Sachin Tendulkar: Change is needed in ODI cricket; Sachin Tendulkar Sachin Tendulkar: ಏಕದಿನ ಕ್ರಿಕೆಟ್​ನಲ್ಲಿ ಬದಲಾವಣೆ ಅಗತ್ಯ; ಸಚಿನ್​ ತೆಂಡೂಲ್ಕರ್​ Vistara News Sachin Tendulkar: ಏಕದಿನ ಕ್ರಿಕೆಟ್​ನಲ್ಲಿ ಬದಲಾವಣೆ ಅಗತ್ಯ; ಸಚಿನ್​ ತೆಂಡೂಲ್ಕರ್​
Connect with us

ಕ್ರಿಕೆಟ್

Sachin Tendulkar: ಏಕದಿನ ಕ್ರಿಕೆಟ್​ನಲ್ಲಿ ಬದಲಾವಣೆ ಅಗತ್ಯ; ಸಚಿನ್​ ತೆಂಡೂಲ್ಕರ್​

ಏಕ​ದಿನ ಮಾದ​ರಿ​ಯನ್ನು ಟೆಸ್ಟ್‌ ರೀತಿ ತಲಾ 25 ಓವ​ರ್‌​ಗಳ 2 ಇನಿಂಗ್ಸ್​ ರೂಪ​ದಲ್ಲಿ ಆಡಿ​ಸ​ಬೇಕು ಎಂದು ಸಚಿನ್‌ ತೆಂಡೂಲ್ಕರ್ ಸಲಹೆ ನೀಡಿ​ದ್ದಾರೆ.

VISTARANEWS.COM


on

Sachin Tendulkar Change is needed in ODI cricket Sachin Tendulkar
Koo

ಮುಂಬಯಿ: ಪ್ರೇಕ್ಷಕರ ಮನರಂಜನೆಯನ್ನು ಹೆಚ್ಚಿಸುವ ಸಲುವಾಗಿ ಏಕ ​ದಿನ ಕ್ರಿಕೆಟ್​ನಲ್ಲಿ(ODI Cricket) ಬದಲಾವಣೆ ಅಗತ್ಯ ಎಂದು ರವಿ ಶಾಸ್ತ್ರಿ (Ravi Shastri ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಸಚಿನ್‌ ತೆಂಡೂಲ್ಕರ್(Sachin Tendulkar)​ ಕೂಡ ಏಕ​ದಿನದಲ್ಲಿ ಕೆಲ ಬದ​ಲಾ​ವಣೆ ಅಗ​ತ್ಯ​ವಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸಂದ​ರ್ಶ​ನ​ವೊಂದ​ರಲ್ಲಿ ಮಾತ​ನಾ​ಡಿರುವ ಸಚಿನ್​ ತೆಂಡೂಲ್ಕರ್​ “ಪ್ರಸ್ತುತ ನಡೆಯುತ್ತಿರುವ ಏಕದಿನ ಪಂದ್ಯ​ಗಳ ಫಲಿ​ತಾಂಶವನ್ನು ಮೊದಲೇ ಊಹಿ​ಸ​ಬ​ಹುದು. ಅದ​ರಲ್ಲೂ 15ರಿಂದ 40 ಓವ​ರ್‌​ವ​ರೆ​ಗಿನ ಅವಧಿ ತುಂಬಾ ನೀರಸವಾಗಿರುತ್ತದೆ. ಹೀಗಾಗಿ ಏಕ​ದಿನ ಮಾದ​ರಿ​ಯನ್ನು ಟೆಸ್ಟ್‌ ರೀತಿ ತಲಾ 25 ಓವ​ರ್‌​ಗಳ 2 ಇನಿಂಗ್ಸ್​ ರೂಪ​ದಲ್ಲಿ ಆಡಿ​ಸ​ಬೇಕು” ಎಂದು ಅವರು ಸಲಹೆ ನೀಡಿ​ದ್ದಾರೆ.

“ಟಿ20 ಕ್ರಿಕೆಟ್​ ಜಾಯಮಾನದಲ್ಲಿ ಇದೀಗ ಏಕದಿನ ಕ್ರಿಕೆಟ್​ನತ್ತ ಪ್ರೇಕ್ಷಕರ ಗಮನ ಕಡಿಮೆಯಾಗಿದೆ. ಹೀಗಾಗಿ ಪ್ರೇಕ್ಷಕರನ್ನು ಆಕರ್ಷಿಸಲು ಏಕದಿನ ಮಾದರಿಯ ಕ್ರಿಕೆಟ್​ನಲ್ಲಿ ಕೆಲ ಬದಲಾವಣೆ ಅಗತ್ಯ” ಎಂದು ಸಚಿನ್​ ಹೇಳಿದರು.

ಇದನ್ನೂ ಓದಿ Sachin Tendulkar: ಬಿಸಿಸಿಐ ಅಧ್ಯಕ್ಷರಾಗಲಿದ್ದಾರಾ ಸಚಿನ್​ ತೆಂಡೂಲ್ಕರ್​?

