Asia Cup 2023 : ಡಾಲರ್​ನಲ್ಲಿ ಹಣ ಕೊಡಿ, ಲಂಕಾದಲ್ಲಿ ಕ್ರಿಕೆಟ್​ ಮ್ಯಾಚ್ ನೋಡಿ! - Vistara News

ಕ್ರಿಕೆಟ್

Asia Cup 2023 : ಡಾಲರ್​ನಲ್ಲಿ ಹಣ ಕೊಡಿ, ಲಂಕಾದಲ್ಲಿ ಕ್ರಿಕೆಟ್​ ಮ್ಯಾಚ್ ನೋಡಿ!

ಏಷ್ಯಾ ಕಪ್ 2023 (Asia Cup 2023) ವೇಳಾಪಟ್ಟಿ ಬಿಡುಗಡೆಗೆ ಮುಂಚಿತವಾಗಿ ಟಿಕೆಟ್ ಖರೀದಿಸಲು ಅಭಿಮಾನಿಗಳಿಂದ ಡಾಲರ್​ಗಳಲ್ಲಿ ಹಣ ಪಡೆಯಲು ಎಂದು ಶ್ರೀಲಂಕಾ ಕ್ರಿಕೆಟ್​ ಸಂಸ್ಥೆ ಯೋಜನೆ ಹಾಕಿದೆ.

VISTARANEWS.COM


on

India vs Pakistan match
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಏಷ್ಯಾ ಕಪ್ 2023ರ ವೇಳಾಪಟ್ಟಿ ಬಿಡುಗಡೆ ವಿಚಾರ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಒಂದು ವೇಳೆ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳು ತಮ್ಮ ಜಿದ್ದು ಬಿಟ್ಟರೆ ವೇಳಾಪಟ್ಟಿ ಇನ್ನೆರಡು ದಿನಗಳಲ್ಲಿ ಪ್ರಕಟಗೊಳ್ಳಬಹುದು. ಒಂದು ವೇಳೆ ಪ್ರಸ್ತಾಪ ಮಾಡಿರುವಂತೆಯೇ ಹೈಬ್ರಿಡ್​ ಮಾದರಿಯಲ್ಲಿ ಪಂದ್ಯಗಳು ನಡೆದರೆ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಹೀಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಈಗಾಗಲೇ ಟಿಕೆಟ್​ ಮಾರಾಟಕ್ಕೆ ವಿಭಿನ್ನ ಯೋಜನೆಯೊಂದನ್ನು ಮಾಡಿಕೊಂಡಿದೆ. ಏಷ್ಯಾ ಕಪ್ ಪಂದ್ಯಗಳನ್ನು ವೀಕ್ಷಿಸಲು ಶ್ರೀಲಂಕಾಕ್ಕೆ ಪ್ರಯಾಣಿಸುವ ಅಭಿಮಾನಿಗಳು ಡಾಲರ್ ಹಣವನ್ನು ಪಾವತಿ ಮಾಡುವ ಮೂಲಕ ಟಿಕೆಟ್​ ಖರೀದಿ ಮಾಡಬೇಕು ಎಂದು ಹೇಳಲಿದೆ.

ಹೈಬ್ರಿಡ್ ಮಾದರಿಯನ್ನು ಅನುಸರಿಸಲಿದ್ದು ಪಾಕಿಸ್ತಾನದಲ್ಲಿ 4 ಪಂದ್ಯಗಳು ಮತ್ತು ಶ್ರೀಲಂಕಾದಲ್ಲಿ ಉಳಿದ 9 ಪಂದ್ಯಗಳು ನಡೆಯಲಿವೆ. ಹೀಗಾಗಿ ಪಂದ್ಯ ನೋಡಲು ಲಂಕಾಗೆ ಹೋಗುವ ಅಭಿಮಾನಿಗಳು ಡಾಲರ್​ಗಳಲ್ಲಿ ಟಿಕೆಟ್​ಗಳನ್ನು ಖರೀದಿ ಮಾಡಬೇಕಾಗುತ್ತದೆ. ಇದರಿಂದ ತಮ್ಮ ದೇಶದ ಆರ್ಥಿಕ ಅಭಿವೃದ್ಧಿಯಾಗಲಿದೆ ಎಂಬುದಾಗಿ ಅಲ್ಲಿನ ಕ್ರಿಕೆಟ್​ ಸಂಸ್ಥೆ ಹೇಳಿದೆ.

