Vinesh Phogat : ತೂಕ ಇಳಿಸಲು ಹೋಗಿ ಸಾವಿನ ಬಾಗಿಲು ತಟ್ಟಿದ್ದ ವಿನೇಶ್​ ಫೋಗಟ್​; ಭಯಾನಕ ಕ್ಷಣಗಳನ್ನು ವಿವರಿಸಿದ ಕೋಚ್​! - Vistara News

ಕ್ರೀಡೆ

Vinesh Phogat : ತೂಕ ಇಳಿಸಲು ಹೋಗಿ ಸಾವಿನ ಬಾಗಿಲು ತಟ್ಟಿದ್ದ ವಿನೇಶ್​ ಫೋಗಟ್​; ಭಯಾನಕ ಕ್ಷಣಗಳನ್ನು ವಿವರಿಸಿದ ಕೋಚ್​!

Vinesh Phogat : 100 ಗ್ರಾಮ್​​ ತೂಕ ಹೆಚ್ಚಿದ ಕಾರಣ ವಿನೇಶ್ ಫೋಗಟ್ ಅವರನ್ನು 50 ಕೆ.ಜಿ ಫೈನಲ್​ನಿಂದ ಅನರ್ಹಗೊಂಡ ಬಳಿಕ ಹಂಗೇರಿಯಾದ ಕೋಚ್ ಕೂಟ ಟೀಕೆಗಳನ್ನು ಎದುರಿಸಿದ್ದಾರೆ. ತೂಕ ಮತ್ತಿತರ ವಿಷಯ ಸ್ಪರ್ಧಿ ಮತ್ತು ಕೋಚ್​ಗೆ ಸಂಬಂಧಿಸಿದ್ದು ಎಂಬುದು ಟೀಕಾಕಾರರ ವಾದವಾಗಿದೆ. ಅದಕ್ಕೆ ಉತ್ತರ ನೀಡಿರುವ ಅವರು, ಮ್ಯಾಟ್​ಗೆ ಹತ್ತುವ ಮೊದಲು ವಿನೇಶ್​ ತಮಗೆ ಸಾಧ್ಯವಿರುವ ಎಲ್ಲವನ್ನೂ ಮಾಡಿದ್ದಾರೆ ಎಂಬುದನ್ನು ವಿವರಿಸಿದ್ದಾರೆ. ಎಲ್ಲಿತನಕ ಎಂದರೆ ತೂಕ ಇಳಿಸಲು ಹೋಗಿ ಸಾಯುವ ಹಂತಕ್ಕೆ ಹೋಗಿದ್ದರು ಎಂಬುದನ್ನು ಹೇಳಿದ್ದಾರೆ.

VISTARANEWS.COM


on

Vinesh Phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರ ಪ್ಯಾರಿಸ್ ಒಲಿಂಪಿಕ್ಸ್​ ಕನಸು ನುಚ್ಚು ನೂರಾಗಿದೆ. ಅವರು ಸಲ್ಲಿಸಿದ್ದ ಮೇಲ್ಮನವಿಯೂ ತಿರಸ್ಕಾರಗೊಂಡಿದೆ. ಮಹಿಳೆಯರ 50 ಕೆ.ಜಿ ವಿಭಾಗದಲ್ಲಿ ಫೈನಲ್ ತಲುಪಿದ್ದ ಅವರು ಕೇವಲ 100 ಗ್ರಾಮ್ ಹೆಚ್ಚುವರಿ ತೂಕ ಹೊಂದಿದ್ದ ಕಾರಣ ಬೆಳ್ಳಿ ಪದಕವನ್ನೂ ಪಡೆಯದೇ ಅನರ್ಹತೆಗೆ ಒಳಗಾಗಿದ್ದರು. ಅವರ ಪಾಲಿಗೆ ವೃತ್ತಿ ಕುಸ್ತಿಯ ಅತ್ಯಂತ ಕಠಿಣ ದಿನಗಳು ಎಂಬುದರಲ್ಲಿ ಎರಡು ಮಾತಿಲ್ಲ. ಇಷ್ಟೆಲ್ಲ ಮುಗಿಯುವ ವೇಳೆ ಅವರ ತರಬೇತುದಾರ ವೊಲ್ರ್ ಅಕೋಸ್ ಭಯಾನಕ ಸತ್ಯವೊಂದನ್ನು ಬಿಚ್ಚಿಟ್ಟಿದ್ದಾರೆ. ಫೈನಲ್​ ಮೊದಲು ತೂಕ ಇಳಿಸಲು ಮುಂದಾದ ಅವರು ಸಾವಿನ ಮನೆಯ ಕದ ತಟ್ಟಿ ಬಂದಿದ್ದರು ಎಂಬುದನ್ನು ಬೇಸರದಿಂದ ಹೇಳಿಕೊಂಡಿದ್ದಾರೆ.

