The world's biggest motorcycle race is broadcast free on Jio CinemaMoto GP : ಜಿಯೊ ಹವಾ; ಜಗತ್ತಿನ ಅತಿ ದೊಡ್ಡ ಮೋಟಾರ್​ಸೈಕಲ್​ ರೇಸ್​ ಉಚಿತ ಪ್ರಸಾರ - Vistara News

ಕ್ರೀಡೆ

Moto GP : ಜಿಯೊ ಹವಾ; ಜಗತ್ತಿನ ಅತಿ ದೊಡ್ಡ ಮೋಟಾರ್​ಸೈಕಲ್​ ರೇಸ್​ ಉಚಿತ ಪ್ರಸಾರ

ಸೆಪ್ಟೆಂಬರ್​ನಲ್ಲಿ ಇದೇ ಮೊದಲ ಬಾರಿಗೆ ಭಾರತದಲ್ಲೂ ಮೊಟೊ ಜಿಪಿ (Moto GP) ರೇಸ್​ ನಡೆಯಲಿರುವ ಕಾರಣ ಭಾರತದ ಅಭಿಮಾನಿಗಳ ಸಂಭ್ರಮ ಹೆಚ್ಚಿದೆ.

VISTARANEWS.COM


on

The world's biggest motorcycle race is broadcast free on Jio Cinema
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಫುಟ್ಬಾಲ್​ ವಿಶ್ವಕಪ್​, ಮಹಿಳೆಯರ ಪ್ರೀಮಿಯರ್​ ಲೀಗ್ ಸೇರಿದಂತೆ ಜಾಗತಿಕ ಕ್ರೀಡಾಕೂಟಗಳನ್ನು ಉಚಿತವಾಗಿ ವೀಕ್ಷಿಸಲು ಅವಕಾಶ ಕೊಟ್ಟ ಜಿಯೊ ಸಿನಿಮಾ ಇದೇ ಹಾದಿಯಲ್ಲಿ ಮತ್ತೊಂದು ಹೆಜ್ಜೆಯನ್ನಿಟ್ಟಿದೆ. ವಿಶ್ವದ ಅತ್ಯಂತ ಥ್ರಿಲ್ಲಿಂಗ್​ ಹಾಗೂ ಜನಪ್ರಿಯ ಕ್ರೀಡೆಯಾಗಿರುವ ಮೋಟಾರ್​ಸೈಕಲ್​ ರೇಸ್​ ಮೊಟೊ ಜಿಪಿಯನ್ನೂ (Moto GP) ಭಾರತದಲ್ಲಿ ಉಚಿತವಾಗಿ ಪ್ರಸಾರ ಮಾಡಲು ನಿರ್ಧರಿಸಿದೆ. ವಯಾಕಾಮ್​ 18 ಸಂಸ್ಥೆಯ ಮೂಲಕ ನೇರ ಪ್ರಸಾರದ ಹಕ್ಕನ್ನು ತನ್ನದಾಗಿಸಿಕೊಂಡಿದ್ದು, ವರ್ಷವಿಡೀ ಜಗತ್ತಿನ ನಾನಾ ಕಡೆ ನಡೆಯುವ ಮೋಟೊ ಜಿಪಿ ರೇಸ್​ ಅನ್ನು ಉಚಿತವಾಗಿ ಭಾರತದ ಗ್ರಾಹಕರು ವೀಕ್ಷಿಸಬಹುದಾಗಿದೆ. ಈ ರೇಸ್​​ನಲ್ಲಿ ವಿಶ್ವದ ಚಾಂಪಿಯನ್​ ರೇಸರ್​ಗಳು ಪಾಲ್ಗೊಳ್ಳಲಿದ್ದಾರೆ. ಅದಕ್ಕಿಂತ ಹೆಚ್ಚಾಗಿ ಇದೇ ಮೊದಲ ಬಾರಿ ಈ ರೇಸ್​ ಭಾರತದಲ್ಲೂ ಆಯೋಜನೆಗೊಂಡಿದ್ದು ಸೆಪ್ಟೆಂಬರ್​ನಲ್ಲಿ ನಡೆಯಲಿದೆ.

