Team India : ಶ್ರೇಯಸ್​ ಅಯ್ಯರ್​, ರಾಹುಲ್​ ರೆಡಿ; ಹೊಸ ವಿಡಿಯೊ ಹಾಕಿದ ರಿಷಭ್​ ಪಂತ್​ - Vistara News

ಕ್ರಿಕೆಟ್

Team India : ಶ್ರೇಯಸ್​ ಅಯ್ಯರ್​, ರಾಹುಲ್​ ರೆಡಿ; ಹೊಸ ವಿಡಿಯೊ ಹಾಕಿದ ರಿಷಭ್​ ಪಂತ್​

ರಿಷಭ್ ಪಂತ್ ಸೋಮವಾರ ಈ ಬಗ್ಗೆ ವಿಡಿಯೊ ಮಾಹಿತಿಯೊಂದನ್ನು ಪ್ರಕಟಿಸಿದ್ದಾರೆ. ಶ್ರೇಯಸ್ ಮತ್ತು ರಾಹುಲ್ ಪೂರ್ಣ ಪ್ರಮಾಣದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ವಿಡಿಯೊ ತುಣುಕನ್ನು ಅವರು ಹಂಚಿಕೊಂಡಿದ್ದಾರೆ ಹಂಚಿಕೊಂಡಿದ್ದಾರೆ.

VISTARANEWS.COM


on

KL Rahul
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ಕ್ರಿಕೆಟ್​ ತಂಡ (Team India) ಪ್ರಮುಖ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಏಷ್ಯಾಕಪ್​ 2023ಕ್ಕೆ ಮುಂಚಿತವಾಗಿ ಭಾರತ ತಂಡಕ್ಕೆ ಮರಳುವ ಸಾಧ್ಯತೆಗಳಿವೆ. ಗಾಯದ ಸಮಸ್ಯೆಗಳಿಂದ ನರಳಿದ್ದ ಈ ಆಟಗಾರರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿಯಲ್ಲಿ ಪುನಶ್ಚೇತನಕ್ಕೆ ಒಳಗಾಗುತ್ತಿದ್ದರು. ಇದೀಗ ಅವರಿಬ್ಬರೂ ಫುಲ್​ ಫಿಟ್​ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಇದೀಗ ವಿಕೆಟ್​ಕೀಪರ್ ಬ್ಯಾಟರ್​ ರಿಷಭ್ ಪಂತ್ ಸೋಮವಾರ ಈ ಬಗ್ಗೆ ವಿಡಿಯೊ ಮಾಹಿತಿಯೊಂದನ್ನು ಪ್ರಕಟಿಸಿದ್ದಾರೆ. ಶ್ರೇಯಸ್ ಮತ್ತು ರಾಹುಲ್ ಪೂರ್ಣ ಪ್ರಮಾಣದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ವಿಡಿಯೊ ತುಣುಕನ್ನು ಅವರು ಹಂಚಿಕೊಂಡಿದ್ದಾರೆ.

ಈ ಮೂಲಕ ಗಾಯದ ಸಮಸ್ಯೆಗೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ತಂಡಕ್ಕೆ ಪಾಸಿಟಿವ್​ ಸುದ್ದಿ ಸಿಕ್ಕಿದೆ. ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಇಬ್ಬರೂ ನೈಜ ಆಟವನ್ನು ಪ್ರಾರಂಭಿಸಿದ್ದಾರೆ. ಸೋಮವಾರ ಎನ್​ಸಿಎನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ಇಲ್ಲಿ ಅವರ ಫಿಟ್ನೆಸ್ ಅನ್ನು ಮೇಲ್ವಿಚಾರಣೆ ಮಾಡುವ ಸಾಧ್ಯತೆಗಳಿವೆ ಹಾಗೂ ಈ ಬಗ್ಗೆ ನಿರ್ಧಾರ ಪ್ರಕಟಗೊಳ್ಳುವ ಸಾಧ್ಯತೆಗಳಿವೆ.

ರಿಷಭ್ ಪಂತ್ ಹಂಚಿಕೊಂಡ ಸ್ಟೋರಿಯಲ್ಲಿ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅಭ್ಯಾಸ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇಬ್ಬರೂ ಆಟಗಾರರು ನೆಟ್​​ನಲ್ಲಿ ತರಬೇತಿಯನ್ನು ಪ್ರಾರಂಭಿಸಿದ್ದರೂ, ಮುಂದಿನ ಹಂತದಲ್ಲಿ ಕೆಲವೊಂದು ಟೆಸ್ಟ್​​ಗಳನ್ನು ಪಾಸಾಗಬೇಕಾಗಿದೆ. ರಾಹುಲ್ ಮತ್ತು ಶ್ರೇಯಸ್ ಆರಂಭದಲ್ಲಿ ಏಷ್ಯಾ ಕಪ್ ಆಯ್ಕೆಯಿಂದ ವಂಚಿತರಾಗಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಅವರ ಬ್ಯಾಟಿಂಗ್​ಗೆ ಮರಳಿರುವ ಕಾರಣ ಲಭ್ಯರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಭಾರತೀಯ ಕ್ರಿಕೆಟ್ ತಂಡದ ಮ್ಯಾನೇಜ್ಮೆಂಟ್​​ ಏಷ್ಯಾ ಕಪ್​ಗೆ ಮುಂದಿನ ವಿಶ್ವ ಕಪ್​ನಲ್ಲಿ ಆಡಬೇಕಾಗಿರುವ ತಂಡವನ್ನೇ ಕಣಕ್ಕೆ ಇಳಿಸುವ ಯೋಜನೆ ರೂಪಿಸಿದೆ. ಶ್ರೇಯಸ್ ಮತ್ತು ರಾಹುಲ್ ಇಬ್ಬರೂ ದೀರ್ಘಕಾಲದ ಚೇತರಿಕೆಯ ಕಾರಣಕ್ಕೆ ಈ ಯೋಜನೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿತ್ತು. ಇದೀಗ ಇಬ್ಬರೂ ನೆಟ್ಸ್​​ನಲ್ಲಿ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದರೂ ಮ್ಯಾನೇಜ್ಮೆಂಟ್ ಅವರ ವಿಚಾರದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಕುತೂಹಲ ಮೂಡಿದೆ.

