Team India: ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಟೀಮ್​ ಇಂಡಿಯಾ; ವಿಡಿಯೊ ಹಂಚಿಕೊಂಡ ಎ.ಆರ್. ರೆಹಮಾನ್ - Vistara News

ಕ್ರೀಡೆ

Team India: ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಟೀಮ್​ ಇಂಡಿಯಾ; ವಿಡಿಯೊ ಹಂಚಿಕೊಂಡ ಎ.ಆರ್. ರೆಹಮಾನ್

Team India: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

VISTARANEWS.COM


on

Team India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ವಿಶ್ವ ವಿಜೇತ ಟೀಮ್​ ಇಂಡಿಯಾ ಆಟಗಾರರನ್ನು ನಿನ್ನೆ (ಗುರುವಾರ) ಸಂಜೆ ಮುಂಬೈನಲ್ಲಿ ಅಭೂತಪೂರ್ವವಾಗಿ ಅಭಿನಂದಿಸಲಾಯಿತು. ಲಕ್ಷಾಂತರ ಜನರು ಮರೀನ್ ಡ್ರೈವ್ ನಿಂದ ವಾಂಖಡೆ ಕ್ರೀಡಾಂಗಣದ ವರೆಗೆ ಅದ್ದೂರಿ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದ್ದರು. ಟ್ರೋಫಿ ಪರೇಡ್ ನಡೆಸಿದ ಬಳಿಕ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ಆಟಗಾರರು ಅಭಿಮಾನಿಗಳ ಮುಂದೆ ‘ವಂದೇ ಮಾತರಂ'(Vande Mataram) ಹಾಡನ್ನು ಹಾಡಿದ್ದಾರೆ. ಈ ವಿಡಿಯೊವನ್ನು ಭಾರತದ ಮ್ಯೂಸಿಕ್‌ ಲೆಜೆಂಡ್‌ ಎ.ಆರ್. ರೆಹಮಾನ್ ತಮ್ಮ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.

ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆಯಿಂದಲೇ ಜಮಾಯಿಸಿ ಕಾತರದಿಂದ ಕಾಯುತ್ತಿದ್ದ ಲಕ್ಷಾಂತರ ಕ್ರಿಕೆಟ್​ ಅಭಿಮಾನಿಗಳು ರೋಹಿತ್​ ಶರ್ಮಾ, ವಿರಾಟ್ ಕೊಹ್ಲಿ ಪರ ಜಯಘೋಷ ಕೂಗಿದ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಜನ ಸಾಗರ ಮಧ್ಯೆ ಅರಬ್ಬಿ ಸಮುದ್ರ ಕೂಡ ಕೆಲ ಕಾಲ ಸ್ಥಬ್ಧವಾಗಿತ್ತು.

2007 ರ ಟಿ 20 ವಿಶ್ವಕಪ್‌ನ ವಿಜಯೋತ್ಸವದ ಮೆರವಣಿಗೆ, 2011 ರಲ್ಲಿ ಭಾರತದ ಏಕದಿನ ವಿಶ್ವಕಪ್ ವಿಜಯೋತ್ಸವ ನಡೆಸಿದ 13 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆಯನ್ನು ಮುಂಬೈ ನಗರ ಹೊಸ ಉತ್ಸವವಾಗಿ ಆಚರಿಸಿತು.

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಂಬೈಗೆ ಆಗಮಿಸಿದ ಭಾರತ ತಂಡದ ಆಟಗಾರರು ಮರೀನಾ ಡ್ರೈವ್‌ ಬಳಿ ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳ ಸಲ್ಲಿಸಿದರು.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಇದನ್ನೂ ಓದಿ Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಯಿತು. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಯಿತು.

ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

VISTARANEWS.COM


on

WCPL 2024
Koo

ಬೆಂಗಳೂರು: 2024ರ ಮಹಿಳಾ ಕೆರಿಬಿಯನ್ ಪ್ರೀಮಿಯರ್ ಲೀಗ್​​ನಲ್ಲಿ (WCPL 2024) ಟ್ರಿನ್​ಬ್ಯಾಗೊ ನೈಟ್ ರೈಡರ್ಸ್ ತಂಡವನ್ನು ಜೆಮಿಮಾ ರೊಡ್ರಿಗಸ್ ಹಾಗೂ ಶಿಖಾ ಪಾಂಡೆ ಸೇರಿಕೊಂಡಿದ್ದಾರೆ. ಈ ಋತುವಿನಲ್ಲಿ ನೈಟ್ ರೈಡರ್ಸ್ ಪರ ವಿದೇಶಿ ಆಟಗಾರರಾಗಿ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಮತ್ತು ಜೆಸ್ ಜೊನಾಸೆನ್ ಸೇರಲಿದ್ದಾರೆ. 2024ರ ಸಿಪಿಎಲ್ ಆಗಸ್ಟ್ 21ರಿಂದ 29ರವರೆಗೆ ಟ್ರಿನಿಡಾಡ್​ನಲ್ಲಿ ನಡೆಯಲಿದ್ದು, ಎಲ್ಲಾ ಏಳು ಪಂದ್ಯಗಳು ಟ್ರಿನಿಡಾಡ್​​ನ ತರೂಬಾದ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿವೆ.

