T20 World Cup | ಅಡಿಲೇಡ್​ ತಲುಪಿದ ರೋಹಿತ್​ ಪಡೆ; ಮಂಗಳವಾರದಿಂದ ಕಠಿಣ ಅಭ್ಯಾಸ - Vistara News

Latest

T20 World Cup | ಅಡಿಲೇಡ್​ ತಲುಪಿದ ರೋಹಿತ್​ ಪಡೆ; ಮಂಗಳವಾರದಿಂದ ಕಠಿಣ ಅಭ್ಯಾಸ

ಟಿ20 ವಿಶ್ವ ಕಪ್‌ನ ಇಂಗ್ಲೆಂಡ್‌ ವಿರುದ್ಧದ ಸೆಮಿಫೈನಲ್‌ ಸಮರಕ್ಕೆ ಟೀಮ್‌ ಇಂಡಿಯಾ ಅಡಿಲೇಡ್‌ ತಲುಪಿದ್ದು ಮಂಗಳವಾರದಿಂದ ಕಠಿನ ಅಭ್ಯಾಸ ನಡೆಸಲಿದೆ.

VISTARANEWS.COM


on

ind
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಡಿಲೇಡ್​: ಐಸಿಸಿ ಟಿ20 ವಿಶ್ವ ಕಪ್(T20 World Cup)​ನ ಸೂಪರ್​-12 ಹಂತದ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿ ಸೆಮಿಫೈನಲ್‌ ತಲುಪಿರುವ ಟೀಮ್​ ಇಂಡಿಯಾ ಗುರುವಾರ (ನವೆಂಬರ್​ 10) ಇಂಗ್ಲೆಂಡ್​ ವಿರುದ್ಧ ಸೆಮಿ ಕಾದಾಟ ನಡೆಸಲಿದೆ. ಈ ಸಿದ್ಧತೆಗಾಗಿ ರೋಹಿತ್‌ ಪಡೆ ಸೋಮವಾರ ಅಡಿಲೇಡ್‌ ತಲುಪಿದ್ದು ಮಂಗಳವಾರದಿಂದ ಅಭ್ಯಾಸ ನಡೆಸಲಿದೆ.

ಟೀಮ್‌ ಇಂಡಿಯಾ ಸೋಮವಾರ ಅಡಿಲೇಡ್‌ ತಲುಪಿರುವ ವಿಡಿಯೊವನ್ನು ಬಿಸಿಸಿಐ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು “ಟಚ್‌ಡೌನ್‌ ಅಡಿಲೇಟ್‌” ಎಂದು ಬರೆದುಕೊಂಡಿದೆ. ಜಿಂಬಾಬ್ವೆ ವಿರುದ್ಧದ ಕಳೆದ ಪಂದ್ಯದಲ್ಲಿ ಭರ್ಜರಿ ೭೧ ರನ್‌ ಗೆಲುವು ದಾಖಲಿಸಿದ ರೋಹಿತ್‌ ಶರ್ಮಾ ಪಡೆ ಅಡಿಲೇಡ್‌ ತಲುಪಿ ಒಂದು ದಿನದ ವಿಶ್ರಾಂತಿ ಪಡೆದಿದೆ. ಆದರೆ ಮಂಗಳವಾರದಿಂದ ನೆಟ್ಸ್‌ನಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಲಿದೆ. ಉಳಿದಂತೆ ಇಂಗ್ಲೆಂಡ್‌ ತಂಡವು ಕೂಡ ಅಡಿಲೇಡ್‌ ತಲುಪಿದೆ.

ಮಂಗಳವಾರ ಬೆಳಗ್ಗೆ 10.30ರಿಂದ ಭಾರತ ಮತ್ತು ಇಂಗ್ಲೆಂಡ್ ತಂಡಗಳು ನೆಟ್ಸ್‌ನಲ್ಲಿ ಅಭ್ಯಾಸ ನಡೆಸಿದ ಬಳಿಕ ಉಭಯ ತಂಡಗಳ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಸೆಮಿಫೈನಲ್‌ಗೆ ಮುನ್ನ ತಂಡಗಳು ನಡೆಸುವ ಪೂರ್ವಸಿದ್ಧತೆ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ |T20 World Cup 2024| ಮುಂದಿನ ವಿಶ್ವ ಕಪ್‌ನಲ್ಲಿ ನೆದರ್ಲೆಂಡ್ಸ್​​ಗೆ ನೇರ ಅರ್ಹತೆ! ಉಳಿದ ತಂಡಗಳ ಪಟ್ಟಿ ಪ್ರಕಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli : ಐಪಿಎಲ್​ 2024ರ ಆರೆಂಜ್ ಕ್ಯಾಪ್ ಗೆದ್ದು ಹೊಸ ದಾಖಲೆ ಬರೆದ ವಿರಾಟ್​ ಕೊಹ್ಲಿ

VISTARANEWS.COM


on

Virat kohli
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್​ನ 17 ಆವೃತ್ತಿಯಾದರೂ ಪ್ರಶಸ್ತಿ ಗೆಲ್ಲದೇ ಇರಬಹುದು. ಅದರೆ, ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಹೊಸ ಹೊಸ ಐಪಿಎಲ್ ದಾಖಲೆಗಳನ್ನು ಬರೆಯುತ್ತಲೇ ಇರುತ್ತಾರೆ. ಇದೀಗ ಅವರು 2024ರ ಐಪಿಎಲ್​ನಲ್ಲಿ ಅತಿ ಹೆಚ್ಚು ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದಾರೆ. ಈ ಮೂಲಕ ಟೂರ್ನಿಯ ಇತಿಹಾಸದಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಆರೆಂಜ್ ಕ್ಯಾಪ್ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೊಹ್ಲಿ ಈ ಬಾರಿ 15 ಪಂದ್ಯಗಳಲ್ಲಿ 741 ರನ್ ಗಳಿಸುವ ಮೂಲಕ ಈ ಋತುವನ್ನು ಕೊನೆಗೊಳಿಸಿದ್ದಾರೆ.

