T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು - Vistara News

ಕ್ರೀಡೆ

T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು

T20 World Cup 2024: ವಿರಾಟ್​ ಕೊಹ್ಲಿ ಮತ್ತು ಸಂಜು ಸ್ಯಾಮ್ಸನ್​ ತಮ್ಮ ವೈಯಕ್ತಿಕ ಕಾರಣಗಳಿಂದ ತಂಡ ಸೇರುವುದು ಕೊಂಚ ತಡವಾಗಲಿದೆ ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ. ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

VISTARANEWS.COM


on

T20 World Cup 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟಿ20 ವಿಶ್ವಕಪ್(T20 World Cup 2024)​ ಆಡಲು ಭಾರತ ತಂಡದ 2ನೇ ಬ್ಯಾಚ್​ ಕೂಡ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸಿದೆ. ಸೋಮವಾರ ತಡರಾತ್ರಿ ಯಜುವೇಂದ್ರ ಚಹಲ್(Yuzvendra Chahal)​, ಅವೇಶ್​ ಖಾನ್(Avesh Khan)​ ಮತ್ತು ಯಶಸ್ವಿ ಜೈಸ್ವಾಲ್(Yashasvi Jaiswal)​ ಮೂವರು ಮುಂಬೈಯಿಂದ ಪ್ರಯಾಣಿಸಿದರು. ಮೂರನೇ ಬ್ಯಾಚ್​ ಇಂದು ಪ್ರಯಾಣಿಸಲಿದೆ. ಈಗಾಗಲೇ ಮೊದಲ ಬ್ಯಾಚ್​ನಲ್ಲಿ ಪ್ರಯಾಣಿಸಿದ ತಂಡದ ನಾಯಕ ರೋಹಿತ್​ ಶರ್ಮ, ಕೋಚ್​ ರಾಹುಲ್​ ದ್ರಾವಿಡ್​, ರಿಷಭ್​ ಪಂತ್​, ಕುಲ್​ದೀಪ್​ ಯಾದವ್​, ಜಸ್​ಪ್ರೀತ್​ ಬುಮ್ರಾ ಸೇರಿ ಬಹುತೇಕ ಆಟಗಾರರು ನ್ಯೂಯಾರ್ಕ್​ಗೆ ತಲುಪಿದ್ದಾರೆ. ಆಟಗಾರರು ತಲುಪಿದ ವಿಚಾರವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ವಿಡಿಯೊ ಹಂಚಕೊಳ್ಳುವ ಮೂಲಕ ತಿಳಿಸಿದೆ.

ವಿರಾಟ್​ ಕೊಹ್ಲಿ ಮತ್ತು ಸಂಜು ಸ್ಯಾಮ್ಸನ್​ ತಮ್ಮ ವೈಯಕ್ತಿಕ ಕಾರಣಗಳಿಂದ ತಂಡ ಸೇರುವುದು ಕೊಂಚ ತಡವಾಗಲಿದೆ ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ. ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊಹ್ಲಿ ಮೇ 30ಕ್ಕೆ ಚಾರ್ಟರ್​ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ ಎನ್ನಲಾಗಿದೆ.

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ನೀಡಲಾಗಿದೆ. ಚಹಲ್​ ಇದುವರೆಗೆ ಭಾರತ ಪರ 72 ಏಕದಿನ ಪಂದ್ಯಗಳಿಂದ 121 ವಿಕೆಟ್​, 80 ಟಿ20 ಆಡಿ 96 ವಿಕೆಟ್​ ಕಡೆವಿದ್ದಾರೆ. ಇದುವರೆಗೂ ಟೆಸ್ಟ್​ ಕ್ರಿಕೆಟ್​ ಆಡಿಲ್ಲ.


2ನೇ ಬ್ಯಾಚ್​ನಲ್ಲಿ ಪ್ರಯಾಣಿಸಿದ ಯಜುವೇಂದ್ರ ಚಹಲ್​, ಅವೇಶ್​ ಖಾನ್​ ಮತ್ತು ಯಶಸ್ವಿ ಜೈಸ್ವಾಲ್ ರಾಜಸ್ಥಾನ್​ ರಾಯಲ್ಸ್​ ತಂಡದ ಆಟಗಾರರಾಗಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧದ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿತ್ತು.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

D. K. Shivakumar: ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿದ ಡಿಸಿಎಂ ಶಿವಕುಮಾರ್‌

D. K. Shivakumar: ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್(India vs England Semi Final 2)​ ತಂಡವನ್ನು 68 ರನ್​ಗಳಿಂದ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌(D. K. Shivakumar) ಶುಭ ಹಾರೈಸಿದ್ದಾರೆ.

