INDvsNZ T20 | ಭಾರತದ ದ್ವಿಶತಕದ ಸಾಧಕರಿಂದ ನ್ಯೂಜಿಲ್ಯಾಂಡ್​ ವಿರುದ್ಧದ ಟಿ20 ಪಂದ್ಯದಲ್ಲಿ ಇನಿಂಗ್ಸ್​ ಆರಂಭ! - Vistara News

ಕ್ರಿಕೆಟ್

INDvsNZ T20 | ಭಾರತದ ದ್ವಿಶತಕದ ಸಾಧಕರಿಂದ ನ್ಯೂಜಿಲ್ಯಾಂಡ್​ ವಿರುದ್ಧದ ಟಿ20 ಪಂದ್ಯದಲ್ಲಿ ಇನಿಂಗ್ಸ್​ ಆರಂಭ!

ನ್ಯೂಜಿಲ್ಯಾಂಡ್​ (INDvsNZ T20) ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶುಭ್​ಮನ್​ ಗಿಲ್ ಹಾಗೂ ಇಶಾನ್​ ಕಿಶನ್​ ಇನಿಂಗ್ಸ್​​ ಆರಂಭಿಸಲಿದ್ದಾರೆ.

VISTARANEWS.COM


on

Rohit sharma
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ರಾಂಚಿ : ನ್ಯೂಜಿಲ್ಯಾಂಡ್​ ವಿರುದ್ಧದ ಟಿ20 ಸರಣಿಯ (INDvsNZ T20) ಮೊದಲ ಪಂದ್ಯದಲ್ಲಿ ವಿಕೆಟ್​ಕೀಪರ್​ ಬ್ಯಾಟರ್​ ಇಶಾನ್​ ಕಿಶನ್​ ಅವಕಾಶ ಪಡೆದುಕೊಂಡಿದ್ದಾರೆ. ಈ ಮೂಲಕ ಅವರು ಭಾರತ ತಂಡದ ಪರ ಇನಿಂಗ್ಸ್ ಆರಂಭಿಸಲಿದ್ದಾರೆ. ಅತ್ತ ಉತ್ತಮ ಫಾರ್ಮ್​ನಲ್ಲಿರುವ ಶುಭ್​​ಮನ್​ ಗಿಲ್​ ಕೂಡ ಆರಂಭಿಕರಾಗಿ ಬ್ಯಾಟ್​ ಮಾಡುತ್ತಾರೆ ಎಂಬುದಾಗಿ ನಾಯಕ ಹಾರ್ದಿಕ್ ಪಾಂಡ್ಯ ಘೋಷಿಸಿದ್ದಾರೆ. ಈ ಮೂಲಕ ಭಾರತ ತಂಡದ ಪರ ಏಕ ದಿನ ಮಾದರಿಯಲ್ಲಿ ದ್ವಿ ಶತಕದ ಸಾಧನೆ ಮಾಡಿದ ಇಬ್ಬರು ಇನಿಂಗ್ಸ್​ ಆರಂಭಿಸಿದಂತಾಗುತ್ತದೆ.

ಇಶಾನ್​ ಕಿಶನ್​ ಬಾಂಗ್ಲಾದೇಶ ಪ್ರವಾಸದಲ್ಲಿ 131 ಎಸೆತಗಳಲ್ಲಿ 210 ರನ್​ ಬಾರಿಸಿದ್ದರು. ಶುಬ್ಮನ್ ಗಿಲ್​ ನ್ಯೂಜಿಲ್ಯಾಂಡ್​ ವಿರುದ್ಧದ ಏಕ ದಿನ ಸರಣಿಯಲ್ಲಿ 208 ರನ್ ಬಾರಿಸಿದ್ದಾರೆ. ಇಬ್ಬರೂ ಉತ್ತಮ ಫಾರ್ಮ್​ನಲ್ಲಿ ಇರುವ ಕಾರಣ ಅವರಿಗೆ ಆರಂಭಿಕರಾಗಿ ಬ್ಯಾಟ್​ ಮಾಡಲು ಅವಕಾಶ ನೀಡಲಾಗಿದೆ. ಆದರೆ, ಇಶಾನ್ ಕಿಶನ್​ ಸೇರ್ಪಡೆಯಿಂದಾಗಿ ಅವಕಾಶಕ್ಕಾಗಿ ಕಾಯುತ್ತಿದ್ದ ಪೃಥ್ವಿ ಶಾ ಅವರಿಗೆ ನಿರಾಸೆಯಾಗಿದೆ. ಇಶಾನ್​ಗೆ ಅವಕಾಶ ನೀಡದೇ ಹೋಗಿದ್ದರೆ ಪೃಥ್ವಿ ಶಾ ತಂಡಕ್ಕೆ ಸೇರ್ಪಡೆಯಾಗುತ್ತಿದ್ದರು.