ಆಸೀಸ್ ಎಡಗೈ ಬ್ಯಾಟರ್​ ಡೇವಿಡ್ ವಾರ್ನರ್ (3) ಮತ್ತು ವಿಂಡೀಶ್ ದೈತ್ಯ ಕ್ರಿಸ್ ಗೇಲ್ (2) ಬಳಿಕ ಐಪಿಎಲ್ ಟೂರ್ನಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಆರೆಂಜ್ ಕ್ಯಾಪ್ ಗೆದ್ದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಕೊಹ್ಲಿ ಬ್ಯಾಟ್ನೊಂದಿಗೆ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಈ ಋತುವಿನಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳನ್ನು ಗಳಿಸಿದ್ದಾರೆ. 5 ಬಾರಿಯ ಚಾಂಪಿಯನ್ ಸಿಎಸ್​ಕೆ ತಂಡವನ್ನು ಮಣಿಸಿದ ಆರ್​ಸಿಬಿ ಪ್ಲೇ ಆಫ್ ಹಂತವನ್ನು ತಲುಪಿತು. ರಾಜಸ್ಥಾನ್ ವಿರುದ್ಧ ಎಲಿಮಿನೇಟರ್​ನಲ್ಲಿ ಸೋತು ನಿರಾಸೆ ಎದುರಿಸಿತು.

ವಿರಾಟ್ ಕೊಹ್ಲಿ 2016 ರಲ್ಲಿ ಮೊದಲ ಬಾರಿಗೆ 973 ರನ್​ಗಳೊಂದಿಗೆ ಆರೆಂಜ್ ಕ್ಯಾಪ್ ಗೆದ್ದಿದ್ದರು, ಇದು ಇನ್ನೂ ಐಪಿಎಲ್ ದಾಖಲೆಯಾಗಿ ಉಳಿದಿದೆ. ಸಿಎಸ್​ಕೆಯ ಋತುರಾಜ್ ಗಾಯಕ್ವಾಡ್ 583 ರನ್​ಗಳೊಂದಿಗೆ ಹಾಲಿ ಆವೃತ್ತಿಯಲ್ಲಿ ಎರಡನೇ ಸ್ಥಾನ ಪಡೆದರೆ, ರಾಜಸ್ಥಾನದ ರಿಯಾನ್ ಪರಾಗ್ 16 ಪಂದ್ಯಗಳಲ್ಲಿ 573 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

2024ರ ಬ್ಯಾಟಿಂಗ್ ಸಾಧಕರು

  • ವಿರಾಟ್ ಕೊಹ್ಲಿ – 15 ಪಂದ್ಯಗಳಲ್ಲಿ 741 ರನ್
  • ಋತುರಾಜ್ ಗಾಯಕ್ವಾಡ್ – 14 ಪಂದ್ಯಗಳಲ್ಲಿ 583
  • ರಿಯಾನ್ ಪರಾಗ್ – 16 ಪಂದ್ಯಗಳಲ್ಲಿ 573 ರನ್
  • ಟ್ರಾವಿಸ್ ಹೆಡ್ – 15 ಪಂದ್ಯಗಳಲ್ಲಿ 567 ರನ್
  • ಸಂಜು ಸ್ಯಾಮ್ಸನ್ – 16 ಪಂದ್ಯಗಳಲ್ಲಿ 531

