Shikhar Dhawan: ಗಾಯಗೊಂಡ ಶಿಖರ್​ ಧವನ್​ ಕೆಲವು ಪಂದ್ಯಗಳಿಗೆ ಅನುಮಾನ - Vistara News

ಕ್ರೀಡೆ

Shikhar Dhawan: ಗಾಯಗೊಂಡ ಶಿಖರ್​ ಧವನ್​ ಕೆಲವು ಪಂದ್ಯಗಳಿಗೆ ಅನುಮಾನ

Shikhar Dhawan: ಸದ್ಯ ಪಂಜಾಬ್​ ಆಡಿದ 6 ಪಂದ್ಯಗಳಲ್ಲಿ ಕೇವಲ 2 ಪಂದ್ಯ ಗೆದ್ದು 4 ಅಂಕದೊಂದಿಗೆ 8ನೇ ಸ್ಥಾನಿಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಪಂಜಾಬ್​ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಪಂಜಾಬ್​ ಪ್ಲೇ ಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ. ಪಂಜಾಬ್​ ಮುಂದಿನ ಪಂದ್ಯದಲ್ಲಿ ಏಪ್ರಿಲ್​ 18ರಂದು ಮುಂಬಯಿ ಇಂಡಿಯನ್ಸ್​​ ವಿರುದ್ಧ ಆಡಿಲಿದೆ.

VISTARANEWS.COM


on

Shikhar Dhawan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೊಹಾಲಿ: ಪಂಜಾಬ್ ಕಿಂಗ್ಸ್(Punjab Kings)​ ತಂಡಕ್ಕೆ ಸೋಲಿನ ಆಘಾತದ ಬೆನ್ನಲ್ಲೇ ಮತ್ತೊಂದು ಹಿನ್ನಡೆ ಉಂಟಾಗಿದೆ. ತಂಡದ ನಾಯಕ ಶಿಖರ್​ ಧವನ್​(Shikhar Dhawan) ಅವರು ಗಾಯದಿಂದಾಗಿ ಇನ್ನೂ ಕೆಲ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಭುಜದ ನೋವಿನಿಂದ ಬಳಲುತ್ತಿರುವ ಧವನ್ ಶನಿವಾರ ನಡೆದ ರಾಜಸ್ಥಾನ ರಾಯಲ್ಸ್( ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಅವರ ಅನುಪಸ್ಥಿತಿಯಲ್ಲಿ ಸ್ಯಾಮ್ ಕರನ್​ ತಂಡವನ್ನು ಮುನ್ನಡೆಸಿದ್ದರು.

‘ಶಿಖರ್​ ಧವನ್​ ಚೇತರಿಕೆಗೆ ಇನ್ನೂ ಕನಿಷ್ಠ 10 ದಿನಗಳ ವಿಶ್ರಾಂತಿ ಬೇಕಾಗಿದೆ. ಹೀಗಾಗಿ ಮುಂದಿನ ಕೆಲ ಪಂದ್ಯಗಳಿಗೆ ಅವರು ಅಲಭ್ಯರಾಗಲಿದ್ದಾರೆ’ ಎಂದು ತಂಡದ ಮೂಲಗಳು ತಿಳಿಸಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ. ತಂಡದ ನಿರ್ದೇಶಕ ಸಂಜಯ್ ಬಂಗಾರ್ ಕೂಡ “ಧವನ್ ಗಾಯದ ಬಗ್ಗೆ ಮಾಹಿತಿ ನೀಡಿದ್ದು, ಭುಜದ ಗಾಯದಿಂದ ಬಳಲುತ್ತಿರುವ ಧವನ್​ ಒಂದೆರಡು ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ. ಧವನ್​ ಈ ಬಾರಿಯ ಐಪಿಎಲ್​ನಲ್ಲಿ 5 ಪಂದ್ಯಗಳನ್ನಾಡಿ 152 ರನ್​ ಬಾರಿಸಿದ್ದಾರೆ.

