SL VS NZ: ಮ್ಯಾಥ್ಯೂಸ್‌ ಶತಕ; ಕಿವೀಸ್‌ ಗೆಲುವಿಗೆ ಬೃಹತ್‌ ಮೊತ್ತದ ಗುರಿ - Vistara News

ಕ್ರಿಕೆಟ್

SL VS NZ: ಮ್ಯಾಥ್ಯೂಸ್‌ ಶತಕ; ಕಿವೀಸ್‌ ಗೆಲುವಿಗೆ ಬೃಹತ್‌ ಮೊತ್ತದ ಗುರಿ

ನ್ಯೂಜಿಲ್ಯಾಂಡ್‌ ವಿರುದ್ಧದ ಮೊದಲ ಟೆಸ್ಟ್‌ನ ದ್ವಿತೀಯ ಇನಿಂಗ್ಸ್‌ನಲ್ಲಿ ಶ್ರೀಲಂಕಾ ತಂಡದ ಹಿರಿಯ ಆಟಗಾರ ಏಂಜೆಲೊ ಮ್ಯಾಥ್ಯೂಸ್‌ ಅವರು ಶತಕ ಬಾರಿಸಿದ್ದಾರೆ.

VISTARANEWS.COM


on

SL VS NZ: Mathews century; Big target for Kiwis win
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕ್ರೈಸ್ಟ್‌ಚರ್ಚ್‌: ಹಿರಿಯ ಬ್ಯಾಟರ್‌ ಏಂಜೆಲೊ ಮ್ಯಾಥ್ಯೂಸ್‌(115)(Angelo Mathews) ಅವರ ಶತಕದ ನೆರವಿನಿಂದ ಶ್ರೀಲಂಕಾ ತಂಡ ನ್ಯೂಜಿಲ್ಯಾಂಡ್‌(SL VS NZ) ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಬೃಹತ್‌ ಮೊತ್ತ ಪೇರಿಸಿ ಸವಾಲೊಡ್ಡಿದೆ. ಕಿವೀಸ್‌ ಗೆಲುವಿಗೆ 285 ರನ್‌ಗಳ ಗುರಿ ನೀಡಿದೆ.

ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನ ಶ್ರೀಲಂಕಾ ಎರಡನೇ ಇನಿಂಗ್ಸ್‌ನಲ್ಲಿ 302 ರನ್‌ಗಳಿಗೆ ಆಲೌಟಾಯಿತು. ಗುರಿ ಬೆನ್ನಟ್ಟುತ್ತಿರುವ ಆತಿಥೇಯ ಕಿವೀಸ್‌ ದಿನದಾಟದ ಅಂತ್ಯಕ್ಕೆ ಒಂದು ವಿಕೆಟ್‌ ನಷ್ಟಕ್ಕೆ 28 ರನ್‌ ಗಳಿಸಿ ಅಂತಿಮ ದಿನದಾಟಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದೆ. ಕಿವೀಸ್‌ ಗೆಲುವಿಗೆ ಇನ್ನೂ 257 ರನ್‌ ಬಾರಿಸಬೇಕಿದೆ. ಟಾಮ್‌ ಲ್ಯಾಥಮ್‌ (11*) ಮತ್ತು ಕೇನ್‌ ವಿಲಿಯಮ್ಸನ್‌ (7*) ಕ್ರೀಸ್‌ನಲ್ಲಿದ್ದಾರೆ.

ಮೂರು ವಿಕೆಟ್‌ಗಳಿಗೆ 83 ರನ್‌ಗಳಿಂದ ಆಟ ಮುಂದುವರಿಸಿದ್ದ ಶ್ರೀಲಂಕಾ ತಂಡಕ್ಕೆ ಮ್ಯಾಥ್ಯೂಸ್‌ ಆಸರೆಯಾದರು. 235 ಎಸೆತಗಳನ್ನು ಎದುರಿಸಿದ ಅವರು 11 ಬೌಂಡರಿ ಸಹಿತ 115 ರನ್‌ ಬಾರಿಸಿದರು. ಈ ಮೂಲಕ ಕಿವೀಸ್‌ ಪಡೆಯ ಮೇಲುಗೈ ಕನಸಿಗೆ ಮ್ಯಾಥ್ಯೂಸ್‌ ಅಡ್ಡಿಯಾದರು.

ಇದನ್ನೂ ಓದಿ IND VS AUS: ಟೀಮ್‌ ಇಂಡಿಯಾದಲ್ಲಿ ರಾಹುಲ್‌ ಗತಿ ಏನು? ಏಕದಿನ ಸರಣಿಯಲ್ಲಿ ಅವಕಾಶ ಸಿಗಲಿದೆಯಾ?

