Sohail Tanvir: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಪಾಕ್​ ವೇಗಿ ತನ್ವೀರ್ - Vistara News

ಕ್ರಿಕೆಟ್

Sohail Tanvir: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಪಾಕ್​ ವೇಗಿ ತನ್ವೀರ್

ಪಾಕಿಸ್ತಾನ ಕ್ರಿಕೆಟ್​ ತಂಡದ ಎಡಗೈ ವೇಗಿ ಸೊಹೈಲ್‌ ತನ್ವೀರ್‌ ಅವರು ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

VISTARANEWS.COM


on

Sohail Tanvir: The Pakistani pacer announced his retirement from all forms of international cricket
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ಪಾಕಿಸ್ತಾನ ತಂಡದ ಎಡಗೈ ವೇಗಿ ಸೊಹೈಲ್‌ ತನ್ವೀರ್‌(Sohail Tanvir) ಮಂಗಳವಾರ(ಮಾರ್ಚ್ 7)​ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಆದರೆ ದೇಶೀಯ ಮತ್ತು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಟ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

“ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲ ಮಾದರಿಗೆ ನಿವೃತ್ತಿ ಘೋಷಿಸುತ್ತಿದ್ದೇನೆ, ಆದರೆ ದೇಶೀಯ ಕ್ರಿಕೆಟ್ ಹಾಗೂ ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರಿಸಲಿದ್ದೇನೆ. ನನ್ನ ದೇಶದ ಪರವಾಗಿ ಆಡಲು ಅವಕಾಶ ನೀಡಿದ ಪಿಸಿಬಿಗೆ ಧನ್ಯವಾದಗಳು” ಎಂದು ತನ್ವೀರ್ ಟ್ವೀಟ್​ ಮೂಲಕ ಹೇಳಿದ್ದಾರೆ.

2017ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೊಹೈಲ್‌ ತನ್ವೀರ್‌​ ಅವರು ಕೊನೆಯ ಬಾರಿಗೆ ಪಾಕ್​ ಪರ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಅವರು ಪಾಕ್​ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದಾರೆ.

ಇದನ್ನೂ ಓದಿ Team India Holi: ಹೋಳಿ ಆಚರಿಸಿದ ಟೀಮ್​ ಇಂಡಿಯಾ

2007ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸೋಹೈಲ್ ವಿಭಿನ್ನ ಶೈಲಿಯ ಬೌಲಿಂಗ್​ ಪ್ರದರ್ಶನದ ಮೂಲಕ ಬ್ಯಾಟರ್​ಗಳಿಗೆ ಕಾಡುತ್ತಿದ್ದರು. ಅವರು 11 ಐಪಿಎಲ್​ ಪಂದ್ಯಗಳನ್ನು ಆಡಿದ್ದು 22 ವಿಕೆಟ್ ಕಿತ್ತಿದ್ದಾರೆ. ಉದ್ಘಾಟನಾ ಆವೃತ್ತಿಯ ಐಪಿಎಲ್​ ಚಾಂಪಿಯನ್​ ರಾಜಸ್ಥಾನ ತಂಡದ ಸದಸ್ಯರಾಗಿದ್ದರು. ಐಪಿಎಲ್​ನ ಒಂದು ಪಂದ್ಯದಲ್ಲಿ 6 ವಿಕೆಟ್​ ಕಿತ್ತ ಸಾಧನೆಯೂ ಅವರ ಹೆಸರಿನಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 Final: ಐಪಿಎಲ್​ ವಿನ್ನರ್​ & ರನ್ನರ್​ಗೆ ಸಿಗುವ ಮೊತ್ತವೆಷ್ಟು? ಈ ಬಾರಿ ಆರೆಂಜ್​ ಕ್ಯಾಪ್​, ಪರ್ಪಲ್​ ಕ್ಯಾಪ್​ ಯಾರಿಗೆ ಸಿಗಲಿದೆ?

