ಯಲಹಂಕದಲ್ಲಿ ಕ್ರೀಡಾ ವಿಶ್ವವಿದ್ಯಾಲಯ: ಕ್ರೀಡಾ ಸಚಿವ ನಾರಾಯಣಗೌಡ - Vistara News

ಕ್ರೀಡೆ

ಯಲಹಂಕದಲ್ಲಿ ಕ್ರೀಡಾ ವಿಶ್ವವಿದ್ಯಾಲಯ: ಕ್ರೀಡಾ ಸಚಿವ ನಾರಾಯಣಗೌಡ

ಜಕ್ಕೂರು ಏರೋಡ್ರೋಮ್‍ನಲ್ಲಿ 100 ಮಕ್ಕಳಿಗೆ ಪೈಲಟ್ ತರಬೇತಿ ಕೊಡಲಾಗುವುದು. 6 ಏರ್‌ಕ್ರಾಫ್ಟ್‌ಗಳಲ್ಲಿ 3 ಪೈಲಟ್‍ಗಳು ತರಬೇತಿ ಕೊಡುತ್ತಿದ್ದಾರೆ ಎಂದು ಹೇಳಿದರು.

VISTARANEWS.COM


on

narayana gowda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಪ್ರಥಮ ಕ್ರೀಡಾ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಯಲಹಂಕದಲ್ಲಿ 100 ಎಕರೆ ಜಮೀನು ಗುರುತಿಸಲಾಗಿದೆ. 65 ಎಕರೆ ಈಗಾಗಲೇ ಸರಕಾರದ ವಶಕ್ಕೆ ಪಡೆಯಲಾಗಿದೆ. ಇನ್ನೂ 35 ಎಕರೆ ಪಡೆಯಲು ಜಿಲ್ಲಾಧಿಕಾರಿಗೆ ತಿಳಿಸಲಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ಮಂಗಳವಾರ ತಿಳಿಸಿದರು.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಕ್ಕೂರು ಏರೋಡ್ರೋಮ್‍ನಲ್ಲಿ 100 ಮಕ್ಕಳಿಗೆ ಪೈಲಟ್ ತರಬೇತಿ ಕೊಡಲಾಗುವುದು. 6 ಏರ್‌ಕ್ರಾಫ್ಟ್‌ಗಳಲ್ಲಿ 3 ಪೈಲಟ್‍ಗಳು ತರಬೇತಿ ಕೊಡುತ್ತಿದ್ದಾರೆ. ಹಿಂದೆ ಬಾಕಿ ಉಳಿದ 36 ಮಕ್ಕಳ ತರಬೇತಿಯನ್ನು ಈಗ ಪೂರ್ಣಗೊಳಿಸಲಾಗುತ್ತಿದೆ. ಅತಿ ಕಡಿಮೆ ವೆಚ್ಚದಲ್ಲಿ ಹಿಂದುಳಿದ ಸಮಾಜಗಳಿಗೆ ಆದ್ಯತೆ ಕೊಡಲಾಗುತ್ತಿದೆ. ರನ್‍ವೇ ರಿಪೇರಿ ಆಗಿದೆ ಎಂದರು.

ಹಳ್ಳಿ ಹಳ್ಳಿಯಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ₹ 504 ಕೋಟಿ ಅನುದಾನ ನೀಡಲಾಗಿದೆ. ಪಾಠದ ಜತೆ ಆಟ ಯಶಸ್ವಿಯಾಗಬೇಕು. ಪ್ರತಿ ಶಾಲೆಯಲ್ಲಿ 1ರಿಂದ ಒಂದೂವರೆ ಗಂಟೆ ಆಟ ಆಡಿಸಬೇಕು. 8 ಸಾವಿರ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಇದ್ದು, ಅದನ್ನು ಭರ್ತಿ ಮಾಡಲು ಚರ್ಚೆ ನಡೆದಿದೆ ಎಂದು ತಿಳಿಸಿದರು.
ಕ್ರೀಡೆಯಲ್ಲಿ ದೇಶವು ಗಮನಾರ್ಹ ಸಾಧನೆ ಮಾಡಬೇಕೆಂಬ ಪ್ರಧಾನಿಗಳಾದ ನರೇಂದ್ರ ಮೋದಿಯವರ ಕನಸು ಈಗ ನನಸಾಗುತ್ತಿದೆ. ಖೇಲೋ ಇಂಡಿಯಾ ಉದ್ಘಾಟನೆಯಾಗಿದ್ದು, ನಾಲ್ಕು ಕಡೆ ವಿವಿಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಕ್ರೀಡಾ ವಿಭಾಗಕ್ಕೆ ಮುಖ್ಯಮಂತ್ರಿಗಳೂ ಶಕ್ತಿಯನ್ನು ತುಂಬುತ್ತಿದ್ದಾರೆ ಎಂದರು.
ಅಮೃತ ದತ್ತು ಯೋಜನೆಯಡಿ 75 ಮಕ್ಕಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕಳುಹಿಸಲು ಯೋಜನೆ ಮಾಡುತ್ತಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದಕ್ಕೆ ನೆರವು ನೀಡುತ್ತಿವೆ. 25 ಗ್ರಾಮೀಣ ಮಕ್ಕಳಿಗೆ ಚೆನ್ನೈ ಮತ್ತು ಆಂಧ್ರ ಪ್ರದೇಶದಲ್ಲಿ ಕೇವಲ ಒಂದು ತಿಂಗಳ ತರಬೇತಿ ನೀಡಿದ್ದರಿಂದ ಅವರು ಸ್ವರ್ಣ ಪದಕ ಪಡೆದುದನ್ನು ಗುರುತಿಸಿದ್ದೇವೆ ಎಂದು ತಿಳಿಸಿದರು.

