Sarfaraz Khan: ಸೂರ್ಯಕುಮಾರ್​ಗೆ ಧನ್ಯವಾದ ತಿಳಿಸಿದ ಸರ್ಫರಾಜ್ ತಂದೆ; ಕಾರಣವೇನು? - Vistara News

ಕ್ರೀಡೆ

Sarfaraz Khan: ಸೂರ್ಯಕುಮಾರ್​ಗೆ ಧನ್ಯವಾದ ತಿಳಿಸಿದ ಸರ್ಫರಾಜ್ ತಂದೆ; ಕಾರಣವೇನು?

ನೌಶಾದ್ ಖಾನ್​ ಅವರು ಮೈದಾನದಕ್ಕೆ ಬಂದು ತನ್ನ ಮಗನ ಆಟ ನೋಡಬಾರದು ಎಂದು ತೀರ್ಮಾನಿಸಿದ್ದರಂತೆ. ಆದರೆ, ಅವರ ಮನಸ್ಸು ಬದಲಾಯಿಸಿದ್ದು ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್ ಯಾದವ್.

VISTARANEWS.COM


on

Sarfaraz Khan with his father Naushad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಇಂಗ್ಲೆಂಡ್​ ವಿರುದ್ಧದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಆಡುವ ಮೂಲಕ ಸರ್ಫರಾಜ್ ಖಾನ್(sarfaraz khan) ಅವರು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದರು. ಮಗ ಟೆಸ್ಟ್​ ಕ್ಯಾಪ್​ ಪಡೆಯುತ್ತಿದ್ದಂತೆ ಭಾವುಕರಾಗಿ ಕಣ್ಣೀರು ಹಾಕಿದ ಸರ್ಫರಾಜ್​ ತಂದೆ ನೌಶಾದ್ ಖಾನ್(Naushad Khan) ಸೂರ್ಯಕುಮಾರ್​ ಯಾದವ್​ಗೆ(Suryakumar Yadav) ಧನ್ಯವಾದ ಸಲ್ಲಿಸಿದ್ದಾರೆ.

ನೌಶಾದ್ ಖಾನ್​ ಅವರು ಮೈದಾನದಕ್ಕೆ ಬಂದು ತನ್ನ ಮಗನ ಆಟ ನೋಡಬಾರದು ಎಂದು ತೀರ್ಮಾನಿಸಿದ್ದರಂತೆ. ಆದರೆ, ಅವರ ಮನಸ್ಸು ಬದಲಾಯಿಸಿದ್ದು ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್ ಯಾದವ್. ಹೌದು ಮಗನ ಟೆಸ್ಟ್ ಪದಾರ್ಪಣೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ನೌಶಾದ್ ಖಾನ್, ಸೂರ್ಯಕುಮಾರ್ ಅವರ ಸಂದೇಶವು ನನ್ನನ್ನು ರಾಜ್‌ಕೋಟ್‌ಗೆ ಬರುವಂತೆ ಮಾಡಿತು. ನಾನು ಸರ್ಫರಾಜ್ ಮೇಲೆ ಒತ್ತಡ ಬೀಳಬಹುದು ಎಂಬ ಕಾರಣಕ್ಕೆ ಪಂದ್ಯ ನೋಡಲು ಬರಬಾರದೆಂದು ನಿರ್ಧರಿಸಿದ್ದೆ ಆದರೆ ಸೂರ್ಯನ ಸಂದೇಶ ನನ್ನ ಹೃದಯವನ್ನು ಕರಗಿಸಿತು. ಪದಾರ್ಪಣ ಪಂದ್ಯದಲ್ಲೇ ಮಗ ಅರ್ಧಶತಕ ಬಾರಿಸಿದ್ದನ್ನು ಕಂಡು ಸಂತಸವಾಗಿದೆ. ಇದನ್ನು ಹತ್ತಿರದಿಂದ ನೋಡುವಂತೆ ಮಾಡಿದ ಸೂರ್ಯಕುಮಾರ್​ಗೆ ಧನ್ಯವಾದಗಳು ಎಂದು ನೌಶಾದ್ ಖಾನ್ ಹೇಳಿದರು.

