Sachin Tendulkar: Change is needed in ODI cricket; Sachin Tendulkar Sachin Tendulkar: ಏಕದಿನ ಕ್ರಿಕೆಟ್​ನಲ್ಲಿ ಬದಲಾವಣೆ ಅಗತ್ಯ; ಸಚಿನ್​ ತೆಂಡೂಲ್ಕರ್​ - Vistara News Sachin Tendulkar: ಏಕದಿನ ಕ್ರಿಕೆಟ್​ನಲ್ಲಿ ಬದಲಾವಣೆ ಅಗತ್ಯ; ಸಚಿನ್​ ತೆಂಡೂಲ್ಕರ್​

ಕ್ರಿಕೆಟ್

Sachin Tendulkar: ಏಕದಿನ ಕ್ರಿಕೆಟ್​ನಲ್ಲಿ ಬದಲಾವಣೆ ಅಗತ್ಯ; ಸಚಿನ್​ ತೆಂಡೂಲ್ಕರ್​

ಏಕ​ದಿನ ಮಾದ​ರಿ​ಯನ್ನು ಟೆಸ್ಟ್‌ ರೀತಿ ತಲಾ 25 ಓವ​ರ್‌​ಗಳ 2 ಇನಿಂಗ್ಸ್​ ರೂಪ​ದಲ್ಲಿ ಆಡಿ​ಸ​ಬೇಕು ಎಂದು ಸಚಿನ್‌ ತೆಂಡೂಲ್ಕರ್ ಸಲಹೆ ನೀಡಿ​ದ್ದಾರೆ.

VISTARANEWS.COM


on

Sachin Tendulkar's advice to maintain the balance of ODI cricket
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಪ್ರೇಕ್ಷಕರ ಮನರಂಜನೆಯನ್ನು ಹೆಚ್ಚಿಸುವ ಸಲುವಾಗಿ ಏಕ ​ದಿನ ಕ್ರಿಕೆಟ್​ನಲ್ಲಿ(ODI Cricket) ಬದಲಾವಣೆ ಅಗತ್ಯ ಎಂದು ರವಿ ಶಾಸ್ತ್ರಿ (Ravi Shastri ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಸಚಿನ್‌ ತೆಂಡೂಲ್ಕರ್(Sachin Tendulkar)​ ಕೂಡ ಏಕ​ದಿನದಲ್ಲಿ ಕೆಲ ಬದ​ಲಾ​ವಣೆ ಅಗ​ತ್ಯ​ವಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸಂದ​ರ್ಶ​ನ​ವೊಂದ​ರಲ್ಲಿ ಮಾತ​ನಾ​ಡಿರುವ ಸಚಿನ್​ ತೆಂಡೂಲ್ಕರ್​ “ಪ್ರಸ್ತುತ ನಡೆಯುತ್ತಿರುವ ಏಕದಿನ ಪಂದ್ಯ​ಗಳ ಫಲಿ​ತಾಂಶವನ್ನು ಮೊದಲೇ ಊಹಿ​ಸ​ಬ​ಹುದು. ಅದ​ರಲ್ಲೂ 15ರಿಂದ 40 ಓವ​ರ್‌​ವ​ರೆ​ಗಿನ ಅವಧಿ ತುಂಬಾ ನೀರಸವಾಗಿರುತ್ತದೆ. ಹೀಗಾಗಿ ಏಕ​ದಿನ ಮಾದ​ರಿ​ಯನ್ನು ಟೆಸ್ಟ್‌ ರೀತಿ ತಲಾ 25 ಓವ​ರ್‌​ಗಳ 2 ಇನಿಂಗ್ಸ್​ ರೂಪ​ದಲ್ಲಿ ಆಡಿ​ಸ​ಬೇಕು” ಎಂದು ಅವರು ಸಲಹೆ ನೀಡಿ​ದ್ದಾರೆ.