VISTARANEWS.COM


on

D. K. Shivakumar
Koo

ಬೆಂಗಳೂರು: ಹಾಲಿ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್(India vs England Semi Final 2)​ ತಂಡವನ್ನು 68 ರನ್​ಗಳಿಂದ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌(D. K. Shivakumar) ಶುಭ ಹಾರೈಸಿದ್ದಾರೆ. ಜತೆಗೆ ಟೀಮ್​ ಇಂಡಿಯಾದ(team india) ಸಾಧನೆಯನ್ನು ಕೊಂಡಾಡಿದ್ದಾರೆ.

“ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಟೀಂ ಇಂಡಿಯಾ ಆಟಗಾರರ ಗಮನಾರ್ಹ ಪ್ರದರ್ಶನಕ್ಕೆ ಅಭಿನಂದನೆಗಳು!. ಟೂರ್ನಿಯುದ್ದಕ್ಕೂ ನೀವು ತೋರಿದ ಸಂಘಟಿತ ಪ್ರದರ್ಶನೇ ಈ ಯಶಸ್ಸಿಗೆ ಕಾರಣ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿಯೂ ಇದೇ ಸ್ಫೂರ್ತಿಯಿಂದ ಆಡುವ ಮೂಲಕ ಚಾಂಪಿಯನ್​ ಪಟ್ಟ ಅಲಂಕರಿಸುವಂತಾಗಲಿ. ಫೈನಲ್‌ ಪಂದ್ಯಕ್ಕೆ ಶುಭ ಹಾರೈಸುತ್ತೇನೆ” ಎಂದು ಭಾರತ ತಂಡ ಫೋಟೊ ಹಂಚಿಕೊಂಡು ಟ್ವೀಟ್​ ಮಾಡಿದ್ದಾರೆ.

ಗುರುವಾರ ತಡರಾತ್ರಿ ಗಯಾನದ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು.

ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು. ಈ ಬಾರಿ ಭಾರತ ತಂಡ ಇಂಗ್ಲೆಂಡ್​ ಮಣಿಸಿ ಫೈನಲ್​ ಪ್ರವೇಶಿಸಿತು. ಅಲ್ಲಿಗೆ ಲೆಕ್ಕ ಚುಕ್ತಾ ಗೊಂಡಿತು. ಶನಿವಾರ ಬಾರ್ಬಡೋಸ್​ನಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

ಡಿಕೆಶಿ ಮುಖ್ಯಮಂತ್ರಿ ಮಾಡಿ ಎಂದು ಸಿಎಂಗೆ ಒತ್ತಾಯಿಸಿದ ಚಂದ್ರಶೇಖರ ಸ್ವಾಮೀಜಿ


ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದೆ ವೇದಿಕೆಯ ಮೇಲೆಯೇ ಬೇಡಿಕೆ ಇಟ್ಟ ಪ್ರಸಂಗ ನಿನ್ನೆ(ಗುರುವಾರ) ನಡೆದ ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ನಡೆದಿದೆ. ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಅವರು ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ.

ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಡಿಕೆಶಿ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್‌ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಹಲವಾರು ಕಾಂಗ್ರೆಸ್‌ ನಾಯಕರು, ಇನ್ನಷ್ಟು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ವಾದ ಮುಂದಿಟ್ಟಿದ್ದಾರೆ. ಇದೀಗ, ಒಕ್ಕಲಿಗರೊಬ್ಬರು ಸಿಎಂ ಆಗಬೇಕು ಎಂದು ಒಕ್ಕಲಿಗ ಸ್ವಾಮೀಜಿಗಳೇ ಹೇಳುವ ಮೂಲಕ ಈ ಬಣ ರಾಜಕೀಯಕ್ಕೆ ಇನ್ನಷ್ಟು ತುಪ್ಪ ಸುರಿದಂತಾಗಿದೆ.