IPL 2024 Final: ಫೈನಲ್​ನಲ್ಲಿ ವಿಜೇತ ತಂಡಕ್ಕೆ ಬಹುಮಾನ ಮೊತ್ತವಾಗಿ 20 ಕೋಟಿ ರೂಪಾಯಿ ಸಿಗಲಿದೆ. ಹಾಗೆಯೇ, ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ರಾಜಸ್ಥಾನ್​ಗೆ 7 ಕೋಟಿ ಮತ್ತು 4ನೇ ಸ್ಥಾನಿ ಆರ್​ಸಿಬಿಗೆ 6.5 ಕೋಟಿ ರೂ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

VISTARANEWS.COM


on

IPL 2024 Final
Koo

ಚೆನ್ನೈ: ಇಂದು (ಭಾನುವಾರ) ನಡೆಯಲಿರುವ 17ನೇ ಆವೃತ್ತಿಯ ಐಪಿಎಲ್(IPL 2024 Final)​ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ಮತ್ತು ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ವಿಶ್ವದಲ್ಲೇ ಅತ್ಯಂತ ಶ್ರೀಮಂತ ಟಿ20 ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ವಿಜೇತರು(IPL 2024 Prize money) ಎಷ್ಟು ಹಣ ಪಡೆಯುತ್ತಾರೆ ಎನ್ನುವ ಕುತೂಲಕಾರಿ ಮಾಹಿತಿ ಇಂತಿದೆ.

ಕೆಕೆಆರ್​ ಮತ್ತು ಹೈದರಾಬಾದ್ ಐಪಿಎಲ್‌ ಫೈನಲ್‌ನಲ್ಲಿ ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು. ಫೈನಲ್​ನಲ್ಲಿ ವಿಜೇತ ತಂಡಕ್ಕೆ ಬಹುಮಾನ ಮೊತ್ತವಾಗಿ 20 ಕೋಟಿ ರೂಪಾಯಿ ಸಿಗಲಿದೆ. ಹಾಗೆಯೇ, ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ರಾಜಸ್ಥಾನ್​ಗೆ 7 ಕೋಟಿ ಮತ್ತು 4ನೇ ಸ್ಥಾನಿ ಆರ್​ಸಿಬಿಗೆ 6.5 ಕೋಟಿ ರೂ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

ಸ್ವಾರಸ್ಯವೆಂದರೆ ಐಪಿಎಲ್​ ವಿಜೇತರಿಗಿಂತ ಅಧಿಕ ಮೊತ್ತ ಈ ಬಾರಿ ಆಸ್ಟ್ರೇಲಿಯಾದ ಆಟಗಾರರಾದ ಪ್ಯಾಟ್‌ ಕಮಿನ್ಸ್‌ ಮತ್ತು ಮಿಚೆಲ್​ ಸ್ಟಾರ್ಕ್​ಗೆ ಸಿಕ್ಕಿದೆ. ಪ್ಯಾಟ್‌ ಕಮಿನ್ಸ್‌ ಅವರನ್ನು ಹೈದರಾಬಾದ್‌ 20.5 ಕೋಟಿ ರೂ.ಗೆ ಖರೀದಿಸಿತ್ತು. ಅತ್ತ ಕೆಕೆಆರ್​ ವಿಚೆಲ್​ ಸ್ಟಾರ್ಕ್‌ ಅವರನ್ನು ಬರೋಬ್ಬರಿ 24.75 ಕೋಟಿ ರೂ. ನೀಡಿ ತನ್ನ ತಂಡಕ್ಕೆ ಸೇರಿಸಿಕೊಂಡಿತು.

ಇದನ್ನೂ ಓದಿ KKR vs SRH IPL 2024: ಐಪಿಎಲ್​ ಫೈನಲ್​ ಸಮಾರಂಭದಲ್ಲಿ ಸಂಗೀತ ರಸದೌತಣ ನೀಡಲಿದ್ದಾರೆ ಕೊಹ್ಲಿಯ ಅಪ್ಪಟ ಅಭಿಮಾನಿ

ಕೊಹ್ಲಿಗೆ ಆರೆಂಜ್​ ಕ್ಯಾಪ್​


ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಗೆದ್ದ ಆಟಗಾರರಿಗೆ 15 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸದ್ಯ ಆರ್​ಸಿಬಿ ತಂಡದ ವಿರಾಟ್​ ಕೊಹ್ಲಿ ಈ ಬಾರಿಯ ಟೂರ್ನಿಯಲ್ಲಿ 741 ರನ್​ ಬಾರಿಸಿ ಆರೆಂಜ್ ಕ್ಯಾಪ್ ಹೋಲ್ಡರ್​ ಆಗಿದ್ದಾರೆ. ಇವರ ರನ್​ ಹಿಂದಿಕ್ಕಲು ಇನ್ನು ಯಾರಿಗೂ ಅವಕಾಶ ಇಲ್ಲದ ಕಾರಣ ಈ ಪ್ರಶಸ್ತಿ ಇವರಿಗೇ ಸಿಗಲಿದೆ.