ಸಂಕ್ಷಿಪ್ತ ಸ್ಕೋರ್‌

ಶ್ರೀಲಂಕಾ ಮೊದಲ ಇನಿಂಗ್ಸ್‌: 92.4 ಓವರ್‌ಗಳಲ್ಲಿ 355. ನ್ಯೂಜಿಲ್ಯಾಂಡ್‌ ಮೊದಲ ಇನಿಂಗ್ಸ್‌: 107.3 ಓವರ್‌ಗಳಲ್ಲಿ 373. ಎರಡನೇ ಇನಿಂಗ್ಸ್‌ ಶ್ರೀಲಂಕಾ: 105.3 ಓವರ್‌ಗಳಲ್ಲಿ 302 (ಏಂಜೆಲೊ ಮ್ಯಾಥ್ಯೂಸ್‌ 115, ದಿನೇಶ್‌ ಚಾಂಡಿಮಲ್‌ 42, ಧನಂಜಯ ಡಿಸಿಲ್ವಾ ಔಟಾಗದೆ 47, ಬ್ಲೇರ್‌ ಟಿಕ್ನೆರ್‌ 100ಕ್ಕೆ 4, ಮ್ಯಾಟ್‌ ಹೆನ್ರಿ 71ಕ್ಕೆ 3) ನ್ಯೂಜಿಲ್ಯಾಂಡ್‌ ದ್ವಿತೀಯ ಇನಿಂಗ್ಸ್‌ ಬ್ಯಾಟಿಂಗ್‌ ಮುಂದುವರಿಕೆ : 17 ಓವರ್‌ಗಳಲ್ಲಿ 1 ವಿಕೆಟ್‌ಗೆ 28 (ಟಾಮ್‌ ಲ್ಯಾಥಮ್‌ ಬ್ಯಾಟಿಂಗ್‌ 11, ಕೇನ್‌ ವಿಲಿಯಮ್ಸನ್‌ ಬ್ಯಾಟಿಂಗ್‌ 7).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

IND vs SL: ರಾಹುಲ್​ ಬ್ಯಾಟಿಂಗ್​ ವೈಫಲ್ಯಕ್ಕೆ ತಂಡದ ಕೆಲ ನಿರ್ಧಾರವೇ ಕಾರಣ ಎನ್ನುವ ಮಾತುಗಳು ಕೂಡ ಕೇಳಿ ಬಂದಿವೆ. ಅನುಭವಿ ಆಟಗಾರನಾಗಿದ್ದರೂ ಕೂಡ ಅವರನ್ನು 7ನೇ ಕ್ರಮಾಂಕದಲ್ಲಿ ಆಡಿಸಿದ್ದು ಕೂಡ ಅವರ ವೈಫಲ್ಯಕ್ಕೆ ಕಾರಣ ಎಂದು ಅನೇಕ ಮಾಜಿ ಆಟಗಾರರು ಟೀಕೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

IND vs SL
Koo

ಕೊಲಂಬೊ: ಶ್ರೀಲಂಕಾ(IND vs SL) ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಹೀನಾಯವಾ್ಗಿ ಸೋಲು ಕಂಡಿದ್ದ ಭಾರತ ನಾಳೆ ನಡೆಯುವ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಈ ಪಂದ್ಯಕ್ಕೆ ತಂಡದಲ್ಲಿ ಹಲವು ಬದಲಾವಣೆ ಮಾಡುವ ಸಾಧ್ಯತೆ ಕಂಡುಬಂದಿದೆ. ಮೂಲಗಳ ಪ್ರಕಾರ ಆಯ್ಕೆ ಸಮಿತಿ ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರನ್ನು ಕೈ ಬಿಟ್ಟು ರಿಷಭ್​ ಪಂತ್​ಗೆ(Rishabh Pant) ಅವಕಾಶ ನೀಡಲಿದೆ ಎನ್ನಲಾಗಿದೆ.

ರಾಹುಲ್​ ಕಳೆದ ದ್ವಿತೀಯ ಪಂದ್ಯದಲ್ಲಿ ಶೂನ್ಯಕ್ಕೆ ನಿರ್ಗಮಿಸಿದ್ದರು. ಮೊದಲ ಪಂದ್ಯದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ್ದರು. ಇದೀಗ ಸರಣಿ ಸೋಲಿನ ಭೀತಿಯಲ್ಲಿರುವ ಭಾರತ ತಂಡ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ಎದುರಾಳಿ ಬೌಲರ್​ಗಳ ಲೆಕ್ಕಾಚಾರವನ್ನು ಬುಡಮೇಲು ಮಾಡುವಂತಹ ಪಂತ್​ ಅವರನ್ನು ಮೂರನೇ ಪಂದ್ಯದಲ್ಲಿ ಆಡಿಸಲು ತಂಡ ಮುಂದಾಗಿದೆ ಎಂದು ತಿಳಿದುಬಂದಿದೆ.

ರಾಹುಲ್​ ಬ್ಯಾಟಿಂಗ್​ ವೈಫಲ್ಯಕ್ಕೆ ತಂಡದ ಕೆಲ ನಿರ್ಧಾರವೇ ಕಾರಣ ಎನ್ನುವ ಮಾತುಗಳು ಕೂಡ ಕೇಳಿ ಬಂದಿವೆ. ಅನುಭವಿ ಆಟಗಾರನಾಗಿದ್ದರೂ ಕೂಡ ಅವರನ್ನು 7ನೇ ಕ್ರಮಾಂಕದಲ್ಲಿ ಆಡಿಸಿದ್ದು ಕೂಡ ಅವರ ವೈಫಲ್ಯಕ್ಕೆ ಕಾರಣ ಎಂದು ಅನೇಕ ಮಾಜಿ ಆಟಗಾರರು ಟೀಕೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲ ನೆಟ್ಟಿಗರು ರಾಹುಲ್​ ವಿಷಯದಲ್ಲಿ ಮಾತ್ರ ಏಕೆ ಹೀಗಾಗುತ್ತಿದೆ ಎಂದು ಬಿಸಿಸಿಐ ಮತ್ತು ಆಯ್ಕೆ ಸಮಿತಿಗೆ ಪ್ರಶ್ನೆ ಮಾಡಿದ್ದಾರೆ.

ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನ ಪಿಚ್​ ಸಿನ್ನರ್​ಗಳಿಗೆ ಹೆಚ್ಚಿನ ನೆರವು ನೀಡುವ ಕಾರಣ ಶಿವಂ ದುಬೆ ಅವರನ್ನು ಈ ಪಂದ್ಯದಿಂದ ಕೈಬಿಟ್ಟು ಅವರ ಬದಲಿಗೆ ಸ್ಪಿನ್​ ಆಲ್​ರೌಂಡರ್​ ಆಗಿರುವ ರಿಯಾನ್ ಪರಾಗ್ ಸ್ಥಾನ ಪಡೆಯಬಹುದು. ಟಿ20 ಸರಣಿಯಲ್ಲಿ ಬ್ಯಾಟಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಪರಾಗ್​ ಉತ್ತಮ ಪ್ರದರ್ಶನ ತೋರಿದ್ದರು. ಹೀಗಾಗಿ ಇವರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ.

ಇದನ್ನೂ ಓದಿ IND vs SL ODI : ಎರಡನೇ ಏಕ ದಿನ ಪಂದ್ಯದಲ್ಲಿ ಭಾರತ ತಂಡಕ್ಕೆ32 ರನ್ ಸೋಲು, ಸರಣಿಯಲ್ಲಿ ಲಂಕಾಗೆ ಮುನ್ನಡೆ

ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್​ ಪರ ಘಾತಕ ಬೌಲಿಂಗ್​ ಮೂಲಕ ಹಲವು ವಿಕೆಟ್​ ಕಿತ್ತಿದ್ದ ಹರ್ಷಿತ್ ರಾಣಾ ಕೂಡ ಅವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆ ಇದೆ. ದುಬಾರಿಯಾಗಿ ಕಂಡು ಬರುತ್ತಿರುವ ಮೊಹಮ್ಮದ್​ ಸಿರಾಜ್​ ಬದಲಿಗೆ ಇವರು ಆಡುವ ಸಾಧ್ಯತೆ ಇದೆ. ಗಂಭೀರ್​ ಅವರ ಮಾರ್ಗದರ್ಶನಲ್ಲಿ ಆಡಿದ ಅನುಭವ ಕೂಡ ಹರ್ಷಿತ್ ರಾಣಾಗೆ ಇದೆ.

ಮೂರನೇ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್​ ಪಂತ್​ (ವಿಕೀ), ರಿಯಾನ್​ ಪರಾಗ್​, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.

Continue Reading

ಕ್ರೀಡೆ

Hasin Jahan: ಮೊಹಮ್ಮದ್​ ಶಮಿ ಕುಟುಂಬದ ವಿರುದ್ಧ ವ್ಯಂಗ್ಯವಾಡಿದ ವಿಚ್ಛೇದಿತ ಪತ್ನಿ

Hasin Jahan: ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಹಸೀನ್ ಜಹಾನ್, ಶಮಿ ಮಾತ್ರವಲ್ಲ ಅವರ ಕುಟುಂಬ ಸದಸ್ಯರು ಕೂಡ ನನಗೆ ಅತಿಯಾದ ಹಿಂಸೆ ನೀಡಿದ್ದಾರೆ, ಆದರೆ, ನಾನು ಇನ್ನೂ ನಾಶವಾಗಿಲ್ಲ ಎಂದು ಬರೆಯುವ ಮೂಲಕ ಶಮಿ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.

VISTARANEWS.COM


on

Hasin Jahan
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ(Mohammed Shami) ಅವರ ವಿರುದ್ಧ ಸದಾ ಒಂದಿಲ್ಲೊಂದು ಕಾರಣಗಳಿಂದ ಟೀಕಿಸುತ್ತಿರುವ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್(Hasin Jahan) ಈ ಬಾರಿ ಶಮಿಯ ಕುಟುಂಬದ ವಿರುದ್ಧ ಅನಗತ್ಯ ಟೀಕೆ ಮಾಡಿದ್ದಾರೆ.

ಹೌದು, ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಹಸೀನ್ ಜಹಾನ್, ಶಮಿ ಮಾತ್ರವಲ್ಲ ಅವರ ಕುಟುಂಬ ಸದಸ್ಯರು ಕೂಡ ನನಗೆ ಅತಿಯಾದ ಹಿಂಸೆ ನೀಡಿದ್ದಾರೆ, ಆದರೆ, ನಾನು ಇನ್ನೂ ನಾಶವಾಗಿಲ್ಲ ಎಂದು ಬರೆಯುವ ಮೂಲಕ ಶಮಿ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.

