IPL 2024 : ಮುಂಬೈ ತಂಡ ಬಿಟ್ಟ ಮರುದಿನವೇ ಮತ್ತೊಂದು ತಂಡ ಸೇರಿದ ಬೌಲಿಂಗ್ ಕೋಚ್​​ ಶೇನ್ ಬಾಂಡ್​ - Vistara News

ಕ್ರಿಕೆಟ್

IPL 2024 : ಮುಂಬೈ ತಂಡ ಬಿಟ್ಟ ಮರುದಿನವೇ ಮತ್ತೊಂದು ತಂಡ ಸೇರಿದ ಬೌಲಿಂಗ್ ಕೋಚ್​​ ಶೇನ್ ಬಾಂಡ್​

ಶೇನ್ ಬಾಂಡ್ ರಾಯಲ್ಸ್ ತಂಡದ ಸಹಾಯಕ ಮತ್ತು ಬೌಲಿಂಗ್ ತರಬೇತುದಾರರಾಗಿ ಮುಂದಿನ ಐಪಿಎಲ್​ನಲ್ಲಿ (IPL 2024) ಕಾರ್ಯ ನಿರ್ವಹಿಸಲಿದ್ದಾರೆ.

VISTARANEWS.COM


on

Shane Bond
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ ಋತುವಿಗೆ (IPL 2024) ಮುಂಚಿತವಾಗಿ ನ್ಯೂಜಿಲೆಂಡ್​​ನ ಮಾಜಿ ವೇಗದ ಬೌಲರ್ ಶೇನ್ ಬಾಂಡ್ ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದಾರೆ. ಬಾಂಡ್ ರಾಯಲ್ಸ್ ತಂಡದ ಸಹಾಯಕ ಮತ್ತು ಬೌಲಿಂಗ್ ತರಬೇತುದಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಬಾಂಡ್​ ಇದಕ್ಕಿಂತ ಮೊದಲು ಮುಂಬೈ ಇಂಡಿಯನ್ಸ್ ಪರ 9 ವರ್ಷಗಳ ದೀರ್ಘ ಕಾಲ ಸೇವೆ ಸಲ್ಲಿಸಿದ್ದರು.

ಅಕ್ಟೋಬರ್ 23 ರ ಸೋಮವಾರ ರಾಜಸ್ಥಾನ್ ರಾಯಲ್ಸ್ ತನ್ನ ಫ್ರಾಂಚೈಸಿಗೆ ಶೇನ್ ಬಾಂಡ್ ಸೇರುವುದಾಗಿ ಘೋಷಿಸಲಾಗಿದೆ.ಚ ವಿಶೇಷವೆಂದರೆ, ಸಂಜು ಸ್ಯಾಮ್ಸನ್ ನಾಯಕತ್ವದ ತಂಡಕ್ಕೆ ಬಾಂಡ್ ಬೌಲಿಂಗ್​ ತರಬೇತಿ ನೀಡಿದ್ದಾರೆ. ಅಂದ ಹಾಗೆ ಬಾಂಡ್​ಗಿಂತ ಮೊದಲು ಈ ಸ್ಥಾನದಲ್ಲಿ ಶ್ರೀಲಂಕಾ ತಂಡದ ಮಾಜಿ ವೇಗದ ಬೌಲರ್​​ ಲಸಿತ್​ ಮಾಲಿಂಗ ಇದ್ದರು. ಅವರು ಈಗ ಮುಂಬೈ ಇಂಡಿಯನ್ಸ್​ ತಂಡ ಸೇರಿಕೊಂಡಿದ್ದಾರೆ. ಮಾಲಿಂಗ ಮುಂಬೈ ತಂಡ ಸೇರುತ್ತಿದ್ದಂತೆ ಆ ಜಾಗವನ್ನು ಬಾಂಡ್ ಬಿಟ್ಟುಕೊಟ್ಟಿದ್ದರು. ಇದೀಗ ಮಾಲಿಂಗ ಬಿಟ್ಟಿರುವ ಜಾಗಕ್ಕೆ ಬಾಂಡ್​ ಸೇರಿಕೊಂಡಿದ್ದಾರೆ.

ಲಸಿತ್ ಮಾಲಿಂಗ ಐಪಿಎಲ್ 2022 ಮತ್ತು 2023ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೇಗದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಐಪಿಎಲ್ 2024 ಕ್ಕೆ ಮುಂಚಿತವಾಗಿ ಮಾಲಿಂಗ ಮುಂಬೈ ಇಂಡಿಯನ್ಸ್​ನಲ್ಲಿ ಬೌಲಿಂಗ್ ಕೋಚ್ ಹುದ್ದೆಯನ್ನು ವಹಿಸಿಕೊಂಡಿದ್ದಾರೆ. ಯಾಕೆಂದೆರೆ ಅವರು ಮುಂಬೈ ಇಂಡಿಯನ್ಸ್ ತಂಡದ ಜಾಗತಿಕ ಯೋಜನೆಯ ಭಾಗವಾಗಿದ್ದಾರೆ.

