IPL 2023: ಸನ್​ ವಿರುದ್ಧ ಶೈನ್​ ಆದೀತೇ ಲಕ್ನೋ ಸೂಪರ್​ಜೈಂಟ್ಸ್​? - Vistara News

ಕ್ರಿಕೆಟ್

IPL 2023: ಸನ್​ ವಿರುದ್ಧ ಶೈನ್​ ಆದೀತೇ ಲಕ್ನೋ ಸೂಪರ್​ಜೈಂಟ್ಸ್​?

ಪ್ಲೇ ಆಫ್ ಹಾದಿ ಹಿಡಿಯುವ ನಿಟ್ಟಿನಲ್ಲಿಲಕ್ನೋ ಸೂಪರ್​ ಜೈಂಟ್ಸ್ ಮತ್ತು ಸನ್​ರೈಸರ್ಸ್​ ಹೈದರಾಬಾದ್​​ ತಂಡಗಳು ಶನಿವಾರದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿವೆ.

VISTARANEWS.COM


on

Rajiv Gandhi International Stadium At Hyderabad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್​: ಶನಿವಾರ ನಡೆಯುವ ಐಪಿಎಲ್​ನ ಡಬಲ್​ ಹೆಡರ್​ನ ಹಗಲು ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ಲಕ್ನೋ ಸೂಪರ್​ ಜೈಂಟ್ಸ್​ ತಂಡಗಳು ಕಣಕ್ಕಿಳಿಯಲಿವೆ. ಪ್ಲೇ ಆಫ್ ಹಾದಿ ಹಿಡಿಯುವ ನಿಟ್ಟಿನಲ್ಲಿ ಉಭಯ ತಂಡಗಳಿಗು ಇದು ಮಹತ್ವದ ಪಂದ್ಯದವಾಗಿದೆ. ಹೀಗಾಗಿ ಈ ಪಂದ್ಯವನ್ನು ಹೈ ವೋಲ್ಟೇಜ್​ ಎಂದು ನಿರೀಕ್ಷೆ ಮಾಡನಹುದು.

ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಇತ್ತಂಡಗಳ ಹೋರಾಟ ನಡೆಯಲಿದೆ. ಹೈದರಾಬಾದ್​ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದರೆ, ಲಕ್ನೋ ತಂಡ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪಂದ್ಯದ ಲೆಕ್ಕಾಚಾರದಲ್ಲಿ ಹೈದರಾಬಾದ್​ ಕಡಿಮೆ ಪಂದ್ಯ ಆಡಿದೆ. ಲಕ್ನೋಗೆ ಇದು 12ನೇ ಪಂದ್ಯವಾದರೆ ಹೈದರಾಬಾದ್ 11ನೇ ಪಂದ್ಯ.

ಹೈದರಾಬಾದ್​ ತಂಡದ ದುರಂತವೆಂದರೆ ಸ್ಫೋಟಕ ಬ್ಯಾಟರ್​ ಹ್ಯಾರಿ ಬ್ರೂಕ್‌ ಅವರು ಕೆಕೆಆರ್​ ವಿರುದ್ಧ ಆಡಿದ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದರು. ಆದರೆ ಈ ಶತಕದ ಬಳಿಕ ಬ್ರೂಕ್‌ ಬ್ಯಾಟಿಂಗ್‌ ವೈಫ‌ಲ್ಯ ಕಾಣುತ್ತ ಹೋದರು. ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸುವ ಪ್ರಯೋಗವನ್ನೂ ಮಾಡಲಾಯಿತು. ಇದು ಕೂಡ ಕ್ಲಿಕ್‌ ಆಗಲಿಲ್ಲ. ಇವರ ಸ್ಥಾನದಲ್ಲಿ ಇನಿಂಗ್ಸ್​ ಆರಂಭಿಸಿದ ಅಗರ್ವಾಲ್‌ ಕೂಡ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರುತ್ತಿಲ್ಲ. ಉಳಿದಂತೆ ನಾಯಕ ಏಡನ್‌ ಮಾರ್ಕ್​ರಮ್‌, ರಾಹುಲ್‌ ತ್ರಿಪಾಠಿ ಕೂಡ ವೈಫ‌ಲ್ಯ ಕಾಣುತ್ತಿದ್ದಾರೆ. ಒಟ್ಟಾರೆ ಬ್ಯಾಟಿಂಗ್‌ ವಿಭಾಗದಲ್ಲಿ ಸುಧಾರಣೆ ಆಗದ ಹೊರತು ಹೈದರಾಬಾದ್‌ಗೆ ಗೆಲುವು ಅಸಾಧ್ಯ. ಬೌಲಿಂಗ್​ ವಿಭಾಗದಲ್ಲಿ ಹೈದರಾಬಾದ್​ ಉತ್ತಮವಾಗಿ ಗೋಚರಿಸಿದೆ. ಭುವನೇಶ್ವರ್​ ಕುಮಾರ್​, ಟಿ. ನಟರಾಜನ್​, ಮಾರ್ಕೋ ಜಾನ್ಸೆನ್ ಮತ್ತು ಉಮ್ರಾನ್ ಮಲಿಕ್ ಉತ್ತಮ ಲಯದಲ್ಲಿದ್ದಾರೆ.