ಇದೇ ಮೊದಲ ಬಾರಿಗೆ ನಾನು ಡಬ್ಲ್ಯುಸಿಪಿಎಲ್​​ಗೆ ಬರುತ್ತಿದ್ದೇನೆ. ನಾನು ಕೆರಿಬಿಯನ್​​ನಲ್ಲಿ ಭಾರತಕ್ಕಾಗಿ ಸಾಕಷ್ಟು ಆಡಿದ್ದೇನೆ, ಆದರೆ ನಾನು ಡಬ್ಲ್ಯುಸಿಪಿಎಲ್​​ನ ನೈಟ್ ರೈಡರ್ಸ್ ಅನ್ನು ಪ್ರತಿನಿಧಿಸಲಿದ್ದೇನೆ ಎಂದು ತಿಳಿದು ಉತ್ಸುಕನಾಗಿದ್ದೇನೆ,” ಎಂದು ರೋಡ್ರಿಗಸ್ ಹೇಳಿದ್ದಾರೆ.

ಪ್ರಪಂಚದಾದ್ಯಂತ ಅವರು ಹೊಂದಿರುವ ಪರಂಪರೆ ನಮಗೆಲ್ಲರಿಗೂ ತಿಳಿದಿದೆ. 2022ರ ಚಾಂಪಿಯನ್ ಟಿಕೆಆರ್ ಮಹಿಳಾ ತಂಡ ಕೂಡ ಹೆಮ್ಮೆಯ ತಂಡವಾಗಿದೆ. ಅಕ್ಟೋಬರ್​ನಲ್ಲಿ ನಡೆಯಲಿರುವ ಮಹಿಳಾ ವಿಶ್ವ ಟಿ20ಗೆ ಮುಂಚಿತವಾಗಿ ಈ ಪಂದ್ಯಾವಳಿಯು ನಮಗೆ ಉತ್ತಮ ಸಿದ್ಧತೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ನಾನು ನಂಬುತ್ತೇನೆ. ವಿಶ್ವದ ಕೆಲವು ಅತ್ಯುತ್ತಮ ಆಟಗಾರರು ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, “ಎಂದು ಅವರು ಹೇಳಿದರು.

ನೈಟ್ ರೈಡರ್ಸ್ 2023 ರ ಋತುವಿನಲ್ಲಿ ತಮ್ಮನ್ನು ಪ್ರತಿನಿಧಿಸಿದ ಐದು ಆಟಗಾರರನ್ನು ಉಳಿಸಿಕೊಂಡಿದೆ, ಡಿಯಾಂಡ್ರಾ ಡಾಟಿನ್, ಶಮಿಲಾ ಕಾನ್ನೆಲ್, ಕೈಸಿಯಾ ನೈಟ್, ಜೈದಾ ಜೇಮ್ಸ್ ಮತ್ತು ಸಮರಾ ರಾಮ್​​ನಾಥ್ ಮರಳಿದ್ದಾರೆ. ತಂಡದಲ್ಲಿ ಇನ್ನೂ ಆರು ಸ್ಥಾನಗಳು ಉಳಿದಿದ್ದು, ಜುಲೈನಲ್ಲಿ ನಡೆಯಲಿರುವ ಡಬ್ಲ್ಯುಸಿಪಿಎಲ್ ಡ್ರಾಫ್ಟ್​​ನಲ್ಲಿ ಈ ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

ನಮ್ಮ ಸ್ಥಳೀಯ ಕೆರಿಬಿಯನ್ ಆಟಗಾರರನ್ನು ಉಳಿಸಿಕೊಳ್ಳಲು ಮತ್ತು ಈ ವರ್ಷದ ಮಹಿಳಾ ಸಿಪಿಎಲ್​​ಗೆ ನಾಲ್ಕು ವಿಶ್ವಪ್ರಸಿದ್ಧ ವಿದೇಶಿ ಆಟಗಾರರೊಂದಿಗೆ ಸಹಿ ಮಾಡಲು ನಾವು ತುಂಬಾ ಉತ್ಸುಕರಾಗಿದ್ದೇವೆ” ಎಂದು ನೈಟ್ ರೈಡರ್ಸ್ ಗ್ರೂಪ್​​​ನ ಸಿಇಒ ವೆಂಕಿ ಮೈಸೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಡಿಯಾಂಡ್ರಾ ಡಾಟಿನ್ ಮತ್ತೊಮ್ಮೆ ತಂಡವನ್ನು ಮುನ್ನಡೆಸುತ್ತಿರುವುದು ಸಂತಸ ತಂದಿದೆ. ಉದ್ಘಾಟನಾ ವರ್ಷದಿಂದ ಅವರು ತಂಡದ ಅದ್ಭುತ ನಾಯಕಿಯಾಗಿದ್ದಾರೆ, 2022 ರಲ್ಲಿ ನಮ್ಮ ಪ್ರಶಸ್ತಿ ಗೆದ್ದಾಗಿನಿಂದ ನಾಯಕ ಮತ್ತು ಆಟಗಾರ್ತಿಯಾಗಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ “ಎಂದು ಅವರು ಹೇಳಿದರು.