ಈ ವಾರ ಏಷ್ಯಾ ಕಪ್​ ತಂಡ ಪ್ರಕಟ

ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಈ ವಾರ ಏಷ್ಯಾಕಪ್ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆ. ಆಗಸ್ಟ್ ಅಂತ್ಯದಲ್ಲಿ ಶ್ರೀಲಂಕಾಕ್ಕೆ ತೆರಳುವ ಮೊದಲು ಆಟಗಾರರು ಆಗಸ್ಟ್ 23 ರಂದು ಎನ್​​ಸಿಎನಲ್ಲಿ ಶಿಬಿರಕ್ಕಾಗಿ ಒಟ್ಟುಗೂಡಲಿದ್ದಾರೆ. ಇದೇ ಅವಧಿಯಲ್ಲಿ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅವರ ಫಿಟ್ನೆಸ್ ಕೂಡ ಪರೀಕ್ಷೆಗೆ ಒಳಪಡಲಿದೆ.

ಇದನ್ನೂ ಓದಿ : Ind vs WI T20: ʼನೀನು ಧೋನಿ ಅಲ್ಲ!ʼ ಸಿಕ್ಸ್‌ ಹೊಡೆದು ತಂಡ ಗೆಲ್ಲಿಸಿದರೂ ಹಾರ್ದಿಕ್‌ ಪಾಂಡ್ಯ ʼಸ್ವಾರ್ಥಿʼ ಅನಿಸಿಕೊಂಡದ್ದೇಕೆ?

ಕೆಲವು ಆಟಗಾರರು ಗಾಯದ ಸಮಸ್ಯೆಯಿಂದ ಹಿಂದಿರುಗುವ ಸಾಧ್ಯತೆಗಳಿವೆ. ನಾವು ಅವರಿಗೆ ಏಷ್ಯಾ ಕಪ್ ಕ್ರಿಕೆಟ್​ನಲ್ಲಿ ಆಡಲು ಅವಕಾಶಗಳನ್ನು ನೀಡಬೇಕಾಗಿದೆ. ಈ ಹಂತದಲ್ಲಿ ನಾವು ಏಷ್ಯಾ ಕಪ್ ಬಗ್ಗೆ ನಿಜವಾಗಿಯೂ ಯೋಚಿಸಿಲ್ಲ. ಆಗಸ್ಟ್ 23ರಿಂದ ನಾವು ಬೆಂಗಳೂರಿನಲ್ಲಿ ಒಂದು ವಾರದ ಶಿಬಿರವನ್ನು ನಡೆಯಲಿದೆ. ನಾವು ಅಲ್ಲಿ ಒಂದು ತಂಡವಾಗಿ ಒಟ್ಟುಗೂಡುತ್ತೇವೆ. ಅಲ್ಲಿನ ನಿರ್ಧಾರ ಅಂತಿಮವಾಗಲಿದೆ ಎಂದು ರಾಹುಲ್ ದ್ರಾವಿಡ್ ಭಾರತ ಮತ್ತು ವಿಂಡೀಸ್ ಸರಣಿಯ ನಂತರ ಹೇಳಿದ್ದಾರೆ.

ರಾಹುಲ್ ಹಾಗೂ ಶ್ರೇಯಸ್​ ಅವಕಾಶ ತಪ್ಪಿಸಿಕೊಂಡರೆ ಆಯ್ಕೆ ಸಮಿತಿಯ ತಂತ್ರ ವಿಭಿನ್ನವಾಗಿರಲಿದೆ. ಸೂರ್ಯಕುಮಾರ್ ಯಾದವ್ ಟಿ20 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಆದರೆ ಅವರು 50 ಓವರ್​ಗಳ ಸ್ವರೂಪದಲ್ಲಿ ನಿಜವಾಗಿಯೂ ಹೆಣಗಾಡುತ್ತಿದ್ದಾರೆ. ತಿಲಕ್ ವರ್ಮಾ ಗೆಲ್ಲುವ ಕುದುರೆಯಾಗಿ ಹೊರಹೊಮ್ಮಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

