ಮಕ್ಕಳೊಂದಿಗೆ ಆಚರಿಸಿದ್ದರು. ಇದರ ವಿಡಿಯೊವನ್ನು ಸಚಿನ್(Sachin Tendulkar)​ ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಸಚಿನ್​ ಅವರಿಗೆ ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹರಸಿ ಹಾರೈಸಿದ್ದಾರೆ.

ಸಚಿನ್​ ಅವರು ‘ಸಚಿನ್​ ತೆಂಡೂಲ್ಕರ್ ಫೌಂಡೇಶನ್‌’ ಎನ್ನುವ ಹೆಸರಿನ ಪ್ರತಿಷ್ಠಾನದ ಮೂಲಕ ಬಡ ಮಕ್ಕಳಿಗೆ ಶಿಕ್ಷಣ, ಕ್ರಿಡೆ ಮತ್ತು ವೈದ್ಯಕೀಯ ನೆರವನ್ನು ನೀಡುತ್ತಿದ್ದಾರೆ. ಸಮಾಜಮುಖಿ ಕಾರ್ಯವನ್ನು ಮಾಡುವ ಮೂಲಕ ಅನೇಕ ಬಡ ಮಕ್ಕಳ ಕನಸನ್ನು ನನಸು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಈ ಪ್ರತಿಷ್ಠಾನವು ಮಕ್ಕಳಿಗೆ ಸಮಾನ ಅವಕಾಶವನ್ನು ನೀಡಲು ಮತ್ತು ಉತ್ತಮ ಜಗತ್ತನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

ಸಚಿನ್​ ಅವರು ತಮ್ಮ ಹುಟ್ಟು ಹಬ್ಬವನ್ನು ಈ ಫೌಂಡೇಶನ್​ನ ಮಕ್ಕಳೊಂದಿದೆ ಕೆಲ ಕಾಲ ಫುಟ್ಬಾಲ್​ ಆಡಿ, ಊಟ ಮಾಡುವ ಜತೆಗೆ ಕೇಕ್​ ಕತ್ತರಿಸಿ ಆಚರಿಸಿದ್ದಾರೆ. ಬಳಿಕ ಮಕ್ಕಳಿಗೆ ವಿಶೇಷವಾಗಿ ಹಾರೈಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತೆ ಕಿವಿ ಮಾತು ಹೇಳಿದ್ದಾರೆ.

ಇದನ್ನೂ ಓದಿ Sachin Tendulkar : ಕಾಶ್ಮೀರದ ಬಾಲಕಿಯ ಕ್ರಿಕೆಟ್​ ಪ್ರೀತಿ ಸಚಿನ್ ಫಿದಾ; ಇಲ್ಲಿದೆ ವಿಡಿಯೊ

​ಕಳೆದ ವರ್ಷ ಸಚಿನ್​ ಅವರು ತಮ್ಮ 50ನೇ ವರ್ಷದ ಜನ್ಮ ದಿನಾಚರಣೆಯನ್ನು ತಮ್ಮ ಕುಟುಂಬದೊಂದಿಗೆ ಗೋವಾದಲ್ಲಿ ಆಚರಿಸಿದ್ದರು. ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾದ ಸಚಿನ್​ ಅವರು ತಮ್ಮ ಹುಟ್ಟು ಹಬ್ಬವನ್ನು ಮಾತ್ರ ಹಳ್ಳಿ ಸೊಗಡಿನಲ್ಲಿ ಆಚರಿಸಿದ್ದರು. ಪತ್ನಿ ಅಂಜಲಿ ಮತ್ತು ಮಗಳು ಸಾರಾ ತೆಂಡೂಲ್ಕರ್ ಅವರೊಂದಿಗೆ ಒಲೆಯ ಪಕ್ಕದಲ್ಲಿ ಕುಳಿತು ಸಚಿನ್ ಒಲೆ ಊದುತ್ತಿರುವ ಫೋಟೊವನ್ನು ಹಂಚಿಕೊಂಚಿಕೊಂಡಿದ್ದರು.

2020ರಲ್ಲಿ ಹುಟ್ಟುಹಬ್ಬ ಆಚರಿಸದ ಸಚಿನ್​!

