T20 World Cup | ವಿಶ್ವ ಕಪ್​ಗೂ ಶಹೀನ್​ ಶಾ ಅಫ್ರಿದಿ ಅಲಭ್ಯ? ಲಂಡನ್​ಗೆ ಪುನಶ್ಚೇತನಕ್ಕೆ ಕಳುಹಿಸಿದ ಪಿಸಿಬಿ - Vistara News

ಕ್ರಿಕೆಟ್

T20 World Cup | ವಿಶ್ವ ಕಪ್​ಗೂ ಶಹೀನ್​ ಶಾ ಅಫ್ರಿದಿ ಅಲಭ್ಯ? ಲಂಡನ್​ಗೆ ಪುನಶ್ಚೇತನಕ್ಕೆ ಕಳುಹಿಸಿದ ಪಿಸಿಬಿ

ಪಾಕಿಸ್ತಾನ ತಂಡದ ವೇಗದ ಬೌಲರ್​ ಶಹೀನ್​ ಶಾ ಅಫ್ರಿದಿಯನ್ನು ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಗಾಯದ ಸಮಸ್ಯೆ ಪುನಶ್ಚೇತನಕ್ಕಾಗಿ ಮತ್ತೆ ಲಂಡನ್​ಗೆ ಕಳುಹಿಸಿದ್ದು, ಟಿ20ಗೆ ಲಭ್ಯರಾಗುವರೇ ಎಂಬ ಅನುಮಾನ ವ್ಯಕ್ತವಾಗಿದೆ.

VISTARANEWS.COM


on

shaheen sha afridi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ : ಪಾಕಿಸ್ತಾನ ತಂಡದ ಪ್ರಮುಖ ಬೌಲರ್​ ಶಹೀನ್​ ಶಾ ಅಫ್ರಿದಿ ಏಷ್ಯಾ ಕಪ್​ನಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದು, ಮುಂದಿನ ಅಕ್ಟೋಬರ್​ನಲ್ಲಿ ನಡೆಯುವ ಟಿ20 ವಿಶ್ವ ಕಪ್​ನಲ್ಲಿ ಪಾಲ್ಗೊಳ್ಳುವ ಭಾಗ್ಯದಿಂದ ವಂಚಿತರಾಗುವ ಸಾಧ್ಯತೆ ಎಂಬುದಾಗಿ ಹೇಳಲಾಗುತ್ತಿದೆ. ಬಲಗಾಲು ನೋವಿಗೆ ಒಳಗಾಗಿರುವ ಅವರು ಇನ್ನೂ ಗುಣಮುಖರಾಗದ ಕಾರಣ ಅವರನ್ನು ಮತ್ತೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಮತ್ತೆ ಲಂಡನ್​ಗೆ ಕಳುಹಿಸಿದೆ.

ಶ್ರೀಲಂಕಾ ಪ್ರವಾಸದಲ್ಲಿ ಫೀಲ್ಡೀಂಗ್​ ಮಾಡುವಾಗ ಶಹೀನ್​ ಶಾ ಅಫ್ರಿದಿ ಬಲಗಾಲು ನೋವಿಗೆ ಒಳಗಾಗಿದ್ದರು. ಅರ್ಧದಲ್ಲೇ ತವರಿಗೆ ವಾಪಸಾಗಿದ್ದ ಅವರನ್ನು ಇಂಗ್ಲೆಂಡ್​ಗೆ ಪುನಶ್ಚೇತನಕ್ಕೆ ಕಳುಹಿಸಲಾಗಿತ್ತು. ಪಾಕಿಸ್ತಾನ ತಂಡ ಸರಣಿಗಾಗಿ ನೆದರ್ಲೆಂಡ್ಸ್​ ಪ್ರವಾಸ ಕೈಗೊಳ್ಳುವಾಗ ಅವರನ್ನೂ ಇಂಗ್ಲೆಂಡ್​ಗೆ ಕಳುಹಿಸಿ ಪುನಶ್ಚೇತನ ಒದಗಿಸಲಾಗಿತ್ತು. ಬಳಿಕ ಏಷ್ಯಾ ಕಪ್​ಗೆ ತಂಡವನ್ನು ರಚಿಸುವಾಗ ಅವರನ್ನು ಮತ್ತೆ ಪಾಕಿಸ್ತಾನಕ್ಕೆ ಬಂದಿದ್ದರು. ಆದರೆ, ಗಾಯದ ಸಮಸ್ಯೆಯಿಂದ ಪೂರ್ಣ ಗುಣಮುಖರಾಗದ ಕಾರಣ ಏಷ್ಯಾ ಕಪ್​ ತಂಡಕ್ಕೆ ಆಯ್ಕೆ ಮಾಡಿಕೊಂಡಿರಲಿಲ್ಲ. ಆದಾಗ್ಯೂ ಪಾಕಿಸ್ತಾನ ತಂಡದ ಜತೆ ದುಬೈಗೆ ಕಳುಹಿಸಲಾಗಿತ್ತು. ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಮತ್ತೆ ಇಂಗ್ಲೆಂಡ್​ಗೆ ಕಳುಹಿಸಲಾಗಿದೆ.

