Australian Open 2023: ಆಸ್ಟ್ರೇಲಿಯಾ ಓಪನ್​; ಸಾನಿಯಾ ಮಿರ್ಜಾ-ಬೋಪಣ್ಣ ಜೋಡಿ ರನ್ನರ್​ ಅಪ್ - Vistara News

ಕ್ರೀಡೆ

Australian Open 2023: ಆಸ್ಟ್ರೇಲಿಯಾ ಓಪನ್​; ಸಾನಿಯಾ ಮಿರ್ಜಾ-ಬೋಪಣ್ಣ ಜೋಡಿ ರನ್ನರ್​ ಅಪ್

(Australian Open 2023)ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ(Rohan Bopanna and Sania Mirza) ಅವರ ಗ್ರ್ಯಾನ್‌ಸ್ಲಾಮ್‌ ಪಯಣ ಅಂತ್ಯವಾಗಿದೆ. ಆಸ್ಟ್ರೇಲಿಯನ್ ಓಪನ್ ಕೂಟದ ಮಿಶ್ರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಸೋಲು ಕಂಡು ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟರು.

VISTARANEWS.COM


on

australian open sania mirza 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೋರ್ನ್: ಟೆನಿಸ್‌ ಬಾಳ್ವೆಯ ಕೊನೆಯ ಆಸ್ಟ್ರೇಲಿಯನ್(Australian Open 2023) ಓಪನ್ ಗ್ರ್ಯಾನ್‌ಸ್ಲಾಮ್‌ ಟೂರ್ನಿಯ ಮಿಶ್ರ ಡಬಲ್ಸ್​ ಫೈನಲ್​ನಲ್ಲಿ ಸಾನಿಯಾ ಮಿರ್ಜಾ ಸೋಲು ಕಂಡಿದ್ದಾರೆ. ದೇಶಬಾಂಧವ ರೋಹನ್​ ಬೋಪಣ್ಣ(Sania Mirza-Rohan Bopanna) ಜತೆಗೂಡಿ ಫೈನಲ್ ಆಡಿದ ಸಾನಿಯಾ ಮಿರ್ಜಾ ಬ್ರೆಜಿಲ್​ನ ಲೂಯಿಸಾ ಸ್ಟೆಫಾನಿ ಮತ್ತು ರಾಫೆಲ್ ಮಾಟೋಸ್(Luisa Stefani and Rafael Matos) ಜೋಡಿ ವಿರುದ್ಧ 6-7, 2-6 ಸೆಟ್ ಗಳಿಂದ ಸೋಲು ಕಂಡರು.

ಶುಕ್ರವಾರ ನಡೆದ ಮಿಶ್ರ ಡಬಲ್ಸ್​ ಫೈನಲ್​ ಪಂದ್ಯದಲ್ಲಿ ಸಾನಿಯಾ ಮಿರ್ಜಾ-ರೋಹನ್​ ಬೋಪಣ್ಣ ಬ್ರೆಜಿಲ್​ ಜೋಡಿಯ ಸವಾಲು ಮೆಟ್ಟಿ ನಿಲ್ಲಲು ಸಾಧ್ಯವಾಗಲೇ ಇಲ್ಲ. ಮೊದಲ ಸೆಟ್​ನಲ್ಲಿ ಪ್ರಬಲ ಪೈಪೋಟಿ ನೀಡಿದರೂ ಸಣ್ಣ ಅಂತರದಿಂದ ಸೋಲು ಕಂಡರು. ಆದರೆ ದ್ವಿತೀಯ ಸೆಟ್​ನಲ್ಲಿ ಸಂಪೂರ್ಣ ವೈಫಲ್ಯ ಕಂಡು ಶರಣಾದರು. ಈ ಸೋಲಿನೊಂದಿಗೆ ಟೆನಿಸ್‌ ಬಾಳ್ವೆಯ ಕೊನೆಯ ಗ್ರ್ಯಾನ್‌ಸ್ಲಾಮ್‌ ಟೂರ್ನಿಯಲ್ಲಿ ಸಾನಿಯಾ ಮಿರ್ಜಾ(Sania Mirza gets fitting Grand Slam farewell) ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟರು. ಮುಂದಿನ ತಿಂಗಳು ದುಬಾೖಯಲ್ಲಿ ನಡೆಯುವ ಡಬ್ಲ್ಯುಟಿಎ ಕೂಟದಲ್ಲಿ ಕೊನೆಯ ಸಲ ಟೆನಿಸ್​ ರ‍್ಯಾಕೆಟ್‌ ಹಿಡಿಯಲಿದ್ದಾರೆ.

ಬುಧವಾರ ನಡೆದ ಸೆಮಿಫೈನಲ್‌ನಲ್ಲಿ ಶ್ರೇಯಾಂಕ ರಹಿತ ಸಾನಿಯಾ ಮಿರ್ಜಾ-ರೋಹನ್‌ ಬೋಪಣ್ಣ ಸೇರಿಕೊಂಡು 3ನೇ ಶ್ರೇಯಾಂಕದ ಡಿಸೈರ್‌ ಕ್ರಾಜಿಕ್‌ (ಅಮೆರಿಕ)-ನೀಲ್‌ ಸ್ಕಪ್‌ಸ್ಕಿ (ಬ್ರಿಟನ್‌) ವಿರುದ್ಧ 7-6 (5), 6-7 (5), 10-6 ಅಂತರದ ಜಯ ಸಾಧಿಸಿ ಫೈನಲ್​ ಪ್ರವೇಶಿಸಿದ್ದರು.

