Team India: ಆಸೀಸ್​ ಪ್ರವಾಸದಲ್ಲಿ 2 ದಿನಗಳ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಆಡಲಿದೆ ಭಾರತ ತಂಡ - Vistara News

ಕ್ರೀಡೆ

Team India: ಆಸೀಸ್​ ಪ್ರವಾಸದಲ್ಲಿ 2 ದಿನಗಳ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಆಡಲಿದೆ ಭಾರತ ತಂಡ

Team India: ಭಾರತ ತಂಡವು ನವೆಂಬರ್ 30 ಮತ್ತು ಡಿಸೆಂಬರ್ 1 ರಂದು ಕ್ಯಾನ್‌ಬೆರಾದ ಮನುಕಾ ಓವಲ್‌ ನಲ್ಲಿ ಪ್ರಧಾನ ಮಂತ್ರಿ ಇಲೆವೆನ್ ವಿರುದ್ಧ ಹಗಲು-ರಾತ್ರಿ ಅಭ್ಯಾಸ ಪಂದ್ಯವನ್ನು ಆಡಲಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಮ್ಮ ವೆಬ್‌ಸೈಟ್‌ ನಲ್ಲಿ ತಿಳಿಸಿದೆ.

VISTARANEWS.COM


on

Team India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಇದೇ ವರ್ಷಾಂತ್ಯದಲ್ಲಿ ನಡೆಯುವ ಭಾರತ ಮತ್ತು ಆಸ್ಟ್ರೇಲಿಯಾ(IND vs AUS) ನಡುವಣ ಟೆಸ್ಟ್​ ಸರಣಿಯಲ್ಲಿ ಭಾರತವು(Team India) ಎರಡು ದಿನಗಳ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಆಡಲಿದೆ ಎಂದು ವರದಿಯಾಗಿದೆ. ನವೆಂಬರ್‌ 22ರಿಂದ ಆಸೀಸ್‌ ವಿರುದ್ದದ ಐದು ಟೆಸ್ಟ್‌(IND vs AUS Test series 2024-25) ಪಂದ್ಯಗಳ ಬಾರ್ಡರ್‌–ಗಾವಸ್ಕರ್‌(border gavaskar trophy) ಟ್ರೋಫಿ ಆರಂಭವಾಗಲಿದೆ. ಈ ಸರಣಿಯು ಜನವರಿ 7ರವರೆಗೆ ನಡೆಯಲಿದೆ.

ಭಾರತ 1991-92ರ ಬಳಿಕ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯದಲ್ಲಿ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನಾಡಲಿದೆ. ಭಾರತ ತಂಡವು ನವೆಂಬರ್ 30 ಮತ್ತು ಡಿಸೆಂಬರ್ 1 ರಂದು ಕ್ಯಾನ್‌ಬೆರಾದ ಮನುಕಾ ಓವಲ್‌ ನಲ್ಲಿ ಪ್ರಧಾನ ಮಂತ್ರಿ ಇಲೆವೆನ್ ವಿರುದ್ಧ ಹಗಲು-ರಾತ್ರಿ ಅಭ್ಯಾಸ ಪಂದ್ಯವನ್ನು ಆಡಲಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಮ್ಮ ವೆಬ್‌ಸೈಟ್‌ ನಲ್ಲಿ ತಿಳಿಸಿದೆ. 1991-92ರಲ್ಲಿ ನಡೆದಿದ್ದ 5 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಆಸ್ಟ್ರೇಲಿಯಾ 4-0 ಅಂತರದ ಗೆಲುವು ಸಾಧಿಸಿತ್ತು.

5 ಪಂದ್ಯಗಳ ಈ ಟೆಸ್ಟ್​ ಸರಣಿ ನವೆಂಬರ್ 22ರಿಂದ ಜನವರಿ(2025) 7ರವರೆಗೆ ನಡೆಯಲಿದೆ. ಪರ್ತ್, ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ಈ ಪಂದ್ಯಗಳು ನಡೆಯಲಿದೆ. ಅಡಿಲೇಡ್ ಪಂದ್ಯ ಪಿಂಕ್ ಬಾಲ್ ಟೆಸ್ಟ್ ಆಗಿದೆ. ಪುರುಷರ ಕ್ರಿಕೆಟ್ ತಂಡದ ಜತೆಗೆ ಇದೇ ಸಮಯದಲ್ಲೇ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿ ಕೂಡ ನಡೆಯಲಿದೆ. ಡಿಸೆಂಬರ್‌ 6ರಿಂದ ಅಡಿಲೇಡ್​ನಲ್ಲಿ ನಡೆಯಲಿರುವ ಎರಡನೇ ಪಂದ್ಯ ಪಿಂಕ್‌ ಬಾಲ್​ ಟೆಸ್ಟ್‌ ಪಂದ್ಯವಾಗಿರಲಿದೆ. ಇದಕ್ಕೆ ಅಭ್ಯಾಸ ನಡೆಸುವ ನಿಟ್ಟಿನಲ್ಲಿ ಈ ಎರಡು ದಿನದ ಪಂದ್ಯ ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

ಭಾರತವು ಇತ್ತೀಚಿನ ಕೆಲ ವರ್ಷಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ ಟೆಸ್ಟ್‌ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಲೇ ಬಂದಿದೆ. ಕಳೆದ 4 ಸರಣಿಗಳಲ್ಲಿ ಭಾರತವೇ ಗೆದ್ದು ಬಂದಿದೆ. 2016-17ರಲ್ಲಿ 2-1 (ತವರಿನ ಸರಣಿ), 2018-19ರಲ್ಲಿ 2-1 (ಆಸ್ಟ್ರೇಲಿಯದಲ್ಲಿ), 2020- 21ರಲ್ಲಿ 2-1 (ಆಸ್ಟ್ರೇಲಿಯದಲ್ಲಿ) ಹಾಗೂ 2022-23ರಲ್ಲಿ 2-1 (ತವರಿನ ಸರಣಿ) ಅಂತರದಿಂದ ಭಾರತ ಜಯ ಸಾಧಿಸಿತ್ತು. ಆದಾಗ್ಯೂ, 2023ರಲ್ಲಿ ಲಂಡನ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಪ್ಯಾಟ್ ಕಮಿನ್ಸ್ ತಂಡವು ಭಾರತವನ್ನು ಸೋಲಿಸಿತ್ತು.