ಹಲವು ವರ್ಷ ಮುಂಬಯಿ ತಂಡದಲ್ಲಿದ್ದ ಬಾಂಡ್​

ಶೇನ್ ಬಾಂಡ್ 2015 ರಿಂದ 2023 ರವರೆಗೆ ಮುಂಬೈ ಇಂಡಿಯನ್ಸ್ ತಂಡದೊಂದಿಗೆ ಕೆಲಸ ಮಾಡಿದರು, 2015, 2017, 2019 ಮತ್ತು 2020 ರಲ್ಲಿ ಪ್ರಶಸ್ತಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಐಎಲ್ಟಿ 20 ರ ಉದ್ಘಾಟನಾ ಆವೃತ್ತಿಯಲ್ಲಿ ಬಾಂಡ್ ಎಂಐ ಎಮಿರೇಟ್ಸ್ ಫ್ರಾಂಚೈಸಿಯ ಮುಖ್ಯ ತರಬೇತುದಾರರಾಗಿಯೂ ಕೆಲಸ ಮಾಡಿದ್ದರು.

ಬಾಂಡ್​ ಅವರ ಮಾರ್ಗದರ್ಶನದಲ್ಲಿ, ಜಸ್ಪ್ರೀತ್ ಬುಮ್ರಾ, ಮಿಚೆಲ್ ಮೆಕ್ಲೆನಾಘನ್, ಟ್ರೆಂಟ್ ಬೌಲ್ಟ್ ಮತ್ತು ಹೆಚ್ಚಿನ ಪ್ರಸಿದ್ಧ ಹೆಸರುಗಳು ಸೇರಿದಂತೆ ಹಲವಾರು ವೇಗದ ಬೌಲರ್​ಗಳು ಟಿ 20 ಸ್ಪೆಷಲಿಸ್ಟ್​ಗಳಾಗಿ ಬೆಳೆದಿದ್ದರು. ಪ್ರಸಿದ್ಧ್ ಕೃಷ್ಣ, ನವದೀಪ್ ಸೈನಿ, ಸಂದೀಪ್ ಶರ್ಮಾ, ಕುಲದೀಪ್ ಸೇನ್, ಒಬೆಡ್ ಮೆಕಾಯ್, ಕೆಎಂ ಆಸಿಫ್ ಮತ್ತು ಕುಲದೀಪ್ ಯಾದವ್ ಸೇರಿದಂತೆ ವೇಗದ ಬೌಲರ್​ಗಳು ರಾಜಸ್ಥಾನ್​ ತಂಡದಲ್ಲಿದ್ದು ಅವರೆಲ್ಲರೂ ಇನ್ನು ಮುಂದೆ 48 ವರ್ಷದ ಬಾಂಡ್​ ನೇತೃತ್ವದಲ್ಲಿ ಪಳಗಲಿದ್ದಾರೆ.

ಇದನ್ನೂ ಓದಿ : Bishan Singh Bedi : ಭಾರತ ತಂಡದ ಮಾಜಿ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ ನಿಧನ

ಐಪಿಎಲ್ 2024 ಕ್ಕೆ ಮುಂಚಿತವಾಗಿ ರಾಜಸ್ಥಾನ್ ರಾಯಲ್ಸ್​ನಂಥ ಮುಂದಾಲೋಚನೆಯ ಫ್ರಾಂಚೈಸಿಗೆ ಸೇರಲು ಉತ್ಸುಕನಾಗಿದ್ದೇನೆ ಎಂದು ಶೇನ್ ಬಾಂಡ್ ಹೇಳಿದ್ದಾರೆ. ರಾಜಸ್ಥಾನ್ ರಾಯಲ್ಸ್ ಕ್ರಿಕೆಟ್ ನಿರ್ದೇಶಕ ಕುಮಾರ್ ಸಂಗಕ್ಕಾರ ಅವರು ಶೇನ್ ಬಾಂಡ್ ಅವರ ನೇಮಕವನ್ನು ಸ್ವಾಗತಿಸಿದ್ದಾರೆ. ಅವರ ಅನುಭವವು ರಾಯಲ್ಸ್​ನ ಯುವ ವೇಗದ ಬೌಲರ್​ಗಳಿಗೆ ಅನುಕೂಲ ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.

