ಟಿ20 ವಿಶ್ವಕಪ್​ ತಂಡ ಪ್ರಕಟಕ್ಕೆ ಗಡುವು ನೀಡಿದ ಐಸಿಸಿ; ಭಾರತ ಸಂಭಾವ್ಯ ತಂಡ ರೆಡಿ! - Vistara News

ಕ್ರೀಡೆ

ಟಿ20 ವಿಶ್ವಕಪ್​ ತಂಡ ಪ್ರಕಟಕ್ಕೆ ಗಡುವು ನೀಡಿದ ಐಸಿಸಿ; ಭಾರತ ಸಂಭಾವ್ಯ ತಂಡ ರೆಡಿ!

ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ.

VISTARANEWS.COM


on

2024 t20 world cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಅಮೆರಿಕಾ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್(T20 World Cup 2024)​ ವೇಳಾಪಟ್ಟಿಯನ್ನು ಐಸಿಸಿ ಈಗಾಗಲೇ ಪ್ರಕಟಿಸಿದೆ. ಅಲ್ಲದೆ ಟೂರ್ನಿಯ ಪ್ರೋಮೊ ಕೂಡ ಹರಿಬಿಟ್ಟಿದೆ. ಪಂದ್ಯಾವಳಿ ಜೂನ್ 2 ರಿಂದ ಆರಂಭಗೊಂಡು ಜೂನ್​ 29ರ ತನಕ ನಡೆಯಲಿದೆ. ಒಟ್ಟು 55 ಪಂದ್ಯಗಳು ಇರಲಿದೆ. ಇದೀಗ ತಂಡಗಳ ಅಂತಿಮ ಪಟ್ಟಿ ಸಲ್ಲಿಸಲು ಐಸಿಸಿ(ICC) ಮೇ ಒಂದರ ಗಡುವು ವಿಧಿಸಿದೆ.

ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಆದರೆ, ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

ವರದಿಯೊಂದರ ಪ್ರಕಾರ ಬಿಸಿಸಿಐ ಈಗಾಗಲೇ ಭಾರತ ಸಂಭಾವ್ಯ ತಂಡವನ್ನು ಆಯ್ಕೆ ಮಾಡಿದ್ದು, ಶುಭಮನ್​ ಗಿಲ್, ಶ್ರೇಯಸ್​ ಅಯ್ಯರ್​, ಇಶಾನ್​ ಕಿಶನ್​ ಮತ್ತು ಕನ್ನಡಿಗ ಕೆ.ಎಲ್​ ರಾಹುಲ್​ ಅವರಿಗೆ ಈ ಟೂರ್ನಿಯಲ್ಲಿ ಅವಕಾಶ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿಬಂದಿದೆ. ಆದರೆ ಯಾವುದೇ ಅಧಿಕೃತ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ. ಐಪಿಎಲ್​ನಲ್ಲಿ ತೋರುವ ಪ್ರದರ್ಶನದ ಆಧಾರದಲ್ಲಿ ತಂಡ ಪ್ರಕಟಗೊಳ್ಳಲಿದೆ.

ಇದನ್ನೂ ಓದಿ T20 World Cup : ಟಿ20 ವಿಶ್ವ ಕಪ್​ನಲ್ಲಿ ಭಾರತಕ್ಕೆ ಎಷ್ಟು ಪಂದ್ಯಗಳಿವೆ?

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಡೆಲ್ಲಿ ವಿರುದ್ದ ಗೆದ್ದ ಆರ್​ಸಿಬಿ ತಂಡದ ಸಂಭ್ರಮ ಹೀಗಿತ್ತು, ಇಲ್ಲಿದೆ ವಿಡಿಯೊ

IPL 2024: ಇದಕ್ಕೂ ಮುನ್ನ ಆರ್​ಸಿಬಿ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರು ಅಗ್ರ ಕ್ರಮಾಂಕದ ಬದಲಾವಣೆಯ ಬಗ್ಗೆ ಮಾತನಾಡಿದ್ದರು. ತಮ್ಮ ಲೆಂತ್​ ಮತ್ತು ಸೆಲೆಕ್ಷನ್​ನೊಂದಿಗೆ ಸಾಧ್ಯವಾದಷ್ಟು ಆಕ್ರಮಣಕಾರಿಯಾಗಲು ಪ್ರಯತ್ನಿಸುತ್ತಿರುವ ಬೌಲಿಂಗ್ ಘಟಕವನ್ನು ಫ್ಲವರ್ ಶ್ಲಾಘಿಸಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ಮೇ 12 ರ ಭಾನುವಾರದಂದು ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ (IPL 2024) ತವರು ಪಂದ್ಯವನ್ನು ಗೆದ್ದ ನಂತರ ಫಾಫ್ ಡು ಪ್ಲೆಸಿಸ್ (FaF Du Felissis ನೇತೃತ್ವದ ಆರ್ಸಿಬಿ ಪ್ಲೇ ಆಫ್ ರೇಸ್​ನಲ್ಲಿ (Ply off) ಜೀವಂತವಾಗಿ ಉಳಿದುಕೊಂಡಿದೆ. ಇದು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ ಸತತ 5 ನೇ ಗೆಲುವಾಗಿದೆ. ಏಕೆಂದರೆ ಋತುವಿನಲ್ಲಿ ನಿರಾಶಾದಾಯಕ ಆರಂಭದ ನಂತರ ತಂಡವು ತನ್ನ ಅದೃಷ್ಟವನ್ನು ತಿರುಗಿಸಿತು. ಗೆಲುವಿನ ಹಾದಿಗೆ ಮೊದಲು, ಆರ್​ಸಿಬಿ ಸತತ 6 ಪಂದ್ಯಗಳನ್ನು ಸೋತಿತ್ತು, ಇದು ಪಂದ್ಯಾವಳಿಯಿಂದ ಹೊರಗುಳಿಯುವ ಅಂಚಿಗೆ ತಂದಿತು.