ಪ್ರತಿ ವರ್ಷವೂ ಸಂಭ್ರಮದೊಂದಿಗೆ ಹುಟ್ಟು ಹಬ್ಬ ಆಚರಿಸುತ್ತಿದ್ದ ಸಚಿನ್​ 2020ರಲ್ಲಿ ತಮ್ಮ 47ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ್ದ ಕೋವಿಡ್​ ಸಂಕಷ್ಟದಲ್ಲಿ ಸೇವೆ ಸಲ್ಲಿಸಿದ್ದ ಆರೋಗ್ಯ ಸೈನಿಕರಿಗೆ ಗೌರವ ಕೊಡುವ ನಿಟ್ಟಿನಲ್ಲಿ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿರಲಿಲ್ಲ. ಮನೆಯಲ್ಲಿಯೇ ತಾಯಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದರು.

24 ವರ್ಷಗಳ ಕ್ರಿಕೆಟ್‌ ಬಾಳ್ವೆಯಲ್ಲಿ 664 ಪಂದ್ಯ, 34,357 ರನ್‌, 201 ವಿಕೆಟ್‌, 100 ಅಂತಾರಾಷ್ಟ್ರೀಯ ಶತಕ, 164 ಅರ್ಧ ಶತಕ, ಲೆಕ್ಕವಿಲ್ಲದಷ್ಟು ದಾಖಲೆಗಳ ಸರದಾರ, ದೇಶದ ಶ್ರೇಷ್ಠ ಗೌರವ ಭಾರತ ರತ್ನ, ಪದ್ಮ ಪ್ರಶಸ್ತಿಗಳ ಒಡೆಯ, ರಾಜೀವ್‌ ಗಾಂಧಿ ಖೇಲ್‌ರತ್ನ ಪ್ರಶಸ್ತಿಗಳಿಂದೆಲ್ಲ ಪುರಸ್ಕೃತರಾಗಿರುವ ಸಚಿನ್‌ ಸಾಧನೆ ನಿಜಕ್ಕೂ ಒಂದು ಅದ್ಭುತವೇ ಸರಿ. ಕ್ರಿಕೆಟ್​ ಬಾಳ್ವೆಯ ಆರಂಭದಿಂದ ಹಿಡಿದು ಕಡೇಯ ದಿನದವರೆಗೂ ಯಾವುದೇ ವಿವಾದವಿಲ್ಲದೆ ಸವ್ಯಸಾಚಿಯಾಗಿದ್ದ ಸಚಿನ್​ ಎಲ್ಲ ಕ್ರಿಕೆಟ್​ ಆಟಗಾರರಿಗೂ ಸ್ಫೂರ್ತಿಯಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮುಂದಿನ ಪಂದ್ಯದಿಂದ ‘ಯಂಗ್ ಸೆನ್ಸೇಷನ್’ ಔಟ್? ವೈಭವ್ ಸೂರ್ಯವಂಶಿ ಬಗ್ಗೆ ಕೋಚ್ ಕೊಟ್ಟ ಅಪ್ಡೇಟ್ ಏನು?

VISTARANEWS.COM


on

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 38 ಎಸೆತಗಳಲ್ಲಿ 103 ರನ್ ಚಚ್ಚಿ ಐಪಿಎಲ್‌ನಲ್ಲಿ ಸಂಚಲನ ಸೃಷ್ಟಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟರ್ ವೈಭವ್ ಸೂರ್ಯವಂಶಿ ಈಗ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಹೈದರಾಬಾದ್ ವಿರುದ್ಧದ ಅಮೋಘ ಶತಕದ ನಂತರ ಫೀಲ್ಡಿಂಗ್‌ಗೆ ಬಂದಿದ್ದ ವೈಭವ್, ಮಂಡಿರಜ್ಜು (Hamstring) ಸಮಸ್ಯೆಯಿಂದಾಗಿ ಮೈದಾನದಿಂದ ಹೊರನಡೆದಿದ್ದರು. ಫಿಸಿಯೋಗಳ ನೆರವಿನೊಂದಿಗೆ ಕುಂಟುತ್ತಾ ಮೈದಾನ ತೊರೆದ ಅವರು ಮತ್ತೆ ಫೀಲ್ಡಿಂಗ್‌ಗೆ ಮರಳದಿದ್ದದ್ದು ಅಭಿಮಾನಿಗಳಲ್ಲಿ ಮುಂದಿನ ಪಂದ್ಯದ ಲಭ್ಯತೆಯ ಬಗ್ಗೆ ಆತಂಕ ಮೂಡಿಸಿತ್ತು.