ಹೆಚ್ಚಿನ ಓದಿಗಾಗಿ | ಮಲ್ಲಕಂಭ, ಯೋಗಾಸನ ವಿಭಾಗ ಸೇರ್ಪಡೆ: ಭಾನುವಾರದಿಂದ ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌

ಹಳೆ ಕುಸ್ತಿಪಟುಗಳಿಗೆ ಮಾಸಾಶನವನ್ನು ₹1 ಸಾವಿರಕ್ಕೆ ಹೆಚ್ಚಿಸಲಾಗಿದೆ. ಗ್ರಾಮೀಣ ಗರಡಿ ಮನೆಗಳ ಪುನರ್ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಕಂಠೀರವ ಸ್ಟುಡಿಯೋದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಹಾಳಾಗಿತ್ತು. ಅದನ್ನು ಮರುನಿರ್ಮಿಸಲು ₹5 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ವಿವರಿಸಿದರು.

ತುಮಕೂರಿನಲ್ಲಿ ₹4.5 ಕೋಟಿ ವೆಚ್ಚದಲ್ಲಿ ದೊಡ್ಡ ಕ್ರೀಡಾ ಕಾಂಪ್ಲೆಕ್ಸ್ ನಿರ್ಮಿಸಲಾಗುತ್ತಿದೆ. ಕೇಂದ್ರ ಸರಕಾರವೂ ಇದಕ್ಕೆ ಅನುದಾನ ನೀಡಿದೆ. ಬೆಂಗಳೂರು ಹಾಗೂ ಮಂಡ್ಯದಲ್ಲಿ ಮಕ್ಕಳ ಕ್ರೀಡಾ ಸಾಮಥ್ರ್ಯ ಪರೀಕ್ಷಾ ಕೇಂದ್ರ ಆರಂಭಿಸಲಾಗುವುದು. ಎಲ್ಲ ಜಿಲ್ಲೆಯಲ್ಲಿ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಹಾಸ್ಟೆಲ್ ಸಿದ್ಧಪಡಿಸಲಾಗುವುದು. 10- 15 ಹಾಸ್ಟೆಲ್ ಆರಂಭಗೊಂಡಿದೆ. ಈಜುಕೊಳ ನಿರ್ವಹಣೆ, ಕ್ರೀಡಾ ಸೌಲಭ್ಯ ನೀಡಲು ಖಾಸಗಿ- ಸಾರ್ವಜನಿಕ ಸಹಭಾಗಿತ್ವವನ್ನು (ಪಿಪಿಪಿ) ಬಳಸಿಕೊಳ್ಳಲಾಗುವುದು. ಸ್ಥಳೀಯ ಸಂಸ್ಥೆಗಳ ಸಹಕಾರದಡಿ ಇದು ನಡೆಯಲಿದೆ. ಕ್ರೀಡೆಗೆ ಹೆಚ್ಚಿನ ಶಕ್ತಿ ತುಂಬಿ ರಾಜ್ಯವನ್ನು ದೇಶದ ಮೊದಲ ಸ್ಥಾನಕ್ಕೆ ಒಯ್ಯಲಾಗುವುದು ಎಂದು ತಿಳಿಸಿದರು.

ನೂತನ ಯುವ ನೀತಿ

ಡಾ. ಬಾಲಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಯುವ ನೀತಿಯನ್ನು ಮೊದಲ ಬಾರಿಗೆ ಜಾರಿಗೊಳಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ದಾರಿ ತಪ್ಪದಂತೆ ನೋಡಿಕೊಳ್ಳಲಾಗುವುದು. ಉದ್ಯೋಗ ಮಾರ್ಗದರ್ಶನ, ಕೃಷಿ ಸಂಬಂಧಿತ ಉತ್ಪನ್ನಗಳ ಸಂಬಂಧ ತಿಳಿವಳಿಕೆ ನೀಡಲು 2.5 ಲಕ್ಷ ಕೌನ್ಸೆಲರ್‍ಗಳು ಸಿದ್ಧರಾಗಿದ್ದಾರೆ. ಶಿಕ್ಷಣ ಪಡೆದ ರೈತರ ಮಕ್ಕಳು ಮತ್ತು ಗ್ರಾಮೀಣ ವಿದ್ಯಾವಂತ ಯುವಕರಿಗೆ ತರಬೇತಿ ಮತ್ತು ಪ್ರೋತ್ಸಾಹ ನೀಡಲು ಉದ್ದೇಶಿಸಿದೆ ಎಂದು ತಿಳಿಸಿದರು. ರೈತರ ಮಕ್ಕಳು ನೇರವಾಗಿ ಸೊಸೈಟಿಗಳಿಗೆ ಉತ್ಪನ್ನ ಮಾರಾಟ ಮಾಡುವಂತಾಗಿದೆ ಎಂದರು.
ರೇಷ್ಮೆ ಗೂಡಿನ ದರ ಕೋವಿಡ್ ಹಾಗೂ ಲಾಕ್ ಡೌನ್ ವೇಳೆ 100ರಿಂದ 150ಕ್ಕೆ ಕುಸಿದಿತ್ತು. ಸಾಮಾನ್ಯವಾಗಿ 350 ರೂಪಾಯಿ ಇದ್ದ ಗೂಡಿನ ದರ ಈಗ 800 ರೂಪಾಯಿಗೆ ಏರಿದೆ. ಇವತ್ತು ರೀಲ್ ದರ ಹೆಚ್ಚಾಗಿದ್ದು, 5ರಿಂದ 5.5 ಸಾವಿರ ರೂಪಾಯಿ ಇದೆ ಎಂದು ತಿಳಿಸಿದರಲ್ಲದೆ, ರೀಲರ್‍ಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಹೈದರಾಬಾದ್, ವಾರಣಸಿ, ಚೆನ್ನೈನಲ್ಲಿ ಮಾರಾಟಕ್ಕೂ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದರು.
ರಾಮನಗರ ಚನ್ನಪಟ್ಟಣದಲ್ಲಿ ರೇಷ್ಮೆಗೆ ಸಂಬಂಧಿಸಿ ಹೈಟೆಕ್ ಮಾರುಕಟ್ಟೆ ನಿರ್ಮಿಸಲು 141 ಕೋಟಿ ವ್ಯಯಿಸಲಾಗುತ್ತಿದೆ. 75 ಕೋಟಿ ಅನುದಾನ ಕೇಂದ್ರ ಸರಕಾರದಿಂದ ಬಂದಿದೆ. ವಾಸ್ತವ್ಯ, ಲಾಕರ್ ವ್ಯವಸ್ಥೆ, ಬಾತ್‍ರೂಂ ವ್ಯವಸ್ಥೆಯನ್ನು ಕೊಡಲು ಉದ್ದೇಶಿಸಲಾಗಿದೆ. ಶಿಡ್ಲಘಟ್ಟ, ಹರಿಹರ, ಹಾವೇರಿ ಹಾಗೂ ಕಲಬುರ್ಗಿಯಲ್ಲೂ ಆಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣ ನಡೆಯಲಿದೆ ಎಂದರು. ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಮಾರ್ಕೆಟ್ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.
ಪಕ್ಷದ ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ. ಮಹೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ | ಗಲಭೆ ನಡೆಸಿ ಅಧಿಕಾರಕ್ಕೇರಲು ಕಾಂಗ್ರೆಸ್‌ ಪ್ರಯತ್ನ: ನಳಿನ್‌ ಕುಮಾರ್‌ ಕಟೀಲ್‌ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sania Mirza: ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಸಾನಿಯಾ ಮಿರ್ಜಾ?; ಈ ಪಕ್ಷದಿಂದ ಆಫರ್​

