T20 World Cup | ಈ ತಂಡ ವಿಶ್ವ ಕಪ್‌ ಗೆಲ್ಲುವುದು ಖಚಿತ; ಎಬಿಡಿ ಆಯ್ಕೆಯ ತಂಡ ಯಾವುದು? - Vistara News

Latest

T20 World Cup | ಈ ತಂಡ ವಿಶ್ವ ಕಪ್‌ ಗೆಲ್ಲುವುದು ಖಚಿತ; ಎಬಿಡಿ ಆಯ್ಕೆಯ ತಂಡ ಯಾವುದು?

ಈ ಬಾರಿಯ ಟಿ20 ವಿಶ್ವ ಕಪ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳು ಫೈನಲ್‌ ತಲುಪಲಿದೆ ಎಂದು ಎಬಿ ಡಿ ವಿಲಿಯರ್ಸ್‌ ಭವಿಷ್ಯ ನುಡಿದಿದ್ದಾರೆ.

VISTARANEWS.COM


on

abd
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ೨೦ ವಿಶ್ವ ಕಪ್‌(T20 World Cup) ಕ್ರಿಕೆಟ್‌ ಸಮರದಲ್ಲಿ ಸೆಮಿ ಫೈನಲ್‌ ಪಂದ್ಯಗಳಿಗೂ ಮುನ್ನ ಯಾವ ತಂಡ ಫೈನಲ್ ಪ್ರವೇಶಿಸಲಿದೆ, ಯಾವ ತಂಡ ಚಾಂಪಿಯನ್‌ ಆಗಲಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಸ್ಫೋಟಕ ಬ್ಯಾಟರ್‌ ಎಬಿ ಡಿ ವಿಲಿಯರ್ಸ್‌ ಭವಿಷ್ಯ ನುಡಿದಿದ್ದಾರೆ.

ಮಂಗಳವಾರ ಸಂದರ್ಶನವೊಂದರಲ್ಲಿ ಮಾತನಾಡಿದ ಮಿಸ್ಟರ್‌ ೩೬೦ ಖ್ಯಾತಿಯ ಎಬಿಡಿ, ಈ ಬಾರಿ ಟಿ೨೦ ವಿಶ್ವ ಕಪ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳು ಫೈನಲ್‌ ಪ್ರವೇಶಿಸಲಿವೆ. ಆದರೆ ಫೈನಲ್‌ನಲ್ಲಿ ಟೀಮ್‌ ಇಂಡಿಯಾ ಚಾಂಪಿಯನ್‌ ಆಗಲಿದೆ ಎಂದು ತಿಳಿಸಿದ್ದಾರೆ.

“ಸೂರ್ಯಕುಮಾರ್ ಯಾದವ್‌ ಮತ್ತು ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಇಡೀ ಭಾರತ ತಂಡ ಉತ್ತಮ ಸಾಮರ್ಥ್ಯ ಹೊಂದಿದೆ. ಟೂರ್ನಿಯುದ್ದಕ್ಕೂ ಭಾರತ ತಂಡ ಉತ್ತಮ ಪ್ರದರ್ಶನವನ್ನು ತೋರಿದೆ. ಈ ನಿಟ್ಟಿನಲ್ಲಿ ಭಾರತ ತಂಡ ಚಾಂಪಿಯನ್‌ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಎಬಿ ಡಿ ವಿಲಿಯರ್ಸ್ ತಿಳಿಸಿದ್ದಾರೆ.

ನಮ್ಮ ತಂಡದ ಸೋಲು ಬೇಸರ ತಂದಿದೆ

ಆರಂಭಿಕ ಹಂತದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಆತ್ಮವಿಶ್ವಾಸ ಮೂಡಿಸಿದ್ದ ನಮ್ಮ ತಂಡ ಸೆಮಿಫೈನಲ್‌ಗೇರದ ಬಗ್ಗೆ ನನಗೆ ಬೇಸರವಿಲ್ಲ. ಆದರೆ ಕೂಟದ ಬಲಿಷ್ಠ ತಂಡವಾದ ಭಾರತವನ್ನು ಸೋಲಿಸಿದರೂ ದುರ್ಬಲ ನೆದರ್ಲೆಂಡ್ಸ್‌ ತಂಡದ ವಿರುದ್ಧದ ಸೋಲು ಮಾತ್ರ ನಿರಾಶಾದಾಯಕವಾಗಿದೆ. ದುರದೃಷ್ಟವಶಾತ್ ಯಾವುದೋ ಒಂದು ಹಂತದಲ್ಲಿ ನಾನು ಅಂದುಕೊಂಡದ್ದು ತಪ್ಪಾಯಿತು. ನೆದರ್ಲೆಂಡ್ಸ್ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿದ್ದೇ ಸೋಲಿಗೆ ಪ್ರಮುಖ ಕಾರಣ ಎಂದು ನನಗನಿಸುತ್ತಿದೆ ಎಂದು ಎಬಿಡಿ ತಿಳಿಸಿದ್ದಾರೆ.

ಇದನ್ನೂ ಓದಿ | T20 World Cup | ಅಂಪೈರ್‌ಗಳ ಪಟ್ಟಿ ಕಂಡು ಟೀಮ್‌ ಇಂಡಿಯಾ ಅಭಿಮಾನಿಗಳಲ್ಲಿ ಸಂತಸ; ಕಾರಣ ಏನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Dogs Attack: ನಾಯಿಗಳು ದಾಳಿ ಮಾಡಲು ಬಂದರೆ ಏನು ಮಾಡಬೇಕು? ಹೇಗೆ ರಕ್ಷಿಸಿಕೊಳ್ಳಬೇಕು?

ಹೆಚ್ಚುತ್ತಿರುವ ಬೀದಿನಾಯಿಗಳು ಆಕ್ರಮಣ ಸಾಮಾಜಿಕವಾಗಿ ಆತಂಕಕ್ಕೆ ಕಾರಣವಾಗಿದೆ. ಬೀದಿ ನಾಯಿಗಳು ದಾಳಿಗೆ ಅನೇಕ ಕಾರಣಗಳಿರುತ್ತವೆ. ಬೀದಿ ನಾಯಿಗಳು (Dogs Attack) ಏಕೆ ದಾಳಿ ಮಾಡುತ್ತವೆ, ನಾಯಿಗಳ ಬಗ್ಗೆ ಕಾನೂನು ಏನು ಹೇಳುತ್ತದೆ ಮತ್ತು ಅಂತಹ ದಾಳಿಗಳಿಗೆ ಯಾರು ಹೊಣೆಗಾರರಾಗುತ್ತಾರೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Dogs Attack
Koo

ಚೆನ್ನೈನ (chennai) ಸಾರ್ವಜನಿಕ ಪ್ರದೇಶದಲ್ಲಿ ಇತ್ತೀಚೆಗೆ ಎರಡು ಸಾಕು ನಾಯಿಗಳು ದಾಳಿ (Dogs Attack) ನಡೆಸಿದ್ದರಿಂದ ಐದು ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಕಳೆದ ಫೆಬ್ರವರಿಯಲ್ಲಿ ದೆಹಲಿಯ (delhi) ತುಘಲಕ್ ಲೇನ್‌ನ ಧೋಬಿ ಘಾಟ್ ಪ್ರದೇಶದಲ್ಲಿ ಎರಡು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ಗುಂಪೊಂದು ದಾಳಿ ನಡೆಸಿ ಕೊಂದು ಹಾಕಿತ್ತು. ಕಳೆದ ವರ್ಷ, ವಾಘ್ ಬಕ್ರಿ ಟೀ ಗ್ರೂಪ್‌ನ (Wagh Bakri Tea Group) ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ ಅವರು ಬೀದಿ ನಾಯಿಗಳ ದಾಳಿಗೆ ಒಳಗಾಗಿ ಸಾವನ್ನಪ್ಪಿದ್ದರು.

ಇದು ಕೆಲವು ಉದಾಹರಣೆಯಷ್ಟೇ. ದೇಶದ ಹಲವಾರು ಭಾಗಗಳಲ್ಲಿ ನಾಯಿಗಳ ದಾಳಿಯಿಂದ ಅನೇಕ ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಗಾಯಗೊಂಡಿದ್ದಾರೆ. ಇದು ಸಮಾಜಿಕವಾಗಿ ಆತಂಕಕ್ಕೆ ಕಾರಣವಾಗಿದೆ. ಬೀದಿನಾಯಿಗಳು ದುರ್ಬಲ ಜನರನ್ನು, ಹೆಚ್ಚಾಗಿ ಮಕ್ಕಳು ಮತ್ತು ಹಿರಿಯ ನಾಗರಿಕರ ಮೇಲೆ ದಾಳಿ ನಡೆಸುತ್ತವೆ. ಬೀದಿ ನಾಯಿಗಳು ಏಕೆ ದಾಳಿ ಮಾಡುತ್ತವೆ, ನಾಯಿಗಳ ಬಗ್ಗೆ ಕಾನೂನು ಏನು ಹೇಳುತ್ತದೆ ಮತ್ತು ಅಂತಹ ದಾಳಿಗಳಿಗೆ ಯಾರು ಹೊಣೆಗಾರರಾಗುತ್ತಾರೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ದಾಳಿಗೆ ಏನು ಕಾರಣ?