ಸದ್ಯ ಪಂಜಾಬ್​ ಆಡಿದ 6 ಪಂದ್ಯಗಳಲ್ಲಿ ಕೇವಲ 2 ಪಂದ್ಯ ಗೆದ್ದು 4 ಅಂಕದೊಂದಿಗೆ 8ನೇ ಸ್ಥಾನಿಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಪಂಜಾಬ್​ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಪಂಜಾಬ್​ ಪ್ಲೇ ಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ. ಪಂಜಾಬ್​ ಮುಂದಿನ ಪಂದ್ಯದಲ್ಲಿ ಏಪ್ರಿಲ್​ 18ರಂದು ಮುಂಬಯಿ ಇಂಡಿಯನ್ಸ್​​ ವಿರುದ್ಧ ಆಡಿಲಿದೆ.

ಇದನ್ನೂ ಓದಿ IPL 2024: ನೆಚ್ಚಿನ ವಾಂಖೆಡೆ ಸ್ಟೇಡಿಯಂನಲ್ಲಿ ಕೊನೆಯ ಪಂದ್ಯವನ್ನಾಡಲು ಸಜ್ಜಾದ ಧೋನಿ

ರಾಜಸ್ಥಾನ್​ ವಿರುದ್ಧ ಸೋಲು


ಮಹಾರಾಜ ಯಾದವೀಂದ್ರ ಸಿಂಗ್​​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶನಿವಾರ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಪಂಜಾಬ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 147 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್​ ತಂಡ ಇನ್ನೊಂದು ಎಸೆತ ಬಾಕಿ ಇರುವಂತೆಯೇ 7 ವಿಕೆಟ್​ ನಷ್ಟ ಮಾಡಿಕೊಂಡು 152 ರನ್ ಬಾರಿಸಿ ಗೆಲುವು ಸಾಧಿಸಿತು.

ಸಾಧಾರಣ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್​ ಮೊದಲ ವಿಕೆಟ್​ಗೆ 51 ರನ್ ಬಾರಿಸಿತು. ಬಳಿಕ ಯಶಸ್ವಿ ಜೈಸ್ವಾಲ್ 39 ರನ್ ಬಾರಿಸಿ ಔಟಾದರೆ ಉಡುಪಿ ಮೂಲದ ತನುಷ್ ಕೋಟ್ಯಾನ್​ 24 ರನ್ ಬಾರಿಸಿದರು. ಸಂಜು ಸ್ಯಾಮ್ಸನ್​ 18 ರನ್ ಗಳಿಸಿದರೆ ರಿಯಾನ್ ಪರಾಗ್​ 23 ರನ್ ಕೊಡುಗೆ ಕೊಟ್ಟರು. ದ್ರುವ್ ಜುರೆಲ್ 6 ರನ್​ಗೆ ಔಟಾದರೆ ಪೊವೆಲ್ 11 ರನ್​ ಗಳಿಸಿದರು. ಕೊನೆಯಲ್ಲಿ ಶಿಮ್ರೋನ್ ಹೆಟ್ಮಾಯರ್ 3 ಸಿಕ್ಸರ್ ಹಾಗೂ 1 ಫೋರ್​ ಸಮೇತ 27 ರನ್ ಬಾರಿಸಿ ತಂಡವನ್ನು ಗೆಲ್ಲಿಸಿದರು. ಕೊನೇ ಓವರ್​ನಲ್ಲಿ ರಾಜಸ್ಥಾನ್ ತಂಡಕ್ಕೆ 10 ರನ್ ಬೇಕಾಗಿತ್ತು. ಅರ್ಶ್​ ದೀಪ್ ಓವರ್​ ನಲ್ಲಿ ಈ ರನ್​ ಗಳಿಸಿದ ಹೆಟ್ಮಾಯರ್ ತಂಡಕ್ಕೆ ಗೆಲುವು ತಂದು ಕೊಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

Hockey India: ಸಲೀಮಾ ಟೇಟೆ ಇತ್ತೀಚೆಗಷ್ಟೇ ವರ್ಷದ ಆಟಗಾರ್ತಿ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ನಾಯಕಿಯಾಗಿ ಅವರಿಗೆ ಎಫ್‌ಐಎಚ್‌ ಪ್ರೊ ಲೀಗ್‌ ಮೊದಲ ಅಗ್ನಿಪರೀಕ್ಷೆಯಾಗಿದೆ.