3 ಸಲ ಮಿಶ್ರ ಡಬಲ್ಸ್‌ ಗ್ರ್ಯಾನ್‌ಸ್ಲಾಮ್‌ ಚಾಂಪಿಯನ್‌

ಸಾನಿಯಾ ಮಿರ್ಜಾ ಈವರೆಗೆ 3 ಸಲ ವನಿತಾ ಡಬಲ್ಸ್‌, 3 ಸಲ ಮಿಶ್ರ ಡಬಲ್ಸ್‌ ಗ್ರ್ಯಾನ್‌ಸ್ಲಾಮ್‌ ಚಾಂಪಿಯನ್‌ ಆಗಿ ಮೂಡಿಬಂದಿದ್ದಾರೆ. ಇದರಲ್ಲಿ ಒಂದು ಡಬಲ್ಸ್‌, ಒಂದು ಮಿಶ್ರ ಡಬಲ್ಸ್‌ ಪ್ರಶಸ್ತಿ “ಮೆಲ್ಬರ್ನ್ ಪಾರ್ಕ್‌’ನಲ್ಲೇ ಒಲಿದಿತ್ತು.
2016ರಲ್ಲಿ ಮಾರ್ಟಿನಾ ಹಿಂಗಿಸ್‌ ಜತೆಗೂಡಿ ವನಿತಾ ಡಬಲ್ಸ್‌ ಚಾಂಪಿಯನ್‌ ಆಗಿದ್ದರು. ಇದಕ್ಕೂ ಮುನ್ನ 2009ರಲ್ಲಿ ಮಹೇಶ್‌ ಭೂಪತಿ ಅವರೊಂದಿಗೆ ಮಿಶ್ರ ಡಬಲ್ಸ್‌ ಪ್ರಶಸ್ತಿ ಜಯಿಸಿದ್ದರು.

ಭೂಪತಿ ಜತೆಗಿನ ಇನ್ನೊಂದು ಮಿಶ್ರ ಡಬಲ್ಸ್‌ ಪ್ರಶಸ್ತಿ 2012ರ ಫ್ರೆಂಚ್‌ ಓಪನ್‌ನಲ್ಲಿ ಒಲಿದಿತ್ತು. ಮೂರೂ ಡಬಲ್ಸ್‌ ಪ್ರಶಸ್ತಿ ಗಳನ್ನೆತ್ತುವಾಗ ಸಾನಿಯಾ ಜತೆ ಯಿದ್ದವರು ಮಾರ್ಟಿನಾ ಹಿಂಗಿಸ್‌. ಸಾನಿಯಾ ಜತೆಗಾರ ರೋಹನ್‌ ಬೋಪಣ್ಣ ಗೆದ್ದಿರುವುದು ಒಂದು ಮಿಶ್ರ ಡಬಲ್ಸ್‌ ಪ್ರಶಸ್ತಿ ಮಾತ್ರ.

“ಮೆಲ್ಬರ್ನ್ ಪಾರ್ಕ್‌ಗೂ ನನಗೂ 18 ವರ್ಷಗಳ ಗಾಢ ನಂಟು. ನನ್ನ ಪಾಲಿಗೆ ಇದು ಮನೆ ಇದ್ದಂತೆ. ಇಲ್ಲಿ ನನ್ನ ಕುಟುಂಬ ಇದೆ. ಬಹಳಷ್ಟು ಮಂದಿ ಭಾರತೀಯರು ಈ ಟೂರ್ನಿಯಲ್ಲಿ ನನಗೆ ಪ್ರೋತ್ಸಾಹ ನೀಡಿದ್ದಾರೆ. ಎಲ್ಲರಿಗೂ ಧನ್ಯವಾದ. ಫೈನಲ್​ನಲ್ಲಿ ಸೋತರೂ ಈ​ ಗ್ರ್ಯಾನ್‌ಸ್ಲಾಮ್‌ ಅಭಿಯಾನವನ್ನು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ” ಎಂಬುದಾಗಿ ಸಾನಿಯಾ ಮಿರ್ಜಾ ವಿದಾಯದ ಬಳಿಕ ಹೇಳಿದರು.

