T20 Ind v/s Sa | 3ನೇ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆ ಸಾಧ್ಯತೆ - Vistara News

ಕ್ರಿಕೆಟ್

T20 Ind v/s Sa | 3ನೇ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆ ಸಾಧ್ಯತೆ

T20 Ind v/s Sa | ಮೂರನೇ ಪಂದ್ಯದಲ್ಲಿ ಭಾರತ ತಂಡವು ಏನದಾರೂ ಬಹತ್ವದ ಬದಲಾವಣೆ ಮಾಡಲಿದೆಯೇ? ಹೊಸಬರಿಗೆ ಅವಕಾಶ ಕೊಟ್ಟು ಪ್ರಯೋಗ ಮಾಡುತ್ತಾರಾ ಕೋಚ್ ದ್ರಾವಿಡ್ ಹಾಗೂ ನಾಯಕ ರಿಷಭ್‌ ಪಂತ್?

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: T20 Ind v/s Sa | ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಮೂರನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮೊದಲ ಎರಡೂ ಪಂದ್ಯಗಳನ್ನು ಸೋತಿರುವ ಭಾರತ ಮೂರನೇ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಹೀಗಾಗಿ ಭಾರತ ತಂಡದಲ್ಲಿ ಮೂರು ಬದಲಾವಣೆಯ ನಿರೀಕ್ಷೆ ಇದೆ.

T20 Ind v/s Sa

ಮೊದಲ ಪಂದ್ಯವನ್ನು ಸೋತ ಬಳಿಕ ಭಾರತದ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಆದರೆ ಎರಡೂ ಪಂದ್ಯದಲ್ಲಿ ಸತತವಾಗಿ ಉತ್ತಮ ಆಟವನ್ನು ಪ್ರದರ್ಶಿಸುವಲ್ಲಿ ಕೆಲವರು ವಿಫಲರಾಗಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಭಾರತ ತಂಡ ಭಾರಿ ಒದ್ದಾಟವನ್ನೇ ಮಾಡುತ್ತಿದೆ. ಎರಡನೇ ಪಂದ್ಯದಲ್ಲಿ ಭುವನೇಶ್ವರ್‌ ಕುಮಾರ್‌ ನಾಲ್ಕು ಘಟಾನುಘಟಿಗಳ ವಿಕೆಟ್‌ ಪಡೆದು ಭಾರತಕ್ಕೆ ಮುನ್ನಡೆ ಒದಗಿಸಿದರೂ ಸ್ಪಿನ್ನರ್‌ಗಳು ಅದರ ಲಾಭ ಎತ್ತಲಾಗದೆ ನಿರಾಸೆ ಮೂಡಿಸಿದ್ದರು.

ನಿರಾಸೆ ಮೂಡಿಸಿದ ಋತುರಾಜ್‌
ಐಪಿಎಲ್‌ನಲ್ಲಿ ಅಷ್ಟೇನೂ ಉತ್ತಮ ಪ್ರದರ್ಶನ ತೋರಿಸದ ಇಶಾಕ್‌ ಕಿಶನ್‌ ಕಳೆದ ಎರಡೂ ಪಂದ್ಯದಲ್ಲಿ ಒಳ್ಳೆಯ ಆರಂಭವನ್ನು ನೀಡಿದ್ದಾರೆ. ಮೊದಲ ಪಂದ್ಯದಲ್ಲಿ ರೋಚಕ ಅರ್ಧಶತಕ, ಹಾಗೂ 2ನೇ ಪಂದ್ಯದಲ್ಲಿ 34 ರನ್‌ ಗಳಿಸಿ ಮಿಂಚಿದ್ದರು. ಆದರೆ, ನಿರಾಸೆ ಮೂಡಿಸಿದವರು ಋತುರಾಜ್‌ ಗಾಯಕ್ವಾಡ್‌. ಐಪಿಎಲ್‌ ಕೊನೆಯ ಕೆಲವು ಪಂದ್ಯಗಳಲ್ಲಿ ಅದ್ಭುತವಾದ ಲಯವನ್ನು ಕಂಡುಕೊಂಡಿದ್ದ ಅವರಿಂದ ತಂಡ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತಿದೆ. ಮೊದಲ ಪಂದ್ಯದಲ್ಲಿ ಸ್ವಲ್ಪ ಚೆನ್ನಾಗಿ ಆಡಿದರೂ ಎರಡನೇ ಪಂದ್ಯದಲ್ಲಿ ಒಂದು ರನ್‌ ಗೆ ಔಟಾದರು. ಮೂರನೇ ಪಂದ್ಯದಲ್ಲಿ ಅವರಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ. ನಿಜವೆಂದರೆ, ಅವರನ್ನು ಬಿಟ್ಟು ಇನಿಂಗ್ಸ್‌ ಓಪನ್‌ ಮಾಡುವ ಇನ್ನೊಬ್ಬ ಆಟಗಾರ ಸದ್ಯಕ್ಕೆ ತಂಡದಲ್ಲಿಲ್ಲ!

