Sanju Samson: ಸಂಜುಗೆ ಮತ್ತೆ ಅನ್ಯಾಯ; ಅಭಿಮಾನಿಗಳಿಂದ ಬಿಸಿಸಿಐ ವಿರುದ್ಧ ಆಕ್ರೋಶ Vistara News

ಕ್ರಿಕೆಟ್

Sanju Samson: ಸಂಜುಗೆ ಮತ್ತೆ ಅನ್ಯಾಯ; ಅಭಿಮಾನಿಗಳಿಂದ ಬಿಸಿಸಿಐ ವಿರುದ್ಧ ಆಕ್ರೋಶ

ಆಸೀಸ್​ ಟಿ20 ಸರಣಿಗೆ ಸಂಜು ಸ್ಯಾಮ್ಸನ್(Sanju Samson)​ ಅವರನ್ನು ಆಯ್ಕೆ ಮಾಡದ ಕಾರಣ ಅವರ ಅಭಿಮಾನಿಗಳು ಮತ್ತೆ ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Sanju Samson
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಪ್ರಕಟಗೊಂಡಿದೆ. ತಂಡವನ್ನು ಸೂರ್ಯಕುಮಾರ್​ ಯಾದವ್​ ಅವರು ಮುನ್ನಡೆಸಲಿದ್ದಾರೆ. ಸರಣಿ 23ರಿಂದ ಆರಂಭವಾಗಲಿದೆ. ವಿಶ್ವಕಪ್​ ಆಡಿದ ಬಹುತೇಕ ಎಲ್ಲ ಹಿರಿಯ ಆಟಗಾರರಿಗೂ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಸಂಜು ಸ್ಯಾಮ್ಸನ್(Sanju Samson)​ ಅವರನ್ನು ಆಯ್ಕೆ ಮಾಡದ ಕಾರಣ ಅವರ ಅಭಿಮಾನಿಗಳು ಮತ್ತೆ ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಋತುರಾಜ್‌ ಗಾಯಕ್ವಾಡ್‌ ಉಪನಾಯಕರಾಗಿದ್ದಾರೆ. ವಿಶ್ವಕಪ್‌ ತಂಡದ ಭಾಗವಾಗಿದ್ದ ಮೂವರು ಮಾತ್ರ ಈ ಸರಣಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರೆಂದರೆ ಸೂರ್ಯಕುಮಾರ್​, ಇಶಾನ್‌ ಕಿಶನ್‌ ಮತ್ತು ಪ್ರಸಿದ್ಧ್ ಕೃಷ್ಣ. ಕೊನೆಯ 2 ಪಂದ್ಯಗಳಿಗೆ ಶ್ರೇಯಸ್‌ ಅಯ್ಯರ್‌ ಲಭ್ಯರಾಗಲಿದ್ದು, ಉಪನಾಯಕತ್ವ ವಹಿಸಲಿದ್ದಾರೆ.

ಐರ್ಲೆಂಡ್ ಸರಣಿಯಲ್ಲಿ ವಿಕೆಟ್​ ಕೀಪಿಂಗ್​ ಜತೆಗೆ ಬ್ಯಾಟಿಂಗ್​ ಸಹ ಮಾಡಿದ್ದ ಸಂಜು ಸ್ಯಾಮ್ಸನ್​ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಜಿತೇಶ್ ಶರ್ಮಾ ಅವರನ್ನೇ ಪ್ರಮುಖ ಕೀಪರ್​ ಆಗಿ ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಸಂಜು ಅವರಿಗೆ ಈ ರೀತಿ ಅನ್ಯಾಯವಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಅವರು ಉತ್ತಮ ಫಾರ್ಮ್​ನಲ್ಲಿದ್ದರೂ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ.

ಸಂಜು ಅವರಿಗೆ ತಂಡದಲ್ಲಿ ಅವಕಾಶ ನೀಡುತ್ತಿಲ್ಲ ಎಂದು ಅವರ ಅಭಿಮಾನಿಗಳು ಭಾರತದ ಹಲವು ಸರಣಿಯ ವೇಳೆ ಬ್ಯಾನರ್​ ಹಿಡಿದು ಅಭಿಮಾನವೊಂದನ್ನು ನಡೆಸಿ ಅವರಿಗೆ ಅವಕಾಶ ನೀಡಬೇಕೆಂದು ಬಿಸಿಸಿಐಗೆ ಒತ್ತಾಯಿಸಿದ್ದರು. ಇದೀಗ ಆಸೀಸ್​ ವಿರುದ್ಧದ ಸರಣಿಗೂ ಅವಕಾಶ ನೀಡದ ಕಾರಣ ಅವರ ಅಭಿಮಾನಿಗಳು ಕೆರಳಿದ್ದು ಬಿಸಿಸಿಐ ಸಂಜು ಅವರನ್ನು ಬೇಕಂತಲೇ ಟಾರ್ಗೆಟ್​ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ ICC World Cup 2023 : ವಿರಾಟ್, ರೋಹಿತ್​ ಕೈಹಿಡಿದು ಸಂತೈಸಿದ ಪ್ರಧಾನಿ ಮೋದಿ