ಇದನ್ನೂ ಓದಿAustralian Open 2023: ಆಸ್ಟ್ರೇಲಿಯಾ ಓಪನ್​; ಫೈನಲ್​ ಪ್ರವೇಶಿಸಿದ ಸಾನಿಯಾ ಮಿರ್ಜಾ-ರೋಹನ್ ಬೋಪಣ್ಣ ಜೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

TCS World 10K: ಕರ್ನಾಟಕದ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಮತ್ತು ಕೆಎಎ ಅಧ್ಯಕ್ಷ ಮತ್ತು ಬ್ಯಾಸ್ಕೆಟ್ ಬಾಲ್ ಫೆಡರೇಶನ್ ಅಧ್ಯಕ್ಷ ಕೆ.ಗೋವಿಂದರಾಜ್ ಸೇರಿದಂತೆ ಗಣ್ಯರು ರೇಸ್ ಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಮಾಣೆಕ್ ಶಾ ಪರೇಡ್​ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಪರೇಡ್ ಮೈದಾನದ ಪ್ರವೇಶದ್ವಾರದ ಮುಂಭಾಗದ ರಸ್ತೆಯಲ್ಲಿ ಎಲ್ಲಾ ವಿಭಾಗಗಳ ಓಟಕ್ಕೆ ಹಸಿರು ನಿಶಾನೆ ತೋರಲಾಗುತ್ತದೆ. ಪದಕ ಪ್ರದಾನ ಸಮಾರಂಭವು ಮೈದಾನದ ಒಳಗೆ ನಡೆಯಲಿದೆ.

VISTARANEWS.COM


on

TCS World 10K
Koo

ಬೆಂಗಳೂರು: ಏಪ್ರಿಲ್ 28ರಂದು (ಭಾನುವಾರ) ಟಿಸಿಎಸ್ ವರ್ಲ್ಡ್ 10ಕೆ (TCS World 10K) ಬೆಂಗಳೂರು ಟೂರ್ನಿಯಲ್ಲಿ ಭಾರತದ ಸ್ಟಾರ್ ಅಥ್ಲೀಟ್​​ಗಳು ಓಟದ ಕಣಕ್ಕೆ ಇಳಿಯಲಿದ್ದಾರೆ. ಬೆಂಗಳೂರಿನ ಬೀದಿಗಳಲ್ಲಿ ಆಯೋಜಿಸಲಾದ ಈ ಓಟವು ಒಟ್ಟು 1.75 ಕೋಟಿ ರೂಪಾಯಿ (2,10000 ಯುಎಸ್ ಡಾಲರ್) ಬಹುಮಾನವನ್ನು ಹೊಂದಿದೆ. 67 ಅಥ್ಲೀಟ್​ಗಳನ್ನು ಒಳಗೊಂಡಿರುವ ಭಾರತೀಯ ಎಲೈಟ್ ಶ್ರೇಣಿಯಲ್ಲಿ ಪುರುಷರ ಮತ್ತು ಮಹಿಳಾ ವಿಜೇತರಿಗೆ ತಲಾ 2,75,000 ರೂ.ಗಳ ನಗದು ನಗದು ಬಹುಮಾನ ಮತ್ತು ಕೋರ್ಸ್ ದಾಖಲೆಯನ್ನು ಮುರಿದರೆ ಇನ್ನೂ 1,00,000 ರೂ.ಗಳ ಬೋನಸ್ ದೊರೆಯಲಿದೆ.

ಕರ್ನಾಟಕದ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಮತ್ತು ಕೆಎಎ ಅಧ್ಯಕ್ಷ ಮತ್ತು ಬ್ಯಾಸ್ಕೆಟ್ ಬಾಲ್ ಫೆಡರೇಶನ್ ಅಧ್ಯಕ್ಷ ಕೆ.ಗೋವಿಂದರಾಜ್ ಸೇರಿದಂತೆ ಗಣ್ಯರು ರೇಸ್ ಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಮಾಣೆಕ್ ಶಾ ಪರೇಡ್​ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.

ರೇಸ್​ ಸಮಯ ಈ ರೀತಿ ಇದೆ

  • ಓಪನ್ 10K ಮತ್ತು ಪೊಲೀಸ್ ಕಪ್ – ಬೆಳಿಗ್ಗೆ 5:10
  • ವಿಶ್ವ 10K ಮಹಿಳೆಯರು – ಬೆಳಿಗ್ಗೆ 6:40
  • ವಿಶ್ವ 10K ಪುರುಷರು – ಬೆಳಿಗ್ಗೆ 7:30
  • ಮಜ್ಜಾ ರನ್ – ಬೆಳಿಗ್ಗೆ 8:15
  • ಚಾಂಪಿಯನ್ಸ್ ವಿತ್ ಡಿಸೆಬಿಲಿಟಿಸ್ ಮತ್ತು ಸಿಲ್ವರ್ ರನ್ – ಬೆಳಿಗ್ಗೆ 8:40

ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಪರೇಡ್ ಮೈದಾನದ ಪ್ರವೇಶದ್ವಾರದ ಮುಂಭಾಗದ ರಸ್ತೆಯಲ್ಲಿ ಎಲ್ಲಾ ವಿಭಾಗಗಳ ಓಟಕ್ಕೆ ಹಸಿರು ನಿಶಾನೆ ತೋರಲಾಗುತ್ತದೆ. ಪದಕ ಪ್ರದಾನ ಸಮಾರಂಭವು ಮೈದಾನದ ಒಳಗೆ ನಡೆಯಲಿದೆ.