ಶ್ರೇಯಸ್‌ ಅಯ್ಯರ್‌, ಹಾರ್ದಿಕ್‌ ಪಾಂಡ್ಯ, ರಿಷಭ್‌ ಪಂತ್: ಮಧ್ಯಮ ಕ್ರಮಾಂಕದಲ್ಲಿರುವ ಈ ಮೂವರನ್ನು ಬದಲಾಯಿಸುವುದು ಸಾಧ್ಯವಿಲ್ಲ. ಯಾಕೆಂದರೆ, ಇವರು ಬೆನ್ನೆಲುಬು. ಹಾರ್ದಿಕ್‌ ಪಾಂಡ್ಯ ಅವರು ಶ್ರೇಷ್ಠ ಆಲ್‌ ರೌಂಡರ್‌. ಆದರೆ, ಅವರಿಂದ ಉತ್ತಮ ಆಟ ಈ ಬಾರಿ ಕಂಡುಬಂದಿಲ್ಲ. ಆಡುತ್ತಾರೆ ಎಂಬ ನಿರೀಕ್ಷೆಯಷ್ಟೇ ಇದೆ.

ಹಾಗಿದ್ದರೆ ಮೂರು ಬದಲಾವಣೆ ಏನು?

ಸಾಧ್ಯತೆ ನಂ.1: ದಿನೇಶ್‌ ಕಾರ್ತಿಕ್‌ ಮುಂದೆ

ಎರಡನೇ ಪಂದ್ಯದಲ್ಲಿ ಅಕ್ಷರ್‌ ಪಟೇಲ್‌ ಅವರನ್ನು ದಿನೇಶ್‌ ಕಾರ್ತಿಕ್‌ಗಿಂತ ಮೊದಲು ಆಡಲು ಇಳಿಸಿದ್ದು ಭಾರಿ ಆಕ್ಷೇಪಕ್ಕೆ ಕಾರಣವಾಗಿತ್ತು. ದಿನೇಶ್‌ ಕಾರ್ತಿಕ್‌ ಅವರನ್ನು ಕೇವಲ ಫಿನಿಷರ್‌ ಎಂದು ಟ್ರೀಟ್‌ ಮಾಡದೆ ಉಪಯುಕ್ತ ಆಟಗಾರನಾಗಿ ಬಳಸಿಕೊಳ್ಳಬೇಕು ಎಂಬ ಬೇಡಿಕೆ ಇದೆ. ಹೀಗಾಗಿ ಅವರು ಈ ಬಾರಿ ಕ್ರಮಾಂಕದಲ್ಲಿ ಮುಂಬಡ್ತಿ ಪಡೆಯುವ ನಿರೀಕ್ಷೆ ಇದೆ. ದಿನೇಶ್‌ ಕಾರ್ತಿಕ್‌ ಒಬ್ಬ ಅದ್ಭುತ ಆಟಗಾರ ಎಂಬುದು ಸಾಬೀತು ಮಾಡುತ್ತಾ ಬಂದಿದ್ದಾರೆ. ಈಗಿರುವ ತಂಡದಲ್ಲಿ ಹೆಚ್ಚು ಅನುಭವ ಇರುವ ಆಟಗಾರ ಕೂಡ ಹೌದು. ಅನಿವಾರ್ಯ ಸಂದರ್ಭದಲ್ಲಿ ಆನ್‌ ಫೀಲ್ಡ್‌ ತೀರ್ಮಾನಗಳನ್ನು ಕೈಗೊಳ್ಳಲು ರಿಷಭ್‌ಗೆ ಸಲಹೆ ನೀಡಲು ಸಮರ್ಥರಾದವರು.

ಸಾಧ್ಯತೆ ನಂ. 2: ಸ್ಪಿನ್‌ನಲ್ಲಿ ಈ ಮೂವರಲ್ಲಿ ಒಬ್ಬರು ಯಾರು?

