Shahid Afridi | ಪಾಕಿಸ್ತಾನ ಕ್ರಿಕೆಟಿಗರಿಗೆ ಖಡಕ್​ ಸಂದೇಶ ನೀಡಿದ ಚೀಫ್ ಸೆಲೆಕ್ಟರ್​ ಶಾಹಿದ್ ಅಫ್ರಿದಿ! - Vistara News

ಕ್ರಿಕೆಟ್

Shahid Afridi | ಪಾಕಿಸ್ತಾನ ಕ್ರಿಕೆಟಿಗರಿಗೆ ಖಡಕ್​ ಸಂದೇಶ ನೀಡಿದ ಚೀಫ್ ಸೆಲೆಕ್ಟರ್​ ಶಾಹಿದ್ ಅಫ್ರಿದಿ!

ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಬೇಕಾದರೆ ದೇಶಿಯ ಆಟಗಾರರು ಉತ್ತಮ ಸ್ಟ್ರೈಕ್​​​ರೇಟ್ ಹೊಂದಿರಬೇಕು ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.

VISTARANEWS.COM


on

Shahid Afridi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ಪಾಕಿಸ್ತಾನ ರಾಷ್ಟ್ರೀಯ ಟಿ20 ತಂಡಕ್ಕೆ ಬ್ಯಾಟ್ಸ್​ಮನ್​​​​ಗಳ​ ಆಯ್ಕೆ ಮಾನದಂಡದ ಬಗ್ಗೆ ಪಾಕಿಸ್ತಾನದ ಹಂಗಾಮಿ ಚೀಫ್​ ಸೆಲೆಕ್ಟರ್​​ ಶಾಹಿದ್ ಅಫ್ರಿದಿ(Shahid Afridi) ದಿಟ್ಟ ಹೇಳಿಕೆ ನೀಡಿದ್ದಾರೆ. ಆ ಮೂಲಕ ಪಾಕ್​ ಆಟಗಾರರಿಗೆ ಅಫ್ರಿದಿ, ಖಡಕ್​ ಸಂದೇಶ ನೀಡಿದ್ದಾರೆ.

ನಜೀಮ್ ಸೇಥಿ ಅಧ್ಯಕ್ಷರಾಗಿ ನೇಮಕವಾದ ಬಳಿಕ, ಶಾಹಿದ್ ಅಫ್ರಿದಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ಹಂಗಾಮಿ ಮುಖ್ಯ ಆಯ್ಕೆಗಾರರಾಗಿ ನೇಮಕಗೊಂಡರು. ಇದೀಗ ಪಾಕಿಸ್ತಾನ ಕ್ರಿಕೆಟ್‌ ತಂಡದಲ್ಲಿ ಸುಧಾರಣೆ ಮಾಡುವ ಸಲುವಾಗಿ ಅವರು ಹಲವು ಮಹತ್ವದ ಬದಲಾವಣೆ ಮಾಡಲು ಮುಂದಾಗಿದ್ದಾರೆ.

ಪಾಕಿಸ್ತಾನ ಟಿ20 ತಂಡಕ್ಕೆ ಆಯ್ಕೆಯಾಗಲು ಅಫ್ರಿದಿ ಹೊಸ ಮಾನದಂಡವನ್ನು ತಿಳಿಸಿದ್ದು, ದೇಶೀಯ ಕ್ರಿಕೆಟ್​ನಲ್ಲಿ 135ಕ್ಕಿಂತ ಕಡಿಮೆ ಸ್ಟ್ರೈಕ್‌ ರೇಟ್‌ ಇದ್ದರೆ, ಅಂತಹ ಆಟಗಾರರನ್ನು ಟಿ20 ತಂಡದ ಆಯ್ಕೆಗಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅಫ್ರಿದಿ “ರಾಷ್ಟ್ರೀಯ​ ತಂಡಕ್ಕೆ ಆಯ್ಕೆ​ಯಾಗುವ ಆಸೆ ಇರುವ ಆಟಗಾರರು ತಮ್ಮ ಸ್ಟ್ರೈಕ್​​​ರೇಟ್​ ಹೆಚ್ಚಿಸಿಕೊಳ್ಳಿ. ಇಲ್ಲವಾದರೆ ಯಾರನ್ನೂ ಆಯ್ಕೆ ಮಾಡುವುದಿಲ್ಲ. ಏಕೆಂದರೆ ಅಂತಹ ಆಟಗಾರರಿಂದ ತಂಡಕ್ಕೆ ಹಿನ್ನಡೆಯಾಗುತ್ತದೆ” ಎಂದು ಹೇಳಿದ್ದಾರೆ.