ಪರ್ಪಲ್​ ಕ್ಯಾಪ್​ ಸದ್ಯ 24 ವಿಕೆಟ್​ ಪಡೆದಿರುವ ಪಂಜಾಬ್ ಕಿಂಗ್ಸ್​​ ತಂಡದ ಹರ್ಷಲ್​ ಪಟೇಲ್​ ಬಳಿ ಇದೆ. ಆದರೆ ಈ ಕ್ಯಾಪ್​ ಪಡೆಯಲು ಕೆಕೆಆರ್​ ತಂಡದ ಸ್ಪಿನ್ನರ್​ ವರಣ್​ ಚರ್ಕವರ್ತಿಗೆ ಉತ್ತಮ ಅವಕಾಶವಿದೆ. ವರುಣ್​ ಸದ್ಯ 20 ವಿಕೆಟ್​ ಕಿತ್ತಿದ್ದಾರೆ. ಫೈನಲ್​ ಪಂದ್ಯದಲ್ಲಿ 5 ವಿಕೆಟ್​ ಕಿತ್ತರೆ ಈ ಕ್ಯಾಪ್​ ಇವರ ಪಾಲಾಗಲಿದೆ.

ಇತರ ಬಹುಮಾನ


ಪಂದ್ಯಾವಳಿಯ ಉದಯೋನ್ಮುಖ ಆಟಗಾರನಿಗೆ 20 ಲಕ್ಷ ರೂಪಾಯಿ ನಗದು ಬಹುಮಾನವನ್ನು ಸಿಗಲಿದೆ. ಋತುವಿನ ಅತ್ಯಂತ ಮೌಲ್ಯಯುತ ಆಟಗಾರ 12 ಲಕ್ಷ ರೂಪಾಯಿ, ಇತರ ಪ್ರಶಸ್ತಿಗಳಾದ-ಪವರ್ ಪ್ಲೇಯರ್ ಆಫ್ ದಿ ಸೀಸನ್, ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಮತ್ತು ಗೇಮ್ ಚೇಂಜರ್ ಆಫ್ ದಿ ಸೀಸನ್ ಪಡೆದ ಆಟಗಾರ ಕ್ರಮವಾಗಿ ರೂ 15 ಲಕ್ಷ ಮತ್ತು ರೂ 12 ಲಕ್ಷ ನಗದು ಬಹುಮಾನ ಪಡೆಯಲಿದ್ದಾರೆ.

Continue Reading

ಕ್ರೀಡೆ

KKR vs SRH IPL 2024: ಐಪಿಎಲ್​ ಫೈನಲ್​ ಸಮಾರಂಭದಲ್ಲಿ ಸಂಗೀತ ರಸದೌತಣ ನೀಡಲಿದ್ದಾರೆ ಕೊಹ್ಲಿಯ ಅಪ್ಪಟ ಅಭಿಮಾನಿ

KKR vs SRH IPL 2024: ಫೈನಲ್​ ಪಂದ್ಯಕ್ಕೂ ಮುನ್ನ ವಿಶ್ವ-ಪ್ರಸಿದ್ಧ ಅಮೇರಿಕನ್ ರಾಕ್ ಬ್ಯಾಂಡ್ ಇಮ್ಯಾಜಿನ್ ಡ್ರಾಗನ್ಸ್(Imagine Dragons) ತಂಡದಿಂದ ಅದ್ಧೂರಿ ಸಂಗೀತ ರಸದೌತಣ ಕಾರ್ಯಕ್ರಮ(IPL 2024 closing ceremony) ನಡೆಯಲಿದೆ.