ಯುಜ್ವೇಂದ್ರ ಚಾಹಲ್‌ಗೆ ಸಾಥ್‌ ನೀಡುವ ಮತ್ತೋರ್ವ ಸ್ಪಿನ್ನರ್ ಅಕ್ಷರ್‌ ಪಟೇಲ್. ಆದರೆ ಅಕ್ಷರ್‌ ಪಟೇಲ್‌ ಅವರಿಂದ ಎರಡೂ ಪಂದ್ಯದಲ್ಲಿ ಸಮಾಧಾನಕರ ಆಟ ಕಂಡುಬಂದಿಲ್ಲ. ಮೊದಲ ಪಂದ್ಯದಲ್ಲಿ ಕೇವಲ 1 ವಿಕೆಟ್‌ ಪಡೆದಿದ್ದರು ಹಾಗು 4 ಓವರ್‌ಗೆ 40 ರನ್‌ ನೀಡಿದ್ದರು. ಎರಡನೇ ಪಂದ್ಯದಲ್ಲಂತೂ 1 ಓವರ್‌ಗೆ 19 ರನ್‌ ನೀಡಿದ ದುಬಾರಿಯಾಗಿದ್ದರು! ಅವರ ಬದಲು ಬ್ಯಾಟಿಂಗ್‌ ಆಲ್‌ರೌಂಡರ್‌ ಆದ ದೀಪಕ್‌ ಹೂಡ ಸ್ಥಾನ ಪಡೆಯಬಹುದು. ಇಲ್ಲದಿದ್ದರೆ ಇದು ರವಿ ಬಿಶ್ನೊಯ್‌ಗೆ ಕೂಡ ಇದು ಒಂದು ಅವಕಾಶವಾಗಬಹುದು. ಇಬ್ಬರೂ ನೆಟ್‌ನಲ್ಲಿ ಪರಿಶ್ರಮ ಹಾಕುತ್ತಿರುವುದು ಕಂಡುಬಂದಿದೆ.

ಸಾಧ್ಯತೆ 3: ವೇಗಕ್ಕೆ ಉಮ್ರಾನ್‌ ಮಲ್ಲಿಕ್‌?

ಅವೇಶ್‌ ಖಾನ್ ಎರಡೂ ಪಂದ್ಯದಲ್ಲಿ ವಿಕೆಟ್‌ ಪಡೆಯಲು ವಿಫಲರಾಗಿದ್ದಾರೆ. ಅಲ್ಲದೆ, ಎರಡು ಪಂದ್ಯದಲ್ಲಿ ಒಟ್ಟು 7 ಓವರ್‌ಗೆ ಒಟ್ಟು 52 ರನ್‌ ನೀಡಿದ್ದಾರೆ. ತಂಡದಲ್ಲಿ ಹೊಸ ಪ್ರಯೋಗ ಮಾಡುವ ನಿಟ್ಟಿನಲ್ಲಿ ಅರ್ಷದೀಪ್‌ ಸಿಂಗ್‌ ಅಥವಾ ಉಮ್ರಾನ್‌ ಮಲ್ಲಿಕ್‌ ಅವಕಾಶ ಪಡೆಯಬಹುದು. ಐಪಿಎಲ್‌ನಲ್ಲಿ ಅತ್ಯಂತ ವೇಗದ ಬೌಲ್‌ ಮಾಡಿ ದಾಖಲೆ ಬರೆದ ಉಮ್ರಾನ್‌ ಮಲ್ಲಿಕ್‌ ಬಗ್ಗೆ ಹೆಚ್ಚಿನ ಭರವಸೆಯಿದೆ. ನೆಟ್‌ನಲ್ಲಿಯೂ ಅತ್ಯುತ್ತಮ ಆಟವಾಡುತ್ತಿದ್ದು, ಎಲ್ಲರ ಗಮನ ಸೆಳೆದಿದ್ದಾರೆ.

ಹಾಗಿದ್ದರೆ ಅಂತಿಮ 11 ಹೇಗಿರಬಹುದು?

ಇಷಾನ್‌ ಕಿಶನ್‌, ಋತುರಾಜ್‌ ಗಾಯಕ್ವಾಡ್‌, ಶ್ರೇಯಸ್‌ ಅಯ್ಯರ್‌, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ದಿನೇಶ್‌ ಕಾರ್ತಿಕ್‌, ದೀಪಕ್‌ ಹೂಡ, ಹರ್ಷಲ್‌ ಪಟೇಲ್‌, ಯುಜ್ವೇಂದ್ರ ಚಾಹಲ್‌, ಭುವನೇಶ್ವರ್‌ ಕುಮಾರ್, ಉಮ್ರಾನ್‌ ಮಲ್ಲಿಕ್.

ಇದನ್ನೂ ಓದಿ: T20 Ind v/s SA |‌ ಪಂದ್ಯ ಸೋಲಲು ಕಾರಣವೇನು? ಪಂತ್‌ ತೀರ್ಮಾನವೋ, ಬೌಲರ್ಸ್‌ ವೈಫಲ್ಯವೋ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Devon Thomas: ಟಿ20 ವಿಶ್ವಕಪ್​ಗೂ ಮುನ್ನ ವಿಂಡೀಸ್​ ಬ್ಯಾಟರ್​ಗೆ 5 ವರ್ಷ ನಿಷೇಧ ಹೇರಿದ ಐಸಿಸಿ

Devon Thomas: ವಿಂಡೀಸ್​ ಪರ 2009 ರಿಂದ 2022 ರವರೆಗೆ ಮೂರು ಮಾದರಿಯ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿರುವ ಥಾಮಸ್ ಒಟ್ಟು 34(1 ಟೆಸ್ಟ್​, 21 ಏಕದಿನ, 12 ಟಿ20) ಪಂದ್ಯಗಳನ್ನು ಆಡಿ 320 ರನ್​ ಗಳಿಸಿದ್ದಾರೆ. 2022ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧ ಕೊನೆಯ ಬಾರಿ ಟೆಸ್ಟ್​ ಮತ್ತು ಏಕದಿನ ಪಂದ್ಯಗಳನ್ನಾಡಿದ್ದರು.