ತೀರ್ಮಾನದ ಬಗ್ಗೆ ಗೊಂದಲ
ಅಫ್ರಿದಿ ತಿಳಿಸಿರುವ 135 ಕ್ಕಿಂತ ಕಡಿಮೆ ಸ್ಟ್ರೈಕ್‌ ರೇಟ್‌ ತೀರ್ಮಾನದ ಬಗ್ಗೆ ಹಲವು ಗೊಂದಲಗಳಿವೆ. ಸದ್ಯ ಪಾಕಿಸ್ತಾನ ಟಿ20 ತಂಡದಲ್ಲಿರುವ ಕಡಿಮೆ ಸ್ಟ್ರೈಕ್ ಹೊಂದಿರುವ ಆಟಗಾರರಿಗೆ ಇದು ಅನ್ವಯವಾಗಲಿದೆಯಾ ಎನ್ನುವುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಒಂದೊಮ್ಮೆ ಈ ನಿಯಮ ಎಲ್ಲರಿಗೂ ಅನ್ವಯವಾದರೆ ರಾಷ್ಟ್ರೀಯ ತಂಡದಲ್ಲಿ ಕಡಿಮೆ ಸ್ಟ್ರೈಕ್‌ ರೇಟ್‌ ಹೊಂದಿರುವ ಹಲವು ಆಟಗಾರರು ತಂಡದಿಂದ ಹೊರಬೀಳಲಿದ್ದಾರೆ.

ಇದನ್ನೂ ಓದಿ | Ramiz Raja | ಭಾರತದ ಜತೆ ಕ್ರಿಕೆಟ್​ ಆಡದಿದ್ದರೆ ಪಾಕ್ ಕ್ರಿಕೆಟ್​ ಮಂಡಳಿ ಕುಸಿತ ಗ್ಯಾರಂಟಿ: ರಮೀಜ್​ ರಾಜಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

IPL 2024: ಶಾರುಖ್‌ ಖಾನ್‌ ಮತ್ತು ಅವರ ಪುತ್ರ ಅಬ್ರಾಮ್(AbRam ) ರಿಂಕು ಸಿಂಗ್​ ಜತೆ ಕ್ರಿಕೆಟ್​ ಆಡಿದ ವಿಡಿಯೊ ವೈರಲ್​ ಆಗಿದೆ. ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಇಂದು ಕೆಕೆಆರ್​ ತಂಡ ಈಡನ್​ ಗಾರ್ಡನ್ಸ್​ನಲ್ಲಿ ಪಂದ್ಯವನ್ನಾಡುತ್ತಿದೆ. ಈ ಪಂದ್ಯಕ್ಕೂ ಮುನ್ನ ಕೆಕೆಆರ್​ ಆಟಗಾರರು ಅಭ್ಯಾಸ ನಡೆಸಿದ ವೇಳೆ ಶಾರುಖ್‌ ಪುತ್ರ ಅಬ್ರಾಮ್ ರಿಂಕು ಸಿಂಗ್​ ಅವರಿಗೆ ಬೌಲಿಂಗ್​ ನಡೆಸಿದ್ದಾರೆ.

VISTARANEWS.COM


on

IPL 2024
Koo

ಕೋಲ್ಕತ್ತಾ: ಬಾಲಿವುಡ್‌ ನಟ, ಕೆಕೆಆರ್​ ತಂಡದ ಸಹ ಮಾಲಿಕ ಶಾರುಖ್‌ ಖಾನ್‌(Shah Rukh Khan) ಅವರು ತನ್ನ ತಂಡದ ಪ್ರತಿ ಪಂದ್ಯದ ವೇಳೆಯೂ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳುತ್ತಾರೆ. ತಂಡ ಸೋತರೂ ಗೆದ್ದರೂ ಆಟಗಾರರಿಗೆ ಸದಾ ಸ್ಫೂರ್ತಿ ತುಂಬುವ ಕೆಲ ಮಾಡುತ್ತಲೇ ಇರುತ್ತಾರೆ. ಈಗಾಗಲೇ ಇದರ ಹಲವು ವಿಡಿಯೊಗಳನ್ನು ಕೂಡ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಇದೀಗ ತಮ್ಮ ಕಿರಿಯ ಪುತ್ರ ಅಬ್ರಾಮ್(Shah Rukh Khan’s Son AbRam) ಮತ್ತು ಕೆಕೆಆರ್​ ಆಟಗಾರರ ಜತೆ ಕ್ರಿಕೆಟ್​ ಆಡಿ ಗಮನಸೆಳೆದಿದ್ದಾರೆ. ಶಾರುಖ್‌ ಖಾನ್‌ ಮತ್ತು ಅವರ ಪುತ್ರ ಅಬ್ರಾಮ್(AbRam ) ರಿಂಕು ಸಿಂಗ್​ ಜತೆ ಕ್ರಿಕೆಟ್​ ಆಡಿದ ವಿಡಿಯೊ ವೈರಲ್​ ಆಗಿದೆ.