ಮೋಟೋ ಜಿಪಿ ವಿಶ್ವ ಚಾಂಪಿಯನ್​ಷಿಪ್​ನಲ್ಲಿ ವಿಶ್ವದರ್ಜೆಯ, ಉನ್ನತ ನಿರ್ವಹಣೆಯ, ಪ್ರಪಂಚದ ಅತ್ಯುತ್ತಮ ಮೋಟಾರ್​ ಸೈಕಲ್​ ತಯಾರಿಕಾ ಕಂಪನಿಗಳು ಅತಿವೇಗದ ಪ್ರೋಟೋಟೈಪ್​ ಮೋಟಾರ್ ​ಸೈಕಲ್​ಗಳೊಂದಿಗೆ ಭಾಗಿಯಾಗುತ್ತಾರೆ. 2023ರ ಮೋಟೋ ಜಿಪಿ ಋತು ಅತ್ಯಧಿಕ ಸಿರೀಸ್​ಗಳ ದಿನಾಂಕವನ್ನು ಒಳಗೊಂಡಿದ್ದು, 18 ದೇಶಗಳಲ್ಲಿ ಒಟ್ಟು 21 ರೇಸ್​ಗಳು ನಡೆಯಲಿವೆ. ಇದರಲ್ಲಿ ಭಾರತದಲ್ಲಿ ನಡೆಯುವ 14ನೇ ಸುತ್ತಿನ ರೇಸ್​ ಕೂಡ ಒಳಗೊಂಡಿರುತ್ತದೆ. ಈ ಮೂಲಕ ಮೋಟೋ ಜಿಪಿ ಭಾರತದಲ್ಲಿ ಪದಾರ್ಪಣೆಯನ್ನೂ ಮಾಡಲಿದೆ.

‘ಮೋಟೋ ಜಿಪಿ ವಿಶ್ವದಲ್ಲೇ ಅತ್ಯಂತ ಥ್ರಿಲ್ಲಿಂಗ್​ ರೇಸಿಂಗ್ ಸ್ಪರ್ಧೆಯಾಗಿರುತ್ತದೆ. ಸೆಪ್ಟೆಂಬರ್​ನಲ್ಲಿ ಇದರ ಸರಣಿಯು ಭಾರತದಲ್ಲೂ ಪದಾರ್ಪಣೆ ಮಾಡುತ್ತಿರುವುದರಿಂದ ಭಾರತದ ಬೈಕ್​ ರೇಸ್​ ಪ್ರೇಮಿಗಳಿಗೆ ಹಬ್ಬದ ವಾತಾವರಣ ಇರಲಿದೆ.

ವಯಾಕಾಮ್​18 ಸ್ಪೋರ್ಟ್ಸ್​​​ನ ಸ್ಟ್ರಾಟಜಿ ಮತ್ತು ಪಾಲುದಾರಿಕೆಗಳ ಮುಖ್ಯಸ್ಥ ಹರ್ಷ್​ ಶ್ರೀವಾಸ್ತವ ಭಾರತದಲ್ಲಿ ಉಚಿತ ಪ್ರಸಾರದ ಕುರಿತು ಮಾತನಾಡಿ , ವಿಶ್ವದ ಅತ್ಯುತ್ತಮ ಮೋಟಾರ್​ಸೈಕಲ್​ ರೇಸಿಂಗ್​ ಶೋವನ್ನು ಭಾರತದಲ್ಲಿ ಕ್ರೀಡಾಭಿಮಾನಿಗಳಿಗೆ ಒದಗಿಸಿಕೊಡಲು ನಮಗೆ ಹೆಮ್ಮೆ ಎನಿಸುತ್ತಿದೆ. ಈ ಮೂಲಕ ಜಿಯೊ ತನ್ನ ಅಭಿಮಾನಿ ಬಳಗವನ್ನು ವಿಸ್ತರಿಸಲಿದೆ ಎಂದು ಹೇಳಿದ್ದಾರೆ.

ಭಾರತವು ಮೋಟಾರ್​ಸೈಕಲ್​ ಉದ್ಯಮಕ್ಕೆ ಪ್ರಮುಖ ಮಾರುಕಟ್ಟೆಯಾಗಿದೆ. ಇದೇ ವೇಳೆ ದ್ವಿಚಕ್ರ ವಾಹನಗಳ ಅತ್ಯುತ್ಕೃಷ್ಟ ರೇಸ್​ ಮೋಟೋ ಜಿಪಿಯೂ ಭಾರತಕ್ಕೆ ಕಾಲಿಡುತ್ತಿದೆ. ಈ ಕ್ರೀಡೆಯನ್ನು ಭಾರತದ ಮೂಲೆಮೂಲೆಗೆ ತಲುಪಿಸುವ ಕೆಲಸವನ್ನು ವಯಾಕಾಮ್​ 18 ಮಾಡಲಿದೆ ಎಂದು ಡೋರ್ನಾ ಸಿಇಒ ಕ್ಯಾರ್ಮೆಲೊ ಎಜ್ಪೆಲೆಟಾ ಹೇಳಿದ್ದಾರೆ.