ಇದನ್ನೂ ಓದಿ IPL 2023: ಜೈಸ್ವಾಲ್​ ಆಟಕ್ಕೆ ಫಿದಾ ಆದ ವಿರಾಟ್​ ಕೊಹ್ಲಿ

ನಾಯಕ ರಾಹುಲ್​ ಅವರು ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದು ಆಘಾತದಲ್ಲಿರುವ ಲಕ್ನೋ ತಂಡಕ್ಕೆ ಈ ಪಂದ್ಯ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ರಾಹುಲ್ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಕೃಣಾಲ್​ ಪಾಂಡ್ಯ ಅವರು ತಮ್ಮ ಹಾರ್ದಿಕ್​ ಪಾಂಡ್ಯರಂತೆ ಉತ್ತಮ ಯೋಜನೆ ರೂಪಿಸಬೇಕಿದೆ. ಗುಜರಾತ್​ ವಿರುದ್ಧ ಆಡುವ ಮೂಲಕ ಈ ಆವೃತ್ತಿಯ ಮೊದಲ ಐಪಿಎಲ್​ ಪಂದ್ಯವನ್ನಾಡಿದ ಕ್ವಿಂಟನ್​ ಡಿ ಕಾಕ್​ ಅವರ ಮೇಲೆ ತಂಡ ಈ ಪಂದ್ಯದಲ್ಲಿಯೂ ಹೆಚ್ಚಿನ ನಿರೀಕ್ಷೆ ಇರಿಸಿದೆ. ಆರಂಭಿಕ ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್​ ನಡೆಸಿದ ನಿಕೋಲಸ್​ ಪೂರಣ್​ ಮತ್ತು ಮಾರ್ಕಸ್​ ಸ್ಟೋಯಿನಿಸ್​ ಅವರ ಬ್ಯಾಟ್​ ಇದೀಗ ಸದ್ದು ಮಾಡುತ್ತಿಲ್ಲ. ಇನ್ನೊಂದೆಡೆ ಆಡಿದ 11 ಪಂದ್ಯದಲ್ಲಿಯೂ ಕೇವಲ ಸಿಂಗಲ್​ ಡಿಜಿಟ್​ಗೆ ಸೀಮಿತರಾದ ದೀಪಕ್​ ಹೂಡ ಅವರನ್ನು ಈ ಪಂದ್ಯದಲ್ಲಿ ಕೈ ಬಿಡದಿದ್ದರೆ ಲಕ್ನೋ ತಂಡಕ್ಕೆ ಮತ್ತೊಂದು ಸೋಲು ಖಚಿತ ಎನ್ನಲಡ್ಡಿಯಿಲ್ಲ. ಇವರ ಜತೆಗೆ ಯಾವುದೇ ಬೌಲಿಂಗ್​ ಆವೇಶವಿಲ್ಲದ ಆವೇಶ್​ ಖಾನ್​ ಅವರನ್ನು ಈ ಪಂದ್ಯದಿಂದ ಹೊರಗಿಟ್ಟರೆ ಒಲಿತು ಎನ್ನುವುದು ಲಕ್ನೋ ಅಭಿಮಾನಿಗಳ ಕೂಗಾಗಿದೆ.

ಸಂಭಾವ್ಯ ತಂಡ

ಲಕ್ನೋ ಸೂಪರ್ ಜೈಂಟ್ಸ್: ಕೈಲ್ ಮೇಯರ್ಸ್, ಕ್ವಿಂಟನ್​ ಡಿ ಕಾಕ್​, ಮನನ್ ವೋಹ್ರಾ, ಆಯುಷ್ ಬದೋನಿ, ಮಾರ್ಕಸ್ ಸ್ಟೊಯ್ನಿಸ್​, , ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ (ನಾಯಕ), ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಅಮಿತ್​ ಮಿಶ್ರಾ.

ಸನ್​ರೈಸರ್ಸ್​ ಹೈದರಾಬಾದ್:​ ಹ್ಯಾರಿ ಬ್ರೂಕ್, ಅಭಿಷೇಕ್ ಶರ್ಮಾ/ಮಯಾಂಕ್​ ಅಗರ್ವಾಲ್​, ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಮ್​ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs PAK : ಪಾಕಿಸ್ತಾನದ ಆಟಗಾರನಿಗೆ ಕಣ್ಣೀರು ಹಾಕಿಸಿದ ಭಾರತ ತಂಡ!

IND vs PAK: ಭಾರತ ತಂಡ ಪಾಕಿಸ್ತಾನದ ಆಟಗಾರರಿಗೆ ಕಣ್ಣೀರು ಹಾಕಿಸುವುದು ಇದೇ ಮೊದಲಲ್ಲ. ಎರಡು ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳ ಪಂದ್ಯಗಳು ಅತ್ಯಂತ ರೋಚಕವಾಗಿಯೇ ಕೊನೆಗೊಳ್ಳುತ್ತದೆ. ಈ ಹಿಂದಿನ ಆವೃತ್ತಿಯಲ್ಲೂ ಇದೇ ಮುಂದುವರಿದಿತ್ತು. ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅಜೇಯ 2 ರನ್ ಬಾರಿಸಿ ಭಾರತವನ್ನು ಗೆಲ್ಲಿಸಿದ್ದರು. ಆ ವೇಳೆಯೂ ಕಣ್ಣೀರು ಹಾಕುವುದು ಪಾಕಿಸ್ತಾನ ತಂಡದ ಆಟಗಾರರ ಸರದಿಯಾಯಿತು.

VISTARANEWS.COM


on

IND vs PAK
Koo

ಬೆಂಗಳೂರು: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವ ಕಪ್​ನ (T20 World Cup) ಭಾರತ ಮತ್ತು ಪಾಕಿಸ್ತಾನ (IND vs PAK) ನಡುವಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು 6 ರನ್​​ಗಳಿಂದ ಸೋಲಿಸಿದೆ. ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಅಜಮ್​ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಏರುಪೇರಿನ ಬ್ಯಾಟಿಂಗ್ ಬಳಿಕ ಮೆನ್ ಇನ್ ಬ್ಲೂ ತಂಡವು ವಿಕೆಟ್ ನಷ್ಟವಿಲ್ಲದೆ 120 ರನ್ ಗಳ ಗುರಿಯನ್ನು ನೀಡಿತು. ಪ್ರತಿಯಾಗಿ ಆಡಿದ ಪಾಕಿಸ್ತಾನ 20 ಓವರ್​ಗಳಲ್ಲಿ 113 ರನ್​ಗಳಿಗೆ ಸೀಮಿತಗೊಂಡಿತು.

ಸೋಲಿನ ನಂತರ ಪಾಕಿಸ್ತಾನದ ಸ್ಟಾರ್ ಬೌಲರ್ ನಸೀಮ್ ಶಾ ಅಳುತ್ತಿರುವುದು ಕಂಡುಬಂತು. ಅವರು 8 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದಿದ್ದರು. ಅವರು ತಂಡಕ್ಕೆ 4 ಎಸೆತಗಳಲ್ಲಿ 14 ರನ್​ಗಳ ಅಗತ್ಯವಿದ್ದಾಗ 2 ಬೌಂಡರಿಗಳನ್ನು ಹೊಡೆದರು. ಅಸಾಧ್ಯವಾದ ಗುರಿಯನ್ನು ಬೆನ್ನಟ್ಟುವಲ್ಲಿ ಧೈರ್ಯ ತೋರಿದ ಅವರಿಗೆ ಗೆಲುವು ಸಿಗದೇ ಹೋದಾಗ ಅಳು ಬಂತು. ಅವರು ಮೊದಲ ಇನ್ನಿಂಗ್ಸ್​​ನಲ್ಲಿ ಶಾ ತಮ್ಮ ನಾಲ್ಕು ಓವರ್​ಗಳಲ್ಲಿ 5.25 ಎಕಾನಮಿಯೊಂದಿಗೆ ಮೂರು ವಿಕೆಟ್​ಗಳನ್ನು ಪಡೆದಿದ್ದರು. ಹೀಗಾಗಿ ಅವರಿಗೆ ನಿರಾಸೆ ಎದುರಾಯಿತು. ಭಾರತ ವಿರುದ್ಧ ಸೋಲುವುದು ಅವಮಾನ ಎಂದುಕೊಂಡ ಅವರು ಮೈದಾನದಿಂದ ಮರಳುವ ವೇಳೆ ಕಣ್ಣೀರು ಸುರಿಸಿದರು.