ಬೆಂಗಳೂರು ಮೂಲದ ತಂಡವು ತಮ್ಮ ಅದೃಷ್ಟವನ್ನು ಕಂಡುಕೊಳ್ಳುವ ಹಾದಿಯಲ್ಲಿ ಕೆಲವು ನಿರ್ಣಾಯಕ ಬದಲಾವಣೆಗಳನ್ನು ಮಾಡಿತು. ಭಾನುವಾರ ಡಿಸಿ ವಿರುದ್ಧ ಗೆದ್ದ ನಂತರ ಆರ್​ಸಿಬಿ ತಂಡವು ಡ್ರೆಸ್ಸಿಂಗ್ ರೂಮ್​ನಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿತು. ಕೋಚಿಂಗ್ ಸಿಬ್ಬಂದಿ ಉತ್ತಮವಾಗಿ ಆಡಿದ ಪ್ರತಿಯೊಬ್ಬ ಆಟಗಾರನನ್ನು ಶ್ಲಾಘಿಸಿದರು ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್​​ನ 2024 ರ ಋತುವಿನಲ್ಲಿ ಇದುವರೆಗೆ ಯಾರೂ ನೋಡದ ಆಚರಣೆಯನ್ನು ಮಾಡಿದರು. ಸಂಭ್ರಮಾಚರಣೆಯ ವೀಡಿಯೊವನ್ನು ಆರ್​ಸಿಬಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಅಲ್ಲಿ ಕ್ಯಾಮೆರಾನ್ ಗ್ರೀನ್ ಮತ್ತು ರಜತ್ ಪಾಟಿದಾರ್ ಅವರಂತಹವರು ಸಂಭ್ರಮಿಸುತ್ತಿರುವುದು ಕಾಣಬಹುದು.

ಇದಕ್ಕೂ ಮುನ್ನ ಆರ್​ಸಿಬಿ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರು ಅಗ್ರ ಕ್ರಮಾಂಕದ ಬದಲಾವಣೆಯ ಬಗ್ಗೆ ಮಾತನಾಡಿದ್ದರು. ತಮ್ಮ ಲೆಂತ್​ ಮತ್ತು ಸೆಲೆಕ್ಷನ್​ನೊಂದಿಗೆ ಸಾಧ್ಯವಾದಷ್ಟು ಆಕ್ರಮಣಕಾರಿಯಾಗಲು ಪ್ರಯತ್ನಿಸುತ್ತಿರುವ ಬೌಲಿಂಗ್ ಘಟಕವನ್ನು ಫ್ಲವರ್ ಶ್ಲಾಘಿಸಿದ್ದರು.

ಇದನ್ನೂ ಓದಿ: IPL 2024 : ಮೈದಾನದಿಂದಲೇ ಅನುಷ್ಕಾಗೆ ಕೈ ಸನ್ನೆ ಮಾಡಿದ ಕೊಹ್ಲಿ; ಇಲ್ಲಿದೆ ವಿಡಿಯೊ

