‌‌ಟೆನ್ನಿಸ್‌ಗೂ ತಟ್ಟಿದ Match Fixing ಬಿಸಿ: 6 ಫಿಕ್ಸರ್ಸ್ ಬ್ಯಾನ್! Vistara News
Connect with us

ಕ್ರೀಡೆ

‌‌ಟೆನ್ನಿಸ್‌ಗೂ ತಟ್ಟಿದ Match Fixing ಬಿಸಿ: 6 ಫಿಕ್ಸರ್ಸ್ ಬ್ಯಾನ್!

ಈ 6 ಆಟಗಾರರಿಗೆ 2 ವರ್ಷಗಳ ನಿಷೇಧ ಹಾಗೂ ಜೈಲುಶಿಕ್ಷೆ ವಿಧಿಸಲಾಗಿದೆ. ಮಾರ್ಕ್‌ ಫೊರ್ನೆಲ್‌ ಮೆಸ್ಟ್‌ರೆಸ್‌ಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಲಾಗಿದೆ.

VISTARANEWS.COM


on

Koo

ಟೆನ್ನಿಸ್: ಕ್ರಿಕೆಟ್‌ ಆಟದಲ್ಲಿ ಈ ಹಿಂದೆ ಅನೇಖ ಬಾರಿ ಕೇಳಿ ಬಂದಿದ್ದ ಮ್ಯಾಚ್‌ ಫಿಕ್ಸಿಂಗ್‌ ಕರಾಳ ವಿಚಾರ ಟೆನ್ನಿಸ್‌ ಕ್ಷೇತ್ರವನ್ನೂ ಬಾಧಿಸುತ್ತಿದೆ. ಅಂತಾರಾಷ್ಟ್ರೀಯ ಟೆನ್ನಿಸ್‌ ಇಂಟಿಗ್ರಿಟಿ ಏಜೆನ್ಸಿಯು (ITIA) 6 ಟೆನ್ನಿಸ್‌ ಆಟಗಾರರನ್ನು ಮ್ಯಾಚ್-ಫಿಕ್ಸಿಂಗ್‌ ಆರೋಪದಲ್ಲಿ ದೀರ್ಘಾವಧಿವರೆಗೆ ಬ್ಯಾನ್‌ ಮಾಡಿದೆ. ಬ್ಯಾನ್‌ ಆದ 6 ಆಟಗಾರರ ವಿರುದ್ಧ ಮ್ಯಾಚ್‌ ಫಿಕ್ಸಿಂಗ್‌ ಆರೋಪದಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು. ಅವರು ಟೆನ್ನಿಸ್ ಆಡದಂತೆ ನಿಷೇಧಾಜ್ಞೆ ವಿಧಿಸಿ ಮೇ 6 ರಂದು ಆದೇಶಿಸಿದೆ.

ಜಾರ್ಜ್‌ ಮಾರ್ಸೆ ವಿದ್ರಿ, ಮಾರ್ಕ್‌ ಫೊರ್ನೆಲ್‌ ಮೆಸ್ಟ್‌ರೆಸ್‌, ಪೆಡ್ರೊ ಬೆರ್ನಬೆ ಫ್ರಾಂಕೊ, ಕಾರ್ಲೊಸ್‌ ಒರ್ಟೆಗಾ, ಜೈಮೆ ಒರ್ಟೆಗಾ ಹಾಗೂ ಮಾರ್ಕೊಸ್‌ ಟೊರ್ರಾಲ್ಬೊ ಎಂಬ 6 ಆಟಗಾರರನ್ನು ಬ್ಯಾನ್‌ ಮಾಡಲಾಗಿದೆ. ಈ ಆಟಗಾರರು ಮ್ಯಾಚ್‌ ಫಿಕ್ಸಿಂಗ್‌ ಮಾಡಿದ್ದರು ಎಂದು ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿ ಸ್ಪೇನ್‌ ನ್ಯಾಯಾಲಯವು ಆದೇಶ ಹೊರಡಿಸಿದೆ.

ಜಾರ್ಜ್‌ ಮಾರ್ಸೆ ವಿದ್ರಿ ಹಾಗೂ ಮಾರ್ಕ್‌ ಫೊರ್ನೆಲ್‌ ಮೆಸ್ಟ್‌ರೆಸ್‌ ಇಬ್ಬರು ಟೆನ್ನಿಸ್‌ ಆಟಗಾರರು ವಿಶ್ವದ ಟೆನ್ನಿಸ್‌ ಆಟಗಾರರ ಪಟ್ಟಿಯಲ್ಲಿ ರ‍್ಯಾಂಕ್‌ ಪಡೆದವರು. ಫೊರ್ನೆಲ್‌ ಮೆಸ್ಟ್‌ರೆಸ್‌ಗೆ 2007ರಲ್ಲಿ ವಿಶ್ವಕ್ಕೆ 236ನೇ ಸ್ಥಾನದಲ್ಲಿದ್ದರು. ಹಾಗೂ ಎರಡು ಬಾರಿ ATP ಚಾಲೆಂಜರ್‌ ಪಂದ್ಯದಲ್ಲಿ ಗೆಲುವು ಸಾಧಿಸಿದ್ದರು. ಮಾರ್ಸೆ ವಿದ್ರಿ 2008ರಲ್ಲಿ ವಿಶ್ವಕ್ಕೆ 562ನೇ ಸ್ಥಾನ ತಲುಪಿದ್ದರು.

