T20 World Cup | ಅಫಘಾನಿಸ್ತಾನ ವಿರುದ್ಧ ಗೆದ್ದರೂ ಆಸ್ಟೇಲಿಯಾಗೆ ಇಲ್ಲ ಸೆಮಿಫೈನಲ್ ಗ್ಯಾರಂಟಿ - Vistara News

Latest

T20 World Cup | ಅಫಘಾನಿಸ್ತಾನ ವಿರುದ್ಧ ಗೆದ್ದರೂ ಆಸ್ಟೇಲಿಯಾಗೆ ಇಲ್ಲ ಸೆಮಿಫೈನಲ್ ಗ್ಯಾರಂಟಿ

ಟಿ20 ವಿಶ್ವ ಕಪ್​ನ ಶುಕ್ರವಾರದ ಪಂದ್ಯದಲ್ಲಿ ಅಫಘಾನಿಸ್ತಾನ ತಂಡ ಆಸ್ಟ್ರೇಲಿಯಾ ವಿರುದ್ಧ ಕೇವಲ 4 ರನ್‌ ಅಂತರದಿಂದ ಸೋಲನುಭವಿಸಿದೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಡಿಲೇಡ್​: ಆಸ್ಟ್ರೇಲಿಯಾ ವಿರುದ್ಧ ಚೊಚ್ಚಲ ಟಿ20 ವಿಶ್ವ ಕಪ್(T20 World Cup )​ ಪಂದ್ಯವನ್ನಾಡಿದ ಅಫಘಾನಿಸ್ತಾನ ತಂಡ ಕೊನೆಯ ಎಸೆತದವರೆಗೂ ಕಠಿಣ ಹೋರಾಟ ನೀಡಿ, ಕೇವಲ 4 ರನ್‌ ಅಂತರದಿಂದ ಸೋಲನುಭವಿಸಿತು. ಆಸ್ಟ್ರೇಲಿಯಾ ಈ ಗೆಲುವಿನೊಂದಿಗೆ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಗೆದ್ದು 7 ಅಂಕದೊಂದಿಗೆ ಎ ಗ್ರೂಪ್​ನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇದರೊಂದಿಗೆ ಹಾಲಿ ಚಾಂಪಿಯನ್ ತನ್ನ ಸೆಮಿಫೈನಲ್​ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ, ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಸೋತರಷ್ಟೇ ಕಾಂಗರೂಗಳು ಸುಗಮವಾಗಿ ಸೇಮಿಸ್​ಗೆ ಎಂಟ್ರಿ ಕೊಡಲಿದ್ದಾರೆ. ಒಂದು ವೇಳೆ ಇಂಗ್ಲೆಂಡ್ ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ರನ್​ರೇಟ್​ ಆಧಾರದಲ್ಲಿ ಸೆಮಿಫೈನಲ್ ಪ್ರವೇಶಿಸಲಿದೆ.

ಅಡಿಲೇಡ್​ ಓವಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಟಿ20 ವಿಶ್ವ ಕಪ್​ನ ಸೂಪರ್​-12 ಮುಖಾಮುಖಿಯಲ್ಲಿ ಟಾಸ್​ ಸೋತು ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 168 ರನ್​ ಗಳಿಸಿತು. ಸುಲಭ ಮೊತ್ತದ ಗುರಿ ಬೆನ್ನಟ್ಟಿದ ಅಫಘಾನಿಸ್ತಾನ ತಂಡ ತನ್ನ ಪಾಲಿನ ಓವರ್​ನಲ್ಲಿ 7 ವಿಕೆಟ್​ಗೆ 164 ರನ್​ ಗಳಿಸಲಷ್ಟೇ ಶಕ್ತವಾಯಿತು.

ಅಫಘಾನಿಸ್ತಾನ ಬ್ಯಾಟ್ಸ್‌ಮನ್‌ಗಳ ಆರಂಭಿಕ ಅಬ್ಬರ
ಗುರಿ ಬೆನ್ನಟ್ಟಿದ ಅಫಘಾನಿಸ್ತಾನ​ ತಂಡ ಆರಂಭದಿಂದಲೇ ಬಿರುಸಿನ ಆಟಕ್ಕೆ ಮುಂದಾಯಿತು. ರಹಮಾನುಲ್ಲಾ ಗುರ್ಬಾಜ್(30) ಅವರ ಅಬ್ಬರದ ಆರಂಭಿಕ ಬಲ ಹಾಗೂ ಬಳಿಕ ಗುಲ್ಬುದಿನ್ ನೈಬ್(39) ಮತ್ತು ಇಬ್ರಾಹಿಂ ಜದ್ರಾನ್(26) ಅವರ 59 ರನ್‌ಗಳ ಅತ್ಯುತ್ತಮ ಜತೆಯಾಟ ಅಫ್ಘಾನಿಸ್ತಾನಕ್ಕೆ ಗೆಲುವಿನ ಭರವಸೆ ನೀಡಿತು. ಆದರೆ ಆಸ್ಟ್ರೇಲಿಯಾ ಒಂದು ಓವರ್‌ನಲ್ಲಿ ಮೂರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಪುನರಾಗಮನ ಮಾಡಿತು. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಮಿಂಚಿನ ಎಸೆತದಲ್ಲಿ ಗುಲ್ಬುದಿನ್ ನೈಬ್ ರನ್ ಔಟ್ ಆದರೆ, ಅದೇ ಓವರ್‌ನಲ್ಲಿ ಸ್ಪಿನ್ನರ್ ಆ್ಯಡಂ ಜಂಪಾ ಮತ್ತೆರಡು ವಿಕೆಟ್ ಕಿತ್ತರು. ಉತ್ತಮವಾಗಿ ಆಡುತ್ತಿದ್ದ ಅಫಘಾನಿಸ್ತಾನ 99ಕ್ಕೆ 5 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದ ಸ್ಟಾರ್ ಲೆಗ್ ಸ್ಪಿನ್ನರ್ ರಶೀದ್ ಖಾನ್ ಕೊನೆಯ ಹಂತದಲ್ಲಿ ಮಿಂಚಿನ ಬ್ಯಾಟಿಂಗ್​ ಮೂಲಕ ಹೊರಾಟವನ್ನು ಜಾರಿಯಲ್ಲಿರಿಸಿದರು. ಕೇವಲ 23 ಎಸೆತಗಳಲ್ಲಿ ಅಜೇಯ 48 ರನ್ ಗಳಿಸಿ ತಂಡವನ್ನು ಗೆಲುವಿನ ಸಮೀಪಕ್ಕೆ ಕೊಂಡೊಯ್ದರು. ಆದರೆ ಕೊನೆಯ ಓವರ್‌ ಎಸೆದ ಮಾರ್ಕಸ್ ಸ್ಟೋಯ್ನಿಸ್​ ಅವರು ರಶೀದ್​ ಅಬ್ಬರದ ನಡುವೆಯೂ ಆಸ್ಟ್ರೇಲಿಯಾದ ಮಾನ ಕಾಪಾಡುವಲ್ಲಿ ಯಶಸ್ವಿಯಾದರು.