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಇಂದು ಕೆಕೆಆರ್​ ತಂಡ ಈಡನ್​ ಗಾರ್ಡನ್ಸ್​ನಲ್ಲಿ ಪಂದ್ಯವನ್ನಾಡುತ್ತಿದೆ. ಈ ಪಂದ್ಯಕ್ಕೂ ಮುನ್ನ ಕೆಕೆಆರ್​ ಆಟಗಾರರು ಅಭ್ಯಾಸ ನಡೆಸಿದ ವೇಳೆ ಶಾರುಖ್‌ ಪುತ್ರ ಅಬ್ರಾಮ್ ರಿಂಕು ಸಿಂಗ್​ ಅವರಿಗೆ ಬೌಲಿಂಗ್​ ನಡೆಸಿದ್ದಾರೆ. ಇದಾದ ಬಳಿಕ ತಂದೆಯ ಜತೆ ಕ್ಯಾಚ್​ ಹಿಡಿಯುವ ಅಭ್ಯಾಸ ನಡೆಸಿದ್ದಾರೆ. ಶಾರೂಕ್​ ಕೂಡ ಕೆಕೆಆರ್​ ಜೆರ್ಸಿಯಲ್ಲಿ ಕೆಲ ಕಾಲ ಟೆನಿಸ್​ ಬಾಲ್​ನಲ್ಲಿ ಬ್ಯಾಟಿಂಗ್​ ಅಭ್ಯಾಸ ನಡೆಸಿದ್ದಾರೆ. ಇದೆಲ್ಲದರ ವಿಡಿಯೊವನ್ನು ಶಾರುಖ್‌ ಮತ್ತು ಕೆಕೆಆರ್ ಅಭಿಮಾನಿಗಳು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್​ ಮಾಡಿದ್ದಾರೆ.​

ಏಪ್ರಿಲ್​ 16ರಂದು ರಾಜಸ್ಥಾನ್​ ರಾಯಲ್ಸ್(RR)​ ವಿರುದ್ಧ ಆಡಲಿಳಿದಿದ್ದ ಕೆಕೆಆರ್(KKR)​ ತಂಡ ಜಾಸ್​ ಬಟ್ಲರ್​ ಅವರ ಅಜೇಯ ಶತಕದ(IPL 2024) ಆಟದಿಂದ ಸೋಲು ಕಂಡಿತ್ತು. ತವರಿನಲ್ಲೇ ಸೋಲು ಕಂಡ ಬೇಸರದಲ್ಲಿ ತಂಡದ ಸಹ ಮಾಲೀಕ, ಬಾಲಿವುಡ್​ ನಟ ಶಾರೂಖ್ ಖಾನ್‌(Shah Rukh Khan) ಅವರು ಕಣ್ಣೀರು ಸುರಿಸಿದ್ದರು. ಈ ವಿಡಿಯೊ ವೈರಲ್​ ಆಗಿತ್ತು.

ಇದನ್ನೂ ಓದಿ IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಶಾರೂಖ್ ಖಾನ್‌ ತನ್ನ ತಂಡ ಸೋಲು ಕಂಡಾಗ ಭಾವುಕರಾದರು. ಆದರೂ ಕೂಡ ಪಂದ್ಯ ಮುಗಿದ ಬಳಿಕ ಮೈದಾನಕ್ಕೆ ಹತಾಶರಾಗಿ ಕುಳಿತಿದ್ದ ತನ್ನ ತಂಡದ ಆಟಗಾರರನ್ನು ಸಮಾಧಾನ ಪಡೆಸಿದರು. ಅಲ್ಲದೆ ಡ್ರೆಸ್ಸಿಂಗ್​ ರೂಮ್​ಗೂ ತೆರಳಿ ಆಟಗಾರರಿಗೆ ಮುಂದಿನ ಪಂದ್ಯದಲ್ಲಿ ಉತ್ತಮವಾಗಿ ಆಡುವಂತೆ ಧೈರ್ಯ ತುಂಬಿದರು. ಜತೆಗೆ ಗೆಲುವು ಸಾಧಿಸಿದ ಎದುರಾಳಿ ತಂಡದ ಆಟಗಾರರನ್ನು ಕೂಡ ತಬ್ಬಿಕೊಂಡು ಅಭಿನಂದಿಸಿದ್ದರು.

ಸದ್ಯ ಕೆಕೆಆರ್​ ತಂಡ 8 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು 10 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ಇಂದು ನಡೆಯುತ್ತಿರುವ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದರೆ 12 ಅಂಕದೊಂದಿಗೆ ಪ್ಲೇ ಆಫ್​ ಹಾದಿ ಮತ್ತಷ್ಟು ಸುಗಮಗೊಳಿಸಲಿದೆ.

