WPL 2023 : ಆರ್​ಸಿಬಿಗೆ ಮಗದೊಂದು ಹೀನಾಯ ಪರಾಜಯ, ಯುಪಿ ವಿರುದ್ಧ 10 ವಿಕೆಟ್​ ಸೋಲು - Vistara News

ಕ್ರಿಕೆಟ್

WPL 2023 : ಆರ್​ಸಿಬಿಗೆ ಮಗದೊಂದು ಹೀನಾಯ ಪರಾಜಯ, ಯುಪಿ ವಿರುದ್ಧ 10 ವಿಕೆಟ್​ ಸೋಲು

ಆರ್​ಸಿಬಿ (WPL 2023) ತಂಡಕ್ಕೆ ಡಬ್ಲ್ಯುಪಿಎಲ್​ನಲ್ಲಿ ನಾಲ್ಕನೇ ಸೋಲು ಎದುರಾಯಿತು. ಗೆಲುವಿನ ಖಾತೆ ತೆರೆಯಲು ವಿಫಲಗೊಂಡಿತು.

VISTARANEWS.COM


on

That humiliating defeat for Rcub, that 10-wicket loss against up
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಉದ್ಘಾಟನಾ ಆವೃತ್ತಿಯ ಮಹಿಳೆಯರ ಪ್ರೀಮಿಯರ್​ ಲೀಗ್​ನ (WPL 2023) ಆರಂಭದಿಂದಲೂ ಕಳಪೆ ಪ್ರದರ್ಶನ ನೀಡುತ್ತಾ ಬಂದಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಮತ್ತೆ ತನ್ನ ಚಾಳಿ ಮುಂದುವರಿಸಿತು. ಹೀಗಾಗಿ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ 10 ವಿಕೆಟ್​ಗಳ ಹೀನಾಯ ಸೋಲಿಗೆ ಒಳಗಾಯಿತು. ಸ್ಮೃತಿ ಮಂಧಾನಾ ನೇತೃತ್ವದ ತಂಡಕ್ಕೆ ಟೂರ್ನಿಯಲ್ಲಿ ಇದು ನಾಲ್ಕನೇ ಸತತ ನಾಲ್ಕನೇ ಸೋಲು ಹಾಗೂ ಗೆಲುವಿನ ಖಾತೆ ತೆರೆಯಲು ಇನ್ನೂ ಸಾಧ್ಯವಾಗಲಿಲ್ಲ. ಅಲ್ಲದೆ ಅಂಕಪಟ್ಟಿಯಲ್ಲಿ ಕೊನೇ ಸ್ಥಾನವನ್ನೇ ನೆಚ್ಚಿಕೊಂಡಿತು.

ಇಲ್ಲಿನ ಬ್ರಬೋರ್ನ್​ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿ ತಂಡ 19.3 ಓವರ್​ಗಳಲ್ಲಿ 138 ರನ್​ಗಳಿಗೆ ಆಲ್​ಔಟ್ ಆಯಿತು. ಸಾಧಾರಣ ಗುರಿ ಬೆನ್ನಟ್ಟಿದ ಯುಪಿ ವಾರಿಯರ್ಸ್​ ಬಳಗ 13 ಓವರ್​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 139 ರನ್​ ಬಾರಿಸಿತು. ಯುಪಿ ತಂಡದ ನಾಯಕಿ ಅಲಿಸಾ ಹೀಲಿ 47 ಎಸೆತಗಳಲ್ಲಿ ಅಜೇಯ 96 ಬಾರಿಸಿ ಗೆಲವಿನ ರೂವಾರಿ ಎನಿಸಿಕೊಂಡರು. ಆದರೆ, ನಾಲ್ಕು ರನ್​ಗಳ ಕೊರತೆಯಿಂದ ಡಬ್ಲ್ಯುಪಿಎಲ್​ನ ಮೊದಲ ಶತಕಧಾರಿ ಎಂಬ ಸಾಧನೆ ಮಾಡುವ ಅವಕಾಶದಿಂದ ವಂಚಿತರಾದರು. ಅವರಿಗೆ ಉತ್ತಮ ನೆರವು ಕೊಟ್ಟ ದೇವಿಕಾ ವೈದ್ಯ 36 ರನ್​ ಬಾರಿಸಿದರು.

ಇಲ್ಲಿನ ಬ್ರಬೊರ್ನ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಟಾಸ್​ ಗೆದ್ದ ಆರ್​ಸಿಬಿ ನಾಯಕಿ ಸ್ಮೃತಿ ಮಂಧಾನಾ ದೊಡ್ಡ ಮೊತ್ತ ಪೇರಿಸುವ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಅವರ ಯೋಜನೆ ಉಲ್ಟಾ ಹೊಡೆಯಿತು. 19.3 ಓವರ್​ಗಳಲ್ಲಿ 138 ರನ್​ಗಳಿಗೆ ಆಲ್​ಔಟ್​ ಆಯಿತು. 12.4 ಓವರ್​ಗಳಲ್ಲಿ 100 ರನ್​ ಬಾರಿಸಿದ್ದ ಆರ್​ಸಿಬಿ ಬಳಿಕ ಏಕಾಏಕಿ ಕುಸಿತ ಕಂಡಿತು. ಯುಪಿ ವಾರಿಯರ್ಸ್​ ಬಳಗ ಶಿಸ್ತಿನ ಬೌಲಿಂಗ್​ ದಾಳಿ ಸಂಘಟಿಸಿ ದುರ್ಬಲ ಆರ್​ಸಿಬಿ ಬ್ಯಾಟಿಂಗ್ ಪಡೆಯನ್ನು ಹಿಮ್ಮೆಟ್ಟಿಸಿತು. ಯುಪಿ ತಂಡ ಒಂದೇ ಒಂದು ಇತರ ರನ್ ನೀಡದಿರುವುದು ಅವರ ಬೌಲಿಂಗ್​ ಶಿಸ್ತಿಗೆ ಸಾಕ್ಷಿ ಎನಿಸಿಕೊಂಡಿತು. ಎಲಿಸ್​ ಪೆರಿ (52) ಅರ್ಧ ಶತಕ ಬಾರಿಸಿದ್ದೇ ಆರ್​ಸಿಬಿ ಅಭಿಮಾನಿಗಳ ಪಾಲಿಗೆ ಸಮಾಧಾನಕರ ಸಂಗತಿ.