ಈ ಕುರಿತು ಪಂದ್ಯದ ಬಳಿಕ ಮಾಹಿತಿ ನೀಡಿದ ರಾಜಸ್ಥಾನ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಸೂರ್ಯವಂಶಿ ಅವರ ಗಾಯ ಅಷ್ಟೊಂದು ಗಂಭೀರವಾಗಿಲ್ಲ ಎಂದು ತಿಳಿಸಿದ್ದಾರೆ. “ವೈಭವ್ ಅವರ ಮಂಡಿರಜ್ಜು ಭಾಗದಲ್ಲಿ ಸ್ವಲ್ಪ ಅಸ್ವಸ್ಥತೆ ಇರುವುದು ನಿಜ, ಆದರೆ ಸದ್ಯ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಗುಣಮುಖರಾಗುತ್ತಿದ್ದಾರೆ. ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಅವರ ಫಿಟ್‌ನೆಸ್ ಬಗ್ಗೆ ಸಂಪೂರ್ಣ ಸ್ಪಷ್ಟತೆ ಸಿಗಲಿದೆ” ಎಂದು ಹೇಳುವ ಮೂಲಕ ಸೂರ್ಯವಂಶಿ ಮುಂದಿನ ಪಂದ್ಯಕ್ಕೆ ಮರಳುವ ಆಶಾವಾದ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನ ರಾಯಲ್ಸ್ ತಂಡವು ಏಪ್ರಿಲ್ 28 ರಂದು ಸತತ ಆರು ಗೆಲುವುಗಳೊಂದಿಗೆ ಅಜೇಯವಾಗಿರುವ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಪ್ರಸ್ತುತ ಟೂರ್ನಿಯಲ್ಲಿ ಆರ್‌ಆರ್ ತಂಡದ ಪ್ರಮುಖ ರನ್ ಸ್ಕೋರರ್ ಆಗಿರುವ ವೈಭವ್ ಸೂರ್ಯವಂಶಿ ಅಲಭ್ಯರಾದರೆ, ಅದು ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ. ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಸಂಜು ಸ್ಯಾಮ್ಸನ್ ಪಡೆಗೆ ಪ್ಲೇ-ಆಫ್ ಹಾದಿ ಸುಗಮಗೊಳಿಸಲು ಈ ಯಂಗ್ ಸೆನ್ಸೇಷನ್ ಆಟಗಾರನ ಫಿಟ್‌ನೆಸ್ ಅತ್ಯಂತ ನಿರ್ಣಾಯಕವಾಗಿದೆ.

Continue Reading

Latest

ಆರ್‌ಸಿಬಿ ಪ್ಲೇಯಿಂಗ್ 11 ಅಪ್‌ಡೇಟ್: ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್?

VISTARANEWS.COM


on

ನವದೆಹಲಿ: ಐಪಿಎಲ್ 2026ರ ಮೊದಲಾರ್ಧದಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈಗ ಮತ್ತೊಂದು ಮಹತ್ವದ ಸವಾಲಿಗೆ ಸಜ್ಜಾಗಿದೆ. ಈವರೆಗೆ ಆಡಿರುವ 7 ಪಂದ್ಯಗಳಲ್ಲಿ 5 ಗೆಲುವುಗಳೊಂದಿಗೆ 10 ಅಂಕಗಳನ್ನು ಗಳಿಸಿರುವ ಆರ್‌ಸಿಬಿ, ನಾಳೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವನ್ನು ಎದುರಿಸಲಿದೆ. ಆದರೆ, ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ತಂಡದ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆ ಇರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ತಂಡದ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅವರು ಅಭ್ಯಾಸದ ವೇಳೆ ಉಂಟಾದ ಗಾಯದ ಸಮಸ್ಯೆಯಿಂದಾಗಿ ಕಳೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದಲೂ ಹೊರಗುಳಿದಿದ್ದರು. ಈಗ ಅವರ ಗಾಯದ ಸಮಸ್ಯೆ ಇನ್ನೂ ಪೂರ್ಣವಾಗಿ ವಾಸಿಯಾಗದ ಕಾರಣ, ಅವರು ಡೆಲ್ಲಿ ವಿರುದ್ಧದ ಪಂದ್ಯವನ್ನೂ ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಇವರ ಜೊತೆಗೆ ಯುವ ವೇಗಿ ರಾಸಿಖ್ ಸಲಾಂ ದಾರ್ ಕಳೆದ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ (Muscle Cramp) ಒಳಗಾಗಿ ಮೈದಾನ ತೊರೆದಿದ್ದರು. ಫಿಟ್ನೆಸ್ ಸಮಸ್ಯೆಯ ಕಾರಣ ರಾಸಿಖ್ ಕೂಡ ನಾಳೆಯ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಈ ಇಬ್ಬರು ಆಟಗಾರರ ಅನುಪಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇಯಿಂಗ್ 11 ನಲ್ಲಿ ಮಹತ್ವದ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ. ಫಿಲ್ ಸಾಲ್ಟ್ ಬದಲಿಗೆ ಮತ್ತೊಬ್ಬ ಸ್ಫೋಟಕ ಆಟಗಾರ ಜೇಕಬ್ ಬೆಥೆಲ್ ಅವರು ವಿರಾಟ್ ಕೊಹ್ಲಿ ಜೊತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಇನ್ನು ಬೌಲಿಂಗ್ ವಿಭಾಗದಲ್ಲಿ ರಾಸಿಖ್ ಸಲಾಂ ಬದಲಿಗೆ ಬಲಗೈ ವೇಗಿ ಅಭಿನಂದನ್ ಸಿಂಗ್ ಅವರಿಗೆ ಚಾನ್ಸ್ ಸಿಗುವ ನಿರೀಕ್ಷೆಯಿದೆ. ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ತಂಡವು ಈ ಬದಲಾವಣೆಗಳೊಂದಿಗೆ ದೆಹಲಿ ನೆಲದಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಲು ಹರಸಾಹಸ ಪಡಬೇಕಿದೆ.

ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11:
ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಜೇಕಬ್ ಬೆಥೆಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೋಶ್ ಹೇಝಲ್‌ವುಡ್, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್/ಸುಯಶ್ ಶರ್ಮಾ.

Continue Reading

Latest

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

VISTARANEWS.COM


on

ಕೆಟ್ ಮೈದಾನದಲ್ಲಿ ಶತಕಗಳ ಸರದಾರನಾಗಿ ಮೆರೆದ ‘ಮಾಸ್ಟರ್ ಬ್ಲಾಸ್ಟರ್’ ಸಚಿನ್ ತೆಂಡೂಲ್ಕರ್, ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ದಶಕದ ನಂತರವೂ ವ್ಯವಹಾರ ಲೋಕದ ಅಧಿಪತಿಯಾಗಿ ಮುಂದುವರಿದಿದ್ದಾರೆ. ಅಭಿಮಾನಿಗಳಿಂದ ‘ಕ್ರಿಕೆಟ್ ದೇವರು’ ಎಂದು ಆರಾಧಿಸಲ್ಪಡುವ ಸಚಿನ್, ಈಗ ಕೇವಲ ಕ್ರೀಡಾಪಟುವಾಗಿ ಉಳಿಯದೆ ಒಬ್ಬ ಚಾಣಾಕ್ಷ ಉದ್ಯಮಿ ಮತ್ತು ಹೂಡಿಕೆದಾರನಾಗಿ ಹೊರಹೊಮ್ಮಿದ್ದಾರೆ. ಏಪ್ರಿಲ್ 2026ರ ಇತ್ತೀಚಿನ ವರದಿಗಳ ಪ್ರಕಾರ, ಸಚಿನ್ ಅವರ ಒಟ್ಟು ಆಸ್ತಿ ಮೌಲ್ಯವು ಸುಮಾರು 170 ಮಿಲಿಯನ್ ಡಾಲರ್ (₹1,400 ಕೋಟಿಗೂ ಅಧಿಕ) ಎಂದು ಅಂದಾಜಿಸಲಾಗಿದೆ. 2025ರ ಸಾಲೊಂದರಲ್ಲೇ ಅವರು ಬ್ರ್ಯಾಂಡ್ ಒಪ್ಪಂದಗಳು ಮತ್ತು ಹೂಡಿಕೆಗಳ ಮೂಲಕ ಸರಿಸುಮಾರು ₹50 ಕೋಟಿ ಸಂಪಾದಿಸುವ ಮೂಲಕ ತಮ್ಮ ಆರ್ಥಿಕ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಿಸಿದ್ದಾರೆ.