VISTARANEWS.COM


on

Devon Thomas
Koo

ದುಬೈ: ವೆಸ್ಟ್​ ಇಂಡೀಸ್​(West Indies) ತಂಡದ ಡೆವೊನ್ ಥಾಮಸ್(Devon Thomas) ಅವರನ್ನು ಐದು ವರ್ಷಗಳ ಕಾಲ ಕ್ರಿಕೆಟ್‌ನಿಂದ ನಿಷೇಧಿಸಲಾಗಿದೆ. ಭ್ರಷ್ಟಾಚಾರ ವಿರೋಧಿ ನಿಯಮಗಳ ಏಳು ಉಲ್ಲಂಘನೆಗಳನ್ನು ಒಪ್ಪಿಕೊಂಡ ಬಳಿಕ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ICC) ಈ ನಿರ್ಧಾರ ಕೈಗೊಂಡಿದೆ. ಈ ಶಿಕ್ಷೆಯು ಒಂದು ವರ್ಷ ಪೂರ್ವಾನ್ವಯವಾಗಿದೆ ಎಂದು ಪರಿಗಣಿಸಲಾಗಿದೆ ಎಂದು ಐಸಿಸಿ ತಿಳಿಸಿದೆ.

ವಿಂಡೀಸ್​ ಪರ 2009 ರಿಂದ 2022 ರವರೆಗೆ ಮೂರು ಮಾದರಿಯ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿರುವ ಥಾಮಸ್ ಒಟ್ಟು 34(1 ಟೆಸ್ಟ್​, 21 ಏಕದಿನ, 12 ಟಿ20) ಪಂದ್ಯಗಳನ್ನು ಆಡಿ 320 ರನ್​ ಗಳಿಸಿದ್ದಾರೆ. 2022ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧ ಕೊನೆಯ ಬಾರಿ ಟೆಸ್ಟ್​ ಮತ್ತು ಏಕದಿನ ಪಂದ್ಯಗಳನ್ನಾಡಿದ್ದರು.

34 ವರ್ಷದ ಥಾಮಸ್, ಕೆರಿಬಿಯನ್ ಪ್ರೀಮಿಯರ್ ಲೀಗ್, ಲಂಕಾ ಪ್ರೀಮಿಯರ್ ಲೀಗ್ ಮತ್ತು ಅಬುಧಾಬಿ ಟಿ10 ಎಂಬ ಮೂರು ಪ್ರತ್ಯೇಕ ಪಂದ್ಯಾವಳಿಗಳಲ್ಲಿ ಅಪರಾಧಗಳನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರಲ್ಲಿ ಶ್ರೀಲಂಕಾ ಮೂಲದ ಪಂದ್ಯಾವಳಿಯಲ್ಲಿ ಮ್ಯಾಚ್-ಫಿಕ್ಸಿಂಗ್ ಯತ್ನಗಳಲ್ಲಿ ಭಾಗಿಯಾಗಲು ಸಂಚು ರೂಪಿಸಿದ್ದಕ್ಕಾಗಿ ತಾನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವುದು ತಿಳಿದುಬಂದಿದೆ.

ಸ್ಯಾಮುಯೆಲ್ಸ್​ಗೆ 6 ವರ್ಷ ನಿಷೇಧ

ಭ್ರಷ್ಟಾಚಾರ ನಿಗ್ರಹ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವೆಸ್ಟ್ ಇಂಡೀಸ್​ ತಂಡದ ಮಾಜಿ ಆಟಗಾರ ಮರ್ಲಾನ್ ಸ್ಯಾಮುಯೆಲ್ಸ್(Marlon Samuels) ಅವರನ್ನು ಆರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಎಲ್ಲ ಮಾದರಿಯ ಕ್ರಿಕೆಟ್‌ನಿಂದ ಕಳೆದ ವರ್ಷ ನಿಷೇಧಿಸಿತ್ತು.

