Sania Mirza: ತವರಿನ ಅಭಿಮಾನಿಗಳ ಮುಂದೆ ವಿದಾಯ ಪಂದ್ಯವನ್ನಾಡಲು ಸಜ್ಜಾದ ಸಾನಿಯಾ ಮಿರ್ಜಾ - Vistara News

ಕ್ರೀಡೆ

Sania Mirza: ತವರಿನ ಅಭಿಮಾನಿಗಳ ಮುಂದೆ ವಿದಾಯ ಪಂದ್ಯವನ್ನಾಡಲು ಸಜ್ಜಾದ ಸಾನಿಯಾ ಮಿರ್ಜಾ

ಸಾನಿಯಾ ಮಿರ್ಜಾ ಅವರು ಅಭಿಮಾನಿಗಳ ಮುಂದೆ ಕೊನೆಯ ಬಾರಿಗೆ ವಿದಾಯ ಪ್ರದರ್ಶನ ಪಂದ್ಯ ಆಡಲು ಸಜ್ಜಾಗಿದ್ದಾರೆ.

VISTARANEWS.COM


on

Sania Mirza: Sania Mirza is all set for her farewell match in front of her home fans
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್: ದುಬೈ ಟೆನಿಸ್ ಚಾಂಪಿಯನ್‌ಶಿಪ್‌ ಟೂರ್ನಿಯ ಮೂಲಕ ವೃತ್ತಿಪರ ಟೆನಿಸ್​ಗೆ ವಿದಾಯ ಹೇಳಿದ ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಈಗ ತಮ್ಮ ತವರು ಹೈದರಾಬಾದ್‌ನಲ್ಲಿ ವಿದಾಯ ಪ್ರದರ್ಶನ ಪಂದ್ಯ ಆಡಲಿದ್ದಾರೆ.

ಭಾನುವಾರ(ಮಾರ್ಚ್​ 5) ಇಲ್ಲಿನ ಲಾಲ್ ಬಹದ್ದೂರ್ ಕ್ರೀಡಾಂಗಣದಲ್ಲಿ ಸಾನಿಯಾ ಮಿರ್ಜಾ ತಮ್ಮ ತವರಿನ ಅಭಿಮಾನಿಗಳ ಮುಂದೆ ಕೊನೆಯ ವಿದಾಯದ ಪಂದ್ಯ ಆಡಲಿದ್ದಾರೆ. ಈ ಪಂದ್ಯ ನೋಡಲು ನಟ ದುಲ್ಕರ್​ ಸಲ್ಮಾನ್​ ಸೇರಿದಂತೆ ಹಲವು ನಟ ನಟಿಯರು ಆಗಮಿಸಿದ್ದಾರೆ.

​ಪಂದ್ಯ ಆಡುವುದಕ್ಕೂ ಮುನ್ನ ಮಾತನಾಡಿದ ಸಾನಿಯಾ ಮಿರ್ಜಾ, “18-20 ವರ್ಷಗಳ ಹಿಂದೆ ನಾನು ಟೆನಿಸ್​​ ಆಡಲು ಪ್ರಾರಂಭಿಸಿದ ಇದೇ ಸ್ಥಳದಲ್ಲಿ ಇಂದು ನನ್ನ ಕೊನೆಯ ಟೆನಿಸ್ ಪಂದ್ಯ ಆಡಲಿದ್ದೇನೆ. ನನ್ನೆಲ್ಲಾ ಸ್ನೇಹಿತರು, ಕುಟುಂಬ ಮತ್ತು ಅಭಿಮಾನಿಗಳ ಮುಂದೆ ಕೊನೆಯ ಬಾರಿಗೆ ಆಡುತ್ತೇನೆ” ಎಂದು ಹೇಳಿ ಭಾವುಕರಾದರು.