Sania Mirza: ಸಾನಿಯಾ ಮಿರ್ಜಾ ಅವರನ್ನು ತೆಲಂಗಾಣದ ಪ್ರಮುಖ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ಮುಂದಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Sania Mirza
Koo

ಹೈದರಾಬಾದ್​: ಕೆಲ ತಿಂಗಳ ಹಿಂದಷ್ಟೇ ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್‌ ಅವರಿಂದ ವಿಚ್ಛೇದನ ಪಡೆದಿದ್ದ ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ(Sania Mirza) ಅವರು ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ(lok sabha elections 2024) ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಹೌದು, ಸಾನಿಯಾ ಮಿರ್ಜಾ ಅವರನ್ನು ತೆಲಂಗಾಣದ ಪ್ರಮುಖ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷ ಅವರಿಗೆ ಟಿಕೆಟ್​ ನೀಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ತೆಲಂಗಾಣದಲ್ಲಿ ಎಐಎಂಐಎಂ ಪಕ್ಷದ ಅಸಾದುದ್ದೀನ್ ಓವೈಸಿ ವಿರುದ್ಧ ಸಾನಿಯಾ ಮಿರ್ಜಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಯೋಚನೆ ಹಾಕಿಕೊಂಡಿದ್ದು ಈಗಾಗಲೇ ಪಕ್ಷ ಸೇರುವಂತೆ ಆಹ್ವಾನ ಕೂಡ ನೀಡಲಾಗಿದೆ ಎಂದು ವರದಿಯಾಗಿದೆ. ಆದರೆ ಸಾನಿಯಾ ಅವರು ಇದುವರೆಗೂ ಈ ವಿಚಾರದಲ್ಲಿ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಮೂಲಗಳ ಪ್ರಕಾರ ಮಾಜಿ ಕ್ರಿಕೆಟಿಗ ಮೊಹಮ್ಮದ್‌ ಅಜರುದ್ಧೀನ್‌ ಅವರು ಸಾನಿಯಾ ಮಿರ್ಜಾ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಅಜರುದ್ದೀನ್ ಅವರು ಮಿರ್ಜಾ ಕುಟುಂಬದೊಂದಿಗೆ ನಿಕಟ ಕೌಟುಂಬಿಕ ಸಂಬಂಧವನ್ನು ಹೊಂದಿದ್ದಾರೆ. 2019ರಲ್ಲಿ ಸಾನಿಯಾ ಸಹೋದರಿ ಅನಮ್ ಮಿರ್ಜಾ ಅವರನ್ನು ಅಜರುದ್ಧೀನ್‌ ಮಗ ಮೊಹಮ್ಮದ್ ಅಸಾದುದ್ದೀನ್‌ ವಿವಾಹವಾಗಿದ್ದರು. ಹೀಗಾಗಿ ಸಾನಿಯಾ ಅವರನ್ನು ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಗೊಳಿಸಲು ಅಜರುದ್ಧೀನ್‌ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇನ್ನೊಂದು ಮೂಲಗಳ ಪ್ರಕಾರ ಸಾನಿಯಾ ಮಿರ್ಜಾ ಕೂಡ ಈ ಆಫರ್​ಗೆ ಒಪ್ಪಿಕೊಂಡಿದ್ದು ತಮ್ಮ ನಿರ್ಧಾರವನ್ನು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ Sania Mirza: ಪಾಕಿಸ್ತಾನಿ ಸಿಂಗರ್​ ಜತೆ ಕಾಣಿಸಿಕೊಂಡ ಸಾನಿಯಾ ಮಿರ್ಜಾ; ಫೋಟೊ ವೈರಲ್