AFG vs BAN: ‘ನಿಧಾನವಾಗಿ ಆಡಿ, ಮಳೆ ಬರುತ್ತೆ’; ಆಫ್ಘನ್​ ಆಟಗಾರರಿಗೆ ಸಲಹೆ ನೀಡಿದ ಕೋಚ್​; ವಿಡಿಯೊ ವೈರಲ್​

AFG vs BAN:ಡಕ್​ವರ್ತ್​ ಲೂಯಿಸ್​ ನಿಯದ ಪ್ರಕಾರ ಅಫಘಾನಿಸ್ತಾನ ತಂಡ ಮುಂದೆ ಇದ್ದ ವೇಳೆ ಜೋರಾಗಿ ಗಾಳಿ ಬೀಸಿ ಮಳೆ ಬರುವ ಲಕ್ಷಣ ಕಂಡುಬಂತು. ಈ ವೇಳೆ ಡಗೌಟ್​ನಲ್ಲಿದ್ದ ಕೋಚ್​ ಜೊನಾಥನ್​ ಟ್ರಾಟ್ ಅವರು ನಿಧಾನವಾಗಿ ಆಡಿ… ಕೊಂಚ ಸಮಯ ವ್ಯರ್ಥ ಮಾಡುವಂತೆ ಸೂಚನೆ ನೀಡಿದ ವಿಡಿಯೊ ಇದೀಗ ವೈರಲ್​ ಆಗಿದೆ

VISTARANEWS.COM


on

AFG vs BAN
Koo

ಕಿಂಗ್‌ಸ್ಟೌನ್ (ಸೇಂಟ್ ವಿನ್ಸೆಂಟ್): ಮಂಗಳವಾರ ನಡೆದ ಮಳೆ ಪೀಡಿತ ಬಾಂಗ್ಲಾದೇಶ(AFG vs BAN) ವಿರುದ್ಧದ ಸೂಪರ್​-8 ಪಂದ್ಯದಲ್ಲಿ ಡಕ್​ವರ್ತ್​ ಯೂಯಿಸ್​ ನಿಯಮದನ್ವಯ ಅಫಘಾನಿಸ್ತಾನ 8 ರನ್​ಗಳ ರೋಚಕ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್​ ಪ್ರವೇಶಿಸಿತು. ಈ ಪಂದ್ಯದಲ್ಲಿ ಆಘ್ಫನ್​ ತಂಡದ ಕೋಚ್​ ಜೊನಾಥನ್​ ಟ್ರಾಟ್(Jonathan Trott) ಅವರು ಆಟಗಾರರಿಗೆ ನೀಡಿದ ಸಲಹೆಯೊಂದರ ವಿಡಿಯೊ ವೈರಲ್​ ಆಗಿದೆ.

ಹಲವು ಬಾರಿ ಮಳೆಯಿಂದ ಅಡಚಣೆಯಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಅಫಘಾನಿಸ್ತಾನ ರಹಮಾನುಲ್ಲಾ ಗುರ್ಬಾಜ್(43) ಅವರ ಏಕಾಂಗಿ ಬ್ಯಾಟಿಂಗ್​ ಹೋರಾಟದ ನೆರವಿನಿಂದ 5 ವಿಕೆಟ್​ಗೆ 115 ರನ್​ ಬಾರಿಸಿತು. ಬಾಂಗ್ಲಾ ಬ್ಯಾಟಿಂಗ್​ ಸರದಿಯ ವೇಳೆ ಹಲವು ಬಾರಿ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತು. ಅಂತಿಮವಾಗಿ ಒಂದು ಓವರ್​ ಕಡಿತಗೊಳಿಸಿ 19 ಓವರ್​ಗೆ 114 ರನ್​ ಗೆಲುವಿನ ಗುರಿ ನೀಡಲಾಯಿತು. ಆದರೆ ಮಳೆಯ ಕಣ್ಣಾಮುಚ್ಚಾಲೆ ಆಟ ಮಾತ್ರ ಆಗಾಗ ಕಂಡು ಬರುತ್ತಿತ್ತು.