5 ಟೆಸ್ಟ್​ ಪಂದ್ಯ ವೇಳಾಪಟ್ಟಿ

ಮೊದಲ ಟೆಸ್ಟ್: ನವೆಂಬರ್ 22-26, ಪರ್ತ್

ಎರಡನೇ ಟೆಸ್ಟ್: ಡಿಸೆಂಬರ್ 6-10, ಅಡಿಲೇಡ್ (ಪಿಂಕ್​ ಬಾಲ್​ ಟೆಸ್ಟ್​)

ಮೂರನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್

ನಾಲ್ಕನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬೋರ್ನ್

ಐದನೇ ಟೆಸ್ಟ್: ಜನವರಿ 3-7, ಸಿಡ್ನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Vinesh Phogat: ಇಂದು ರಾತ್ರಿ 9.30ಕ್ಕೆ ವಿನೇಶ್ ಫೋಗಟ್‌ ಬೆಳ್ಳಿ​ ಪದಕದ ಭವಿಷ್ಯ ನಿರ್ಧಾರ

Vinesh Phogat: ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಕ್​​ ಅವರು ಶುಕ್ರವಾರ ಈ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದು, ಸ್ಪರ್ಧೆಯಲ್ಲಿ ಎರಡು ಬೆಳ್ಳಿ ಪದಕಗಳನ್ನು ನೀಡುವುದಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Vinesh Phogat
Koo

ಪ್ಯಾರಿಸ್​: ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ(Paris Olympics 2024) ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಫೋಗಟ್‌(Vinesh Phogat) ತನಗೆ ಜಂಟಿ ಬೆಳ್ಳಿ ಪದಕ ನೀಡಬೇಕೆಂದು ಸಲ್ಲಿದ್ದ ಮನವಿಯ ವಿಚಾರಣೆಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS​) ಶುಕ್ರವಾರವೇ ಮುಕ್ತಾಯಗೊಳಿಸಿದೆ. ಇದೀಗ ಅಂತಿಮ ತೀರ್ಪು ಇಂದು ರಾತ್ರಿ 9.30ಕ್ಕೆ ಪ್ರಕಟಗೊಳ್ಳಲಿದೆ. ತಮ್ಮ ಪರ ಸಕಾರತ್ಮಕ ತೀರ್ಪು ವಿಶ್ವಾಸವನ್ನು ಭಾರತೀಯ ಒಲಿಂಪಿಕ್ಸ್​ ಸಂಸ್ಥೆ(ಐಒಎ) ವ್ಯಕ್ತಪಡಿಸಿದೆ. ಹರೀಶ್ ಸಾಳ್ವೆ ಅವರು ಸತತ ಒಂದು ಗಂಟೆಗಳ ಕಾಲ ವಾದ ಮಂಡಿಸಿದ್ದರು. ವಿನೇಶ್​ಗೆ ಪದಕ ಒಲಿಯಲಿ ಎಂದು ಇಡೀ ದೇಶವೇ ಪ್ರಾರ್ಥಿಸುತ್ತಿದೆ.

ಮಂಗಳವಾರ ನಡೆದ ಅರ್ಹತಾ ಸುತ್ತಿಗೂ ಮುನ್ನ ವಿನೇಶ್‌ ಅವರ ತೂಕವನ್ನು ಲೆಕ್ಕ ಮಾಡಲಾಗಿತ್ತು. ಈ ವೇಳೆ ಅವರು 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ಪದಕ ನೀಡಲು ಸಾಧ್ಯವಿಲ್ಲ ಎಂದ ಥಾಮಸ್ ಬಾಕ್


ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಕ್​​ ಅವರು ಶುಕ್ರವಾರ ಈ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದು, ಸ್ಪರ್ಧೆಯಲ್ಲಿ ಎರಡು ಬೆಳ್ಳಿ ಪದಕಗಳನ್ನು ನೀಡುವುದಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಚಿನ್ನದ ಪದಕದ ಪಂದ್ಯಕ್ಕೆ ಮುಂಚಿತವಾಗಿ ಅನರ್ಹಗೊಂಡ ಭಾರತೀಯ ಕುಸ್ತಿಪಟುವಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದೇನೆ ಎಂಬುದಾಗಿ ನುಡಿದಿದ್ದಾರೆ. ಪ್ಯಾರಿಸ್​ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಥಾಮಸ್, ಸಿಎಎಸ್ ನಿರ್ಧಾರಕ್ಕೆ ಐಒಸಿ ಬದ್ಧವಾಗಿರುತ್ತದೆ ಎಂದು ಹೇಳಿದರು. ಎರಡು ಬೆಳ್ಳಿ ಪದಕಗಳನ್ನು ನೀಡುವುದು ತಪ್ಪು ಎಂದರು.