2016ರಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡ ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ಸ್ಯಾಮುಯೆಲ್ಸ್ ಪ್ರಧಾನ ಪಾತ್ರವಹಿಸಿದ್ದರು. ಬೌಲಿಂಗ್ ಮತ್ತು ಬ್ಯಾಟಿಂಗ್​ ಸಾಹಸದಿಂದ ವಿಂಡೀಸ್​ ಕಪ್​ ಗೆದ್ದಿತ್ತು. ಇದೀಗ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಭ್ರಷ್ಟಾಚಾರ ವಿರೋಧಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಡಿಯಲ್ಲಿ ಅವರನ್ನು ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿಷೇಧಿಸಲಾಗಿದೆ. ಸ್ಯಾಮುಯೆಲ್ಸ್ ವಿರುದ್ಧ ಸೆಪ್ಟೆಂಬರ್ 2021 ರಲ್ಲಿ ಒಟ್ಟು ನಾಲ್ಕು ಆರೋಪಗಳನ್ನು ಹೊರಿಸಲಾಗಿತ್ತು. ಈ ವರ್ಷದ ಆಗಸ್ಟ್​ನಲ್ಲಿ ಅಪರಾಧಗಳಲ್ಲಿ ಅವರು ತಪ್ಪಿತಸ್ಥರೆಂದು ಕಂಡುಬಂದಿದೆ. ಹೀಗಾಗಿ ಅವರಿಗೆ 6 ವರ್ಷಗಳ ಕಾಲ ಕ್ರಿಕೆಟ್​ ನಿಷೇಧ ಹೇರಲಾಗಿತ್ತು.

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

2020ರಲ್ಲಿ ಸ್ಯಾಮುಯೆಲ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ನಿವೃತ್ತಿ ಘೋಷಿಸಿದ ಬಳಿಕ ಅವರು ಬೇರೆ ದೇಶಗಳಲ್ಲಿ ನಡೆಯುವ ಲೀಗ್​ ಕ್ರಿಕೆಟ್​ಗಳಲ್ಲಿ ಆಟ ಮುಂದುವರಿಸಿದ್ದರು. 43 ವರ್ಷದ ಸ್ಯಾಮುಯೆಲ್ಸ್ ಅವರು 11,000 ಅಂತಾರಾಷ್ಟ್ರೀಯ ರನ್​ಗಳನ್ನು ಗಳಿಸಿದ್ದಾರೆ. ವಿಂಡೀಸ್​ ಪರ 207 ಏಕದಿನ ಪಂದ್ಯಗಳನ್ನು ಆಡಿದ ಅವರು 75.12 ಸ್ಟ್ರೈಕ್​ರೇಟ್​ನಲ್ಲಿ 5606 ರನ್​ ಬಾರಿಸಿದ್ದಾರೆ. ಇದರಲ್ಲಿ 10 ಶತಕ ಮತ್ತು 30 ಅಧರ್ಶತಕ ಒಳಗೊಂಡಿದೆ. 133 ರನ್​ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ. 89 ವಿಕೆಟ್​ ಕೂಡ ಪಡೆದಿದ್ದಾರೆ. ಇನ್ನು 71 ಟೆಸ್ಟ್​ ಪಂದ್ಯಗಳಿಂದ 3917, ರನ್​ 7 ಶತಕ, 1 ದ್ವಿಶತಕ ಮತ್ತು 24 ಅರ್ಧಶತಕ ಬಾರಿಸಿದ್ದಾರೆ. 41 ವಿಕೆಟ್​ ಕಲೆಹಾಕಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 67 ಪಂದ್ಯ ಆಡಿ 1611 ರನ್​ ಮತ್ತು 22 ವಿಕೆಟ್​ ಉರುಳಿಸಿದ್ದಾರೆ.

Continue Reading

ಕ್ರೀಡೆ

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

MS Dhoni: ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.