ಇದನ್ನೂ ಓದಿ : FORMULA 1 RACE: ಎಫ್-1 ಗ್ರ್ಯಾನ್​​ ಪ್ರಿ​​ ರೇಸ್​ಗೆ ಸಜ್ಜಾದ ಸೌದಿ ಅರೇಬಿಯಾ

‘ಅತ್ಯಂತ ರೋಮಾಂಚನಕಾರಿ ಕ್ರೀಡೆಯಾದ ಮೋಟೋ ಜಿಪಿಯನ್ನು ಭಾರತದಲ್ಲಿ ಪ್ರಸಾರ ಮಾಡಲು ವಯಾಕಾಮ್​18 ಅತ್ಯಂತ ಸಮರ್ಥ ಪಾಲುದಾರ ಎಂಬ ವಿಶ್ವಾಸ ನಮಗಿದೆ. ಟಿವಿ ಮತ್ತು ಒಟಿಟಿ ಫ್ಲ್ಯಾಟ್​ಫಾರ್ಮ್​ಗಳ ಮೂಲಕ ಅವರು ಅತ್ಯಂತ ವ್ಯಾಪಕ ವ್ಯಾಪ್ತಿ ಹೊಂದಿದ್ದಾರೆ ಎಂದು ಭಾರತದ ರೇಸ್​ನ ಪ್ರವರ್ತಕರಾಗಿರುವ ಫೇರ್​ಸ್ಟ್ರೀಟ್​ ಸ್ಪೋರ್ಟ್ಸ್​ ಸಿಒಒ ಪುಷ್ಕರ್​ ನಾಥ್​ ಶ್ರೀವಾಸ್ತವ ಅಭಿಪ್ರಾಯಪಟ್ಟಿದ್ದಾರೆ.

ಜಿಯೊ ಪ್ರಸಾರ ಮಾಡುವ ಕ್ರೀಡಾಕೂಟಗಳು

ವಯಾಕಾಮ್​18 ಸ್ಪೋರ್ಟ್ಸ್​ ತನ್ನ ವಿಶ್ವದರ್ಜೆಯ ಹಲವು ಕ್ರೀಡಾಕೂಟಗಳನ್ನು ಪ್ರಸಾರ ಮಾಡುತ್ತಿವೆ. ಅವುಗಳು ಇಂತಿವೆ. ಟಾಟಾ ಐಪಿಎಲ್​, ಟಾಟಾ ಡಬ್ಲ್ಯುಪಿಎಲ್​, ಡೈಮಂಡ್​ ಲೀಗ್​, ಫಿಫಾ ವಿಶ್ವಕಪ್​ ಕತಾರ್​-2022, ಎನ್​ಬಿಎ, ಲಾ ಲೀಗಾ, ಸೆರೀ ಎ, ಲೀಗ್​1 ಮತ್ತು ಆಯ್ದ ಬಿಡಬ್ಲ್ಯುಎಫ್​ ಟೂರ್ನಿಗಳ ಪ್ರಸಾರ ಹಕ್ಕು ಹೊಂದಿರುತ್ತದೆ.