ಹಾಲಿ ಚಾಂಪಿಯನ್ ತಮ್ಶಿ ಸಿಂಗ್ ಮತ್ತು ನ್ಯಾಷನಲ್ ಕೋರ್ಸ್ ರೆಕಾರ್ಡ್ ಹೋಲ್ಡರ್ ಸಂಜೀವಿನಿ ಜಾಧವ್ ಅವರು ಭಾರತದ ಮಹಿಳಾ ಓಟಗಾರರನ್ನು ಮುನ್ನಡೆಸಲಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಗೋಲ್ಡ್ ಲೇಬಲ್ ರೋಡ್ ರೇಸ್​​ ಮುಂಚಿತವಾಗಿ ಮಾತನಾಡಿದ ಸಂಜೀವಿನಿ ಜಾಧವ್, “ನನ್ನ ತರಬೇತಿ ಉತ್ತಮವಾಗಿ ನಡೆಯುತ್ತಿದೆ. ನಾನು ಭಾನುವಾರ ಸ್ಪರ್ಧೆಯನ್ನು ಎದುರು ನೋಡುತ್ತಿದ್ದೇನೆ. ನನ್ನ ಅತ್ಯುತ್ತಮ ಪ್ರದರ್ಶನ ನೀಡುವುದು ನನ್ನ ಗುರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

ಭಾರತೀಯ ಎಲೈಟ್​ ಮಹಿಳಾ ಓಟಗಾರರಲ್ಲಿ ಸಂಘಮಿತ್ರ ಮಹತಾ, ಪೂನಂ ದಿನಕರ್ ಸೋನುನೆ, ಏಕ್ತಾ ರಾವತ್, ಉಜಾಲಾ, ಪ್ರೀನು ಯಾದವ್, ಫೂಲನ್ ಪಾಲ್, ಭಾರತಿ ನೈನ್, ಚಾವಿ ಯಾದವ್ ಮತ್ತು ಸೀಮಾ ಕೂಡ ಮುಂಚೂಣಿಯಲ್ಲಿದ್ದಾರೆ.

ಪುರುಷರ ಸಾಲಿನಲ್ಲಿ ಯಾರ್ಯಾರು?

ಭಾರತೀಯ ಪುರುಷರ ಸಾಲಿನಲ್ಲಿ ಕಳೆದ ವರ್ಷದ ರನ್ನರ್ ಅಪ್ ಹರ್ಮನ್​ಜೋತ್​ ಸಿಂಗ್ 30:00 ನಿಮಿಷಗಳ ತಮ್ಮ ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಈ ಬಾರಿ ಭರವಸೆ ಮೂಡಿಸಿದ್ದಾರೆ.

30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ

ಟಿಸಿಎಸ್ ವರ್ಲ್ಡ್ 10 ಕೆಯಲ್ಲಿ ಈ ಬಾರಿ ಬೆಂಗಳೂರಿನ ಗ್ರೌಂಡ್ ಮತ್ತು ವರ್ಚುವಲ್ ವಿಭಾಗಗಳಲ್ಲಿ 30,000 ಕ್ಕೂ ಹೆಚ್ಚು ಭಾಗವಹಿಸಲಿದ್ದಾರೆ. ಉತ್ತಮ್ ಚಂದ್, ನಿತೇಂದ್ರ ಸಿಂಗ್ ರಾವತ್, ಧರ್ಮೇಂದ್ರ, ವಿವೇಕ್ ಸಿಂಗ್ ಮೋರೆ, ಸಂದೀಪ್ ಸಿಂಗ್, ದಿನೇಶ್, ದೀಪಕ್ ಭಟ್, ಮೋಹನ್ ಸೈನಿ, ಅಮೃತ್ ಸಿಂಗ್ ಬೋಹ್ರಾ ಮತ್ತು ಸಂದೀಪ್ ದೇವ್ರಾರಿ ರೇಸ್ನಲ್ಲಿ ಸ್ಪರ್ಧಿಸುತ್ತಿರುವ ಇತರ ಭಾರತೀಯ ಪುರುಷ ಕ್ರೀಡಾಪಟುಗಳು.

Continue Reading

ಪ್ರಮುಖ ಸುದ್ದಿ

Virat Kohli : ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

Virat kohli: ಗುಜರಾತ್ ಜೈಂಟ್ಸ್ ವಿರುದ್ಧದ ಆರ್​ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಕೊಹ್ಲಿ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಅದರ ನಡುವೆಯೂ ಅವರು ಮೊಬೈಲ್​ನಲ್ಲಿ ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆರ್​ಸಿಬಿಯ ತರಬೇತಿ ಅವಧಿಗೆ ಮುಂಚಿತವಾಗಿ ಕ್ರಿಕೆಟಿಗ ಊಟ ಮಾಡುತ್ತಿದ್ದಾಗಲೂ ಆಟವನ್ನು ವೀಕ್ಷಿಸುತ್ತಿದ್ದರು. ಹೋಟೆಲ್​​ನಲ್ಲಿ ಹಾದು ಹೋಗಿರುವ ವ್ಯಕ್ತಿಯೊಬ್ಬರು ಅದನ್ನು ರೆಕಾರ್ಡ್ ಮಾಡಿದ್ದಾರೆ.

