TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​ - Vistara News

Latest

TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​

TCS World 10K: ಹಾಟ್ ಫೇವರಿಟ್ ಆಗಿ ರೇಸ್ ಗೆ ಬಂದ ಮ್ವಾನಿಕಿ ಸಾಮಾನ್ಯ ಆರಂಭ ಪಡೆದರು. 7.5 ಕಿ.ಮೀ ದೂರವನ್ನು ಕ್ರಮಿಸಿದ ಅವರು ಕೀನ್ಯಾದ ಹಿಲರಿ ಚೆಪ್ಕ್ವಾನಿ ಅವರೊಂದಿಗೆ ಸಮಬಲ ಸಾಧಿಸಿದರು. ಅಂತಿಮ ಸುತ್ತಿನಲ್ಲಿ ಮ್ವಾನಿಕಿ 28:15 ಸೆಕೆಂಡುಗಳಲ್ಲಿ ಗುರಿ ತಲುಪಿದರೆ, ಹಿಲರಿ ಚೆಪ್ಕ್ವಾನಿ (28:33) ನಂತರದ ಸ್ಥಾನ ಪಡೆದರು. 17ರ ಹರೆಯದ ಹಗೋಸ್ ಐಯೋಬ್ 28:39 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದರು.

VISTARANEWS.COM


on

TCS World 10K
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ವರ್ಲ್ಡ್ 10ಕೆ ಬೆಂಗಳೂರು (TCS World 10K) ಟೂರ್ನಿಯ 16ನೇ ಆವೃತ್ತಿಯಲ್ಲಿ ಕೀನ್ಯಾದ ಪೀಟರ್ ಮ್ವಾನಿಕಿ ಪುರುಷರ ಪ್ರಶಸ್ತಿ ಗೆದ್ದರೆ, ಲಿಲಿಯನ್ ಕಸಾಯಿತ್ ಮಹಿಳಾ ಪ್ರಶಸ್ತಿ ಗೆದ್ದಿದ್ದಾರೆ. ಭಾರತದ ಎಲೈಟ್ ಅಥ್ಲೀಟ್​ಗಳ ನಡುವಿನ ಸ್ಪರ್ಧೆಯಲ್ಲಿ ಕಿರಣ್ ಮಾತ್ರೆ ಅವರು 29:32 ನಿಮಿಷದೊಂದಿಗೆ ಮೊದಲ ಸ್ಥಾನ ಗೆದ್ದು ಈವೆಂಟ್ ದಾಖಲೆಯನ್ನು ಮುರಿದರು.

ಪ್ರತಿಷ್ಠಿತ ಮ್ಯಾರಾಥಾನ್​ ನಲ್ಲಿ ಅಥ್ಲೀಟ್​​ಗಳು 1.75 ಕೋಟಿ ರೂಪಾಯಿ (210,000 ಯುಎಸ್​​ ಡಾಲರ್​) ಬಹುಮಾನ ಪಡೆದುಕೊಂಡಿದ್ದಾರೆ. ಪೀಟರ್ ಮ್ವಾನಿಕಿ ಮತ್ತು ಲಿಲಿಯನ್ ಕಸಾಯಿತ್ ತಲಾ 21,68,476 ಲಕ್ಷ ರೂಪಾಯಿ (26,000 ಯುಎಸ್​ ಡಾಲರ್​​) ಸಮಾನ ಬಹುಮಾನದ ಚೆಕ್ ಪಡೆದರು. ಭಾರತೀಯ ಎಲೈಟ್ ವಿಭಾಗದಲ್ಲಿ ಕಿರಣ್ ಮಾತ್ರೆ ಮತ್ತು ಸಂಜೀವನಿ ಜಾಧವ್ ತಲಾ 2,75,000 ರೂ. ಇದಲ್ಲದೆ, ಈವೆಂಟ್ ದಾಖಲೆಯನ್ನು ಮುರಿದಿದ್ದಕ್ಕಾಗಿ ಕಿರಣ್ ಮಾತ್ರೆ 1,00,000 ರೂ.ಗಳ ಬೋನಸ್ ಪಡೆದರು.

ಹಾಟ್ ಫೇವರಿಟ್ ಆಗಿ ರೇಸ್ ಗೆ ಬಂದ ಮ್ವಾನಿಕಿ ಸಾಮಾನ್ಯ ಆರಂಭ ಪಡೆದರು. 7.5 ಕಿ.ಮೀ ದೂರವನ್ನು ಕ್ರಮಿಸಿದ ಅವರು ಕೀನ್ಯಾದ ಹಿಲರಿ ಚೆಪ್ಕ್ವಾನಿ ಅವರೊಂದಿಗೆ ಸಮಬಲ ಸಾಧಿಸಿದರು. ಅಂತಿಮ ಸುತ್ತಿನಲ್ಲಿ ಮ್ವಾನಿಕಿ 28:15 ಸೆಕೆಂಡುಗಳಲ್ಲಿ ಗುರಿ ತಲುಪಿದರೆ, ಹಿಲರಿ ಚೆಪ್ಕ್ವಾನಿ (28:33) ನಂತರದ ಸ್ಥಾನ ಪಡೆದರು. 17ರ ಹರೆಯದ ಹಗೋಸ್ ಐಯೋಬ್ 28:39 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದರು.