ಆರೆಂಜ್ ಕ್ಯಾಪ್ ವಿಜೇತರ ಪಟ್ಟಿ

ವರ್ಷ- 2008
ಆಟಗಾರ: ಶಾನ್ ಮಾರ್ಷ್ (ಕಿಂಗ್ಸ್ ಇಲೆವೆನ್ ಪಂಜಾಬ್)
ಪಂದ್ಯಗಳು: 11
ರನ್: 616

ವರ್ಷ-2009
ಆಟಗಾರ: ಮ್ಯಾಥ್ಯೂ ಹೇಡನ್ (ಸಿಎಸ್ಕೆ)
ಪಂದ್ಯಗಳು: 12
ರನ್: 572

ವರ್ಷ- 2010
ಆಟಗಾರ: ಸಚಿನ್ ತೆಂಡೂಲ್ಕರ್ (ಎಂಐ)
ಪಂದ್ಯಗಳು: 15
ರನ್: 618

ವರ್ಷ-2011
ಆಟಗಾರ: ಕ್ರಿಸ್ ಗೇಲ್ (ಆರ್​​ಸಿಬಿ)
ಪಂದ್ಯಗಳು: 12
ರನ್: 608

ವರ್ಷ-2012
ಆಟಗಾರ: ಕ್ರಿಸ್ ಗೇಲ್ (ಆರ್​​ಸಿಬ)
ಪಂದ್ಯಗಳು: 15
ರನ್: 733

ವರ್ಷ-2013
ಆಟಗಾರ: ಮೈಕಲ್ ಹಸ್ಸಿ (ಸಿಎಸ್​ಕೆ)
ಪಂದ್ಯಗಳು: 16
ರನ್: 733

ವರ್ಷ-2014
ಆಟಗಾರ: ರಾಬಿನ್ ಉತ್ತಪ್ಪ (ಕೆಕೆಆರ್)
ಪಂದ್ಯಗಳು: 16
ರನ್: 660

ವರ್ಷ- 2015
ಆಟಗಾರ: ಡೇವಿಡ್ ವಾರ್ನರ್ (ಎಸ್ಆರ್ಎಚ್)
ಪಂದ್ಯಗಳು: 14
ರನ್: 562


ವರ್ಷ- 2016
ಆಟಗಾರ: ವಿರಾಟ್ ಕೊಹ್ಲಿ (ಆರ್​ಸಿಬಿ)
ಪಂದ್ಯಗಳು: 16
ರನ್: 973

ವರ್ಷ- 2017
ಆಟಗಾರ: ಡೇವಿಡ್ ವಾರ್ನರ್ (ಎಸ್ಆರ್ಎಚ್)
ಪಂದ್ಯಗಳು: 14
ರನ್: 641

ವರ್ಷ-2018
ಆಟಗಾರ: ಕೇನ್ ವಿಲಿಯಮ್ಸನ್ (ಎಸ್ಆರ್​ಎಚ್​​)
ಪಂದ್ಯಗಳು: 17
ರನ್: 735

ವರ್ಷ- 2019
ಆಟಗಾರ: ಡೇವಿಡ್ ವಾರ್ನರ್ (ಎಸ್ಆರ್ಎಚ್)
ಪಂದ್ಯಗಳು: 12
ರನ್: 692

ವರ್ಷ- 2020
ಆಟಗಾರ: ಕೆಎಲ್ ರಾಹುಲ್ (ಕಿಂಗ್ಸ್ ಇಲೆವೆನ್ ಪಂಜಾಬ್)
ಪಂದ್ಯಗಳು: 14
ರನ್: 670

ವರ್ಷ- 2021
ಆಟಗಾರ: ಋತುರಾಜ್ ಗಾಯಕ್ವಾಡ್ (ಸಿಎಸ್​ಕೆ)
ಪಂದ್ಯಗಳು: 16
ರನ್: 635

ವರ್ಷ- 2022
ಆಟಗಾರ: ಜೋಸ್ ಬಟ್ಲರ್ (ಆರ್​ಆರ್​)
ಪಂದ್ಯಗಳು: 17
ರನ್: 863

ವರ್ಷ-2023
ಆಟಗಾರ: ಶುಬ್ಮನ್ ಗಿಲ್ (ಗುಜರಾತ್ ಟೈಟಾನ್ಸ್​)
ಪಂದ್ಯಗಳು: 17
ರನ್: 890

ವರ್ಷ-2024
ಆಟಗಾರ: ವಿರಾಟ್ ಕೊಹ್ಲಿ (ಆರ್​ಸಿಬಿ)
ಪಂದ್ಯಗಳು: 17
ರನ್: 741

ಇದನ್ನೂ ಓದಿ: IPL 2024 Final : 3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್​​; ಹೈದರಾಬಾದ್​ಗೆ ನಿರಾಸೆ

ಐಪಿಎಲ್ 2024 ರಲ್ಲಿ ವಿರಾಟ್ ಕೊಹ್ಲಿ ತಮ್ಮ ಸ್ಟ್ರೈಕ್ ರೇಟ್ ಕುರಿತ ಟೀಕಾಕಾರರನ್ನು ಮೌನಗೊಳಿಸಿದ್ದರು. ಟಿ 20 ವಿಶ್ವಕಪ್​ಗೆ ಮುಂಚಿತವಾಗಿ ಅದ್ಭುತ ಬ್ಯಾಟಿಂಗ್ ಮಾಡಿದರು. ಅವರು 154.69 ಸರಾಸರಿಯಲ್ಲಿ ರನ್ ಗಳಿಸಿದರು. ಜೂನ್ 1 ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್​ನಲ್ಲಿ ಪ್ರಾರಂಭವಾಗುವ ಟಿ 20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ಫಾರ್ಮ್ ಅನ್ನು ಮುಂದುವರಿಸಬೇಕೆಂದು ಭಾರತ ಬಯಸುತ್ತದೆ

Continue Reading

ಪ್ರಮುಖ ಸುದ್ದಿ

IPL 2024 Final : 3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್​​; ಹೈದರಾಬಾದ್​ಗೆ ನಿರಾಸೆ

IPL 2024 Final : ಟಾಸ್​ ಗೆದ್ದು ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಎಚ್ ತಂಡ 18.3 ಓವರ್​ಗಳಲ್ಲಿ 114 ರನ್​ಗಳಿಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಕೆಕೆಆರ್ ತಂಡ 10.3 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ. 114 ರನ್ ಬಾರಿಸಿ ಸುಲಭ ಗೆಲವು ತನ್ನದಾಗಿಸಿಕೊಂಡಿತು. ಕೆಕೆಆರ್ ಪರ ವೆಂಕಟೇಶ್ ಅಯ್ಯರ್​ (52) ರನ್​ ಬಾರಿಸಿ ಗೆಲವಿಗೆ ಕೊಡುಗೆ ಕೊಟ್ಟರು.

VISTARANEWS.COM


on

IPL 2024 Final
Koo

ಚೆನ್ನೈ: ಟೂರ್ನಿಯುದ್ದಕ್ಕೂ ಸಮರ್ಥ ಪ್ರದರ್ಶನ ನೀಡುವ ಮೂಲಕ ಮಿಂಚಿದ್ದ ಗೌತಮ್ ಗಂಭೀರ್​ ಕೋಚಿಂಗ್​ನೊಂದಿಗೆ ಪಳಗಿದ ಕೋಲ್ಕೊತಾ ನೈಟ್​ ರೈಡರ್ಸ್ ತಂಡ ಐಪಿಎಲ್​ 2024ರ ಆವೃತ್ತಿಯ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಫೈನಲ್​ ಪಂದ್ಯದಲ್ಲಿ (IPL 2024 Final) ಎದುರಾಳಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಇದು ಕೋಲ್ಕೊತಾ ಮೂಲದ ತಂಡಕ್ಕೆ 3ನೇ ಟ್ರೋಫಿಯಾಗಿದೆ. ಈ ಹಿಂದೆ 2012 ಹಾಗೂ 2104ರಲ್ಲಿ ಗೌತಮ್ ಗಂಭೀರ್ ಅವರ ನಾಯಕತ್ವದಲ್ಲಿ ಈ ತಂಡ ಚಾಂಪಿಯನ್ ಆಗಿತ್ತು. ಇದೀಗ ಅವರದ್ದೇ ಕೋಚಿಂಗ್​ನಲ್ಲಿ ತಂಡ ಟ್ರೋಫಿ ಗೆದ್ದಿರುವುದು ವಿಶೇಷ ಎನಿಸಿದೆ. ಇದೇ ವೇಳೆ 2009ರಲ್ಲಿ (ಡೆಕ್ಕನ್ ಚಾರ್ಜರ್ಸ್ ತಂಡ) ಮತ್ತು 2016ರಲ್ಲಿ ಟ್ರೋಫಿ ಗೆದ್ದಿದ್ದ ಹೈದರಾಬಾದ್​ ಮೂಲದ ತಂಡಕ್ಕೆ ನಿರಾಸೆ ಎದುರಾಯಿತು. ಕೆಕೆಆರ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್​ ತಂಡಗಳ ಬಳಿಕ (ಐದು ಬಾರಿ ಚಾಂಪಿಯನ್ ಪಟ್ಟ) ಐಪಿಎಲ್​ನ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದೆ ಕೆಕೆಆರ್​​.