VISTARANEWS.COM


on

Hockey India
Koo

ನವದೆಹಲಿ: ಮುಂಬರುವ ಬೆಲ್ಜಿಯಂ ಮತ್ತು ಇಂಗ್ಲೆಂಡ್‌ ಲೆಗ್‌ನ ಎಫ್‌ಐಎಚ್‌ ಪ್ರೊ ಲೀಗ್‌ ಹಾಕಿ ಪಂದ್ಯಾವಳಿಗಾಗಿ ಭಾರತ ಮಹಿಳಾ ಹಾಕಿ(Hockey India) ತಂಡ ಪ್ರಕಟಗೊಂಡಿದೆ. ಜತೆಗೆ ನಾಯಕತ್ವದಲ್ಲಿಯೂ ಬದಲಾವಣೆ ಸಂಭವಿಸಿದೆ. ಅನುಭವಿ ಗೋಲ್‌ಕೀಪರ್‌ ಸವಿತಾ ಪುನಿಯಾ(Savita Punia) ಬದಲು 22 ವರ್ಷದ ಮಿಡ್‌ ಫೀಲ್ಡರ್‌ ಸಲೀಮಾ ಟೇಟೆ(Salima Tete) ಅವರಿಗೆ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ. ನವನೀತ್‌ ಕೌರ್‌(Navneet Kaur) ಉಪನಾಯಕಿಯಾಗಿದ್ದಾರೆ.

ರಾಣಿ ರಾಮ್​ಪಾಲ್​ ಅನುಪಸ್ಥಿತಿಯಲ್ಲಿ ಕಳೆದ ಕೆಲ ವರ್ಷಗಳಿಂದ ಸವಿತಾ ಪುನಿಯಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದರು. ಆದರೆ, ಇವರ ನಾಯಕತ್ವದಲ್ಲಿ ಭಾರತ ಒಲಿಂಪಿಕ್‌ ಅರ್ಹತಾ ಸುತ್ತಿನ ಸ್ಪರ್ಧೆ ಹಾಗೂ ತವರಿನ ಪ್ರೊ ಲೀಗ್‌ ಪಂದ್ಯಗಳಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿತ್ತು. ಹೀಗಾಗಿ ಯುವ ಆಟಗಾರ್ತಿಗೆ ನಾಯಕತ್ವದ ಹೊಣೆ ನೀಡಲಾಗಿದೆ. ನಾಯಕತ್ವದಿಂದ ಮುಕ್ತರಾದರೂ ಕೂಡ ಸವಿತಾ ಪುನಿಯಾ ಪ್ರಧಾನ ಗೋಲ್​ ಕೀಪರ್ ಆಗಿ ತಂಡದಲ್ಲಿ ಮುಂದುವರಿದಿದ್ದಾರೆ.

ಸಲೀಮಾ ಟೇಟೆ ಇತ್ತೀಚೆಗಷ್ಟೇ ವರ್ಷದ ಆಟಗಾರ್ತಿ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ನಾಯಕಿಯಾಗಿ ಅವರಿಗೆ ಎಫ್‌ಐಎಚ್‌ ಪ್ರೊ ಲೀಗ್‌ ಮೊದಲ ಅಗ್ನಿಪರೀಕ್ಷೆಯಾಗಿದೆ. ನಾಯಕತ್ವದ ಬದಲಾವಣೆ ಮಾತ್ರವಲ್ಲದೆ ಡಿಫೆಂಡರ್‌ ಗುರ್ಜಿತ್‌ ಕೌರ್‌, ಮಿಡ್‌ ಫೀಲ್ಡರ್‌ಗಳಾದ ಸೋನಿಕಾ, ನಿಶಾ, ಸ್ಟ್ರೈಕರ್‌ ಬ್ಯೂಟಿ ಡುಂಗ್‌ಡುಂಗ್‌ ಅವರನ್ನು ಈ ಟೂರ್ನಿಗೆ ಕೈಬಿಡಲಾಗಿದೆ. ಇವರ ಬದಲು ಮಹಿಮಾ ಚೌಧರಿ, ಮನೀಷಾ ಚೌಹಾಣ್‌, ಪ್ರೀತಿ ದುಬೆ ಮತ್ತು ದೀಪಿಕಾ ಸೊರೆಂಗ್‌ ಅವಕಾಶ ಪಡೆದಿದ್ದಾರೆ.