ಇದನ್ನೂ ಓದಿ WPL 2023: ಆರ್​ಸಿಬಿ ಬಲಿಷ್ಠ ತಂಡ; ಸಾನಿಯಾ ಮಿರ್ಜಾ ವಿಶ್ವಾಸ

ಸಾನಿಯಾ ಮಿರ್ಜಾ ಎರಡು ಪ್ರದರ್ಶನ ಪಂದ್ಯಗಳನ್ನು ಆಡಲಿದ್ದಾರೆ. ಈ ಪೈಕಿ ಮೊದಲ ಪಂದ್ಯದಲ್ಲಿ ನಟರು, ಕ್ರಿಕೆಟಿಗರಾದ ಯುವರಾಜ್​ ಸಿಂಗ್​ ಸೇರಿದಂತೆ ಹಲವು ಟೆನಿಸ್ ಆಟಗಾರರು ಭಾಗವಹಿಸುವರು. ಎರಡು ತಂಡಗಳಲ್ಲಿ ಒಂದನ್ನು ಸಾನಿಯಾ ಮಿರ್ಜಾ ಮುನ್ನಡೆಸಿದರೆ, ಇನ್ನೊಂದನ್ನು ತಂಡವನ್ನು ಭಾರತದ ಮತ್ತೋರ್ವ ಖ್ಯಾತ ಟೆನಿಸ್ ತಾರೆ ರೋಹನ್ ಬೋಪಣ್ಣ ಮುನ್ನಡೆಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MS Dhoni: ಧೋನಿ ಅಭಿಮಾನಿಗಳಿಗೆ ನಿರಾಸೆ; ಇಂದಿನ ಪಂದ್ಯಕ್ಕೆ ಅನುಮಾನ

MS Dhoni: ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಇಂದು ನಡೆಯುವ ಲಕ್ನೋ ಸೇರಿ ಮುಂದಿನ ಕೆಲ ಪಂದ್ಯಗಳಿಗೂ ಅಲಭ್ಯರಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

VISTARANEWS.COM


on

IPL 2024
Koo

ಲಕ್ನೋ: ವಿದಾಯದ ಐಪಿಎಲ್(IPL 2024)​ ಟೂರ್ನಿ ಆಡುತ್ತಿರುವ ಚೆನ್ನೈ ಸೂಪರ್​ ಕಿಂಗ್ಸ್(CSK)​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ಇಂದು ನಡೆಯುವ ಲಕ್ನೋ ಸೇರಿ ಮುಂದಿನ ಕೆಲ ಪಂದ್ಯಗಳಿಗೂ ಅಲಭ್ಯರಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕಳೆದ ಮುಂಬೈ ಮತ್ತು ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ನಡೆಸಿದ ವೇಳೆ ಕುಂಟುತಾ ನಡೆದಾಡಿದ ಫೋಟೊ ಮತ್ತು ವಿಡಿಯೊ ವೈರಲ್​ ಆಗಿತ್ತು. ಮೂಲಗಳ ಪ್ರಕಾರ ಧೋನಿ ಮತ್ತೆ ಗಾಯಗೊಂಡಿದ್ದು ಕೆಲ ಪಂದ್ಯಗಳಿಂದ ವಿಶ್ರಾಂತಿ ಬಯಸಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ಧೋನಿ ಗಾಯದ ಮಧ್ಯೆಯೇ ಸಂಪೂರ್ಣವಾಗಿ ನೋವು ನಿವಾರಕ ಪ್ಲಾಸ್ಟರ್​ ಸುತ್ತಿ ಟೂರ್ನಿ ಆಡಿದ್ದರು.

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ನೆಚ್ಚಿನ ಆಟಗಾರನ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

ಇದನ್ನೂ ಓದಿ IPL 2024: ಡಿಆರ್​ಎಸ್​ ಚೀಟಿಂಗ್ ವೇಳೆ ಸಿಕ್ಕಿ ಬಿದ್ದ ಮುಂಬೈ ಇಂಡಿಯನ್ಸ್​; ವಿಡಿಯೊ ವೈರಲ್​

ಇಂದು ನಡೆಯುವ ಐಪಿಎಲ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ಇದುವರೆಗೆ ಐಪಿಎಲ್​ನಲ್ಲಿ ಮೂರು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ತಲಾ ಒಂದು ಪಂದ್ಯಗಳಲ್ಲಿ ಉಭಯ ತಮಡಗಳು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.​

ಸಂಭಾವ್ಯ ತಂಡ

ಚೆನ್ನೈ ಸೂಪರ್​ ಕಿಂಗ್ಸ್​: ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್​ ಕೀಪರ್​), ಶಾರ್ದೂಲ್ ಠಾಕೂರ್, ಮುಸ್ತಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.

ಲಕ್ನೋ: ಕೈಲ್​ ಮೇಯರ್ಸ್, ಕೆಎಲ್ ರಾಹುಲ್ (ನಾಯಕ), ದೀಪಕ್​ ಹೂಡಾ, ಮ್ಯಾಟ್​ ಹೆನ್ರಿ, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೆ. ಗೌತಮ್​, ರವಿ ಬಿಷ್ಣೋಯ್, ಶಮರ್​ ಜೋಸೆಫ್​, ಯಶ್ ಠಾಕೂರ್, ಮಯಾಂಕ್​ ಯಾದವ್​.