ಬಡ ಮಕ್ಕಳಿಗೆ ನೆರವು

ವಿಶ್ವದ ಕ್ಯಾಶ್​ ರಿಚ್​ ಲೀಗ್​ಗಳಲ್ಲಿ ಒಂದಾದ ಐಪಿಎಲ್​ನಲ್ಲಿ ರಾಜಸ್ಥಾನ್​ ರಾಯಲ್ಸ್​(rajasthan royals) ಪರ ಆಡುತ್ತಿರುವ ಸಂಜು ಸ್ಯಾಮ್ಸನ್​ ಅವರು ಸದ್ಯ ಗಳಿಸುತ್ತಿರುವ 15 ಕೋಟಿ ವೇತನದಲ್ಲಿ ಯುವ ಮತ್ತು ಪ್ರತಿಭಾವಂತ ಕ್ರಿಕೆಟಿಗರಿಗೆ 2 ಕೋಟಿ ನೆರವಿನ ಹಸ್ತ ಚಾಚುತ್ತಿದ್ದಾರೆ. ಈ ಮೂಲಕ ಯುವ ಪ್ರತಿಭೆಗಳನ್ನು ಬೆಳಕಿಗೆ ತರುವಂತ ಕೆಲಸವನ್ನು ಮಾಡುತ್ತಿದ್ದಾರೆ. ಟೀಮ್​ ಇಂಡಿಯಾದಲ್ಲಿ ತಮಗೆ ಸರಿಯಾದ ಅವಕಾಶ ಸಿಗದಿದ್ದರೂ ಯುವ ಆಟಗಾರರು ಬೆಳಕಿಗೆ ಬರುವಲ್ಲಿ ಶ್ರಮಿಸುತ್ತಿರುವ ಅವರ ಗುಣವನ್ನು ನಿಜಕ್ಕೂ ಮೆಚ್ಚಲೇ ಬೇಕು.

ಭಾರತ ತಂಡ

ಸೂರ್ಯಕುಮಾರ್‌ ಯಾದವ್‌ (ನಾಯಕ), ರುತುರಾಜ್‌ ಗಾಯಕ್ವಾಡ್‌, ಇಶಾನ್‌ ಕಿಶನ್‌, ಯಶಸ್ವಿ ಜೈಸ್ವಾಲ್‌, ತಿಲಕ್‌ ವರ್ಮ, ರಿಂಕು ಸಿಂಗ್‌, ಜಿತೇಶ್‌ ಶರ್ಮ, ವಾಷಿಂಗ್ಟನ್‌ ಸುಂದರ್‌, ಅಕ್ಷರ್‌ ಪಟೇಲ್‌, ಶಿವಂ ದುಬೆ, ರವಿ ಬಿಷ್ಣೋಯಿ, ಆರ್ಷದೀಪ್‌ ಸಿಂಗ್‌, ಪ್ರಸಿದ್ಧ್ ಕೃಷ್ಣ, ಆವೇಶ್‌ ಖಾನ್‌, ಮುಕೇಶ್‌ ಕುಮಾರ್‌.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Ind vs Aus : ಭಾರತ ತಂಡಕ್ಕೆ ಕೊನೇ ಪಂದ್ಯದಲ್ಲೂ ಜಯ, 4-1 ಅಂತರದಿಂದ ಸರಣಿ ಕೈವಶ

ind vs aus : ಸರಣಿಯುದ್ದಕ್ಕೂ ಭಾರತ ತಂಡ ಅತ್ಯುತ್ತಮ ಪ್ರದರ್ಶನ ನೀಡಿತಲ್ಲದೆ, ಯುವ ಆಟಗಾರರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು.

VISTARANEWS.COM


on

indian cricket team
Koo

ಬೆಂಗಳೂರು: ಐದು ಪಂದ್ಯಗಳ ಟಿ20 ಸರಣಿಯ ಕೊನೇ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ (ind vs aus) ವಿರುದ್ಧ 6 ರನ್​ ಗೆಲುವು ಸಾಧಿಸಿದೆ. ಇದರೊಂದಿಗೆ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಕೈವಶ ಮಾಡಿಕೊಂಡಿದೆ. ರಾಯ್ಪುರದಲ್ಲಿ ನಡೆದಿದ್ದ ನಾಲ್ಕನೇ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಭಾರತ ತಂಡ ಸರಣಿಯನ್ನು ಗೆದ್ದುಕೊಂಡಿತ್ತು. ಹೀಗಾಗಿ ಐದನೇ ಪಂದ್ಯಕ್ಕೆ ಹೆಚ್ಚಿನ ಮೌಲ್ಯ ಇರಲಿಲ್ಲ. ಆದಾಗ್ಯೂ ಭಾರತ ತಂಡ ಸರ್ವತೋಮುಖ ಪ್ರದರ್ಶನ ನೀಡುವ ಮೂಲಕ ವಿಜಯ ತನ್ನದಾಗಿಸಿಕೊಂಡಿತು. ವಿಶ್ವ ಕಪ್​ ಫೈನಲ್ ಸೋಲಿನ ಬಳಿಕ ಆಸ್ಟ್ರೇಲಿಯಾ ತಂಡದ ವಿರುದ್ಧವೇ ಸರಣಿ ಗೆಲ್ಲುವ ಮೂಲಕ ಭಾರತ ತಂಡ ಸಮಾಧಾನ ಮಾಡಿಕೊಂಡಿತು. ಇದೇ ವೇಳೆ ಒಟ್ಟು 136 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿರುವ ಏಕೈಕ ತಂಡ ಎಂಬ ಹೆಗ್ಗಳಿಕೆಯನ್ನೂ ಗಳಿಸಿತು.

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟ್​ ಮಾಡಿ ನಿಗದಿತ 20 ಓವರ್​ಗಳಿಗೆ 8 ವಿಕೆಟ್​ ಕಳೆದುಕೊಂಡು 160 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮ್ಯಾಥ್ಯೂ ವೇಡ್​ ನೇತೃತ್ವದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್​ಗಳು ಮುಕ್ತಾಯಗೊಂಡಾಗ 154 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಆಸ್ಟ್ರೇಲಿಯಾ ತಂಡದ ಗೆಲುವಿಗೆ ಕೊನೇ ಓವರ್​ನಲ್ಲಿ 10 ರನ್​ ಬೇಕಾಗಿತ್ತು. ಟಿ20ಯಲ್ಲಿ ಇದು ದೊಡ್ಡ ಮೊತ್ತವೇ ಆಗಿರಲಿಲ್ಲ. ಆದರೆ, ಅರ್ಶ್​ದೀಪ್​ ಸಿಂಗ್ ಒಂದು ವಿಕೆಟ್​ ಪಡೆಯುವ ಜತೆಗೆ ಕೇವಲ ನಾಲ್ಕು ರನ್​ ನೀಡಿ ತಂಡವನ್ನು ಗೆಲ್ಲಿಸಿದರು.

ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಆಸ್ಟ್ರೇಲಿಯಾ ತಂಡ ನಿಯಮಿತವಾಗಿ ವಿಕೆಟ್​ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಬೆನ್​ ಮೆಕ್​ಡರ್ಮಾಟ್​​ (54) ಅರ್ಧ ಶತಕ ಬಾರಿಸಿ ತಂಡವನ್ನು ಗೆಲುವಿನೆಡೆಗೆ ಸಾಗಿಸುವ ಯತ್ನ ಮಾಡಿದರು. ಆದರೆ, ಉಳಿದವರ ನೆರವು ದೊರಕದ ಕಾರಣ ತಂಡ ಸೋತಿತು. ಅದಕ್ಕಿಂತ ಮೊದಲು ಆರಂಭಿಕ ಬ್ಯಾಟರ್​​ ಟ್ರಾವಿಡ್​ ಹೆಡ್​​ 28 ರನ್ ಬಾರಿಸಿದರೆ ಕೊನೆಯಲ್ಲಿ ಮ್ಯಾಥ್ಯೂ ವೇಡ್​ 22 ರನ್​ ಬಾರಿಸಿದರೂ ತಂಡವನ್ನು ಗೆಲ್ಲಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಇದನ್ನೂ ಓದಿ : IND vs SA : ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಕುರಿತ ಪೂರ್ಣ ವಿವರ ಇಲ್ಲಿದೆ

ಭಾರತ ತಂಡ ಪರ ಬೌಲಿಂಗ್​ನಲ್ಲಿ ಮುಖೇಶ್ ಕುಮಾರ್​ 3 ವಿಕೆಟ್​ ಪಡೆದರೆ ರವಿ ಬಿಷ್ಣೋಯ್​ 2 ಹಾಗೂ ಅರ್ಶ್​ದೀಪ್ ಸಿಂಗ್ 2 ವಿಕೆಟ್ ತಮ್ಮದಾಗಿಸಿಕೊಂಡರು.

ಸಾಧಾರಣ ಬ್ಯಾಟಿಂಗ್​

ಬೆಂಗಳೂರಿನಲ್ಲಿ ಭಾರತ ತಂಡದ ಬ್ಯಾಟರ್​ಗಳು ಅಬ್ಬರಿಸಬಹುದು ಎಂಬ ನಿರೀಕ್ಷೆ ಈ ಪಂದ್ಯದಲ್ಲಿ ಸುಳ್ಳಾಯಿತು. ಉತ್ತಮ ಆರಂಭ ನೀಡಿತ ಹೊರತಾಗಿಯೂ ಯಶಸ್ವಿ ಜೈಸ್ವಾಲ್​ 15 ಎಸೆತಕ್ಕೆ 21 ರನ್ ಬಾರಿಸಿ ಔಟಾದರು. ಹೀಗಾಗಿ 33 ರನ್​ಗೆ ಭಾರತ ಮೊದಲ ವಿಕೆಟ್​ ಕಳೆದುಕೊಂಡಿತು. ಋತುರಾಜ್ ಗಾಯಕ್ವಾಡ್ ಕೂಡ 10 ರನ್​ಗೆ ಸೀಮಿತಗೊಂಡರು. ಸೂರ್ಯಕುಮಾರ್​ ಯಾದವ್​ ಮತ್ತೆ ಬ್ಯಾಟಿಂಗ್​ನಲ್ಲಿ ವೈಫಲ್ಯ ಎದುರಿಸಿ 5 ರನ್​ಗೆ ಸೀಮಿತಗೊಂಡರು. ಹಿಂದಿನ ನಾಲ್ಕ ಪಂದ್ಯಗಳಲ್ಲಿ ತಂಡ ಗೆಲುವಿಗೆ ಪ್ರಾಮಾಣಿಕ ಕೊಡುಗೆ ಕೊಟ್ಟಿದ್ದ ರಿಂಕು ಸಿಂಗ್​ ಇಲ್ಲಿ 6 ರನ್​ಗೆ ಸೀಮಿತಗೊಂಡರು. ಈ ಸರಣಿಯಲ್ಲಿ ಇದು ಅವರ ಮೊದಲ ಒಂದಂಕಿ ಮೊತ್ತವಾಗಿದೆ. ಹೀಗಾಗಿ ಭಾರತ 55 ರನ್​ಗಳಿಗೆ ಮೊದಲ ನಾಲ್ಕು ವಿಕೆಟ್​ ಕಳೆದುಕೊಂಡಿತು.

