Shahid Afridi: ಕೊಹ್ಲಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಭಾರತ ತಂಡವನ್ನು ಪಾಕ್​ಗೆ ಕರೆತರುವ ಉಪಾಯ ಮಾಡಿದ ಮಾಜಿ ನಾಯಕ - Vistara News

ಕ್ರೀಡೆ

Shahid Afridi: ಕೊಹ್ಲಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಭಾರತ ತಂಡವನ್ನು ಪಾಕ್​ಗೆ ಕರೆತರುವ ಉಪಾಯ ಮಾಡಿದ ಮಾಜಿ ನಾಯಕ

Shahid Afridi: ನಾವು ನೀಡುವ ಆತಿಥ್ಯದಿಂದ ಭಾರತದ ಆತಿಥ್ಯವನ್ನೇ ಕೊಹ್ಲಿ ಮರೆಯಬೇಕು. ಅಷ್ಟರಮಟ್ಟಿಗೆ ನಾವು ಅವರನ್ನು ನೋಡಿಕೊಳ್ಳುತ್ತೇವೆ. ವಿರಾಟ್ ಯಾವಾಗ ಪಾಕಿಸ್ತಾನಕ್ಕೆ ಬರುತ್ತಾರೆ ಎಂದು ಇಲ್ಲಿನ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಎಂದು ಶಾಹಿದ್‌ ಅಫ್ರಿದಿ ಹೇಳಿದ್ದಾರೆ.

VISTARANEWS.COM


on

Shahid Afridi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್​ ಟ್ರೋಫಿ(Champions Trophy 2025) ಟೂರ್ನಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲಿದೆಯಾ?, ಭಾರತ ಪಂದ್ಯಗಳು ತಟಸ್ಥ ತಾಣದಲ್ಲಿ ನಡೆಯಲಿದೆಯಾ? ಎಂದು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ಶಾಹಿದ್‌ ಅಫ್ರಿದಿ(Shahid Afridi) ಅವರು ವಿರಾಟ್​ ಕೊಹ್ಲಿ(Virat Kohli) ಕುರಿತು ಬಗ್ಗೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

ಭಾರತ ತಂಡವನ್ನು ಹೇಗಾದರೂ ಪಾಕಿಗೆ ಕರೆತರಲು ಶತ ಪ್ರಯತ್ನ ಮಾಡುತ್ತಿದೆ. ಜತೆಗೆ ಕೆಲ ಮಾಜಿ ಆಟಗಾರರು ಭಾರತೀಯ ಆಟಗಾರರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುವ ಮೂಲಕ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ, ಇದೀಗ ಈ ಸಾಲಿಗೆ ಅಫ್ರಿದಿ ಕೂಡ ಸೇರಿಕೊಂಡಿದ್ದಾರೆ. ಕೊಹ್ಲಿ ಬಗ್ಗೆ ಮುಕ್ತ ಕಂಠದಿಂದ ಹೊಗಳಿದ್ದಾರೆ.

ಇದನ್ನೂ ಓದಿ Champions Trophy 2025: ಚಾಂಪಿಯನ್ಸ್​ ಟ್ರೋಫಿ ಹೈಬ್ರಿಡ್ ಮಾದರಿಗೆ ಒತ್ತಾಯಿಸಿದ ಬಿಸಿಸಿಐ

ಹೌದು, ಸಂರ್ದಶನವೊಂದರಲ್ಲಿ ಮಾತನಾಡಿದ ಅಫ್ರಿದಿ, ‘ಸಚಿನ್​ ತೆಂಡೂಲ್ಕರ್​ ಅವರಿಗೆ ಪಾಕಿಸ್ತಾನದಲ್ಲಿ ಇರುವ ಅಭಿಮಾನಿಗಳಂತೆ ವಿರಾಟ್​ ಕೊಹ್ಲಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಈ ವಿಚಾರವನ್ನು ನಾನು ಮತ್ತೆ ಹೇಳಬೇಕೆಂದಿಲ್ಲ. ಏಕೆಂದರೆ ಈಗಾಗಲೇ ಕೊಹ್ಲಿ ಆಟವನ್ನು ನೋಡಲು ಪಾಕ್​ ಅಭಿಮಾನಿಗಳು ಸ್ಟ್ರೇಡಿಯಂನಲ್ಲಿ ಕಾಣಿಸಿಕೊಂಡ ಹಲವು ನಿದರ್ಶನಗಳಿವೆ. ಕೊಹ್ಲಿ ಚಾಂಪಿಯನ್ಸ್​ ಟ್ರೋಫಿ ಆಡಲು ನಮ್ಮ ದೇಶಕ್ಕೆ ಬರಬೇಕು ಎನ್ನುವುದು ನನ್ನ ಹಾಗು ಅವರ ಅಭಿಮಾನಿಗಳ ಬಯಕೆಯಾಗಿದೆ” ಎಂದು ಹೇಳಿದರು.

“ನಾವು ನೀಡುವ ಆತಿಥ್ಯದಿಂದ ಭಾರತದ ಆತಿಥ್ಯವನ್ನೇ ಕೊಹ್ಲಿ ಮರೆಯಬೇಕು. ಅಷ್ಟರಮಟ್ಟಿಗೆ ನಾವು ಅವರನ್ನು ನೋಡಿಕೊಳ್ಳುತ್ತೇವೆ. ವಿರಾಟ್ ಯಾವಾಗ ಪಾಕಿಸ್ತಾನಕ್ಕೆ ಬರುತ್ತಾರೆ ಎಂದು ಇಲ್ಲಿನ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ” ಎಂದು ಹೇಳಿದ್ದಾರೆ.

ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಇದಾದ ಬಳಿಕ ಪಾಕ್​ಗೆ ಭಾರತ ತಂಡ ಕಾಲಿಟ್ಟಿಲ್ಲ.