ಶೇನ್ ಆಧುನಿಕ ಕ್ರಿಕೆಟ್​​ನ ಶ್ರೇಷ್ಠ ವೇಗದ ಬೌಲರ್​ಗಳಲ್ಲಿ ಒಬ್ಬರು. ಕೆಲವು ಅತ್ಯುತ್ತಮ ಆಟಗಾರರಿಗೆ ಮಾರ್ಗದರ್ಶನ ನೀಡಿದ ಅನುಭವ ಮತ್ತು ಜ್ಞಾನದ ಸಂಪತ್ತನ್ನು ತಮ್ಮೊಂದಿಗೆ ತರಲಿದ್ದಾರೆ. ಅವರು ಐಪಿಎಲ್ ಮತ್ತು ಭಾರತದಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಫ್ರಾಂಚೈಸಿ ವ್ಯವಸ್ಥೆಯಲ್ಲಿ ಒಳಗೊಂಡಿರುವ ಪ್ರಕ್ರಿಯೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದಾರೆ. ನಮ್ಮನ್ನು ಪ್ರಶಸ್ತಿ ವಿಜೇತ ತಂಡವಾಗಿ ರೂಪಿಸುವಲ್ಲಿ ಅವರು ಬೀರಬಹುದಾದ ಪರಿಣಾಮವನ್ನು ನೋಡಲು ಎದುರು ನೋಡುತ್ತಿದ್ದೇವೆ” ಎಂದು ಸಂಗಕ್ಕಾರ ಹೇಳಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Team India’s Victory Parade:ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

VISTARANEWS.COM


on

Team India's Victory Parade
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ನಿನ್ನೆ(ಗುರುವಾರ) ಮುಂಬೈಯಲ್ಲಿ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ತಂಡದ ಈ ವಿಜಯೋತ್ಸವದ(Team India’s Victory Parade) ವೇಳೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಪೈಕಿ ಕೆಲವರಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ಇದೀಗ ವರದಿಯಾಗಿವೆ. ಸದ್ಯದ ಮಾಹಿತಿ ಪ್ರಕಾರ 11 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಮಹಿಳೆಯೊಬ್ಬರು ಉಸಿರಾಟ ಸಮಸ್ಯೆಗೆ ಸಿಲುಕಿ ಬಳಿಕ ಪೊಲೀಸ್​ ಅಧಿಕಾರಿಯೊಬ್ಬರು ಮಹಿಳೆಯನ್ನು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ ದೃಶ್ಯ ಕೂಡ ವೈರಲ್​ ಆಗಿದೆ. ಒಟ್ಟು 9 ಮಂದಿ ಉಸಿರಾಟದ ಸಮಸ್ಯೆಗೆ ಸಿಲುಕಿ ಇಲ್ಲಿನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

17 ವರ್ಷಗಳ ಬಳಿಕ 2ನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆಟಗಾರರು ಬಂದೊಡನೆಯೇ ಕ್ರಿಕೆಟ್‌ ಪ್ರೇಮಿಗಳ ಜಯಘೋಷ ಮೊಳಗಿತು. ಅಭಿಮಾನಿಗಳ ಅಬ್ಬರಕ್ಕೆ ಅರಬ್ಬಿ ಸಮುದ್ರ ಕೂಡ ಒಂದು ಕ್ಷಣ ಸ್ಥಬ್ಧವಾಗಿತ್ತು. ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

ಜೂನ್ 29ರಂದು ಬಾರ್ಬಾಡೋಸ್‌ನಲ್ಲಿ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಎದುರು ಜಯಿಸಿತ್ತು. ಆದರೆ ಕೆರೀಬಿಯನ್ ದ್ವೀಪದಲ್ಲಿ ಚಂಡಮಾರುತ ಬೀಸಿದ್ದ ಕಾರಣ ವಿಮಾನಯಾನ ಸೌಲಭ್ಯ ರದ್ದಾಗಿತ್ತು. ಆದ್ದರಿಂದ ಬುಧವಾರದವರೆಗೂ ತಂಡವು ಬಾರ್ಬಾಡೋಸ್‌ನಲ್ಲಿಯೇ ಉಳಿದಿತ್ತು.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

Continue Reading

ಕ್ರೀಡೆ

IND vs ZIM: ನಾಳೆಯಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ; ಯುವ ಪಡೆಗೆ ಸ್ಫೂರ್ತಿಯಾಗಲಿ ಟಿ20 ವಿಶ್ವಕಪ್​ ಗೆಲುವು

IND vs ZIM:ಜಿಂಬಾಬ್ವೆ ವಿರುದ್ಧ ಭಾರತ ಅಜೇಯವಲ್ಲ. 2 ಸೋಲು ಕೂಡ ಕಂಡಿದೆ. ಅನುಭವಿ ಆಲ್​ರೌಂಡರ್​ ಹಾಗೂ ನಾಯಕನಾಗಿರುವ ಸಿಕಂದರ್​ ರಾಜಾ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಯಂಗ್​ ಟೀಮ್​ ಇಂಡಿಯಾ ಆಟಗಾರರ ಎಚ್ಚರಿಕೆಯಿಂದ ಆಡಬೇಕು.