TCS World 10 K

ತನ್ನ ವಿಜಯದ ಬಗ್ಗೆ ಮಾತನಾಡಿದ ಲಿಲಿಯನ್ ಕಸಾಯಿತ್, “ಇದು ತುಂಬಾ ಆಕ್ರಮಣಕಾರಿ ಓಟವಾಗಿತ್ತು, ನಾವು ಆರಂಭದಿಂದಲೂ ವೇಗವಾಗಿದ್ದೆ ಎಂದು ಹೇಳಿದ್ದಾರೆ. ಆದಾಗ್ಯೂ ದಾಖಲೆ ಮುರಿಯಲು ಸಾಧ್ಯವಾಗದಿರುವುದಕ್ಕೆ ವಿಷಾದಿಸಿದರು. ನಾನು ಇಂದು ಕೋರ್ಸ್ ದಾಖಲೆ ಮುರಿಯಬಹುದಿತ್ತು ಎಂದು ನಾನು ಭಾವಿಸುತ್ತೇನೆ. ಓಟದ ಕೊನೆಯಲ್ಲಿ ನನ್ನಲ್ಲಿ ಇನ್ನೂ ಸಾಕಷ್ಟು ಶಕ್ತಿ ಇದೆ ಎಂದು ನಾನು ಭಾವಿಸಿದೆ ಎಂದು ಹೇಳಿದ್ದಾರೆ.

ಭಾರತೀಯ ಎಲೈಟ್​​ ಪುರುಷರ ರೇಸ್ ನಲ್ಲಿ ಮೊದಲ ನಾಲ್ಕು ಸ್ಥಾನಗಳು ಹಿಂದಿನ ಕೋರ್ಸ್ ದಾಖಲೆಗಿಂತ ಮುಂದಿವೆ. ಸಮಬಲದ ಹೋರಾಟದಲ್ಲಿ ಕಿರಣ್ ಮಾತ್ರೆ 29:32 ಸೆಕೆಂಡುಗಳಲ್ಲಿ ಗುರಿ ತಲುಪಿ ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದರು. ರಂಜೀತ್ ಕುಮಾರ್ ಪಟೇಲ್ (29:35) ಮತ್ತು ಧರ್ಮೇಂದ್ರ (29:45) ಗುರಿ ತಲುಪಿದರು.
ಕಿರಣ್ ಮಾತ್ರೆ, ರಂಜೀತ್ ಕುಮಾರ್ ಪಟೇಲ್ ಮತ್ತು ಧರ್ಮೇಂದ್ರ ಅವರನ್ನೊಳಗೊಂಡ ತಂಡ ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರಿನ ಹಿಂದಿನ ಆವೃತ್ತಿಯಿಂದ ಕ್ರಮವಾಗಿ 12, 9 ಮತ್ತು 10ನೇ ಸ್ಥಾನ ಗಳಿಸಿತ್ತು.

ಇದನ್ನೂ ಓದಿ: KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

ಗೆಲುವಿನ ನಂತರ ಮಾತನಾಡಿದ ಕಿರಣ್ ಮಾತ್ರೆ, “4 ಮತ್ತು 8 ನೇ ಕಿಲೋಮೀಟರ್ ನಡುವೆ, ಓಟವು ನನಗೆ ಸಾಕಷ್ಟು ಸವಾಲಿನದ್ದಾಗಿತ್ತು, ಆದ್ದರಿಂದ ಫಲಿತಾಂಶದಿಂದ ನನಗೆ ತುಂಬಾ ಸಂತೋಷವಾಗಿದೆ. ಕಳೆದ ವರ್ಷ ನಾನು 12 ನೇ ಸ್ಥಾನವನ್ನು ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಸಂಜೀವಿನಿಗೆ ಮೂರನೇ ಗೆಲುವು

ಸಂಜೀವನಿ ಟಿಸಿಎಸ್ ವರ್ಲ್ಡ್ 10 ಕೆ ಬೆಂಗಳೂರಿನಲ್ಲಿ ನಡೆದ ಮಹಿಳಾ ವಿಭಾಗದಲ್ಲಿ ಪ್ರಾಬಲ್ಯ ಸಾಧಿಸಿ ಮೂರನೇ ಗೆಲುವು ಸಾಧಿಸಿದರು. ಅಂತರರಾಷ್ಟ್ರೀಯ ಮಹಿಳಾ ಸ್ಪರ್ಧೆಯಂತೆಯೇ, ಭಾರತೀಯ ಮಹಿಳಾ ಓಟದಲ್ಲಿ ಸೋನಮ್ (36:27) ಆರಂಭಿಕ ಮುನ್ನಡೆ ಸಾಧಿಸಿದರು. ಸಂಜೀವನಿ 34:03 ಸೆಕೆಂಡುಗಳಲ್ಲಿ ಗುರಿ ತಲುಪಿ ಮತ್ತೊಂದು ದಾಖಲೆ ನಿರ್ಮಿಸಿದರು. ಲಿಲ್ಲಿ ದಾಸ್ (34:13) ಎರಡನೇ ಸ್ಥಾನ ಪಡೆದರೆ, ಪ್ರೀತಿ ಯಾದವ್ (34:24) ಮೂರನೇ ಸ್ಥಾನ ಪಡೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

ICMR Good Health Guidelines: ಆರೋಗ್ಯವಾಗಿರಲು ಎಷ್ಟು ಗಂಟೆ ನಿದ್ದೆ ಮಾಡಬೇಕು, ಎಷ್ಟು ಗಂಟೆ ಕೆಲಸ ಮಾಡಬೇಕು? ಆಹಾರ ಏನಿರಬೇಕು?

ಆರೋಗ್ಯಕರ ಜೀವನಕ್ಕೆ ದೈಹಿಕ ಚಟುವಟಿಕೆ ಬಹುಮುಖ್ಯ. ಜೊತೆಗೆ ವಿಶ್ರಾಂತಿಯು ಬೇಕು. ಇದಕ್ಕಾಗಿ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತನ್ನ ಮಾರ್ಗಸೂಚಿಯಲ್ಲಿ (ICMR  Good Health Guidelines) ಏನು ಹೇಳಿದೆ ಗೊತ್ತೇ? ನಿತ್ಯ ಜೀವನದಲ್ಲಿ ಪಾಲಿಸಲೇಬೇಕಾದ ಉಪಯುಕ್ತ ಸಲಹೆಗಳ ಪಟ್ಟಿ ಇಲ್ಲಿದೆ.