ಅಂತಾರಾಷ್ಟ್ರೀಯ ಒಕ್ಕೂಟದ ನಿಯಮಗಳನ್ನು ಎಲ್ಲರೂ ಅನುಸರಿಸಬೇಕು. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಫೆಡರೇಶನ್, ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಕುಸ್ತಿಪಟು ನಿರ್ದಿಷ್ಟ ತಿಳುವಳಿಕೆಯನ್ನು ಹೊಂದಿರಬೇಕು. ಮಾನವೀಯತೆ ಸರಿಯಾಗಿರಬಹುದು. ಆದರೆ, ಒಕ್ಕೂಟ ಅಥವಾ ಅಂತಹ ನಿರ್ಧಾರವನ್ನು ತೆಗೆದುಕೊಳ್ಳಬೇಕಾದಾಗ ಎಲ್ಲರವನ್ನೂ ಗೌರವಿಸಬೇಕಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ Vinesh Phogat : ವಿನೇಶ್​​ಗೆ ಬೆಳ್ಳಿ ಪದಕ ಕೊಡಲು ಸಾಧ್ಯವಿಲ್ಲ; ಒಲಿಂಪಿಕ್ಸ್​​ ಸಂಸ್ಥೆ ಮುಖ್ಯಸ್ಥ ಥಾಮಸ್ ಬಾಕ್​ ಸ್ಪಷ್ಟನೆ

ಪದಕ ನೀಡುವಂತೆ ಸಚಿನ್​ ಒತ್ತಾಯ

ಸಚಿನ್ ತೆಂಡೂಲ್ಕರ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿನೇಶ್​ಗೆ ಬೆಂಬಲ ನೀಡಿ ಹೇಳಿಕೆ ಪೋಸ್ಟ್ ಮಾಡಿದ್ದಾರೆ. ವಿನೇಶ್ ಫೈನಲ್​​​ಗೆ ನ್ಯಾಯಯುತವಾಗಿ ಅರ್ಹತೆ ಪಡೆದಿದ್ದಾರೆ. ಹೀಗಾಗಿ ಅರ್ಹ ಪದಕವನ್ನು ಕಸಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸಾಮರ್ಥ್ಯ ವರ್ಧನೆಯ ಔಷಧಿಗಳ ಬಳಕೆಯಂತಹ ದುಷ್ಕೃತ್ಯಗಳಾಗಿದ್ದರೆ ಅನರ್ಹತೆ ಅರ್ಥಪೂರ್ಣವಾಗುತ್ತಿತ್ತು ಎಂದು ಕ್ರಿಕೆಟ್ ದಂತಕಥೆ ಹೇಳಿದ್ದಾರೆ. ವಿನೇಶ್ ಗೆ ಅರ್ಹ ಮನ್ನಣೆ ಸಿಗುತ್ತದೆ ಎಂದು ಆಶಿಸುವ ಮೂಲಕ ತೆಂಡೂಲ್ಕರ್ ತಮ್ಮ ಹೇಳಿಕೆ ಕೊನೆಗೊಳಿಸಿದರು.

ಪ್ರತಿಯೊಂದು ಕ್ರೀಡೆಗೂ ನಿಯಮಗಳಿವೆ. ಆ ನಿಯಮಗಳನ್ನು ಸಂದರ್ಭಕ್ಕೆ ಅನುಗುಣವಾಗಿ ನೋಡಬೇಕು. ನಿಯಮಗಳನ್ನು ಕಾಲಕಾಲಕ್ಕೆ ಮರುಪರಿಶೀಲಿಸಬಹುದು. ವಿನೇಶ್ ಫೋಗಟ್ ಫೈನಲ್​ಗೆ ಅರ್ಹತೆ ಪಡೆದಿದ್ದರು. ಬಳಿಕ ಹೆಚ್ಚು ತೂಕದ ಆಧಾರದ ಮೇಲೆ ಅವರನ್ನು ಅನರ್ಹಗೊಳಿಸಲಾಯಿತು. ಅವರಿಂದ ಬೆಳ್ಳಿ ಪದಕವನ್ನು ಕಸಿದುಕೊಳ್ಳುವುದು ಕ್ರೀಡಾ ಪ್ರಜ್ಞೆಯನ್ನು ಉಲ್ಲಂಘನೆ ಎಂದು ಹೇಳಿದರು.

Continue Reading

ಕ್ರೀಡೆ

Neeraj Chopra: ಫೈನಲ್​ ವೇಳೆ ನೀರಜ್​ ಚೋಪ್ರಾ ಧರಿಸಿದ್ದ ವಾಚ್​ ಕಂಪನಿ ಯಾವುದು?, ಇದರ ಬೆಲೆ ಎಷ್ಟು?

Neeraj Chopra: ಶೀಘ್ರದಲ್ಲೇ ನೀರಜ್​ ತೊಡೆಯ ಸ್ನಾಯುಗಳಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಪ್ಯಾರಿಸ್ ಗೇಮ್ಸ್‌ ನಡೆಯುತ್ತಿರುವಾಗಲೇ ಚೋಪ್ರಾ ಅವರು ತೊಡೆಯ ಸ್ನಾಯುಗಳಿಗೆ ಸಂಬಂಧಿಸಿದ ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದರು.

VISTARANEWS.COM


on

Neeraj Chopra
Koo

ಬೆಂಗಳೂರು: ನೀರಜ್​ ಚೋಪ್ರಾ(Neeraj Chopra) ಅವರು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ವಿಚಾರಕ್ಕಿಂತ ಅವರು ಫೈನಲ್​ನಲ್ಲಿ ಧರಿಸಿದ್ದ ವಾಚ್​(neeraj chopra watch) ಬಗ್ಗೆಯೇ ಭಾರಿ ಕುತೂಹಲ ಮತ್ತು ಚರ್ಚೆಗಳು ಆರಂಭವಾಗಿದೆ. ಹೌದು, ನೀರಜ್​ ಧರಿಸಿದ್ದ ವಾಚ್​ನ ಬೆಲೆ ಬರೋಬ್ಬರಿ 52 ಲಕ್ಷ ರೂ. ಈ ವಾಚ್​ನ ಹೆಸರು ಒಮೆಗಾ(luxurious Omega watch) ಸೀಮಾಸ್ಟರ್​ ಆ್ಯಕ್ವಾಟೆರ್ರಾ 159 ಎಂ.