ಭಾರತ ತಂಡ ಪಾಕಿಸ್ತಾನದ ಆಟಗಾರರಿಗೆ ಕಣ್ಣೀರು ಹಾಕಿಸುವುದು ಇದೇ ಮೊದಲಲ್ಲ. ಎರಡು ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳ ಪಂದ್ಯಗಳು ಅತ್ಯಂತ ರೋಚಕವಾಗಿಯೇ ಕೊನೆಗೊಳ್ಳುತ್ತದೆ. ಈ ಹಿಂದಿನ ಆವೃತ್ತಿಯಲ್ಲೂ ಇದೇ ಆಗಿತ್ತು. ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅಜೇಯ 82 ರನ್ ಬಾರಿಸಿ ಭಾರತವನ್ನು ಗೆಲ್ಲಿಸಿದ್ದರು. ಆ ವೇಳೆಯೂ ಕಣ್ಣೀರು ಹಾಕುವುದು ಪಾಕಿಸ್ತಾನ ತಂಡದ ಆಟಗಾರರ ಸರದಿಯಾಗಿತ್ತು.

ಪಾಕಿಸ್ತಾನ ವಿರುದ್ಧ ಬುಮ್ರಾ ಭರ್ಜರಿ ಪ್ರದರ್ಶನ

ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ ರಕ್ಷಕನಂತೆ ಆಡಿದರು. ಅವರು ಕೆಲವು ನಿರ್ಣಾಯಕ ವಿಕೆಟ್​ಗಳನ್ನು ಗಳಿಸಿದರು. ಇನ್ನಿಂಗ್ಸ್​ನ 19 ನೇ ಓವರ್​ನಲ್ಲಿ ಒಂದು ವಿಕೆಟ್ ಪಡೆದರು. ಅವರು ತಂಡಕ್ಕೆ ಅಗತ್ಯವಿದ್ದಾಗ ನಿಖರವಾಗಿ ಪ್ರದರ್ಶನ ನೀಡಿದರು ಮತ್ತು ಪಾಕಿಸ್ತಾನ ವಿರುದ್ಧದ ಸೋಲಿನಿಂದ ಭಾರತವನ್ನು ಕಾಪಾಡಿದರು.

ಇದನ್ನೂ ಓದಿ: IND vs PAK : ‘ಗೆಲುವಿಗೆ ಮೊದಲೇ ಸಂಭ್ರಮಿಸಬೇಡಿ, ವಿಶ್ವ ಕಪ್​ನಲ್ಲಿ ನಮ್ದೇ ಹವಾ’; ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಭಾರತದ ಅಭಿಮಾನಿಗಳು

120 ರನ್​ಗಳ ಗುರಿ ಬೆನ್ನತ್ತಿದ ಪಾಕ್​​ ಹೀನಾಯ ಸೋಲಿಗೆ ಒಳಗಾಯಿತು. ಇದೇ ವೇಳೆ ಮೆನ್ ಇನ್ ಬ್ಲೂ ನಿಜವಾದ ವಿಜೇತರಂತೆ ಆಡಿತು. ಟಿ 20 ಐ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸ್ಕೋರ್ ಅನ್ನು ರಕ್ಷಿಸಿತು. ಜಸ್ಪ್ರೀತ್ ಬುಮ್ರಾ ನಿಗದಿತ 4 ಓವರ್ಗಳಲ್ಲಿ 3.50 ಎಕಾನಮಿಯೊಂದಿಗೆ 3 ವಿಕೆಟ್ ಪಡೆದರು. ಆರಂಭಿಕ ವೇಗಿ ಭಾರತ ತಂಡವನ್ನು ನಿರಾಶಾದಾಯಕ ಸೋಲಿನಿಂದ ರಕ್ಷಿಸಿದರು.

ಮೆನ್ ಇನ್ ಗ್ರೀನ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಾರ್ಕರ್ ಕಿಂಗ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಪಾಕಿಸ್ತಾನ ಎರಡನೇ ಇನ್ನಿಂಗ್ಸ್ ನಲ್ಲಿಯೂ ಕಠಿಣ ಆರಂಭ ನೀಡಿತು. ಆದರೆ ಭಾರತೀಯ ಬೌಲರ್​ಗಳು ಅವಕಾಶ ನೀಡಲಿಲ್ಲ.

ಟಾಸ್ ಗೆದ್ದ ಪಾಕಿಸ್ತಾನ ನಾಯಕ ಅಝಾಮ್ ಭಾರತವನ್ನು ಮೊದಲು ಬ್ಯಾಟಿಂಗ್​ಗೆ ಇಳಿಸಿದರು. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಕ್ರಮವಾಗಿ 13 ಮತ್ತು 4 ರನ್​ಗಳಿಗೆ ಔಟ್ ಆದರು. ರಿಷಭ್ ಪಂತ್ ಮತ್ತು ಅಕ್ಷರ್ ಪಟೇಲ್ 39 ರನ್ಗಳ ಜೊತೆಯಾಟದ ಮೂಲಕ ಭಾರತದ ಇನ್ನಿಂಗ್ಸ್ ಅನ್ನು ಸ್ಥಿರಗೊಳಿಸಿದರು. ನಾಸಿಮ್​ ಶಾ ಮತ್ತು ಹ್ಯಾರಿಸ್ ರವೂಫ್ ತಲಾ ಮೂರು ವಿಕೆಟ್ ಕಬಳಿಸುವ ಮೂಲಕ ಮಧ್ಯಮ ಮತ್ತು ಕೆಳ ಕ್ರಮಾಂಕ ಕುಸಿಯುವಂತೆ ಮಾಡಿದರು. ಆದರೆ ಪಂತ್​ 42 ರನ್ ಬಾರಿಸಿ ಸಹಾಯ ಮಾಡಿದರು. ಪ್ರತಿಯಾಗಿ ಆಡಿದ ಪಾ ಕಿಸ್ತಾನವು ಏಳು ಬ್ಯಾಟರ್​ಗಳನ್ನು ಕಳೆದುಕೊಂಡು ತಮ್ಮ ಸ್ಕೋರ್ ಕಾರ್ಡ್​ಗೆ ಕೇವಲ 113 ರನ್​​ ಸೇರಿಸಿತು.