ಫಾಫ್ ಮತ್ತು ವಿರಾಟ್ ವಿಶೇಷವಾಗಿ ತಮ್ಮ ಕಾರ್ಯಗಳಿಂದ ಮುಂಚೂಣಿಯಿಂದ ಮುನ್ನಡೆಸಿದ್ದಾರೆ. ತಂಡದ ಉಳಿದವರು ಅತ್ಯುತ್ತಮವಾಗಿದ್ದಾರೆ. ಪವರ್​ಪ್ಲೇನಲ್ಲಿ ನಾವು ಬೌಲಿಂಗ್ ಮಾಡಿದ ರೀತಿಯಲ್ಲಿ ನಾವು ಸುಧಾರಣೆಯನ್ನು ನೋಡಿದ್ದೇವೆ ಎಂದು ನಾನು ಭಾವಿಸುತ್ತೇನೆ. ಸಿರಾಜ್ ಮತ್ತು ಯಶ್ ದಯಾಳ್ ಮುನ್ನಡೆಸಿದ್ದಾರೆ ಎಂದು ನಾನು ಭಾವಿಸುತ್ತೇನೆ. ಇಬ್ಬರೂ ಹೊಸ ಚೆಂಡಿನೊಂದಿಗೆ ತುಂಬಾ ಕೌಶಲ್ಯ ಮತ್ತು ಧೈರ್ಯಶಾಲಿಯಾಗಿದ್ದಾರೆ, ಎಂದು ಫ್ಲವರ್ ಆರ್ಸಿಬಿ ವೀಡಿಯೊದಲ್ಲಿ ಹೇಳಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ ತನ್ನ ಕೊನೆಯ ಗ್ರೂಪ್ ಹಂತದ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಸೋಲಿಸಿದರೆ ಆರ್​ಸಿಬಿ ಪ್ಲೇಆಫ್ ಹಂತಕ್ಕೆ ಅರ್ಹತೆ ಪಡೆಯುವ ಸಾಧ್ಯತೆ ಇದೆ. 13 ಪಂದ್ಯಗಳಿಂದ 12 ಅಂಕ ಗಳಿಸಿರುವ ತಂಡ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಆರ್​ಸಿಬಿಗಿಂತ ಎಸ್ಆರ್​ಎಚ್, ಸಿಎಸ್​ಕೆ, ಆರ್​ಆರ್​ ಮತ್ತು ಕೆಕೆಆರ್ ಮುಂದಿವೆ. ಕೆಕೆಆರ್ ಈಗಾಗಲೇ ಅರ್ಹತೆ ಪಡೆದಿದ್ದರೆ, ಇತರ ತಂಡಗಳು ಪ್ಲೇಆಫ್ ಸ್ಥಾನದಿಂದ ಕೇವಲ ಒಂದು ಗೆಲುವಿನ ದೂರದಲ್ಲಿವೆ. ಐಪಿಎಲ್ 2024 ರ ಗ್ರೂಪ್ ಹಂತದ ಕೊನೆಯ ದಿನವಾದ ಮೇ 18 ರಂದು ಆರ್ಸಿಬಿ ಸಿಎಸ್ಕೆ ವಿರುದ್ಧ ಸೆಣಸಲಿದೆ.

Continue Reading

ಪ್ರಮುಖ ಸುದ್ದಿ

IPL 2024 : ಮೈದಾನದಿಂದಲೇ ಅನುಷ್ಕಾಗೆ ಕೈ ಸನ್ನೆ ಮಾಡಿದ ಕೊಹ್ಲಿ; ಇಲ್ಲಿದೆ ವಿಡಿಯೊ

IPL 2024: ಐಪಿಎಲ್ 2024 ರಲ್ಲಿ ಆರ್​​ಬಿಯ ಅಭಿಯಾನ ರೋಚಕ ತಿರುವು ಪಡೆದಿದ್ದರಿಂದ ತಂಡದ ಗೆಲುವಿನ ನಂತರ ಸ್ಟಾರ್ ದಂಪತಿಗಳ ಮುಖದಲ್ಲಿ ನೆಮ್ಮದಿ ಕಾಣಿಸಿತು. ವಿರಾಟ್ ಕೊಹ್ಲಿ ಮೈದಾನದಲ್ಲಿ ಯಾರೋ ಒಬ್ಬರಿಗೆ ಸಂಕೇತ ಮಾಡಿ ಏನನ್ನೋ ತೋರಿಸುತ್ತಿದ್ದರು. ಅದು ನಾವು ಹಡಗನ್ನೇ ತಿರುಗಿಸುತ್ತೇವೆ. ಅಥವಾ ಇಡೀ ಪ್ರಸಂಗವನ್ನೇ ಬದಲಾಯಿಸುತ್ತೇವೆ ಎಂಬ ಅರ್ಥದಲ್ಲಿತ್ತು. ಕ್ಯಾಮೆರಾ ಕೊಹ್ಲಿ ಕೈ ತೋರಿಸಿದ ಕಡೆಗೆ ತಿರುಗಿಸಿದಾಗ ಅದು ಪತ್ನಿ ಅನುಷ್ಕಾ ಶರ್ಮಾಗೆ ಎಂಬುದು ಗೊತ್ತಾಯಿತು.

VISTARANEWS.COM


on

IPL 2024
Koo

ಬೆಂಗಳೂರು: ಮೇ 12ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆದ ಐಪಿಎಲ್​ ಪಂದ್ಯದಲ್ಲಿ (IPL 2024) ಆರ್​ಸಿಬಿ ತಂಡ ಡಿಸಿ ತಂಡವನ್ನು ಮಣಿಸಿತ್ತು. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಈ ಋತುವಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ. 188 ರನ್​ಗಳ ಗುರಿ ಬೆನ್ನಟ್ಟಿದ ಡೆಲ್ಲಿ ತಂಡವನ್ನು ಕೇವಲ 140 ರನ್​ಗಳಿಗೆ ಆಲೌಟ್ ಮಾಡಿದ ಆರ್​​ಸಿಬಿ ಆಟಗಾರರು ಸಂಭ್ರಮಿಸಿದರು. ಆಟಗಾರರು ಗೆಲುವನ್ನು ಆಚರಿಸುತ್ತಿದ್ದಂತೆ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕಡೆಗೆ ಕ್ಯಾಮೆರಾ ತಿರುಗಿಸಿದರು. ಈ ವೇಳೆ ಅವರಿಬ್ಬರ ನಡುವಿನ ಸಂಕಚೇ