ಶ್ರೇಯಸ್ ಅರ್ಧ ಶತಕ

ಭಾರತ ತಂಡ ಸಂಕಷ್ಟದಲ್ಲಿದ್ದ ವೇಳೆ ನೆರವಿಗೆ ನಿಂತ ಶ್ರೇಯಸ್​​ ಅಯ್ಯರ್ ಅರ್ಧ ಶತಕ ಬಾರಿಸಿತು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಅವರು ಆರಂಭದಲ್ಲಿ ನಿಧಾನಕ್ಕೆ ಆಡಿ ಬಳಿಕ ರನ್​ ಗಳಿಕೆ ನೆರವಾದರು. 37 ಎಸೆತಗಳನ್ನು ಎದುರಿಸಿದ ಅವರು 5 ಫೊರ್ ಹಾಗೂ 2 ಸಿಕ್ಸರ್​ಗಳನ್ನ ಬಾರಿಸಿ ಮಿಂಚಿದರು. ಇವರು ವಿಕೆಟ್​ ಕೀಪರ್ ಜಿತೇಶ್​ ಶರ್ಮಾ ಅವರ ಜತೆ ಅಮೂಲ್ಯ ಜತೆಯಾಟವಾಡಿದರು. ಜಿತೇಶ್​ 16 ಎಸೆತಕ್ಕೆ 3 ಫೊರ್​ ಹಾಗೂ 1 ಸಿಕ್ಸರ್ ಬಾರಿಸಿದರು. ಕೊನೆಯಲ್ಲಿ ಅಕ್ಷರ್ ಪಟೇಲ್​ ಸಿಡಿದೆದ್ದರು. ಅವರು 21 ಎಸೆತಕ್ಕೆ 31 ರನ್​ ಗಳ ಕೊಡುಗೆ ಕೊಟ್ಟರು. ಹೀಗಾಗಿ ಭಾರತದ ಗಳಿಕೆ ಹೆಚ್ಚಾಯಿತು.

Continue Reading

ಕ್ರಿಕೆಟ್

IND vs SA : ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಕುರಿತ ಪೂರ್ಣ ವಿವರ ಇಲ್ಲಿದೆ

IND vs SA: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡ ಮೂರು ಟಿ20, ಮೂರು ಏಕದಿನ ಹಾಗೂ ಎರಡು ಟೆಸ್ಟ್​ ಪಂದ್ಯಗಳಲ್ಲಿ ಭಾಗಿಯಾಗಲಿದೆ.

VISTARANEWS.COM


on

Team India
Koo

ಬೆಂಗಳೂರು: ತವರು ನೆಲದಲ್ಲಿ ಆಸ್ಟ್ರೇಲಿಯಾವನ್ನು ಟಿ20 ಐ ಸರಣಿಯಲ್ಲಿ ಮಣಿಸಿದ ನಂತರ ಭಾರತವು ದಕ್ಷಿಣ ಆಫ್ರಿಕಾ (IND vs SA) ಪ್ರವಾಸ ಮಾಡಲಿದೆ. ಮೂರು ಟಿ 20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಡಿಸೆಂಬರ್ 10 ರಿಂದ ಮೂರು ಪಂದ್ಯಗಳ ಟಿ 20 ಐ ಸರಣಿಯೊಂದಿಗೆ ಪ್ರವಾಸ ಪ್ರಾರಂಭವಾಗಲಿದ್ದು, ಏಕದಿನ ಸರಣಿ ಡಿಸೆಂಬರ್ 17 ರಂದು ಪ್ರಾರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಚಕ್ರದ (2023-25) ಭಾಗವಾಗಿರುವ ಎರಡು ಟೆಸ್ಟ್ ಪಂದ್ಯಗಳು ಡಿಸೆಂಬರ್ 26 ರಿಂದ ಆರಂಭವಾಗಲಿದೆ.

ಬಿಸಿಸಿಐ (BCCI) ಇತ್ತೀಚೆಗೆ ಪ್ರವಾಸದ ಎಲ್ಲಾ ಮೂರು ಸ್ವರೂಪಗಳಿಗೆ ತಂಡಗಳನ್ನು ಪ್ರಕಟಿಸಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರಿಗೆ ವಿಶ್ವಕಪ್ ಅಭಿಯಾನದ ನಂತರ ವೈಟ್ ಬಾಲ್ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಇವರೆಲ್ಲ ನಾಯಕರು

ಸೂರ್ಯಕುಮಾರ್ ಯಾದವ್ ಟಿ20 ತಂಡವನ್ನು ಮುನ್ನಡೆಸಲಿದ್ದು, ರವೀಂದ್ರ ಜಡೇಜಾ ಉಪನಾಯಕನಾಗಿರುತ್ತಾರೆ. ಕೆಎಲ್ ರಾಹುಲ್ ಏಕದಿನ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಲಾಗಿದೆ. ಟೆಸ್ಟ್ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಮರಳಲಿದ್ದರೆ. ಭಾರತವು ನಿರ್ಣಾಯಕ ಡಬ್ಲ್ಯುಟಿಸಿ ಅಂಕಗಳನ್ನು ಗಳಿಸಲು ಎದುರು ನೋಡುತ್ತಿದೆ.

2010-11 ರಲ್ಲಿ ಮೊದಲ ಬಾರಿಗೆ ಡ್ರಾ ಸಾಧಿಸಿದ್ದನ್ನು ಹೊರತುಪಡಿಸಿ, 1992ರಿಂದ ಈ ದೇಶದಲ್ಲಿ ಭಾರತ ಇನ್ನೂ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಇದಲ್ಲದೆ, ಮೆನ್ ಇನ್ ಬ್ಲೂ 50 ಓವರ್​ಗಳ ಸ್ವರೂಪದಲ್ಲಿ ನಿರಾಶಾದಾಯಕ ದಾಖಲೆಯನ್ನು ಹೊಂದಿದೆ. ಕಾಮನಬಿಲ್ಲು ರಾಷ್ಟ್ರದಲ್ಲಿ ಆಡಿದ ಎಂಟು ಏಕದಿನ ಪಂದ್ಯಗಳಲ್ಲಿ ಕೇವಲ ಒಂದು ಏಕದಿನ ಸರಣಿಯನ್ನು ಗೆದ್ದಿದೆ.