Continue Reading

ಕ್ರೀಡೆ

IND vs PAK : ‘ಗೆಲುವಿಗೆ ಮೊದಲೇ ಸಂಭ್ರಮಿಸಬೇಡಿ, ವಿಶ್ವ ಕಪ್​ನಲ್ಲಿ ನಮ್ದೇ ಹವಾ’; ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಭಾರತದ ಅಭಿಮಾನಿಗಳು

IND vs PAK: 2024 ರ ಟಿ 20 ವಿಶ್ವಕಪ್​ನಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸುತ್ತಿದ್ದಂತೆ, ಟ್ವಿಟರ್​ನಲ್ಲಿ ಅಭಿಮಾನಿಗಳು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರು ರೋಹಿತ್ ಶರ್ಮಾ ನೇತೃತ್ವದ ತಂಡವನ್ನು ಚೆಂಡಿನೊಂದಿಗೆ ನೀಡಿದ ಅಮೋಘ ಪ್ರದರ್ಶನಕ್ಕಾಗಿ ಶ್ಲಾಘಿಸಿದ್ದಾರೆ. ಪ್ರಮುಖವಾಗಿ ಜಸ್ಪ್ರೀತ್ ಬುಮ್ರಾ ಅವರ ಆಟಕ್ಕೆ ತಲೆಬಾಗಿದ್ದಾರೆ. ಭಾರತವನ್ನು ಸೋಲಿಸುವುದು ಪಾಕಿಸ್ತಾನಕ್ಕೆ ಅಷ್ಟೊಂದು ಸುಲಭವಲ್ಲ ಎಂದು ಹೇಳಿದ್ದಾರೆ.

VISTARANEWS.COM


on

IND vs PAK
Koo

ಬೆಂಗಳೂರು: ಐಸಿಸಿ ಪುರುಷರ ಟಿ20 ವಿಶ್ವಕಪ್ 2024 ರ 19 ನೇ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು (IND vs PAK ) ಸೋಲಿಸಿದೆ. ಆ ಬಳಿಕ ಟ್ವಿಟರ್​​ನಲ್ಲಿ ಭಾರತ ತಂಡದ ಅಭಿಮಾನಿಗಳು ನಾನಾ ರೀತಿ ಪ್ರತಿಕ್ರಿಯಿಸಿದ್ದಾರೆ. ಒಂದು ಹಂತದಲ್ಲಿ ಭಾರತ ಸೋಲಿನ ದವಡೆಗೆ ಸಿಲುಕಿತ್ತು. ಬಳಿಕ ಎದ್ದು ಬಂದು ತಿರುಗೇಟು ಕೊಟ್ಟಿತು. ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಅಭಿಮಾನಿಗಳು , ‘ಮೊದಲೇ ಸಂಭ್ರಮಿಸಬೇಡಿ. ತಿರುಗೇಟು ಕೊಡುವುದು ಗ್ಯಾರಂಟಿ’ ಎಂದು ಬರೆದುಕೊಂಡಿದ್ದಾರೆ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ(Rohit Sharma) ನೇತೃತ್ವದ ತಂಡವು 6 ರನ್​ಗಳಿಂದ ಜಯಗಳಿಸಿತ್ತು.

ಟಾಸ್ ಗೆದ್ದ ಪಾಕಿಸ್ತಾನ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ವಿರಾಟ್ ಕೊಹ್ಲಿ (4) ಮತ್ತು ರೋಹಿತ್ ಶರ್ಮಾ (13) ಇಬ್ಬರೂ ಬೇಗನೆ ಪೆವಿಲಿಯನ್​ಗೆ ಮರಳಿದ್ದರಿಂದ ಭಾರತವು ಬಯಸಿದ ರೀತಿಯ ಆರಂಭ ದೊರೆಯಲಿಲ್ಲ. ಕ್ರಮಾಂಕದಲ್ಲಿ ಬಡ್ತಿ ಪಡೆದ ಅಕ್ಷರ್ ಪಟೇಲ್ (20) ತಮ್ಮ ತಂಡಕ್ಕಾಗಿ ಉತ್ತಮ ಆಟವನ್ನು ಆಡಿದರೂ ಮುಂದುವರಿಯಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್ (42) ಆಕ್ರಮಣಕಾರಿಯಾಗಿ ಆಡಿದರು. ಹೆಚ್ಚಿನ ಒತ್ತಡದ ಪಂದ್ಯದಲ್ಲಿ ತಂಡದ ಪರ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡರು. ಆದರೆ ಅವರೂ ಹಾದಿಯು ಮೊಟಕಾಯಿತು.

ರಿಷಭ್ ಪಂತ್ ಔಟಾದ ನಂತರ ತಂಡದ ರನ್ ಗಳಿಕೆ ಭಾರತದ ಹಾದಿಯಲ್ಲಿ ಸಾಗಲಿಲ್ಲ. 3 ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿದ್ದ ಭಾರತ 19 ಓವರ್ ಗಳಲ್ಲಿ 119 ರನ್ ಗಳಿಗೆ ಆಲೌಟ್ ಆಯಿತು. ಪಾಕಿಸ್ತಾನದ ವೇಗಿಗಳು ಅದ್ಭುತವಾಗಿ ಬೌಲಿಂಗ್ ಮಾಡಿದರು. ಭಾರತದ ಪರ ಹ್ಯಾರಿಸ್ ರವೂಫ್ ಹಾಗೂ ನಸೀಮ್ ಶಾ ತಲಾ 3 ವಿಕೆಟ್ ಕಿತ್ತರೆ, ಮೊಹಮ್ಮದ್ ಅಮೀರ್ 1 ವಿಕೆಟ್ ಪಡೆದರು.