ಕಳೆದ ವರ್ಷ ದ್ವೀಪ ರಾಷ್ಟ್ರ ಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ಸಾರ್ವಕಾಲಿಕ ಕುಸಿತ ಕಂಡಿತ್ತು. ಜನ ಬೀದಿಗಿಳಿದು ಪ್ರತಿಭಟಿಸಿದ್ದರು. ಸ್ವಲ್ಪ ದಿನಗಳ ಬಳಿಕ ಆರ್ಥಿಕತೆಗೆ ಉತ್ತೇಜನ ಸಿಕ್ಕಿತ್ತು. ಅಲ್ಲದೆ 2022ರ ಏಷ್ಯಾ ಕಪ್ ಫೈನಲ್​ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಲಂಕಾ ತಂಡ ಕಪ್ ಗೆದ್ದ ನಂತರ ಆರ್ಥಿಕತೆ ಸುಧಾರಣೆ ಹಾದಿ ಹಿಡಿದಿತ್ತು. ಹೀಗಾಗಿ ಈ ಬಾರಿ ಅಲ್ಲಿ ಪಂದ್ಯಗಳು ನಡೆದರೆ ಡಾಲರ್​ ರೂಪದಲ್ಲಿ ಟಿಕೆಟ್ ಹಣವನ್ನು ಪಡೆಯುವುದು ಅಲ್ಲಿನ ಕ್ರಿಕೆಟ್​ ಮಂಡಳಿಯ ಉದ್ದೇಶವಾಗಿದೆ.

ಏಷ್ಯಾಕಪ್ ಬಗ್ಗೆ ಹಲವು ತಿಂಗಳುಗಳ ಊಹಾಪೋಹಗಳಿಗೆ ತೆರೆ ಎಳೆದಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲೇ ನಡೆಸಲಾಗುವುದು ಎಂದು ಜೂನ್15 ರಂದು ಘೋಷಿಸಿತು. ಇದರಲ್ಲಿ ಪಾಕಿಸ್ತಾನದಲ್ಲಿ ನಾಲ್ಕು ಪಂದ್ಯಗಳು ಮತ್ತು ಶ್ರೀಲಂಕಾದಲ್ಲಿ ಒಂಬತ್ತು ಪಂದ್ಯಗಳು ನಡೆಯಲಿವೆ. ಆಗಸ್ಟ್ 31 ರಿಂದ ಸೆಪ್ಟೆಂಬರ್ 17 ರವರೆಗೆ ಟೂರ್ನಿ ಆಯೋಜನೆಗೊಂಡಿದೆ.

ಇದನ್ನೂ ಓದಿ : World Cup 2023 : ಪಾಕ್​ ತಂಡಕ್ಕೆ ಇನ್ನೂ ಅಭದ್ರತೆ; ಪರಿಶೀಲನೆಗೆ ಬರುತ್ತದಂತೆ ನಿಯೋಗ!

ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುವುದು. ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ ಮತ್ತು ಉಳಿದ ಒಂಬತ್ತು ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಯಲಿವೆ ಎಂಬುದಾಗಿ ಎಸಿಸಿ ಹೇಳಿಕೆಯಲ್ಲಿ ತಿಳಿಸಿದೆ. ಸೂಪರ್ ಫೋರ್ ಹಂತದ ಅಗ್ರ ಎರಡು ತಂಡಗಳು ನಂತರ ಫೈನಲ್​ನಲ್ಲಿ ಮುಖಾಮುಖಿಯಾಗಲಿವೆ.

ಲಾಜಿಸ್ಟಿಕ್ ಸಮಸ್ಯೆಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಪಾಕಿಸ್ತಾನದ ಲಾಹೋರ್ ಮತ್ತು ಮುಲ್ತಾನ್​ನಲ್ಲಿ ನಾಲ್ಕು ಪಂದ್ಯಗಳು ನಡೆಯಲಿವೆ. ನಾವು ಐದನೇ ಪಂದ್ಯವನ್ನು ಪಡೆಯಲು ಶ್ರಮಿಸುತ್ತಿದ್ದೇವೆ. ಇನ್ನೂ ಅದರ ಬಗ್ಗೆ ಮಾತುಕತೆ ನಡೆಸುತ್ತಿದ್ದೇವೆ. ಈ ನಿರ್ಧಾರವನ್ನು ಹಿಂದಿನ ಪಿಸಿಬಿ ಆಡಳಿತವು ತೆಗೆದುಕೊಂಡಿದ್ದರಿಂದ, ಈ ಸಮಯದಲ್ಲಿ ಇದು ಕಠಿಣ ಕೆಲಸವಾಗಿದೆ ಎಂದು ಪಿಸಿಬಿ ಮೂಲಗಳು ಜಿಯೋ ನ್ಯೂಸ್​ಗೆ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