ಅಕ್ಟೋಬರ್​ 22ರಂದು ಟಿ20 ವಿಶ್ವ ಕಪ್​ನ ಪ್ರಮುಖ ಸುತ್ತಿನ ಪಂದ್ಯಗಳು ಆರಂಭಗೊಳ್ಳಲಿದೆ. 23ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಆ ದಿನಕ್ಕೆ ಶಹೀನ್​ ಸಿದ್ಧಗೊಳ್ಳಬೇಕಾಗಿದೆ. ಅದಕ್ಕೆ ಇನ್ನೂ ಒಂದೂವರೆ ತಿಂಗಳು ಬಾಕಿ ಇದೆ. ಆ ವೇಳೆಗೂ ಅವರ ಸಿದ್ಧರಾಗದಿದ್ದರೆ ಟಿ20 ವಿಶ್ವ ಕಪ್​ನಲ್ಲಿ ಪಾಲ್ಗೊಳ್ಳುವ ಅವಕಾಶವನ್ನೂ ಕಳೆದುಕೊಳ್ಳಲಿದ್ದಾರೆ.

ಇದನ್ನೂ ಓದಿ | Sourav Ganguly | ಶಹೀನ್‌ ಅಫ್ರಿದಿ ಅಲಭ್ಯತೆ ದೊಡ್ಡ ಸಂಗತಿಯಲ್ಲ, ಒಬ್ಬನಿಂದ ಗೆಲುವು ಎಂಬುದು ತಪ್ಪು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ರಾಜಸ್ಥಾನ್​ ವಿರುದ್ಧ ಡೆಲ್ಲಿಗೆ 20 ರನ್​ ಗೆಲುವು, ಪ್ಲೇಆಫ್ ಕನಸು ಜೀವಂತ

IPL 2024: ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ನವ ದೆಹಲಿ : ಜಿದ್ದಾಜಿದ್ದಿನಿಂದ ಕೂಡಿದ್ದ ಐಪಿಎಲ್​ 17ನೇ ಆವೃತ್ತಿಯ (IPL 2024) 56ನೇ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​​ 20 ರನ್​ಗಳಿಂದ ಗೆಲುವು ಸಾಧಿಸಿದೆ. ಗೆಲ್ಲಲೇಬೇಕಾದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಡೆಲ್ಲಿ ಆಟಗಾರರು ಗೆಲುವು ತಮ್ಮದಾಗಿಸಿಕೊಂಡು. ಇದು ಡೆಲ್ಲಿ ತಂಡದಕ್ಕೆ ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ 6ನೇ ಗೆಲುವಾಗಿದೆ. 12 ಅಂಕಗಳನ್ನು ಸಂಪಾದಿಸಿರುವ ರಿಷಭ್​ ಪಂತ್ ಬಳಗ ಲಕ್ನೊ ಸೂಪರ್ ಜೈಂಟ್ಸ್​ ತಂಡವನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಿತು. ಅತ್ತ ರಾಜಸ್ಥಾನ್ ತಂಡ ಆಡಿರುವ 11 ಪಂದ್ಯಗಳಲ್ಲಿ 3ನೇ ಸೋಲಿಗೆ ಒಳಗಾಯಿತು. ಆದಾಗ್ಯೂ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಬಿಟ್ಟುಕೊಟ್ಟಿಲ್ಲ.

ಇಲ್ಲಿನ ಅರುಣ್​ ಜೇಟ್ಲಿ ಕ್ರಿಕ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 221 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್​ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 201 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಸಂಜು ಹೋರಾಟ ವ್ಯರ್ಥ

ಸಂಜು ಸ್ಯಾಮ್ಸನ್​ 46 ಎಸೆತಕ್ಕೆ 86 ರನ್ ಬಾರಿಸಿದ್ದ ತನಕ ಪಂದ್ಯ ರಾಜಸ್ಥಾನ್ ತಂಡದ ಪರವಾಗಿತ್ತು. ಆದರೆ, ಸಂಜು ವಿಕೆಟ್​ ಪತನಗೊಳ್ಳುತ್ತಿದ್ದಂತೆ ಏಕಾಏಕಿ ಕುಸಿತ ಕಂಡ ಡೆಲ್ಲಿ ಕ್ಯಾಪಿಟಲ್ಸ್ ಬಳಗ ಸೋಲಿಗೆ ಸಿಲುಕಿತು. ಕುಲ್ದೀಪ್​ ಯಾದವ್​ 25 ರನ್​ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಏತನ್ಮಧ್ಯೆ ಸಂಜು ಸ್ಯಾಮ್ಸನ್​ ವಿಕೆಟ್ ವಿವಾದಾತ್ಮಕ ವಿಕೆಟ್ ಆಗಿ ಪರಿವರ್ತನೆಗೊಂಡಿತು. ಮುಖೇಶ್ ಕುಮಾರ್​ ಎಸೆತವನ್ನು ಸಂಜು ಬೌಂಡರಿ ಲೈನ್ ಮೇಲೆ ಹೊಡೆಯಲು ಯತ್ನಿಸಿದ್ದರು. ಆದರೆ, ಲೈನ್​ನಲ್ಲಿ ಅದ್ಭುತ ಫೀಲ್ಡಿಂಗ್ ಮಾಡಿದ ಶಾಯ್​ ಹೋಪ್ ಕ್ಯಾಚ್ ನೀಡಿದರು. ಥರ್ಡ್​ ಅಂಪೈರ್ ಅದನ್ನು ಮರುಪರಿಶೀಲಿಸಿ ಔಟ್​ ನೀಡಿದರು. ಆದರೆ, ಸಂಜು ಸ್ಯಾಮ್ಸನ್​ ಫೀಲ್ಡರ್ ಕಾಲು ಬೌಂಡರಿ ಲೈನ್​ಗೆ ತಾಗಿದೆ ಎಂದು ಅಂಪೈರ್​ಗಳ ಜತೆ ವಾದ ಮಾಡಿದರು.