ಡಕ್​ವರ್ತ್​ ಲೂಯಿಸ್​ ನಿಯದ ಪ್ರಕಾರ ಅಫಘಾನಿಸ್ತಾನ ತಂಡ ಮುಂದೆ ಇದ್ದ ವೇಳೆ ಜೋರಾಗಿ ಗಾಳಿ ಬೀಸಿ ಮಳೆ ಬರುವ ಲಕ್ಷಣ ಕಂಡುಬಂತು. ಈ ವೇಳೆ ಡಗೌಟ್​ನಲ್ಲಿದ್ದ ಕೋಚ್​ ಜೊನಾಥನ್​ ಟ್ರಾಟ್ ಅವರು ನಿಧಾನವಾಗಿ ಆಡಿ… ಕೊಂಚ ಸಮಯ ವ್ಯರ್ಥ ಮಾಡುವಂತೆ ಸೂಚನೆ ನೀಡಿದರು. ಕೋಚ್​ ಸಲಹೆಯಂತೆ ಸ್ಲಿಪ್​ನಲ್ಲಿ ನಿಂತಿದ್ದ ಗುಲ್ಬದಿನ್ ನೈಬ್ ಅವರು ಏಕಾಏಕಿ ಕಾಲು ನೋವಿನಂತೆ ಕುಸಿದು ಬಿದ್ದರು. ಬಳಿಕ ಫಿಸಿಯೊ ಬಂದು ಅವರನ್ನು ತಪಾಸಣೆ ನಡೆಸಿದ್ದಾರೆ. ಈ ವಿಡಿಯೊ ಇದೀಗ ವೈರಲ್​ ಆಗಿದೆ. ನೆಟ್ಟಿಗರು ಈ ದೃಶ್ಯ ಕಂಡು ಗುಲ್ಬದಿನ್​ಗೆ ಆಸ್ಕರ್ ಪ್ರಶಸ್ತಿ ನೀಡಬೇಕು ಎಂದು ಕಮೆಂಟ್​ ಮಾಡಿದ್ದಾರೆ. ಸಣ್ಣ ಮೊತ್ತವನ್ನು ಬಾಂಗ್ಲಾ ಒಂದು ಹಂತದವರೆಗೆ ಯಶಸ್ವಿಯಾಗಿ ಬೆನ್ನಟ್ಟಿಕೊಂಡು ಬಂದರೂ ಕೂಡ ಅಂತಿಮ ಹಂತದಲ್ಲಿ ನಾಟಕೀಯ ಕುಸಿತ ಕಂಡು 17.5 ಓವರ್​ನಲ್ಲಿ 105 ರನ್​ಗೆ ಸರ್ವಪತನ ಕಂಡಿತು.

ಇದನ್ನೂ ಓದಿ AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

ಚೇಸಿಂಗ್​ ವೇಳೆ ಬಾಂಗ್ಲಾದೇಶ ಕೂಡ ಆಫ್ಘನ್​ ತಂಡದಂತೆ ನಾಟಕೀಯ ಕುಸಿತ ಕಂಡಿತು. ಒಂದೆಡೆ ವಿಕೆಟ್​ ಬೀಳುತ್ತಿದ್ದರೂ ಕೂಡ ತಂಡದ ಗೆಲುವಿಗಾಗಿ ಟೊಂಕ ಕಟ್ಟಿ ನಿಂತ ಆರಂಭಕಾರ ಲಿಟ್ಟನ್​ ದಾಸ್​ ಅಜೇಯ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಲು ಶಕ್ತಿ ಮೀರಿ ಪ್ರಯತ್ನಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಬ್ಯಾಟಿಂಗ್​ ಸಾಥ್​ ಸಿಗದ ಕಾರಣ ಪಂದ್ಯ ಸೋಲು ಕಂಡಿತು. ಆರಂಭಿಕನಾಗಿ ಕಣಕ್ಕಿಳಿದ ದಾಸ್​ ಕೊನೆಯ ತನಕ ಬ್ಯಾಟಿಂಗ್​ ನಡೆಸಿ ಅಜೇಯ 54 ರನ್​ ಬಾರಿಸಿದರು. ಪಂದ್ಯ ಸೋತ ಕಾರಣ ಇವರ ಈ ಬ್ಯಾಟಿಂಗ್​ ಹೋರಾಟ ವ್ಯರ್ಥಗೊಂಡಿತು. ಸಣ್ಣ ಮೊತ್ತ ಬಾರಿಸಿದರೂ ಕೂಡ ಆಫ್ಘನ್​ ಬೌಲರ್​ಗಳು ಶಕ್ತಿ ಮೀರಿ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಪಂದ್ಯದಲ್ಲಿ ಹಿಡಿತ ಸಾಧಿಸಿದರು. ನಾಯಕ ರಶೀದ್​ ಖಾನ್​ ಮತ್ತು ನವೀನ್​ ಉಲ್​ ಹಕ್​ ತಲಾ 4 ವಿಕೆಟ್​ ಬೇಟೆಯಾಡಿ ಬಾಂಗ್ಲಾ ಬ್ಯಾಟರ್​ಗಳ ಸೊಕ್ಕಡಗಿಸಿದರು.

Continue Reading

ಕ್ರೀಡೆ

AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

AFG vs BAN: ಆರಂಭಕಾರ ಲಿಟ್ಟನ್​ ದಾಸ್​ ಅಜೇಯ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಲು ಶಕ್ತಿ ಮೀರಿ ಪ್ರಯತ್ನಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಬ್ಯಾಟಿಂಗ್​ ಸಾಥ್​ ಸಿಗದ ಕಾರಣ ಪಂದ್ಯ ಸೋಲು ಕಂಡಿತು.

VISTARANEWS.COM


on

AFG vs BAN
Koo

ಕಿಂಗ್‌ಸ್ಟೌನ್ (ಸೇಂಟ್ ವಿನ್ಸೆಂಟ್): ಅತ್ಯಂತ ರೋಚಕವಾಗಿ ಸಾಗಿದ, ಪ್ರೇಕ್ಷಕರನ್ನು ಉಸಿರು ಬಿಗಿ ಹಿಡಿದು, ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ ಸಣ್ಣ ಮೊತ್ತದ ಮೇಲಾಟದಲ್ಲಿ ಕೊನೆಗೂ ಬಾಂಗ್ಲಾದೇಶ ವಿರುದ್ಧ ಅಫಘಾನಿಸ್ತಾನ 8 ರನ್​ ಅಂತರ ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ ಪ್ರೇವೇಶಿಸಿದೆ. ಆಫ್ಘಾನ್ ಗೆಲುವಿನಿಂದ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಒಂದೊಮ್ಮೆ ಬಾಂಗ್ಲಾ ಗೆಲ್ಲುತ್ತಿದ್ದರೆ ರನ್​ರೇಟ್​ ಆಧಾರದಲ್ಲಿ ಮುಂದಿದ್ದ ಆಸೀಸ್​ಗೆ ಸೆಮಿ ಟಿಕೆಟ್​ ಲಭಿಸುತ್ತಿತ್ತು.