ರವಿಶಾಸ್ತ್ರಿ ಹೇಳಿದ್ದೇನು

ಏಕ ದಿನ ಕ್ರಿಕೆಟ್​ ಅಳಿವಿನಂಚಿನಲ್ಲಿದ್ದು ಇದನ್ನೂ​ ಹೆಚ್ಚು ಆಕರ್ಷಿಸಲು ಕೆಲ ಬದಲಾವಣೆ ಮಾಡಿಕೊಳ್ಳಬೇಕು ಎಂದು ಕಳೆದ ವಾರ ರವಿಶಾಸ್ತ್ರಿ ಹೇಳಿದ್ದರು. “1983ರಲ್ಲಿ ನಾವು ವಿಶ್ವ ಕಪ್ ಗೆದ್ದಾಗ ಅದು 60 ಓವರ್ ಪಂದ್ಯವಾಗಿತ್ತು. ನಂತರ ಪ್ರೇಕ್ಷಕರ ಗಮನ ಕಡಿಮೆಯಾದ ಕಾರಣ ಇದನ್ನೂ 50 ಓವರ್​ಗಳಿಗೆ ಇಳಿಸಲಾಯಿತು. ಇದೀಗ ಟಿ20 ಕ್ರಿಕೆಟ್ ಬಂದ ಬಳಿಕ ಏಕದಿನದ ಕ್ರೇಜ್​ ಜನರಲ್ಲಿ ಕಡಿಮೆಯಾಗಿದೆ. ಹೀಗಾಗಿ ಸಮಯದೊಂದಿಗೆ ಸ್ವರೂಪದ ಬದಲಾವಣೆಯೂ ಮಾಡುವ ಮೂಲಕ ಏಕ ದಿನ ಕ್ರಿಕೆಟ್​ ಹೆಚ್ಚು ಸ್ವಾರಸ್ಯವಾಗಲು ಇದನ್ನೂ 40 ಓವರ್​ಗೆ ಇಳಿಸುವ ಅಗತ್ಯ ಇದೆ” ಎಂದು ರವಿಶಾಸ್ತ್ರಿ ಸಲಹೆ ನೀಡಿದ್ದರು.

ಕ್ರಿಕೆಟ್

WPL 2023: ಸೋಲಿನೊಂದಿಗೆ ಅಭಿಯಾನ ಮುಗಿಸಿದ ಆರ್​ಸಿಬಿ

ಮುಂಬೈ ಇಂಡಿಯನ್ಸ್​ ವಿರುದ್ಧದ ಮಂಗಳವಾರದ ಅಂತಿಮ ಲೀಗ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ 4 ವಿಕೆಟ್​ಗಳ ಸೋಲಿಗೆ ತುತ್ತಾಗಿದೆ.

VISTARANEWS.COM


on

Edited by

WPL 2023 RCB ends campaign with defeat
Koo

ಮುಂಬಯಿ: ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಸೋಲಿನೊಂದಿಗೆ ಅಭಿಯಾನ ಆರಂಭಿಸಿದ ಸ್ಮೃತಿ ಮಂಧಾನ ಸಾರಥ್ಯದ ಆರ್​ಸಿಬಿ(Royal Challengers Bangalore) ತಂಡ ಇದೀಗ ಸೋಲಿನೊಂದಿಗೆಯೇ ತನ್ನ ಅಭಿಯಾನವನ್ನು ಮುಗಿಸಿದೆ. ಮಂಗಳವಾರ ನಡೆದ ಮುಂಬೈ ಇಂಡಿಯನ್ಸ್​ ವಿರುದ್ಧದ ಅಂತಿಮ ಲೀಗ್​ ಪಂದ್ಯದಲ್ಲಿ 4 ವಿಕೆಟ್​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್​ ಈ ಗೆಲುವಿನೊಂದಿಗೆ ಮತ್ತೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಮುಂಬಯಿಯ ಡಿ.ವೈ. ಪಾಟೀಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಡಬಲ್ ಹೆಡ್ಡರ್​ ಮುಖಾಮುಖಿಯ ಮೊದಲ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ರಿಚಾ ಘೋಷ್​ ಮತ್ತು ಎಲ್ಲಿಸ್​ ಪೆರ್ರಿ ಅವರ ಸಣ್ಣ ಹೋರಾಟದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 125 ರನ್​ ಬಾರಿಸಿತು. ಜಬಾಬಿತ್ತ ಮುಂಬೈ ಇಂಡಿಯನ್ಸ್​ 16.3 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 129 ರನ್​ ಬಾರಿಸಿ ಗೆಲುವು ದಾಖಲಿಸಿತು.

ಸಣ್ಣ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈಗೆ ಯಾಸ್ತಿಕಾ ಭಾಟಿಯಾ ಮತ್ತು ಹೇಲಿ ಮ್ಯಾಥ್ಯೂಸ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್​ಗೆ 53 ರನ್​ಗಳ ಜತೆಯಾಟ ನಡೆಸಿತು. ಯಾಸ್ತಿಕಾ 30 ರನ್​ ಗಳಿಸಿದರೆ, ಮ್ಯಾಥ್ಯೂಸ್ 24 ರನ್​ ಬಾರಿಸಿದರು. ಉಭಯ ಆಟಗಾರ್ತಿಯ ವಿಕೆಟ್​ ಪತನದ ಬೆನ್ನಲ್ಲೇ ತಂಡ ನಾಯಕೀಯ ಕುಸಿತ ಕಂಡಿತು. ನಾಯಕಿ ಹರ್ಮನ್​ಪ್ರೀತ್​ ಕೌರ್​(2), ನ್ಯಾಟ್​ ಸ್ಕಿವರ್​-ಬ್ರಂಟ್​ (13) ಅಲ್ಪ ಮೊತ್ತಕ್ಕೆ ಔಟಾದರು. ತಂಡದ ಮೊತ್ತ 74 ಆಗುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡು ಮುಂಬೈ ಒಂದು ಹಂತದಲ್ಲಿ ಸಂಕಷ್ಟಕ್ಕೆ ಸಿಲುಕಿತು.