ಐಪಿಎಲ್ 2024 ರಲ್ಲಿ ಆರ್​​ಬಿಯ ಅಭಿಯಾನ ರೋಚಕ ತಿರುವು ಪಡೆದಿದ್ದರಿಂದ ತಂಡದ ಗೆಲುವಿನ ನಂತರ ಸ್ಟಾರ್ ದಂಪತಿಗಳ ಮುಖದಲ್ಲಿ ನೆಮ್ಮದಿ ಕಾಣಿಸಿತು. ವಿರಾಟ್ ಕೊಹ್ಲಿ ಮೈದಾನದಲ್ಲಿ ಯಾರೋ ಒಬ್ಬರಿಗೆ ಸಂಕೇತ ಮಾಡಿ ಏನನ್ನೋ ತೋರಿಸುತ್ತಿದ್ದರು. ಅದು ನಾವು ಹಡಗನ್ನೇ ತಿರುಗಿಸುತ್ತೇವೆ. ಅಥವಾ ಇಡೀ ಪ್ರಸಂಗವನ್ನೇ ಬದಲಾಯಿಸುತ್ತೇವೆ ಎಂಬ ಅರ್ಥದಲ್ಲಿತ್ತು. ಕ್ಯಾಮೆರಾ ಕೊಹ್ಲಿ ಕೈ ತೋರಿಸಿದ ಕಡೆಗೆ ತಿರುಗಿಸಿದಾಗ ಅದು ಪತ್ನಿ ಅನುಷ್ಕಾ ಶರ್ಮಾಗೆ ಎಂಬುದು ಗೊತ್ತಾಯಿತು. ಬ್ಯಾಟ್ ಮತ್ತು ಬಾಲ್​ನಲ್ಲಿ ಅದ್ಭುತ ಪ್ರಯತ್ನಕ್ಕಾಗಿ ಆರ್​​ಸಿಬಿಯು ಭರ್ಜರಿ ಗೆಲುವಿನ ಕ್ರೆಡಿಟ್ ಕ್ಯಾಮರೂನ್ ಗ್ರೀನ್​ಗೆ ಸಲ್ಲುತ್ತದೆ.

ಇದನ್ನೂ ಓದಿ: Gautam Gambhir : ಕೊಹ್ಲಿ ಜತೆಗಿನ ಜಗಳವಲ್ಲ, ಇನ್ನೊಂದು ವಿಚಾರದ ಬಗ್ಗೆ ಗಂಭೀರ್​ಗೆ ಸಿಕ್ಕಾಪಟ್ಟೆ ಪಶ್ಚಾತಾಪವಿದೆ

ಭಾನುವಾರ ಡಿಸಿ ವಿರುದ್ಧ 47 ರನ್​ಗಳ ಜಯದೊಂದಿಗೆ ಆರ್​​ಸಿಬಿ ತನ್ನ ಗೆಲುವಿನ ಓಟ ಮುಂದುವರಿಸಿತು. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಪಾಯಿಂಟ್ಸ್ ಟೇಬಲ್​​ನಲ್ಲಿ 5 ನೇ ಸ್ಥಾನಕ್ಕೆ ಜಿಗಿಯಿತು. ಪಂದ್ಯಾವಳಿಯ ಆರಂಭದಲ್ಲಿ ಆರ್​ಸಿಬಿ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಕಾರಣ ಪ್ಲೇಆಫ್ ಆಸೆ ದೂರದ ಕನಸಿನಂತೆ ತೋರಿತು. ರಜತ್ ಪಾಟಿದಾರ್ ಅವರ ಅರ್ಧಶತಕ ಮತ್ತು ಆರ್ಸಿಬಿ ಬೌಲರ್​ಗಳ ಶಿಸ್ತುಬದ್ಧ ಪ್ರದರ್ಶನವು ಕೊನೆಯಲ್ಲಿ ಉತ್ತಮ ಫಲಿತಾಂಶ ಕೊಟ್ಟಿತು.

ಆರ್​ಸಿಬಿ ತನ್ನ ಕೊನೆಯ ಗ್ರೂಪ್ ಹಂತದ ಪಂದ್ಯವನ್ನು ಸಿಎಸ್ಕೆ ವಿರುದ್ಧ ತವರಿನಲ್ಲಿ ಆಡಲಿದೆ. ಒಂದು ವೇಳೆ ಆರ್​​ಸಿಬಿ 18 ಅಥವಾ ಅದಕ್ಕಿಂತ ಹೆಚ್ಚಿನ ಅಂತರದಿಂದ ಗೆದ್ದರೆ, ಅವರು ಸಿಎಸ್​ಗಿಂತ ಉತ್ತಮ ನೆಟ್​​ರನ್​ರೇಟ್ ಹೊಂದಿದರೆ ಪ್ಲೇಆಫ್​ಗೆ ಅರ್ಹತೆ ಪಡೆಯುತ್ತದೆ.