ಇದಕ್ಕೂ ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ಪರ ಗ್ಲೆನ್​ ಮ್ಯಾಕ್ಸ್​ವೆಲ್​(54), ಮಾರ್ಕಸ್ ಸ್ಟೋಯ್ನಿಸ್(25), ಮಿಚೆಲ್​ ಮಾರ್ಷ್​(45) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಫಘಾನಿಸ್ತಾನ ಪರ ನವೀನ್​ ಉಲ್​ ಹಕ್​ ಮೂರು ವಿಕೆಟ್​ ಕಿತ್ತು ಮಿಂಚಿದರು.

ಸಂಕ್ಷಿಪ್ತ ಸ್ಕೋರ್​:

ಆಸ್ಟ್ರೇಲಿಯಾ: 20 ಓವರ್​ಗಳಲ್ಲಿ 8 ವಿಕೆಟ್​ಗೆ 168(ನ್​ ಮ್ಯಾಕ್ಸ್​ವೆಲ್​ 54, ಮಿಚೆಲ್​ ಮಾರ್ಷ್​ 45, ನವೀನ್​ ಉಲ್​ ಹಕ್​ 21ಕ್ಕೆ3)

ಅಫಘಾನಿಸ್ತಾನ: 20 ಓವರ್​ಗಳಲ್ಲಿ 7 ವಿಕೆಟ್​ಗೆ 164(ರಶೀದ್ ಖಾನ್ ಅಜೇಯ 48, ಗುಲ್ಬುದಿನ್ ನೈಬ್ 39, ಜಂಪಾ 22ಕ್ಕೆ2, ಜೋಶ್​ ಹ್ಯಾಜಲ್​ವುಡ್​ 33ಕ್ಕೆ 2).

ಇದನ್ನೂ ಓದಿ | Team India | ಮೆಲ್ಬೋರ್ನ್​ ತಲುಪಿದ ರೋಹಿತ್​ ಪಡೆ; ಶುಕ್ರವಾರದಿಂದ ಅಭ್ಯಾಸ ಆರಂಭ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

COMEDK UGET 2024: ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಸಲಾಗುವ ಈ ಪ್ರವೇಶ ಪರೀಕ್ಷೆ ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಹೆದ್ದಾರಿಯಾಗಿದೆ. ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.

VISTARANEWS.COM


on

COMEDK UGET 2024
Koo

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) ನಡೆಸಿರುವ 2024ರ ವರ್ಷದ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಗೊಳ್ಳಲಿದೆ . COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್​​ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ.

ಕರ್ನಾಟಕದ 150 ಪ್ರೈವೇಟ್‌ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಶುಕ್ರವಾರ ಅವರ ಭವಿಷ್ಯ ನಿರ್ಧಾರ ಆಗಲಿದೆ. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

  • ಹಂತ 1: ಕಾಮೆಡ್‌ಕೆ ಪರೀಕ್ಷಾ ಪೋರ್ಟಲ್‌ಗೆ ಭೇಟಿ ನೀಡಿ.
  • ಹಂತ 2: COMEDK UGET 2024 ಫಲಿತಾಂಶದ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ – ಅಪ್ಲಿಕೇಶನ್ ಸಂಖ್ಯೆ ಅಥವಾ ಬಳಕೆದಾರ ID ಮತ್ತು ಪಾಸ್‌ವರ್ಡ್ ಮತ್ತು ನಂತರ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.
  • ಹಂತ 4: COMEDK UGET ಫಲಿತಾಂಶ 2024 ಪರದೆಯ ಮೇಲೆ ಕಾಣಿಸುತ್ತದೆ.
  • ಹಂತ 5: ಕೀ ಉತ್ತರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭ

ಮೇ 24ರಂದು ಕಾಮೆಡ್‌ಕೆ ರಿಸಲ್ಟ್‌ ಪ್ರಕಟವಾಗಿ ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭವಾಗಲಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಇದನ್ನೂ ಓದಿ: Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

ಪ್ರತಿ ವರ್ಷ ಮೇ ತಿಂಗಳಲ್ಲಿ ಕಾಮೆಡ್‌-ಕೆ ಪರೀಕ್ಷೆ

ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ.