ಇದನ್ನೂ ಓದಿ : IPL 2024 : ಐಪಿಎಲ್​ ಹರಾಜಿನ ದಿನಾಂಕ, ಸ್ಥಳದ ಬಗ್ಗೆ ಖಚಿತ ಮಾಹಿತಿ ನೀಡಿದ ಬಿಸಿಸಿಐ

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಮಾದರಿಯಲ್ಲಿ ಭಾರತ ಪ್ರಾಬಲ್ಯ ಹೊಂದಿದೆ. ಆಡಿದ ನಾಲ್ಕು ಸರಣಿಗಳ ಪೈಕಿ ಮೂರರಲ್ಲಿ ಗೆಲುವು ಸಾಧಿಸಿದೆ. ಆದ್ದರಿಂದ, ಮುಂಬರುವ ಪ್ರವಾಸದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಗಳನ್ನು ಗೆಲ್ಲುವ ಮೂಲಕ ತಮ್ಮ ದಾಖಲೆಗಳನ್ನು ಸುಧಾರಿಸಲು ಭಾರತ ಉತ್ಸುಕವಾಗಿದೆ.

ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ ಕಿಂಗ್ಸ್​ಮೀಡ್, ಡರ್ಬಾನ್ ಭಾನುವಾರ, ಡಿಸೆಂಬರ್ 10 ರಾತ್ರಿ 9:30
  • 2ನೇ ಟಿ20 ಪಂದ್ಯ ಸೇಂಟ್ ಜಾರ್ಜ್ಸ್ ಪಾರ್ಕ್, ಗ್ಕೆಬೆರ್ಹಾ ಮಂಗಳವಾರ, ಡಿಸೆಂಬರ್ 12 ರಾತ್ರಿ 9:30
  • 3ನೇ ಟಿ20 ಪಂದ್ಯ ನ್ಯೂ ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್​​ಬರ್ಗ್​​ ಗುರುವಾರ, ಡಿಸೆಂಬರ್ 14 ರಾತ್ರಿ 9:30

ಏಕದಿನ ಸರಣಿ ವೇಳಾಪಟ್ಟಿ 2023 ಪಂದ್ಯ

  • ಮೊದಲ ಏಕದಿನ ಪಂದ್ಯ ನ್ಯೂ ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್​ಬರ್ಗ್​​ ಭಾನುವಾರ, ಡಿಸೆಂಬರ್ 17 ಮಧ್ಯಾಹ್ನ 1:30
  • 2ನೇ ಏಕದಿನ ಪಂದ್ಯ ಸೇಂಟ್ ಜಾರ್ಜ್ಸ್ ಪಾರ್ಕ್, ಗ್ಕೆಬೆರ್ಹಾ ಮಂಗಳವಾರ, ಡಿಸೆಂಬರ್ 19 ಸಂಜೆ 4:30
  • 3ನೇ ಏಕದಿನ ಪಂದ್ಯ ಬೋಲ್ಯಾಂಡ್ ಪಾರ್ಕ್, ಪಾರ್ಲ್ ಗುರುವಾರ, ಡಿಸೆಂಬರ್ 21 ಸಂಜೆ 4:30

ಟೆಸ್ಟ್ ವೇಳಾಪಟ್ಟಿ 2023

  • ಮೊದಲ ಟೆಸ್ಟ್ ಸೂಪರ್ ಸ್ಪೋರ್ಟ್ ಪಾರ್ಕ್, ಸೆಂಚೂರಿಯನ್ ಮಂಗಳವಾರ, ಡಿಸೆಂಬರ್ 26 ಮಧ್ಯಾಹ್ನ 1:30
  • 2ನೇ ಟೆಸ್ಟ್ ನ್ಯೂಲ್ಯಾಂಡ್ಸ್, ಕೇಪ್ ಟೌನ್ ಬುಧವಾರ, ಜನವರಿ 03 ಮಧ್ಯಾಹ್ನ 2:00

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ

ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.

ಏಕದಿನ ತಂಡ: ಋತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷ್ದೀಪ್ ಸಿಂಗ್, ದೀಪಕ್ ಚಹರ್.

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ*, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.

ನೇರ ಪ್ರಸಾರ ಪ್ರಸಾರ ವಿವರಗಳು

ಭಾರತದ ಸಂಪೂರ್ಣ ದಕ್ಷಿಣ ಆಫ್ರಿಕಾ ಪ್ರವಾಸದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್​ನಲ್ಲಿ ಲಭ್ಯವಿದ್ದರೆ, ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್​ಸೈಟ್​ನಲ್ಲಿ ಲಭ್ಯವಿರುತ್ತದೆ.

ನೇರ ಪ್ರಸಾರ- ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್

ಲೈವ್ ಸ್ಟ್ರೀಮಿಂಗ್- ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ ಅಪ್ಲಿಕೇಶನ್ ಮತ್ತು ವೆಬ್ಸೈಟ್

Continue Reading

ಕ್ರಿಕೆಟ್

Ind vs Aus : ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತಕ್ಕೆ ಮೊದಲು ಬ್ಯಾಟಿಂಗ್​

ind vs aus : ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 3-1 ಅಂತರದಿಂದ ಕೈವಶ ಮಾಡಿಕೊಂಡಿದ್ದು, ಇದು ಔಪಚಾರಿಕ ಪಂದ್ಯ ಎನಿಸಿಕೊಳ್ಳಲಿದೆ.