VISTARANEWS.COM


on

IND vs ZIM
Koo

ಹರಾರೆ: ಇದುವರೆಗೂ ಟಿ20 ವಿಶ್ವಕಪ್​ ಗೆಲುವಿನ ಗುಂಗಿನಲ್ಲಿದ್ದ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಇನ್ನು ನಾಳೆಯಿಂದ(ಶನಿವಾರ) ಆರಂಭಗೊಳ್ಳುವ ಜಿಂಬಾಬ್ವೆ ಮತ್ತು ಭಾರತ(IND vs ZIM) ನಡುವಣ ಟಿ20(
Zimbabwe vs India) ಸರಣಿಯತ್ತ ಗಮನ ಹರಿಸಲಿದ್ದಾರೆ. ಹರಾರೆಯಲ್ಲಿ ಇತ್ತಂಡಗಳ ಮೊದಲ ಪಂದ್ಯ ನಡೆಯಲಿದೆ. ಯುವ ಪಡೆಯನ್ನೇ ನೆಚ್ಚಿಕೊಂಡಿರುವ ಶುಭಮನ್​ ಗಿಲ್(shubman gill)​ ಸಾರಥ್ಯದ ಟೀಮ್​ ಇಂಡಿಯಾ ಹೇಗೆ ಪ್ರದರ್ಶನ ತೋರಲಿದೆ ಎನ್ನುವುದು ಈ ಸೆರಣಿಯ ಕೌತುಕ.

ಈಗಾಗಲೇ ಹಿರಿಯ ಆಟಗಾರರಾದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಟಿ20 ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದಾರೆ. ಮುಂದಿನ ವರ್ಷ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಕೂಡ ನಡೆಯಲಿದೆ. ಇದು ಟಿ20 ಸ್ವರೂಪದಲ್ಲಿಯೇ ನಡೆಯಲಿದೆ. ಜತೆಗೆ 2026ರಲ್ಲಿ ಟಿ20 ವಿಶ್ವಕಪ್​ ಕೂಡ ನಡೆಯಲಿದೆ. ಈ ಟೂರ್ನಿಗೆ ತಂಡವನ್ನು ರಚಿಸಲು ಬಿಸಿಸಿಐ ಸಿದ್ಧತೆ ಆರಂಭಿಸಿದೆ. ಇದೀಗ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಸಿಕ್ಕ ಅವಕಾಶವನ್ನು ಯುವ ಆಟಗಾರರು ಸರಿಯಾಗಿ ಬಳಸಿಕೊಂಡರೆ ಭಾರತ ಸೀನಿಯರ್​ ತಂಡದಲ್ಲಿ ಆಡುವ ಅವಕಾಶ ಪಡೆಯಬಹುದು. ಹೀಗಾಗಿ ಎಲ್ಲ ಆಟಗಾರರು ಶ್ರೇಷ್ಠ ಪ್ರದರ್ಶನ ತೋರಬೇಕು.

ರೋಹಿತ್​ ನಿವೃತ್ತಿಯಿಂದ ತೆರವಾದ ಟಿ20 ತಂಡದ ನಾಯಕತ್ವಕ್ಕೆ ಈಗಾಗಲೇ ಹಾರ್ದಿಕ್​ ಹೆಸರು ಕೇಳಿ ಬಂದಿದೆ. ಜಿಂಬಾಬ್ವೆ ಸರಣಿಯಲ್ಲಿ ತಂಡ ಮುನ್ನಡೆಸುತ್ತಿರುವ ಶುಭಮನ್​ ಗಿಲ್​ ಈ ಸರಣಿಯಲ್ಲಿ ಯಶಸ್ವಿಯಾದರೆ ಮುಂದಿನ ದಿನದಲ್ಲಿ ನಾಯಕನಾಗುವ ಸಾಧ್ಯತೆಯೂ ಇದೆ. ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಪರ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಮಳೆಯನ್ನೇ ಸುರಿಸಿದ್ದ ಎಡಗೈ ಬ್ಯಾಟರ್​ ಅಭಿಷೇಕ್​ ಶರ್ಮ ಬ್ಯಾಟಿಂಗ್​ ಪ್ರದರ್ಶನದ ಮೇಕೆಯೂ ಬಹಳ ನಿರೀಕ್ಷೆ ಇದೆ. ಒಟ್ಟಾರೆ ಈ ಸರಣಿಯಲ್ಲಿ ಆಟಗಾರರು ತೋರುವ ಪ್ರದರ್ಶನದಲ್ಲಿ ಅವರ ಮುಂದಿನ ಕ್ರಿಕೆಟ್​ ಭವಿಷ್ಯ ಅಡಗಿದೆ ಎನ್ನಲಡ್ಡಿಯಿಲ್ಲ.

ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

ಜಿಂಬಾಬ್ವೆ ಕೂಡ ಬಲಿಷ್ಠ


ಜಿಂಬಾಬ್ವೆ ವಿರುದ್ಧ ಭಾರತ ಅಜೇಯವಲ್ಲ. 2 ಸೋಲು ಕೂಡ ಕಂಡಿದೆ. ಅನುಭವಿ ಆಲ್​ರೌಂಡರ್​ ಹಾಗೂ ನಾಯಕನಾಗಿರುವ ಸಿಕಂದರ್​ ರಾಜಾ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದಾರೆ. ಜತೆಗೆ ತಂಡದ ನೂತನ ಕೋಚ್​ ಆಗಿರುವ ಜಸ್ಟಿನ್‌ ಸ್ಯಾಮ್ಸನ್‌ ಅವರ ಮಾರ್ಗದರ್ಶನ ಕೂಡ ತಂಡಕ್ಕೆ ನೆರವಾಗಬಹುದು. ಹೀಗಾಗಿ ಭಾರತ ಎಚ್ಚರಿಕೆಯಿಂದ ಆಡಬೇಕು.

ಮುಖಾಮುಖಿ


ಭಾರತ ಮತ್ತು ಜಿಂಬಾಬ್ವೆ ಇದುವರೆಗೆ ಒಟ್ಟು 8 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 6 ಪಂದ್ಯ ಗೆದ್ದಿದ್ದರೆ, ಜಿಂಬಾಬ್ವೆ 2 ಪಂದ್ಯ ಗೆದ್ದಿದೆ. ಕೊನೆಯ ಬಾರಿ ಇತ್ತಂಡಗಳು ಆಡಿದ್ದು 2022ರಲ್ಲಿ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ. ಈ ಪಂದ್ಯವನ್ನು ಭಾರತ 71 ರನ್​ ಅಂತರದಿಂದ ಗೆದ್ದು ಬೀಗಿತ್ತು.

ಭಾರತ ತಂಡ

ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

ವೇಳಾಪಟ್ಟಿ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

3ನೇ T20: ಜುಲೈ 10, ಹರಾರೆ, ಸಂಜೆ 4.30

4ನೇ T20: ಜುಲೈ 13, ಹರಾರೆ, ಸಂಜೆ 4.30

5 ನೇ T20: ಜುಲೈ 14, ಹರಾರೆ, ಸಂಜೆ 4.30

Continue Reading

ಕ್ರೀಡೆ

Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

Jay Shah: ವಿರಾಟ್​ ಕೊಹ್ಲಿ ಅವರು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕಳೆದ 15 ವರ್ಷಗಳಲ್ಲಿ ರೋಹಿತ್ ಶರ್ಮಾ ಅವರನ್ನು ಇಷ್ಟೊಂದು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದರು.

VISTARANEWS.COM


on

Jay Shah
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದು ತವರಿಗೆ ಮರಳಿದ ಟೀಮ್ ಇಂಡಿಯಾ(Team India) ಆಟಗಾರರಿಗೆ ನಿನ್ನೆ)ಗುರುವಾರ) ಮುಂಬೈಯಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು. ಮುಂಬೈಯಲ್ಲಿ ಒಂದು ರೀತಿಯ ಹಬ್ಬದ ವಾತಾವರಣವೇ ಸೃಷ್ಟಿಯಾಗಿತ್ತು. ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳ ಮಧ್ಯೆ ತೆರೆದ ಬಸ್‌ನಲ್ಲಿ ಆಟಗಾರರರನ್ನು ಮೆರವಣಿಗೆ ಮಾಡಿ ವಾಂಖೆಡೆ ಮೈದಾನದಲ್ಲೂ ಸಂಭ್ರಮ ಆಚರಿಸಲಾಯಿತು. ಈ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಅವರು ವಿರಾಟ್​ ಕೊಹ್ಲಿಗೆ(virat kohli) ಹಸ್ತಲಾಘವ ನೀಡಿದ ಬಳಿಕವೂ ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತು ಮೈಮರೆತ ವಿಡಿಯೊವೊಂದು ವೈರಲ್​ ಆಗಿದೆ.