ಮೂವರು ಮಹಿಳೆಯರು ಹೊಂಡವೊಂದಕ್ಕೆ ಬಿದ್ದು ಮೇಲೆ ಬರಲು ಸಾಧ್ಯವಾಗದೇ ಇದ್ದಾಗ ಒಂದು ಮಹಿಳೆ ತನ್ನ ತಲೆಯ ಮೇಲೆ ಮರದ ತುಂಡನ್ನು ಹೊತ್ತುಕೊಂಡು ಉಳಿದ ಇಬ್ಬರು ಮಹಿಳೆಯರನ್ನು ರಕ್ಷಿಸಿ ಮೇಲಕ್ಕೆ ಹೋಗುವಂತೆ ಸಹಾಯ ಮಾಡುತ್ತಾಳೆ. ಬಳಿಕ ತಾನು ಮೇಲೆ ಬರಲು ಸಹಾಯ ಯಾಚಿಸಿದಾಗ ಮೇಲಿದ್ದ ಇಬ್ಬರು ಮಹಿಳೆಯರು ಬಂಡೆಕಲ್ಲುಗಳನ್ನು ಕೆಳಗೆ ಹಾಕಿ ಈಕೆಯನ್ನು ನಾಶ ಪಡಿಸಲು ಮುಂದಾಗುತ್ತಾರೆ. ಹೇಗೋ ಕಷ್ಟಗಳನ್ನು ಸಹಿಸಿಕೊಂಡು ಮೇಲೆ ಬಂದ ತಕ್ಷಣ ತನಗೆ ಮೋಸ ಮಾಡಿದ ಇಬ್ಬರು ಮಹಿಳೆಯರು ನಿಂತಿದ್ದ ಜಾಗ ಕುಸಿದು ಬಿದ್ದು ಇಬ್ಬರು ಪ್ರಪಾತಕ್ಕೆ ಬೀಳುತ್ತಾರೆ. ಈ ವಿಡಿಯೊವನ್ನು ಹಂಚಿಕೊಂಡಿರುವ ಹಸೀನ್ ಜಹಾನ್ ತನ್ನನ್ನು ಶಮಿ ಕುಟುಂಬ ನಾಶ ಪಡೆಸಲು ಮುಂದಾಗಿತ್ತು. ಆದರೆ, ನಾನು ನಾಶವಾಗಿಲ್ಲ ಎಂದು ಎಂದು ಬರೆದುಕೊಂಡು ಶಮಿ ಕುಟುಂಬ ತನಗೆ ಚಿತ್ರಹಿಂಸೆ ನೀಡಿತ್ತು ಎಂದು ಹೇಳಿಕೊಂಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಹಸೀನ್ ಜಹಾನ್ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಣ್ಣು ಮಿಟುಕಿಸುವ ಒಂದು ನಿಮಿಷದ ವಿಡಿಯೊ ಹಂಚಿಕೊಂಡಿರುವ ಹಸೀನ್ ಜಹಾನ್, ನಾಯಿಗಳ ದಂಡು ಹೆಣ್ಣು ಮಕ್ಕಳ ಹಿಂದಿನಿಂದ ಮಾತ್ರ ಬೊಗಳುತ್ತದೆ ಎಂದು ಬರೆದುಕೊಂಡಿದ್ದರು.

ಕೆಲವು ತಿಂಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ರೋಹಿತ್​ ಶರ್ಮ ಅವರು ತಮ್ಮ ಪುಟ್ಟ ಮಗಳು ಸಮೈರಾ ತೊಡೆ ಮೇಲೆ ಹಾಯಾಗಿ ಮಲಗಿರುವ ಫೋಟೊ ಹಂಚಿಕೊಂಡಿದ್ದ ಹಸೀನ್ ಜಹಾನ್, ಹೆಚ್ಚಿನ ತಂದೆಯಂದಿರು ತಮ್ಮ ಪುಟ್ಟ ಮಗಳನ್ನು ದೇವರಂತೆ ಕಂಡು ಅವರಿಂದ ಶಾಂತಿ ಕಂಡುಕೊಳ್ಳುತ್ತಾರೆ. ಮತ್ತು ಕೆಲವು ತಂದೆಯರು ವೇಶ್ಯೆಯರ ಮಡಿಲಲ್ಲಿ!. ಅಲ್ಲಾಹು ಯಾವುದೇ ಮಗಳಿಗೆ ಇಂತಹ ಗುಣವಿಲ್ಲದ ತಂದೆಯನ್ನು ಎಂದಿಗೂ ನೀಡದಿರಲಿ. ಆಮೀನ್. ನನ್ನ ಪುಟ್ಟ ಮಗಳಿಗೆ ತಾಳ್ಮೆಯನ್ನು ನೀಡುವಂತೆ ನಾನು ಅಲ್ಲಾಹುವಿನನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್​ ಮಾಡಿ ಶಮಿಯನ್ನು ಅನಗತ್ಯವಾಗಿ ಕೆಣಕ್ಕಿದ್ದರು.

ಇದನ್ನೂ ಓದಿ Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

16 ಆಗಸ್ಟ್ 2018 ರಂದು, ಹಸಿನ್ ಜಹಾನ್(Hasin Jahan) ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಹಲ್ಲೆ, ಅತ್ಯಾಚಾರ, ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗನ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಗಳ ಖರ್ಚಿಗೆ ಹಾಗೂ ತನಗೆ ಯಾವುದೇ ರೀತಿಯ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಹಸಿನ್ ಜಹಾನ್ ದೂರಿನಲ್ಲಿ ಅಪಾದಿಸಿದ್ದರು.

ಜೀವನಾಂಶ ನೀಡುತ್ತಿರುವ ಶಮಿ

2018 ರಲ್ಲಿ ಹಸಿನ್ ಜಹಾನ್ ಅವರು ಮಾಸಿಕ 10 ಲಕ್ಷ ರೂ ಜೀವನಾಂಶವನ್ನು ಕೋರಿ ಶಮ್ಮಿ ವಿರುದ್ಧ ಕಾನೂನು ಮೊಕದ್ದಮೆ ಹೂಡಿದ್ದರು. ವೈಯಕ್ತಿಕ ವೆಚ್ಚಕ್ಕಾಗಿ 7 ಲಕ್ಷ ರೂ., ತಮ್ಮ ಮಗಳ ನಿರ್ವಹಣೆಗಾಗಿ 3 ಲಕ್ಷ ರೂ. ಕೇಳಿದ್ದರು. ಇದರ ವಿಚಾರಣೆ ನಡೆಸಿದ ಕೋಲ್ಕೊತಾ ನ್ಯಾಯಾಲಯ ಇದೇ ವರ್ಷದ ಜನವರಿಯಲ್ಲಿ ತೀರ್ಪು ಪ್ರಕಟಿಸಿ, ಶಮಿ ಅವರು ಪತ್ಯೇಕವಾಗಿ ವಾಸಿಸುತ್ತಿರುವ ಪತ್ನಿ ಜಹಾನ್​ಗೆ ತಿಂಗಳಿಗೆ 50 ಸಾವಿರ ರೂ. ನೀಡುವಂತೆ ಸೂಚಿಸಿತ್ತು. ಕೋರ್ಟ್​ ಸೂಚನೆಯಂತೆ ಶಮಿ ಅವರು ಈ ಮೊತ್ತವನ್ನು ನೀಡಿತ್ತಲೇ ಬರುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