ರಾಜಸ್ಥಾನ್ ರಾಯಲ್ಸ್​ ಗುರಿ ಬೆನ್ನಟ್ಟುವ ಹಾದಿಯಲ್ಲಿ ಆರಂಭಿಕ ಆಘಾತ ಅನುಭವಿಸಿತು. ಯಶಸ್ವಿ ಜೈಸ್ವಾಲ್​ 4 ರನ್​ಗೆ ಔಟಾದರೆ ಜೋಸ್ ಬಟ್ಲರ್​ 19 ರನ್ ಬಾರಿಸಿದರು. ರಿಯಾನ್ ಪರಾಗ್​ 27 ಹಾಗೂ ಶುಭಂ ದುಬೆ 25 ರನ್ ಬಾರಿಸಿ ಗೆಲುವಿನ ಕನಸು ಬಿತ್ತಿದರು. ಆದರೆ, ಕೊನೇ ಹಂತದಲ್ಲಿ ಡೆಲ್ಲಿ ಬೌಲರ್​ಗಳು ಗೆಲುವಿನ ಅವಕಾಶವನ್ನು ತಮ್ಮದಾಗಿಸಿಕೊಂಡರು.

ಉತ್ತಮ ಆರಂಭ

ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ದೊರಕಿತು. ಪ್ರೇಸರ್ ಮೆಕ್​ಗುರ್ಕ್​ 20 ಎಸೆತಕ್ಕೆ 50 ರನ್​ ಬಾರಿಸಿದರೆ ಅಭಿಷೇಕ್ ಪೊರೆಲ್​ 65 ರನ್​ ಬಾರಿಸಿದರು. ಶಾಯ್​ ಹೋಪ್​ ವಿಫಲರಾಗಿ 1 ರನ್​ಗೆ ಔಟಾದಾಗ ಡೆಲ್ಲಿ ರನ್ ಗಳಿಕೆ ವೇಗ ಕಡಿಮೆಯಾಯಿತು. ಅಕ್ಷರ್ ಪಟೇಲ್​ ಹಾಗೂ ರಿಷಭ್​ ಪಂತ್​ ತಲಾ 15 ರನ್ ಬಾರಿಸಿದರು. ಆದರೆ, ಕೊನೇ ಹಂತದಲ್ಲಿ ಟ್ರಿಸ್ಟಾನ್​ ಸ್ಟಬ್ಸ್​​ 20 ಎಸೆತಕ್ಕೆ 41 ರನ್ ಬಾರಿಸಿ ದೊಡ್ಡ ಮೊತ್ತ ಪೇರಿಸಲು ನೆರವಾದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಆರ್​ ಅಶ್ವಿನ್​ 24 ರನ್​ಗಳ ವೆಚ್ಚದಲ್ಲಿ 3 ವಿಕೆಟ್​ ಉರುಳಿಸುವ ಮೂಲಕ ಉತ್ತಮ ಸಾಧನೆ ಮಾಡಿದರು.

Continue Reading

ಕ್ರಿಕೆಟ್

Yuzvendra Chahal : ಟಿ20 ವಿಕೆಟ್​​ಗಳ ಗಳಿಕೆಯಲ್ಲಿ ನೂತನ ದಾಖಲೆ ಬರೆದ ಸ್ಪಿನ್ನರ್ ಯಜ್ವೇಂದ್ರ ಚಹಲ್​

Yuzvendra Chahal: ಆಟದ ಕಿರು ಸ್ವರೂಪದಲ್ಲಿ 350 ವಿಕೆಟ್​​ಗಳ ಕ್ಲಬ್​​ ಪ್ರವೇಶಿಸಲು ಭಾರತದ ಸ್ಪಿನ್ನ್ ತಾರೆಗೆ ಕೇವಲ ಒಂದು ವಿಕೆಟ್ ಅಗತ್ಯವಿತ್ತು. ಅವರು ಅದನ್ನು ಪೂರ್ಣಗೊಳಿಸಿದರು. ಚಹಲ್ ತಮ್ಮ ಸಹ ಆಟಗಾರ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಅವರನ್ನು ಔಟ್ ಮಾಡಿ ಟಿ 20 ಯಲ್ಲಿ 350 ವಿಕೆಟ್​​​ಗಳನ್ನು ಪೂರೈಸಿದರು. ಅವರು ತಮ್ಮ 301 ನೇ ಟಿ 20 ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.