“ಟಿ20 ಕ್ರಿಕೆಟ್​ ಜಾಯಮಾನದಲ್ಲಿ ಇದೀಗ ಏಕದಿನ ಕ್ರಿಕೆಟ್​ನತ್ತ ಪ್ರೇಕ್ಷಕರ ಗಮನ ಕಡಿಮೆಯಾಗಿದೆ. ಹೀಗಾಗಿ ಪ್ರೇಕ್ಷಕರನ್ನು ಆಕರ್ಷಿಸಲು ಏಕದಿನ ಮಾದರಿಯ ಕ್ರಿಕೆಟ್​ನಲ್ಲಿ ಕೆಲ ಬದಲಾವಣೆ ಅಗತ್ಯ” ಎಂದು ಸಚಿನ್​ ಹೇಳಿದರು.

ಇದನ್ನೂ ಓದಿ Sachin Tendulkar: ಬಿಸಿಸಿಐ ಅಧ್ಯಕ್ಷರಾಗಲಿದ್ದಾರಾ ಸಚಿನ್​ ತೆಂಡೂಲ್ಕರ್​?

ರವಿಶಾಸ್ತ್ರಿ ಹೇಳಿದ್ದೇನು

ಏಕ ದಿನ ಕ್ರಿಕೆಟ್​ ಅಳಿವಿನಂಚಿನಲ್ಲಿದ್ದು ಇದನ್ನೂ​ ಹೆಚ್ಚು ಆಕರ್ಷಿಸಲು ಕೆಲ ಬದಲಾವಣೆ ಮಾಡಿಕೊಳ್ಳಬೇಕು ಎಂದು ಕಳೆದ ವಾರ ರವಿಶಾಸ್ತ್ರಿ ಹೇಳಿದ್ದರು. “1983ರಲ್ಲಿ ನಾವು ವಿಶ್ವ ಕಪ್ ಗೆದ್ದಾಗ ಅದು 60 ಓವರ್ ಪಂದ್ಯವಾಗಿತ್ತು. ನಂತರ ಪ್ರೇಕ್ಷಕರ ಗಮನ ಕಡಿಮೆಯಾದ ಕಾರಣ ಇದನ್ನೂ 50 ಓವರ್​ಗಳಿಗೆ ಇಳಿಸಲಾಯಿತು. ಇದೀಗ ಟಿ20 ಕ್ರಿಕೆಟ್ ಬಂದ ಬಳಿಕ ಏಕದಿನದ ಕ್ರೇಜ್​ ಜನರಲ್ಲಿ ಕಡಿಮೆಯಾಗಿದೆ. ಹೀಗಾಗಿ ಸಮಯದೊಂದಿಗೆ ಸ್ವರೂಪದ ಬದಲಾವಣೆಯೂ ಮಾಡುವ ಮೂಲಕ ಏಕ ದಿನ ಕ್ರಿಕೆಟ್​ ಹೆಚ್ಚು ಸ್ವಾರಸ್ಯವಾಗಲು ಇದನ್ನೂ 40 ಓವರ್​ಗೆ ಇಳಿಸುವ ಅಗತ್ಯ ಇದೆ” ಎಂದು ರವಿಶಾಸ್ತ್ರಿ ಸಲಹೆ ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

SRH vs RR: ರಾಜಸ್ಥಾನ್​-ಹೈದರಾಬಾದ್​ ಐಪಿಎಲ್​ ದಾಖಲೆ, ಹವಾಮಾನ ವರದಿ ಹೇಗಿದೆ?

SRH vs RR: ಉಭಯ ತಂಡಗಳು ಇದುವರೆಗಿನ ಐಪಿಎಲ್ ಪಂದ್ಯದಲ್ಲಿ ಒಟ್ಟು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಹೈದರಾಬಾದ್​ 10, ರಾಜಸ್ಥಾನ್​ 9 ಪಂದ್ಯಗಳನ್ನು ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹೈದರಾಬಾದ್​ ಬಲಿಷ್ಠವಾಗಿದೆ. ಜತೆಗೆ ಈ ಬಾರಿ ತಂಡ ಬಲಿಷ್ಠವಾಗಿಯೂ ಗೋಚರಿಸಿದೆ.