ಇದನ್ನೂ ಓದಿ Hockey India: ಹಾಕಿ ಇಂಡಿಯಾಗೆ ಅತ್ಯುತ್ತಮ ಸಂಘಟಕ ರಾಷ್ಟ್ರ ಪ್ರಶಸ್ತಿ

ಬೆಲ್ಜಿಯಂ ಆವೃತ್ತಿಯ ಪಂದ್ಯಗಳು ಮೇ 22ರಿಂದ ಮೇ 26ರ ತನಕ; ಇಂಗ್ಲೆಂಡ್‌ ಆವೃತ್ತಿಯ ಪಂದ್ಯಗಳು ಜೂನ್​ 1ರಿಂದ ಜೂನ್​ 9ರ ತನಕ ನಡೆಯಲಿದೆ. ಲಂಡನ್‌ನಲ್ಲಿ ಆಡಲಾಗುವ ಪಂದ್ಯಗಳಲ್ಲಿ ಗ್ರೇಟ್‌ ಬ್ರಿಟನ್‌ ಮತ್ತು ಜರ್ಮನಿ ವಿರುದ್ಧ ಭಾರತ ಸೆಣಸಲಿದೆ.

ಭಾರತ ತಂಡ

ಡಿಫೆಂಡರ್: ನಿಕ್ಕಿ ಪ್ರಧಾನ್‌, ಉದಿತಾ, ಇಶಿಕಾ ಚೌಧರಿ, ಮೋನಿಕಾ, ಜ್ಯೋತಿ ಛತ್ರಿ, ಮಹಿಮಾ ಚೌಧರಿ.

ಮಿಡ್‌ ಫೀಲ್ಡರ್: ಸಲೀಮಾ ಟೇಟೆ (ನಾಯಕಿ), ನವನೀತ್‌ ಕೌರ್‌ (ಉಪನಾಯಕಿ), ವೈಷ್ಣವಿ ವಿಠuಲ್‌ ಫಾಲ್ಕೆ, ನೇಹಾ, ಜ್ಯೋತಿ, ಬಲ್‌ಜೀತ್‌ ಕೌರ್‌, ಮನೀಷಾ ಚೌಹಾಣ್‌, ಲಾಲ್ರೆಮಿಯಾಮಿ.

ಫಾರ್ವರ್ಡ್ಸ್‌: ಮುಮ್ತಾಜ್‌ ಖಾನ್‌, ಸಂಗೀತಾ ಕುಮಾರಿ, ದೀಪಿಕಾ, ಶರ್ಮಿಳಾ ದೇವಿ, ಪ್ರೀತಿ ದುಬೆ, ವಂದನಾ ಕಟಾರಿಯಾ, ಸುನೇಲಿಟಾ ಟೋಪೊ, ದೀಪಿಕಾ ಸೊರೆಂಗ್‌.

ಗೋಲ್‌ಕೀಪರ್: ಸವಿತಾ ಪುನಿಯಾ, ಬಿಚು ದೇವಿ ಖರಿಬಾಮ್‌.

Continue Reading

ಕ್ರೀಡೆ

Devon Thomas: ಟಿ20 ವಿಶ್ವಕಪ್​ಗೂ ಮುನ್ನ ವಿಂಡೀಸ್​ ಬ್ಯಾಟರ್​ಗೆ 5 ವರ್ಷ ನಿಷೇಧ ಹೇರಿದ ಐಸಿಸಿ

Devon Thomas: ವಿಂಡೀಸ್​ ಪರ 2009 ರಿಂದ 2022 ರವರೆಗೆ ಮೂರು ಮಾದರಿಯ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿರುವ ಥಾಮಸ್ ಒಟ್ಟು 34(1 ಟೆಸ್ಟ್​, 21 ಏಕದಿನ, 12 ಟಿ20) ಪಂದ್ಯಗಳನ್ನು ಆಡಿ 320 ರನ್​ ಗಳಿಸಿದ್ದಾರೆ. 2022ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧ ಕೊನೆಯ ಬಾರಿ ಟೆಸ್ಟ್​ ಮತ್ತು ಏಕದಿನ ಪಂದ್ಯಗಳನ್ನಾಡಿದ್ದರು.