ಮೋದಿ ಭೇಟಿ ಬಳಿಕ ಟೀಮ್​ ಇಂಡಿಯಾ ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಮಾಡಲಾಯಿತು. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಯಿತು. ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಚೆಕ್‌ ವಿತರಣೆಯ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿದ್ದ ಬಿಸಿಸಿಐ ಅಧಿಕಾರಿಗಳಿಗೆ ಆಟಗಾರರು ಹಸ್ತಲಾಘವ ನೀಡುವ ಮೂಲಕ ಗೌರವ ಸೂಚಿಸಿದರು. ಎಲ್ಲ ಆಟಗಾರರಂತೆ ಕೊಹ್ಲಿ ಕೂಡ ಸರತಿ ಸಾಲಿನಲ್ಲಿ ಅಧಿಕಾರಿಗಳ ಕೈ ಕುಲುಕಿ ಮುಂದೆ ಸಾಗಿದರು. ಈ ವೇಳೆ ಜಯ್​ ಶಾ, ಕೊಹ್ಲಿ ಕೈ ಕುಲುಕಿದ ಬಳಿಕ ಕೊಹ್ಲಿಯನ್ನೇ ನೋಡುವುದರಲ್ಲೇ ಮಗ್ನರಾದರು. ನಂತರ ಬಂದ ಆಟಗಾರರಿಗೆ ಕೈ ಕುಲುಕುವುದನ್ನೇ ಮರೆತುಬಿಟ್ಟರು. ಈ ವಿಡಿಯೊ ವೈರಲ್​ ಆಗಿದೆ. ಜಯ್​ ಶಾ ಅವರು ಕೊಹ್ಲಿಯನ್ನೇ ನೋಡುತ್ತಾ ನಿಂತಿದ್ದು ಯಾಕೆ ಎಂಬ ಬಗ್ಗೆ ನೆಟ್ಟಿಗರು ಚರ್ಚೆ ನಡೆಸಲಾರಂಭಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟ್ರೋಫಿ ವೇಳೆ ಸರಣಿ ಶ್ರೇಷ್ಠ ಪ್ರಶಸ್ತಿ ಸ್ವಿಕರಿಸುವಾಗ ಕೊಹ್ಲಿ ಜಯ್​ ಶಾ ಮುಖವನ್ನು ಕೂಡ ನೋಡದೆ ನೇರವಾಗಿ ಬಂದಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು. ಯಾರಿಗೆ ಗೌರವ ನೀಡಬೇಕು ಮತ್ತು ನೀಡಬಾರದು ಎಂಬುದು ಕಿಂಗ್​ ಕೊಹ್ಲಿಗೆ ತಿಳಿದಿದೆ ಎಂಬುದಾಗಿ ಕೊಹ್ಲಿ ಅಭಿಮಾನಿಗಳು ಈ ವಿಡಿಯೊಗೆ ಕಮೆಂಟ್​ ಮಾಡಿದ್ದರು.

15 ವರ್ಷಗಳಲ್ಲಿ ರೋಹಿತ್‌ರನ್ನು ಇಷ್ಟು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕಳೆದ 15 ವರ್ಷಗಳಲ್ಲಿ ರೋಹಿತ್ ಶರ್ಮಾ ಅವರನ್ನು ಇಷ್ಟೊಂದು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದರು. ನಾವು ಕೆನ್ಸಿಂಗ್ಟನ್ ಓವಲ್‌ನಲ್ಲಿ ಮೆಟ್ಟಿಲುಗಳನ್ನು ಹತ್ತುವಾಗ ಅಳುತ್ತಿದ್ದೆವು. 2011ರಲ್ಲಿ ಇದೇ ಮೈದಾನದಲ್ಲಿ ಏಕದಿನ ವಿಶ್ವಕಪ್ ಗೆಲುವಿನ ಬಳಿಕ ಅಂದು ಹಿರಿಯ ಆಟಗಾರರು ಭಾವುಕರಾಗಿದ್ದಾಗ ಅವರ ಭಾವನೆಗಳನ್ನು ಅಷ್ಟೊಂದು ಆಳವಾಗಿ ಗ್ರಹಿಸಲು ಸಾಧ್ಯವಾಗಿರಲಿಲ್ಲ. ಆದರೆ ನನಗೀಗ ಎಲ್ಲವೂ ಅರ್ಥವಾಗುತ್ತಿದೆ’ ಎಂದು ಹೇಳಿದರು.