AFG vs BAN

VISTARANEWS.COM


on

AFG vs BAN
Koo

ಕಿಂಗ್‌ಸ್ಟೌನ್ (ಸೇಂಟ್ ವಿನ್ಸೆಂಟ್): ಅತ್ಯಂತ ರೋಚಕವಾಗಿ ಸಾಗಿದ, ಪ್ರೇಕ್ಷಕರನ್ನು ಉಸಿರು ಬಿಗಿ ಹಿಡಿದು, ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ ಸಣ್ಣ ಮೊತ್ತದ ಮೇಲಾಟದಲ್ಲಿ ಕೊನೆಗೂ ಬಾಂಗ್ಲಾದೇಶ ವಿರುದ್ಧ ಅಫಘಾನಿಸ್ತಾನ 8 ರನ್​ ಅಂತರ ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ ಪ್ರೇವೇಶಿಸಿದೆ. ಆಫ್ಘಾನ್ ಗೆಲುವಿನಿಂದ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಒಂದೊಮ್ಮೆ ಬಾಂಗ್ಲಾ ಗೆಲ್ಲುತ್ತಿದ್ದರೆ ರನ್​ರೇಟ್​ ಆಧಾರದಲ್ಲಿ ಮುಂದಿದ್ದ ಆಸೀಸ್​ಗೆ ಸೆಮಿ ಟಿಕೆಟ್​ ಲಭಿಸುತ್ತಿತ್ತು.

ಹಲವು ಬಾರಿ ಮಳೆಯಿಂದ ಅಡಚಣೆಯಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಅಫಘಾನಿಸ್ತಾನ ರಹಮಾನುಲ್ಲಾ ಗುರ್ಬಾಜ್(43) ಅವರ ಏಕಾಂಗಿ ಬ್ಯಾಟಿಂಗ್​ ಹೋರಾಟದ ನೆರವಿನಿಂದ 5 ವಿಕೆಟ್​ಗೆ 115 ರನ್​ ಬಾರಿಸಿತು. ಬಾಂಗ್ಲಾ ಬ್ಯಾಟಿಂಗ್​ ಸರದಿಯ ವೇಳೆ ಹಲವು ಬಾರಿ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತು. ಅಂತಿಮವಾಗಿ ಒಂದು ಓವರ್​ ಕಡಿತಗೊಳಿಸಿ 19 ಓವರ್​ಗೆ 114 ರನ್​ ಗೆಲುವಿನ ಗುರಿ ನೀಡಲಾಯಿತು. ಈ ಮೊತ್ತವನ್ನು ಬಾಂಗ್ಲಾ ಒಂದು ಹಂತದವರೆಗೆ ಯಶಸ್ವಿಯಾಗಿ ಬೆನ್ನಟ್ಟಿಕೊಂಡು ಬಂದರೂ ಕೂಡ ಅಂತಿಮ ಹಂತದಲ್ಲಿ ನಾಟಕೀಯ ಕುಸಿತ ಕಂಡು 17.5 ಓವರ್​ನಲ್ಲಿ 105 ರನ್​ಗೆ ಸರ್ವಪತನ ಕಂಡಿತು.

ಕಳೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲುಣಿಸುವ ಮೂಲಕ ಭಾರೀ ಸಂಚಲನ ಮೂಡಿಸಿದ್ದ ಅಫಫಾನಿಸ್ತಾದ ಇದೀಗ ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ ಪ್ರವೇಶಿಸಿ ಐತಿಹಾಸಿಕ ಸಾಧನೆ ಮಾಡಿದೆ. ಸೋಮವಾರ ನಡೆದಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ ಸೋಲು ಕಂಡ ಪರಿಣಾಮ ಆಫ್ಘಾನ್​ಗೆ ಸೆಮಿಫೈನಲ್​ ಪ್ರವೇಶಿಸಲು ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸಾಕಿತ್ತು. ಅದರಂತೆ ಆಫ್ಘನ್​ ಈ ಪಂದ್ಯ ಗೆದ್ದು ಸೆಮಿಗೆ ಅರ್ಹತೆ ಪಡೆಯಿತು. ಜೂನ್​ 26ರಂದು ನಡೆಯುವ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಆಫ್ಘನ್​​ ತಂಡ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ.