ಸೂರ್ಯಕುಮಾರ್ ನೀಡಿದ ಸಂದೇಶವೇನು?​​


ಸೂರ್ಯಕುಮಾರ್​​ ಯಾದವ್​ ಅವರು ಸರ್ಫರಾಜ್​ ಖಾನ್​ ಅವರ ತಂದೆಗೆ ”ನಿಮ್ಮ ಭಾವನೆಗಳನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ನನ್ನನ್ನು ನಂಬಿರಿ, ನಾನು ನನ್ನ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ವೇಳೆ ನನ್ನ ತಂದೆ ಮತ್ತು ತಾಯಿ ಈ ಅದ್ಭುತ ಕ್ಷಣಕ್ಕೆ ಸಾಕ್ಷಿಯಾಗಿದ್ದರು. ಈ ಕ್ಷಣ ನನಗೆ ಬಹಳ ವಿಶೇಷವಾಗಿತ್ತು. ಪ್ರತಿಯೊಬ್ಬ ಕ್ರಿಕೆಟಿಗನೂ ಕೂಡ ಪದಾರ್ಪಣೆ ಮಾಡುವಾಗ ಆ ಕ್ಷಣದಲ್ಲಿ ತನ್ನ ತಂದೆ, ತಾಯಿ ಇರಬೇಕು ಎಂದು ಭಾವಿಸುತ್ತಾರೆ. ಈ ಕ್ಷಣ ಮತ್ತೆ ಮತ್ತೆ ಮತ್ತೆ ಬರುವುದಿಲ್ಲ. ಹಾಗಾಗಿ ನೀವು ಹೋಗಬೇಕು” ಎಂದು ಸೂರ್ಯ ಅವರು ಸರ್ಫರಾಜ್ ತಂದೆಗೆ ಸಂದೇಶ ಕಳುಹಿಸಿದ್ದರಂತೆ.

ಇದನ್ನೂ ಓದಿ IND vs ENG 3rd Test: ಟೆಸ್ಟ್​ಗೆ ಸರ್ಫರಾಜ್​ ಪದಾರ್ಪಣೆ; ಮೈದಾನದಲ್ಲೇ ತಂದೆ ಭಾವುಕ

ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಸರ್ಫರಾಜ್​ ಖಾನ್​ ಅವರು ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಅರ್ಧಶತಕ ಬಾರಿಸಿದರು. ರವೀಂದ್ರ ಜಡೇಜಾ ಅವರ ತಪ್ಪಿನಿಂದಾಗಿ ರನೌಟ್​ ಸಂಕಟಕ್ಕೆ ಸಿಲುಕಿದರು. ಇಲ್ಲವಾದಲ್ಲಿ ಅವರು ಶತಕ ಬಾರಿಸುವ ಸಾಧ್ಯತೆ ಇತ್ತು. ಒಟ್ಟು 66 ಎಸೆತ ಎದುರಿಸಿ 1 ಸಿಕ್ಸರ್​ ಮತ್ತು 9 ಬೌಂಡರಿ ನೆರವಿನಿಂದ 62 ರನ್​ ಗಳಿಸಿದ್ದರು. ದ್ವಿತೀಯ ಇನಿಂಗ್ಸ್​ನಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಭಾರಿ ನಿರೀಕ್ಷೆ ಇರಿಸಲಾಗಿದೆ.