Dinesh Karthik : ದಕ್ಷಿಣ ಆಫ್ರಿಕಾದ ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್​ ತಂಡ ಸೇರಿದ ದಿನೇಶ್ ಕಾರ್ತಿಕ್​

Dinesh Karthik : ಜೂನ್​ನಲ್ಲಿ 39ನೇ ವರ್ಷಕ್ಕೆ ಕಾಲಿಟ್ಟ ದಿನದಂದು ಭಾರತೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ ನಂತರ ಕಾರ್ತಿಕ್ ಆಡಲಿರುವ ಮೊದಲ ಪಂದ್ಯಾವಳಿ ಎಸ್ಎ 20. ಭಾರತಕ್ಕಾಗಿ 180 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಕಾರ್ತಿಕ್ ಕೊನೆಯ ಬಾರಿಗೆ ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಾಣಿಸಿಕೊಂಡಿದ್ದರು. ಇ

VISTARANEWS.COM


on

Dinesh Karthik
Koo

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್​ಕೀಪರ್ ಬ್ಯಾಟರ್​ ದಿನೇಶ್ ಕಾರ್ತಿಕ್ (Dinesh Karthik) ಎಸ್ಎ 20 ಯಲ್ಲಿ ಕಾಣಿಸಿಕೊಂಡ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಜನವರಿ 9 ರಿಂದ ಪ್ರಾರಂಭವಾಗುವ ಹೊಸ ಋತುವಿಗೆ ಮುಂಚಿತವಾಗಿ ಕಾರ್ತಿಕ್ ವಿದೇಶಿ ಆಟಗಾರನಾಗಿ ಪಾರ್ಲ್ ರಾಯಲ್ಸ್​​ ಫ್ರಾಂಚೈಸಿ ಸೇರಿಕೊಂಡಿದ್ದಾರೆ.

ಜೂನ್​ನಲ್ಲಿ 39ನೇ ವರ್ಷಕ್ಕೆ ಕಾಲಿಟ್ಟ ದಿನದಂದು ಭಾರತೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ ನಂತರ ಕಾರ್ತಿಕ್ ಆಡಲಿರುವ ಮೊದಲ ಪಂದ್ಯಾವಳಿ ಎಸ್ಎ 20. ಭಾರತಕ್ಕಾಗಿ 180 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಕಾರ್ತಿಕ್ ಕೊನೆಯ ಬಾರಿಗೆ ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಾಣಿಸಿಕೊಂಡಿದ್ದರು. ಇತ್ತೀಚೆಗೆ, ಅವರು ತಮ್ಮ ಮಾಜಿ ಆರ್​ಸಿಬಿ ತಂಡದ ಸಹ ಆಟಗಾರ ಎಬಿ ಡಿವಿಲಿಯರ್ಸ್ ಅವರೊಂದಿಗೆ ಎಸ್ಎ 20 ಪಂದ್ಯಾವಳಿಯ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದರು.

ಕಾರ್ತಿಕ್ ಟಿ20 ಸರ್ಕೀಟ್​ ನ ಅಪಾರ ಅನುಭವ ಹೊಂದಿದ್ದರು. ಅಲ್ಲದೆ ಕ್ರಿಕೆಟ್​ನ ಪಂಡಿತರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಪ್ರಸ್ತುತ ಸ್ಕೈ ಸ್ಪೋರ್ಟ್ಸ್ ಪರ ಹಂಡ್ರೆಟ್ ಟೂರ್ನಿಯ ವೀಕ್ಷಕ ವಿವರಣೆಗಾರರಾಗಿರುವ ಕಾರ್ತಿಕ್, 401 ಟಿ 20 ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್​​ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಸೇರಿದಂತೆ ಆರು ತಂಡಗಳಿಗಾಗಿ ಆಡಿದ್ದಾರೆ. 17 ಋತುಗಳಲ್ಲಿ ಕೇವಲ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ಕಾರ್ತಿಕ್ ಐಪಿಎಲ್​​ನ ಅತ್ಯಂತ ಫಿಟ್ ಆಟಗಾರರಲ್ಲಿ ಒಬ್ಬರಾಗಿದ್ದರು.

ವಿದೇಶಿ ಟಿ 20 ಲೀಗ್​​ನಲ್ಲಿ ಭಾಗವಹಿಸಲು ನಿವೃತ್ತ ಭಾರತೀಯ ಆಟಗಾರರಿಗೆ ಮಾತ್ರ ಬಿಸಿಸಿಐ ಅವಕಾಶ ನೀಡುತ್ತದೆ. ಕಳೆದ ವರ್ಷ ಅಂಬಾಟಿ ರಾಯುಡು ಸಿಪಿಎಲ್​​ನಲ್ಲಿ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಆಡಿದರೆ, ರಾಬಿನ್ ಉತ್ತಪ್ಪ ಮತ್ತು ಯೂಸುಫ್ ಪಠಾಣ್ ಐಎಲ್​ಟಿ 20 ನಲ್ಲಿ ದುಬೈ ಕ್ಯಾಪಿಟಲ್ಸ್ ಪರ ಆಡಿದ್ದರು. ಎರಡು ವರ್ಷಗಳ ಹಿಂದೆ ಸುರೇಶ್ ರೈನಾ ಅಬುಧಾಬಿ ಟಿ10ಯಲ್ಲಿ ಡೆಕ್ಕನ್ ಗ್ಲಾಡಿಯೇಟರ್ಸ್ ತಂಡದ ಭಾಗವಾಗಿದ್ದರು.