Continue Reading

ಕ್ರೀಡೆ

IPL 2024: ಡಿಆರ್​ಎಸ್​ ಚೀಟಿಂಗ್ ವೇಳೆ ಸಿಕ್ಕಿ ಬಿದ್ದ ಮುಂಬೈ ಇಂಡಿಯನ್ಸ್​; ವಿಡಿಯೊ ವೈರಲ್​

IPL 2024: ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣಕ್ಕೆ ಮುಂಬೈ ನಾಯಕ ಹಾರ್ದಿಕ್​ ಪಾಂಡ್ಯ(Hardik Pandya)​ ಅವರಿಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ. “ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ಪಾಂಡ್ಯ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

VISTARANEWS.COM


on

IPL 2024
Koo

ಮುಂಬಯಿ: ಮುಂಬೈ ಇಂಡಿಯನ್ಸ್(Mumbai Indians)​ ವಿರುದ್ಧ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಹಲವು ಆರೋಪಗಳು ಕೇಳಿ ಬರುತ್ತಲೇ ಇದೆ. ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಟಾಸ್​ ಚೀಟಿಂಗ್, ನೋಬಾಲ್​ ನೀಡದ​ ಆರೋಪ ಕೇಳಿಬಂದಿತ್ತು. ಇದೀಗ ಪಂಜಾಬ್​ ವಿರುದ್ಧ ಪಂದ್ಯದಲ್ಲಿ ಡಿಆರ್​ಎಸ್ ಚೀಟಿಂಗ್​ನ(‘DRS Cheating) ಆರೋಪ ಕೇಳಿ ಬಂದಿದೆ. ಅಲ್ಲದೆ ಈ ಘಟನೆಯ ದೃಶ್ಯ ​ ವೈರಲ್​ ಆಗಿದ್ದು ಫ್ರಾಂಚೈಸಿ ವಿರುದ್ಧ ಹಲವರು ಛೀಮಾರಿ ಹಾಕಿದ್ದಾರೆ.

ಪಂದ್ಯದ 15ನೇ ಓವರ್​ನಲ್ಲಿ ಈ ಘಟನೆ ನಡೆದಿದೆ. ಅರ್ಶ್​ದೀಪ್​ ಸಿಂಗ್​ ಎಸೆತ ಈ ಓವರ್​ನ 5ನೇ ಎಸೆತ ವೈಡ್​ ಲೈನ್​ನಲ್ಲಿ ಸಾಗಿ ಕೀಪರ್​ ಕೈ ಸೇರಿತು. ಸೂರ್ಯಕುಮಾರ್ ಯಾದವ್​ ಬ್ಯಾಟಿಂಗ್​ ನಡೆಸುತ್ತಿದ್ದರು. ಈ ವೇಳೆ ಡಗೌಟ್​ನಲ್ಲಿದ್ದ ಟಿಮ್​ ಡೇವಿಡ್​ ಮತ್ತು ಕೋಚ್​ ಮಾರ್ಕ್​ ಬೌಚರ್ ಡಿಆರ್​ಎಸ್​ ತೆಗೆದುಕೊಳ್ಳುವಂತೆ ಸನ್ನೆಯ ಮೂಲಕ ಸೂರ್ಯ ಅವರಿಗೆ ಮನವಿ ಮಾಡಿದ್ದಾರೆ. ಇದು ಪಂದ್ಯದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ​ಬೌಚರ್ ಮತ್ತು ಡೇವಿಡ್ ಡಿಆರ್​ಎಸ್​ ಸನ್ನೆ ಮಾಡುತ್ತಿರುವುದನ್ನು ಕಂಡ ಪಂಜಾಬ್​ ನಾಯಕ ಸ್ಯಾಮ್​ ಕರನ್​ ಓಡಿ ಬಂದು ಅಂಪೈರ್​ ಗಮನಕ್ಕೆ ತಂದಿದ್ದಾರೆ. ಈ ಎಲ್ಲ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿದೆ.