ಜಾರ್ಖಂಡ್​ ಇಶಾನ್​ ಕಿಶನ್​ ಅವರ ತವರೂರು. ಧೋನಿಯಂತೆ ಅವರು ಕೂಡ ಜೆಎಸ್​ಸಿಎ ಇಂಟರ್​ನ್ಯಾಷನಲ್​ ಸ್ಟೇಡಿಯಮ್​ ಕಾಂಪ್ಲೆಕ್ಸ್​ನಲ್ಲಿ ಆಡಿದವರು. ತವರಿನಲ್ಲಿ ಅವರಿಗೆ ಮಿಂಚುವ ಅವಕಾಶ ಇರುವ ಕಾರಣ ಆಡುವ 11ರ ಬಳಗದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ಇದನ್ನೂ ಓದಿ : IND VS NZ | ಇದು ಕ್ರಿಕೆಟ್​ ಅಲ್ಲ, ಇಶಾನ್​ ಕಿಶನ್​ಗೆ ಸುನೀಲ್​ ಗವಾಸ್ಕರ್​ ಎಚ್ಚರಿಕೆ ನೀಡಿದ್ದು ಏಕೆ?

ಭಾರತ ತಂಡದ ಪರವಾಗಿ ದ್ವಿ ಶತಕದ ಸಾಧಕರು ಇನಿಂಗ್ಸ್​ ಆರಂಭ ಮಾಡುವುದು ಇದೇ ಮೊದಲಲ್ಲ. ಏಕ ದಿನ ಸರಣಿ ಪಂದ್ಯಗಳಲ್ಲಿ ರೋಹಿತ್​ ಶರ್ಮ ಹಾಗೂ ಶುಬ್ಮನ್ ಗಿಲ್​ ಇನಿಂಗ್ಸ್​ ಆರಂಭ ಮಾಡಿದಾಗಲೂ ಇದೇ ದಾಖಲೆ ಸೃಷ್ಟಿಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ; ಫೈನಲ್‌ ಮ್ಯಾಚ್‌ ಗೆದ್ದ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು

ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿದ್ಯಾಲಯ ಆರ್‌ಡಬ್ಲ್ಯೂ ಎಫ್‌ನಲ್ಲಿ 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ 2024-25ರ (KVS Sports Meet) ಮುಕ್ತಾಯಗೊಂಡಿದೆ. ಬಾಲಕರ ರೋಚಕ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು ಮೊದಲ ಸ್ಥಾನ ಗಳಿಸಿದ್ದಾರೆ.