ಸ್ವಿಜರ್​ಲ್ಯಾಂಡ್​ನ ಖ್ಯಾತ ವಾಚ್​ ತಯಾರಕರ ಸಂಸ್ಥೆಗಳಲ್ಲಿ ಒಂದಾದ, ಪ್ಯಾರಿಸ್​ ಒಲಿಂಪಿಕ್ಸ್​ನ ಅಧಿಕೃತ ಟೈಂ ಕೀಪಿಂಗ್​ ಪ್ರಾಯೋಜಕರಾದ ಒಮೆಗಾ ಸಂಸ್ಥೆ ಈ ಬಾರಿ ಆಯ್ದ ಕ್ರೀಡಾಪಟುಗಳಿಗೆ ತನ್ನ ಸಂಸ್ಥೆಯ ಅತ್ಯಂತ ದುಬಾರಿ ಮೊತ್ತದ ವಾಚ್​ಗಳನ್ನು ಪ್ರಚಾರದ ಉದ್ದೇಶದಲ್ಲಿ ಉಚಿತವಾಗಿ ನೀಡಿತ್ತು. ಕಳೆದ ಬಾರಿ ಚಿನ್ನ ಗೆದ್ದಿದ್ದ ನೀರಜ್​ ಚೋಪ್ರಾ ಈ ಬಾರಿಯ ಸ್ಟಾರ್​ ಅಥ್ಲೀಟ್​ಗಳಲ್ಲಿ ಒಬ್ಬರಾಗಿದ್ದರು. ಹೀಗಾಗಿ ಅವರಿಗೆ ಸಂಸ್ಥೆ ಈ ವಾಚ್​ ನೀಡಿತ್ತು.

ಶೀಘ್ರದಲ್ಲೇ ನೀರಜ್​ ತೊಡೆಯ ಸ್ನಾಯುಗಳಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಪ್ಯಾರಿಸ್ ಗೇಮ್ಸ್‌ ನಡೆಯುತ್ತಿರುವಾಗಲೇ ಚೋಪ್ರಾ ಅವರು ತೊಡೆಯ ಸ್ನಾಯುಗಳಿಗೆ ಸಂಬಂಧಿಸಿದ ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದರು. ಈ ನೋವಿನ ಮಧ್ಯೆಯೂ ಕೂಡ ಅವರು ಬೆಳ್ಳಿ ಗೆದ್ದಿರುವುದು ನಿಜಕ್ಕೂ ಮೆಚ್ಚಲೇ ಬೇಕು.

ಟೋಕಿಯೊ ಒಲಿಂಪಿಕ್ಸ್​ನಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದ ಚೋಪ್ರಾ ಅವರು ಚಿನ್ನ ಗೆದ್ದು ಭಾರೀ ಸುದ್ದಿಯಾಗಿದ್ದರು. ಈ ಬಾರಿ ನೋವಿನಲ್ಲೂ ಹೋರಾಟ ನಡೆಸಿ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ಒಲಿಂಪಿಕ್ ಪದಕಗಳನ್ನು ಪಡೆದ ಭಾರತದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಎಂಬ ಹಿರಿಮೆಗೆ ಭಾಜನರಾದರು.

ನೀರಜ್​ಗೆ ಚಿನ್ನ ಕೈತಪ್ಪಿದ ಬಗ್ಗೆ ಅವರ ಆರಂಭಿಕ ಕೋಚ್​(Coach) ಕಾಶೀನಾಥ್ ನಾಯ್ಕ್ (Kashinath Naik) ಕಾರಣವನ್ನು ನೀಡಿದ್ದಾರೆ. ಭಾರತೀಯ ಸೇನೆಯಲ್ಲಿ ನಾಯ್ಕ್ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಶೀನಾಥ್ ನಾಯ್ಕ್, ಮೂಲತಃ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಮೂಲದವರು. 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಜಾವೆಲಿನ್‌ ಎಸೆತದಲ್ಲಿ ಕಾಶೀನಾಥ್ ನಾಯ್ಕ್ ಕಂಚಿನ ಪದಕ ಗೆದ್ದವರು.

ಇದನ್ನೂ ಓದಿ Neeraj Chopra : ಸಮಾರೋಪ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿಯುವ ಅವಕಾಶ ಶ್ರೀಜೇಶ್​ಗೆ ಬಿಟ್ಟುಕೊಟ್ಟ ನೀರಜ್​ ಚೋಪ್ರಾ

ʼನೀರಜ್ ಚೋಪ್ರಾ ಸತತ ಎರಡನೇ ಬಾರಿ ಒಲಿಂಪಿಕ್ಸ್ ಪದಕ ಗೆಲ್ಲುತ್ತಿರೋದಕ್ಕೆ ಸಂತಸವಾಗಿದೆ. ಆದರೆ ಈ ಬಾರಿ ಚಿನ್ನ ಗೆಲ್ಲೋದಕ್ಕೆ ಸಾಧ್ಯವಾಗಿಲ್ಲ ಅನ್ನೋ ಬೇಸರವೂ ಇದೆ. ನೀರಜ್ ಚೋಪ್ರಾ ಅತ್ಯುತ್ತಮ ಎಸೆತವನ್ನೇ ಎಸೆದಿದ್ದಾರೆ. ಆದರೆ ಪಾಕಿಸ್ತಾನದ ಅರ್ಷದ್ ನದೀಮ್ ಇನ್ನಷ್ಟು ಅತ್ಯುತ್ತಮ ಎಸೆತವನ್ನು ಎಸೆದಿದ್ದಾರೆ. ನೀರಜ್‌ ತನ್ನ ಮೊದಲ ಎಸೆತದಲ್ಲಿ ಪೌಲ್‌ ಆಗಿದ್ದು ಬೆಳ್ಳಿ ಪದಕ ಬರುವುದಕ್ಕೆ ಕಾರಣವಾಯಿತುʼ ಎಂದು ಕಾಶೀನಾಥ್‌ ವಿವರಿಸಿದ್ದಾರೆ.