Continue Reading

ಪ್ರಮುಖ ಸುದ್ದಿ

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

IPL 2024: ಆರ್​ಸಿಬಿ ಅಭಿಮಾನಿಗಳ ತಮ್ಮ ವಿರುದ್ದ ಗೂಂಡಾಗಿರಿ ಮಾಡಿರುವ ಬಗ್ಗೆ ಸಿಎಸ್​​ಕೆ ಅಭಿಮಾನಿಗಳು ದೂರು ನೀಡಿದ್ದು. ಇದು ಒಂದು ಹಂತದಲ್ಲಿ ಎಕ್ಸ್ ನಲ್ಲಿ ಟ್ರೆಂಡಿಂಗ್ ಆಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು, ಭಾರತದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಆರ್​ಸಿಬಿಯ ಅಭಿಮಾನಿಗಳ ದುರಂಹಕಾರವೇ ಪ್ಲೇಆಫ್​ನ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಆರ್​ಸಿಬಿ ಅಭಿಮಾನಿಗಳು ಆದಷ್ಟು ಮೌನವಾಗಿರಬೇಕು. ಸಿಎಸ್​ಕೆ ತಂಡವನ್ನು ಸೋಲಿಸಿದ ನಂತರ ಅನಗತ್ಯ ವೀಡಿಯೊ ಪೋಸ್ಟ್ ಮಾಡಬಾರದಾಗಿತ್ತು ಎಂದು ಹೇಳಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ 17ನೇ (IPL 2024 ) ಆವೃತ್ತಿಯ ಲೀಗ್ ಹಂತದ ಕೊನೆಯಲ್ಲಿ ಸತತ ಆರು ಪಂದ್ಯಗಳನ್ನು ಗೆದ್ದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಹಂತಕ್ಕೆ ಏರಿತ್ತು. ಎಲಿಮಿನೇಟರ್ ನಲ್ಲಿ ರಾಜಸ್ಥಾನ್​ ರಾಯಲ್ಸ್ ತಂಡವನ್ನು ಸೋಲಿಸಿ ಕ್ವಾಲಿಫೈಯರ್ 2 ಗೆ ಪ್ರವೇಶಿಸುವ ಭರವಸೆ ಹೊಂದಿತ್ತು. ಆದಾಗ್ಯೂ, ಸಂಜು ಸ್ಯಾಮ್ಸನ್ ನೇತೃತ್ವದ ತಂಡವು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹಣಾಹಣಿಯಲ್ಲಿ ಫಾಫ್​ ಡು ಪ್ಲೆಸಿಸ್ ಬಳಗವನ್ನು ಮಣಿಸಿತು. ನಾಲ್ಕು ವಿಕೆಟ್​ಗಳಿಂದ ಸೋತ ಆರ್​ಸಿಬಿ ನಿರಾಸೆಗೆ ಒಳಗಾಯಿತು. ಇದರೊಂದಿಗೆ ತಮ್ಮ ಮೊದಲ ಐಪಿಎಲ್ ಟ್ರೋಫಿಗಾಗಿ ಆರ್​ಸಿಬಿಯ ಕಾಯುವಿಕೆ ಮುಂದುವರಿಯಿತು. ಆದರೆ, ಆರ್​​ಸಿಬಿ ಈ ಸೋಲಿಗೆ ದುರಂಹಕಾರವೇ ಕಾರಣ ಎಂಬುದಾಗಿ ತಮಿಳುನಾಡು ಮೂಲದ ಮಾಜಿ ಆಟಗಾರ ಹೇಳಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲಲೇಬೇಕಾದ ಲೀಗ್​​ ಪಂದ್ಯದಲ್ಲಿ ಆರ್​ಸಿಬಿ ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡಿತು. ಹೀಗಾಗಿ ಪ್ಲೇಆಫ್ಗೆ ಅರ್ಹತೆ ಪಡೆಯಿತು. ಇದರೊಂದಿಗೆ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವು ನಿರಾಶಾದಾಯಕವಾಗಿ ಋತುವನ್ನು ಕೊನೆಗೊಳಿಸಿತು. ಏತನ್ಮಧ್ಯೆ, ಪಂದ್ಯದ ನಂತರ, ಸಿಎಸ್​ಕೆ ಅಭಿಮಾನಿಗಳು ದೂರೊಂದನ್ನು ನೀಡಿದ್ದರು. ಆರ್​ಸಿಬಿ ಅಭಿಮಾನಿಗಳ ತಮ್ಮ ವಿರುದ್ದ ಗೂಂಡಾಗಿರಿ ಮಾಡಿರುವ ಬಗ್ಗೆ ದೂರು ನೀಡಿದ್ದು. ಇದು ಒಂದು ಹಂತದಲ್ಲಿ ಎಕ್ಸ್ ನಲ್ಲಿ ಟ್ರೆಂಡಿಂಗ್ ಆಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು, ಭಾರತದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಆರ್​ಸಿಬಿಯ ಅಭಿಮಾನಿಗಳ ದುರಂಹಕಾರವೇ ಪ್ಲೇಆಫ್​ನ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಆರ್​ಸಿಬಿ ಅಭಿಮಾನಿಗಳು ಆದಷ್ಟು ಮೌನವಾಗಿರಬೇಕು. ಸಿಎಸ್​ಕೆ ತಂಡವನ್ನು ಸೋಲಿಸಿದ ನಂತರ ಅನಗತ್ಯ ವೀಡಿಯೊ ಪೋಸ್ಟ್ ಮಾಡಬಾರದಾಗಿತ್ತು ಎಂದು ಹೇಳಿದ್ದಾರೆ.

ಸಿಎಸ್​ಕೆ ತಂಡವನ್ನು ಸೋಲಿಸಿದ ನಂತರ ಫ್ರ್ಯಾಂಚೈಸಿಯ ಆಟಗಾರರು ಮತ್ತು ಅಭಿಮಾನಿಗಳ ಜಂಭ ಹೆಚ್ಚಾಗಿತ್ತು. ಅದುವೇ ಎಲಿಮಿನೇಟರ್ ನಲ್ಲಿ ಆರ್​ಆರ್​​ ವಿರುದ್ಧ ಸೋಲಿಗೆ ಕಾರಣ ಎಂದು 64 ವರ್ಷದ ಆಟಗಾರ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