ಸಚಿನ್ ಅವರ ಈ ಬೃಹತ್ ಆದಾಯದ ಹಿಂದೆ ಅವರ ದೂರದೃಷ್ಟಿಯ ಹೂಡಿಕೆಗಳಿವೆ. ಬಳಸಿದ ಕಾರುಗಳ ವೇದಿಕೆ ‘Spinny’, ಗೇಮಿಂಗ್ ಸ್ಟಾರ್ಟ್-ಅಪ್ ‘JetSynthesys’ ಮತ್ತು ಸೋಲಾರ್ ಕ್ಷೇತ್ರದ ‘Truzon Solar’ ಸೇರಿದಂತೆ ‘Zepto’ ಮತ್ತು ‘Vahdam Teas’ ನಂತಹ ಪ್ರಮುಖ ಸಂಸ್ಥೆಗಳಲ್ಲಿ ಅವರು ಬಂಡವಾಳ ಹೂಡಿದ್ದಾರೆ. ಇಷ್ಟೇ ಅಲ್ಲದೆ, ತಮ್ಮದೇ ಆದ ‘Ten XU’ ಸ್ಪೋರ್ಟ್ಸ್‌ವೇರ್ ಬ್ರ್ಯಾಂಡ್ ಮತ್ತು ‘True Blue’ ಫ್ಯಾಷನ್ ಲೇಬಲ್ ಮೂಲಕ ಉದ್ಯಮ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಚಿನ್ ಎಂಬ ಹೆಸರೇ ಒಂದು ಶಕ್ತಿಯುತ ಬ್ರ್ಯಾಂಡ್ ಆಗಿರುವುದರಿಂದ, ಅಪೋಲೋ ಟೈರ್ಸ್‌ನಿಂದ ಹಿಡಿದು ಪ್ರಮುಖ ಬ್ಯಾಂಕ್‌ಗಳವರೆಗೆ ಹಲವು ಕಂಪನಿಗಳು ಇಂದಿಗೂ ಅವರ ವಿಶ್ವಾಸಾರ್ಹ ಇಮೇಜ್ ಅನ್ನು ಬಳಸಿಕೊಳ್ಳಲು ಕೋಟಿ ಕೋಟಿ ಸಂಭಾವನೆ ನೀಡುತ್ತಿವೆ.

ಇನ್ನು ರಿಯಲ್ ಎಸ್ಟೇಟ್ ವಿಷಯಕ್ಕೆ ಬಂದರೆ, ಸಚಿನ್ ಅವರ ಆಸ್ತಿಗಳು ಯಾರಿಗೂ ಕಡಿಮೆ ಇಲ್ಲದಂತಿವೆ. ಮುಂಬೈನ ಬಾಂದ್ರಾದಲ್ಲಿರುವ ಐಷಾರಾಮಿ ಬಂಗಲೆ, ದಕ್ಷಿಣ ಮುಂಬೈನ ಫ್ಲಾಟ್ ಮತ್ತು ಅಲಿಬಾಗ್‌ನಲ್ಲಿರುವ ಆಸ್ತಿಗಳ ಒಟ್ಟು ಮೌಲ್ಯವೇ ಸುಮಾರು ₹300 ಕೋಟಿ ಮೀರಿದೆ ಎಂದು ಅಂದಾಜಿಸಲಾಗಿದೆ. ಮೈದಾನದಲ್ಲಿ ರನ್ ಮಳೆ ಸುರಿಸಿದ ಮಾದರಿಯಲ್ಲೇ, ವ್ಯವಹಾರ ಲೋಕದಲ್ಲಿ ಸರಿಯಾದ ಕಾರ್ಯತಂತ್ರ ಮತ್ತು ಹೂಡಿಕೆಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಸಚಿನ್ ಸಾವಿರಾರು ಕೋಟಿಗಳ ಸಾಮ್ರಾಜ್ಯವನ್ನು ಕಟ್ಟಿದ್ದಾರೆ. ಒಟ್ಟಾರೆಯಾಗಿ, ನಿವೃತ್ತಿಯ ನಂತರವೂ ಸಚಿನ್ ಅವರ ಈ ‘ಸೆಕೆಂಡ್ ಇನ್ನಿಂಗ್ಸ್’ ಯುವ ಉದ್ಯಮಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.