VISTARANEWS.COM


on

SRH vs RR
Koo

ಚೆನ್ನೈ: ಐಪಿಎಲ್​ನ ದ್ವಿತೀಯ ಕ್ವಾಲಿಫೈಯರ್(SRH vs RR Qualifier 2)​ ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ(MA Chidambaram Stadium, Chennai) ನಾಳೆ(ಶುಕ್ರವಾರ) ನಡೆಯುವ ಈ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್(SRH vs RR)​ ಮತ್ತು ಸನ್​ರೈಸರ್ಸ್​ ಹೈದರಾಬಾದ್​(Sunrisers Hyderabad) ತಂಡಗಳು ಕಾದಾಟ ನಡೆಸಲಿವೆ. ಗೆದ್ದವರು ಮೇ 26ರಂದು ನಡೆಯುವ ಫೈನಲ್​ನಲ್ಲಿ ಕೆಕೆಆರ್​ ವಿರುದ್ಧ ಪ್ರಶಸ್ತಿಗಾಗಿ ಹೋರಾಟ ನಡೆಸಲಿದ್ದಾರೆ. ರಾಜಸ್ಥಾನ್(Rajasthan Royals) ಮತ್ತು ಹೈದರಾಬಾದ್​ ತಂಡದ ನಾಕೌಟ್​/ಪ್ಲೇ ಆಫ್​ ಸಾಧನೆಯ ಇಣುಕು ನೋಡ ಇಂತಿದೆ.

ಲೀಗ್​ನಲ್ಲಿ 1 ರನ್​ ಗೆಲುವು


ಈ ಬಾರಿಯ ಲೀಗ್​ನಲ್ಲಿ ಇತ್ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಅತ್ಯಂತ ರೋಚವಾಗಿ ಸಾಗಿದ ಈ ಪಂದ್ಯವನ್ನು ಸನ್​ರೈಸರ್ಸ್​ ಹೈದರಾಬಾದ್​ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಭುನೇಶ್ವರ್​ ಕುಮಾರ್​ ಅವರು ಅಂತಿಮ ಎಸೆತದಲ್ಲಿ ರೋಮ್ಮನ್​ ಪೋವೆಲ್​ ಅವರನ್ನು ಎಲ್​ಬಿಡ್ಲ್ಯು ಮಾಡುವ ಮೂಲಕ ಈ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಈ ಸೋಲಿಗೆ ರಾಜಸ್ಥಾನ್​ ಕ್ವಾಲಿಫೈಯರ್​ ಪಂದ್ಯದಲ್ಲಿ ಸೇಡು ತೀರಿಸಲು ಪಣ ತೊಟ್ಟಿದೆ.

ರಾಜಸ್ಥಾನ್​ ನಾಕೌಟ್​/ ಪ್ಲೇ ಆಫ್​ ಸಾಧನೆ


2008ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಚಾಂಪಿಯನ್​

2013ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2015ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2018ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2022ರಲ್ಲಿ ಲೀಗ್​ನಲ್ಲಿ 2ನೇ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

ಬಲಾಬಲ


ಉಭಯ ತಂಡಗಳು ಇದುವರೆಗಿನ ಐಪಿಎಲ್ ಪಂದ್ಯದಲ್ಲಿ ಒಟ್ಟು 19 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಹೈದರಾಬಾದ್​ 10, ರಾಜಸ್ಥಾನ್​ 9 ಪಂದ್ಯಗಳನ್ನು ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹೈದರಾಬಾದ್​ ಬಲಿಷ್ಠವಾಗಿದೆ. ಜತೆಗೆ ಈ ಬಾರಿ ತಂಡ ಬಲಿಷ್ಠವಾಗಿಯೂ ಗೋಚರಿಸಿದೆ.