ನಾಟಕೀಯ ಕುಸಿತ ಕಂಡ ಮುಂಬೈ ತಂಡಕ್ಕೆ ಬೌಲಿಂಗ್​ನಲ್ಲಿ ಮೂರು ವಿಕೆಟ್​ ಕಿತ್ತು ಪ್ರಮುಖ ಪಾತ್ರ ನಿರ್ವಹಿಸಿದ್ದ ಅಮೇಲಿಯಾ ಕೆರ್​ ಮತ್ತು ಪೂಜಾ ವಸ್ತ್ರಾಕರ್​ ಕೆಳ ಕ್ರಮಾಂಕದಲ್ಲಿ ತಾಳ್ಮೆಯುತ ಬ್ಯಾಟಿಂಗ್​ ನಡೆಸುವ ಮೂಲಕ ತಂಡಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಂಡರು. ತಂಡದ ಗೆಲುವಿಗೆ 6 ರನ್​ ಅಗತ್ಯವಿದ್ದಾಗ ಪೂಜಾ ವಿಕೆಟ್ ಕೈಚೆಲ್ಲಿದರು. ಅವರು 19 ರನ್ ಗಳಿಸಿದರು.​ ಅಮೇಲಿಯಾ ಕೆರ್​ ಅಜೇಯ ​31 ರನ್​ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಈ ಅಜೇಯ ಇನಿಂಗ್ಸ್​ ಆಟದ ವೇಳೆ 4 ಬೌಂಡರಿ ಸಿಡಿಯಿತು.

ಮಂದ ಗತಿಯ ಬ್ಯಾಟಿಂಗ್​ ನಡೆಸಿದ ಮಂಧಾನ ಪಡೆ

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ಆರಂಭಿಕ ಆಘಾತ ಕಂಡಿತು. ಗುಜರಾತ್​ ಜೈಂಟ್ಸ್​ ವಿರುದ್ಧ ಸಿಡಿಲಬ್ಬರ ಬ್ಯಾಟಿಂಗ್​ ನಡೆಸಿ ನಡುಕ ಹುಟ್ಟಿಸಿದ್ದ ನ್ಯೂಜಿಲ್ಯಾಂಡ್​ನ ಸ್ಟಾರ್​ ಆಲ್​ ರೌಂಡರ್​ ಸೋಫಿ ಡಿವೈನ್​ ಅವರು ಈ ಪಂದ್ಯದಲ್ಲಿ ರನೌಟ್​ ಸಂಕಟಕ್ಕೆ ಸಿಲುಕಿದರು. ಇಲ್ಲದ ರನ್ ಕದಿಯಲೆತ್ನಿಸಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭಸಿದರು.

ನಾಯಕಿ ಸ್ಮೃತಿ ಮಂಧಾನ ಅವರ ಆಟ ಈ ಪಂದ್ಯದಲ್ಲಿಯೂ ಮಂದ ಗತಿಯಿಂದ ಕೂಡಿತ್ತು. 25 ಎಸೆತ ಎದುರಿಸಿ 24 ರನ್​ ಗಳಿಸಿದರು. ಇದರೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಮಂಧಾನ ಸಂಪೂರ್ಣ ವೈಫಲ್ಯ ಕಂಡಂತಾಯಿತು. ಈ ಮೂಲಕ ಮುಂದಿನ ಬಾರಿಯ ಆವೃತ್ತಿಯಲ್ಲಿ ಅವರು ಆರ್​ಸಿಬಿ ತಂಡದಲ್ಲಿಯೇ ಉಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಆರಂಭಿಕ ಆಟಗಾರ್ತಿಯರ ವಿಕೆಟ್​ ಪತನದ ಬಳಿಕ ಆಡಲಿಳಿದ ಆಸ್ಟ್ರೇಲಿಯಾದ ಆಲ್​ರೌಂಡರ್​ ಎಲ್ಲಿಸ್‌ ಪೆರ್ರಿ ತಂಡಕ್ಕೆ ಆಸರೆಯಾದರು. ಪ್ರತಿ ಓವರ್​ನಲ್ಲಿ ಒಂದು ಬೌಂಡರಿ ಬಾರಿಸುವ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸಲಾರಂಭಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಯಾರು ಕೂಡ ಉತ್ತಮ ಸಾಥ್​ ನೀಡಲಿಲ್ಲ. ಹೀತರ್​ ನೈಟ್​ ಮತ್ತು ಕನಿಕಾ ಅಹುಜಾ ತಲಾ 12 ರನ್​ಗೆ ಆಟ ಮುಗಿಸಿದರು. ಇದರ ಬೆನ್ನಲ್ಲೇ ಎಲ್ಲಿಸ್‌ ಪೆರ್ರಿ ಕೂಡ ನ್ಯಾಟ್‌ ಸ್ಕಿವರ್‌ ಬ್ರಂಟ್‌ ಎಸೆತದಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದರು. 38 ಎಸೆತ ಎದುರಿಸಿದ ಅವರು ಮೂರು ಬೌಂಡರಿ ನೆರವಿನಿಂದ 29 ರನ್​ ಬಾರಿಸಿದರು. ಸ್ಕಿವರ್‌ ಬ್ರಂಟ್‌ 24 ರನ್​ಗೆ 2 ವಿಕೆಟ್​ ಉರುಳಿಸಿದರು.