VISTARANEWS.COM


on

Devon Thomas
Koo

ದುಬೈ: ವೆಸ್ಟ್​ ಇಂಡೀಸ್​(West Indies) ತಂಡದ ಡೆವೊನ್ ಥಾಮಸ್(Devon Thomas) ಅವರನ್ನು ಐದು ವರ್ಷಗಳ ಕಾಲ ಕ್ರಿಕೆಟ್‌ನಿಂದ ನಿಷೇಧಿಸಲಾಗಿದೆ. ಭ್ರಷ್ಟಾಚಾರ ವಿರೋಧಿ ನಿಯಮಗಳ ಏಳು ಉಲ್ಲಂಘನೆಗಳನ್ನು ಒಪ್ಪಿಕೊಂಡ ಬಳಿಕ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ICC) ಈ ನಿರ್ಧಾರ ಕೈಗೊಂಡಿದೆ. ಈ ಶಿಕ್ಷೆಯು ಒಂದು ವರ್ಷ ಪೂರ್ವಾನ್ವಯವಾಗಿದೆ ಎಂದು ಪರಿಗಣಿಸಲಾಗಿದೆ ಎಂದು ಐಸಿಸಿ ತಿಳಿಸಿದೆ.

ವಿಂಡೀಸ್​ ಪರ 2009 ರಿಂದ 2022 ರವರೆಗೆ ಮೂರು ಮಾದರಿಯ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿರುವ ಥಾಮಸ್ ಒಟ್ಟು 34(1 ಟೆಸ್ಟ್​, 21 ಏಕದಿನ, 12 ಟಿ20) ಪಂದ್ಯಗಳನ್ನು ಆಡಿ 320 ರನ್​ ಗಳಿಸಿದ್ದಾರೆ. 2022ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧ ಕೊನೆಯ ಬಾರಿ ಟೆಸ್ಟ್​ ಮತ್ತು ಏಕದಿನ ಪಂದ್ಯಗಳನ್ನಾಡಿದ್ದರು.

34 ವರ್ಷದ ಥಾಮಸ್, ಕೆರಿಬಿಯನ್ ಪ್ರೀಮಿಯರ್ ಲೀಗ್, ಲಂಕಾ ಪ್ರೀಮಿಯರ್ ಲೀಗ್ ಮತ್ತು ಅಬುಧಾಬಿ ಟಿ10 ಎಂಬ ಮೂರು ಪ್ರತ್ಯೇಕ ಪಂದ್ಯಾವಳಿಗಳಲ್ಲಿ ಅಪರಾಧಗಳನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರಲ್ಲಿ ಶ್ರೀಲಂಕಾ ಮೂಲದ ಪಂದ್ಯಾವಳಿಯಲ್ಲಿ ಮ್ಯಾಚ್-ಫಿಕ್ಸಿಂಗ್ ಯತ್ನಗಳಲ್ಲಿ ಭಾಗಿಯಾಗಲು ಸಂಚು ರೂಪಿಸಿದ್ದಕ್ಕಾಗಿ ತಾನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವುದು ತಿಳಿದುಬಂದಿದೆ.

ಸ್ಯಾಮುಯೆಲ್ಸ್​ಗೆ 6 ವರ್ಷ ನಿಷೇಧ

ಭ್ರಷ್ಟಾಚಾರ ನಿಗ್ರಹ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವೆಸ್ಟ್ ಇಂಡೀಸ್​ ತಂಡದ ಮಾಜಿ ಆಟಗಾರ ಮರ್ಲಾನ್ ಸ್ಯಾಮುಯೆಲ್ಸ್(Marlon Samuels) ಅವರನ್ನು ಆರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಎಲ್ಲ ಮಾದರಿಯ ಕ್ರಿಕೆಟ್‌ನಿಂದ ಕಳೆದ ವರ್ಷ ನಿಷೇಧಿಸಿತ್ತು.

2016ರಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡ ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ಸ್ಯಾಮುಯೆಲ್ಸ್ ಪ್ರಧಾನ ಪಾತ್ರವಹಿಸಿದ್ದರು. ಬೌಲಿಂಗ್ ಮತ್ತು ಬ್ಯಾಟಿಂಗ್​ ಸಾಹಸದಿಂದ ವಿಂಡೀಸ್​ ಕಪ್​ ಗೆದ್ದಿತ್ತು. ಇದೀಗ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಭ್ರಷ್ಟಾಚಾರ ವಿರೋಧಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಡಿಯಲ್ಲಿ ಅವರನ್ನು ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿಷೇಧಿಸಲಾಗಿದೆ. ಸ್ಯಾಮುಯೆಲ್ಸ್ ವಿರುದ್ಧ ಸೆಪ್ಟೆಂಬರ್ 2021 ರಲ್ಲಿ ಒಟ್ಟು ನಾಲ್ಕು ಆರೋಪಗಳನ್ನು ಹೊರಿಸಲಾಗಿತ್ತು. ಈ ವರ್ಷದ ಆಗಸ್ಟ್​ನಲ್ಲಿ ಅಪರಾಧಗಳಲ್ಲಿ ಅವರು ತಪ್ಪಿತಸ್ಥರೆಂದು ಕಂಡುಬಂದಿದೆ. ಹೀಗಾಗಿ ಅವರಿಗೆ 6 ವರ್ಷಗಳ ಕಾಲ ಕ್ರಿಕೆಟ್​ ನಿಷೇಧ ಹೇರಲಾಗಿತ್ತು.

