T20 World Cup |​ ಕೊಹ್ಲಿ ಕ್ಲಾಸ್‌ ಪ್ಲೇಯರ್‌, ಏನನ್ನೂ ಸಾಬೀತುಪಡಿಸಬೇಕಿಲ್ಲ: ರೋಜರ್​ ಬಿನ್ನಿ - Vistara News

Latest

T20 World Cup |​ ಕೊಹ್ಲಿ ಕ್ಲಾಸ್‌ ಪ್ಲೇಯರ್‌, ಏನನ್ನೂ ಸಾಬೀತುಪಡಿಸಬೇಕಿಲ್ಲ: ರೋಜರ್​ ಬಿನ್ನಿ

ಪಾಕಿಸ್ತಾನ ವಿರುದ್ಧ ವಿರಾಟ್​ ಕೊಹ್ಲಿ ಸಿಡಿಸಿದ ಸಿಕ್ಸರ್​ ಕಂಡು ಕನಸು ಕಂಡಂತಾಯಿತು ಎಂದು ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ಹೇಳಿದ್ದಾರೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟಿ20 ವಿಶ್ವ ಕಪ್​ (T20 World Cup) ಪಾಕಿಸ್ತಾನ ವಿರುದ್ಧ ಅತ್ಯಮೋಘ ಆಟವಾಡಿದ ವಿರಾಟ್ ಕೊಹ್ಲಿ ಇನಿಂಗ್ಸ್​ ಬಗ್ಗೆ ಈಗಾಗಲೇ ಅನೇಕ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಹೊಗಳಿದ್ದಾಗಿದೆ. ಈ ಸಾಲಿಗೆ ಬಿಸಿಸಿಐ ನೂತನ ಅಧ್ಯಕ್ಷ ರೋಜರ್ ಬಿನ್ನಿ ಕೂಡ ಸೇರಿದ್ದಾರೆ. ಬೆಂಗಳೂರಿನ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಶುಕ್ರವಾರ (ಅ.28) ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ರೋಜರ್ ಬಿನ್ನಿ ಕೊಹ್ಲಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

“ಪಾಕ್​ ವಿರುದ್ಧ ವಿರಾಟ್ ಕೊಹ್ಲಿ ಬಾರಿಸಿದ ಚೆಂಡು ಎಲ್ಲಿ ಹೋಯಿತು ಎಂದು ನೋಡುವಷ್ಟರಲ್ಲಿಯೇ ಅದು ಬೌಂಡರಿ ಗೆರೆ ದಾಟಿತ್ತು. ಇದೊಂದು ಕನಸಿನ ಹಾಗೆ ಭಾಸವಾಯಿತು. ಅದೊಂದು ಅದ್ಭುತ ಗೆಲುವಾಗಿತ್ತು. ನೀವು ಆ ರೀತಿಯ ಪಂದ್ಯವನ್ನು ನೋಡಲು ಸಾಧ್ಯವಾಗುವುದಿಲ್ಲ. ಏಕೆಂದರೆ ಬಹುತೇಕ ಸಮಯ ಆ ರೀತಿಯ ಪಂದ್ಯಗಳು ಪಾಕಿಸ್ತಾನದ ಕಡೆಗೆ ವಾಲುತ್ತವೆ. ಆದರೆ ದಿಢೀರ್ ಎಂದು ಟೀಮ್​ ಇಂಡಿಯಾ ಕಂಬ್ಯಾಕ್ ಮಾಡಿದ ಪರಿ ಅತ್ಯದ್ಭುತ” ಎಂದು ರೋಜರ್ ಬಿನ್ನಿ ಹೇಳಿದ್ದಾರೆ.

ಸತತ ಎರಡೂವರೆ ವರ್ಷ ಬ್ಯಾಟಿಂಗ್​ ವೈಫಲ್ಯದಿಂದ ಬಳಲಿದ್ದ ವಿರಾಟ್ ಕೊಹ್ಲಿ ಏಷ್ಯಾಕಪ್‌ ವೇಳೆ ಬ್ಯಾಟಿಂಗ್​ ಫಾರ್ಮ್​ ಕಂಡುಕೊಂಡರು. ಅಫಘಾನಿಸ್ತಾನ ತಂಡದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಶತಕ ದಾಖಲಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 71ನೇ ಶತಕ ದಾಖಲಿದ್ದರು. ಕೊಹ್ಲಿ ಕ್ಲಾಸ್ ಪ್ಲೇಯರ್ ಮತ್ತು ಒತ್ತಡದ ಸಂದರ್ಭದಲ್ಲಿ ಮೇಲೇಳುವುದು ಅಷ್ಟು ಸುಲಭದ ಮಾತಲ್ಲ. ಈ ಕಲೆಯನ್ನು ಕೊಹ್ಲಿಯಿಂದ ನೋಡಿ ಕಲಿಯಬೇಕಿದೆ. ಆದ್ದರಿಂದ ಕೊಹ್ಲಿ ಏನನ್ನು ಸಾಬೀತುಪಡಿಸುವ ಅಗತ್ಯವಿಲ್ಲ” ಎಂದು ಬಿನ್ನಿ ತಿಳಿಸಿದರು.

ಇದನ್ನೂ ಓದಿ | T20 World Cup | ತಂಡದ ಆಯ್ಕೆ ವಿಚಾರದಲ್ಲಿ ಬಾಬರ್​ ಅಜಮ್‌ ಜಾಣರಲ್ಲ; ವಾಸಿಂ ಅಕ್ರಂ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral news: ಚುನಾವಣೆಗೆ ಮೊದಲೇ 19 ಲಕ್ಷ ಇವಿಎಂ ಕಾಣೆಯಾಗಿದ್ದು ನಿಜವೇ? ಏನಿದರ ಅಸಲಿಯತ್ತು ?

Viral news: ಲೋಕಸಭೆ ಚುನಾವಣೆಗೂ ಮುನ್ನ 1.9 ಮಿಲಿಯನ್ ಇವಿಎಂಗಳನ್ನು ಕಳವು ಮಾಡಲಾಗಿದೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಳವಾಗಿರುವ ಇವಿಎಂ ಗಳು ಎಲ್ಲಿ ಹೋಗಿವೆ ? ಈ ಸುದ್ದಿ ಎಲ್ಲಿಂದ ಬಂತು ಗೊತ್ತೇ ?

VISTARANEWS.COM


on

By

Viral news
Koo

ನವದೆಹಲಿ: ಲೋಕಸಭಾ ಚುನಾವಣೆ- 2024ರ (Lok sabha election-2024) ಮೊದಲ ಹಂತದ ಮತದಾನ ಪ್ರಕ್ರಿಯೆಗಳು ಶುಕ್ರವಾರ ದೇಶದ ವಿವಿಧ ಭಾಗಗಳಲ್ಲಿ ನಡೆದಿದೆ. ಮತದಾನ ಪ್ರಾರಂಭಕ್ಕೂ ಮೊದಲು 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು (EVM) ಕಾಣೆಯಾಗಿವೆ ಎನ್ನುವ ಕುರಿತು ಸಾಮಾಜಿಕ ಜಾಲತಾಣದಲ್ಲಿ (social media) ಸಂದೇಶ ಹರಡಿದ್ದು (viral news) ಇದು ಸುಳ್ಳು ಎಂದು ತಿಳಿದು ಬಂದಿದೆ.

ಏಪ್ರಿಲ್ 19ರಂದು 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಾರಂಭವಾಗುವ ಮೊದಲು ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳಲಾಗಿತ್ತು. ಇದರಲ್ಲಿ 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು ಕಾಣೆಯಾಗಿದೆ ಎಂದು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅನೇಕ ಬಳಕೆದಾರರು ಹೇಳಿಕೊಂಡಿದ್ದರು.

ಈ ಕುರಿತು ತನಿಖೆ ನಡೆಸಿದ ವಿಶ್ವಸ್ ನ್ಯೂಸ್ ಈ ಹೇಳಿಕೆ ಸುಳ್ಳು ಎಂದು ಪತ್ತೆ ಹಚ್ಚಿದೆ. ಚುನಾವಣಾ ಆಯೋಗವೂ ಕೂಡ ಇದೊಂದು ನಕಲಿ ಸುದ್ದಿ ಎಂದು ಹೇಳಿದೆ. ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಕೂಡ ಇವಿಎಂ ನಾಪತ್ತೆಯಾಗಿರುವ ಆರೋಪಗಳನ್ನು ತಳ್ಳಿಹಾಕಿತ್ತು.