Continue Reading

ಕ್ರೀಡೆ

LSG vs MI: ಲಕ್ನೋ ಸವಾಲಿಗೆ ಮುಂಬೈ ಸಜ್ಜು; ಸೋತರೆ ಪಾಂಡ್ಯ ಪಡೆಯ ಪ್ಲೇ ಆಫ್​ ಹಾದಿ ಕಠಿಣ

LSG vs MI: ನಿಕೋಲಸ್​ ಪೂರನ್​ ಆರಂಭಿಕ ಕೆಲ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್​ ನಡೆಸಿ ತಂಡಕ್ಕೆ ಆಸರೆಯಾಗುತ್ತಿದ್ದರು. ಆದರೆ, ಈಗ ಅವರ ಬ್ಯಾಟಿಂಗ್​ ಆರ್ಭಟ ಕೊಂಚ ಕಡಿಮೆಯಾದಂತೆ ತೋರುತ್ತಿದೆ. ದೀಪಕ್​ ಹೂಡಾ ಮತ್ತೆ ಬ್ಯಾಟಿಂಗ್​ ಫಾರ್ಮ್​ಗೆ ಮರಳಿರುವುದು ತಂಡಕ್ಕೆ ಬಲ ನೀಡಿದೆ.

VISTARANEWS.COM


on

LSG vs MI
Koo

ಲಕ್ನೋ: ಕಳೆದ ಪಂದ್ಯದಲ್ಲಿ ತವರಿನಲ್ಲೇ ಸೋಲು ಕಂಡ ಲಕ್ನೋ ಸೂಪರ್​ ಜೈಂಟ್ಸ್(LSG vs MI)​ ಮತ್ತೊಂದು ಪಂದ್ಯವನ್ನಾಡಲು ಸಜ್ಜಾಗಿದೆ. ಎದುರಾಳಿ ಸತತವಾಗಿ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್​. ಸದ್ಯ ಮುಂಬೈ ಅಂಕಪಟ್ಟಿಯಲ್ಲಿ 9ನೇ ಸ್ಥಾನಿಯಾಗಿದ್ದರೆ, ಲಕ್ನೋ(lucknow super giants) 5ನೇ ಸ್ಥಾನದಲ್ಲಿದೆ. ಪ್ಲೇ ಆಫ್​ ಆಸೆ ಜೀವಂತವಿರಿಸಬೇಕಿದ್ದರೆ ಮುಂಬೈಗೆ ಇದು ಮಸ್ಟ್​ ವಿನ್​ ಗೇಮ್​ ಆಗಿದೆ. ಲಕ್ನೋಗೂ ಕೂಡ ಮಹತ್ವದ ಪಂದ್ಯವಾಗಿದೆ.

ಲಕ್ನೋ ಬ್ಯಾಟಿಂಗ್‌ ಅಗ್ರ ಕ್ರಮಾಂಕವನ್ನು ಹೆಚ್ಚು ಅವಲಂಬಿಸಿದೆ. ರಾಹುಲ್‌- ಡಿ ಕಾಕ್‌ ಕ್ರೀಸ್‌ ಆಕ್ರಮಿಸಿಕೊಂಡರೆ ಮಾತ್ರ ತಂಡಕ್ಕೆ ಗೆಲುವು ಖಚಿತ ಎನ್ನಬಹುದು. ಪವರ್​ ಪ್ಲೇ ತನಕ ಉಭಯ ಆಟಗಾರರು ನಿಲ್ಲದೆ ಹೋದರೆ ತಂಡದ ಬೃಹತ್​ ಮೊತ್ತಕ್ಕೆ ದೊಡ್ಡ ಹೊಡೆತ ಬೀಳಲಿದೆ. ಮಾರ್ಕಸ್​ ಸ್ಟೋಯಿನಿಸ್​ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿ ತಂಡವನ್ನು ಗೆಲ್ಲಿಸಿದ್ದರೂ ಕೂಡ ಇವರ ಬ್ಯಾಟಿಂಗ್​ ಮೇಲೆ ಹೆಚ್ಚು ನಂಬಿಕೆ ಇಡುವಂತಿಲ್ಲ. ನಿಂತು ಆಡುವ ಕಲೆ ಇವರಿಗೆ ಅಷ್ಟಾಗಿ ತಿಳಿದಿಲ್ಲ. ತಾವೆದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್​ ಬಾರಿಸುವ ಯೋಚನೆಯಲ್ಲಿರುತ್ತಾರೆ.