ಹಲವು ಬಾರಿ ಮಳೆಯಿಂದ ಅಡಚಣೆಯಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಅಫಘಾನಿಸ್ತಾನ ರಹಮಾನುಲ್ಲಾ ಗುರ್ಬಾಜ್(43) ಅವರ ಏಕಾಂಗಿ ಬ್ಯಾಟಿಂಗ್​ ಹೋರಾಟದ ನೆರವಿನಿಂದ 5 ವಿಕೆಟ್​ಗೆ 115 ರನ್​ ಬಾರಿಸಿತು. ಬಾಂಗ್ಲಾ ಬ್ಯಾಟಿಂಗ್​ ಸರದಿಯ ವೇಳೆ ಹಲವು ಬಾರಿ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತು. ಅಂತಿಮವಾಗಿ ಒಂದು ಓವರ್​ ಕಡಿತಗೊಳಿಸಿ 19 ಓವರ್​ಗೆ 114 ರನ್​ ಗೆಲುವಿನ ಗುರಿ ನೀಡಲಾಯಿತು. ಈ ಮೊತ್ತವನ್ನು ಬಾಂಗ್ಲಾ ಒಂದು ಹಂತದವರೆಗೆ ಯಶಸ್ವಿಯಾಗಿ ಬೆನ್ನಟ್ಟಿಕೊಂಡು ಬಂದರೂ ಕೂಡ ಅಂತಿಮ ಹಂತದಲ್ಲಿ ನಾಟಕೀಯ ಕುಸಿತ ಕಂಡು 17.5 ಓವರ್​ನಲ್ಲಿ 105 ರನ್​ಗೆ ಸರ್ವಪತನ ಕಂಡಿತು.

ಕಳೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲುಣಿಸುವ ಮೂಲಕ ಭಾರೀ ಸಂಚಲನ ಮೂಡಿಸಿದ್ದ ಅಫಫಾನಿಸ್ತಾದ ಇದೀಗ ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ ಪ್ರವೇಶಿಸಿ ಐತಿಹಾಸಿಕ ಸಾಧನೆ ಮಾಡಿದೆ. ಸೋಮವಾರ ನಡೆದಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ ಸೋಲು ಕಂಡ ಪರಿಣಾಮ ಆಫ್ಘಾನ್​ಗೆ ಸೆಮಿಫೈನಲ್​ ಪ್ರವೇಶಿಸಲು ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸಾಕಿತ್ತು. ಅದರಂತೆ ಆಫ್ಘನ್​ ಈ ಪಂದ್ಯ ಗೆದ್ದು ಸೆಮಿಗೆ ಅರ್ಹತೆ ಪಡೆಯಿತು. ಜೂನ್​ 26ರಂದು ನಡೆಯುವ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಆಫ್ಘನ್​​ ತಂಡ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ.

ಇದನ್ನೂ ಓದಿ Rohit Sharma: ಬಾಬರ್​ ಅಜಂ ದಾಖಲೆ ಸರಿಗಟ್ಟಿದ ರೋಹಿತ್​ ಶರ್ಮ

ಲಿಟ್ಟನ್​ ದಾಸ್​ ಅರ್ಧಶತಕ

ಚೇಸಿಂಗ್​ ವೇಳೆ ಬಾಂಗ್ಲಾದೇಶ ಕೂಡ ಆಫ್ಘನ್​ ತಂಡದಂತೆ ನಾಟಕೀಯ ಕುಸಿತ ಕಂಡಿತು. ಒಂದೆಡೆ ವಿಕೆಟ್​ ಬೀಳುತ್ತಿದ್ದರೂ ಕೂಡ ತಂಡದ ಗೆಲುವಿಗಾಗಿ ಟೊಂಕ ಕಟ್ಟಿ ನಿಂತ ಆರಂಭಕಾರ ಲಿಟ್ಟನ್​ ದಾಸ್​ ಅಜೇಯ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಲು ಶಕ್ತಿ ಮೀರಿ ಪ್ರಯತ್ನಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಬ್ಯಾಟಿಂಗ್​ ಸಾಥ್​ ಸಿಗದ ಕಾರಣ ಪಂದ್ಯ ಸೋಲು ಕಂಡಿತು. ಆರಂಭಿಕನಾಗಿ ಕಣಕ್ಕಿಳಿದ ದಾಸ್​ ಕೊನೆಯ ತನಕ ಬ್ಯಾಟಿಂಗ್​ ನಡೆಸಿ ಅಜೇಯ 54 ರನ್​ ಬಾರಿಸಿದರು. ಪಂದ್ಯ ಸೋತ ಕಾರಣ ಇವರ ಈ ಬ್ಯಾಟಿಂಗ್​ ಹೋರಾಟ ವ್ಯರ್ಥಗೊಂಡಿತು. ಸಣ್ಣ ಮೊತ್ತ ಬಾರಿಸಿದರೂ ಕೂಡ ಆಫ್ಘನ್​ ಬೌಲರ್​ಗಳು ಶಕ್ತಿ ಮೀರಿ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಪಂದ್ಯದಲ್ಲಿ ಹಿಡಿತ ಸಾಧಿಸಿದರು. ನಾಯಕ ರಶೀದ್​ ಖಾನ್​ ಮತ್ತು ನವೀನ್​ ಉಲ್​ ಹಕ್​ ತಲಾ 4 ವಿಕೆಟ್​ ಬೇಟೆಯಾಡಿ ಬಾಂಗ್ಲಾ ಬ್ಯಾಟರ್​ಗಳ ಸೊಕ್ಕಡಗಿಸಿದರು.