22 ವರ್ಷದ ಸರ್ಫರಾಜ್ 45 ಪ್ರಥಮ ದರ್ಜೆ ಪಂದ್ಯಗಳನ್ನಾಡಿ 3912 ರನ್​ ಬಾರಿಸಿದ್ದಾರೆ. ಇದರಲ್ಲಿ 14 ಶತಕ ಮತ್ತು 11 ಅರ್ಧಶತಕ ಒಳಗೊಂಡಿದೆ. ಅಜೇಯ 301 ರನ್​ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

IPL 2024 Eliminator: ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

IPL 2024 Eliminato
Koo

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡದ ಎಲಿಮಿನೇಟರ್(IPL 2024 Eliminator)​ ಎದುರಾಳಿ ಯಾರೆಂದು ಫಿಕ್ಸ್​ ಆಗಿದೆ. ಇದರ ಬೆನ್ನಲ್ಲೇ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದೆ. ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ನಡೆಸುವ ಸಲುವಾಗಿ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ಗಳಾದ ಕ್ಯಾಮರೂನ್​ ಗ್ರೀನ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಂಡ ತೊರೆಯಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಇಂಗ್ಲೆಂಡ್​ನ ಆಟಗಾರರು ಐಪಿಎಲ್​ ಪಂದ್ಯವಾವಳಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಇದೀಗ ಆಸ್ಟ್ರೇಲಿಯಾ ಸರದಿ ಎನ್ನಲಾಗಿದೆ. ಕೇವಲ ಆರ್​ಸಿಬಿ ಮಾತ್ರವಲ್ಲದೆ ಇತರ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರರು ಕೂಡ ಐಪಿಎಲ್​ ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಐಪಿಎಲ್​ನಿಂದ ಹೊರಹೋದರೆ ಸನ್​ರೈಸರ್ಸ್​ ಮತ್ತು ಆರ್​ಸಿಬಿ ತಂಡಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ 2 ತಂಡಗಳಲ್ಲಿಯೇ ತಲಾ 2 ಆಸೀಸ್​ ಆಟಗಾರರಿದ್ದಾರೆ.

ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ಪಂದ್ಯಗಳು ಮೇ 27ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಮೀಬಿಯಾ ವಿರುದ್ಧ ಮೇ 29ಕ್ಕೆ ಆಡಲಿದೆ. ಮೂಲಗಳ ಪ್ರಕಾರ ಆಸ್ಟ್ರೇಲಿಯಾ ತಂಡ ಮೇ 21ರಂದು ಕೆರಿಬಿಯನ್​ ದ್ವೀಪಕ್ಕೆ ಪ್ರಯಾಣ ಬೆಳೆಸಲಿದೆ ಎಂದು ಹೇಳಲಾಗಿದೆ.

ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ


ಇಂದು ರಾತ್ರಿ ನಡೆಯಬೇಕಿದ್ದ ಐಪಿಎಲ್​ನ ಅಂತಿಮ ಲೀಗ್​ ಪಂದ್ಯವಾದ ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ನಡುವಣ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ರಾಜಸ್ಥಾನ್​ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತು. ಹೀಗಾಗಿ ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

Continue Reading

ಕ್ರೀಡೆ

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

RR vs KKR: ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು.

VISTARANEWS.COM


on

RR vs KKR
Koo

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ(IPL 2024) ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ ಪಂದ್ಯವನ್ನು ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ ಟಾಸ್​ ಕೂಡ ಹಾರಿಸಲಾಯಿತು. ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮಳೆ ಮತ್ತೆ ಆರಂಭಗೊಂಡಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಪಂದ್ಯವನ್ನು ರದ್ದು ಎಂದು ಘೋಷಣೆ ಮಾಡಿದರು.