VISTARANEWS.COM


on

Yuzvendra Chahal
Koo

ನವ ದೆಹಲಿ: ರಾಜಸ್ಥಾನ್​ ರಾಯಲ್ಸ್​ ತಂಡದ ಸ್ಪಿನ್ ಬೌಲರ್​ ಯಜುವೇಂದ್ರ ಚಹಲ್ (Yuzvendra Chahal) ಮಂಗಳವಾರ (ಮೇ 7) ಟಿ20 ಪಂದ್ಯಗಳಲ್ಲಿ 350 ವಿಕೆಟ್ ಪಡೆದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ದೊಡ್ಡ ಮೈಲಿಗಲ್ಲನ್ನು ಸಾಧಿಸಿದರು.

ಆಟದ ಕಿರು ಸ್ವರೂಪದಲ್ಲಿ 350 ವಿಕೆಟ್​​ಗಳ ಕ್ಲಬ್​​ ಪ್ರವೇಶಿಸಲು ಭಾರತದ ಸ್ಪಿನ್ನ್ ತಾರೆಗೆ ಕೇವಲ ಒಂದು ವಿಕೆಟ್ ಅಗತ್ಯವಿತ್ತು. ಅವರು ಅದನ್ನು ಪೂರ್ಣಗೊಳಿಸಿದರು. ಚಹಲ್ ತಮ್ಮ ಸಹ ಆಟಗಾರ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಅವರನ್ನು ಔಟ್ ಮಾಡಿ ಟಿ 20 ಯಲ್ಲಿ 350 ವಿಕೆಟ್​​​ಗಳನ್ನು ಪೂರೈಸಿದರು. ಅವರು ತಮ್ಮ 301 ನೇ ಟಿ 20 ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.

ಪಿಯೂಷ್ ಚಾವ್ಲಾ ಮತ್ತು ರವಿಚಂದ್ರನ್ ಅಶ್ವಿನ್ 300 ಮತ್ತು ಅದಕ್ಕಿಂತ ಹೆಚ್ಚಿನ ಟಿ 20 ವಿಕೆಟ್ ಪಡೆದ ಇತರ ಭಾರತೀಯ ಬೌಲರ್​ಗಳು. ಚಾವ್ಲಾ 310 ವಿಕೆಟ್ ಪಡೆದರೆ, ಅಶ್ವಿನ್ 306 ವಿಕೆಟ್ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ 297 ವಿಕೆಟ್​ಗಳೊಂಇಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಅಮಿತ್ ಮಿಶ್ರಾ 285 ಟಿ 20 ವಿಕೆಟ್​​ಗಳನ್ನು ಪಡೆದಿದ್ದಾರೆ.

ಟಿ20 ಕ್ರಿಕೆಟ್​ಬಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಸಾಧನೆಗಳು

  • ಯಜುವೇಂದ್ರ ಚಾಹಲ್: 350 ವಿಕೆಟ್​
  • ಪಿಯೂಷ್ ಚಾವ್ಲಾ: 310 ವಿಕೆಟ್​
  • ರವಿಚಂದ್ರನ್ ಅಶ್ವಿನ್: 306 ವಿಕೆಟ್​
  • ಭುವನೇಶ್ವರ್ ಕುಮಾರ್: 297 ವಿಕೆಟ್​
  • ಅಮಿತ್ ಮಿಶ್ರಾ: 285 ವಿಕೆಟ್​

ವೆಸ್ಟ್ ಇಂಡೀಸ್​ನ ಮಾಜಿ ಆಲ್ರೌಂಡರ್ ಡ್ವೇನ್ ಬ್ರಾವೋ 625 ವಿಕೆಟ್​​ಗಳನ್ನು ಕಬಳಿಸುವ ಮೂಲಕ ಟಿ20 ಕ್ರಿಕೆಟ್​​ಗೆ ತೆರೆ ಎಳೆದಿದ್ದಾರೆ. ವಿಶ್ವದ ಬೇರೆ ಯಾವುದೇ ಬೌಲರ್ ಇದುವರೆಗೆ 600 ವಿಕೆಟ್​ಗಳ ಗಡಿ ಮುಟ್ಟಲು ಸಾಧ್ಯವಾಗಿಲ್ಲ.

ಅಫ್ಘಾನಿಸ್ತಾನದ ಸೂಪರ್ ಸ್ಟಾರ್ ರಶೀದ್ ಖಾನ್ 572 ವಿಕೆಟ್​ಗಳೊಂಇಎಗ ಅತಿ ಹೆಚ್ಚು ಟಿ 20 ವಿಕೆಟ್ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಸುನಿಲ್ ನರೈನ್ 549 ವಿಕೆಟ್​ಗಳನ್ನು ಪಡೆದಿದ್ದಾರೆ. ಇಮ್ರಾನ್ ತಾಹಿರ್ (502) ಮತ್ತು ಶಕೀಬ್ ಅಲ್ ಹಸನ್ (482) ಮೊದಲ ಐದು ಸ್ಥಾನಗಳಲ್ಲಿದ್ದಾರೆ.