ಇದನ್ನೂ ಓದಿ: Smriti Mandhana : ಐಸಿಸಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಸ್ಮೃತಿ ಮಂದಾನ, ಶಫಾಲಿ ವರ್ಮಾ ಆಯ್ಕೆ

ಕಳೆದ ವಾರ ಹೊಸ ಋತುವಿಗೆ ಮುಂಚಿತವಾಗಿ ಪಾರ್ಲ್ ರಾಯಲ್ಸ್ ತಮ್ಮ ಉಳಿಸಿಕೊಳ್ಳುವಿಕೆಯನ್ನು ಘೋಷಿಸಿತು, ನಾಯಕ ಡೇವಿಡ್ ಮಿಲ್ಲರ್, ಲುಂಗಿ ಎನ್​​ಗಿಡಿ, ಆಂಡಿಲೆ ಫೆಹ್ಲುಕ್ವಾಯೊ ಸ್ಥಾನ ಪಡೆದಿದ್ದಾರೆ. ಕಳೆದ ಎಸ್ಎ 20 ಆವೃತ್ತಿಯಲ್ಲಿ ರಾಯಲ್ಸ್ ಕ್ವಾಲಿಫೈಯರ್ಸ್​​ ಪ್ರವೇಶಿಸಿತು. ಜೋಬರ್ಗ್ ಸೂಪರ್ ಕಿಂಗ್ಸ್ ವಿರುದ್ಧ ಎಲಿಮಿನೇಟರ್​ನಲ್ಲಿ ಒಂಬತ್ತು ವಿಕೆಟ್​ಗಳ ಗೆಲುವು ಸೇರಿದಂತೆ ಸತತ ಐದು ಸೋಲುಗಳನ್ನು ಅನುಭವಿಸಿತು.

ಕಾರ್ತಿಕ್ ಅವರಲ್ಲದೆ, ಪಾರ್ಲ್ ರಾಯಲ್ಸ್ ಮುಂಬರುವ ಋತುವಿನಲ್ಲಿ ಇಂಗ್ಲೆಂಡ್ ಬ್ಯಾಟರ್​​ ಜೋ ರೂಟ್ ಅವರ ಸೇವೆಗಳನ್ನು ಸಹ ಪಡೆದುಕೊಂಡಿದೆ.

ಪಾರ್ಲ್ ರಾಯಲ್ಸ್ ತಂಡ ಹೀಗಿದೆ

ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಜೋರ್ನ್ ಫೋರ್ಟುಯಿನ್, ಆಂಡಿಲೆ ಫೆಹ್ಲುಕ್ವಾಯೊ, ದಿನೇಶ್ ಕಾರ್ತಿಕ್, ಮಿಚೆಲ್ ವ್ಯಾನ್ ಬುರೆನ್, ಕೋಡಿ ಯೂಸುಫ್, ಕೀತ್ ಡಡ್ಜೆನ್, ಎನ್ಕಾಬಾ ಪೀಟರ್, ಕ್ವೆನಾ ಮಾಫಾಕಾ, ಲುವಾನ್-ಡ್ರೆ ಪ್ರಿಟೋರಿಯಸ್, ದಯಾನ್ ಗಲೀಮ್.

Continue Reading

ಕ್ರೀಡೆ

Smriti Mandhana : ಐಸಿಸಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಸ್ಮೃತಿ ಮಂದಾನ, ಶಫಾಲಿ ವರ್ಮಾ ಆಯ್ಕೆ

Smriti Mandhana, :ಸ್ಮೃತಿ ಮಂದಾನ ಅವರು ಜೂನ್ 2024 ರ ಐಸಿಸಿ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ವಿಜೇತರಾಗಿದ್ದರು. ಸತತ ಎರಡನೇ ತಿಂಗಳು ಮತ್ತೆ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಅವರು ಇತ್ತೀಚೆಗೆ ಬ್ಯಾಟಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಎಡಗೈ ಆಟಗಾರ್ತಿ ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ತವರು ಸರಣಿಯಲ್ಲಿ ಹೆಚ್ಚು ಪ್ರಭಾವಶಾಲಿಯಾಗಿದ್ದರು. ಈ ತಿಂಗಳು ತಮ್ಮ ಫಾರ್ಮ್ ಅನ್ನು ಮುಂದುವರಿಸಿದ್ದಾರೆ.

VISTARANEWS.COM


on

Smriti Mandhana,
Koo

ಬೆಂಗಳೂರು: ಜುಲೈ 2024ರ ಐಸಿಸಿ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ನಾಮನಿರ್ದೇಶನಗಳನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಮೂವರು ಆಟಗಾರರಲ್ಲಿ ಇಬ್ಬರು ಭಾರತೀಯರು ಸ್ಥಾನ ಪಡೆದಿದ್ದಾರೆ. ಎಲ್ಲಾ ಮೂವರು ಆಟಗಾರರು ಆರಂಭಿಕ ಬ್ಯಾಟರ್​ಗಳು. ಸ್ಮೃತಿ ಮಂದಾನ (Smriti Mandhana) ಮತ್ತು ಶಫಾಲಿ ವರ್ಮಾ ಪ್ರತಿಷ್ಠಿತ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಇಬ್ಬರು ಭಾರತೀಯರು. ಇಬ್ಬರೂ ಆಟದ ಎಲ್ಲಾ ಸ್ವರೂಪಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಇನ್ನೊಬ್ಬ ಆಟಗಾರ ಶ್ರೀಲಂಕಾದ ನಾಯಕ ಚಾಮರಿ ಅಟ್ಟಪ್ಟು