100 ಗ್ರಾಮ್​​ ತೂಕ ಹೆಚ್ಚಿದ ಕಾರಣ ವಿನೇಶ್ ಫೋಗಟ್ ಅವರನ್ನು 50 ಕೆ.ಜಿ ಫೈನಲ್​ನಿಂದ ಅನರ್ಹಗೊಂಡ ಬಳಿಕ ಹಂಗೇರಿಯಾದ ಕೋಚ್ ಕೂಟ ಟೀಕೆಗಳನ್ನು ಎದುರಿಸಿದ್ದಾರೆ. ತೂಕ ಮತ್ತಿತರ ವಿಷಯ ಸ್ಪರ್ಧಿ ಮತ್ತು ಕೋಚ್​ಗೆ ಸಂಬಂಧಿಸಿದ್ದು ಎಂಬುದು ಟೀಕಾಕಾರರ ವಾದವಾಗಿದೆ. ಅದಕ್ಕೆ ಉತ್ತರ ನೀಡಿರುವ ಅವರು, ಮ್ಯಾಟ್​ಗೆ ಹತ್ತುವ ಮೊದಲು ವಿನೇಶ್​ ತಮಗೆ ಸಾಧ್ಯವಿರುವ ಎಲ್ಲವನ್ನೂ ಮಾಡಿದ್ದಾರೆ ಎಂಬುದನ್ನು ವಿವರಿಸಿದ್ದಾರೆ. ಎಲ್ಲಿತನಕ ಎಂದರೆ ತೂಕ ಇಳಿಸಲು ಹೋಗಿ ಸಾಯುವ ಹಂತಕ್ಕೆ ಹೋಗಿದ್ದರು ಎಂಬುದನ್ನು ಹೇಳಿದ್ದಾರೆ.

ಹಂಗರಿ ಭಾಷೆಯಲ್ಲಿ ಪೋಸ್ಟ್ ಬರೆದ ಅಕೋಸ್​

ಹಂಗೇರಿಯನ್ ಭಾಷೆಯಲ್ಲಿ ಫೇಸ್ಬುಕ್ ಪೋಸ್ಟ್​​ನಲ್ಲಿ ಅಕೋಸ್ ತನ್ನ ಮೊದಲ ಒಲಿಂಪಿಕ್ ಪದಕವನ್ನು ಪಡೆಯುವ ವಿನೇಶ್ ಫೋಗಟ್ ಅವರ ಬದ್ಧತೆಯನ್ನು ಎತ್ತಿ ತೋರಿಸಿದರು. ಸೆಮಿಫೈನಲ್ ಬಳಿಕ 2.7 ಕೆಜಿ ಹೆಚ್ಚುವರಿ ತೂಕ ಉಳಿದಿತ್ತು. ಒಂದು ಗಂಟೆ ಇಪ್ಪತ್ತು ನಿಮಿಷಗಳ ಕಾಲ ವ್ಯಾಯಾಮ ಮಾಡಿಸಿದೆ. ಆದರೆ 1.5 ಕೆ.ಜಿ ಇನ್ನೂ ಉಳಿದಿತ್ತು. , 50 ನಿಮಿಷಗಳ ದೇಹ ದಂಡನೆ ಬಳಿಕ ಆಕೆಯ ದೇಹ ಸಂಪೂರ್ಣವಾಗಿ ನೀರಿನಂಶ ಕೊರತೆಯಿಂದ ಸೊರಗಿತು. ಮಧ್ಯರಾತ್ರಿಯಿಂದ ಬೆಳಿಗ್ಗೆ 5:30 ರವರೆಗೆ, ಅವರು ವಿವಿಧ ಕಾರ್ಡಿಯೋ ಯಂತ್ರಗಳು ಮತ್ತು ಕುಸ್ತಿ ಚಲನೆಗಳಲ್ಲಿ ಕೆಲಸ ಮಾಡಿದರು. ಒಂದೇ ಬಾರಿಗೆ ಸುಮಾರು ಮುಕ್ಕಾಲು ಗಂಟೆಗಳ ಕಾಲ ಶ್ರಮವಹಿಸಿದು. ಎರಡು-ಮೂರು ನಿಮಿಷಗಳ ವಿಶ್ರಾಂತಿಯೊಂದಿಗೆ ನಂತರ ಅವಳು ತೂಕ ಇಳಿಸಲು ಯತ್ನಿಸಿದರು. ಒಂದು ಹಂತದಲ್ಲಿ ಕುಸಿದುಬಿದ್ದರು. ಹೇಗೋ ನಾವು ಆಕೆಯನ್ನು ಎಬ್ಬಿಸಿದೆವು. ಆ ಬಳಿಕ ಏನು ಮಾಡಲು ಸಾಧ್ಯವಾಗಲಿಲ್ಲ. ಯಾಕೆಂದರೆ ನನ್ನ ಹೇಳಿಕೆಗಳು ನಾಟಕೀಯವಲ್ಲ. ಮುಂದೇನಾದರೂ ತೂಕ ಇಳಿಸಲು ಯತ್ನಿಸಿದ್ದರೆ ಆಕೆ ಸತ್ತು ಹೋಗುತ್ತಿದ್ದಳು ಎಂದು ಕೋಚ್ ಬರೆದಿದ್ದಾರೆ.

