Suryakumar Yadav | ಟಿ20 ರ‍್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್‌ ಯಾದವ್‌ - Vistara News

Latest

Suryakumar Yadav | ಟಿ20 ರ‍್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್‌ ಯಾದವ್‌

ನೂತನ ಐಸಿಸಿ ಟಿ20 ರ‍್ಯಾಂಕಿಂಗ್‌ ಪಟ್ಟಿ ಪ್ರಕಟಗೊಂಡಿದ್ದು ಟೀಮ್​ ಇಂಡಿಯಾದ ಸ್ಟಾರ್​ ಬ್ಯಾಟರ್​ ಸೂರ್ಯಕುಮಾರ್​ ಯಾದವ್​ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

VISTARANEWS.COM


on

suryakumar icc t20 ranking
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಐಸಿಸಿ ಪುರುಷರ ಟಿ20 ರ‍್ಯಾಂಕಿಂಗ್‌ ಪಟ್ಟಿ ಬುಧವಾರ ಬಿಡುಗಡೆಮಾಡಿದ್ದು, ಭಾರತದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್(Suryakumar Yadav) ನಂಬರ್ 1 ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಟಿ೨೦ ವಿಶ್ವ ಕಪ್‌ ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ತೋರಿದ ಕಾರಣ ಅವರು ಅಗ್ರಸ್ಥಾನ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದಂತೆ ಅಲೆಕ್ಸ್‌ ಹೇಲ್ಸ್‌ ಕೂಡ ರ‍್ಯಾಂಕಿಂಗ್‌ ಪ್ರಗತಿ ಕಂಡಿದ್ದಾರೆ.

ಅಲೆಕ್ಸ್ ರ‍್ಯಾಂಕಿಂಗ್‌ನಲ್ಲಿ ಏರಿಕೆ

ಭಾರತದ ವಿರುದ್ಧ ಟಿ೨೦ ವಿಶ್ವ ಕಪ್‌ ಸೆಮಿಫೈನಲ್‌ನಲ್ಲಿ 47 ಎಸೆತಗಳಲ್ಲಿ ಅಜೇಯ 86 ರನ್ ಗಳಿಸಿ ಮಿಂಚಿದ್ದ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಅಲೆಕ್ಸ್ ಹೇಲ್ಸ್ 22 ಸ್ಥಾನಗಳ ಭರ್ಜರಿ ಜಿಗಿತ ಕಾಣುವ ಮೂಲಕ ಜೀವನಶ್ರೇಷ್ಠ 12ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ವಿಶ್ವ ಕಪ್‌ ಕೂಡದಲ್ಲಿ 42.40 ಸರಾಸರಿಯಲ್ಲಿ 212 ರನ್ ಗಳಿಸಿ ಮಿಂಚಿದ್ದರು. ಈ ಸಾಧನೆಯಿಂದ ನೂತನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಡ್ತಿ ಪಡೆದಿದ್ದಾರೆ. ಉಳಿದಂತೆ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಕೂಡ ರ‍್ಯಾಂಕಿಂಗ್‌ ಸುಧಾರಣೆ ಕಂಡಿದ್ದು ಮೂರನೇ ಸ್ಥಾನಕ್ಕೆ ಜಿಗಿದಿದ್ದಾರೆ. ದಕ್ಷಿಣ ಆಫ್ರಿಕಾದ ಬ್ಯಾಟರ್ ರಿಲಿ ರೊಸೊ 7, ನ್ಯೂಜಿಲೆಂಡ್‌ನ ಗ್ಲೆನ್‌ ಫಿಲಿಪ್ಸ್ 8ನೇ ಸ್ಥಾನ ಪಡೆದಿದ್ದಾರೆ.

ಕರನ್, ರಶೀದ್‌ಗೂ ಭಡ್ತಿ

ಪಾಕಿಸ್ತಾನದ ವಿರುದ್ಧ ಟಿ20 ವಿಶ್ವ ಕಪ್ ಫೈನಲ್ ಪಂದ್ಯದಲ್ಲಿ ಮಿಂಚಿದ ಇಂಗ್ಲೆಂಡ್​ ತಂಡದ ಸ್ಪಿನ್ನರ್ ಆದಿಲ್ ರಶೀದ್ ಮತ್ತು ವಿಶ್ವ ಕಪ್​ನಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಸ್ಯಾಮ್​ ಕರನ್​ ನೂತನ ರ‍್ಯಾಂಕಿಂಗ್‌ನಲ್ಲಿ ಜಿಗಿತ ಕಂಡಿದ್ದಾರೆ. ರಶೀದ್​ 5 ಸ್ಥಾನಗಳನ್ನು ಏರಿಕೆ ಕಂಡು 3ನೇ ಸ್ಥಾನ ಪಡೆದುಕೊಂಡಿದ್ದಾರೆ. ಸ್ಯಾಮ್ ಕರನ್ ಎರಡು ಸ್ಥಾನಗಳ ಏರಿಕೆ ಕಾಣುವ ಮೂಲಕ ಅಗ್ರ 5ರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಉಳಿದಂತೆ ಲಂಕಾದ ವನಿಂದು ಹಸರಂಗ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ರಶೀದ್ ಖಾನ್ ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ | MS Dhoni | ಈ ಬಾರಿಯೂ ಸಿಎಸ್​ಕೆಗೆ ಮಹೇಂದ್ರ ಸಿಂಗ್​ ಧೋನಿಯೇ ಸಾರಥಿ; ಕೆ.ಎಸ್. ವಿಶ್ವನಾಥನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Latest

Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

Lok Sabha Election 2024: ಲೋಕಸಭಾ ಚುನಾವಣೆ-2024ರ ಎರಡನೇ ಹಂತದ ಮತದಾನ ಶುಕ್ರವಾರ ನಡೆಯಲಿದ್ದು, ಕಣಕ್ಕೆ ಇಳಿದಿರುವ 1,120 ಮಂದಿ ಅಭ್ಯರ್ಥಿಗಳಲ್ಲಿ 10 ಮಂದಿ ಕೋಟ್ಯಾಧಿಪತಿಗಳಲ್ಲಿ ಐವರು ಕರ್ನಾಟಕದವರಾಗಿದ್ದಾರೆ.

VISTARANEWS.COM


on

By

Lok Sabha Election-2024
Koo

ಲೋಕಸಭಾ ಚುನಾವಣೆ-2024ರಲ್ಲಿ (Lok Sabha Election 2024) ಶುಕ್ರವಾರ ನಡೆಯುವ ಮತದಾನ (voting) ಪ್ರಕ್ರಿಯೆಯಲ್ಲಿ ಒಟ್ಟು 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 1,120 ಮಂದಿ ತಮ್ಮ ಅದೃಷ್ಟವನ್ನು ಪರೀಕ್ಷೆಯನ್ನು ಮಾಡಲಿದ್ದಾರೆ. ಈ ಬಾರಿ ಹಲವು ಪ್ರಮುಖ ಅಭ್ಯರ್ಥಿಗಳು ಕಣದಲ್ಲಿ ಇದ್ದು, ಇವರಲ್ಲಿ ಹೆಚ್ಚು ಶ್ರೀಮಂತ (richest) ಅಭ್ಯರ್ಥಿಗಳೂ (candidate) ಸೇರಿದ್ದಾರೆ.

ಶುಕ್ರವಾರ ನಡೆಯುವ ಎರಡನೇ ಹಂತದ ಚುನಾವಣೆಯ ಕಣದಲ್ಲಿರುವ ಕೆಲವು ಶ್ರೀಮಂತ ಅಭ್ಯರ್ಥಿಗಳ ಪಟ್ಟಿಯನ್ನು ಅಸೋಸಿಯೇಷನ್ ​​​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಭಾಗವಹಿಸುತ್ತಿರುವ 1,210 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದ್ದು, 390 ಅಭ್ಯರ್ಥಿಗಳು ‘ಕೋಟ್ಯಧಿಪತಿಗಳು’ ಎಂದು ಹೇಳಿದೆ. ಇವರಲ್ಲಿ ಶೇ. 21ರಷ್ಟು ಅಭ್ಯರ್ಥಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣಗಳಿವೆ.

ಇದನ್ನೂ ಓದಿ: Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!


1. ವೆಂಕಟರಮಣ ಗೌಡ

ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ವೆಂಕಟರಮಣೇಗೌಡ ಅಲಿಯಾಸ್‌ ಸ್ಟಾರ್‌ ಚಂದ್ರು ಈ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. 622 ಕೋಟಿ ರೂ. ಗೂ ಅಧಿಕ ಆಸ್ತಿ ಹೊಂದಿದ್ದಾರೆ.


2. ಡಿ.ಕೆ. ಸುರೇಶ್

ಎರಡನೇ ಸ್ಥಾನವು ಕಾಂಗ್ರೆಸ್‌ನ ಅಭ್ಯರ್ಥಿ ಡಿ.ಕೆ. ಸುರೇಶ್‌ಗೆ ಸೇರಿದೆ. ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರರಾಗಿದ್ದಾರೆ. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಿರುವ ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂ.


3. ಹೇಮಾ ಮಾಲಿನಿ

ಖ್ಯಾತ ನಟಿ ಹೇಮಾ ಮಾಲಿನಿ ಮೂರನೇ ಸ್ಥಾನ ಪಡೆದಿದ್ದು, ಉತ್ತರ ಪ್ರದೇಶದ ಮಥುರಾದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ. ಇವರು 278.9 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.


4. ಸಂಜಯ್ ಶರ್ಮಾ

ಮಧ್ಯಪ್ರದೇಶದ ಹೋಶಂಗಾಬಾದ್‌ನಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ಸಂಜಯ್ ಶರ್ಮಾ ಅವರ ಆಸ್ತಿ 232 ಕೋಟಿ ರೂ.


5. ಎಚ್.ಡಿ. ಕುಮಾರಸ್ವಾಮಿ

ಬಿಜೆಪಿಯೊಂದಿಗೆ ಸಮ್ಮಿಶ್ರವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಮುಖಂಡ ಹಾಗೂ ಮಂಡ್ಯ ಅಭ್ಯರ್ಥಿ ಎಚ್ .ಡಿ. ಕುಮಾರಸ್ವಾಮಿ ಅವರ ಆಸ್ತಿ 217 ಕೋಟಿ ರೂ.