ಲಿಟ್ಟನ್​ ದಾಸ್​ ಅರ್ಧಶತಕ

ಚೇಸಿಂಗ್​ ವೇಳೆ ಬಾಂಗ್ಲಾದೇಶ ಕೂಡ ಆಫ್ಘನ್​ ತಂಡದಂತೆ ನಾಟಕೀಯ ಕುಸಿತ ಕಂಡಿತು. ಒಂದೆಡೆ ವಿಕೆಟ್​ ಬೀಳುತ್ತಿದ್ದರೂ ಕೂಡ ತಂಡದ ಗೆಲುವಿಗಾಗಿ ಟೊಂಕ ಕಟ್ಟಿ ನಿಂತ ಆರಂಭಕಾರ ಲಿಟ್ಟನ್​ ದಾಸ್​ ಅಜೇಯ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಲು ಶಕ್ತಿ ಮೀರಿ ಪ್ರಯತ್ನಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಬ್ಯಾಟಿಂಗ್​ ಸಾಥ್​ ಸಿಗದ ಕಾರಣ ಪಂದ್ಯ ಸೋಲು ಕಂಡಿತು. ಆರಂಭಿಕನಾಗಿ ಕಣಕ್ಕಿಳಿದ ದಾಸ್​ ಕೊನೆಯ ತನಕ ಬ್ಯಾಟಿಂಗ್​ ನಡೆಸಿ ಅಜೇಯ 54 ರನ್​ ಬಾರಿಸಿದರು. ಪಂದ್ಯ ಸೋತ ಕಾರಣ ಇವರ ಈ ಬ್ಯಾಟಿಂಗ್​ ಹೋರಾಟ ವ್ಯರ್ಥಗೊಂಡಿತು. ಸಣ್ಣ ಮೊತ್ತ ಬಾರಿಸಿದರೂ ಕೂಡ ಆಫ್ಘನ್​ ಬೌಲರ್​ಗಳು ಶಕ್ತಿ ಮೀರಿ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಪಂದ್ಯದಲ್ಲಿ ಹಿಡಿತ ಸಾಧಿಸಿದರು. ನಾಯಕ ರಶೀದ್​ ಖಾನ್​ ಮತ್ತು ನವೀನ್​ ಉಲ್​ ಹಕ್​ ತಲಾ 4 ವಿಕೆಟ್​ ಬೇಟೆಯಾಡಿ ಬಾಂಗ್ಲಾ ಬ್ಯಾಟರ್​ಗಳ ಸೊಕ್ಕಡಗಿಸಿದರು.

ಮೊದಲು ಬ್ಯಾಟಿಂಗ್​ ನಡೆಸಿದ ಅಫಘಾನಿಸ್ತಾನ ಪರ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಹೊರತುಪಡಿಸಿದ ಉಳಿದ ಯಾವ ಬ್ಯಾಟರ್​ಗಳು ಕೂಡ ನಿರೀಕ್ಷಿತ ಬ್ಯಾಟಿಂಗ್​ ನಡೆಸುವಲ್ಲಿ ಯಶಸ್ಸು ಕಾಣಲಿಲ್ಲ. ಇಬ್ರಾಹಿಂ ಜದ್ರಾನ್(18),ಅಜ್ಮತುಲ್ಲಾ(10), ನಬಿ(1) ರನ್​ ಗಳಿಸಿ ವಿಕೆಟ್​ ಕೈಚೆಲ್ಲಿದರು. ರಹಮಾನುಲ್ಲಾ ಗುರ್ಬಾಜ್ 3 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 43 ರನ್​ ಬಾರಿಸಿದರು. ಇವರ ಈ ಬ್ಯಾಟಿಂಗ್​ ಹೋರಾಟದಿಂದ ತಂಡ 100ರ ಗಡಿ ದಾಟಿತು. ಬಾಂಗ್ಲಾ ಪರ ರಿಶಾದ್ ಹೊಸೈನ್ 26 ರನ್​ಗೆ 3 ವಿಕೆಟ್​ ಕಿತ್ತು ಮಿಂಚಿದರು.

Continue Reading

ಕ್ರೀಡೆ

Rohit Sharma: ಬಾಬರ್​ ಅಜಂ ದಾಖಲೆ ಸರಿಗಟ್ಟಿದ ರೋಹಿತ್​ ಶರ್ಮ

Rohit Sharma: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ರೋಹಿತ್ 8 ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಟಿ20 ಮಾದರಿಯ ಕ್ರಿಕೆಟ್​​ನಲ್ಲಿ 200 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ಮೊದಲ ಆಟಗಾರ ಎನಿಸಿಕೊಂಡರು. ಸದ್ಯ ರೋಹಿತ್​ 203* ಸಿಕ್ಸರ್​ಗಳನ್ನು ಬಾರಿಸಿದ್ದಾರೆ.