 ಭಾರತದ ಪಂದ್ಯಗಳು ಮಾತ್ರ ಸಾಗರೋತ್ತರ ತಟಸ್ಥ ಸ್ಥಳದಲ್ಲಿ ನಡೆಸುವಂತೆ ಬಿಸಿಸಿಐ, ಐಸಿಸಿಗೆ ಮನವಿ ಸಲ್ಲಿಸಿದೆ ಎಂದು ಎಎನ್​ಐ ವರದಿ ಮಾಡಿದೆ. ದುಬೈ ಅಥವಾ ಶ್ರೀಲಂಕಾದಲ್ಲಿ ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಐಸಿಸಿಗೆ ಕೇಳಿಕೊಂಡಿರುವುದಾಗಿ ವರದಿಯಾಗಿದೆ.

ಕಳೆದ ವರ್ಷ ಪಾಕ್​ ಆತಿಥ್ಯದಲ್ಲಿಯೇ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ತಂಡವು ಪಾಕ್​ಗೆ ಪ್ರಯಾಣಿಸಲು ನಿರಾಕರಿಸಿದ ಕಾರಣ, ಟೂರ್ನಿಯನ್ನು ಹೈಬ್ರಿಡ್(champions trophy hybrid model) ಮಾದರಿಯಲ್ಲಿ ಆಯೋಜಿಸಲಾಯಿತ್ತು. ಕೇವಲ ನಾಲ್ಕು ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸಿ ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದ್ದವು. ಭಾರತ ಎಲ್ಲ ಪಂದ್ಯಗಳನ್ನು ಲಂಕಾದಲ್ಲಿ ಆಡಿತ್ತು. ಇದೀಗ ಚಾಂಪಿಯನ್ಸ್​ ಟ್ರೋಫಿಯನ್ನೂ ಕೂಡ ಹೈಬ್ರಿಡ್ ಮಾದರಿಯಲ್ಲಿ ನಡೆಸಿ ಭಾರತದ ಪಂದ್ಯಗಳನ್ನು ಪಾಕ್​ನಿಂದ ಹೊರಗೆ ನಡೆಸುವಂತೆ ಐಸಿಸಿಗೆ ಬಿಸಿಸಿಐ ಕೇಳಿಕೊಂಡಿರುವುದಾಗಿ ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

New National Cricket Academy : ಹೊಸ ಎನ್​​ಸಿಎ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಹೊಂದಿದೆ. ಕ್ರಿಕೆಟಿಗರಿಗೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಉತ್ತಮ ವಾತಾವರಣ ಒದಗಿಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ಸೌಲಭ್ಯವು ಮೂರು ಅಂತಾರರಾಷ್ಟ್ರೀಯ ಗುಣಮಟ್ಟದ ಆಟದ ಮೈದಾನಗಳನ್ನು ಒಳಗೊಂಡಿರುತ್ತದೆ. ಜೊತೆಗೆ 45 ನೆಟ್​ಪ್ರಾಕ್ಟೀಸ್​ ಪಿಚ್ ಗಳನ್ನು ಹೊಂದಿದೆ. ಹೆಚ್ಚುವರಿಯಾಗಿ ಇದು ಒಳಾಂಗಣ ಕ್ರಿಕೆಟ್ ಪಿಚ್​​ಗಳನ್ನು ಹೊಂದಿದೆ. ಅದೇ ರೀತಿ ಒಲಿಂಪಿಕ್ ಗಾತ್ರದ ಈಜುಕೊಳ ಮತ್ತು ಅತ್ಯಾಧುನಿಕ ತರಬೇತಿ ಪ್ರದೇಶ, ಪುನಶ್ಚೇತನ ಮತ್ತು ಕ್ರೀಡಾ ವಿಜ್ಞಾನ ಸೌಲಭ್ಯಗಳನ್ನು ಹೊಂದಿರುತ್ತದೆ.

VISTARANEWS.COM


on

New National Cricket Academy
Koo

ಬೆಂಗಳೂರು: ನಗರದಲ್ಲಿ ಅತ್ಯಾಧುನಿಕ ಸೌಕರ್ಯಗಳನ್ನು ಹೊಂದಿರವು ಹೊಸ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (National Cricket Academy) ಪೂರ್ಣಗೊಳ್ಳುವ ಹಂತದಲ್ಲಿದೆ ಮತ್ತು ಶೀಘ್ರದಲ್ಲೇ ಕ್ರಿಕೆಟಿಗರಿಗೆ ಲಭ್ಯವಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಕಾರ್ಯದರ್ಶಿ ಜಯ್ ಶಾ ಪ್ರಕಟಿಸಿದ್ದಾರೆ. ಈ ಅತ್ಯಾಧುನಿಕ ಕೇಂದ್ರವು ದೇಶದಲ್ಲಿ ಕ್ರಿಕೆಟ್ ಅಭಿವೃದ್ಧಿಪಡಿಸುವ ಮತ್ತು ಪೋಷಿಸುವ ವಿಧಾನದಲ್ಲಿ ಕ್ರಾಂತಿಯನ್ನುಂಟು ಮಾಡಲಿದೆ.

ಹೊಸ ಎನ್​​ಸಿಎ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಹೊಂದಿದೆ. ಕ್ರಿಕೆಟಿಗರಿಗೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಉತ್ತಮ ವಾತಾವರಣ ಒದಗಿಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ಸೌಲಭ್ಯವು ಮೂರು ಅಂತಾರರಾಷ್ಟ್ರೀಯ ಗುಣಮಟ್ಟದ ಆಟದ ಮೈದಾನಗಳನ್ನು ಒಳಗೊಂಡಿರುತ್ತದೆ. ಜೊತೆಗೆ 45 ನೆಟ್​ಪ್ರಾಕ್ಟೀಸ್​ ಪಿಚ್ ಗಳನ್ನು ಹೊಂದಿದೆ. ಹೆಚ್ಚುವರಿಯಾಗಿ ಇದು ಒಳಾಂಗಣ ಕ್ರಿಕೆಟ್ ಪಿಚ್​​ಗಳನ್ನು ಹೊಂದಿದೆ. ಅದೇ ರೀತಿ ಒಲಿಂಪಿಕ್ ಗಾತ್ರದ ಈಜುಕೊಳ ಮತ್ತು ಅತ್ಯಾಧುನಿಕ ತರಬೇತಿ ಪ್ರದೇಶ, ಪುನಶ್ಚೇತನ ಮತ್ತು ಕ್ರೀಡಾ ವಿಜ್ಞಾನ ಸೌಲಭ್ಯಗಳನ್ನು ಹೊಂದಿರುತ್ತದೆ.