ನಿಕೋಲಸ್​ ಪೂರನ್​ ಆರಂಭಿಕ ಕೆಲ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್​ ನಡೆಸಿ ತಂಡಕ್ಕೆ ಆಸರೆಯಾಗುತ್ತಿದ್ದರು. ಆದರೆ, ಈಗ ಅವರ ಬ್ಯಾಟಿಂಗ್​ ಆರ್ಭಟ ಕೊಂಚ ಕಡಿಮೆಯಾದಂತೆ ತೋರುತ್ತಿದೆ. ದೀಪಕ್​ ಹೂಡಾ ಮತ್ತೆ ಬ್ಯಾಟಿಂಗ್​ ಫಾರ್ಮ್​ಗೆ ಮರಳಿರುವುದು ತಂಡಕ್ಕೆ ಬಲ ನೀಡಿದೆ. ಶರವೇಗದ ಎಸೆತಗಾರ ಮಾಯಾಂಕ್‌ ಯಾದವ್‌ ಅವರ ಗೈರು ಕಾಡಿದೆ. ಈ ಪಂದ್ಯದಲ್ಲೂ ಅವರು ಆಡುವುದು ಅನುಮಾನ ಎನ್ನಲಾಗಿದೆ. ಮೊಹ್ಸಿನ್​ ಖಾನ್​, ಕೃಣಾಲ್​ ಪಾಂಡ್ಯ ಪ್ರತಿ ಪಂದ್ಯದಲ್ಲಿಯೂ ದುಬಾರಿಯಾಗುತ್ತಿದ್ದಾರೆ. ಇವರಲ್ಲೊಬ್ಬರನ್ನು ಕೈ ಬಿಟ್ಟು ಯುವ ಆಲ್​ರೌಂಡರ್​ ಅರ್ಶಿನ್ ಕುಲಕರ್ಣಿಗೆ ಈ ಪಂದ್ಯದಲ್ಲಿ ಆಡಿಸಿದರೆ ಉತ್ತಮ. ಅಂಡರ್​-19 ವಿಶ್ವಕಪ್​ ಟೂರ್ನಿಯಲ್ಲಿ ಇವರು ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರಿದ್ದರು.

ಇದನ್ನೂ ಓದಿ IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

ಮುಂಬೈ ತಂಡದಲ್ಲಿ ನಾಯಕತ್ವ ಬದಲಾವಣೆ ಬಳಿಕ ಯಾರು ಕೂಡ ಸಂಘಟಿತ ಪ್ರದರ್ಶನ ತೋರುತಿಲ್ಲ. ಇಶಾನ್​ ಕಿಶನ್​, ಸೂರ್ಯಕುಮಾರ್​ ಯಾದವ್​, ರೋಹಿತ್​ ಶರ್ಮ, ಜಸ್​ಪ್ರೀತ್​ ಬುಮ್ರಾ ಅವರಂತಹ ಘಟಾನುಘಟಿ ಆಟಗಾರರಿದ್ದರೂ ಕೂಡ ತಂಡಕ್ಕಾಗಿ ಆಡುತ್ತಿಲ್ಲ. ಸೋತರೂ ಗೆದ್ದರೂ ಕೂಡ ಜೋಶ್​ ಕಾಣುತ್ತಿಲ್ಲ. ನೂತನ ನಾಯಕ ಹಾರ್ದಿಕ್​ ಪಾಂಡ್ಯ ಕೂಡ ಗಂಭೀರವಾಗಿ ಆಡುತ್ತಿಲ್ಲ. ಅವರ ವರ್ತನೆಗಳೇ ವಿಚಿತ್ರವಾಗಿ ಗೋಚರಿಸಿದೆ.

ಪಿಚ್​ ರಿಪೋರ್ಟ್


ಲಕ್ನೋದ ಏಕಾನ ಸ್ಟೇಡಿಯಂನ ಪಿಚ್​ ಇದುವರೆಗೆ ನಿಧಾನಗತಿಯಿಂದ ಕೂಡಿತ್ತು. ಬೌಲರ್‌ಗಳು ಪರಿಣಾಮಕಾರಿಯಾಗಿ ದಾಳಿ ನಡೆಸುವ ಪಿಚ್​ ಇದಾಗಿತ್ತು. ಆದರೆ ಈಗ ಈ ಪಿಚ್​ ಈ ಹಿಂದಿನಂತೆ ವರ್ತಿಸುತ್ತಿಲ್ಲ. ಇಲ್ಲಿ ದೊಡ್ಡ ಮೊತ್ತವನ್ನು ಪೇರಿಸಿದರೂ ಕೂಡ ಚೇಸಿಂಗ್​ ನಡೆಸಬಹುದು. ಇದಕ್ಕೆ ಕಳೆದ 2 ಪಂದ್ಯಗಳ ಫಲಿತಾಂಶವೇ ಉತ್ತಮ ನಿದರ್ಶನ. ಈ ಮೊದಲು ಇಲ್ಲಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಳ್ಳುತ್ತಿತ್ತು. ಈಗ ಇಲ್ಲಿ ಮಂಚಿನ ಕಾಟ ಶುರುವಾಗಿದ್ದು ಚೇಸಿಂಗ್​ ನಡೆಸಿದ ತಂಡಗಳೇ ಗೆಲ್ಲುತ್ತಿವೆ. ಹೀಗಾಗಿ ಟಾಸ್‌ ಗೆದ್ದವರು ಮೊದಲು ಬ್ಯಾಟಿಂಗ್‌ ಬೌಲಿಂಗ್​ ಆಯ್ಕೆ ಮಾಡಿಕೊಳ್ಳುವ ನಿರೀಕ್ಷೆಯಿದೆ.