“ಜೀವನದಲ್ಲಿ ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವಾಗ ನಿಮ್ಮ ಬಾಯಿ ಮುಚ್ಚಿಕೊಂಡು ಮುಂದುವರಿಯಿರಿ. ನೀವು ಮಾಡುತ್ತಿರುವ ಯಾವುದೇ ಕೆಲಸದ ವೇಳೆ ಗದ್ದಲ ಮಾಡಿದಾಗ ಆ ಕೆಲಸವನ್ನು ಉತ್ತಮವಾಗಿ ಮಾಡಲು ಸಾಧ್ಯವಿಲ್ಲ. ಆರ್​​ಸಿಬಿ ಅಭಿಮಾನಿಗಳು ಅನಗತ್ಯ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದರು. ಅತಿಯಾಗಿ ತೋರಿಸುತ್ತಿದ್ದರು. ಅದಕ್ಕಾಗಿಯೇ ಅಶ್ವಿನ್ ಮುಂದಿನ ಪಂದ್ಯದಲ್ಲಿ ಆರ್​ಸಿಬಿಯ ಜಂಭ ಇಳಿಸಿದರು. ಅದಕ್ಕಾಗಿಯೇ ಕ್ರಿಕೆಟ್​​ನಲ್ಲಿ ನಿಮ್ಮ ಬಾಯಿ ಮುಚ್ಚಿ ಆಡಬೇಕು ಎಂದು ಹೇಳುವುದು ಎಂದು ಶ್ರೀಕಾಂತ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ.

ಟೀಕೆಗಳನ್ನು ಸ್ವೀಕರಿಸಿ: ಕ್ರಿಸ್ ಶ್ರೀಕಾಂತ್

ಆರ್​ಸಿಬಿ ಆಟಗಾರರು ಚಪ್ಪಾಳೆಗಳನ್ನು ಪಡೆದಂತೆ ಟೀಕೆಗಳನ್ನು ಸ್ವೀಕರಿಸುವಂತೆ ಶ್ರೀಕಾಂತ್ ಕೋರಿಕೊಂಡರು. ತಂಡವು ಸತತವಾಗಿ ಆರು ಗೆಲುವುಗಳನ್ನು ಅತಿಯಾಗಿ ಸಂಭ್ರಮಿಸಲು ಪ್ರಾರಂಭಿಸಿತು. ಅಗತ್ಯವಿಲ್ಲದ ಆಕ್ರಮಣಶೀಲತೆಯನ್ನು ತೋರಿಸಿತು ಎಂದು ಅವರು ಶ್ರೀಕಾಂತ್​ ಹೇಳಿದರು.

ನೀವು ಉತ್ತಮವಾಗಿ ಆಡಿದ್ದರೆ, ಅಭಿನಂದನೆಗಳು, ನೀವು ಕಳಪೆಯಾಗಿ ಆಡಿದ್ದರೆ ಟೀಕೆಗಳನ್ನು ಸ್ವೀಕರಿಸಿ. ನೀವು ಎಂದಿಗೂ ಬಾಯಿ ತೆರೆದು ಆಕ್ರಮಣಶೀಲತೆಯನ್ನು ತೋರಿಸಬಾರದು. ಸಿಎಸ್​​ಕೆ ಮತ್ತು ಮುಂಬೈ ಎರಡೂ ಪ್ರಶಸ್ತಿಗಳನ್ನು ಗೆದ್ದಿವೆ. ಆದರೆ ಎಂದಿಗೂ ಸದ್ದು ಮಾಡಿಲ್ಲ. ಆದರೆ ಆರ್​ಸಿಬಿ ಆರು ಪಂದ್ಯಗಳನ್ನು ಗೆದ್ದಿತು. ಅವರು ಅರ್ಹತೆ ಪಡೆದ ತಕ್ಷಣ ಅವರು ಔಟ್ ಆಗಿದ್ದಾರೆ “ಎಂದು ಅವರು ಹೇಳಿದರು.

Continue Reading

ಕ್ರೀಡೆ

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

T20 World Cup 2024: ಮೆನ್ ಇನ್ ಬ್ಲೂ ಪ್ರತಿಭೆಗಳನ್ನು ಹೊಂದಿರುತ್ತದೆ. ಅಂತಿಮವಾಗಿ ಅವರು ಮುಂಬರುವ ಟಿ 20 ವಿಶ್ವಕಪ್ 2024ರಲ್ಲಿ ವಿರೋಧ ತಂಡಗಳಿಗೆ ಗಮನಾರ್ಹ ಬೆದರಿಕೆ ಒಡ್ಡುವುದಿಲ್ಲ ಎಂದು ಲಾಯ್ಡ್ ಹೇಳಿದ್ದಾರೆ. ಈ ದಿಟ್ಟ ಹೇಳಿಕೆಯು ಐಸಿಸಿ ಪಂದ್ಯಾವಳಿಗಳಲ್ಲಿ ಭಾರತದ ಪ್ರದರ್ಶನದ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಹುಟ್ಟುಹಾಕಿದೆ.

VISTARANEWS.COM


on

T20 world cup 2024
Koo

ಬೆಂಗಳೂರು: ಜೂನ್ 1 ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಸಹ-ಆತಿಥ್ಯ ವಹಿಸಲಿರುವ ಐಸಿಸಿ ಟಿ 20 ವಿಶ್ವಕಪ್ 2024ರಲ್ಲಿ (T20 World Cup 2024) ಭಾರತ ಕಪ್ ಗೆಲ್ಲುವುದಿಲ್ಲ. ಆಯ್ಕೆ ಮಾಡಿರುವ ಭಾರತ ತಂಡ ಪ್ರಭಾವಿಯಾಗಿಲ್ಲ ಎಂದು ಇಂಗ್ಲೆಂಡ್​ನ ಮಾಜಿ ಕ್ರಿಕೆಟಿಗ ಡೇವಿಡ್ ಲಾಯ್ಡ್ ಹೇಳಿಕೆ ನೀಡಿದ್ದಾರೆ. ಭಾರತ ತಂಡ ಸಾಮಾನ್ಯ ತಂಡವಾಗಿದೆ. ಹೀಗಾಗಿ ಈ ತಂಡಕ್ಕೆ ಗೆಲುವಿನ ಅವಕಾಶ ಕಡಿಮೆಯಿದೆ ಎಂದು ಅವರು ಹೇಳಿದ್ದಾರೆ. ಗಮನಾರ್ಹವಾಗಿ, ಭಾರತ ಕ್ರಿಕೆಟ್ ತಂಡವು 2013 ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ. ಆದಾಗ್ಯೂ, ಭಾರತವು ತವರು ನೆಲದಲ್ಲಿ ನಡೆದ 2023ರ ಐಸಿಸಿ ವಿಶ್ವಕಪ್​ನಲ್ಲಿ ರನ್ನರ್-ಅಪ್ ಆಗಿತ್ತು. ಎರಡು ಬಾರಿ ಡಬ್ಲ್ಯುಟಿಸಿಯ ಫೈನಲ್ ತಲುಪಿ ರನ್ನರ್ ಅಪ್​ ಸ್ಥಾನ ಪಡೆದುಕೊಂಡಿತ್ತು.