2022ರ ಕಾಮನ್ ವೇಲ್ತ್ ಗೇಮ್ಸ್ ಬಳಿಕ ಅರ್ಷದ್ ನದೀಮ್ ಗಾಯದ ಸಮಸ್ಯೆಗೊಳಗಾಗಿದ್ದರು. ಗಾಯದಿಂದ ವಾಪಸಾದ ಬಳಿಕವೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಪ್ಯಾರಿಸ್ ಒಲಿಂಪಿಕ್ಸ್ ಅರ್ಹತಾ ಸುತ್ತಿನಲ್ಲಿಯೂ 88 ಮೀಟರ್ ಎಸೆದಿದ್ರು. ಆದ್ರೆ ನೀರಜ್ ತನ್ನ ಮೊದಲ ಎಸೆತದಲ್ಲಿ ಪೌಲ್ ಆಗಿದ್ದು ಅವರಿಗೆ ಧೈರ್ಯ ತುಂಬಿತು. ಒಂದು ವೇಳೆ ನೀರಜ್ ತನ್ನ ಮೊದಲ ಎಸೆತದಲ್ಲಿ 88, 89 ಮೀಟರ್ ಎಸೆದಿದ್ರೆ ಆತ ನರ್ವಸ್ ಆಗಿಬಿಡುತ್ತಿದ್ದ. ನೀರಜ್ ಮೊದಲ ಎಸೆತ ಫೌಲ್ ಆಗಿದ್ರಿಂದಲೇ ಆತನ ಆತ್ಮವಿಶ್ವಾಸ ಹೆಚ್ಚಾಯ್ತು ಎಂದು ಕಾಶೀನಾಥ್‌ ಹೇಳಿದ್ದಾರೆ.

ಯಾವಾಗಲೂ ನೀರಜ್ ತನ್ನ ಮೊದಲ ಎಸೆತದಲ್ಲಿ 88, 89 ಮೀಟರ್ ಎಸೆಯುತ್ತಿದ್ದ. ಆದರೆ ಈ ಬಾರಿ ಪೌಲ್ ಆಗಿದ್ದು ಅರ್ಷದ್ ನದೀಮ್‌ಗೆ ವರವಾಯ್ತು. ನದೀಮ್ ಒಲಿಂಪಿಕ್ಸ್ ರೆಕಾರ್ಡ್ಸ್ ಮಾಡುತ್ತಿದ್ದಂತೆ ನೀರಜ್ ನರ್ವಸ್ ಆಗಿಬಿಟ್ಟ. ಆದರೂ ನೀರಜ್ ತನ್ನ ಸಾಮರ್ಥ್ಯ ಮೀರಿ ಪ್ರಯತ್ನ ಮಾಡಿದ್ದಾನೆ. ಅಥ್ಲೆಟಿಕ್ಸ್‌ನಲ್ಲಿ ಸತತ ಎರಡನೇ ಪದಕ ಗೆದ್ದು ಸಾಧನೆ ಮಾಡಿದ್ದಾನೆ. ಇದು ನಿಜಕ್ಕೂ ದೊಡ್ಡ ಸಾಧನೆ ಎಂದು ತಮ್ಮ ಶಿಷ್ಯನನ್ನು ಕಾಶೀನಾಥ್ ನಾಯ್ಕ ಶ್ಲಾಘಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Paris Olympics Medal Table: ಪಾಕಿಸ್ತಾನ 1 ಪದಕ ಗೆದ್ದರೂ ಪದಕ ಪಟ್ಟಿಯಲ್ಲಿ ಮೇಲೆ, ಭಾರತ 6 ಪದಕ ಗೆದ್ದರೂ ಕೆಳಗೆ ಏಕೆ?

Paris Olympics Medal Table: ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ(ಐಒಸಿ) ಆಯ್ಕೆ ಮಾಡಿಕೊಂಡ ರ‍್ಯಾಂಕಿಂಗ್ ವಿಧಾನದ ಪ್ರಕಾರ ಒಲಿಂಪಿಕ್ ಕೂಟದಲ್ಲಿ ಆಯಾ ದೇಶ ಗೆದ್ದ ಚಿನ್ನದ ಪದಕದ ಆಧಾರದಲ್ಲಿ ರ‍್ಯಾಂಕಿಂಗ್ ನೀಡಲಾಗುತ್ತದೆ.

VISTARANEWS.COM


on

Paris Olympics
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ನಾಳೆ(ಭಾನುವಾರ) ಸಮಾರೋಪ ಸಮಾರಂಭ ನಡೆಯಲಿದ್ದು ಟೂರ್ನಿಗೆ ಅಧಿಕೃತವಾಗಿ ತೆರೆ ಬೀಳಲಿದೆ. ಸದ್ಯ ಪದಕ ಪಟ್ಟಿಯಲ್ಲಿ(Paris Olympics Medal Table) ಅಮೆರಿಕ ಅಗ್ರಸ್ಥಾನ ಪಡೆದಿದೆ. ಚೀನಾ ಮತ್ತು ಆಸ್ಟ್ರೇಲಿಯಾ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ಭಾರತ 6 ಪದಕ ಗೆದ್ದು 69ನೇ ಸ್ಥಾನಿಯಾಗಿದೆ. ಪಾಕಿಸ್ತಾನ ಏಕೈಕ ಪದಕ ಗೆದ್ದರೂ ಭಾರತಕ್ಕಿಂತ 8 ಸ್ಥಾನ ಪ್ರಗತಿ ಸಾಧಿಸಿ 58ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಒಂದು ಪದಕ ಗೆದ್ದರೂ ಪಾಕಿಸ್ತಾನ ಭಾರತಕ್ಕಿಂತ ಮೇಲೆ ಹೇಗೆ ಸ್ಥಾನ ಪಡೆಯಿತು ಎನ್ನುವುದು ಕ್ರೀಡಾಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಇದಕ್ಕೆ ಉತ್ತರ ಇಲ್ಲಿದೆ.