6. ಕನ್ವರ್ ಸಿಂಗ್ ತನ್ವಾರ್

ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರದಿಂದ ಬಿಜೆಪಿಯ ಕನ್ವರ್ ಸಿಂಗ್ ತನ್ವಾರ್ ಕಣಕ್ಕಿಳಿದಿದ್ದು, 214 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


7. ಎಂ ಎಸ್ ರಕ್ಷಾ ರಾಮಯ್ಯ

ಕರ್ನಾಟಕದ ಚಿಕ್ಕಬಳ್ಳಾಪುರದಿಂದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಎಂ.ಎಸ್. ರಕ್ಷಾ ರಾಮಯ್ಯ ಸ್ಪರ್ಧಿಸುತ್ತಿದ್ದು, 169 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


8. ಸುಖಬೀರ್ ಸಿಂಗ್

ಬಿಜೆಪಿಯಿಂದ ಬಂದಿರುವ ಸುಖಬೀರ್ ಸಿಂಗ್ ಜೌನಪುರಿಯಾ ಅವರು ರಾಜಸ್ಥಾನದ ಟೊಂಕ್-ಸವಾಯಿ ಮಾಧೋಪುರದಿಂದ ಸ್ಪರ್ಧಿಸುತ್ತಿದ್ದು, 142 ಕೋಟಿ ರೂ.ಗೂ ಅಧಿಕ ಆಸ್ತಿ ಹೊಂದಿದ್ದಾರೆ.


9. ಪ್ರೊ. ಎಂ ವಿ ರಾಜೀವ್ ಗೌಡ

ಪ್ರೊಫೆಸರ್ ಎಂ.ವಿ. ರಾಜೀವ್ ಗೌಡ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಕರ್ನಾಟಕದ ಬೆಂಗಳೂರು ಉತ್ತರದಿಂದ ಕಣಕ್ಕಿಳಿದಿರುವ ಅವರು 134 ಕೋಟಿಗೂ ಅಧಿಕ ಆಸ್ತಿ ಹೊಂದಿದ್ದಾರೆ.


10, ಉದೈಲಾಲ್ ಅಂಜನಾ

ಟಾಪ್‌ 10ನೇ ಸ್ಥಾನದಲ್ಲಿ ಕಾಂಗ್ರೆಸ್‌ನ ಉದಯಲಾಲ್ ಅಂಜನಾ ಅವರು ರಾಜಸ್ಥಾನದ ಚಿತ್ತೋರ್‌ಗಢದಿಂದ ಸ್ಪರ್ಧಿಸುತ್ತಿದ್ದಾರೆ. ಆಕೆಯ ಆಸ್ತಿ 118 ಕೋಟಿ ರೂ.

Continue Reading

Latest

Deadly Murder: ಬರ್ಗರ್‌ ತಿಂದನೆಂದು ಸ್ನೇಹಿತನನ್ನೇ ಗುಂಡಿಟ್ಟು ಕೊಂದ!

Deadly murder: ಪಾಕಿಸ್ತಾನದ ಕರಾಚಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಸೆಶನ್ಸ್‌ ಕೋರ್ಟ್‌ ಜಡ್ಜ್‌ (Sessions court judge) ನ ಮಗ ಅಲಿ ಕೀರಿಯೋ ಕೊಲೆಯಾದ ದುರ್ದೈವಿ. ಕರಾಚಿಯ ಡಿಫೆನ್ಸ್‌ 5 ನೇ ಏರಿಯಾ(Defence Phase 5 area) ದಲ್ಲಿ ಫೆಬ್ರುವರಿ 8 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಡ್ಯಾನಿಯಲ್‌ ಎಂಬಾತ ಈ ದುಷ್ಕೃತ್ಯ ಎಸಗಿದ ಪಾಪಿ.

VISTARANEWS.COM


on

deadly murder
Koo

ಕರಾಚಿ: ಕೆಲವೊಮ್ಮೆ ಕ್ಷುಲ್ಲಕ ಕಾರಣಕ್ಕೆ ಅದೆಂಥಾ ಅನಾಹುತ ನಡೆಯುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಇಲ್ಲೊಬ್ಬ ಪ್ರೀತಿಯಿಂದ ತನ್ನ ಪ್ರೇಯಸಿಗಾಗಿ ಇಟ್ಟಿದ್ದ ಬರ್ಗರ್‌ (Burger)ನ್ನು ತಿಂದನೆಂದು ಸ್ನೇಹಿತನನ್ನೇ ಬರ್ಬರವಾಗಿ ಕೊಲೆ (Deadly Murder) ಮಾಡಿದ್ದಾನೆ. ಪಾಕಿಸ್ತಾನದ ಕರಾಚಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಸೆಶನ್ಸ್‌ ಕೋರ್ಟ್‌ ಜಡ್ಜ್‌ (Sessions court judge) ನ ಮಗ ಅಲಿ ಕೀರಿಯೋ ಕೊಲೆಯಾದ ದುರ್ದೈವಿ. ಕರಾಚಿಯ ಡಿಫೆನ್ಸ್‌ 5 ನೇ ಏರಿಯಾ (Defence Phase 5 area) ದಲ್ಲಿ ಫೆಬ್ರುವರಿ 8 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಡ್ಯಾನಿಯಲ್‌ ಎಂಬಾತ ಈ ದುಷ್ಕೃತ್ಯ ಎಸಗಿದ ಪಾಪಿ.