ಈ 6 ಆಟಗಾರರಿಗೆ 2 ವರ್ಷಗಳ ನಿಷೇಧ ಹಾಗೂ ಜೈಲುಶಿಕ್ಷೆ ವಿಧಿಸಲಾಗಿದೆ. ಮಾರ್ಕ್‌ ಫೊರ್ನೆಲ್‌ ಮೆಸ್ಟ್‌ರೆಸ್‌ಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಲಾಗಿದೆ. 22 ವರ್ಷ ಹಾಗೂ 6 ತಿಂಗಳ ಕಾಲ ನಿಷೇಧ ಮಾಡಲಾಗಿದೆ. ಹಾಗೂ $2,50,000 ದಂಡ ವಿಧಿಸಲಾಗಿದೆ.

ಬ್ಯಾನ್‌ ಆದ ಸಂದರ್ಭದಲ್ಲಿ ಯಾವುದೇ ಆಟಗಾರರು ಅಂತಾರಾಷ್ಟ್ರೀಯ ಸಂಸ್ಥೆಗಳು ಆಯೋಜಿಸುವ ಯಾವುದೇ ಟೆನ್ನಿಸ್‌ ಪಂದ್ಯ‌ ಆಡುವಂತಿಲ್ಲ. ಹಾಗೂ ಯಾರಿಗೂ ಟನ್ನಿಸ್ ಕೋಚ್ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ.

ಇದನ್ನೂ ಓದಿ: ಕ್ರೀಡೆ ಮೇಲೆ ಯುದ್ಧದ ನೆರಳು: ವಿಂಬಲ್‌ಡನ್‌ ಟೂರ್ನಿಯಿಂದ ರಷ್ಯಾ ಆಟಗಾರರು ಬ್ಯಾನ್‌ !

ಕ್ರಿಕೆಟ್

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

ಅನಿಲ್​ ಕುಂಬ್ಳೆ ಹಾಗೂ ವಿರಾಟ್​ ಕೊಹ್ಲಿಯ ನಡುವೆ ಉತ್ತಮ ಬಾಂಧವ್ಯ ಇಲ್ಲ ಎಂಬ ಕಾರಣಕ್ಕೆ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ನನಗೆ ಮನವಿ ಮಾಡಿದ್ದರು ಎಂದು ಸೆಹ್ವಾಗ್ ಹೇಳಿದ್ದಾರೆ.

VISTARANEWS.COM


on

Had Kohli not appealed he would not have applied for the post of head coach
Koo

ನವ ದೆಹಲಿ : ಅನಿಲ್​ ಕುಂಬ್ಳೆ ಭಾರತ ತಂಡದ (Team India) ಕೋಚ್​ ಹುದ್ದೆಯಿಂದ ಕೆಳಕ್ಕೆ ಇಳಿದ ಮೇಲೆ ವೀರೇಂದ್ರ ಸೆಹ್ವಾಗ್​ ಹೆಡ್​ ಕೋಚ್​ ಆಗಬೇಕಿತ್ತು ಎಂಬ ಮಾತುಗಳು ಕೇಳಿ ಬಂದಿತ್ತು. ಆಗ ನಾಯಕರಾಗಿದ್ದ ವಿರಾಟ್ ಕೊಹ್ಲಿಯೇ ನೇರವಾಗಿ ಸೆಹ್ವಾಗ್​ ಬಳಿ ಕೋಚ್ ಆಗುವಂತೆ ಮನವಿ ಮಾಡಿದ್ದರು ಎಂದೂ ವರದಿಗಳಾಗಿದ್ದವು. ಆದರೆ, ಆ ವೇಳೆ ವೀರೇಂದ್ರ ಸೆಹ್ವಾಗ್ ಅವರು ಯಾವುದೆ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಇದೀಗ ಆ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ ಭಾರತದ ಮಾಜಿ ಸ್ಫೋಟಕ ಬ್ಯಾಟರ್​. ನಾನು ಟೀಮ್​ ಇಂಡಿಯಾದ ಕೋಚ್​ ಆಗಲು ಬಯಸಿದ್ದು ಕೊಹ್ಲಿಯ ಮನವಿ ಮೇರೆಗೆ ಎಂದು ಹೇಳಿದ್ದಾರೆ.