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

2020ರಲ್ಲಿ ಸ್ಯಾಮುಯೆಲ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ನಿವೃತ್ತಿ ಘೋಷಿಸಿದ ಬಳಿಕ ಅವರು ಬೇರೆ ದೇಶಗಳಲ್ಲಿ ನಡೆಯುವ ಲೀಗ್​ ಕ್ರಿಕೆಟ್​ಗಳಲ್ಲಿ ಆಟ ಮುಂದುವರಿಸಿದ್ದರು. 43 ವರ್ಷದ ಸ್ಯಾಮುಯೆಲ್ಸ್ ಅವರು 11,000 ಅಂತಾರಾಷ್ಟ್ರೀಯ ರನ್​ಗಳನ್ನು ಗಳಿಸಿದ್ದಾರೆ. ವಿಂಡೀಸ್​ ಪರ 207 ಏಕದಿನ ಪಂದ್ಯಗಳನ್ನು ಆಡಿದ ಅವರು 75.12 ಸ್ಟ್ರೈಕ್​ರೇಟ್​ನಲ್ಲಿ 5606 ರನ್​ ಬಾರಿಸಿದ್ದಾರೆ. ಇದರಲ್ಲಿ 10 ಶತಕ ಮತ್ತು 30 ಅಧರ್ಶತಕ ಒಳಗೊಂಡಿದೆ. 133 ರನ್​ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ. 89 ವಿಕೆಟ್​ ಕೂಡ ಪಡೆದಿದ್ದಾರೆ. ಇನ್ನು 71 ಟೆಸ್ಟ್​ ಪಂದ್ಯಗಳಿಂದ 3917, ರನ್​ 7 ಶತಕ, 1 ದ್ವಿಶತಕ ಮತ್ತು 24 ಅರ್ಧಶತಕ ಬಾರಿಸಿದ್ದಾರೆ. 41 ವಿಕೆಟ್​ ಕಲೆಹಾಕಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 67 ಪಂದ್ಯ ಆಡಿ 1611 ರನ್​ ಮತ್ತು 22 ವಿಕೆಟ್​ ಉರುಳಿಸಿದ್ದಾರೆ.

Continue Reading

ಕ್ರೀಡೆ

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

MS Dhoni: ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.