Continue Reading

ಕ್ರೀಡೆ

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

Paris Olympics 2024: ಐಒಸಿ ಮುಖ್ಯಸ್ಥ ಥಾಮಸ್ ಬಾಚ್ ಅವರ ಪ್ರೋತ್ಸಾಹದಿಂದ ಭಾರತವು 2036ರ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲಿದೆ. ಆದರೆ, ಸೌದಿ ಅರೇಬಿಯಾ, ಇಂಡೊನೇಷ್ಯಾ ಮತ್ತು ಕತಾರ್ ನಂತಹ ಪ್ರಬಲ ದೇಶಗಳಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

VISTARANEWS.COM


on

Paris Olympics 2024
Koo

ನವದೆಹಲಿ: ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ಭಾರತೀಯ ಆ್ಯತ್ಲೀಟ್‌ಗಳಿಗೆ(athletes) ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu) ಅವರು ಶುಭಾಶಯ ಕೋರಿದ್ದಾರೆ. ಪದಕ ಗೆದ್ದು ದೇಶದ ಕೀರ್ತಿ ಹೆಚ್ಚಿಸುವಂತಾಗಲಿ ಎಂದು ಹಾರೈಸಿದ್ದಾರೆ. 21 ಶೂಟರ್‌ಗಳು ಸೇರಿದಂತೆ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಪ್ಯಾರಿಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ.

ಗುರುವಾರ ನಡೆದ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ವೇಳೆ ಅವರು ಎಲ್ಲ ಕ್ರೀಡಾಪಟುಗಳಿಗೆ ಶುಭ ಹಾರೈಸುವ ಜತೆಗೆ 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸುವ ದೇಶದ ಧೈರ್ಯಶಾಲಿ ಪ್ರಯತ್ನವನ್ನು ಬೆಂಬಲಿಸಿದರು.

‘ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವಿಗೆ ನನ್ನ ಶುಭ ಹಾರೈಕೆಗಳು. ಈ ಸಾಧನೆಗಳನ್ನು ಮತ್ತಷ್ಟು ಮುಂದುವರಿಸಲು, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ) 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿದೆ’ ಎಂದು ಹೇಳಿದರು.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

ಐಒಸಿ ಮುಖ್ಯಸ್ಥ ಥಾಮಸ್ ಬಾಚ್ ಅವರ ಪ್ರೋತ್ಸಾಹದಿಂದ ಭಾರತವು 2036ರ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲಿದೆ. ಆದರೆ, ಸೌದಿ ಅರೇಬಿಯಾ, ಇಂಡೊನೇಷ್ಯಾ ಮತ್ತು ಕತಾರ್ ನಂತಹ ಪ್ರಬಲ ದೇಶಗಳಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸಲು ಇದರ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

ಇಂಡಿಯಾ ಹೌಸ್​ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ(Nita Ambani) ಹೇಳಿದ್ದಾರೆ. ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ. ಅಮೆರಿಕಾದ ಲಾಸ್ ಏಂಜಲಿಸ್​ನಲ್ಲಿ 2028ರಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರವೂ ಪ್ರಮುಖವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ(International Olympic Committee Session) ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.

Continue Reading

ಕ್ರೀಡೆ

Rohit Sharma: ಕೊಹ್ಲಿ, ಧೋನಿ ಬಳಿಕ ನಾಯಕನಾಗಿ ವಿಶೇಷ ದಾಖಲೆ ಬರೆದ ರೋಹಿತ್​

Rohit Sharma: ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ ಅವರು 37 ರನ್​ ಪೂರ್ತಿಗೊಳಿಸುತ್ತಿದ್ದಂತೆ ಭಾರತ ತಂಡದ ನಾಯಕನಾಗಿ ಎಲ್ಲ ಮಾದರಿಯ ಕ್ರಿಕೆಟ್​ ಸೇರಿ 5 ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಭಾರತದ 5ನೇ ನಾಯಕ ಎನಿಸಿಕೊಂಡರು.