ಭಾರತದಲ್ಲಿ ಪ್ರಾಣಿಗಳ ಆರೋಗ್ಯ ರಕ್ಷಣೆ ಮತ್ತು ನಿಯಂತ್ರಣಕ್ಕೆ ಸರಿಯಾದ ಕಾರ್ಯವಿಧಾನಗಳಿಲ್ಲ. ಸರಿಯಾದ ಪ್ರಾಣಿ ನಿಯಂತ್ರಣ ಕ್ರಮಗಳ ಕೊರತೆಯು ಬೃಹತ್ ಸಂಖ್ಯಾ ಸ್ಫೋಟಕ್ಕೆ ಮತ್ತು ಮನುಷ್ಯರೊಂದಿಗೆ ಘರ್ಷಣೆಗೆ ಕಾರಣವಾಗಿದೆ. ಇದಲ್ಲದೆ, ಸಾಂಕ್ರಾಮಿಕ ಕಾಯಿಲೆ, ಆಹಾರದ ಕೊರತೆಯಿಂದಾಗಿ ನಾಯಿಗಳು ಉಗ್ರವಾಗುತ್ತದೆ.

ನಾಯಿಗಳ ಸಂಖ್ಯೆ

ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಸಾಕು ನಾಯಿಗಳ ಒಟ್ಟಾರೆ ಸಂಖ್ಯೆಯು 2021ರಲ್ಲಿ 27 ಮಿಲಿಯನ್‌ಗಿಂತಲೂ ಹೆಚ್ಚಿದೆ. 2026ರ ವೇಳೆಗೆ ಇವುಗಳ ಸಂಖ್ಯೆಯು 43 ಮಿಲಿಯನ್‌ಗಿಂತಲೂ ಹೆಚ್ಚು ತಲುಪುವ ಸಾಧ್ಯತೆಯಿದೆ.
ಜಾಗತಿಕ ಪಿಇಟಿ ಆರೋಗ್ಯ ಮತ್ತು ಪೌಷ್ಟಿಕಾಂಶ ಕಂಪನಿಯಾದ ಮಾರ್ಸ್ ಪೆಟ್‌ಕೇರ್‌ನ ಸ್ಟೇಟ್ ಆಫ್ ಪೆಟ್ ಹೋಮ್‌ಲೆಸ್‌ನೆಸ್ ಇಂಡೆಕ್ಸ್ 2021ರ ಪ್ರಕಾರ ಭಾರತದಲ್ಲಿ ಬೀದಿ ನಾಯಿಗಳ ಸಂಖ್ಯೆಯು ಸುಮಾರು 62 ಮಿಲಿಯನ್ ಆಗಿದೆ.

ನಾಯಿ ಕಡಿತ ಪ್ರಕರಣ

2019ರಲ್ಲಿ ದೇಶದಲ್ಲಿ 4,146 ನಾಯಿ ಕಡಿತದ ಪ್ರಕರಣಗಳು ಮಾನವ ಸಾವಿಗೆ ಕಾರಣವಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಅಂಕಿಅಂಶಗಳನ್ನು ತೋರಿಸುತ್ತದೆ. ಇನ್ನೊಂದು ಮಾಹಿತಿ ಪ್ರಕಾರ ದೇಶದಲ್ಲಿ 2019 ರಿಂದ 1.5 ಕೋಟಿ ನಾಯಿ ಕಡಿತದ ಪ್ರಕರಣಗಳು ನಡೆದಿದೆ. ಅತೀ ಹೆಚ್ಚು ನಾಯಿಗಳು ಉತ್ತರ ಪ್ರದೇಶದಲ್ಲಿದ್ದು, 27.52 ಲಕ್ಷ ನಾಯಿಗಳನ್ನು ಹೊಂದಿದೆ. ತಮಿಳುನಾಡಿನಲ್ಲಿ 20.7 ಲಕ್ಷ ಮತ್ತು ಮಹಾರಾಷ್ಟ್ರ ದಲ್ಲಿ 15.75 ಲಕ್ಷ ನಾಯಿಗಳನ್ನು ಹೊಂದಿದೆ.

ನಾಯಿ ದಾಳಿಗೆ ಯಾರು ಹೊಣೆ?

ಬೀದಿ ನಾಯಿಗಳು ವ್ಯಘ್ರಗೊಂಡಿರಬಹುದು, ನೊಂದಿರಬಹುದು, ಹಸಿದಿರಬಹುದು, ಆಘಾತಕ್ಕೊಳಗಾಗಿರಬಹುದು, ಆತಂಕಕ್ಕೊಳಗಾಗಬಹುದು ಅಥವಾ ತಮ್ಮ ಮರಿಗಳನ್ನು ರಕ್ಷಿಸಿಕೊಳ್ಳಲು ದಾಳಿ ನಡೆಸುತ್ತವೆ. ಸರ್ಕಾರ ಮತ್ತು ಪ್ರಾಣಿ ಕಲ್ಯಾಣ ಸಂಸ್ಥೆಗಳ ನಿರ್ಲಕ್ಷ್ಯ ಮತ್ತು ವೈಯಕ್ತಿಕ ನಿರಾಸಕ್ತಿ ಸೇರಿದಂತೆ ಹಲವಾರು ಅಂಶಗಳ ಪರಿಣಾಮವಾಗಿ ಬೀದಿ ನಾಯಿಗಳ ದಾಳಿ ನಡೆಸುತ್ತವೆ.


ಸಾಕುಪ್ರಾಣಿಗಳನ್ನು ರಕ್ಷಣೆ ಕಾನೂನು

ಯಾವುದೇ ಪ್ರಾಣಿಯನ್ನು ದೀರ್ಘ ಕಾಲ ಸರಪಳಿಯಲ್ಲಿ ಬಂಧಿಸುವುದು ಕ್ರೌರ್ಯಕ್ಕೆ ಸಮಾನ. ಇದಕ್ಕೆ ದಂಡ ಅಥವಾ 3 ತಿಂಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಮಾಲೀಕರು ತಮ್ಮ ಸಾಕುಪ್ರಾಣಿಗಳಿಗೆ ಸಾಕಷ್ಟು ಆಹಾರ, ಪಾನೀಯ ಅಥವಾ ಆಶ್ರಯವನ್ನು ಒದಗಿಸಲು ವಿಫಲವಾದರೆ ಅವರು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ 1960 ರ ಸೆಕ್ಷನ್ 11 (1) (h) ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. ಇದು 1960 ಶಿಕ್ಷಾರ್ಹ ಅಪರಾಧವಾಗಿದೆ. ಯಾವುದೇ ವ್ಯಕ್ತಿಯು, ಯಾವುದೇ ಸಮಂಜಸವಾದ ಕಾರಣವಿಲ್ಲದೆ ಪ್ರಾಣಿಯು ಹಸಿವು ಅಥವಾ ಬಾಯಾರಿಕೆಯಿಂದ ನೋವನ್ನು ಅನುಭವಿಸುವ ಪರಿಸ್ಥಿತಿಯಲ್ಲಿ ಪ್ರಾಣಿಯನ್ನು ತ್ಯಜಿಸಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಸೋಂಕಿತ, ರೋಗಗ್ರಸ್ತ ಅಥವಾ ಅಂಗವಿಕಲ ಪ್ರಾಣಿಯನ್ನು ಯಾವುದೇ ಅನುಮತಿಯಿಲ್ಲದೆ ಬೀದಿಗೆ ಬಿಟ್ಟರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಸಾಕುಪ್ರಾಣಿಗಳ ಮಾಲೀಕರನ್ನು ಬೆದರಿಸುವುದು, ಅಥವಾ ಆರೈಕೆ ಮಾಡದಂತೆ ತಡೆಯುವುದು IPC ಯ ಸೆಕ್ಷನ್ 503 ರ ಅಡಿಯಲ್ಲಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ನಾಯಿಗಳು ದಾಳಿ ಮಾಡಿದಾಗ ಏನು ಮಾಡಬೇಕು?

ನಾಯಿಗಳು ದಾಳಿ ಮಾಡಲು ಬಂದರೆ ಓಡಬೇಡಿ, ಕಿರುಚಬೇಡಿ. ಬದಲಾಗಿ ನಿಶ್ಚಲವಾಗಿರಿ. ಓಡಿದರೆ, ಕಿರುಚಿದರೆ ನಾಯಿ ದಾಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ.