ಇದನ್ನೂ ಓದಿ: Jasprit Bumrah : ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಪಂದ್ಯಕ್ಕೂ ಜಸ್​ಪ್ರಿತ್​ ಬುಮ್ರಾ ಅಲಭ್ಯ?

ಅನರ್ಹಗೊಂಡ ನಂತರ ವಿನೇಶ್ ಫೋಗಟ್ ಕಣ್ಣೀರು ಹಾಕುತ್ತಿದ್ದರೂ ಧೈರ್ಯ ಕಳೆದುಕೊಂಡಿರಲಿಲ್ಲ ಎಂದು ಕೋಚ್ ಹೇಳಿದ್ದಾರೆ. ವಿನೇಶ್ ಫೋಗಟ್ ನಡೆಸಿದ ಮಾತುಕತೆಯನ್ನು ಕೋಚ್​ ಬರೆದುಕೊಂಡಿದ್ದಾರೆ. ಕೋಚ್, ದುಃಖಪಡಬೇಡಿ ಏಕೆಂದರೆ ನಾನು ಕಠಿಣ ಪರಿಸ್ಥಿತಿಯಲ್ಲಿ ಇದ್ದರೂ ಹೆಚ್ಚುವರಿ ಶಕ್ತಿ ತುಂಬಿಕೊಳ್ಳುತ್ತೇನೆ. ನಾನು ವಿಶ್ವದ ಅತ್ಯುತ್ತಮ ಮಹಿಳಾ ಕುಸ್ತಿಪಟುವನ್ನು (ಜಪಾನ್ನ ಯುಯಿ ಸುಸಾಕಿ) ಸೋಲಿಸಿದ್ದೇನೆ. ನಾನು ನನ್ನ ಗುರಿಯನ್ನು ಸಾಧಿಸಿದೆ. ನಾನು ವಿಶ್ವದ ಅತ್ಯುತ್ತಮರಲ್ಲಿ ಒಬ್ಬಳೆಂದು ಸಾಬೀತುಪಡಿಸಿದ್ದೇನೆ. ಆಟದ ಯೋಜನೆಗಳು ಕೆಲಸ ಮಾಡುತ್ತವೆ ಎಂದು ನಾವು ಸಾಬೀತುಪಡಿಸಿದ್ದೇವೆ. ಪದಕಗಳು, ವೇದಿಕೆಗಳು ಕೇವಲ ವಸ್ತುಗಳು. ಪ್ರದರ್ಶನವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದು ವಿನೇಶ್​ ಹೇಳಿದ್ದನ್ನು ಅಕೋಸ್ ಅಕ್ಷರ ರೂಪಕ್ಕೆ ಇಳಿಸಿದ್ದಾರೆ.