ಸ್ಮೃತಿ ಮಂಧಾನಾ ಮತ್ತೆ ಫೇಲ್​

ಡಬ್ಲ್ಯುಪಿಎಲ್​ನ (WPL 2023) ದುಬಾರಿ ಬೆಲೆಯ ಆಟಗಾರ್ತಿ ಸ್ಮೃತಿ ಮಂಧಾನಾ ಮತ್ತೆ ಬ್ಯಾಟಿಂಗ್ ವೈಫಲ್ಯ ಎದುರಿಸಿದರು. ಭಯದಿಂದಲೇ ಬ್ಯಾಟಿಂಗ್ ಆರಂಭಿಸಿದ ಅವರು 4 ರನ್​ ಗಳಿಸಿ ಪೆವಿಲಿಯನ್​ಗೆ ಮರಳಿದರು. 3.4 ಕೋಟಿ ರೂಪಾಯಿ ಪಡೆದಿದ್ದ ಅವರು ಈ ಪಂದ್ಯದಲ್ಲಾದರೂ ಉತ್ತಮ ಪ್ರದರ್ಶನ ನೀಡಬಹುದೆಂಬ ನಿರೀಕ್ಷೆ ಹುಸಿಯಾಯಿತು. ಮತ್ತೊಬ್ಬರು ಆರಂಭಿಕ ಬ್ಯಾಟರ್ ಸೋಫಿ ಡಿವೈನ್​ 34 ರನ್​ ಬಾರಿಸಿ ತಂಡಕ್ಕೆ ಸ್ವಲ್ಪ ಮಟ್ಟಿಗೆ ನೆರವಾದರು. ಸೋಫಿ ಮತ್ತು ಎಲಿಸ್​ ಹೊರತುಪಡಿಸಿ ಉಳಿದ ಬ್ಯಾಟರ್​ಗಳು ರನ್​ ಗಳಿಸಲು ಪ್ರಯತ್ನವೇ ಪಡಲಿಲ್ಲ.

ಕನಿಕಾ ಅಹುಜಾ (8), ಹೇದರ್ ನೈಟ್​ (2), ರಿಚಾ ಘೋಷ್​ (1), ಕೋಮಲ್​ ಜಂಜಾದ್ (5), ರೇಣುಕಾ ಸಿಂಗ್​ (3) ಒಂದಂಕಿ ಮೊತ್ತಕ್ಕೆ ಸೀಮಿತಗೊಂಡರು. ಶ್ರೇಯಾಂಕಾ ಪಾಟೀಲ್​ (15), ಎರಿನ್​ ಬರ್ನ್ಸ್​​ (12) ಪ್ರಯತ್ನವೂ ಲೆಕ್ಕಕ್ಕೆ ಸಿಗಲಿಲ್ಲ. ಅನಗತ್ಯ ರನ್​ಔಟ್​, ಬೇಕಾಬಿಟ್ಟಿ ಹೊಡೆತಕ್ಕೆ ಆರ್​ಸಿಬಿ ತಂಡ ಬೆಲೆ ತೆರಬೇಕಾಯಿತು.

ಯುಪಿ ವಾರಿಯರ್ಸ್​ ತಂಡ ಪರ ಸೋಫಿಯಾ ಎಕ್ಲೆಸ್ಟೋನ್​ 14 ರನ್​ಗಳಿಗೆ 4 ವಿಕೆಟ್​ ಉರುಳಿಸಿದರೆ ದೀಪ್ತಿ ಶರ್ಮಾ 26 ರನ್​ಗಳಿಗೆ 3 ವಿಕೆಟ್​ ಉರುಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

RCB vs GT: ಕಳೆದ ಪಂದ್ಯದಲ್ಲಿ ಆಮೆ ಗತಿಯ ಬ್ಯಾಟಿಂಗ್​ ನಡೆಸಿ ಟೀಕೆಗೆ ಗುರಿಯಾಗಿದ್ದ ವಿರಾಟ್​ ಕೊಹ್ಲಿ ಈ ಪಂದ್ಯದಲ್ಲಿ ಬ್ಯಾಟಿಂಗ್​ ಜೋಶ್​ ತೋರ್ಪಡಿಸಿದರು. ಅಜ್ಮತುಲ್ಲಾ ಒಮರ್ಜಾಯ್ ಎಸೆದ ಮೊದಲ ಓವರ್​ನಲ್ಲಿ ರನ್​ ಗಳಿಸಲು ಪರದಾಡಿದ ಕೊಹ್ಲಿ ಆ ಬಳಿಕ ಸಿಡಿದು ನಿಂತರು. 44 ಎಸೆತಗಳಿಂದ 70(6 ಬೌಂಡರಿ ಮತ್ತು 3 ಸಿಕ್ಸರ್​) ರನ್​ ಬಾರಿಸಿದರು.