ಟಿ20 ವಿಶ್ವಕಪ್​ ಕುರಿತು ಹೇಳುವುದಾದರೆ 2007ರ ಆವೃತ್ತಿಯ ವಿಜೇತ ತಂಡ 2021ರ ಲೀಗ್ ಹಂತದಲ್ಲೇ ಹೊರಕ್ಕೆ ಬಿದ್ದಿತ್ತು. ಪ್ರತಿಷ್ಠಿತ ಪಂದ್ಯಾವಳಿಯ 2022ರ ಆವೃತ್ತಿಯಲ್ಲಿ ಸೆಮಿಫೈನಲ್​​ನಲ್ಲಿ ಇಂಗ್ಲೆಂಡ್​ಗೆ ಶರಣಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ಕೊರತೆ ಮುಂದುವರಿದಿದೆ.

ಭಾರತ ತಂಡದ ಸಾಮರ್ಥ್ಯವನ್ನು ಊಹಿಸಬಹುದು

ಲಾಯ್ಡ್​ ಅವರು ಟೀಮ್ ಇಂಡಿಯಾ ಆಯ್ಕೆ ವಿಧಾನವನ್ನು ಟೀಕಿಸಿದರು ಭಾರತ ತಂಡವನ್ನು ಬ್ಯಾಟ್ ಮತ್ತು ಬೌಲಿಂಗ್​ನಲ್ಲಿ ಅಪಾಯಗಳನ್ನು ತಡೆಯುವ ಸಾಮರ್ಥ್ಯ ಇರುವ ತಂಡ ಅಲ್ಲ ಎಂದಿದ್ದಾರೆ. ಈ ತಂಡದ ಸಾಮರ್ಥ್ಯವನ್ನು ಯಾರು ಬೇಕಾದರೂ ಊಹಿಸಬಹುದು ಎಂದು ಹೇಳಿದರು. ಕಳೆದ ದಶಕದಲ್ಲಿ ಭಾರತ ತಂಡದ ಸ್ಥಿರತೆಯ ಕೊರತೆಯನ್ನು ಸಹ ಲಾಯ್ಡ್ ಎತ್ತಿ ತೋರಿಸಿದರು. ಐಸಿಸಿ ಸ್ಪರ್ಧೆಗಳಲ್ಲಿ ಟೀಮ್ ಇಂಡಿಯಾದ ಕಳಪೆ ಪ್ರದರ್ಶನದ ಪ್ರವೃತ್ತಿಯನ್ನು ಬೊಟ್ಟು ಮಾಡಿದ್ದಾರೆ.

ಭಾರತವು ಪ್ರತಿಭಾವಂತ ಆಟಗಾರರನ್ನು ಹೊಂದಿದೆ. ಆದರೆ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಅವರ ಅಪಾಯ-ಮುಕ್ತ ಕಾರ್ಯತಂತ್ರ ಸರಿಯಾಗಿಲ್ಲ. ಕಳೆದ ದಶಕದಲ್ಲಿ ಸ್ಟಾರ್-ಸ್ಟಡೆಡ್ ಲೈನ್ಅಪ್ ಹೊಂದಿದ್ದರೂ ಐಸಿಸಿ ಸ್ಪರ್ಧೆಗಳಲ್ಲಿ ಪ್ರಬಲ ಶಕ್ತಿಯಾಗುವ ಸಾಮರ್ಥ್ಯ ಹೊಂದಿಲ್ಲ ಎಂದು ಇಂಗ್ಲೆಂಡ್​​ನ ಮಾಜಿ ವೇಗಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

ಮೆನ್ ಇನ್ ಬ್ಲೂ ಪ್ರತಿಭೆಗಳನ್ನು ಹೊಂದಿರುತ್ತದೆ. ಅಂತಿಮವಾಗಿ ಅವರು ಮುಂಬರುವ ಟಿ 20 ವಿಶ್ವಕಪ್ 2024ರಲ್ಲಿ ವಿರೋಧ ತಂಡಗಳಿಗೆ ಗಮನಾರ್ಹ ಬೆದರಿಕೆ ಒಡ್ಡುವುದಿಲ್ಲ ಎಂದು ಲಾಯ್ಡ್ ಹೇಳಿದ್ದಾರೆ. ಈ ದಿಟ್ಟ ಹೇಳಿಕೆಯು ಐಸಿಸಿ ಪಂದ್ಯಾವಳಿಗಳಲ್ಲಿ ಭಾರತದ ಪ್ರದರ್ಶನದ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಹುಟ್ಟುಹಾಕಿದೆ.