VISTARANEWS.COM


on

Suryakuamr Yadav
Koo

ಬೆಂಗಳೂರು: ಟಿ20 ಸರಣಿಯ ಐದನೇ ಹಾಗೂ ಕೊನೇ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಟಾಸ್​ ಗೆದ್ದಿದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಭಾರತ ತಂಡ ಮೊದಲು ಬ್ಯಾಟ್​ ಮಾಡಿ ದೊಡ್ಡ ಮೊತ್ತ ಪೇರಿಸಿ ಅದನ್ನು ಕಾಪಾಡಿಕೊಳ್ಳಬೇಕಾಗಿದೆ. ಸರಣಿಯಲ್ಲಿ ಮೊದಲೆರಡು ಹಾಗೂ ನಾಲ್ಕನೇ ಪಂದ್ಯವನ್ನು ಗೆದ್ದಿರುವ ಸೂರ್ಯಕುಮಾರ್ ನೇತೃತ್ವದ ಭಾರತ ತಂಡ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಹೀಗಾಗಿ ಇದು ಔಪಚಾರಿಕ ಪಂದ್ಯ ಎನಿಸಿಕೊಳ್ಳಲಿದೆ. ಆದಾಗ್ಯೂ ಗೆಲುವಿನೊಂದಿಗೆ ಅಭಿಯಾನ ಕೊನೆಗೊಳಿಸುವುದು ಎರಡೂ ತಂಡಗಳ ಉದ್ದೇಶವಾಗಿರುತ್ತದೆ.

ಟಾಸ್ ಗೆದ್ದಿರುವ ಆಸ್ಟ್ರೇಲಾ ತಂಡದ ನಾಯಕ ಮಾತನಾಡಿ, ನಮ್ಮ ಬಳಿ ಒಂದು ಬೌಲಿಂಗ್ ಆಯ್ಕೆಯಿದೆ. ವಿಕೆಟ್ ಸ್ವಲ್ಪ ಜಟಿಲವಾಗಿದೆ ಹಾಗೂ ಹವಾಮಾನ ಪರಿಸ್ಥಿತಿ ಸೂಕ್ತವಾಗಿಲ್ಲ. ಕ್ಯಾಮರೂನ್​ ಗ್ರೀನ್ ಬದಲಿಗೆ ನೇಥಾನ್​ ಎಲ್ಲಿಸ್ ತಂಡ ಸೇರಿದ್ದಾರೆ. ತಂಡದ ಆಟಗಾರರಿಗೆ ಉತ್ತಮ ಪ್ರದರ್ಶನ ನೀಡಲು ಸೂಕ್ತ ಸಮಯ ಎಂದು ಹೇಳಿದ್ದಾರೆ.

ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮಾತನಾಡಿ, ನಾವು ಮೊದಲು ಬೌಲಿಂಗ್ ಮಾಡಲು ಇಷ್ಟಪಡುತ್ತಿದ್ದೆವು. ಅದ್ಭುತ ಪ್ರೇಕ್ಷಕರ ಮುಂದೆ ಆಡಲು ಮತ್ತೊಂದು ಅವಕಾಶ, ಬ್ಯಾಟಿಂಗ್ ಘಟಕಕ್ಕೆ ಉತ್ತಮ ಪ್ರದರ್ಶನ ನೀಡಲು ಹೇಳಿದ್ದೇನೆ. ದೀಪಕ್ ಚಾಹರ್ ಬದಲಿಗೆ ಅರ್ಶ್​ದೀಪ್​ ಕಣಕ್ಕಿಳಿಯಲಿದ್ದಾರೆ. ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಅವರು (ದೀಪಕ್) ಮನೆಗೆ ಮರಳಿದ್ದಾರೆ ಎಂದು ಹೇಳಿದರು.

ಮೂರು ವಾರಗಳ ಹಿಂದೆ, ಇದೇ ಸಮಯದಲ್ಲಿ, ಭಾರತವು ಬೆಂಗಳೂರಿನಲ್ಲಿ ಆಡಿತ್ತು. ವಿಶ್ವಕಪ್​ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ 4 ವಿಕೆಟ್ ನಷ್ಟಕ್ಕೆ 410 ರನ್ ಗಳಿಸಿತ್ತು. ಅಂತಿಮ ಹಂತಲ್ಲಿ ಭಾರತವು ಟ್ರೋಫಿ ನಷ್ಟ ಮಾಡಿಕೊಂಡಿದ್ದರೂ ಸಾಕಷ್ಟು ನಿರ್ಭೀತ ಕ್ರಿಕೆಟ್ ಅಡಿತ್ತು. ಇದೀಗ ರಿಂಕು, ರುತುರಾಜ್, ಯಶಸ್ವಿ, ಜಿತೇಶ್ ಸೇರಿದಂತೆ ಹಲವರು ನಿರ್ಭೀತ ಕ್ರಿಕೆಟ್ ಆಡಲು ಬೆಂಗಳೂರಿಗೆ ಬಂದಿದ್ದಾರೆ. ಗುವಾಹಟಿ ಹೊರತುಪಡಿಸಿ ಭಾರತವು ಈ ಸರಣಿಯ ಪ್ರಮುಖ ಭಾಗಗಳಲ್ಲಿ ತಮ್ಮ ಪ್ರಾಬಲ್ಯ ಮೆರೆದಿತ್ತು. ಕಳೆದ ಪಂದ್ಯದಲ್ಲಿ 20 ರನ್​ಗಳ ಜಯ ಸಾಧಿಸಿದ ಆತಿಥೇಯರು ರಾಯ್ಪುರದಲ್ಲಿ ಸರಣಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

ತಂಡಗಳು

ಭಾರತ ತಂಡ: ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ಸಿ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆ), ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್, ಅರ್ಷ್ದೀಪ್ ಸಿಂಗ್.