VISTARANEWS.COM


on

KKR vs SRH IPL 2024
Koo

ಚೆನ್ನೈ: 17ನೇ ಆವೃತ್ತಿಯ ಐಪಿಎಲ್(IPL 2024)​ ಟೂರ್ನಿಗೆ ಒಂದು ಅಧಿಕೃತ ತೆರೆ ಬೀಳಲಿದೆ. ಚೆನ್ನೈಯಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(KKR vs SRH IPL 2024)​ ಮುಖಾಮುಖಿಯಾಗುವ ಮೂಲಕ ಟೂರ್ನಿ ಮುಕ್ತಾಯ ಕಾಣದಲಿದೆ. ಫೈನಲ್​ ಪಂದ್ಯಕ್ಕೂ ಮುನ್ನ ವಿಶ್ವ-ಪ್ರಸಿದ್ಧ ಅಮೇರಿಕನ್ ರಾಕ್ ಬ್ಯಾಂಡ್ ಇಮ್ಯಾಜಿನ್ ಡ್ರಾಗನ್ಸ್(Imagine Dragons) ತಂಡದಿಂದ ಅದ್ಧೂರಿ ಸಂಗೀತ ರಸದೌತಣ ಕಾರ್ಯಕ್ರಮ(IPL 2024 closing ceremony) ನಡೆಯಲಿದೆ. ಪ್ರೋಮೋ ಹಂಚಿಕೊಂಡು ಈ ವಿಚಾರವನ್ನು ಸ್ಟಾರ್​ ಸ್ಪೋರ್ಟ್ಸ್​ ತನ್ನ ಅಧಿಕೃತ ಟ್ವೀಟರ್​ ಎಕ್ಸ್​ನಲ್ಲಿ ಪ್ರಕಟಿಸಿದೆ.

ವಿರಾಟ್​ ಕೊಹ್ಲಿಯ(Virat Kohli) ಅಪ್ಪಟ ಅಭಿಮಾನಿಯಾಗಿರುವ ಅಮೆರಿಕನ್​ ಸಿಂಗರ್,​ ಡಾನ್ ರೆನಾಲ್ಡ್ಸ್ ಸಮಾರೋಪ ಕಾರ್ಯಕ್ರಮದಲ್ಲಿ ಹಲವು ಹಾಡುಗಳನ್ನು ಹಾಡಲಿದ್ದಾರೆ. ಸ್ಟಾರ್​ ಸ್ಪೋರ್ಟ್ಸ್​ ಜತೆ ಮಾತನಾಡುವ ವೇಳೆ ತಾನು ಕೊಹ್ಲಿಯ ಅಭಿಮಾನಿ, ಆತ ನಿಜವಾಗಿಯೂ ಗ್ರೇಟೆಸ್ಟ್​ ಆಲ್​ ಟೈಮ್​ ಎಂದರು. ಅಲ್ಲದೆ ಅವರ ಬ್ಯಾಟಿಂಗ್​ ನೋಡುವುದೇ ಒಂದು ಸುಂದರ ಅನುಭವ ಎಂದು ಕೊಹ್ಲಿಯನ್ನು ಗುಣಗಾನ ಮಾಡಿದರು. ಐಪಿಎಲ್​ ಸಮಾರೋಪ ಸಮಾರಂಭವು ಸಂಜೆ 6 ಗಂಟೆಯಿಂದ ಪ್ರಾರಂಭವಾಗಲಿದೆ. ಪಂದ್ಯ 7.30ಕ್ಕೆ ಆರಂಭಗೊಳ್ಳಲಿದೆ.