ಚೇಸ್​ ಮಾಡಲು ಹೊರಟ ಪಾಕ್​ ಪರ ನಾಯಕ ಬಾಬರ್ ಅಝಾಮ್ (13) ಬೇಗನೆ ವಿಕೆಟ್ ಕಳೆದುಕೊಂಡರೂ ಗುರಿ ಬೆನ್ನಟ್ಟಿದ ಪಾಕಿಸ್ತಾನ ಉತ್ತಮ ಆರಂಭ ಪಡೆಯಿತು. ಉಸ್ಮಾನ್ ಖಾನ್ (13) ಕೂಡ ಬೇಗ ಮರಳಿದರು. ಮೊಹಮ್ಮದ್ ರಿಜ್ವಾನ್ತಂ ಡವನ್ನು ಹಿಡಿದಿಟ್ಟುಕೊಂಡರು ಮತ್ತು ಅದ್ಭುತ ಇನ್ನಿಂಗ್ಸ್ ಆಡಿದರು. ಈ ವೇಳೆ ಪಾಕ್​ ಗೆಲ್ಲುವುದು ನಿಶ್ಚಿತ ಎಂಬ ವಿಶ್ಲೇಷಣೆಗಳು ಬಂದವು. ಆದರೆ ಆದರೆ ಅವರು ಔಟಾದ ನಂತರ ಪಾಕಿಸ್ತಾನದ ಅದೃಷ್ಟ ಕೈಕೊಟ್ಟಿತು. ಅವರು ತ್ವರಿತವಾಗಿ ವಿಕೆಟ್​ಗಳನ್ನು ಕಳೆದುಕೊಂಡರು. ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಹಿನ್ನಡೆಯ ಹಿಂದಿನ ಶಕ್ತಿಗಳು. ಇವರಿಬ್ಬರು ಮಧ್ಯಮ ಕ್ರಮಾಂಕದಲ್ಲಿ ಮೂರು ವಿಕೆಟ್ ಗಳನ್ನು ಪಡೆದು ಆಟವನ್ನು ಭಾರತದ ಪರವಾಗಿ ತಿರುಗಿಸಿದರು. ಕೊನೆಯಲ್ಲಿ ಅರ್ಶ್​ದೀಪ್​ ಸಿಂಗ್ ಭಾರತಕ್ಕೆ ಗೆಲುವು ತಂದುಕೊಟ್ಟರು.

ಟ್ವಿಟರ್​ನಲ್ಲಿ ಅಭಿಮಾನಿಗಳು ಸಂಭ್ರಮ

2024 ರ ಟಿ 20 ವಿಶ್ವಕಪ್​ನಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸುತ್ತಿದ್ದಂತೆ, ಟ್ವಿಟರ್​ನಲ್ಲಿ ಅಭಿಮಾನಿಗಳು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರು ರೋಹಿತ್ ಶರ್ಮಾ ನೇತೃತ್ವದ ತಂಡವನ್ನು ಚೆಂಡಿನೊಂದಿಗೆ ನೀಡಿದ ಅಮೋಘ ಪ್ರದರ್ಶನಕ್ಕಾಗಿ ಶ್ಲಾಘಿಸಿದ್ದಾರೆ. ಪ್ರಮುಖವಾಗಿ ಜಸ್ಪ್ರೀತ್ ಬುಮ್ರಾ ಅವರ ಆಟಕ್ಕೆ ತಲೆಬಾಗಿದ್ದಾರೆ. ಭಾರತವನ್ನು ಸೋಲಿಸುವುದು ಪಾಕಿಸ್ತಾನಕ್ಕೆ ಅಷ್ಟೊಂದು ಸುಲಭವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: IND vs PAK : ಸಿರಾಜ್​ ಚೆಂಡಿನ ಹೊಡೆತಕ್ಕೆ ಪಿಚ್​ನಲ್ಲೇ ಅಡ್ಡಡ್ಡ ಮಲಗಿದ​ ರಿಜ್ವಾನ್​; ಇಲ್ಲಿದೆ ವಿಡಿಯೊ

2007ರ ನಂತರದ ಟಿ20 ವಿಶ್ವ ಕಪ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ 9 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಭಾರತ 8 ಬಾರಿ ಗೆದ್ದಿದ್ದರೆ ಪಾಕಿಸ್ತಾನ ಏಕೈಕ ಗೆಲುವು ದಾಖಲಿಸಿದರು. ಇನ್ನು ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದ ಈ ಹಿಂದಿನ ಆವೃತ್ತಿಯ ವಿಶ್ವ ಕಪ್​ ಪಂದ್ಯವಲ್ಲೂ ವಿರಾಟ್​ ಕೊಹ್ಲಿ ಅಜೇಯ 82 ರನ್ ಗಳಿಸಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಈ ಪಂದ್ಯದಲ್ಲಿ ಪವರ್ ಪ್ಲೇ ಅವಧಿಯಲ್ಲಿ ಭಾರತ 4 ವಿಕೆಟ್​ ಕಳೆದುಕೊಂಡಾಗ ಸೋಲುತ್ತದೆ ಎಂದು ಅಂದುಕೊಂಡಿದ್ದರು. ಅದರೆ, ಭಾರತ ತಂಡ ತಿರುಗೇಟು ಕೊಟ್ಟಿತ್ತು. ವಿಜಯವನ್ನು ತನ್ನದಾಗಿಸಿಕೊಂಡಿತ್ತು.

Continue Reading

ಪ್ರಮುಖ ಸುದ್ದಿ

IND vs PAK : ಸಿರಾಜ್​ ಚೆಂಡಿನ ಹೊಡೆತಕ್ಕೆ ಪಿಚ್​ನಲ್ಲೇ ಅಡ್ಡಡ್ಡ ಮಲಗಿದ​ ರಿಜ್ವಾನ್​; ಇಲ್ಲಿದೆ ವಿಡಿಯೊ

IND vs PAK : ಟಿ 20 ವಿಶ್ವಕಪ್​ ಪಂದ್ಯದಲಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಕೇವಲ 119 ರನ್​ಗಳಿಗೆ ಆಲೌಟ್ ಆದ ನಂತರ, ಭಾರತೀಯ ವೇಗಿಗಳು ಎದುರಾಳಿ ತಂಡವನ್ನು ಕಟ್ಟಿ ಹಾಕಿದರು. ಅವರು ಅದ್ಭುತ ಲೈನ್ ಆ್ಯಂಡ್ ಲೆಂತ್​​ ಬೌಲ್ ಮಾಡಿದರು. ಬಾಬರ್ ಅಜಮ್ ನೇತೃತ್ವದ ತಂಡಕ್ಕೆ ರನ್ ಗಳಿಸಲು ಬಿಡಲೇ ಇಲ್ಲ.