VISTARANEWS.COM


on

RCB vs GT
Koo

ಅಹಮದಾಬಾದ್​: ವಿಲ್​ ಜ್ಯಾಕ್ಸ್ ​(100*) ಅವರ ಶತಕ ಮತ್ತು ವಿರಾಟ್​ ಕೊಹ್ಲಿಯ(70*) ಅರ್ಧಶತಕದ ಸೊಗಸಾದ ಬ್ಯಾಟಿಂಗ್​ ನೆರವಿನಿಂದ ರಾಯಲ್​ ಜಾಲೆಂಜರ್ಸ್​ ಬೆಂಗಳೂರು(RCB vs GT) ತಂಡ ಗುಜರಾತ್​ ಟೈಟಾನ್ಸ್​ ವಿರುದ್ಧ ಭರ್ಜರಿ 9 ವಿಕೆಟ್​ಗಳ ಗೆಲುವು ಸಾಧಿಸಿದೆ. ಇದು ಆರ್​ಸಿಬಿಗೆ 10 ಪಂದ್ಯಗಳಲ್ಲಿ ಒಲಿದ ಕೇವಲ ಮೂರನೇ ಗೆಲುವಾಗಿದೆ. ಗೆಲುವು ಕಂಡರೂ ಕೂಡ 6 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಮುಂದುವರಿದಿದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಗುಜರಾತ್​ ಟೈಟಾನ್ಸ್​ ಸಾಯಿ ಸುದರ್ಶನ್​(84*) ಮತ್ತು ಶಾರೂಖ್​ ಖಾನ್​(58) ಅರ್ಧಶತಕದ ಉಪಯುಕ್ತ ಬ್ಯಾಟಿಂಗ್​ ನೆರವಿನಿಂದ 20 ಓವರ್​ಗೆ 3 ವಿಕೆಟ್​ ಕಳೆದುಕೊಂಡು ಭರ್ತಿ 200 ರನ್​ ಪೇರಿಸಿತು. ಜವಾಬಿತ್ತ ಆರ್​ಸಿಬಿ ಫುಲ್​ ಬ್ಯಾಟಿಂಗ್​ ಜೋಶ್​ನೊಂದಿಗೆ ಕೇವಲ 16 ಓವರ್​ಗಳಲ್ಲಿ 1 ವಿಕೆಟ್​ನಷ್ಟಕ್ಕೆ 206 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

ಕೊಹ್ಲಿ-ಜ್ಯಾಕ್ಸ್ ಬೊಂಬಾಟ್​ ಅರ್ಧಶತಕ


ಕಳೆದ ಪಂದ್ಯದಲ್ಲಿ ಆಮೆ ಗತಿಯ ಬ್ಯಾಟಿಂಗ್​ ನಡೆಸಿ ಟೀಕೆಗೆ ಗುರಿಯಾಗಿದ್ದ ವಿರಾಟ್​ ಕೊಹ್ಲಿ ಈ ಪಂದ್ಯದಲ್ಲಿ ಬ್ಯಾಟಿಂಗ್​ ಜೋಶ್​ ತೋರ್ಪಡಿಸಿದರು. ಅಜ್ಮತುಲ್ಲಾ ಒಮರ್ಜಾಯ್ ಎಸೆದ ಮೊದಲ ಓವರ್​ನಲ್ಲಿ ರನ್​ ಗಳಿಸಲು ಪರದಾಡಿದ ಕೊಹ್ಲಿ ಆ ಬಳಿಕ ಸಿಡಿದು ನಿಂತರು. ಅಘಫಾನಿಸ್ತಾನದ ಸಿನ್ನರ್​ಗಳಾದ ರಶೀದ್​ ಖಾನ್​, ನೂರ್​ ಅಹ್ಮದ್​ಗೆ ಸತತ ಸಿಕ್ಸರ್​ ಮತ್ತು ಬೌಂಡರಿಗಳ ರುಚಿ ತೋರಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ನೀಡಿದ ವಿಲ್​ ಜಾಕ್ಸ್​ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಅಜೇಯ ಶತಕ ಬಾರಿಸಿ ಮಿಂಚಿದರು. ಗೆಲುವಿನ ರನ್​ ಮತ್ತು ಶತಕವನ್ನು ಸಿಕ್ಸರ್​ ಮೂಲಕ ಪೂರ್ತಿಗೊಳಿಸಿದರು.

ಇದನ್ನೂ ಓದಿ IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

ವಿರಾಟ್​ ಕೊಹ್ಲಿ 44 ಎಸೆತಗಳಿಂದ 70(6 ಬೌಂಡರಿ ಮತ್ತು 3 ಸಿಕ್ಸರ್​) ರನ್​ ಬಾರಿಸಿದರು. ವಿಲ್​ ಜಾಕ್ಸ್​ 41 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 5 ಬೌಂಡರಿ ಬಾರಿಸಿ ಭರ್ತಿ 100 ರನ್​ ಪೇರಿಸಿದರು. ಇದು ಅವರ ಚೊಚ್ಚಲ ಐಪಿಎಲ್​ ಶತಕವಾಗಿದೆ. ಆರ್​ಸಿಬಿ ಇದೇ ಆಟವನ್ನು ಆರಂಭಿಕ ಹಂತದಲ್ಲಿ ತೋರ್ಪಡಿಸುತ್ತಿದ್ದರೆ ಇಂದು ಪ್ಲೇ ಆಫ್​ ಸನಿಹಕ್ಕೆ ಬಂದು ನಿಲ್ಲುತ್ತಿತ್ತು. ಗುಜರಾತ್​ ಪರ ರಶೀದ್​ ಖಾನ್​ 51 ರನ್​ ಬಿಟ್ಟುಕೊಟ್ಟರೆ, ಮೋಹಿತ್​ ಶರ್ಮ ಕೇವಲ 2 ಓವರ್​ಗೆ 41 ರನ್​ ಚಚ್ಚಿಸಿಕೊಂಡರು.