ಜೆಮಿಮಾ ರೊಡ್ರಿಗಸ್ ಮತ್ತು ಶಿಖಾ ಪಾಂಡೆ ಪಂದ್ಯಾವಳಿಯ ಗುಣಮಟ್ಟ ಹೆಚ್ಚಿಸಲಿದ್ದಾರೆ. ಡಬ್ಲ್ಯುಸಿಪಿಎಲ್​​ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ನಾವು ಬಿಸಿಸಿಐಗೆ ತುಂಬಾ ಕೃತಜ್ಞರಾಗಿದ್ದೇವೆ. ಸೂಪರ್ ಸ್ಟಾರ್​ಗಳಾದ ಮೆಗ್ ಲ್ಯಾನಿಂಗ್ ಮತ್ತು ಜೆಸ್ ಜೊನಾಸೆನ್ ಅವರೊಂದಿಗೆ ಈ ಎರಡು ದೊಡ್ಡ ಭಾರತೀಯ ಹೆಸರುಗಳ ಸೇರ್ಪಡೆಯು ಕ್ರಿಕೆಟ್ ಗೆ ಕಳೆ ಹೆಚ್ಚಿಸಲಿದೆ, “ಎಂದು ಅವರು ಹೇಳಿದರು.

ಮಹಿಳಾ ತಂಡದ ಆಟಗಾರರು ಇವರು

ಡಿಯಾಂಡ್ರಾ ಡಾಟಿನ್, ಮೆಗ್ ಲ್ಯಾನಿಂಗ್, ಜೆಸ್ ಜೊನಾಸೆನ್, ಜೆಮಿಮಾ ರೊಡ್ರಿಗಸ್, ಶಿಖಾ ಪಾಂಡೆ, ಕೈಸಿಯಾ ನೈಟ್, ಶಮಿಲಾ ಕಾನ್ನೆಲ್, ಜೈದಾ ಜೇಮ್ಸ್, ಸಮರಾ ರಾಮನಾಥ್.

Continue Reading

ಕ್ರೀಡೆ

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

VISTARANEWS.COM


on

Abhishek Sharma
Koo

ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಯುವ ಬ್ಯಾಟರ್​ ಅಭಿಷೇಕ್ ಶರ್ಮಾ (Abhishek Sharma) ಚೊಚ್ಚಲ ಶತಕ ಬಾರಿಸಿದ್ದರು. ಅವರು 47 ಎಸೆತಗಳಲ್ಲಿ 100 ರನ್ ಗಳಿಸಲು ಸಹಾಯ ಮಾಡಿದರು. ಭಾರತ ತಂಡಕ್ಕೆ 2 ವಿಕೆಟ್​ಗೆ 232 ಬೃಹತ್ ಮೊತ್ತ ಗಳಿಸಲು ಸಹಾಯ ಮಾಡಿತು. ಎಡಗೈ ಬ್ಯಾಟರ್​ ಏಳು ಬೌಂಡರಿ ಮತ್ತು ಎಂಟು ಸಿಕ್ಸರ್ ಗಳನ್ನು ಬಾರಿಸಿದ್ದರು. ೨೦೦ ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ನಲ್ಲಿ ಸ್ಕೋರ್ ಮಾಡಿದ್ದಾರೆ. ಈ ವೇಳೆ ಅವರು ಈ ಹಿಂದೆ ವಿಶ್ವ ಕ್ರಿಕೆಟ್​​ನಲ್ಲಿ ದಾಖಲಾಗಿದ್ದ ಕೆಲವು ಅತ್ಯುತ್ತಮ ಹಲವಾರು ದಾಖಲೆಗಳನ್ನು ಮುರಿದರು.

ಬಳಿಕ ಜಿಂಬಾಬ್ವೆಯನ್ನು 134 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಭಾರತ ಅಂತಿಮವಾಗಿ 100 ರನ್​ಗಳಿಂದ ಗೆದ್ದುಕೊಂಡಿತು. ಭಾರತದ ಪರ ಮುಕೇಶ್ ಕುಮಾರ್ 3, ಅವೇಶ್ ಖಾನ್ 3, ರವಿ ಬಿಷ್ಣೋಯ್ 2 ವಿಕೆಟ್ ಪಡೆದರು. ಎರಡನೇ ಟಿ 20 ಯಲ್ಲಿ ಭಾರತದ ಪ್ರದರ್ಶನವು ಮೊದಲ ಟಿ 20 ಐ ಸೋಲಿನ ಎಲ್ಲಾ ನೋವನ್ನು ಕಳೆಯಿತು. ಮೂರು ಪಂದ್ಯಗಳು ಬಾಕಿ ಇರುವಾಗ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಉಳಿದ ಮೂರು ಪಂದ್ಯಗಳು ಬುಧವಾರ, ಶನಿವಾರ ಮತ್ತು ಭಾನುವಾರ ನಡೆಯಲಿವೆ.