ಸ್ಮೃತಿ ಮಂದಾನ ಅವರು ಜೂನ್ 2024 ರ ಐಸಿಸಿ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ವಿಜೇತರಾಗಿದ್ದರು. ಸತತ ಎರಡನೇ ತಿಂಗಳು ಮತ್ತೆ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಅವರು ಇತ್ತೀಚೆಗೆ ಬ್ಯಾಟಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಎಡಗೈ ಆಟಗಾರ್ತಿ ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ತವರು ಸರಣಿಯಲ್ಲಿ ಹೆಚ್ಚು ಪ್ರಭಾವಶಾಲಿಯಾಗಿದ್ದರು. ಈ ತಿಂಗಳು ತಮ್ಮ ಫಾರ್ಮ್ ಅನ್ನು ಮುಂದುವರಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾ ಕಪ್ 2024 ರಲ್ಲಿ, ಮಂದಾನ ಐದು ಪಂದ್ಯಗಳಲ್ಲಿ 57.66 ಸರಾಸರಿ ಮತ್ತು 137.30 ಸ್ಟ್ರೈಕ್ ರೇಟ್​​ನಲ್ಲಿ 173 ರನ್ ಗಳಿಸಿದ್ದಾರೆ. ಶ್ರೀಲಂಕಾ ವಿರುದ್ಧದ ಫೈನಲ್​​ನಲ್ಲಿ ಅವರು 47 ಎಸೆತಗಳಲ್ಲಿ 60 ರನ್ ಗಳಿಸಿದರು ಆದರೆ ಫೈನಲ್ ಪಂದ್ಯದಲ್ಲಿ ಭಾರತ ಸೋತಿತ್ತು.

ಈ ತಿಂಗಳ ಆರಂಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ಟಿ 20 ಐ ಸರಣಿಯಲ್ಲಿ, ಮಂದಾನ ಎರಡು ಇನ್ನಿಂಗ್ಸ್​​ಳಲ್ಲಿ 100 ಸರಾಸರಿ ಮತ್ತು 142.85 ಸ್ಟ್ರೈಕ್ ರೇಟ್​​​ನಲ್ಲಿ 100 ರನ್ ಗಳಿಸಿದ್ದರು. ಅಂತಿಮ ಟಿ 20 ಪಂದ್ಯದಲ್ಲಿ ಅವರು 54* ರನ್ ಗಳಿಸಿ ಭಾರತವು ಸರಣಿಯನ್ನು 1-1 ರಿಂದ ಸಮಬಲಗೊಳಿಸಲು ಸಹಾಯ ಮಾಡಿದ್ದರು. ಜುಲೈ 2024ರಲ್ಲಿ ಆಡಿದ ಎಲ್ಲಾ ಟಿ 20 ಪಂದ್ಯಗಳಲ್ಲಿ ಮಂದಾನ 68.25 ಸರಾಸರಿ ಮತ್ತು 139.28 ಸ್ಟ್ರೈಕ್ ರೇಟ್ನಲ್ಲಿ 273 ರನ್ ಗಳಿಸಿದ್ದಾರೆ.

ಶಫಾಲಿ ಸಾಧನೆ

ಮಂದಾನ ಅವರ ಆರಂಭಿಕ ಪಾಲುದಾರರಾಧ ಶಫಾಲಿ ವರ್ಮಾ ಕೂಡ ಈ ಪ್ರತಿಷ್ಠಿತ ಪಟ್ಟಿಗೆ ಸೇರಿದ್ದಾರೆ. 2024ರ ಏಷ್ಯಾಕಪ್​​ನಲ್ಲಿ ವರ್ಮಾ 50ರ ಸರಾಸರಿಯಲ್ಲಿ 200 ರನ್ ಹಾಗೂ 140.84ರ ಸ್ಟ್ರೈಕ್ ರೇಟ್ನಲ್ಲಿ 200 ರನ್ ಗಳಿಸುವ ಮೂಲಕ ಟೂರ್ನಿಯಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎನಿಸಿಕೊಂಡಿದ್ದರು.

ಪಂದ್ಯಾವಳಿಯ ಭಾರತದ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಅವರು 29 ಎಸೆತಗಳಲ್ಲಿ 40 ರನ್ ಗಳಿಸಿದರು. ನಂತರ, ಅವರು ನೇಪಾಳದ ವಿರುದ್ಧ 48 ಎಸೆತಗಳಲ್ಲಿ 81 ರನ್ ಬಾರಿಸಿದ್ದರು.

ಮಿಥಾಲಿ ರಾಜ್ ನಂತರ ದ್ವಿಶತಕ ಬಾರಿಸಿದ ಎರಡನೇ ಭಾರತೀಯ ಮಹಿಳಾ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಶೆಫಾಲಿ ವರ್ಮಾ ಪಾತ್ರರಾಗಿದ್ದಾರೆ. ವರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ ೧೯೪ ಎಸೆತಗಳಲ್ಲಿ ದ್ವಿಶತಕ ಗಳಿಸಿದ್ದರು. ಅವರು 205 ರನ್ ಗಳಿಸಿದರೆ ಭಾರತವು 603-6 ಸ್ಕೋರ್ ಮಾಡಿ. ಇದು ಮಹಿಳಾ ಟೆಸ್ಟ್​​ನಲ್ಲಿ ತಂಡವೊಂದರ ಗರಿಷ್ಠ ಮೊತ್ತವಾಗಿದೆ.