ಜಯ್ ಶಾ ತಮ್ಮ ಪ್ರಕಟಣೆಯಲ್ಲಿ, ಎನ್​​ಸಿಎ ಪ್ರಾರಂಭದ ಬಗ್ಗೆ ತಮ್ಮ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಇದು ಭಾರತೀಯ ಕ್ರಿಕೆಟ್​ಗೆ ಒದಗಿಸುವ ಅಪಾರ ಪ್ರಯೋಜನಗಳನ್ನು ವಿವರಿಸಿದ್ದಾರೆ. ಅಕಾಡೆಮಿಯ ಬಗ್ಗೆ ಅವರ ದೃಷ್ಟಿಕೋನವು ಕ್ರಿಕೆಟಿಗರು ಒಗ್ಗೂಡಲು, ಕಲಿಯಲು ಮತ್ತು ಬೆಳೆಯಲು ಒಂದು ಕೇಂದ್ರವನ್ನು ನಿರ್ಮಿಸುವುದಾಗಿದೆ. ಅಂತಿಮವಾಗಿ ರಾಷ್ಟ್ರೀಯ ತಂಡದ ಯಶಸ್ಸಿಗೆ ಕೊಡುಗೆ ನೀಡುವುದೇ ಉದ್ದೇಶವಾಗಿದೆ.

ಇದನ್ನೂ ಓದಿ: Deepika Kumari : ಪದಕದ ಭರವಸೆ ಮೂಡಿಸಿ ಬರಿಗೈಯಲ್ಲಿ ವಾಪಸಾದ ಆರ್ಚರ್​ ದೀಪಿಕಾ ಕುಮಾರಿ

ಬಿಸಿಸಿಐನ ಹೊಸ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಬಹುತೇಕ ಪೂರ್ಣಗೊಂಡಿದೆ. ಶೀಘ್ರದಲ್ಲೇ ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ ಎಂದು ಘೋಷಿಸಲು ತುಂಬಾ ಉತ್ಸುಕನಾಗಿದ್ದೇನೆ. ಹೊಸ ಎನ್​ಸಿಎ ಮೂರು ವಿಶ್ವ ದರ್ಜೆಯ ಆಟದ ಮೈದಾನಗಳು, 45 ಅಭ್ಯಾಸ ಪಿಚ್​ಗಳು ಒಳಾಂಗಣ ಕ್ರಿಕೆಟ್ ಪಿಚ್​ಗಳು, ಒಲಿಂಪಿಕ್ ಗಾತ್ರದ ಈಜುಕೊಳ ಮತ್ತು ಅತ್ಯಾಧುನಿಕ ತರಬೇತಿ, ಚೇತರಿಕೆ ಮತ್ತು ಕ್ರೀಡಾ ವಿಜ್ಞಾನ ಸೌಲಭ್ಯಗಳನ್ನು ಒಳಗೊಂಡಿರುತ್ತದೆ. ಈ ಉಪಕ್ರಮವು ನಮ್ಮ ರಾಷ್ಟ್ರದ ಪ್ರಸ್ತುತ ಮತ್ತು ಭವಿಷ್ಯದ ಕ್ರಿಕೆಟಿಗರಿಗೆ ತಮ್ಮ ಕೌಶಲ್ಯಗಳನ್ನು ಸಾಧ್ಯವಾದಷ್ಟು ಉತ್ತಮ ವಾತಾವರಣದಲ್ಲಿ ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದು ಜಯ್ ಶಾ ‘ಎಕ್ಸ್’ ನಲ್ಲಿ ಬರೆದಿದ್ದಾರೆ.

ಜಯ್ ಶಾ ಅವರು ಭಾರತೀಯ ಕ್ರಿಕೆಟ್ ಅಭಿವೃದ್ದಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಕಳೆದ ವರ್ಷ ಭಾರತ ಏಕದಿನ ವಿಶ್ವಕಪ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್​ನಲ್ಲಿ ರನ್ನರ್ ಅಪ್ ಸ್ಥಾನ ಪಡೆದಿತ್ತು. ಜುಲೈನಲ್ಲಿ ದಕ್ಷಿಣ ಆಫ್ರಿಕಾವನ್ನು ಫೈನಲ್​​ನಲ್ಲಿ ಸೋಲಿಸಿದ ನಂತರ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವ ಕಪ್​ ಗೆದ್ದುಕೊಂಡಿದೆ.