2023ರ ಮೋಟೊ ಜಿಪಿ ರೇಸ್ ವೇಳಾಪಟ್ಟಿ

  • 2023ರ ಮೋಟೋ ಜಿಪಿ ಕ್ಯಾಲೆಂಡರ್​ ಇಲ್ಲಿದೆ
  • ಮಾರ್ಚ್​ 24-26 ಗ್ರ್ಯಾಂಡ್​ ಪ್ರೀಮಿಯೊ ಡಿ ಪೋರ್ಚುಗಲ್​
  • ಮಾರ್ಚ್​ 31-ಏಪ್ರಿಲ್​ 2 ಗ್ರ್ಯಾನ್​​ ಪ್ರೀಮಿಯೊ ಡಿ ಲಾ ರಿಪಬ್ಲಿಕಾ ಅರ್ಜೆಂಟೀನಾ
  • ಏಪ್ರಿಲ್​ 14-16 ಗ್ರ್ಯಾನ್​ ಪ್ರಿ ಆಫ್​ ದಿ ಅಮೆರಿಕಾಸ್​
  • ಏಪ್ರಿಲ್​ 28-30 ಗ್ರ್ಯಾನ್​ ಪ್ರೀಮಿಯೊ ಡಿ ಇಸ್ಪಾನಾ
  • ಮೇ 12-14 ಗ್ರ್ಯಾನ್​ ಪ್ರಿ ಡಿ ಫ್ರಾನ್ಸ್
  • ಜೂನ್​ 09-11 ಗ್ರ್ಯಾನ್​ ಪ್ರಿಮಿಯೊ ಡಿ ಇಟಲಿಯಾ
  • ಜೂನ್​ 16-18 ಗ್ರ್ಯಾನ್​ ಪ್ರಿ ಡಾಯಾಚ್ಲೆಂಡ್​
  • ಜೂನ್​ 23-25 ಟಿಟಿ ಅಸೆನ್​, ನೆದರ್ಲೆಂಡ್​
  • ಜುಲೈ 7-9 ಗ್ರ್ಯಾನ್​ ಪ್ರಿ ಆಫ್​ ಕಜಕ​ಸ್ತಾನ
  • ಆಗಸ್ಟ್​ 4-6 ಬ್ರಿಟಿಷ್​ ಗ್ರ್ಯಾನ್​ ಪ್ರಿ
  • ಆಗಸ್ಟ್​ 4-6 ಬ್ರಿಟಿಷ್​ ಗ್ರ್ಯಾನ್​ ಪ್ರಿ
  • ಆಗಸ್ಟ್​ 18-20 ಗ್ರ್ಯಾನ್​ ಪ್ರಿ ವೊನ್​ ಒಸ್ಟೆರಿಚ್​, ಆಸ್ಟ್ರಿಯಾ
  • ಸೆಪ್ಟೆಂಬರ್​ 1-3 ಗ್ರ್ಯಾನ್​ ಪ್ರೀಮಿ ಡಿ ಕ್ಯಾಟಲುನ್ಯಾ
  • ಸೆಪ್ಟೆಂಬರ್​ 8-10 ಗ್ರ್ಯಾನ್​ ಪ್ರಿಮಿಯೊ ಡಿ ಸ್ಯಾನ್​ ಮರಿನೊ, ಇಟಲಿ
  • ಸೆಪ್ಟೆಂಬರ್​ 22-24 ಗ್ರ್ಯಾನ್​ ಪ್ರಿ ಆಫ್​ ಇಂಡಿಯಾ
  • ಸೆಪ್ಟೆಂಬರ್ 29-ಅಕ್ಟೋಬರ್​ 1 ಗ್ರ್ಯಾನ್​ ಪ್ರಿ ಆಫ್​ ಜಪಾನ್​
  • ಅಕ್ಟೋಬರ್​ 13-15 ಗ್ರ್ಯಾನ್​ ಪ್ರಿ ಆಫ್​ ಇಂಡೋನೇಷ್ಯಾ
  • ಅಕ್ಟೋಬರ್​ 20-22 ಆಸ್ಟ್ರೇಲಿಯನ್​ ಮೋಟಾರ್​ಸೈಕಲ್​ ಗ್ರ್ಯಾನ್​ ಪ್ರಿ​
  • ಅಕ್ಟೋಬರ್​ 27-29 ಥಾಯ್ಲೆಂಡ್​ ಗ್ರ್ಯಾನ್​ ಪ್ರಿ
  • ನವೆಂಬರ್​ 10-12 ಗ್ರ್ಯಾನ್​ ಪ್ರಿಆಫ್​ ಮಲೇಷ್ಯಾ
  • ನವೆಂಬರ್​ 17-19 ಗ್ರ್ಯಾನ್​ ಪ್ರಿ ಆಫ್​ ಕತಾರ್​
  • ನವೆಂಬರ್​ 24-26 ಗ್ರ್ಯಾನ್​ ಪ್ರೀಮಿಯೊ ಡಿ ವಲೆನ್ಸಿಯಾ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಮೇ 25ಕ್ಕೆ ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್​

T20 World Cup 2024: ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ(T20 World Cup 2024) ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

ಮೂಲ ವೇಳಾಪಟ್ಟಿಯ ಪ್ರಕಾರ ಭಾರತ ತಂಡದ ಆಟಗಾರರು ಮೇ 21ರಂದು ನ್ಯೂಯಾರ್ಕ್​ಗೆ ತೆರಳಬೇಕಿತ್ತು. ಆದರೆ ಐಪಿಎಲ್​ ಟೂರ್ನಿಯಿಂದಾಗಿ ಇದು ಸಾಧ್ಯವಾಗಲಿಲ್ಲ. ಇದು ಮಾತ್ರವಲ್ಲದೆ ಭಾರತ ಏಕೈಕ ಅಭ್ಯಾಸ ಪಂದ್ಯ ಮಾತ್ರ ಆಡಲಿದೆ. ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ. ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ಈ ಪಂದ್ಯವನ್ನು ಆಡಲಿದೆ. ಅಭ್ಯಾಸ ಪಂದ್ಯಗಳು ಮೇ 27ರಿಂದ ಜೂನ್ 1ರವರೆಗೆ ನಡೆಯಲಿದೆ.

