Team India : ಸೂರ್ಯ ಅಥವಾ ಋತುರಾಜ್​; ನಾಯಕರಾಗಲು ಯಾರು ಬೆಸ್ಟ್​? - Vistara News

ಕ್ರಿಕೆಟ್

Team India : ಸೂರ್ಯ ಅಥವಾ ಋತುರಾಜ್​; ನಾಯಕರಾಗಲು ಯಾರು ಬೆಸ್ಟ್​?

ಹಾರ್ದಿಕ್ ಪಾಂಡ್ಯ ಅಲಭ್ಯರಾಗಿರುವ ಕಾರಣ ಯಾರನ್ನು ತಂಡಕ್ಕೆ ಆಯ್ಕೆ ಮಾಡಬೇಕು ಎಂಬ ಗೊಂದದಲ್ಲಿ ಟೀಮ್ ಇಂಡಿಯಾ(Team India) ಆಯ್ಕೆಗಾರರು ಇದ್ದಾರೆ ಎಂದು ಹೇಳಲಾಗಿದೆ.

VISTARANEWS.COM


on

Team India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಾದದ ಗಾಯದಿಂದಾಗಿ ಹಾರ್ದಿಕ್ ಪಾಂಡ್ಯ ಅಲಭ್ಯರಾಗಿರುವುದರಿಂದ ನವೆಂಬರ್ 23 ರಿಂದ ಪ್ರಾರಂಭವಾಗುವ ಭಾರತ (Team India) ಮತ್ತು ಆಸ್ಟ್ರೇಲಿಯಾ ಟಿ 20 ಐ ಸರಣಿಗೆ ಟೀಮ್ ಇಂಡಿಯಾ ನಾಯಕನನ್ನು ಆಯ್ಕೆ ಮಾಡುವ ಸಂದಿಗ್ಧತೆಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆದಾರರು ಎದುರಿಸುತ್ತಿದ್ದಾರೆ. ಪಿಟಿಐ ಪ್ರಕಾರ, ನಿಯಮಿತ ಟಿ20 ಐ ನಾಯಕ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಭಾರತದ ಮುಂಬರುವ ಐದು ಪಂದ್ಯಗಳ ಸರಣಿಗೆ ಲಭ್ಯವಿರುವುದಿಲ್ಲ, ಏಕೆಂದರೆ ಅವರು ಇನ್ನೂ ಎಡ ಪಾದದ ಅಸ್ಥಿರಜ್ಜು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ.

ಡರ್ಬನ್​ನಲ್ಲಿ ಡಿಸೆಂಬರ್ 10ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳೆಗೆ ಆಲ್ರೌಂಡರ್ ಫಿಟ್ ಆಗುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಪಿಟಿಐಗೆ ಖಚಿತಪಡಿಸಿದ್ದಾರೆ.

“ಹಾರ್ದಿಕ್ ಫಿಟ್ ಎಂದು ಘೋಷಿಸಲು ಮತ್ತು ಆಯ್ಕೆಗೆ ಲಭ್ಯವಿರಲು ಇನ್ನೂ ಸಮಯ ಬೇಕಾಗಿದೆ. ದಕ್ಷಿಣ ಆಫ್ರಿಕಾ ಸರಣಿಯ ಸಮಯದಲ್ಲಿ ಸಂಭಾವ್ಯ ‘ಆರ್ಟಿಪಿ’ (ರಿಟರ್ನ್ ಟು ಪ್ಲೇ) ಯೊಂದಿಗೆ ತನ್ನ ಪುನಶ್ಚೇತನ ಪೂರ್ಣಗೊಳಿಸಲು ಪ್ರಯತ್ನಿಸುವುದು ಅವರಿಗೆ ಹೆಚ್ಚು ಅನುಕೂಲಕರ. ಇದು ಖಂಡಿತವಾಗಿಯೂ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿಯ ಸ್ಪೋರ್ಟ್ಸ್ ಸೈನ್ಸ್ ತಂಡದ ನಿರ್ಧಾರವಾಗಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: PAK vs NZ: ರಚಿನ್​ ಶತಕ; ಸಚಿನ್​ ಸೇರಿ ಹಲವು ದಿಗ್ಗಜರ ದಾಖಲೆ ಧೂಳೀಪಟ

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಋತುರಾಜ್ ಗಾಯಕ್ವಾಡ್ ಅವರಲ್ಲಿ ಒಬ್ಬರನ್ನು ಸ್ಟ್ಯಾಂಡ್-ಬೈ ನಾಯಕರಾಗಿ ಆಯ್ಕೆ ಮಾಡಲು ಆಯ್ಕೆದಾರರು ಹೆಣಗಾಡುತ್ತಿದ್ದಾರೆ. ಯಾಕೆಂದರೆ, ಸೂರ್ಯಕುಮಾರ್ ಯಾದವ್ ಟಿ20 ಐ ತಂಡದ ನಿಯೋಜಿತ ಉಪನಾಯಕರಾಗಿದ್ದಾರೆ. ಋತುರಾಜ್ ಗಾಯಕ್ವಾಡ್ ಇತ್ತೀಚೆಗೆ ಯುವ ಭಾರತೀಯ ತಂಡವನ್ನು ಕರದುಕೊಂಡು ಹೋಗಿ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದಿದ್ದರು.