ಭಾರೀ ಪೈಪೋಟಿ ನಿರೀಕ್ಷೆ


ಕೋಲ್ಕತಾ ವಿರುದ್ಧದ ಲೀಗ್​ ಮತ್ತು ಕ್ವಾಲಿಫೈಯರ್​ ಪಂದ್ಯದಲ್ಲಿ ಸನ್​ರೈಸರ್ಸ್​ ಸೋಲು ಕಂಡಿದ್ದರೂ ಕೂಡ ಫೈನಲ್​ ಪಂದ್ಯದ ಗೇಮ್​ ಪ್ಲಾನ್​ ಬೇರೆಯೆ ಇರಲಿದೆ. ಇದಕ್ಕೆ ಕಾರಣ ಹೈದರಾಬಾದ್​ ತಂಡವನ್ನು ಮುನ್ನಡೆಸುತ್ತಿರುವ ಆಸ್ಟ್ರೇಲಿಯಾದ ನಾಯಕ ಪ್ಯಾಟ್​ ಕಮಿನ್​. ಆಸೀಸ್ ತಂಡ ಹಾಗೂ ಆಟಗಾರರು ಯಾವುದೇ ಫೈನಲ್​ನಲ್ಲಿ ಡಿಫರೆಂಟ್​ ಆಟಕ್ಕೆ ಹೆಸರುವಾಸಿ. ಟ್ರಾವಿಸ್​ ಹೆಡ್​ ಕೂಡ ಇದೇ ತಂಡದಲ್ಲಿದ್ದಾರೆ. ಅತ್ತ ಕೆಕೆಆರ್​ ಪರ ಮಿಚೆಲ್​ ಸ್ಟಾಕ್​ ಇದ್ದಾರೆ. ಜತೆಗೆ ವಿಂಡೀಸ್​ನ ಬಿಗ್​ ಹಿಟ್ಟರ್​ ಆ್ಯಂಡ್ರೆ ರಸೆಲ್​, ಸುನೀಲ್​ ನರೈನ್​ ಕಾಣಿಸಿಕೊಂಡಿದ್ದಾರೆ. ಉಭಯ ಆಟಗಾರರು ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡಕ್ಕೂ ಸೈ ಎನಿಸಿಕೊಂಡಿದ್ದಾರೆ. ಹೀಗಾಗಿ ಫೈನಲ್​ ಪಂದ್ಯ ರೋಚಕ ಮತ್ತು ತೀವ್ರ ಪೈಪೋಟಿಯಿಂದ ಕೂಡಿರಬಹುದು ಎಂದು ನಿರೀಕ್ಷೆ ಮಾಡಬಹುದು.

ಇದನ್ನೂ ಓದಿ KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

ಫೈನಲ್​ನಲ್ಲಿ ವಿಜೇತ ತಂಡ 20 ಕೋಟಿ ರೂಪಾಯಿ ಬಹುಮಾನವನ್ನು ಪಡೆಯಲಿದೆ. ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ತಂಡಕ್ಕೆ 7 ಕೋಟಿ ಮತ್ತು 4ನೇ ಸ್ಥಾನಿಗೆ 6.5 ಕೋಟಿ ರೂ ಸಿಗಲಿದೆ. ಈಗಾಗಲೇ ರಾಜಸ್ಥಾನ್​ ಮತ್ತು ಆರ್​ಸಿಬಿ ಪ್ಲೇ ಆಫ್​ನಲ್ಲಿ ಸೋಲಿ ಕಂಡು ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನ ಪಡೆದಿವೆ. ಹೀಗಾಗಿ ರಾಜಸ್ಥಾನ್​ಗೆ(7 ಕೋಟಿ) ಮತ್ತು ಆರ್​ಸಿಬಿಗೆ(6.5 ಕೋಟಿ) ಮೊತ್ತ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
 ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading

ಕ್ರೀಡೆ

Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Hardik Pandya: ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Hardik Pandya
Koo

ಲಂಡನ್​: ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರ ವಿವಾಹ ಮುರಿದು ಬಿದ್ದಿದೆಯೇ?, ಈ ಜೋಡಿ ವಿಚ್ಛೇದನಕ್ಕೆ ಪಡೆಯಲಿದೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ನತಾಶಾ ರಹಸ್ಯ ಪೋಸ್ಟ್ ಒಂದನ್ನು ಮಾಡಿದ್ದಾರೆ. ಈ ಪೋಸ್ಟ್​ ನೋಡುವಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿದೆ.

ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿದೆ. ಈ ಫೋಟೊವನ್ನು ಅವರು ತಮ್ಮ ಮುಂದಿನ ಜೀವನದ ಅರ್ಥ ಕಲ್ಪಿಸುವ ನಿಟ್ಟಿನಲ್ಲಿಯೇ ಹಾಕಿದಂತಿದೆ.