ಇದನ್ನೂ ಓದಿ T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ

Continue Reading

ಕ್ರೀಡೆ

RCB vs CSK: 11 ವರ್ಷಗಳ ಹಿಂದಿನ ಇತಿಹಾಸ ಮರುಕಳಿಸಿದರೆ ಆರ್​ಸಿಬಿಗೆ ಇಂದು ಗೆಲುವು ಖಚಿತ

RCB vs CSK: ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

VISTARANEWS.COM


on

RCB vs CSK
Koo

ಬೆಂಗಳೂರು: ಸಾಂಪ್ರದಾಯಿಕ ಬದ್ಧವೈರಿಗಳಾದ ಆರ್‌ಸಿಬಿ(RCB vs CSK) ಹಾಗೂ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ನಿರ್ಣಾಯಕ ಹಣಾಹಣಿ ಇನ್ನೇಮು ಕೆಲವೇ ಗಂಟೆಗಳಲ್ಲಿ ಆರಂಭಗೊಳ್ಳಲಿದೆ. ಇತ್ತಂಡಗಳ ನಡುವಣ ಈ ಕಾದಾಟಕ್ಕೆ ನಗರದ ಚಿನ್ನಸ್ವಾಮಿ(Chinnaswamy) ಕ್ರೀಡಾಂಗಣ ಸಜ್ಜಾಗಿ ನಿಂತಿದೆ. ಆದರೆ ಮತ್ತೊಂದೆಡೆ ಭಾರೀ ಮೋಡ ಕವಿದ ವಾತಾವರಣ ಕಂಡು ಬಂದಿದ್ದು ಮಳೆ ಭೀತಿಯೂ(RCB vs CSK rain prediction) ಎದುರಾಗಿದೆ. 11 ವರ್ಷಗಳ ಹಿಂದೆಯೂ ಉಭಯ ತಂಡಗಳ ನಡುವಣ ಪಂದ್ಯಕ್ಕೂ ಮಳೆ ಎದುರಾಗಿತ್ತು. ಕಾಕತಾಳೀಯವೆಂದರೆ ಆ ಪಂದ್ಯ ಕೂಡ ಮೇ 18, ಶನಿವಾರ ನಡೆದಿತ್ತು.

ಹೌದು, ಆರ್​ಸಿಬಿ ಮತ್ತು ಚೆನ್ನೈ 2013ರಲ್ಲಿ(2013 IPL) ತನ್ನ ಕೊನೆಯ ಲೀಗ್​ ಪಂದ್ಯವನ್ನು ಮೇ 18ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಆಡಿತ್ತು. ಈ ಪಂದ್ಯ ಕೂಡ ಶನಿವಾರವೇ ಆಗಿತ್ತು. ಅಲ್ಲದೆ ಪಂದ್ಯಕ್ಕೆ ಮಳೆಯ ಭೀತಿಯೂ ಎದುರಾಗಿತ್ತು. ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯಂತೆ ಪಂದ್ಯಕ್ಕೆ ಮಳೆ ಕೂಡ ಅಡ್ಡಿಪಡಿಸಿತ್ತು. ಬಳಿಕ ಡಕ್​ವರ್ತ್ ಲೂಯಿಸ್​ ನಿಯಮದ ಅನುಸಾರ ಈ ಪಂದ್ಯವನ್ನು 8 ಓವರ್​ಗೆ ಸೀಮಿತಗೊಳಿಸಿ ಆಡಿಸಲಾಗಿತ್ತು.

ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ಓವರ್​ಗೆ ಕೇವಲ 2 ವಿಕೆಟ್​ ಕಳೆದುಕೊಂಡು 106 ರನ್​ ಪೇರಿಸಿತ್ತು. ಕಿಂಗ್​ ವಿರಾಟ್​ ಕೊಹ್ಲಿ ಅಜೇಯ 56 ರನ್​ ಬಾರಿಸಿದರೆ, ಕ್ರಿಸ್​ ಗೇಲ್​ 28 ರನ್​ ಬಾರಿಸಿದ್ದರು. ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್​ ಕಿಂಗ್ಸ್​ 6 ವಿಕೆಟ್​ ಕಳೆದುಕೊಂಡು 82 ರನ್​ಗಳಿಸಲಷ್ಟೇ ಶಕ್ತವಾಗಿ 24 ರನ್​ಗಳ ಸೋಲು ಕಂಡಿತ್ತು.

