T20 World Cup | ತಂಡದ ಆಯ್ಕೆ ವಿಚಾರದಲ್ಲಿ ಬಾಬರ್​ ಅಜಮ್‌ ಜಾಣರಲ್ಲ; ವಾಸಿಂ ಅಕ್ರಂ ಆರೋಪ Vistara News
Connect with us

T20 ವಿಶ್ವಕಪ್

T20 World Cup | ತಂಡದ ಆಯ್ಕೆ ವಿಚಾರದಲ್ಲಿ ಬಾಬರ್​ ಅಜಮ್‌ ಜಾಣರಲ್ಲ; ವಾಸಿಂ ಅಕ್ರಂ ಆರೋಪ

ತಂಡದ ಆಯ್ಕೆ ವಿಚಾರದಲ್ಲಿ ಬಾಬರ್​ ಅಜಂಗೆ ಪರಿಪೂರ್ಣ ಅನುಭವವಿಲ್ಲ ಎಂದು ಪಾಕ್​ ಮಾಜಿ ವೇಗಿ ವಾಸಿಂ ಅಕ್ರಂ ಹೇಳಿದ್ದಾರೆ.

VISTARANEWS.COM


on

t20
Koo

ಸಿಡ್ನಿ: ಪಾಕಿಸ್ತಾನ ಕ್ರಿಕೆಟ್‌ ತಂಡದ ನಾಯಕ ಬಾಬರ್ ಅಜಂ ಅವರು ತಂಡದ ಆಯ್ಕೆ ವಿಚಾರದಲ್ಲಿ ಅಷ್ಟೇನೂ ಜಾಣರಲ್ಲ ಎಂದು ಪಾಕ್​ ಮಾಜಿ ವೇಗಿ ವಾಸಿಂ ಅಕ್ರಂ ಅಭಿಪ್ರಾಯಪಟ್ಟಿದ್ದಾರೆ. ಜತೆಗೆ ಟಿ20 ವಿಶ್ವ ಕಪ್‌ (T20 World Cup) ಟೂರ್ನಿಯಲ್ಲಿ ಅನುಭವಿ ಶೋಯೆಬ್‌ ಮಲಿಕ್‌ ಅವರಿಗೆ ಅವಕಾಶ ನೀಡದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಮಾತನಾಡಿರುವ ವಾಸಿಂ ಅಕ್ರಂ ತಂಡದ ಮಧ್ಯಮ ಕ್ರಮಾಂಕ ದುರ್ಬಲವಾಗಿದೆ. ಶೋಯೆಬ್‌ ಮಲಿಕ್‌ ತಂಡದಲ್ಲಿ ಇಲ್ಲದಿರುವುದು ಅದಕ್ಕೆ ಕಾರಣ. ನಾನು ನಾಯಕನಾಗಿದ್ದರೆ ಅವರನ್ನು ಆಯ್ಕೆ ಮಾಡುತ್ತಿದ್ದೆ.
ವಿಶ್ವ ಕಪ್‌ ಗೆದ್ದು ಕೊಡುವ ಸಾಮರ್ಥ್ಯ ಇರುವ ಆಟಗಾರರನ್ನು ಮೊದಲು ತಂಡಕ್ಕೆ ಆಯ್ಕೆ ಮಾಡಬೇಕು ಹೊರತಾಗಿ ಗೆಳೆಯರಿಗೆ, ಆತ್ಮೀಯರಿಗೆ ತಂಡದಲ್ಲಿ ಸ್ಥಾನ ನೀಡುವುದಲ್ಲ ಎಂದು ಅಕ್ರಂ ಗರಂ ಆಗಿಯೇ ಆಯ್ಕೆ ಸಮಿತಿ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಒಂದೊಮ್ಮೆ ನಾನು ನಾಯಕನಾಗಿದ್ದರೆ ಪಂದ್ಯವನ್ನು ಗೆಲ್ಲಿಸುವಂಥ ಆಟಗಾರರಿಗೆ ಮೊದಲ ಆದ್ಯತೆ ನೀಡಬೇಕೆಂದು ಆಯ್ಕೆ ಸಮಿತಿ ಮುಖ್ಯಸ್ಥರಿಗೆ ಮನವರಿಕೆ ಮಾಡುತ್ತಿದ್ದೆ. ನನ್ನ ಆಯ್ಕೆಯಂತೆ ತಂಡ ಇರದಿದ್ದರೆ ತಂಡ ಮುನ್ನಡೆಸುವುದಿಲ್ಲ ಎನ್ನುತ್ತಿದ್ದೆ ಎಂದು ಕ್ರೀಡಾವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ವಾಸಿಂ ಅಕ್ರ ಹೇಳಿದ್ದಾರೆ.