ಘಟನೆ ಕುರಿತು ಎಆರ್‌ವೈ ನ್ಯೂಸ್‌ ವರದಿ ಮಾಡಿದ್ದು, ಹಿರಿಯ ಪೊಲೀಸ್‌ ಅಧಿಕಾರಿ ನಜೀರ್‌ ಅಹ್ಮದ್‌ ಪುತ್ರ ಡ್ಯಾನಿಯಲ್‌ನ ತನ್ನ ಪ್ರೇಯಸಿ ಶಾಜಿಯಾಳನ್ನು ತನ್ನ ಮನೆಗೆ ಆಹ್ವಾನಿಸಿದ್ದ. ಈ ವೇಳೆ ಆತನ ಮನೆಯಲ್ಲಿ ಸ್ನೇಹಿತ ಅಲಿ ಕೀರಿಯೋ ಮತ್ತು ಸಹೋದರ ಅಹ್ಮೇರ್‌ ಕೂಡ ಇದ್ರು. ಪ್ರೇಯಸಿ ಜೊತೆ ಸುಮಧುರ ಕ್ಷಣಗಳನ್ನು ಕಳೆಯಬೇಕೆಂದು ಪ್ಲ್ಯಾನ್‌ ಮಾಡಿಕೊಂಡಿದ್ದ ಡ್ಯಾನಿಯಲ್‌ ಆಕೆಗಾಗಿ ಇಷ್ಟವಾದ ಬರ್ಗರನ್ನೂ ಆರ್ಡರ್‌ ಮಾಡಿದ್ದ. ಆದ್ರೆ ಕೀರಿಯೋ ಒಂದು ಬರ್ಗರ್‌ ಒಂದು ಭಾಗವನ್ನು ತಿಂದಿದ್ದ. ಇದನ್ನು ಕಂಡ ಡ್ಯಾನಿಯಲ್‌ ಕೀರಿಯೋ ಮೇಲೆ ಕೆಂಡವಾಗಿದ್ದ.

ಕೀರಿಯೋ ಮೇಲೆ ತೀವ್ರ ಕೋಪಗೊಂಡ ಡ್ಯಾನಿಯಲ್‌ ಆತನ ವಿರುದ್ಧ ಕೂಗಾಡಲು ಶುರು ಮಾಡಿದ್ದ. ಆಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಮಾರಾಮಾರಿ ನಡೆದಿತ್ತು. ಜಗಳ ತಾರಕಕ್ಕೇರುತ್ತಿದ್ದಂತೆ ಡ್ಯಾನಿಯಲ್‌ ಅಲ್ಲೇ ಇದ್ದ ಗಾರ್ಡ್‌ನ ಬಂದೂಕು ಕಿತ್ತು ಕೀರಿಯೋ ಮೇಲೆ ಏಕಾಏಕಿ ಗುಂಡು ಹಾರಿದ್ದಾನೆ. ಗಂಭೀರವಾಗಿ ಗಾಯಗೊಂಡ ಕೀರಿಯೋ ಆಸ್ಪತ್ರೆಗೆ ತಲುಪುವ ಮುನ್ನವೇ ಕೊನೆಯುಸಿರೆಳೆದಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ: Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

ಇನ್ನು ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ತನಿಖಾಧಿಕಾರಿ ತಮ್ಮ ತನಿಖಾ ವರದಿಯನ್ನು ಹಿರಿಯ ಅಧಿಕಾರಿಗಳಿಗೆ ಸಲ್ಲಿಸಿದ್ದು, ಡ್ಯಾನಿಯಲ್‌ ನಜೀರ್‌ನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಇಂಥ ಘೋರ ಕೃತ್ಯ ಎಸಗಿರೋ ಡ್ಯಾನಿಯಲ್‌ಗೆಎ ಕೋರ್ಟ್‌ ಯಾವ ಶಿಕ್ಷೆ ವಿಧಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ವರ್ಷ ಕರಾಚಿಯಲ್ಲಿ ಬರೋಬ್ಬರಿ 56 ದರೋಡೆ ಪ್ರಕರಣಗಳು ದಾಖಲಾಗಿದ್ದು, ಸುಮಾರು 200ಕ್ಕೂ ಅಧಿಕ ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ವರ್ಷ 25 ಪ್ರಕರಣಗಳಲ್ಲಿ 110ಕ್ಕೂ ಅಧಿಕ ಜನ ಬಲಿಯಾದ್ದರು ಎಂದು ವರದಿಯಾಗಿದೆ.