VISTARANEWS.COM


on

By

ICMR  Good Health Guidelines
Koo

ಆರೋಗ್ಯವಾಗಿರಲು (helathy) ದೈಹಿಕ ಚಟುವಟಿಕೆಯೊಂದಿಗೆ (activity) ಸರಿಯಾಗಿ ವಿಶ್ರಾಂತಿ (rest) ಪಡೆಯುವುದು ಬಹುಮುಖ್ಯ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR  Good Health Guidelines) ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ. ದಿನಕ್ಕೆ ಎಂಟು ಗಂಟೆಗಳ ನಿದ್ರೆ ಮತ್ತು ಎಂಟು ಗಂಟೆಗಳ ಕೆಲಸವನ್ನು ಅದು ಶಿಫಾರಸು ಮಾಡಿದೆ.

ಮಕ್ಕಳು ಮತ್ತು ಹದಿಹರೆಯದವರು (children and youth) ದಿನಕ್ಕೆ ಕನಿಷ್ಠ 60 ನಿಮಿಷಗಳ ವರೆಗೆ ಮಧ್ಯಮದಿಂದ ಹುರುಪಿನ ವ್ಯಾಯಾಮ ನಡೆಸಬೇಕು. ಅದೇ ರೀತಿ ವಯಸ್ಕರು (aged) ವಾರದಲ್ಲಿ ಕನಿಷ್ಠ ಐದು ದಿನಗಳವರೆಗೆ ದಿನಕ್ಕೆ 30- 60 ನಿಮಿಷಗಳ ಮಧ್ಯಮ-ತೀವ್ರತೆಯ ಏರೋಬಿಕ್ ವ್ಯಾಯಾಮ ಅಥವಾ 15 ನಿಮಿಷಗಳ ತೀವ್ರವಾದ- ತೀವ್ರತೆಯ ಏರೋಬಿಕ್ ವ್ಯಾಯಾಮವನ್ನು ನಡೆಸಲು ಐಸಿಎಂಆರ್ ಶಿಫಾರಸು ಮಾಡಿದೆ.

ಯಾಕೆ?

ಪ್ರತಿ ನಿತ್ಯ ಯೋಗ, ದೈಹಿಕ ವ್ಯಾಯಾಮ ಮಾಡುವುದರಿಂದ ಒಳ್ಳೆಯ ಆರೋಗ್ಯ ಮತ್ತು ಆರೋಗ್ಯಕರ ಜೀವನವನ್ನು ನಡೆಸಬಹುದು. ಇದು ದೇಹದ ತೂಕ ಕಾಪಾಡಲು, ಮಾಂಸಖಂಡಗಳ ಶಕ್ತಿ ವೃದ್ಧಿಸಲು, ಎಲುಬಿನ ಆರೋಗ್ಯ, ಕೀಲುಗಳ ಜೋಡಣೆಯನ್ನು ಆರೋಗ್ಯವಾಗಿ ಇರಿಸುತ್ತದೆ. ನಿತ್ಯವೂ ಯೋಗ, ದೈಹಿಕ ಚಟುವಟಿಕೆ ನಡೆಸುವುದರಿಂದ ದೀರ್ಘಕಾಲದ ಕೆಲವು ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಬಹುದು.

ಯಾವ ರೀತಿ?

ನಡಿಗೆ, ಜಿಮ್, ಸ್ವಿಮ್ಮಿಂಗ್, ಜಾಗಿಂಗ್, ಸ್ಕಿಪ್ಪಿಂಗ್, ಸೈಕ್ಲಿಂಗ್ ಮೊದಲಾದವುಗಳಲ್ಲಿ ಯಾವುದಾದರೂ ಒಂದೆರಡನ್ನು ನಮ್ಮ ನಿತ್ಯದ ಚಟುವಟಿಕೆಯಲ್ಲಿ ಅಳವಡಿಸಿಕೊಳ್ಳಬೇಕು. ಇದರೊಂದಿಗೆ ಪ್ರಾಣಾಯಾಮ, ಧ್ಯಾನವನ್ನು ಅಳವಡಿಸಿಕೊಳ್ಳಲು ಐಸಿಎಂಆರ್ ಸೂಚಿಸಿದೆ.

ಅಲ್ಲದೇ ಮನೆ ಕೆಲಸ, ಮನೆ ಸುತ್ತಮುತ್ತ ಸುತ್ತಾಡೋದು, ಮೆಟ್ಟಿಲುಗಳನ್ನು ಹತ್ತಿ ಇಳಿಯೋದು, ಉದ್ಯಾನ ಕೆಲಸಗಳು, ಹೊರಾಂಗಣ, ಒಳಾಂಗಣ ಕ್ರೀಡೆಗಳನ್ನು ಸೇರಿಸಿಕೊಳ್ಳಬೇಕು. ಕಾರ್ಡಿಯೋ ಚಟುವಟಿಕೆಗಳನ್ನು ನಡೆಸಲು ಮರೆಯದಿರಿ.

ವೈದ್ಯರನ್ನು ನೋಡಿ

ದೈಹಿಕ ಚಟುವಟಿಕೆ ಎಷ್ಟೇ ಮಾಡಿದರೂ ಅನಾರೋಗ್ಯ ಕಾಡಿದಾಗ ವೈದ್ಯರನ್ನು ಕಾಣಲೇಬೇಕು. ಅದರಲ್ಲೂ ಮುಖ್ಯವಾಗಿ ಉಸಿರಾಟದ ತೊಂದರೆ, ದೇಹದ ಭಾಗದಲ್ಲಿ ನೋವು, ವಾಕರಿಕೆ, ಸುಸ್ತು, ತಲೆನೋವು ಕಡಿದಾಗ ದೇಹಕ್ಕೆ ವಿಶ್ರಾಂತಿಯನ್ನು ಬಯಸುತ್ತದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ


ಯಾವುದು ಎಷ್ಟು ಚಟುವಟಿಕೆ ಬೇಕು?