ಒಲಿಂಪಿಕ್ ಪದಕಕ್ಕೆ ವಿನೇಶ್ ಫೋಗಟ್ ಎಷ್ಟು ಬೆಲೆ ನೀಡುತ್ತಾರೆ ಎಂಬುದನ್ನು ಅವರು ಇದೇ ವೇಳೆ ಬರೆದುಕೊಂಡಿದ್ದಾರೆ. ಕಳೆದ ವರ್ಷ ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲಿಕ್ ಅವರೊಂದಿಗೆ ಹರಿದ್ವಾರದಲ್ಲಿ ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡಲು ಮುಂದಾಗಿದ್ದನ್ನು ಅವರು ಸ್ಮರಿಸಿಕೊಂಡಿದ್ದಾರೆ. ಒಲಿಂಪಿಕ್ ಪದಕಗಳನ್ನು ನದಿಗೆ ಎಸೆಯಬೇಡಿ ಎಂದು ಸಾಕ್ಷಿ ಮತ್ತು ಬಜರಂಗ್ ಗೆ ವಿನೇಶ್​ ತಿಳೀ ಹೇಳಿದ್ದನ್ನೂ ಅವರು ಬರೆದಿದ್ದಾರೆ.

ವಿನೇಶ್ ಫೋಗಟ್ ಅವರ ಅನರ್ಹತೆಯ ಹೊರತಾಗಿಯೂ, ಅವರ ಪಂದ್ಯಗಳ ಮೊದಲ ದಿನದಂದು ಅವರು ಏನು ಸಾಧಿಸಿದರು ಎಂಬುದನ್ನು ಜಗತ್ತು ನೆನಪಿಸಿಕೊಳ್ಳುತ್ತದೆ ಕೋಚ್ ಬರೆದಿದ್ದಾರೆ. ನಮ್ಮ ಕೆಲಸದಿಂದಾಗಿ ವಿಶ್ವದ ಅತ್ಯುತ್ತಮ ಮಹಿಳಾ ಕುಸ್ತಿಪಟುವನ್ನು ಸೋಲಿಸಲು ಮತ್ತು ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ಮಹಿಳಾ ಕುಸ್ತಿಪಟುವನ್ನು ಒಲಿಂಪಿಕ್ ಫೈನಲ್ಸ್​​ಗೆ ಕರೆದೊಯ್ಯಲು ಸಾಧ್ಯವಾಗಿದೆ ಎಂದು ಅಕೋಸ್ ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Vinesh Phogat : ವಿನೇಶ್​ ಫೈನಲ್ ತಲುಪಿದ್ದೇ ಹೆಮ್ಮೆಯ ವಿಷಯ; ಫೋಗಟ್ ಸಾಧನೆಯನ್ನು ಕೊಂಡಾಡಿದ ಮೋದಿ

Vinesh Phogat: ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದ ಸ್ಪರ್ಧೆಯಿಂದ ವಿನೇಶ್ ಅನರ್ಹಗೊಂಡಿದ್ದರು. ಅವರು ಮಿತಿಗಿಂತ 100 ಗ್ರಾಂ ಹೆಚ್ಚುವರಿ ತೂಕ ಹೊಂದಿದ್ದಕ್ಕೆ ಅನರ್ಹಗೊಳಿಸಲಾಯಿತು. ಗ್ರ್ಯಾಂಡ್ ಸ್ಪೋರ್ಟ್ಸ್ ಅಖಾಡದಲ್ಲಿ ಆದ ನೋವಿನಿಂದಾಗಿ ಅವರು ಕುಸ್ತಿಯಿಂದ ನಿವೃತ್ತರಾಗುವ ನಿರ್ಧಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದರು.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಸ್ಪರ್ಧಿಸಿದ್ದ ಭಾರತೀಯ ಕ್ರೀಡಾಪಟುಗಳು ಮತ್ತು ಪದಕ ವಿಜೇತರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ತಮ್ಮ ನಿವಾಸದಲ್ಲಿ ಸತ್ಕರಿಸಿದ್ದಾರೆ. ಈ ವೇಳೆ ವಿನೇಶ್ ಅವರ ಸಾಧನೆಯನ್ನು ಉಲ್ಲೇಖಿಸಿದ್ದಾರೆ. ಒಲಿಂಪಿಕ್ಸ್​ ಕುಸ್ತಿಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ (ಮಹಿಳೆ) ಎಂಬ ಹೆಗ್ಗಳಿಕೆಗೆ ವಿನೇಶ್ ಪಾತ್ರರಾಗಿದ್ದನ್ನು ಅವರು ಕೊಂಡಾಡಿದ್ದಾರೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಹೇಳಿದರು.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದ ಸ್ಪರ್ಧೆಯಿಂದ ವಿನೇಶ್ ಅನರ್ಹಗೊಂಡಿದ್ದರು. ಅವರು ಮಿತಿಗಿಂತ 100 ಗ್ರಾಂ ಹೆಚ್ಚುವರಿ ತೂಕ ಹೊಂದಿದ್ದಕ್ಕೆ ಅನರ್ಹಗೊಳಿಸಲಾಯಿತು. ಗ್ರ್ಯಾಂಡ್ ಸ್ಪೋರ್ಟ್ಸ್ ಅಖಾಡದಲ್ಲಿ ಆದ ನೋವಿನಿಂದಾಗಿ ಅವರು ಕುಸ್ತಿಯಿಂದ ನಿವೃತ್ತರಾಗುವ ನಿರ್ಧಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದರು.