VISTARANEWS.COM


on

Rohit Sharma
Koo

ಪ್ರೊವಿಡೆನ್ಸ್‌: ಇಂಗ್ಲೆಂಡ್​ ವಿರುದ್ಧ ನಡೆದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಅರ್ಥಶತಕ ಬಾರಿಸಿದ ಟೀಮ್​ ಇಂಡಿಯಾ ಕಪ್ತಾನ ರೋಹಿತ್​ ಶರ್ಮ(Rohit Sharma) ಅವರು ವಿರಾಟ್​ ಕೊಹ್ಲಿ(Virat Kohli), ಮಹೇಂದ್ರ ಸಿಂಗ್​ ಧೋನಿ(MS Dhoni) ಜತೆಗಿನ ದಾಖಲೆಯೊಂದರ ಎಲೈಟ್​ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

ಗುರುವಾರ ತಡರಾತ್ರಿ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು.

ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ ಅವರು 37 ರನ್​ ಪೂರ್ತಿಗೊಳಿಸುತ್ತಿದ್ದಂತೆ ಭಾರತ ತಂಡದ ನಾಯಕನಾಗಿ ಎಲ್ಲ ಮಾದರಿಯ ಕ್ರಿಕೆಟ್​ ಸೇರಿ 5 ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಭಾರತದ 5ನೇ ನಾಯಕ ಎನಿಸಿಕೊಂಡರು. ವಿರಾಟ್​ ಕೊಹ್ಲಿ(12883) ಮೊದಲ ಸ್ಥಾನದಲ್ಲಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್​(11207) ದ್ವಿತೀಯ ಸ್ಥಾನಿಯಾಗಿದ್ದಾರೆ.  

ಇದನ್ನೂ ಓದಿ Rohit Sharma: ತಂಡ ಫೈನಲ್​ ಪ್ರವೇಶಿಸಿದ ಖುಷಿಯಲ್ಲಿ ಕಣ್ಣೀರು ಹಾಕಿದ ರೋಹಿತ್​; ವಿಡಿಯೊ ವೈರಲ್​

5 ರನ್​ ಗಳಿಸಿದ್ದ ವೇಳೆ ಫಿಲ್ ಸಾಲ್ಟ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದ ರೋಹಿತ್, ಇದರ ಸಂಪೂರ್ಣ ಲಾಭವೆತ್ತಿದರು. 33 ಎಸೆತಗಳಿಂದ ಅರ್ಧಶತಕ ಬಾರಿಸಿ ಮಿಂಚಿದರು. ಇದು ರೋಹಿತ್​ ಅವರ 32ನೇ ಅಂತಾರಾಷ್ಟ್ರೀಯ ಟಿ20 ಅರ್ಧಶತಕ. ಅಂತಿಮವಾಗಿ 6 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 57 ರನ್​ ಗಳಿಸಿ ಆದೀಲ್​ ರಶೀದ್​ ಓವರ್​ನಲ್ಲಿ ಕ್ಲೀನ್​ ಬೌಲ್ಡ್​ ಆದರು.

ಭಾರತ ಪರ 5 ಸಾವಿರ ರನ್​ ಗಳಿಸಿದ ನಾಯಕರು


ವಿರಾಟ್​ ಕೊಹ್ಲಿ-12,883 ರನ್​

ಮಹೇಂದ್ರ ಸಿಂಗ್​ ಧೋನಿ-11,207 ರನ್​

ಮೊಹಮ್ಮದ್​ ಅಜರುದ್ದೀನ್​-8,095 ರನ್​

ಸೌರವ್​ ಗಂಗೂಲಿ-7,643 ರನ್​

ರೋಹಿತ್​ ಶರ್ಮ-5,033* ರನ್​

ಜಯವರ್ಧನೆ ದಾಖಲೆ ಪತನ

ರೋಹಿತ್ ಈ ಪಂದ್ಯದಲ್ಲಿ​ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು. ಜಯವರ್ಧನೆ 111 ಬೌಂಡರಿ ಬಾರಿಸಿದ್ದರು. ಈ ದಾಖಲೆಯನ್ನು ರೋಹಿತ್​ ಹಿಂದಿಕ್ಕಿದ್ದಾರೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ರೋಹಿತ್​ ಅವರ ಬೌಂಡರಿಗಳ ಸಂಖ್ಯೆ 91 ಇತ್ತು. ಸದ್ಯ ರೋಹಿತ್​ ಅವರ ಬೌಂಡರಿಗಳ ಸಂಖ್ಯೆ 113*ಕ್ಕೆ ಏರಿಕೆಯಾಗಿದೆ. ಫೈನಲ್​ ಪಂದ್ಯವನ್ನು ಆಡಲಿರುವ ಕಾರಣ ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು.