VISTARANEWS.COM


on

IND vs PAK
Koo

ಬೆಂಗಳೂರು: 2024 ರ ಟಿ 20 ವಿಶ್ವಕಪ್​​ನಲ್ಲಿ (T20 World Cup) ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ (IND vs PAK) ಭಾರತದ ವೇಗಿ ಮೊಹಮ್ಮದ್ ಸಿರಾಜ್ ಬೌಲಿಂಗ್​​ನಲ್ಲಿ ತಮ್ಮ ಅತ್ಯುತ್ತಮT20 World Cup : ವಿಶ್ವ ಕಪ್​ ಇತಿಹಾಸದಲ್ಲಿ ಮೊದಲ ಗೆಲುವು ದಾಖಲಿಸಿದ ಕೆನಡಾ; ಐರ್ಲೆಂಡ್​ಗೆ ನಿರಾಸೆ ಪ್ರದರ್ಶನ ನೀಡಿದರು. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​​ ಕ್ರಿಕೆಟ್ ಸ್ಟೇಡಿಯಂನಲ್ಲಿ ಉಭಯ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಪಂದ್ಯ ನಡೆಯಿತು. ಪಂದ್ಯದಲ್ಲಿ ಆರು ರನ್​ಗಳಿಂದ ಗೆದ್ದ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ವಿರುದ್ಧದ ಪಾರಮ್ಯವನ್ನು ಮುಂದುವರಿಸಿತು.

ಟಿ 20 ವಿಶ್ವಕಪ್​ ಪಂದ್ಯದಲಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಕೇವಲ 119 ರನ್​ಗಳಿಗೆ ಆಲೌಟ್ ಆದ ನಂತರ, ಭಾರತೀಯ ವೇಗಿಗಳು ಎದುರಾಳಿ ತಂಡವನ್ನು ಕಟ್ಟಿ ಹಾಕಿದರು. ಅವರು ಅದ್ಭುತ ಲೈನ್ ಆ್ಯಂಡ್ ಲೆಂತ್​​ ಬೌಲ್ ಮಾಡಿದರು. ಬಾಬರ್ ಅಜಮ್ ನೇತೃತ್ವದ ತಂಡಕ್ಕೆ ರನ್ ಗಳಿಸಲು ಬಿಡಲೇ ಇಲ್ಲ.

ವಿಶೇಷವಾಗಿ ಮೊಹಮ್ಮದ್ ಸಿರಾಜ್ ಮೊದಲ ಕೆಲವು ಓವರ್​ನಲ್ಲಿ ಚೆಂಡಿನೊಂದಿಗೆ ಅಸಾಧಾರಣವಾಗಿ ಬೌಲಿಂಗ್ ಮಾಡಿ ಎದುರಾಳಿ ತಂಡದ ಮೇಲೆ ಒತ್ತಡ ಹೇರಿದರು. ಅವರು ತಮ್ಮ ಮೊದಲ ಮೂರು ಓವರ್​ಗಳಲ್ಲಿ ವಿಕೆಟ್ ಪಡೆಯದಿದ್ದರೂ, ಹೆಚ್ಚಿನ ಒತ್ತಡದ ಪಂದ್ಯದಲ್ಲಿ ತಮ್ಮ ತಂಡಕ್ಕೆ ಪೂರಕ ಎಕಾನಮಿ ಕೊಟ್ಟರು.

ರಿಟರ್ನ್​ ಥ್ರೋ

ಮೊಹಮ್ಮದ್ ಸಿರಾಜ್ ತಮ್ಮ ಮೊದಲ ಸ್ಪೆಲ್​​ನಲ್ಲಿ ಮೊಹಮ್ಮದ್ ರಿಜ್ವಾನ್ ಅವರಿಗೆ ಜೋರಾಗಿ ರಿಟರ್ನ್​ ಥ್ರೋ ಎಸೆದರು. ಇನಿಂಗ್ಸ್​​ನ ಎರಡನೇ ಓವರ್​ನಲ್ಲಿ ಕೊನೆಯ ಎಸೆತದಲ್ಲಿ ವೇಗದ ಬೌಲರ್ ಪೂರ್ಣ ಎಸೆತವನ್ನು ಎಸೆದರು. ರಿಜ್ವಾನ್​ ಅದನ್ನು ರಿಟರ್ನ್​ ಕಳುಹಿಸಿದರು. ಮೊಹಮ್ಮದ್ ರಿಜ್ವಾನ್ ಕ್ರೀಸ್ ನಿಂದ ಹೊರಗುಳಿದಿದ್ದರಿಂದ ಮೊಹಮ್ಮದ್ ಸಿರಾಜ್ ಚೆಂಡನ್ನು ಹಿಡಿದು ಸ್ಟಂಪ್ ಗಳ ಕಡೆ ವಾಪಸ್​ ಕಳುಹಿಸಿದರು. ಆದರೆ ವೇಗದ ಬೌಲರ್ ನ ಥ್ರೋ ಪಾಕಿಸ್ತಾನದ ಕೀಪರ್-ಬ್ಯಾಟ್ಸ್ ಮನ್ ಕೈಗೆ ತಗುಲಿತು. ಗಾಯಗೊಂಡ ಅವರು ತೀವ್ರ ನೋವಿನಿಂದ ಕಿರುಚಿದರು.

ಇದನ್ನೂ ಓದಿ: IND vs PAK : ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್​ ಜಯ

ನೋವಿನಿಂದ ಬಳಲುತ್ತಿದ್ದ ಮೊಹಮ್ಮದ್ ರಿಜ್ವಾನ್​​ ಬಳಿಗೆ ಹೋದ ಸಿರಾಜ್​ ತಪ್ಪಿಗಾಗಿ ಕ್ಷಮೆಯಾಚಿಸಿದರು. ಈ ವೇಳೆ ನ್ಯೂಯಾರ್ಕ್ನ ನಸ್ಸಾವು ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರೇಕ್ಷಕರಿಂದ ಈ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಯಿತು. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಅವರು 4 ಓವರ್ ಎಸೆದು ಕೇವಲ 19 ರನ್ ನೀಡಿದರು.

ಮೊಹಮ್ಮದ್ ರಿಜ್ವಾನ್ ಉತ್ತಮ ಆಟ

ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊಹಮ್ಮದ್ ರಿಜ್ವಾನ್ ಪಾಕಿಸ್ತಾನಕ್ಕೆ ಸ್ವಲ್ಪ ಹೊತ್ತು ಆಸರೆಯಾದರು. ಕೀಪರ್-ಬ್ಯಾಟರ್​ ಒಂದು ಕಡೆ ಕ್ರೀಸ್​ಗೆ ಅಂಟಿಕೊಂಡರೆ ವಿಕೆಟ್​​ಗಳು ಇನ್ನೊಂದು ತುದಿಯಲ್ಲಿ ಉರುಳುತ್ತಲೇ ಇದ್ದವು.