ಹರಿಯಾಣದ ಕುಸ್ತಿಪಟು ಮೂರು ಕಾಮನ್ವೆಲ್ತ್ ಗೇಮ್ಸ್ ಚಿನ್ನ, ಎರಡು ವಿಶ್ವ ಚಾಂಪಿಯನ್ಶಿಪ್ ಕಂಚಿನ ಪದಕ ಮತ್ತು ಒಂದು ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದಿದ್ದಾರೆ. ಅವರು 2021ರಲ್ಲಿ ಏಷ್ಯನ್ ಚಾಂಪಿಯನ್ ಕಿರೀಟವನ್ನು ಪಡೆದವರು. ಅವರು ಒಲಿಂಪಿಕ್ ಅನರ್ಹತೆಯ ವಿರುದ್ಧ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ (ಸಿಎಎಸ್) ಗೆ ಮೇಲ್ಮನವಿ ಸಲ್ಲಿಸಿದರು. 50 ಕೆಜಿ ವಿಭಾಗದಲ್ಲಿ ಜಂಟಿ ಬೆಳ್ಳಿ ಪದಕವನ್ನು ಒತ್ತಾಯಿಸಿದರು. ಸಿಎಎಸ್​​ನ ತಾತ್ಕಾಲಿಕ ವಿಭಾಗವು ಅನರ್ಹತೆಯ ವಿರುದ್ಧ ವಿನೇಶ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು. ಇದು ಅವರ ಚೊಚ್ಚಲ ಒಲಿಂಪಿಕ್ ಪದಕವನ್ನು ಗೆಲ್ಲುವ ಕನಸನ್ನು ಭಗ್ನಗೊಳಿಸಿತು.

ಇದನ್ನು ಓದಿ: Vinesh Phogat : ತೂಕ ಇಳಿಸಲು ಹೋಗಿ ಸಾವಿನ ಬಾಗಿಲು ತಟ್ಟಿದ್ದ ವಿನೇಶ್​ ಫೋಗಟ್​; ಭಯಾನಕ ಕ್ಷಣಗಳನ್ನು ವಿವರಿಸಿದ ಕೋಚ್​!

ಪ್ಯಾರಿಸ್ ಕ್ರೀಡಾಕೂಟದಲ್ಲಿ ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್​​, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ನೌಕಾಯಾನ, ಶೂಟಿಂಗ್, ಈಜು, ಕುಸ್ತಿ, ಟೇಬಲ್ ಟೆನಿಸ್ ಮತ್ತು ಟೆನಿಸ್ ಸೇರಿದಂತೆ 16 ಕ್ರೀಡೆಗಳಲ್ಲಿ ಒಟ್ಟು 117 ಭಾರತೀಯ ಕ್ರೀಡಾಪಟುಗಳು ಭಾಗವಹಿಸಿದ್ದರು.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಭಾರತ ಆರು ಪದಕಗಳನ್ನು ಗೆದ್ದಿದೆ. ಒಂದು ಬೆಳ್ಳಿ ಮತ್ತು ಐದು ಕಂಚು. ಪ್ರದರ್ಶನದ ನಿರೀಕ್ಷೆಗಳು ಹೆಚ್ಚಿದ್ದರೂ, 2021 ರಲ್ಲಿ ಟೋಕಿಯೊ ಒಲಿಂಪಿಕ್ಸ್​ನಲ್ಲಿ ದೇಶವು ಏಳು ಪದಕಗಳನ್ನು (1 ಚಿನ್ನ, 2 ಬೆಳ್ಳಿ ಮತ್ತು 4 ಕಂಚು) ಗಳಿಸಿ 48 ನೇ ಸ್ಥಾನದಲ್ಲಿತ್ತು.

Continue Reading

ಪ್ರಮುಖ ಸುದ್ದಿ

Jasprit Bumrah : ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಪಂದ್ಯಕ್ಕೂ ಜಸ್​ಪ್ರಿತ್​ ಬುಮ್ರಾ ಅಲಭ್ಯ?