Continue Reading

ಕ್ರಿಕೆಟ್

Rohit Sharma: ತಂಡ ಫೈನಲ್​ ಪ್ರವೇಶಿಸಿದ ಖುಷಿಯಲ್ಲಿ ಕಣ್ಣೀರು ಹಾಕಿದ ರೋಹಿತ್​; ವಿಡಿಯೊ ವೈರಲ್​

Rohit Sharma: ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು.

VISTARANEWS.COM


on

Koo

ಪ್ರೊವಿಡೆನ್ಸ್‌: ಮಳೆಯಿಂದ ಅಡಚಣೆಯಾದ ಗುರುವಾರ ತಡರಾತ್ರಿ ನಡೆದ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್​ ತಂಡವನ್ನು 68 ರನ್​ಗಳಿಂದ ಬಗ್ಗುಬಡಿದು ಫೈನಲ್​ ಪ್ರವೇಶಿಸಿತು. ತಂಡ ಫೈನಲ್​ ಪ್ರವೇಶಿಸುತ್ತಿದ್ದಂತೆ ನಾಯಕ ರೋಹಿತ್​ ಶರ್ಮ(Rohit Sharma) ಅವರು ಈ ಸಂತಸದಲ್ಲಿ ಆನಂದಭಾಷ್ಪ ಸುರಿಸಿದರು. ಈ ವಿಡಿಯೊ ವೈರಲ್​ ಆಗಿದೆ.

2007ರಿಂದ ಎಲ್ಲ ಟಿ20 ವಿಶ್ವಕಪ್ ಆಡಿರುವ ರೋಹಿತ್​ ಶರ್ಮ ತಮ್ಮ ನಾಯಕತ್ವದಲ್ಲಿ ಇದೇ ಮೊದಲ ಬಾರಿಗೆ ತಂಡ ಫೈನಲ್​ ಪ್ರವೇಶಿಸಿತು. ಜತೆಗೆ 10 ವರ್ಷಗಳ ಬಳಿಕ ಭಾರತ ತಂಡ ಈ ಟೂರ್ನಿಯಲ್ಲಿ ಪ್ರಶಸ್ತಿ ಸುತ್ತಿಗೇರಿತು. ಈ ಎಲ್ಲ ಖುಷಿಯಿಂದ ರೋಹಿತ್​ ಕಣ್ಣೀರು ಸುರಿಸಿದರು. ರೋಹಿತ್​ ಕಣ್ಣೀರು ಹಾಕುತ್ತಿದ್ದ ವೇಳೆ ಸಹ ಆಟಗಾರ ವಿರಾಟ್​ ಬೆನ್ನು ತಟ್ಟಿ ಬೆಂಬಲ ಸೂಚಿಸಿದ್ದು ಕೂಡ ಈ ವಿಡಿಯೊದಲ್ಲಿ ನೋಡಬಹುದಾಗಿದೆ. ರೋಹಿತ್​ ಅವರಿಗೆ ಈ ಬಾರಿಯ ಟಿ20 ವಿಶ್ವಕಪ್​ ಬಹುತೇಕ ವಿದಾಯದ ಟೂರ್ನಿಯಾಗಿದೆ. ಅಂತಿಮ ಹಂತದ ಅವಕಾಶದಲ್ಲಿ ಕಪ್​ ಗೆಲ್ಲಲಿದ್ದಾರಾ ಎಂದು ಕಾದು ನೋಡಬೇಕಿದೆ. ಶನಿವಾರ ಬಾರ್ಬಡೋಸ್​ನಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾದ ಸವಾಲು ಎದುರಿಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