ಇದೀಗ ಇಂದು ನಡೆಯುವ ಪಂದ್ಯವೂ ಕೂಡ ಮೇ 18 ಶನಿವಾರವಾಗಿದೆ. ಜತೆಗೆ ಪಂದ್ಯಕ್ಕೆ ಮಳೆಯ ಭೀತಿ ಕೂಡ ಇದೆ. ಅಂಕಿ ಸಂಖ್ಯೆಗಳ ಚಮತ್ಕಾರ ತಾಳೆಯಾಗುತ್ತಿದ್ದು ಈ ಆಧಾರದಲ್ಲಿ ಆರ್​ಸಿಬಿ ಇಂದು ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ಪಂದ್ಯಕ್ಕೂ ಮುನ್ನವೇ ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಇದನ್ನೂ ಓದಿ IPL 2024 : ಬೆಂಗಳೂರಿನ ಬೀದಿ ಬೀದಿಗಳಲ್ಲಿ ‘ಧೋನಿ, ಧೋನಿ’ ಘೋಷಣೆ, ಇಲ್ಲಿದೆ ವಿಡಿಯೊ

ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

Continue Reading

ಕ್ರೀಡೆ

Boxer Parveen: ಒಲಿಂಪಿಕ್ಸ್‌ ಕೋಟಾ ಕಳೆದುಕೊಂಡ ಭಾರತದ ಬಾಕ್ಸರ್‌ ಪರ್ವೀನ್‌

Boxer Parveen: ವಿಶ್ವ ಚಾಂಪಿಯನ್‌ಶಿಪ್‌ ಪದಕ ವಿಜೇತ ಪರ್ವೀನ್‌, ಕಳೆದ ವರ್ಷ ಏಷ್ಯನ್‌ ಗೇಮ್ಸ್‌ನಲ್ಲಿ ಕಂಚು ಗೆಲ್ಲುವ ಮೂಲಕ ಒಲಿಂಪಿಕ್ಸ್‌ ಕೋಟಾ ಗಿಟ್ಟಿಸಿಕೊಂಡಿದ್ದರು. ಆದರೆ 12 ತಿಂಗಳಲ್ಲಿ 3 ಬಾರಿ ವಾಡಾ ನಿಯಮ ಉಲ್ಲಂಘಿಸಿದ್ದಕ್ಕೆ ಅವರನ್ನು ಅಮಾನತುಗೊಳಿಸಲಾಗಿದೆ.

VISTARANEWS.COM


on

Boxer Parveen
Koo

ನವದೆಹಲಿ: ಭಾರತದ ಬಾಕ್ಸರ್‌ ಪರ್ವೀನ್‌(Boxer Parveen) ಹೂಡಾ ಅವರು 3 ಬಾರಿ ನಿಯಮ ಉಲ್ಲಂಘನೆ ಮಾಡಿದ ತಪ್ಪಿಗಾಗಿ ಇದೀಗ 22 ತಿಂಗಳುಗಳ ಕಾಲ ಅಮಾನತು(Parveen suspended) ಶಿಕ್ಷೆಗೆ ಗುರಿಯಾಗಿದ್ದಾರೆ. ವಿಶ್ವ ಉದ್ದೀಪನ ಮದ್ದು ಸೇವನೆ ನಿಗ್ರಹ ಘಟಕ (ವಾಡಾ) ಅವರಿಗೆ ಈ ಶಿಕ್ಷೆ ವಿಧಿಸಿದೆ. ಇದರೊಂದಿಗೆ ಪರ್ವೀನ್‌ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸುವ ಅವಕಾಶ ಕಳೆದುಕೊಂಡಿದ್ದಾರೆ. 57 ಕೆ.ಜಿ. ವಿಭಾಗದಲ್ಲಿ ಅವರು ಒಲಿಂಪಿಕ್ಸ್(Paris Olympics 2024) ಕೋಟಾ ಪಡೆದುಕೊಂಡಿದ್ದರು.

ವಿಶ್ವ ಚಾಂಪಿಯನ್‌ಶಿಪ್‌ ಪದಕ ವಿಜೇತ ಪರ್ವೀನ್‌, ಕಳೆದ ವರ್ಷ ಏಷ್ಯನ್‌ ಗೇಮ್ಸ್‌ನಲ್ಲಿ ಕಂಚು ಗೆಲ್ಲುವ ಮೂಲಕ ಒಲಿಂಪಿಕ್ಸ್‌ ಕೋಟಾ ಗಿಟ್ಟಿಸಿಕೊಂಡಿದ್ದರು. ಆದರೆ 12 ತಿಂಗಳಲ್ಲಿ 3 ಬಾರಿ ವಾಡಾ ನಿಯಮ ಉಲ್ಲಂಘಿಸಿದ್ದಕ್ಕೆ ಅವರನ್ನು ಅಮಾನತುಗೊಳಿಸಲಾಗಿದೆ. ಅಮಾನತು ಅವಧಿ ಈಗಾಗಲೇ 8 ತಿಂಗಳು ಆಗಿರುವುದರಿಂದ ಇನ್ನು 14 ತಿಂಗಳ ಅಮಾನತು ಅವಧಿಯನ್ನು ಪರ್ವೀನ್‌ ಪೂರ್ಣಗೊಳಿಸಬೇಕಿದೆ.