ನಿದ್ದೆ 8 ಗಂಟೆ, ಕಚೇರಿ ಕೆಲಸ – 8 ಗಂಟೆ, ಮನೆ ಕೆಲಸ- 3.30 ಗಂಟೆ, ತಿನ್ನುವುದು, ಟಿವಿ ನೋಡುವುದು, ತಮ್ಮನ್ನು ತಾವು ತಯಾರಿ ಮಾಡುವುದಕ್ಕೆ- 3 ಗಂಟೆ, ವ್ಯಾಯಾಮ- 60 ನಿಮಿಷ, ಏರೋಬಿಕ್ ವ್ಯಾಯಾಮ- 20 ನಿಮಿಷವನ್ನು ಮೀಸಲಿಡುವಂತೆ ಐಸಿಎಂಆರ್ ಸೂಚಿಸಿದೆ.

ಊಟ, ಉಪಾಹಾರದಲ್ಲಿ ಏನಿರಬೇಕು?

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಕಡಿಮೆ ಚಟುವಟಿಕೆ ಹೊಂದಿರುವ ಪುರುಷರು ಮತ್ತು ಮಹಿಳೆಯರು ಆಹಾರದಲ್ಲಿ (food) ಪೌಷ್ಟಿಕಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದ್ದು, ಇದಕ್ಕಾಗಿ ಇಂಥವರು ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಐಸಿಎಂಆರ್ ಪ್ರಕಾರ ಕಡಿಮೆ ಚಟುವಟಿಕೆ ಹೊಂದಿರುವ ಪುರುಷರ ಉಪಾಹಾರದಲ್ಲಿ ನೆನೆಸಿದ ಮತ್ತು ಬೇಯಿಸಿದ ಬಜ್ರಾ 90 ಗ್ರಾಂ ಮತ್ತು ತರಕಾರಿಗಳು 50 ಗ್ರಾಂ ಒಳಗೊಂಡಿರಬೇಕು. ಅದೇ ರೀತಿ ಮಹಿಳೆಯರಿಗೆ ನೆನೆಸಿದ ಮತ್ತು ಬೇಯಿಸಿದ ಬಜ್ರಾವನ್ನು ಉಪಾಹಾರದಲ್ಲಿ 60 ಗ್ರಾಂ ಮತ್ತು ತರಕಾರಿಗಳು 100 ಗ್ರಾಂ ಸೇರಿಸಿಕೊಳ್ಳಬೇಕು.

ಮಧ್ಯಾಹ್ನದ ಊಟದಲ್ಲಿ ಪುರುಷರು ಧಾನ್ಯಗಳನ್ನು 100 ಗ್ರಾಂ ಮತ್ತು ಬೇಳೆಕಾಳುಗಳು 30 ಗ್ರಾಂ, ಮಹಿಳೆಯರು ಮಧ್ಯಾಹ್ನದ ಊಟದಲ್ಲಿ ಧಾನ್ಯಗಳು 80 ಗ್ರಾಂ ಮತ್ತು ದ್ವಿದಳ ಧಾನ್ಯಗಳನ್ನು 20 ಗ್ರಾಂ ತೆಗೆದುಕೊಳ್ಳಬಹುದು. ಸಂಜೆ ಇಬ್ಬರಿಗೂ 50 ಮಿಲಿ ಲೀಟರ್ ಹಾಲು ಕುಡಿಯಲು ಸೂಚಿಸಲಾಗುತ್ತದೆ.

Continue Reading

ಪ್ರಮುಖ ಸುದ್ದಿ

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಆರ್​ಸಿಬಿ ಮೊದಲು ಬ್ಯಾಟಿಂಗ್​ಗೆ ಆಹ್ವಾನ ಪಡೆಯಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 187 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಡೆಲ್ಲಿ ತಂಡ 19.1 ಓವರ್​ಗಳಲ್ಲಿ 140 ರನ್​ಗೆ ಆಲ್​ಔಟ್ ಆಯಿತು. ಡೆಲ್ಲಿ ತಂಡಕ್ಕೆ ಇದು 13 ಪಂದ್ಯಗಳಲ್ಲಿ 7ನೇ ಸೋಲಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಸಂಘಟಿತ ಹೋರಾಟ ನೀಡಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (Royal Challengers Banglore) ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ದ 47 ರನ್​ಗಳ ಗೆಲುವು ದಾಖಲಿಸಿದೆ. ಇದು ಆರ್​ಸಿಬಿಗೆ ಹಾಲಿ ಆವೃತ್ತಿಯಲ್ಲಿ ದೊರಕಿದ ಸತತ ಐದನೇ ಹಾಗೂ ಒಟ್ಟು 6ನೇ ಗೆಲುವಾಗಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಫಾಫ್​ ಡು ಪ್ಲೆಸಿಸ್ ಬಳಗ ಪ್ಲೇಆಫ್ ಹಂತಕ್ಕೆ ಏರಬೇಕಾದರೆ ಇನ್ನೊಂದು ಕಡ್ಡಾಯ ಗೆಲುವು ಹಾಗೂ ಇನ್ನೊಂದಿಷ್ಟು ಉಳಿದ ತಂಡಗಳ ಪಂದ್ಯಗಳ ಲೆಕ್ಕಾಚಾರ ಅಗತ್ಯವಿದೆ. ಆದರೆ ಆರ್​ಸಿಬಿ ತಂಡ ಕಳೆದ ಕೆಲವು ಪಂದ್ಯಗಳಲ್ಲಿ ಆಡುತ್ತಿರುವ ರೀತಿ ಮಾತ್ರ ಅಭಿಮಾನಿಗಳಿಗೆ ಸಂತಸ ಉಂಟು ಮಾಡಿದೆ. ಅದೇ ರೀತಿ ಆಟಗಾರರಿಗೆ ಅತಿ ಹೆಚ್ಚು ಉತ್ಸಾಹವನ್ನು ನೀಡಿದೆ. ಅಂತೆಯೇ ತವರಿನ ಮೈದಾನದಲ್ಲಿ ಗೆದ್ದಿರುವುದು ಗೆದ್ದಿರುವುದು ಇಡೀ ಆರ್​ಸಿಬಿ ಪಾಳೆಯದ ಖುಷಿ ಹೆಚ್ಚಿಸಿದೆ.