ಇದೇ ಪಂದ್ಯದಲ್ಲಿ ಪಂಜಾಬ್​ ಬ್ಯಾಟಿಂಗ್​ ನಡೆಸುತ್ತಿದ್ದ ವೇಳೆ ಹಾರ್ದಿಕ್​ ಪಾಂಡ್ಯ ಎಸೆದ 19ನೇ ಓವರ್​ನಲ್ಲಿ ಬ್ಯಾಟರ್​ನ ಲೆಗ್​ ಸೈಡ್​ನಿಂದ ಚೆಂಡು ಸಾಗಿದರೂ ಕೂಡ ಅಂಪೈರ್​ ಇದನ್ನು ವೈಡ್​ ನೀಡಲಿಲ್ಲ. ಈ ವಿಚಾರವಾಗಿಯೂ ಮುಂಬೈ ಮತ್ತು ಅಂಪೈರ್​ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ. ಮುಂಬೈ ಇಂಡಿಯನ್ಸ್​ ಬದಲು ಮುಂಬೈ ಅಂಪೈರ್ಸ್​ ಎಂದು ತಂಡಕ್ಕೆ ಹೆಸರಿಡುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ಒಟ್ಟಾರೆಯಾಗಿ ಮುಂಬೈ ತಂಡ ಈ ಬಾರಿ ಕೇವಲ ವಿವಾದದಿಂದಲೇ ಸುದ್ದಿಯಾಗುತ್ತಿದೆ.

ಇದನ್ನೂ ಓದಿ IPL 2024: ಸಿಕ್ಸರ್​ ಮೂಲಕ ದಾಖಲೆ ಬರೆದ ಹಿಟ್​ಮ್ಯಾನ್​ ರೋಹಿತ್​

ಈ ಪಂದ್ಯದಲ್ಲಿ (IPL 2024) ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣಕ್ಕೆ ಮುಂಬೈ ನಾಯಕ ಹಾರ್ದಿಕ್​ ಪಾಂಡ್ಯ(Hardik Pandya)​ ಅವರಿಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ. “ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ಪಾಂಡ್ಯ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಾರಾಜಾ ಯಾದವೀಂದ್ರ ಸಿಂಗ್​ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 19.1 ಓವರ್​ಗಳಲ್ಲಿ 183 ರನ್​ಗೆ ಆಲ್​ಔಟ್​ ಆಗಿ ಕೇವಲ 9 ರನ್​ ಅಂತರದಿಂದ ಸೋಲೊಪ್ಪಿಕೊಂಡಿತು. ಗೆಲುವು ಸಾಧಿಸಿದ ಮುಂಬೈ ಅಂಕಪಟ್ಟಿಯಲ್ಲಿ(IPL 2024 Points Table) ಪ್ರಗತಿ ಸಾಧಿಸಿದೆ. ಈ ಪಂದ್ಯಕ್ಕೂ ಮುನ್ನ 9ನೇ ಸ್ಥಾನದಲ್ಲಿದ್ದ ಮುಂಬೈ ಈ ಗೆಲುವಿನೊಂದಿಗೆ 7ನೇ ಸ್ಥಾನಕ್ಕೇರಿದೆ. ಸೋಲು ಕಂಡ ಪಂಜಾಬ್​ 9ನೇ ಸ್ಥಾನಕ್ಕೆ ಕುಸಿದಿದೆ.

Continue Reading

ಕ್ರಿಕೆಟ್

IPL 2024: ಸಿಕ್ಸರ್​ ಮೂಲಕ ದಾಖಲೆ ಬರೆದ ಹಿಟ್​ಮ್ಯಾನ್​ ರೋಹಿತ್​

IPL 2024: ಈ ಬಾರಿಯ ಐಪಿಎಲ್​ನಲ್ಲಿ ತಂಡವೊಂದು ಪವರ್​ ಪ್ಲೇಯಲ್ಲಿ ಬಾರಿಸಿದ ಸಿಕ್ಸರ್​ಗಳಿಗಿಂತ ಹೆಚ್ಚು ರೋಹಿತ್​ ಒಬ್ಬರೆ ಹೆಚ್ಚಿನ ಸಿಕ್ಸರ್​ ಬಾರಿಸಿದ್ದಾರೆ. ರೋಹಿತ್​ ಈ ಬಾರಿ ಪವರ್​ ಪ್ಲೇಯಲ್ಲಿ 13 ಸಿಕ್ಸರ್​ ಬಾರಿಸಿದ್ದಾರೆ. ಲಕ್ನೋ ತಂಡ 12 ಸಿಕ್ಸರ್​ ಬಾರಿಸಿದೆ.