ಪಂದ್ಯದ ಆರಂಭದಿಂದಲೂ ಕೊಂಚವೂ ಪ್ರತಿರೋಧ ತೋರದ ಪ್ಯಾಟ್​ ಕಮಿನ್ಸ್​ ಬಳಗ ಟೂರ್ನಿಯಲ್ಲೇ ಅತ್ಯಂತ ಕಳಪೆ ಪ್ರದರ್ಶನ ನೀಡಿತು. ಆರ್​ಸಿಬಿ ವಿರುದ್ಧದ ಲೀಗ್​ ಪಂದ್ಯದಲ್ಲಿ 287 ರನ್ ಬಾರಿಸಿದ್ದ ಎಸ್​ಆರ್​ಎಚ್​ ತಂಡ ಈ ಫೈನಲ್​ ಎಂಬ ಹೆಸರಿಗೆ ಕಿಮ್ಮತ್ತು ನೀಡದೇ 113 ರನ್​ಗಳಿಗೆ ಆಲ್​ಔಟ್​ ಆಯಿತು. ಇದು ಕೂಡ ಐಪಿಎಲ್​ ಫೈನಲ್​ ಇತಿಹಾಸದಲ್ಲಿ ತಂಡವೊಂದು ಬಾರಿಸಿದ ಕನಿಷ್ಠ ಮೊತ್ತದ ಕಳಪೆ ದಾಖಲೆಯಾಗಿದೆ. ಇದೇ ವೇಳೆ ಕೆಕೆಆರ್​ ತಂಡ ಮುಲಾಜಿಲ್ಲದೆ ಅದ್ಭುತ ಪ್ರದರ್ಶನ ನೀಡಿದು. ಬೌಲಿಂಗ್​ ವೇಳೆ ಬೌಲರ್​ಗಳು ಮಾರಕ ದಾಳಿ ಸಂಘಟಿಸಿದರೆ ಬ್ಯಾಟಿಂಗ್​ನಲ್ಲಿ ಸಣ್ಣ ಮೊತ್ತವನ್ನು ಕ್ಯಾರೇ ಎನ್ನಗೆ ಗೆಲುವು ಸಾಧಿಸಿತು.

ಟಾಸ್​ ಗೆದ್ದು ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಎಚ್ ತಂಡ 18.3 ಓವರ್​ಗಳಲ್ಲಿ 114 ರನ್​ಗಳಿಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಕೆಕೆಆರ್ ತಂಡ 10.3 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ. 114 ರನ್ ಬಾರಿಸಿ ಸುಲಭ ಗೆಲವು ತನ್ನದಾಗಿಸಿಕೊಂಡಿತು. ಕೆಕೆಆರ್ ಪರ ವೆಂಕಟೇಶ್ ಅಯ್ಯರ್​ (52) ರನ್​ ಬಾರಿಸಿ ಗೆಲುವಿಗೆ ಕೊಡುಗೆ ಕೊಟ್ಟರು.ಆರಂಭಿಕ ಬ್ಯಾಟರ್​ ರಹ್ಮನುಲ್ಲಾ ಗುರ್ಬಜ್​ 39 ರನ್ ಬಾರಿಸಿದರು. ಎಸ್​ಆರ್​ಎಚ್ ತಂಡ ನೀಡಿದ್ದ ಸಾಧಾರಣ ಮೊತ್ತ ಕೆಕೆಆರ್​ ತಂಡಕ್ಕೆ ಸವಾಲಾಗಲೇ ಇಲ್ಲ. ಅಲ್ಲದೆ ಎಸ್​ಆರ್​ಎಚ್ ತಂಡದ ಪ್ರದರ್ಶನ ಫೈನಲ್​ ಪಂದ್ಯಕ್ಕೂ ಸರಿ ಕಿಮ್ಮತ್ತು ಕೊಡಲಿಲ್ಲ.

ಪಂದ್ಯದಲ್ಲಿ ಏನಾಯಿತು?