ತಂಡದ ಆಯ್ಕೆ ವಿಚಾರದಲ್ಲಿ ಬಾಬರ್‌ ಜಾಣತನ ತೋರಿಲ್ಲ. ಇದೇನು ಗಲ್ಲಿ ಕ್ರಿಕೆಟ್‌ ಅಲ್ಲ. ವಿಶ್ವ ಕಪ್‌ ನಡೆಯುತ್ತಿರುವುದು ಆಸ್ಟ್ರೇಲಿಯಾದಲ್ಲಿ. ಶಾರ್ಜಾ, ದುಬೈ ಅಥವಾ ಪಾಕಿಸ್ತಾನವಲ್ಲ. ಹೀಗಿರುವಾಗ ತಂಡದಲ್ಲಿ ಒಬ್ಬ ಅನುಭವಿ ಆಟಗಾರರನ್ನಾದರು ಆಯ್ಕೆ ಮಾಡಬೇಕು. ಈ ವಿಚಾರದಲ್ಲಿ ಬಾಬರ್​ ಎಡವಿದ್ದೇ ಸತತ ಸೋಲಿಗೆ ಕಾರಣ ಎಂದು ಅಕ್ರಂ ತಿಳಿಸಿದರು.

ಇದನ್ನೂ ಓದಿ | T20 World Cup | ಪಾಕಿಸ್ತಾನದಿಂದ ಪಿಚ್‌ ಕೂಡ ತೆಗೆದುಕೊಂಡು ಹೋಗಿ, ಬಾಬರ್‌ ಬಳಗದ ಬಗ್ಗೆ ಅಕ್ರಮ್‌ ಕ್ರೋಧ ನುಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

T20 ವಿಶ್ವಕಪ್

Rohit Sharma | ಬಾಂಗ್ಲಾ ಸರಣಿಗೆ ಸಜ್ಜಾಗುತ್ತಿರುವ ರೋಹಿತ್​ ಶರ್ಮ; ನೆಟ್ಸ್​ನಲ್ಲಿ ಭರ್ಜರಿ ತಾಲೀಮು

ಬಾಂಗ್ಲಾದೇಶ ವಿರುದ್ಧದ ಸರಣಿಗೆ ಮುನ್ನ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮಾ ನೆಟ್ಸ್​ನಲ್ಲಿ ಭರ್ಜರಿ ಅಭ್ಯಾಸ ನಡೆಸಿದ್ದಾರೆ.​

VISTARANEWS.COM


on

Edited by

Rohit Sharma
Koo

ಮುಂಬಯಿ: ಮುಂದಿನ ತಿಂಗಳು ಭಾರತ ತಂಡ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು ಏಕದಿನ ಮತ್ತು ಟೆಸ್ಟ್​ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಸರಣಿಯಲ್ಲಿ ಭರ್ಜರಿ ಪ್ರದರ್ಶನ ತೋರುವ ನಿಟ್ಟಿನಲ್ಲಿ ನಾಯಕ ರೋಹಿತ್​ ಶರ್ಮಾ ನೆಟ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್​ ಅಭ್ಯಾಸ ನಡೆಸಿದ್ದಾರೆ.

ನ್ಯೂಜಿಲ್ಯಾಂಡ್​ ಪ್ರವಾಸಕ್ಕೆ ವಿಶ್ರಾಂತಿ ಪಡೆದಿರುವ ರೋಹಿತ್​ ಇದೀಗ ನೆಟ್​ನಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ರೋಹಿತ್​ ಜತೆಗೆ ವಿರಾಟ್​ ಕೊಹ್ಲಿ, ಕೆಲ್​. ಎಲ್ ರಾಹುಲ್​ ಸೇರಿ ಪ್ರಮುಖ ಹಿರಿಯ ಆಟಗಾರರಿಗೆ ಕಿವೀಸ್​ ಸರಣಿಯಿಂದ ವಿಶ್ರಾಂತಿ ನೀಡಲಾಗಿತ್ತು. ಆದರೆ ಈ ಎಲ್ಲ ಆಟಗಾರರು ಬಾಂಗ್ಲಾ ವಿರುದ್ಧದ ಸರಣಿಗೆ ತಂಡ ಸೇರಿಕೊಳ್ಳಲಿದ್ದಾರೆ.

ವಿರಾಟ್ ಕೊಹ್ಲಿಯೂ ಬಾಂಗ್ಲಾ ಸರಣಿಗೆ ಮುನ್ನ ಜಿಮ್​ನಲ್ಲಿ ವರ್ಕ್​ಔಟ್​ ಮಾಡಿ ಫಿಟ್​ನೆಸ್​ ಕಾಯ್ದುಕೊಳ್ಳುತ್ತಿರುವ ವಿಡಿಯೊ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ಇದೀಗ ನಾಯಕ ರೋಹಿತ್ ಶರ್ಮಾ ಕೂಡ ಪ್ಯಾಡ್ ಕಟ್ಟಿ ಬ್ಯಾಟಿಂಗ್ ಅಭ್ಯಾಸ ಶುರು ಮಾಡಿದ್ದು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ನೆಟ್ ಒಳಗಡೆ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಸದ್ಯ ಫಾರ್ಮ್​ನಲ್ಲಿ ಇಲ್ಲದ ರೋಹಿತ್​ಗೆ ಬಾಂಗ್ಲಾ ಸರಣಿ ಪ್ರಮುಖವಾಗಿದೆ.