ಟಿ20 ವಿಶ್ವಕಪ್​​ನಲ್ಲಿ ಬೆದರಿಕೆ ಒಡ್ಡುವುದಿಲ್ಲ; ಡೇವಿಡ್ ಲಾಯ್ಡ್

ಟಾಕ್ಸ್ಪೋರ್ಟ್ ಕ್ರಿಕೆಟ್ ಪಾಡ್​ಕಾಸ್ಟ್​ನಲ್ಲಿ ಡೇವಿಡ್ ಲಾಯ್ಡ್ ಹೀಗೆ ಹೇಳಿದ್ದಾರೆ. “ಇದು ಸಾಕಷ್ಟು ಊಹಿಸಬಹುದಾದ ತಂಡ. ಕುಡುಗೋಲುಗಳು ಕಡಿಮೆಯಾಗಿಲ್ಲ. ಎದುರಾಳಿಗಳು ಗುಣಮಟ್ಟ ಸ್ವೀಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಆದರೆ ಅವರು ಬ್ಯಾಟ್ ಅಥವಾ ಚೆಂಡಿನೊಂದಿಗೆ ಅಪಾಯವನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

ಮುಂಬರುವ ಟಿ 20 ವಿಶ್ವಕಪ್ 2024 ರಲ್ಲಿ ಭಾರತವನ್ನು ಪಾಕಿಸ್ತಾನ ಐರ್ಲೆಂಡ್, ಯುಎಸ್ಎ ಮತ್ತು ಕೆನಡಾ ಜೊತೆಗೆ ಎ ಗುಂಪಿನಲ್ಲಿ ಇದೆ. ಭಾರತೀಯ ತಂಡವು ಜೂನ್ 5 ರಂದು ನ್ಯೂಯಾರ್ಕ್​ನಲ್ಲಿ ಐರ್ಲೆಂಡ್ ವಿರುದ್ಧ ತಮ್ಮ ಅಭಿಯಾನ ಪ್ರಾರಂಭಿಸಿದೆ. ನಂತರ ಜೂನ್ 9 ರಂದು ಪಾಕಿಸ್ತಾನದ ವಿರುದ್ಧ ಬೃಹತ್ ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಜೂನ್ 1ರಂದು ಅಮೆರಿಕದಲ್ಲಿ ಬಾಂಗ್ಲಾದೇಶ ವಿರುದ್ಧ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯವನ್ನು ಆಡಲಿದೆ.

ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಶಿವಮ್ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಆಟಗಾರರುಃ ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತದ ಗುಂಪು ಹಂತದ ಹಣಾಹಣಿ

ಜೂನ್ 05: ಭಾರತ vs ಐರ್ಲೆಂಡ್, ನಸ್ಸೌ ಕೌಂಟಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ನ್ಯೂಯಾರ್ಕ್​​
ಜೂನ್ 09: ಭಾರತ vs ಪಾಕಿಸ್ತಾನ, ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ನ್ಯೂಯಾರ್ಕ್
ಜೂನ್ 12: ಭಾರತ vs ಯುಎಸ್ಎ, ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ನ್ಯೂಯಾರ್ಕ್
ಜೂನ್ 14: ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್​​ನ ಭಾರತ vs ಕೆನಡಾ

Continue Reading

ಪ್ರವಾಸ

Udupi Tour: ಉಡುಪಿಗೆ ಹೋದಾಗ ನೀವು ನೋಡಲೇಬೇಕಾದ 10 ಸ್ಥಳಗಳಿವು

ಆಧ್ಯಾತ್ಮಿಕತೆ, ನೈಸರ್ಗಿಕ ಸೌಂದರ್ಯ ಮತ್ತು ಸಾಂಸ್ಕೃತಿಕ ಅನುಭವಗಳ ಪರಿಪೂರ್ಣ ಮಿಶ್ರಣವನ್ನು ನೀಡುವ ಉಡುಪಿ ಸ್ಮರಣೀಯ ಪ್ರವಾಸಕ್ಕೆ (Udupi Tour) ಸೂಕ್ತವಾದ ತಾಣವಾಗಿದೆ. ಸಾಹಸ, ವಿಶ್ರಾಂತಿ ಅಥವಾ ಆಧ್ಯಾತ್ಮಿಕತೆಯ ಅನುಭವದಲ್ಲಿ ಮಿಂದೇಳಲು ಬಯಸಿದರೆ ಇಲ್ಲಿಗೊಮ್ಮೆ ಭೇಟಿ ನೀಡಲು ಮರೆಯದಿರಿ.

VISTARANEWS.COM


on

By

Udupi Tour
Koo

ಕೃಷ್ಣನ ನಾಡು ಉಡುಪಿಯಲ್ಲಿ ಪ್ರವಾಸಿಗರನ್ನು (Udupi Tour) ಸೆಳೆಯುವ ಹಲವಾರು ತಾಣಗಳಿವೆ. ಸ್ನೇಹಿತರು, ಬಂಧುಗಳೊಂದಿಗೆ ಉಡುಪಿಗೆ ಭೇಟಿ ನೀಡಿದಾಗ ಇಲ್ಲಿನ ಸಾಂಸ್ಕೃತಿಕ ಶ್ರೀಮಂತಿಕೆ, ಪಾಕಶಾಲೆಯ ಸವಿರುಚಿ, ನಯನ ಮನೋಹರ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಮರೆಯದಿರಿ.

ಕರ್ನಾಟಕದ (karnataka) ಕರಾವಳಿ ಪ್ರದೇಶದಲ್ಲಿ ( coastal region) ನೆಲೆಸಿರುವ ಉಡುಪಿಯು ಹಲವಾರು ಸುಂದರ ಅನುಭವಗಳನ್ನು ನೀಡುತ್ತದೆ. ಸ್ಮರಣೀಯ ಪ್ರವಾಸಕ್ಕೆ ಇದೊಂದು ಸೂಕ್ತ ತಾಣವಾಗಿದೆ. ಪ್ರಾಚೀನ ದೇವಾಲಯಗಳಿಂದ (temples) ಹಿಡಿದು ಸುಂದರ ಕಡಲತೀರಗಳವರೆಗೆ (beach).. ಉಡುಪಿಯಲ್ಲಿ ಭೇಟಿ ನೀಡಬಹುದಾದ ಕೆಲವು ಅತ್ಯುತ್ತಮ ತಾಣಗಳಿವೆ.