Continue Reading

ಪ್ರಮುಖ ಸುದ್ದಿ

Gautam Gambhir : ಕೊಹ್ಲಿ ಜತೆಗಿನ ಜಗಳವಲ್ಲ, ಇನ್ನೊಂದು ವಿಚಾರದ ಬಗ್ಗೆ ಗಂಭೀರ್​ಗೆ ಸಿಕ್ಕಾಪಟ್ಟೆ ಪಶ್ಚಾತಾಪವಿದೆ

Gautam Gambhir: ಐಪಿಎಲ್​​ನಲ್ಲಿ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಅವರ ಯಶಸ್ಸಿನ ಮಧ್ಯೆ ಕೆಕೆಆರ್ ಮಾಜಿ ನಾಯಕ ಮತ್ತು ಪ್ರಸ್ತುತ ಮಾರ್ಗದರ್ಶಕ ಗೌತಮ್ ಗಂಭೀರ್ ಅವರು ಅವಕಾಶವನ್ನು ಕಳೆದುಕೊಂಡಿದ್ದಕ್ಕಾಗಿ ವಿಷಾದಿಸಿದ್ದಾರೆ. ಕೆಕೆಆರ್​ನಲ್ಲಿ ತಂಡದಲ್ಲಿ ಇದ್ದ ಸಮಯದಲ್ಲಿ ಯಾದವ್ ಅವರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಗುರುತಿಸದಿರುವುದಕ್ಕೆ ಗಂಭೀರ್ ವಿಷಾದ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Gautam Gambhir
Koo

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಅವರ ಕ್ರಿಕೆಟ್ ಪ್ರಯಾಣವು ಅಭಿವೃದ್ಧಿ ಹೊಂದಿರುವುದು ಮುಂಬೈ ಇಂಡಿಯನ್ಸ್ ತಂಡದಲ್ಲಿ. ಅವರ ಲಭ್ಯತೆ ಆತಂಡದ ಮೌಲ್ಯವನ್ನು ಎತ್ತಿ ತೋರಿಸುತ್ತದೆ. ಆದರೆ ಅವರು ಆರಂಭದಲ್ಲಿ ಅಡಿದ್ದು ಮುಂಬಯಿ ಪರ ಅಲ್ಲ. ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಆಗಿದ್ದವರು ಅವರು. ಬಳಿಕ ಅವರು ಮುಂಬೈ ತಂಡ ಸೇರಿಕೊಂಡು ಮಿಂಚಿದರು. ಐಪಿಎಲ್​​ನಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ಪರ ಬ್ಯಾಟಿಂಗ್ ಕ್ರಮಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ಸೂರ್ಯಕುಮಾರ್ ಅವರ ಗಮನಾರ್ಹ ಪ್ರದರ್ಶನವು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮಿಂಚಲು ಅವಕಾಶ ನೀಡಿತು. ಅವರ ಬಗ್ಗೆ ಗೌತಮ್​ ಗಂಭೀರ್​ (Gautam Gambhir) ವಿಶೇಷ ಮಾತುಗಳನ್ನು ಆಡಿದ್ದಾರೆ.

ಸ್ಟೈಲಿಶ್ ಬ್ಯಾಟ್ಸ್ಮನ್ ಅವರ ಪ್ರಯಾಣವು 2018 ರಲ್ಲಿ ಎರಡನೇ ಬಾರಿಗೆ ಎಂಐಗೆ ಸೇರಿದಾಗ ಗಮನಾರ್ಹ ತಿರುವು ಪಡೆದುಕೊಂಡಿತು. 2012 ರಲ್ಲಿ ಅದೇ ಫ್ರಾಂಚೈಸಿಯೊಂದಿಗೆ ತಮ್ಮ ವೃತ್ತಿಜೀವನ ಪ್ರಾರಂಭಿಸಿದರು. 2014ರಿಂದ 2017ರ ವರೆಗೆ ನಾಲ್ಕು ಆವೃತ್ತಿಗಳಲ್ಲಿ ಕೆಕೆಆರ್ ತಂಡದ ಭಾಗವಾಗಿದ್ದ ಸೂರ್ಯ 54 ಪಂದ್ಯಗಳಲ್ಲಿ 608 ರನ್ ಗಳಿಸಿದ್ದರು.

ಗೌತಮ್ ಗಂಭೀರ್ ಬೇಸವರೇನು

ಲಾಭದಾಯಕ ಟಿ 20 ಲೀಗ್​​ನಲ್ಲಿ ಕೆಕೆಆರ್ ಪರ ಕೆಳ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಅವರು ಕೆಲವು ರನ್​​ಗಳನ್ನು ಗಳಿಸಿದ್ದರು. ಆದರೆ ಸೂರ್ಯಕುಮಾರ್ ಅವರ ನಿಜವಾದ ಸಾಮರ್ಥ್ಯವನ್ನು ಮುಂಬೈ ಇಂಡಿಯನ್ಸ್​​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಬಯಲಾಯಿತು. ಆಧುನಿಕ ಯುಗದ ಅತ್ಯಂತ ಅಪಾಯಕಾರಿ ಬ್ಯಾಟ್ಸ್​ಮನ್​ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದರು.