ಇದನ್ನೂ ಓದಿ:IPL 2024 : ಅಭಿಮಾನಿಯ 80 ಸಾವಿರ ರೂಪಾಯಿ ಮೊಬೈಲ್​ ಒಡೆದು ಹಾಕಿದ ಚೆನ್ನೈ ಸ್ಟಾರ್​; ಇಲ್ಲಿದೆ ವಿಡಿಯೊ

ಐಪಿಎಲ್​ನಲ್ಲಿ ಚಹಲ್ ಸಾಧನೆ

ಐಪಿಎಲ್ ಇತಿಹಾಸದಲ್ಲಿ 200 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಯಜುವೇಂದ್ರ ಚಾಹಲ್ ಪಾತ್ರರಾಗಿದ್ದಾರೆ. ಕಳೆದ ತಿಂಗಳು ಜೈಪುರದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ನಬಿ ಅವರನ್ನು ಔಟ್ ಮಾಡುವ ಮೂಲಕ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ.

ಚಹಲ್ ಈ ಋತುವಿನಲ್ಲಿ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಈವರೆಗೆ 11 ಪಂದ್ಯಗಳನ್ನಾಡಿರುವ ಅವರು 14 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಋತುವಿನಲ್ಲಿ ಅವರ ಉತ್ತಮ ಪ್ರದರ್ಶನವು ಐಸಿಸಿ ಟಿ 20 ವಿಶ್ವಕಪ್ 2024 ಗಾಗಿ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಸಹಾಯ ಮಾಡಿತು.

Continue Reading

ಕ್ರೀಡೆ

IPL 2024 : ಅಭಿಮಾನಿಯ 80 ಸಾವಿರ ರೂಪಾಯಿ ಮೊಬೈಲ್​ ಒಡೆದು ಹಾಕಿದ ಚೆನ್ನೈ ಸ್ಟಾರ್​; ಇಲ್ಲಿದೆ ವಿಡಿಯೊ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಋತುವಿನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧದ ಪಂದ್ಯಕ್ಕಾಗಿ ಚೆನ್ನೈ ಧರ್ಮಶಾಲಾಗೆ ಪ್ರಯಾಣಿಸಿದೆ. ಪಂದ್ಯಕ್ಕೂ ಮುನ್ನ ಸಿಎಸ್​ಕೆ ಬ್ಯಾಟ್ಸ್ಮನ್ ಡ್ಯಾರಿಲ್ ಮಿಚೆಲ್ ಬೌಂಡರಿ ಲೈನ್​ನಲ್ಲಿ ಥ್ರೋಡೌನ್​ಗಳನ್ನು ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಈ ಅನಿರೀಕ್ಷಿತ ಘಟನೆ ನಡೆದಿದೆ,

VISTARANEWS.COM


on

IPL 2024
Koo

ಚೆನ್ನೈ: ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ಅಭ್ಯಾಸ ನಡೆಸುವ ವೇಳೆ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings ) ಕ್ರಿಕೆಟಿಗ ಡ್ಯಾರಿಲ್ ಮಿಚೆಲ್ ಆಕಸ್ಮಿಕವಾಗಿ ಅಭಿಮಾನಿಯೊಬ್ಬರ ಫೋನ್ ಅನ್ನು ಒಡೆದು ಹಾಕಿದ ಪ್ರಸಂಗ ನಡೆದಿದೆ. ಅವರು ಹೊಡೆದ ಶಕ್ತಿಯುತ ಶಾಟ್​ನಿಂದಾಗಿ ಚೆಂಡು ಐಫೋನ್​​ಗೆ ಬಡಿದು ಅದು ಸಂಪೂರ್ಣವಾಗಿ ಹಾಳಾಗಿದೆ. ಚೆಂಡು ನೇರವಾಗಿ ಬಂದು ಮೊಬೈಲ್​ಗೆ ಬಡಿಯುತ್ತಿರುವ ವಿಡಿಯೊ ವೈರಲ್ ಆಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಋತುವಿನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧದ ಪಂದ್ಯಕ್ಕಾಗಿ ಚೆನ್ನೈ ಧರ್ಮಶಾಲಾಗೆ ಪ್ರಯಾಣಿಸಿದೆ. ಪಂದ್ಯಕ್ಕೂ ಮುನ್ನ ಸಿಎಸ್​ಕೆ ಬ್ಯಾಟ್ಸ್ಮನ್ ಡ್ಯಾರಿಲ್ ಮಿಚೆಲ್ ಬೌಂಡರಿ ಲೈನ್​ನಲ್ಲಿ ಥ್ರೋಡೌನ್​ಗಳನ್ನು ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಈ ಅನಿರೀಕ್ಷಿತ ಘಟನೆ ನಡೆದಿದೆ,

ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಕೆಲವು ಸಿಎಸ್ಕೆ ಅಭಿಮಾನಿಗಳು ಧರ್ಮಶಾಲಾ ಕ್ರೀಡಾಂಗಣದಲ್ಲಿ ಜಮಾಯಿಸಿದ್ದರು. ಮಿಚೆಲ್ ಪಂದ್ಯಕ್ಕೆ ತಯಾರಿ ನಡೆಸುತ್ತಿದ್ದಂತೆ ಅವರನ್ನು ಹುರಿದುಂಬಿಸಿದ್ದರು. ಆದಾಗ್ಯೂ, ಮಿಚೆಲ್ ಎತ್ತರದ ಶಾಟ್ ಒಂದನ್ನು ಹೊಡೆದರು, ಅದು ಪ್ರೇಕ್ಷಕರೊಬ್ಬರ ಮೊಬೈಲ್ ಫೋನ್​ಗೆ ಅಪ್ಪಳಿಸಿತು. ಅಲ್ಲದೆ, ಅವರ ಪಕ್ಕದಲ್ಲಿ ನಿಂತಿದ್ದವರಿಗೆ ಬಡಿದಿತ್ತು.