VISTARANEWS.COM


on

Rohit Sharma
Koo

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯ): ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್‌ ಶರ್ಮ(Rohit Sharma) ಅವರ ಸಿಡಿಲಬ್ಬರದ ಬ್ಯಾಟಿಂಗ್‌ ಸಾಹಸದ ನೆರವಿನಿಂದ ಆಸ್ಟ್ರೇಲಿಯಾ(Australia vs India) ವಿರುದ್ಧ ಸೋಮವಾರ ನಡೆದ ಟಿ20 ವಿಶ್ವಕಪ್(T20 World Cup 2024) ಸೂಪರ್‌-8 ರೋಚಕ ಪಂದ್ಯದಲ್ಲಿ ಭಾರತ ತಂಡ 24 ರನ್ ಗಳ ಅಮೋಘ ಜಯ ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟಿತು. ಈ ಪಂದ್ಯವನ್ನು ಗೆಲ್ಲುವು ಮೂಲಕ ರೋಹಿತ್​ ಶರ್ಮ ಅವರು ಪಾಕ್​ ನಾಯಕ ಬಾಬರ್​ ಅಜಂ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯ ಗೆದ್ದ ನಾಯಕ ಎಂಬ ಹಿರಿಮೆಗೆ ರೋಹಿತ್​ ಪಾತ್ರರಾಗಿದ್ದಾರೆ. ರೋಹಿತ್​ ನಾಯಕತ್ವದಲ್ಲಿ ಭಾರತ 60 ಪಂದ್ಯಗಳನ್ನು ಆಡಿ 48 ಪಂದ್ಯಗಳನ್ನು ಗೆದ್ದಿದೆ. ಬಾಬರ್​ ಅಜಂ ಕೂಡ ನಾಯಕನಾಗಿ 48 ಪಂದ್ಯಗಳನ್ನು ಗೆದ್ದಿದ್ದಾರೆ. ಆದರೆ, 85 ಪಂದ್ಯಗಳನ್ನು ಆಡಿದ್ದಾರೆ. ಹೀಗಾಗಿ ಈ ಪಟ್ಟಿಯಲ್ಲಿ ರೋಹಿತ್​ ಮೊದಲ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ರೋಹಿತ್ 8 ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಟಿ20 ಮಾದರಿಯ ಕ್ರಿಕೆಟ್​​ನಲ್ಲಿ 200 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ಮೊದಲ ಆಟಗಾರ ಎನಿಸಿಕೊಂಡರು. ಸದ್ಯ ರೋಹಿತ್​ 203* ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಇದು ಮಾತ್ರವದಲ್ಲದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಅತಿಹೆಚ್ಚು ರನ್​ ಗಳಿಸಿದ ಬ್ಯಾಟರ್ ಆಗಿಯೂ ರೋಹಿತ್ ಹೊರಹೊಮ್ಮಿದ್ದಾರೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ 4165 ರನ್ ಗಳಿಸಿದ್ದಾರೆ. ಪಾಕಿಸ್ತಾನದ ಬಾಬರ್ ಅಜಂ 4145 ಹಾಗೂ ವಿರಾಟ್ ಕೊಹ್ಲಿ 4103 ರನ್​ಗಳೊಂದಿಗೆ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ.

ಪಂದ್ಯ ಗೆದ್ದ ಭಾರತ


ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಒಳಿಸಲ್ಪಟ್ಟ ಭಾರತ 5 ವಿಕೆಟಿಗೆ 205 ರನ್‌ ಬಾರಿಸಿ ಸವಾಲೊಡ್ಡಿತು. ಗುರಿ ಬೆನ್ನಟ್ಟಿದ ಆಸೀಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ ಸೋಲು ಕಂಡಿತು. ಕಳೆದ ವರ್ಷ ನೆಡೆದಿದ್ದ ಏಕದಿನ ವಿಶ್ವಕಪ್ ಫೈನಲ್ ಸೋಲಿನ ಸೇಡನ್ನು ಭಾರತ ಇಲ್ಲಿ ತೀರಿಸಿಕೊಂಡಿತು.

ರೋಹಿತ್‌ 41 ಎಸೆತಗಳಲ್ಲಿ 92 ರನ್‌ ಬಾರಿಸಿ ಟಿ20 ವಿಶ್ವಕಪ್‌ನಲ್ಲಿ ಜೀವನಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶನ ತೋರಿದರು. ಅದರಲ್ಲೂ ಸ್ಟಾರ್ಕ್‌ ಅವರ 3ನೇ ಓವರ್‌ನಲ್ಲಿ ಬರೋಬ್ಬರಿ 29 ರನ್‌ ಚಚ್ಚಿದರು. ರೋಹಿತ್‌ ತಮ್ಮ 92 ರನ್ನುಗಳ ಸೊಗಸಾದ ಬ್ಯಾಟಿಂಗ್‌ ವೇಳೆ 8 ಸಿಕ್ಸರ್‌ ಮತ್ತು 7 ಬೌಂಡರಿ ಹೊಡೆದರು.

Continue Reading

ಕ್ರೀಡೆ

Virat Kohli statue: ನ್ಯೂಯಾರ್ಕ್​ನಲ್ಲಿ ವಿರಾಟ್​ ಕೊಹ್ಲಿ ಆಳೆತ್ತರದ ಪ್ರತಿಮೆ ಅನಾವರಣ

Virat Kohli statue: ಕೊಹ್ಲಿಯ ಪ್ರತಿಮೆಯನ್ನು ಬ್ರಾಂಡ್ ಅಂಬಾಸಿಡರ್ ಆಗಿರುವ ಮ್ಯಾಟ್ರೆಸ್ ಕಂಪನಿಯೊಂದರ ಮಾರ್ಕೆಟಿಂಗ್ ಅಭಿಯಾನದ ಭಾಗವಾಗಿ ನಿರ್ಮಿಸಲಾಗಿದೆ. ಹಾಸಿಗೆಗಳಿಂದ ಒದಗಿಸಲಾದ ಸೌಕರ್ಯವನ್ನು ಹೈಲೈಟ್ ಮಾಡಲು ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