ಹೈದರಾಬಾದ್​ ನಾಕೌಟ್​/ ಪ್ಲೇ ಆಫ್​ ಸಾಧನೆ


2013ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2016ರಲ್ಲಿ ಲೀಗ್​ನಲ್ಲಿ 3ನೇ ಸ್ಥಾನ. ಚಾಂಪಿಯನ್‌

2017ರಲ್ಲಿ ಲೀಗ್​ನಲ್ಲಿ 3ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2018ರಲ್ಲಿ ಮೊದಲ ಸ್ಥಾನ. ರನ್ನರ್ ಅಪ್‌

2019ರಲ್ಲಿ 4ನೇ ಸ್ಥಾನ. ಎಲಿಮಿನೇಟರ್​ನಲ್ಲಿ ಸೋಲು

2020ರಲ್ಲಿ 3ನೇ ಸ್ಥಾನ. ಕ್ವಾಲಿಫೈಯರ್‌-2ನಲ್ಲಿ ಸೋಲು

ಇದನ್ನೂ ಓದಿ IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

ಹವಾಮಾನ ವರದಿ


ಪಂದ್ಯ ಚೆನ್ನೈಯಲ್ಲಿ ನಡೆಯುವ ಕಾರಣ ಪಂದ್ಯಕ್ಕೆ ಮಳೆ ಭೀತಿ ಇದ್ದೇ ಇದೆ. ಈಗಾಗಲೇ ತಮಿಳುನಾಡಿನಲ್ಲಿ ವರುಣನ ಆರ್ಭಟದಿಂದ ಕೆಲವು ಪ್ರದೇಶಗಳು ವಿಪರೀತ ಸಮಸ್ಯೆ ಎದುರಿಸುತ್ತಿದೆ. ಹೀಗಾಗಿ ಪಂದ್ಯಕ್ಕೂ ಮಳೆಯ ಕಾಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದೊಮ್ಮೆ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾದರೆ 120 ನಿಮಿಷಗಳ (2 ಗಂಟೆ) ಅವಧಿಗೆ ಪಂದ್ಯವನ್ನು ವಿಸ್ತರಿಸಬಹುದಾಗಿದೆ. ಆಗ 9.40ಕ್ಕೆ ಪಂದ್ಯ ಆರಂಭವಾಗುವುದಿದ್ದರೂ ಓವರ್‌ಗಳಲ್ಲಿ ಯಾವುದೇ ಕಡಿತ ಇರುವುದಿಲ್ಲ. ಸ್ಪಷ್ಟ ಫ‌ಲಿತಾಂಶಕ್ಕೆ ತಲಾ 5 ಓವರ್‌ಗಳ ಆಟ ನಡೆಯಬೇಕಿದೆ. ಹೆಚ್ಚುವರಿ ಅವಧಿಯಲ್ಲೂ ಇದು ಸಾಧ್ಯವಾಗದೇ ಹೋದರೆ ಲೀಗ್‌ ಹಂತದ ಅಂಕಪಟ್ಟಿಯಲ್ಲಿ ಮೇಲಿದ್ದ ತಂಡವನ್ನು ಜಯಶಾಲಿ ಎಂದು ಘೋಷಿಸಲಾಗುತ್ತದೆ. ಇದರ ಲಾಭ ಸನ್​ರೈಸರ್ಸ್​ ಹೈದರಾಬಾದ್​ ತಂಡಕ್ಕೆ ಸಿಗಲಿದೆ. ಹೈದರಾಬಾದ್​ ತಂಡ ಲೀಗ್​ ಹಂತದಲ್ಲಿ ದ್ವಿತೀಯ ಸ್ಥಾನಿಯಾಗಿತ್ತು.

Continue Reading

ಕ್ರೀಡೆ

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

RCB Funny Memes: ಚೆನ್ನೈ ಸೂಪರ್​ ಕಿಂಗ್ಸ್​ನ ಫ್ಯಾನ್ಸ್ ಪೇಜ್‌ವೊಂದು ಬೆಂಗಳೂರು ದಂಡು ರೈಲ್ವೇ ನಿಲ್ದಾಣದ (Bangalore cant) ಫೋಟೋವನ್ನು ಹಂಚಿಕೊಂಡಿದೆ. ಈ ಮೂಲಕ ಬೆಂಗಳೂರು ತಂಡದಿಂದ ಕಪ್‌ ಗೆಲ್ಲಲು ಸಾಧ್ಯವಿಲ್ಲ ಎಂಬರ್ಥದಲ್ಲಿ ಈ ಮೀಮ್ಸ್ ಅನ್ನು ಸಿಎಸ್‌ಕೆ ಫ್ಯಾನ್ ಪೇಜ್‌ ಹಂಚಿಕೊಂಡಿದೆ