VISTARANEWS.COM


on

MS Dhoni
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಾಗೂ ಮಹೇಂದ್ರ ಸಿಂಗ್​ ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಕೆಲವು ದಿನಗಳ ಹಿಂದೆ ಎಸ್ ರಾಮದಾಸ್ ಅವರು ಮಗನ ಬಳಿ ಮಾತನಾಡುವ ವೇಳೆ, ಚೆನ್ನೈ ಸೂಪರ್ ಕಿಂಗ್ಸ್​ನ ಪಂದ್ಯ ಮತ್ತು ಧೋನಿಯನ್ನು ನೋಡಲು ರಾಜಧಾನಿ ದೆಹಲಿಯವರೆಗೂ ನಡೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದರು. ಧೋನಿಯನ್ನು ಮತ್ತು ಚೆನ್ನೈ ಪಂದ್ಯವನ್ನು ನೋಡುವ ಅಪ್ಪನ ಈ ಬಯಕೆಯನ್ನು ಈಡೇರಿಸುವುದಾಗಿ ಮಗ ಮಾತು ಕೊಟ್ಟಿದ್ದರು. ಚೆನ್ನೈನಲ್ಲಿ ನಡೆಯುವ ಪಂದ್ಯದ ಟಿಕೆಟ್​ ಖರೀದಿಸಿ ಪಂದ್ಯ ತೋರಿಸುತ್ತೇನೆ ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ ಮಗ ಅಪ್ಪನಿಗೆ ಚೆಪಾಕ್​ನಲ್ಲಿ ನಡೆದ ಚೆನ್ನೈ ಮತ್ತು ಪಂಜಾಬ್​ ವಿರುದ್ಧದ ಪಂದ್ಯಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪಂದ್ಯ ಮುಕ್ತಾಯಕ ಬಳಿಕ ಈ ವಿಶೇಷ ಅಭಿಮಾನೊಯನ್ನು ಧೋನಿ ಡ್ರೆಸ್ಸಿಂಗ್​ ರೋಮ್​ನಲ್ಲಿ ಭೇಟಿಯಾಗಿದ್ದಾರೆ. ಧೋನಿ ತಮ್ಮ ಜೆರ್ಸಿಯಲ್ಲಿ “ನಿಮ್ಮ ಈ ಬೆಂಬಲಕ್ಕೆ ಧನ್ಯವಾದಗಳು ತಾತ” ಎಂದು ಬರೆದು ತಮ್ಮ ಹಸ್ತಾಕ್ಷರ ಹಾಕಿ ಜೆರ್ಸಿಯನ್ನು ರಾಮದಾಸ್​ಗೆ ನೀಡಿದ್ದಾರೆ. ಇದೇ ವೇಳೆ ರಾಮದಾಸ್ ನಿಮ್ಮನ್ನು ನೋಡಿ ತುಂಬಾ ಖಷಿಯಾಯಿತು. ನೀವೊಬ್ಬರು ಗ್ರೇಟ್​ ಕ್ರಿಕೆಟರ್​ ಎಂದು ಹಾರೈಸಿದರು. ರಾಮ್​ದಾಸ್​ ಜತೆ ಅರ ಪತ್ನಿಯೂ ಜತೆಗಿದ್ದರು. ಚೆನ್ನೈ ಫ್ರಾಂಚೈಸಿ ವತಿಯಿಂದ ರಾಮದಾಸ್ 103 ಎಂದು ಬರೆದ ಚೆನ್ನೈ ತಂಡದ ಜೆರ್ಸಿಯನ್ನು ವಿಶೇಷ ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

ಬ್ರಿಟಿಷ್ ಮಿಲಿಟರಿಯ ಸೈನ್ಯದ ಭಾಗವಾಗಿದ್ದ ರಾಮದಾಸ್ ಕ್ರಿಕೆಟ್ ಆಡಲು ಹೆದರುತ್ತಿದ್ದರಂತೆ. ಆದರೆ ಸಿಎಸ್‌ಕೆ ಜರ್ಸಿ ಧರಿಸಿ ಟಿವಿ ಮುಂದೆ ಕುಳಿತು ಐಪಿಎಲ್ ಆಟವನ್ನು ನೋಡಲು ಇಷ್ಟಪಡುತ್ತೇನೆ. ಒಮ್ಮೆಯಾದರೂ ಧೋನಿಯನ್ನು ಭೇಟಿಯಾಗಬೇಕು ಎಂದು ಹೇಳಿದ್ದ ವಿಡಿಯೊವನ್ನು ಕೂಡ ಚೆನ್ನೈ ಫ್ರಾಂಚೈಸಿ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿತ್ತು.

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

Continue Reading

ಕ್ರೀಡೆ

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

Kavya Maran: ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

VISTARANEWS.COM


on

Kavya Maran
Koo

ಹೈದರಾಬಾದ್​: ಗುರುವಾರ ರಾತ್ರಿ ನಡೆದ ಐಪಿಎಲ್​ನ(IPL 2024) 50ನೇ ಪಂದ್ಯದಲ್ಲಿ ಭುವನೇಶ್ವರ್​ ಕುಮಾರ್(Bhuvneshwar Kumar)​ ಅವರು ಅಂತಿಮ ಎಸೆತದ ಮ್ಯಾಜಿಕ್​ನಿಂದ ಸನ್​ರೈಸರ್ಸ್ ಹೈದರಾಬಾದ್(Sunrisers Hyderabad)​ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ರೋಚಕ 1 ರನ್​ ಅಂತರದ ಗೆಲುವು ಸಾಧಿಸಿತು. ಈ ಗೆಲುವನ್ನು ತಂಡದ ಆಟಗಾರರಿಗಿಂತಲ್ಲೂ ಹೆಚ್ಚು ಸಂಭ್ರಮಿಸಿದ್ದು ತಂಡದ ಮಾಲಕಿ ಕಾವ್ಯಾ ಮಾರನ್​. ಗ್ಯಾಲರಿಯಲ್ಲಿದ್ದ ಕಾವ್ಯ ತಂಡ ಗೆಲ್ಲುತ್ತಿದ್ದಂತೆ ಫೂಲ್​ ಜೋಶ್​ನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