VISTARANEWS.COM


on

MS Dhoni
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಾಗೂ ಮಹೇಂದ್ರ ಸಿಂಗ್​ ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಕೆಲವು ದಿನಗಳ ಹಿಂದೆ ಎಸ್ ರಾಮದಾಸ್ ಅವರು ಮಗನ ಬಳಿ ಮಾತನಾಡುವ ವೇಳೆ, ಚೆನ್ನೈ ಸೂಪರ್ ಕಿಂಗ್ಸ್​ನ ಪಂದ್ಯ ಮತ್ತು ಧೋನಿಯನ್ನು ನೋಡಲು ರಾಜಧಾನಿ ದೆಹಲಿಯವರೆಗೂ ನಡೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದರು. ಧೋನಿಯನ್ನು ಮತ್ತು ಚೆನ್ನೈ ಪಂದ್ಯವನ್ನು ನೋಡುವ ಅಪ್ಪನ ಈ ಬಯಕೆಯನ್ನು ಈಡೇರಿಸುವುದಾಗಿ ಮಗ ಮಾತು ಕೊಟ್ಟಿದ್ದರು. ಚೆನ್ನೈನಲ್ಲಿ ನಡೆಯುವ ಪಂದ್ಯದ ಟಿಕೆಟ್​ ಖರೀದಿಸಿ ಪಂದ್ಯ ತೋರಿಸುತ್ತೇನೆ ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ ಮಗ ಅಪ್ಪನಿಗೆ ಚೆಪಾಕ್​ನಲ್ಲಿ ನಡೆದ ಚೆನ್ನೈ ಮತ್ತು ಪಂಜಾಬ್​ ವಿರುದ್ಧದ ಪಂದ್ಯಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪಂದ್ಯ ಮುಕ್ತಾಯಕ ಬಳಿಕ ಈ ವಿಶೇಷ ಅಭಿಮಾನೊಯನ್ನು ಧೋನಿ ಡ್ರೆಸ್ಸಿಂಗ್​ ರೋಮ್​ನಲ್ಲಿ ಭೇಟಿಯಾಗಿದ್ದಾರೆ. ಧೋನಿ ತಮ್ಮ ಜೆರ್ಸಿಯಲ್ಲಿ “ನಿಮ್ಮ ಈ ಬೆಂಬಲಕ್ಕೆ ಧನ್ಯವಾದಗಳು ತಾತ” ಎಂದು ಬರೆದು ತಮ್ಮ ಹಸ್ತಾಕ್ಷರ ಹಾಕಿ ಜೆರ್ಸಿಯನ್ನು ರಾಮದಾಸ್​ಗೆ ನೀಡಿದ್ದಾರೆ. ಇದೇ ವೇಳೆ ರಾಮದಾಸ್ ನಿಮ್ಮನ್ನು ನೋಡಿ ತುಂಬಾ ಖಷಿಯಾಯಿತು. ನೀವೊಬ್ಬರು ಗ್ರೇಟ್​ ಕ್ರಿಕೆಟರ್​ ಎಂದು ಹಾರೈಸಿದರು. ರಾಮ್​ದಾಸ್​ ಜತೆ ಅರ ಪತ್ನಿಯೂ ಜತೆಗಿದ್ದರು. ಚೆನ್ನೈ ಫ್ರಾಂಚೈಸಿ ವತಿಯಿಂದ ರಾಮದಾಸ್ 103 ಎಂದು ಬರೆದ ಚೆನ್ನೈ ತಂಡದ ಜೆರ್ಸಿಯನ್ನು ವಿಶೇಷ ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

ಬ್ರಿಟಿಷ್ ಮಿಲಿಟರಿಯ ಸೈನ್ಯದ ಭಾಗವಾಗಿದ್ದ ರಾಮದಾಸ್ ಕ್ರಿಕೆಟ್ ಆಡಲು ಹೆದರುತ್ತಿದ್ದರಂತೆ. ಆದರೆ ಸಿಎಸ್‌ಕೆ ಜರ್ಸಿ ಧರಿಸಿ ಟಿವಿ ಮುಂದೆ ಕುಳಿತು ಐಪಿಎಲ್ ಆಟವನ್ನು ನೋಡಲು ಇಷ್ಟಪಡುತ್ತೇನೆ. ಒಮ್ಮೆಯಾದರೂ ಧೋನಿಯನ್ನು ಭೇಟಿಯಾಗಬೇಕು ಎಂದು ಹೇಳಿದ್ದ ವಿಡಿಯೊವನ್ನು ಕೂಡ ಚೆನ್ನೈ ಫ್ರಾಂಚೈಸಿ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿತ್ತು.

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

Continue Reading

ಕ್ರೀಡೆ

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

Kavya Maran: ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

VISTARANEWS.COM


on

Kavya Maran
Koo

ಹೈದರಾಬಾದ್​: ಗುರುವಾರ ರಾತ್ರಿ ನಡೆದ ಐಪಿಎಲ್​ನ(IPL 2024) 50ನೇ ಪಂದ್ಯದಲ್ಲಿ ಭುವನೇಶ್ವರ್​ ಕುಮಾರ್(Bhuvneshwar Kumar)​ ಅವರು ಅಂತಿಮ ಎಸೆತದ ಮ್ಯಾಜಿಕ್​ನಿಂದ ಸನ್​ರೈಸರ್ಸ್ ಹೈದರಾಬಾದ್(Sunrisers Hyderabad)​ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ರೋಚಕ 1 ರನ್​ ಅಂತರದ ಗೆಲುವು ಸಾಧಿಸಿತು. ಈ ಗೆಲುವನ್ನು ತಂಡದ ಆಟಗಾರರಿಗಿಂತಲ್ಲೂ ಹೆಚ್ಚು ಸಂಭ್ರಮಿಸಿದ್ದು ತಂಡದ ಮಾಲಕಿ ಕಾವ್ಯಾ ಮಾರನ್​. ಗ್ಯಾಲರಿಯಲ್ಲಿದ್ದ ಕಾವ್ಯ ತಂಡ ಗೆಲ್ಲುತ್ತಿದ್ದಂತೆ ಫೂಲ್​ ಜೋಶ್​ನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