ಶುಕ್ರವಾರ ರಾತ್ರಿಯ ವರೆಗೂ ಪದಕದ ಖಾತೆಯನ್ನೇ ತೆರೆಯದೇ ಇದ್ದ ಪಾಕಿಸ್ತಾನಕ್ಕೆ ಪುರುಷರ ಜಾವೆಲಿನ್​ ಎಸೆತದಲ್ಲಿ ಬರೋಬ್ಬರಿ 92.97 ಮೀಟರ್ ದೂರ ಜಾವೆಲಿನ್ ಎಸೆದು ಒಲಿಂಪಿಕ್ಸ್ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದು ಬೀಗಿದ್ದರು. ಈ ಮೂಲಕ ಪಾಕ್​ಗೆ ಪದಕದ ಖಾತೆ ತೆರೆದಿದ್ದರು. ಜತೆಗೆ 40 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಚಿನ್ನದ ಪದವೊಂದನ್ನು ಗೆದ್ದ ಸಾಧನೆ ಮಾಡಿದ್ದರು. ಭಾರತ 6 ಪದಕ ಗೆದ್ದರೂ ಕೂಡ ಪದಕ ಪಟ್ಟಿಯಲ್ಲಿ ಪಾಕ್​ಗಿಂತ ಕೆಳಗಿರಲು ಕಾರಣ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯಲ್ಲಿರುವ ನಿಯಮ.

ನಿಯಮ ಏನು ಹೇಳುತ್ತೆ?


ಹೌದು, ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ(ಐಒಸಿ) ಆಯ್ಕೆ ಮಾಡಿಕೊಂಡ ರ‍್ಯಾಂಕಿಂಗ್ ವಿಧಾನದ ಪ್ರಕಾರ ಒಲಿಂಪಿಕ್ ಕೂಟದಲ್ಲಿ ಆಯಾ ದೇಶ ಗೆದ್ದ ಚಿನ್ನದ ಪದಕದ ಆಧಾರದಲ್ಲಿ ರ‍್ಯಾಂಕಿಂಗ್ ನೀಡಲಾಗುತ್ತದೆ. ಉದಾಹರಣೆಗೆ ಒಂದು ದೇಶ 10 ಬೆಳ್ಳಿ ಅಥವಾ ಕಂಚಿನ ಪದಕ ಪಡೆದರೂ, ಏಕೈಕ ಚಿನ್ನದ ಪದಕ ಪಡೆದ ರಾಷ್ಟ್ರಕ್ಕಿಂತ ಕೆಳಗಿರುತ್ತದೆ. ಎರಡು ದೇಶಗಳು ಸಮಾನ ಸಂಖ್ಯೆಯ ಚಿನ್ನದ ಪದಕ ಗೆದ್ದಲ್ಲಿ, ಬೆಳ್ಳಿ ಹಾಗೂ ಕಂಚಿನ ಪದಕಗಳು ಗಣನೆಗೆ ಬರುತ್ತವೆ. ಒಟ್ಟಾರೆ ಚಿನ್ನದ ಪದಕ ಗೆದ್ದ ಆಧಾರದಲ್ಲಿ ಅಂಕಟ್ಟಿಯಲ್ಲಿ ಸ್ಥಾನ ನಿರ್ಧಾರವಾಗುತ್ತದೆ. ಹೀಗಾಗಿ ಭಾರತ ಪಾಕಿಸ್ತಾನಕ್ಕಿಂತ ಕೆಳಗಿನ ಸ್ಥಾನ ಪಡೆದಿದೆ.

ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರ ಒಲಿಂಪಿಕ್ ಅನರ್ಹತೆ ಮತ್ತು ಮಹಿಳೆಯರ 50 ಕೆ.ಜಿ ವಿಭಾಗದ ಕುಸ್ತಿಯಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ (ಸಿಎಎಸ್)ಗೆ ಸಲ್ಲಿಸಿದ ಮನವಿಯ ಬಗ್ಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಕ್​​ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ಸ್ಪರ್ಧೆಯಲ್ಲಿ ಎರಡು ಬೆಳ್ಳಿ ಪದಕಗಳನ್ನು ನೀಡುವುದಕ್ಕೆ ಸಾಧ್ಯವೇ ಇಲ್ಲ ಎಂದು ಬಾಕ್​ ಹೇಳಿದ್ದಾರೆ. ಆದಾಗ್ಯೂ, ಚಿನ್ನದ ಪದಕದ ಪಂದ್ಯಕ್ಕೆ ಮುಂಚಿತವಾಗಿ ಅನರ್ಹಗೊಂಡ ಭಾರತೀಯ ಕುಸ್ತಿಪಟುವಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದೇನೆ ಎಂಬುದಾಗಿ ನುಡಿದಿದ್ದಾರೆ.