Continue Reading

ಪ್ರಮುಖ ಸುದ್ದಿ

Deepika Kumari : ಪದಕದ ಭರವಸೆ ಮೂಡಿಸಿ ಬರಿಗೈಯಲ್ಲಿ ವಾಪಸಾದ ಆರ್ಚರ್​ ದೀಪಿಕಾ ಕುಮಾರಿ

Deepika Kumari:

VISTARANEWS.COM


on

Deepika Kumari
Koo

ಬೆಂಗಳೂರು : ಭಾರತದ ಹಿರಿಯ ಬಿಲ್ಲುಗಾರ್ತಿ ದೀಪಿಕಾ ಕುಮಾರಿ (Deepika Kumari ) ಶನಿವಾರ ಕೊರಿಯಾದ ನಾಮ್ ಸುಹ್ಯಾನ್ ವಿರುದ್ಧ 6-4 ಅಂತರದಲ್ಲಿ ಸೋಲನುಭವಿಸಿದರು. ಈ ಮೂಲಕ ಅವರು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ನಿರಾಸೆಯ ಅಭಿಯಾನ ಕಂಡರು. ಶನಿವಾರದ ದಿನವನ್ನು ದೀಪಿಕಾ ಉತ್ತಮವಾಗಿ ಪ್ರಾರಂಭಿಸಿದರು. ಆದರೆ ನಿಧಾನವಾಗಿ ಪ್ರದರ್ಶನ ಕಳೆದುಕೊಂಡರು. ಪಂದ್ಯದ ನಿರ್ಣಾಯಕ ಹಂತಗಳಲ್ಲಿ ದೀಪಿಕಾ 6 ಮತ್ತು 7 ಅಂಕಗಳನ್ನು ಗಳಿಸಿದರು. ಇದು ದಿನದ ಅವರ ಫಲಿತಾಂಶದ ಮೇಲೆ ಪರಿಣಾಮ ಬೀರಿತು. ದೀಪಿಕಾ ಅವರ ಸೋಲಿನೊಂದಿಗೆ, ಭಾರತದಿಂದ ಬಿಲ್ಲುಗಾರಿಕೆ ತಂಡವು ಪ್ಯಾರಿಸ್​ನಿಂದ ಬರಿಗೈಯಲ್ಲಿ ಮರಳುವಂತಾಗಿದೆ. ಭಾರತೀಯ ಬಿಲ್ಲುಗಾರಿಕೆ ತಂಡವು ಸಾಕಷ್ಟು ಭರವಸೆಯೊಂದಿಗೆ ಆಡುತ್ತಿತ್ತು. ಆದರೆ, ಯಾವುದೇ ಪದಕ ಸುತ್ತುಗಳನ್ನು ಪ್ರವೇಶಿಸಲು ವಿಫಲವಾಯಿತು.

ಕ್ವಾರ್ಟರ್ ಫೈನಲ್ ಪಂದ್ಯದ ಮೊದಲ ಸೆಟ್​​ನಲ್ಲಿ ದೀಪಿಕಾ ಕುಮಾರಿ 9,10,9 ಅಂಕಗಳನ್ನು ಗಳಿಸಿ ಎರಡನೇ ಶ್ರೇಯಾಂಕಿತ ಬಿಲ್ಲುಗಾರ ನಾಮ್ ಸುಹೈಯಾನ್ ವಿರುದ್ಧ ಗೆಲುವು ಸಾಧಿಸಿದರು. ಎರಡನೇ ಸೆಟ್ ನಲ್ಲಿ ಭಾರತೀಯ ಬಿಲ್ಲುಗಾರ್ತಿ 10 ಅಂಕಗಳೊಂದಿಗೆ ಪ್ರಾರಂಭಿಸಿದ ನಂತರ 6 ಮತ್ತು 9 ರನ್ ಗಳಿಸಿದರು. ದೀಪಿಕಾ ಅವರ ಆಟವು ದೀರ್ಘವಾಗುತ್ತಿತ್ತು. ಅವರು ಕೊನೆಯ ಎರಡು ಸೆಕೆಂಡುಗಳಲ್ಲಿ ತಮ್ಮ ಹೆಚ್ಚಿನ ಬಾಣಗಳನ್ನು ಹೊಡೆದರು. ಅವರ ಅಂತಿಮ ಎರಡನೇ ಬಿಲ್ಲು 6, 7 ಮತ್ತು 8 ಗಳನ್ನು ಮುಟ್ಟಿದವು. ಹೀಗಾಗಿ ಹಿನ್ನಡೆ ಉಂಟಾಯಿತು.

ಪಂದ್ಯದ ಮೂರನೇ ಸೆಟ್​​ನಲ್ಲಿ ಅನುಭವಿ ಬಿಲ್ಲುಗಾರ್ತಿ ದೀಪಿಕಾ 10,9,10 ಅಂಕಗಳನ್ನು ಗಳಿಸಿ 29-28 ಅಂತರದಲ್ಲಿ ಗೆಲುವು ಸಾಧಿಸಿದರು. ಮೂರು ಸೆಟ್ ಗಳ ನಂತರ ಪಂದ್ಯವನ್ನು 4-2 ರಿಂದ ಮುನ್ನಡೆಸಿದ ದೀಪಿಕಾ ನಾಲ್ಕನೇ ಸೆಟ್ ನಲ್ಲಿ ಮತ್ತೊಮ್ಮೆ ಎಡವಿದರು. ಒತ್ತಡದಲ್ಲಿ 7 ಅಂಕ ಗಳಿಸಿದರು. . ಕೊರಿಯಾದ ಬಿಲ್ಲುಗಾರ್ತಿ 4ನೇ ಸೆಟ್ ಅನ್ನು 29-27ರಿಂದ ಗೆದ್ದು ಮುಂದುವರಿದರು.

ಇದನ್ನೂ ಓದಿ: Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

ಭಜನ್​ಗೆ ಸೋಲು

ಇದಕ್ಕೂ ಮುನ್ನ ನಡೆದ ರೌಂಡ್ ಆಫ್ 16 ಪಂದ್ಯದಲ್ಲಿ ಇಂಡೋನೇಷ್ಯಾದ ಡಯಾನಂದಾ ಕೊಯಿರುನ್ನಿಸಾ ವಿರುದ್ಧ ರೋಚಕ ಶೂಟ್ ಆಫ್ ನಲ್ಲಿ ಭಜನ್ ಕೌರ್ ಗೆ ಹಿಡಿತ ಸಾಧಿಸಲು ಸಾಧ್ಯವಾಗಲಿಲ್ಲ. ಚೊಚ್ಚಲ ಒಲಿಂಪಿಕ್ ಪಂದ್ಯದಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡಿದ್ದ ಭಜನ್, ಹಿಂದಿನಿಂದ ಹೋರಾಡಿ 5-5ರ ಮುನ್ನಡೆ ಸಾಧಿಸಿದರು. ಆದಾಗ್ಯೂ, ಟೈ-ಬ್ರೇಕರ್​ನಲ್ಲಿ ಅವರು 8 ಅಂಕಗಳನ್ನು ಗಳಿಸಿ ಕೊಯಿರುನ್ನಿಸಾ ವಿರುದ್ಧ ಸೋತರು.