Continue Reading

ಕ್ರಿಕೆಟ್

Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

Team India: ಕೆಲ ನೆಟ್ಟಿಗರು, ಆಸೀಸ್​​ಗೆ ಇದೊಂದು ಮುಖ್ಯ ವಿಷಯವಲ್ಲ. , ಅವರು ನಮ್ಮಂತೆ ಭಾವನಾತ್ಮಕ ವಿಷಯಗಳನ್ನು ನೋಡುವುದಿಲ್ಲ. ಈ ಬಗ್ಗೆ ಚರ್ಚಿಸಿ ಪ್ರಯೋಜನವಿಲ್ಲ. ಚಿಂತಿಸಲು ಹಲವಾರು ವಿಷಯಗಳಿವೆ ಎಂದು ಹೇಳಿದ್ದಾರೆ.

VISTARANEWS.COM


on

Team India
Koo

ಮುಂಬಯಿ: ಕಳೆದ ವರ್ಷ ಭಾರತದ(Team India) ಆತಿಥ್ಯದಲ್ಲಿ ನಡೆದ 13ನೇ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಆತಿಥೇಯ ಟೀಮ್ ಇಂಡಿಯಾವನ್ನು 6 ವಿಕೆಟ್​ಗಳಿಂದ ಮಣಿಸಿದ ಆಸ್ಟ್ರೇಲಿಯಾ 6ನೇ ಏಕದಿನ ವಿಶ್ವಕಪ್​ ಗೆದ್ದು ಸಂಭ್ರಮಿಸಿತ್ತು. ಈ ಐತಿಹಾಸಿಕ ಸಾಧನೆ ಬಳಿಕ ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌(Mitchell Marsh) ಡ್ರೆಸ್ಸಿಂಗ್​ ರೋಮ್​ನಲ್ಲಿ ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸಿದ್ದರು. ಮಾರ್ಷ್​ ಅವರ ಈ ದುರ್ವರ್ತನೆಗೆ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಕೆಲವರು ಮಾರ್ಷ್ ವಿರುದ್ಧ ಆರ್‌ಟಿಐ ಕಾರ್ಯಕರ್ತನೊಬ್ಬ ಉತ್ತರ ಪ್ರದೇಶದಲ್ಲಿ ಎಫ್‌ಐಆರ್‌ ದಾಖಲಿಸಿದ್ದರು.

ಇದೀಗ ಭಾರತ ತಂಡ ಟಿ20 ವಿಶ್ವಕಪ್​ ಗೆದ್ದ ತವರಿಗೆ ಮರಳಿದ ವೇಳೆ ಆಟಗಾರರಿಗೆ ಸಿಕ್ಕ ಸ್ವಾಗತ ಮತ್ತು ಆಟಗಾರರು ಟ್ರೋಫಿಗೆ ನೀಡಿದ ಗೌರವವನ್ನು ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಕೊಂಡಾಡಿದ್ದಾರೆ. ಇದು ನೈಜ ಮತ್ತು ನಮ್ಮ ದೇಶದ ಸಂಸ್ಕೃತಿ ಎಂದು ಮಾರ್ಷ್​ಗೆ ಮತ್ತು ಆಸೀಸ್​ ಆಟಗಾರರಿಗೆ ಟಾಂಗ್​ ಕೊಟ್ಟಿದ್ದಾರೆ.

ಆಟಗಾರರ ತ್ಯಾಗ ಮತ್ತು ಪರಿಶ್ರಮದ ಫಲವಾಗಿ ಭಾರತಕ್ಕೆ ವಿಶ್ವಕಪ್​ ಟ್ರೋಫಿ ದೊರಕಿದೆ. ಭಾರತೀಯ ಆಟಗಾರರು ಸರಿಯಾದ ಕ್ರಮದಲ್ಲೇ ಈ ಟ್ರೋಫಿಗೆ ಗೌರವ ಸೂಚಿಸಿದ್ದಾರೆ. ಕಳೆದ ಬಾರಿ ಟ್ರೋಫಿ ಮೇಲೆ ಕಾಲಿಟ್ಟ ಆಸೀಸ್​ ತಂಡ ತನಗಿಂತ ಕೆಲ ಕ್ರಮಾಂಕದ ತಂಡದ ವಿರುದ್ಧ ಕೂಡ ಸೋಲಿನ ಅವಮಾನ ಎದುರಿಸಿತು. ನಿಮ್ಮ ಈ ಸೋಲಿಗೆ ಅಂದು ತೋರಿದ ದರ್ಪವೇ ಕಾರಣ ಎಂದು ನೆಟ್ಟಿಗರು ಆಸೀಸ್​ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ.