ಶೋಯೆಬ್‌ ಮಲಿಕ್‌ ಸನಾ ಜಾವೇದ್ ಅವರನ್ನು ವಿವಾಹವಾಗುವ ಮೂಲಕ ಸಾನಿಯಾ ಮಿರ್ಜಾ(Sania Mirza) ಜತೆಗಿನ 13 ವರ್ಷದ ದಾಂಪತ್ಯವು ಕೊನೆಗೊಂಡಿತ್ತು. ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಹಲವು ಊಹಾಪೋಹದ ಸುದ್ದಿಗಳು ಹರಿದಾಡುತ್ತಿತ್ತು. ಕೆಲವರು ವಿಚ್ಚೇದನ ನೀಡದೆ ಶೋಯೆಬ್‌ ವಿವಾಹವಾಗಿದ್ದಾರೆ ಎಂದರೆ, ಇನ್ನು ಕೆಲವರು ಕಳೆದ ವರ್ಷವೇ ಈ ಜೋಡಿ ವಿಚ್ಚೇದನ ಪಡೆದಿತ್ತು ಎಂದು ಚರ್ಚಿಸುತ್ತಿದ್ದರು. ಈ ಎಲ್ಲ ವಿದ್ಯಮಾನಗಳನ್ನು ಕಂಡು ಸಾನಿಯಾ ಮಿರ್ಜಾ ಅವರ ಕುಟುಂಬವೇ ಅಧಿಕೃತ ಪ್ರಕಟನೆಯ ಮೂಲಕ ಸ್ಪಷ್ಟನೆ ನೀಡಿತ್ತು. ಶೋಯೆಬ್‌ – ಸಾನಿಯಾ ವಿಚ್ಛೇದನ ಪಡೆದು ಕೆಲವು ತಿಂಗಳುಗಳಾಗಿವೆ ಎಂದು ಕುಟುಂಬ ಮೂಲಗಳು ತಿಳಿಸಿತ್ತು.

ಸಾನಿಯಾ ಮಿರ್ಜಾ ಹಾಗೂ ಶೋಯೆಬ್‌ ಮಲಿಕ್‌ ಅವರು 2010ರಲ್ಲಿ ಮದುವೆಯಾಗಿದ್ದರು. ಹೈದರಾಬಾದ್‌ನ ತಾಜ್‌ ಕೃಷ್ಣಾ ಹೋಟೆಲ್‌ನಲ್ಲಿ ಹೈದರಾಬಾದ್‌ ಮುಸ್ಲಿಂ ಸಮುದಾಯದ ಸಂಪ್ರದಾಯದಂತೆ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರಿಗೆ ಇಜಾನ್‌ ಎಂಬ ಪುತ್ರನಿದ್ದಾನೆ. ಮಲಿಕ್​ಗೆ ವಿಚ್ಚೇದನ ನೀಡಿದ ಬಳಿಕ ಸಾನಿಯಾ ಅವರು ದುಬೈನಲ್ಲಿ ನೆಲೆಸಿದ್ದಾರೆ. 2023ರ ಆಸ್ಟ್ರೇಲಿಯನ್ ಓಪನ್​ಲ್ಲಿ ಆಡುವ ಮೂಲಕ ಸಾನಿಯಾ ಟೆನಿಸ್​ಗೆ ವಿದಾಯ ಹೇಳಿದ್ದರು. ರೋಹನ್ ಬೋಪಣ್ಣ ಜತೆ ಮಿಶ್ರ ಡಬಲ್ಸ್​ ಆಡಿದ್ದ ಅವರು ಈ ಟೂರ್ನಿಯಲ್ಲಿ ರನ್ನರ್​ ಅಪ್ ಆಗಿದ್ದರು.

Continue Reading

ಕ್ರೀಡೆ

IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

IPL 2024: ಐಪಿಎಲ್​ ಟೂರ್ನಿ ಒಂದು ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿದೆ, ಅದೆಷ್ಟೋ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಲು ಉತ್ತಮ ವೇದಿಕೆಯಾಗಿದೆ. ಈ ಟೂರ್ನಿಯಿಂದ ಅನೇಕ ಪ್ರತಿಭಾನ್ವಿತ ಆಟಗಾರರು ಬೆಳಕಿಗೆ ಬಂದಿದ್ದಾರೆ. ಆದರೂ ಕೂಡ ಕೆಲವೊಮ್ಮೆ ನನಗೆ ಐಪಿಎಲ್‌ ಕ್ರಿಕೆಟ್‌ ಹೌದಾ ಎಂದು ಅನುಮಾನ ಮೂಡುತ್ತದೆ ಎಂದು ಅಶ್ವಿನ್​ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

VISTARANEWS.COM


on

R Ashwin
Koo

ಜೈಪುರ: ವಿಶ್ವದ ಕ್ಯಾಶ್‌ ರಿಚ್‌ ಕ್ರಿಕೆಟ್‌ ಲೀಗ್‌ ಆಗಿರುವ ಐಪಿಎಲ್(IPL 2024)​ ಬಗ್ಗೆ ಟೀಮ್​ ಇಂಡಿಯಾದ ಹಿರಿಯ ಹಾಗೂ ಅನುಭವಿ ಆಟಗಾರ ಆರ್​.ಅಶ್ವಿನ್(R Ashwin)​ ಅವರು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಐಪಿಎಲ್‌ ನಿಜಕ್ಕೂ ಕ್ರಿಕೆಟ್ಟಾ? ಎಂದು ಪ್ರಶ್ನೆ ಮಾಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ ಪಂದ್ಯಕ್ಕೂ ಮುನ್ನ ನಡೆದ ಸಂದರ್ಶನವೊಂದರಲ್ಲಿ ಮಾತನಾಡಿದ ರಾಜಸ್ಥಾನ್​ ರಾಯಲ್ಸ್​ ತಂಡದ ಆಟಗಾರನಾಗಿರುವ ಅಶ್ವಿನ್, ‘ಐಪಿಎಲ್​ ಟೂರ್ನಿ ಒಂದು ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿದೆ, ಅದೆಷ್ಟೋ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಲು ಉತ್ತಮ ವೇದಿಕೆಯಾಗಿದೆ. ಈ ಟೂರ್ನಿಯಿಂದ ಅನೇಕ ಪ್ರತಿಭಾನ್ವಿತ ಆಟಗಾರರು ಬೆಳಕಿಗೆ ಬಂದಿದ್ದಾರೆ. ಆದರೂ ಕೂಡ ಕೆಲವೊಮ್ಮೆ ನನಗೆ ಐಪಿಎಲ್‌ ಕ್ರಿಕೆಟ್‌ ಹೌದಾ ಎಂದು ಅನುಮಾನ ಮೂಡುತ್ತದೆ” ಎಂದು ಹೇಳಿದರು.