31 ಹರೆಯದ ಕಾವ್ಯಾ ತನ್ನ ಅದ್ಭುತ ನೋಟ ಮತ್ತು ಆಟದ ಮೇಲಿನ ಅಪಾರ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ. ಪಂದ್ಯ ಸೋತಾಗ ಮತ್ತು ಗೆದ್ದಾಗ ಅವರು ವಿಭಿನ್ನವಾಗಿ ಕಂಡುಬರುತ್ತಾರೆ. ಕ್ಯಾಮೆರಾ ಮೆನ್​ಗಳು ಕೂಡ ಪಂದ್ಯದ ವೇಳೆ ಇವರ ಮೇಲೆ ವಿಶೇಷ ನಿಗಾ ಇರಿಸಿರುತ್ತಾರೆ. ಪಂದ್ಯ ಸೋತಾಗ ಅತಿಯಾದ ಬೇಸರಿಂದ ಸಪ್ಪೆ ಮೋರೆ ಹಾಕಿ ಕುಳಿತಿದ್ದ ವಿಡಿಯೊ ಮತ್ತು ಫೋಟೊಗಳು ಕೂಡ ಹಲವು ಬಾರಿ ವೈರಲ್​ ಆಗಿತ್ತು.

ಖ್ಯಾತ ಸೂಪರ್​ ಸ್ಟಾರ್​ ನಟ ರಜನಿಕಾಂತ್ ಅವರು ಐಪಿಎಲ್​ ಆರಂಭಕ್ಕೂ ಮುನ್ನ ನಡೆದಿದ್ದ ಸಿನೆಮಾ ಕಾರ್ಯಕ್ರಮದ ಸಮಾರಂಭದ ವೇದಿಕೆಯಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಒಳ್ಳೆ ಆಟಗಾರರನ್ನು ಆಯ್ಕೆ ಮಾಡಿ ಏಕೆಂದರೆ ಈ ಪಂದ್ಯ ಸೋತಾಗ ಕಾವ್ಯಾ ಅವರು ನೋಡಲು ಸಾಧ್ಯವಾಗುದಿಲ್ಲ ಎಂದು ಹೇಳಿದ್ದರು.

ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

ಪಂದ್ಯ ಗೆದ್ದ ಹೈದರಾಬಾದ್​


ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

Continue Reading

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ನ ಅಧಿಕೃತ ಹಾಡು ಬಿಡುಗಡೆ; ಕುಣಿದು ಕುಪ್ಪಳಿಸಿದ ಕ್ರಿಸ್​ ಗೇಲ್​, ಉಸೇನ್‌ ಬೋಲ್ಟ್

T20 World Cup 2024: ಎಂಟು ಬಾರಿಯ ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್, ವೆಸ್ಟ್ ಇಂಡೀಸ್ ಕ್ರಿಕೆಟ್ ಐಕಾನ್‌ಗಳಾದ ಕ್ರಿಸ್ ಗೇಲ್, ಶಿವನಾರಾಯಣ್ ಚಂದ್ರಪಾಲ್ ಮತ್ತು ಮಹಿಳಾ ಆಟಗಾರ್ತಿ ಸ್ಟಾಫಾನಿ ಟೇಲರ್, ಅಮೆರಿಕದ ಬೌಲರ್ ಅಲಿ ಖಾನ್ ಸೇರಿದಂತೆ ಇತರ ಪ್ರಮುಖ ಕೆರಿಬಿಯನ್ ವ್ಯಕ್ತಿಗಳು ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

T20 World Cup 2024
Koo

ನವದೆಹಲಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಐಸಿಸಿ(ICC) ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಉಳಿದಿವೆ. ವಿಶ್ವಕಪ್​ ಪಂದ್ಯವಾವಳಿಗಳು ಜೂನ್​ 1ರಿಂದ ಆರಂಭವಾಗಿ ಜೂನ್​ 29ಕ್ಕೆ ಮುಕ್ತಾಯ ಕಾಣಲಿದೆ. ಒಟ್ಟು 55 ಪಂದ್ಯಗಳು ಇರಲಿದೆ. ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಐಸಿಸಿ ಪಂದ್ಯಾವಳಿಯ ಅಧಿಕೃತ ಗೀತೆಯನ್ನು ಅನಾವರಣಗೊಳಿಸಿದೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಸೀನ್ ಪಾಲ್ ಮತ್ತು ಸೋಕಾ ಸೂಪರ್‌ಸ್ಟಾರ್ ಕೇಸ್ ಅವರು ‘ಔಟ್ ಆಫ್ ದಿಸ್ ವರ್ಲ್ಡ್’ ಎಂಬ ಶೀರ್ಷಿಕೆಯ ಗೀತೆಯನ್ನು ರಚಿಸಿದ್ದಾರೆ. ಇದು ಸಂಗೀತ ಮತ್ತು ಕ್ರೀಡೆಗಳೆರಡರಲ್ಲೂ ಕೆಲವು ಪ್ರಮುಖ ವ್ಯಕ್ತಿಗಳ ನಡುವಿನ ಸಹಯೋಗವನ್ನು ಇದು ಒಳಗೊಂಡಿದೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. 