ಇದನ್ನೂ ಓದಿ: Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!


ಸುಳ್ಳು ಸುದ್ದಿ

ಸಾಮಾಜಿಕ ಮಾಧ್ಯಮ ಬಳಕೆದಾರ ನಿಹಾಲ್ ಸಿಂಗ್ ನಿಗಮ್ ಅವರು, 1.9 ಮಿಲಿಯನ್ ಇವಿಎಂ ಯಂತ್ರಗಳನ್ನು ಕಳವು ಮಾಡಲಾಗಿದೆ ಮತ್ತು ಈ ಬಗ್ಗೆ ಯಾವುದೇ ಕುರುಹು ಕಂಡು ಬಂದಿಲ್ಲ ಎನ್ನುವ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅಂದಿನಿಂದ ಈ ಪೋಸ್ಟ್ ಭಾರೀ ವೈರಲ್ ಆಗಿದೆ. ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಲವಾರು ಬಳಕೆದಾರರು ಇದನ್ನು ಹಂಚಿಕೊಂಡಿದ್ದಾರೆ.


ತನಿಖೆಯಲ್ಲೇನಿದೆ?

ದಿ ಎಕನಾಮಿಕ್ ಟೈಮ್ಸ್ ನ ಮಾರ್ಚ್ 15 ವರದಿಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು 2016 ಮತ್ತು 2019 ರ ನಡುವೆ ಚುನಾವಣಾ ಆಯೋಗದ ಮೇಲ್ವಿಚಾರಣೆಯಲ್ಲಿ 1.9 ಮಿಲಿಯನ್ ಇವಿಎಂಗಳು ನಾಪತ್ತೆಯಾಗಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಅರ್ಜಿಯನ್ನು ವಜಾಗೊಳಿಸಿತ್ತು. 1.9 ಮಿಲಿಯನ್ ಇವಿಎಂಗಳು ಕಾಣೆಯಾಗಿದೆ ಎಂದು ಐಎನ್‌ಸಿ ಹೇಳಿರುವುದು ಸಂಪೂರ್ಣವಾಗಿ ಆಧಾರ ರಹಿತವಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

2019ರಲ್ಲಿಯೂ ನಾಪತ್ತೆಯಾದ ಇವಿಎಂಗಳ ವರದಿಗಳು ಬಂದಿದ್ದವು. ಫ್ರಂಟ್‌ಲೈನ್ ಮತ್ತು ಟಿವಿ9 ಭಾರತ ವರ್ಷ್ ಈ ಕುರಿತು ವರದಿಗಳನ್ನು ಪ್ರಕಟಿಸಿತ್ತು. ಇದನ್ನೂಚುನಾವಣಾ ಆಯೋಗವು ಆಧಾರ ರಹಿತ ಎಂದು ಹೇಳಿ ಟ್ವಿಟ್ ಮಾಡಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿರುವ FAQ ವಿಭಾಗದಲ್ಲಿಯೂ ಈ ಸಮಸ್ಯೆಯನ್ನು ಉಲ್ಲೇಖಿಸಲಾಗಿದೆ. ವೈರಲ್ ಹಕ್ಕು ಕುರಿತು ಚುನಾವಣಾ ಆಯೋಗದ ಅಧಿಕಾರಿಗಳನ್ನು ಸಂಪರ್ಕಿಸಿರುವ ವಿಶ್ವಸ್ ನ್ಯೂಸ್ ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಷಯದ ಕುರಿತು ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ತಿಳಿಸಿರುವುದಾಗಿ ತಿಳಿದು ಬಂದಿದೆ.

Continue Reading

ತಂತ್ರಜ್ಞಾನ

Pragya Misra: ಭಾರತದಲ್ಲಿ ತನ್ನ ಮೊದಲ ಉದ್ಯೋಗಿಯನ್ನು ನೇಮಿಸಿದ ಒಪನ್ ಎಐ

Pragya Misra: ಭಾರತದಲ್ಲಿ ತನ್ನ ಮೊದಲ ಉದ್ಯೋಗಿಯನ್ನು ನೇಮಿಸಿದ ಒಪನ್ ಎಇ
ಸಾರ್ವಜನಿಕ ನೀತಿ ವ್ಯವಹಾರಗಳು ಮತ್ತು ಪಾಲುದಾರಿಕೆಗಳನ್ನು ನೋಡಿಕೊಳ್ಳಲು ಎಂಬವರನ್ನು ಒಪನ್ ಎಐ ನೇಮಕ ಮಾಡಿಕೊಂಡಿದೆ. ಒಪನ್ ಎಐ ನ ಭಾರತದ ಮೊದಲ ಉದ್ಯೋಗಿಯಾಗಿರುವ ಇವರು ಯಾರು ಗೊತ್ತೇ ?

VISTARANEWS.COM


on

By

Pragya Misra
Koo

ಚಾಟ್ ಜಿಪಿಟಿ (ChatGPT ) ಮಾರ್ಕರ್ ಒಪನ್ ಎಐ (OpenAI) ಭಾರತದಲ್ಲಿ (india) ತನ್ನ ಮೊದಲ ಉದ್ಯೋಗಿಯನ್ನು (first employee) ನೇಮಕ ಮಾಡಿದೆ. ಸಾರ್ವಜನಿಕ ನೀತಿ ವ್ಯವಹಾರ ಮತ್ತು ಪಾಲುದಾರಿಕೆಗಳನ್ನು ಮುನ್ನಡೆಸಲು 39 ವರ್ಷದ ಪ್ರಗ್ಯಾ ಮಿಶ್ರಾ (Pragya Misra) ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರದಲ್ಲಿ ಕೃತಕ ಬುದ್ಧಿಮತ್ತೆ (AI) ನಿಯಮಾವಳಿಗಳನ್ನು ರೂಪಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುವ ಈ ಸಂದರ್ಭದಲ್ಲಿ ಹೊಸ ಸರ್ಕಾರ ರಚನೆಯ ಸಿದ್ಧತೆಯಲ್ಲಿರುವಾಗ ಈ ಬೆಳವಣಿಗೆ ನಡೆದಿದೆ.ಮೈಕ್ರೋಸಾಫ್ಟ್ ಕಾರ್ಪ್ ಬೆಂಬಲಿತ ಕಂಪೆನಿಯು ಭಾರತದಲ್ಲಿ ಸಾರ್ವಜನಿಕ ನೀತಿ ವ್ಯವಹಾರಗಳು ಮತ್ತು ಪಾಲುದಾರಿಕೆಗಳನ್ನು ಮುನ್ನಡೆಸಲು ಪ್ರಗ್ಯಾ ಮಿಶ್ರಾ ಅವರನ್ನು ನೇಮಿಸಿಕೊಂಡಿದೆ. ಈ ತಿಂಗಳ ಅಂತ್ಯದಿಂದ ಮಿಶ್ರಾ ಅವರು OpenAI ನಲ್ಲಿ ಕೆಲಸ ಪ್ರಾರಂಭಿಸಲಿದ್ದಾರೆ.

ಇದನ್ನೂ ಓದಿ: ಜಗದ ಜನರ ಕೈಗಳಲ್ಲಿ ಮಿನುಗುವ ಮೊಬೈಲ್ ಫೋನುಗಳಲ್ಲೀಗ ಮೇಕ್ ಇನ್ ಇಂಡಿಯಾದ್ದೇ ಮೊಹರು!

ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನವನ್ನು ನಿಯಂತ್ರಿಸಲು ವಿಶ್ವದಾದ್ಯಂತ ಸರ್ಕಾರಗಳು ಪ್ರಯತ್ನಿಸುತ್ತಿದೆ. ಇದಕ್ಕೆ ಅನುಕೂಲಕರವಾಗಿ ನಿಯಮಗಳನ್ನು ರೂಪಿಸಲು AI ಕಂಪೆನಿಯು ಈ ನೇಮಕಾತಿಯನ್ನು ನಡೆಸಿದೆ. OpenAI ನ ಮೊದಲ ಭಾರತೀಯ ಉದ್ಯೋಗಿ ಪ್ರಗ್ಯಾ ಮಿಶ್ರಾ ಅವರ ಕುರಿತಾದ ಕಿರು ಮಾಹಿತಿ ಇಲ್ಲಿದೆ.