VISTARANEWS.COM


on

virat kohli
Koo

ಅಹಮದಾಬಾದ್: ಐಪಿಎಲ್ 2024ರ (IPL 2024) 43 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲಿಸಿದೆ. ಈ ಪಂದ್ಯ ಸಿಕ್ಕಾಪಟ್ಟೆ ಕುತೂಹಲಕಾರಿಯಾಗಿತ್ತು. ಅಂತೆಯೇ ಅರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ((Virat Kohli) ) ಏಪ್ರಿಲ್ 27ರಂದು ತಂಡದ ಹೋಟೆಲ್​ನಲ್ಲಿ ಇರುವಾಗಲೇ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.

ಗುಜರಾತ್ ಜೈಂಟ್ಸ್ ವಿರುದ್ಧದ ಆರ್​ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಕೊಹ್ಲಿ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಅದರ ನಡುವೆಯೂ ಅವರು ಮೊಬೈಲ್​ನಲ್ಲಿ ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆರ್​ಸಿಬಿಯ ತರಬೇತಿ ಅವಧಿಗೆ ಮುಂಚಿತವಾಗಿ ಕ್ರಿಕೆಟಿಗ ಊಟ ಮಾಡುತ್ತಿದ್ದಾಗಲೂ ಆಟವನ್ನು ವೀಕ್ಷಿಸುತ್ತಿದ್ದರು. ಹೋಟೆಲ್​​ನಲ್ಲಿ ಹಾದು ಹೋಗಿರುವ ವ್ಯಕ್ತಿಯೊಬ್ಬರು ಅದನ್ನು ರೆಕಾರ್ಡ್ ಮಾಡಿದ್ದಾರೆ. ಏಪ್ರಿಲ್ 25 ರಂದು ಹೈದರಾಬಾದ್​ನಲ್ಲಿ ನಡೆದ ಸನ್​ರೈಸರ್ಸ್​ ಹೈದರಾಬಾದ್ (ಎಸ್​ಆರ್​​ಎಚ್​​) ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮ್ಯಾಚ್ ವಿನ್ನಿಂಗ್ ಅರ್ಧಶತಕ ಬಾರಿಸಿದ್ದರು.

ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ

ಬೆಂಗಳೂರು: ಮುಂಬರುವ ಐಪಿಎಲ್ 2024 ರಲ್ಲಿ (IPL 2024) ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಇತರ ಆಟಗಾರರು ಅಹಮದಾಬಾದ್​ಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ಮುಖಾಮುಖಿಗೆ ಒಂದು ದಿನ ಮೊದಲು ಬಂದ ಆರ್​ಸಿಬಿ ಪಡೆಗಳಿಗೆ ತಂಡದ ಹೋಟೆಟ್​ನಲ್ಲಿ ಭವ್ಯ ಸ್ವಾಗತ ದೊರೆಯಿತು.


ಹೋಟೆಲ್​ನಲ್ಲಿ ಸಿಕ್ಕಿರುತ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದವರಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ. ಅದರ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

ವಿರಾಟ್ ಕೊಹ್ಲಿ ಏಪ್ರಿಲ್ 28 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದೊಂದಿಗೆ ಆರ್​ಸಿಬಿ ಫ್ರಾಂಚೈಸಿಗಾಗಿ ತಮ್ಮ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. ಸ್ಪರ್ಧೆಗೆ ಒಂದು ದಿನ ಮುಂಚಿತವಾಗಿ ಅವರು ಮತ್ತು ಅವರ ಉಳಿದ ಆಟಗಾರರ ಜತೆ ಹೋಟೆಲ್​ಗೆ ಆಗಮಿಸಿದರು. ಈ ಮೂಲಕ ಅವರು ಅಹಮದಾಬಾದ್​ನಲ್ಲಿ ತಮ್ಮ ಇರುವಿಕೆಯನ್ನು ಗುರುತಿಸಿಕೊಂಡರು.

ಐಪಿಎಲ್ 2024 ರ ಸ್ಟಾರ್ ಆಕರ್ಷಣೆಗಳಲ್ಲಿ ಒಬ್ಬರಾದ ಕೊಹ್ಲಿ ಏಪ್ರಿಲ್ 27 ರಂದು ತಂಡದ ಹೋಟೆಲ್​ಗೆ ಹೋಗುವ ವೇಳೆ ಭವ್ಯ ಸ್ವಾಗತ ಪಡೆದರು.

ಆರೆಂಜ್ ಕ್ಯಾಪ್ ವೀರ ಕೊಹ್ಲಿ

ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ 2024 ರ ಋತುವಿನಲ್ಲಿ ‘ಆರೆಂಜ್ ಕ್ಯಾಪ್’ ಹೊಂದಿದ್ದಾರೆ. ಕ್ರಿಕೆಟಿಗ ಈಗಾಗಲೇ ಕೇವಲ ಒಂಬತ್ತು ಇನಿಂಂಗ್ಸ್​​​ಗಳಲ್ಲಿ 61 ಕ್ಕೂ ಹೆಚ್ಚು ಸರಾಸರಿಯಲ್ಲಿ 430 ರನ್ ಗಳಿಸಿದ್ದಾರೆ/ ಎರಡನೇ ಸ್ಥಾನದಲ್ಲಿರುವ ಸುನಿಲ್ ನರೈನ್ ಅವರನ್ನು 73 ರನ್​ಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ.
ಕೊಹ್ಲಿ ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಎಸ್ಆರ್​​ಎಚ್​ ತಂಡದ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು. ಈ ಗೆಲುವು ಒಂದು ತಿಂಗಳಲ್ಲಿ ಆರ್​ಸಿಬಿಯ ಮೊದಲ ಗೆಲುವು ಮತ್ತು ಋತುವಿನ ಒಟ್ಟಾರೆ ಎರಡನೇ ಗೆಲುವು.