VISTARANEWS.COM


on

Virat Kohli statue
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾದ ಸ್ಟಾರ್​ ಬ್ಯಾಟರ್​, ಹಲವು ದಾಖಲೆಗಳ ಸರದಾರ ವಿರಾಟ್ ಕೊಹ್ಲಿ(Virat Kohli) ಅವರ ಆಳೆತ್ತರದ ಪ್ರತಿಮೆಯೊಂದು(Virat Kohli statue) ಅಮೆರಿಕದ ನ್ಯೂಯಾರ್ಕ್​ನಲ್ಲಿ ನಿರ್ಮಿಸಲಾಗಿದೆ. ನ್ಯೂಯಾರ್ಕ್​ನ ಪ್ರಸಿದ್ದ ಟೈಮ್ಸ್ ಸ್ಕ್ಯಾರ್ ನಲ್ಲಿ ಕೊಹ್ಲಿಯ ಈ ಪ್ರತಿಮೆಯನ್ನು ನಿಲ್ಲಿಸಲಾಗಿದೆ.

2028 ರಲ್ಲಿ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೇ ಕಾರಣದಿಂದ ಕೊಹ್ಲಿಯ ಪ್ರತಿಮೆಯನ್ನು ಬ್ರಾಂಡ್ ಅಂಬಾಸಿಡರ್ ಆಗಿರುವ ಮ್ಯಾಟ್ರೆಸ್ ಕಂಪನಿಯೊಂದರ ಮಾರ್ಕೆಟಿಂಗ್ ಅಭಿಯಾನದ ಭಾಗವಾಗಿ ನಿರ್ಮಿಸಲಾಗಿದೆ. ಹಾಸಿಗೆಗಳಿಂದ ಒದಗಿಸಲಾದ ಸೌಕರ್ಯವನ್ನು ಹೈಲೈಟ್ ಮಾಡಲು ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ವಿಡಿಯೋವನ್ನು ಮ್ಯಾಟ್ರೆಸ್ ಕಂಪನಿ ಹಂಚಿಕೊಂಡಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ.ಆಡಿದ 6 ಪಂದ್ಯಗಳ ಪೈಲಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಸೋಮವಾರ ಡೇರೆನ್ ಸಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಪುರುಷರ ಟಿ 20 ವಿಶ್ವಕಪ್​​ನ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಸೂಪರ್ 8 ಪಂದ್ಯದಲ್ಲಿ ಕೊಹ್ಲಿ ಶೂನ್ಯಕ್ಕೆ ಔಟಾಗಿರುವುದು ಮಂಡೆ ಬಿಸಿಗೆ ಕಾರಣವಾಗಿದೆ. ಐದು ಎಸೆತಗಳನ್ನು ಬಳಸಿಕೊಂಡು ರನ್ ಬಾರಿಸದೇ ನಿರ್ಗಮಿಸಿದರು.

ಇದನ್ನೂ ಓದಿ Virat Kohli : ವಿರಾಟ್​​ ಕೊಹ್ಲಿ ಕತೆ ಮುಗೀತು… ಮತ್ತೆ ಶೂನ್ಯಕ್ಕೆ ಔಟಾದ ಸ್ಟಾರ್​ ಬ್ಯಾಟರ್​!

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರನ್ನು ಎಂದಿನಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಿಸುವುದು ಸೂಕ್ತ ಎನ್ನುವಂತಿದೆ.

Continue Reading

ಪ್ರಮುಖ ಸುದ್ದಿ

T20 World Cup : ಆಸ್ಟ್ರೇಲಿಯಾ ವಿರುದ್ಧ 24 ರನ್​ಗಳ ಭರ್ಜರಿ ಗೆಲುವು ಸಾಧಿಸಿ ಸೇಡು ತೀರಿಸಿಕೊಂಡ ಭಾರತ

T20 World Cup : ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 5 ವಿಕೆಟ್​ ನಷ್ಟಕ್ಕೆ 205 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತನ್ನ ಪಾಲಿನ 20 ಒವರ್​ಗಳಲ್ಲಿ 7 ವಿಕೆಟ್​ಗೆ 181 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