ಐಪಿಎಲ್​​ನಲ್ಲಿ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಅವರ ಯಶಸ್ಸಿನ ಮಧ್ಯೆ ಕೆಕೆಆರ್ ಮಾಜಿ ನಾಯಕ ಮತ್ತು ಪ್ರಸ್ತುತ ಮಾರ್ಗದರ್ಶಕ ಗೌತಮ್ ಗಂಭೀರ್ ಅವರು ಅವಕಾಶವನ್ನು ಕಳೆದುಕೊಂಡಿದ್ದಕ್ಕಾಗಿ ವಿಷಾದಿಸಿದ್ದಾರೆ. ಕೆಕೆಆರ್​ನಲ್ಲಿ ತಂಡದಲ್ಲಿ ಇದ್ದ ಸಮಯದಲ್ಲಿ ಯಾದವ್ ಅವರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಗುರುತಿಸದಿರುವುದಕ್ಕೆ ಗಂಭೀರ್ ವಿಷಾದ ವ್ಯಕ್ತಪಡಿಸಿದ್ದಾರೆ.

ಕೆಕೆಆರ್ ಮಾಜಿ ನಾಯಕ ಸೂರ್ಯ ಅವರ ನಿಜವಾದ ಸಾಮರ್ಥ್ಯ ಮತ್ತು ಆದರ್ಶ ಬ್ಯಾಟಿಂಗ್ ಸ್ಥಾನವನ್ನು ಗುರುತಿಸಲು ವಿಫಲರಾಗಿದ್ದಾರೆ ಎಂದು ಒಪ್ಪಿಕೊಂಡರು. ಇದು ಕೆಕೆಆರ್​ ಜತೆಗಿನ ಅವರ ನಾಯಕತ್ವದ ಅವಧಿಯಿಂದ ಅತಿದೊಡ್ಡ ತಪ್ಪು ಎಂದು ಹೇಳಿದರು. ಕೆಕೆಆರ್ ತಂಡವು ಸೂರ್ಯಕುಮಾರ್ ಅವರನ್ನು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಬಳಸಿಕೊಳ್ಳಲು ಎಂದಿಗೂ ಸಾಧ್ಯವಾಗಲಿಲ್ಲ ಎಂದು ಗಂಭೀರ್ ಒತ್ತಿ ಹೇಳಿದರು.

ಗೌತಮ್ ಗಂಭೀರ್ ಅತ್ಯುತ್ತಮ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಅದನ್ನು ಜಗತ್ತಿಗೆ ತೋರಿಸುವುದು ನಾಯಕನ ಪಾತ್ರವಾಗಿತ್ತು. ನನ್ನ ಏಳು ವರ್ಷಗಳ ನಾಯಕತ್ವದಲ್ಲಿ ನನ್ನಲ್ಲಿರುವ ಒಂದು ವಿಷಾದವೆಂದರೆ ನಾನು ಮತ್ತು ತಂಡವಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

ಸೂರ್ಯ 3 ನೇ ಕ್ರಮಾಂಕದಲ್ಲಿ ಹೆಚ್ಚು ಪರಿಣಾಮಕಾರಿಯಾಗಿರುತ್ತಿದ್ದರು, ಆದರೆ 7 ನೇ ಕ್ರಮಾಂಕದಲ್ಲಿ ಅಷ್ಟೇ ಉತ್ತಮವಾಗಿದ್ದರು. ನೀವು ಅವರನ್ನು 6 ಅಥವಾ 7 ನೇ ಕ್ರಮಾಂಕದಲ್ಲಿ ಆಡಿಸಬಹುದು ಅಥವಾ ಬೆಂಚ್ ಕಾಯಿಸಬಹುದು. ಯಾವಾಗಲೂ ನಗುತ್ತಿದ್ದರು ಮತ್ತು ತಂಡಕ್ಕಾಗಿ ಪ್ರದರ್ಶನ ನೀಡಲು ಯಾವಾಗಲೂ ಸಿದ್ಧರಾಗಿದ್ದರು ಎಂದು ಹೇಳಿದರು.

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಕೆಕೆಆರ್ ರೆಡ್-ಹಾಟ್ ಫಾರ್ಮ್​ನಲ್ಲಿದ್ದಾರೆ. ಗಂಭೀರ್ ಅವರ ಮಾರ್ಗದರ್ಶನವು ಎರಡು ಬಾರಿಯ ಚಾಂಪಿಯನ್ಸ್​​ನಲ್ಲಿ ಅದ್ಭುತಗಳನ್ನು ಮಾಡುತ್ತಿದೆ, ಈ ಋತುವಿನಲ್ಲಿ ಪ್ಲೇಆಫ್​​ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಕೆಕೆಆರ್​ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.. ಕೆಕೆಆರ್ ತನ್ನ ಕೊನೆಯ ಲೀಗ್ ಪಂದ್ಯವನ್ನು ಮೇ 13 ರಂದು ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ಆಡಲಿದೆ.