VISTARANEWS.COM


on

RCB Funny Memes
Koo

ಬೆಂಗಳೂರು: ಐಪಿಎಲ್​ನ(IPL 2024) ಸಾಂಪ್ರದಾಯಿಕ ಬದ್ಧ ಎದುರಾಳಿಗಳೆಂದರೆ ಅದು ಚೆನ್ನೈ ಸೂಪರ್​ ಕಿಂಗ್ಸ್(CSK)​ ಮತ್ತು ಆರ್​ಸಿಬಿ(RCB). ಅಭಿಮಾನಿಗಳ ಅತಿಯಾದ ಹುಚ್ಚಾಟದಿಂದಲೇ ಉಭಯ ತಂಡಗಳನ್ನು ಬುದ್ಧ ಎದುರಾಳಿಗಳೆಂದು ಕರೆಯಲಾಗುತ್ತದೆ. ಯಾರೇ ಗೆದ್ದರೂ ಅಥವಾ ಸೋತರೂ ಅಭಿಮಾನಿಗಳು ಪರಸ್ಪರ ಟ್ರೋಲ್​ ಮಾಡುತ್ತಾರೆ. ಅಲ್ಲದೆ ಹೊಡೆದಾಟ ನಡೆಸಿದ ನಿದರ್ಶನ ಕೂಡ ಸಾಕಷ್ಟಿದೆ.

ಕಳೆದ ಶನಿವಾರ ಚಿನ್ನಸ್ವಾಮಿ ಕ್ರೀಡಾಂಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ ತಂಡ ಆರ್​ಸಿಬಿ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಈ ವೇಳೆ ಆರ್​ಸಿಬಿ ಅಭಿಮಾನಿಗಳು ಎಲ್ಲೆ ಮೀರಿದ ಸಂಭ್ರಮಾಚರಣೆ ಮಾಡಿ ಚೆನ್ನೈ ಅಭಿಮಾನಿಗಳಿಗೆ ಎಲ್ಲೆಂದರಲ್ಲಿ ಕಾಟ ಕೊಟ್ಟಿದ್ದರು. ಇದೀಗ ಆರ್​ಸಿಬಿ ರಾಜಸ್ಥಾನ್​ ವಿರುದ್ಧ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದೆ. ಇದೇ ಸಂತಸದಲ್ಲಿ ಆರ್​ಸಿಬಿ ಅಭಿಮಾನಿಗಳನ್ನು ಚೆನ್ನೈ ಅಭಿಮಾನಿಗಳು ಸಿಕ್ಕಾಪಟ್ಟೆ ಟ್ರೋಲ್​ ಮಾಡಿದ್ದಾರೆ.

ಆರ್‌ಸಿಬಿ ಅಭಿಮಾನಿಗಳಿ ತಮ್ಮ ತಂಡದ ಸೋಲಿನ ನಿರಾಸೆ ಮಧ್ಯೆ ಇದೀಗ ಚೆನ್ನೈ ಅಭಿಮಾನಿಗಳ ಟ್ರೋಲ್​ ಮತ್ತು ಮೀಮ್ಸ್​ಗಳ ಬಿಸಿ ಮುಟ್ಟಿದೆ. ಚೆನ್ನೈ ಸೂಪರ್ ಕಿಂಗ್ಸ್ ಅಧಿಕೃತ ಫ್ಯಾನ್ಸ್ ಪುಟದಲ್ಲಿ ಆರ್‌ಸಿಬಿ ಸೋಲನ್ನು ಟ್ರೋಲ್ ಮಾಡಲಾಗಿದ್ದು. ‘ಕರ್ಮ’ ಗುರಿಯಿಟ್ಟವನ ಬಳಿಗೇ ತಿರುಗು ಬಾಣದಂತೆ ಹಿಂತಿರುಗಲಿದೆ ಎಂದು ಕಾಲೆಳೆದಿದ್ದಾರೆ.