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಆರ್​ಸಿಬಿ ಮೊದಲು ಬ್ಯಾಟಿಂಗ್​ಗೆ ಆಹ್ವಾನ ಪಡೆಯಿತು. ಅಂತೆಯೇ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 187 ರನ್​ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಡೆಲ್ಲಿ ತಂಡ 19.1 ಓವರ್​ಗಳಲ್ಲಿ 140 ರನ್​ಗೆ ಆಲ್​ಔಟ್ ಆಯಿತು. ಡೆಲ್ಲಿ ತಂಡಕ್ಕೆ ಇದು 13 ಪಂದ್ಯಗಳಲ್ಲಿ 7ನೇ ಸೋಲಾಗಿದೆ.

ಇದನ್ನೂ ಓದಿ: Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

ಮೊದಲು ಬ್ಯಾಟ್ ಮಾಡಿದ ಆರ್​​ಸಿಬಿಗೆ ಉತ್ತಮ ಆರಂಭ ದೊರೆಯಲಿಲ್ಲ. ಫಾಫ್​​ ಡು ಪ್ಲೆಸಿಸ್ ಮತ್ತೆ 6 ರನ್​ಗೆ ಔಟಾದರು. ಅದೇ ರೀತಿ ಉತ್ತಮ ರೀತಿಯಲ್ಲಿ ಬ್ಯಾಟ್​ ಮಾಡುತ್ತಿದ್ದ ವಿರಾಟ್ ಕೊಹ್ಲಿ 27 ರನ್​ಗೆ ವಿಕೆಟ್ ಒಪ್ಪಿಸಿದರು. ಬಳಿಕ ರಜತ್​ ಪಾಟೀದಾರ್​ ಮತ್ತೊಂದು ಅದ್ಭುತ ಪ್ರದರ್ಶನ ನೀಡಿದರು. ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ದ ಅವರು 32 ಎಸೆತಕ್ಕೆ 52 ರನ್​ ಬಾರಿಸಿದರು. ಅವರಿಗೆ ವಿಕ್​ ಜ್ಯಾಕ್ಸ್ ಉತ್ತಮ ಜತೆಯಾಟ ನೀಡಿ 29 ಎಸೆತಕ್ಕೆ 41 ರನ್ ಬಾರಿಸಿ 100 ರನ್ ಗಡಿ ದಾಟಲು ಸಹಾಯ ಮಾಡಿದರು. ಇವರಿಬ್ಬರು ಔಟಾದ ಬಳಿಕ ಆರ್​ಸಿಬಿ ಆಟ ಹೆಚ್ಚು ಹೊತ್ತು ನಡೆಯಲಿಲ್ಲ. ಕ್ಯಾಮೆರೂನ್ ಗ್ರೀನ್​ 32 ರನ್ ಬಾರಿಸಿ ಸ್ಪರ್ಧಾತ್ಮಕ ಮೊತ್ತ ಪೇರಿಸಲು ನೆರವಾದರು. ಮಹಿಪಾಲ್​ ಲಾಮ್ರೋರ್​ 13 ರನ್ ಬಾರಿಸಿದರು.

ಡೆಲ್ಲಿಯ ಕುಸಿತ

ಅರ್​ಸಿಬಿ ತಂಡ ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿತು. ಜತೆಗೆ ಅದೃಷ್ಟವೂ ಆರ್​ಸಿಬಿಯ ಪರವಾಗಿತ್ತು. ಡೇವಿಡ್​ ವಾರ್ನರ್​ 1 ರನ್​ ಗೆ ಔಟಾರೆ ಜೇಕ್​ ಫ್ರೇಸರ್ ಮೆಗ್​ಕುರ್ಕ್​ 21 ರನ್ ಬಾರಿಸಿದ ಹೊರತಾಗಿಯೂ ದುರದೃಷ್ಟದ ರನ್​ಔಟ್​ಗೆ ಒಳಗಾಯಿತು. ಶಾಯ್​ ಹೋಪ್​ 29 ರನ್ ಗೆ ಔಟಾದರೆ ಅಭಿಷೇಕ್​ ಪೊರೆಲ್​ 1ರನ್​ ಗೆ ಸೀಮಿತಗೊಂಡರು. ವಿಕೆಟ್​ಗಳು ಉರುಳುತ್ತಿರುವ ನಡುವೆಯೂ ಹಂಗಾಮಿ ನಾಯಕ ಅಕ್ಷರ್​ ಪಟೇಲ್​ 39 ಎಸೆತಕ್ಕೆ 57 ರನ್ ಬಾರಿಸಿದರು. ಅವರು ಇನಿಂಗ್ಸ್ ಆರ್​ಸಿಬಿಗೆ ಭಯ ಉಂಟು ಮಾಡಿದರೂ ಒತ್ತಡದ ನಡುವೆ ಅವರು ಔಟಾದರು.

ಆರ್​ಸಿಬಿ ಪರ ಯಶ್​ ದಯಾಳ್​ 20 ರನ್​ಗೆ 3 ವಿಕೆಟ್​ ಪಡೆದರೆ ಲಾಕಿ ಫರ್ಗ್ಯೂಸನ್​ 23 ರನ್​ ಗೆ 2 ವಿಕೆಟ್​ ಪಡೆದರು.