2016ರಲ್ಲಿ ಅನಿಲ್‌ ಕುಂಬ್ಳೆ ಭಾರತ ತಂಡಕ್ಕೆ ಹೆಡ್‌ ಕೋಚ್‌ ಆಗಿದ್ದರು. ಆ ವೇಳೆ ಭಾರತ ತಂಡ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಶಸ್ಸಿನ ಉತ್ತುಂಗದಲ್ಲಿತ್ತು. ಆದರೆ, ವಿರಾಟ್‌ ಕೊಹ್ಲಿ ಸೇರಿದಂತೆ ಕೆಲ ಆಟಗಾರುವ ಅನಿಲ್‌ ಕುಂಬ್ಳೆ ಕೋಚಿಂಗ್‌ ವಿರುದ್ಧ ನಿಂತರು. ಅನಿಲ್‌ ಕುಂಬ್ಳೆ 2017ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ ಭಾರತ ಸೋಲು ಅನುಭವಿಸಿದ ಬಳಿಕ ಹೆಡ್‌ ಕೋಚ್‌ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಈ ವೇಳೆ ಸೆಹ್ವಾಗ್ ಅರ್ಜಿ ಸಲ್ಲಿಸಿದ್ದರು ಎಂದು ಹೇಳಲಾಗಿತ್ತು. ಆದರೆ, ಅವರು ಕೋಚ್ ಆಗಲಿಲ್ಲ. ಆದರೆ, ತಾವು ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವುದಕ್ಕೆ ವಿರಾಟ್​ ಕೊಹ್ಲಿ ಹಾಗೂ ಬಿಸಿಸಿಐ ಕಾರ್ಯದರ್ಶಿ ಅಮಿತಾಭ್​ ಚೌಧರಿ ಕಾರಣ ಎಂದು ನ್ಯೂಸ್18 ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ನನ್ನನ್ನು ಸಂಪರ್ಕಿಸದಿದ್ದರೆ ನಾನು ಅರ್ಜಿ ಸಲ್ಲಿಸುತ್ತಿರಲಿಲ್ಲ. ವಿರಾಟ್ ಕೊಹ್ಲಿ ಮತ್ತು ಅನಿಲ್ ಕುಂಬ್ಳೆ ನಡುವೆ ಹೊಂದಾಣಿಕೆ ಇಲ್ಲ ಎಂದು ಹೇಳಿದ್ದರು. 2017 ರ ಚಾಂಪಿಯನ್ಸ್ ಟ್ರೋಫಿ ನಂತರ ಕುಂಬ್ಳೆ ಅವರ ಒಪ್ಪಂದವು ಮುಕ್ತಾಯಗೊಳ್ಳುತ್ತದೆ ಮತ್ತು ನಂತರ ನೀವು ತಂಡದೊಂದಿಗೆ ವೆಸ್ಟ್ ಇಂಡೀಸ್​​ ಪ್ರಯಾಣಿಸಬಹುದು ಎಂದು ಅವರು ನನಗೆ ಹೇಳಿದ್ದರು, ಎಂದು ಸೆಹ್ವಾಗ್​ ಬಹಿರಂಗ ಮಾಡಿದ್ದಾರೆ.

Continue Reading

ಕ್ರಿಕೆಟ್

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

ಡೆಲ್ಲಿ ಹಾಗೂ ಯುಪಿ ವಾರಿಯರ್ಸ್​ ತಂಡ ಮಹಿಳೆಯರ ಪ್ರೀಮಿಯರ್​ ಲೀಗ್​ನ ಪ್ಲೇ ಆಫ್​ ಹಂತಕ್ಕೆ ತಲುಪಿದೆ.

VISTARANEWS.COM


on

Delhi team won the toss against UP and chose fielding
Koo

ಮುಂಬಯಿ: ಮಹಿಳೆಯರ ಪ್ರೀಮಿಯರ್​ ಲೀಗ್​ 20ನೇ ಪಂದ್ಯದಲ್ಲಿ ಯುಪಿ ವಿರುದ್ಧ ಟಾಸ್ ಗೆದ್ದಿರುವ ಡೆಲ್ಲಿ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಸೋಮವಾರ ನಡೆದ ಹಣಾಹಣಿಯಲ್ಲಿ ಮುಂಬಯಿ ವಿರುದ್ಧ ಭರ್ಜರಿ 9 ವಿಕೆಟ್ ವಿಜಯ ಸಾಧಿಸಿತ್ತು. ಆ ಪಂದ್ಯದಲ್ಲೂ ಡೆಲ್ಲಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಮತ್ತೆ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ ಡೆಲ್ಲಿ ನಾಯಕಿ ಮೆಗ್​ ಲ್ಯಾನಿಂಗ್​.