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

ಆರ್​ಸಿಬಿ-ರಾಜಸ್ಥಾನ್​ ಮಧ್ಯೆ ಎಲಿಮಿನೇಟರ್​ ಪಂದ್ಯ


ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಪಂಜಾಬ್​ ವಿರುದ್ಧ ಗೆದ್ದ ಹೈದರಾಬಾದ್​


ದಿನದ ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು. ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

Continue Reading

ಕ್ರೀಡೆ

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

SRH vs PBKS: ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

VISTARANEWS.COM


on

SRH vs PBKS
Koo

ಹೈದರಾಬಾದ್​: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಐಪಿಎಲ್​(IPL 2024) ಆವೃತ್ತಿಯಲ್ಲಿ ಮತ್ತು ಟಿ20 ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದೆ. ಆರ್​ಸಿಬಿ ಈ ಆವೃತ್ತಿಯಲ್ಲಿ ಒಟ್ಟು 157 ಸಿಕ್ಸರ್​ ಬಾರಿಸಿ ಅಗ್ರಸ್ಥಾನ ಪಡೆದಿತ್ತು. ಆದರೆ, ಇದೀಗ ಹೈದರಾಬಾದ್​ 160 ಸಿಕ್ಸರ್​ ಬಾರಿಸುವ ಮೂಲಕ ದಾಖಲೆಯನ್ನು ತನ್ನ ಹೆಸರಿಗೆ ಬರೆದಿದೆ.

ಅತಿ ಹೆಚ್ಚು ಸಿಕ್ಸರ್​ ಬಾರಿಸಿದ 5 ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​-160
ಸಿಕ್ಸರ್​, 2024

ಆರ್​ಸಿಬಿ-157 ಸಿಕ್ಸರ್​, 2024

ಚೆನ್ನೈ ಸೂಪರ್​ ಕಿಂಗ್ಸ್​-145 ಸಿಕ್ಸರ್​, 2018

ಸರ್ರೆ-144 (ಟಿ20 ಬ್ಲಾಸ್ಟ್​ 2013)

ಕೆಕೆಆರ್​-143 ಸಿಕ್ಸರ್​, 2019

ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್​


ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಹೈದರಾಬಾದ್​ಗೆ 4 ವಿಕೆಟ್​ ಜಯ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading

ಕ್ರೀಡೆ

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

SRH vs PBKS: ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

VISTARANEWS.COM


on

SRH vs PBKS
Koo

ಹೈದರಾಬಾದ್: ವಿರಾಟ್​ ಕೊಹ್ಲಿ(Virat Kohli) ಅವರು ಶನಿವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದರು. ಆದರೆ ಈ ದಾಖಲೆ ಒಂದು ದಿನ ಕಳೆಯುವ ಮುನ್ನವೇ ಪತನಗೊಂಡಿದೆ. ಸನ್​ರೈಸರ್ಸ್ ಹೈದರಾಬಾದ್(SRH vs PBKS)​ ತಂಡದ ಯುವ ಆಟಗಾರ ಅಭಿಷೇಕ್​ ಶರ್ಮ(Abhishek Sharma) ಈ ದಾಖಲೆಯನ್ನು ಮರಿದಿದ್ದಾರೆ.

ಇಂದು(ಭಾನುವಾರ) ನಡೆದ ಐಪಿಎಲ್​ನ 69ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಇದನ್ನೂ ಓದಿ PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading
Advertisement
how many seats will the Congress have in the Lok Sabha elections CM Siddaramaiah statement
Lok Sabha Election 20246 mins ago

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Yami Gautam welcome baby boy
ಬಾಲಿವುಡ್13 mins ago

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Liquid Nitrogen Paan
ದೇಶ15 mins ago

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

road Accident in Mandya
ಮಂಡ್ಯ22 mins ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ22 mins ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

pretha maduve
ಧಾರ್ಮಿಕ25 mins ago

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Kannada New Movie Hondisi Bareyiri in youtube
ಸಿನಿಮಾ37 mins ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ44 mins ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ47 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Survival Story
ವಿದೇಶ58 mins ago

Survival Story: ಆ 17 ದಿನಗಳು…ಥೈಲ್ಯಾಂಡ್‌ನ ಥಾಮ್ ಲುವಾಂಗ್ ಗುಹೆಯಲ್ಲಿ ಸಿಕ್ಕಿಬಿದ್ದ 13 ಮಂದಿಯ ರಕ್ಷಣೆಯ ರೋಚಕ ಕಹಾನಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ47 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ23 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ23 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