ಸಾಯಿ -ಶಾರೂಖ್ ಜತೆಯಾಟ ವ್ಯರ್ಥ


ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಗುಜರಾತ್​ ತಂಡಕ್ಕೆ ಸಿನ್ನರ್​ಗಳಾದ ಸ್ವಪ್ನಿಲ್ ಸಿಂಗ್ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ಆರಂಭದಲ್ಲೇ ಆಘಾತವಿಕ್ಕಿದರು. ಸ್ವಪ್ನಿಲ್ ಸಿಂಗ್ ಅವರು ವೃದ್ಧಿಮಾನ್​ ಸಾಹಾ(5) ವಿಕೆಟ್​ ಕಡೆವಿದರೆ, ಮ್ಯಾಕ್ಸ್​ವೆಲ್ ನಾಯಕ ಶುಭಮನ್​ ಗಿಲ್​(16) ವಿಕೆಟ್​ ಕಿತ್ತರು. ಆರಂಭಿಕ ಆಘಾತ ಕಂಡ ಗುಜತಾರ್​ ತಂಡವನ್ನು ಮೇಲೆತ್ತಿದ್ದು ತಮಿಳುನಾಡು ಮೂಲಕದ ಆಟಗಾರರಾದ ಸಾಯಿ ಸುದರ್ಶನ್​ ಮತ್ತು ಶಾರೂಖ್​ ಖಾನ್​.

ಉಭಯ ಆಟಗಾರರು ಆರ್​ಸಿಬಿ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತು ಅರ್ಧಶತಕ ಪೂರ್ತಿಗೊಳಿಸಿದರು. ಜತೆಗೆ ತಂಡದ ಮೊತ್ತವನ್ನು ಹಿಗ್ಗಿಸಿದರು. ಈ ಜೋಡಿ ಮೂರನೇ ವಿಕೆಟ್​ಗೆ ಅತ್ಯಮೂಲ್ಯ 86 ರನ್​ ಜತೆಯಾಟ ನಡೆಸಿತು. ಅರ್ಧಶತಕ ಪೂರ್ತಿಗೊಂಡು ಅಪಾಯಕಾರಿಯಾಗಿ ಗೋಚರಿಸಿದ್ದ ಶಾರೂಖ್​ ಖಾನ್​ ಮೊಹಮ್ಮದ್​ ಸಿರಾಜ್​ ಅವರ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಒಟ್ಟು 30 ಎಸೆತ ಎದುರಿಸಿ 5 ಸಿಕ್ಸರ್​ ಮತ್ತು 3 ಬೌಂಡರಿ ನೆರವಿನಿಂದ 58 ರನ್​ ಬಾರಿಸಿದರು. ಪಂದ್ಯ ಸೋತ ಕಾರಣ ಉಭಯ ಆಟಗಾರರ ಈ ಉತ್ತಮ ಜತೆಯಾಟ ವ್ಯರ್ಥಗೊಂಡಿತು.

ಶಾರೂಖ್ ವಿಕೆಟ್​ ಪತನದ ಬಳಿಕ ಆಡಲಿಳಿದ ಡೇವಿಡ್​ ಮಿಲ್ಲರ್ ಕೂಡ ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ಅಜೇಯ 26 ರನ್​ ಬಾರಿಸಿದರು. ಸಾಯಿ ಸುದರ್ಶನ್ ಬರೋಬ್ಬರಿ 8 ಬೌಂಡರಿ ಮತ್ತು 4 ಸಿಕ್ಸರ್​ ನೆರವಿನಿಂದ 84 ರನ್​ ಗಳಿಸಿ ಅಜೇಯರಾಗಿ ಉಳಿದರು. ಆರ್​ಸಿಬಿ ಪರ ಸಿರಾಜ್​, ಸ್ವಪ್ನಿಲ್ ಸಿಂಗ್ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಲಾ ಒಂದು ವಿಕೆಟ್​ ಪಡೆದರು. ಗ್ರೀನ್​ ಮೂರು ಓವರ್​ಗೆ 42 ರನ್​ ಬಿಟ್ಟುಕೊಟ್ಟು ದುಬಾರಿಯಾಗಿ ಕಂಡುಬಂದರು.

Continue Reading

ಕ್ರಿಕೆಟ್

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

KKR vs DC: ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬಿನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ.