ಬ್ರಬೊರ್ನ್​ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಈ ಪಂದ್ಯ ಆಯೋಜನೆಗೊಂಡಿದೆ. ಡೆಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆಧರೆ, ಆದರೆ, ಯುಪಿ ವಾರಿಯರ್ಸ್​ ತಂಡದ ಗ್ರೇಸ್​ ಹ್ಯಾರಿಸ್​, ರಾಜೇಶ್ವರಿ ಗಾಯಕ್ವಾಡ್​, ದೇವಿಕಾ ವೈದ್ಯ ಆಡುತ್ತಿಲ್ಲ. ಎಸ್​ ಯಶಶ್ರೀ, ಶ್ವೇತಾ ಸೆಹ್ರಾವತ್​, ಶಬ್ನಿಮ್​ ಇಸ್ಮಾಯಿಲ್ ತಂಡಕ್ಕೆ ಸೇರಿಕೊಂಡಿದ್ದಾರೆ.

ಸೋಲಿನೊಂದಿಗೆ ಅಭಿಯಾನ ಮುಗಿಸಿದ ಆರ್​ಸಿಬಿ

ದಿನದ ಮೊದಲ ಪಂದ್ಯದಲ್ಲಿ ಆರ್​ಸಿಬಿ ತಂಡ ಸೋಲು ಕಂಡಿತು. ಮುಂಬೈ ಇಂಡಿಯನ್ಸ್​ ವಿರುದ್ಧದ ಅಂತಿಮ ಲೀಗ್​ ಪಂದ್ಯದಲ್ಲಿ 4 ವಿಕೆಟ್​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್​ ಈ ಗೆಲುವಿನೊಂದಿಗೆ ಮತ್ತೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಮುಂಬಯಿಯ ಡಿ.ವೈ. ಪಾಟೀಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಡಬಲ್ ಹೆಡರ್​​ ಮುಖಾಮುಖಿಯ ಮೊದಲ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ರಿಚಾ ಘೋಷ್​ ಮತ್ತು ಎಲ್ಲಿಸ್​ ಪೆರ್ರಿ ಅವರ ಸಣ್ಣ ಹೋರಾಟದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 125 ರನ್​ ಬಾರಿಸಿತು. ಮುಂಬೈ ಇಂಡಿಯನ್ಸ್​ 16.3 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 129 ರನ್​ ಬಾರಿಸಿ ಗೆಲುವು ದಾಖಲಿಸಿತು.

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ಆರಂಭಿಕ ಆಘಾತ ಕಂಡಿತು. ಗುಜರಾತ್​ ಜೈಂಟ್ಸ್​ ವಿರುದ್ಧ ಸಿಡಿಲಬ್ಬರ ಬ್ಯಾಟಿಂಗ್​ ನಡೆಸಿ ನಡುಕ ಹುಟ್ಟಿಸಿದ್ದ ನ್ಯೂಜಿಲ್ಯಾಂಡ್​ನ ಸ್ಟಾರ್​ ಆಲ್​ ರೌಂಡರ್​ ಸೋಫಿ ಡಿವೈನ್​ ಅವರು ಈ ಪಂದ್ಯದಲ್ಲಿ ರನೌಟ್​ ಸಂಕಟಕ್ಕೆ ಸಿಲುಕಿದರು. ಇಲ್ಲದ ರನ್ ಕದಿಯಲೆತ್ನಿಸಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭವಿಸಿದರು.

ನಾಯಕಿ ಸ್ಮೃತಿ ಮಂಧಾನ ಅವರ ಆಟ ಈ ಪಂದ್ಯದಲ್ಲಿಯೂ ಮಂದ ಗತಿಯಿಂದ ಕೂಡಿತ್ತು. 25 ಎಸೆತ ಎದುರಿಸಿ 24 ರನ್​ ಗಳಿಸಿದರು. ಇದರೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಮಂಧಾನ ಸಂಪೂರ್ಣ ವೈಫಲ್ಯ ಕಂಡಂತಾಯಿತು. ಈ ಮೂಲಕ ಮುಂದಿನ ಬಾರಿಯ ಆವೃತ್ತಿಯಲ್ಲಿ ಅವರು ಆರ್​ಸಿಬಿ ತಂಡದಲ್ಲಿಯೇ ಉಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Continue Reading

ಕ್ರಿಕೆಟ್

WPL 2023: ಸೋಲಿನೊಂದಿಗೆ ಅಭಿಯಾನ ಮುಗಿಸಿದ ಆರ್​ಸಿಬಿ

ಮುಂಬೈ ಇಂಡಿಯನ್ಸ್​ ವಿರುದ್ಧದ ಮಂಗಳವಾರದ ಅಂತಿಮ ಲೀಗ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ 4 ವಿಕೆಟ್​ಗಳ ಸೋಲಿಗೆ ತುತ್ತಾಗಿದೆ.