ಇದನ್ನೂ ಓದಿ WPL 2023 : ಸೇಡು ತೀರಿಸಿಕೊಂಡ ಡೆಲ್ಲಿ ಪಡೆ, ಮುಂಬಯಿ ವಿರುದ್ಧ 9 ವಿಕೆಟ್​ ಸುಲಭ ಜಯ

ಅಂತಿಮ ಹಂತದಲ್ಲಿ ರಿಚಾ ಘೋಷ್​​ ಬಿರುಸಿನ ಬ್ಯಾಟಿಂಗ್​ ನಡೆಸಿದ ಪರಿಣಾಮ ಆರ್​ಸಿಬಿ 100ರ ಗಡಿ ದಾಟಿತು. ಕ್ರೀಸ್​ ಗಿಳಿದ ಆರಂಭದಿಂದಲೇ ಸಿಕ್ಸರ್​, ಬೌಂಡರಿಗಳ ಮೂಲಕ ಮುಂಬೈ ಬೌಲರ್​ಗಳ ಸಣ್ಣ ಮೊತ್ತದ ಯೋಜನೆಯನ್ನು ತಲೆಕೆಳಗಾಗಿಸಿದರು. ಆದರೆ ಅಂತಿಮ ಓವರ್​ ಮೊದಲ ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಮುಂದಾಗಿ ಕ್ಯಾಚ್​ ನೀಡಿದರು. ಅವರ ವಿಕೆಟ್​ ಉರುಳಿದ ಬಳಿಕ ತಂಡದ ಮೊತ್ತವೂ ಕುಸಿಯಿತು. ಒಟ್ಟು 13 ಎಸೆತ ಎದುರಿಸಿದ ಅವರು ಮೂರು ಬೌಂಡರಿ 2 ಸಿಕ್ಸರ್​ ಬಾರಿಸಿ 29 ರನ್​ ಕಲೆಹಾಕಿದರು. ಮುಂಬೈ ಪರ ಅಮೇಲಿಯಾ ಕೆರ್​ 22 ರನ್​ ವೆಚ್ಚದಲ್ಲಿ ಮೂರು ವಿಕೆಟ್​ ಪಡೆದರು. ಸೈಕಾ ಇಶಾಖ್‌ ಒಂದು ವಿಕೆಟ್​ ಪಡೆದರು.

ಸಂಕ್ಷಿಪ್ತ ಸ್ಕೋರ್​: ಆರ್​ಸಿಬಿ; 20 ಓವರ್​ಗಳಲ್ಲಿ 9 ವಿಕೆಟ್​ಗೆ 125( ಎಲ್ಲಿಸ್‌ ಪೆರ್ರಿ 29, ರಿಚಾ ಘೋಷ್​ 29, ಅಮೇಲಿಯಾ ಕೆರ್​ 22ಕ್ಕೆ 3). ಮುಂಬೈ ಇಂಡಿಯನ್ಸ್: 16.3 ಓವರ್​ಗಳಲ್ಲಿ 6 ವಿಕೆಟ್​ಗೆ 129( ಅಕೇಲಿಯಾ ಕೆರ್​ ಅಜೇಯ 31, ಮ್ಯಾಥ್ಯೂಸ್​ 24, ಯಾಸ್ತಿಕಾ ಭಾಟಿಯಾ 30)

Continue Reading

ಕ್ರಿಕೆಟ್

WPL 2023: ಮುಂಬೈ ಬೌಲಿಂಗ್​ ದಾಳಿಗೆ ಬೆದರಿ 125ಕ್ಕೆ ಕುಸಿದ ಆರ್​ಸಿಬಿ

ಮುಂಬೈ ಇಂಡಿಯನ್ಸ್​ ವಿರುದ್ಧದ ಮಂಗಳವಾರದ ಮೊದಲ ಪಂದ್ಯದಲ್ಲಿ ಆರ್​ಸಿಬಿ 125 ರನ್​ ಗಳಿಸಿ ಸವಾಲೊಡ್ಡಿದೆ.

VISTARANEWS.COM


on

Edited by

WPL 2023 RCB reduced to 125 under threat of Mumbai bowling attack
Koo

ಮುಂಬಯಿ: ಮುಂಬೈ ಇಂಡಿಯನ್ಸ್​ ತಂಡದ ಸಂಘಟಿತ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡ, ಮಂಗಳವಾರದ ಮಹಿಳಾ ಪ್ರೀಮಿಯರ್​ ಲೀಗ್​ನ(WPL 2023) ಹಗಲು ಪಂದ್ಯದಲ್ಲಿ 125 ರನ್​ ಗಳಿಸಿ ಸವಾಲೊಡ್ಡಿದೆ.