ಕೋಲಿನಿಂದ ನಾಯಿಯನ್ನು ಬೆದರಿಸಬೇಡಿ. ಇದರಿಂದ ಅವು ಅಕ್ರಮಣಕಾರಿಯಾಗುತ್ತದೆ. ಬೀದಿಯಲ್ಲಿ ನಾಯಿಗಳಿಗೆ ಬಿಸ್ಕತ್ತುಗಳನ್ನು ನೀಡಿ. ಇದರಿಂದ ಅವುಗಳು ನಿಮ್ಮನ್ನು ಸ್ನೇಹಿತರಂತೆ ನೋಡುತ್ತದೆ.

ಇದನ್ನೂ ಓದಿ: Hindu Population: ಹಿಂದೂಗಳ ಜನಸಂಖ್ಯೆ ಶೇ.7.8 ಕುಸಿತ; ಮುಸ್ಲಿಮರ ಸಂಖ್ಯೆ ಶೇ.43.15 ಏರಿಕೆ!

ನಾಯಿಗಳು ದೊಡ್ಡ ಗುಂಪಿನಲ್ಲಿದ್ದರೆ ಅವುಗಳೊಂದಿಗೆ ಗುರಾಯಿಸಿ ನೋಡಬೇಡಿ. ನೇರವಾಗಿ ನಡೆಯಿರಿ. ನಾಯಿಗಳನ್ನು ಕಂಡು ಹಿಂತಿರುಗಿ ಓಡಬೇಡಿ. ಭಯವಾದರೆ ಬೇರೆ ಮಾರ್ಗವನ್ನು ಬಳಸಿ.

ನಿಮ್ಮನ್ನು ರಕ್ಷಿಸಿಕೊಳ್ಳಲು ಚೀಲವನ್ನು ಬಳಸಿ. ಹೊಟ್ಟೆ ಮತ್ತು ಕುತ್ತಿಗೆಯಂತಹ ಪ್ರಮುಖ ಅಂಗಗಳ ಮೇಲೆ ನಾಯಿಗಳು ದಾಳಿ ನಡೆಸುತ್ತವೆ. ಈ ಸಂದರ್ಭದಲ್ಲಿ ಚೀಲ ಅಥವಾ ಯಾವುದಾದರೂ ವಸ್ತುವನ್ನು ಅಡ್ಡವಾಗಿ ಹಿಡಿದು ರಕ್ಷಣೆಗೆ ಬಳಸಿ. ಶಾಂತವಾಗಿರಲು ಪ್ರಯತ್ನಿಸಿ.

ನಾಯಿಗಳು ದಾಳಿಗೆ ಮುಂದಾದಾಗ ನೇರವಾಗಿ ನಿಂತುಕೊಳ್ಳಿ. ತಲೆಯ ಮೇಲೆ ಕೈಗಳನ್ನು ಎತ್ತಿ. ಆತ್ಮವಿಶ್ವಾಸದಿಂದಿರಿ. ಆಗ ನಾಯಿಗಳೇ ಹೆದರಿ ಹಿಂದೆ ಸರಿಯುತ್ತವೆ.

Continue Reading

ದೇಶ

Hindu Population: ಹಿಂದೂಗಳ ಜನಸಂಖ್ಯೆ ಶೇ.7.8 ಕುಸಿತ; ಮುಸ್ಲಿಮರ ಸಂಖ್ಯೆ ಶೇ.43.15 ಏರಿಕೆ!

ಭಾರತದ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ (Hindu Population) ಕಳೆದ 65 ವರ್ಷಗಳಲ್ಲಿ ಶೇ. 7.8ರಷ್ಟು ಕುಸಿತವಾಗಿದ್ದು, ಅಲ್ಪಸಂಖ್ಯಾತರ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. 1950 ಮತ್ತು 2015ರ ನಡುವೆ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯ ಪಾಲು ಶೇ. 43.15ರಷ್ಟು ಹೆಚ್ಚಾಗಿದೆ. ಕ್ರಿಶ್ಚಿಯನ್ನರು ಶೇ.5.38, ಸಿಖ್ಖರು ಶೇ.6.58 ಮತ್ತು ಬೌದ್ಧರ ಜನಸಂಖ್ಯೆ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಳವಾಗಿದೆ.

VISTARANEWS.COM


on

By

Hindu population
Koo

ಭಾರತದ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ (Hindu Population) 1950 ಮತ್ತು 2015ರ ನಡುವೆ ಶೇ. 7.8ರಷ್ಟು ಕುಸಿತವಾಗಿದೆ ಎಂದು ಪ್ರಧಾನಮಂತ್ರಿಯ ( Prime Minister) ಆರ್ಥಿಕ ಸಲಹಾ ಮಂಡಳಿ (Economic Advisory Council) (EAC- PM) ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ.

ಭಾರತದಲ್ಲಿ ಹಿಂದೂ ಜನಸಂಖ್ಯೆಯು ಕುಗ್ಗಿದರೆ, ಮುಸ್ಲಿಂ (muslim), ಕ್ರಿಶ್ಚಿಯನ್ (Christian), ಬೌದ್ಧ (Buddhist) ಮತ್ತು ಸಿಖ್ಖರು (Sikhs) ಸೇರಿದಂತೆ ಅಲ್ಪಸಂಖ್ಯಾತರ ಜನಸಂಖ್ಯೆ ಬಹುತೇಕ ಹೆಚ್ಚಾಗಿದೆ. ಆದರೆ ಜೈನ (jain) ಮತ್ತು ಪಾರ್ಸಿಗಳ (Parsis ) ಸಂಖ್ಯೆ ಕುಸಿತವಾಗಿದೆ.

1950 ಮತ್ತು 2015ರ ನಡುವೆ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯ ಪಾಲು ಶೇ. 43.15ರಷ್ಟು ಹೆಚ್ಚಾಗಿದೆ. ಕ್ರಿಶ್ಚಿಯನ್ನರು ಶೇ.5.38, ಸಿಖ್ಖರು ಶೇ.6.58 ಮತ್ತು ಬೌದ್ಧರ ಜನಸಂಖ್ಯೆ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಳವಾಗಿದೆ.

ಪ್ರಧಾನಮಂತ್ರಿಯ ಆರ್ಥಿಕ ಸಲಹಾ ಮಂಡಳಿ ಪ್ರಕಾರ 65 ವರ್ಷಗಳಲ್ಲಿ ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 1950ರಲ್ಲಿ ಶೇ. 84ರಿಂದ 2015ರಲ್ಲಿ ಶೇ.78ಕ್ಕೆ ಕುಸಿತವಾಗಿದೆ. ಆದರೆ ಮುಸ್ಲಿಮರ ಸಂಖ್ಯೆ ಇದೇ ಅವಧಿಯಲ್ಲಿ ಶೇ.9.84ರಿಂದ ಶೇ.14.09ಕ್ಕೆ ಏರಿಕೆಯಾಗಿದೆ.


ಮ್ಯಾನ್ಮಾರ್‌, ನೇಪಾಳದಲ್ಲೂ ಕುಸಿತ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆಯ ಕುಗ್ಗುವಿಕೆ ಶೇ. 7.8ರಷ್ಟಿದ್ದರೆ, ಮ್ಯಾನ್ಮಾರ್‌ನಲ್ಲಿ ಶೇ. 10ರಷ್ಟು ಕುಸಿತವಾಗಿದೆ. ಇದು ನೆರೆಹೊರೆಯ ರಾಷ್ಟ್ರದಲ್ಲಿ ಎರಡನೇ ಅತ್ಯಂತ ಮಹತ್ವದ ಕುಸಿತವಾಗಿದೆ. ಭಾರತವನ್ನು ಹೊರತುಪಡಿಸಿ, ನೇಪಾಳದ ಬಹುಸಂಖ್ಯಾತ ಸಮುದಾಯವಾದ ಹಿಂದೂಗಳ ಜನಸಂಖ್ಯೆಯ ತನ್ನ ಪಾಲಿನಲ್ಲಿ ಶೇ. 3.6ರಷ್ಟು ಕುಸಿತವನ್ನು ಕಂಡಿದೆ.

