Some judges have joined a gang of traitors; Union Minister Rijiju accusedAnti India : ಕೆಲವು ಜಡ್ಜ್​​ಗಳು ದೇಶ ದ್ರೋಹಿಗಳ ಗ್ಯಾಂಗ್ ಸೇರಿಕೊಂಡಿದ್ದಾರೆ; ಕೇಂದ್ರ ಸಚಿವ ರಿಜಿಜು ಕಿಡಿ - Vistara News

ಕ್ರಿಕೆಟ್

Anti India : ಕೆಲವು ಜಡ್ಜ್​​ಗಳು ದೇಶ ದ್ರೋಹಿಗಳ ಗ್ಯಾಂಗ್ ಸೇರಿಕೊಂಡಿದ್ದಾರೆ; ಕೇಂದ್ರ ಸಚಿವ ರಿಜಿಜು ಕಿಡಿ

ದೇಶ ದ್ರೋಹಿಗಳ ಗ್ಯಾಂಗ್ ಸೇರಿರುವ ಜಡ್ಜ್​​ಗಳಿಗೆ ದೇಶವೇ ಪಾಠ ಕಲಿಸಲಿದೆ ಎಂದು ಕಿರಣ್​ ರಿಜಿಜು ಅವರು ಹೇಳಿದ್ದಾರೆ.

VISTARANEWS.COM


on

Law minister Kiren Rijiju's car meets with minor accident in Jammu Kashmir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೆಲವು ಜಡ್ಜ್​​ಗಳು ದೇಶದ್ರೋಹಿಗಳ ಗ್ಯಾಂಗ್​ನ ಭಾಗವಾಗಿದ್ದಾರೆ. ಅವರೆಲ್ಲರೂ ಅದಕ್ಕೆ ತಕ್ಕ ಪಾಠ ಕಲಿಯುತ್ತಾರೆ ಎಂಬುದಾಗಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಆರೋಪಿಸಿದ್ದಾರೆ. ಇಂಡಿಯಾ ಟುಡೆ ಕಾನ್​ಕ್ಲೇವ್​ನಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಡೆದ ನ್ಯಾಯಾಧೀಶರ ಕಾರ್ಯಾಗಾರದಲ್ಲಿ ಮಾತನಾಡಿದ್ದ ಕೆಲವು ನ್ಯಾಯಮೂರ್ತಿಗಳು, ಭಾರತದ ನ್ಯಾಯಾಂಗದ ಮೇಲೆ ಕಾರ್ಯಾಂಗ ಸವಾರಿ ಮಾಡುತ್ತಿದೆ ಎಂದು ಹೇಳಿದ್ದರು. ಬಾರ್​ ಆ್ಯಂಡ್​ ಬೆಂಚ್​ ವೆಬ್​ಸೈಟ್​ ಈ ಸುದ್ದಿಯನ್ನು ಪ್ರಕಟಿಸಿತ್ತು. ಈ ಹೇಳಿಕೆಯನ್ನು ಉಲ್ಲೇಖಿಸಿದ ಕಿರಣ್​ ರಿಜಿಜು ಅವರು ಮಾತನಾಡಿದ್ದಾರೆ.

ಕೆಲವೊಬ್ಬರು ನಿವೃತ್ತ ನ್ಯಾಯಾಧೀಶರು ಹೋರಾಟಗಾರರಾಗಿ ಬದಲಾಗುತ್ತಿದ್ದಾರೆ ಹಾಗೂ ದೇಶ ವಿರೋಧಿ ಗ್ಯಾಂಗ್​ ಸೇರಿಕೊಂಡಿದ್ದಾರೆ. ಅವರು ನ್ಯಾಯಾಂಗ ವ್ಯವಸ್ಥೆಯನ್ನು ಸರಕಾರದ ವಿರುದ್ಧ ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜಡ್ಜ್​ಗಳಿಗೆ ಯಾವುದೇ ರಾಜಕೀಯ ಹಿನ್ನೆಲೆ ಇರುವುದಿಲ್ಲ ಹಾಗಾದರೆ ಅವರು ಕಾರ್ಯಾಂಗದ ವಿರುದ್ಧ ಟೀಕೆ ಮಾಡಲು ಹೇಗೆ ಸಾಧ್ಯ. ದೇಶಕ್ಕೆ ವಿರುದ್ಧವಾಗಿ ಮಾತನಾಡುವ ಯಾರು ಕೂಡ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ದೇಶವೇ ಅವರಿಗೆ ತಿರುಗೇಟು ನೀಡಲಿದೆ ಎಂದು ರಿಜಿಜು ಹೇಳಿದರು.