ಅಭಿಷೇಕ್ ಶರ್ಮಾ ಮುರಿದ ದಾಖಲೆಗಳು

ರೋಹಿತ್ ಶರ್ಮಾರನ್ನು ಹಿಂದಿಕ್ಕಿದ ಅಭಿಷೇಕ್ ಶರ್ಮಾ: ಯುವ ಆಟಗಾರ ಈ ಋತುವಿನ 47 ನೇ ಸಿಕ್ಸರ್ ಬಾರಿಸುವ ಮೂಲಕ 2024 ರಲ್ಲಿ ಅತಿ ಹೆಚ್ಚು ಸಿಕ್ಸರ್​ಗಳನ್ನು ಬಾರಿಸಿದ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದರು.

ಇದನ್ನೂ ಓದಿ: World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

ಸತತ ಮೂರು ಸಿಕ್ಸರ್ ಗಳೊಂದಿಗೆ ಶತಕ ಗಳಿಸಿದ ಮೊದಲ ಬ್ಯಾಟ್ಸ್ ಮನ್: ಯುವ ಆರಂಭಿಕ ಬ್ಯಾಟರ್​​ ಹ್ಯಾಟ್ರಿಕ್ ಸಿಕ್ಸರ್​ಗಳೊಂದಿಗೆ ತಮ್ಮ ಮೊದಲ ಟಿ 20 ಐ ಶತಕ ಪೂರ್ಣಗೊಳಿಸಿದರು. ಇದರೊಂದಿಗೆ ಅವರು ಅಂತಾ ರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಸತತ 3 ಸಿಕ್ಸರ್​ಗಳೊಂದಿಗೆ ಶತಕ ತಂದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಟಿ20ಐನಲ್ಲಿ ಅತಿ ವೇಗದ 50-100 ರನ್

  • 12 ಎಸೆತಗಳು – ಡೇವಿಡ್ ಮಿಲ್ಲರ್ ವಿರುದ್ಧ ಬ್ಯಾನ್, 2017
  • 12 ಎಸೆತಗಳು – ರೋಹಿತ್ ಶರ್ಮಾ ವಿರುದ್ಧ ಶ್ರೀಲಂಕಾ, 2017
  • 13 ಎಸೆತಗಳು – ಸಂದೀಪ್ ಜೋರಾ ವಿರುದ್ಧ ಪಿಎನ್ಜಿ, 2024
  • 13 ಎಸೆತಗಳು – ಅಭಿಷೇಕ್ ಶರ್ಮಾ ವಿರುದ್ಧ ಜಿಮ್, 2024

ಟಿ20ಐನಲ್ಲಿ ಸಿಕ್ಸರ್ ಸಿಡಿಸಿದ ಟೀಂ ಇಂಡಿಯಾ ಕ್ರಿಕೆಟಿಗರು

  • ಸೂರ್ಯಕುಮಾರ್ ಯಾದವ್ ವಿರುದ್ಧ ಇಂಗ್ಲೆಂಡ್, 2021
  • ತಿಲಕ್ ವರ್ಮಾ ವಿರುದ್ಧ ವಿಐ, 2024
  • ಅಭಿಷೇಕ್ ಶರ್ಮಾ ವಿರುದ್ಧ ಜಿಮ್, 2024

ಟಿ20ಐನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಭಾರತೀಯರು

  • 21 ವರ್ಷ 279 ದಿನ – ಯಶಸ್ವಿ ಜೈಸ್ವಾಲ್
  • 23 ವರ್ಷ 146 ದಿನ – ಶುಬ್ಮನ್ ಗಿಲ್
  • 23 ವರ್ಷ 156 ದಿನ – ಸುರೇಶ್ ರೈನಾ
  • 23 ವರ್ಷ 307 ದಿನ – ಅಭಿಷೇಕ್ ಶರ್ಮಾ

ಟಿ20ಐನಲ್ಲಿ ಸಿಕ್ಸರ್​ ಮೂಲಕ ಶತಕ ಬಾರಿಸಿದ ಭಾರತೀಯರು

ಸುರೇಶ್ ರೈನಾ -ದಕ್ಷಿಣ ಆಫ್ರಿಕಾ ವಿರುದ್ಧ
ರೋಹಿತ್ ಶರ್ಮಾ- ದಕ್ಷಿಣ ಆಫ್ರಿಕಾ ವಿರುದ್ಧ
ಕೆಎಲ್ ರಾಹುಲ್- ವಿಂಡೀಸ್ ವಿರುದ್ಧ
ವಿರಾಟ್ ಕೊಹ್ಲಿ – ಅಫಘಾನಿಸ್ತಾನ ವಿರುದ್ಧ
ಋತುರಾಜ್ ಗಾಯಕ್ವಾಡ್ – ಆಸ್ಟ್ರೇಲಿಯಾ ವಿರುದ್ಧ
ಅಭಿಷೇಕ್ ಶರ್ಮಾ- ಜಿಂಬಾಬ್ವೆ ವಿರುದ್ಧ