167 ದೇಶಗಳ ಮೌಲ್ಯಮಾಪನ

ಮೇ 2024ರಲ್ಲಿ ಬಿಡುಗಡೆಯಾದ ಈ ಅಧ್ಯಯನವು ಪ್ರಪಂಚದಾದ್ಯಂತ 167 ದೇಶಗಳಲ್ಲಿನ ಪ್ರವೃತ್ತಿಯನ್ನು ಮೌಲ್ಯಮಾಪನ ಮಾಡಿದೆ. ಭಾರತದ ಕಾರ್ಯಕ್ಷಮತೆಯು ದೊಡ್ಡ ಜಾಗತಿಕ ಪ್ರವೃತ್ತಿಗಳೊಂದಿಗೆ ಸ್ಥಿರವಾಗಿದೆ ಎನ್ನುತ್ತಾರೆ ಅಧ್ಯಯನಕಾರರು. ಅಲ್ಪಸಂಖ್ಯಾತರು ಭಾರತದಲ್ಲಿ ಕೇವಲ ರಕ್ಷಿಸಲ್ಪಟ್ಟಿಲ್ಲ, ನಿಜವಾಗಿಯೂ ಬೆಳೆಯುತ್ತಿದ್ದಾರೆ ಎಂಬುದನ್ನು ಈ ಅಂಕಿ ಅಂಶಗಳು ತೋರಿಸಿವೆ ಎನ್ನುತ್ತಾರೆ ತಜ್ಞರು.

ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಹೆಚ್ಚಳ

ಭಾರತದ ಜನಸಂಖ್ಯೆಯ ಬೆಳವಣಿಗೆಯ ಕಥೆಯು ಅದರ ನೆರೆಹೊರೆಯ ದೇಶಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ. 1950 ಮತ್ತು 2015ರ ನಡುವೆ ಭಾರತ ದೇಶದ ಜನಸಂಖ್ಯೆಯಲ್ಲಿ ಭಾರತೀಯ ಬಹುಸಂಖ್ಯಾತ ಸಮುದಾಯವಾದ ಹಿಂದೂಗಳ ಪಾಲು ಶೇ. 7.8ರಷ್ಟು ಕಡಿಮೆಯಾಗಿದೆ. ಆದರೆ ಮುಸ್ಲಿಮರು ಬಹುಸಂಖ್ಯಾತರಾಗಿರುವ ನೆರೆಯ ದೇಶಗಳಲ್ಲಿ ಮುಸ್ಲಿಂ ಸಮುದಾಯದ ಪಾಲು ಹೆಚ್ಚಳಕ್ಕೆ ಸಾಕ್ಷಿಯಾಗಿದೆ. ಮುಸ್ಲಿಮರ ಜನಸಂಖ್ಯೆಯಲ್ಲಿ ಬಾಂಗ್ಲಾದೇಶವು ಶೇ. 18.5ರಷ್ಟು ಏರಿಕೆಯನ್ನು ಕಂಡಿದ್ದು, ಅನಂತರ ಪಾಕಿಸ್ತಾನದಲ್ಲಿ ಶೇ. 3.75 ಮತ್ತು ಅಫ್ಘಾನಿಸ್ತಾನದಲ್ಲಿ 0.29ರಷ್ಟು ಹೆಚ್ಚಳವಾಗಿದೆ.

1971ರಲ್ಲಿ ಬಾಂಗ್ಲಾದೇಶದ ರಚನೆಯ ಹೊರತಾಗಿಯೂ ಪಾಕಿಸ್ತಾನವು ಬಹುಸಂಖ್ಯಾತ ಧಾರ್ಮಿಕ ಪಂಗಡದ (ಹನಾಫಿ ಮುಸ್ಲಿಂ) ಪಾಲನ್ನು ಶೇ. 3.75ರಷ್ಟು ಹೆಚ್ಚಿಸಿಕೊಂಡಿದೆ ಮತ್ತು ಒಟ್ಟು ಮುಸ್ಲಿಂ ಜನಸಂಖ್ಯೆಯ ಪಾಲಿನಲ್ಲಿ ಶೇ.10ರಷ್ಟು ಹೆಚ್ಚಾಗಿದೆ ಎಂಬುದು ಅಧ್ಯಯನದಿಂದ ತಿಳಿದು ಬಂದಿದೆ. ಮ್ಯಾನ್ಮಾರ್‌ನಲ್ಲಿ ಥೇರವಾಡ ಬೌದ್ಧರ ಬಹುಪಾಲು ಜನಸಂಖ್ಯೆಯು 65 ವರ್ಷಗಳಲ್ಲಿ ಶೇ. 10ರಷ್ಟು ಕುಸಿದಿದೆ.

ನೇಪಾಳದಲ್ಲಿ ಬಹುಸಂಖ್ಯಾತ ಹಿಂದೂ ಜನಸಂಖ್ಯೆಯಲ್ಲಿ ಶೇ. 3.6 ಕುಸಿತವನ್ನು ಕಂಡಿದೆ. ಮಾಲ್ಡೀವ್ಸ್‌ನಲ್ಲಿ ಬಹುಪಾಲು ಗುಂಪಿನ (ಶಾಫಿ ಸುನ್ನಿಗಳು) ಪಾಲು ಶೇ.1.47ರಷ್ಟು ಕುಸಿದಿದೆ.

ಬೌದ್ಧ ಜನಸಂಖ್ಯೆಯಲ್ಲಿ ಏರಿಕೆ

ಬಹುಪಾಲು ಬೌದ್ಧ ಜನಸಂಖ್ಯೆಯನ್ನು ಹೊಂದಿರುವ ಭಾರತದ ನೆರೆಯ ದೇಶಗಳಾದ ಭೂತಾನ್ ಮತ್ತು ಶ್ರೀಲಂಕಾ ಕ್ರಮವಾಗಿ ಶೇ. 17.6 ಮತ್ತು ಶೇ. 5.25ರಷ್ಟು ಏರಿಕೆ ಕಂಡಿವೆ.

ಇದನ್ನೂ ಓದಿ: Viral Video: ಅಂಬಾನಿಗಿಂತಲೂ ರಿಚ್‌ ಈತ.. ಗದ್ದೆ ಉಳುಮೆಗೆ 20 ಲಕ್ಷದ ಕಾರೇ ಬೇಕು..!

ಒಟ್ಟು ಜನಸಂಖ್ಯೆಯ ಪಾಲಿನ ಅಲ್ಪಸಂಖ್ಯಾತರ ಅನುಪಾತದಲ್ಲಿನ ಬದಲಾವಣೆಯು ದೇಶದಲ್ಲಿ ಅಲ್ಪಸಂಖ್ಯಾತರ ಸ್ಥಾನಮಾನಕ್ಕೆ ವಿಶ್ವಾಸಾರ್ಹವಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಇದು ಅಲ್ಪಸಂಖ್ಯಾತರನ್ನು ವ್ಯಾಖ್ಯಾನಿಸುವುದು ಸೇರಿದಂತೆ ನೀತಿಗಳ ಮೂಲಕ ಪೋಷಿಸಲು ಕಾರಣವಾಗುತ್ತದೆ. ಜಾಗತಿಕವಾಗಿ ಇದೊಂದು ಅಪರೂಪದ ಘಟನೆ ಎಂದು ಅಧ್ಯಯನ ಹೇಳಿದೆ.

Continue Reading

ಆರೋಗ್ಯ

Cancer Risk: ಕ್ಯಾನ್ಸರ್ ಅಪಾಯದಿಂದ ಪಾರಾಗಲು ಯಾವ ಆಹಾರ ಸೇವಿಸಬಾರದು? ಯಾವ ಆಹಾರ ಸೇವಿಸಬೇಕು?

ಜೀನ್‌ಗಳು ಮತ್ತು ಕುಟುಂಬದ ಇತಿಹಾಸವನ್ನು ಹೊರತುಪಡಿಸಿ ಆಹಾರ ಪದ್ಧತಿಯಂತಹ ಬಾಹ್ಯ ಅಂಶಗಳು ಕ್ಯಾನ್ಸರ್ ಹರಡುವಿಕೆಯಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತಿದೆ. ಕ್ಯಾನ್ಸರ್ ಬಾರದಂತೆ (Cancer Risk) ನಾವು ನಮ್ಮನ್ನು ರಕ್ಷಿಸಿಕೊಳ್ಳಲು ಕೆಲವೊಂದು ಆಹಾರವನ್ನು ತ್ಯಜಿಸಲೇಬೇಕು. ಕ್ಯಾನ್ಸರ್‌ ಅಪಾಯದಿಂದ ಪಾರಾಗುವ ಕುರಿತು ಉಪಯುಕ್ತ ಸಲಹೆ ಇಲ್ಲಿದೆ.

VISTARANEWS.COM


on

By

Cancer Risk
Koo

ನಮ್ಮ ಜೀವನ ಶೈಲಿ (life style), ಆಹಾರ (food) ಪದ್ಧತಿಯಿಂದ ಕೆಲವೊಂದು ರೋಗಗಳನ್ನು ಆಹ್ವಾನಿಸುತ್ತಿದ್ದೇವೆ. ಅದರಲ್ಲಿ ಕ್ಯಾನ್ಸರ್ ಕೂಡ ಒಂದು. ಕ್ಯಾನ್ಸರ್‌ಗೆ (Cancer Risk) ಮುಖ್ಯ ಕಾರಣ ನಮ್ಮ ದೈನಂದಿನ ಆಹಾರಗಳು ಎನ್ನುತ್ತಾರೆ ತಜ್ಞರು. ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗುವ ಹಲವಾರು ಅಂಶಗಳಿವೆ. ವಿಶೇಷವಾಗಿ ಪ್ರಸ್ತುತ ಹೆಚ್ಚಿನ ಜನರು ತಮ್ಮ ಆಹಾರದ ಬಗ್ಗೆ ಕಾಳಜಿ ವಹಿಸುತ್ತಿಲ್ಲ.