Continue Reading

Latest

ಹೋಮ್‌ಗ್ರೌಂಡ್‌ನಲ್ಲಿ ಆರ್‌ಸಿಬಿಗಿಂದು ಕೊನೆ ಲೀಗ್‌ ಪಂದ್ಯ! ಗುಜರಾತ್ ಟೈಟನ್ಸ್ ಸವಾಲಿಗೆ ಸಜ್ಜಾದ ವಿರಾಟ್‌ ಪಡೆ

VISTARANEWS.COM


on

ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈ ಬಾರಿಯ ಐಪಿಎಲ್ ಸೀಸನ್‌ನಲ್ಲಿ ತನ್ನ ತವರು ಮೈದಾನವಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಅಂತಿಮ ಲೀಗ್ ಪಂದ್ಯವನ್ನು ಆಡಲಿದೆ. ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ವಿರುದ್ಧ ನಡೆಯಲಿರುವ ಈ ಹಣಾಹಣಿಯಲ್ಲಿ ಗೆಲುವಿನ ಮೂಲಕ ತವರಿನ ಪ್ರೇಕ್ಷಕರಿಗೆ ಸ್ಮರಣೀಯ ವಿದಾಯ ಹೇಳಲು ಬೆಂಗಳೂರು ಪಡೆ ಸಜ್ಜಾಗಿದೆ. ಈ ಪಂದ್ಯದ ನಂತರ ಆರ್‌ಸಿಬಿ ತನ್ನ ಮುಂದಿನ ಪಂದ್ಯಗಳಿಗಾಗಿ ರಾಯ್ಪುರಕ್ಕೆ ಪ್ರಯಾಣ ಬೆಳೆಸಲಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ಭದ್ರ ನೆಲೆ ಕಂಡುಕೊಳ್ಳಲು ಈ ಗೆಲುವು ಉಭಯ ತಂಡಗಳಿಗೂ ಅತ್ಯಂತ ನಿರ್ಣಾಯಕವಾಗಿದೆ.

ಆರ್‌ಸಿಬಿ ಈ ವರ್ಷ ಚಿನ್ನಸ್ವಾಮಿ ಮೈದಾನದಲ್ಲಿ ಆಡಿದ 4 ಪಂದ್ಯಗಳ ಪೈಕಿ 3ರಲ್ಲಿ ಜಯ ಸಾಧಿಸಿ ಭರ್ಜರಿ ಫಾರ್ಮ್‌ನಲ್ಲಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಅನುಭವಿಸಿದ ಸೋಲಿನ ಆಘಾತದಿಂದ ಹೊರಬಂದು, ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿ ರಜತ್ ಪಾಟೀದಾರ್ ಸೈನ್ಯವಿದೆ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ನಾಯಕ ರಜತ್ ಪಾಟೀದಾರ್ ಮತ್ತು ಫಿಲ್ ಸಾಲ್ಟ್ ಅಬ್ಬರಿಸುತ್ತಿದ್ದು, ತಂಡಕ್ಕೆ ಬಲಿಷ್ಠ ಅಡಿಪಾಯ ಹಾಕುತ್ತಿದ್ದಾರೆ. ವಿಶೇಷವಾಗಿ ಟಿಮ್ ಡೇವಿಡ್ ಅವರ 203.52 ರ ಸ್ಟ್ರೈಕ್ ರೇಟ್ ತಂಡದ ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಬಲ ತಂದಿದೆ. ಬೌಲಿಂಗ್‌ನಲ್ಲಿ ಹೇಜಲ್‌ವುಡ್ ಮತ್ತು ಭುವನೇಶ್ವರ್ ಕುಮಾರ್ ಜೋಡಿ ಎದುರಾಳಿಗಳನ್ನು ಕಟ್ಟಿಹಾಕಲು ಸನ್ನದ್ಧವಾಗಿದೆ.

ಇನ್ನೊಂದೆಡೆ, ಗುಜರಾತ್ ಟೈಟನ್ಸ್ ತಂಡವು ಸ್ಥಿರ ಪ್ರದರ್ಶನದ ಹುಡುಕಾಟದಲ್ಲಿದ್ದು, ಪ್ರಬಲ ಬೌಲಿಂಗ್ ಪಡೆಯನ್ನು ನೆಚ್ಚಿಕೊಂಡಿದೆ. ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್ ಮತ್ತು ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರನ್ನೊಳಗೊಂಡ ವೇಗದ ಪಡೆ ಆರ್‌ಸಿಬಿಯ ಸ್ಫೋಟಕ ಬ್ಯಾಟರ್‌ಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಅದರಲ್ಲೂ ಪ್ರಸಿದ್ಧ್ ಕೃಷ್ಣ ತಮ್ಮ ತವರು ಮೈದಾನದಲ್ಲಿ ಹಳೆಯ ತಂಡದ ವಿರುದ್ಧ ಹೇಗೆ ಮಿಂಚಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಉಭಯ ತಂಡಗಳ ನಡುವೆ ಇದುವರೆಗೆ ನಡೆದ 6 ಮುಖಾಮುಖಿಗಳಲ್ಲಿ ಎರಡೂ ತಂಡಗಳು ತಲಾ 3 ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿರುವುದರಿಂದ, ಇಂದಿನ ಪಂದ್ಯವು ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡುವುದರಲ್ಲಿ ಸಂಶಯವಿಲ್ಲ.