ಕಿರಣ್​ ರಿಜಿಜು ಅವರು ಇದೇ ವೇಳೆ ನ್ಯಾಯವಾದಿಗಳನ್ನು ಜಡ್ಜ್​​ಗಳನ್ನಾಗಿ ನೇಮಕ ಮಾಡುವ ಪ್ರಕ್ರಿಯೆಗೆ ಬೆಂಬಲ ಸೂಚಿಸಿದರು. ನಮ್ಮ ನಿಲುವು ಸ್ಪಷ್ಟವಾಗಿದೆ. ಕೊಲಿಜಿಯಮ್​ ವ್ಯವಸ್ಥೆ ಎಷ್ಟು ದಿನ ಇರುತ್ತದೊ, ನ್ಯಾಯ ಸಮ್ಮತವಾಗಿ ಅವುಗಳ ನಿಯಮವನ್ನು ಅನುಸರಿಸಲಾಗುತ್ತದೆ. ಆದರೆ, ನ್ಯಾಯಾಲಯದ ಆದೇಶದ ಪ್ರಕಾರ ಜಡ್ಜ್​​ಗಳನ್ನು ನೇಮಕ ಮಾಡುವುದು ಸಾಧ್ಯವೇ ಇಲ್ಲ ಎಂದು ಹೇಳಿದರು.

ಜಡ್ಜ್​ಗಳ ನೇಮಕವನ್ನು ಆಡಳಿತಾತ್ಮಕವಾಗಿ ಮಾಡಬೇಕಾಗಿದೆ. ಯಾರು ನೇಮಕ ಮಾಡಬೇಕು ಎಂಬ ಗೊಂದಲ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಹೀಗಾಗಿ ನ್ಯಾಯಾಧೀಶರನ್ನು ಆಯ್ಕೆ ಮಾಡುವ ವೇಳೆ ಸರಕಾರದ ಅಭಿಪ್ರಾಯವನ್ನು ಪರಿಗಣಿಸಬೇಕು ಹಾಗೂ ಕನಿಷ್ಠ ಪಕ್ಷ ಕಾನೂನು ಸಚಿವರ ಒಪ್ಪಿಗೆಯನ್ನು ಪಡೆಯಬೇಕು. ಸಂವಿಧಾನ ಕೂಡ ಅದಕ್ಕೆ ಒಪ್ಪುತ್ತದೆ ಎಂದು ಅವರು ಹೇಳಿದರು.

ಇದೇ ವೇಳೆ ಕಿರಣ್ ರಿಜಿಜು ಅವರು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬ್ರಿಟನ್​ ಸಂಸದರನ್ನು ಉದ್ದೇಶಿಸಿ ಮಾಡಿದ ಭಾಷಣವನ್ನು ಖಂಡಿಸಿದರು. ಭಾರತದಲ್ಲಿ ಯಾರು ಹೆಚ್ಚು ಮಾತನಾಡುತ್ತಿದ್ದಾರೋ ಅವರೇ ಮಾತನಾಡಲು ಅವಕಾಶ ಇಲ್ಲ ಎಂದು ಹೇಳುತ್ತಿದ್ದಾರೆ. ಇದೇ ವೇಳೆ ಅವರು ಭಾರತದ ನ್ಯಾಯಾಂಗ ವ್ಯವಸ್ಥೆಯನ್ನೂ ದುರ್ಬಲಗೊಳಿಸಲಾಗುತ್ತದೆ ಎಂಬ ರಾಹುಲ್​ ಗಾಂಧಿಯ ಆರೋಪವನ್ನು ನಿರಾಕರಿಸಿದರು. ಈ ರೀತಿಯ ಯಾರಾದರೂ ಹೇಳಿಕೆ ಕೊಟ್ಟಿದ್ದರೆ ಅದು ದೊಡ್ಡ ಪ್ರಮಾದ. ನಮ್ಮ ನ್ಯಾಯಮೂರ್ತಿಗಳು ಯಾರೂ ದುರ್ಬಲರಲ್ಲ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SL 3rd ODI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು; ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

IND vs SL 3rd ODI: ಮೊದಲ ಪಂದ್ಯ ರೋಚಕ ಟೈ ಆದರೆ, ಎರಡನೇ ಪಂದ್ಯದಲ್ಲಿ ಭಾರತವು 32 ರನ್‌ಗಳಿಂದ ಸೋಲನುಭವಿಸಿತ್ತು. ಈಗ ಮೂರನೇ ಪಂದ್ಯವನ್ನೂ ಸೋಲುವ ಮೂಲಕ ಭಾರತ ತಂಡವು ಏಕದಿನ ಸರಣಿಯನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿದೆ. ಶ್ರೀಲಂಕಾ ತಂಡವು ಭಾರತದ ವಿರುದ್ಧ 27 ವರ್ಷಗಳ ಬಳಿಕ ಮೊದಲ ಬಾರಿಗೆ ಏಕದಿನ ಸರಣಿ ಗೆದ್ದ ದಾಖಲೆ ಬರೆಯಿತು.