Continue Reading

ಪ್ರಮುಖ ಸುದ್ದಿ

Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

Mohammed Shami : ನಾನು ಯಾವಾಗ ಹಿಂತಿರುಗುತ್ತೇನೆ ಎಂದು ಹೇಳುವುದು ಕಷ್ಟ. ನಾನು ಕಠಿಣ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ನಾನು ಮತ್ತೆ ಭಾರತದ ಜೆರ್ಸಿ ಧರಿಸುವ ಮೊದಲು ನೀವು ನನ್ನನ್ನು ಬಂಗಾಳ ತಂಡದಲ್ಲಿ ನೋಡುತ್ತೀರಿ ಎಂದು ಭಾವಿಸುತ್ತೇನೆ. ನಾನು ಬಂಗಾಳ ಪರ ಎರಡು-ಮೂರು ಪಂದ್ಯಗಳನ್ನು ಆಡಲು ಸಿದ್ಧನಾಗಿದ್ದೇನೆ”ಎಂದು ಶಮಿ ಕೋಲ್ಕತ್ತಾದಲ್ಲಿ ಈಸ್ಟ್ ಬೆಂಗಾಲ್ ಕ್ಲಬ್ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಹೇಳಿದರು.

VISTARANEWS.COM


on

Koo

ನವದೆಹಲಿ: ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ (Mohammed Shami) ಅವರು ಭಾರತ ತಂಡಕ್ಕೆ ಮರಳುವ ಕುರಿತು ಇನ್ನೂ ಅನಿಶ್ಚಿತರಾಗಿದ್ದಾರೆ. ಯಾವ ಸರಣಿಗೆ ಅವರು ತಂಡ ಸೇರಿಕೊಳ್ಳುತ್ತಾರೆ ಎಂಬ ಸ್ಪಷ್ಟತೆ ಇಲ್ಲ. ಆದಾಗ್ಯೂ, ಶಮಿ ಭಾರತೀಯ ಜೆರ್ಸಿಯನ್ನು ತೊಡುವ ಮೊದಲು ದೇಶೀಯ ಕ್ರಿಕೆಟ್​ ಹಾದಿಯನ್ನು ಹಿಡಿಯಲಿದ್ದಾರೆ ಎಂಬುದಾಗಿ ವರದಿಯಾಗಿದೆ. ನವೆಂಬರ್ 19 ರಂದು ಅಹಮದಾಬಾದ್​​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್ 2023 ರ ಫೈನಲ್​​ನಲ್ಲಿ ಭಾರತದ ಹೃದಯ ವಿದ್ರಾವಕ ಸೋಲಿನ ನಂತರ ಶಮಿ ಆಟದಿಂದ ಹೊರಗುಳಿದಿದ್ದಾರೆ. ಅವರು ಫೆಬ್ರವರಿ 2024ರಲ್ಲಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದಿನಿಂದ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ನೆಟ್ಸ್​​ನಲ್ಲಿ ಬೌಲಿಂಗ್ ಮಾಡುತ್ತಾ ಸಂಪೂರ್ಣವಾಗಿ ಚೇತರಿಸಿಕೊಳ್ಳುವುದಕ್ಕೆ ಎದುರು ನೋಡುತ್ತಿದ್ದಾರೆ.

ನಾನು ಯಾವಾಗ ಹಿಂತಿರುಗುತ್ತೇನೆ ಎಂದು ಹೇಳುವುದು ಕಷ್ಟ. ನಾನು ಕಠಿಣ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ನಾನು ಮತ್ತೆ ಭಾರತದ ಜೆರ್ಸಿ ಧರಿಸುವ ಮೊದಲು ನೀವು ನನ್ನನ್ನು ಬಂಗಾಳ ತಂಡದಲ್ಲಿ ನೋಡುತ್ತೀರಿ ಎಂದು ಭಾವಿಸುತ್ತೇನೆ. ನಾನು ಬಂಗಾಳ ಪರ ಎರಡು-ಮೂರು ಪಂದ್ಯಗಳನ್ನು ಆಡಲು ಸಿದ್ಧನಾಗಿದ್ದೇನೆ”ಎಂದು ಶಮಿ ಕೋಲ್ಕತ್ತಾದಲ್ಲಿ ಈಸ್ಟ್ ಬೆಂಗಾಲ್ ಕ್ಲಬ್ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಹೇಳಿದರು.

ದೇಶೀಯ ಕ್ರಿಕೆಟ್​ನಲ್ಲಿ ಆಡಲು ಬಿಸಿಸಿಐ ಆದೇಶ

ಭಾರತ ತಂಡಕ್ಕೆ ಮರಳುವ ಸಲುವಾಗಿ ಭಾರತೀಯ ಆಟಗಾರರು ದೇಶೀಯ ಪಂದ್ಯಗಳನ್ನು ಆಡುವುದನ್ನು ಕಡ್ಡಾಯ ಎಂಬ ತನ್ನ ನಿಲುವನ್ನು ಬಿಸಿಸಿಐ ತನ್ನ ಸ್ಪಷ್ಟಪಡಿಸಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಎಲ್ಲಾ ಕ್ರಿಕೆಟಿಗರು ರಾಷ್ಟ್ರೀಯ ಕರ್ತವ್ಯಗಳಿಂದ ಮುಕ್ತರಾದಾಗಲೆಲ್ಲಾ ದೇಶೀಯ ಕ್ರಿಕೆಟ್ ಆಡುವಂತೆ ಬಿಸಿಸಿಐ ನಿರ್ದೇಶನ ನೀಡಿದೆ.