ಇದನ್ನೂ ಓದಿ: IPL 2024 : ಗುರಿ ಬಿಟ್ಟು ಬೇರೆ ಕಡೆಗೆ ಪ್ರಯಾಣಿಸಿದ ಕೆಕೆಆರ್​ ಆಟಗಾರರಿದ್ದ ವಿಮಾನ!

ಡ್ಯಾರಿಲ್ ಮಿಚೆಲ್ ಆದ ಘಟನೆಗೆ ಪಶ್ಚಾತ್ತಾಪಪಟ್ಟರು ಮತ್ತು ತಕ್ಷಣ ಜನಸಮೂಹಕ್ಕೆ ಕ್ಷಮೆಯಾಚಿಸಿದರು. ಇದಲ್ಲದೆ, ಪರಿಹಾರವಾಗಿ, ಮಿಚೆಲ್ ತಮ್ಮ ದುಬಾರಿ ಬ್ಯಾಟಿಂಗ್ ಗ್ಲೌಸ್​ಗಳನ್ನು ಮೊಬೈಲ್ ಒಡೆದು ಹೋದ ಅಭಿಮಾನಿಗೆ ಉಡುಗೊರೆಯಾಗಿ ನೀಡಿದರು, ಅವರು ಕಿವೀಸ್ ಬ್ಯಾಟರ್​​ನ ಒಳ್ಳೆಯತನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇಡೀ ಘಟನೆಯು ಉದ್ದೇಶಪೂರ್ವಕವಲ್ಲದ ಮತ್ತು ದುರದೃಷ್ಟಕರ ಅಪಘಾತ ಎಂದು ಹೇಳಬೇಕಾಗಿಲ್ಲ. ಆದಾಗ್ಯೂ, ಮಿಚೆಲ್ ಅವರ ಪ್ರತಿಕ್ರಿಯೆ ಮತ್ತು ನಿಜವಾದ ತಪ್ಪನ್ನು ಒಪ್ಪಿಕೊಂಡಿರುವುದು ಅಭಿಮಾನಿಗಳ ಹೃದಯವನ್ನು ಗೆದ್ದಿತು. ಇಡೀ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ ಮತ್ತು ಸಿಎಸ್​ಕೆ ಅಭಿಮಾನಿಗಳು ವಿಡಿಯೊವನ್ನು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.

ಸಿಎಸ್ಕೆ ತನ್ನ ಪ್ಲೇಆಫ್ ಅಭಿಯಾನ ಹೆಚ್ಚಿಸಲು ಹೆಚ್ಚು ಅಗತ್ಯ ಗೆಲುವಿನೊಂದಿಗೆ ಧರ್ಮಶಾಲಾದಿಂದ ಮರಳಿದೆ. ಆಡಿರುವ 11 ಪಂದ್ಯಗಳಲ್ಲಿ 12 ಅಂಕ ಗಳಿಸಿರುವ ಸಿಎಸ್​ಕೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆದಾಗ್ಯೂ, ದೀಪಕ್ ಚಹರ್ ಮತ್ತು ಮಥೀಶಾ ಪಥಿರಾನಾ ಅವರಂತಹ ಪ್ರಮುಖ ಆಟಗಾರರು ತಂಡದಿಂದ ನಿರ್ಗಮಿಸುತ್ತಿರುವುದರಿಂದ ಇನ್ನು ಮುಂದೆ ಸಿಎಸ್​ಕೆ ಅಭಿಯಾನ ಸುಲಭವಾಗಿಲ್ಲ.

Continue Reading

ಪ್ರಮುಖ ಸುದ್ದಿ

IPL 2024 : ಗುರಿ ಬಿಟ್ಟು ಬೇರೆ ಕಡೆಗೆ ಪ್ರಯಾಣಿಸಿದ ಕೆಕೆಆರ್​ ಆಟಗಾರರಿದ್ದ ವಿಮಾನ!