Rohit Sharma
Koo

ಸೇಂಟ್​ ಲೂಸಿಯಾ: ರೋಹಿತ್ ಶರ್ಮಾ ಅವರ (92 ರನ್​, 41 ಎಸೆತ, 8 ಸಿಕ್ಸರ್, 7 ಫೋರ್​) ಪ್ರಚಂಡ ಬ್ಯಾಟಿಂಗ್ ನೆರವಿನಿಂದ ಮಿಂಚಿದ ಭಾರತ ತಂಡ ಟಿ20 ವಿಶ್ವ ಕಪ್​ನ 2024ನೇ (T20 World Cup) ಆವೃತ್ತಿಯ ಸೂಪರ್ 8 ಹಂತದಲ್ಲಿ ಆಸ್ಟ್ರೇಲಿಯಾ ವಿರುದ್ದ (IND vs AUS) 24 ರನ್​ಗಳ ಗೆಲುವು ದಾಖಲಿಸಿತು. ಈ ಮೂಲಕ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್ ಹಾಗೂ 2023ರ ಏಕ ದಿನ ವಿಶ್ವ ಕಪ್ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು. ಈ ಸೋಲಿನೊಂದಿಗೆ ಆಸ್ಟ್ರೇಲಿಯಾ ತಂಡದ ಟಿ 20 ವಿಶ್ವ ಕಪ್​ ಸೆಮಿಫೈನಲ್ ಹಾದಿ ಕಠಿಣಗೊಂಡಿತು. ಇದೇ ವೇಳೆ ಟಿ20 ವಿಶ್ವ ಕಪ್​​ನಲ್ಲಿ ಭಾರತ ತಂಡದ ಅಜೇಯ ಓಟ ಮುಂದುವರಿಯಿತು. ಸೂಪರ್​ 8 ಹಂತದಲ್ಲಿ ಗುಂಪು ಎ ಯಿಂದ ಒಟ್ಟು ಮೂರು 3 ಗೆಲುವಿನೊಂದಿಗೆ 6 ಅಂಕಗಳ ಸಮೇತ ಸೆಮಿಫೈನಲ್​​ಗೆ ಪ್ರವೇಶ ಪಡೆಯಿತು.

ಇಲ್ಲಿನ ಡ್ಯಾರೆನ್​ ಸಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 5 ವಿಕೆಟ್​ ನಷ್ಟಕ್ಕೆ 205 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತನ್ನ ಪಾಲಿನ 20 ಒವರ್​ಗಳಲ್ಲಿ 7 ವಿಕೆಟ್​ಗೆ 181 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಗುರಿ ಬೆನ್ನಟ್ಟಲು ಹೊರಟ ಆಸ್ಟ್ರೇಲಿಯಾ 6 ರನ್​ಗೆ ಮೊದಲ ವಿಕೆಟ್​ ಕಳೆದುಕೊಂಡಿತು. ಡೇವಿಡ್​ ವಾರ್ನರ್​ 6 ರನ್ ಬಾರಿಸಿ ಅರ್ಶ್​ದೀಪ್​ಗೆ ವಿಕೆಟ್​ ಒಪ್ಪಿಸಿದರು. ಆದರೆ, ನಂತರದಲ್ಲಿ ಟ್ರಾವಿಸ್​ ಹೆಡ್​ (76ರನ್​ ) ಹಾಗೂ ಮಿಚೆಲ್ ಮಾರ್ಷ್​ (37 ರನ್​) ರನ್ ವೇಗ ಕುಸಿಯದಂತೆ ನೋಡಿಕೊಂಡರು. ಟ್ರಾವಿಸ್ ಹೆಡ್​ ಹೋರಾಟ ನಡೆಸಿದ ಭಾರತ ತಂಡದಿಂದ ಗೆಲುವು ಕಸಿಯಲು ಯತ್ನಿಸಿದರು. ಅದರೆ, ಕುಲ್ದೀಪ್​ ಯಾದವ್​ (2 ವಿಕೆಟ್​), ಅರ್ಶ್​ದೀಪ್​ ಸಿಂಗ್​ (3 ವಿಕೆಟ್​) ಆಸೀಸ್ ತಂಡದ ಓಟಕ್ಕೆ ತಡೆಯೊಡ್ಡಿತು. ಮ್ಯಾಕ್ಸ್​ವೆಲ್​ 20 ರನ್ ಬಾರಿಸಿದರೆ, ಟಿಮ್ ಡೇವಿಡ್​ 15 ರನ್ ಬಾರಿಸಿದರು.

ಭಾರತದ ಉತ್ತಮ ಬ್ಯಾಟಿಂಗ್​

ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆಘಾತ ಕೊಟ್ಟಿದ್ದು ವಿರಾಟ್ ಕೊಹ್ಲಿ. ಐದು ಎಸೆತಗಳನ್ನು ಎದುರಿಸಿದ ಅವರು ಶೂನ್ಯಕ್ಕೆ ಔಟಾಗಿ ಬೇಸರ ಮೂಡಿಸಿದರು. ಆದರೆ, ಇನ್ನೊಂದು ಬದಿಯಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ ರನ್ ಪೇರಿಸುತ್ತಲೇ ಹೋದರು. ಭಾರತ ಕೇವಲ 29 ಎಸೆತಗಳಲ್ಲಿ 50 ರನ್ ಬಾರಿಸಿದರೆ ಬಳಿಕ ರೋಹಿತ್ ಶರ್ಮಾ 19 ಎಸೆತಕ್ಕೆ ಅರ್ಧ ಶತಕ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ರಿಷಭ್​ ಪಂತ್​ 14 ಎಸೆತಕ್ಕೆ 15 ರನ್ ಬಾರಿಸಿದರು. ಆದರೆ, ನಂತರ ಆಡಲು ಬಂದ ಸೂರ್ಯಕುಮಾರ್​ ಯಾದವ್​ ರೋಹಿತ್ ಶರ್ಮಾಗೆ ಉತ್ತಮ ಬೆಂಬಲ ಕೊಟ್ಟರು. ಆದರೆ, ಅವರು 16 ಎಸೆತಕ್ಕೆ 36 ರನ್ ಬಾರಿಸಿ ಔಟಾದರು.