ಈ ಕ್ರಮವು ದೇಶೀಯ ಕ್ರಿಕೆಟ್ ಆಡುವ ಪ್ರಾಮುಖ್ಯತೆಯ ಬಗ್ಗೆ ಬಿಸಿಸಿಐನ ಗಮನವನ್ನು ಎತ್ತಿ ತೋರಿಸಿದೆ, ಇದು ಆಟಗಾರರ ಫಾರ್ಮ್ ಮತ್ತು ಫಿಟ್ನೆಸ್ ಅನ್ನು ಕಾಪಾಡಿಕೊಳ್ಳುವಲ್ಲಿ ನಿರ್ಣಾಯಕವಾಗಿದೆ. ಮುಂಬರುವ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತಯಾರಿ ನಡೆಸುವಂತೆ ಟೆಸ್ಟ್ ಸ್ಪೆಷಲಿಸ್ಟ್​​ಗಳಿಗೆ ನಿರ್ದೇಶನ ನೀಡಲಾಗಿದೆ.

ಶಮಿ ಚೇತರಿಕೆಯ ಹಾದಿ

ಐಪಿಎಲ್ 2024 ಮತ್ತು ಟಿ 20 ವಿಶ್ವಕಪ್ 2024ರಂತಹ ಪ್ರಮುಖ ಪಂದ್ಯಾವಳಿಗಳಿಗೆ ಮುಂಚಿತವಾಗಿ ಗಾಯವು ಇಷ್ಟು ಹದಗೆಡುತ್ತದೆ ಎಂದು ನಾನು ಊಹಿಸಿರಲಿಲ್ಲ ಎಂದು ಶಮಿ ಸಲಹೆ ನೀಡಿದರು.

ಇದನ್ನೂ ಓದಿ: MS Dhoni : ವಿರಾಟ್ ಕೊಹ್ಲಿ ಜತೆಗಿನದ ಸಂಬಂಧವನ್ನು ವಿವರಿಸಿದ ಕೂಲ್ ಕ್ಯಾಪ್ಟನ್​ ಮಹೇಂದ್ರ ಸಿಂಗ್ ಧೋನಿ

ಗಾಯವು ಇಷ್ಟು ಗಂಭೀರವಾಗಿರುತ್ತದೆ ಎಂದು ನಾವು ಎಂದಿಗೂ ಭಾವಿಸಿರಲಿಲ್ಲ. ಕಳೆದ ವರ್ಷದ ವಿಶ್ವಕಪ್ ನಂತರ ಐಪಿಎಲ್ ಮತ್ತು ಐಸಿಸಿ ಟಿ 20 ಮೆಗಾ ಈವೆಂಟ್ ಬಹುತೇಕ ಬ್ಯಾಕ್ ಟು ಬ್ಯಾಕ್ ಬಂದಿದ್ದರಿಂದ ಟಿ 20 ವಿಶ್ವಕಪ್ ನಂತರ ಅದನ್ನು ಪರಿಹರಿಸುವ ಯೋಜನೆ ಇತ್ತು”ಎಂದು ಶಮಿ ಹೇಳಿದರು.

ಆದರೆ ಏಕದಿನ ವಿಶ್ವಕಪ್ ಸಮಯದಲ್ಲಿಯೇ ಪರಿಸ್ಥಿತಿ ಹದಗೆಟ್ಟಿತು. ನೋವಿನೊಂದಿಗೆ ಆಡುವ ಅಪಾಯವನ್ನು ಎದುರಿಸುವುದು ನನಗೆ ಸರಿ ಎನಿಸಲಿಲ್ಲ. ಗಾಯವು ಇಷ್ಟು ಗಂಭೀರ ತಿರುವು ಪಡೆಯುತ್ತದೆ ಮತ್ತು ಗುಣವಾಗಲು ತುಂಬಾ ಸಮಯ ತೆಗೆದುಕೊಳ್ಳುತ್ತದೆ ಎಂದು ವೈದ್ಯರು ಸಹ ಊಹಿಸಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಶಮಿ ಜಿಟಿಗಾಗಿ ಐಪಿಎಲ್ 2024 ಅನ್ನು ತಪ್ಪಿಸಿಕೊಂಡಿದ್ದರು ಮತ್ತು ಭಾರತದ ಟಿ 20 ವಿಶ್ವಕಪ್ ವಿಜೇತ ಅಭಿಯಾನದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

Continue Reading

ಪ್ರಮುಖ ಸುದ್ದಿ

MS Dhoni : ವಿರಾಟ್ ಕೊಹ್ಲಿ ಜತೆಗಿನದ ಸಂಬಂಧವನ್ನು ವಿವರಿಸಿದ ಕೂಲ್ ಕ್ಯಾಪ್ಟನ್​ ಮಹೇಂದ್ರ ಸಿಂಗ್ ಧೋನಿ

MS Dhoni :ನಾವು ಬಹಳ ಸಮಯದಿಂದ ಭಾರತಕ್ಕಾಗಿ ಆಡಿದ ಸಹೋದ್ಯೋಗಿಗಳು. ವಿಶ್ವ ಕ್ರಿಕೆಟ್​ಗೆ ಬಂದಾಗ ಅವರು (ಕೊಹ್ಲಿ) ಅತ್ಯುತ್ತಮರಲ್ಲಿ ಒಬ್ಬರು. ನಾವು ಆಗಾಗ್ಗೆ ಭೇಟಿಯಾಗುವುದಿಲ್ಲ, ಆದರೆ ನಮಗೆ ಅವಕಾಶ ಸಿಕ್ಕಾಗಲೆಲ್ಲಾ, ಸ್ವಲ್ಪ ಸಮಯದವರೆಗೆ ಮಾತುಕತೆ ನಡೆಸುತ್ತೇವೆ ಎಂದು ಧೋನಿ ಹೇಳಿದ್ದಾರೆ. ಮುಂದೆ ಏನಾಗುತ್ತಿದೆ ಎಂಬುದರ ಬಗ್ಗೆ ನಾವು ಮಾತನಾಡುತ್ತೇವೆ. ಆದ್ದರಿಂದ ಅದು ನಮ್ಮ ಸಂಬಂಧ ಉತ್ತಮವಾಗಿತ್ತು, ಎಂದು ಧೋನಿ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