ಮುಂಬಯಿಯ ಡಿ.ವೈ. ಪಾಟೀಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್​ ಲೀಗ್​ನ ದಿನದ ಮೊದಲ ಮುಖಾಮುಖಿಯಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 125 ರನ್​ ಬಾರಿಸಿದೆ. ಮುಂಬೈ ಗೆಲುವಿಗೆ 126 ರನ್​ ಬಾರಿಸಬೇಕಿದೆ.

ಗುಜರಾತ್​ ಜೈಂಟ್ಸ್​ ವಿರುದ್ಧ ಸಿಡಿಲಬ್ಬರ ಬ್ಯಾಟಿಂಗ್​ ನಡೆಸಿ ನಡುಕ ಹುಟ್ಟಿಸಿದ್ದ ನ್ಯೂಜಿಲ್ಯಾಂಡ್​ನ ಸ್ಟಾರ್​ ಆಲ್​ ರೌಂಡರ್​ ಸೋಫಿ ಡಿವೈನ್​ ಅವರು ಈ ಪಂದ್ಯದಲ್ಲಿ ರನೌಟ್​ ಸಂಕಟಕ್ಕೆ ಸಿಲುಕಿದರು. ಇಲ್ಲದ ರನ್ ಕದಿಯಲೆತ್ನಿಸಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭಸಿದರು.

ನಾಯಕಿ ಸ್ಮೃತಿ ಮಂಧಾನ ಅವರ ಆಟ ಈ ಪಂದ್ಯದಲ್ಲಿಯೂ ಮಂದ ಗತಿಯಿಂದ ಕೂಡಿತ್ತು. 25 ಎಸೆತ ಎದುರಿಸಿ 24 ರನ್​ ಗಳಿಸಿದರು. ಇದರೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಮಂಧಾನ ಸಂಪೂರ್ಣ ವೈಫಲ್ಯ ಕಂಡಂತಾಯಿತು. ಈ ಮೂಲಕ ಮುಂದಿನ ಬಾರಿಯ ಆವೃತ್ತಿಯಲ್ಲಿ ಅವರು ಆರ್​ಸಿಬಿ ತಂಡದಲ್ಲಿಯೇ ಉಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಆರಂಭಿಕ ಆಟಗಾರ್ತಿಯರ ವಿಕೆಟ್​ ಪತನದ ಬಳಿಕ ಆಡಲಿಳಿದ ಆಸ್ಟ್ರೇಲಿಯಾದ ಆಲ್​ರೌಂಡರ್​ ಎಲ್ಲಿಸ್‌ ಪೆರ್ರಿ ತಂಡಕ್ಕೆ ಆಸರೆಯಾದರು. ಪ್ರತಿ ಓವರ್​ನಲ್ಲಿ ಒಂದು ಬೌಂಡರಿ ಬಾರಿಸುವ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸಲಾರಂಭಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಯಾರು ಕೂಡ ಉತ್ತಮ ಸಾಥ್​ ನೀಡಲಿಲ್ಲ. ಹೀತರ್​ ನೈಟ್​ ಮತ್ತು ಕನಿಕಾ ಅಹುಜಾ ತಲಾ 12 ರನ್​ಗೆ ಆಟ ಮುಗಿಸಿದರು. ಇದರ ಬೆನ್ನಲ್ಲೇ ಎಲ್ಲಿಸ್‌ ಪೆರ್ರಿ ಕೂಡ ನ್ಯಾಟ್‌ ಸ್ಕಿವರ್‌ ಬ್ರಂಟ್‌ ಎಸೆತದಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದರು. 38 ಎಸೆತ ಎದುರಿಸಿದ ಅವರು ಮೂರು ಬೌಂಡರಿ ನೆರವಿನಿಂದ 29 ರನ್​ ಬಾರಿಸಿದರು. ಸ್ಕಿವರ್‌ ಬ್ರಂಟ್‌ 24 ರನ್​ಗೆ 2 ವಿಕೆಟ್​ ಉರುಳಿಸಿದರು.

ಇದನ್ನೂ ಓದಿ WPL 2023 : ಸೇಡು ತೀರಿಸಿಕೊಂಡ ಡೆಲ್ಲಿ ಪಡೆ, ಮುಂಬಯಿ ವಿರುದ್ಧ 9 ವಿಕೆಟ್​ ಸುಲಭ ಜಯ