VISTARANEWS.COM


on

Edited by

WPL 2023 RCB ends campaign with defeat
Koo

ಮುಂಬಯಿ: ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಸೋಲಿನೊಂದಿಗೆ ಅಭಿಯಾನ ಆರಂಭಿಸಿದ ಸ್ಮೃತಿ ಮಂಧಾನ ಸಾರಥ್ಯದ ಆರ್​ಸಿಬಿ(Royal Challengers Bangalore) ತಂಡ ಇದೀಗ ಸೋಲಿನೊಂದಿಗೆಯೇ ತನ್ನ ಅಭಿಯಾನವನ್ನು ಮುಗಿಸಿದೆ. ಮಂಗಳವಾರ ನಡೆದ ಮುಂಬೈ ಇಂಡಿಯನ್ಸ್​ ವಿರುದ್ಧದ ಅಂತಿಮ ಲೀಗ್​ ಪಂದ್ಯದಲ್ಲಿ 4 ವಿಕೆಟ್​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್​ ಈ ಗೆಲುವಿನೊಂದಿಗೆ ಮತ್ತೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಮುಂಬಯಿಯ ಡಿ.ವೈ. ಪಾಟೀಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಡಬಲ್ ಹೆಡ್ಡರ್​ ಮುಖಾಮುಖಿಯ ಮೊದಲ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ರಿಚಾ ಘೋಷ್​ ಮತ್ತು ಎಲ್ಲಿಸ್​ ಪೆರ್ರಿ ಅವರ ಸಣ್ಣ ಹೋರಾಟದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 125 ರನ್​ ಬಾರಿಸಿತು. ಜಬಾಬಿತ್ತ ಮುಂಬೈ ಇಂಡಿಯನ್ಸ್​ 16.3 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 129 ರನ್​ ಬಾರಿಸಿ ಗೆಲುವು ದಾಖಲಿಸಿತು.

ಸಣ್ಣ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈಗೆ ಯಾಸ್ತಿಕಾ ಭಾಟಿಯಾ ಮತ್ತು ಹೇಲಿ ಮ್ಯಾಥ್ಯೂಸ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್​ಗೆ 53 ರನ್​ಗಳ ಜತೆಯಾಟ ನಡೆಸಿತು. ಯಾಸ್ತಿಕಾ 30 ರನ್​ ಗಳಿಸಿದರೆ, ಮ್ಯಾಥ್ಯೂಸ್ 24 ರನ್​ ಬಾರಿಸಿದರು. ಉಭಯ ಆಟಗಾರ್ತಿಯ ವಿಕೆಟ್​ ಪತನದ ಬೆನ್ನಲ್ಲೇ ತಂಡ ನಾಯಕೀಯ ಕುಸಿತ ಕಂಡಿತು. ನಾಯಕಿ ಹರ್ಮನ್​ಪ್ರೀತ್​ ಕೌರ್​(2), ನ್ಯಾಟ್​ ಸ್ಕಿವರ್​-ಬ್ರಂಟ್​ (13) ಅಲ್ಪ ಮೊತ್ತಕ್ಕೆ ಔಟಾದರು. ತಂಡದ ಮೊತ್ತ 74 ಆಗುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡು ಮುಂಬೈ ಒಂದು ಹಂತದಲ್ಲಿ ಸಂಕಷ್ಟಕ್ಕೆ ಸಿಲುಕಿತು.

ನಾಟಕೀಯ ಕುಸಿತ ಕಂಡ ಮುಂಬೈ ತಂಡಕ್ಕೆ ಬೌಲಿಂಗ್​ನಲ್ಲಿ ಮೂರು ವಿಕೆಟ್​ ಕಿತ್ತು ಪ್ರಮುಖ ಪಾತ್ರ ನಿರ್ವಹಿಸಿದ್ದ ಅಮೇಲಿಯಾ ಕೆರ್​ ಮತ್ತು ಪೂಜಾ ವಸ್ತ್ರಾಕರ್​ ಕೆಳ ಕ್ರಮಾಂಕದಲ್ಲಿ ತಾಳ್ಮೆಯುತ ಬ್ಯಾಟಿಂಗ್​ ನಡೆಸುವ ಮೂಲಕ ತಂಡಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಂಡರು. ತಂಡದ ಗೆಲುವಿಗೆ 6 ರನ್​ ಅಗತ್ಯವಿದ್ದಾಗ ಪೂಜಾ ವಿಕೆಟ್ ಕೈಚೆಲ್ಲಿದರು. ಅವರು 19 ರನ್ ಗಳಿಸಿದರು.​ ಅಮೇಲಿಯಾ ಕೆರ್​ ಅಜೇಯ ​31 ರನ್​ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಈ ಅಜೇಯ ಇನಿಂಗ್ಸ್​ ಆಟದ ವೇಳೆ 4 ಬೌಂಡರಿ ಸಿಡಿಯಿತು.