VISTARANEWS.COM


on

MS Dhoni
Koo

ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ವಿಕೆಟ್​ ಕೀಪರ್ ಬ್ಯಾಟರ್​ ಹಾಗೂ ಕೂಲ್ ಕ್ಯಾಪ್ಟನ್​ ಎಂ.ಎಸ್.ಧೋನಿ (MS Dhoni) ಇತ್ತೀಚೆಗೆ ಬ್ಯಾಟಿಂಗ್ ಸೂಪರ್​ಸ್ಟಾರ್​​ ವಿರಾಟ್ ಕೊಹ್ಲಿ ಅವರೊಂದಿಗಿನ ಸಂಬಂಧದ ಬಗ್ಗೆ ಒಳನೋಟಗಳನ್ನು ಹಂಚಿಕೊಂಡಿದ್ದಾರೆ. ಭಾರತವನ್ನು ಎರಡು ವಿಶ್ವಕಪ್ ವಿಜಯಗಳಿಗೆ ಮುನ್ನಡೆಸಿದ ಲೆಜೆಂಡರಿ ವಿಕೆಟ್ ಕೀಪರ್-ಬ್ಯಾಟರ್​​ ಯಾವಾಗಲೂ ತಮ್ಮ ಶಾಂತ ನಡವಳಿಕೆ ಮತ್ತು ಕಾರ್ಯತಂತ್ರದ ಪ್ರತಿಭೆಗೆ ಹೆಸರುವಾಸಿಯಾಗಿದ್ದಾರೆ. ಮತ್ತೊಂದೆಡೆ, ಕೊಹ್ಲಿ ಧೋನಿ ನಾಯಕತ್ವದಲ್ಲಿ ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್​ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದರು. ಅವರಿಬ್ಬರೂ ಏಕಕಾಲಕ್ಕೆ ಯಶಸ್ವಿನ ಉತ್ತುಂಗಕ್ಕೆ ಏರಿದ್ದರು. ಹೀಗಾಗಿ ಅವರ ನಡುವಿನ ಬಾಂಧವ್ಯ ಚರ್ಚೆಯ ವಿಷಯವೇ ಆಗಿದೆ.

ಅವರ ಒಟ್ಟಿಗೆ ಪ್ರಯಾಣವು ಒಂದು ದಶಕಕ್ಕೂ ಹೆಚ್ಚು ಕಾಲದ್ದು. ಅದರಲ್ಲೂ ಸ್ಮರಣೀಯ ಬ್ಯಾಟಿಂಗ್​ ಜತೆಯಾಟವನ್ನು ನೀಡಿದ್ದರು. ಅವರಿಬ್ಬರೂ ಗೆಲುವುಗಳಿಗಾಗಿ ಸಾಕಷ್ಟು ಹೋರಾಡಿದ್ದಾರೆ. ಇದೀಗ ಧೋನಿ. ಸಹ ಆಟಗಾರ ಕೊಹ್ಲಿಯ ಬಗ್ಗೆ ಹೊಂದಿರುವ ಗೌರವ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ನಾವು ಬಹಳ ಸಮಯದಿಂದ ಭಾರತಕ್ಕಾಗಿ ಆಡಿದ ಸಹೋದ್ಯೋಗಿಗಳು. ವಿಶ್ವ ಕ್ರಿಕೆಟ್​ಗೆ ಬಂದಾಗ ಅವರು (ಕೊಹ್ಲಿ) ಅತ್ಯುತ್ತಮರಲ್ಲಿ ಒಬ್ಬರು. ನಾವು ಆಗಾಗ್ಗೆ ಭೇಟಿಯಾಗುವುದಿಲ್ಲ, ಆದರೆ ನಮಗೆ ಅವಕಾಶ ಸಿಕ್ಕಾಗಲೆಲ್ಲಾ, ಸ್ವಲ್ಪ ಸಮಯದವರೆಗೆ ಮಾತುಕತೆ ನಡೆಸುತ್ತೇವೆ ಎಂದು ಧೋನಿ ಹೇಳಿದ್ದಾರೆ. ಮುಂದೆ ಏನಾಗುತ್ತಿದೆ ಎಂಬುದರ ಬಗ್ಗೆ ನಾವು ಮಾತನಾಡುತ್ತೇವೆ. ಆದ್ದರಿಂದ ಅದು ನಮ್ಮ ಸಂಬಂಧ ಉತ್ತಮವಾಗಿತ್ತು, ಎಂದು ಧೋನಿ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ವಿರಾಟ್ ಜೊತೆ ಬ್ಯಾಟಿಂಗ್ ಮಾಡುವುದು ಖುಷಿ :ಎಂಎಸ್ ಧೋನಿ

ವಿರಾಟ್​ ಕೊಹ್ಲಿ ಆನ್-ಫೀಲ್ಡ್ ಚಟುವಟಿಕೆಯನ್ನು ನೆನಪಿಸಿಕೊಂಡ ಧೋನಿ, ಅವರೊಂದಿಗಿನ ಮಧ್ಯಮ ಕ್ರಮಾಂಕದ ಬ್ಯಾಟಿಂಗ್​ ಪಾಲುದಾರಿಕೆಯನ್ನು ಸ್ಮರಿಸಿಕೊಂಡಿದ್ದಾರೆ. ಧೋನಿ ಅವರು ಕೊಹ್ಲಿಯೊಂದಿಗೆ ಬ್ಯಾಟಿಂಗ್ ಮಾಡುವುದನ್ನು ಆನಂದಿಸಿದ್ದಾರೆ. ಏಕೆಂದರೆ ಅವರು ಆಟದಲ್ಲಿ ಸಾಕಷ್ಟು ಬಾರಿ ಎರಡು ಮತ್ತು ಮೂರು ರನ್​ಗಳಿಗಾಗಿ ಓಡಿದ್ದರು.