ವಿಚ್ಛೇದನದ ಸುದ್ದಿಯ ನಡುವೆ, ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದಾರೆ. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಸಾರ್ವಜನಿಕಗಾಗಿ ಹೋಗುತ್ತಿರುವ ವಿಡಿಯೊ ವೈರಲ್ ಆಗಿದ್ದು ಪಾಪರಾಜಿಗಳು (ಕ್ಯಾಮೆರಾಮನ್​ಗಳು) ಅವರಿಬ್ಬರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ನಟಿ ದಿಶಾ ಪಠಾಣಿ ಅವರ ವದಂತಿಯ ಗೆಳೆಯ ಅಲೆಕ್ಸಾಂಡರ್ ಅಲೆಕ್ಸ್ಲಿಕ್​ ಮತ್ತು ನತಾಶಾ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಪಾಪರಾಜಿಗಳಿಂದ ಸಾಕಷ್ಟು ವಿನಂತಿಗಳನ್ನು ಪಡೆದ ನಂತರ ನತಾಶಾ ಪೋಸ್ ನೀಡಿದ್ದಾರೆ. ಹೀಗಾಗಿ ಪಾಂಡ್ಯಾ ಜತೆಗಿನ ಡೈವೋರ್ಸ್​ ಪ್ರಕರಣವನ್ನು ಇನ್ನಷ್ಟು ಆಸಕ್ತಿದಾಯಕವಾಗಿದೆ. ಐಪಿಎಲ್ 2024 ರಲ್ಲಿ ಹಾರ್ದಿಕ್ ತಮ್ಮ ಉನ್ನತ ನಿರೀಕ್ಷೆಗಳಿಗೆ ತಕ್ಕ ಹಾಗೆ ಆಡಿಲ್ಲ. ಪತಿ ಸೋಲುತ್ತಿದ್ದರೂ ಒಂದೇ ಒಂದು ಬಾರಿಯೂ, ನತಾಶಾ ತಮ್ಮ ಪತಿಯ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ಟ್ಯಾಂಡ್​ಗಳಿಗೆ ಬಂದಿರಲಿಲ್ಲ.

ಇದನ್ನೂ ಓದಿ Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

Continue Reading

ಕ್ರೀಡೆ

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

KKR vs SRH IPL Final: ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು.

VISTARANEWS.COM


on

KKR vs SRH IPL Final
Koo

ಚೆನ್ನೈ: ಸನ್​ರೈಸರ್ಸ್​ ಹೈದರಾಬಾದ್(KKR vs SRH Final 2024)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) ವಿದುದ್ಧದ ಐಪಿಎಲ್​-2024ರ(IPL 2024) ಫೈನಲ್​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಉಭಯ ತಂಡಗಳ ಪ್ರಶಸ್ತಿ ಕಾಳಗಕ್ಕೆ ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂ ಅಣಿಯಾಗಿದೆ.

ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್(Sunrisers Hyderabad)​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಪಿಚ್​ ರಿಪೋರ್ಟ್​


ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು. ಹೀಗಾಗಿ ಪಿಚ್​ ವರ್ತನೆಯನ್ನು ಸ್ಪಷ್ಟವಾಗಿ ಹೇಳುವುದು ಕೊಂಚ ಕಷ್ಟವಾಗಿದೆ. ಮಂಜಿನ ಕಾಟ ಇರುವ ಕಾರಣ ಟಾಸ್‌ ಗೆಲ್ಲುವ ತಂಡ ಬೌಲಿಂಗ್‌ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು.

ಮುಖಾಮುಖಿ


ಕೆಕೆಆರ್​ ಮತ್ತು ಸನ್​ರೈಸರ್ಸ್ ಹೈದರಾಬಾದ್​ ತಂಡಗಳು ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ 27 ಪಂದ್ಯಗಳನ್ನು ಆಡಿದೆ. ಈ ಪೈಕಿ 18 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಲೀಗ್​ ಮತ್ತು ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಸೋಲು ಕಂಡಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ಇಂದಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್ ತಂಡವಾಗಿದೆ. ಫೈನಲ್​ನಲ್ಲಿ ಇತ್ತಂಡಗಳು ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು.