ಪ್ರಗ್ಯಾ ಮಿಶ್ರಾ ಅವರ ಪಾತ್ರ?

OpenAI ಯು ಸರ್ಕಾರಿ ಸಂಬಂಧಗಳ ಮುಖ್ಯಸ್ಥರನ್ನಾಗಿ ಪ್ರಗ್ಯಾ ಮಿಶ್ರಾ ಅವರನ್ನು ನೇಮಿಸಿದೆ. ಈ ಮೂಲಕ ಕಂಪೆನಿಗೆ ಮೊದಲ ಭಾರತೀಯರ ನೇಮಕವಾಗಿದೆ. ಕಂಪೆನಿಯು ಈ ನೇಮಕಾತಿಯ ಬಗ್ಗೆ ಇನ್ನೂ ಮಾಹಿತಿ ಬಹಿರಂಗ ಪಡಿಸಿಲ್ಲ ಎಂದು ಬ್ಲೂಮ್‌ಬರ್ಗ್ ತಿಳಿಸಿದ್ದು, ಭಾರತದಲ್ಲಿ ಸಾರ್ವಜನಿಕ ನೀತಿ ವ್ಯವಹಾರಗಳು ಮತ್ತು ಪಾಲುದಾರಿಕೆಗಳನ್ನು ಮುನ್ನಡೆಸಲು ಪ್ರಜ್ಞಾ ಮಿಶ್ರಾ ಅವರನ್ನು ನೇಮಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ಯಾರು ಪ್ರಗ್ಯಾ ಮಿಶ್ರಾ ?

2021ರ ಜುಲೈ ನಿಂದ ಪ್ರಗ್ಯಾ ಮಿಶ್ರಾ ಅವರು ಟ್ರೂಕಾಲರ್‌ಗಾಗಿ ಸಾರ್ವಜನಿಕ ವ್ಯವಹಾರಗಳ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲಿ ಅವರು ಸರ್ಕಾರಿ ಸಚಿವಾಲಯಗಳು, ಪ್ರಮುಖ ಪಾಲುದಾರರು, ಹೂಡಿಕೆದಾರರು ಮತ್ತು ಮಾಧ್ಯಮ ಪಾಲುದಾರರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಕೆಲಸ ಮಾಡಿದ್ದಾರೆ. ಮೂರು ವರ್ಷಗಳ ಮೊದಲು ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್‌ನೊಂದಿಗೆ ಕೆಲಸ ಮಾಡಿರುವ ಅವರು 2018 ರಲ್ಲಿ ತಪ್ಪು ಮಾಹಿತಿಯ ವಿರುದ್ಧ WhatsApp ಅಭಿಯಾನವನ್ನು ಮುನ್ನಡೆಸಿದರು. ಅನ್ ಸ್ಟಾರ್ ಆಂಡ್ ಯಂಗ್ ಮತ್ತು ನವದೆಹಲಿಯ ರಾಯಲ್ ಡ್ಯಾನಿಶ್ ರಾಯಭಾರ ಕಚೇರಿಯಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ.

ಶಿಕ್ಷಣ

ಪ್ರಗ್ಯಾ ಮಿಶ್ರಾ ಅವರು 2012ರಲ್ಲಿ ಇಂಟರ್ನ್ಯಾಷನಲ್ ಮ್ಯಾನೇಜ್ಮೆಂಟ್ ಇನ್ಸ್ ಟಿಟ್ಯೂಟ್ ನಿಂದ ತಮ್ಮ ಎಂಬಿಎ ಪದವಿ ಪಡೆದರು ಮತ್ತು ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯದಲ್ಲಿ ಪದವೀಧರರಾಗಿದ್ದಾರೆ. ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಪೊಲಿಟಿಕಲ್ ಸೈನ್ಸ್‌ನಿಂದ ಬಾರ್ಗೇನಿಂಗ್ ಮತ್ತು ನೆಗೋಷಿಯೇಷನ್ಸ್‌ನಲ್ಲಿ ಡಿಪ್ಲೊಮಾವನ್ನೂ ಹೊಂದಿದ್ದಾರೆ.

ಗಾಲ್ಫ್ ಆಟಗಾರರು

ಪ್ರಗ್ಯಾ ಮಿಶ್ರಾ ಅವರು 1998 ಮತ್ತು 2007 ರ ನಡುವೆ ಹಲವಾರು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಗಾಲ್ಫ್ ಆಟಗಾರರಾಗಿದ್ದಾರೆ. ಅವರು ಹಾರ್ಟ್‌ಫುಲ್‌ನೆಸ್ ಧ್ಯಾನ ತರಬೇತುದಾರರಾಗಿದ್ದು, ಪ್ರಗ್ಯಾನ್ ಪಾಡ್‌ಕ್ಯಾಸ್ಟ್ ನಿಂದ ಅದನ್ನು ಆಯೋಜಿಸುತ್ತಾರೆ.

ಯಾಕೆ ಈ ನೇಮಕ ?

1.4 ಶತಕೋಟಿ ಜನರು ಮತ್ತು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯೊಂದಿಗೆ ಭಾರತದಲ್ಲಿ ಗಮನಾರ್ಹ ಬೆಳವಣಿಗೆಯ ಅವಕಾಶವಿದೆ. ವಿಶ್ವಾದ್ಯಂತ ಸರ್ಕಾರಗಳು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನವನ್ನು ಹೇಗೆ ನಿಯಂತ್ರಿಸಬೇಕೆಂದು ಪರಿಗಣಿಸುತ್ತಿರುವಾಗ ಅನುಕೂಲಕರವಾದ ನಿಯಮಗಳನ್ನು ರೂಪಿಸಲು AI ಕಂಪೆನಿಯ ಪ್ರಯತ್ನಗಳನ್ನು ಈ ನೇಮಕಾತಿಯು ಎತ್ತಿ ತೋರಿಸಿದೆ. ಹೀಗಾಗಿ ಪ್ರಗ್ಯಾ ಮಿಶ್ರಾ ಅವರಿಗೆ ಇದೊಂದು ಸಾಕಷ್ಟು ಸವಾಲಿನ ಕೆಲಸವಾಗಿರಲಿದೆ.

Continue Reading

Latest

Lok sabha election-2024: ಶತಾಯುಷಿಗಳೇ ಚುನಾವಣೆಯ ಬ್ರಾಂಡ್​ ಅಂಬಾಸಿಡರ್​ಗಳು!

Lok sabha election-2024: ಮತದಾನ ಎಂಬುದು ದೇಶಕ್ಕಾಗಿ ನಾವು ನಿಭಾಯಿಸಲೇ ಬೇಕಾದ ಕರ್ತವ್ಯ. ಐದು ವರ್ಷಗಳಿಗೊಮ್ಮೆ ಬರುವ ಈ ಹಬ್ಬದಲ್ಲಿ ಭಾಗಿಯಾಗುವುದನ್ನು ಯಾರೂ ತಪ್ಪಿಸಿಕೊಳ್ಳಬಾರದು. ಮತಗಟ್ಟೆಗಳಿಗೊಮ್ಮೆ ಸುತ್ತು ಹಾಕಿ ನೋಡಿದರೆ ತಿಳಿಯುತ್ತದೆ ನಮ್ಮ ಒಂದು ಮತ ಎಷ್ಟು ಅಮೂಲ್ಯ ಎಂಬುದು.

VISTARANEWS.COM


on

By

Lok sabha election-2024
Koo

ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ (india) ಮತ್ತೆ ಲೋಕಸಭಾ ಚುನಾವಣೆಯಲ್ಲಿ (Lok sabha election-2024) ಮತದಾನ (vote) ಮಾಡಲು ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ. ಪ್ರತಿ ವರ್ಷ ಗ್ರಾಮ (village), ತಾಲ್ಲೂಕು (taluk), ಜಿಲ್ಲೆ (district), ರಾಜ್ಯ (state), ದೇಶ (nation) ಮಟ್ಟದ ಯಾವುದಾದರೊಂದು ಚುನಾವಣೆ (election) ಭಾರತದಲ್ಲಿ ನಡೆಯುತ್ತಲೇ ಇರುತ್ತದೆ. ಇದು ಹಲವಾರು ವಿಶೇಷ ಘಟನೆಗಳಿಗೆ ಸಾಕ್ಷಿಯಾಗುತ್ತದೆ.