VISTARANEWS.COM


on

53rd KVS National Games Kolkata Region School children win final match

ಬೆಂಗಳೂರು: ಬೆಂಗಳೂರಿನ ಯಲಹಂಕ ಕೇಂದ್ರೀಯ ವಿದ್ಯಾಲಯದಲ್ಲಿ ಸೆ. 30 ರಿಂದ ಅ. 6 ರವರೆಗೆ 53ನೇ ರಾಷ್ಟ್ರೀಯ ಕ್ರೀಡಾಕೂಟ ನಡೆಸಲಾಯಿತು. ಕ್ರೀಡೆಯಲ್ಲಿ ಹಲವಾರು ಆಟಗಳಿವೆ. ಅದರಲ್ಲಿ ಕ್ರಿಕೆಟ್ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ದೇಶದ ನಾನಾ ರಾಜ್ಯಗಳಿಂದ ಅಂದರೆ ಒಟ್ಟು 18 ರಾಜ್ಯಗಳಿಂದ ಮಕ್ಕಳು ಕ್ರಿಕೆಟ್ ಆಡಲು ಕೆ .ವಿ .ಆರ್ ಡಬ್ಲ್ಯೂ ಎಫ್‌ಗೆ ಬಂದಿದ್ದರು. ಒಟ್ಟು 269 ಶಾಲೆಯ ಮಕ್ಕಳು ನಾಲ್ಕು ವಿವಿಧ ಆಟದ ಮೈದಾನದಲ್ಲಿ ತಮ್ಮ ಉತ್ತಮ ಪ್ರದರ್ಶನವನ್ನು ಪ್ರದರ್ಶಿಸಿದರು. ಅ.6 ರಂದು ಫೈನಲ್ ಮ್ಯಾಚ್‌ ನಡೆಸಲಾಯಿತು.

ಪ್ರಥಮ ಸ್ಥಾನವನ್ನು ಕೊಲ್ಕತ್ತಾ ರೀಜನ್ ಶಾಲೆ ಮಕ್ಕಳು ಮತ್ತು ದ್ವಿತೀಯ ಸ್ಥಾನವನ್ನು ಜಬಲ್ ಪುರ್ ರೀಜನ್ ಶಾಲೆ ಮಕ್ಕಳು ಗಳಿಸಿಕೊಂಡರು. ನಂತರ ಶಾಲೆ ಆವರಣದಲ್ಲಿ ಮಧ್ಯಾಹ್ನ 12 ಗಂಟೆಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ ಪಿ. ದೇವಕುಮಾರ್(ಜಂಟಿ ಆಯುಕ್ತ ಕೆ ವಿ ಎಸ್ ಪ್ರಧಾನ ಕಛೇರಿ) ಹಾಗೂ ವಿಶೇಷ ಅತಿಥಿಗಳಾಗಿ ಧರ್ಮೇಂದ್ರ ಪಟ್ಲೆ. (ಉಪ ಆಯುಕ್ತ ಕೆ ವಿ ಎಸ್ ಬೆಂಗಳೂರು), ಆರ್ ಪ್ರಮೋದ್.(ಸಹಾಯಕ ಆಯುಕ್ತ ಕೆ ವಿ ಎಸ್ ಬೆಂಗಳೂರು), ಹೇಮಾ ಕೆ( ಸಹಾಯಕ ಆಯುಕ್ತ ) ಆಗಮಿಸಿದ್ದರು.

ಅತಿಥಿಗಳಿಗೆ ಶಾಲೆಯ ವರ್ಣ ರಂಜಿತಾ NCC ಬ್ಯಾಂಡ್ ತಂಡದ ಮಕ್ಕಳು ಸ್ವಾಗತ ಕೋರಿದರು. ಗಾಯನ ತಂಡದಿಂದ ಸ್ವಾಗತ ಗಾಯನವನ್ನು ಹಾಡಿದರು ನಂತರ ಸ್ವಾಗತ ಭಾಷಣವನ್ನು ಧರ್ಮೇಂದ್ರ ಪಟ್ಲೆ ಮಾಡಿದರು. ನೃತ್ಯ ತಂಡದಿಂದ ಮಕ್ಕಳು ಸ್ವಾಗತ ನೃತ್ಯವನ್ನು ಮಾಡಿದರು.

Continue Reading

ಬೆಂಗಳೂರು

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ; ಮೈದಾನದಲ್ಲಿ ಬಾಲಕರ ರೋಚಕ ಕ್ರಿಕೆಟ್

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ಮೈದಾನದಲ್ಲಿ ಬಾಲಕರ ಕ್ರಿಕೆಟ್ ರೋಚಕವಾಗಿತ್ತು.