ಇದನ್ನೂ ಓದಿ: Rohit Sharma : ಆಸ್ಟ್ರೇಲಿಯಾದ ವೇಗಿ ​ ಸ್ಟಾರ್ಕ್​ ಬೆಂಡೆತ್ತಿದ ರೋಹಿತ್​; ಒಂದೇ ಓವರ್​​ನಲ್ಲಿ 29 ರನ್​

ಸೂರ್ಯ ಔಟಾಗುತ್ತಿದ್ದಂತೆ ಭಾರತದ ಸ್ಕೋರ್ ಗಳಿಕೆ ನಿಧಾನಗೊಂಡಿತು. ಆದಾಗ್ಯೂ ಶಿವಂ ದುಬೆ 1 ಸಿಕ್ಸರ್ ಹಾಗೂ 2 ಫೋರ್ ಸಮೇತ 28 ರನ್ ಬಾರಿಸಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಔಟಾಗದೇ 17 ಎಸೆತಕ್ಕೆ 27 ರನ್ ಬಾರಿಸಿದರು. ರವೀಂದ್ರೆ ಜಡೇಜಾ 5 ಎಸೆತಕ್ಕೆ 9 ರನ್ ಬಾರಿಸಿದರು.

Continue Reading
Advertisement
Udhayanidhi Stalin
ಕರ್ನಾಟಕ3 mins ago

Udhayanidhi Stalin: ಸನಾತನ ಧರ್ಮದ ವಿರುದ್ಧ ಹೇಳಿಕೆ; ಇಂದು ಬೆಂಗಳೂರು ಕೋರ್ಟ್‌ನಲ್ಲಿ ಉದಯನಿಧಿ ಸ್ಟಾಲಿನ್‌ ವಿಚಾರಣೆ

AFG vs BAN
ಕ್ರೀಡೆ7 mins ago

AFG vs BAN: ರೋಚಕ ಗೆಲುವು ಸಾಧಿಸಿ ಸೆಮಿಫೈನಲ್​ಗೆ ಲಗ್ಗೆಯಿಟ್ಟ ಆಫ್ಘನ್​; ಟೂರ್ನಿಯಿಂದ ಹೊರಬಿದ್ದ ಆಸೀಸ್​

Mamata Banerjee
ದೇಶ32 mins ago

Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

physical abuse mandya
ಕ್ರೈಂ39 mins ago

Physical Abuse: ಅಪ್ರಾಪ್ತ ಮಗಳನ್ನು ಗರ್ಭಿಣಿ ಮಾಡಿದ ಕಾಮಪಿಶಾಚಿ ಅಪ್ಪನಿಗೆ ಗೂಸಾ

Paris Olympics 2024
ಕ್ರೀಡೆ1 hour ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕರ್ನಾಟಕದ ಅದಿತಿ ಅಶೋಕ್

Hunger Strike
ದೇಶ1 hour ago

Hunger Strike: ಉಪವಾಸ ಸತ್ಯಾಗ್ರಹ ಮಾಡ್ತಿದ್ದ ದಿಲ್ಲಿ ಸಚಿವೆ ಆಸ್ಪತ್ರೆಗೆ ದಾಖಲು

Suraj Revanna Case
ಪ್ರಮುಖ ಸುದ್ದಿ2 hours ago

Suraj Revanna Case: ತಮ್ಮನಿಗೆ ಮೂರು ಸಲ; ಈಗ ಅಣ್ಣನಿಗೂ ಪುರುಷತ್ವ ಪರೀಕ್ಷೆ! ಇದೇ ಬೇರೆ ಥರ!

Job Alert
ಉದ್ಯೋಗ2 hours ago

Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

Rohit Sharma
ಕ್ರೀಡೆ2 hours ago

Rohit Sharma: ಬಾಬರ್​ ಅಜಂ ದಾಖಲೆ ಸರಿಗಟ್ಟಿದ ರೋಹಿತ್​ ಶರ್ಮ

Dating Tips
Latest2 hours ago

Dating Trend: ʼ3 ತಿಂಗಳ ಡೇಟಿಂಗ್‌ʼ! ಯುವ ಜನತೆಯ ಹೊಸ ಟ್ರೆಂಡ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