Continue Reading

Latest

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Virar kohli: ಮೊಹಮ್ಮದ್ ಸಿರಾಜ್ ಅವರ ಸ್ವಿಂಗ್ ಯಾರ್ಕರ್ ಆಡಲು ಪೊರೆಲ್ ತಮ್ಮ ಬ್ಯಾಟ್ ಅನ್ನು ಅಡ್ಡವಿಟ್ಟರು. ಆರ್​ಸಿಬಿ ಕ್ರಿಕೆಟಿಗರಿಗೆ ಚೆಂಡು ಸ್ಟಂಪ್​​ಗಳ ಮುಂದೆ ಅವರ ಪ್ಯಾಡ್​ಗಳಿಗೆ ಹೊಡೆದಿದೆ ಎಂದು ಮನವರಿಕೆಯಾಯಿತು. ಅವರು ಡಿಆರ್​ಎಸ್​ ಪರಿಶೀಲನೆಗೆ ಮುಂದಾದರು. ಮೂರನೇ ಅಂಪೈರ್ ಚೆಂಡು ಅವರ ಬ್ಯಾಟ್​ಗೆ ತಾಗಿದೆ ಎಂದು ನಿರ್ಧರಿಸಿದರು. ಡೆಲ್ಲಿ ಪರವಾಗಿ ತೀರ್ಪು ನೀಡಿದರು. ಹೀಗಾಗಿ ಕೊಹ್ಲಿ ಕೆರಳಿದರು.

VISTARANEWS.COM


on

Virat kohli
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ 2024 ರ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಕೋಪಗೊಂಡ ಪ್ರಸಂಗ ನಡೆಯಿತು. ವಿವಾದಾತ್ಮಕ ಅಂಪೈರ್ ನಿರ್ಧಾರದ ಬಗ್ಗೆ ಆನ್ ಫೀಲ್ಡ್ ಅಂಪೈರ್ ಜೊತೆ ಅವರು ತೀವ್ರ ವಾಗ್ವಾದ ನಡೆಸಿದರು. ಅಭಿಷೇಕ್ ಪೊರೆಲ್ ಅವರಿಗೆ ನೀಡಲಾದ ಎಲ್​ಬಿಡಬ್ಲ್ಯು ನಿರ್ಧಾರದ ವಿರುದ್ಧ ಕೊಹ್ಲಿ ಸಿಡಿದೆದ್ದರು. ಡಿಸಿ ರನ್ ಚೇಸ್​ನ ಎರಡನೇ ಇನ್ನಿಂಗ್ಸ್​ನಲ್ಲಿ ಈ ಘಟನೆ ನಡೆದಿದೆ.

ಮೊಹಮ್ಮದ್ ಸಿರಾಜ್ ಅವರ ಸ್ವಿಂಗ್ ಯಾರ್ಕರ್ ಆಡಲು ಪೊರೆಲ್ ತಮ್ಮ ಬ್ಯಾಟ್ ಅನ್ನು ಅಡ್ಡವಿಟ್ಟರು. ಆರ್​ಸಿಬಿ ಕ್ರಿಕೆಟಿಗರಿಗೆ ಚೆಂಡು ಸ್ಟಂಪ್​​ಗಳ ಮುಂದೆ ಅವರ ಪ್ಯಾಡ್​ಗಳಿಗೆ ಹೊಡೆದಿದೆ ಎಂದು ಮನವರಿಕೆಯಾಯಿತು. ಅವರು ಡಿಆರ್​ಎಸ್​ ಪರಿಶೀಲನೆಗೆ ಮುಂದಾದರು. ಮೂರನೇ ಅಂಪೈರ್ ಚೆಂಡು ಅವರ ಬ್ಯಾಟ್​ಗೆ ತಾಗಿದೆ ಎಂದು ನಿರ್ಧರಿಸಿದರು. ಡೆಲ್ಲಿ ಪರವಾಗಿ ತೀರ್ಪು ನೀಡಿದರು. ಹೀಗಾಗಿ ಕೊಹ್ಲಿ ಕೆರಳಿದರು. ಅವರು ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಜತೆ ಸೇರಿ ಅಂಪೈರ್ ಜತೆ ಜಗಳಕ್ಕೆ ನಿಂತರು. ವಿಷಯದ ಬಗ್ಗೆ ಅಂಪೈರ್​ಗಳ ಜತೆ ಸುದೀರ್ಘ ಚರ್ಚೆ ನಡೆಸಿದರು.

ಇದನ್ನೂ ಓದಿ: Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

ಕೊಹ್ಲಿಯನ್ನುಔಟ್ ಮಾಡಿ ಕೆಣಕಿದ ಇಶಾಂತ್​ ಶರ್ಮಾ


ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ (ಮೇ 12) ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಪಂದ್ಯದಲ್ಲಿ (IPL 2024) ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಮತ್ತು ಇಶಾಂತ್ ಶರ್ಮಾ (Ishant Sharma) ನಡುವೆ ಗೆಳೆತನದ ಜಟಾಪಟಿ ನಡೆಯಿತು. ಈ ವಿಡಿಯೊ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯಿತು. ವಿರಾಟ್ ಕೊಹ್ಲಿ ಇಶಾಂತ್ ಶರ್ಮಾ ಅವರ ಬೌಲಿಂಗ್​ನಲ್ಲಿ ಅಬ್ಬರಿಸಿದ ಕೊಹ್ಲಿ ಆರ್​ಸಿಬಿಗೆ ನೆರವಾಗಲು ಮುಂದಾದರು. ಆದರೆ ಫಾರ್ಮ್ ನಲ್ಲಿರುವ ಬ್ಯಾಟ್ಸ್ ಮನ್ ಅನ್ನು ಔಟ್ ಮಾಡುವಲ್ಲಿ ಇಶಾನ್​ ಯಶಸ್ವಿಯಾದರು. ಆರ್​​ಸಿಬಿ ಇನ್ನಿಂಗ್ಸ್​​ನ ನಿದಕ ಓವರ್​ನಲ್ಲಿಯೇ ವಿರಾಟ್ ಕೊಹ್ಲಿ ಇಶಾಂತ್ ಶರ್ಮಾ ಅವರ ಎಸೆತಕ್ಕೆ ಹೊಡೆಯುವ ಮೂಲಕ ಮಿಂಚಿದ್ದರು.

