Site icon Vistara News

Suryakumar Yadav | ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಭೇಟಿ ಮಾಡಿದ ಸೂರ್ಯಕುಮಾರ್​ ಯಾದವ್​

yogi- adityanath

#image_title

ಲಖನೌ : ಭಾರತ ತಂಡದ ಸ್ಟಾರ್​ ಬ್ಯಾಟರ್​​ ಸೂರ್ಯಕುಮಾರ್ ಯಾದವ್​ ಅವರು ಸೋಮವಾರ (ಜನವರಿ 30) ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಭಾನುವಾರ ಸಂಜೆ ನಡೆದ ನ್ಯೂಜಿಲ್ಯಾಂಡ್​ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡ ಆರು ವಿಕೆಟ್​ಗಳ ವಿಜಯ ಸಾಧಿಸಿದೆ. ಹೀಗಾಗಿ ಭಾರತ ತಂಡದ ಆಟಗಾರರು ಸೋಮವಾರ ಲಖನೌನಲ್ಲೇ ಉಳಿದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್​​ ಅವರ ಗೃಹ ಕಚೇರಿಗೆ ಭೇಟಿ ನೀಡಿದ ಸೂರ್ಯಕುಮಾರ್​ ಮಾತುಕತೆ ನಡೆಸಿದರು.

ಸೂರ್ಯಕುಮಾರ್ ಅವರು ತಮ್ಮನ್ನು ಭೇಟಿ ಮಾಡಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಯುವ ಹಾಗೂ ಸ್ಫೂರ್ತಿಯುತ ಆಟಗಾರ ಸ್ಕೈ,(SKY) ನಮ್ಮ ಅಧಿಕೃತ ನಿವಾಸಕ್ಕೆ ಬಂದಿದ್ದಾರೆ ಎಂದು ಟ್ವೀಟ್​ ಮಾಡಲಾಗಿದೆ. ಅವರಿಬ್ಬರು ಯಾವ ವಿಚಾರದ ಬಗ್ಗೆ ಮಾತುಕತೆ ನಡೆಸಿದರು ಎಂಬ ಬಗ್ಗೆ ಮಾಹಿತಿ ಇಲ್ಲ. ಭಾನುವಾರ ಇಲ್ಲಿನ ಅಟಲ್​ ಬಿಹಾರಿ ವಾಜಪೇಯಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಪಂದ್ಯ ನಡೆದಾಗಲೂ ಯೋಗಿ ಆದಿತ್ಯ ನಾಥ್​ ಅವರು ಅಲ್ಲಿಗೆ ಭೇಟಿ ನೀಡಿ ಪಂದ್ಯ ವೀಕ್ಷಿಸಿದ್ದರು. ಅಲ್ಲದೆ, ಭಾರತ ತಂಡದ ನಾಯಕ ಹಾರ್ದಿಕ್​ ಪಾಂಡ್ಯಗೆ ಪುಷ್ಪಗುಚ್ಛ ನೀಡಿದ್ದರು.

ಇದನ್ನೂ ಓದಿ : INDvsNZ T20 : ಪಿಚ್ ತಯಾರಿಸಿದ ಕ್ಯುರೇಟರ್​ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಾಯಕ ಹಾರ್ದಿಕ್​ ಪಾಂಡ್ಯ

ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್​ ಬಳಗವನ್ನು 6 ವಿಕೆಟ್​ಗಳಿಂದ ಮಣಿಸಿತ್ತು. ಈ ಮೂಲಕ ಮೂರು ಪಂದ್ಯಗಳ ಸರಣಿ 1-1 ಅಂತರದಿಂದ ಸಮಬಲಗೊಂಡಿದೆ. ಮುಂದಿನ ಪಂದ್ಯ ಗುಜರಾತ್​ನ ಅಹಮದಾಬಾದ್​ನಲ್ಲಿ ಫೆಬ್ರವರಿ 1ರಂದು ನಡೆಯಲಿದೆ.

Exit mobile version