ಜೀನ್‌ಗಳು ಮತ್ತು ಕುಟುಂಬದ ಇತಿಹಾಸವನ್ನು ಹೊರತುಪಡಿಸಿ ಆಹಾರ ಪದ್ಧತಿಯಂತಹ ಬಾಹ್ಯ ಅಂಶಗಳು ಕ್ಯಾನ್ಸರ್ ಹರಡುವಿಕೆಯಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತಿದೆ. ಕ್ಯಾನ್ಸರ್ ಬಾರದಂತೆ ನಾವು ನಮ್ಮನ್ನು ರಕ್ಷಿಸಿಕೊಳ್ಳಲು ಕೆಲವೊಂದು ಆಹಾರವನ್ನು ತ್ಯಜಿಸಲೇಬೇಕು. ಕ್ಯಾನ್ಸರ್ ಅನೇಕ ಅಪಾಯಕಾರಿ ಅಂಶಗಳನ್ನು ಹೊಂದಿರುವ ಭಯಾನಕ ಕಾಯಿಲೆಯಾಗಿದೆ. ತಜ್ಞರ ಪ್ರಕಾರ, ಈ ಭಯಾನಕ ಕಾಯಿಲೆಯು ನಾವು ಪ್ರತಿದಿನ ಸೇವಿಸುವ ಆಹಾರದಿಂದಲೇ ಬರುತ್ತವೆ. ಈ ಆಹಾರಗಳಲ್ಲಿ ಹೆಚ್ಚಿನವು ರುಚಿಕರ ಮತ್ತು ವ್ಯಸನಕಾರಿಯಾಗಿರುತ್ತದೆ.

ಈ ವರ್ಷದ ಆರಂಭದಲ್ಲಿ ಅಮೆರಿಕನ್ ಕ್ಯಾನ್ಸರ್ ಸೊಸೈಟಿ ಮಾಡಿರುವ ವರದಿ ಪ್ರಕಾರ 55 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕ್ಯಾನ್ಸರ್ ರೋಗಿಗಳ ಸಂಖ್ಯೆ ಒಂದು ದಶಕದ ಹಿಂದೆ ಹೋಲಿಸಿದರೆ ದ್ವಿಗುಣಗೊಂಡಿದೆ. ಹೀಗಾಗಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುವ ಕೆಲವು ಆಹಾರಗಳನ್ನು ತ್ಯಜಿಸಬೇಕು.


1. ಕೆಂಪು ಮಾಂಸ

ಹಂದಿ, ಕುರಿ ಮತ್ತು ಗೋಮಾಂಸ ಕ್ಯಾನ್ಸರ್ ಗೆ ಕಾರಣವಾಗುತ್ತದೆ. ಹಾರ್ವರ್ಡ್ ಹೆಲ್ತ್ ಪ್ರಕಾರ, ಮಾಂಸದ ಹೆಚ್ಚಿನ ಸೇವನೆಯು ಸ್ಯಾಚುರೇಟೆಡ್ ಕೊಬ್ಬುಗಳು ಮತ್ತು ಸೋಡಿಯಂನೊಂದಿಗೆ ಪ್ಯಾಕ್ ಮಾಡಲ್ಪಟ್ಟಿರುವುದರಿಂದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ವಾರದಲ್ಲಿ 18 ಔನ್ಸ್ ಕೆಂಪು ಮಾಂಸವನ್ನು ತಿನ್ನಬಹುದು. ಅದನ್ನು ಬೇಯಿಸುವಾಗ ತಾಪಮಾನವನ್ನು ಗಮನಿಸಬೇಕು. ಯಾಕೆಂದರೆ ಅದು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಬರ್ಗರ್‌ ಮತ್ತು ಸ್ಟೀಕ್ಸ್‌ಗಳಂತಹ ಸುಟ್ಟ ಮಾಂಸಗಳು ಬೇಕಿಂಗ್ ಅಥವಾ ಸೌಸ್ ವೈಡ್‌ನಂತಹ ವಿಧಾನಗಳನ್ನು ಬಳಸಿಕೊಂಡು ಕಡಿಮೆ ತಾಪಮಾನದಲ್ಲಿ ತಯಾರಿಸಲಾಗುತ್ತದೆ. ಇದರಿಂದ ಅಪಾಯ ಹೆಚ್ಚಾಗಿರುತ್ತದೆ.


2. ಮದ್ಯ

ಆಲ್ಕೋಹಾಲ್ ಸೇವನೆ ಈಗ ಎಲ್ಲರಲ್ಲೂ ಸಾಮಾನ್ಯವಾಗಿದೆ. ಇದು ವಿಶೇಷವಾಗಿ ಯುವಜನರಲ್ಲಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ವೈದ್ಯರ ಪ್ರಕಾರ, ಆಲ್ಕೋಹಾಲ್ ಸೇವನೆಯು ಹೊಟ್ಟೆ, ಕರುಳು, ಅನ್ನನಾಳ, ಯಕೃತ್ತು, ಪ್ಯಾಂಕ್ರಿಯಾಟಿಕ್ ಮತ್ತು ಸ್ತನ ಕ್ಯಾನ್ಸರ್ ಗಳಿಗೆ ಕಾರಣವಾಗುತ್ತದೆ. ಕಾಲಾನಂತರದಲ್ಲಿ ಇದು ಅಂಗಾಂಶಗಳಿಗೆ ಹಾನಿಯನ್ನು ಉಂಟು ಮಾಡುತ್ತದೆ. ಜೀವಕೋಶದ ಡಿಎನ್ ಎ ಯಲ್ಲಿ ಅನೇಕ ಬದಲಾವಣೆಗಳನ್ನು ಉಂಟುಮಾಡುತ್ತದೆ ಮತ್ತು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ, ಆಲ್ಕೋಹಾಲ್ ಅನ್ನು ಸಂಪೂರ್ಣವಾಗಿ ತ್ಯಜಿಸುವುದು ಒಳ್ಳೆಯದು.


3. ಸಕ್ಕರೆ ಪಾನೀಯಗಳು

ಬೇಸಿಗೆಯಲ್ಲಿ ಹೆಚ್ಚಿನ ಜನರು ಸಕ್ಕರೆ ತುಂಬಿದ ತಂಪಾದ ಪಾನೀಯಗಳನ್ನು ಕುಡಿಯುತ್ತಾರೆ. ಹಾರ್ವರ್ಡ್ ಟಿ ಎಚ್ ಚಾನ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಪ್ರಕಾರ, ದಿನಕ್ಕೆ ಎರಡಕ್ಕಿಂತ ಹೆಚ್ಚು ಸಕ್ಕರೆ ಪಾನೀಯಗಳನ್ನು ಸೇವಿಸಿದವರು ಕೊಲೊರೆಕ್ಟಲ್ ಕ್ಯಾನ್ಸರ್‌ನ ಆರಂಭಿಕ ಹಂತಕ್ಕಿಂತ ಎರಡು ಪಟ್ಟು ಹೆಚ್ಚು ಅಪಾಯವನ್ನು ಹೊಂದಿರುತ್ತಾರೆ. ಅಲ್ಲದೇ ಇದು ತೂಕ ಮತ್ತು ಬೊಜ್ಜಿಗೂ ಕಾರಣವಾಗುವುದು. ಇದರ ಬದಲು ನೀರು, ಹಾಲು ಅಥವಾ ಸಿಹಿಗೊಳಿಸದ ಚಹಾ ಅಥವಾ ಕಾಫಿ ಸೇವನೆ ಸೂಕ್ತ.