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಸ್ಕೋರ್ ಬಾರಿಸಬೇಕೆನ್ನುವ ಎಸ್​ಆರ್​ಎಚ್​ ತಂಡದ ಆಸೆ ಕಮರಿ ಹೋಯಿತು. ಮಿಚೆಲ್ ಸ್ಟಾರ್ಕ್ ಅವರ ಮೊದಲ ಓವರ್​ನಲ್ಲಿಯೇ ಅಭಿಷೇಕ್​ ಶರ್ಮಾ 2 ರನ್ ಬಾರಿಸಿ ಔಟಾದರು. ಟ್ರಾವಿಸ್​ ಹೆಡ್​ ಮತ್ತೊಂದು ಬಾರಿ ವಿಫಲಗೊಂಡು ಶೂನ್ಯಕ್ಕೆ ಔಟಾದರು. ಅವರು ವೈಭವ್​ ಎಸೆತಕ್ಕೆ ವಿಕೆಟ್​ ಒಪ್ಪಿಸಿದರು. ಬಳಿಕಬಂದ ರಾಹುಲ್ ತ್ರಿಪಾಠಿ ಸ್ಟಾರ್ಕ್ ಎಸೆತಕ್ಕೆ ಕ್ಯಾಚ್​ ನೀಡಿ ಔಟಾಗುವ ಮೊದಲು 9 ರನ್ ಬಾರಿಸಿದ್ದರು. 21 ರನ್​ಗೆ 3 ವಿಕೆಟ್​ ಕಳೆದುಕೊಂಡ ಎಸ್​ಆರ್​ಎಚ್​ ಸಮಸ್ಯೆಗೆ ಸಿಲುಕಿತು. ಬಳಿಕ ಬಂದ ಮಾರ್ಕ್ರಮ್​ 20 ರನ್ ಬಾರಿಸಿದರೆ ಕ್ಲಾಸೆನ್​ 16 ರನ್​ಗೆ ಸೀಮಿತಗೊಂಡರು.

ಇದನ್ನೂ ಓದಿ: Hardik Pandya : ಡೈವೋರ್ಸ್​ ಗಾಸಿಪ್​ ನಡುವೆ ಹಾರ್ದಿಕ್ ಪಾಂಡ್ಯ ನಾಪತ್ತೆ!

ಸತತವಾಗಿ ವಿಕೆಟ್​ ಕಳೆದುಕೊಂಡ ಕಾರಣ ಎಸ್​ಆರ್​ಎಚ್​ ತಂಡಕ್ಕೆ ಚೇತರಿಸಿಕೊಳ್ಳುವುದಕ್ಕೆ ಅವಕಾಶವೇ ಸಿಗಲಿಲ್ಲ. ಶಹಬಾಜ್​ ಅಹಮದ್ 8 ರನ್​ಗೆ ಸೀಮಿತಗೊಂಡರೆ ಇಂಪ್ಯಾಕ್ಟ್​ ಪ್ಲೇಯರ್​ ಸಮದ್​ 4 ರನ್​ಗೆ ಔಟಾದರು. ಅಂತಿಮವಾಗಿ ನಾಯಕ ಪ್ಯಾಟ್​ ಕಮಿನ್ಸ್​ 19 ಎಸೆತಕ್ಕೆ 24 ರನ್ ಬಾರಿಸಿ ತಂಡದ ಮೊತ್ತ 100ರ ಗಡಿ ದಾಟಲು ನೆರವಾದರು.

Continue Reading

ಕ್ರೀಡೆ

IPL 2024 Final : ಐಪಿಎಲ್ ಫೈನಲ್​​ನಲ್ಲಿ ಕಡಿಮೆ ಸ್ಕೋರ್​ನ ಕಳಪೆ ದಾಖಲೆ ಬರೆದ ಸನ್​ರೈಸರ್ಸ್​ ಹೈದರಾಬಾದ್​​

IPL 2024 Final: ಬೆಂಗಳೂರು ವಿರುದ್ಧದ ಲೀಗ್ ಪಂದ್ಯದಲ್ಲಿ 3 ವಿಕೆಟ್​ಗೆ 287 ಸ್ಕೋರ್ ಮಾಡುವ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಮೊತ್ತವನ್ನು ಗಳಿಸಿದ ಎಸ್ಆರ್​ಎಚ್​​ ಬ್ಯಾಟರ್​ಗಳು ಈ ಋತುವಿನ ಅತಿದೊಡ್ಡ ವೇದಿಕೆಯಲ್ಲಿ ಪ್ರದರ್ಶನ ನೀಡಲು ವಿಫಲರಾದರು ಮತ್ತು ಕಡಿಮೆ ಮೊತ್ತಕ್ಕೆ ಔಟಾದರು. ಕೆಕೆಆರ್ ಪರ ಮಿಚೆಲ್ ಸ್ಟಾರ್ಕ್, ಆಂಡ್ರೆ ರಸೆಲ್ ಹಾಗೂ ಹರ್ಷಿತ್ ರಾಣಾ ಭರ್ಜರಿ ಬೌಲಿಂಗ್​ ಮಾಡಿದರು.

VISTARANEWS.COM


on

IPL 2024
Koo

ಚೆನ್ನೈ: ಐಪಿಎಲ್​ 2024ರ ಫೈನಲ್ ಪಂದ್ಯದಲ್ಲಿ (IPL 2024 Final) ಟಾಸ್​ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 113 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್​ನಲ್ಲಿ ಅತ್ಯಂತ ಕಡಿಮೆ ಸ್ಕೋರ್ ಗಳಿಸಿದ ಕಳಪೆ ದಾಖಲೆಯನ್ನು ಬರೆಯಿತು. ಅಲ್ಲದೆ 11 ವರ್ಷಗಳ ಹಿಂದೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಫೈನಲ್​ನಲ್ಲಿ 125ರನ್​ಗಳಿಗೆ 9 ಕಳೆದುಕೊಂಡ ಕಳಪೆ ದಾಖಲೆಯನ್ನು ಮುರಿಯಿತು.