ಹೊಸ ಮತದಾರರಿಂದ ಹಿಡಿದು ಹಿರಿಯ ನಾಗರಿಕರು (Senior citizens) ಇದೇ ಮೊದಲು ಎಂಬ ಹುಮ್ಮಸ್ಸಿನಿಂದ ಮತದಾನ ಮಾಡುತ್ತಾರೆ. ಇವರ ನಡುವೆ ಈ ಬಾರಿ ಮತದಾನ ಮಾಡದಿದ್ದರೆ ಏನಾಯಿತು ಎಂದು ನಿರ್ಲಕ್ಷ ತೋರುವ ಯುವ, ಮಧ್ಯವಯಸ್ಕರೂ ಇರುತ್ತಾರೆ. ಇವರೆಲ್ಲರಿಗೂ ವಯಸ್ಸಾದ ಹಿರಿಯ ಮತದಾರರು ಅದರಲ್ಲೂ ಶತಾಯುಷಿ ಮತದಾರರು ಸ್ಫೂರ್ತಿಯಾಗುತ್ತಾರೆ.

ಲೋಕಸಭಾ ಚುನಾವಣೆ ದೇಶದಲ್ಲಿ ಐದು ವರ್ಷಗಳಿಗೊಮ್ಮೆ ನಡೆಯುತ್ತದೆ. ಮತದಾನ ಎಂಬುದು ದೇಶಕ್ಕಾಗಿ ನಾವು ಮಾಡುವ ಕರ್ತವ್ಯ. ಇದನ್ನು ಪ್ರತಿಯೊಬ್ಬರೂ ನಿಭಾಯಿಸಲೇಬೇಕು. ಮತಗಟ್ಟೆಗಳಿಗೊಮ್ಮೆ ಸುತ್ತು ಹಾಕಿದಾಗ ನಮ್ಮ ಮತ ಎಷ್ಟು ಅಮೂಲ್ಯ ಎಂಬುದು ಗೊತ್ತಾಗುತ್ತದೆ. ಯಾಕೆಂದರೆ ಅಲ್ಲಿ ವಯಸ್ಸಾದ ನಾಗರಿಕರು, ಅಂಗವಿಕಲರು, ಗರ್ಭಿಣಿಯರು, ಪುಟ್ಟಪುಟ್ಟ ಮಕ್ಕಳನ್ನು ಹೊತ್ತು ಬರುವ ತಾಯಂದಿರು.. ಹೀಗೆ ಕೆಲವರು ಎಷ್ಟೇ ಕಷ್ಟವಾದರೂ ಮತದಾನ ಮಾಡುವುದನ್ನು ತಪ್ಪಿಸುವುದಿಲ್ಲ.

ಮತದಾರರಿಗೆ ಸ್ಫೂರ್ತಿ ತುಂಬಲು ಹರಿಯಾಣದಲ್ಲಿ ಹೊಸ ಯೋಜನೆ ಮಾಡಲಾಗಿದೆ. ಅಲ್ಲಿ ಶತಾಯುಷಿ ಮತದಾರರನ್ನು ಚುನಾವಣೆಗಾಗಿ ಜಿಲ್ಲೆಗಳ ಐಕಾನ್ ಗಳಾಗಿ ಗುರುತಿಸಲಾಗಿದೆ.

ಇದನ್ನೂ ಓದಿ: PM Narendra Modi: ಬೆಂಗಳೂರಿನಲ್ಲಿ ಇಂದು ಮೋದಿ; ಸಂಚಾರಕ್ಕೆ ಪರ್ಯಾಯ ರಸ್ತೆಗಳ ಸೂಚನೆ

ಹರಿಯಾಣದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಅನುರಾಗ್ ಅಗರ್ವಾಲ್ ಅವರು ಶುಕ್ರವಾರ ಪಲ್ವಾಲ್ ಜಿಲ್ಲೆಯ 118 ವರ್ಷದ ಧರ್ಮವೀರ್ ರಾಜ್ಯದ ಅತ್ಯಂತ ಹಿರಿಯ ಮತದಾರರಾಗಿದ್ದಾರೆ. ವಯಸ್ಸಾದ ಇವರಂತಹ ಮತದಾರರು ಯುವ ಮತದಾರರಿಗೆ ಸ್ಫೂರ್ತಿಯಾಗುತ್ತಾರೆ ಎಂದು ಆಶಾವಾದ ವ್ಯಕ್ತಪಡಿಸಿದ್ದಾರೆ.


ಐಕಾನ್ ಶತಾಯುಷಿಗಳು

ಕಳೆದ ಲೋಕಸಭೆ ಚುನಾವಣೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ವಯೋವೃದ್ಧರು ಮತ್ತು ಯುವ ಮತದಾರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಜಿಲ್ಲೆಗಳ ಐಕಾನ್‌ಗಳಾಗಿ ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಹಿರಿಯ ಮಹಿಳೆ

ಮಹಿಳೆಯರಲ್ಲಿ ಸಿರ್ಸಾ ಜಿಲ್ಲೆಯ 117 ವರ್ಷದ ಬಲ್ಬೀರ್ ಕೌರ್ ರಾಜ್ಯದ ಅತ್ಯಂತ ಹಿರಿಯ ಮಹಿಳಾ ಮತದಾರರಾಗಿದ್ದು, ಸೋನೆಪತ್ ಜಿಲ್ಲೆಯ 116 ವರ್ಷದ ಭಗವಾನಿ ಅನಂತರದ ಸ್ಥಾನದಲ್ಲಿದ್ದಾರೆ ಎಂದರು.

ಶತಾಯುಷಿ ಮತದಾರರು

ಪಾಣಿಪತ್ ಜಿಲ್ಲೆಯ ಲಕ್ಷಿಶೇಕ್‌ಗೆ 115 ವರ್ಷ, ರೋಹ್ಟಕ್‌ನ ಚಂದ್ರೋ ಕೌರ್, ಫತೇಹಾಬಾದ್ ಜಿಲ್ಲೆಯ ರಾಣಿ ಮತ್ತು ಕುರುಕ್ಷೇತ್ರ ಜಿಲ್ಲೆಯ ಅಂಟಿದೇವಿ ಅವರ ವಯಸ್ಸು 112. ಇನ್ನು ಸರ್ಜಿತ್ ಕೌರ್ ಮತ್ತು ಚೋಬಿ ದೇವಿ ಇಬ್ಬರಿಗೂ 111 ವರ್ಷ, ರೇವಾರಿ ಜಿಲ್ಲೆಯ ನಾರಾಯಣಿ ಅವರಿಗೆ 110 ವರ್ಷ. ಕೈತಾಲ್ ಜಿಲ್ಲೆಯಲ್ಲಿ 109 ವರ್ಷ ವಯಸ್ಸಿನ ಮತದಾರ ಫುಲ್ಲಾ ಮತ್ತು ಫರಿದಾಬಾದ್ ಜಿಲ್ಲೆಯ ಚಂದೇರಿ ದೇವಿ 109 ವರ್ಷ ವಯಸ್ಸಿನವರಾಗಿದ್ದಾರೆ ಎಂದರು.