“ಯುವಕನಾಗಿ ಐಪಿಎಲ್​ ಟೂರ್ನಿಗೆ ಕಾಲಿಟ್ಟ ವೇಳೆ ಹಿರಿಯ ಆಟಗಾರರಿಂದ ಕಲಿಯಲು ಬಯಸುತ್ತಿದ್ದೆ. ಈಗ ನಾವು ಜಾಹೀರಾತು ಶೂಟಿಂಗ್‌ಗಾಗಿ ಅಭ್ಯಾಸ ಮಾಡುತ್ತ ನಮ್ಮ ಸಮಯವನ್ನು ಕಳೆದುಬಿಡುತ್ತೇವೆ. ಹೀಗಾಗಿ ಐಪಿಎಲ್‌ ಕ್ರಿಕೆಟ್‌ ಹೌದಾ ಎಂದು ಅಚ್ಚರಿಯಾಗುತ್ತದೆ” ಎಂದು ಆರ್‌.ಅಶ್ವಿ‌ನ್‌ ಹೇಳಿದ್ದಾರೆ. ಇತ್ತೀಚೆಗೆ ಭಾರತದಲ್ಲಿ ನಡೆದಿದ್ದ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅಶ್ವಿನ್​ ಅಮೋಘ ಬೌಲಿಂಗ್​ ಪ್ರದರ್ಶನದೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ 500 ವಿಕೆಟ್​ ಪೂರ್ತಿಗೊಳಿಸಿದ ಸಾಧನೆ ಮಾಡಿದ್ದರು.

ಇದನ್ನೂ ಓದಿ Rishabh Pant: ಕಮ್​ಬ್ಯಾಕ್​ ಪಂದ್ಯದಲ್ಲೇ ದಾಖಲೆ ಬರೆದ ರಿಷಭ್​ ಪಂತ್​

2009ರಲ್ಲಿ ಐಪಿಎಲ್​ಗೆ ಪದಾರ್ಪಣೆ ಮಾಡಿದ ಅಶ್ವಿನ್​ ಇದುವರೆಗೆ 199 ಪಂದ್ಯಗಳಲ್ಲಿ ಆಡಿದ್ದಾರೆ. 172 ವಿಕೆಟ್​ ಮತ್ತು 743 ರನ್​ ಬಾರಿಸಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್​ ಪರ ಆರಂಭವಾದ ಇವರ ಐಪಿಎಲ್​ ಜರ್ನಿ ಬಳಿಕ ಡೆಲ್ಲಿ ಕ್ಯಾಪಿಟಲ್ಸ್​, ಪಂಜಾಬ್​ ಕಿಂಗ್ಸ್​ ತಂಡವನ್ನು ಪ್ರತಿನಿಧಿಸಿದ್ದರು. ಪ್ರಸ್ತುತ ರಾಜಸ್ಥಾನ್​ ಪರ ಆಡುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ನಿನ್ನೆ(ಗುರುವಾರ) ನಡೆದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ನಡೆಸಿ ಗಮನಸೆಳೆದಿದ್ದರು. ಕೇವಲ 19 ಎಸೆತಗಳಿಂದ 3 ಸಿಕ್ಸರ್​ ಸಿಡಿಸಿ 29 ರನ್​ ಬಾರಿಸಿದ್ದರು. ಆದರೆ, ಬೌಲಿಂಗ್​ನಲ್ಲಿ ಯಶಸ್ಸು ಕಾಣಲಿಲ್ಲ. ಓವರ್​ಗೆ 10ರ ಸರಾಸರಿಯಲ್ಲಿ ರನ್​ ಬಿಟ್ಟು ಕೊಟ್ಟು ವಿಕೆಟ್​ ಲೆಸ್​ ಎನಿಸಿಕೊಂಡರು.

ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ


ಪ್ರಸಕ್ತ ಸಾಗುತ್ತಿರುವ ಐಪಿಎಲ್​ (IPL 2024) ಟೂರ್ನಿಯಲ್ಲಿ 9 ಪಂದ್ಯಗಳು ಮುಕ್ತಾಯಕಂಡಿದೆ. ಅಚ್ಚರಿ ಎಂದರೆ ಈ 9 ಪಂದ್ಯಗಳಲ್ಲಿಯೂ ತವರಿನ ತಂಡವೇ ಗೆಲುವು ಸಾಧಿಸಿದ್ದು. ಗುರುವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್​(Rajasthan Royals) ಸತತ 2 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ(IPL 2024 Points Table) ಮತ್ತೆ ಹಿಡಿತ ಸಾಧಿಸಿದೆ. ಡೆಲ್ಲಿ(Delhi Capitals) ಸತತ 2 ಸೋಲು ಕಂಡರೂ ಕೂಡ 8ನೇ ಸ್ಥಾನದಲ್ಲಿದೆ.