VISTARANEWS.COM


on

IPL 2024
Koo

ಮುಂಬಯಿ: ಪಂಜಾಬ್(Punjab Kings)​ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ 250ನೇ ಐಪಿಎಲ್(IPL 2024)​ ಪಂದ್ಯಗಳನ್ನು ಪೂರ್ತಿಗೊಳಿಸಿದ ಹಿಟ್​ ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರು ಇದೇ ಪಂದ್ಯದಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ಮುಂಬೈ ಇಂಡಿಯನ್ಸ್(Mumbai Indians)​ ತಂಡದ ಪರ ಅತ್ಯಧಿಕ ಸಿಕ್ಸರ್ ಬಾರಿಸಿದ ಆಟಗಾರ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ.

ರೋಹಿತ್​ ಶರ್ಮ ಪಂಜಾಬ್​ ವಿರುದ್ಧ ಮೂರು ಸಿಕ್ಸರ್​ ಬಾರಿಸಿಸುವ ಮೂಲಕ ಮುಂಬೈ ತಂಡದ ಪರ ಅತ್ಯಧಿಕ ಸಿಕ್ಸರ್​ ಬಾರಿಸಿದ್ದ ಮಾಜಿ ಆಟಗಾರ ಕೈರಾನ್​ ಪೊಲಾರ್ಡ್ ಅವರ ದಾಖಲೆಯನ್ನು ಮುರಿದರು. ಪೊಲಾರ್ಡ್​ ಮುಂಬೈ ಪರ 223 ಸಿಕ್ಸರ್​ ಬಾರಿಸಿ ಇದುವರೆಗೆ ಅಗ್ರಸ್ಥಾನದಲ್ಲಿದ್ದರು. ಈ ದಾಖಲೆಯನ್ನು ರೋಹಿತ್​ ಮುರಿದಿದ್ದಾರೆ. ಸದ್ಯ ರೋಹಿತ್​ ಮುಂಬೈ ಪರ 224* ಸಿಕ್ಸರ್​ ಬಾರಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಹಾರ್ದಿಕ್​ ಪಾಂಡ್ಯ ಕಾಣಿಸಿಕೊಂಡಿದ್ದಾರೆ. ಪಾಂಡ್ಯ 104* ಸಿಕ್ಸರ್​ ಸಿಡಿಸಿದ್ದಾರೆ. ಇಶಾನ್​ ಕಿಶನ್​(104*) ಮತ್ತು ಸೂರ್ಯಕುಮಾರ್​(97*) ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ.

ಮುಂಬೈ ಪರ ಅತ್ಯಧಿಕ ಸಿಕ್ಸರ್​ ಬಾರಿಸಿದ ಬ್ಯಾಟರ್​ಗಳು


ರೋಹಿತ್​ ಶರ್ಮ-224*

ಕೈರಾನ್​ ಪೊಲಾರ್ಡ್​-223

ಹಾರ್ದಿಕ್​ ಪಾಂಡ್ಯ-104*

ಇಶಾನ್​ ಕಿಶನ್​-103*

ಸೂರ್ಯಕುಮಾರ್​ ಯಾದವ್​-97*

ಮುಂಬೈ ಪರ ಮಾತ್ರವಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ತಂಡವೊಂದು ಪವರ್​ ಪ್ಲೇಯಲ್ಲಿ ಬಾರಿಸಿದ ಸಿಕ್ಸರ್​ಗಳಿಗಿಂತ ಹೆಚ್ಚು ರೋಹಿತ್​ ಒಬ್ಬರೆ ಹೆಚ್ಚಿನ ಸಿಕ್ಸರ್​ ಬಾರಿಸಿದ್ದಾರೆ. ರೋಹಿತ್​ ಈ ಬಾರಿ ಪವರ್​ ಪ್ಲೇಯಲ್ಲಿ 13 ಸಿಕ್ಸರ್​ ಬಾರಿಸಿದ್ದಾರೆ. ಲಕ್ನೋ ತಂಡ 12 ಸಿಕ್ಸರ್​ ಬಾರಿಸಿದೆ.

ಇದನ್ನೂ ಓದಿ IPL 2024: ಮುಂಬೈ ಗೆದ್ದರೂ ಪಾಂಡ್ಯಗಿಲ್ಲ ಖುಷಿ; ನಿಧಾನಗತಿಯ ಓವರ್​ಗೆ ಬಿತ್ತು 12 ಲಕ್ಷ ದಂಡ


ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಆಕ್ಷೇಪ


ಐಪಿಎಲ್​ನಲ್ಲಿ(IPL 2024) ಕಳೆದ ವರ್ಷ ಜಾರಿಗೆ ತಂದ ವಿನೂತನ ಇಂಪ್ಯಾಕ್ಟ್ ಪ್ಲೇಯರ್(Impact Player) ನಿಯಮದ ಬಗ್ಗೆ ಟೀಮ್​ ಇಂಡಿಯಾದ ನಾಯಕ, ಮುಂಬೈ ಇಂಡಿಯನ್ಸ್​ನ ಆಟಗಾರ ರೋಹಿತ್​ ಶರ್ಮ(Rohit Sharma) ಶರ್ಮ ​ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ನಿಯಮದಿಂದ ಭಾರತೀಯ ಕ್ರಿಕೆಟ್‌ಗೆ ದೊಡ್ಡ ನಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿದ ರೋಹಿತ್​, ‘ಕ್ರಿಕೆಟ್ 11 ಜನ ಆಡುವ ಆಟ, 12 ಜನರಿಂದಲ್ಲ, ಇಂಪ್ಯಾಕ್ಟ್ ಆಟಗಾರ ನಿಯಮದಿಂದಾಗಿ ನೈಜ ಕ್ರಿಕೆಟ್​ಗೆ ಹಾನಿಯಾಗಿದೆ. ಇದು ಮನರಂಜನೆ ಒದಗಿಸಬಹುದೇ ಹೊರತು ಕ್ರಿಕೆಟ್​ ಬೆಳವಣಿಗೆಗೆ ಅಪಾಯಕಾರಿ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇಂಪ್ಯಾಕ್ಟ್ ನಿಯಮದಿಂದ ಓರ್ವ ಆಟಗಾರನಿಗೆ ತನ್ನ ಸಾಮರ್ಥ್ಯವನ್ನು ತೋರ್ಪಡಿಸುವ ಅವಕಾಶ ಸಿಗುತಿಲ್ಲ. ಉದಾಹರಣೆಗೆ ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಸೇರಿದಂತೆ ಅನೇಕ ಆಲ್ರೌಂಡರ್‌ಗಳಿಗೆ ಬ್ಯಾಟಿಂಗ್​ ಸಿಕ್ಕರೆ ಬೌಲಿಂಗ್​ ಸಿಗುತ್ತಿಲ್ಲ. ಬೌಲಿಂಗ್​ ಸಿಕ್ಕರೆ ಬ್ಯಾಟಿಂಗ್​ ಸಿಗುತ್ತಿಲ್ಲ ಎಂದು ರೋಹಿತ್ ಬೇಸರ ವ್ಯಕ್ತಪಡಿಸಿದ್ದಾರೆ.

Continue Reading

ಕ್ರೀಡೆ

Dubai Rain: ಭಾರತೀಯ ಕುಸ್ತಿಪಟುಗಳ ಪ್ಯಾರಿಸ್​ ಒಲಿಂಪಿಕ್ಸ್​ ಕನಸಿಗೆ ತಣ್ಣೀರೆರಚಿದ ದುಬೈ ಮಳೆ

Dubai Rain: ಕಳೆದ ಎರಡು ದಿನಗಳಿಂದ ದುಬೈನಲ್ಲಿ ರನ್‌ವೇ ಕಾರ್ಯನಿರ್ವಹಿಸದ ಕಾರಣ ದೀಪಕ್ ಮತ್ತು ಸುಜೀತ್ ಬಿಷ್ಕೆಕ್‌ಗೆ ತೆರಳುವ ವಿಮಾನ ವಿಳಂಬವಾಗಿತ್ತು. ಹೀಗಾಗಿ ಇಬ್ಬರು ಕುಸ್ತಿಪಟುಗಳು ಏಷ್ಯನ್ ಅರ್ಹತಾ ಪಂದ್ಯಗಳ ಸ್ಥಳಕ್ಕೆ ಸರಿಯಾದ ಸಮಯಕ್ಕೆ ತಲುಪಲು ಸಾಧ್ಯವಾಗಲಿಲ್ಲ ಎಂದು ಭಾರತದ ಕುಸ್ತಿ ಒಕ್ಕೂಟದ ಮೂಲವೊಂದು ಇಂಡಿಯಾ ಟುಡೇಗೆ ತಿಳಿಸಿದೆ.