ಅತಿ ಕಡಿಮೆ ಇನಿಂಗ್ಸ್​ನಲ್ಲಿ ಶತಕ ಬಾರಿಸಿದವರು

  • 2- ಅಭಿಷೇಕ್ ಶರ್ಮಾ
  • 3 – ದೀಪಕ್ ಹೂಡಾ
  • 4- ಕೆಎಲ್ ರಾಹುಲ್
  • 6- ಯಶಸ್ವಿ ಜೈಸ್ವಾಲ್
  • 6- ಶುಬ್ಮನ್ ಗಿಲ್

ಸಂತಸ ವ್ಯಕ್ತಪಡಿಸಿದ ಅಭಿಷೇಕ್​

ಇದು ನನ್ನ ಉತ್ತಮ ಪ್ರದರ್ಶನ ಎಂದು ನಾನು ಭಾವಿಸುತ್ತೇನೆ. ನಿನ್ನೆ ನಾವು ಅನುಭವಿಸಿದ ಸೋಲು, ಅದು ನಮಗೆ ಸುಲಭವಾಗಿರಲಿಲ್ಲ. ಇಂದು ನನ್ನ ದಿನ ಎಂದು ನಾನು ಭಾವಿಸಿದೆ ಮತ್ತು ನಾನು ಅದನ್ನು ಲೆಕ್ಕಕ್ಕೆ ತೆಗೆದುಕೊಂಡೆ. ಟಿ 20 ಆವೇಗದ ಬಗ್ಗೆ ಎಂದು ನಾನು ಭಾವಿಸುತ್ತೇನೆ ಮತ್ತು ನಾನು ಅದನ್ನು ಕೊನೆಯವರೆಗೂ ಕೊಂಡೊಯ್ದಿದ್ದೇನೆ ಎಂದು ಶರ್ಮಾ ಹೇಳಿದರು.

Continue Reading

ಪ್ರಮುಖ ಸುದ್ದಿ

ZIM vs IND : ಭಾರತ ತಂಡಕ್ಕೆ 100 ರನ್​ ಭರ್ಜರಿ ಜಯ, ಜಿಂಬಾಬ್ವೆ ವಿರುದ್ಧ ಸರಣಿಯಲ್ಲಿ 1-1 ಸಮಬಲ ಸಾಧನೆ

VISTARANEWS.COM


on

ZIM vs IND
Koo

ಹರಾರೆ: ಬ್ಯಾಟಿಂಗ್​ನಲ್ಲಿ ಅಭಿಷೇಕ್​ ಶರ್ಮಾ (100 ರನ್​, 47 ಎಸೆತ, 7 ಫೋರ್, 8 ಸಿಕ್ಸರ್​) ಬಾರಿಸಿದ ಅಮೋಘ ಶತಕ ಹಾಗೂ ಬೌಲಿಂಗ್​ನಲ್ಲಿ ಮುಕೇಶ್​ ಕುಮಾರ್ ಹಾಗೂ ಅವೇಶ್​ ಖಾನ್​ ಅವರ ತಲಾ 3 ವಿಕೆಟ್​ ಸಾಧನೆಯಿಂದ ಮಿಂಚಿದ ಭಾರತ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ (ZIM vs IND) ಎರಡನೇ ಪಂದ್ಯದಲ್ಲಿ 100 ರನ್​ ಭರ್ಜರಿ ವಿಜಯ ದಾಖಲಿಸಿದೆ. ಈ ಮೂಲಕ ಭಾರತ ತಂಡ ಐದು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧನೆ ಮಾಡಿದೆ. ಮೊದಲ ಪಂದ್ಯದಲ್ಲಿ 13 ರನ್​ಗಳ ಹೀನಾಯ ಸೋಲಿಗೆ ಒಳಗಾಗಿ ಅವಮಾನಕ್ಕೆ ಈಡಾಗಿದ್ದ ವಿಶ್ವ ಚಾಂಪಿಯನ್​ ಮೆನ್​ ಇನ್ ಬ್ಲ್ಯೂ ಬಳಗ ಎರಡನೇ ಪಂದ್ಯದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿತು. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿತು.

ಇಲ್ಲಿನ ಹರಾರೆ ಸ್ಪೋರ್ಟ್ಸ್​​ ಕ್ಲಬ್​ ಕ್ರಿಕೆಟ್​ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 234 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಆತಿಥೇಯ ಜಿಂಬಾಬ್ವೆ ಬಳಗ 18. 4 ಓವರ್​ಗಳಲ್ಲಿ 134 ರನ್​ಗಳಿಗೆ ಆಲ್​ಔಟ್ ಆಯಿತು.