ಜಿಂದ್ ಜಿಲ್ಲೆಯ ರಾಮದೇವಿ ಮತ್ತು ನುಹ್ ಜಿಲ್ಲೆಯ ಹರಿ 108 ವರ್ಷ ವಯಸ್ಸಿನವರು. ಜಜ್ಜರ್ ಜಿಲ್ಲೆಯ ಮೇವಾ ದೇವಿ, ಕರ್ನಾಲ್ ಜಿಲ್ಲೆಯ ಗುಲ್ಜಾರ್ ಸಿಂಗ್, ಹಿಸಾರ್ ಜಿಲ್ಲೆಯ ಶಾಡ್ಕಿನ್ ಮತ್ತು ಶ್ರೀರಾಮ್ ಮತ್ತು ಚಾರ್ಖಿ ದಾದ್ರಿಯ ಗೀನಾ ದೇವಿ 106 ವರ್ಷ ವಯಸ್ಸಿನ ಮತದಾರರು. ಭಿವಾನಿ ಜಿಲ್ಲೆಯ ಹರ್ದೇಯಿ ಅವರಿಗೆ 103 ವರ್ಷ ಮತ್ತು ಯಮುನಾನಗರದ ಫೂಲ್ವತಿ ಅವರಿಗೆ 100 ವರ್ಷ ವಯಸ್ಸಾಗಿದೆ ಎಂದು ಅವರು ತಿಳಿಸಿದರು.

ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗೀಯ ಚುನಾವಣಾಧಿಕಾರಿಗಳು ತಮ್ಮ ಜಿಲ್ಲೆಗಳಲ್ಲಿ ಚುನಾವಣೆಯ ಐಕಾನ್‌ಗಳನ್ನು ಮಾಡಲು ಅಗರ್ವಾಲ್ ಒತ್ತಾಯಿಸಿದರು.

ಈ ಬಾರಿ ಘೋಷಣೆ ಏನು?

ಈ ವರ್ಷ, ಭಾರತೀಯ ಚುನಾವಣಾ ಆಯೋಗವು ‘ಚುನಾವ್ ಕಾ ಪರ್ವ್ ದೇಶ್ ಕಾ ಗರ್ವ್’ ಎಂಬ ಘೋಷಣೆಯನ್ನು ಲೋಕಸಭೆ ಚುನಾವಣೆಯ ಪ್ರಮುಖ ಘೋಷಣೆಯನ್ನಾಗಿ ಮಾಡಿದೆ. ಇದರಿಂದಾಗಿ ನಾಗರಿಕರು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾರೆ ಎಂದು ಅವರು ಹೇಳಿದರು.

ಐದು ವರ್ಷಕ್ಕೊಮ್ಮೆ ಬರುವ ಹಬ್ಬ

ರಾಜ್ಯದ 18- 19 ವರ್ಷ ವಯೋಮಾನದ ಯುವಕರು ಪ್ರಥಮ ಬಾರಿಗೆ ಮತದಾನ ಮಾಡಲಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿದಾಗ ಪ್ರಜಾಪ್ರಭುತ್ವದ ಶಕ್ತಿ ಹಾಗೂ ಮತದಾನದ ಮಹತ್ವ ತಿಳಿಯುತ್ತದೆ. ಐದು ವರ್ಷಕ್ಕೊಮ್ಮೆ ಪ್ರಜಾಪ್ರಭುತ್ವದ ಹಬ್ಬ ಬರುವುದರಿಂದ ಯುವಕರು ಈ ಅವಕಾಶವನ್ನು ತಪ್ಪಿಸಿಕೊಳ್ಳಬಾರದು ಎಂದು ಅವರು ಹೇಳಿದರು.

Continue Reading

ರಾಜಕೀಯ

Party Symbols: ವಿವಿಧ ಪಕ್ಷಗಳ ಚುನಾವಣಾ ಚಿಹ್ನೆ ಹಿಂದೆ ಹೇಗಿತ್ತು, ಈಗ ಏನಾಗಿದೆ? ಸಂಗ್ರಹಯೋಗ್ಯ ಮಾಹಿತಿ

Party symbols: ಭಾರತದಲ್ಲಿ ಚುನಾವಣೆ ಆರಂಭದಿಂದಲೂ ವಿವಿಧ ಪಕ್ಷಗಳಿಗೆ ಚುನಾವಣಾ ಚಿಹ್ನೆಯನ್ನು ನೀಡಲಾಗುತ್ತಿದೆ. ಆದರೆ ಈಗ ಇರುವ ಚುನಾವಣೆ ಚಿಹ್ನೆಗಳು ಮೊದಲು ಇರಲಿಲ್ಲ. ಪಕ್ಷ ಹುಟ್ಟಿಕೊಂಡ ಕೆಲವು ವರ್ಷಗಳ ಬಳಿಕ ಬಳಕೆಗೆ ಬಂದವು. ಕೆಲವು ಪಕ್ಷಗಳು ತನ್ನ ಚಿಹ್ನೆಯನ್ನು ಕಳೆದುಕೊಂಡು ಹೊಸ ಗುರುತನ್ನು ಪಡೆದಿದೆ. ಈ ಚಿಹ್ನೆಯ ಮಹತ್ವ ಎಷ್ಟು ಗೊತ್ತೇ? ಈ ಕುರಿತ ಸಂಗ್ರಹಯೋಗ್ಯ ಮಾಹಿತಿ ಇಲ್ಲಿದೆ.

VISTARANEWS.COM


on

By

Party symbols
Koo

ಚುನಾವಣೆ (election) ವೇಳೆ ಎಲ್ಲರ ಗಮನ ಸೆಳೆಯುವುದು ಚುನಾವಣಾ ಚಿಹ್ನೆಗಳು. ಈ ಬಾರಿಯೂ ಲೋಕಸಭಾ ಚುನಾವಣೆ- 2024ರಲ್ಲಿ (loksabha election-2024) ಕಣಕ್ಕೆ ಇಳಿದಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗವು ನೀಡಿದ್ದ ಚುನಾವಣಾ ಚಿಹ್ನೆಗಳು ಎಲ್ಲರ ಗಮನ ಸೆಳೆದಿತ್ತು. ಚುನಾವಣಾ ಚಿಹ್ನೆಯ (Party symbols) ಬಳಕೆ ಹೊಸದೇನಲ್ಲ 1951ರ ಮೊದಲ ಚುನಾವಣೆಯಿಂದಲೇ ಅಭ್ಯರ್ಥಿಯನ್ನು (candidate) ಗುರುತಿಸಲು ಚುನಾವಣಾ ಚಿಹ್ನೆಗಳನ್ನು ಬಳಸಲಾಗುತ್ತಿದೆ.

ಚುನಾವಣಾ ಪ್ರಚಾರದ ವೇಳೆ ಜನರ ಗಮನಸೆಳೆಯುವ ಚುನಾವಣಾ ಚಿಹ್ನೆಗಳು ಒಂದೇ ಹೆಸರಿನ ಅಭ್ಯರ್ಥಿಗಳು ಕಣದಲ್ಲಿ ಇದ್ದರೆ ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಗುರುತಿಸಲು ಇದು ಸಹಾಯ ಮಾಡುತ್ತದೆ. ಚಿತ್ರಗಳು ಸಾಮಾನ್ಯವಾಗಿ ಎಲ್ಲರಿಗೂ ನೆನಪಿನಲ್ಲಿ ಉಳಿಯುತ್ತದೆ. ದೇಶದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾದಾಗ ಸಾಕ್ಷರರ ಪ್ರಮಾಣ ಕಡಿಮೆ ಇತ್ತು. ಹೀಗಾಗಿಯೇ ಚುನಾವಣಾ ಆಯೋಗ ಚಿಹ್ನೆಗಳನ್ನು ಬಳಸಲು ಪ್ರಾರಂಭಿಸಿತ್ತು.

ಅಕ್ಷರಗಳಿಗಿಂತ ಹೆಚ್ಚು ವೇಗವಾಗಿ ಮನ ಮುಟ್ಟುವ ಚುನಾವಣಾ ಚಿಹ್ನೆಗಳು ಮತ್ತು ಅವುಗಳ ಸೃಜನಾತ್ಮಕ ಬಳಕೆಯ ಕುರಿತು ಭಾರತದಲ್ಲಿ ಹಿನ್ನೆಲೆ ಹೇಗಿತ್ತು ಗೊತ್ತೇ ?

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌-ಬಿಜೆಪಿ ಮಧ್ಯೆ ʼಚೆಂಬುʼ ವಾರ್; ಗ್ಯಾರಂಟಿಗಳಿಂದ ಜನರಿಗೆ ಕಾಂಗ್ರೆಸ್‌ ಟೋಪಿ ಎಂದ ವಿಜಯೇಂದ್ರ

ಯಾವಾಗ ಆರಂಭ?