ಭಾರತದ ಮಾಜಿ ನಾಯಕ ಇನ್ನಿಂಗ್ಸ್​ನ ಎರಡನೇ ಮತ್ತು ನಾಲ್ಕನೇ ಎಸೆತವನ್ನು ಎಸೆಯಲು ಬಂದಾಗ ವೇಗಿ ಇಶಾಂತ್ ವಿರುದ್ಧ ಆಕ್ರಮಣ ಮಾಡಲು ನಿರ್ಧರಿಸಿದರು. ಓವರ್​ನ ಮೊದಲ ಎಸೆತದಲ್ಲಿ, ಕೊಹ್ಲಿ ಎಸೆತ ಬ್ಯಾಟ್​ನ ಅಂಚಿಗೆ ತಾಗಿತು. ಅದೃಷ್ಟವಶಾತ್ ಅದು ವಿಕೆಟ್ ಕೀಪರ್​ಗಿಂತ ದೂರ ಹೋಯಿತು. ಕೊಹ್ಲಿಗೆ ನಾಲ್ಕು ರನ್​ಗಳು ಸಿಕ್ಕವು. ಈ ವೇಳೆ ಇಬ್ಬರೂ ಆಟಗಾರರು ಕೆಲವು ಮಾತುಗಳನ್ನು ವಿನಿಮಯ ಮಾಡಿಕೊಳ್ಳುತ್ತಿರುವುದು ಕಂಡುಬಂದಿತು.


ಎರಡನೇ ಎಸೆತದಲ್ಲಿ ಕೊಹ್ಲಿ ಇಶಾಂತ್ ಶರ್ಮಾಗೆ ಸಿಕ್ಸರ್ ಬಾರಿಸಿದರು. ಬಲಗೈ ವೇಗಿ ನಂತರದ ಎಸೆತವನ್ನು ಹಾಗೆಯೇ ಬಿಟ್ಟರು.ಆದರೆ, ಓವರ್​ನ ನಾಲ್ಕನೇ ಎಸೆತದಲ್ಲಿ ಕೊಹ್ಲಿಯನ್ನು ಇಶಾಂತ್​​ ಔಟ್ ಮಾಡಿದರು. ಕೊಹ್ಲಿ ಡ್ರೈವ್ ಗೆ ಹೋದರು ಆದರೆ ಅಂತಿಮವಾಗಿ ಬ್ಯಾಟ್​ಗೆ ತಾಗಿದ ಚೆಂಡು ವಿಕೆಟ್ ಕೀಪರ್ ಹಿಡಿದರು.

Continue Reading

ಪ್ರಮುಖ ಸುದ್ದಿ

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

Sunil Narine: ಪವರ್​​ಪ್ಲೇನಲ್ಲಿ ಆರಂಭಿಕ ಆಟಗಾರ ಇಶಾನ್ ಕಿಶನ್ ಅವರ ವಿಕೆಟ್ ಪಡೆದ ನಂತರ, ಸ್ಪಿನ್ನರ್ ಐಪಿಎಲ್ ಇತಿಹಾಸದಲ್ಲಿ 400 ರನ್ ಮತ್ತು 15 ವಿಕೆಟ್ ಪಡೆದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪ್ರಸಕ್ತ ಋತುವಿನಲ್ಲಿ ನರೈನ್ 461 ರನ್ ಮತ್ತು 15 ವಿಕೆಟ್ ಪಡೆದಿದ್ದಾರೆ.

VISTARANEWS.COM


on

Sunil Narine
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024) ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ, ಕೋಲ್ಕತಾ ನೈಟ್ ರೈಡರ್ಸ್ ತಂಡದ ಆಲ್​ರೌಂಡರ್​ ಸುನಿಲ್ ನರೈನ್ (Sunil Narine) ಶೇನ್ ವ್ಯಾಟ್ಸನ್ ಮತ್ತು ಜಾಕ್ ಕಾಲಿಸ್ ನಂತರ ಒಂದೇ ಋತುವಿನಲ್ಲಿ 400 ರನ್ ಮತ್ತು 15 ವಿಕೆಟ್ ಪಡೆದ ಮೂರನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈಡನ್ ಗಾರ್ಡನ್ಸ್​ ಸ್ಟೇಡಿಯಮ್​ನಲ್ಲಿ ಶನಿವಾರ ನಡೆದ ಐಪಿಎಲ್ 2024 ರ ಮುಖಾಮುಖಿಯಲ್ಲಿ ಕೆಕೆಆರ್ ಸ್ಪಿನ್ನರ್​​​ಗಳು ಅದ್ಭುತ ಪ್ರಯತ್ನ ನಡೆಸಿದರು ಈ ವೇಳೆ ಸುನೀಲ್​ ನರೈನ್ ಅಮೋಘ ಸಾಧನೆ ಮಾಡಿದರು.

ಮುಂಬೈ ಇಂಡಿಯನ್ಸ್ 158 ರನ್​​ಗಳ ರನ್ ಚೇಸ್ ಮಾಡಲು ಮುಂದಾದಾಗ ನರೈನ್ ಸೇರದಂತೆ ಸ್ಪಿನ್ನರ್​ಗಳು ಹಳಿ ತಪ್ಪಿಸಿದರು. ಅವರನ್ನು 16 ಓವರ್ಗಳಲ್ಲಿ 139/8 ಕ್ಕೆ ಸೀಮಿತಗೊಳಿಸಿದರು. ಮತ್ತು ಎರಡು ಬಾರಿಯ ಚಾಂಪಿಯನ್ಸ್ ಕೆಕೆಆರ್​ ಪ್ಲೇಆಫ್ ತಲುಪಿದ ಮೊದಲ ತಂಡವಾಯಿತು.