ಮೊದಲು ಬ್ಯಾಟಿಂಗ್​ ನಡೆಸಿದ ಅಫಘಾನಿಸ್ತಾನ ಪರ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಹೊರತುಪಡಿಸಿದ ಉಳಿದ ಯಾವ ಬ್ಯಾಟರ್​ಗಳು ಕೂಡ ನಿರೀಕ್ಷಿತ ಬ್ಯಾಟಿಂಗ್​ ನಡೆಸುವಲ್ಲಿ ಯಶಸ್ಸು ಕಾಣಲಿಲ್ಲ. ಇಬ್ರಾಹಿಂ ಜದ್ರಾನ್(18),ಅಜ್ಮತುಲ್ಲಾ(10), ನಬಿ(1) ರನ್​ ಗಳಿಸಿ ವಿಕೆಟ್​ ಕೈಚೆಲ್ಲಿದರು. ರಹಮಾನುಲ್ಲಾ ಗುರ್ಬಾಜ್ 3 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 43 ರನ್​ ಬಾರಿಸಿದರು. ಇವರ ಈ ಬ್ಯಾಟಿಂಗ್​ ಹೋರಾಟದಿಂದ ತಂಡ 100ರ ಗಡಿ ದಾಟಿತು. ಬಾಂಗ್ಲಾ ಪರ ರಿಶಾದ್ ಹೊಸೈನ್ 26 ರನ್​ಗೆ 3 ವಿಕೆಟ್​ ಕಿತ್ತು ಮಿಂಚಿದರು.

Continue Reading

ಕ್ರೀಡೆ

Rohit Sharma: ಬಾಬರ್​ ಅಜಂ ದಾಖಲೆ ಸರಿಗಟ್ಟಿದ ರೋಹಿತ್​ ಶರ್ಮ

Rohit Sharma: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ರೋಹಿತ್ 8 ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಟಿ20 ಮಾದರಿಯ ಕ್ರಿಕೆಟ್​​ನಲ್ಲಿ 200 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ಮೊದಲ ಆಟಗಾರ ಎನಿಸಿಕೊಂಡರು. ಸದ್ಯ ರೋಹಿತ್​ 203* ಸಿಕ್ಸರ್​ಗಳನ್ನು ಬಾರಿಸಿದ್ದಾರೆ.

VISTARANEWS.COM


on

Rohit Sharma
Koo

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯ): ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್‌ ಶರ್ಮ(Rohit Sharma) ಅವರ ಸಿಡಿಲಬ್ಬರದ ಬ್ಯಾಟಿಂಗ್‌ ಸಾಹಸದ ನೆರವಿನಿಂದ ಆಸ್ಟ್ರೇಲಿಯಾ(Australia vs India) ವಿರುದ್ಧ ಸೋಮವಾರ ನಡೆದ ಟಿ20 ವಿಶ್ವಕಪ್(T20 World Cup 2024) ಸೂಪರ್‌-8 ರೋಚಕ ಪಂದ್ಯದಲ್ಲಿ ಭಾರತ ತಂಡ 24 ರನ್ ಗಳ ಅಮೋಘ ಜಯ ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟಿತು. ಈ ಪಂದ್ಯವನ್ನು ಗೆಲ್ಲುವು ಮೂಲಕ ರೋಹಿತ್​ ಶರ್ಮ ಅವರು ಪಾಕ್​ ನಾಯಕ ಬಾಬರ್​ ಅಜಂ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯ ಗೆದ್ದ ನಾಯಕ ಎಂಬ ಹಿರಿಮೆಗೆ ರೋಹಿತ್​ ಪಾತ್ರರಾಗಿದ್ದಾರೆ. ರೋಹಿತ್​ ನಾಯಕತ್ವದಲ್ಲಿ ಭಾರತ 60 ಪಂದ್ಯಗಳನ್ನು ಆಡಿ 48 ಪಂದ್ಯಗಳನ್ನು ಗೆದ್ದಿದೆ. ಬಾಬರ್​ ಅಜಂ ಕೂಡ ನಾಯಕನಾಗಿ 48 ಪಂದ್ಯಗಳನ್ನು ಗೆದ್ದಿದ್ದಾರೆ. ಆದರೆ, 85 ಪಂದ್ಯಗಳನ್ನು ಆಡಿದ್ದಾರೆ. ಹೀಗಾಗಿ ಈ ಪಟ್ಟಿಯಲ್ಲಿ ರೋಹಿತ್​ ಮೊದಲ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ರೋಹಿತ್ 8 ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಟಿ20 ಮಾದರಿಯ ಕ್ರಿಕೆಟ್​​ನಲ್ಲಿ 200 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ಮೊದಲ ಆಟಗಾರ ಎನಿಸಿಕೊಂಡರು. ಸದ್ಯ ರೋಹಿತ್​ 203* ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಇದು ಮಾತ್ರವದಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಅತಿಹೆಚ್ಚು ರನ್​ ಗಳಿಸಿದ ಬ್ಯಾಟರ್ ಆಗಿಯೂ ರೋಹಿತ್ ಹೊರಹೊಮ್ಮಿದ್ದಾರೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ 4165 ರನ್ ಗಳಿಸಿದ್ದಾರೆ. ಪಾಕಿಸ್ತಾನದ ಬಾಬರ್ ಅಜಂ 4145 ಹಾಗೂ ವಿರಾಟ್ ಕೊಹ್ಲಿ 4103 ರನ್​ಗಳೊಂದಿಗೆ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ.