VISTARANEWS.COM


on

IND vs SL 3rd ODI
Koo

ಕೊಲೊಂಬೊ: ಟಿ-20 ವಿಶ್ವಕಪ್‌, ಶ್ರೀಲಂಕಾ ವಿರುದ್ಧದ ಟಿ-20 ಸರಣಿ ಗೆಲುವಿನ ಅತ್ಯುತ್ಸಾಹದಲ್ಲಿದ್ದ ಭಾರತ ತಂಡಕ್ಕೆ ಶ್ರೀಲಂಕಾ ತಂಡವು ಏಕದಿನ ಸರಣಿಯಲ್ಲಿ (IND vs SL 3rd ODI) ಆಘಾತ ನೀಡಿದೆ. ಕೊಲೊಂಬೊದ ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ರೋಹಿತ್‌ ಶರ್ಮಾ (Rohit Sharma) ಬಳಗವನ್ನು 110 ರನ್‌ಗಳಿಂದ ಮಣಿಸುವ ಮೂಲಕ ಶ್ರೀಲಂಕಾ 27 ವರ್ಷಗಳ ಬಳಿಕ ಭಾರತದ ವಿರುದ್ಧ ಏಕದಿನ ಸರಣಿ ಗೆದ್ದ ದಾಖಲೆ ಬರೆಯಿತು.

ಶ್ರೀಲಂಕಾ ನೀಡಿದ 249 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಭಾರತ ತಂಡವು 26.1 ಓವರ್‌ಗಳಲ್ಲಿ 138 ರನ್‌ಗಳಿಸಿ ಆಲೌಟ್‌ ಆಗುವ ಮೂಲಕ 110 ರನ್‌ಗಳಿಂದ ಸೋಲನುಭವಿಸಿತು. ಭಾರತದ ಪರ ರೋಹಿತ್‌ ಶರ್ಮಾ (35) ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಯಾವೊಬ್ಬ ಆಟಗಾರನೂ ನೆಲಕಚ್ಚಿ ಆಡಲಿಲ್ಲ. ವಿರಾಟ್‌ ಕೊಹ್ಲಿ ಮತ್ತೆ ನಿರಾಸೆ ಮೂಡಿಸಿದರು. ರಿಷಭ್‌ ಪಂತ್‌, ಶ್ರೇಯಸ್‌ ಅಯ್ಯರ್‌ ಕೂಡ ಭಾರತ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಲಿಲ್ಲ. ಶುಭಮನ್‌ ಗಿಲ್‌ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. ಇದರಿಂದಾಗಿ ಭಾರತ ಮೂರನೇ ಪಂದ್ಯವನ್ನು ಸೋತು, ಸರಣಿ ಬಿಟ್ಟುಕೊಡಬೇಕಾಯಿತು.

ಆವಿಷ್ಕ ಫರ್ನಾಂಡೋ ಭರ್ಜರಿ ಬ್ಯಾಟಿಂಗ್

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಶ್ರೀಲಂಕಾ, ಭರ್ಜರಿ ಆರಂಭ ಪಡೆಯಿತು. ಪಥುಮ್‌ ನಿಸಂಕಾ (45), ಆವಿಷ್ಕ ಫರ್ನಾಂಡೋ (96) ಹಾಗೂ ಕುಶಾಲ್‌ ಮೆಂಡಿಸ್‌ (59) ರನ್‌ಗಳ ನೆರವಿನಿಂದ ಒಂದು ಹಂತದಲ್ಲಿ ಶ್ರೀಲಂಕಾ 3 ವಿಕೆಟ್‌ಗೆ 183 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ಬೃಹತ್‌ ಮೊತ್ತ ಪೇರಿಸುವ ಸಾಧ್ಯತೆಯೂ ಇತ್ತು. ಆದರೆ, ನಂತರ ಬಂದ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ದಾಳಿಗೆ ಸಿಲುಕಿ ವಿಕೆಟ್‌ ಒಪ್ಪಿಸಿದ ಕಾರಣ ಶ್ರೀಲಂಕಾ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 248 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಭಾರತದ ಪರ ರಿಯಾನ್‌ ಪರಾಗ್‌ 3 ವಿಕೆಟ್‌ ಕಬಳಿಸಿದರೆ, ಅಕ್ಷರ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌, ವಾಷಿಂಗ್ಟನ್‌ ಸುಂದರ್‌ ಹಾಗೂ ಕುಲದೀಪ್‌ ಯಾದವ್‌ ಅವರು ತಲಾ ಒಂದು ವಿಕೆಟ್‌ ಪಡೆದರು. ಮೊದಲ ಪಂದ್ಯ ರೋಚಕ ಟೈ ಆದರೆ, ಎರಡನೇ ಪಂದ್ಯದಲ್ಲಿ ಭಾರತವು 32 ರನ್‌ಗಳಿಂದ ಸೋಲನುಭವಿಸಿತ್ತು.