IPL 2024: ಕೋಲ್ಕತಾ ನೈಟ್ ರೈಡರ್ಸ್ ವಿಮಾನವು ರಾತ್ರಿ 8:50ಕ್ಕೆ ಕೋಲ್ಕೊತಾದ ಬದಲಿಗೆ ಗುವಾಹಟಿಯಲ್ಲಿ ಇಳಿಯುತ್ತಿದ್ದಂತೆ, ತಂಡದ ಮೂಲದಿಂದ ಮಾಹಿತಿ ಹೊರಗೆ ಬಂತು. ಲಕ್ನೋದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಕೆಕೆಆರ್​​ನ ಚಾರ್ಟರ್ ವಿಮಾನವನ್ನು ಪ್ರತಿಕೂಲ ಹವಾಮಾನದಿಂದಾಗಿ ಗುವಾಹಟಿಗೆ ತಿರುಗಿಸಲಾಗಿದೆ. ವಿಮಾನವು ಪ್ರಸ್ತುತ ಗುವಾಹಟಿ ವಿಮಾನ ನಿಲ್ದಾಣದಲ್ಲಿ ನಿಂತಿದೆ” ಎಂದು ಫ್ರ್ಯಾಂಚೈಸ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

VISTARANEWS.COM


on

IPL 2024: KKR's Flight to Kolkata Unexpectedly Diverted Mid-Air
Koo

ಬೆಂಗಳೂರು: ಲಕ್ನೊ ಸೂಪರ್​ ಜೈಂಟ್ಸ್​ ತಂಡದ ವಿರುದ್ಧದ ಐಪಿಎಲ್​ ಪಂದ್ಯದ (IPL 2024) ಬಳಿಕ ಕೋಲ್ಕತಾ ನೈಟ್ ರೈಡರ್ಸ್ (Kolkata Knight Riders) ತಂಡದ ಆಟಗಾರರು ಲಕ್ನೋದಿಂದ ಕೋಲ್ಕತ್ತಾಗೆ ಪ್ರಯಾಣಿಸುತ್ತಿದ್ದ ಪ್ರಯಾಣವು ಅನಿರೀಕ್ಷಿತವಾಗಿ ಬೇರೆ ಕಡೆಗೆ ಸಾಗಿದ ಪ್ರಸಂಗ ನಡೆದಿದೆ. ಪ್ರತಿಕೂಲ ಹವಾಮಾನದಿಂದಾಗಿ ಅವರು ಸಾಗುತ್ತಿದ್ದ ಚಾರ್ಟರ್ ವಿಮಾನವನ್ನು ಕೋಲ್ಕೊತಾದಲ್ಲಿ ಇಳಿಸಲು ಸಾಧ್ಯವಾಗದ ಕಾರಣ ಗುವಾಹಟಿಗೆ ತಿರುಗಿಸಲಾಗಿತ್ತು. ಈ ವಿಷಯವನ್ನು ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ಹೇಳಿಕೊಂಡಿದೆ

ಯೋಜನೆಗಳ ಹಠಾತ್ ಬದಲಾವಣೆಯನ್ನು ತಂಡವು ಸೋಮವಾರ ಸಂಜೆ ಇನ್ಸ್ಟಾಗ್ರಾಮ್​ನಲ್ಲಿ ವಿವರಿಸಿತು. ಇದು ಅವರ ಮುಂದಿನ ಪಂದ್ಯಕ್ಕಾಗಿ ಕುತೂಹಲದಿಂದ ಕಾಯುತ್ತಿರುವ ಅಭಿಮಾನಿಗಳಲ್ಲಿ ಹಲವಾರು ಕೌತುಕಗಳನ್ನು ಹುಟ್ಟಿಕೊಳ್ಳುವಂತೆ ಮಾಡಿತು.

ಗುವಾಹಟಿಗೆ ತೆರಳಿದ ಕೆಕೆಆರ್ ಚಾರ್ಟರ್ ವಿಮಾನ

ಕೋಲ್ಕತಾ ನೈಟ್ ರೈಡರ್ಸ್ ವಿಮಾನವು ರಾತ್ರಿ 8:50ಕ್ಕೆ ಕೋಲ್ಕೊತಾದ ಬದಲಿಗೆ ಗುವಾಹಟಿಯಲ್ಲಿ ಇಳಿಯುತ್ತಿದ್ದಂತೆ, ತಂಡದ ಮೂಲದಿಂದ ಮಾಹಿತಿ ಹೊರಗೆ ಬಂತು. ಲಕ್ನೋದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಕೆಕೆಆರ್​​ನ ಚಾರ್ಟರ್ ವಿಮಾನವನ್ನು ಪ್ರತಿಕೂಲ ಹವಾಮಾನದಿಂದಾಗಿ ಗುವಾಹಟಿಗೆ ತಿರುಗಿಸಲಾಗಿದೆ. ವಿಮಾನವು ಪ್ರಸ್ತುತ ಗುವಾಹಟಿ ವಿಮಾನ ನಿಲ್ದಾಣದಲ್ಲಿ ನಿಂತಿದೆ” ಎಂದು ಫ್ರ್ಯಾಂಚೈಸ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ವಲ್ಪ ಸಮಯದ ನಂತರ, ಕೋಲ್ಕತ್ತಾಗೆ ಮರಳಲು ಎಲ್ಲ ಅವಕಾಶಗಳು ಸಿಕ್ಕಿತು. ಬಳಿಕ ಅವರ ವಿಮಾನ ರಾತ್ರಿ 11:00 ಕ್ಕೆ ಕೋಲ್ಕೊತಾಗೆ ಮರಳಿತಿಉ.