ಪ್ಯಾರಿಸ್​ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಥಾಮಸ್, ಸಿಎಎಸ್ ನಿರ್ಧಾರಕ್ಕೆ ಐಒಸಿ ಬದ್ಧವಾಗಿರುತ್ತದೆ ಎಂದು ಹೇಳಿದರು. ಎರಡು ಬೆಳ್ಳಿ ಪದಕಗಳನ್ನು ನೀಡುವುದು ತಪ್ಪು ಎಂದರು.

Continue Reading

ಕ್ರೀಡೆ

Indian Men’s Hockey Team: ತವರಿಗೆ ಮರಳಿದ ಕಂಚು ವಿಜೇತ ಭಾರತ ಹಾಕಿ ತಂಡ; ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

Indian Men’s Hockey Team: ಶನಿವಾರ ಬೆಳಗ್ಗೆ ನವದೆಹಲಿಗೆ ಬಂದ ಹಾಕಿ ತಂಡ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಕ್ರೀಡಾಭಿಮಾನಿಗಳು ಆಟಗಾರರಿಗೆ ಹಾರ, ಸಿಹಿ ತಿನಿಸಿ ಅದ್ಧೂರಿ ಸ್ವಾಗತ ಕೋರಿ ಸಂಭ್ರಮಿಸಿದರು.

VISTARANEWS.COM


on

Indian Men’s Hockey Team
Koo

ನವದೆಹಲಿ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಐತಿಹಾಸಿಕ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದ ಭಾರತ ಪುರುಷರ ಹಾಕಿ(Indian Men’s Hockey Team) ತಂಡ, ಪ್ಯಾರಿಸ್‌ನಲ್ಲಿ(paris olympics) ಮತ್ತೊಂದು ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಸತತ 2ನೇ ಕಂಚು ಗೆದ್ದ ಸಾಧನೆ ಮಾಡಿತ್ತು. ಗುರುವಾರ ನಡೆದಿದ್ದ ಕಂಚಿನ ಪದಕ ಸ್ಪರ್ಧೆಯಲ್ಲಿ ಸ್ಪೇನ್ ವಿರುದ್ಧ 2-1 ಗೋಲುಗಳಿಂದ ಗೆದ್ದು ಕಂಚು ತನ್ನದಾಗಿಸಿಕೊಂಡಿತು. ಇದೀಗ ಹಾಕಿ ತಂಡ ತವರಿಗೆ ಬಂದಿಳಿದಿದೆ.

ಶನಿವಾರ ಬೆಳಗ್ಗೆ ನವದೆಹಲಿಗೆ ಬಂದ ಹಾಕಿ ತಂಡ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಕ್ರೀಡಾಭಿಮಾನಿಗಳು ಆಟಗಾರರಿಗೆ ಹಾರ, ಸಿಹಿ ತಿನಿಸಿ ಅದ್ಧೂರಿ ಸ್ವಾಗತ ಕೋರಿ ಸಂಭ್ರಮಿಸಿದರು. ಪ್ಯಾರಿಸ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತ ಹಾಕಿ ತಂಡ 52 ವರ್ಷಗಳ ಬಳಿಕ ಸತತ 2 ಒಲಿಂಪಿಕ್ಸ್‌ಗಳಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿತ್ತು. ಭಾರತ ಈ ಮೊದಲು 1968ರ ಮೆಕ್ಸಿಕೋ ಹಾಗೂ 1972ರ ಮ್ಯೂನಿಚ್‌ ಒಲಿಂಪಿಕ್ಸ್‌ಗಳಲ್ಲಿ ಸತತವಾಗಿ 2 ಕಂಚು ಗೆದ್ದಿತ್ತು. 2021ರ ಟೋಕಿಯೋ ಹಾಗೂ ಈ ಬಾರಿ ಭಾರತ ಸತತವಾಗಿ ಕಂಚು ಗೆದ್ದಿದೆ.

ಹಾಕಿಗೆ ವಿದಾಯ ಹೇಳಿರುವ ಗೋಲ್​ ಕೀಪರ್​ ಪಿ.ಆರ್ ಶ್ರೀಜೇಶ್(PR Sreejesh)​ ಮಾತ್ರ ಪ್ಯಾರಿಸ್​ನಲ್ಲಿಯೇ ಉಳಿದಿದ್ದಾರೆ. ಸಮಾರೋಪ ಸಮಾರಂಭ(Paris Olympics 2024 Closing Ceremony)ದಲ್ಲಿ ಭಾರದ ಧ್ವಜಧಾರಿಯಾಗಿ( India’s Co-Flag Bearer) ಆಯ್ಕೆಯಾದ ಕಾರಣ ಅವರು ಈ ಸಮಾರಂಭ ಮುಗಿಸಿ ತವರಿಗೆ ಮರಳಲಿದ್ದಾರೆ. ಭಾನುವಾರ ರಾತ್ರಿ ಸಮಾರೋಪ ಸಮಾರಂಭ ನಡೆಯಲಿದೆ.

ಇದನ್ನೂ ಓದಿ Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಇಂದು ಭಾರತಕ್ಕೆ ಯಾವ್ಯಾವ ಸ್ಪರ್ಧೆಗಳಿವೆ? ಇಲ್ಲಿದೆ ಎಲ್ಲ ವಿವರ

ಪ್ಯಾರಿಸ್ ಒಲಿಂಪಿಕ್ಸ್​ (Paris Olympics 2024) ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಶನಿವಾರ 10ನೇ ದಿನ ಸ್ಪರ್ಧೆಗಳು ನಡೆಯಲಿವೆ. ಆ ದಿನ ಭಾರತಕ್ಕೆ ಹೆಚ್ಚಿನ ಸ್ಪರ್ಧೆಗಳು ಇಲ್ಲ. ಗಾಲ್ಫ್​ ಹಾಗೂ ಫ್ರೀಸ್ಟೈಲ್​ ಕುಸ್ತಿ ಬಿಟ್ಟರೆ ಬೇರೆ ಯಾವುದೇ ಸ್ಪರ್ಧೆಯಲ್ಲಿ ಭಾರತೀಯರು ಇಲ್ಲ.