ವಿಶ್ರಾಂತಿ ಕೇಳದಿದ್ದರೆ ಸೂರ್ಯ ನಾಯಕ

ಕ್ರಿಕೆಟ್ ವಿಶ್ವಕಪ್ ನಂತರ ಸೂರ್ಯಕುಮಾರ್ ಸ್ವತಃ ವಿಶ್ರಾಂತಿ ಕೇಳದಿದ್ದರೆ, ಅವರು ತಂಡವನ್ನು ಮುನ್ನಡೆಸುವ ನೆಚ್ಚಿನ ಆಟಗಾರ ಎಂದು ಪಿಟಿಐ ವರದಿ ಮಾಡಿದೆ. ನವೆಂಬರ್ 15 ರಂದು ನಡೆಯಲಿರುವ ವಿಶ್ವಕಪ್ ಸೆಮಿಫೈನಲ್ ನಂತರ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ 20 ಪಂದ್ಯಗಳಿಗೆ ತಂಡವನ್ನು ಘೋಷಿಸುವ ಸಾಧ್ಯತೆಯಿದೆ. ಅನುಭವಿ ವೇಗಿ ಭುವನೇಶ್ವರ್ ಕುಮಾರ್ 12 ತಿಂಗಳ ಅಂತರದ ನಂತರ ಭಾರತ ತಂಡಕ್ಕೆ ಮರಳುವ ಸಾಧ್ಯತೆಯಿದೆ. ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಕೂಡ ಸರಣಿಗಾಗಿ ಟಿ 20 ಐ ಸೆಟಪ್​ಗೆ ಮರಳಲು ಸಜ್ಜಾಗಿದ್ದಾರೆ. ಅರ್ಶ್​ದೀಪ್​ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್ ಕೂಡ 5 ಪಂದ್ಯಗಳ ಟಿ 20 ಐ ಸರಣಿಗೆ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಐಪಿಎಲ್​ಗೆ ಪಂತ್​ ರೆಡಿ?

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳಿಗೆ ಸಿಹಿ ಸುದ್ದಿ ಇದೆ. ಭಾರತದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್​ ರಿಷಭ್ ಪಂತ್ (Rishabh Pant) ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲು ಇನ್ನು ಹೆಚ್ಚು ದಿನಗಳು ಬಾಕಿ ಇಲ್ಲ . ಐಪಿಎಲ್ 2024 ರ ಹರಾಜಿಗೆ ಮುಂಚಿತವಾಗಿ 4 ದಿನಗಳ ಡೆಲ್ಲಿ ಕ್ಯಾಪಿಟಲ್ಸ್ ಶಿಬಿರದಲ್ಲಿ ಭಾಗವಹಿಸಲು ದೆಹಲಿಯ ಸ್ಟಾರ್ ಆಟರಾಗ ಕೋಲ್ಕೊತಾಗೆ ತೆರಳಿದ್ದಾರೆ. ಹೀಗಾಗಿ ಅವರು ಶೀಘ್ರದಲ್ಲಿಯೇ ಮರಳುವ ಸೂಚನೆ ನೀಡಿದಂತಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕ ಸೌರವ್ ಗಂಗೂಲಿ, 26ರ ಹರೆಯದ ರಿಷಭ್​ ಉತ್ತಮ ಸ್ಥಿತಿಯಲ್ಲಿದ್ದು, 2024ರ ಐಪಿಎಲ್ ಆವೃತ್ತಿಯಲ್ಲಿ ಆಡಲಿದ್ದಾರೆ ಎಂಬುದನ್ನು ಖಚಿತಪಡಿಸಿದ್ದಾರೆ.