ಬೆಂಗಳೂರು ವಿರುದ್ಧದ ಲೀಗ್ ಪಂದ್ಯದಲ್ಲಿ 3 ವಿಕೆಟ್​ಗೆ 287 ಸ್ಕೋರ್ ಮಾಡುವ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಮೊತ್ತವನ್ನು ಗಳಿಸಿದ ಎಸ್ಆರ್​ಎಚ್​​ ಬ್ಯಾಟರ್​ಗಳು ಈ ಋತುವಿನ ಅತಿದೊಡ್ಡ ವೇದಿಕೆಯಲ್ಲಿ ಪ್ರದರ್ಶನ ನೀಡಲು ವಿಫಲರಾದರು ಮತ್ತು ಕಡಿಮೆ ಮೊತ್ತಕ್ಕೆ ಔಟಾದರು. ಕೆಕೆಆರ್ ಪರ ಮಿಚೆಲ್ ಸ್ಟಾರ್ಕ್, ಆಂಡ್ರೆ ರಸೆಲ್ ಹಾಗೂ ಹರ್ಷಿತ್ ರಾಣಾ ಭರ್ಜರಿ ಬೌಲಿಂಗ್​ ಮಾಡಿದರು. ಕುತೂಹಲಕಾರಿ ಸಂಗತಿಯೆಂದರೆ, ಐಪಿಎಲ್ 2024 ಫೈನಲ್​ನಲ್ಲಿ ಕೆಕೆಆರ್​​ ತಂಡ ಎಲ್ಲ ಬೌಲರ್​ಗಳು ವಿಕೆಟ್ ಪಡೆದರು.

ಐಪಿಎಲ್ ಫೈನಲ್​ನಲ್ಲಿ ಕನಿಷ್ಠ ಮೊತ್ತ

113/10 – ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ – 2024
125/9 – ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ – 2013
128/6 – ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ – 2016
129/8 – ಮುಂಬೈ ಇಂಡಿಯನ್ಸ್ ವಿರುದ್ಧ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ – 2017
130/9 – ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ – 2022

2013ರ ಐಪಿಎಲ್ ಫೈನಲ್​ನಲ್ಲಿ ಮುಂಬೈ ಇಂಡಿಯನ್ಸ್ ನೀಡಿದ್ದ 148 ರನ್​ಗಳ ಗುರಿ ಬೆನ್ನಟ್ಟುವ ಹಾದಿಯಲ್ಲಿ ಚೆನ್ನೈ 23 ಸೋತಿತ್ತು. ಅದೇನೇ ಇದ್ದರೂ, ಕೋಲ್ಕತಾ ತನ್ನ ಮೂರನೇ ಪ್ರಶಸ್ತಿಯನ್ನು ಗೆಲ್ಲಲು 114 ರನ್​​ಗಳ ಅಲ್ಪ ಮೊತ್ತವನ್ನು ಬೆನ್ನಟ್ಟಬೇಕಾಗಿದೆ. ಮತ್ತೊಂದೆಡೆ, ಹೈದರಾಬಾದ್ ತಂಡವು ಭಾನುವಾರ ಚೆನ್ನೈನಲ್ಲಿ ಇತಿಹಾಸವನ್ನು ಬರೆಯಲು ಬಯಸಿದರೆ ಪವಾಡದ ಅಗತ್ಯವಿದೆ.

ಇದನ್ನೂ ಓದಿ: Hardik Pandya : ಡೈವೋರ್ಸ್​ ಗಾಸಿಪ್​ ನಡುವೆ ಹಾರ್ದಿಕ್ ಪಾಂಡ್ಯ ನಾಪತ್ತೆ!

ಪಂದ್ಯದಲ್ಲಿ ಏನಾಯಿತು?

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಸ್ಕೋರ್ ಬಾರಿಸಬೇಕೆನ್ನುವ ಎಸ್​ಆರ್​ಎಚ್​ ತಂಡದ ಆಸೆ ಕಮರಿ ಹೋಯಿತು. ಮಿಚೆಲ್ ಸ್ಟಾರ್ಕ್ ಅವರ ಮೊದಲ ಓವರ್​ನಲ್ಲಿಯೇ ಅಭಿಷೇಕ್​ ಶರ್ಮಾ 2 ರನ್ ಬಾರಿಸಿ ಔಟಾದರು. ಟ್ರಾವಿಸ್​ ಹೆಡ್​ ಮತ್ತೊಂದು ಬಾರಿ ವಿಫಲಗೊಂಡು ಶೂನ್ಯಕ್ಕೆ ಔಟಾದರು. ಅವರು ವೈಭವ್​ ಎಸೆತಕ್ಕೆ ವಿಕೆಟ್​ ಒಪ್ಪಿಸಿದರು. ಬಳಿಕಬಂದ ರಾಹುಲ್ ತ್ರಿಪಾಠಿ ಸ್ಟಾರ್ಕ್ ಎಸೆತಕ್ಕೆ ಕ್ಯಾಚ್​ ನೀಡಿ ಔಟಾಗುವ ಮೊದಲು 9 ರನ್ ಬಾರಿಸಿದ್ದರು. 21 ರನ್​ಗೆ 3 ವಿಕೆಟ್​ ಕಳೆದುಕೊಂಡ ಎಸ್​ಆರ್​ಎಚ್​ ಸಮಸ್ಯೆಗೆ ಸಿಲುಕಿತು. ಬಳಿಕ ಬಂದ ಮಾರ್ಕ್ರಮ್​ 20 ರನ್ ಬಾರಿಸಿದರೆ ಕ್ಲಾಸೆನ್​ 16 ರನ್​ಗೆ ಸೀಮಿತಗೊಂಡರು.

ಸತತವಾಗಿ ವಿಕೆಟ್​ ಕಳೆದುಕೊಂಡ ಕಾರಣ ಎಸ್​ಆರ್​ಎಚ್​ ತಂಡಕ್ಕೆ ಚೇತರಿಸಿಕೊಳ್ಳುವುದಕ್ಕೆ ಅವಕಾಶವೇ ಸಿಗಲಿಲ್ಲ. ಶಹಬಾಜ್​ ಅಹಮದ್ 8 ರನ್​ಗೆ ಸೀಮಿತಗೊಂಡರೆ ಇಂಪ್ಯಾಕ್ಟ್​ ಪ್ಲೇಯರ್​ ಸಮದ್​ 4 ರನ್​ಗೆ ಔಟಾದರು. ಅಂತಿಮವಾಗಿ ನಾಯಕ ಪ್ಯಾಟ್​ ಕಮಿನ್ಸ್​ 19 ಎಸೆತಕ್ಕೆ 24 ರನ್ ಬಾರಿಸಿ ತಂಡದ ಮೊತ್ತ 100ರ ಗಡಿ ದಾಟಲು ನೆರವಾದರು.