VISTARANEWS.COM


on

KKR vs DC
Koo

ಕೋಲ್ಕತ್ತಾ: ಆರಂಭಿಕ ಹಂತದಲ್ಲಿ ಸತತ ಸೋಲಿಗೆ ತುತ್ತಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್(KKR vs DC)​ ಇದೀಗ ಬಲಿಷ್ಠ ತಂಡಗಳಿಗೆ ಸೋಲುಣಿಸುವ ಮೂಲಕ ಅಂಕಪಟ್ಟಿಯಲ್ಲಿ ಮೇಲೇರಿದೆ. ಸೋಮವಾರದ ಮಹತ್ವದ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಆಡಲಿದೆ. ಈ ಪಂದ್ಯವನ್ನು ಗೆದ್ದು ಮೊದಲ ಸುತ್ತಿನ ಸೋಲಿಗೆ ಸೇಡು ತೀರಿಸಿಕೊಂಡರೆ ಪಂತ್​ ಬಳಗದ ಪ್ಲೇ ಆಫ್ ಮೇಲೆ ಒಂದು ಹಂತದ ತನಕ ನಿರೀಕ್ಷೆ ಇರಿಸಿಕೊಳ್ಳಬಹುದು. ಸದ್ಯ ಹತ್ತರಲ್ಲಿ 5 ಪಂದ್ಯಗಳನ್ನಷ್ಟೇ ಜಯಿಸಿರುವ ಡೆಲ್ಲಿ ಉಳೆದೆಲ್ಲ ಪಂದ್ಯಗಳನ್ನು ದೊಡ್ಡ ಅಂತರದಿಂದ ಜಯಿಸಿದರೆ ಪ್ಲೇ ಆಫ್​ ಟಿಕೆಟ್​ ಖಚಿತಗೊಳ್ಳಲಿದೆ.

ಈ ಬಾರಿಯ ಟೂರ್ನಿಯ ಮೊದಲ ಹಂತದ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಡೆಲ್ಲಿ 106 ರನ್​ ಅಂತರದ ಹೀನಾಯ ಸೋಲು ಕಂಡಿತ್ತು. ಈ ಸೋಲನ್ನೇ ಡೆಲ್ಲಿ ಚಾಲೆಂಜ್‌ ಆಗಿ ಸ್ವೀಕರಿಸಿ ನಾಳಿನ ಪಂದ್ಯದಲ್ಲಿ ಸೇಡು ತೀರಿಸಿಕೊಂಡೀತೇ ಎನ್ನುವುದು ಪಂದ್ಯದ ಕುತೂಹಲ. ಎದುರಾಳಿ ಯಾರೇ ಆಗಿರಲಿ ದಂಡಿಸುವುದೊಂದೆ ಎನ್ನ ಗುರಿ ಎಂದು ಬ್ಯಾಟಿಂಗ್​ ನಡೆಸುತ್ತಿರುವ 22ರ ಪೋರ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಈ ಪಂದ್ಯದ ಪ್ರಮುಖ ಹೈಲೆಟ್ಸ್​. ಈಗಾಗಲೇ ಅವರು ಜಸ್​ಪ್ರೀತ್​ ಬುಮ್ರಾ ಸೇರಿ ವಿಶ್ವದ ಘಾತಕ ಬೌಲರ್​ಗಳಿಗೆ ಸತತ ಸಿಕ್ಸರ್​ ರುಚಿ ತೋರಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿಯೂ ಡೆಲ್ಲಿ ಇವರ ಮೇಲೆ ಹೆಚ್ಚಿನ ಬರವಸೆ ಇರಿಸಿದೆ.

ಆರಂಭಿಕ ಪಂದ್ಯಗಳಲ್ಲಿ ಸತತವಾಗಿ ಗೆದ್ದು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದ್ದ ಕೆಕೆಆರ್​ ಆ ಬಳಿಕ ಸೋಲಿನ ಹಾದಿ ಹಿಡಿದಿದೆ. ಅದರಲ್ಲೂ ಕಳೆದ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 260 ಗಡಿ ದಾಡಿಯೂ ಈ ಮೊತ್ತವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿ ಹೀನಾಯ ಸೋಲು ಕಂಡಿತ್ತು. ದಾಖಲೆಯ 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಸಂಪೂರ್ಣ ವಿಫಲರಾಗಿದ್ದಾರೆ. ಅನ್​ಕ್ಯಾಪ್ಡ್​ ಬ್ಯಾಟರ್​ಗಳು ಸಹ ಇವರಿಗೆ ಸಿಕ್ಸರ್​ ಮೂಲಕ ದಂಡಿಸುತ್ತಿದ್ದಾರೆ.

ಇದನ್ನೂ ಓದಿ IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

ಪಿಚ್​ ರಿಪೋರ್ಟ್​

ಉಭಯ ತಂಡಗಳು ಇದುವರೆಗಿನ ಐಪಿಎಲ್​ನಲ್ಲಿ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಕೆಕೆಆರ್​ 17 ಪಂದ್ಯ ಗೆದ್ದರೆ, ಡೆಲ್ಲಿ 15 ಪಂದ್ಯ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬಿನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ.

ಸಂಭಾವ್ಯ ತಂಡಗಳು


ಡೆಲ್ಲಿ ಕ್ಯಾಪಿಟಲ್ಸ್​: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕುಮಾರ್ ಕುಶಾಗ್ರಾ, ಶಾಯ್ ಹೋಪ್, ರಿಷಬ್ ಪಂತ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಅಕ್ಷರ್​ ಪಟೇಲ್, ಕುಲದೀಪ್ ಯಾದವ್, ಲಿಜಾದ್ ವಿಲಿಯಮ್ಸ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್.

ಕೆಕೆಆರ್:​ ಫಿಲಿಪ್ ಸಾಲ್ಟ್, ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ದುಷ್ಮಂತ ಚಮೀರಾ/ ವಿಚೆಲ್​ ಸ್ಟಾರ್ಕ್​, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.