Continue Reading

ವಾಣಿಜ್ಯ

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Anant- Radhika  wedding: ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಇತ್ತೀಚೆಗೆ ಅದ್ದೂರಿಯಾಗಿ ನಡೆದಿದೆ. ಇದಕ್ಕೆ ಕೋಟ್ಯಂತರ ರೂ. ಖರ್ಚು ಮಾಡಿರುವ ಅಂಬಾನಿ ಮಗನ ಮದುವೆ ಕಾರ್ಯಕ್ರಮವನ್ನು ಎಲ್ಲಿ , ಹೇಗೆ, ಎಷ್ಟು ಬಜೆಟ್ ನಲ್ಲಿ ನಡೆಸಲಿದ್ದಾರೆ ಗೊತ್ತೇ? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

Anant-Radhika wedding
Koo

ಮುಂಬಯಿ: ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ (Anant- Radhika  wedding) ಪೂರ್ವ ಕಾರ್ಯಕ್ರಮಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ (social media) ಹೆಚ್ಚು ಸದ್ದು ಮಾಡಿತ್ತು. ಈ ವರ್ಷ ಜುಲೈನಲ್ಲಿ ಇವರ ವಿವಾಹ ಲಂಡನ್‌ನಲ್ಲಿರುವ (London) ಅಂಬಾನಿ ಕುಟುಂಬದ ಸ್ಟೋಕ್ ಪಾರ್ಕ್ ಎಸ್ಟೇಟ್‌ನಲ್ಲಿ ನಡೆಯಲಿದೆ.

ಮಾರ್ಚ್ ತಿಂಗಳ 1ರಿಂದ 3ರವರೆಗೆ ಗುಜರಾತ್‌ನ (gujart) ಜಾಮ್‌ನಗರದಲ್ಲಿ (jamnagar) ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ತಮ್ಮ ವಿವಾಹಪೂರ್ವ ಸಮಾರಂಭವನ್ನು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಿದ್ದರು. ಇದರಲ್ಲಿ ಜಾಗತಿಕ ಟೆಕ್ ಸಿಇಒಗಳು, ಬಾಲಿವುಡ್ ತಾರೆಗಳು, ಪಾಪ್ ಐಕಾನ್‌ಗಳು ಮತ್ತು ರಾಜಕಾರಣಿಗಳು ಭಾಗವಹಿಸಿದ್ದರು.

ಇಶಾ ಅಂಬಾನಿ, ಆಕಾಶ್ ಅಂಬಾನಿ, ಶ್ಲೋಕಾ ಮೆಹ್ತಾ, ಆನಂದ್ ಪಿರಾಮಲ್ ಮತ್ತು ಕೋಕಿಲಾಬೆನ್ ಅಂಬಾನಿ ಸೇರಿದಂತೆ ಇಡೀ ಅಂಬಾನಿ ವಂಶಸ್ಥರು ಮದುವೆಯ ಪೂರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!


ಒಟ್ಟು ಖರ್ಚು

ವಿವಾಹ ಪೂರ್ವ ಕಾರ್ಯಕ್ರಮಗಳಲ್ಲಿ ಅತಿಥಿಗಳನ್ನು ಪಾಪ್ ಐಕಾನ್ ರಿಹಾನ್ನಾ ಅವರು ಸತ್ಕರಿಸಿದರು. ಎರಡು ಗಂಟೆಗಳ ಕಾರ್ಯಕ್ರಮಕ್ಕಾಗಿ ಅವರು 6 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 52 ಕೋಟಿ ರೂ. ಗೂ ಹೆಚ್ಚು ಸಂಭಾವನೆ ಪಡೆದದ್ದು ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು.

ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ 3 ದಿನಗಳ ಸಮಾರಂಭಕ್ಕೆ ಸುಮಾರು 1,260 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಡುಗೆ ಗುತ್ತಿಗೆಯವರಿಗೆ 200 ಕೋಟಿ ರೂ. ನೀಡಲಾಗಿದೆ ಎನ್ನಲಾಗಿದೆ.

ಫೋರ್ಬ್ಸ್ ಪ್ರಕಾರ 116 ಶತಕೋಟಿ ಡಾಲರ್ ಅಂದರೆ ಸುಮಾರು 9 ಲಕ್ಷ ಕೋಟಿ ರೂ. ಗೂ ಹೆಚ್ಚು ನಿವ್ವಳ ಮೌಲ್ಯದೊಂದಿಗೆ ಮುಖೇಶ್ ಅಂಬಾನಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು. ಅಂಬಾನಿ ಕುಟುಂಬವು ತಮ್ಮ ಕಿರಿಯ ಮಗನ ಮದುವೆಯ ಪೂರ್ವ ಸಂಭ್ರಮಕ್ಕಾಗಿ 1,200 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ. ಮಗನ ಮದುವೆಯನ್ನು ಅದ್ದೂರಿಯಾಗಿ ನೆರವೇರಿಸಲು ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಧಾರಾಳವಾಗಿ ಹಣ ಖರ್ಚು ಮಾಡಿದ್ದಾರೆ.


ಮದುವೆ ಖರ್ಚು ಎಷ್ಟಿರಬಹುದು?