ಒಂಬತ್ತು ಲೀಗ್ ಪಂದ್ಯಗಳಲ್ಲಿ ಕೇವಲ ಎರಡು ಗೆಲುವುಗಳನ್ನು ಗಳಿಸಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್ಸಿಬಿ ಗುಂಪು ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ. ಏಣಿಯನ್ನು ಏರುವ ಪ್ರಯತ್ನದಲ್ಲಿ ಅವರು ಪಂದ್ಯಾವಳಿಯ ಈ ಹಂತದಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಬೇಕಾಗಿದೆ.

Continue Reading

ಕ್ರೀಡೆ

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

IPL 2024: ಇಲ್ಲಿನ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬಯಿ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಬಳಗ ನಿಗದಿತ 20 ಓವರ್​​ಗಳಲ್ಲಿ 4 ವಿಕೆಟ್​ಗೆ 257 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಮುಂಬಯಿ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ ನಷ್ಟಕ್ಕೆ 247 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ನವ ದೆಹಲಿ: ಮತ್ತೊಂದು ದೊಡ್ಡ ಮೊತ್ತದ ಐಪಿಎಲ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮುಂಬಯಿ ಇಂಡಿಯನ್ಸ್ ವಿರುದ್ಧ. 10 ರನ್​ಗಳ ವಿಜಯ ದೊರಕಿದೆ. ಎರಡೂ ತಂಡಗಳು ಗೆಲುವಿಗಾಗಿ ಕೊನೇ ಕ್ಷಣದ ತನಕ ಹೋರಾಡಿದ್ದು ಹಲವು ಸೋಲಿನ ಬಳಿಕ ಪುಟಿದೆದ್ದಿರುವ ಡೆಲ್ಲಿ ತಂಡ ಪಾಂಡ್ಯ ಬಳಗಕ್ಕೆ ಗೆಲುವು ನಿಕರಾಕರಿಸಿದೆ. ಈ ಮೂಲಕ ಮುಂಬೈ ತಂಡದ ಸೋಲಿನ ಬವಣೆ ಮುಂದುವರಿದಿದ್ದು ಹಾಲಿ ಆವೃತ್ತಿಯಲ್ಲಿ 9ನೇ ಪರಾಜಯಕ್ಕೆ ಒಳಗಾಗಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದನೇ ಗೆಲುವನ್ನು ತನ್ನದಾಗಿಸಿಕೊಂಡು ಒಟ್ಟು 10 ಅಂಕಗಳನ್ನು ಪಡೆದುಕೊಂಡಿದ್ದು ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ. ಇದೇ ವೇಳೆ ಮುಂಬಯಿ ಇಂಡಿಯನ್ಸ್​ ಬಳಗ ಕೇವಲ 6 ಅಂಕಗಳೊಂದಿಗೆ 9ನೇ ಸ್ಥಾನವನ್ನು ಪಡೆದುಕೊಂಡಿತು.

ಇಲ್ಲಿನ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬಯಿ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಬಳಗ ನಿಗದಿತ 20 ಓವರ್​​ಗಳಲ್ಲಿ 4 ವಿಕೆಟ್​ಗೆ 257 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಮುಂಬಯಿ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ ನಷ್ಟಕ್ಕೆ 247 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಮುಂಬಯಿ ಭರ್ಜರಿ ಹೋರಾಟ

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡಕ್ಕೆ ಅದಕ್ಕೆ ಪೂರಕವಾಗಿರುವ ಆರಂಭ ದೊರಕಲಿಲ್ಲ. ರೋಹಿತ್ ಶರ್ಮಾ 8 ರನ್​ಗೆ ಔಟಾದರೆ ಇಶಾನ್ ಕಿಶನ್​ 20 ರನ್​ಗಳಿಗೆ ವಿಕೆಟ್​ ಒಪ್ಪಿಸಿದರು. 45 ರನ್​ಗೆ 2 ವಿಕೆಟ್​ ನಷ್ಟ ಮಾಡಿಕೊಂಡ ಮುಂಬೈಗೆ ಆತಂಕ ಎದುರಾಯಿತು. ಈ ವೇಳೆ ಆಡಲು ಬಂದ ಸೂರ್ಯಕುಮಾರ್ ಯಾದವ್​ 13 ಎಸೆತಕ್ಕೆ 26 ರನ್ ಬಾರಿಸಿ ಮಿಂಚುವ ಸೂಚನೆ ಕೊಟ್ಟರು. ಆದರೆ ಸೂರ್ಯನ ಆಟ ಹೆಚ್ಚು ಹೊತ್ತು ನಡೆಯಲಿಲ್ಲ. ಆದರೆ, ಮತ್ತೊಂದು ಬದಿಯಲ್ಲಿ ತಿಲಕ್ ವರ್ಮಾ ಗಟ್ಟಿಯಾಗಿ ನಿಂತು ಡೆಲ್ಲಿ ಬೌಲರ್​ಗಳನ್ನು ದಂಡಿಸಿದರು. ಅದೇ ರೀತಿ ಹಾಲಿ ಆವೃತ್ತಿಯಲ್ಲಿ ಮೊದಲ ಬ್ಯಾರಿಗೆ ಬ್ಯಾಟಿಂಗ್​ನಲ್ಲಿ ಮಿಂಚಿದ ಹಾರ್ದಿಕ್ ಪಾಂಡ್ಯ 24 ಎಸೆತಕ್ಕೆ 46 ರನ್ ಬಾರಿಸಿದರು.