ಸಂಕ್ಷಿಪ್ತ ಸ್ಕೋರ್‌

ಶ್ರೀಲಂಕಾ 50 ಓವರ್‌ಗಳಲ್ಲಿ 248/7

(ಆವಿಷ್ಕ ಫರ್ನಾಂಡೋ 96, ಕುಶಾಲ್‌ ಮೆಂಡಿಸ್‌ 59, ರಿಯಾನ್‌ ಪರಾಗ್‌ 54/3)

ಭಾರತ ಓವರ್‌ಗಳಲ್ಲಿ 130ಕ್ಕೆ ಆಲೌಟ್‌

(ರೋಹಿತ್‌ ಶರ್ಮಾ 35, ರಿಯಾನ್‌ ಪರಾಗ್‌ 30, ದುನಿತ್‌ ವೆಲ್ಲಲಾಗೆ 27/5)

ಇದನ್ನೂ ಓದಿ: Chuttamalle Song: ‘ಮಾನಿಕೆ ಮಾಗೆ ಹಿತೆ’ ಹಾಡಿನ ಟ್ಯೂನ್‌ ಕದ್ರಾ ಅನಿರುದ್ಧ ರವಿಚಂದರ್? ಶ್ರೀಲಂಕಾ ಕಂಪೋಸರ್‌ ಹೇಳೋದೇನು?

Continue Reading

ಕ್ರೀಡೆ

IND vs SL 3rd ODI: ಇಂದು ಅಂತಿಮ ಏಕದಿನ ಪಂದ್ಯ; ಭಾರತ ಆಡುವ ಬಳಗದಲ್ಲಿ ಮೂರು ಬದಲಾವಣೆ ಖಚಿತ

IND vs SL 3rd ODI: ಮೂಲಗಳ ಪ್ರಕಾರ ಕೆ.ಎಲ್​ ರಾಹುಲ್​, ಶಿವಂ ದುಬೆ ಮತ್ತು ಮೊಹಮ್ಮದ್​ ಸಿರಾಜ್​ ಅವರನ್ನು ಈ ಪಂದ್ಯದಿಂದ ಕೈ ಬಿಟ್ಟು ಇವರ ಸ್ಥಾನಕ್ಕೆ ರಿಷಭ್​ ಪಂತ್​, ಹರ್ಷಿತ್​ ರಾಣಾ ಮತ್ತು ರಿಯಾನ್​ ಪರಾಗ್​ ಅವರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿದುಬಂದಿದೆ

VISTARANEWS.COM


on

IND vs SL 3rd ODI
Koo

ಕೊಲಂಬೊ: ಪ್ರವಾಸಿ ಭಾರತ ಮತ್ತು ಆತಿಥೇಯ ಶ್ರೀಲಂಕಾ(IND vs SL 3rd ODI) ವಿರುದ್ಧದ ಅಂತಿಮ ಏಕದಿನ ಪಂದ್ಯ ಇಂದು ಆರ್​.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿ ಸೋಲಿನ ಭೀತಿಯಲ್ಲಿರುವ ಭಾರತಕ್ಕೆ ಈ ಅಪಮಾನದಿಂದ ಪಾರಾಗಬೇಕಿದ್ದರೆ ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಹೀಗಾಗಿ ಈ ಪಂದ್ಯವನ್ನು ಹೈವೋಲ್ಟೇಜ್ ಪಂದ್ಯ ಎಂದು ನಿರೀಕ್ಷಿಸಲಾಗಿದೆ. ಭಾರತ ಈ ಪಂದ್ಯಕ್ಕೆ ತನ್ನ ಆಡುವ ಬಳಗದಲ್ಲಿ ಕನಿಷ್ಠ ಮೂರು ಬದಲಾವಣೆ ಮಾಡುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಕೆ.ಎಲ್​ ರಾಹುಲ್​, ಶಿವಂ ದುಬೆ ಮತ್ತು ಮೊಹಮ್ಮದ್​ ಸಿರಾಜ್​ ಅವರನ್ನು ಈ ಪಂದ್ಯದಿಂದ ಕೈ ಬಿಟ್ಟು ಇವರ ಸ್ಥಾನಕ್ಕೆ ರಿಷಭ್​ ಪಂತ್​, ಹರ್ಷಿತ್​ ರಾಣಾ ಮತ್ತು ರಿಯಾನ್​ ಪರಾಗ್​ ಅವರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿದುಬಂದಿದೆ. ರಾಹುಲ್​ ಕಳೆದ ದ್ವಿತೀಯ ಪಂದ್ಯದಲ್ಲಿ ಶೂನ್ಯಕ್ಕೆ ನಿರ್ಗಮಿಸಿದ್ದರು. ಮೊದಲ ಪಂದ್ಯದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ್ದರು. ಇದೀಗ ಸರಣಿ ಸೋಲಿನ ಭೀತಿಯಲ್ಲಿರುವ ಭಾರತ ತಂಡ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ಎದುರಾಳಿ ಬೌಲರ್​ಗಳ ಲೆಕ್ಕಾಚಾರವನ್ನು ಬುಡಮೇಲು ಮಾಡುವಂತಹ ಪಂತ್​ ಅವರನ್ನು ಕಣಕ್ಕಿಳಿಸಲು ತಂಡ ಬಯಸಿದೆ ಎನ್ನಲಾಗಿದೆ.

ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನ ಪಿಚ್​ ಸಿನ್ನರ್​ಗಳಿಗೆ ಹೆಚ್ಚಿನ ನೆರವು ನೀಡುವ ಕಾರಣ ಶಿವಂ ದುಬೆ ಅವರನ್ನು ಈ ಪಂದ್ಯದಿಂದ ಕೈಬಿಟ್ಟು ಅವರ ಬದಲಿಗೆ ಸ್ಪಿನ್​ ಆಲ್​ರೌಂಡರ್​ ಆಗಿರುವ ರಿಯಾನ್ ಪರಾಗ್ ಸ್ಥಾನ ಪಡೆಯಬಹುದು. ಟಿ20 ಸರಣಿಯಲ್ಲಿ ಬ್ಯಾಟಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಪರಾಗ್​ ಉತ್ತಮ ಪ್ರದರ್ಶನ ತೋರಿದ್ದರು. ಹೀಗಾಗಿ ಇವರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ.

ಇದನ್ನೂ ಓದಿ IND vs SL ODI : ನಾಟಕೀಯ ತಿರುವು; ಲಂಕಾ ವಿರುದ್ಧದ ಮೊದಲ ಏಕ ದಿನ ಪಂದ್ಯ ಟೈ

ಪಿಚ್ ರಿಪೋರ್ಟ್

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಹೆಚ್ಚು ಬಾರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ಮಾಡಿದ ತಂಡ ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಹೀಗಾಗಿ ಎರಡನೇ ಏಕದಿನ ಪಂದ್ಯದಲ್ಲಿಯೂ ಸ್ಪಿನ್​ ಬೌಲರ್​ಗಳು ಪ್ರಾಬಲ್ಯ ತೋರುವ ನಿರೀಕ್ಷೆ ಇದೆ. ಪಂದ್ಯ ಸಾಗಿದಂತೆ ಈ ಪಿಚ್​ ಅತ್ಯಂತ ತಿರುವ ಪಡೆದುಕೊಳ್ಳಲಿದೆ. ಬ್ಯಾಟಿಂಗ್​ ನಡೆಸುವುದೇ ಒಂದು ಸವಾಲಾಗಿರಲಿದೆ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ದುಕೊಳ್ಳಬಹುದು.

ಸಂಭಾವ್ಯ ತಂಡಗಳು

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್​ ಪಂತ್​ (ವಿಕೀ), ರಿಯಾನ್​ ಪರಾಗ್​, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೀ), ಸದೀರ ಸಮರವಿಕ್ರಮ, ಚರಿತ್ ಅಸಲಂಕ (ನಾಯಕ), ಕಾಮಿಂದು ಮೆಂಡಿಸ್, ಜನಿತ್ ಲಿಯಾನಗೆ, ದುನಿತ್ ವೆಲ್ಲಲಾಗೆ, ಅಕಿಲ ದನಂಜಯ, ಅಸಿತ ಫೆರ್ನಾಂಡೋ, ಜೆಫ್ರಿ ವಂಡರ್ಸೆ.

Continue Reading

ಕ್ರೀಡೆ

Rohit Sharma: ಯುಪಿಎಸ್ಸಿ ಕೋಚಿಂಗ್​ನಲ್ಲಿಯೂ ರೋಹಿತ್​ ಶರ್ಮ ಹವಾ; ವೈರಲ್​ ವಿಡಿಯೊ ಇಲ್ಲಿದೆ

Rohit Sharma: ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 398 ಏಕದಿನ ಪಂದ್ಯಗಳನ್ನಾಡಿ 351 ಸಿಕ್ಸರ್​ ಬಾರಿಸಿದ್ದಾರೆ.

VISTARANEWS.COM


on

Rohit Sharma
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡದ ನಾಯಕ ರೋಹಿತ್ ಶರ್ಮ(Rohit Sharma) ಅವರ ಸಾಧನೆ ಇದೀಗ ಯುಪಿಎಸ್ಸಿ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದೆ. ಹೌದು, ಯುಪಿಎಸ್ಸಿ(UPSC ) ಕೋಚಿಂಗ್​ ಸೆಂಟರ್​ ಒಂದರಲ್ಲಿ ಶಿಕ್ಷಕರೊಬ್ಬರು(UPSC teacher) ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ರೋಹಿತ್​ ಅವರ ಬ್ಯಾಟಿಂಗ್​ ಬಗ್ಗೆ ಗುಣಗಾನ ಮಾಡಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(viral video) ಆಗಿದೆ.