31 ಹರೆಯದ ಕಾವ್ಯಾ ತನ್ನ ಅದ್ಭುತ ನೋಟ ಮತ್ತು ಆಟದ ಮೇಲಿನ ಅಪಾರ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ. ಪಂದ್ಯ ಸೋತಾಗ ಮತ್ತು ಗೆದ್ದಾಗ ಅವರು ವಿಭಿನ್ನವಾಗಿ ಕಂಡುಬರುತ್ತಾರೆ. ಕ್ಯಾಮೆರಾ ಮೆನ್​ಗಳು ಕೂಡ ಪಂದ್ಯದ ವೇಳೆ ಇವರ ಮೇಲೆ ವಿಶೇಷ ನಿಗಾ ಇರಿಸಿರುತ್ತಾರೆ. ಪಂದ್ಯ ಸೋತಾಗ ಅತಿಯಾದ ಬೇಸರಿಂದ ಸಪ್ಪೆ ಮೋರೆ ಹಾಕಿ ಕುಳಿತಿದ್ದ ವಿಡಿಯೊ ಮತ್ತು ಫೋಟೊಗಳು ಕೂಡ ಹಲವು ಬಾರಿ ವೈರಲ್​ ಆಗಿತ್ತು.

ಖ್ಯಾತ ಸೂಪರ್​ ಸ್ಟಾರ್​ ನಟ ರಜನಿಕಾಂತ್ ಅವರು ಐಪಿಎಲ್​ ಆರಂಭಕ್ಕೂ ಮುನ್ನ ನಡೆದಿದ್ದ ಸಿನೆಮಾ ಕಾರ್ಯಕ್ರಮದ ಸಮಾರಂಭದ ವೇದಿಕೆಯಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಒಳ್ಳೆ ಆಟಗಾರರನ್ನು ಆಯ್ಕೆ ಮಾಡಿ ಏಕೆಂದರೆ ಈ ಪಂದ್ಯ ಸೋತಾಗ ಕಾವ್ಯಾ ಅವರು ನೋಡಲು ಸಾಧ್ಯವಾಗುದಿಲ್ಲ ಎಂದು ಹೇಳಿದ್ದರು.

ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

ಪಂದ್ಯ ಗೆದ್ದ ಹೈದರಾಬಾದ್​


ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

Continue Reading
Advertisement
Hockey India
ಕ್ರೀಡೆ10 mins ago

Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

Prajwal Revanna Case Revanna withdraws anticipatory bail plea
ಕ್ರೈಂ18 mins ago

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

Kannada Serials TRP puttakkana makkalu top the list
ಕಿರುತೆರೆ18 mins ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

bomber drone
ತಂತ್ರಜ್ಞಾನ24 mins ago

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Viral Video
ವೈರಲ್ ನ್ಯೂಸ್29 mins ago

Viral Video: ಎಲ್ಲ ಖುಷಿಯನ್ನು ಯಾಕೆ ಮನುಷ್ಯ ಮಾತ್ರ ಅನುಭವಿಸಬೇಕು? ಸ್ಮಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟ ಮಂಗಗಳು

United Nations
ವಿದೇಶ33 mins ago

United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

Karnataka Weather Forecast
ಮಳೆ38 mins ago

Karnataka Weather Forecast : ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

Rashmika Mandanna's younger sister Shiman
ಟಾಲಿವುಡ್51 mins ago

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

Prajwal Revanna Case Wherever Prajwal escapes we will pick him up says CM Siddaramaiah
ಕ್ರೈಂ53 mins ago

Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Devon Thomas
ಕ್ರೀಡೆ60 mins ago

Devon Thomas: ಟಿ20 ವಿಶ್ವಕಪ್​ಗೂ ಮುನ್ನ ವಿಂಡೀಸ್​ ಬ್ಯಾಟರ್​ಗೆ 5 ವರ್ಷ ನಿಷೇಧ ಹೇರಿದ ಐಸಿಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ19 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