ನಂತರ ಬಂದ ನೇಹಲ್ ವದೇರಾ 4 ರನ್​ಗೆ ಔಟಾದಾಗ ಮತ್ತೆ ಮುಂಬೈಗೆ ಭಯ ಶುರುವಾಯಿತು. ಆದೆರ, ಟಿಮ್ ಡೇವಿಡ್ 17 ಎಸೆತಕ್ಕೆ 37 ರನ್ ಬಾರಿಸ ಗೆಲುವಿನ ಸನಿಹಕ್ಕೆ ಬರಲು ನೆರವಾದರು. ಡೆಲ್ಲಿ ಪರ ರಸಿಕ್​ ಸಲಾಂ ಹಾಗೂ ಮುಖೇಶ್ ಕುಮಾರ್​ ತಲಾ 3 ವಿಕೆಟ್​ ಉರುಳಿಸಿ ತಂಡ ಗೆಲುವಿಗೆ ನೆರವಾದರು.

ಇದನ್ನೂ ಓದಿ: IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

ಮೆಗ್​ಕುರ್ಕ್​ ಭರ್ಜರಿ ಬ್ಯಾಟಿಂಗ್​

ಗೆಲುವಿನೊಂದಿಗೆ ಚೈತನ್ಯ ಪಡೆದುಕೊಂಡಿದ್ದ ಡೆಲ್ಲಿ ತಂಡ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿತು. ಜೇಕ್​ ಫೇಸರ್​ ಮೆಕ್​ಗುರ್ಕ್​ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 27 ಎಸೆತಕ್ಕೆ 84 ರನ್ ಬಾರಿಸಿ ಮಿಂಚಿದರು. ಅವರು ಅಭಿಷೇಕ್ ಪೊರೆಲ್​ (36 ರನ್​) ಜತೆಗೂಡಿ 114 ರನ್ ಬಾರಿಸಿ ಮಿಂಚಿದರು. ಶಾಯ್​ ಹೋಪ್​ 17 ಎಸೆತಕ್ಕೆ 41 ರನ್ ಬಾರಿಸಿ ಮಿಂಚಿದ್ದಾರೆ. ರಿಷಭ್ ಪಂತ್​ 29 ರನ್ ಬಾರಿಸಿ ಮಿಂಚಿದರೆ ಟ್ರಿಸ್ಟಾನ್ 25 ಎಸೆತಕ್ಕೆ 48 ರನ್ ಬಾರಿಸಿದರು.

Continue Reading

ಪ್ರಮುಖ ಸುದ್ದಿ

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

IPL 2024: ವಿರಾಟ್ ಕೊಹ್ಲಿ ಏಪ್ರಿಲ್ 28 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದೊಂದಿಗೆ ಆರ್​ಸಿಬಿ ಫ್ರಾಂಚೈಸಿಗಾಗಿ ತಮ್ಮ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. ಸ್ಪರ್ಧೆಗೆ ಒಂದು ದಿನ ಮುಂಚಿತವಾಗಿ ಅವರು ಮತ್ತು ಅವರ ಉಳಿದ ಆಟಗಾರರ ಜತೆ ಹೋಟೆಲ್​ಗೆ ಆಗಮಿಸಿದರು. ಈ ಮೂಲಕ ಅವರು ಅಹಮದಾಬಾದ್​ನಲ್ಲಿ ತಮ್ಮ ಇರುವಿಕೆಯನ್ನು ಗುರುತಿಸಿಕೊಂಡರು.

VISTARANEWS.COM


on

Virat Kohli
Koo

ಬೆಂಗಳೂರು: ಮುಂಬರುವ ಐಪಿಎಲ್ 2024 ರಲ್ಲಿ (IPL 2024) ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಇತರ ಆಟಗಾರರು ಅಹಮದಾಬಾದ್​ಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ಮುಖಾಮುಖಿಗೆ ಒಂದು ದಿನ ಮೊದಲು ಬಂದ ಆರ್​ಸಿಬಿ ಪಡೆಗಳಿಗೆ ತಂಡದ ಹೋಟೆಟ್​ನಲ್ಲಿ ಭವ್ಯ ಸ್ವಾಗತ ದೊರೆಯಿತು.