ಮೊಹಮ್ಮದ್ ರಿಜ್ವಾನ್ ತಮ್ಮ ತಂಡಕ್ಕಾಗಿ ಪ್ರಮುಖ ಇನ್ನಿಂಗ್ಸ್ ಆಡಿದರು ಮತ್ತು ಅವರು ಕ್ರೀಸ್​​ನಲ್ಲಿ ಇರುವವರೆಗೂ, ಪಾಕಿಸ್ತಾನವು ಪಂದ್ಯವನ್ನು ಗೆಲ್ಲುವ ನೆಚ್ಚಿನ ತಂಡವಾಗಿ ಕಾಣುತ್ತಿತ್ತು. ಆದಾಗ್ಯೂ, ಜಸ್ಪ್ರೀತ್ ಬುಮ್ರಾ ಅವರನ್ನು ಹೊರಗಟ್ಟಿದರು.

ಜಸ್ಪ್ರೀತ್ ಬುಮ್ರಾ ಲೆಂತ್​ ಎಸೆತವನ್ನು ಎಸೆದರು. ಚೆಂಡು ಕೆಳಮಟ್ಟದಲ್ಲಿ ಉಳಿದು ಮೊಹಮ್ಮದ್ ರಿಜ್ವಾನ್ ಅವರ ಬ್ಯಾಟ್ ಅಡಿಯಲ್ಲಿ ಹೋಯಿತು. ಚೆಂಡು ಹೊಡೆದು ಮಧ್ಯದ ಸ್ಟಂಪ್​ಗೆ ಬಡಿಯಿತು. ಅವರು 44 ಎಸೆತಗಳಲ್ಲಿ 1 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 31 ರನ್ ಗಳಿಸಿದರು.

Continue Reading

ಪ್ರಮುಖ ಸುದ್ದಿ

IND vs PAK : ಭಾರತದ ಎದುರು ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗ; ಕಡಿಮೆ ಸ್ಕೋರ್ ಇದ್ದಾಗಲೂ 6 ರನ್ ಸೋಲು

IND vs PAK : ಮೊದಲು ಬ್ಯಾಟ್ ಮಾಡಿದ ಭಾರತ ತಂಡ 18.3 ಓವರ್​ಗಳಲ್ಲಿ 119 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಾಕಿಸ್ತಾನ ತಂಡ ಭಾರತದ ಭರ್ಜರಿ ಬೌಲಿಂಗ್​ಗೆ ಹೆದರಿ.. ತನ್ನ ಪಾಲಿನ 20 ಓವರ್​ಗಳಲ್ಲಿ 7 ವಿಕೆಟ್​ಗೆ 113 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

ind vs pak
Koo

ಬೆಂಗಳೂರು: ಸಾಂಪ್ರದಾಯಿಕ ಪ್ರತಿಸ್ಪರ್ಧಿ ಪಾಕಿಸ್ತಾನ ವಿರುದ್ಧದ ಟಿ20 ವಿಶ್ವ ಕಪ್​ ಲೀಗ್​ ಪಂದ್ಯದಲ್ಲಿ ಭಾರತ ತಂಡ (IND vs PAK) ಜಯ ಸಾಧಿಸಿದೆ. ಈ ಮೂಲಕ ಭಾರತ ತಂಡ ಹಾಲಿ ವಿಶ್ವ ಕಪ್​ನಲ್ಲಿ ಎರಡನೇ ವಿಜಯ ದಾಖಲಿದೆ. ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಐರ್ಲೆಂಡ್​ ವಿರುದ್ಧ ಗೆಲುವು ದಾಖಲಿಸಿತ್ತು. ಇದೀಗ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಪಾಕ್​ ತಂಡವನ್ನು ಮಣಿಸಿದೆ. ಪ್ರಶಸ್ತಿ ಕಡೆಗೆ ಮುನ್ನುಗ್ಗುವ ಯೋಚನೆಯಲ್ಲಿರುವ ಭಾರತ ತಂಡಕ್ಕೆ ಈ ವಿಜಯದಿಂದ ಭಾರೀ ವಿಶ್ವಾಸ ದೊರಕಿದೆ. ಇದು ಭಾರತ ತಂಡಕ್ಕೆ ಟಿ20 ವಿಶ್ವ ಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ದೊರೆಯುತ್ತಿರುವ 8ನೇ ವಿಜಯ. ಒಂದೇ ಬಾರಿ ಪಾಕಿಸ್ತಾನ ಗೆಲುವು ದಾಖಲಿಸಿದೆ. ಅಲ್ಲದೆ 2023ರಲ್ಲಿ ಭಾರತದಲ್ಲಿ ನಡೆದಿದ್ದ ಏಕ ದಿನ ವಿಶ್ವ ಕಪ್​ನಲ್ಲಿಯೂ ಭಾರತ ತಂಡ ಪಾಕಿಸ್ತಾನ ತಂಡವನ್ನು ಸೋಲಿಸಿತ್ತು.

ಇಲ್ಲಿನ ನಸ್ಸೌ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 18.3 ಓವರ್​ಗಳಲ್ಲಿ 119 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಾಕಿಸ್ತಾನ ತಂಡ ಭಾರತದ ಭರ್ಜರಿ ಬೌಲಿಂಗ್​ಗೆ ಹೆದರಿ.. ತನ್ನ ಪಾಲಿನ 20 ಓವರ್​ಗಳಲ್ಲಿ 7 ವಿಕೆಟ್​ಗೆ 113 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಬೌಲಿಂಗ್​ಗೆ ನೆರವಾಗುತ್ತಿದ್ದ ಪಿಚ್​ನಲ್ಲಿ ಭಾರತೀಯ ಬೌಲರ್​ಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದರು. ಬ್ಯಾಟರ್​ಗಳು ಪೇರಿಸಿದ್ದ 113 ರನ್​ಗಳ ಮೊತ್ತವನ್ನು ಕಾಪಾಡಿದರು.