ಪಾಠ ಮಾಡುತ್ತಿದ್ದ ಶಿಕ್ಷಕ, ರೋಹಿತ್ ಶರ್ಮ ಅವರ ಬ್ಯಾಟಿಂಗ್ ನೋಡುವಾಹ ರನ್​ ಗಳಿಸಲೆಂದೇ ಈ ಪಿಚ್​ ಮಾಡಿರುವಂತೆ ತೋರುತ್ತದೆ. ಆದರೆ, ಇತರ ಬ್ಯಾಟರ್‌ಗಳು ಕ್ರೀಸ್​ಗೆ ಬಂದಾಗ ಅದು ಕಠಿಣ ಎಂದು ಅನಿಸುತ್ತದೆ. ಅದು ಏಕೆ ಎಂಬುದು ನಿಜಕ್ಕೂ ಗೊಂದಲಮಯವಾಗಿದೆ ಎಂದು ಹೇಳುವ ಮೂಲಕ ಪರೀಕ್ಷೆ ಬರೆಯಲು ಸಜ್ಜಾಗಿ ನಿಂತಿರುವ ವಿದ್ಯಾರ್ಥಿಗಳು ರೋಹಿತ್​ ರನ್​ ಗಳಿಸಿದಂತೆ ಅಂಕ ಗಳಿಸಬೇಕು ಎನ್ನುವ ಉದಾಹರಣೆಯನ್ನು ನೀಡಿದ್ದಾರೆ. ಈ ವಿಡಿಯೊ ಕಂಡ ನೆಟ್ಟಿಗರು ಮಿಶ್ರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ರೋಹಿತ್​ ಶೂನ್ಯಕ್ಕೆ ಔಟ್​ ಆದ ಹಲವು ನಿದರ್ಶನ ಇದೆ ಎಂದು ಹಾಸ್ಯ ಮಾಡಿದರೆ, ಇನ್ನು ಕೆಲವರು ರೋಹಿತ್​ ಏಕದಿನದಲ್ಲಿ ಮೂರು ಬಾರಿ ದ್ವಿಶತಕ ಬಾರಿಸಿದ್ದಾರೆ ಎಂದು ಕಮೆಂಟ್​ ಮಾಡಿದ್ದಾರೆ.

ಲಂಕಾ ವಿರುದ್ಧ ನಾಳೆ ನಡೆಯುವ ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್​ ಶರ್ಮ 2 ಸಿಕ್ಸರ್​ ಬಾರಿಸಿದರೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ(Most sixes in career in ODIs) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಈ ಮೂಲಕ ಕ್ರಿಸ್​ ಗೇಲ್​ (331 ಸಿಕ್ಸರ್​) ದಾಖಲೆಯನ್ನು ಮುರಿಯಲಿದ್ದಾರೆ. ಸದ್ಯ ರೋಹಿತ್​ 330 ಸಿಕ್ಸರ್​ ಬಾರಿಸಿ ಮೂರನೇ ಸ್ಥಾನಿಯಾಗಿದ್ದಾರೆ. ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 398 ಏಕದಿನ ಪಂದ್ಯಗಳನ್ನಾಡಿ 351 ಸಿಕ್ಸರ್​ ಬಾರಿಸಿದ್ದಾರೆ. ರೋಹಿತ್​ ಕನಿಷ್ಠ 2 ವರ್ಷಗಳ ಕಾಲ ಏಕದಿನ ಆಡಿದರೆ ಈ ದಾಖಲೆಯನ್ನು ಮುರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಇದನ್ನೂ ಓದಿ Rohit Sharma: ಕ್ರಿಸ್​ ಗೇಲ್​ ಸಿಕ್ಸರ್​ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​

ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

ಕ್ರೀಡೆ

IND vs SL 3rd ODI: ನಾಳೆ ಅಂತಿಮ ಏಕದಿನ; ರೋಹಿತ್​ ಪಡೆಗೆ ಗೆಲ್ಲಲೇ ಬೇಕಾದ ಒತ್ತಡ!