VISTARANEWS.COM


on

53rd KVS National Games inaugurated

ಬೆಂಗಳೂರು: 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ 2024-25ಕ್ಕೆ (KVS Sports Meet) ಸೋಮವಾರ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿದ್ಯಾಲಯ ಆರ್‌ಡಬ್ಲ್ಯೂ ಎಫ್‌ನಲ್ಲಿ ಚಾಲನೆ ನೀಡಲಾಯಿತು. 14 ವರ್ಷದೊಳಗಿನ ಬಾಲಕರ ವಿಭಾಗದ ಕ್ರಿಕೆಟ್‌ ರೋಚಕವಾಗಿತ್ತು. ಮುಖ್ಯ ಅತಿಥಿಯಾಗಿ ಕೆವಿಎಸ್‌ ಉಪ ಆಯುಕ್ತರು ಡಾ.ಧರ್ಮೇಂದ್ರ ಪಟ್ಲೆ, ಸಹಾಯಕ ಆಯುಕ್ತ ಆರ್ ಪ್ರಮೋದ್ ಸೇರಿ ಇತರರು ಭಾಗಿಯಾಗಿದ್ದರು.

53rd KVS National Games inaugurated

ಇದೇ ವೇಳೆ ಕೆ.ವಿ.ಎಸ್ ಧ್ವಜಾರೋಹಣವನ್ನು ಮುಖ್ಯ ಅತಿಥಿಗಳು ನೆರವೇರಿಸಿದರು. ಪಾತ್ರ ಮತ್ತು ನಾಯಕತ್ವ ಎರಡನ್ನೂ ಅಭಿವೃದ್ಧಿಪಡಿಸುವಲ್ಲಿ ಕ್ರೀಡೆಯ ಮಹತ್ವವನ್ನು ಎತ್ತಿ ತೋರಿಸಿದರು. ಆಟಗಾರರನ್ನು ಹುಮ್ಮಸ್ಸಿನಿಂದ ಸ್ಪರ್ಧಿಸಲು ಪ್ರೋತ್ಸಾಹಿಸಿದರು. ಮುಂಬರುವ ದಿನಗಳಲ್ಲಿ ರೋಚಕ ಕ್ರಿಕೆಟ್ ಪಂದ್ಯಗಳನ್ನು ನೋಡುವ ನಿರೀಕ್ಷೆಯಿದೆ, ಏಕೆಂದರೆ ಭಾಗವಹಿಸುವವರು ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಮೈದಾನಕ್ಕೆ ತರುತ್ತಾರೆ ಎಂದು ಅಭಿಪ್ರಾಯಪಟ್ಟರು.

Continue Reading

ಕ್ರೀಡೆ

Duleep Trophy: ದುಲೀಪ್​ ಟ್ರೋಫಿಯಿಂದ ಹೊರಬಿದ್ದ ಮೊಹಮ್ಮದ್ ಸಿರಾಜ್

Duleep Trophy: ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.

VISTARANEWS.COM


on

Duleep Trophy

ಮುಂಬಯಿ: ದುಲೀಪ್​ ಟ್ರೋಫಿ(Duleep Trophy) ಆರಂಭಕ್ಕೂ ಮುನ್ನವೇ ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್(mohammed siraj) ಅನಾರೋಗ್ಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ನವದೀಪ್ ಸೈನಿ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಹಿರಿಯ ಆಟಗಾರ ರವೀಂದ್ರ ಜಡೇಜಾ(Ravindra Jadeja) ಅವರನ್ನು ಭಾರತ ‘ಬಿ’ ತಂಡದಿಂದ ಬಿಡುಗಡೆ ಮಾಡಲಾಗಿದೆ.

ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಉಮ್ರಾನ್ ಬದಲಿಗೆ ಮಧ್ಯಪ್ರದೇಶದ ಮಧ್ಯಮ ವೇಗಿ ಗೌರವ್ ಯಾದವ್ ಭಾರತ ‘ಸಿ’ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಡೇಜಾ ಸ್ಥಾನಕ್ಕೆ ಬದಲಿ ಆಟಗಾರನನ್ನ ಹೆಸರಿಸಲಾಗಿಲ್ಲ. ಜಡೇಜಾ ದುಲೀಪ್ ಟ್ರೋಫಿಯಲ್ಲಿ ಕೇವಲ ಒಂದು ಪಂದ್ಯವನ್ನು ಆಡಿ ಬಳಿಕ ಬಾಂಗ್ಲಾದೇಶ ಟೆಸ್ಟ್​ ಸರಣಿಗೆ ಮುಂಚಿತವಾಗಿ ಭಾರತ ಶಿಬಿರಕ್ಕೆ ತೆರಳಬೇಕಿತ್ತು. ಆದರೆ ಬಿಸಿಸಿಐ ಅವರಿಗೆ ಕೊನೆಯ ಕ್ಷಣದಲ್ಲಿ ವಿಶ್ರಾಂತಿ ನೀಡಿದೆ. ಭಾರತ ‘ಎ’ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಿದರೆ, ‘ಡಿ’ತಂಡವನ್ನು ಶ್ರೇಯಸ್‌ ಅಯ್ಯರ್‌ ಮುನ್ನಡೆಸಲಿದ್ದಾರೆ.