“ರಿಷಭ್ ಪಂತ್ ಉತ್ತಮ ಫಾರ್ಮ್​ನಲ್ಲಿದ್ದ ಅವರು ಮುಂದಿನ ಋತುವಿನಿಂದ ಆಡಲಿದ್ದಾರೆ. ಅವರು ಈಗ ಅಭ್ಯಾಸ ಮಾಡುವುದಿಲ್ಲ. ಅವರು ನವೆಂಬರ್ 11 ರವರೆಗೆ ಇಲ್ಲಿರುತ್ತಾರೆ. ಮುಂಬರುವ ಹರಾಜನ್ನು ಗಮನದಲ್ಲಿಟ್ಟುಕೊಂಡು ಪಂತ್ ತಂಡದ ನಾಯಕರಾಗಿರುವುದರಿಂದ ನಾವು ಅವರೊಂದಿಗೆ ತಂಡದ ಬಗ್ಗೆ ಚರ್ಚಿಸಿದ್ದೇವೆ,” ಎಂದು ಗಂಗೂಲಿ ಡಿಯಾ ಟುಡೇಗೆ ಮಾಹಿತಿ ನೀಡಿದ್ದಾರೆ. ಶಿಬಿರದ ಸಮಯದಲ್ಲಿ ರಿಷಭ್ ಪಂತ್ ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ವೀಡಿಯೊ ಕೂಡ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

IPL 2024 Eliminator: ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

IPL 2024 Eliminato
Koo

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡದ ಎಲಿಮಿನೇಟರ್(IPL 2024 Eliminator)​ ಎದುರಾಳಿ ಯಾರೆಂದು ಫಿಕ್ಸ್​ ಆಗಿದೆ. ಇದರ ಬೆನ್ನಲ್ಲೇ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದೆ. ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ನಡೆಸುವ ಸಲುವಾಗಿ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ಗಳಾದ ಕ್ಯಾಮರೂನ್​ ಗ್ರೀನ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಂಡ ತೊರೆಯಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಇಂಗ್ಲೆಂಡ್​ನ ಆಟಗಾರರು ಐಪಿಎಲ್​ ಪಂದ್ಯವಾವಳಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಇದೀಗ ಆಸ್ಟ್ರೇಲಿಯಾ ಸರದಿ ಎನ್ನಲಾಗಿದೆ. ಕೇವಲ ಆರ್​ಸಿಬಿ ಮಾತ್ರವಲ್ಲದೆ ಇತರ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರರು ಕೂಡ ಐಪಿಎಲ್​ ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಐಪಿಎಲ್​ನಿಂದ ಹೊರಹೋದರೆ ಸನ್​ರೈಸರ್ಸ್​ ಮತ್ತು ಆರ್​ಸಿಬಿ ತಂಡಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ 2 ತಂಡಗಳಲ್ಲಿಯೇ ತಲಾ 2 ಆಸೀಸ್​ ಆಟಗಾರರಿದ್ದಾರೆ.

ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ಪಂದ್ಯಗಳು ಮೇ 27ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಮೀಬಿಯಾ ವಿರುದ್ಧ ಮೇ 29ಕ್ಕೆ ಆಡಲಿದೆ. ಮೂಲಗಳ ಪ್ರಕಾರ ಆಸ್ಟ್ರೇಲಿಯಾ ತಂಡ ಮೇ 21ರಂದು ಕೆರಿಬಿಯನ್​ ದ್ವೀಪಕ್ಕೆ ಪ್ರಯಾಣ ಬೆಳೆಸಲಿದೆ ಎಂದು ಹೇಳಲಾಗಿದೆ.

ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ


ಇಂದು ರಾತ್ರಿ ನಡೆಯಬೇಕಿದ್ದ ಐಪಿಎಲ್​ನ ಅಂತಿಮ ಲೀಗ್​ ಪಂದ್ಯವಾದ ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ನಡುವಣ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ರಾಜಸ್ಥಾನ್​ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತು. ಹೀಗಾಗಿ ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

Continue Reading

ಕ್ರೀಡೆ

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

RR vs KKR: ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು.

VISTARANEWS.COM


on

RR vs KKR
Koo

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ(IPL 2024) ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ ಪಂದ್ಯವನ್ನು ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ ಟಾಸ್​ ಕೂಡ ಹಾರಿಸಲಾಯಿತು. ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮಳೆ ಮತ್ತೆ ಆರಂಭಗೊಂಡಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಪಂದ್ಯವನ್ನು ರದ್ದು ಎಂದು ಘೋಷಣೆ ಮಾಡಿದರು.