ಇನ್ನು ಮುಂದೆ ಡೋಪ್‌ ಪರೀಕ್ಷೆಯಲ್ಲಿ ಅಥ್ಲೀಟ್‌ ವಿಫಲವಾದರೆ ಅವರ ಕೋಚ್‌ಗೂ ಶಿಕ್ಷೆ ವಿಧಿಸಲು ಭಾರತೀಯ ಅಥ್ಲೆಟಿಕ್ಸ್‌ ಫೆಡರೇಶನ್‌(ಎಎಫ್‌ಐ) ಹೊಸ ಕ್ರಮ ಕೈಗೊಂಡಿದೆ. ಇದಕ್ಕೆ ಕಾರಣ ಇತ್ತೀಚೆಗೆ ಉದ್ದೀಪನ ಮದ್ದು ಸೇವನೆ ಮಾಡಿ ಅಥ್ಲೀಟ್‌ಗಳು ಸಿಕ್ಕಿ ಬೀಳುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು.

ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡಲು ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ತೀರ್ಮಾನಿಸಿದೆ. 2028ರಲ್ಲಿ ಲಾಸ್‌ ಏಂಜಲಿಸ್​ನಲ್ಲಿ ನಡೆಯುವ ಒಲಿಂಪಿಕ್ ಕೂಟದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಎಲ್ಲರಿಗೂ ನಗದು ಪ್ರಶಸ್ತಿ ನೀಡುವುದಾಗಿಯೂ ಸಂಸ್ಥೆ ಘೋಷಿಸಿದೆ. ಇದೇ ಮೊದಲ ಬಾರಿಗೆ ಒಲಿಂಪಿಕ್ ಕೂಟದಲ್ಲಿ ನಗದು ಪ್ರಶಸ್ತಿ ನೀಡಲಾಗುತ್ತಿದೆ.

ಇದನ್ನೂ ಓದಿ Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

ಟೋಕಿಯೊ ಒಲಿಂಪಿಕ್ ಕೂಟದ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್​ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್‌ ಡಾಲರ್‌ ಬಹುಮಾನ ದೊರೆಯಲಿದೆ. ನೀರಜ್​ ಅವರು ಟ್ರ್ಯಾಕ್‌ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಪ್ಯಾರಿಸ್‌ನಲ್ಲಿಯೂ ಅವರ ಮೇಲೆ ಚಿನ್ನದ ನಿರೀಕ್ಷೆ ಮಾಡಲಾಗಿದೆ.

ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

Continue Reading

ಕ್ರೀಡೆ

RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

RCB FANS BIKE RALLY: ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ.

VISTARANEWS.COM


on

RCB FANS BIKE RALLY
Koo

ಬೆಂಗಳೂರು: ಐಪಿಎಲ್​ನ(IPL 20124) ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಚೆನ್ನೈ ಸೂಪರ್(Chennai Super Kings)​ ಕಿಂಗ್ಸ್​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡಗಳು ಇಂದು ನಡೆಯುವ ಪ್ಲೇ ಆಫ್​ ಪ್ರವೇಶದ ಮಹತ್ವದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಪಂದ್ಯಕ್ಕೂ ಮುನ್ನವೇ ಆರ್​ಸಿಬಿ(RCB) ಅಭಿಮಾನಿಗಳು(Craze RCB FANS) ಚಿನ್ನಸ್ವಾಮಿ ಮೈದಾನದ ಬಳಿ ಬೃಹತ್​ ಬೈಕ್​ ರ‍್ಯಾಲಿ(RCB FANS BIKE RALLY) ನಡೆಸಿ ತಮ್ಮ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಪಂದ್ಯಕ್ಕೆ ಮಳೆಯ ಭೀತಿಯೂ ಇದ್ದು ಸಸ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಅಲ್ಲದೆ ರಾತ್ರಿ ಮಳೆಯಾಗುವುದು ಬಹುತೇಕ ಖಚಿತ ಎನ್ನುವಂತಿದೆ. ಒಂದೆಡೆ ಆರ್​ಸಿಬಿ ಅಭಿಮಾನಿಗಳು ಮಳೆ ಬಾರದಂತೆ ಪ್ರಾರ್ಥಿಸುತ್ತಿದ್ದರೆ, ಮತ್ತೊಂದು ಕಡೆ ಚೆನ್ನೈ ಅಭಿಮಾನಿಗಳಿ ಮಳೆ ಬಂದು ಪಂದ್ಯ ರದ್ದಾಗಲಿ ಎಂದು ಪ್ರಾರ್ಥಿಸುತ್ತಿದ್ದರೆ. ಪಂದ್ಯ ರದ್ದಾದರೆ ಚೆನ್ನೈ 4ನೇ ತಂಡವಾಗಿ ಅಧಿಕೃತ ಪ್ಲೇ ಆಫ್​ಗೆ ಎಂಟ್ರಿ ಕೊಡಲಿದೆ. ಒಟ್ಟಾರೆ ಮಳೆ ಯಾರಿಗೆ ಅನುವು ಮಾಡಿಕೊಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಸಬ್‌ ಏರ್‌ ಸಿಸ್ಟಮ್‌


ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

ಇದನ್ನೂ ಓದಿ RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ದಾಖಲೆ


ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್​ ಮತ್ತು ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳು ಜಯಿಸಿದೆ.

ಇತ್ತಂಡಗಳ ಒಟ್ಟು ಐಪಿಎಲ್​ ಮುಖಾಮುಖಿ


ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್​ ಆಗಿದೆ. ಈ ಬಾರಿಯ ಉದ್ಘಾಟನ ಪಂದ್ಯದಲ್ಲಿಯೂ ಚೆನ್ನೈ ಆರ್​ಸಿಬಿಗೆ ಸೋಲುಣಿಸಿತ್ತು.

Continue Reading
Advertisement
Pavitra Jayaram Relationship With Chandu Shilpa Prema statement
ಕಿರುತೆರೆ6 mins ago

Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

Money Guide
ಮನಿ-ಗೈಡ್8 mins ago

Money Guide: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

T20 World Cup 2024
ಕ್ರೀಡೆ12 mins ago

T20 World Cup 2024: ಮೇ 25ಕ್ಕೆ ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್​

Mallikarjun Kharge
Lok Sabha Election 202413 mins ago

Mallikarjun Kharge: ಬುಲ್ಡೋಜರ್‌ ಹೇಳಿಕೆ ನೀಡಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಿ; ಚುನಾವಣಾ ಆಯೋಗಕ್ಕೆ ಖರ್ಗೆ

Woman
ದೇಶ17 mins ago

ಉತ್ತರ ಪ್ರದೇಶದ ಮಹಿಳೆ ಮೇಲೆ ಕರ್ನಾಟಕದ ವ್ಯಕ್ತಿ ಅತ್ಯಾಚಾರ; ಆಕೆಯ ಮತಾಂತರಕ್ಕೂ ಯತ್ನ!

DevarajeGowda mental case Rs 100 crore If offered he should file a complaint with Lokayukta says DK Shivakumar
ಬೆಂಗಳೂರು25 mins ago

DK Shivakumar: ದೇವರಾಜೇಗೌಡ ಮೆಂಟಲ್‌ ಕೇಸ್‌; 100 ಕೋಟಿ ರೂ. ಆಫರ್‌ ಮಾಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದ ಡಿಕೆಶಿ

Aishwarya Rai stopping blue gown at Cannes 2024
ಬಾಲಿವುಡ್45 mins ago

Aishwarya Rai : ಐಶ್ವರ್ಯಾ ರೈ ಸ್ಟೈಲಿಶ್‌ರನ್ನು ವಜಾ ಮಾಡಿ ಎಂದ ನೆಟ್ಟಿಗರು! ಯಾಕಿಷ್ಟು ಆಕ್ರೋಶ?

Maruti Swift
ಪ್ರಮುಖ ಸುದ್ದಿ47 mins ago

Maruti Swift : ಹೊಸ ಮಾರುತಿ ಸ್ವಿಫ್ಟ್​ ಕಾರಿನಲ್ಲಿದೆ 50ಕ್ಕೂ ಹೆಚ್ಚು ಫೀಚರ್​ಗಳು

RCB vs CSK
ಕ್ರೀಡೆ48 mins ago

RCB vs CSK: 11 ವರ್ಷಗಳ ಹಿಂದಿನ ಇತಿಹಾಸ ಮರುಕಳಿಸಿದರೆ ಆರ್​ಸಿಬಿಗೆ ಇಂದು ಗೆಲುವು ಖಚಿತ

Nuclear test at Pokhran
ವಿಜ್ಞಾನ50 mins ago

Nuclear Test In Pokhran: ಭಾರತ ಮೊದಲ ಪರಮಾಣು ಪರೀಕ್ಷೆ ನಡೆಸಿ ಇಂದಿಗೆ 50 ವರ್ಷ; ಏನಿದು ಸ್ಮೈಲಿಂಗ್‌ ಬುದ್ಧ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ20 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