ಮಾರಕ ಬೌಲಿಂಗ್​

ಭಾರತದ ಬ್ಯಾಟರ್​ಗಳು ದೊಡ್ಡ ಮೊತ್ತವನ್ನು ಪೇರಿಸಿದ್ದ ಕಾರಣ ಬೌಲರ್​ಗಳಿಗೆ ತಮ್ಮ ಪ್ರತಾಪ ತೋರಿಸಲು ಅನುಕೂಲವಾಯಿತು. ಆರಂಭದಿಂದಲೇ ಆತಿಥೇಯ ತಂಡದ ವಿರುದ್ಧ ಪ್ರಾಬಲ್ಯ ಸಾಧಿಸಿದರು. ಇನ್ನೋಸೆಂಟ್​ ಕೈಯಾ 4 ರನ್ ಬಾರಿಸಿ ಮುಕೇಶ್ ಎಸೆತಕ್ಕೆ ಔಟಾದರು. ಆದರೆ, ಅ ಬಳಿಕ ವೆಸ್ಲಿ ಮಧೆವೆರೆ (43 ರನ್​) ಹಾಗೂ ಬ್ರಿಯಾನ್ ಬೆನೆಟ್ (26 ರನ್​) ಭಾರತದ ಬೌಲರ್​ಗಳನ್ನು ಸ್ವಲ್ಪ ಹೊತ್ತು ಕಾಡಿದರು. ಆದರೆ, ಬ್ರಿಯಾನ್ ಮುಕೇಶ್ ಎಸೆತಕ್ಕೆ ಔಟಾದ ಬಳಿಕ ಡಿಯಾನ್ ಮೈರ್ಸ್​ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ನಾಯಕ ಸಿಕಂದರ್​ ರಾಜಾ 4 ರನ್​ಗೆ ಔಟಾದರು. ಇವರಿಬ್ಬರೂ ಆವೇಶ್​ ಖಾನ್​ ಬೌಲಿಂಗ್​ಗೆ ಬಲಿಯಾದರು. ಇದಾದ ಬಳಿಕ ಜಿಂಬಾಬ್ವೆ ಆಟಗಾರರ ಪ್ರತಾಪ ಕಡಿಮೆಯಾಯಿತು. ಕ್ಯಾಂಪ್​ಬೆಲ್​ 10 ರನ್​, ಮಂಡಂಡೆ ಶೂನ್ಯಕ್ಕೆ ಹಾಗೂ ಮಸಕಡ್ಸಾ 1 ರನ್​ಗೆ ಔಟಾಗುವ ಮೂಲಕ ಭಾರತ ಸಂಪೂರ್ಣವಾಗಿ ಮೇಲುಗೈ ಸಾಧಿಸಿತು. ಲ್ಯೂಕ್​ ಲ್ಯಾಂಗ್​ವೇ ಕೊನೆಯಲ್ಲಿ 33 ರನ್ ಬಾರಿಸಿದರೂ ಭಾರತದ ರನ್​ ಮೊತ್ತವನ್ನು ಸಮೀಪಿಸಲೂ ಅವರಿಗೆ ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

ಅಭಿಷೇಕ್​ ಅಬ್ಬರ

ಮೊದಲು ಬ್ಯಾಟ್ ಮಾಡಿದ ಭಾರತ ಪರ ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಶುಭ್​ಮನ್ ಗಿಲ್​ 2 ರನ್​ಗೆ ಔಟಾದ ಹೊರತಾಗಿಯೂ ಅವರು ತಮ್ಮ ಹೊಡೆಬಡಿಯ ಬ್ಯಾಟಿಂಗ್ ಪ್ರದರ್ಶನ ನಿಲ್ಲಿಸಲಿಲ್ಲ. ತಾವೆದರುಸಿದ ಮೊದಲ ಎಸೆತಕ್ಕೆ ಸಿಕ್ಸರ್ ಬಾರಿಸಿ ರನ್ ಕದಿಯಲು ಆರಂಭಿಸಿದ ಅವರು 34 ಎಸೆತಕ್ಕೆ ಅರ್ಧ ಶತಕ ಹಾಗೂ ನಂತರ 13 ಎಸೆತಗಳಲ್ಲಿ 50 ರನ್ ಬಾರಿಸಿ ಚೊಚ್ಚಲ ಅಂತಾರಾಷ್ಟ್ರೀಯ ಶತಕ ಬಾರಿಸಿದರು. ಆದರೆ, ನಂತರದ ಎಸೆತದಲ್ಲಿಯೇ ಔಟಾದರು. ಅದಕ್ಕಿಂತ ಮೊದಲು ಅವರು ಎರಡನೇ ವಿಕೆಟ್​ಗೆ ಋತುರಾಜ್ ಗಾಯಕ್ವಾಡ್ ಜತೆಗೆ 137ರನ್​ಗಳ ಜತೆಯಾಟ ಆಡಿದರು. ಶರ್ಮಾ ಔಟಾದ ಬಳಿಕ ಆಡಲು ಬಂದ ರಿಂಕು ಸಿಂಗ್​ ಇನ್ನಷ್ಟು ಅಬ್ಬರಿಸಿದರು. ಅವರು 22 ಎಸೆತಕ್ಕೆ 48 ರನ್ ಬಾರಿಸಿ ಮಿಂಚಿದರು. ಅದಕ್ಕಿಂತ ಮೊದಲು ಸಾವಧಾನವಾಗಿ ಇನಿಂಗ್ಸ್ ಕಟ್ಟಿದ ಋತುರಾಜ್ ಗಾಯಕ್ವಾಡ್​ 47 ಎಸೆತಕ್ಕೆ 77 ರನ್ ಹೊಡೆದರು. ಅವರ ಇನಿಂಗ್ಸ್​​ನಲ್ಲಿ 11 ಫೋರ್ ಹಾಗೂ 1 ಸಿಕ್ಸರ್ ಇತ್ತು.