ಭಾರತ ‘ಎ’ ತಂಡ


ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್‌ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.

ಭಾರತ ‘ಬಿ’ ತಂಡ


ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಮುಷೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ (ಫಿಟ್‌ನೆಸ್‌ ಟೆಸ್ಟ್‌ ಅವಲಂಬನೆ), ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಆವಸ್ತಿ, ಎನ್ ಜಗದೀಸನ್ (ವಿ.ಕೀ)

ಇದನ್ನೂ ಓದಿ Natasa Stankovic: ಪಾಂಡ್ಯ ಜತೆಗಿನ ವಿಚ್ಛೇದನದ ಅಸಲಿ ಸತ್ಯ ಬಿಚ್ಚಿಟ್ಟ ನತಾಶ!

ಭಾರತ ‘ಸಿ’ ತಂಡ


ಋತುರಾಜ್ ಗಾಯಕ್ವಾಡ್​ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಗೌರವ್ ಯಾದವ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಂಡೆ, ಆರ್ಯನ್‌ ಜುಯೆಲ್‌ (ವಿ.ಕೀ), ಸಂದೀಪ್ ವಾರಿಯರ್.

ಭಾರತ ‘ಡಿ’ ತಂಡ

ಶ್ರೇಯಸ್ ಅಯ್ಯರ್​ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್‌ ಕೀಪರ್), ಸೌರಭ್ ಕುಮಾರ್.

Continue Reading

ಕ್ರೀಡೆ

IPL 2025: ಮುಂಬೈ ಇಂಡಿಯನ್ಸ್​ಗೆ ನೂತನ ನಾಯಕ; ಪೋಸ್ಟರ್​ ಬಿಡುಗಡೆ ಮಾಡಿದ ಫ್ರಾಂಚೈಸಿ

IPL 2025: ಬುಮ್ರಾ ರೋಹಿತ್​ಗೆ ಬಹಳ ಆತ್ಮಿಯರಾಗಿರುವ ಕಾರಣ ಬುಮ್ರಾ ನಾಯಕನಾದರೆ ರೋಹಿತ್​ ಕೂಡ ಮುಂಬೈ ತೊರೆಯಲು ಹಿಂದೇಟು ಹಾಕಬಹುದು ಎನ್ನುವುದು ಫ್ರಾಂಚೈಸಿಯ ಯೋಜನೆ.

VISTARANEWS.COM


on

Jasprit Bumrah

ಮುಂಬಯಿ: 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್​(Mumbai Indians) ಮುಂಬರುವ ಐಪಿಎಲ್​ ಆವೃತ್ತಿಗೂ ಮುನ್ನ ಮಹತ್ವದ ಘೋಷಣೆಯೊಂದನ್ನು ಮಾಡಲು ಮುಂದಾಗಿದೆ. ಇದರ ಸುಳಿವನ್ನು ಸ್ವತಃ ಫ್ರಾಂಚೈಸಿಯೇ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟುಕೊಟ್ಟಿದೆ. ಹೌದು, ಪ್ರಧಾನ ವೇಗಿ ಜಸ್​ಪ್ರೀತ್​ ಬುಮ್ರಾ(Jasprit Bumrah) ಅವರನ್ನು ನೂತನ ನಾಯಕನನ್ನಾಗಿ ಮಾಡಲು ನಿರ್ಧರಿಸಿದಂತಿದೆ. ಬುಮ್ರಾ ಅವರು ಜನಗಳ ಮಧ್ಯೆ ಕೈಬೀಸುತ್ತಾ ರ‍್ಯಾಂಪ್ ವಾಕ್ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದೆ. ಹೀಗಾಗಿ ಬುಮ್ರಾ ನಾಯಕನಾಗುವುದು ಖಚಿತ ಎನ್ನುವಂತಿದೆ. ಇದಕ್ಕೆ ಅಧಿಕೃತ ಮುದ್ರೆಯೊಂದು ಬೀಳಲು ಮಾತ್ರ ಬಾಕಿ ಇದೆ.