ದಾಖಲೆ ಬರೆದ ರೋಹಿತ್​


ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರು ಈ ಪಂದ್ಯದಲ್ಲಿ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ದಾಖಲೆ ನಿರ್ಮಿಸಿದರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ಆಟಗಾರ ಮಹೇಲ ಜಯವರ್ಧನೆ(111 ಬೌಂಡರಿ) ಹೆಸರಿನಲ್ಲಿತ್ತು. 37 ರನ್​ ಪೂರ್ತಿಗೊಳಿಸುತ್ತಿದ್ದಂತೆ ಭಾರತ ತಂಡದ ನಾಯಕನಾಗಿ ಎಲ್ಲ ಮಾದರಿಯ ಕ್ರಿಕೆಟ್​ ಸೇರಿ 5 ಸಾವಿರ ರನ್​ ಪೂರೈಸಿದರು. ಈ ಸಾಧನೆ ಮಾಡಿದ ಭಾರತದ 5ನೇ ನಾಯಕ ಎನಿಸಿಕೊಂಡರು. ವಿರಾಟ್​ ಕೊಹ್ಲಿ(12883) ಮೊದಲ ಸ್ಥಾನದಲ್ಲಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್​(11207) ದ್ವಿತೀಯ ಸ್ಥಾನಿಯಾಗಿದ್ದಾರೆ.  

ಸೇಡು ತೀರಿಸಿಕೊಂಡ ಭಾರತ


ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ 2022ರ ಟಿ20 ವಿಶ್ವಕಪ್‌ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು. ಅಂದು ಅಡಿಲೇಡ್‌ ಓವಲ್‌ನಲ್ಲಿ ನಡೆದಿದ್ದ ಸೆಮಿ ಪಂದ್ಯದಲ್ಲಿ ಇಂಗ್ಲೆಂಡ್‌ 10 ವಿಕೆಟ್‌ಗಳಿಂದ ಭರ್ಜರಿಯಾಗಿ ರೋಹಿತ್‌ ಪಡೆಯನ್ನು ಮಗುಚಿ ಫೈನಲ್​ ಪ್ರವೇಶಿಸಿತ್ತು. ಈ ಬಾರಿ ಭಾರತ ತಂಡ ಇಂಗ್ಲೆಂಡ್​ ಮಣಿಸಿ ಫೈನಲ್​ ಪ್ರವೇಶಿಸಿತು. ಅಲ್ಲಿಗೆ ಲೆಕ್ಕ ಚುಕ್ತಾ ಗೊಂಡಿತು.

ಇಲ್ಲಿನ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ರೋಹಿತ್​ ಶರ್ಮ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 171 ರನ್​ ಬಾರಿಸಿ ಸವಾಲೊಡ್ಡಿತು. ಜವಾಬಿತ್ತ ಇಂಗ್ಲೆಂಡ್​ ನಾಟಕೀಯ ಕುಸಿತ ಕಂಡು 16.4 ಓವರ್​ಗಳಲ್ಲಿ 103 ರನ್​ಗೆ ಸರ್ವಪತನ ಕಂಡಿತು.

Continue Reading
Advertisement
Actor Darshan support by singer dr shamitha malnad
ಸ್ಯಾಂಡಲ್ ವುಡ್49 seconds ago

Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

airtel price hike
ಪ್ರಮುಖ ಸುದ್ದಿ5 mins ago

Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

murder Case in Kalaburagi
ಕಲಬುರಗಿ7 mins ago

Murder case : ಗಾಣಗಾಪುರ ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

Actor Darshan special appeal to the fans
ಸ್ಯಾಂಡಲ್ ವುಡ್22 mins ago

Actor Darshan: ಪರಪ್ಪನ ಅಗ್ರಹಾರದಿಂದಲೇ ಅಭಿಮಾನಿಗಳ ಬಳಿ ದರ್ಶನ್‌ ವಿಶೇಷ ಮನವಿ; ಏನದು?

D. K. Shivakumar
ಕ್ರೀಡೆ26 mins ago

D. K. Shivakumar: ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿದ ಡಿಸಿಎಂ ಶಿವಕುಮಾರ್‌

Self Harming
ಕ್ರೈಂ28 mins ago

Self Harming : ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

Gold Rate Today
ವಾಣಿಜ್ಯ38 mins ago

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ದರ?

Sonu Srinivas Gowda harassed by darshan fans
ಸ್ಯಾಂಡಲ್ ವುಡ್41 mins ago

Sonu Srinivas Gowda: ದರ್ಶನ್‌ ಬಗ್ಗೆ ಮಾತನಾಡಿಲ್ಲ ಎಂದು ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌!

Paris Olympics 2024
ಕ್ರೀಡೆ1 hour ago

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

haveri accident tt
ಪ್ರಮುಖ ಸುದ್ದಿ1 hour ago

Haveri Accident: ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು19 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ23 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