ಇದನ್ನೂ ಓದಿ RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ!

ಚೆನ್ನೈ ಸೂಪರ್​ ಕಿಂಗ್ಸ್​ನ ಫ್ಯಾನ್ಸ್ ಪೇಜ್‌ವೊಂದು ಬೆಂಗಳೂರು ದಂಡು ರೈಲ್ವೇ ನಿಲ್ದಾಣದ (Bangalore cant) ಫೋಟೋವನ್ನು ಹಂಚಿಕೊಂಡಿದೆ. ಈ ಮೂಲಕ ಬೆಂಗಳೂರು ತಂಡದಿಂದ ಕಪ್‌ ಗೆಲ್ಲಲು ಸಾಧ್ಯವಿಲ್ಲ ಎಂಬರ್ಥದಲ್ಲಿ ಈ ಮೀಮ್ಸ್ ಅನ್ನು ಸಿಎಸ್‌ಕೆ ಫ್ಯಾನ್ ಪೇಜ್‌ ಹಂಚಿಕೊಂಡಿದೆ. ಈ ಮೀಮ್ಸ್‌ ಅನ್ನು ತುಷಾರ್‌ ದೇಶ್‌ಪಾಂಡೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯ ಸ್ಟೋರಿಯನ್ನು ಹಂಚಿಕೊಂಡಿದ್ದಾರೆ.

ಎಲಿಮಿನೇಟರ್​ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ವಿಕೆಟಿಗೆ 172 ರನ್‌ ಗಳಿಸಿತು. ರಾಜಸ್ಥಾನ್‌ 19 ಓವರ್‌ಗಳಲ್ಲಿ 6 ವಿಕೆಟಿಗೆ 174 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು. ಚೇಸಿಂಗ್​ ವೇಳೆ ರಾಜಸ್ಥಾನ್‌ ಬಿರುಸಿನ ಆಡವಾಡಿತು. ಜೈಸ್ವಾಲ್‌ (45)-ಕ್ಯಾಡ್‌ಮೋರ್‌ (20) ಮೊದಲ ವಿಕೆಟ್​ಗೆ 46 ರನ್‌ ಜತೆಯಾಟ ನಿಭಾಯಿಸಿದರು. ಆ ಬಳಿಕ ಜೈಸ್ವಾಲ್‌-ಸ್ಯಾಮ್ಸನ್‌ ಜತೆಗೂಡಿ 35 ರನ್‌ ಕಲೆಹಾಕಿದರು. 112ಕ್ಕೆ 4 ವಿಕೆಟ್‌ ಬಿದ್ದಾಗ ಪಂದ್ಯ ಕುತೂಹಲ ಘಟ್ಟ ತಲುಪಿತು. ಆದರೆ ಪರಾಗ್‌-ಹೆಟ್‌ಮೈರ್‌ ಸಿಡಿದು ನಿಂತು 45 ರನ್‌ ಜತೆಯಾಟ ನಿಭಾಯಿಸಿ ಆರ್‌ಸಿಬಿಗೆ ಸೋಲುಣಿಸಿದರು. ಮೂರು ಓವರ್​ ತನಕ ಉತ್ತಮ ಲಯದಲ್ಲಿದ್ದ ಕ್ಯಾಮರೂನ್​ ಗ್ರೀನ್​ ನಾಲ್ಕನೇ ಓವರ್​ನಲ್ಲಿ ದುಬಾರಿಯಾದರು. ಹೆಟ್‌ಮೈರ್‌ ಈ ಓವರ್​ನಲ್ಲಿ ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಬಿಸಿ ಮುಟ್ಟಿಸಿದರು.