ಮಂದ ಗತಿಯ ಬ್ಯಾಟಿಂಗ್​ ನಡೆಸಿದ ಮಂಧಾನ ಪಡೆ

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ಆರಂಭಿಕ ಆಘಾತ ಕಂಡಿತು. ಗುಜರಾತ್​ ಜೈಂಟ್ಸ್​ ವಿರುದ್ಧ ಸಿಡಿಲಬ್ಬರ ಬ್ಯಾಟಿಂಗ್​ ನಡೆಸಿ ನಡುಕ ಹುಟ್ಟಿಸಿದ್ದ ನ್ಯೂಜಿಲ್ಯಾಂಡ್​ನ ಸ್ಟಾರ್​ ಆಲ್​ ರೌಂಡರ್​ ಸೋಫಿ ಡಿವೈನ್​ ಅವರು ಈ ಪಂದ್ಯದಲ್ಲಿ ರನೌಟ್​ ಸಂಕಟಕ್ಕೆ ಸಿಲುಕಿದರು. ಇಲ್ಲದ ರನ್ ಕದಿಯಲೆತ್ನಿಸಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭಸಿದರು.

ನಾಯಕಿ ಸ್ಮೃತಿ ಮಂಧಾನ ಅವರ ಆಟ ಈ ಪಂದ್ಯದಲ್ಲಿಯೂ ಮಂದ ಗತಿಯಿಂದ ಕೂಡಿತ್ತು. 25 ಎಸೆತ ಎದುರಿಸಿ 24 ರನ್​ ಗಳಿಸಿದರು. ಇದರೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಮಂಧಾನ ಸಂಪೂರ್ಣ ವೈಫಲ್ಯ ಕಂಡಂತಾಯಿತು. ಈ ಮೂಲಕ ಮುಂದಿನ ಬಾರಿಯ ಆವೃತ್ತಿಯಲ್ಲಿ ಅವರು ಆರ್​ಸಿಬಿ ತಂಡದಲ್ಲಿಯೇ ಉಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಆರಂಭಿಕ ಆಟಗಾರ್ತಿಯರ ವಿಕೆಟ್​ ಪತನದ ಬಳಿಕ ಆಡಲಿಳಿದ ಆಸ್ಟ್ರೇಲಿಯಾದ ಆಲ್​ರೌಂಡರ್​ ಎಲ್ಲಿಸ್‌ ಪೆರ್ರಿ ತಂಡಕ್ಕೆ ಆಸರೆಯಾದರು. ಪ್ರತಿ ಓವರ್​ನಲ್ಲಿ ಒಂದು ಬೌಂಡರಿ ಬಾರಿಸುವ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸಲಾರಂಭಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಯಾರು ಕೂಡ ಉತ್ತಮ ಸಾಥ್​ ನೀಡಲಿಲ್ಲ. ಹೀತರ್​ ನೈಟ್​ ಮತ್ತು ಕನಿಕಾ ಅಹುಜಾ ತಲಾ 12 ರನ್​ಗೆ ಆಟ ಮುಗಿಸಿದರು. ಇದರ ಬೆನ್ನಲ್ಲೇ ಎಲ್ಲಿಸ್‌ ಪೆರ್ರಿ ಕೂಡ ನ್ಯಾಟ್‌ ಸ್ಕಿವರ್‌ ಬ್ರಂಟ್‌ ಎಸೆತದಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದರು. 38 ಎಸೆತ ಎದುರಿಸಿದ ಅವರು ಮೂರು ಬೌಂಡರಿ ನೆರವಿನಿಂದ 29 ರನ್​ ಬಾರಿಸಿದರು. ಸ್ಕಿವರ್‌ ಬ್ರಂಟ್‌ 24 ರನ್​ಗೆ 2 ವಿಕೆಟ್​ ಉರುಳಿಸಿದರು.

ಇದನ್ನೂ ಓದಿ WPL 2023 : ಸೇಡು ತೀರಿಸಿಕೊಂಡ ಡೆಲ್ಲಿ ಪಡೆ, ಮುಂಬಯಿ ವಿರುದ್ಧ 9 ವಿಕೆಟ್​ ಸುಲಭ ಜಯ