4. ಡೇರಿ ಉತ್ಪನ್ನ

ಹಾಲು, ಚೀಸ್ ಮತ್ತು ಮೊಸರುಗಳಂತಹ ಆಹಾರಗಳನ್ನು ಹೆಚ್ಚು ಸೇವಿಸುವುದರಿಂದ ಕ್ಯಾನ್ಸರ್ ಅಪಾಯ ಹೆಚ್ಚಾಗುತ್ತದೆ. ಎಂದು ಅನೇಕ ಅಧ್ಯಯನಗಳು ಹೇಳುತ್ತವೆ. ಸಂಶೋಧನೆಯ ಪ್ರಕಾರ, ಡೈರಿ ಇನ್ಸುಲಿನ್ ತರಹದ ಬೆಳವಣಿಗೆಯ ಅಂಶ 1 (IGF-1) ಮಟ್ಟವನ್ನು ಹೆಚ್ಚಿಸುತ್ತದೆ. ಇದು ಪ್ರಾಸ್ಟೇಟ್ ಕ್ಯಾನ್ಸರ್ ನ ಹೆಚ್ಚಿನ ಅಪಾಯಕ್ಕೆ ಸಂಬಂಧಿಸಿದೆ. IGF-1 ಪ್ರಾಸ್ಟೇಟ್ ಕ್ಯಾನ್ಸರ್ ಕೋಶಗಳ ಪ್ರಸರಣ ಅಥವಾ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: Fried Oil: ಒಮ್ಮೆ ಕರಿದ ಎಣ್ಣೆಯನ್ನು ಮತ್ತೊಮ್ಮೆ ಬಳಸಬಹುದೆ?

ಕ್ಯಾನ್ಸರ್ ಅಪಾಯ ಕಡಿಮೆ ಮಾಡುವ ಆಹಾರಗಳು ಯಾವವು?

ವೈಜ್ಞಾನಿಕ ಸಂಶೋಧನೆಯು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುವ ಅನೇಕ ಆಹಾರಗಳಿವೆ.


1. ಹಣ್ಣು ಮತ್ತು ತರಕಾರಿಗಳು

ಹೆಚ್ಚಿನ ಹಣ್ಣು ಮತ್ತು ತರಕಾರಿಗಳು ರೋಗ ನಿರೋಧಕ ಗುಣಗಳಿಂದ ತುಂಬಿರುತ್ತವೆ. ಆಕ್ಸಿಡೇಟಿವ್ ಒತ್ತಡ ಮತ್ತು ಡಿಎನ್ಎ ಹಾನಿಯಿಂದ ಜೀವಕೋಶಗಳನ್ನು ರಕ್ಷಿಸುತ್ತವೆ.

2. ಬೀಜಗಳು

ಬೀಜಗಳ ನಿಯಮಿತ ಸೇವನೆಯು ಉರಿಯೂತ ಮತ್ತು ಕ್ಯಾನ್ಸರ್ ಅಪಾಯ ಕಡಿಮೆಯಾಗುತ್ತದೆ.

3. ಬೀನ್ಸ್ ಮತ್ತು ದ್ವಿದಳ ಧಾನ್ಯಗಳು

ಬೀನ್ಸ್, ದ್ವಿದಳ ಧಾನ್ಯಗಳು ಫೈಬರ್‌ನಿಂದ ಕೂಡಿದ್ದು, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.


4. ಮೀನು

ಬಿಳಿ ಮೀನು ಒಮೆಗಾ-3 ಕೊಬ್ಬಿನಾಮ್ಲಗಳಿಂದ ತುಂಬಿರುತ್ತದೆ. ಇದು ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಕೆಲವು ಕ್ಯಾನ್ಸರ್ ಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

Continue Reading

ಗ್ಯಾಜೆಟ್ಸ್

Apple New Products: ಐಪ್ಯಾಡ್ ಪ್ರೊನಿಂದ ಪೆನ್ಸಿಲ್ ಪ್ರೊವರೆಗೆ; 2024ರ ಆಪಲ್‌ ಹೊಸ ಉತ್ಪನ್ನಗಳಿವು

2024ರ ಆವೃತ್ತಿಯಲ್ಲಿ ಆಪಲ್ ಹಲವು ಉತ್ಪನ್ನಗಳ ಮಾರಾಟಕ್ಕೆ ಮುಂದಾಗಿದೆ. ಇದರ ಮೊದಲ ಹಂತವಾಗಿ
ಆಪಲ್ ನ ಐಪ್ಯಾಡ್ ಏರ್, ಐಪ್ಯಾಡ್ ಪ್ರೊ, M4 ಚಿಪ್, ಆಪಲ್ ಪೆನ್ಸಿಲ್ ಪ್ರೊ, ಮ್ಯಾಜಿಕ್ ಕೀಬೋರ್ಡ್ ಗಳು ಶೀಘ್ರದಲ್ಲೇ ಮಾರುಕಟ್ಟೆ (Apple New Products) ಪ್ರವೇಶಿಸಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Apple New Products
Koo

ಆಪಲ್‌ನ (Apple New Products) ಐಪ್ಯಾಡ್ ಏರ್ (iPad Air), ಐಪ್ಯಾಡ್ ಪ್ರೊ (iPad Pro), M4 ಚಿಪ್ (M4 chip), ಆಪಲ್ ಪೆನ್ಸಿಲ್ ಪ್ರೊ (Apple Pencil Pro), ಮ್ಯಾಜಿಕ್ ಕೀಬೋರ್ಡ್‌ಗಳಿಗೆ (Magic Keyboard) ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಮುಂದಿನ ವಾರದಿಂದ ಗ್ರಾಹಕರನ್ನು ತಲುಪಲು ಇದು ಸಜ್ಜಾಗಿದೆ. ಕ್ಯಾಲಿಫೋರ್ನಿಯಾದ (California) ಕ್ಯುಪರ್ಟಿನೊದಲ್ಲಿ ನಡೆದ ಆಪಲ್ ‘ಲೆಟ್ ಲೂಸ್’ ಕಾರ್ಯಕ್ರಮದಲ್ಲಿ ಸಿಇಒ ತಂಡ ಈ ಕುರಿತು ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

2024ರ ಆವೃತ್ತಿಯಲ್ಲಿ ಆಪಲ್ ಹಲವು ಉತ್ಪನ್ನಗಳ ಮಾರಾಟಕ್ಕೆ ಮುಂದಾಗಿದೆ. ಇದರ ಮೊದಲ ಹಂತವಾಗಿ
ಆಪಲ್ ನ ಐಪ್ಯಾಡ್ ಏರ್, ಐಪ್ಯಾಡ್ ಪ್ರೊ, M4 ಚಿಪ್, ಆಪಲ್ ಪೆನ್ಸಿಲ್ ಪ್ರೊ, ಮ್ಯಾಜಿಕ್ ಕೀಬೋರ್ಡ್ ಗಳು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ.


1. ಐಪ್ಯಾಡ್ ಏರ್ (2024)

ಹೊಸ iPad Air M2 ಚಿಪ್‌ನೊಂದಿಗೆ ಮಾರುಕಟ್ಟೆಗೆ ಬರಲು ಸಜ್ಜಾಗಿದೆ. ಹಿಂದಿನ M1 ಏರ್‌ಗಿಂತ ಶೇ. 50ರಷ್ಟು ವೇಗವಾಗಿ ಇದು ಕಾರ್ಯ ನಿರ್ವಹಿಸಲಿದೆ. ಉತ್ತಮ ಕಾರ್ಯಕ್ಷಮತೆಯೊಂದಿಗೆ ಐಪ್ಯಾಡ್ ಏರ್ ಅನ್ನು ಲ್ಯಾಂಡ್‌ಸ್ಕೇಪ್ ಓರಿಯಂಟೇಶನ್‌ಗಾಗಿ ಮಾಡಲಾಗಿದೆ. ಲ್ಯಾಂಡ್‌ಸ್ಕೇಪ್ ಮೋಡ್‌ನಲ್ಲಿ ಸ್ಟಿರಿಯೊ ಸ್ಪೀಕರ್‌ಗಳೊಂದಿಗೆ ಇದು ಹೊಸ ನೀಲಿ ಮತ್ತು ನೇರಳೆ ಬಣ್ಣದಲ್ಲಿ ಬರುತ್ತಿದೆ. ಜೊತೆಗೆ ಪರಿಚಿತ ಸ್ಟಾರ್ಲೈಟ್ ಮತ್ತು ಸ್ಪೇಸ್ ಗ್ರೇ ಬಣ್ಣಗಳಲ್ಲೂ ಬರಲಿದೆ. ಐಪ್ಯಾಡ್ ಏರ್ (2024) ವಾಸ್ತವವಾಗಿ ಎರಡು ಗಾತ್ರಗಳಲ್ಲಿ ಬರಲಿದೆ. 11 ಇಂಚಿನ ಮತ್ತು 13 ಇಂಚಿನ ಐಪ್ಯಾಡ್ ಏರ್ ಲಭ್ಯವಾಗಲಿದೆ. 13 ಇಂಚಿನ ಮಾದರಿಯು ಶೇ. 30ರಷ್ಟು ಹೆಚ್ಚಿನ ಸ್ಕ್ರೀನ್ ರಿಯಲ್ ಎಸ್ಟೇಟ್ ಅನ್ನು ಹೊಂದಿದೆ. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ವೈಶಿಷ್ಟ್ಯಗಳೊಂದಿಗೆ ಆಪಲ್ ಐಪ್ಯಾಡ್ ಏರ್ ನಾಲ್ಕು ವಿಶೇಷತೆಗಳನ್ನು ಒಳಗೊಂಡಿದೆ. ಲ್ಯಾಂಡ್‌ಸ್ಕೇಪ್ ಸ್ಟಿರಿಯೊ ಆಡಿಯೋ, ಮ್ಯಾಜಿಕ್ ಕೀಬೋರ್ಡ್, 5G ಸಂಪರ್ಕ, 12MP ಕೆಮರಾ ಮತ್ತು 1TB ವರೆಗೆ ಸಂಗ್ರಹಣೆಯೊಂದಿಗೆ 11 ಇಂಚಿನ ರೂಪಾಂತರವು 599 ಡಾಲರ್ ನಿಂದ ಪ್ರಾರಂಭವಾಗುತ್ತದೆ. 13 ಇಂಚಿನ ಮಾದರಿಯು 799 ಡಾಲರ್ (67,000 ರೂ.) ಬೆಲೆಯದ್ದಾಗಿದೆ.