Continue Reading

ಕ್ರೀಡೆ

Hardik Pandya : ಡೈವೋರ್ಸ್​ ಗಾಸಿಪ್​ ನಡುವೆ ಹಾರ್ದಿಕ್ ಪಾಂಡ್ಯ ನಾಪತ್ತೆ!

Hardik Pandya : ವಿರಾಟ್ ಕೊಹ್ಲಿ ಕೂಡ ಮೊದಲ ಗುಂಪಿನೊಂದಿಗೆ ಹೊರಡುತ್ತಾರೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ ಅವರು ವಿಶ್ವಕಪ್​​ಗೆ ತೆರಳುವ ಆಟಗಾರ ಸಂಗಡ ಕಾಣಿಸಿಕೊಂಡಿಲ್ಲ. ಆದರೆ, ಅವರು ತಡವಾಗಿ ಹೋಗುತ್ತಾರೆ ಹಾಗೂ ಅಭ್ಯಾಸ ಪಂದ್ಯದಲ್ಲಿ ಭಾಗಿಯಾಗುವುದಿಲ್ಲ ಎಂಬ ಮಾಹಿತಿ ಬಂದಿದೆ. ಇಷ್ಟೆಲ್ಲ ಆದರೂ ಪಾಂಡ್ಯ ಬಗ್ಗೆ ಯಾರೂ ಮಾತನಾಡುತ್ತಿಲ್ಲ.

VISTARANEWS.COM


on

Hardik Pandya
Koo

ಬೆಂಗಳೂರು: ನಾಯಕ ರೋಹಿತ್ ಶರ್ಮಾ, ವಿಕೆಟ್​ ಕೀಪರ್​ ರಿಷಭ್ ಪಂತ್ ಮತ್ತು ಆಲ್ರೌಂಡರ್ ಶಿವಂ ದುಬೆ ಸೇರಿದಂತೆ ಭಾರತೀಯ ಕ್ರಿಕೆಟಿಗರ ಮೊದಲ ಗುಂಪು ಅಮೆರಿಕಕ್ಕೆ ಪ್ರಯಾಣಿಸಿದೆ. ಅವರೆಲ್ಲರೂ ಜೂನ್ 1 ರಿಂದ ಆರಂಭವಾಗಲಿರುವ ಐಸಿಸಿ ಟಿ 20 ವಿಶ್ವಕಪ್ 2024 ಗಾಗಿ ಸಿದ್ಧತೆ ಪ್ರಾರಂಭಿಸಿದ್ದಾರೆ. ಅದಕ್ಕೂ ಮೊದಲು ಅವರು ಮುಮಬೈ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದರು. ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್​ ಕೂಡ ನಿಯೋಗದಲ್ಲಿದ್ದರು. ಆದರೆ, ಹಾರ್ದಿಕ್ ಪಾಂಡ್ಯ (Hardik Pandya ) ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ.

ವಿರಾಟ್ ಕೊಹ್ಲಿ ಕೂಡ ಮೊದಲ ಗುಂಪಿನೊಂದಿಗೆ ಹೊರಡುತ್ತಾರೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ ಅವರು ವಿಶ್ವಕಪ್​​ಗೆ ತೆರಳುವ ಆಟಗಾರ ಸಂಗಡ ಕಾಣಿಸಿಕೊಂಡಿಲ್ಲ. ಆದರೆ, ಅವರು ತಡವಾಗಿ ಹೋಗುತ್ತಾರೆ ಹಾಗೂ ಅಭ್ಯಾಸ ಪಂದ್ಯದಲ್ಲಿ ಭಾಗಿಯಾಗುವುದಿಲ್ಲ ಎಂಬ ಮಾಹಿತಿ ಬಂದಿದೆ. ಇಷ್ಟೆಲ್ಲ ಆದರೂ ಪಾಂಡ್ಯ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಪಾಂಡ್ಯ – ನತಾಶಾ ದಂಪತಿ ಪ್ರತ್ಯೇಕಗೊಂಡಿದ್ದಾರೆ ಎಂಬ ಮಾಹಿತಿ ಹರಡುತ್ತಿರುವ ನಡುವೆಯೇ ಅವರು ನಾಪತ್ತೆಯಾಗಿದ್ದಾರೆ.

ಭಾರತ ತಂಡದ ಮೊದಲ ನಿಯೋಗದ ಆಟಗಾರರು ನ್ಯೂಯಾರ್ಕ್​ಗೆ ತೆರಳುವ ವಿಮಾನ ಹಿಡಿಯುವ ಮೊದಲು ತಂಡವು ದುಬೈಗೆ ಹಾರಲಿದ್ದಾರೆ. ಅಲ್ಲೀಂದ ಯುಎಸ್​ಎಗೆ ಪ್ರಯಾಣ ಮಾಡಿ ಅಭ್ಯಾಸ ಪಂದ್ಯ ಸಮೇತ ವಿಶ್ವ ಕಪ್​ ಗೆಲ್ಲುವ ಹಾದಿಯಲ್ಲಿ ತಮ್ಮ ಶ್ರಮ ವಹಿಸಲಿದ್ದಾರೆ.