ಎಲ್​ಎಸ್​ಜಿ ವಿರುದ್ಧ ಭರ್ಜರಿ ವಿಜಯ

ಲಕ್ನೋದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡವು ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ತಂಡವನ್ನು 98 ರನ್ಗಳಿಂದ ಸೋಲಿಸಿತ್ತು. ಈ ಗೆಲುವಿನೊಂದಿಗೆ ಕೆಕೆಆರ್ 11 ಪಂದ್ಯಗಳಿಂದ 16 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು ಮತ್ತು ಪ್ಲೇಆಪ್​​ನಲ್ಲಿ ಬಹುತೇಕ ಖಚಿತ ಸ್ಥಾನ ಭದ್ರಪಡಿಸಿತು.

ಗೌತಮ್ ಗಂಭೀರ್ ನಾಯಕತ್ವದಲ್ಲಿ 2014ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಕೆಕೆಆರ್, ಈ ಋತುವಿನಲ್ಲಿ ಎಂಟು ಗೆಲುವುಗಳನ್ನು ಪಡೆದಿದೆ. ಲೀಗ್ ಹಂತದ ಅಗ್ರ ಎರಡು ಸ್ಥಾನಗಳನ್ನು ತಲುಪಲು ಕೇವಲ ಮೂರು ಪಂದ್ಯಗಳು ಬಾಕಿ ಉಳಿದಿವೆ.

ಇದನ್ನೂ ಓದಿ: T20 World Cup : ಕೊಹ್ಲಿಯನ್ನು ಎದುರಿಸಲು ಪ್ಲ್ಯಾನ್​ ರೆಡಿ ಇದೆ ಎಂದ ಬಾಬರ್ ಅಜಮ್​

ಮೇ 11 ರಂದು ಈಡನ್ ಗಾರ್ಡನ್ಸ್​ನಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಮುಂದಿನ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಇದು ಋತುವಿನ ಕೊನೆಯ ತವರು ಪಂದ್ಯವಾಗಿದೆ. ಅಲ್ಲಿ ಅವರು ತಮ್ಮ ಏಳು ತವರು ಪಂದ್ಯಗಳಲ್ಲಿ ಐದರಲ್ಲಿ ಗೆದ್ದ ನಂತರ ತಮ್ಮ ಪ್ರಾಬಲ್ಯ ಗಟ್ಟಿಗೊಳಿಸುವ ಗುರಿಯನ್ನು ಹೊಂದಿದ್ದಾರೆ.

ಕಳೆದ ತಿಂಗಳು ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ ಸೋಲುಗಳು ಈಡನ್ ಗಾರ್ಡನ್ಸ್ನಲ್ಲಿ ಅವರ ದಾಖಲೆಯಲ್ಲಿ ಏಕೈಕ ಕಳಂಕವಾಗಿದೆ.

ಮುಂಬೈ ನಂತರ, ನೈಟ್ ರೈಡರ್ಸ್ ಅಹಮದಾಬಾದ್ಗೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ, ನಂತರ ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ರಾಜಸ್ಥಾನ ವಿರುದ್ಧ ಲೀಗ್ ಹಂತದ ಫೈನಲ್ ಪಂದ್ಯ ನಡೆಯಲಿದೆ.

Continue Reading
Advertisement
woman murder case divya
ಕ್ರೈಂ4 mins ago

Murder Case: ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

Uttarakhand Wildfire
ದೇಶ9 mins ago

Uttarakhand Wild fire:5 ತಿಂಗಳು.. 910 ಕಾಡ್ಗಿಚ್ಚು ಪ್ರಕರಣ;ಸುಪ್ರೀಂಕೋರ್ಟ್‌ನಲ್ಲಿ ಇಂದು ತುರ್ತು ವಿಚಾರಣೆ

nanna desha nanna dani column
ಅಂಕಣ34 mins ago

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

Ghee Testing Method
ಆಹಾರ/ಅಡುಗೆ49 mins ago

Ghee Testing Method: ನಾವು ತಿನ್ನುವ ತುಪ್ಪ ಶುದ್ಧವಾಗಿದೆಯೇ ಎಂದು ಪರೀಕ್ಷಿಸುವುದು ಹೇಗೆ? ಇಲ್ಲಿದೆ ವಿಧಾನ

karnataka weather Forecast
ಮಳೆ1 hour ago

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Food Safety
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಆಹಾರ ಸುರಕ್ಷತೆಗಾಗಿ ನಿಷೇಧ ಆದೇಶ ಹೊರಡಿಸಿದರೆ ಸಾಕೆ?

Juices Side Effect
ಆರೋಗ್ಯ2 hours ago

Juices Side Effect: ಅಂಗಡಿಯಲ್ಲಿ ಸಿಗುವ ಜ್ಯೂಸ್‌ ಕುಡಿದರೆ ಏನಾಗುತ್ತದೆ?

Dina Bhavishya
ಭವಿಷ್ಯ3 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

70.94 percent voting in Koppal Lok Sabha constituency says Koppal DC Nalin Atul
ಕೊಪ್ಪಳ7 hours ago

Lok Sabha Election 2024: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.94ರಷ್ಟು ಮತದಾನ

Rampura PSI Mahesh Hosapete admitted to the hospital Hanagal village road accident injured persons
ಕರ್ನಾಟಕ8 hours ago

Road Accident: ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸಿದ ಪಿಎಸ್‌ಐ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ11 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ14 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ16 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