IND vs SL 3rd ODI: ದ್ವಿತೀಯ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿತ್ತು. ಆದರೆ, ಪಂದ್ಯಕ್ಕೆ ಯಾವುದೇ ಮಳೆ ಕಾಟ ಎದುರಾಗಿರಲಿಲ್ಲ. ಇದೀಗ ನಾಳೆ ನಡೆಯುವ ಮೂರನೇ ಪಂದ್ಯಕ್ಕೂ ಶೇ.77ರಷ್ಟು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

IND vs SL 3rd ODI
Koo

ಕೊಲಂಬೊ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 0-1 ಹಿನ್ನಡೆಯಲ್ಲಿರುವ ಭಾರತ ತಂಡ ನಾಳೆ(ಬುಧವಾರ) ನಡೆಯುವ ಅಂತಿಮ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದೊಂದಿಗೆ ಕಣಕ್ಕಿಳಿಯಲಿದೆ. ದುರ್ಬಲ ಲಂಕಾ ವಿರುದ್ಧ ಸರಣಿ(IND vs SL 3rd ODI) ಸೋಲಿನ ಭೀತಿಯಲ್ಲಿರುವ ರೋಹಿತ್​ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊದಲ ಪಂದ್ಯ ಟೈ ಗೊಂಡಿತ್ತು.

ಭಾರತ ತಂಡಕ್ಕೆ ನಾಯಕ ರೋಹಿತ್​ ಶರ್ಮ ಬಿರುಸಿನ ಬ್ಯಾಟಿಂಗ್​ ಮೂಲಕ ಉತ್ತಮ ಆರಂಭ ಒದಗಿಸುತ್ತಿದ್ದರೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಯಾರು ಕೂಡ ತಂಡವನ್ನು ಆಧರಿಸಿ ನಿಲ್ಲುತ್ತಿಲ್ಲ. ಬ್ಯಾಟಿಂಗ್​ ಮರೆತವರಂತೆ ಬ್ಯಾಟ್​ ಬೀಸಿ ವಿಕೆಟ್​ ಕಳೆದುಕೊಳ್ಳುತ್ತಿದ್ದಾರೆ. ಕೊಹ್ಲಿ, ರಾಹುಲ್​, ದುಬೆ, ಅಯ್ಯರ್​ ಆಡಿದ 2 ಪಂದ್ಯಗಳಲ್ಲಿಯೂ ವೈಫಲ್ಯ ಕಂಡಿದ್ದಾರೆ. ಅಕ್ಷರ್​ ಪಟೇಲ್​​ ಕೆಳ ಕ್ರಮಾಂಕದಲ್ಲಿ ಸಣ್ಣ ಮಟ್ಟಿನ ಬ್ಯಾಟಿಂಗ್​ ಹೋರಾಟ ನಡೆಸಿದರೂ ಕೂಡ ಅವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ಸಿಗದ ಕಾರಣ ಪಂದ್ಯವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗುತ್ತಿಲ್ಲ. ಭಾರತದ ಸೋಲಿಗೆ ಪ್ರಮುಖ ಕಾರಣ ಮಧ್ಯಮ ಕ್ರಮಾಂಕದ ಬ್ಯಾಟಿಂಗ್​ ವೈಫಲ್ಯ. ನಿರ್ಣಾಯ ಪಂದ್ಯದಲ್ಲಾದರೂ ಜವಾಬ್ದಾರಿಯುತ ಬ್ಯಾಟಿಂಗ್​ ನಡೆಸುವ ಅನಿವಾರ್ಯತೆ ಇದೆ.

ಸರಣಿ ಆರಂಭಕ್ಕೂ ಮುನ್ನ ಲಂಕಾ ತಂಡವನ್ನು ದುರ್ಬಲ ತಂಡ, ಭಾರತಕ್ಕೆ ಸವಾಲೊಡ್ಡುವುದು ಕಷ್ಟ ಎಂದು ಊಹಿಸಲಾಗಿತ್ತು. ಜತೆಗೆ ಅನುಭವಿ ಆಟಗಾರರು ಕೂಡ ಗಾಯದಿಂದ ಅಲಭ್ಯರಾಗಿದ್ದರು. ಆದರೆ, ಸನತ್​ ಜಯಸೂರ್ಯ ಮಾರ್ಗದರ್ಶನದಲ್ಲಿ ಲಂಕಾ ತಂಡದ ಯುವ ಆಟಗಾರರು ಅಸಾಮಾನ್ಯ ಪ್ರದರ್ಶನ ತೋರುವ ಮೂಲಕ ಬಲಿಷ್ಠ ಭಾರತ ತಂಡಕ್ಕೆ ನೀರು ಕುಡಿಸಿತು. ಭಾರತ ತಂಡದ ಅತಿಯಾದ ಆತ್ಮವಿಶ್ವಾಸವೇ ಸೋಲಿಗೆ ಕಾರಣವಾಯಿತು.

ಇದನ್ನೂ ಓದಿ IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

ಪಿಚ್ ರಿಪೋರ್ಟ್

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಹೆಚ್ಚು ಬಾರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ಮಾಡಿದ ತಂಡ ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಹೀಗಾಗಿ ಎರಡನೇ ಏಕದಿನ ಪಂದ್ಯದಲ್ಲಿಯೂ ಸ್ಪಿನ್​ ಬೌಲರ್​ಗಳು ಪ್ರಾಬಲ್ಯ ತೋರುವ ನಿರೀಕ್ಷೆ ಇದೆ. ಪಂದ್ಯ ಸಾಗಿದಂತೆ ಈ ಪಿಚ್​ ಅತ್ಯಂತ ತಿರುವ ಪಡೆದುಕೊಳ್ಳಲಿದೆ. ಬ್ಯಾಟಿಂಗ್​ ನಡೆಸುವುದೇ ಒಂದು ಸವಾಲಾಗಿರಲಿದೆ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ದುಕೊಳ್ಳಬಹುದು.