ಹಾರ್ದಿಕ್ ಪಾಂಡ್ಯ ಐಪಿಎಲ್​ನಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ.. ಆದಾಗ್ಯೂ ಅವರು ವೇಗದ ಬೌಲಿಂಗ್ ಆಲ್​ರೌಂಡರ್ ಆಯ್ಕೆಯಾಗಿ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಇದು ಸ್ವಲ್ಪ ಮಟ್ಟಿಗೆ ಚರ್ಚೆಯ ಸಂಗತಿಯಾಯಿತು. ಇದೀಗ ಅವರ ಇರುವಿಕೆ ಪತ್ತೆಯಾಗದ ಕಾರಣ ಹೇಗೆ ಆಡುವರೆಂಬ ಚರ್ಚೆ ಶುರುವಾಗಿದೆ.

ಪಾಂಡ್ಯ ಎಲ್ಲಿ?

ಐಪಿಎಲ್ ಫ್ರಾಂಚೈಸಿ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೆ ಪ್ರವೇಶಿಸಲು ವಿಫಲವಾಯಿತು. 10ನೇ ಸ್ಥಾನ ಪಡೆದು ಹೀನಾಯ ಪ್ರದರ್ಶನವೊಂದಿಗೆ ಅಭಿಯಾನ ಅಂತ್ಯಗೊಳಿಸಿತು. ಅಲ್ಲಿಂದ ಬಳಿಕ ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ. ಐಪಿಎಲ್​ನ 17 ನೇ ಋತುವಿನಲ್ಲಿ ಹಾರ್ದಿಕ್ ಪಾಂಡ್ಯ ದಯನೀಯವಾಗಿ ವಿಫಲರಾದರು. ಎಂಐ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೇ ಸ್ಥಾನದಲ್ಲಿತ್ತು. ಆ ವೇಳೆ ಅವರ ಪ್ರದರ್ಶನದ ಬಗ್ಗೆ ಮಾತ್ರ ಚರ್ಚೆನಡೆಯುತ್ತಿತ್ತು. ಇದೀಗ ಅವರ ದಾಂಪತ್ಯ ಜೀವನದ ಬಗ್ಗೆ ಜೋರು ಚರ್ಚೆ ನಡೆಯುತ್ತಿವೆ.

ಇದನ್ನೂ ಓದಿ: Yashasvi Jaiswal : ಚೆನ್ನೈ ಏರ್​ಪೋರ್ಟ್​​ನಲ್ಲಿ ಗೆಳತಿಯೊಂದಿಗೆ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್​; ಇಲ್ಲಿದೆ ವಿಡಿಯೊ

ಹಾರ್ದಿಕ್ ಪಾಂಡ್ಯ ಅಥವಾ ನತಾಶಾ ಈ ಬಗ್ಗೆ ಹೇಳಿಕೆ ನೀಡಿ್ಲ. ಪಾಂಡ್ಯ ತರಬೇತಿಗಾಗಿ ಲಂಡನ್​ಗೆ ಹೋಗಿದ್ದಾರೆ ಮತ್ತು ಅಲ್ಲಿಂದ ನೇರವಾಗಿ ತಂಡ ಸೇರಿಕೊಳ್ಳಲಿದ್ದಾರೆ ಎಂದು ವರದಿಗಳು ಸೂಚಿಸಿವೆ. ಆದರೆ, ಅದಕ್ಕೆ ಒಂದು ಖಾತರಿ ಇಲ್ಲದಾಗಿದೆ. ರಾಜಸ್ಥಾನ್ ರಾಯಲ್ಸ್ ಆಟಗಾರರಾದ ಸಂಜು ಸ್ಯಾಮ್ಸನ್, ಯಜುವೇಂದ್ರ ಚಾಹಲ್, ಅವೇಶ್ ಖಾನ್ ಮತ್ತು ಯಶಸ್ವಿ ಜೈಸ್ವಾಲ್ ಎರಡನೇ ಬ್ಯಾಚ್​​ನಲ್ಲಿ ಹೋಗಲಿದ್ದಾರೆ.

ವಿಶ್ವ ಕಪ್​ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

Continue Reading
Advertisement
Varanasi
ದೇಶ20 mins ago

Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Virat kohli
ಕ್ರೀಡೆ23 mins ago

Virat Kohli : ಐಪಿಎಲ್​ 2024ರ ಆರೆಂಜ್ ಕ್ಯಾಪ್ ಗೆದ್ದು ಹೊಸ ದಾಖಲೆ ಬರೆದ ವಿರಾಟ್​ ಕೊಹ್ಲಿ

IPL 2024 Final
ಪ್ರಮುಖ ಸುದ್ದಿ48 mins ago

IPL 2024 Final : 3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್​​; ಹೈದರಾಬಾದ್​ಗೆ ನಿರಾಸೆ

The Kapil Sharma Show
ದೇಶ1 hour ago

Physical Abuse: ಕಪಿಲ್‌ ಶರ್ಮಾ ಶೋನಲ್ಲಿ ಪಾತ್ರ ಕೊಡುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ

IPL 2024
ಕ್ರೀಡೆ1 hour ago

IPL 2024 Final : ಐಪಿಎಲ್ ಫೈನಲ್​​ನಲ್ಲಿ ಕಡಿಮೆ ಸ್ಕೋರ್​ನ ಕಳಪೆ ದಾಖಲೆ ಬರೆದ ಸನ್​ರೈಸರ್ಸ್​ ಹೈದರಾಬಾದ್​​

Hardik Pandya
ಕ್ರೀಡೆ2 hours ago

Hardik Pandya : ಡೈವೋರ್ಸ್​ ಗಾಸಿಪ್​ ನಡುವೆ ಹಾರ್ದಿಕ್ ಪಾಂಡ್ಯ ನಾಪತ್ತೆ!

Rain News
ಕರ್ನಾಟಕ2 hours ago

Rain News: ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

Phalody Satta Bazar
ದೇಶ2 hours ago

Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Shivamogga News
ಕರ್ನಾಟಕ3 hours ago

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

turbulence
ಪ್ರಮುಖ ಸುದ್ದಿ3 hours ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ಮತ್ತೊಂದು ವಿಮಾನ; 12 ಮಂದಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