Continue Reading

ಕ್ರೀಡೆ

IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

IPL 2024: ಆರ್​ಸಿಬಿಗೆ ಲೀಗ್‌ ಹಂತದಲ್ಲಿ ಇನ್ನೂ 4 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಜತೆಗೆ ತನಗಿಂತ ಮೇಲಿರುವ ತಂಡಗಳು ಸತತ ಸೋಲು ಕಂಡರೆ ಕನಿಷ್ಠ 4ನೇ ಸ್ಥಾನಿಯಾಗಿ ಪ್ಲೇ ಆಫ್ ಗೇರುವ ಸಣ್ಣ ಅವಕಾಶವೊಂದಿದೆ.

VISTARANEWS.COM


on

IPL 2024
Koo

ಬೆಂಗಳೂರು: ಸತತವಾಗಿ ಸೋಲಿನಿಂದ ಕಂಗೆಟ್ಟು, ಈ ಬಾರಿ(IPL 2024) ಮುಗಿದು ಹೋದ ಅಧ್ಯಾಯ ಎನ್ನುವ ಹಂತಕ್ಕೆ ಬಂದು ನಿಂತಿದ್ದ ಆರ್​ಬಿಸಿ(RCB) ಈಗ ಗೆಲುವಿನ ಹಳಿಗೆ ಮರಳಿದೆ. ಸತತವಾಗಿ 2 ಪಂದ್ಯಗಳನ್ನು, ಒಟ್ಟಾರೆಯಾಗಿ ಮೂರು ಪಂದ್ಯ ಗೆದ್ದು ಮತ್ತೆ ಅಭಿಮಾನಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವಂತೆ ಮಾಡಿದೆ. ಸದ್ಯ ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನಿಯಾಗಿದ್ದರೂ ಕೂಡ ಆರ್​ಸಿಬಿಯ(Royal Challengers Bengaluru) ಪ್ಲೇ ಆಫ್​ ಬಾಗಿಲು ಇನ್ನೂ ಮುಚ್ಚಿಲ್ಲ. ಇನ್ನೂ ಕೂಡ ಆರ್​ಸಿಬಿಯ ಪ್ಲೇ ಆಫ್​ ಆಸೆ ಜೀವಂತವಾಗಿಯೇ ಇದೆ. ತಂಡದ ಪ್ಲೇ ಆಫ್​ ಲೆಕ್ಕಾಚಾರ ಹೇಗಿದೆ ಎಂಬ ಮಾಹಿತಿ ಇಂತಿದೆ.

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ಮತ್ತು ಪವಾಡವೊಂದು ನಡೆದರೆ ಆರ್​ಸಿಬಿಗೆ ಪ್ಲೇ ಆಫ್​ ಟಿಕೆಟ್​ ಸಿಗಲಿದೆ. ಈಗಾಗಲೇ 10 ಪಂದ್ಯ ಆಡಿದ್ದು, 3 ಪಂದ್ಯ ಗೆದ್ದು, 7 ಪಂದ್ಯದಲ್ಲಿ ಸೋಲು ಕಂಡಿದೆ. 6 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 4 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಜತೆಗೆ ತನಗಿಂತ ಮೇಲಿರುವ ತಂಡಗಳು ಸತತ ಸೋಲು ಕಂಡರೆ ಕನಿಷ್ಠ 4ನೇ ಸ್ಥಾನಿಯಾಗಿ ಪ್ಲೇ ಆಫ್ ಗೇರುವ ಸಣ್ಣ ಅವಕಾಶವೊಂದಿದೆ. ಉಳಿದ 4 ಪಂದ್ಯಗಳ ಪೈಕಿ 2 ಪಂದ್ಯಗಳನ್ನು ಆರ್​ಸಿಬಿ ತವರಿನಲ್ಲಿ ಆಡಲಿದೆ. ಒಂದು ಪಂದ್ಯ ಹಾಲಿ ಚಾಂಪಿಯನ್​ ಚೆನ್ನೈ ವಿರುದ್ಧ. ಇದು ಆರ್​ಸಿಬಿಗೆ ಕೊನೆಯ ಲೀಗ್​ ಪಂದ್ಯವಾಗಿರಲಿದೆ. ಮೇ 18ರಂದು ಈ ಪಂದ್ಯ ನಡೆಯಲಿದೆ.