1951ರ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಸೇರಿ 53 ಪಕ್ಷಗಳ ಅಭ್ಯರ್ಥಿಗಳು ಸುಮಾರು 4,500 ಸ್ಥಾನಗಳಿಗೆ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ಚುನಾವಣಾ ಆಯೋಗವು ಅಭ್ಯರ್ಥಿಗಳು ಸ್ಪರ್ಧಿಸಬಹುದಾದ ಪಕ್ಷಗಳಿಗೆ ಚಿಹ್ನೆಗಳನ್ನು ನಿಗದಿಪಡಿಸಿತ್ತು. ಈ ಪ್ರಕ್ರಿಯೆಯು ಚುನಾವಣಾ ಚಿಹ್ನೆಗಳ ಮೀಸಲಾತಿ ಮತ್ತು ಹಂಚಿಕೆ ಆದೇಶ 1968ರಲ್ಲಿ ಹೊರಬಂದು ಇದು ಹೆಚ್ಚು ಸುವ್ಯವಸ್ಥಿತವಾಯಿತು. ಇದರ ಪ್ರಕಾರ ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಪಕ್ಷಗಳಿಗೆ ಮತ್ತು ಸ್ವತಂತ್ರ ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆಯನ್ನು ಮಾಡಲಾಗುತ್ತದೆ. ಇದು ಎರಡು ಅಥವಾ ಹೆಚ್ಚಿನ ಪಕ್ಷಗಳ ವಿಲೀನದ ಸಂದರ್ಭದಲ್ಲಿ ಅಥವಾ ಪಕ್ಷದಲ್ಲಿ ವಿಭಜನೆಯ ಸಂದರ್ಭದಲ್ಲಿ ಅನ್ವಯಿಸಬಹುದಾದ ನಿಯಮಗಳನ್ನೂ ಹೊಂದಿದೆ.

ವಿಲೀನ, ವಿಭಜನೆಯಾದ ಸಂದರ್ಭದಲ್ಲಿ ಕೆಲವು ಚಿಹ್ನೆಗಳು ಹೊಸದಾಗಿ ಬರುತ್ತದೆ, ಇನ್ನು ಕೆಲವು ಅಳಿಸಿ ಹೋಗುತ್ತದೆ. ಪ್ರಸ್ತುತ ಇರುವ ಚಿಹ್ನೆಗಳು ಹುಟ್ಟಿಕೊಳ್ಳುವುದರ ಹಿಂದೆ ಬಹು ದೊಡ್ಡ ಕಥೆಯೇ ಇದೆ.


ಕಾಂಗ್ರೆಸ್ ನ ಕೈ

ಕಾಂಗ್ರೆಸ್ ಪ್ರಾರಂಭದಲ್ಲಿ ಚುನಾವಣಾ ಚಿಹ್ನೆಯಾಗಿ ನೊಗ ಹಿಡಿದ ಎತ್ತುಗಳನ್ನು ಹೊಂದಿತ್ತು. ಜವಾಹರಲಾಲ್ ನೆಹರು, 1969ರಲ್ಲಿ ಇಂದಿರಾ ಗಾಂಧಿ ಅವರೂ ಜೋಡಿ ಎತ್ತಿನ ಚಿಹ್ನೆಯನ್ನು ಹೊಂದಿದ್ದರು. 1969ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಎಸ್. ನಿಜಲಿಂಗಪ್ಪ ಅವರು ಪಕ್ಷದಿಂದ ಹೊರಹೋದಾಗ ಕಾಂಗ್ರೆಸ್ ವಿಭಜನೆಯಾಯಿತು. ಈ ಸಂದರ್ಭದಲ್ಲಿ ಚುನಾವಣಾ ಚಿನ್ಹೆಯಾಗಿದ್ದ ಜೋಡಿ ಎತ್ತುಗಳ ಬಗ್ಗೆ ವಿವಾದ ಉಂಟಾಯಿತು. ಇಂದಿರಾ ಗಾಂಧಿಯವರ ಬಣಕ್ಕೆ ಹಸು, ಕರು ಚಿಹ್ನೆಯನ್ನು ನೀಡಲಾಯಿತು. ಇದಕ್ಕೂ ಆಕ್ಷೇಪಣೆ ವ್ಯಕ್ತವಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು.

ತುರ್ತುಪರಿಸ್ಥಿತಿಯ ಬಳಿಕ ಮೊರಾರ್ಜಿ ದೇಸಾಯಿ ನೇತೃತ್ವದ ಜನತಾ ಪಕ್ಷದ ಕೈಯಲ್ಲಿ ಸೋಲು ಅನುಭವಿಸಿದ ಇಂದಿರಾ ಗಾಂಧಿ ಅವರು ಮರಳಿ ಅಧಿಕಾರಕ್ಕೆ ಬರಲು ಪ್ರಯತ್ನಿಸಿದರು. ತಮ್ಮ ಅಧೀನದಲ್ಲಿರುವ ಪಕ್ಷ ನಿಜವಾದ ಕಾಂಗ್ರೆಸ್ ಎಂದು ಹೇಳಿ ಕಾಂಗ್ರೆಸ್ (ಇಂದಿರಾ) ರಚನೆಯನ್ನು ಘೋಷಿಸಿದರು. 1979ರವರೆಗೆ ಇದ್ದ ಹಸುಕರು ಚಿಹ್ನೆಯನ್ನು ಫ್ರೀಜ್ ಮಾಡಲಾಯಿತು. ಚುನಾವಣಾ ಆಯೋಗವು ಹಲವಾರು ಚಿಹ್ನೆಗಳ ನಡುವೆ ಆಯ್ಕೆಯನ್ನು ನೀಡಿತು. ಅದರಲ್ಲಿ ಕಲ್ಲೇಕುಳಂಗರದ ಕೈಪತಿ ದೇವಸ್ಥಾನ ಅಥವಾ ಕೈ ದೇವಸ್ಥಾನದ ಕಥೆಯು ಇಂದಿರಾ ಗಾಂಧಿಯವರಿಗೆ ‘ಕೈ’ ಚಿಹ್ನೆಯನ್ನು ಪಡೆಯಲು ಪ್ರೇರೇಪಿಸಿತು ಎನ್ನಲಾಗಿದೆ.

ಭಾರತೀಯ ಜನತಾ ಪಕ್ಷ

1980ರಲ್ಲಿ ಬಿಜೆಪಿ ಜನಸಂಘದಿಂದ ಹುಟ್ಟಿಕೊಂಡಿತ್ತು. 1977ರಲ್ಲಿ ಜನ ಸಂಘವು ಜನತಾ ಪಕ್ಷದೊಂದಿಗೆ ವಿಲೀನಗೊಂಡು ಕೇಂದ್ರ ಸರ್ಕಾರವನ್ನು ರಚಿಸಿತ್ತು. ಭಾರತದ ಮೊದಲ ಸಾರ್ವತ್ರಿಕ ಚುನಾವಣೆ ವೇಳೆ ಭಾರತೀಯ ಜನಸಂಘದ ಚುನಾವಣಾ ಚಿಹ್ನೆ 1977ರ ತನಕ ಎಣ್ಣೆ ದೀಪವಾಗಿತ್ತು. ಬಳಿಕ ಅದು ನೊಗ ಹಿಡಿದ ರೈತನನ್ನು ತನ್ನ ಚಿಹ್ನೆಯಾಗಿ ಬಳಸಿತ್ತು. 1980ರಲ್ಲಿ ಜನತಾ ಪಕ್ಷ ದಿಂದ ಹೊರಬಂದ ಜನಸಂಘ ನಾಯಕರು ಭಾರತೀಯ ಜನತಾ ಪಾರ್ಟಿ ಎಂಬ ಹೊಸ ಪಕ್ಷ ಕಟ್ಟಿ ಅದಕ್ಕೆ ಕಮಲದ ಹೂವು ಚುನಾವಣಾ ಚಿಹ್ನೆಯಾಗಿ ಪಡೆದರು.