ಇದನ್ನೂ ಓದಿ | Virat Kohli | ವಿಶ್ರಾಂತಿಯ ಅವಧಿಯನ್ನು ಚಾರಿಟಿ ಕೆಲಸಕ್ಕೆ ಮೀಸಲಿಟ್ಟ ವಿರಾಟ್​ ಕೊಹ್ಲಿ

Continue Reading

Latest

Fifa World Cup | ಫುಟ್ಬಾಲ್‌ ವಿಶ್ವ ಕಪ್‌ ಪಂದ್ಯಗಳು ನಡೆಯುವ ಸ್ಟೇಡಿಯಮ್‌ಗಳು ಯಾವುದೆಲ್ಲ ಗೊತ್ತೇ?

ಕತಾರ್​ನಲ್ಲಿ ನಡೆಯಲಿರುವ ಫಿಫಾ ವಿಶ್ವ ಕಪ್​ ಫುಟ್ಬಾಲ್​ ಪಂದ್ಯಗಳ 8 ವರ್ಣರಂಜಿತ ಕ್ರೀಡಾಂಗಣಗಳ ಸಂಪೂರ್ಣ ಮಾಹಿತಿ ಈ ಕೆಳಗೆ ತಿಳಿಸಲಾಗಿದೆ.

VISTARANEWS.COM


on

Edited by

fifa world cup 2022 8 stadiums
Koo

ದೋಹಾ: ಕತಾರ್​ನಲ್ಲಿ ನಡೆಯಲಿರುವ ಫಿಫಾ ವಿಶ್ವ ಕಪ್(Fifa World Cup)​ ಕಾಲ್ಚೆಂಡಿನ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಈ ಫುಟ್ಬಾಲ್ ಹಬ್ಬ ಆರಂಭವಾಗಲಿದೆ. ಇದೀಗ ಈ ಕಾಲ್ಚೆಂಡಿನ ವಿಶ್ವ ಸಮರಕ್ಕೆ ಆತಿಥ್ಯ ವಹಿಸಿದ ವರ್ಣರಂಜಿತ 8 ಸ್ಟೇಡಿಯಂಗಳ ಪರಿಚಯ ಇಲ್ಲಿದೆ.

ಲುಸೈಲ್​ ಕ್ರೀಡಾಂಗಣ

ಕತಾರ್​ ಫಿಫಾ ವಿಶ್ವ ಕಪ್​ನ 8 ಕ್ರೀಡಾಂಗಣದಲ್ಲಿ ಲುಸೈಲ್​ ಅತಿದೊಡ್ಡದು ಎಂಬ ಹೆಗ್ಗಳಿಕೆ ಗಳಿಸಿದೆ. 80,000 ಆಸನ ಸಾಮರ್ಥ್ಯ ಹೊಂದಿದ್ದು, ಫೈನಲ್​ ಪಂದ್ಯವೂ ಇದೇ ಮೈದಾನದಲ್ಲಿ ನಡೆಯಲಿದೆ. ಈ ಸ್ಟೇಡಿಯಮ್‌ ಅರಬ್​ ದೇಶದಲ್ಲಿ ಜಯಪ್ರೀಯವಾಗಿರುವ ಬಟ್ಟಲಿನ ಆಕಾರ ಹೊಂದಿದೆ. ಪಂದ್ಯದ ವೇಳೆ ಬಿಸಿ ಗಾಳಿಯನ್ನು ತೆಡೆಯಲು ಪಾಲಿಟ್ರೆಟಾ ಫ್ಲೋರೊಎಥಲಿನ್​ ಎಂಬ ರಾಸಾಯನಿಕವನ್ನು ಬಳಸಿ ಆಟಗಾರಿಗೆ ಬಿಸಿ ತಟ್ಟದಂತೆ ಮಾಡಲಾಗಿದೆ. ಈ ಮೈದಾನದಲ್ಲಿ ಒಟ್ಟು ಹತ್ತು ಪಂದ್ಯಗಳು ನಡೆಯಲಿವೆ.