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

ಆರ್​ಸಿಬಿ-ರಾಜಸ್ಥಾನ್​ ಮಧ್ಯೆ ಎಲಿಮಿನೇಟರ್​ ಪಂದ್ಯ


ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಪಂಜಾಬ್​ ವಿರುದ್ಧ ಗೆದ್ದ ಹೈದರಾಬಾದ್​


ದಿನದ ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು. ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

Continue Reading

ಕ್ರೀಡೆ

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

SRH vs PBKS: ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

VISTARANEWS.COM


on

SRH vs PBKS
Koo

ಹೈದರಾಬಾದ್​: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಐಪಿಎಲ್​(IPL 2024) ಆವೃತ್ತಿಯಲ್ಲಿ ಮತ್ತು ಟಿ20 ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದೆ. ಆರ್​ಸಿಬಿ ಈ ಆವೃತ್ತಿಯಲ್ಲಿ ಒಟ್ಟು 157 ಸಿಕ್ಸರ್​ ಬಾರಿಸಿ ಅಗ್ರಸ್ಥಾನ ಪಡೆದಿತ್ತು. ಆದರೆ, ಇದೀಗ ಹೈದರಾಬಾದ್​ 160 ಸಿಕ್ಸರ್​ ಬಾರಿಸುವ ಮೂಲಕ ದಾಖಲೆಯನ್ನು ತನ್ನ ಹೆಸರಿಗೆ ಬರೆದಿದೆ.

ಅತಿ ಹೆಚ್ಚು ಸಿಕ್ಸರ್​ ಬಾರಿಸಿದ 5 ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​-160
ಸಿಕ್ಸರ್​, 2024

ಆರ್​ಸಿಬಿ-157 ಸಿಕ್ಸರ್​, 2024

ಚೆನ್ನೈ ಸೂಪರ್​ ಕಿಂಗ್ಸ್​-145 ಸಿಕ್ಸರ್​, 2018

ಸರ್ರೆ-144 (ಟಿ20 ಬ್ಲಾಸ್ಟ್​ 2013)

ಕೆಕೆಆರ್​-143 ಸಿಕ್ಸರ್​, 2019

ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್​


ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಹೈದರಾಬಾದ್​ಗೆ 4 ವಿಕೆಟ್​ ಜಯ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading

ಕ್ರೀಡೆ

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

SRH vs PBKS: ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

VISTARANEWS.COM


on

SRH vs PBKS
Koo

ಹೈದರಾಬಾದ್: ವಿರಾಟ್​ ಕೊಹ್ಲಿ(Virat Kohli) ಅವರು ಶನಿವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದರು. ಆದರೆ ಈ ದಾಖಲೆ ಒಂದು ದಿನ ಕಳೆಯುವ ಮುನ್ನವೇ ಪತನಗೊಂಡಿದೆ. ಸನ್​ರೈಸರ್ಸ್ ಹೈದರಾಬಾದ್(SRH vs PBKS)​ ತಂಡದ ಯುವ ಆಟಗಾರ ಅಭಿಷೇಕ್​ ಶರ್ಮ(Abhishek Sharma) ಈ ದಾಖಲೆಯನ್ನು ಮರಿದಿದ್ದಾರೆ.

ಇಂದು(ಭಾನುವಾರ) ನಡೆದ ಐಪಿಎಲ್​ನ 69ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಇದನ್ನೂ ಓದಿ PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading
Advertisement
Hair Conditioner
ಆರೋಗ್ಯ10 mins ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Devara Fear Song Jr NTR Unleashes Terror In Sync
ಟಾಲಿವುಡ್25 mins ago

Devara Fear Song: ಜ್ಯೂನಿಯರ್‌ ಎನ್‌ಟಿಆರ್ ಬರ್ತ್‌ಡೇ: ʻದೇವರʼ ಫಿಯರ್ ಸಾಂಗ್ ಔಟ್‌!

Lok sabha Election 2024
ದೇಶ33 mins ago

Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

Healthy Diet
ಆರೋಗ್ಯ39 mins ago

Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

lr Shivarame gowda prajwal revanna case
ಕ್ರೈಂ58 mins ago

Prajwal Revanna Case: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

Triple Talaq
ದೇಶ1 hour ago

Triple Talaq: ವಾಟ್ಸ್‌ಆ್ಯಪ್‌ ವಾಯ್ಸ್‌ ಮೆಸೇಜ್‌ನಲ್ಲಿ ತ್ರಿವಳಿ ತಲಾಕ್ ನೀಡಿದ ಪತಿ; ದೂರು ದಾಖಲು

rave party electronic city
ಕ್ರೈಂ1 hour ago

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Lok Sabha Election 2024
ದೇಶ1 hour ago

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Job Alert
ಉದ್ಯೋಗ2 hours ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ

Lok Sabha Election
ದೇಶ3 hours ago

Lok Sabha Election: ಇಂದು 5ನೇ ಹಂತದ ಮತದಾನ; ರಾಹುಲ್‌ ಗಾಂಧಿ, ಸ್ಮೃತಿ ಸೇರಿ ಹಲವರ ಭವಿಷ್ಯ ನಿರ್ಧಾರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ18 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ19 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