ಪಂದ್ಯ ಗೆದ್ದ ಭಾರತ


ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಒಳಿಸಲ್ಪಟ್ಟ ಭಾರತ 5 ವಿಕೆಟಿಗೆ 205 ರನ್‌ ಬಾರಿಸಿ ಸವಾಲೊಡ್ಡಿತು. ಗುರಿ ಬೆನ್ನಟ್ಟಿದ ಆಸೀಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ ಸೋಲು ಕಂಡಿತು. ಕಳೆದ ವರ್ಷ ನೆಡೆದಿದ್ದ ಏಕದಿನ ವಿಶ್ವಕಪ್ ಫೈನಲ್ ಸೋಲಿನ ಸೇಡನ್ನು ಭಾರತ ಇಲ್ಲಿ ತೀರಿಸಿಕೊಂಡಿತು.

ರೋಹಿತ್‌ 41 ಎಸೆತಗಳಲ್ಲಿ 92 ರನ್‌ ಬಾರಿಸಿ ಟಿ20 ವಿಶ್ವಕಪ್‌ನಲ್ಲಿ ಜೀವನಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶನ ತೋರಿದರು. ಅದರಲ್ಲೂ ಸ್ಟಾರ್ಕ್‌ ಅವರ 3ನೇ ಓವರ್‌ನಲ್ಲಿ ಬರೋಬ್ಬರಿ 29 ರನ್‌ ಚಚ್ಚಿದರು. ರೋಹಿತ್‌ ತಮ್ಮ 92 ರನ್ನುಗಳ ಸೊಗಸಾದ ಬ್ಯಾಟಿಂಗ್‌ ವೇಳೆ 8 ಸಿಕ್ಸರ್‌ ಮತ್ತು 7 ಬೌಂಡರಿ ಹೊಡೆದರು.

Continue Reading

ಕ್ರೀಡೆ

Virat Kohli statue: ನ್ಯೂಯಾರ್ಕ್​ನಲ್ಲಿ ವಿರಾಟ್​ ಕೊಹ್ಲಿ ಆಳೆತ್ತರದ ಪ್ರತಿಮೆ ಅನಾವರಣ

Virat Kohli statue: ಕೊಹ್ಲಿಯ ಪ್ರತಿಮೆಯನ್ನು ಬ್ರಾಂಡ್ ಅಂಬಾಸಿಡರ್ ಆಗಿರುವ ಮ್ಯಾಟ್ರೆಸ್ ಕಂಪನಿಯೊಂದರ ಮಾರ್ಕೆಟಿಂಗ್ ಅಭಿಯಾನದ ಭಾಗವಾಗಿ ನಿರ್ಮಿಸಲಾಗಿದೆ. ಹಾಸಿಗೆಗಳಿಂದ ಒದಗಿಸಲಾದ ಸೌಕರ್ಯವನ್ನು ಹೈಲೈಟ್ ಮಾಡಲು ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

VISTARANEWS.COM


on

Virat Kohli statue
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾದ ಸ್ಟಾರ್​ ಬ್ಯಾಟರ್​, ಹಲವು ದಾಖಲೆಗಳ ಸರದಾರ ವಿರಾಟ್ ಕೊಹ್ಲಿ(Virat Kohli) ಅವರ ಆಳೆತ್ತರದ ಪ್ರತಿಮೆಯೊಂದು(Virat Kohli statue) ಅಮೆರಿಕದ ನ್ಯೂಯಾರ್ಕ್​ನಲ್ಲಿ ನಿರ್ಮಿಸಲಾಗಿದೆ. ನ್ಯೂಯಾರ್ಕ್​ನ ಪ್ರಸಿದ್ದ ಟೈಮ್ಸ್ ಸ್ಕ್ಯಾರ್ ನಲ್ಲಿ ಕೊಹ್ಲಿಯ ಈ ಪ್ರತಿಮೆಯನ್ನು ನಿಲ್ಲಿಸಲಾಗಿದೆ.