ಹೋಟೆಲ್​ನಲ್ಲಿ ಸಿಕ್ಕಿರುತ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದವರಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ. ಅದರ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ವಿರಾಟ್ ಕೊಹ್ಲಿ ಏಪ್ರಿಲ್ 28 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದೊಂದಿಗೆ ಆರ್​ಸಿಬಿ ಫ್ರಾಂಚೈಸಿಗಾಗಿ ತಮ್ಮ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. ಸ್ಪರ್ಧೆಗೆ ಒಂದು ದಿನ ಮುಂಚಿತವಾಗಿ ಅವರು ಮತ್ತು ಅವರ ಉಳಿದ ಆಟಗಾರರ ಜತೆ ಹೋಟೆಲ್​ಗೆ ಆಗಮಿಸಿದರು. ಈ ಮೂಲಕ ಅವರು ಅಹಮದಾಬಾದ್​ನಲ್ಲಿ ತಮ್ಮ ಇರುವಿಕೆಯನ್ನು ಗುರುತಿಸಿಕೊಂಡರು.

ಐಪಿಎಲ್ 2024 ರ ಸ್ಟಾರ್ ಆಕರ್ಷಣೆಗಳಲ್ಲಿ ಒಬ್ಬರಾದ ಕೊಹ್ಲಿ ಏಪ್ರಿಲ್ 27 ರಂದು ತಂಡದ ಹೋಟೆಲ್​ಗೆ ಹೋಗುವ ವೇಳೆ ಭವ್ಯ ಸ್ವಾಗತ ಪಡೆದರು.

ಆರೆಂಜ್ ಕ್ಯಾಪ್ ವೀರ ಕೊಹ್ಲಿ

ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ 2024 ರ ಋತುವಿನಲ್ಲಿ ‘ಆರೆಂಜ್ ಕ್ಯಾಪ್’ ಹೊಂದಿದ್ದಾರೆ. ಕ್ರಿಕೆಟಿಗ ಈಗಾಗಲೇ ಕೇವಲ ಒಂಬತ್ತು ಇನಿಂಂಗ್ಸ್​​​ಗಳಲ್ಲಿ 61 ಕ್ಕೂ ಹೆಚ್ಚು ಸರಾಸರಿಯಲ್ಲಿ 430 ರನ್ ಗಳಿಸಿದ್ದಾರೆ/ ಎರಡನೇ ಸ್ಥಾನದಲ್ಲಿರುವ ಸುನಿಲ್ ನರೈನ್ ಅವರನ್ನು 73 ರನ್​ಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: IPL 2024 : ಪಂದ್ಯದ ನಡುವೆ ಮೈದಾನದಲ್ಲೇ ಗಾಳಿಪಟ ಹಾರಿಸಿದ ಪಂತ್​, ರೋಹಿತ್! ಇಲ್ಲಿದೆ ವಿಡಿಯೊ

ಕೊಹ್ಲಿ ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಎಸ್ಆರ್​​ಎಚ್​ ತಂಡದ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು. ಈ ಗೆಲುವು ಒಂದು ತಿಂಗಳಲ್ಲಿ ಆರ್​ಸಿಬಿಯ ಮೊದಲ ಗೆಲುವು ಮತ್ತು ಋತುವಿನ ಒಟ್ಟಾರೆ ಎರಡನೇ ಗೆಲುವು.

ಒಂಬತ್ತು ಲೀಗ್ ಪಂದ್ಯಗಳಲ್ಲಿ ಕೇವಲ ಎರಡು ಗೆಲುವುಗಳನ್ನು ಗಳಿಸಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್ಸಿಬಿ ಗುಂಪು ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ. ಏಣಿಯನ್ನು ಏರುವ ಪ್ರಯತ್ನದಲ್ಲಿ ಅವರು ಪಂದ್ಯಾವಳಿಯ ಈ ಹಂತದಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಬೇಕಾಗಿದೆ.

Continue Reading
Advertisement
Hasan pen drive case
ಕರ್ನಾಟಕ53 seconds ago

Hasan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Air Force Chopper
ದೇಶ30 mins ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

TCS World 10K
ಬೆಂಗಳೂರು34 mins ago

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

Lok Sabha Election 2024 special kit for the polling staff
ಉತ್ತರ ಕನ್ನಡ38 mins ago

Lok Sabha Election 2024: ಲೋಕಸಭಾ ಚುನಾವಣೆ ಸಿಬ್ಬಂದಿಗೆ ತಯಾರಾಗಿದೆ ವಿಶೇಷ ಕಿಟ್

virat kohli
ಪ್ರಮುಖ ಸುದ್ದಿ1 hour ago

Virat Kohli : ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

MDH, Everest Spices
ವಿದೇಶ1 hour ago

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

Zameer Ahmed Khan‌
ಕರ್ನಾಟಕ2 hours ago

Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

Medical Negligence
ಕ್ರೈಂ2 hours ago

Medical Negligence: ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಲಕ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​​

IPL 2024
ಕ್ರೀಡೆ2 hours ago

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

Viral News
ವೈರಲ್ ನ್ಯೂಸ್2 hours ago

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20246 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ10 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ17 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