Jasprit Bumrah : ಭಾರತೀಯ ಕ್ರಿಕೆಟ್ ತಂಡವು ಪ್ರಸ್ತುತ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆ ಅಪರೂಪದ ವಿರಾಮದಲ್ಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವಿಚಂದ್ರನ್ ಅಶ್ವಿನ್ ಮತ್ತು ಬುಮ್ರಾ ಸೇರಿದಂತೆ ಅನೇಕ ನಿಯಮಿತ ಆಟಗಾರರು ದುಲೀಪ್ ಟ್ರೋಫಿ 2024 ರಲ್ಲಿ ಭಾಗವಹಿಸಲಿದ್ದಾರೆ. ಅವರ ಮುಂದಿನ ನಿಯೋಜನೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಾಗಿದೆ.

VISTARANEWS.COM


on

Jasprit Bumrah
Koo

ನವದೆಹಲಿ: ಮುಂದಿನ ತಿಂಗಳು ತವರು ನೆಲದಲ್ಲಿ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾಗೆ (Jasprit Bumrah) ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಅಜಿತ್ ಅಗರ್ಕರ್ ನೇತೃತ್ವದ ಹಿರಿಯ ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಈ ವರ್ಷದ ಕೊನೆಯಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆ ಫಿಟ್ ಆಗಿರಬೇಕು ಮತ್ತು ಲಭ್ಯವಿರಬೇಕು ಎಂದು ಬಯಸಿದೆ. ಹೀಗಾಗಿ ಅವರಿಗೆ ಬಾಂಗ್ಲಾ ವಿರುದ್ಧದ ಸರಣಿಯಿಂದ ವಿಶ್ರಾಂತಿ ನೀಡುವ ಸಾಧ್ಯತೆಗಳಿವೆ.

ಭಾರತೀಯ ಕ್ರಿಕೆಟ್ ತಂಡವು ಪ್ರಸ್ತುತ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆ ಅಪರೂಪದ ವಿರಾಮದಲ್ಲಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವಿಚಂದ್ರನ್ ಅಶ್ವಿನ್ ಮತ್ತು ಬುಮ್ರಾ ಸೇರಿದಂತೆ ಅನೇಕ ನಿಯಮಿತ ಆಟಗಾರರು ದುಲೀಪ್ ಟ್ರೋಫಿ 2024 ರಲ್ಲಿ ಭಾಗವಹಿಸಲಿದ್ದಾರೆ. ಅವರ ಮುಂದಿನ ನಿಯೋಜನೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಾಗಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಸೆಪ್ಟೆಂಬರ್ 19 ರಿಂದ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಸೆಪ್ಟೆಂಬರ್ 27 ರಿಂದ ಕಾನ್ಪುರದ ಗ್ರೀನ್ ಪಾರ್ಕ್​​ನಲ್ಲಿ ಎರಡನೇ ಟೆಸ್ಟ್​​ ನಡೆಲಿದೆ. ಈ ಟೆಸ್ಟ್ ಸರಣಿಯು ಮುಂಬರುವ ಡಬ್ಲ್ಯುಟಿಸಿ 2023-25 ಚಕ್ರದ ಭಾಗವಾಗಿದೆ.

ಜಸ್ಪ್ರೀತ್ ಬುಮ್ರಾಗೆ ತಮ್ಮ ದೇಹದ ಬಗ್ಗೆ ಚೆನ್ನಾಗಿ ತಿಳಿದಿದೆ

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಜಸ್ಪ್ರೀತ್ ಬುಮ್ರಾ ಮರಳಬಹುದು ಎಂಬ ಊಹಾಪೋಹಗಳು ಇದ್ದವು. ಆದಾಗ್ಯೂ, ತಂಡದ ಮ್ಯಾನೇಜ್ಮೆಂಟ್ ಮತ್ತು ಆಯ್ಕೆದಾರರು ಅವರು ಆಸ್ಟ್ರೇಲಿಯಾ ಪ್ರವಾಸಕ್ಕೆ ಸಂಪೂರ್ಣವಾಗಿ ಫಿಟ್ ಆಗಿರಬೇಕು ಎಂದು ಬಯಸುತ್ತಾರೆ. ಪಿಟಿಐ ವರದಿಯ ಪ್ರಕಾರ, ಬುಮ್ರಾ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಜಸ್ಪ್ರೀತ್ ಬುಮ್ರಾ ಅವರು ಬಾಂಗ್ಲಾದೇಶ ಟೆಸ್ಟ್​​ನಲ್ಲಿ ಆಡಲು ಬಯಸುತ್ತಾರೆಯೇ ಎಂದು ನಿರ್ಧರಿಸುತ್ತಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಗೆ ತಯಾರಿ ನಡೆಸಲು ಬುಮ್ರಾ ತವರಿನಲ್ಲಿ ನ್ಯೂಜಿಲೆಂಡ್ ಸರಣಿಯಲ್ಲಿ ಆಡುವ ನಿರೀಕ್ಷೆಯಿದೆ.