ಇದನ್ನೂ ಓದಿ : IPL 2024 : ಐಪಿಎಲ್​ ಹರಾಜಿನ ದಿನಾಂಕ, ಸ್ಥಳದ ಬಗ್ಗೆ ಖಚಿತ ಮಾಹಿತಿ ನೀಡಿದ ಬಿಸಿಸಿಐ

ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಜೋಶ್ ಫಿಲಿಪ್, ಬೆನ್ ಮೆಕ್ಡರ್ಮಾಟ್, ಆ್ಯರೋನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್ (ಸಿ & ವಿಕೆ), ಬೆನ್ ಡ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್ಡಾರ್ಫ್, ತನ್ವೀರ್ ಸಂಗಾ

Continue Reading

ಕ್ರಿಕೆಟ್

Rishabh Pant : ಸಿಎಸ್​ಕೆ ತಂಡ ಸೇರ್ತಾರಾ ರಿಷಭ್​ ಪಂತ್​?

Rishabh Pant: ಧೋನಿ ಹಾಗೂ ರಿಷಭ್ ಆತ್ಮೀಯರಾಗಿರುವ ಕಾರಣ ಚೆನ್ನೈಗೆ ತರಲು ಫ್ರಾಂಚೈಸಿ ಪ್ರಯತ್ನ ಮಾಡಬಹುದು ಎಂದು ದೀಪ್​ ದಾಸ್​​ಗುಪ್ತಾ ಹೇಳಿದ್ದಾರೆ.

VISTARANEWS.COM


on

Dhoni and Rishabh Pant
Koo

ನವದೆಹಲಿ: ಎಂಎಸ್ ಧೋನಿ ಐಪಿಎಲ್ 2024 ರ ನಂತರ ನಿವೃತ್ತಿ ಹೊಂದಲು ನಿರ್ಧರಿಸಿದರೆ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್​ಕೆ) ರಿಷಭ್ ಪಂತ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವದು ಖಚಿತ ಎಂದು ಭಾರತದ ಮಾಜಿ ವಿಕೆಟ್​ ಕೀಪರ್ ದೀಪ್ ದಾಸ್​​ ಗುಪ್ತಾ ಹೇಳಿದ್ದಾರೆ.

ದೀಪ್​ದಾಸ್​ಗುಪ್ತಾ ಹೇಳಿಕೆ ವಿಡಿಯೊ ಇಲ್ಲಿದೆ

ರಿಷಭ್ ಪಂತ್ 2016 ರಲ್ಲಿ ಐಪಿಎಲ್​ಗೆ ಪಾದಾರ್ಪಣೆ ಮಾಡಿದಾಗಿನಿಂದ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಪರ 98 ಪಂದ್ಯಗಳನ್ನು ಆಡಿದ್ದಾರೆ. ಒಂದು ಶತಕ ಮತ್ತು 15 ಅರ್ಧಶತಕಗಳೊಂದಿಗೆ 34.61 ಸರಾಸರಿ ಮತ್ತು 147.97 ಸ್ಟ್ರೈಕ್ ರೇಟ್​​ನಲ್ಲಿ 2838 ರನ್ ಗಳಿಸಿದ್ದಾರೆ. ಐಪಿಎಲ್ 2021 ಮತ್ತು 2022ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು.

ಪಂತ್ ಅವರು ಡಿಸೆಂಬರ್ 2022ರಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದ ವೇಳೆ ಉಂಟಾದ ಗಾಯದಿಂದ ಸ್ಥಿರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅದೇ ಕಾರಣಕ್ಕೆ ಐಪಿಎಲ್ 2023 ಅನ್ನು ತಪ್ಪಿಸಿಕೊಂಡಿದ್ದರು. ಪಂತ್ ಉತ್ತಮ ಸ್ಥಿತಿಯಲ್ಲಿದ್ದಾರೆ ಮತ್ತು ಐಪಿಎಲ್ 2024 ರಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಡಿಸಿ ಕ್ರಿಕೆಟ್ ನಿರ್ದೇಶಕ ಸೌರವ್ ಗಂಗೂಲಿ ಹೇಳಿದ್ದಾರೆ. ಹೀಗಾಗಿ ಅವರು ಈ ಬಾರಿ ಆಡುವುದು ಖಚಿತ ಎನ್ನಲಾಗಿದೆ.

ಈ ಬಾರಿಯೂ ಆಡಲಿದ್ದಾರೆ ಧೋನಿ

ಸಿಎಸ್​ಕೆ ತಂಡ ಐಪಿಎಲ್ 2023ರ ಆವೃತ್ತಿಯಲ್ಲಿ ಚಾಂಪಿಯನ್ ಆದ ಬಳಿಕ ನಾಯಕ ಎಂಎಸ್ ಧೋನಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದಿನಿಂದ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಐಪಿಎಲ್ 2024 ರ ಹರಾಜಿಗೆ ಮುಂಚಿತವಾಗಿ ಸಿಎಸ್ಕೆ ಧೋನಿಯನ್ನು ಉಳಿಸಿಕೊಂಡಿರುವುದರಿಂದ, ಅವರು ಮುಂದಿನ ವರ್ಷ ಐಪಿಎಲ್​​ನಲ್ಲಿ ಆಡುವುದು ಖಚಿತವಾಗಿದೆ.

ಐಪಿಎಲ್ 2025 ರ ಹೊತ್ತಿಗೆ ಎಂಎಸ್ ಧೋನಿಗೆ ಸುಮಾರು 44 ವರ್ಷ ವಯಸ್ಸಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸಿಎಸ್​ಕೆ ತಮ್ಮ ಬಲಿಷ್ಠ ನಾಯಕನ ಬದಲಿಯಾಗಿ ಪಂತ್ ಅವರನ್ನು ತಂಡಕ್ಕೆ ಕರೆತರಬಹುದು ಭಾರತದ ಮಾಜಿ ಕೀಪರ್ ದೀಪ್ ದಾಸ್​ಗುಪ್ತಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : Virat kohli : ಪಂಚೆ ಉಟ್ಟು ಹೋದರೆ ಕೊಹ್ಲಿಯ ರೆಸ್ಟೋರೆಂಟ್​ಗೆ ಪ್ರವೇಶವಿಲ್ಲ!