ಇದಕ್ಕೆ ಸ್ಫೂರ್ತಿಯಾಗಿದ್ದು 1980ರಲ್ಲಿ ಅಟಲ್ ಬಿಹಾರಿ ವಾಜಪೇಯಿಯವರು ಮುಂಬಯಿಯಲ್ಲಿ ರ್ಯಾಲಿ ನಡೆಸುತ್ತಿದ್ದಾಗ ಕಾಂಗ್ರೆಸ್ ವಿರುದ್ಧ ಮಾತನಾಡುತ್ತ “ಅಂಧೇರಾ ಚಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ” ಎಂದು ಹೇಳಿದ್ದರು. 1980ರ ಏಪ್ರಿಲ್ 6ರಂದು ಭಾರತೀಯ ಜನತಾ ಪಕ್ಷದ ರಚನೆಯ ವೇಳೆ ವಾಜಪೇಯಿಯವರ ಕಮಲದ ಚಿಹ್ನೆಯ ಆಯ್ಕೆಯು ಹೊಸ ಪಕ್ಷದ ರಾಷ್ಟ್ರೀಯತಾವಾದಿ ಸಿದ್ಧಾಂತಗಳಿಗೆ ಹೊಂದಿಕೆಯಾಯಿತು. ಹೀಗಾಗಿ ಕಮಲ ಬಿಜೆಪಿಯ ಚಿಹ್ನೆಯಾಯಿತು.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ

ಪ್ರಾರಂಭದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಯು ಕತ್ತಿ (ಕುಡುಗೋಲು) ಸುತ್ತಿಗೆ ನಕ್ಷತ್ರಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಿಕೊಂಡಿತ್ತು. 1964ರ ಬಳಿಕ ಐದು-ಬಿಂದುಗಳ ನಕ್ಷತ್ರವನ್ನು ಸೇರಿಸಲಾಯಿತು. ಬಳಿಕ ವಿಭಜನೆಯಾಗಿ ಸಿಪಿಐ (ಎಂ), ಸಿಪಿಐ (ಎಡ) ಪಕ್ಷಗಳು ಹುಟ್ಟಿಕೊಂಡವು. ಆಂಧ್ರಪ್ರದೇಶ, ಕೇರಳ ಮತ್ತು ಪಶ್ಚಿಮ ಬಂಗಾಳದ ಲ್ಲಿ ಮಾತ್ರ ಸ್ಥಾನಗಳನ್ನು ಪಡೆದಿರುವ ಸಿಪಿಐ ಪಕ್ಷಕ್ಕೆ 1964ರಲ್ಲಿ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಲಾಯಿತು. ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐ (ಮಾರ್ಕ್ಸ್‌ವಾದಿ)ಯ ಚುನಾವಣಾ ಚಿಹ್ನೆ ಕತ್ತಿ ಮತ್ತು ಜೋಳದ ತೆನೆಯಾಗಿತ್ತು.


ಬಹುಜನ ಸಮಾಜ ಪಕ್ಷ

1984ರಲ್ಲಿ ಹುಟ್ಟಿಕೊಂಡ ಬಹುಜನ ಸಮಾಜ ಪಕ್ಷ (BSP) 1988ರ ಅಲಹಾಬಾದ್ ಉಪ ಚುನಾವಣೆಯಲ್ಲಿ ತನ್ನ ಛಾಪು ಮೂಡಿಸಿತ್ತು. ಬಿಎಸ್‌ಪಿಯ ಸಂಸ್ಥಾಪಕ ಕಾನ್ಶಿ ರಾಮ್ ಅವರು ಪ್ರಚಾರದ ವೇಳೆ ಆನೆಯ ಮೇಲೆ ನೀಲಿ ಧ್ವಜದ ಚಿಹ್ನೆಯನ್ನು ಬಳಸಿಕೊಂಡರು. ಹಿಂದೂ ಮತ್ತು ಬೌದ್ಧ ಧರ್ಮದಲ್ಲಿ ಪ್ರಾಮುಖ್ಯತೆಯನ್ನು ಹೊಂದಿರುವ ‘ಆನೆ’ ಚಿಹ್ನೆಯು ಕಾನ್ಶಿರಾಮ್‌ಗೆ ಹೆಚ್ಚಿನ ಬಲ ತುಂಬಿತ್ತು. ಬಿಎಸ್ಪಿಯ ‘ಆನೆ’ ಭಾರತದಲ್ಲಿ ಕೆಲವು ಪ್ರಾಣಿ ಆಧಾರಿತ ಚುನಾವಣಾ ಚಿಹ್ನೆಗಳಲ್ಲಿ ಒಂದಾಗಿದೆ. ಯಾಕೆಂದರೆ ಚುನಾವಣಾ ಆಯೋಗವು ಈಗ ಹೊಸದಾಗಿ ಪ್ರಾಣಿಗಳ ಚಿಹ್ನೆಗಳನ್ನು ನೀಡುವುದನ್ನು ನಿಲ್ಲಿಸಿದೆ.

ಆಮ್ ಆದ್ಮಿ ಪಕ್ಷ

2011ರಲ್ಲಿ ಅಣ್ಣಾ ಹಜಾರೆ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಹುಟ್ಟಿಕೊಂಡ ಸಂಘಟನೆ ಇದು. ಅರವಿಂದ್ ಕೇಜ್ರಿವಾಲ್ ಅವರು 2012ರಲ್ಲಿ ಆಮ್ ಆದ್ಮಿ ಪಕ್ಷವನ್ನು ರಚಿಸಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದರು. ‘ಪೊರಕೆ’ಯ ಇದರ ಚುನಾವಣಾ ಚಿಹ್ನೆಯಾಗಿದೆ. ಚುನಾವಣಾ ಆಯೋಗಕ್ಕೆ ಪಕ್ಷವು ಸಲ್ಲಿಸಿದ ಮೂರು ಚಿಹ್ನೆಗಳಲ್ಲಿ ‘ಮೇಣದಬತ್ತಿ’ ಮತ್ತು ‘ಟ್ಯಾಪ್’ ಕೂಡ ಇತ್ತು.

ಪೊರಕೆಯ ಚಿಹ್ನೆ ಕಾರ್ಮಿಕರ ಘನತೆಗಾಗಿ ಮಾತ್ರವಲ್ಲ, ನಮ್ಮ ಸರ್ಕಾರ ಮತ್ತು ನಮ್ಮ ಶಾಸಕಾಂಗವನ್ನು ವ್ಯಾಪಿಸಿರುವ ಕೊಳೆಯನ್ನು ಸ್ವಚ್ಛಗೊಳಿಸುವ ಪಕ್ಷದ ಆಶಯವನ್ನು ಪ್ರತಿನಿಧಿಸುತ್ತದೆ ಎನ್ನುತ್ತಾರೆ ಪಕ್ಷದ ಮುಖಂಡರು.

ನ್ಯಾಷನಲ್ ಪೀಪಲ್ಸ್ ಪಾರ್ಟಿ

ಭಾರತದಲ್ಲಿನ ಆರು ರಾಷ್ಟ್ರೀಯ ಪಕ್ಷಗಳಲ್ಲಿ ಒಂದಾದ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಅನ್ನು 2013ರಲ್ಲಿ ಸ್ಥಾಪಿಸಲಾಯಿತು. ಅದರ ಸಂಸ್ಥಾಪಕ ಮಾಜಿ ಮೇಘಾಲಯ ಮುಖ್ಯಮಂತ್ರಿ ಪಿ.ಎ. ಸಂಗ್ಮಾ ಅವರನ್ನು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ಪುಸ್ತಕವನ್ನು ಪಕ್ಷದ ಚಿಹ್ನೆಯಾಗಿ ಮಾಡಿಕೊಂಡ ಅವರು ಸಾಕ್ಷರತೆ ಮತ್ತು ಶಿಕ್ಷಣವು ದುರ್ಬಲ ವರ್ಗದವರನ್ನು ಸಬಲೀಕರಣಗೊಳಿಸುತ್ತದೆ ಎಂದು ನಂಬುವುದಾಗಿ ಹೇಳಿ ಶಿಕ್ಷಣಕ್ಕೆ ಒತ್ತು ನೀಡುವ ಭರವಸೆ ನೀಡಿದ್ದರು.