ಅಂತಿಮ ಹಂತದಲ್ಲಿ ರಿಚಾ ಘೋಷ್​​ ಬಿರುಸಿನ ಬ್ಯಾಟಿಂಗ್​ ನಡೆಸಿದ ಪರಿಣಾಮ ಆರ್​ಸಿಬಿ 100ರ ಗಡಿ ದಾಟಿತು. ಕ್ರೀಸ್​ ಗಿಳಿದ ಆರಂಭದಿಂದಲೇ ಸಿಕ್ಸರ್​, ಬೌಂಡರಿಗಳ ಮೂಲಕ ಮುಂಬೈ ಬೌಲರ್​ಗಳ ಸಣ್ಣ ಮೊತ್ತದ ಯೋಜನೆಯನ್ನು ತಲೆಕೆಳಗಾಗಿಸಿದರು. ಆದರೆ ಅಂತಿಮ ಓವರ್​ ಮೊದಲ ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಮುಂದಾಗಿ ಕ್ಯಾಚ್​ ನೀಡಿದರು. ಅವರ ವಿಕೆಟ್​ ಉರುಳಿದ ಬಳಿಕ ತಂಡದ ಮೊತ್ತವೂ ಕುಸಿಯಿತು. ಒಟ್ಟು 13 ಎಸೆತ ಎದುರಿಸಿದ ಅವರು ಮೂರು ಬೌಂಡರಿ 2 ಸಿಕ್ಸರ್​ ಬಾರಿಸಿ 29 ರನ್​ ಕಲೆಹಾಕಿದರು. ಮುಂಬೈ ಪರ ಅಮೇಲಿಯಾ ಕೆರ್​ 22 ರನ್​ ವೆಚ್ಚದಲ್ಲಿ ಮೂರು ವಿಕೆಟ್​ ಪಡೆದರು. ಸೈಕಾ ಇಶಾಖ್‌ ಒಂದು ವಿಕೆಟ್​ ಪಡೆದರು.

ಸಂಕ್ಷಿಪ್ತ ಸ್ಕೋರ್​: ಆರ್​ಸಿಬಿ; 20 ಓವರ್​ಗಳಲ್ಲಿ 9 ವಿಕೆಟ್​ಗೆ 125( ಎಲ್ಲಿಸ್‌ ಪೆರ್ರಿ 29, ರಿಚಾ ಘೋಷ್​ 29, ಅಮೇಲಿಯಾ ಕೆರ್​ 22ಕ್ಕೆ 3). ಮುಂಬೈ ಇಂಡಿಯನ್ಸ್: 16.3 ಓವರ್​ಗಳಲ್ಲಿ 6 ವಿಕೆಟ್​ಗೆ 129( ಅಕೇಲಿಯಾ ಕೆರ್​ ಅಜೇಯ 31, ಮ್ಯಾಥ್ಯೂಸ್​ 24, ಯಾಸ್ತಿಕಾ ಭಾಟಿಯಾ 30)

Continue Reading

ಕ್ರೀಡೆ

Rani Rampal: ರಾಯ್ ಬರೇಲಿ ಸ್ಟೇಡಿಯಂಗೆ ಹಾಕಿ ಆಟಗಾರ್ತಿ ರಾಣಿ ರಾಂಪಾಲ್ ಹೆಸರು

ಎಂಸಿಎಫ್ ರಾಯ್​ಬರೇಲಿ ಹಾಕಿ ಕ್ರೀಡಾಂಗಣವನ್ನು “ರಾಣಿ ಗರ್ಲ್ಸ್ ಹಾಕಿ ಟರ್ಫ್” ಎಂದು ಮರುನಾಮಕರಣ ಮಾಡಲಾಗಿದೆ.

VISTARANEWS.COM


on

Edited by

Rani Rampal Rae Bareilly Stadium is named after the hockey player Rani Rampal
Koo

ನವದೆಹಲಿ: ಭಾರತ ಮಹಿಳಾ ಹಾಕಿ ತಂಡದ ಸ್ಟಾರ್ ಆಟಗಾರ್ತಿ ರಾಣಿ ರಾಂಪಾಲ್(Rani Rampal) ಅವರ ಹೆಸರನ್ನು ರಾಯ್ ಬರೇಲಿಯಲ್ಲಿರುವ ಕ್ರೀಡಾಂಗಣಕ್ಕೆ ಇಡಲಾಗಿದೆ. ಈ ಮೂಲಕ ಕ್ರೀಡೆಯಲ್ಲಿ ತಮ್ಮ ಹೆಸರಿನ ಕ್ರೀಡಾಂಗಣವನ್ನು ಹೊಂದಿರುವ ಮೊದಲ ಮಹಿಳೆ ಎಂಬ ಕೀರ್ತಿಗೆ ರಾಣಿ ಅವರು ಪಾತ್ರರಾಗಿದ್ದಾರೆ.