ಶ್ರೀ ಕೃಷ್ಣ ದೇವಾಲಯ

ಉಡುಪಿಯ ಅತ್ಯಂತ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕೃಷ್ಣ ದೇವಸ್ಥಾನದಿಂದ ಪ್ರವಾಸವನ್ನು ಆರಂಭಿಸಬಹುದು. ಭಗವಾನ್ ಕೃಷ್ಣನಿಗೆ ಸಮರ್ಪಿತವಾಗಿರುವ ಈ ದೇವಾಲಯವು ವಿಶಿಷ್ಟವಾದ ವಾಸ್ತುಶಿಲ್ಪ ಮತ್ತು ಧಾರ್ಮಿಕ ಮಹತ್ವಕ್ಕಾಗಿ ಹೆಸರುವಾಸಿಯಾಗಿದೆ. ಇಲ್ಲಿನ ಹಲವು ಆಚರಣೆಗಳು ಯಾತ್ರಿಕರನ್ನು ಸಮ್ಮೋಹನಗೊಳಿಸುವುದು.


ಮಲ್ಪೆ ಬೀಚ್

ವಿಶ್ರಾಂತಿ ಬಯಸಿದರೆ ಮಲ್ಪೆ ಬೀಚ್‌ ಗಿಂತ ಉತ್ತಮ ತಾಣ ಬೇರೆ ಇಲ್ಲ. ಚಿನ್ನದ ಮರಳು ಮತ್ತು ಆಕಾಶ ನೀಲಿ ನೀರಿನ ಸುಂದರವಾದ ದೃಶ್ಯವನ್ನು ಇಲ್ಲಿ ಕಣ್ತುಂಬಿಕೊಳ್ಳಬಹುದು. ಬಿಸಿಲಿನಲ್ಲಿ ಬೇಯುತ್ತಿರಲಿ, ದಡದಲ್ಲಿ ಆರಾಮವಾಗಿ ಅಡ್ಡಾಡುತ್ತಿರಲಿ ಅಥವಾ ಪ್ಯಾರಾಸೈಲಿಂಗ್ ಮತ್ತು ಜೆಟ್-ಸ್ಕೀಯಿಂಗ್‌ನಂತಹ ರೋಮಾಂಚಕ ಜಲ ಕ್ರೀಡೆಗಳಲ್ಲಿ ಪಾಲ್ಗೊಳ್ಳಬಹುದು.


ಸೇಂಟ್ ಮೇರಿಸ್ ದ್ವೀಪ

ಮಲ್ಪೆ ಬೀಚ್‌ನಿಂದ ಸೇಂಟ್ ಮೇರಿಸ್ ದ್ವೀಪಕ್ಕೆ ಚಿಕ್ಕದಾದ ದೋಣಿ ವಿಹಾರವನ್ನು ನಡೆಸಬಹುದು. ಇದು ವಿಶಿಷ್ಟವಾದ ಕಲ್ಲಿನ ರಚನೆಗಳು ಮತ್ತು ಪ್ರಾಚೀನ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ.


ಮಣಿಪಾಲ

ಶೈಕ್ಷಣಿಕ ಸಂಸ್ಥೆಗಳು, ಉತ್ಸಾಹಭರಿತ ಕೆಫೆಗಳು ಮತ್ತು ಸಾಂಸ್ಕೃತಿಕ ಆಕರ್ಷಣೆಗಳಿಗೆ ನೆಲೆಯಾಗಿರುವ ಮಣಿಪಾಲದ ರೋಮಾಂಚಕ ಪಟ್ಟಣವನ್ನು ಸುತ್ತಾಡಬಹುದು. ಇಲ್ಲಿನ ಮಣಿಪಾಲ್ ವಿಶ್ವವಿದ್ಯಾನಿಲಯದ ಕ್ಯಾಂಪಸ್, ಹೆರಿಟೇಜ್ ವಿಲೇಜ್, ತಾರಾಲಯ ಸೇರಿದಂತೆ ಪ್ರವಾಸಿಗರು ಇಷ್ಟಪಡುವ ಇನ್ನೂ ಅನೇಕ ತಾಣಗಳು ಇಲ್ಲಿವೆ. ಸ್ಥಳೀಯ ತಿನಿಸುಗಳಲ್ಲಿ ರುಚಿಕರವಾದ ಬೀದಿ ಆಹಾರವನ್ನು ಇಲ್ಲಿ ಸವಿಯಬಹುದು.


ಪಡುಕೆರೆ ಬೀಚ್

ಪಡುಕೆರೆ ಬೀಚ್‌ನಲ್ಲಿ ನಗರದ ಜೀವನದ ಜಂಜಾಟದಿಂದ ದೂರವಾಗಿ ಪ್ರಶಾಂತ ಸಮುದ್ರ ತೀರದಲ್ಲಿ ಸುತ್ತಾಡಬಹುದು. ಕಡಲ ತೀರವಾಸಿಗಳ ಜನ ಜೀವನವನ್ನು ಕಾಣಬಹುದು. ಶಾಂತವಾದ ವಾತಾವರಣ ಮತ್ತು ವಿಹಂಗಮ ನೋಟಗಳಿಗೆ ಹೆಸರುವಾಸಿಯಾದ ಪ್ರಶಾಂತ ಕರಾವಳಿ ಇದನ್ನು ಸ್ವರ್ಗ ಮಾಡಿದೆ.