ವರದಿಗಳ ಪ್ರಕಾರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ 1200- 1500 ಕೋಟಿ ರೂಪಾಯಿ ವೆಚ್ಚವಾಗಲಿದೆ. ದಂಪತಿಗಳು ಲಂಡನ್‌ನಲ್ಲಿ ವಿವಾಹವಾಗಲು ಸಿದ್ಧರಾಗಿದ್ದಾರೆ ಮತ್ತು ಅಬುಧಾಬಿಯಲ್ಲಿ ಸಂಗೀತ/ ಕಾಕ್‌ಟೈಲ್ ಕಾರ್ಯಕ್ರಮವನ್ನು ಸಹ ನಡೆಸಲು ಸಿದ್ಧರಾಗಿದ್ದಾರೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ಪೂರ್ವದಲ್ಲಿ ಹೂವಿನ ಅಲಂಕಾರವನ್ನು ಕಿಮ್ ಕಾರ್ಡಶಿಯಾನ್ ಮತ್ತು ಅವರ ಕುಟುಂಬ ನಡೆಸಿತ್ತು. ಕಾರ್ಯಕ್ರಮದ ಕೆಲಸಗಳನ್ನು ಹೆಸರುವಾಸಿಯಾದ ಜೆಫ್ ಲೀಥಮ್ ಅವರು ಮಾಡಿದ್ದಾರೆ. ಅವರು ಅಂಬಾನಿ ಮದುವೆಯಲ್ಲೂ ಅಲಂಕಾರವನ್ನು ಇವರಿಗೆ ನೀಡುವ ಸಾಧ್ಯತೆ ಇದೆ.


ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ 2023ರ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಈ ವರ್ಷ ಜುಲೈನಲ್ಲಿ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಇದು ಈ ವರ್ಷದ ಅತಿ ದೊಡ್ಡ, ಅತ್ಯಂತ ಐಷಾರಾಮಿ ಮತ್ತು ಅತಿರಂಜಿತ ವಿವಾಹಗಳಲ್ಲಿ ಒಂದಾಗಿದೆ ಎನ್ನಲಾಗುತ್ತಿದೆ.

Continue Reading

ಆಟೋಮೊಬೈಲ್

Xiaomi EV: ತಿಂಗಳಲ್ಲಿ 75 ಸಾವಿರ ಆರ್ಡರ್ ಸ್ವೀಕರಿಸಿದ ಕ್ಸಿಯೋಮಿ ಎಸ್‌ಯು 7 ಎಲೆಕ್ಟ್ರಿಕ್‌ ಕಾರು; ಟೆಸ್ಲಾಗಿಂತ ಅಗ್ಗ!

Xiaomi EV: ಟೆಕ್ ದೈತ್ಯ ಕಂಪೆನಿ ಚೀನಾದ ಕ್ಸಿಯೋಮಿ (Xiaomi) ಆಟೋ ಉದ್ಯಮವನ್ನು ಪ್ರವೇಶಿಸಿದ್ದು, ಕೇವಲ ಒಂದು ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಆರ್ಡರ್ ಸ್ವೀಕರಿಸಿದೆ. ಕ್ಸಿಯೋಮಿ ಇವಿ ಎಸ್ ಯು7 ವರ್ಷದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಾಹನ ಮಾರಾಟ ಗುರಿಯನ್ನು ಹೊಂದಿದೆ.

VISTARANEWS.COM


on

By

Xiaomi EV
Koo

ಸ್ಮಾರ್ಟ್‌ಫೋನ್ (smart phone) ತಯಾರಿಕ ಟೆಕ್ ದೈತ್ಯ ಕಂಪನಿ ಚೀನಾದ (china) ಕ್ಸಿಯೋಮಿ (Xiaomi) ಇದೀಗ ಆಟೋ (auto) ಉದ್ಯಮವನ್ನು ಪ್ರವೇಶಿಸಲು ಸಜ್ಜಾಗಿದ್ದು, ಕ್ಸಿಯೋಮಿ ಈ ತಿಂಗಳಲ್ಲಿ ತನ್ನ ಹೊಸ ಎಸ್ ಯು 7 (Xiaomi EV) ಎಲೆಕ್ಟ್ರಿಕ್ ಸೆಡಾನ್‌ಗಾಗಿ 75,723 ಆರ್ಡರ್‌ಗಳನ್ನು ಪಡೆದುಕೊಂಡಿದೆ ಮತ್ತು ಜೂನ್ ವೇಳೆಗೆ 10,000 ಯೂನಿಟ್‌ಗಳನ್ನು ತಲುಪಿಸಲು ಯೋಜನೆ ರೂಪಿಸಿದೆ ಎಂದು ಕ್ಸಿಯೋಮಿ ಸಂಸ್ಥಾಪಕ ಲೀ ಜುನ್ ತಿಳಿಸಿದ್ದಾರೆ.

ಬೀಜಿಂಗ್ (Beijing) ಆಟೋ ಶೋನ ಮೊದಲ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿತರಣೆ ಗುರಿಯು ಎಲೆಕ್ಟ್ರಿಕ್ ವೆಹಿಕಲ್ (EV) ಸ್ಟಾರ್ಟ್‌ಅಪ್‌ಗಾಗಿ ಹೊಸ ದಾಖಲೆಯನ್ನು ಸ್ಥಾಪಿಸುತ್ತದೆ ಎಂದು ಹೇಳಿದರು.

ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಆರ್ಡರ್ ಸ್ವೀಕರಿಸಲು ಪ್ರಾರಂಭಿಸಲಾಗಿದ್ದು, ಮರುಪಾವತಿಸಲಾಗದ ಠೇವಣಿಗಳೊಂದಿಗೆ 75,೦೦೦ಕ್ಕೂ ಹೆಚ್ಚು SU7 ನ ಆರ್ಡರ್‌ಗಳನ್ನು ಸ್ವೀಕರಿಸಲಾಗಿದೆ. ಕೇವಲ ಒಂದು ತಿಂಗಳಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಆರ್ಡರ್ ಸಿಕ್ಕಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Innova Hycross: ಇನ್ನೋವಾ ಹೈಕ್ರಾಸ್ ಪೆಟ್ರೋಲ್ GX (O) ಗ್ರೇಡ್ ಬಿಡುಗಡೆ; ದರ ಎಷ್ಟು?