ಅಹಮದ್​ ಬಿನ್​ ಅಲಿ ಸ್ಟೇಡಿಯಮ್‌, ಅಲ್​ ವಕ್ರಾ

ಕತಾರ್‌​ನ ನೂತನ ಸ್ಟೇಡಿಯಮ್‌ ಇದಾಗಿದ್ದು. 2015ರಲ್ಲಿ ನಿರ್ಮಾಣವಾಗಿದ್ದ ಕ್ರೀಡಾಂಗಣ ನೆಲಸಮ ಮಾಡಿ ಹೊಸ ಕ್ರೀಡಾಂಗಣವನ್ನು ಕಟ್ಟಲಾಗಿದೆ. ಇದು ಓಪನ್​ ಕ್ರೀಡಾಂಗಣವಾಗಿದ್ದು ಹವಾ ನಿಯಂತ್ರಿತ ವ್ಯವಸ್ಥೆಯನ್ನೂ ಒಳಗೊಂಡಿದೆ. ಅದರಂತೆ ಪಂದ್ಯಗಳ ವೇಳೆ 26 ಡಿಗ್ರಿ ತಾಪಮಾನ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಮರುಭೂಮಿಯ ತುತ್ತ ತುದಿಯಲ್ಲಿರುವ ಈ ಮೈದಾನದಲ್ಲಿ ಒಟ್ಟು ಏಳು ಪಂದ್ಯಗಳು ನಡೆಯಲಿದ್ದು, 44,740 ಆಸನ ಸಾಮರ್ಥ್ಯ ಹೊಂದಿದೆ.

ಅಲ್​ ಜನೌಬ್​​ ಸ್ಟೇಡಿಯಮ್‌, ಅಲ್ ವಕ್ರಾ

ಸಾಂಪ್ರದಾಯಿಕ ಧೌ ದೋಣಿಗಳನ್ನು ಹೋಲುವ ಈ ಕ್ರೀಡಾಂಗಣದಲ್ಲಿ ಏಳು ಪಂದ್ಯಗಳು ನಡೆಯಲಿವೆ. ಏಕಕಾಲಕ್ಕೆ 40,000 ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಸಾಧ್ಯವಿದೆ. ಇನ್ನು ಈ ಮೈದಾನದಲ್ಲಿಯೂ ಹವಾನಿಯಂತ್ರಿತ ವ್ಯವಸ್ಥೆ ಇರಲಿದೆ. ಇಲ್ಲಿ ವಿಶ್ವ ಕಪ್​ ಪಂದ್ಯ ಮುಕ್ತಾಯದ ಬಳಿಕ ಆಸನಗಳ ಸಾಮರ್ಥ್ಯವನ್ನು 20,000ಕ್ಕೆ ಇಳಿಕೆ ಮಾಡಲಾಗುವುದು ಎಂದು ಫಿಫಾ ಹೇಳಿದೆ.

ಎಜುಕೇಶನ್​ ಸಿಟಿ ಕ್ರೀಡಾಂಗಣ, ಅಲ್​ ರಯ್ಯನ್​

ಕ್ರೀಡಾಂಗಣದ ಸುತ್ತ ಮುತ್ತ ವಿಶ್ವವಿದ್ಯಾಲಯಗಳು ಇರುವ ಕಾರಣದಿಂದ ಈ ಸ್ಟೇಡಿಯಂಗೆ ಎಜುಕೇಶನ್​ ಸಿಟಿ ಸ್ಟೇಡಿಯಮ್‌ ಎಂದು ಹೆಸರಿಡಲಾಗಿದೆ. ತ್ರಿಕೋನಾಕೃತಿ ಈ ಕ್ರೀಡಾಂಗಣ ವಜ್ರದ ರೀತಿ ಕಾಣುತ್ತದೆ. ಜಾಗತಿಕ ಸುಸ್ಥಿರತೆಯ ಮೌಲ್ಯಮಾಪನ ವ್ಯವಸ್ಥೆಯಲ್ಲಿ ಫೈವ್​ಸ್ಟಾರ್​ ರೇಟಿಂಗ್​ ಹೊಂದಿದೆ. ಒಟ್ಟು 8 ಪಂದ್ಯಗಳು ನಡೆಯಲಿದ್ದು, 40,000 ಆಸನ ಸಾಮರ್ಥ್ಯ ಹೊಂದಿದೆ.

ಖಲಿಫಾ ಮೈದಾನ

ಕತಾರ್​ನ ಅತ್ಯಂತ ಹಳೆಯ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ಕ್ರೀಡಾಂಗಣ ಇದಾಗಿದ್ದು ಈ ಬಾರಿ 8 ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಅದರಂತೆ ಇಲ್ಲಿ ಏಕಕಾಲಕ್ಕೆ 45,416 ಮಂದಿಗೆ ಪಂದ್ಯ ವೀಕ್ಷಿಸಬಹುದಾಗಿದೆ. 2006ರ ಏಷ್ಯನ್​ ಗೇಮ್ಸ್​ ಸೇರಿ ಹಲವು ಐತಿಹಾಸಿಕ ಕ್ರೀಡಾಕೂಟಗಳಿಗೆ ಈ ಸ್ಟೇಡಿಯಮ್‌ ಸಾಕ್ಷಿಯಾಗಿದೆ.