ಇದನ್ನೂ ಓದಿ KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಆಸ್ಟ್ರೇಲಿಯಾದ ನಾಯಕನಾಗಿರುವ ಪ್ಯಾಟ್​ ಕಮಿನ್ಸ್​ 2 ವಿಶ್ವಕಪ್​ ಗೆದ್ದ ನಾಯಕ. ಅದು ಕೂಡ ಚೊಚ್ಚಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವರು ಟ್ರೋಫಿ ಗೆದ್ದಿದ್ದಾರೆ. ಹೀಗಾಗಿ ಇವರು ಹೈದರಾಬಾದ್​ಗೂ ತಮ್ಮ ನಾಯಕತ್ವದಲ್ಲಿ ಕಪ್​ ಗೆಲ್ಲಬಹುದು ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ನಂಬಿಕೆ. ಮೊತ್ತೊಂದೆಡೆ ಆಸ್ಟ್ರೇಲಿಯಾ ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಗೆಲುವಿನ ಹೀರೊ ಎನಿಸಿಕೊಂಡಿದ್ದ ಟ್ರಾವಿಸ್​ ಹೆಡ್​ ಕೂಡ ಹೈದರಾಬಾದ್​ ತಂಡದಲ್ಲಿದ್ದಾರೆ. ಹೀಗಾಗಿ ಫೈನಲ್​ನಲ್ಲಿಯೂ ಇವರ ಸ್ಫೋಟಕ ಬ್ಯಾಟಿಂಗ್​ ನಿರೀಕ್ಷೆ ಮಾಡಲಾಗಿದೆ.

ಕೆಕೆಆರ್​ ಪಾಲಿನ ದೊಡ್ಡ ಬಲವೆಂದರೆ ಆಟಗಾರರ ಸಂಘಟಿತ ಪ್ರದರ್ಶನ. ಬ್ಯಾಟಿಂಗ್​, ಬೌಲಿಂಗ್​ ಎರಡೂ ವಿಭಾಗದಲ್ಲಿ ಸಮರ್ಥವಾಗಿದೆ. ಸೀಮಿತ ಆಗಾರರ ಪ್ರದರ್ಶನದ ಮೇಲೆ ತಂಡ ನೆಚ್ಚಿಕೊಂಡಿಲ್ಲ. ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದರೂ ಕೂಡ ಇವರ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಆಡಲಿಳಿದಿದ್ದ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದರು. ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

Continue Reading
Advertisement
Teenage boy arrested
ಕ್ರೈಂ12 mins ago

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

Janhvi Kapoor on paparazzi culture
ಬಾಲಿವುಡ್19 mins ago

Janhvi Kapoor: ಪಾಪರಾಜಿಗಳ ಅಸಲಿ ಮುಖ ರಿವೀಲ್‌ ಮಾಡಿದ ಜಾನ್ವಿ ಕಪೂರ್!

Gold Rate Today
ಕರ್ನಾಟಕ24 mins ago

Gold Rate Today: ಇಂದೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Tiger attack
ಮೈಸೂರು44 mins ago

Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

IPL 2024 Final
ಕ್ರೀಡೆ49 mins ago

IPL 2024 Final: ಐಪಿಎಲ್​ ವಿನ್ನರ್​ & ರನ್ನರ್​ಗೆ ಸಿಗುವ ಮೊತ್ತವೆಷ್ಟು? ಈ ಬಾರಿ ಆರೆಂಜ್​ ಕ್ಯಾಪ್​, ಪರ್ಪಲ್​ ಕ್ಯಾಪ್​ ಯಾರಿಗೆ ಸಿಗಲಿದೆ?

Cyclone Remal
ದೇಶ49 mins ago

Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

Dhruva Sarja KD Movie Release date announce
South Cinema1 hour ago

Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

Road Accident
ಉತ್ತರ ಕನ್ನಡ1 hour ago

Road Accident : ಬಸ್‌ಗೆ ಸ್ಕೂಟರ್‌ ಡಿಕ್ಕಿ; ಸವಾರನ ಪ್ರಾಣವನ್ನೇ ಕಸಿದ ಅತಿ ವೇಗ ಚಾಲನೆ

Monsoon 2024
ಮಳೆ2 hours ago

Monsoon 2024: ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

Sambavami Yuge Yuge song release By sruthi hariharan
ಟಾಲಿವುಡ್2 hours ago

Kannada New Movie: ʻಸಂಭವಾಮಿ ಯುಗೇ ಯುಗೇʼ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ನಟಿ ಶ್ರುತಿ ಹರಿಹರನ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