ವರ್ಷದಲ್ಲಿ 1 ಲಕ್ಷ ಮಾರಾಟ ಗುರಿ

ಕ್ಸಿಯೋಮಿ ಈ ವರ್ಷ ಎಸ್ ಯು7ಗಾಗಿ 1,00,000ಕ್ಕೂ ಹೆಚ್ಚು ವಿತರಣೆ ಗುರಿಯನ್ನು ಹೊಂದಿದೆ. ಮುಂದಿನ ಮೂರು ವರ್ಷಗಳವರೆಗೆ ಚೀನೀ ಮಾರುಕಟ್ಟೆಯ ಮೇಲೆ ಸ್ಥಿರವಾದ ಬೇಡಿಕೆಯನ್ನು ಉಳಿಸಿಕೊಳ್ಳಲು ಕಂಪನಿ ಉದ್ದೇಶಿಸಿದೆ ಎಂದು ಲೀ ತಿಳಿಸಿದರು.

ಮೇ ಅಂತ್ಯಕ್ಕೆ ಪ್ರೊ ಮಾದರಿ ಪರಿಚಯ

ಬೇಡಿಕೆಯನ್ನು ಪೂರೈಸಲು ಕ್ಸಿಯಾವೋಮಿ SU7ನ ಪ್ರಮಾಣಿತ ಮತ್ತು ಮ್ಯಾಕ್ಸ್ ಆವೃತ್ತಿಗಳ ವಿತರಣೆಯನ್ನು ನಿಗದಿತ ಸಮಯಕ್ಕಿಂತ ಹನ್ನೆರಡು ದಿನಗಳ ಮುಂಚಿತವಾಗಿ ಪೂರ್ಣಗೊಳಿಸಿದೆ. ಮೇ ಅಂತ್ಯದ ವೇಳೆಗೆ ಪ್ರೊ ಮಾದರಿಗಳನ್ನು ಪರಿಚಯಿಸಲು ಕಂಪೆನಿಯು ಯೋಜನೆ ಹಾಕಿಕೊಂಡಿದೆ.

ಬೆಲೆ ಕಡಿತ, ಸಬ್ಸಿಡಿ ಘೋಷಣೆ

ಟೆಸ್ಲಾದ ಮಾಡೆಲ್ 3 ಗೆ ಪೈಪೋಟಿ ನೀಡುವ SU7ನ ಚೀನಾದ ಬೃಹತ್ ವಾಹನ ಮಾರುಕಟ್ಟೆಯಲ್ಲಿ EV ಬೆಲೆಗೆ ಪೈಪೋಟಿ ನೀಡಲಿದೆ. Xiaomi ಮಾರುಕಟ್ಟೆ ಪ್ರವೇಶಕ್ಕೆ ಮುಂಚಿತವಾಗಿಯೇ ವಾಹನ ತಯಾರಕರು ಬೆಲೆ ಕಡಿತ ಮತ್ತು ಸಬ್ಸಿಡಿಗಳನ್ನು ಘೋಷಿಸಿದ್ದಾರೆ.


Xiaomiಯ ತಯಾರಿಕೆಯಲ್ಲಿ 6,000 ಆಟೋ ತಂಡವು ಕಾರ್ಯ ನಿರ್ವಹಿಸುತ್ತಿದ್ದು, ಇದು ಸಾಕಾಗುವುದಿಲ್ಲ. ಕಂಪೆನಿಯ ಶೀಘ್ರದಲ್ಲೇ ಹೊಸ ಪ್ರತಿಭೆಗಳನ್ನು ತನ್ನೊಂದಿಗೆ ಸೇರಿಸಿಕೊಳ್ಳಲಿದೆ. ಆಟೋಮೋಟಿವ್ ಕ್ಷೇತ್ರದಲ್ಲಿ ಆಸಕ್ತರಿರುವವರು ಕಂಪೆನಿ ಸೇರಲು ಈ ಸಂದರ್ಭದಲ್ಲಿ ಜಾಗತಿಕ ಪ್ರತಿಭೆಗಳಿಗೆ ಕರೆ ನೀಡಿದರು.

ಟೆಸ್ಲಾಗಿಂತ ಅಗ್ಗ

ಎಸ್ ಯು7 ಅನ್ನು ಸ್ಪೀಡ್ ಅಲ್ಟ್ರಾ 7 ಎಂದೂ ಕರೆಯುತ್ತಾರೆ. ಇದು ಸ್ಪರ್ಧಾತ್ಮಕ ಚೈನೀಸ್ ಇವಿ ಮಾರುಕಟ್ಟೆಯನ್ನು 30,000 ಡಾಲರ್ ಗಿಂತ ಕಡಿಮೆ ಬೆಲೆಯ ಮೂಲ ಮಾದರಿಯೊಂದಿಗೆ ಪ್ರವೇಶಿಸಲಿದೆ. ಇದು ಚೀನಾದಲ್ಲಿ ಟೆಸ್ಲಾ ಮಾದರಿ 3ಕ್ಕಿಂತ ಅಗ್ಗವಾಗಿ ಕೈಗೆಟುಕುವ ದರದಲ್ಲಿ ಲಭ್ಯವಾಗಲಿದೆ.