ನೂತನ ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
​ ಚೆನ್ನೈ ಸೂಪರ್​ ಕಿಂಗ್ಸ್​2204 (+1.979)
ರಾಜಸ್ಥಾನ್​ ರಾಯಲ್ಸ್2204 (+0.800)
ಸನ್​ರೈಸರ್ಸ್​ ಹೈದರಾಬಾದ್​2112 (+0.675)
ಕೋಲ್ಕೊತಾ ನೈಟ್‌ ರೈಡರ್ಸ್1102(+200)
ಪಂಜಾಬ್‌ ಕಿಂಗ್ಸ್2112‌ (+0.025)
ಆರ್‌ಸಿಬಿ2112 (-0.180)
ಗುಜರಾತ್‌ ಟೈಟಾನ್ಸ್2112 (-1.425)
ಡೆಲ್ಲಿ ಕ್ಯಾಪಿಟಲ್ಸ್2020 (–0.528)
ಮುಂಬೈ ಇಂಡಿಯನ್ಸ್2020 (-1000)
ಲಕ್ನೋ ಸೂಪರ್​ ಜೈಂಟ್ಸ್​1010 (-1.000)
Continue Reading

ಕ್ರೀಡೆ

Hanuma Vihari: ಹನುಮ ವಿಹಾರಿಗೆ ಶೋಕಾಸ್‌ ನೋಟಿಸ್‌ ನೀಡಿದ ಎಸಿಎ

ನಾಯಕತ್ವ ಬದಲಾವಣೆ ವಿಚಾರವಾಗಿ ಆಂಧ್ರಪ್ರದೇಶ ಕ್ರಿಕೆಟ್ ಅಸೋಸಿಯೇಶನ್(Andhra Cricket Association) ವಿರುದ್ಧ ಗಂಭೀರ ಆರೋಪ ಮಾಡಿದ್ದ ಹನುಮ ವಿಹಾರಿ(Hanuma Vihari)ಗೆ ಎಸಿಎ ಶೋಕಾಸ್‌ ನೋಟಿಸ್‌(ACA show-cause notice) ಜಾರಿ ಮಾಡಿದೆ.

VISTARANEWS.COM


on

hanuma vihari
Koo

ಆಂಧ್ರ ಪ್ರದೇಶ: ಟೀಮ್​ ಇಂಡಿಯಾದ ಆಟಗಾರ ಹನುಮ ವಿಹಾರಿ(Hanuma Vihari) ಅವರು ಇತ್ತೀಗೆಗೆ ಮುಕ್ತಾಯ ಕಂಡ ರಣಜಿ ಟ್ರೋಫಿ ಟೂರ್ನಿಯ ವೇಳೆ ನಾಯಕತ್ವ ಬದಲಾವಣೆ ವಿಚಾರವಾಗಿ ಆಂಧ್ರಪ್ರದೇಶ ಕ್ರಿಕೆಟ್ ಅಸೋಸಿಯೇಶನ್(Andhra Cricket Association) ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಎಸಿಎ ಶೋಕಾಸ್‌ ನೋಟಿಸ್‌(ACA show-cause notice) ಜಾರಿ ಮಾಡಿದೆ.

ಹನುಮ ವಿಹಾರಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡಿ, ಬಂಗಾಳ ವಿರುದ್ಧದ ಮೊದಲ ಪಂದ್ಯದಲ್ಲಿ ನಾನು ತಂಡದ ನಾಯಕನಾಗಿದ್ದೆ. ಆಟದ ಸಮಯದಲ್ಲಿ ನಾನು 17 ನೇ ಆಟಗಾರನ ಮೇಲೆ ಕೂಗಾಡಿದ್ದೆ. ಅವನು ತನ್ನ ತಂದೆಗೆ (ರಾಜಕಾರಣಿಯಾಗಿದ್ದ) ದೂರು ನೀಡಿದ್ದ, ಪ್ರತಿಯಾಗಿ ಅವರ ತಂದೆ ನನ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಸೋಸಿಯೇಷನ್​ಗೆ ಕೇಳಿದರು. ಬಂಗಾಳ ವಿರುದ್ದದ ಪಂದ್ಯದಲ್ಲಿ ನಾವು ಗೆದ್ದರೂ, ನನ್ನ ಯಾವುದೇ ತಪ್ಪು ಇಲ್ಲದ ಹೊರತಾಗಿಯೂ ರಾಜೀನಾಮೆ ಕೊಡಲು ನನ್ನಲ್ಲಿ ಅಸೋಸಿಯೇಶನ್​ ಕೇಳಿಕೊಂಡಿತು. ನಾನು ವೈಯಕ್ತಿಕವಾಗಿ ಆ ಆಟಗಾರನಿಗೆ ಏನೂ ಹೇಳಿರಲಿಲ್ಲ. ಆದರೆ ಕಳೆದ ಏಳು ವರ್ಷಗಳಲ್ಲಿ ಐದು ಬಾರಿ ತಂಡವನ್ನು ನಾಕೌಟ್​ಗೆ ತಲುಪಿಸಿದ, ತಂಡಕ್ಕೆ ಎಲ್ಲವನ್ನೂ ಕೊಟ್ಟ ಆಟಗಾರನಿಗಿಂತ ಆ ಆಟಗಾರನೇ ಮಂಡಳಿಗೆ ಪ್ರಿಯವಾದ. ನಾನು ಮುಜುಗರ ಅನುಭವಿಸಿದೆ. ಇನ್ನೆಂದೂ ನಾನು ಆಂಧ್ರಪ್ರದೇಶದ ಪರ ಆಡಲಾರೆ ಎಂದು ಹೇಳಿದ್ದರು. ಇದೇ ವಿಚಾರವಾಗಿ ವಿಹಾರಿ ವಿರುದ್ಧ ಎಸಿಎ ನೋಟಿಸ್‌ ಜಾರಿ ಮಾಡಿದೆ.

ಇದನ್ನೂ ಓದಿ Hanuma Vihari: ಎಸಿಎ ಆರೋಪಕ್ಕೆ ತಿರುಗೇಟು ನೀಡಿದ ಹನುಮ ವಿಹಾರಿ

ವಿಹಾರಿ ಮಾಡಿದ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಎಸಿಎ, ವಿಹಾರಿ ನಾಯಕತ್ವದ ನಿರ್ಗಮನವು ವೃತ್ತಿಪರ ಪರಿಗಣನೆಯ ಪರಿಣಾಮವಾಗಿದೆಯೇ ಹೊರತು ರಾಜಕೀಯ ಹಸ್ತಕ್ಷೇಪವಲ್ಲ, ವಿಹಾರಿ ಆಟಗಾರರನ್ನು ಬೆದರಿಸಿ ಸಹಿ ಮಾಡಿಸಿದ್ದಾರೆ ಎಂದು ಆಂಧ್ರ ಕ್ರಿಕೆಟ್ ಸಂಸ್ಥೆ ಆರೋಪ ಮಾಡಿತ್ತು. 