ಶುಕ್ರವಾರ ಪುರುಷರ ಕುಸ್ತಿಯ 57 ಕೆ.ಜಿ ವಿಭಾಗದಲ್ಲಿ ಅಮನ್ ಗೆದ್ದ ಕಂಚಿನ ಪದಕದೊಂದಿಗೆ ಭಾರತದ ಒಟ್ಟು ಪದಕಗಳ ಸಂಖ್ಯೆ 6ಕ್ಕೆ ಏರಿದೆ. ಅದರಲ್ಲಿ 5 ಕಂಚಿನ ಪದಕವಾದರೆ ಒಂದು ಬೆಳ್ಳಿಯ ಪದಕವಾಗಿದೆ. ಬೆಳ್ಳಿಯನ್ನು ನೀರಜ್​ ಗೆದ್ದಿದ್ದರೆ, ಶೂಟರ್​​ ಮನು ಭಾಕರ್ ಎರಡು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು. ಅದರಲ್ಲೊಂದು ಮಿಶ್ರ ತಂಡದಲ್ಲಿ ಸರಬ್​ಜೋತ್ ಸಿಂಗ್​ ಜತೆಗೆ. ಪುರುಷರ ಶೂಟಿಂಗ್​ನಲ್ಲಿ ಸ್ವಪ್ನಿಲ್ ಕುಸಾಳೆ ಮತ್ತೊಂದು ಪದಕ ಗೆದ್ದಿದ್ದರು. ಮತ್ತೊಂದು ಕಂಚಿನ ಪದಕ ಹಾಕಿ ತಂಡದ ಮೂಲಕ ದೊರಕಿದೆ. ಇದೀಗ ಅಮನ್​ ಒಂದು ಪದಕ ಗೆದ್ದಿದ್ದಾರೆ.

ಆಗಸ್ಟ್​​ 10ರಂದು ಭಾರತದ ಸ್ಪರ್ಧೆಗಳು ಈ ರೀತಿ ಇವೆ

ಗಾಲ್ಫ್ 12:30ಕ್ಕೆ: ಮಹಿಳಾ ರೌಂಡ್ 4 (ಪದಕದ ಸ್ಪರ್ಧೆ)

ಕುಸ್ತಿ 03:00: ಮಹಿಳಾ ಫ್ರೀಸ್ಟೈಲ್ 76 ಕೆಜಿ 1/8 ಫೈನಲ್. ರೀತಿಕಾ ಹೂಡಾ

Continue Reading
Advertisement
Narendra Modi
ಪ್ರಮುಖ ಸುದ್ದಿ3 mins ago

Narendra Modi: ವಯನಾಡಿನಲ್ಲಿ ಭೂಕುಸಿತದ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಮೋದಿ; ದುರಂತದ ಭೀಕರತೆ ಕೇಳಿ ಭಾವುಕ

Californium Stone
ಕ್ರೈಂ18 mins ago

Californium Stone: ಪೊಲೀಸರಿಂದ ಭರ್ಜರಿ ಬೇಟೆ; 850 ಕೋಟಿ ರೂ. ಮೌಲ್ಯದ ಅಪರೂಪದ ವಿಕಿರಣಶೀಲ ಹರಳು ವಶ

Vinesh Phogat
ಕ್ರೀಡೆ32 mins ago

Vinesh Phogat: ಇಂದು ರಾತ್ರಿ 9.30ಕ್ಕೆ ವಿನೇಶ್ ಫೋಗಟ್‌ ಬೆಳ್ಳಿ​ ಪದಕದ ಭವಿಷ್ಯ ನಿರ್ಧಾರ

Varamahalaxmi Decoration
ಧಾರ್ಮಿಕ33 mins ago

Varamahalaxmi Decoration: ವರಮಹಾಲಕ್ಷ್ಮಿಯ ಸಿಂಗಾರಕ್ಕೂ ಬಂತು ಮಿನಿ ವಸ್ತ್ರಾಭರಣಗಳು!

Trainee Doctor
ದೇಶ35 mins ago

Trainee Doctor: ಆಸ್ಪತ್ರೆಯಲ್ಲಿಯೇ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ, ಬಳಿಕ ಹತ್ಯೆ; ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸ್ಫೋಟಕ ಮಾಹಿತಿ

Motivational Tips
ಲೈಫ್‌ಸ್ಟೈಲ್44 mins ago

Motivational Tips: ನಿಮ್ಮದೇ ಈ 10 ಅಭ್ಯಾಸಗಳು ಜೀವನದ ಯಶಸ್ಸಿಗೆ ಅಡ್ಡಗೋಡೆಯಾಗಬಹುದು!

CDPO suspended
ಕರ್ನಾಟಕ49 mins ago

CDPO suspended: ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ; ಸಿಡಿಪಿಒ ಅಮಾನತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

Viral Video
Latest51 mins ago

Viral Video: ಟಿಕೆಟ್ ಇಲ್ಲದೆ ಎಸಿ ಬೋಗಿಯಲ್ಲಿ ಪ್ರಯಾಣಿಸಿದ ಪೊಲೀಸರು; ಟಿಕೆಟ್‌ ಪರಿಶೀಲಕರಿಗೇ ಧಮಕಿ!

KEA
ಬೆಂಗಳೂರು56 mins ago

KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

New Railway Projects
ದೇಶ1 hour ago

New Railway Projects: 24,657 ಕೋಟಿ ರೂ. ಮೊತ್ತದ 8 ರೈಲು ಯೋಜನೆಗಳಿಗೆ ಅನುಮೋದನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