ಅಂತಿಮ ಹಂತದಲ್ಲಿ ರಿಚಾ ಘೋಷ್​​ ಬಿರುಸಿನ ಬ್ಯಾಟಿಂಗ್​ ನಡೆಸಿದ ಪರಿಣಾಮ ಆರ್​ಸಿಬಿ 100ರ ಗಡಿ ದಾಟಿತು. ಕ್ರೀಸ್​ ಗಿಳಿದ ಆರಂಭದಿಂದಲೇ ಸಿಕ್ಸರ್​, ಬೌಂಡರಿಗಳ ಮೂಲಕ ಮುಂಬೈ ಬೌಲರ್​ಗಳ ಸಣ್ಣ ಮೊತ್ತದ ಯೋಜನೆಯನ್ನು ತಲೆಕೆಳಗಾಗಿಸಿದರು. ಆದರೆ ಅಂತಿಮ ಓವರ್​ ಮೊದಲ ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಮುಂದಾಗಿ ಕ್ಯಾಚ್​ ನೀಡಿದರು. ಅವರ ವಿಕೆಟ್​ ಉರುಳಿದ ಬಳಿಕ ತಂಡದ ಮೊತ್ತವೂ ಕುಸಿಯಿತು. ಒಟ್ಟು 13 ಎಸೆತ ಎದುರಿಸಿದ ಅವರು ಮೂರು ಬೌಂಡರಿ 2 ಸಿಕ್ಸರ್​ ಬಾರಿಸಿ 29 ರನ್​ ಕಲೆಹಾಕಿದರು. ಮುಂಬೈ ಪರ ಅಮೇಲಿಯಾ ಕೆರ್​ 22 ರನ್​ ವೆಚ್ಚದಲ್ಲಿ ಮೂರು ವಿಕೆಟ್​ ಪಡೆದರು. ಸೈಕಾ ಇಶಾಖ್‌ ಒಂದು ವಿಕೆಟ್​ ಪಡೆದರು.

ಸಂಕ್ಷಿಪ್ತ ಸ್ಕೋರ್​: ಆರ್​ಸಿಬಿ; 20 ಓವರ್​ಗಳಲ್ಲಿ 9 ವಿಕೆಟ್​ಗೆ 125( ಎಲ್ಲಿಸ್‌ ಪೆರ್ರಿ 29, ರಿಚಾ ಘೋಷ್​ 29, ಅಮೇಲಿಯಾ ಕೆರ್​ 22ಕ್ಕೆ 3)

Continue Reading

ಕ್ರಿಕೆಟ್

IND VS AUS: ಅಂತಿಮ ಏಕದಿನ ಪಂದ್ಯದಿಂದ ಸೂರ್ಯಕುಮಾರ್​ಗೆ ಕೊಕ್​ ಸಾಧ್ಯತೆ

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್​ ನಡೆಸಿದ ಸೂರ್ಯಕಯಮಾರ್​ ಯಾದವ್​ಗೆ ಅಂತಿಮ ಏಕದಿನ ಪಂದ್ಯದಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ.

VISTARANEWS.COM


on

Edited by

IND VS AUS Suryakumar likely to miss out on final ODI
Koo

ಚೆನ್ನೈ: ಆಸ್ಟ್ರೇಲಿಯಾ(IND VS AUS) ವಿರುದ್ಧ ಆಡಿದ ಎರಡು ಏಕದಿನ ಪಂದ್ಯದಲ್ಲಿಯೂ ಶೂನ್ಯ ಸುತ್ತಿದ ಸೂರ್ಯಕುಮಾರ್​ ಯಾದವ್​((Suryakumar Yadav)) ಅವರನ್ನು ಅಂತಿಮ ಏಕದಿನ ಪಂದ್ಯದಿಂದ ಕೈ ಬಿಡಲಾಗುವುದು ಎಂದು ತಿಳಿದುಬಂದಿದೆ. ಭಾರತ ಮತ್ತು ಆಸೀಸ್​ ವಿರುದ್ಧದ ಅಂತಿಮ ಏಕದಿನ ಪಂದ್ಯ ಬುಧವಾರ(ಮಾರ್ಚ್​ 22) ಚೆನ್ನೈಯಲ್ಲಿ ನಡೆಯಲಿದೆ.

ಟ್ವಿ 20 ಕ್ರಿಕೆಟ್​ನಲ್ಲಿ ಸ್ಫೋಟಕ ಬ್ಯಾಟಿಂಗ್​ ಮೂಲಕ ಗಮನ ಸೆಳೆದಿದ್ದ ಸೂರ್ಯಕುಮಾರ್​ ಯಾದವ್​ ಆಸೀಸ್​ ವಿರುದ್ಧದ ಏಕದಿನ ಸರಣಿಯಲ್ಲಿ ಇನ್ನೂ ಖಾತೆ ತೆರೆಯುವಲ್ಲಿ ವಿಫಲರಾಗಿದ್ದಾರೆ. ಎರಡೂ ಪಂದ್ಯಗಳಲ್ಲಿಯೂ ಮಿಚೆಲ್​ ಸ್ಟಾರ್ಕ್​ ಅವರ ಬೌಲಿಂಗ್​ನಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದಿದ್ದರು. ಇದೀಗ ಸರಣಿ ನಿರ್ಣಾಯಕ ಪಂದ್ಯದಲ್ಲಿ ಅವರನ್ನು ಆಡಿಸುವುದು ಅನುಮಾನ ಎನ್ನಲಾಗಿದೆ.