ಹವಾಮಾನ ವರದಿ


ದ್ವಿತೀಯ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿತ್ತು. ಆದರೆ, ಪಂದ್ಯಕ್ಕೆ ಯಾವುದೇ ಮಳೆ ಕಾಟ ಎದುರಾಗಿರಲಿಲ್ಲ. ಇದೀಗ ನಾಳೆ ನಡೆಯುವ ಮೂರನೇ ಪಂದ್ಯಕ್ಕೂ ಶೇ.77ರಷ್ಟು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ಸಂಭಾವ್ಯ ತಂಡಗಳು


ಭಾರತ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್​ ಪಂತ್​ (ವಿಕೀ), ರಿಯಾನ್​ ಪರಾಗ್​, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೀ), ಸದೀರ ಸಮರವಿಕ್ರಮ, ಚರಿತ್ ಅಸಲಂಕ (ನಾಯಕ), ಕಾಮಿಂದು ಮೆಂಡಿಸ್, ಜನಿತ್ ಲಿಯಾನಗೆ, ದುನಿತ್ ವೆಲ್ಲಲಾಗೆ, ಅಕಿಲ ದನಂಜಯ, ಅಸಿತ ಫೆರ್ನಾಂಡೋ, ಜೆಫ್ರಿ ವಂಡರ್ಸೆ.

Continue Reading
Advertisement
Arvind Kejriwal
ದೇಶ2 hours ago

Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಸ್ವಾತಿ ಮಾಲಿವಾಲ್‌ ಕೇಸ್‌ನಲ್ಲೂ ಸಿಎಂ ವಿರುದ್ಧ ಚಾರ್ಜ್‌ಶೀಟ್!

ಕರ್ನಾಟಕ3 hours ago

Police Raid: ಸ್ಕೂಟರ್‌ನಲ್ಲಿ ಬರುತ್ತಿದ್ದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್‌ ಪೇದೆ!

John Abraham
ಕ್ರೀಡೆ3 hours ago

John Abraham: ಮನು ಭಾಕರ್‌ ಗೆದ್ದ ಒಲಿಂಪಿಕ್ಸ್‌ ಪದಕ ಮುಟ್ಟಿದ ಜಾನ್‌ ಅಬ್ರಾಹಂ; ನೆಟ್ಟಿಗರಿಂದ ನಟನಿಗೆ ಕ್ಲಾಸ್‌ ಏಕೆ?

Karnataka Governor
ಕರ್ನಾಟಕ3 hours ago

Karnataka Governor: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಸಿಎಂ

Dinesh Gundu Rao
ಬೆಂಗಳೂರು3 hours ago

Dinesh Gundu Rao: ರಾಜ್ಯದಲ್ಲಿ ಕಳಪೆ ಔಷಧಗಳ ಜಾಲ; ಅಧಿಕಾರಿಗಳಿಗೆ ಆರೋಗ್ಯ ಸಚಿವರ ತರಾಟೆ

Bangladesh Unrest
ವಿದೇಶ3 hours ago

Bangladesh Unrest: ಬಾಂಗ್ಲಾ ಹಿಂಸಾಚಾರ; ಬಹುರಾಷ್ಟ್ರೀಯ ಕಂಪನಿಗಳು ತತ್ತರ; ಭಾರತದ ಉದ್ಯಮಗಳ ಮೇಲೇನು ಪರಿಣಾಮ?

couple's fight
ಕರ್ನಾಟಕ3 hours ago

Couple’s fight: ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

Bangladesh Unrest
ವಿದೇಶ4 hours ago

Bangladesh Unrest: ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದಾಳಿಗೆ ಇಸ್ಲಾಮಿಕ್‌ ರಾಷ್ಟ್ರಗಳಿಂದ ಹಣ; ಇಲ್ಲಿದೆ ಸ್ಫೋಟಕ ಮಾಹಿತಿ

World Breastfeeding Week 2024
ಆರೋಗ್ಯ4 hours ago

World Breastfeeding Week 2024: ಹಾಲುಣಿಸುವುದು ನಿಲ್ಲಿಸಿದ ಮೇಲೆ ತಾಯಿಯ ತೂಕ ಹೆಚ್ಚುವುದೇಕೆ? ಆಗೇನು ಮಾಡಬೇಕು?

Actor Darshan
ಕ್ರೈಂ4 hours ago

Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 day ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 day ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