ಅಲ್​ ಥುಮಾಮ ಮೈದಾನ, ದೋಹಾ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಈ ಕ್ರೀಡಾಂಗಣವನ್ನು ಫಿಫಾ ವಿಶ್ವ ಕಪ್​ ಟೂರ್ನಿಗೋಸ್ಕರವೇ ನಿರ್ಮಾಣ ಮಾಡಲಾಗಿದೆ. ವಿಶ್ವ ಕಪ್​ ಬಳಿಕ ಇಲ್ಲಿನ ಆಸನ ಸಾಮರ್ಥ್ಯವನ್ನು 40,000ರಿಂದ 20,000ಕ್ಕೆ ಇಳಿಸಿ ಹೆಚ್ಚುವರಿ ಆಸನಗಳನ್ನು ಬಡ ರಾಷ್ಟ್ರಗಳಿಗೆ ಉಡುಗೊರೆಯಾಗಿ ನೀಡಲಾಗುತ್ತದೆ. ಖಾಲಿಯಾಗುವ ಜಾಗದಲ್ಲಿ ಐಷಾರಾಮಿ ಹೋಟೆಲ್​ ನಿರ್ಮಾಣ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ. ಅರಬ್​ ಪ್ರಾಂತ್ಯದಲ್ಲಿ ಬಳಸುವ ಸಾಂಪ್ರದಾಯಿಯ “ಗಹ್ಫಿಯಾ” ಟೋಪಿಯ ಆಕಾರದಲ್ಲಿರುವ ಈ ಮೈದಾನದಲ್ಲಿ ಒಟ್ಟು 8 ಪಂದ್ಯಗಳು ನಡೆಯಲಿವೆ.

ಅಲ್​ ಬೇತ್​ ಸ್ಟೇಡಿಯಂ, ಅಲ್​ ಖೋರ್​

ದೋಹಾದ ರಾಜಧಾನಿಯಿಂದ 35 ಕಿ.ಮೀ ದೂರದಲ್ಲಿರುವ ಈ ಕ್ರೀಡಾಂಗಣದಲ್ಲಿ ವಿಶ್ವ ಕಪ್​ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಕ್ರೀಡಾಂಗಣ ಕತಾರ್​ನಲ್ಲಿ ವಾಸಿಸುವ ಅಲೆಮಾರಿ ಜನರು ಬಳಸುವ ಟೆಂಟ್​ಗಳ ಆಕಾರದಲ್ಲಿದೆ. ಒಟ್ಟು 9 ಪಂದ್ಯಗಳು ಇಲ್ಲಿ ನಡೆಯಲಿದ್ದು, 60,000 ಆಸನ ಸಾಮರ್ಥ್ಯ ಹೊಂದಿದೆ.

ಸ್ಟೇಡಿಯಂ 974

ವಿಶ್ವ ಕಪ್​ ಪಂದ್ಯಗಳ ಆತಿಥ್ಯಕ್ಕೆ ಕತಾರ್​ ಹೊಸದಾಗಿ ಕ್ರೀಡಾಂಗಣಗಳ ನಿರ್ಮಾಣಕ್ಕೆ ಮುಂದಾದಾಗ
ಸಾಮಗ್ರಿಗಳನ್ನು ಹೊತ್ತು ತಂಡ ಹಡಗುಗಳ ಕಂಟೈನರ್​ಗಳನ್ನೇ ಬಳಸಿ ಸ್ಟೇಡಿಯಮ್‌ ಒಂದನ್ನು ಕಟ್ಟುವ ಯೋಜನೆಯನ್ನು ಆಯೋಜನಾ ಸಮಿತಿ ರೂಪಿಸಿತ್ತು. ಅದರಂತೆ 974 ಕಂಟೈನರ್​ಗಳಿಂದ ನಿರ್ಮಾಣವಾದ ಇದಕ್ಕೆ ಸ್ಟೇಡಿಯಂ 947 ಎಂದು ಹೆಸರಿಡಲಾಗಿದೆ. ಇನ್ನೊಂದು ವಿಶೇಷವೆಂದರೆ 947 ಎನ್ನುವ ಸಂಖ್ಯೆ ಕತಾರ್​ ದೇಶದ ಅಂತಾರಾಷ್ಟ್ರೀಯ ಡಯಲಿಂಗ್​ ಕೋಡ್​ ಕೂಡ ಆಗಿದೆ. ಇಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿದ್ದು, 40,000 ಆಸನ ಸಾಮರ್ಥ್ಯ ಹೊಂದಿದೆ.

ಇದನ್ನೂ ಓದಿ | Fifa World Cup 2022 | ಗೋಲ್ಡನ್ ಬೂಟ್ ಪ್ರಶಸ್ತಿ ವಿಜೇತ ಟಾಪ್​ 5 ಆಟಗಾರರು

Continue Reading

Latest

BCCI: ಚೇತನ್‌ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ ಆಯ್ಕೆ ಸಮಿತಿಗೆ ಗೇಟ್​ಪಾಸ್​ ನೀಡಿದ ಬಿಸಿಸಿಐ!