ಸರಣಿಯ ಮೂರನೇ ಪಂದ್ಯ ಬುಧವಾರ (ಜುಲೈ 10ರಂದು) ನಡೆಯಲಿದೆ.

Continue Reading

ಪ್ರಮುಖ ಸುದ್ದಿ

Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

Rahul Dravid : ದ್ರಾವಿಡ್​ 2021 ರಲ್ಲಿ ಭಾರತ ರಾಷ್ಟ್ರೀಯ ತಂಡಕ್ಕೆ ಕೋಚ್​ ಆಗಿ ಬಂದರು. ಅಂದಿನಿಂದ, ಭಾರತವು 2022 ರ ಟಿ 20 ವಿಶ್ವಕಪ್​​ನ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಮತ್ತು 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮತ್ತು ಏಕದಿನ ವಿಶ್ವಕಪ್​ ಫೈನಲ್​​ನಲ್ಲಿ ಸೋತಿತು. ಕೊನೆಯದಾಗಿ ಅವರ ಕೋಚಿಂಗ್ ಅಡಿಯಲ್ಲಿ, ಮೆನ್ ಇನ್ ಬ್ಲೂ 2024 ರಲ್ಲಿ ಟಿ 20 ವಿಶ್ವಕಪ್ ಅನ್ನು ಎತ್ತಿಹಿಡಿದಿದ್ದರಿಂದ ಅವರು ಖುಷಿಯಿಂದ ನಿರ್ಗಮಿಸಿದರು.

VISTARANEWS.COM


on

Rahul Dravid
Koo

ಬೆಂಗಳೂರು: ರಾಹುಲ್ ದ್ರಾವಿಡ್ (Rahul Dravid) ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಸೋಲು ಹಾಗೂ ಅವಮಾನಗಳನ್ನು ಎದುರಿಸಿದ್ದಾರೆ. ಒಬ್ಬ ಆಟಗಾರನಾಗಿ, ಬಳಿಕ ಎನ್​​ಸಿಎ ಮುಖ್ಯಸ್ಥ ಹಾಗೂ ಕೋಚ್​ ಆಗಿ 51 ವರ್ಷದ ಕ್ರಿಕೆಟಿಗ ಹಲವು ಬಾರಿ ನೋವುಗಳನ್ನು ಉಂಡಿದ್ದಾರೆ. 2003 ರ ಏಕದಿನ ವಿಶ್ವಕಪ್​​ನ ಫೈನಲ್​​ನಲ್ಲಿ ಸೋತರು ಮತ್ತು ನಂತರ 2007 ರ ಆವೃತ್ತಿಯಲ್ಲಿ ಗುಂಪು ಹಂತದ ನಿರ್ಗಮನದ ದುಃಖ ಅನುಭವಿಸಿದರು. ಇದರಲ್ಲಿ ಅವರು ತಂಡವನ್ನು ಮುನ್ನಡೆಸಿದರು. 2011 ರ ಏಕದಿನ ವಿಶ್ವಕಪ್ನಲ್ಲಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಲಿಲ್ಲ ಮತ್ತು ಆಟಗಾರ ಮತ್ತು ತರಬೇತುದಾರರಾಗಿ ಐಪಿಎಲ್ ಗೆಲ್ಲಲು ವಿಫಲರಾದರು.

ದ್ರಾವಿಡ್​ 2021 ರಲ್ಲಿ ಭಾರತ ರಾಷ್ಟ್ರೀಯ ತಂಡಕ್ಕೆ ಕೋಚ್​ ಆಗಿ ಬಂದರು. ಅಂದಿನಿಂದ, ಭಾರತವು 2022 ರ ಟಿ 20 ವಿಶ್ವಕಪ್​​ನ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಮತ್ತು 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮತ್ತು ಏಕದಿನ ವಿಶ್ವಕಪ್​ ಫೈನಲ್​​ನಲ್ಲಿ ಸೋತಿತು. ಕೊನೆಯದಾಗಿ ಅವರ ಕೋಚಿಂಗ್ ಅಡಿಯಲ್ಲಿ, ಮೆನ್ ಇನ್ ಬ್ಲೂ 2024 ರಲ್ಲಿ ಟಿ 20 ವಿಶ್ವಕಪ್ ಅನ್ನು ಎತ್ತಿಹಿಡಿದಿದ್ದರಿಂದ ಅವರು ಖುಷಿಯಿಂದ ನಿರ್ಗಮಿಸಿದರು.