ಬುಮ್ರಾ ಅವರು ತಮ್ಮ ದೇಹದ ಬಗ್ಗೆ ಚೆನ್ನಾಗಿ ತಿಳಿದಿದ್ದಾರೆ. ಅವರು ಬಾಂಗ್ಲಾದೇಶ ವಿರುದ್ಧದ ಟೆಸ್ಟ್​​ನಲ್ಲಿ ಆಡಲು ಬಯಸುತ್ತಾರೆಯೇ ಎಂಬುದು ಅವರಿಗೆ ಬಿಟ್ಟದ್ದು. ಆಸ್ಟ್ರೇಲಿಯಾ ವಿರುದ್ಧದ ಎಲ್ಲಾ ಐದು ಟೆಸ್ಟ್ ಪಂದ್ಯಗಳಿಗೆ ಭಾರತಕ್ಕೆ ಶೇಕಡಾ 120ರಷ್ಟು ಫಿಟ್ ಆಗಿರುವ ಜಸ್ಪ್ರೀತ್ ಬುಮ್ರಾ ಅಗತ್ಯವಿದೆ ಎಂದು ಟೀಮ್ ಮ್ಯಾನೇಜ್ಮೆಂಟ್ ಮತ್ತು ಆಯ್ಕೆದಾರರು ಸ್ಪಷ್ಟಪಡಿಸಿದ್ದಾರೆ. ಅದಕ್ಕೂ ಮೊದಲು, ಭಾರತದಲ್ಲಿ ನ್ಯೂಜಿಲೆಂಡ್ ನಲ್ಲಿ ಸರಣಿ ಇದೆ. ಅಲ್ಲಿ ಅವರು ಬಹುಶಃ ಆಡುತ್ತಾರೆ. ಕಠಿಣ ಪರೀಕ್ಷೆಗಳಿಗೆ ಸಿದ್ಧರಾಗುತ್ತಾರೆ,” ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.

2024ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ಜಸ್ಪ್ರೀತ್ ಬುಮ್ರಾ ವಿಶ್ರಾಂತಿಯಲ್ಲಿದ್ದಾರೆ. ಅವರ ಪ್ರದರ್ಶನಕ್ಕಾಗಿ ಅವರು ಪಂದ್ಯಾವಳಿಯ ಉತ್ತಮ ಆಟಗಾರ ಪ್ರಶಸ್ತಿ ಪಡೆದಿದ್ದಾರೆ. . ಬಲಗೈ ವೇಗಿ ಎಂಟು ಪಂದ್ಯಗಳಲ್ಲಿ 4.17 ಎಕಾನಮಿ ರೇಟ್ನಲ್ಲಿ 15 ವಿಕೆಟ್​​ ಪಡೆದಿದ್ದಾರೆ. ಬುಮ್ರಾ ಜಿಂಬಾಬ್ವೆಯಲ್ಲಿ ನಡೆದ ಟಿ 20 ಐ ಸರಣಿ ಮತ್ತು ಶ್ರೀಲಂಕಾದಲ್ಲಿ ನಡೆದ ವೈಟ್-ಬಾಲ್ ಸರಣಿಯಿಂದ ಹೊರಗುಳಿದಿದ್ದರು.

ಇದನ್ನೂ ಓದಿ: PR Sreejesh : ಕುಟುಂಬ ಸಮೇತ ಪ್ರಧಾನಿ ಮೋದಿಯನ್ನು ಭೇಟಿಯಾದ ಒಲಿಂಪಿಯನ್​ ಪಿ.ಆರ್ ಶ್ರೀಜೇಶ್​​

ಈ ವರ್ಷದ ಆರಂಭದಲ್ಲಿ ತವರಿನಲ್ಲಿ ನಡೆದ ಐದು ಪಂದ್ಯಗಳ ಸರಣಿಯಲ್ಲಿ ಬುಮ್ರಾ ಕೊನೆಯ ಬಾರಿಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಿದ್ದರು. 30 ವರ್ಷದ ಕ್ರಿಕೆಟಿಗ ಇಂಗ್ಲೆಂಡ್ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ 16.89 ಸರಾಸರಿ ಮತ್ತು 32.79 ಸ್ಟ್ರೈಕ್ ರೇಟ್​​ನಲ್ಲಿ 19 ವಿಕೆಟ್​ ಪಡೆದಿದ್ದಾರೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಭಾರತ 4-1 ಅಂತರದಿಂದ ಭಾರತ ಗೆದ್ದುಕೊಂಡಿದೆ.