ಬೇರೆ ತಂಡದ ಪರ ಆಡುವೆ..


ನೋಟಿಸ್‌ ಜಾರಿ ಮಾಡಿದ ಹಿನ್ನೆಲೆ ವಿಹಾರಿ ಅವರು ತಾನು ಬೇರೆ ತಂಡದ ಪರ ಆಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಹಾರಿ, ‘ನಾನು ಎಸಿಎಯಿಂದ ನಿರಾಕ್ಷೇಪಣ ಪ್ರಮಾಣಪತ್ರವನ್ನು ಕೋರಿದ್ದು, ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಎಂದಿರುವುದಾಗಿ ವರದಿ ಹೇಳಿದೆ. ಈ ಬಾರಿಯ ರಣಜಿ ಆವೃತ್ತಿಯಲ್ಲಿ ಪ.ಬಂಗಾಳ ವಿರುದ್ಧದ ಆರಂಭಿಕ ಪಂದ್ಯದಲ್ಲಿ 30 ವರ್ಷದ ವಿಹಾರಿ, ಆಂಧ್ರಪ್ರದೇಶ ತಂಡದ ನಾಯಕತ್ವ ವಹಿಸಿದ್ದರು. ಅವರನ್ನು ಇದ್ದಕ್ಕಿದ್ದಂತೆ ನಾಯಕತ್ವದಿಂದ ಕೆಳಕ್ಕಿಳಿಸಿ, ರಿಕ್ಕಿ ಭುಯಿಗೆ ಜವಾಬ್ದಾರಿ ನೀಡಲಾಗಿತ್ತು. ಈ ಬಗ್ಗೆ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದ ವಿಹಾರಿ, ಎಸಿಎ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

Continue Reading

ಕ್ರೀಡೆ

Rishabh Pant: ಸ್ಮರಣೀಯ ಪಂದ್ಯದಲ್ಲೂ ತಾಳ್ಮೆ ಕಳೆದುಕೊಂಡ ಪಂತ್​; ವಿಡಿಯೊ ವೈರಲ್​

ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಂತ್ ಪಾತ್ರರಾಗಿದ್ದಾರೆ. 99 ಇನ್ನಿಂಗ್ಸ್​ಗಳಲ್ಲಿ 34.33ರ ಸರಾಸರಿಯಲ್ಲಿ 2884 ರನ್ ಗಳಿಸಿದ್ದಾರೆ.

VISTARANEWS.COM


on

Pant Loses Cool
Koo

ಜೈಪುರ: ಡೆಲ್ಲಿ ಕ್ಯಾಪಿಟಲ್ಸ್(Delhi Capitals) ಪರ 100ನೇ ಐಪಿಎಲ್(IPL 2024) ಪಂದ್ಯವನ್ನಾಡಿದ ನಾಯಕ ರಿಷಭ್ ಪಂತ್(Rishabh Pant)​ ಅವರು ತಾಳ್ಮೆ ಕಳೆದುಕೊಂಡ ಫಟನೆ ಸಂಭವಿಸಿದೆ. ಔಟಾಗಿ ಪೆವಿಲಿಯನ್‌ ಕಡೆ ಹೆಜ್ಜೆ ಹಾಕುವ ವೇಳೆ ಪಂತ್​ ತಮ್ಮ ಬ್ಯಾಟನ್ನು ಜೋರಾಗಿ ಗೋಡೆಗೆ ಬಡಿದಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದೆ.

ರಾಜಸ್ಥಾನ್ ರಾಯಲ್ಸ್​ ನೀಡಿದ ಮೊತ್ತವನ್ನು ಬೆನ್ನಟ್ಟುವ ವೇಳೆ 14ನೇ ಓವರ್‌ನ ಮೊದಲ ಎಸೆತದಲ್ಲಿ ಪಂತ್​ ಅವರು ಯಜುವೇಂದ್ರ ಚಾಹಲ್ ಎಸೆತದಲ್ಲಿ ವಿಕೆಟ್​ ಕೈಚೆಲ್ಲಿದರು. ಇವರ ವಿಕೆಟ್​ ಪತನಗೊಂಡದ್ದು ಪಂದ್ಯದ ಪ್ರಮುಖ ಹಂತದಲ್ಲಿ. ಪಂದ್ಯವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗದ ಬೇಸರ ಮತ್ತು ಸಿಟ್ಟಿನಿಂದ ಪಂತ್​ ಈ ರೀತಿಯ ವರ್ತನೆ ತೋರಿದರು. ನಾಲ್ಕನೇ ಕ್ರಮಾಂಕದಲ್ಲಿ ಆಡಲಿಳಿದ ಅವರು 26 ಎಸೆತಗಳಿಂದ 28 ರನ್​ ಬಾರಿಸಿದರು.

2022 ರ ಡಿಸೆಂಬರ್​ನಲ್ಲಿ ಅಪಘಾತದಿಂದ ಬದುಕುಳಿದ ನಂತರ 26 ವರ್ಷದ ಪಂತ್​​ ಇತ್ತೀಚೆಗೆ ಪಂಜಾಬ್ ಕಿಂಗ್ಸ್ ವಿರುದ್ಧದ ಋತುವಿನ ಆರಂಭಿಕ ಪಂದ್ಯದ ಸಮಯದಲ್ಲಿ ಕ್ರಿಕೆಟ್​ ಮೈದಾನಕ್ಕೆ ಪುನರಾಗಮನ ಮಾಡಿದ್ದರು. ತಮ್ಮ ಪುನರಾಗಮನದ ಪಂದ್ಯದಲ್ಲಿ ಅವರು 18 (13 ಎಸೆತ) ರನ್ ಗಳಿಸಿದ್ದರು. ಜತೆಗೆ ಒಂದು ಸ್ಟಂಪಿಂಗ್ ಮತ್ತು ಅದ್ಭುತ ಕ್ಯಾಚ್ ಪಡೆದಿದ್ದರು.

ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಂತ್ ಪಾತ್ರರಾಗಿದ್ದಾರೆ. 99 ಇನ್ನಿಂಗ್ಸ್​ಗಳಲ್ಲಿ 34.33ರ ಸರಾಸರಿಯಲ್ಲಿ 2884 ರನ್ ಗಳಿಸಿದ್ದಾರೆ. 2018ರಲ್ಲಿ ಅವರು 14 ಇನ್ನಿಂಗ್ಸ್​ಗಳಿಂದ 52.61 ಸರಾಸರಿಯಲ್ಲಿ 684 ರನ್ ಮತ್ತು 173.6 ಸ್ಟ್ರೈಕ್​ರೇಟ್​ನೊಂದಿಗೆ ಆವೃತ್ತಿಯ ಎರಡನೇ ಅತಿ ಹೆಚ್ಚು ರನ್ ಸ್ಕೋರರ್ ಆಗಿ ಹೊರಹೊಮ್ಮಿದ್ದರು.

ಇದನ್ನೂ ಓದಿ IPL 2024 Points Table: ರಾಜಸ್ಥಾನ್​ಗೆ ಸತತ 2ನೇ ಗೆಲುವು; ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ

ರಾಜಸ್ಥಾನ್​ಗೆ ಗೆಲುವು


ರಿಯಾನ್ ಪರಾಗ್​ (84 ರನ್​, 45 ಎಸೆತ, 7 ಫೋರ್, 6 ಸಿಕ್ಸರ್​) ಅವರ ಸ್ಫೋಟಕ ಅರ್ಧ ಶತಕ ಹಾಗೂ ಬೌಲರ್​ಗಳ ಸಂಘಟಿತ ಬೌಲಿಂಗ್ ದಾಳಿಯ ಮೂಲಕ ಮಿಂಚಿದ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡ ಡೆಲ್ಲಿ ಕ್ಯಾಪಿಟಲ್ಸ್ (Delhi Capital) ವಿರುದ್ಧ 12 ರನ್​ಗಳ ಗೆಲುವು ಸಾಧಿಸಿತು.

ಸವಾಯ್​ ಮಾನ್​ಸಿಂಗ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಟಾಸ್​ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 185 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಪಾಲಿನ ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 175 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಹಂತದಲ್ಲಿ ಡೆಲ್ಲಿ ತಂಡದ ಟ್ರಿಸ್ಟಾನ್​ ಸ್ಟಬ್ಸ್ 23 ಎಸೆತಕ್ಕೆ 44 ರನ್ ಬಾರಿಸಿದರೂ ಜಯ ತಂದುಕೊಡಲು ಸಾಧ್ಯವಾಗಲಿಲ್ಲ.

Continue Reading
Advertisement
Sania Mirza
ಕ್ರೀಡೆ11 mins ago

Sania Mirza: ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ಸಾನಿಯಾ ಮಿರ್ಜಾ?; ಈ ಪಕ್ಷದಿಂದ ಆಫರ್​

Savadatti Yallamma
ಕರ್ನಾಟಕ13 mins ago

ಬರದ ಮಧ್ಯೆಯೂ ಭರ್ಜರಿ ಕಾಣಿಕೆ; ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 11 ಕೋಟಿ ರೂ. ಸಂಗ್ರಹ!

Heart Attack
ಬೆಂಗಳೂರು27 mins ago

Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

Ranbir Kapoor Raha Kapoor
ಬಾಲಿವುಡ್34 mins ago

Ranbir Kapoor: ಅತ್ಯಂತ ಕಿರಿಯ ಮತ್ತು ಶ್ರೀಮಂತ ಸ್ಟಾರ್‌ ಕಿಡ್‌ ಆಗಲಿದ್ದಾರಂತೆ ರಣಬೀರ್- ಆಲಿಯಾ ಮಗಳು!

Cows
ಕರ್ನಾಟಕ1 hour ago

ಹಾಸನದಲ್ಲಿ ಅಕ್ರಮ ಗೋಮಾಂಸ ಜಾಲ; 60 ಗೋವುಗಳನ್ನು ಕೊಂದ ರಾಕ್ಷಸರು!

R Ashwin
ಕ್ರೀಡೆ1 hour ago

IPL 2024: ಐಪಿಎಲ್‌ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಆರ್‌.ಅಶ್ವಿ‌ನ್‌!

Bangalore water crisis IT companies
ಬೆಂಗಳೂರು1 hour ago

Bangalore Water Crisis: “ನೀರು ಕೊಡ್ತೀವಿ, ಪ್ಲೀಸ್‌ ಹೋಗ್ಬೇಡಿ…” ಐಟಿ ಸಂಸ್ಥೆಗಳಿಗೆ ರಾಜ್ಯ ಮನವಿ; ಗಾಳ ಹಾಕಿದ ಕೇರಳ

Chikkaballapur
ಕರ್ನಾಟಕ2 hours ago

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

Actor Suriya announces film
ಕಾಲಿವುಡ್2 hours ago

Actor Suriya: ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕಾಲಿವುಡ್‌ ನಟ ಸೂರ್ಯ: ಅಚ್ಚರಿಯಾಗಿದೆ ಪೋಸ್ಟರ್‌!

Yuva Rajkumar Yuva cutout
ಸಿನಿಮಾ2 hours ago

Yuva Rajkumar: ʻಯುವʼನ ಆರ್ಭಟ ಶುರು: ಸಿನಿಮಾ ನೋಡಿ ಬೆಳ್ಳುಳ್ಳಿ ಕಬಾಬ್‌ ಚಂದ್ರು ಏನಂದ್ರು?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202421 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202423 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