Continue Reading

ಪ್ರಮುಖ ಸುದ್ದಿ

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಆರ್​ಸಿಬಿ ಮೊದಲು ಬ್ಯಾಟಿಂಗ್​ಗೆ ಆಹ್ವಾನ ಪಡೆಯಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 187 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಡೆಲ್ಲಿ ತಂಡ 19.1 ಓವರ್​ಗಳಲ್ಲಿ 140 ರನ್​ಗೆ ಆಲ್​ಔಟ್ ಆಯಿತು. ಡೆಲ್ಲಿ ತಂಡಕ್ಕೆ ಇದು 13 ಪಂದ್ಯಗಳಲ್ಲಿ 7ನೇ ಸೋಲಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಸಂಘಟಿತ ಹೋರಾಟ ನೀಡಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (Royal Challengers Banglore) ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ದ 47 ರನ್​ಗಳ ಗೆಲುವು ದಾಖಲಿಸಿದೆ. ಇದು ಆರ್​ಸಿಬಿಗೆ ಹಾಲಿ ಆವೃತ್ತಿಯಲ್ಲಿ ದೊರಕಿದ ಸತತ ಐದನೇ ಹಾಗೂ ಒಟ್ಟು 6ನೇ ಗೆಲುವಾಗಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಫಾಫ್​ ಡು ಪ್ಲೆಸಿಸ್ ಬಳಗ ಪ್ಲೇಆಫ್ ಹಂತಕ್ಕೆ ಏರಬೇಕಾದರೆ ಇನ್ನೊಂದು ಕಡ್ಡಾಯ ಗೆಲುವು ಹಾಗೂ ಇನ್ನೊಂದಿಷ್ಟು ಉಳಿದ ತಂಡಗಳ ಪಂದ್ಯಗಳ ಲೆಕ್ಕಾಚಾರ ಅಗತ್ಯವಿದೆ. ಆದರೆ ಆರ್​ಸಿಬಿ ತಂಡ ಕಳೆದ ಕೆಲವು ಪಂದ್ಯಗಳಲ್ಲಿ ಆಡುತ್ತಿರುವ ರೀತಿ ಮಾತ್ರ ಅಭಿಮಾನಿಗಳಿಗೆ ಸಂತಸ ಉಂಟು ಮಾಡಿದೆ. ಅದೇ ರೀತಿ ಆಟಗಾರರಿಗೆ ಅತಿ ಹೆಚ್ಚು ಉತ್ಸಾಹವನ್ನು ನೀಡಿದೆ. ಅಂತೆಯೇ ತವರಿನ ಮೈದಾನದಲ್ಲಿ ಗೆದ್ದಿರುವುದು ಗೆದ್ದಿರುವುದು ಇಡೀ ಆರ್​ಸಿಬಿ ಪಾಳೆಯದ ಖುಷಿ ಹೆಚ್ಚಿಸಿದೆ.

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಆರ್​ಸಿಬಿ ಮೊದಲು ಬ್ಯಾಟಿಂಗ್​ಗೆ ಆಹ್ವಾನ ಪಡೆಯಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 187 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಡೆಲ್ಲಿ ತಂಡ 19.1 ಓವರ್​ಗಳಲ್ಲಿ 140 ರನ್​ಗೆ ಆಲ್​ಔಟ್ ಆಯಿತು. ಡೆಲ್ಲಿ ತಂಡಕ್ಕೆ ಇದು 13 ಪಂದ್ಯಗಳಲ್ಲಿ 7ನೇ ಸೋಲಾಗಿದೆ.

ಇದನ್ನೂ ಓದಿ: Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

ಮೊದಲು ಬ್ಯಾಟ್ ಮಾಡಿದ ಆರ್​​ಸಿಬಿಗೆ ಉತ್ತಮ ಆರಂಭ ದೊರೆಯಲಿಲ್ಲ. ಫಾಫ್​​ ಡು ಪ್ಲೆಸಿಸ್ ಮತ್ತೆ 6 ರನ್​ಗೆ ಔಟಾದರು. ಅದೇ ರೀತಿ ಉತ್ತಮ ರೀತಿಯಲ್ಲಿ ಬ್ಯಾಟ್​ ಮಾಡುತ್ತಿದ್ದ ವಿರಾಟ್ ಕೊಹ್ಲಿ 27 ರನ್​ಗೆ ವಿಕೆಟ್ ಒಪ್ಪಿಸಿದರು. ಬಳಿಕ ರಜತ್​ ಪಾಟೀದಾರ್​ ಮತ್ತೊಂದು ಅದ್ಭುತ ಪ್ರದರ್ಶನ ನೀಡಿದರು. ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ದ ಅವರು 32 ಎಸೆತಕ್ಕೆ 52 ರನ್​ ಬಾರಿಸಿದರು. ಅವರಿಗೆ ವಿಕ್​ ಜ್ಯಾಕ್ಸ್ ಉತ್ತಮ ಜತೆಯಾಟ ನೀಡಿ 29 ಎಸೆತಕ್ಕೆ 41 ರನ್ ಬಾರಿಸಿ 100 ರನ್ ಗಡಿ ದಾಟಲು ಸಹಾಯ ಮಾಡಿದರು. ಇವರಿಬ್ಬರು ಔಟಾದ ಬಳಿಕ ಆರ್​ಸಿಬಿ ಆಟ ಹೆಚ್ಚು ಹೊತ್ತು ನಡೆಯಲಿಲ್ಲ. ಕ್ಯಾಮೆರೂನ್ ಗ್ರೀನ್​ 32 ರನ್ ಬಾರಿಸಿ ಸ್ಪರ್ಧಾತ್ಮಕ ಮೊತ್ತ ಪೇರಿಸಲು ನೆರವಾದರು. ಮಹಿಪಾಲ್​ ಲಾಮ್ರೋರ್​ 13 ರನ್ ಬಾರಿಸಿದರು.