ವಿವಿಧ ಪಕ್ಷಗಳಿಗೆ ಒಂದೇ ಚಿಹ್ನೆಗಳು

ಇನ್ನು ರಾಜ್ಯ ಮಟ್ಟದಲ್ಲಿ ಒಂದೇ ಚುನಾವಣಾ ಚಿಹ್ನೆಯನ್ನು ಪಡೆದು ಬೇರೆಬೇರೆ ಪಕ್ಷಗಳಿಂದಲೂ ಅಭ್ಯರ್ಥಿಗಳು ಕಣಕ್ಕೆ ಇಳಿದಿರುವ ಇತಿಹಾಸವೂ ಇದೆ. ಒಂದೇ ಕ್ಷೇತ್ರದಿಂದ ಪರಸ್ಪರರ ವಿರುದ್ಧ ಸ್ಪರ್ಧಿಸುವುದಿಲ್ಲವೋ ಅಲ್ಲಿಯವರೆಗೆ ಅದು ಸಾಮಾನ್ಯವಾಗಿ ಸಮಸ್ಯೆಯನ್ನು ಉಂಟು ಮಾಡುವುದಿಲ್ಲ. ಆದರೆ ಪಕ್ಷಗಳು ತನ್ನ ಕಾಯ್ದಿರಿಸಿದ ಚಿಹ್ನೆಯಡಿ ಬೇರೆಯವರಿಗೆ ಸ್ಪರ್ಧಿಸಲು ಅನುಮತಿಸುವುದಿಲ್ಲ ಎಂಬ ಷರತ್ತು ವಿಧಿಸುತ್ತದೆ.

ಬೈಸಿಕಲ್ ಗಾಗಿ ಸ್ಪರ್ಧೆ

ಭಾರತೀಯ ರಾಜಕೀಯ ಇತಿಹಾಸದಲ್ಲಿ ಬೈಸಿಕಲ್ ತೀವ್ರ ಪೈಪೋಟಿಯ ಸಂಕೇತವಾಗಿದೆ. ಎನ್.ಟಿ. ರಾಮರಾವ್ ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಮುಲಾಯಂ ಸಿಂಗ್ ಯಾದವ್ ಅವರ ಸಮಾಜವಾದಿ ಪಕ್ಷದ ನಡುವೆ ಬೈಸಿಕಲ್ ಗಾಗಿ ಪೈಪೋಟಿ ಏರ್ಪಟ್ಟಿತ್ತು.

1982ರಲ್ಲಿ ಸ್ಥಾಪನೆಯಾದ ಟಿಡಿಪಿಯಿಂದ 1995ರಲ್ಲಿ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಅಧಿಕಾರ ವಹಿಸಿಕೊಂಡಾಗ ಟಿಡಿಪಿಯನ್ನು ಅದರ ‘ಬೈಸಿಕಲ್ ಚಿಹ್ನೆ’ಯೊಂದಿಗೆ ಪಡೆದರು.
ಸುಮಾರು ಒಂದು ದಶಕದ ಅನಂತರ ಸಮಾಜವಾದಿ ಪಕ್ಷದ ರಚನೆಯಾಗಿ ಮುಲಾಯಂ ಸಿಂಗ್ ಯಾದವ್ ಅವರ ಮಗ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಮುಲಾಯಂ ಅವರ ಸಹೋದರ ಶಿವಪಾಲ್ ಯಾದವ್ ನಡುವೆ ಕಲಹ ಉಂಟಾಗಿ ಪಕ್ಷ ಮತ್ತು ಅದರ ಚಿಹ್ನೆಯ ಮೇಲೆ ಅಧಿಕಾರವನ್ನು 2017ರಲ್ಲಿ ಅಖಿಲೇಶ್‌ಗೆ ನೀಡಲಾಯಿತು.


ಬಿಲ್ಲು ಮತ್ತು ಬಾಣ

ಪ್ರಸ್ತುತ ಸ್ಪರ್ಧೆಯಲ್ಲಿರುವ ಮತ್ತೊಂದು ಚಿಹ್ನೆ ಮಹಾರಾಷ್ಟ್ರದಲ್ಲಿ ‘ಬಿಲ್ಲು ಮತ್ತು ಬಾಣ’. ಏಕನಾಥ್ ಶಿಂಧೆ ನೇತೃತ್ವದ “ನೈಜ” ಶಿವಸೇನೆಗೆ ಹಂಚಲ್ಪಟ್ಟ ಈ ಚಿಹ್ನೆಯನ್ನು ಮೊದಲು 1989ರಲ್ಲಿ ಬಾಳ್ ಠಾಕ್ರೆ ಅವರು ಬಳಸಿದ್ದರು.

1972ರಲ್ಲಿ ರಚಿಸಲಾದ ಜಾರ್ಖಂಡ್ ಮುಕ್ತಿ ಮೋರ್ಚಾ ಜಾರ್ಖಂಡ್‌ನಲ್ಲಿ ಅದೇ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ಬಳಸುತ್ತದೆ. ಬಿಹಾರದ ಜನತಾ ದಳ (ಯುನೈಟೆಡ್) ಪಕ್ಷದ ಚಿಹ್ನೆಯು ‘ಬಾಣ’ವಾಗಿದೆ. 2019 ರಲ್ಲಿ ಚುನಾವಣಾ ಆಯೋಗವು ಮಹಾರಾಷ್ಟ್ರ ಅಥವಾ ಜಾರ್ಖಂಡ್‌ನಲ್ಲಿ ಈ ಚಿಹ್ನೆಯನ್ನು ಬಳಸಲು ಅನುಮತಿಸುವುದಿಲ್ಲ ಎಂದು ಘೋಷಿಸಿತು. .

Continue Reading
Advertisement
PBKS vs GT
ಕ್ರೀಡೆ16 mins ago

PBKS vs GT: ಗುಜರಾತ್​ ವಿರುದ್ಧವಾದರೂ ಪಂಜಾಬ್​ಗೆ ಒಲಿದೀತೇ ಗೆಲುವಿನ ಅದೃಷ್ಟ?

CJI Chandrachud
ದೇಶ28 mins ago

CJI Chandrachud: ಹೊಸ ಕಾನೂನುಗಳ ಜಾರಿ ಐತಿಹಾಸಿಕ; ಸಿಜೆಐ ಡಿ.ವೈ.ಚಂದ್ರಚೂಡ್‌ ಬಣ್ಣನೆ

Forest bathing activity begins at Cubbon Park
ಬೆಂಗಳೂರು30 mins ago

Forest Bathing: ಬೆಂಗಳೂರಲ್ಲೂ ಶುರು ಫಾರೆಸ್ಟ್‌ ಬಾಥಿಂಗ್‌; ಕಬ್ಬನ್ ಪಾರ್ಕ್‌ನಲ್ಲಿ ಮರ ಅಪ್ಪಲು ಕೊಡಬೇಕು 1500 ರೂ.!

Modi in Karnataka HD Deve Gowda attack on Congess
Lok Sabha Election 202430 mins ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Lok Sabha Election 2024
ಕರ್ನಾಟಕ33 mins ago

Lok Sabha Election 2024: ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿಗೆ ಹೆಣ್ಣು ಮಕ್ಕಳು ತಕ್ಕ ಉತ್ತರ ಕೊಡಬೇಕು: ಡಿಕೆಶಿ

Job Alert
ಉದ್ಯೋಗ35 mins ago

Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Viral Video
ವೈರಲ್ ನ್ಯೂಸ್40 mins ago

Viral Video: ಎಸಿ ಕೋಚ್ ಸಿಗದಕ್ಕೆ ಸಿಟ್ಟಿಗೆದ್ದು ರೈಲಿನ ಬಾಗಿಲಿನ ಗಾಜನ್ನೇ ಪುಡಿ ಪುಡಿ ಮಾಡಿದ!

Vinay Gowda Lunch With Kichcha Sudeep
ಸಿನಿಮಾ43 mins ago

Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ!

Viral Video
ವೈರಲ್ ನ್ಯೂಸ್46 mins ago

Viral Video: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವೈರಲ್ ಆದ ವಿಡಿಯೊ

Case of bringing gun to CM Siddaramaiah Four policemen suspended
Lok Sabha Election 202453 mins ago

‌CM Siddaramaiah: ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka HD Deve Gowda attack on Congess
Lok Sabha Election 202430 mins ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20242 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ4 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ5 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

ಟ್ರೆಂಡಿಂಗ್‌