VISTARANEWS.COM


on

Dubai Rain
Koo

ದುಬೈ: ಗಲ್ಫ್ ರಾಷ್ಟ್ರದಲ್ಲಿ ಸುರಿದ (Dubai Rain) ಭಾರೀ ಮಳೆ (heavy Rain) ಹಾಗೂ ಹಠಾತ್‌ ಪ್ರವಾಹ (Flash Flood) ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಳೆ ಭಾರತೀಯ ಇಬ್ಬರು ಕುಸ್ತಿಪಟುಗಳ ಪ್ಯಾರಿಸ್​ ಒಲಿಂಪಿಕ್ಸ್​ ಕನಸಿಗೆ ತಣ್ಣೀರೆರಚಿದೆ. ಒಲಿಂಪಿಕ್ಸ್​ ಅರ್ಹತಾ ಪಂದ್ಯದಲ್ಲಿ ಸ್ಪರ್ಧಿಸಲು ಕಿರ್ಗಿಸ್ಥಾನದ ಬಿಷ್ಕೆಕ್‌ಗೆ(Bishkek) ತೆರಳ ಬೇಕಿದ್ದ ದೀಪಕ್‌ ಪೂನಿಯ(Deepak Punia) ಮತ್ತು ಸುಜೀತ್‌(Sujeet ) ಅವರು ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದು ಈ ಟೂರ್ನಿಯಲ್ಲಿ ಆಡುವ ಅವಕಾಶದಿಂದ ವಂಚಿತಾಗಿದ್ದಾರೆ.

ಅಭೂತಪೂರ್ವ ಮಳೆಯಿಂದಾಗಿ ನಗರವು ಜಲಾವೃತಗೊಂಡು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಶ್ವದ ಅತ್ಯಂತ ಜನನಿಬಿಡ ವಾಯು ಕೇಂದ್ರದ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಭಾರೀ ಮಳೆಯ ಪರಿಣಾಮ ಕಾರ್ಯಾಚರಣೆ ನಿಲ್ಲಿಸಿತು. ಹೀಗಾಗಿ ದೀಪಕ್ ಪುನಿಯಾ ಮತ್ತು ಸುಜೀತ್ ಕಲಕಲ್ ಗುರುವಾರ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡರು. ದುರದೃಷ್ಟಕರ ಸಂಗತಿ ಎಂದರೆ ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡ 17 ಸದಸ್ಯರ ಭಾರತೀಯ ತಂಡವು ಬಿಷ್ಕೆಕ್ ತಲುಪಿತು, ಆದರೆ ಸುಜೀತ್ ಮತ್ತು ದೀಪಕ್ ದುಬೈನಲ್ಲಿ ಸಿಲುಕಿಕೊಂಡರು.

ದೀಪಕ್ ಪುನಿಯಾ ಅವರ 86 ಕೆಜಿ ವಿಭಾಗ ಮತ್ತು ಸುಜೀತ್ ಅವರ 65 ಕೆಜಿ ವಿಭಾಗದ ಸ್ಪರ್ಧೆಯನ್ನು ಸ್ಥಳೀಯ ಕಾಲಮಾನ ಬೆಳಿಗ್ಗೆ 8 ಗಂಟೆಗೆ ನಿಗದಿಪಡಿಸಲಾಗಿತ್ತು. ಮಳೆ ಬಿಕ್ಕಟಿನಿಂದ ಸಿಲುಕಿದ ಕಾರಣ ಪಂದ್ಯಗಳನ್ನು ಶುಕ್ರವಾರ ಮರು ನಿಗದಿಪಡಿಸಲಾಗಿತ್ತು. ಆದರೆ ಈ ಸಮಯಕ್ಕೂ ಕೂಡ ಅವರಿಗೆ ಅಲ್ಲಿಗೆ ತೆರಳಲು ಸಾಧ್ಯವಾಗದ ಕಾರಣ ಅಂತಿಮವಾಗಿ ಉಭಯ ಕುಸ್ತಿಪಟುgಳು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ತಮ್ಮ ಎರಡನೇ ಕೊನೆಯ ಅವಕಾಶವನ್ನು ಇಬ್ಬರು ಕುಸ್ತಿಪಟುಗಳು ಕಳೆದುಕೊಂಡರು.