ಎಂಟು ಬಾರಿಯ ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್, ವೆಸ್ಟ್ ಇಂಡೀಸ್ ಕ್ರಿಕೆಟ್ ಐಕಾನ್‌ಗಳಾದ ಕ್ರಿಸ್ ಗೇಲ್, ಶಿವನಾರಾಯಣ್ ಚಂದ್ರಪಾಲ್ ಮತ್ತು ಮಹಿಳಾ ಆಟಗಾರ್ತಿ ಸ್ಟಾಫಾನಿ ಟೇಲರ್, ಅಮೆರಿಕದ ಬೌಲರ್ ಅಲಿ ಖಾನ್ ಸೇರಿದಂತೆ ಇತರ ಪ್ರಮುಖ ಕೆರಿಬಿಯನ್ ವ್ಯಕ್ತಿಗಳು ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಬೀಚ್​ ಒಂದರಲ್ಲಿ ಟಿ20 ವಿಶ್ವಕಪ್​ ಎಂದು ಬರೆದಿರುವ ಚೆಂಡೊಂದು ಬಿದ್ದಿರುತ್ತದೆ. ಇದನ್ನು ಹೆಕ್ಕುವ ಮೂಲಕ ಗೀತೆ ಆರಂಭೊಂಡಿದೆ. ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಜಾಸ್​ ಬಟ್ಲರ್​, ಗ್ಲೆನ್​ ಮ್ಯಾಕ್ಸ್​ವೆಲ್ ಅವರ ಕ್ರಿಕೆಟ್​ ಶಾಟ್​ಗಳ ಶೈಲಿಯಲ್ಲಿ ನೃತ್ಯ ಮಾಡಿದ್ದು ಕೂಡ ಈ ದೃಶ್ಯದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

ಕ್ರಿಕೆಟ್ ಯಾವಾಗಲೂ ಕೆರಿಬಿಯನ್ ಸಂಸ್ಕೃತಿಯ ಪ್ರಮುಖ ಭಾಗವಾಗಿದೆ. ಆದ್ದರಿಂದ ಟಿ20 ವಿಶ್ವಕಪ್‌ಗಾಗಿ ಅಧಿಕೃತ ಗೀತೆಯನ್ನು ಬರೆಯಲು ಮತ್ತು ರೆಕಾರ್ಡ್ ಮಾಡಲು ನನಗೆ ಗೌರವವಿದೆ. ಈ ಗೀತೆಗೆ ಸ್ಫೂರ್ತಿ ನೀಡಿದ ಸೃಜನಾತ್ಮಕ ಇನ್‌ಪುಟ್‌ನ ಸಂಪೂರ್ಣ ಸಿಬ್ಬಂದಿಗೆ ಗೌರವವು ಸಲ್ಲುತ್ತದೆ ಎಂದು ಸೋಕಾ ಸೂಪರ್‌ಸ್ಟಾರ್ ಕೆಸ್ ಹೇಳಿದ್ದಾರೆ.

ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading
Advertisement
Rashmika Mandanna's younger sister Shiman
ಟಾಲಿವುಡ್12 mins ago

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

Prajwal Revanna Case Wherever Prajwal escapes we will pick him up says CM Siddaramaiah
ಕ್ರೈಂ15 mins ago

Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Devon Thomas
ಕ್ರೀಡೆ22 mins ago

Devon Thomas: ಟಿ20 ವಿಶ್ವಕಪ್​ಗೂ ಮುನ್ನ ವಿಂಡೀಸ್​ ಬ್ಯಾಟರ್​ಗೆ 5 ವರ್ಷ ನಿಷೇಧ ಹೇರಿದ ಐಸಿಸಿ

Prajwal Revanna Case If Prajwal and Revanna fails to appear infront of SIT they will be arrested says Dr Parameshwara
ಕ್ರೈಂ38 mins ago

Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

gold rate today
ಚಿನ್ನದ ದರ53 mins ago

Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ; 10 ಗ್ರಾಂ 22 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ₹500 ಕಡಿತ

Gurucharan Singh Taarak Mehta Ka Ooltah Chashmah actor planned disappearance
ಕಿರುತೆರೆ53 mins ago

Gurucharan Singh: ಎರಡು ವಾರ ಕಳೆದರೂ ಪತ್ತೆಯಾಗದ  ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ!

Ram Mandir
ದೇಶ1 hour ago

Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

MS Dhoni
ಕ್ರೀಡೆ1 hour ago

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

Drowned in water
ಕೋಲಾರ1 hour ago

Drowned In water : ಈಜಲು ಕೃಷಿ ಹೊಂಡಕ್ಕೆ ಜಿಗಿದ; ಸಾವಿನ ಕೊನೆ ಕ್ಷಣವನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ತಂಗಿ!

Triple Talaq
ದೇಶ2 hours ago

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ18 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