ಆನೆಗುಡ್ಡೆ ವಿನಾಯಕ ದೇವಸ್ಥಾನ

ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಗಣಪತಿಗೆ ಪೂಜೆ ಸಲ್ಲಿಸಿ. ಹಚ್ಚ ಹಸಿರಿನ ಬೆಟ್ಟಗಳ ನಡುವೆ ನೆಲೆಸಿರುವ ಈ ಪವಿತ್ರ ಕ್ಷೇತ್ರದಲ್ಲಿ ದೇವಾಲಯದ ಸಂಕೀರ್ಣ ವಾಸ್ತುಶೈಲಿಯನ್ನು ಗಮನಿಸಿ. ಹತ್ತಿರದಲ್ಲೇ ಇರುವ ನೀರಿನ ನಡುವೆ ನೆಲೆಯಾಗಿರುವ ಈಶ್ವರ ದೇವಾಲಯಕ್ಕೆ ಭೇಟಿ ನೀಡುವುದನ್ನು ತಪ್ಪಿಸಿಕೊಳ್ಳಬೇಡಿ.


ಕೂಡ್ಲು ಜಲಪಾತ

ಪಶ್ಚಿಮ ಘಟ್ಟಗಳಲ್ಲಿ ಅಡಗಿರುವ ಗುಪ್ತ ರತ್ನವಾದ ಕೂಡ್ಲು ಜಲಪಾತವನ್ನು ತಲುಪಲು ಹಸಿರು ಕಾಡುಗಳ ಮೂಲಕ ರಮಣೀಯವಾದ ಚಾರಣವನ್ನು ಪ್ರಾರಂಭಿಸಿ. ಹಸಿರು ಎಲೆಗಳು ಮತ್ತು ಚಿಲಿಪಿಲಿ ಹಕ್ಕಿಗಳಿಂದ ಸುತ್ತುವರೆದಿರುವ ನೀರಿನ ಸೌಂದರ್ಯ ನಿಮ್ಮ ತನುಮನವನ್ನು ತಣಿಸುವ ಅನುಭವ ಕೊಡುವುದು.


ಕಾಪು ಬೀಚ್

ಕಾಪು ಬೀಚ್‌ನ ಪ್ರಶಾಂತ ತೀರದಲ್ಲಿ ಪ್ರಾಚೀನ ಮರಳುಗಳು ಅರೇಬಿಯನ್ ಸಮುದ್ರದ ಶಾಂತ ಅಲೆಗಳನ್ನು ಸಂಧಿಸುತ್ತವೆ. ಸ್ನೇಹಿತರೊಂದಿಗೆ ವಿರಾಮದ ಪಿಕ್ನಿಕ್ ಅನ್ನು ಇಲ್ಲಿ ಆನಂದಿಸಬಹುದು. ಕಡಲತೀರದ ಮೇಲೆ ಮರಳು ಕೋಟೆಗಳನ್ನು ನಿರ್ಮಿಸಿ ಮತ್ತು ಕರಾವಳಿಯ ಉದ್ದಕ್ಕೂ ಇರುವ ಸ್ಥಳೀಯ ತಿನಿಸುಗಳಲ್ಲಿ ತಾಜಾ ಸಮುದ್ರಾಹಾರ ಭಕ್ಷ್ಯಗಳನ್ನು ಸವಿಯಬಹುದು.


ಅಂಬಲಪಾಡಿ ಮಹಾಕಾಳಿ ದೇವಸ್ಥಾನ

ದೈವಿಕ ಸೆಳವು ಕೊಡುವ ಅಂಬಲಪಾಡಿ ಮಹಾಕಾಳಿ ದೇವಾಲಯ ಸಾಕಷ್ಟು ಪ್ರವಾಸಿಗರನ್ನು ತನ್ನತ್ತ ಸೆಳೆಯುವುದು. ದೇವಾಲಯದ ವಾಸ್ತುಶಿಲ್ಪದ ಭವ್ಯತೆಗೆ ಸಾಕ್ಷಿಯಾಗಿದೆ. ಇಲ್ಲಿನ ಉತ್ಸವಗಳು ರೋಮಾಂಚನ ಉಂಟು ಮಾಡುತ್ತದೆ.


ಇದನ್ನೂ ಓದಿ: Mangalore Tour: ಮಂಗಳೂರಿಗೆ ಬಂದರೆ ಈ ಸ್ಥಳಗಳಿಗೆ ಭೇಟಿ ಕೊಡಲು ಮರೆಯದಿರಿ

ಉಡುಪಿ ಪಾರಂಪರಿಕ ಗ್ರಾಮ

ಶ್ರೀಮಂತ ಪರಂಪರೆ ಮತ್ತು ಸಂಪ್ರದಾಯಗಳನ್ನು ಪ್ರದರ್ಶಿಸುವ ಸಾಂಸ್ಕೃತಿಕ ಎನ್‌ಕ್ಲೇವ್ ಉಡುಪಿ ಹೆರಿಟೇಜ್ ವಿಲೇಜ್‌ ಗೆ ಭೇಟಿ ನೀಡಲು ಸಮಯ ಮೀಸಲಿಡಿ. ಪಾರಂಪರಿಕ ಮನೆಗಳಿಂದ ಕೂಡಿದ ವಿಲಕ್ಷಣ ಬೀದಿಗಳಲ್ಲಿ ಸ್ಥಳೀಯ ಕುಶಲಕರ್ಮಿಗಳ ಕಾರ್ಯಾಗಾರಗಳನ್ನು ಕಾಣಬಹುದು.

Continue Reading
Advertisement
karnataka weather Forecast
ಮಳೆ37 mins ago

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

COMEDK UGET 2024
ಪ್ರಮುಖ ಸುದ್ದಿ2 hours ago

COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

Tips On Tea
ಆರೋಗ್ಯ2 hours ago

Tips On Tea: ಚಹಾ ಅತಿಯಾಗಿ ಕುದಿಸುವುದು ಒಳ್ಳೆಯದಲ್ಲ! ಏಕೆ ಗೊತ್ತಾ?

Dina Bhavishya
ಭವಿಷ್ಯ2 hours ago

Dina Bhavishya : ಆತುರದಲ್ಲಿ ಈ ರಾಶಿಯವರು ಯಾವುದೇ ತೀರ್ಮಾನ ತೆಗೆದುಕೊಳ್ಳಬೇಡಿ

Narendra Modi
ದೇಶ7 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ8 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ8 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ8 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ9 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