ಇದನ್ನೂ ಓದಿ: Prakash Padukone : ಪದಕಗಳನ್ನು ತಪ್ಪಿಸಿಕೊಂಡ ಅಥ್ಲೀಟ್​ಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಪ್ರಕಾಶ್​ ಪಡುಕೋಣೆ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಐ ಸರಣಿಯಲ್ಲಿ, ಶೆಫಾಲಿ ವರ್ಮಾ 45 ರನ್ ಗಳಿಸಿದರೆ, ಎರಡು ಇನ್ನಿಂಗ್ಸ್​ಗಳಲ್ಲಿ 115.38 ಸ್ಟ್ರೈಕ್ ರೇಟ್​​ನಂತೆ ಆಡಿದ್ದರು. ಈ ಅವಧಿಯಲ್ಲಿ ವರ್ಮಾ ಟೆಸ್ಟ್​​ನಲ್ಲಿ 229 ರನ್ ಮತ್ತು ಟಿ 20ಐನಲ್ಲಿ 245 ರನ್ ಗಳಿಸಿದ್ದಾರೆ.

ಚಾಮರಿ ಅಟ್ಟಪಟ್ಟು ಮೂರನೇ ಪ್ರಶಸ್ತಿಗೆ ಹೋರಾಟ


ಶ್ರೀಲಂಕಾದ ನಾಯಕ ಚಾಮರಿ ಅಟ್ಟಪಟ್ಟು ಅತ್ಯುತ್ತಮ ಮಹಿಳಾ ಕ್ರಿಕೆಟರ್ ಎಂದೆನಿಸಿದ್ದಾರೆ. ಭಾರತ ವಿರುದ್ಧ ಫೈನಲ್​​ನಲ್ಲಿ ಗೆದ್ದು ಐತಿಹಾಸಿಕ ಏಷ್ಯಾ ಕಪ್ ಟ್ರೋಫಿ ಪಡೆಯುವಲ್ಲಿ ತಂಡ ಪಾಲಿಗೆ ಪ್ರಮುಖ ಪಾತ್ರ ವಹಿಸಿದ್ದರು. ಇದು ಆ ತಂಡದ ಮೊದಲ ಏಷ್ಯಾ ಕಪ್ ಪ್ರಶಸ್ತಿಯೂ ಆಗಿತ್ತು. ಆಲ್ರೌಂಡರ್ ಐದು ಪಂದ್ಯಗಳಲ್ಲಿ 101.33 ಸರಾಸರಿ ಮತ್ತು 146.85 ಸ್ಟ್ರೈಕ್ ರೇಟ್​ನೊಂಇಗೆ 304 ರನ್​ ಬಾರಿಸಿದ್ದಾರೆ. ಇದು ಪಂದ್ಯಾವಳಿಯಲ್ಲಿ ವೈಯಕ್ತಿ ಅತಿ ಹೆಚ್ಚು ರನ್. ಅವರು ಚೆಂಡಿನೊಂದಿಗೆ ಮೂರು ವಿಕೆಟ್ ಕೂಡ ಪಡೆದಿದ್ದಾರೆ.

ಭಾರತ ವಿರುದ್ಧದ ಫೈನಲ್​​ನಲ್ಲಿ ಶ್ರೀಲಂಕಾದ ನಾಯಕಿ 43 ಎಸೆತಗಳಲ್ಲಿ 61 ರನ್ ಗಳಿಸಿ ತಮ್ಮ ತಂಡಕ್ಕೆ ಪ್ರಶಸ್ತಿ ಗೆಲ್ಲಲು ಸಹಾಯ ಮಾಡಿದ್ದರು.

Continue Reading
Advertisement
Paris Olympics
ಕ್ರೀಡೆ3 mins ago

Paris Olympics: ಫೈನಲ್​ ಪ್ರವೇಶಿಸಿದ ನೀರಜ್​ ಚೋಪ್ರಾ; ಕುಸ್ತಿಯಲ್ಲಿ ವಿನೇಶ್ ಕ್ವಾರ್ಟರ್​ ಫೈನಲ್​ಗೆ

LK advani
ದೇಶ7 mins ago

L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

women PG bangalore
ಪ್ರಮುಖ ಸುದ್ದಿ33 mins ago

Women PG: ಬೆಂಗಳೂರಿನಲ್ಲಿ ಮಹಿಳಾ ಪಿಜಿಗಳಿಗೆ ಇನ್ನು ಮುಂದೆ ಕಟ್ಟುನಿಟ್ಟಿನ ರೂಲ್ಸ್! ಫಾಲೋ ಮಾಡದಿದ್ದರೆ ಕೇಸ್

IND vs SL
ಕ್ರೀಡೆ33 mins ago

IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

Gadag News
ಗದಗ36 mins ago

Gadag News : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು!

Sheikh Hasina
ವಿದೇಶ40 mins ago

Sheikh Hasina: ತಂದೆ, ತಾಯಿ, ಮೂವರು ಸಹೋದರರ ಬರ್ಬರ ಹತ್ಯೆ; ಕಠಿಣ ಹಾದಿಯಲ್ಲಿ ಸಾಗಿ ಪ್ರಧಾನಿಯಾಗಿದ್ದ ಶೇಖ್‌ ಹಸೀನಾ

shocker news
ಪ್ರಮುಖ ಸುದ್ದಿ41 mins ago

Shocker News : ಯುಪಿ ಸಿಎಂ ಯೋಗಿ ಅಧಿಕೃತ ನಿವಾಸದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

Hasin Jahan
ಕ್ರೀಡೆ1 hour ago

Hasin Jahan: ಮೊಹಮ್ಮದ್​ ಶಮಿ ಕುಟುಂಬದ ವಿರುದ್ಧ ವ್ಯಂಗ್ಯವಾಡಿದ ವಿಚ್ಛೇದಿತ ಪತ್ನಿ

Unique Village
Latest1 hour ago

Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ!

C Kannada movie release on August 23
ಕರ್ನಾಟಕ2 hours ago

Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