ಟಿ20 ವಿಶ್ವ ಕಪ್​ನಲ್ಲಿ ಭಾರತ ತಂಡ ವೈಫಲ್ಯ ಅನುಭವಿಸಿದ ಕಾರಣದಿಂದ ಚೇತನ್​ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ಶುಕ್ರವಾರ ಬಿಸಿಸಿಐ ವಜಾಗೊಳಿಸಿದೆ.

VISTARANEWS.COM


on

Edited by

BCCI Scraps Selection Committee Led By Chetan Sharma
Koo

ನವದೆಹಲಿ: ದುಬೈ ಮತ್ತು ಆಸ್ಟ್ರೇಲಿಯಾದಲ್ಲಿ ನಡೆದ ಎರಡು ಐಸಿಸಿ ಟಿ20 ವಿಶ್ವ ಕಪ್‌ ಕ್ರಿಕೆಟ್​ ಟೂರ್ನಿಗಳಲ್ಲಿ ಭಾರತ ತಂಡ ಟ್ರೋಫಿ ಗೆಲ್ಲಲು ವಿಫಲವಾದ ಬೆನ್ನಲ್ಲೇ ಕಠಿಣ ನಿರ್ಧಾರ ತೆಗೆದುಕೊಂಡಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಮಾಜಿ ವೇಗಿ ಚೇತನ್‌ ಶರ್ಮಾ ಸಾರಥ್ಯದ ಟೀಮ್ ಇಂಡಿಯಾ ಆಯ್ಕೆ ಸಮಿತಿಯನ್ನು ವಜಾಗೊಳಿಸಿದೆ. ಅದರಂತೆ ಬಿಸಿಸಿಐ ಈಗಾಗಗಲೇ ಹೊಸ ಆಯ್ಕೆ ಸಮಿತಿ ರಚಿಸುವ ಸಲುವಾಗಿ ಖಾಲಿ ಇರುವ 5 ಹುದ್ದೆಗಳಿಗೆ ಅರ್ಜಿ ಕೂಡ ಆಹ್ವಾನಿಸಿದೆ.

ಚೇತನ್‌ ಶರ್ಮಾ ಸಾರಥ್ಯದ ಆಯ್ಕೆ ಸಮಿತಿಯಲ್ಲಿ ಸುನಿಲ್‌ ಜೋಶಿ, ಹವಿಂದರ್‌ ಸಿಂಗ್‌ ಮತ್ತು ದೇಬಾಶಿಶ್‌ ಮೊಹಾಂತಿ ಅವರಂತಹ ಮಾಜಿ ಆಟಗಾರರು ಇದ್ದರು. ಇದೀಗ ಹೊಸ ಆಯ್ಕೆ ಸಮಿತಿಗೆ ಸೇರಬಯಸುವ ಆಸಕ್ತರು ನವೆಂಬರ್‌ 28ರ ಒಳಗೆ ಅರ್ಜಿ ಸಲ್ಲಿಸಬೇಕಾಗಿದೆ.

ಚೇತನ್​ ಶರ್ಮಾ ಆಯ್ಕೆ ಸಮಿತಿಯ ಅವಧಿಯಲ್ಲಿ ಆಡಲಾದ 2021ರ ಐಸಿಸಿ ಟಿ20 ಕ್ರಿಕೆಟ್‌ ವಿಶ್ವ ಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೂಪರ್‌-12 ಹಂತದಲ್ಲೇ ಮುಗ್ಗರಿಸಿತ್ತು. ಇತ್ತೀಚೆಗೆ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ 2022ರ ಸಾಲಿನ ಟಿ20 ವಿಶ್ವ ಕಪ್‌ ಟೂರ್ನಿಯ ಸೆಮಿಫೈನಲ್‌ನಲ್ಲಿಯೂ ಹೀನಾಯವಾಗಿ ಸೋತು ನಿರಾಸೆ ಮೂಡಿಸಿತ್ತು. ಜತೆಗೆ ಇವರ ಆಯ್ಕೆ ಸಮಿತಿಯಲ್ಲಿ ಭಾರತ ತಂಡ ಒಂದೂ ಐಸಿಸಿ ಟ್ರೋಫಿಯನ್ನು ಗೆಲ್ಲವಲ್ಲಿ ಯಶಸ್ವಿಯಾಗಿರಲಿಲ್ಲ. ಇದರಿಂದ ಬಿಸಿಸಿಐ ಈ ಆಯ್ಕೆ ಸಮಿತಿಗೆ ಗೇಟ್​ಪಾಸ್​ ನೀಡಿದೆ.