ಇದನ್ನೂ ಓದಿ Paris Olympics 2024: ಒಲಿಂಪಿಕ್ಸ್​ಗಾಗಿ ಸರ್ಕಾರಿ ಕಟ್ಟಡದಿಂದ ನೂರಾರು ವಲಸಿಗರ ತೆರವು

ಕಳೆದ ಎರಡು ದಿನಗಳಿಂದ ದುಬೈನಲ್ಲಿ ರನ್‌ವೇ ಕಾರ್ಯನಿರ್ವಹಿಸದ ಕಾರಣ ದೀಪಕ್ ಮತ್ತು ಸುಜೀತ್ ಬಿಷ್ಕೆಕ್‌ಗೆ ತೆರಳುವ ವಿಮಾನ ವಿಳಂಬವಾಗಿತ್ತು. ಹೀಗಾಗಿ ಇಬ್ಬರು ಕುಸ್ತಿಪಟುಗಳು ಏಷ್ಯನ್ ಅರ್ಹತಾ ಪಂದ್ಯಗಳ ಸ್ಥಳಕ್ಕೆ ಸರಿಯಾದ ಸಮಯಕ್ಕೆ ತಲುಪಲು ಸಾಧ್ಯವಾಗಲಿಲ್ಲ ಎಂದು ಭಾರತದ ಕುಸ್ತಿ ಒಕ್ಕೂಟದ ಮೂಲವೊಂದು ಇಂಡಿಯಾ ಟುಡೇಗೆ ತಿಳಿಸಿದೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಸಮೀಪಕ್ಕೆ ಬಂದಿದ್ದ ದೀಪಕ್, 2023ರಲ್ಲಿ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಮತ್ತು 2022ರಲ್ಲಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದರು.

“ತರಬೇತುದಾರರು ಮತ್ತು WFI ಅಧ್ಯಕ್ಷ ಸಂಜಯ್ ಸಿಂಗ್ ವಿಶ್ವ ಕುಸ್ತಿ ಸಂಸ್ಥೆ(UWW )ಗೆ ವಿನಂತಿಸಿದರೂ ಕೂಡ ಈ ಕುಸ್ತಿಪಟುಗಳಿಗೆ ನಿಗದಿತ ಸಮಯಕ್ಕೆ ಬರಲು ಸಾಧ್ಯವಾಗಲಿಲ್ಲ. ಹೀಗಾಗಿ ಉಭಯ ಕುಸ್ತಿಪಟುಗಳು ಪ್ಯಾರಿಸ್‌ ಒಲಿಂಪಿಕ್ಸ್‌ಗೆ ತೇರ್ಗಡೆ ಯಾಗುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.

Continue Reading
Advertisement
IPL 2024
ಕ್ರೀಡೆ4 mins ago

MS Dhoni: ಧೋನಿ ಅಭಿಮಾನಿಗಳಿಗೆ ನಿರಾಸೆ; ಇಂದಿನ ಪಂದ್ಯಕ್ಕೆ ಅನುಮಾನ

evm vvpat verification lok sbha election 2024
Lok Sabha Election 202410 mins ago

ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

Neha Murder case JDS slams hands for defending love jihad to protect accused
ಕರ್ನಾಟಕ10 mins ago

Neha Murder Case: ಲವ್ ಜಿಹಾದ್ ಸಮರ್ಥಿಸಿಕೊಂಡಿದ್ದ ಕೈಗಳಿಂದಲೇ ಆರೋಪಿ ರಕ್ಷಣೆಗೆ ಹೊಂಚು: ಜೆಡಿಎಸ್‌ ಕಿಡಿ

Pro Pak Slogan
ಕರ್ನಾಟಕ12 mins ago

Pro Pak Slogan: ಮೋದಿ ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ; ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

lok sabha Election
ದೇಶ14 mins ago

Lok Sabha Election : ಮಣಿಪುರದ ಮತಗಟ್ಟೆಯಲ್ಲಿ ಗುಂಡಿನ ಚಕಮಕಿ; ಇಲ್ಲಿದೆ ವಿಡಿಯೊ

Neha Murder Case
ಹುಬ್ಬಳ್ಳಿ42 mins ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Neha Murder case Niranjan urges Joshi to guarantee the lives of Hindu girls
ಕ್ರೈಂ50 mins ago

Neha Murder Case: ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ ಸರ್: ಜೋಶಿಗೆ ನೇಹಾ ತಂದೆ ನಿರಂಜನ್ ಮನವಿ

Kannada Serials TRP IPL Matches Effected On Kannada Serial
ಕಿರುತೆರೆ1 hour ago

Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

IPL 2024
ಕ್ರೀಡೆ1 hour ago

IPL 2024: ಡಿಆರ್​ಎಸ್​ ಚೀಟಿಂಗ್ ವೇಳೆ ಸಿಕ್ಕಿ ಬಿದ್ದ ಮುಂಬೈ ಇಂಡಿಯನ್ಸ್​; ವಿಡಿಯೊ ವೈರಲ್​

Job Alert
ಉದ್ಯೋಗ1 hour ago

Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರಕ್ಟ್‌ ಲಿಂಕ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ42 mins ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ11 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