Site icon Vistara News

Wrestlers Protest: ಕುಸ್ತಿಪಟುಗಳ ಬೆನ್ನಿಗೆ ನಿಂತ ರಾಬಿನ್‌ ಉತ್ತಪ್ಪ

Robin Uthappa support wrestlers protest

ಬೆಂಗಳೂರು: ಬ್ರಿಜ್​ ಭೂಷಣ್ ಶರಣ್​ ಸಿಂಗ್​ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರಮಾನ್ಯ ಕುಸ್ತಿಪಟುಗಳಿಗೆ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ, ಕನ್ನಡಿಗ ರಾಬಿನ್‌ ಉತ್ತಪ್ಪ ಬೆಂಬಲ ವ್ಯಕ್ತಪಡಿಸಿದ್ದಾರೆ. ಜತೆಗೆ ಇದೊಂದು ಕಳವಳಕಾರಿ ಘಟನೆ ಎಂದು ಹೇಳಿದ್ದಾರೆ.

ಬುಧವಾರ ಟ್ವೀಟ್​ ಮಾಡಿರುವ ಉತ್ತಪ್ಪ, “ನಮ್ಮ ದೇಶದ ಕುಸ್ತಿಪಟುಗಳ ವಿಚಾರದಲ್ಲಿ ಏನಾಗುತ್ತಿದೆ. ಅವರ ಪರಿಸ್ಥಿತಿಯನ್ನು ಕಂಡು ತುಂಬಾ ನೋವಾಗಿದೆ. ಯಾವುದೇ ವಿಚಾರವನ್ನಾಗಲಿ ಶಾಂತಿಯುತ ಮಾರ್ಗದ ಮೂಲಕ ಪರಿಹಾರಕ್ಕೆ ಯತ್ನಿಸಬಹುದಿತ್ತು. ಆದಷ್ಟು ಬೇಗ ಈ ಸಮಸ್ಯೆ ಬಗೆಹರಿಯಲಿ” ಎಂದು ಟ್ವೀಟ್​ ಮಾಡುವ ಮೂಲಕ ಭಾನುವಾರ ಪೊಲೀಸರು ಅತ್ಯಂತ ಅಮಾನುಷವಾಗಿ ಕುಸ್ತಿಪಟುಗಳನ್ನು ರಸ್ತೆಗಳಲ್ಲಿ ಎಳೆದಾಡಿ ಬಂಧಿಸಿದ ನಡೆಯನ್ನು ಖಂಡಿಸಿದ್ದಾರೆ.

ಮಂಗಳವಾರವಷ್ಟೇ ಕನ್ನಡಿಗ ಹಾಗೂ ಟೀಮ್​ ಇಂಡಿಯಾದ ಮಾಜಿ ನಾಯಕ ಅನಿಲ್​ ಕುಂಬ್ಳೆ ಕೂಡ ಟ್ವೀಟ್​ ಮೂಲಕ ಕುಸ್ತಿಪಟುಗಳಿಗೆ ಬೆಂಬಲಿಸಿದ್ದರು. “ಮೇ 28ರಂದು ನಮ್ಮ ಕುಸ್ತಿಪಟುಗಳ ಮೇಲೆ ಪೊಲೀಸರು ತೋರಿದ ವರ್ತನೆಯನ್ನು ಕಂಡು ತುಂಬಾ ದುಃಖವಾಗಿದೆ. ಯಾವುದೇ ಸಮಸ್ಯೆಯನ್ನು ಮಾತುಕತೆಯ ಮೂಲಕ ಪರಿಹರಿಸಬಹುದು. ಶೀಘ್ರ ಪರಿಹಾರಕ್ಕಾಗಿ ಆಶಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ Wrestlers Protest: ಬ್ರಿಜ್‌​ ಭೂಷಣ್​ ಬಂಧಿಸದಿದ್ದರೆ ಹಾಲು,ತರಕಾರಿ ಪೂರೈಕೆ ಸ್ಥಗಿತ; ಟಿಕಾಯತ್ ಎಚ್ಚರಿಕೆ

ಉಗ್ರ ಹೋರಾಟದ ಎಚ್ಚರಿಕೆ

ಮುಂದಿನ 5 ದಿನಗಳಲ್ಲಿ ಬ್ರಿಜ್​ ಭೂಷಣ್​ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರಕ್ಕೆ ಪ್ರತಭಟನಾನಿತರ ಕುಸ್ತಿಪಟುಗಳು ಮತ್ತು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ನರೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಟಿಕಾಯತ್, ಜೂನ್​ 5ರ ಒಳಗಡೆ ಬ್ರಿಜ್‌ ಭೂಷಣ್‌ ಅವರ ಬಂಧಿಸಿ ಕುಸ್ತಿಪಟುಗಳಿಗೆ ಸೂಕ್ತ ನ್ಯಾಯ ಒದಗಿಸದಿದ್ದಲ್ಲಿ ದೆಹಲಿ ಸೇರಿ ಇದರ ಗಡಿ ಭಾಗಕ್ಕೂ ಹಾಲು ಮತ್ತು ತರಕಾರಿ ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜತೆಗೆ ಜೂನ್ 5 ರಂದು ದೆಹಲಿ ಗಡಿ ಘೇರಾವ್ ಹೋರಾಟ ಆರಂಭಿಸುವುದಾಗಿಯೂ ತಿಳಿಸಿದ್ದಾರೆ.

Exit mobile version