ಅಂತಿಮ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್​ ಬದಲು ಇಶಾನ್​ ಕಿಶನ್​​(Ishan Kishan) ಆಡುವ ಬಳಗದಲ್ಲಿ ಕಾಣಿಸಿಕೊಳ್ಳವುದು ಬಹುತೇಕ ಖಚಿತ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ ಸ್ಪಿನ್ನರ್​ ಕುಲ್​ದೀಪ್​ ಯಾದವ್(Kuldeep Yadav)​​ ಬದಲು ಯಜುವೇಂದ್ರ ಚಹಲ್​(Yuzvendra Chahal) ಆಡುವ ಸಾಧ್ಯತೆ ಇದೆ. ಕುಲ್​ದೀಪ್ ಕಳೆದ ಎರಡು ಪಂದ್ಯಗಳಲ್ಲಿ ವಿಕೆಟ್​ ಕೀಳಲು ವಿಫಲವಾಗುವ ಜತೆಗೆ ಅತ್ಯಂತ ದುಬಾರಿಯಾಗಿ ಪರಿಣಮಿಸಿದ್ದರು.

ಭಾರತ ಈ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಒಂದೊಮ್ಮೆ ಭಾರತ ಈ ಪಂದ್ಯದಲ್ಲಿ ಸೋತರೆ ಸರಣಿಯ ಜತೆಗೆ ಏಕದಿನ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಳೆದುಕೊಳ್ಳಲಿದೆ. ಹೀಹಾಗಿ ಭಾರತಕ್ಕೆ ಈ ಪಂದ್ಯ ಎರಡು ಕಾರಣಗಳಿಂದ ಮಹತ್ವದಾಗಿದೆ.

ಇದನ್ನೂ ಓದಿ IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್​ ರಿಪೋರ್ಟ್​, ಸಂಭಾವ್ಯ ತಂಡ

ಭಾರತ ಸಂಭಾವ್ಯ ತಂಡ

ಶುಭಮನ್ ಗಿಲ್, ರೋಹಿತ್​ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಇಶಾನ್​ ಕಿಶನ್​, ಕೆ.ಎಲ್ ರಾಹುಲ್ (ವಿಕೆಟ್​ ಕೀಪರ್​), ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​, ಯಜುವೇಂದ್ರ ಚಹಲ್​, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

Continue Reading

ಕ್ರಿಕೆಟ್

IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್​ ರಿಪೋರ್ಟ್​, ಸಂಭಾವ್ಯ ತಂಡ

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್​ ಬದಲು ಇಶಾನ್​ ಕಿಶನ್​ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

VISTARANEWS.COM


on

Edited by

IND VS AUS India Australia Final ODI Pitch Report Possible Squad
Koo

ಚೆನ್ನೈ: ಪ್ರವಾಸಿ ಆಸ್ಟ್ರೇಲಿಯಾ(IND VS AUS) ಮತ್ತು ಆತಿಥೇಯ ಭಾರತ ವಿರುದ್ಧದ ಅಂತಿಮ ಏಕದಿನ ಪಂದ್ಯ ಬುಧವಾರ(ಮಾರ್ಚ್​ 22) ಚೆನ್ನೈನಲ್ಲಿ(Chennai) ನಡೆಯಲಿದೆ. ಈಗಾಗಲೇ ಉಭಯ ತಂಡಗಳು 1-1 ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿದೆ. ಹೀಗಾಗಿ ಸರಣಿ ಗೆಲುವು ದಾಖಲಿಸಲು ಇತ್ತಂಡಗಳಿಗೂ ಇದು ಮಹತ್ವದ ಪಂದ್ಯವಾಗಿದೆ. ಈ ಪಂದ್ಯದ ಪಿಚ್​ ರಿಪೋರ್ಟ್​ ಮತ್ತು ಸಂಭಾವ್ಯ ತಂಡಗಳ ಮಾಹಿತಿ ಇಂತಿದೆ.

ಪಿಚ್​ ರಿಪೋರ್ಟ್​

ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನ(MA Chidambaram Stadium) ಪಿಚ್​ ಸ್ಪಿನ್​ ಸ್ನೇಹಿಯಾಗಿದೆ. ಇಲ್ಲಿ ಸ್ಪಿನರ್​ಗಳು ಉತ್ತಮ ದಾಖಲೆ ಹೊಂದಿದ್ದಾರೆ. ಹೀಗಾಗಿ ಉಭಯ ತಂಡಗಳು ಸ್ಪಿನ್​ಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ. ಇಲ್ಲಿ ಒಟ್ಟು 21 ಏಕದಿನ ಪಂದ್ಯಗಳು ನಡೆದಿತ್ತು. ದೊಡ್ಡ ಮೊತ್ತ ದಾಖಲಾಗಿಲ್ಲ. ಎವರೇಜ್​ 250 ರಿಂದ 280 ರನ್​ ಬಾರಿಸಿದರೆ ಇದು ದೊಡ್ಡ ಮೊತ್ತ ಎನ್ನಬಹುದು. ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಇಲ್ಲಿ 13 ಬಾರಿ ಗೆದ್ದಿದೆ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿದರೆ ಒಳಿತು.