2. ಐಪ್ಯಾಡ್ ಪ್ರೊ

ಐಪ್ಯಾಡ್ ಪ್ರೊ ಆಪಲ್‌ನ ಅತ್ಯಂತ ತೆಳುವಾದ ಉತ್ಪನ್ನವಾಗಿದೆ. ಒಳಗೆ ಪ್ಯಾಕ್ ಮಾಡಲಾದ ಎರಡು OLED ಪ್ಯಾನೆಲ್‌ಗಳನ್ನು ಇದು ಒಳಗೊಂಡಿದೆ. ಐಪ್ಯಾಡ್ ಪ್ರೊ ಆಪಲ್ ಎಂ4 ಚಿಪ್‌ಸೆಟ್ ಅನ್ನು ಒಳಗೊಂಡಿರುವ ಮೊದಲ ಸಾಧನವಾಗಿದೆ. ಐಪ್ಯಾಡ್ ಪ್ರೊಗೆ ಅದರ ತೆಳುವಾದ ವಿನ್ಯಾಸ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಹೊಸ ಪ್ರೊಸೆಸರ್ ಅಗತ್ಯ ಎಂದು ಆಪಲ್ ಹೇಳುತ್ತದೆ.
ಹೊಸ ಐಪ್ಯಾಡ್ ಪ್ರೊ ಎರಡು ಗಾತ್ರಗಳಲ್ಲಿ 11 ಇಂಚು ಮತ್ತು 13 ಇಂಚುಗಳಲ್ಲಿ ಬರಲಿದೆ. ಇದು ಬೆಳ್ಳಿ ಮತ್ತು ಕಪ್ಪು ಎರಡು ಬಣ್ಣಗಳಲ್ಲಿ ಲಭ್ಯವಾಗಲಿದೆ. ಹೊಸ 10 ಕೋರ್ GPUನೊಂದಿಗೆ ಬರುವ ಇದು ರೇಟ್ರೇಸಿಂಗ್ ಅನ್ನು ಬೆಂಬಲಿಸುತ್ತದೆ. ಇದರಲ್ಲೂ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ನ ಸೇವೆಗಳು ಇರಲಿವೆ. 11 ಇಂಚಿನದ್ದು 999 ಡಾಲರ್ (83,000 ರೂ.) ಮತ್ತು 13 ಇಂಚಿನದ್ದು 1299 (1 ಲಕ್ಷ 8 ಸಾವಿರ ರೂ.) ಡಾಲರ್‌ಗೆ ಸಿಗಲಿವೆ.


3. M4 ಚಿಪ್

M4 ಪ್ರೊಸೆಸರ್ ಎರಡನೇ ತಲೆಮಾರಿನ 3nm ತಂತ್ರಜ್ಞಾನ, ಸಂಪೂರ್ಣವಾಗಿ ಮರುನಿರ್ಮಿಸಲಾದ ಡಿಸ್ ಪ್ಲೇ , ರೇ ಟ್ರೇಸಿಂಗ್ ಸಾಮರ್ಥ್ಯಗಳೊಂದಿಗೆ 10 ಕೋರ್ GPU ಮತ್ತು M2 ಚಿಪ್‌ಗಿಂತ ನಾಲ್ಕು ಪಟ್ಟು ತ್ವರಿತ ಕಾರ್ಯಕ್ಷಮತೆಯನ್ನು ನೀಡುವ ಮೂಲಕ ತೆಳುವಾದ ವಿನ್ಯಾಸ ಮತ್ತು ಟಂಡೆಮ್ OLED ಪ್ರದರ್ಶನದೊಂದಿಗೆ ಬರಲಿದೆ.
ಇದು ಎಂ3 ಚಿಪ್‌ನ ಮೇಲೆ ಅಪ್‌ಗ್ರೇಡ್ ಆಗಿದೆ. M2 ಗಿಂತ ಶೇ. 50ರಷ್ಟು CPU ವೇಗವನ್ನು ನೀಡುತ್ತದೆ. ಇದು ಹೊಸ 10 ಕೋರ್ GPU ನೊಂದಿಗೆ ಬರುತ್ತದೆ.ರೇಟ್ರೇಸಿಂಗ್ ಅನ್ನು ಬೆಂಬಲಿಸುವ ಮೊದಲ ಸಾಧನವಾಗಿ iPad Pros ಅನ್ನು ಮಾಡುತ್ತದೆ.

4. ಪ್ರೊ ಅಪ್ಲಿಕೇಶನ್‌ನಲ್ಲಿ ನವೀಕರಣಗಳು

ಹೊಸ M4 ಪ್ರೊಸೆಸರ್ ಫೈನಲ್ ಕಟ್ ಪ್ರೊನಲ್ಲಿ ರೆಂಡರಿಂಗ್ ಅನ್ನು ಹೆಚ್ಚಿಸುತ್ತದೆ. M1ಗಿಂತ ಎರಡು ಪಟ್ಟು ವೇಗವನ್ನು ಹೊಂದಿದೆ. ಇದಲ್ಲದೆ, ಹೊಸ ಲೈವ್ ಮಲ್ಟಿಕ್ಯಾಮ್ ಮೋಡ್ ಬಳಕೆದಾರರಿಗೆ ಏಕಕಾಲದಲ್ಲಿ ನಾಲ್ಕು ಕ್ಯಾಮರಾಗಳನ್ನು ಸಂಪರ್ಕಿಸಲು ಮತ್ತು ಮೌಲ್ಯಮಾಪನ ಮಾಡಲು ಅನುವು ಮಾಡಿಕೊಡುತ್ತದೆ. ಇದಲ್ಲದೆ ಐಫೋನ್ ಮತ್ತು ಐಪ್ಯಾಡ್‌ಗಾಗಿ ಉದ್ದೇಶಿಸಲಾದ ಹೊಸ ಫೈನಲ್ ಕಟ್ ಕ್ಯಾಮರಾವು ಲೈವ್ ಮಲ್ಟಿಕ್ಯಾಮ್ ಸೆಷನ್‌ಗಳಲ್ಲಿ ಹೆಚ್ಚುವರಿಯಾಗಿ ಸೆರೆಹಿಡಿಯುತ್ತದೆ. ಫೂಟೇಜ್ ರೆಕಾರ್ಡ್ ಮಾಡಲು ಫೈನಲ್ ಕಟ್ ಕ್ಯಾಮರಾ ಅಪ್ಲಿಕೇಶನ್ ಅನ್ನು ಸ್ವತಂತ್ರ ಕ್ಯಾಮರಾ ಅಪ್ಲಿಕೇಶನ್ ಆಗಿ ಬಳಸಬಹುದು. ಐಪ್ಯಾಡ್‌ಗಳಿಗಾಗಿ ಹೊಸ ಫೈನಲ್ ಕಟ್ ಕ್ಯಾಮರಾ ವೈಶಿಷ್ಟ್ಯವನ್ನು ಪರಿಚಯಿಸುವುದು ಅತ್ಯಂತ ಗಮನಾರ್ಹವಾದ ವರ್ಧನೆಗಳಲ್ಲಿ ಒಂದಾಗಿದೆ. ವಿಡಿಯೋ ಚಿತ್ರೀಕರಣದ ಸಮಯದಲ್ಲಿ ಲೈವ್ ಕ್ಯಾಮೆರಾಗಳಂತೆ ಇವುಗಳ ಬಳಕೆಯನ್ನು ಸಕ್ರಿಯಗೊಳಿಸುತ್ತದೆ.