ಐಪಿಎಲ್ 2025ರ ವೇಳೆಗೆ ರಿಷಭ್ ಪಂತ್ ಚೆನ್ನೈ ಸೇರಿದರೆ ಆಶ್ಚರ್ಯ ಪಡಬೇಡಿ. ಎಂಎಸ್ ಧೋನಿ ಮತ್ತು ರಿಷಭ್ ಪಂತ್​​​​ಗೆ ತುಂಬಾ ಸಾಮ್ಯತೆಗಳಿವೆ. ನಿಸ್ಸಂಶಯವಾಗಿ ರಿಷಭ್ ಅವರು ಎಂಎಸ್ ಧೋನಿಯನ್ನು ಆರಾಧಿಸುತ್ತಾರೆ. ಎಂಎಸ್ ಕೂಡ ಅವರನ್ನು ತುಂಬಾ ಇಷ್ಟಪಡುತ್ತಾರೆ. ಅವರು ಒಟ್ಟಿಗೆ ಸಾಕಷ್ಟು ಸಮಯ ಕಳೆಯುತ್ತಾರೆ. ಅವರ ಸಂಪರ್ಕ ಮತ್ತು ರಿಷಭ್ ಅವರ ಆಲೋಚನೆ ತುಂಬಾ ಹೋಲುತ್ತದೆ, ಅವರು ತುಂಬಾ ಆಕ್ರಮಣಕಾರಿ ಮತ್ತು ಸಕಾರಾತ್ಮಕವಾಗಿದ್ದಾರೆ. ಅವರು ಯಾವಾಗಲೂ ಗೆಲ್ಲುವ ಬಗ್ಗೆ ಮಾತನಾಡುತ್ತಾರೆ” ಎಂದು ದಾಸ್​ಗುಪ್ತಾ ಹೇಳಿದ್ದಾರೆ.

ದುಬೈನಲ್ಲಿ ಮಿನಿ ಹರಾಜು

ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ರ ಮಿನಿ ಹರಾಜು ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾನುವಾರ ದೃಢಪಡಿಸಿದೆ. ಅಂದ ಹಾಗೆ ವಿದೇಶದಲ್ಲಿ ಐಪಿಎಲ್​ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ, ಮೂರು ಬಾರಿ ವಿದೇಶಿ ನೆಲದಲ್ಲಿ ಟೂರ್ನಿ ನಡೆದಿದೆ.

ಮಿನಿ ಹರಾಜಿಗೆ 1166 ಆಟಗಾರರು ತಮ್ಮ ಹೆಸರನ್ನು ನೋಂದಾಯಿಕೊಂಡಿದ್ದಾರೆ ಎಂದು ವರದಿಗಳು ಸೂಚಿಸಿವೆ. ಈ ಪಟ್ಟಿಯಲ್ಲಿ 212 ಅಂತಾರಾಷ್ಟ್ರೀಯ ಪಂದ್ಯವಾಡಿದವರು , 909 ಅಂತಾರಾಷ್ಟ್ರೀಯ ಕ್ರಿಕೆಟ್ ಆಡದವರು ಮತ್ತು 45 ಅಸೋಸಿಯೇಟ್ ಆಟಗಾರರು ಇದ್ದಾರೆ. ಈ ಪೈಕಿ ವಿದೇಶಿ ಆಟಗಾರರ ಸಂಖ್ಯೆ 336.

Continue Reading
Advertisement
Kenda teaser kannada
South Cinema4 mins ago

Kannada New Movie: ಟೀಸರ್ ಮೂಲಕ ಕೌತುಕದ ಕಿಡಿ ಹೊತ್ತಿಸಿದ `ಕೆಂಡ’!

CP Yogeshwar brother in law Mahadevaiah
ಕರ್ನಾಟಕ15 mins ago

Murder Case: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಭಾವ ಮಹದೇವಯ್ಯ ಕೊಲೆ!

Foeticide case and pair of pink bunny figurines
ಕರ್ನಾಟಕ36 mins ago

Belagavi Winter Session: ಭ್ರೂಣ ಹತ್ಯೆ ಕೇಸ್‌; ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಲು ಸದನದಲ್ಲಿ ಒತ್ತಾಯ

Narendra Modi With Women
EXPLAINER37 mins ago

ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; ‘ಕ್ವೀನ್ಸ್’‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ?

Foeticide arrest
ಕರ್ನಾಟಕ55 mins ago

Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

Tukali imitate sangeetha sringeri
ಬಿಗ್ ಬಾಸ್1 hour ago

BBK SEASON 10: ನಾಯಿಯಾದ ಸಂಗೀತಾ; ಅನುಕರಣೆ ಮಾಡೋದ್ರಲ್ಲಿ ತುಕಾಲಿ ಎತ್ತಿದ ಕೈ!

Revenue Minister Krishna Byre Gowda making coffee
ಕರ್ನಾಟಕ1 hour ago

Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

Car catches fire after hitting bus
ಕರ್ನಾಟಕ2 hours ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Michaung Cyclone
ಕರ್ನಾಟಕ2 hours ago

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

Rishab rashmika
South Cinema2 hours ago

Rishab Shetty: ಪರೋಕ್ಷವಾಗಿ ರಶ್ಮಿಕಾ, ಪ್ರಶಾಂತ್‌ ನೀಲ್‌ಗೆ ತಿರುಗೇಟು ಕೊಟ್ರಾ ರಿಷಬ್‌! ಸ್ಪಷ್ಟನೆ ಏನು?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ11 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