ಚೇತನ್​ ಶರ್ಮಾ ಭಾರತ ಪರ ಒಟ್ಟು 23 ಟೆಸ್ಟ್​ ಮತ್ತು 65 ಏಕದಿನ ಪಂದ್ಯಗಳನ್ನಾಡಿದ್ದಾರೆ. ಟೆಸ್ಟ್​ನಲ್ಲಿ (61), ಏಕದಿನದಲ್ಲಿ(67) ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ | IND VS NZ | ಕಿವೀಸ್​​ ವಿರುದ್ಧದ ಮೊದಲ ಟಿ20 ಮಳೆಯಿಂದ ರದ್ದು; ಭಾರತದ ಯುವ ಆಟಗಾರರಿಗೆ ನಿರಾಸೆ

Continue Reading

Latest

T20 World Cup | ಟಿ20 ವಿಶ್ವ ಕಪ್​ ಮೌಲ್ಯಯುತ ತಂಡದಲ್ಲಿ ಸ್ಥಾನ ಪಡೆದ ಕೊಹ್ಲಿ, ಸೂರ್ಯಕುಮಾರ್​

ಟೀಮ್​ ಇಂಡಿಯಾ ಆಟಗಾರರಾದ ವಿರಾಟ್​ ಕೊಹ್ಲಿ ಮತ್ತು ಸೂರ್ಯಕುಮಾರ್​ ಯಾದವ್ ಐಸಿಸಿ​ ಟಿ20 ವಿಶ್ವ ಕಪ್​ ಮೌಲ್ಯಯುತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

VISTARANEWS.COM


on

Edited by

sky and virat
Koo

ಮೆಲ್ಬೋರ್ನ್​: ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ ಐಸಿಸಿ ಟಿ20 ವಿಶ್ವ ಕಪ್(T20 World Cup) 2022ರ ಆವೃತ್ತಿಗೆ ತೆರೆ ಬಿದ್ದಿದೆ. ಫೈನಲ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಇಂಗ್ಲೆಂಡ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದೀಗ ಪಂದ್ಯಾವಳಿ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ, ಟಿ20 ವಿಶ್ವ ಕಪ್‌ 2022ರ ಮೌಲ್ಯಯುತ ತಂಡವನ್ನು ಹೆಸರಿಸಿದ್ದು ಟೀಮ್​ ಇಂಡಿಯಾದ ಸೂರ್ಯಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಚಾಂಪಿಯನ್ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಈ ತಂಡಕ್ಕೆ ನಾಯಕನಾಗಿದ್ದಾರೆ.

ವಿರಾಟ್ ಕೊಹ್ಲಿ ಅವರು ಈ ಬಾರಿಯ ಟಿ20 ವಿಶ್ವ ಕಪ್​ ಟೂರ್ನಿಯಲ್ಲಿ ನಾಲ್ಕು ಅರ್ಧಶತಕ ಸೇರಿ 98.66ರ ಸರಾಸರಿಯಲ್ಲಿ 296 ರನ್ ಗಳಿಸಿ ಕೂಟದಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಆಟಗಾನಾಗಿ ಹೊರಹೊಮ್ಮಿದ್ದರು. ಜತೆಗೆ ಸೂರ್ಯ ಕುಮಾರ್ ಯಾದವ್ 239 ರನ್ ಗಳಿಸಿ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಉಭಯ ಆಟಗಾರರ ಪ್ರದರ್ಶನಕ್ಕೆ ಐಸಿಸಿ, ಮೌಲ್ಯಯುತ ತಂಡದಲ್ಲಿ ಸ್ಥಾನ ನೀಡಿದೆ. ಅಚ್ಚರಿ ಎಂದರೆ ಜಿಂಬಾಬ್ವೆ ತಂಡದ ಸಿಕಂದರ್​ ರಾಜಾ ಕೂಡ ಈ ತಂಡದ ಭಾಗವಾಗಿದ್ದಾರೆ. ಉಳಿದಂತೆ ಭಾರತ ತಂಡ ಆಲ್​ರೌಂಡರ್​ ಹಾರ್ದಿಕ್​ ಪಾಂಡ್ಯ 12ನೇ ಆಟಗಾರನಾಗಿ ಸ್ಥಾನ ಪಡೆದಿದ್ದಾರೆ.

ಐಸಿಸಿ ಮೌಲ್ಯಯುತ ತಂಡದ ಪಟ್ಟಿ

ಜೋಸ್​ ಬಟ್ಲರ್​(ನಾಯಕ), ಅಲೆಕ್ಸ್​ ಹೇಲ್ಸ್​, ವಿರಾಟ್​ ಕೊಹ್ಲಿ, ಸೂರ್ಯಕುಮಾರ್​ ಯಾದವ್​, ಗ್ಲೆನ್​ ಫಿಲಿಪ್ಸ್​, ಸಿಕಂದರ್​ ರಾಜಾ, ಶಾದಾಬ್​ ಖಾನ್​, ಸ್ಯಾಮ್​ ಕರನ್​, ಅನ್ರಿಚ್​ ನೋರ್ಜೆ, ಮಾರ್ಕ್​ ವುಡ್​, ಶಾಹಿನ್​ ಅಫ್ರೀದಿ. 12ನೇ ಆಟಗಾರ: ಹಾರ್ದಿಕ್​ ಪಾಂಡ್ಯ