5. ಆಪಲ್ ಪೆನ್ಸಿಲ್ ಪ್ರೊ

ಹೊಸ ಆಪಲ್ ಪೆನ್ಸಿಲ್ ಪ್ರೊ ಬ್ಯಾರೆಲ್‌ನಲ್ಲಿ ಸಂವೇದಕವನ್ನು ಹೊಂದಿದ್ದು ಅದು ಟೂಲ್ ಮೆನುವನ್ನು ಪ್ರವೇಶಿಸಲು ಬಳಕೆದಾರರಿಗೆ ಸ್ಕ್ವೀಜ್ ಮಾಡಲು ಅನುಮತಿಸುತ್ತದೆ. ಇದು ಕಾರ್ಯಾಚರಣೆಯ ಸಮಯದಲ್ಲಿ ಸ್ಪರ್ಶ ಪ್ರತಿಕ್ರಿಯೆಗಳನ್ನು ನೀಡಲು ಬಲವಂತದ ಪ್ರತಿಕ್ರಿಯೆಯನ್ನು ಹೊಂದಿದೆ ಮತ್ತು ಈಗ ಆಪಲ್‌ನ “ನನ್ನನ್ನು ಹುಡುಕಿ” ತಂತ್ರಜ್ಞಾನವನ್ನು ಬೆಂಬಲಿಸುತ್ತದೆ, ಇದು ತಪ್ಪಾಗಿದ್ದರೆ ಅದನ್ನು ಪತ್ತೆಹಚ್ಚಲು ಸುಲಭವಾಗುತ್ತದೆ.
ಟೂಲ್‌ಸೆಟ್ ಅನ್ನು ತರಲು ಪೆನ್ಸಿಲ್ ಅನ್ನು ಹಿಂಡಬಹುದು. ಪೆನ್ಸಿಲ್ ಕಾರ್ಯ ನಿರ್ವಹಿಸಿದೆ ಎಂಬುದನ್ನು ತಿಳಿಸಲು ಹ್ಯಾಪ್ಟಿಕ್ ಎಂಜಿನ್ ಕಂಪನವನ್ನು ನೀಡುತ್ತದೆ. ಇದು ಟಿಲ್ಟಿಂಗ್ ಮತ್ತು ತಿರುಗುವಿಕೆಯನ್ನು ಪತ್ತೆಹಚ್ಚಲು ನಿರ್ಮಿಸಲಾದ ಗೈರೊಸ್ಕೋಪ್ ಅನ್ನು ಹೊಂದಿದೆ.

ಪೆನ್ಸಿಲ್ ಮೆನುಗಳನ್ನು ಪ್ರವೇಶಿಸಲು ಸ್ಕ್ವೀಜ್ ವೈಶಿಷ್ಟ್ಯ, ಸ್ಪರ್ಶ ಪ್ರತಿಕ್ರಿಯೆಗಾಗಿ ಹ್ಯಾಪ್ಟಿಕ್ ಪ್ರತಿಕ್ರಿಯೆ, ಬ್ರಷ್ ಆಕಾರಗಳನ್ನು ಬದಲಾಯಿಸಲು ಪೆನ್ಸಿಲ್ ಅನ್ನು ರೋಲ್ ಮಾಡುವ ಸಾಮರ್ಥ್ಯ ಮತ್ತು ಹೆಚ್ಚಿನ ಅನುಕೂಲಕ್ಕಾಗಿ ಫೈಂಡ್ ಮೈ ನೊಂದಿಗೆ ಏಕೀಕರಣದಂತಹ ಹೊಸ ಕಾರ್ಯಗಳನ್ನು ನೀಡುತ್ತದೆ. ಆಪಲ್ ಪೆನ್ಸಿಲ್ ಪ್ರೊ ಬೆಲೆ 129 ಡಾಲರ್ ಆಗಿದೆ.

ಇದನ್ನೂ ಓದಿ: High-tech Gadget: ಸೆಕೆಗೆ ಎಸಿ, ಫ್ಯಾನ್‌, ಕೂಲರ್‌ ಸಾಕಾಗ್ತಿಲ್ವಾ..? ಹಾಗಿದ್ರೆ ಇಲ್ಲಿದೆ ನೋಡಿ ಹೈಟೆಕ್‌ ಗ್ಯಾಜೆಟ್‌


6. ಮ್ಯಾಜಿಕ್ ಕೀಬೋರ್ಡ್

ಹಲವು ಪ್ರಮುಖ ವೈಶಿಷ್ಟ್ಯಗಳನ್ನು ಉಳಿಸಿಕೊಂಡು ಸ್ಲೀಕರ್ ವಿನ್ಯಾಸ ಪರಿಕಲ್ಪನೆಯೊಂದಿಗೆ ನವೀಕರಿಸಿದ ಮ್ಯಾಜಿಕ್ ಕೀಬೋರ್ಡ್ ಅನ್ನು ಪರಿಚಯಿಸಲಾಗುತ್ತಿದೆ. ಹೊಸ ಆವೃತ್ತಿಯು ಫಂಕ್ಷನ್ ರೋ, ಅಲ್ಯೂಮಿನಿಯಂ ಪಾಮ್ ರೆಸ್ಟ್ ಮತ್ತು ಹ್ಯಾಪ್ಟಿಕ್ ಪ್ರತಿಕ್ರಿಯೆಯೊಂದಿಗೆ ಟ್ರ್ಯಾಕ್‌ಪ್ಯಾಡ್ ಅನ್ನು ಒಳಗೊಂಡಿದೆ, ಇದು ಮ್ಯಾಕ್‌ಬುಕ್ ಅನ್ನು ಬಳಸುವಂತಹ ಅನುಭವವನ್ನು ನೀಡುತ್ತದೆ. ಮ್ಯಾಜಿಕ್ ಕೀಬೋರ್ಡ್‌ಗಳು 299 (25,000 ರೂ. ) ಮತ್ತು 329 (27,475 ರೂ.) ಡಾಲರ್‌ಗೆ ಲಭ್ಯವಿದೆ.

Continue Reading
Advertisement
SSLC Result 2024 secret behind 20 percent grace marks
ಕರ್ನಾಟಕ6 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

gold rate today sreeleela
ಚಿನ್ನದ ದರ19 mins ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

SSLC Result 2024 78 schools get zero results in SSLC exams
ಬೆಂಗಳೂರು23 mins ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

Viral video
ವೈರಲ್ ನ್ಯೂಸ್24 mins ago

Viral Video: ಬಸ್‌, ರೈಲಿನಲ್ಲಿ ಮಾತ್ರ ಅಲ್ಲ.. ಫ್ಲೈಟ್‌ನಲ್ಲೂ ನಡೆಯುತ್ತೆ ಸೀಟಿಗಾಗಿ ಮಾರಾಮಾರಿ

SSLC Result 2024 SSLC students get 20 percent grace marks but result is very poor
ಶಿಕ್ಷಣ40 mins ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

Andre Russell
ಕ್ರೀಡೆ47 mins ago

Andre Russell: ಸ್ಟಾರ್​​ ನಟಿಯೊಂದಿಗೆ ಕೇಸರಿ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ಆಂಡ್ರೆ ರಸೆಲ್

Deepika Padukone pushes away fan camera at airport
ಬಾಲಿವುಡ್47 mins ago

Deepika Padukone: ಕ್ಯಾಮೆರಾ ತಳ್ಳಿ ಮುಂದೆ ನಡೆದ ದೀಪಿಕಾ! ನಾಚಿಕೆಗೇಡಿನ ವರ್ತನೆ ಅಂದ್ರು ನೆಟ್ಟಿಗರು!

Kendasampige Serial Madhumitha Entry
ಕಿರುತೆರೆ50 mins ago

Kendasampige Serial: `ಕೆಂಡಸಂಪಿಗೆ’ ಧಾರಾವಾಹಿಗೆ ಕಾವ್ಯ ಶೈವ ಗುಡ್‌ ಬೈ; ಬದಲಾದ ಸುಮನಾ ಪಾತ್ರಧಾರಿ ಯಾರು?

What After SSLC ?
ಶಿಕ್ಷಣ1 hour ago

What After SSLC?: ವಿಜ್ಞಾನ, ವಾಣಿಜ್ಯ, ಕಲೆ; ಎಸ್‌ಎಸ್‌ಎಲ್‌ಸಿ ನಂತರ ಮುಂದೇನು ಓದಬಹುದು?

sslc result 2024 ankita basappa first rank toppers list
ಪ್ರಮುಖ ಸುದ್ದಿ1 hour ago

SSLC Result 2024: ಶೇ.100 ಅಂಕಗಳೊಂದಿಗೆ ಬಾಗಲಕೋಟೆಯ ಅಂಕಿತಾ ಪ್ರಥಮ; ಎಸ್ಸೆಸ್ಸೆಲ್ಸಿ ಟಾಪರ್ಸ್ ಪಟ್ಟಿ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 secret behind 20 percent grace marks
ಕರ್ನಾಟಕ6 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 SSLC students get 20 percent grace marks but result is very poor
ಶಿಕ್ಷಣ40 mins ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಟ್ರೆಂಡಿಂಗ್‌