5,000 ಉತ್ಪಾದನೆ

Xiaomi ಈಗಾಗಲೇ 5,000 SU7 ವಾಹನಗಳನ್ನು ಉತ್ಪಾದಿಸಿದೆ. ಇದನ್ನು “ಸ್ಥಾಪಕರ ಆವೃತ್ತಿ” ಎಂದು ಕರೆಯಲಾಗುತ್ತದೆ. ವಿಶೇಷ ಆವೃತ್ತಿ, EV ಯ ಸೀಮಿತ ಉತ್ಪಾದನಾ ಆವೃತ್ತಿಯು ಆರಂಭಿಕ ಖರೀದಿದಾರರಿಗೆ ಹೆಚ್ಚುವರಿ ಬಿಡಿಭಾಗಗಳೊಂದಿಗೆ ಬರಲಿದೆ.

SU7 ವಾಹನಗಳ ಆರಂಭಿಕ ಬ್ಯಾಚ್‌ನ ವಿತರಣೆಗಳು ಶೀಘ್ರದಲ್ಲೇ 28 ಚೀನೀ ನಗರಗಳಲ್ಲಿ ಪ್ರಾರಂಭವಾಗಲಿದೆ ಎಂದು ಲೀ ಜುನ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು.

Xiaomi SU7 ಆಟೋ ವ್ಯವಹಾರದಲ್ಲಿ 10 ಶತಕೋಟಿ ಡಾಲರ್ ಹೂಡಿಕೆ ಮಾಡಲಾಗಿದೆ. ಪ್ರಾರಂಭದಲ್ಲಿ ಕಂಪೆನಿ ಸಲ್ಪ ನಷ್ಟ ಅನುಭವಿಸಬೇಕಾಗುತ್ತದೆ. ಎಂದು ಕೆಲವು ವಿಶ್ಲೇಷಕರು ಹೇಳಿದ್ದಾರೆ. Xiaomi ಗಮನಾರ್ಹ ಪ್ರಮಾಣದ ಹಣವನ್ನು ಕಳೆದುಕೊಳ್ಳುತ್ತಾರೆ. ಯೋಜಿತ ಮಾರಾಟದ ಪರಿಮಾಣದ ಆಧಾರದ ಮೇಲೆ 4.1 ಶತಕೋಟಿ ಯುವಾನ್ ಅಥವಾ ಸುಮಾರು 566.82 ಮಿಲಿಯನ್ ಡಾಲರ್ ನಷ್ಟವಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

Continue Reading
Advertisement
Lok Sabha Election-2024
Latest1 min ago

Lok Sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರುವ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ಐವರು!

Viral Video
ವೈರಲ್ ನ್ಯೂಸ್7 mins ago

Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

deadly murder
Latest31 mins ago

Deadly Murder: ಬರ್ಗರ್‌ ತಿಂದನೆಂದು ಸ್ನೇಹಿತನನ್ನೇ ಗುಂಡಿಟ್ಟು ಕೊಂದ!

Chemistry paper leak case
ಕೋರ್ಟ್32 mins ago

Chemistry paper leak : ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; 17 ಆರೋಪಿಗಳು ಖುಲಾಸೆ

Ranji Trophy
ಪ್ರಮುಖ ಸುದ್ದಿ54 mins ago

Ranji Trophy : ರಣಜಿ ಟ್ರೋಫಿ ಆಡುವವರಿಗೆ ಇನ್ನು ಮುಂದೆ ಒಂದು ಕೋಟಿ ರೂ. ವೇತನ!

Fire Tragedy
ದೇಶ1 hour ago

Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

World Malaria Day April 25
ಆರೋಗ್ಯ1 hour ago

World Malaria Day: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಿಕೊಳ್ಳುವುದು ಹೇಗೆ?

Bismah Maroof
ಕ್ರೀಡೆ1 hour ago

Bismah Maroof : ಹೆಣ್ಣು ಮಗುವಿನ ಸಮೇತ ಆಡಲು ಹೋಗುತ್ತಿದ್ದ ಪಾಕಿಸ್ತಾನದ ಮಹಿಳಾ ಕ್ರಿಕೆಟರ್ ನಿವೃತ್ತಿ

Modi in Karnataka Pm Modi to visit Karnataka on April 28 and 29 Raichur conference maybe cancelled
Lok Sabha Election 20241 hour ago

Modi in Karnataka: ಏಪ್ರಿಲ್‌ 28 – 29ರಂದು ರಾಜ್ಯಕ್ಕೆ ಮೋದಿ; ರಾಯಚೂರು ಸಮಾವೇಶ ರದ್ದು?

Lok Sabha Election
ಕರ್ನಾಟಕ1 hour ago

Lok Sabha Election: ನಾಳೆ ಮೊದಲ ಹಂತದ ಮತದಾನ; ಬೆಂಗಳೂರಿನಲ್ಲಿ ಏನಿರತ್ತೆ? ಏನಿರಲ್ಲ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ2 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ5 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20247 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