ಇದನ್ನೂ ಓದಿ Team India: ಟೀಮ್​ ಇಂಡಿಯಾ ಬಳಿ ಇರುವುದು ನಕಲಿ ವಿಶ್ವಕಪ್​ ಟ್ರೋಫಿ; ಅಸಲಿ ಟ್ರೋಫಿ ಎಲ್ಲಿದೆ?

ಗುರುವಾರ ವಿಶ್ವಕಪ್​ ವಿಜೇತ ತಂಡದ ಆಟಗಾರರನ್ನು ಅಭಿನಂದಿಸುವ(Team India victory parade) ಸಲುವಾಗಿ ಮುಂಬೈಯ ಮರೀನ್ ಡ್ರೈವ್‌ ಪ್ರದೇಶದಲ್ಲಿ ಸೇರಿದ ಅಭಿಮಾನಿಗಳನ್ನು(Team India fans) ಕಾಣುವಾಗ ಅರಬ್ಬಿ ಸಮುದ್ರವೇ ನಾಚಿ ನೀರಾಗುವಷ್ಟು ಕ್ರಿಕೆಟ್‌ ಪ್ರೀತಿಯ ಸಾಗರ ಉಕ್ಕೇರಿತ್ತು.

ನಾಯಕ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಎಲ್ಲ ಆಟಗಾರರು ವಿಶ್ವಕಪ್​ ಟ್ರೋಫಿಗೆ ಮುತ್ತಿಕ್ಕುವ ಮೂಲಕ ಗೌರವ ಸೂಚಿಸುತ್ತಿರುವ ವಿಡಿಯೊ ಮತ್ತು ಫೋಟೊಗಳನ್ನು ನೆಟ್ಟಿಗರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಮಾರ್ಷ್​ಗೆ ತಿರುಗೇಟು ನೀಡಿದ್ದಾರೆ.

ಕೆಲ ನೆಟ್ಟಿಗರು, ಆಸೀಸ್​​ಗೆ ಇದೊಂದು ಮುಖ್ಯ ವಿಷಯವಲ್ಲ. , ಅವರು ನಮ್ಮಂತೆ ಭಾವನಾತ್ಮಕ ವಿಷಯಗಳನ್ನು ನೋಡುವುದಿಲ್ಲ. ಈ ಬಗ್ಗೆ ಚರ್ಚಿಸಿ ಪ್ರಯೋಜನವಿಲ್ಲ. ಚಿಂತಿಸಲು ಹಲವಾರು ವಿಷಯಗಳಿವೆ ಎಂದು ಹೇಳಿದ್ದಾರೆ.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತ್ತು.

Continue Reading
Advertisement
Team India's Victory Parade
ಕ್ರಿಕೆಟ್27 seconds ago

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Viral News
Latest5 mins ago

Viral News: ಕಾಮ ದಾಹ ತಣಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಶಿಕ್ಷಕಿಗೆ ಶಿಕ್ಷೆ

Dengue Fever
ಕರ್ನಾಟಕ19 mins ago

Dengue Fever: ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

Fire accident
ದೇಶ30 mins ago

Fire accident: ಮಾಲ್‌ನಲ್ಲಿ ಭೀಕರ ಅಗ್ನಿ ಅವಘಡ; ಭಾರೀ ಸಾವು-ನೋವಿನ ಶಂಕೆ

Rashmika Mandanna Kubera interesting first look
ಕಾಲಿವುಡ್36 mins ago

Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

IND vs ZIM
ಕ್ರೀಡೆ38 mins ago

IND vs ZIM: ನಾಳೆಯಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ; ಯುವ ಪಡೆಗೆ ಸ್ಫೂರ್ತಿಯಾಗಲಿ ಟಿ20 ವಿಶ್ವಕಪ್​ ಗೆಲುವು

Edu Guide
ಶಿಕ್ಷಣ49 mins ago

Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

Prajwal Revanna case Three FIRs against Prajwal Wanted list in all three
ಕ್ರೈಂ52 mins ago

Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್

Biometric Attendance
ಬೆಂಗಳೂರು1 hour ago

Biometric Attendance: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

Vinay Rajkumar wedding pictures swathishta krishnan have gone viral
ಸ್ಯಾಂಡಲ್ ವುಡ್1 hour ago

Vinay Rajkumar: ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ರ ವಿನಯ್ ರಾಜ್ ಕುಮಾರ್? ದೊಡ್ಮನೆ ಫ್ಯಾನ್ಸ್‌ಗೆ ಶಾಕ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant attack in Hassan and Chikmagalur
ಹಾಸನ1 hour ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು2 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು3 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ7 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ21 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ22 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ24 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ1 day ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಟ್ರೆಂಡಿಂಗ್‌