ಈ ಮೊದಲು ಮಳೆಯಿಂದ ಪಂದ್ಯವನ್ನು 16 ಓವರ್​ಗಳ ಪಂದ್ಯವನ್ನಾಗಿ ಮಾಡಲು ನಿರ್ಧರಿಸಲಾಗಿತ್ತು. ಐಪಿಎಲ್ 2024 ರ 60 ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ವಿರುದ್ಧ ನರೈನ್ ತಮ್ಮ ಮೂರು ಓವರ್​ಗಳಲ್ಲಿ ಒಂದು ವಿಕೆಟ್ ಪಡೆದರು. ಪವರ್​​ಪ್ಲೇನಲ್ಲಿ ಆರಂಭಿಕ ಆಟಗಾರ ಇಶಾನ್ ಕಿಶನ್ ಅವರ ವಿಕೆಟ್ ಪಡೆದ ನಂತರ, ಸ್ಪಿನ್ನರ್ ಐಪಿಎಲ್ ಇತಿಹಾಸದಲ್ಲಿ 400 ರನ್ ಮತ್ತು 15 ವಿಕೆಟ್ ಪಡೆದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪ್ರಸಕ್ತ ಋತುವಿನಲ್ಲಿ ನರೈನ್ 461 ರನ್ ಮತ್ತು 15 ವಿಕೆಟ್ ಪಡೆದಿದ್ದಾರೆ.

ಐಪಿಎಲ್ 2008ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ವಾಟ್ಸನ್ (472 ರನ್, 17 ವಿಕೆಟ್) ಹಾಗೂ 2012ರ ಐಪಿಎಲ್ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪರ ಕಾಲಿಸ್ (409 ರನ್, 15 ವಿಕೆಟ್) ಈ ಸಾಧನೆ ಮಾಡಿದ್ದಾರೆ.

IPL 2024 : ಕೆಕೆಆರ್ ತಂಡದ ಇನ್ನೊಬ್ಬ ಆಟಗಾರನಿಗೆ ದಂಡ ವಿಧಿಸಿದ ಬಿಸಿಸಿಐ

ಇಲ್ಲಿನ ಈಡನ್ ಗಾರ್ಡನ್ಸ್​ನಲ್ಲಿ ಮೇ 11 ರಂದು ನಡೆದ ಐಪಿಎಲ್ 2024 ರ 60 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧ 18 ರನ್​ಗಳ ಗೆಲುವು ಸಾಧಿಸಿದ ಸಂದರ್ಭದಲ್ಲಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಬ್ಯಾಟ್ಸ್ಮನ್ ರಮಣ್​ದೀಪ್​ ಸಿಂಗ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.20 ರ ಪ್ರಕಾರ ರಮಣ್​​ದೀಪ್​ ಲೆವೆಲ್ 1 ಅಪರಾಧವನ್ನು ಮಾಡಿದ್ದಾರೆ ಎಂದು ಸಾಬೀತಾಗಿದೆ. ಈ ಅಪರಾಧಕ್ಕಾಗಿ ಕೆಕೆಆರ್ ಬ್ಯಾಟರ್​ಗೆ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕೃತ ಹೇಳಿಕೆಯಲ್ಲಿ ದೃಢಪಡಿಸಿದೆ.

27 ವರ್ಷದ ಆಟಗಾರ ಅಪರಾಧ ಒಪ್ಪಿಕೊಂಡಿದ್ದಾರೆ. ಮ್ಯಾಚ್ ರೆಫರಿ ವಿಧಿಸಿದ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಮ್ಯಾಚ್ ರೆಫರಿ ತೆಗೆದುಕೊಂಡ ನಿರ್ಧಾರಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ.

Continue Reading
Advertisement
Prajwal Revanna Case HD Revanna jailed
ಪ್ರಮುಖ ಸುದ್ದಿ5 mins ago

HD Revanna Jailed: ಇಂದು ಏನಾಗುತ್ತೆ ಎಚ್‌ಡಿ ರೇವಣ್ಣ ಭವಿಷ್ಯ? ಜಾಮೀನು ಅರ್ಜಿ ಮತ್ತೆ ವಿಚಾರಣೆ

ICMR  Good Health Guidelines
ಆರೋಗ್ಯ7 mins ago

ICMR Good Health Guidelines: ಆರೋಗ್ಯವಾಗಿರಲು ಎಷ್ಟು ಗಂಟೆ ನಿದ್ದೆ ಮಾಡಬೇಕು, ಎಷ್ಟು ಗಂಟೆ ಕೆಲಸ ಮಾಡಬೇಕು? ಆಹಾರ ಏನಿರಬೇಕು?

Lok Sabha Election
ದೇಶ39 mins ago

Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ ಆರಂಭ; ʻಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿʼ ಎಂದ ಮೋದಿ

elephant attack charmadi ghat
ವೈರಲ್ ನ್ಯೂಸ್57 mins ago

Elephant Attack: ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ; ಬೆಚ್ಚಿಬಿದ್ದ ಡ್ರೈವರ್‌ನಿಂದ ಅಪಘಾತ!

karnataka weather forecast karnataka rains
ಮಳೆ2 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ3 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case
ಕರ್ನಾಟಕ8 hours ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ9 hours ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Chetan Chandra
ಕರ್ನಾಟಕ9 hours ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest9 hours ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather forecast karnataka rains
ಮಳೆ2 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ3 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ14 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ14 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ15 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ18 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ19 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

ಟ್ರೆಂಡಿಂಗ್‌