ಎಂಸಿಎಫ್ ರಾಯ್ ಬರೇಲಿ ಹಾಕಿ ಸ್ಟೇಡಿಯಮ್ ಇನ್ನು ಮುಂದೆ ‘ರಾಣಿ ಗರ್ಲ್ಸ್ ಹಾಕಿ ಟರ್ಫ್’ ಎಂದು ಮರುನಾಮಕರಣ ಮಾಡಲಾಗಿದೆ. ಈ ವಿಚಾರವನ್ನು ರಾಣಿ ಅವರು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಹಾಕಿ ಕ್ರೀಡೆಗೆ ನಾನು ನೀಡಿದ ಕೊಡುಗೆಯನ್ನು ಪರಿಗಣಿಸಿ ಎಂಸಿಎಫ್ ರಾಯ್​ಬರೇಲಿ ಹಾಕಿ ಕ್ರೀಡಾಂಗಣವನ್ನು ರಾಣಿ ಗರ್ಲ್ಸ್ ಹಾಕಿ ಟರ್ಫ್ ಎಂದು ಮರುನಾಮಕರಣ ಮಾಡಲಾಗಿದೆ. ಇದು ನನಗೆ ಸಂದ ಅತ್ಯಂತ ಶ್ರೇಷ್ಠ ಗೌರವವಾಗಿದೆ” ಎಂದು ರಾಣಿ ರಾಂಪಾಲ್​ ತಮ್ಮ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ Hockey India: ಹಾರ್ದಿಕ್‌, ಸವಿತಾಗೆ ವರ್ಷದ ಹಾಕಿ ಆಟಗಾರ ಪ್ರಶಸ್ತಿ

“ನನ್ನ ಹೆಸರಲ್ಲಿ ಒಂದು ಕ್ರೀಡಾಂಗಣವನ್ನು ಹೊಂದಿರುವ ಮೊದಲ ಮಹಿಳಾ ಹಾಕಿ ಆಟಗಾರ್ತಿಯಾಗಿರುವುದು ನನಗೆ ಹೆಮ್ಮೆಯ ಕ್ಷಣವಾಗಿದೆ. ನಾನು ಇದನ್ನು ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅರ್ಪಿಸುತ್ತೇನೆ ಹಾಗೂ ಇದು ಮುಂದಿನ ತಲೆಮಾರಿನ ಹಾಕಿ ಆಟಗಾರ್ತಿಯರಿಗೆ ಸ್ಫೂರ್ತಿ ನೀಡಲಿ” ಎಂದು ರಾಣಿ ಹೇಳಿದರು. ಟೋಕಿಯೊ ಒಲಿಂಪಿಕ್ಸ್​ ಆಡಿದ ಬಳಿಕ ರಾಣಿ ರಾಂಪಾಲ್​ ಗಾಯದ ಕಾರಣದಿಂದ ತಂಡದಿಂದ ಹೊರಗುಳಿದಿದ್ದರು. ಕಾಮನ್ವೆಲ್ತ್‌ ಗೇಮ್ಸ್‌ಗೂ ಅವರು ಅಲಭ್ಯರಾಗಿದ್ದರು. ಭಾರತಕ್ಕಾಗಿ ಸುಮಾರು 250 ಪಂದ್ಯಗಳಲ್ಲಿ ಆಡಿದ್ದಾರೆ.

Continue Reading
Advertisement
smartphone
ವಾಣಿಜ್ಯ47 seconds ago

Smartphone Export : ಭಾರತದಿಂದ 2 ತಿಂಗಳಲ್ಲಿ ದಾಖಲೆಯ 16,500 ಕೋಟಿ ರೂ. ಮೌಲ್ಯದ ಸ್ಮಾರ್ಟ್‌ಫೋನ್‌ ರಫ್ತು

vistara-top-10-news-siddaramaiah-constituency-confusion-continues-to-congress-first-list-on-wednesday-and-more-news
ಕರ್ನಾಟಕ6 mins ago

ವಿಸ್ತಾರ TOP 10 NEWS: ಸಿದ್ದರಾಮಯ್ಯ ಕ್ಷೇತ್ರ ಗೊಂದಲದಿಂದ, ಕೇಂದ್ರ ಸರ್ಕಾರಕ್ಕೆ 155 ಲಕ್ಷ ಕೋಟಿ ರೂ. ಸಾಲದವರೆಗಿನ ಪ್ರಮುಖ ಸುದ್ದಿಗಳಿವು

Jio True 5G service launched in 41 cities including KGF's robertsonpet
ಕರ್ನಾಟಕ14 mins ago

ಕೆಜಿಎಫ್‌ನ ರಾಬರ್ಟಸನ್ ಪೇಟೆ ಸೇರಿ 41 ನಗರಗಳಲ್ಲಿ Jio True 5G ಸೇವೆ ಶುರು

Had Kohli not appealed, he would not have applied for the post of head coach
ಕ್ರಿಕೆಟ್28 mins ago

Team India : ಕೊಹ್ಲಿ ಮನವಿ ಮಾಡದೇ ಹೋಗಿದ್ದರೆ ಹೆಡ್​ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರಲಿಲ್ಲ​

Man Dips Leafy Vegetables In Chemical Solution, Here is a video
ದೇಶ36 mins ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ42 mins ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ43 mins ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

Delhi team won the toss against UP and chose fielding
ಕ್ರಿಕೆಟ್45 mins ago

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

savadatti accident
ಕರ್ನಾಟಕ49 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

HP Pavilion Aero 13 Laptop Launched and Check details
ಗ್ಯಾಜೆಟ್ಸ್51 mins ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ7 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ8 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!