ವಿರಾಟ್​ ಉತ್ತಮ ದಾಖಲೆ

ಚೆನ್ನೈಯಲ್ಲಿ ನಡೆದ 7 ಏಕ ದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಇದುವರೆಗೆ 283 ರನ್ ಬಾರಿಸಿದ್ದಾರೆ. ಇದರಲ್ಲಿ ಒಂದು ಶತಕವೂ ಸೇರಿದೆ. ಜತೆಗೆ ಈ ಮೈದಾನದಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧ ಇಲ್ಲಿ 2017 ರಲ್ಲಿ ಕೊನೆಯ ಏಕದಿನ ಪಂದ್ಯ ನಡೆದಿತ್ತು. ಈ ಪಂದ್ಯ ಡಕ್‌ವರ್ತ್ ಲೂಯಿಸ್ ನಿಯಮದನ್ವಯ ಭಾರತ 26 ರನ್‌ಗಳಿಂದ ಜಯ ಸಾಧಿಸಿತ್ತು.

ಸಂಭಾವ್ಯ ತಂಡಗಳು

ಭಾರತ: ಶುಭಮನ್ ಗಿಲ್, ರೋಹಿತ್​ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್/ ಇಶಾನ್​ ಕಿಶನ್​, ಕೆ.ಎಲ್ ರಾಹುಲ್ (ವಿಕೆಟ್​ ಕೀಪರ್​), ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​, ಕುಲ್​ದೀಪ್​ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್​, ಸ್ಟೀವನ್​ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಅಲೆಕ್ಸ್​ ಕ್ಯಾರಿ (ವಿಕೆಟ್​ ಕೀಪರ್​), ಕ್ಯಾಮೆರೂನ್ ಗ್ರೀನ್, ನಥಾನ್​ ಎಲ್ಲಿಸ್​, ಮಾರ್ಕಸ್ ಸ್ಟೋಯಿನಿಸ್​, ಸೀನ್ ಅಬೋಟ್, ಮಿಚೆಲ್ ಸ್ಟಾರ್ಕ್, ಆ್ಯಂಡ ಜಂಪಾ.

Continue Reading
Advertisement
congress says cm basavraj bommai will not get chance to contest inkarnataka election
ಕರ್ನಾಟಕ6 mins ago

Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

Azam peer Khadri
ಕರ್ನಾಟಕ17 mins ago

Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!

ಕಿರುತೆರೆ20 mins ago

Kannada Serial: 900 ಸಂಚಿಕೆ ಪೂರೈಸಿದ ಜೊತೆ ಜೊತೆಯಲಿ ಧಾರಾವಾಹಿ; ಸಂಭ್ರಮದಲ್ಲಿ ತಂಡ

ಕರ್ನಾಟಕ22 mins ago

Murder Case: ಅವಳದ್ದು ಮೋಹ, ಇವನಿಗೆ ಮಧುಮೇಹ; ಕೊಲೆಯಲ್ಲಿ ಅಂತ್ಯವಾಯ್ತು ಕಾಳಜಿ ಕಲಹ

Tejasvi Surya says Rahul Gandhi is dependent on pocket money given by mother
ಕರ್ನಾಟಕ27 mins ago

BJP Yuva Morcha: ಅಮ್ಮ ನೀಡುವ ಪಾಕೆಟ್ ಮನಿ ಮೇಲೆಯೇ ರಾಹುಲ್ ಗಾಂಧಿ ಜೀವನ: ತೇಜಸ್ವಿ ಸೂರ್ಯ

WPL 2023: RCB ends campaign with defeat
ಕ್ರಿಕೆಟ್28 mins ago

WPL 2023: ಸೋಲಿನೊಂದಿಗೆ ಅಭಿಯಾನ ಮುಗಿಸಿದ ಆರ್​ಸಿಬಿ

Bike Rally yallapur ugadi
ಉತ್ತರ ಕನ್ನಡ31 mins ago

Bike Rally: ಯುಗಾದಿ ಪ್ರಯುಕ್ತ ಯಲ್ಲಾಪುರದಲ್ಲಿ ನಡೆದ ಬೈಕ್ ರ‍್ಯಾಲಿಗೆ ಅಭೂತಪೂರ್ವ ಬೆಂಬಲ

Shobha Karandlaje criticizes congress guarantee
ಕರ್ನಾಟಕ32 mins ago

Congress Guarantee:‌ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗೆ ಜಾರ್ಜ್‌ ಸೊರೊಸ್‌ ಹಣ ಕೊಡುತ್ತಾರೆಯೇ ಎಂದು ಪ್ರಶ್ನಿಸಿದ ಶೋಭಾ ಕರಂದ್ಲಾಜೆ

DC Prabhulinga Kavalikatti karwar
ಉತ್ತರ ಕನ್ನಡ32 mins ago

Karnataka Election 2023: ಗಡಿ ಪ್ರದೇಶಗಳಲ್ಲಿ ಡ್ರಗ್ ದಂಧೆಕೋರರ ಮೇಲೆ ತೀವ್ರ ನಿಗಾ: ಜಿಲ್ಲಾಧಿಕಾರಿ ಸೂಚನೆ

Gangavathi Pranesh nisarga mane sirsi
ಉತ್ತರ ಕನ್ನಡ37 mins ago

Sirsi News: ಕನ್ನಡ ಭಾಷೆಯು ವ್ಯಕ್ತಿಯ ಯೋಗ್ಯತೆಯನ್ನು ಕಟ್ಟಿ ಕೊಡುತ್ತದೆ: ಗಂಗಾವತಿ ಪ್ರಾಣೇಶ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ14 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ6 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ7 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!