ಒಬ್ಬ ಆಟಗಾರನಾಗಿ ದ್ರಾವಿಡ್ ಸಾಕಷ್ಟು ರನ್ ಗಳಿಸಿದ್ದಾರೆ. ಭಾರತ ತಂಡವನ್ನು ಪ್ರತಿ ಬಾರಿಯೂ ದೊಡ್ಡ ಎತ್ತರಕ್ಕೆ ಕೊಂಡೊಯ್ದರು. ದ್ರಾವಿಡ್ ಅವರ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಭಾರತ ಸರ್ಕಾರ ಅವರಿಗೆ ಭಾರತ ರತ್ನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವಿಶೇಷವೆಂದರೆ, ಇದು ಭಾರತ ಗಣರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ದ್ರಾವಿಡ್ ಈ ಗೌರವಕ್ಕೆ ಪಾತ್ರರಾಗುವಷ್ಟು ಸಾಧನೆ ಮಾಡಿದ್ದಾರೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರವು ಅವರಿಗೆ ಭಾರತ ರತ್ನವನ್ನು ನೀಡಿ ಗೌರವಿಸುವುದು ಸೂಕ್ತವಾಗಿದೆ, ಏಕೆಂದರೆ ಅವರು ನಿಜವಾಗಿಯೂ ಅದಕ್ಕೆ ಅರ್ಹರಾಗಿದ್ದಾರೆ. ವೆಸ್ಟ್ ಇಂಡೀಸ್​​ನಲ್ಲಿ ವಿಶ್ವ ಕಪ್​ ಗೆಲ್ಲುವುದರ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದ್ದಾರೆ. ಅವರು ವಿದೇಶಿ ನೆಲದಲ್ಲಿ ಅತ್ಯುತ್ತಮ ಬ್ಯಾಟರ್​ ಆಗಿದ್ದರು. ಇಂಗ್ಲೆಂಡ್​​ನಲ್ಲಿ ಗೆಲುವು ಅಲ್ಲಿ ಟೆಸ್ಟ್ ಪಂದ್ಯ ಸರಣಿಯನ್ನು ಗೆದ್ದ ಮೂವರು ಭಾರತೀಯ ನಾಯಕರಲ್ಲಿ ಒಬ್ಬರಾಗಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಮತ್ತು ನಂತರ ಹಿರಿಯ ತಂಡದ ತರಬೇತುದಾರರಾಗಿ ಅದ್ಭುತ ಪ್ರತಿಭೆಗಳನ್ನು ಬೆಳೆಸಿದ್ದರು ಎಂದು ಗವಾಸ್ಕರ್​ ಹೇಳಿದ್ದಾರೆ.

ಇದನ್ನೂ ಓದಿ: Abhishek Sharma : ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್ ಶರ್ಮಾ

ಭಾರತ ರತ್ನ ಪ್ರಶಸ್ತಿ ಪಡೆದ ಏಕೈಕ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್. ದ್ರಾವಿಡ್ ಅವರ ಸಾಧನೆಗಳು ಎಲ್ಲಾ ಪಕ್ಷಗಳು, ಜಾತಿ, ಮತ ಮತ್ತು ಸಮುದಾಯಗಳನ್ನು ಮೀರಿವೆ. ಇಡೀ ದೇಶಕ್ಕೆ ಹೇಳಲಾಗದ ಸಂತೋಷವನ್ನು ಕೊಟ್ಟಿದ್ದಾರೆ. ಅದಕ್ಕಾಗಿಯೇ ಅವರನ್ನು ಪರಿಗಣಿಸಬೇಕು ಎಂದು ಗವಾಸ್ಕರ್ ಹೇಳಿದ್ದಾರೆ.

Continue Reading
Advertisement
dina Bhavishya
ಭವಿಷ್ಯ29 seconds ago

Dina Bhavishya : ಇತರರ ವಿರುದ್ಧ ದ್ವೇಷ ಕಾರುತ್ತಾ ಹೋದರೆ ಹೆಚ್ಚಾಗುತ್ತೆ ಈ ರಾಶಿಯವರ ಮಾನಸಿಕ ಒತ್ತಡ

School Principal
ದೇಶ5 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ5 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ5 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ6 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ6 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ7 hours ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest7 hours ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Puri Jagannath Rath Yatra
ಪ್ರಮುಖ ಸುದ್ದಿ7 hours ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

NIA Arrest
ದೇಶ7 hours ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ9 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ12 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ12 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ23 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