ಅದೃಷ್ಟ ಕೂಡ ಬೇಕು


ಆರ್​ಸಿಬಿ ಮುಂದಿನ ಎಲ್ಲ 4 ಪಂದ್ಯಗಳನ್ನು ಗೆದ್ದರೆ 14 ಅಂಕ ಆಗಲಿದೆ. 14 ಅಂಕ ಗಳಿಸಿದರೂ ಪ್ಲೇ ಆಫ್​ ಟಿಕೆಟ್​ಖಚಿತಗೊಳ್ಳುವುದಿಲ್ಲ. 16 ಅಂಕ ಗಳಿಸಿರುವ ರಾಜಸ್ಥಾನ್​ ತಂಡಕ್ಕೆ ಪ್ಲೇ ಆಫ್​ ಸ್ಥಾನ ಬಹುತೇಕ ಖಚಿತಗೊಂಡಂತಿದೆ. ಅದಲ್ಲದೆ ರಾಜಸ್ಥಾನ್​ಗೆ ಇನ್ನೂ ಕೂಡ 5 ಪಂದ್ಯಗಳು ಬಾಕಿ ಇದೆ. ಇದರಲ್ಲಿ 1 ಪಂದ್ಯ ಗೆದ್ದರೂ ಸಾಕು. ಉಳಿದಿರುವ ಮೂರು ಸ್ಥಾನಗಳಿಗೆ 5 ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಎಲ್ಲ 5 ತಂಡಗಳು ಕೂಡ 10 ಅಂಕ ಗಳಿಸಿವೆ. ರನ್​ ರೇಟ್​ ಆಧಾರದಲ್ಲಿ ಸದ್ಯ ಮೇಲೆ ಕೆಳಗಿನ ಸ್ಥಾನ ಪಡೆದುಕೊಂಡಿದೆ. ಈ 5 ತಂಡಗಳ ಪೈಕಿ ಕನಿಷ್ಠ ಮೂರು ತಂಡಗಳು ಉಳಿದ ಲೀಗ್​ ಪಂದ್ಯಗಳಲ್ಲಿ ಸೋಲು ಕಂಡರೆ, 14 ಅಂಕದ ಗಡಿ ದಾಟಲು ವಿಫಲರಾದರೆ ಆಗ ಆರ್​ಸಿಬಿಗೆ ಪ್ಲೇ ಆಫ್​ ಅವಕಾಶ ಸಿಗಲಿದೆ. ಹೀಗಾಗಿ ಆರ್​ಸಿಬಿಗೆ ಗೆಲುವಿನ ಜತೆ ಅದೃಷ್ಟ ಕೂಡ ಕೈ ಹಿಡಿಯಬೇಕಿದೆ.

ಇದನ್ನೂ ಓದಿ IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​85310 (+0.972)
ಚೆನ್ನೈ​​95410 (+0.810)
ಹೈದರಾಬಾದ್​95410 (+0.075)
ಲಕ್ನೋ95410 (+0.059)
ಡೆಲ್ಲಿ105510 (-0.276)
ಗುಜರಾತ್​10468 (-1.113)
ಪಂಜಾಬ್9368 (-0.187)
ಮುಂಬೈ9366 (-0.261)
ಆರ್​ಸಿಬಿ10376 (-0.415)
Continue Reading

ಕ್ರೀಡೆ

MS Dhoni: ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಆದ ಧೋನಿ ಅಭಿಮಾನಿ

MS Dhoni: ಮಹೇಂದ್ರ ಸಿಂಗ್‌ ಧೋನಿಯ ಅಪ್ಪಟ ಅಭಿಮಾನಿಯೊಬ್ಬ ತನ್ನ ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಮಾಡಿದ್ದಾನೆ. ಭಾನುವಾರ ನಡೆದ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪೋಸ್ಟರ್​ ಹಿಡಿಯುವ ಮೂಲಕ ಈ ಅಭಿಮಾನಿ ತನ್ನ ಬ್ರೇಕಪ್ ವಿಚಾರವನ್ನು ಬಹಿರಂಗಪಡಿಸಿದ್ದಾನೆ.

VISTARANEWS.COM


on

MS Dhoni
Koo

ಚೆನ್ನೈ: ಮಹೇಂದ್ರ ಸಿಂಗ್‌ ಧೋನಿ(MS Dhoni) ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿ ಹಲವು ವರ್ಷ ಕಳೆದರೂ ಅವರು ಈಗಲೂ ಕ್ರಿಕೆಟಿನ ಸೂಪರ್‌ ಸ್ಟಾರ್‌ ಆಗಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆಗೇನೂ ಕೊರತೆ ಇಲ್ಲ. ಐಪಿಎಲ್​ನಲ್ಲಿ(IPL 2024) ಚೆನ್ನೈ ಪರ ಆಡುತ್ತಿರುವ ಧೋನಿ ಮೈದಾನಕ್ಕೆ ಇಳಿದರೆ ಸಾಕು ಇಡೀ ಸ್ಟೇಡಿಯಂ ತುಂಬಾ ಧೋನಿಯ ಹೆಸರಿನದ್ದೇ ಸದ್ದು. ಧೋನಿಯನ್ನು ನೋಡಲೆಂದೇ ಅವರ ಅಭಿಮಾನಿಗಳು ಕಾದು ಕುಳಿತಿರುತ್ತಾರೆ. ಇದೀಗ ಅವರ ಅಪ್ಪಟ ಅಭಿಮಾನಿಯೊಬ್ಬ ತನ್ನ ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಮಾಡಿದ್ದಾನೆ. ಭಾನುವಾರ ನಡೆದ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪೋಸ್ಟರ್​ ಹಿಡಿಯುವ ಮೂಲಕ ಈ ಅಭಿಮಾನಿ ತನ್ನ ಬ್ರೇಕಪ್ ವಿಚಾರವನ್ನು ಬಹಿರಂಗಪಡಿಸಿದ್ದಾನೆ.

ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಐಪಿಎಲ್​(IPL 2024) ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಚೆನ್ನೈ(Chennai Super Kings) ತಂಡ ನಾಯಕ ಋತುರಾಜ್​ ಗಾಯಕ್ವಾಡ್​, ಡೇರಿಯಲ್​ ಮಿಚೆಲ್​ ಮತ್ತು ಶಿವಂ ದುಬೆ ಅವರ ಆಕ್ರಮಣಕಾರಿ ಬ್ಯಾಟಿಂಗ್​ ಸಾಹಸದಿಂದ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ ನಷ್ಟಕ್ಕೆ 212 ರನ್​ ಬಾರಿಸಿತು. ಈ ಹಿಂದಿನ ಪಂದ್ಯಗಳಲ್ಲಿ ಸಲೀಸಾಗಿ ಮೂರು ಬಾರಿ 250ರ ಗಡಿ ದಾಟಿದ್ದ ಸನ್​ರೈಸರ್ಸ್​ ತಂಡಕ್ಕೆ ಈ ಮೊತ್ತ ಎಲ್ಲಿಂದಲೂ ಸಾಲದು ಎಂದು ನಿರೀಕ್ಷೆ ಮಾಡಿದ್ದವರಿಗೆ ಚೆನ್ನೈ ತಂಡದ ಮಧ್ಯಮ ವೇಗಿ ತುಷಾರ್​ ದೇಶ್​ಪಾಂಡೆ ಘಾತಕ ಸ್ಫೆಲ್ ಮೂಲಕ ಕಟ್ಟಿಹಾಕಿದರು. ಅಂತಿಮವಾಗಿ ಹೈದರಾಬಾದ್​ 18.5 ಓವರ್​ಗಳಲ್ಲಿ 134 ರನ್​ಗೆ ಸರ್ವಪತನ ಕಂಡು ಹೀನಾಯವಾಗಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕಳೆದ ಮುಂಬೈ ಮತ್ತು ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ನಡೆಸಿದ ವೇಳೆ ಕುಂಟುತಾ ನಡೆದಾಡಿದ ಫೋಟೊ ಮತ್ತು ವಿಡಿಯೊ ವೈರಲ್​ ಆಗಿತ್ತು. ಕಳೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯಗೆ ಹ್ಯಾಟ್ರಿಕ್​ ಸಿಕ್ಸರ್​ಗಳ ರುಚಿ ತೋರಿಸಿದ್ದರು. ವಯಸ್ಸು 42 ಆದರೂ, ತಮ್ಮ ಬ್ಯಾಟಿಂಗ್​ ಫಾರ್ಮ್​ ಮಾತ್ರ ಈ ಹಿಂದಿನಂತೆಯೇ ಇದೆ.​

Continue Reading
Advertisement
Rameshwaram Cafe blast
ಕರ್ನಾಟಕ12 mins ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

IPL 2024
ಕ್ರೀಡೆ26 mins ago

IPL 2024: ರಿಂಕು ಸಿಂಗ್​ಗೆ ಬೌಲಿಂಗ್​ ಮಾಡಿದ ಶಾರುಖ್‌ ಪುತ್ರ ಅಬ್ರಾಮ್; ವಿಡಿಯೊ ವೈರಲ್​

Narendra Modi
ದೇಶ29 mins ago

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

International Labor Day-2024
ಉದ್ಯೋಗ49 mins ago

Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

car crossed the divider and collided with a lorry Driver death
ತುಮಕೂರು59 mins ago

Road Accident: ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

Hassan Pen Drive Case
ಕರ್ನಾಟಕ1 hour ago

Hassan Pen Drive Case: ವಿಚಾರಣೆಗೆ ಕರೆದಾಗ ವಿದೇಶದಿಂದ ಪ್ರಜ್ವಲ್ ಬರುತ್ತಾನೆ ಎಂದ ಎಚ್‌.ಡಿ.ರೇವಣ್ಣ

PF Balance Check
ಮನಿ ಗೈಡ್1 hour ago

PF Balance Check: ಬಡ್ಡಿ ಬಂದಿದೆಯೋ ಇಲ್ಲವೋ… ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

MLA Srinivasa Mane Election campaign for Haveri Gadag Lok Sabha constituency Congress candidate Anandaswamy Gaddadevaramath
ಹಾವೇರಿ1 hour ago

Lok Sabha Election: ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಶಾಸಕ ಶ್ರೀನಿವಾಸ ಮಾನೆ ಪ್ರಚಾರ

Toyota Kirloskar Motor launched the Tgloss
ವಾಣಿಜ್ಯ2 hours ago

Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

Lok Sabha Election-2024
Lok Sabha Election 20242 hours ago

Lok Sabha Election: ಒಂದೇ ಒಂದು ಕುಟುಂಬಕ್ಕಾಗಿ ಪ್ರತ್ಯೇಕ ಮತಗಟ್ಟೆ! ಹೀಗೂ ಉಂಟು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20247 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20249 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