ಡೆಲ್ಲಿಯ ಕುಸಿತ

ಅರ್​ಸಿಬಿ ತಂಡ ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿತು. ಜತೆಗೆ ಅದೃಷ್ಟವೂ ಆರ್​ಸಿಬಿಯ ಪರವಾಗಿತ್ತು. ಡೇವಿಡ್​ ವಾರ್ನರ್​ 1 ರನ್​ ಗೆ ಔಟಾರೆ ಜೇಕ್​ ಫ್ರೇಸರ್ ಮೆಗ್​ಕುರ್ಕ್​ 21 ರನ್ ಬಾರಿಸಿದ ಹೊರತಾಗಿಯೂ ದುರದೃಷ್ಟದ ರನ್​ಔಟ್​ಗೆ ಒಳಗಾಯಿತು. ಶಾಯ್​ ಹೋಪ್​ 29 ರನ್ ಗೆ ಔಟಾದರೆ ಅಭಿಷೇಕ್​ ಪೊರೆಲ್​ 1ರನ್​ ಗೆ ಸೀಮಿತಗೊಂಡರು. ವಿಕೆಟ್​ಗಳು ಉರುಳುತ್ತಿರುವ ನಡುವೆಯೂ ಹಂಗಾಮಿ ನಾಯಕ ಅಕ್ಷರ್​ ಪಟೇಲ್​ 39 ಎಸೆತಕ್ಕೆ 57 ರನ್ ಬಾರಿಸಿದರು. ಅವರು ಇನಿಂಗ್ಸ್ ಆರ್​ಸಿಬಿಗೆ ಭಯ ಉಂಟು ಮಾಡಿದರೂ ಒತ್ತಡದ ನಡುವೆ ಅವರು ಔಟಾದರು.

ಆರ್​ಸಿಬಿ ಪರ ಯಶ್​ ದಯಾಳ್​ 20 ರನ್​ಗೆ 3 ವಿಕೆಟ್​ ಪಡೆದರೆ ಲಾಕಿ ಫರ್ಗ್ಯೂಸನ್​ 23 ರನ್​ ಗೆ 2 ವಿಕೆಟ್​ ಪಡೆದರು.

Continue Reading
Advertisement
Prajwal Revanna Case Revanna bail plea SPP wants a copy of the court verdict Nagesh said you have to read it yourself
ಕ್ರೈಂ16 mins ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಕೋರ್ಟ್‌ ತೀರ್ಪಿನ ಪ್ರತಿ ಬೇಕೆಂದ SPP; ನೀವೇ ಓದ್ಕೋಬೇಕು ಅಂದ್ರು ನಾಗೇಶ್‌!

Moringa Leaves Health Benefits
ಆರೋಗ್ಯ22 mins ago

Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

Prajwal Revanna Case
ರಾಜಕೀಯ23 mins ago

Prajwal Revanna Case: ದೇವರಾಜೇಗೌಡ 3 ದಿನ ಪೊಲೀಸ್ ಕಸ್ಟಡಿಗೆ; ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನ 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

Karnataka Weather Forecast
ಮಳೆ32 mins ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Overweight man suffering from chest pain, high blood pressure, cholesterol level
ಆರೋಗ್ಯ35 mins ago

Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

Prajwal Revanna Case HD Revanna bail plea arguments and counter arguments
ಕ್ರೈಂ43 mins ago

Prajwal Revanna Case: ಎಚ್‌.ಡಿ. ರೇವಣ್ಣ ಜಾಮೀನು ಅರ್ಜಿಯ ರೋಚಕ ವಾದ – ಪ್ರತಿವಾದ; ಇಲ್ಲಿದೆ ಇಂಚಿಂಚು ಡಿಟೇಲ್ಸ್‌

IPL 2024
ಪ್ರಮುಖ ಸುದ್ದಿ46 mins ago

IPL 2024 : ಡೆಲ್ಲಿ ವಿರುದ್ದ ಗೆದ್ದ ಆರ್​ಸಿಬಿ ತಂಡದ ಸಂಭ್ರಮ ಹೀಗಿತ್ತು, ಇಲ್ಲಿದೆ ವಿಡಿಯೊ

Modi Roadshow Live
ದೇಶ51 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Viral Video
ದೇಶ55 mins ago

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Naxals
ದೇಶ1 hour ago

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ32 mins ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ51 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ12 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ13 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ24 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ1 day ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

ಟ್ರೆಂಡಿಂಗ್‌