ಕಳೆದ ಬಾರಿ ರೋಹಿತ್​ ಶರ್ಮ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​ ಪಾಂಡ್ಯ(Hardik Pandya)ಗೆ ನಾಯಕತ್ ಪಟ್ಟ ನೀಡಲಾಗಿತ್ತು. ಆದರೆ, ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಎಂದೂ ಕಾಣದ ವೈಫಲ್ಯ ಕಂಡಿತ್ತು. ಪಾಂಡ್ಯ ನಾಯಕನಾಗುವ ಬಗ್ಗೆ ಬುಮ್ರಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಬಳಿಕ ಫ್ರಾಂಚೈಸಿಯೇ ಅವರನ್ನು ಸಮಾಧಾನಪಡಿಸಿತ್ತು. ಇದೀಗ ಬುಮ್ರಾ ಅವರನ್ನೇ ನಾಯಕನನ್ನಾಗಿ ಮಾಡಲು ಮುಂದಾಗಿದೆ. ಬುಮ್ರಾ ಕಾರ್ಯವೈಖರಿ ಬಗ್ಗೆಯೂ ಸಹ ಆಟಗಾರರಿಗೆ ಸಮಧಾನವಿದೆ. ಬುಮ್ರಾ ರೋಹಿತ್​ಗೆ ಬಹಳ ಆತ್ಮಿಯರಾಗಿರುವ ಕಾರಣ ಬುಮ್ರಾ ನಾಯಕನಾದರೆ ರೋಹಿತ್​ ಕೂಡ ಮುಂಬೈ ತೊರೆಯಲು ಹಿಂದೇಟು ಹಾಕಬಹುದು ಎನ್ನುವುದು ಫ್ರಾಂಚೈಸಿಯ ಯೋಜನೆ.

ಜಸ್​ಪ್ರೀತ್​ ಬುಮ್ರಾ ಅವರು ಇದುವರೆಗೆ 133 ಐಪಿಎಲ್​ ಆಡಿದ್ದು 165 ವಿಕೆಟ್​ ಕೆಡವಿದ್ದಾರೆ. 2013ರಲ್ಲಿ ಮುಂಬೈ ತಂಡದ ಪರ ಐಪಿಎಲ್​ ಪದಾರ್ಪಣೆ ಮಾಡಿದ್ದ ಬುಮ್ರಾ ಇದುವರೆಗೂ ಮುಂಬೈ ಪರವೇ ಆಡುತ್ತಿದ್ದಾರೆ.

ಇದನ್ನೂ ಓದಿ IPL 2025: ಮುಂಬೈ ಇಂಡಿಯನ್ಸ್​ಗೆ ಶ್ರೇಯಸ್​ ಅಯ್ಯರ್​, ಕೆಕೆಆರ್​ಗೆ ಸೂರ್ಯಕುಮಾರ್​ ನಾಯಕ!​