Continue Reading
Advertisement
Transport Minister Ramalinga reddy
ಕರ್ನಾಟಕ23 mins ago

Ramalinga Reddy: 4 ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ

DCM DK Shivakumar
ಕರ್ನಾಟಕ1 hour ago

Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು

Indian Railways help desk
ದೇಶ2 hours ago

Odisha Train Accident : ಅವಘಡದಲ್ಲಿ ಮೃತಪಟ್ಟವರನ್ನು ಗುರುತಿಸಲು ಭಾರತೀಯ ರೈಲ್ವೆ ಮನವಿ

Water tap
ಕರ್ನಾಟಕ2 hours ago

Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Rehena Fathima
ದೇಶ2 hours ago

ಬೆತ್ತಲೆಯಾಗುವುದು ಯಾವಾಗಲೂ ಅಶ್ಲೀಲವಲ್ಲ: ಬೆತ್ತಲಾದ 33 ವರ್ಷದ ಮಹಿಳೆಗೆ ಕೇರಳ ಹೈಕೋರ್ಟ್​​ನಿಂದ ರಿಲೀಫ್​

A sapling was planted on the banks of Tunga in Shivamogga
ಕರ್ನಾಟಕ3 hours ago

World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ

Ashwini Vaishnav
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ರೈಲು ದುರಂತ ಬಳಿಕ ಪರಿಹಾರ ಕಾರ್ಯ; ರೈಲ್ವೆ ಸಚಿವರ ನಡೆ ಅನುಕರಣೀಯ

World Environment Day celebration at Shirsi veda health centere
ಉತ್ತರ ಕನ್ನಡ3 hours ago

Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Ekana Stadium
ಕ್ರಿಕೆಟ್4 hours ago

ತಾಯಿ, ಮಗಳ ಜೀವ ತೆಗೆಯಿತು ಐಪಿಎಲ್ ಲಕ್ನೊ ತಂಡದ ಹೋರ್ಡಿಂಗ್

Bike Accident in Charmadi Ghat
ಕರ್ನಾಟಕ4 hours ago

Bike Accident: ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಬಸ್‌ ಚಕ್ರಕ್ಕೆ ಸಿಲುಕಿ ಸ್ಕೂಟರ್‌ ಸವಾರ ಸಾವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Chakravarthy Sulibele and MB Patil
ಕರ್ನಾಟಕ14 hours ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ14 hours ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ20 hours ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

Mangalore Moral Policing News
ಉಡುಪಿ2 days ago

Video: ನಮ್ಮ ನಿದ್ದೆಗೆಡಿಸಿದ್ದಾರೆ; ಮುಸ್ಲಿಮರೊಂದಿಗೆ ಬೀಚ್​​ಗೆ ಬಂದಿದ್ದ ಹುಡುಗಿಯರ ವಿರುದ್ಧ ನಿಂತ ಮಹಿಳೆಯರು

horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಲೇಬೇಕು!

South facing house vastu
ಭವಿಷ್ಯ3 days ago

Vastu Tips : ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆ ಕೂಡ ಶುಭವಂತೆ! ಹೌದೇ? ಏನೆನ್ನುತ್ತದೆ ವಾಸ್ತು ಶಾಸ್ತ್ರ?

jackfruit
ಕೃಷಿ3 days ago

Krishi Khajane : ಹುಲುಸಾಗಿ ಹಲಸು ಬೆಳೆಯಿರಿ, ಎಕರೆಗೆ 2.5 ಲಕ್ಷ ಆದಾಯ ಪಡೆಯಿರಿ!

Bus Driver
ಕರ್ನಾಟಕ3 days ago

Viral Video: ಬೆಂಗಳೂರು ಟ್ರಾಫಿಕ್‌ನಲ್ಲೇ ಊಟ ಮಾಡಿ ಮುಗಿಸಿದ ಡ್ರೈವರ್! ಇಲ್ಲಿದೆ ನೋಡಿ ವಿಡಿಯೊ

horoscope today
ಪ್ರಮುಖ ಸುದ್ದಿ3 days ago

Horoscope Today : ಈ ಮೂರು ರಾಶಿಯವರಿಗೆ ಖರ್ಚು ಹೆಚ್ಚು; ಇಂದು ನಿಮ್ಮ ಭವಿಷ್ಯ ಹೀಗಿದೆ

Siddaramaiah
ಕರ್ನಾಟಕ3 days ago

Congress Guarantee : ಹೂ ಈಸ್‌ ಯುವರ್‌ ಯಜಮಾನಿ? ಸಿದ್ದರಾಮಯ್ಯ ಸುದ್ದಿಗೋಷ್ಠಿಯ ತಮಾಷೆ ಪ್ರಸಂಗಗಳು ಇಲ್ಲಿವೆ!

ಟ್ರೆಂಡಿಂಗ್‌

error: Content is protected !!