Continue Reading
Advertisement
Latest5 hours ago

ಮೇ 15ಕ್ಕೆ ಸಿಗುತ್ತಾ ಗುಡ್​ ನ್ಯೂಸ್?​ ಸಂಭ್ರಮಾಚರಣೆ ಬೇಡವೆಂದು ಬೆಂಬಲಿಗರಿಗೆ ಖಡಕ್​ ಸೂಚನೆ! ಡಿ ಕೆ ಬ್ರದರ್ಸ್‌ ಪ್ಲ್ಯಾನ್‌ಗೆ ಟಕ್ಕರ್‌ ಕೊಡ್ತಾರಾ ಸಿಎಂ

Latest5 hours ago

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

Latest5 hours ago

ಮುಂದಿನ ಪಂದ್ಯದಿಂದ ‘ಯಂಗ್ ಸೆನ್ಸೇಷನ್’ ಔಟ್? ವೈಭವ್ ಸೂರ್ಯವಂಶಿ ಬಗ್ಗೆ ಕೋಚ್ ಕೊಟ್ಟ ಅಪ್ಡೇಟ್ ಏನು?

Latest6 hours ago

ಅಧ್ಯಕ್ಷ ಹುದ್ದೆ ಇಷ್ಟು ಡೇಂಜರ್ ಅಂತ ಗೊತ್ತಿರಲಿಲ್ಲ!”: ಗುಂಡಿನ ದಾಳಿಯಿಂದ ಬಚಾವಾದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

Latest7 hours ago

ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಹೊಸ ಬಲ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ

Latest7 hours ago

‘ಟಾಕ್ಸಿಕ್’ ಬೋಲ್ಡ್ ದೃಶ್ಯದ ವಿವಾದಕ್ಕೆ ರಾಕಿಂಗ್ ಸ್ಟಾರ್ ಖಡಕ್ ರಿಯಾಕ್ಷನ್: ಟೀಕಾಕಾರರಿಗೆ ತಮ್ಮದೇ ಸ್ಟೈಲ್‌ನಲ್ಲಿ ಉತ್ತರ ಕೊಟ್ಟ ಯಶ್

Latest7 hours ago

ಬದುಕು ಸುಂದರವಾಗಿರಲು ಮದುವೆ-ಮಕ್ಕಳೇ ಬೇಕಿಲ್ಲ! ವೈಯಕ್ತಿಕ ಜೀವನದ ಬಗ್ಗೆ ನಿತ್ಯಾ ಮೆನನ್ ಹಂಚಿಕೊಂಡ ಮನದಾಳದ ಮಾತು

Latest9 hours ago

ಆರ್‌ಸಿಬಿ ಪ್ಲೇಯಿಂಗ್ 11 ಅಪ್‌ಡೇಟ್: ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಡೌಟ್?

Latest9 hours ago

ಬಿಗಿ ಭದ್ರತೆಯ ನಡುವೆಯೂ ಟ್ರಂಪ್ ಪಾರ್ಟಿಗೆ ಅತಿಥಿಯಂತೆ ಬಂದಿದ್ದ ದಾಳಿಕೋರ! ಸೀಕ್ರೆಟ್ ಸರ್ವಿಸ್ ಕಣ್ಣು ತಪ್ಪಿಸಿದ್ದು ಹೇಗೆ?

ಕರ್ನಾಟಕ10 hours ago

ಹುಬ್ಬಳ್ಳಿಯಲ್ಲಿ ವಾರದಲ್ಲಿ ಮೂರನೇ ಬಾರಿ ವಿಮಾನ ಲ್ಯಾಂಡಿಂಗ್ ಸಮಸ್ಯೆ; ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