ಸೂರ್ಯಕುಮಾರ್​ ಯಾದವ್​ಗೆ ಹಾಲಿ ಚಾಂಪಿಯನ್​ ಕೆಕೆಆರ್(KKR)​ ತಂಡದಿಂದ ನಾಯಕತ್ವದ ಆಫರ್​ ಬಂದಿದೆ ಎಂದು ವರದಿಯಾಗಿದೆ. ಸೂರ್ಯಕುಮಾರ್​ ಯಾದವ್​ ಅವರು ಮುಂಬೈ ತಂಡ ಸೇರುವ ಮುನ್ನ ಕೆಕೆಆರ್​ ಪರ ಆಡುತ್ತಿದ್ದರು. 2014 ರ ಐಪಿಎಲ್ ಹರಾಜಿನಲ್ಲಿ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಖರೀದಿಸಿತ್ತು. ಇದೇ ಆವೃತ್ತಿಯಲ್ಲಿ ಕೆಕೆಆರ್​ ಚಾಂಪಿಯನ್​ ಕೂಡ ಆಗಿತ್ತು. ಗೌತಮ್​ ಗಂಭೀರ್​ ತಂಡದ ನಾಯಕನಾಗಿದ್ದರು. ಸೂರ್ಯಕುಮಾರ್​ ಕೆಕೆಆರ್​ ಪರ ನಾಲ್ಕು ಋತುಗಳಲ್ಲಿ 54 ಪಂದ್ಯಗಳನ್ನಾಡಿ 608 ರನ್​ ಬಾರಿಸಿದ್ದರು. 2018ರಲ್ಲಿ ಸೂರ್ಯ ಮುಂಬೈ ತಂಡ ಸೇರಿದ್ದರು.

ಸೂರ್ಯಕುಮಾರ್​ ಇದುವರೆಗೆ 150 ಐಪಿಎಲ್ ಪಂದ್ಯಗಳಿಂದ 3594 ರನ್​ ಬಾರಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 24 ಅರ್ಧಶತಕ ಒಳಗೊಂಡಿದೆ. ರೋಹಿತ್ ಶರ್ಮ ಅವರು ಟಿ20 ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಕಾರಣ ಭಾರತ ತಂಡದ ಟಿ20 ನಾಯಕತ್ವ ಸೂರ್ಯಕುಮಾರ್​ ಹೆಗಲೇರಿದೆ. ಅವರ ಪೂರ್ಣ ಪ್ರಮಾಣದ ನಾಯಕತ್ವದಲ್ಲಿ ಆಡಿದ್ದ ಕಳೆದ ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 3-0 ಅಂತರದಿಂದ ಗೆದ್ದು ಬೀಗಿತ್ತು.

Continue Reading
Advertisement
Latest8 hours ago

ಮಹಿಳಾ ಮೀಸಲಾತಿಗೆ ಬೆಂಬಲ; ಡಿಲಿಮಿಟೇಷನ್‌ ಗೆ ವಿರೋಧ:ಸಿಎಂ ಸಿದ್ದರಾಮಯ್ಯ ಸಷ್ಟನೆ

Latest8 hours ago

ಕುಮಾರಸ್ವಾಮಿಗೆ ಬೆಂಗಳೂರಿನ ಬಗ್ಗೆ ಅರಿವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Latest8 hours ago

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

Latest9 hours ago

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

Latest9 hours ago

ದಲಿತರಿಗೆ ಒಳ ಮೀಸಲಾತಿ: ಏ.24ರಂದು ವಿಶೇಷ ಸಂಪುಟ ಸಭೆ

Latest9 hours ago

“ಗ್ರೇಟರ್ ಇಸ್ರೇಲ್” ಸಾಕಾರಕ್ಕೆ ನೆತನ್ಯಾಹು ಬಿಗ್‌ ಪ್ಲಾನ್:‌ ಮಧ್ಯ ಪ್ರಾಚ್ಯದಲ್ಲಿ ಶಾಂತಿಗಿಲ್ಲ ನೆಲೆ

Latest9 hours ago

ಜೆಡಿಎಸ್‌ ಗೆ ಮರಳುತ್ತೀರಾ?; ಸಚಿವ ಜಮೀರ್‌ ಅಹಮದ್‌ ಕೊಟ್ಟ ಉತ್ತರ ಏನು?

Latest9 hours ago

ಬೇಸಿಗೆಯಲ್ಲೂ ಸಣ್ಣ ನೀರಾವರಿ ಕೆರೆಗಳಲ್ಲಿ ಸಮೃದ್ದ ನೀರು ಸಂಗ್ರಹ: ಸಚಿವ ಎನ್‌ ಎಸ್‌ ಭೋಸರಾಜು

Latest9 hours ago

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

Latest10 hours ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