ಮಧ್ಯಮ ಓವರ್​ನಲ್ಲಿ ನಾನು ಅವರೊಂದಿಗೆ ಸಾಕಷ್ಟು ಬ್ಯಾಟಿಂಗ್ ಮಾಡಬಲ್ಲೆ ಎಂಬ ಅಂಶವು ತುಂಬಾ ಮೋಜಿನ ಸಂಗತಿಯಾಗಿದೆ ಏಕೆಂದರೆ ನಾವು ಆಟದಲ್ಲಿ ಸಾಕಷ್ಟು ಎರಡು ಮತ್ತು ಮೂರು ರನ್​​ಗಳನ್ನು ತೆಗೆದುಕೊಳ್ಳುತ್ತಿದ್ದೆವು, ಆದ್ದರಿಂದ ಇದು ಯಾವಾಗಲೂ ಮೋಜಿನ ಸಂಗತಿಯಾಗಿತ್ತು ಎಂದು ಧೋನಿ ಹೇಳಿದ್ದಾರೆ.

ಇದನ್ನೂ ಓದಿ: Paris Olympics 2024 : ಪುರುಷ ಸ್ಪರ್ಧಿಯಿಂದ ಏಟು ತಿಂದ ಇಟಲಿಯ ಮಹಿಳಾ ಬಾಕ್ಸರ್​ಗೆ 41 ಲಕ್ಷ ಬಹುಮಾನ ಘೋ

ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್​​ನಲ್ಲಿ 76 ರನ್ ಗಳಿಸುವ ಮೂಲಕ ಕೊಹ್ಲಿ 2024 ರ ಟಿ 20 ವಿಶ್ವಕಪ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಈ ಗೆಲುವು ಕೊಹ್ಲಿ ಅವರ ​​ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿದೆ. ಧೋನಿ ನಂತರ ಎಲ್ಲಾ ಮೂರು ಐಸಿಸಿ ವೈಟ್-ಬಾಲ್ ಟ್ರೋಫಿಗಳನ್ನು ಗೆದ್ದ ಎರಡನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಯಶಸ್ವಿ ಮೊಣಕಾಲು ಶಸ್ತ್ರಚಿಕಿತ್ಸೆಯ ನಂತರ ಧೋನಿ ಕೊನೆಯ ಬಾರಿಗೆ ಐಪಿಎಲ್ 2024 ಋತುವಿನಲ್ಲಿ ಕಾಣಿಸಿಕೊಂಡಿದ್ದರು. ಅವರು 11 ಇನ್ನಿಂಗ್ಸ್ಗಳಲ್ಲಿ 53.66 ಸರಾಸರಿ ಮತ್ತು 220.54 ಸ್ಟ್ರೈಕ್ ರೇಟ್ನಲ್ಲಿ 161 ರನ್ ಗಳಿಸಿದ್ದಾರೆ, 37* ಅತ್ಯುತ್ತಮ ಸ್ಕೋರ್ ಮತ್ತು ಈ ಋತುವಿನಲ್ಲಿ ಒಟ್ಟು 14 ಬೌಂಡರಿಗಳು ಮತ್ತು 13 ಸಿಕ್ಸರ್​ಗಳನ್ನು ಗಳಿಸಿದ್ದಾರೆ.

Continue Reading
Advertisement
Yamini Krishnamurthy
ದೇಶ18 mins ago

Yamini Krishnamurthy: ಪದ್ಮವಿಭೂಷಣ ಪುರಸ್ಕೃತ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಇನ್ನಿಲ್ಲ

Namma Metro
ಪ್ರಮುಖ ಸುದ್ದಿ20 mins ago

Namma Metro: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

New National Cricket Academy
ಪ್ರಮುಖ ಸುದ್ದಿ39 mins ago

National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

UPSC Aspirant
ದೇಶ44 mins ago

UPSC Aspirant: ‘ನಾನು ಸತ್ರೆ ಬ್ರೇಕಿಂಗ್‌ ನ್ಯೂಸ್‌ ಆಗತ್ತೆ’ ಎಂದು ಬರೆದಿಟ್ಟು ಯುಪಿಎಸ್‌ಸಿ ಅಭ್ಯರ್ಥಿ ಆತ್ಮಹತ್ಯೆ!

PSI Parshuram Death Case
ಕರ್ನಾಟಕ51 mins ago

PSI Parashuram Case: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

Deepika Kumari
ಪ್ರಮುಖ ಸುದ್ದಿ58 mins ago

Deepika Kumari : ಪದಕದ ಭರವಸೆ ಮೂಡಿಸಿ ಬರಿಗೈಯಲ್ಲಿ ವಾಪಸಾದ ಆರ್ಚರ್​ ದೀಪಿಕಾ ಕುಮಾರಿ

Chandigarh Court
ದೇಶ2 hours ago

ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

karnataka weather forecast
ಮಳೆ2 hours ago

Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

2nd PUC Exam Result 2024
ಕರ್ನಾಟಕ2 hours ago

2nd PUC Exam Result 2024: ದ್ವಿತೀಯ ಪಿಯುಸಿ ಪರೀಕ್ಷೆ-1, 2, 3ರಲ್ಲಿ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು ಪಾಸ್; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

Moon
ದೇಶ3 hours ago

Moon: ಭೂಮಿಯಿಂದ ದೂರ ಹೊರಟ ಚಂದ್ರ, ಮುಂದೆ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ8 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