2007ರ ಟಿ20 ವಿಶ್ವಕಪ್​ನ ನಂತರದಿಂದದ 8ನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ ಈ ಹಿಂದಿನ 7 ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿದ್ದರೆ ಪಾಕಿಸ್ತಾನ ಒಂದು ಬಾರಿ ಗೆದ್ದಿದೆ. 2007ರ ಉದ್ಘಾಟನಾ ಆವೃತ್ತಿಯಲ್ಲಿ 2ರಲ್ಲಿ ಬಾರಿ ಭಾರತ ಗೆದ್ದಿದೆ. 2021ರಲ್ಲಿ ಭಾರತದ ವಿರುದ್ಧ ಪಾಕ್ ವಿಜಯ ಕಂಡುಕೊಂಡಿತ್ತು
2007ರ ಟಿ20 ವಿಶ್ವಕಪ್​ನ ನಂತರದಿಮದ 8ನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ ಈ ಹಿಂದಿನ 7 ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿದ್ದರೆ ಪಾಕಿಸ್ತಾನ ಒಂದು ಬಾರಿ ಗೆದ್ದಿದೆ. 2007ರ ಉದ್ಘಾಟನಾ ಆವೃತ್ತಿಯಲ್ಲಿ 2ರಲ್ಲಿ ಬಾರಿ ಭಾರತ ಗೆದ್ದಿದೆ. 2021ರಲ್ಲಿ ಭಾರತದ ವಿರುದ್ಧ ಪಾಕ್ ವಿಜಯ ಕಂಡುಕೊಂಡಿತ್ತು.

ಹಿಂದಿನ ಬಾರಿ ಕೊಹ್ಲಿ ಗೆಲ್ಲಿಸಿದ್ದರು

ಕಳೆದ ವರ್ಷ ನಡೆದ ಟಿ20 ವಿಶ್ವಕಪ್​​ನಲ್ಲಿ ಟೀಮ್ ಇಂಡಿಯಾ, ಪಾಕ್ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು. ಪವರ್​​​ಪ್ಲೇನಲ್ಲಿ 32ಕ್ಕೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿ ರೋಚಕ ಗೆಲುವು ತಂದಿದ್ದರು. ಕೊಹ್ಲಿ 52 ಎಸೆತಗಳಲ್ಲಿ ಅಜೇಯ 82 ರನ್ ಚಚ್ಚಿ ಅವಿಸ್ಮರಣೀಯ ಇನಿಂಗ್ಸ್ ಆಡಿದ್ದರು.

ವಿಶ್ವ ಕಪ್​ನಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಐರ್ಲೆಂಡ್ ಎದುರಿನ ತನ್ನ ಮೊದಲ ಪಂದ್ಯದಲ್ಲಿ ಭಾರತ 8 ವಿಕೆಟ್​ಗಳ ಅಮೋಘ ಜಯ ಸಾಧಿಸಿದೆ. ಇದೀಗ ಪಾಕಿಸ್ತಾನ ವಿರುದ್ಧಗೂ ಗೆಲುವು ಸಾಧಿಸಿ ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ: IND vs PAK : ವಿರಾಟ್​ ಕೊಹ್ಲಿಯಿಂದ ಆಟೋಗ್ರಾಫ್ ಪಡೆದುಕೊಂಡ ಕ್ರಿಸ್​ ಗೇಲ್​! ಇಲ್ಲಿದೆ ವಿಡಿಯೊ

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಳೆಯಿಂದಾಗಿ ಅರ್ಧ ಗಂಟೆ ತಡವಾಗಿ ಆರಂಭವಾಗಿದೆ. ಸ್ಥಳೀಯ ಸಮಯ ಬೆಳಗ್ಗೆ 10 ಗಂಟೆಗೆ ಹಾಗೂ ಭಾರತದ ಸಮಯ ಸಂಜೆ 7.30ಕ್ಕೆ ನಡೆಯಬೇಕಾಗಿದ್ದ ಟಾಸ್​ ಮಳೆಯಿಂದಾಗಿ ತಡವಾಯಿತು. ಪಂದ್ಯ ಆರಂಭಗೊಂಡು ಒಂದು ಓವರ್​ ಆದ ಬಳಿಕ ಮತ್ತೆ ಮಳೆ ಸುರಿಯಿತು. ಕೊನೆಗೂ ಪಂದ್ಯ ನಡೆದು ಭಾರತಕ್ಕೆ ಜಯ ಸಿಕ್ಕಿತು.

Continue Reading
Advertisement
IND vs PAK
ಕ್ರೀಡೆ14 mins ago

IND vs PAK : ಪಾಕಿಸ್ತಾನದ ಆಟಗಾರನಿಗೆ ಕಣ್ಣೀರು ಹಾಕಿಸಿದ ಭಾರತ ತಂಡ!

PM Narendra Modi and Siddaramaiah
ಪ್ರಮುಖ ಸುದ್ದಿ26 mins ago

PM Narendra Modi: “ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

IND vs PAK
ಕ್ರೀಡೆ37 mins ago

IND vs PAK : ‘ಗೆಲುವಿಗೆ ಮೊದಲೇ ಸಂಭ್ರಮಿಸಬೇಡಿ, ವಿಶ್ವ ಕಪ್​ನಲ್ಲಿ ನಮ್ದೇ ಹವಾ’; ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಭಾರತದ ಅಭಿಮಾನಿಗಳು

road rage assault case
ಕ್ರೈಂ54 mins ago

Assault Case: ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ತಡೆಗಟ್ಟಿ ಹಲ್ಲೆ ಮಾಡಿದ ಕ್ರೂರಿಗಳು!

IND vs PAK
ಪ್ರಮುಖ ಸುದ್ದಿ1 hour ago

IND vs PAK : ಸಿರಾಜ್​ ಚೆಂಡಿನ ಹೊಡೆತಕ್ಕೆ ಪಿಚ್​ನಲ್ಲೇ ಅಡ್ಡಡ್ಡ ಮಲಗಿದ​ ರಿಜ್ವಾನ್​; ಇಲ್ಲಿದೆ ವಿಡಿಯೊ

Shikakai For Hair
ಆರೋಗ್ಯ1 hour ago

Shikakai For Hair: ತಲೆ ಕೂದಲಿಗೆ ಶ್ಯಾಂಪೂ ಒಳ್ಳೆಯದೋ ಸೀಗೆಕಾಯಿ ಸೂಕ್ತವೋ?

Karnataka Weather Forecast
ಮಳೆ2 hours ago

Karnataka Weather : ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ; ರೆಡ್‌ ಅಲರ್ಟ್‌ ಘೋಷಣೆ

Modi Cabinet
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: 3ನೇ ಬಾರಿಯ ‘ವಿಸ್ತೃತ’ ಸರ್ಕಾರವು ‘ವಿಕಸಿತ ಭಾರತ’ಕ್ಕೆ ಶ್ರಮಿಸಲಿ

Health Tips Kannada
ಆರೋಗ್ಯ2 hours ago

Health Tips Kannada: ಉಪ್ಪು ತಿನ್ನುವುದು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಮುಖ್ಯ!

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