2028 ರಲ್ಲಿ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೇ ಕಾರಣದಿಂದ ಕೊಹ್ಲಿಯ ಪ್ರತಿಮೆಯನ್ನು ಬ್ರಾಂಡ್ ಅಂಬಾಸಿಡರ್ ಆಗಿರುವ ಮ್ಯಾಟ್ರೆಸ್ ಕಂಪನಿಯೊಂದರ ಮಾರ್ಕೆಟಿಂಗ್ ಅಭಿಯಾನದ ಭಾಗವಾಗಿ ನಿರ್ಮಿಸಲಾಗಿದೆ. ಹಾಸಿಗೆಗಳಿಂದ ಒದಗಿಸಲಾದ ಸೌಕರ್ಯವನ್ನು ಹೈಲೈಟ್ ಮಾಡಲು ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ವಿಡಿಯೋವನ್ನು ಮ್ಯಾಟ್ರೆಸ್ ಕಂಪನಿ ಹಂಚಿಕೊಂಡಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ.ಆಡಿದ 6 ಪಂದ್ಯಗಳ ಪೈಲಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಸೋಮವಾರ ಡೇರೆನ್ ಸಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಪುರುಷರ ಟಿ 20 ವಿಶ್ವಕಪ್​​ನ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಸೂಪರ್ 8 ಪಂದ್ಯದಲ್ಲಿ ಕೊಹ್ಲಿ ಶೂನ್ಯಕ್ಕೆ ಔಟಾಗಿರುವುದು ಮಂಡೆ ಬಿಸಿಗೆ ಕಾರಣವಾಗಿದೆ. ಐದು ಎಸೆತಗಳನ್ನು ಬಳಸಿಕೊಂಡು ರನ್ ಬಾರಿಸದೇ ನಿರ್ಗಮಿಸಿದರು.

ಇದನ್ನೂ ಓದಿ Virat Kohli : ವಿರಾಟ್​​ ಕೊಹ್ಲಿ ಕತೆ ಮುಗೀತು… ಮತ್ತೆ ಶೂನ್ಯಕ್ಕೆ ಔಟಾದ ಸ್ಟಾರ್​ ಬ್ಯಾಟರ್​!

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರನ್ನು ಎಂದಿನಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಿಸುವುದು ಸೂಕ್ತ ಎನ್ನುವಂತಿದೆ.

Continue Reading
Advertisement
milk price hike
ಪ್ರಮುಖ ಸುದ್ದಿ13 mins ago

Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

Viral News
ಕ್ರೈಂ22 mins ago

ಜಮೀನಿನಲ್ಲಿ ಕೆಲಸ ಮಾಡಲು ನಿರಾಕರಿಸಿದ ಮಹಿಳೆಯ ಮೇಲೆ ಹಲ್ಲೆ; ಖಾಸಗಿ ಅಂಗಕ್ಕೆ ಖಾರದ ಪುಡಿ ಎರಚಿ ವಿಕೃತಿ ಮೆರೆದ ಸಂಬಂಧಿಕರು

AFG vs BAN
ಕ್ರೀಡೆ23 mins ago

AFG vs BAN: ‘ನಿಧಾನವಾಗಿ ಆಡಿ, ಮಳೆ ಬರುತ್ತೆ’; ಆಫ್ಘನ್​ ಆಟಗಾರರಿಗೆ ಸಲಹೆ ನೀಡಿದ ಕೋಚ್​; ವಿಡಿಯೊ ವೈರಲ್​

cm siddaramaiah DK Shivakumar power fight
ಪ್ರಮುಖ ಸುದ್ದಿ51 mins ago

CM Siddaramaiah: ಡಿಸಿಎಂ ವಿಚಾರದಲ್ಲಿ ಮತ್ತೆ ಒಡೆದುಹೋದ ಕಾಂಗ್ರೆಸ್‌; ಸಿದ್ದು- ಡಿಕೆಶಿ ಬಣದ ನಡುವೆ ಡಿಶುಂ ಡಿಶುಂ

Viral Video
Latest53 mins ago

Viral Video: ವೃದ್ಧ ರೋಗಿಯ ಮೇಲೆ ದರ್ಪ ತೋರಿದ ಆಸ್ಪತ್ರೆ ಸಿಬ್ಬಂದಿ; ಆಘಾತಕಾರಿ ವಿಡಿಯೊ

LeT Associate killed
ದೇಶ60 mins ago

LeT Associate killed: ಪ್ರಚೋದನಕಾರಿ ಧರ್ಮ ಪ್ರಚಾರಕ ಖ್ವಾರಿ ಇದ್ರಿಸ್‌ ಹತ್ಯೆ; ವಿಷಪೂರಿತ ಸೂಜಿಯಿಂದ ದಾಳಿ!

Udhayanidhi Stalin
ಕರ್ನಾಟಕ1 hour ago

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

AFG vs BAN
ಕ್ರೀಡೆ2 hours ago

AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

Mamata Banerjee
ದೇಶ2 hours ago

Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

physical abuse mandya
ಕ್ರೈಂ2 hours ago

Physical Abuse: ಅಪ್ರಾಪ್ತ ಮಗಳನ್ನು ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