Continue Reading

ಕ್ರೀಡೆ

Ishan Kishan: ಐಪಿಎಲ್​ ನೀತಿ ಸಂಹಿತೆ ಉಲ್ಲಂಘನೆ; ಇಶಾನ್​ ಕಿಶನ್​ಗೆ ಬಿತ್ತು ದಂಡದ ಬರೆ

Ishan Kishan: ಶನಿವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ(DC vs MI) ವಿರುದ್ಧದ ಪಂದ್ಯದಲ್ಲಿ ಇಶಾನ್​ ಐಪಿಎಲ್‌ನ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಎಸಗಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಹಂತ 1 ಉಲ್ಲಂಘನೆಗಳಿಗೆ ಅವರಿಗೆ ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

VISTARANEWS.COM


on

Ishan Kishan
Koo

ನವದೆಹಲಿ: ಮುಂಬೈ ಇಂಡಿಯನ್ಸ್​(Mumbai Indians) ತಂಡದ ಯುವ ಎಡಗೈ ಬ್ಯಾಟರ್​ ಇಶಾನ್​ ಕಿಶನ್(Ishan Kishan)​ ಅವರಿಗೆ ದಂಡದ ಬರೆ ಬಿದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್(Delhi Capitals) ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ(BCCI) ಕಿಶನ್​ಗೆ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.

ಶನಿವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ(DC vs MI) ವಿರುದ್ಧದ ಪಂದ್ಯದಲ್ಲಿ ಇಶಾನ್​ ಐಪಿಎಲ್‌ನ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಎಸಗಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಹಂತ 1 ಉಲ್ಲಂಘನೆಗಳಿಗೆ ಅವರಿಗೆ ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕಿಶನ್​ ಯಾವ ತಪ್ಪು ಮಾಡಿದ್ದಾರೆ ಎನ್ನುವ ವಿಚಾರವನ್ನು ಬಿಸಿಸಿಐ ನಿರ್ದಿಷ್ಟವಾಗಿ ತಿಳಿಸಿಲ್ಲ.

ಆರ್ಟಿಕಲ್ 2.2 ನೀತಿ ಸಂಹಿತೆಯ ಅಡಿಯಲ್ಲಿ ಆಟಗಾರರು ಪಂದ್ಯದ ವೇಳೆ ಅತಿರೇಕದ ವರ್ತನೆ, ವಿಕೆಟ್​ಗಳಿಗೆ ಬ್ಯಾಟ್​ನಿಂದ ಹೊಡೆಯುವುದು ಅಥವಾ ಒದೆಯುವುದು, ಉದ್ದೇಶಪೂರ್ವಕವಾಗಿ ಜಾಹೀರಾತು ಫಲಕಗಳು, ಗಡಿ ಬೇಲಿಗಳು, ಡ್ರೆಸ್ಸಿಂಗ್ ಕೋಣೆಯ ಬಾಗಿಲುಗಳು, ಕನ್ನಡಿಗಳು, ಕಿಟಕಿಗಳು, ಬೌಂಡರಿ ಗೆರೆಗೆ ಬ್ಯಾಟ್​ನಿಂದ ಬಡಿದು ಹಾನಿ ಮಾಡಿದರೆ ಅಂತಹ ಆಟಗಾರರಿಗೆ ಈ ನಿಯಮದಡಿಯಲ್ಲಿ ವಾಗ್ದಂಡನೆ ವಿಧಿಸಲಾಗುತ್ತದೆ.

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಇಶಾನ್​ ಕಿಶನ್​ 14 ಎಸೆತಗಳಿಂದ 20 ರನ್​ ಬಾರಿಸಿದ್ದರು. ಈ ಬಾರಿಯ ಐಪಿಎಲ್​ನಲ್ಲಿ ಇಶಾನ್​ ಅಷ್ಟಾಗಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿಲ್ಲ. ಆಯ್ಕೆ ಸಮಿತಿ ಮತ್ತು ಹೆಡ್​ ಕೋಚ್​ ಸೂಚನೆಯನ್ನು ಕಡೆಗಣಿಸಿ ದೇಶೀಯ ಕ್ರಿಕೆಟ್​ ಆಡಲು ನೀರಾಕರಿಸಿದ ಕಾರಣ ಇಶಾನ್​ ಅವರನ್ನು ಬಿಸಿಸಿಐ ಆಟಗಾರರ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಕೈಬಿಡಲಾಗಿತ್ತು.