Continue Reading

ಕ್ರೀಡೆ

T20 World Cup 2024: ಇನ್ನೆರಡು ದಿನದಲ್ಲಿ ಮಿನಿ ವಿಶ್ವಕಪ್​ ಸಮರಕ್ಕೆ ರೋಹಿತ್​, ಕೊಹ್ಲಿ ಸೇರಿ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

T20 World Cup 2024: ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ. ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ಈ ಪಂದ್ಯವನ್ನು ಆಡಲಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿವೆ. ಮೇ 27ರಿಂದ ಅಭ್ಯಾಸ ಪಂದ್ಯಗಳು ಆರಂಭಗೊಳ್ಳಲಿದೆ. ಲೀಗ್​ ಹಂತದ ಪಂದ್ಯಗಳಿಗೆ ಜೂನ್​ 1ರಿಂದ ಚಾಲನೆ ಸಿಗಲಿದೆ. ಈ ಮಹತ್ವದ ಟೂರ್ನಿಯನ್ನಾಡಲು ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ವಿರಾಟ್​ ಕೊಹ್ಲಿ(Virat Kohli), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್, ಮೊಹಮ್ಮದ್​ ಸಿರಾಜ್​​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

ಒಂದೇ ಅಭ್ಯಾಸ ಪಂದ್ಯ


ಭಾರತ ಕೇವಲ ಒಂದೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಮೂಲ ವೇಳಾಪಟ್ಟಿಯ ಪ್ರಕಾರ ಭಾರತ ತಂಡದ ಆಟಗಾರರು ಮೇ 21ರಂದು ನ್ಯೂಯಾರ್ಕ್​ಗೆ ತೆರಳಬೇಕಿತ್ತು. ಆದರೆ ಐಪಿಎಲ್​ ಟೂರ್ನಿಯಿಂದಾಗಿ ಇದು ಸಾಧ್ಯವಾಗಲಿಲ್ಲ. ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ. ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ಈ ಪಂದ್ಯವನ್ನು ಆಡಲಿದೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರೀಡೆ

India Head Coach: ರಿಕಿ ಪಾಂಟಿಂಗ್ ಟೀಮ್​ ಇಂಡಿಯಾದ ಮುಂದಿನ ಕೋಚ್​!

India Head Coach: ಮೂಲಗಳ ಪ್ರಕಾರ ರಿಕಿ ಪಾಂಟಿಂಗ್​ ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪಾಂಟಿಂಗ್​ ಅವರು ವಿರಾಟ್​ ಕೊಹ್ಲಿಯನ್ನು ಗುಣಗಾನ ಮಾಡಿದ್ದಾರೆ.

VISTARANEWS.COM


on

India Head Coach
Koo

ಮುಂಬಯಿ: ಟೀಮ್​ ಇಂಡಿಯಾದ(India Head Coach) ಮುಂದಿನ ಕೋಚ್​(team india coach) ಯಾರಾಗಲಿದ್ದಾರೆ ಎಂಬ ಕತೂಹಲದ ಮಧ್ಯೆ ಹಲವು ಮಾಜಿ ಆಟಗಾರ ಹೆಸರುಗಳು ಕೇಳಿ ಬರುತ್ತಿವೆ. ಇದೀಗ ಈ ಪಟ್ಟಿಗೆ ವಿಶ್ವ ಕಂಡ ಶ್ರೇಷ್ಠ ಆಟಗಾರ, ಸತತವಾಗಿ 2 ಏಕದಿನ ವಿಶ್ವಕಪ್​ ಗೆದ್ದ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್(Ricky Ponting)​ ಕೋಚ್​ ಆಗಲಿದ್ದಾರೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ರಿಕಿ ಪಾಂಟಿಂಗ್​ ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪಾಂಟಿಂಗ್​ ಅವರು ವಿರಾಟ್​ ಕೊಹ್ಲಿಯನ್ನು ಗುಣಗಾನ ಮಾಡಿದ್ದಾರೆ. ಈ ಟ್ವೀಟ್​ ಅನ್ನು ಐಸಿಸಿ ಕೂಡ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಇದನೆಲ್ಲ ನೋಡುವಾಗ ಪಾಂಟಿಂಗ್​ ಭಾರತ ತಂಡದ ಕೋಚ್​ ಆಗುವುದು ಬಹುತೇಕ ಖಚಿತ ಎನ್ನುವಂತಿದೆ.

ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಕೋಚ್​, ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿರುವ ಜಸ್ಟಿನ್ ಲ್ಯಾಂಗರ್(Justin Langer) ಕೂಡ ಭಾರತ ತಂಡದ ಕೋಚಿಂಗ್​ ಬಗ್ಗೆ ಆಸಕ್ತರಾಗಿದ್ದಾರೆ. ಐಪಿಎಲ್​ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ಭಾರತ ತಂಡ ಕೋಚಿಂಗ್​ ಮಾಡುವುದು ಅಸಾಮಾನ್ಯ ಪಾತ್ರವಾಗಿದೆ. ನನಗೂ ಕೋಚಿಂಗ್​ ಮಾಡಲು ಕುತೂಹಲವಿದೆ. ಇಲ್ಲಿ ಅಪಾರ ಸಂಖ್ಯೆಯ ಕ್ರಿಕೆಟ್ ಪ್ರತಿಭೆಗಳಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

ಬಿಸಿಸಿಐ ಕೂಡ ವಿದೇಶಿ ಕೋಚ್​ ಆಯ್ಕೆಯ ಬಗ್ಗೆ ಆಲೋಚನೆ ನಡೆಸುತ್ತಿದೆ ಎನ್ನುವ ಮಾತುಗಳು ಈ ಹಿಂದೆಯೇ ಕೇಳಿ ಬಂದಿತ್ತು. 2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಯೋಚಿಸಿದೆ ಎನ್ನಲಾಗಿದೆ.

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

Continue Reading
Advertisement
SRH vs RR
ಕ್ರೀಡೆ55 seconds ago

SRH vs RR: ರಾಜಸ್ಥಾನ್​-ಹೈದರಾಬಾದ್​ ಐಪಿಎಲ್​ ದಾಖಲೆ, ಹವಾಮಾನ ವರದಿ ಹೇಗಿದೆ?

Self Harming
ಚಿಕ್ಕೋಡಿ3 mins ago

Self Harming : ಮದುವೆಗೆ ವಧು ಸಿಕ್ಕಿಲ್ಲವೆಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Viral Video
ವೈರಲ್ ನ್ಯೂಸ್12 mins ago

Viral Video: ವಿವಾಹ ಮಂಟಪದಲ್ಲಿ ನಾಗವಲ್ಲಿ ಅವತಾರ ತಾಳಿದ ವಧು; ವರ ಈಗ ಕೋಮಾದಲ್ಲಿದ್ದಾನೆ ಎಂದ ನೆಟ್ಟಿಗರು

ರಾಜಕೀಯ27 mins ago

Diplomatic passport: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Weather Report
ದೇಶ32 mins ago

Weather Updates: ಬಿಸಿಗಾಳಿ ಶಾಖಕ್ಕೆ ಕುಲುಮೆಯಂತಾದ ಉತ್ತರ ಭಾರತ..ದಕ್ಷಿಣದಲ್ಲಿ ವರುಣಾರ್ಭಟ- ಕೇರಳದಲ್ಲಿ ನಾಲ್ವರ ದುರ್ಮರಣ

Prajwal Revanna Case Passport Cancellation Process Begins Arrest of Prajwal is certain
ಪ್ರಮುಖ ಸುದ್ದಿ35 mins ago

Prajwal Revanna Case: ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ಗುರು ಸಕಲಮಾ guru sakalamaa
ಕರ್ನಾಟಕ40 mins ago

ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

Road Accident in Vijayanagara
ಕ್ರೈಂ43 mins ago

Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

RCB Funny Memes
ಕ್ರೀಡೆ1 hour ago

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

Hamas Terrorists
ವಿದೇಶ1 hour ago

ಎಲ್ಲೆ ಮೀರಿದ ಹಮಾಸ್‌ ಉಗ್ರರ ಅಟ್ಟಹಾಸ; ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಲೈಂಗಿಕ ದೌರ್ಜನ್ಯ: ಭಯಾನಕ ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ8 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