ಇದನ್ನೂ ಓದಿ IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

ಡೆಲ್ಲಿಗೆ 10 ರನ್​ ಗೆಲುವು


ಮುಂಬೈ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ 10 ರನ್​ ಗೆಲುವು ಸಾಧಿಸಿತು. ಇಲ್ಲಿನ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬಯಿ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಬಳಗ ನಿಗದಿತ 20 ಓವರ್​​ಗಳಲ್ಲಿ 4 ವಿಕೆಟ್​ಗೆ 257 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಮುಂಬಯಿ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ ನಷ್ಟಕ್ಕೆ 247 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡಕ್ಕೆ ಅದಕ್ಕೆ ಪೂರಕವಾಗಿರುವ ಆರಂಭ ದೊರಕಲಿಲ್ಲ. ರೋಹಿತ್ ಶರ್ಮಾ 8 ರನ್​ಗೆ ಔಟಾದರೆ ಇಶಾನ್ ಕಿಶನ್​ 20 ರನ್​ಗಳಿಗೆ ವಿಕೆಟ್​ ಒಪ್ಪಿಸಿದರು. 45 ರನ್​ಗೆ 2 ವಿಕೆಟ್​ ನಷ್ಟ ಮಾಡಿಕೊಂಡ ಮುಂಬೈಗೆ ಆತಂಕ ಎದುರಾಯಿತು. ಈ ವೇಳೆ ಆಡಲು ಬಂದ ಸೂರ್ಯಕುಮಾರ್ ಯಾದವ್​ 13 ಎಸೆತಕ್ಕೆ 26 ರನ್ ಬಾರಿಸಿ ಮಿಂಚುವ ಸೂಚನೆ ಕೊಟ್ಟರು. ಆದರೆ ಸೂರ್ಯನ ಆಟ ಹೆಚ್ಚು ಹೊತ್ತು ನಡೆಯಲಿಲ್ಲ. ಆದರೆ, ಮತ್ತೊಂದು ಬದಿಯಲ್ಲಿ ತಿಲಕ್ ವರ್ಮಾ ಗಟ್ಟಿಯಾಗಿ ನಿಂತು ಡೆಲ್ಲಿ ಬೌಲರ್​ಗಳನ್ನು ದಂಡಿಸಿದರು. ಅದೇ ರೀತಿ ಹಾಲಿ ಆವೃತ್ತಿಯಲ್ಲಿ ಮೊದಲ ಬ್ಯಾರಿಗೆ ಬ್ಯಾಟಿಂಗ್​ನಲ್ಲಿ ಮಿಂಚಿದ ಹಾರ್ದಿಕ್ ಪಾಂಡ್ಯ 24 ಎಸೆತಕ್ಕೆ 46 ರನ್ ಬಾರಿಸಿದರು. ಡೆಲ್ಲಿ ಪರ ರಸಿಕ್​ ಸಲಾಂ ಹಾಗೂ ಮುಖೇಶ್ ಕುಮಾರ್​ ತಲಾ 3 ವಿಕೆಟ್​ ಉರುಳಿಸಿ ತಂಡ ಗೆಲುವಿಗೆ ನೆರವಾದರು.

Continue Reading

ಕ್ರಿಕೆಟ್

Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

Pakistan Cricket: ಗ್ಯಾರಿ ಕರ್ಸ್ಟನ್(Gary Kirsten) ಮತ್ತು ಆಸ್ಟ್ರೇಲಿಯಾದ ಮಾಜಿ ವೇಗಿ ಜೇಸನ್ ಗಿಲ್ಲೆಸ್ಪಿ(Jason Gillespie) ಅವರು ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್(Pakistan Cricket Team) ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಗ್ಯಾರಿ ಕರ್ಸ್ಟನ್ ವೈಟ್-ಬಾಲ್ ವ್ಯವಹಾರಗಳನ್ನು ಮಾತ್ರ ನಿರ್ವಹಿಸಲಿದ್ದಾರೆ. ಜೇಸನ್ ಗಿಲ್ಲೆಸ್ಪಿ ಟೆಸ್ಟ್​ ತಂಡಕ್ಕೆ ಕೋಚ್​ ಆಗಿದ್ದಾರೆ

VISTARANEWS.COM


on

Pakistan Cricket
Koo

ಕರಾಚಿ: ಭಾರತದ ಮಾಜಿ ಮುಖ್ಯ ಕೋಚ್, 2011ರಲ್ಲಿ ಏಕದಿನ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್(Gary Kirsten) ಮತ್ತು ಆಸ್ಟ್ರೇಲಿಯಾದ ಮಾಜಿ ವೇಗಿ ಜೇಸನ್ ಗಿಲ್ಲೆಸ್ಪಿ(Jason Gillespie) ಅವರು ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್(Pakistan Cricket Team) ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಗ್ಯಾರಿ ಕರ್ಸ್ಟನ್ ವೈಟ್-ಬಾಲ್ ವ್ಯವಹಾರಗಳನ್ನು ಮಾತ್ರ ನಿರ್ವಹಿಸಲಿದ್ದಾರೆ. ಜೇಸನ್ ಗಿಲ್ಲೆಸ್ಪಿ ಟೆಸ್ಟ್​ ತಂಡಕ್ಕೆ ಕೋಚ್​ ಆಗಿದ್ದಾರೆ. ಅಜರ್ ಮಹಮೂದ್ ಮೂರು ಮಾದರಿಯ ಕ್ರಿಕೆಟ್​ಗೆ ಸಹಾಯಕ ಕೋಚ್​ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

​ಇದೇ ಜೂನ್​ 1ರಿಂದ 29ರ ತನಕ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಗ್ಯಾರಿ ಕರ್ಸ್ಟನ್​ಗೆ ಮೊದಲ ಸವಾಲಾಗಿದೆ. ಗ್ಯಾರಿ ಕರ್ಸ್ಟನ್​ ಅವರು 2008ರಿಂದ 2011ರವರೆಗೆ ಭಾರತ ತಂಡದ ಮುಖ್ಯ ಕೋಚ್​ ಆಗಿದ್ದರು. ಇವರ ಮಾರ್ಗದರ್ಶನದಲ್ಲೇ ಭಾರತ 2011ರ ಏಕದಿನ ವಿಶ್ವಕಪ್​ ಗೆದ್ದಿತ್ತು. 56 ವರ್ಷದ ಕರ್ಸ್ಟನ್​ ಪ್ರಸಕ್ತ ಐಪಿಎಲ್​ನಲ್ಲಿ ಗುಜರಾತ್​ ಟೈಟಾನ್ಸ್​ ತಂಡದ ಬ್ಯಾಟಿಂಗ್​ ಕೋಚ್​ ಮತ್ತು ಮೆಂಟರ್​ ಆಗಿದ್ದಾರೆ. ಐಪಿಎಲ್​ನಲ್ಲಿಯೂ ಇವರ ನೇತೃತ್ವದಲ್ಲಿ ಗುಜರಾತ್​ ಚೊಚ್ಚಲ ಪ್ರಯತ್ನದಲ್ಲೇ ಕಪ್​ ಗೆದ್ದು ಸಂಭ್ರಮಿಸಿತ್ತು. ಕಳೆದ ಬಾರಿ ತಂಡ ಫೈನಲ್​ ಕೂಡ ಪ್ರವೇಶಿಸಿತ್ತು. ಇದೀಗ ಪಾಕ್​ ತಂಡ ಕೂಡ ಇದೇ ವರ್ಷ ನಡೆಯುವ ಟಿ20 ವಿಶ್ವಕಪ್​ ಮೇಲೆ ಕಣ್ಣಿಟ್ಟಿದ್ದಾರೆ.

ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಿನ ಹೈ-ವೋಲ್ಟೇಜ್ ಪಂದ್ಯ ಜೂನ್ 9 ರಂದು ನಡೆಯಲಿದೆ.

ಲಾಹೋರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಂಡದ ನೂತನ ಕೋಚ್​ಗಳ ಹೆಸರನ್ನು ಘೋಷಣೆ ಮಾಡಿದರು. “ರಾಷ್ಟ್ರೀಯ ತಂಡಕ್ಕೆ ಉನ್ನತ ಶ್ರೇಣಿಯ ಸಂಪನ್ಮೂಲಗಳು ಮತ್ತು ಸೌಲಭ್ಯಗಳನ್ನು ಒದಗಿಸುವ ತನ್ನ ಬದ್ಧತೆಯಲ್ಲಿ ಪಿಸಿಬಿ ಅಚಲವಾಗಿದೆ. ನೂತನ ಕೋಚ್​ಗಳ ಅವಧಿಯಲ್ಲಿ ಆಟಗಾರರ ಸಂಪೂರ್ಣ ಸಾಮರ್ಥ್ಯವನ್ನು ಹೊರತೆಗೆಯಲು ಮತ್ತು ಹಲವು ಪ್ರಯೋಗ ನಡೆಸಲು ಪಿಸಿಬಿ ಮುಕ್ತವಾದ ಬೆಂಗಲ ನೀಡಲಿದೆ” ಎಂದು ನಖ್ವಿ ಹೇಳಿದರು.

ಇದನ್ನೂ ಓದಿ Pakistan Cricket : ಪಾಕಿಸ್ತಾನ ಟಿ20 ತಂಡದಲ್ಲಿ ನಿಷೇಧಿತ ಆಟಗಾರನಿಗೂ ಸ್ಥಾನ!

ಏಕದಿನ ಮತ್ತು ಟಿ20 ಕ್ರಿಕೆಟ್​ಗೆ ಮರು ನೇಮಕಗೊಂಡ ನಾಯಕ ಬಾಬರ್ ಅಜಂ ನೇತೃತ್ವದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ಸೇನೆಯೊಂದಿಗೆ ಇತ್ತೀಚೆಗೆ ತರಬೇತಿ ನಡೆಸಿತ್ತು. ಆರ್ಮಿ ತರಬೇತಿಯ ಅನುಭವ ಹಂಚಿಕೊಂಡ ಆಟಗಾರರು ಇದೇ ರೀತಿಯ ಅಭ್ಯಾಸ ನಡೆಸಿದರೆ ನಮ್ಮ ತಂಡ ಕೂಡ ಫುಲ್​ ಫಿಟ್​ ಆಗಲಿದೆ ಎಂದರು. ಕಳೆದ ವರ್ಷ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದ ವೇಗಿ ನಸೀಮ್ ಶಾ ಅವರು ಹಿಂದೆಂದು ಕೂಡ ಈ ರೀತಿಯ ಫಿಟ್​ನೆಸ್​ ತರಬೇತಿ ನಡೆಸಿಲ್ಲ ಎಂದಿದ್ದರು. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸೈಯದ್ ಮೊಹ್ಸಿನ್ ರಜಾ ನಖ್ವಿ(Syed Mohsin Naqvi) ಅವರ ನೇತೃತ್ವದಲ್ಲಿ ಈ ಪ್ರಯೋಗ ನಡೆಸಲಾಗಿತ್ತು. ನ್ಯೂಜಿಲ್ಯಾಂಡ್​ ವಿರುದ್ಧ ತವರಿನಲ್ಲೇ ನಡೆದ ಟಿ20 ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಂಡಿತ್ತು.

Continue Reading
Advertisement
Jatra Rathotsava Two killed and one serious after being hit by wheel of a chariot at Indi Kamarimath
ಕರ್ನಾಟಕ10 mins ago

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Karnataka Weather
ಕರ್ನಾಟಕ15 mins ago

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Amrita Pandey
ಸಿನಿಮಾ24 mins ago

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

PM Narendra Modi
ಕರ್ನಾಟಕ29 mins ago

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Narendra Modi
Lok Sabha Election 202449 mins ago

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

RCB vs GT
ಕ್ರೀಡೆ1 hour ago

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

PM Narendra Modi
ಕರ್ನಾಟಕ1 hour ago

PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

Hassan Pen Drive Case
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

KKR vs DC
ಕ್ರಿಕೆಟ್2 hours ago

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

Karnataka Drought Relief HDK accuses Congress government of lying says HD Kumarswamy
ರಾಜಕೀಯ2 hours ago

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20243 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20246 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20247 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20248 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ11 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