ಬುಮ್ರಾ ಬಾಂಗ್ಲಾದೇಶ ಸರಣಿಯಿಂದ ಬುಮ್ರಾ ಹೊರಗುಳಿದರೆ ಯುವ ಬೌಲರ್​​ಗಳಾದ ಅರ್ಷ್ದೀಪ್ ಸಿಂಗ್ ಮತ್ತು ಖಲೀಲ್ ಅಹ್ಮದ್ ಟೆಸ್ಟ್​​ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. 2024ರ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅರ್ಶ್​ದೀಪ್​ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ಸ್ಪರ್ಧೆಯಲ್ಲಿದ್ದಾರೆ.

Continue Reading

ಪ್ರಮುಖ ಸುದ್ದಿ

PR Sreejesh : ಕುಟುಂಬ ಸಮೇತ ಪ್ರಧಾನಿ ಮೋದಿಯನ್ನು ಭೇಟಿಯಾದ ಒಲಿಂಪಿಯನ್​ ಪಿ.ಆರ್ ಶ್ರೀಜೇಶ್​​

PR Sreejesh : ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಹಾಕಿ ತಂಡದ ಅದ್ಭುತ ಅಭಿಯಾನದಲ್ಲಿ ಶ್ರೀಜೇಶ್ ಮತ್ತೊಮ್ಮೆ ಪ್ರಮುಖ ಪಾತ್ರ ವಹಿಸಿದ್ದರು. ಸ್ಪೇನ್ ತಂಡವನ್ನು 2-1 ಗೋಲುಗಳ ಅಂತರದಿಂದ ಮಣಿಸಿದ ಭಾರತ ಸತತ ಎರಡನೇ ಬಾರಿ ಒಲಿಂಪಿಕ್ಸ್​​ ಕೂಟದಲ್ಲಿ ಕಂಚಿನ ಪದಕ ಗೆದ್ದುಕೊಂಡಿತು. ಆಟಗಾರರ ಸಾಮೂಹಿಕ ಪ್ರಯತ್ನಗಳ ಹಿನ್ನೆಲೆಯಲ್ಲಿ ಭಾರತೀಯ ಹಾಕಿ ತಂಡವು 52 ವರ್ಷಗಳ ನಂತರ ಒಲಿಂಪಿಕ್ಸ್​​ನಲ್ಲಿ ಸತತ ಪದಕಗಳನ್ನು ಗೆದ್ದಿದೆ. ಒಟ್ಟಾರೆ ಒಲಿಂಪಿಕ್ಸ್ ಪಟ್ಟಿಯಲ್ಲಿ 13 ನೇ ಪದಕ ತನ್ನದಾಗಿಸಿಕೊಂಡಿತು.

VISTARANEWS.COM


on

PR Sreejesh
Koo

ಹೊಸದಿಲ್ಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಂಚು ಗೆದ್ದ ಬಳಿಕ ನಿವೃತ್ತಿ ಘೋಷಿಸಿರುವ ಭಾರತ ಹಾಕಿ ತಂಡದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ (PR Sreejesh) ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುಟುಂಬ ಸಮೇತ ಭೇಟಿಯಾದರು. ವಿಶೇಷವೆಂದರೆ, ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಿಎಂ ಮೋದಿ ಅವರು ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಪಾಲ್ಗೊಂಡ ಅಥ್ಲೀಟ್​ಗಳಿಗಾಗಿ ವಿಶೇಷ ಸಭೆ ಆಯೋಜಿಸಿದ್ದರು. ಅದು ಮುಗಿದ ಬಳಿಕ ಶ್ರೀಜೇಶ್​ ಕುಟುಂಬ ಸಮೇತ ಪ್ರಧಾನಿಯವನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ಯಾರಿಸ್​​ನಲ್ಲಿ ಭಾರತದ ಕಂಚಿನ ಪದಕ ವಿಜೇತರಾದ ಮನು ಭಾಕರ್, ಸರಬ್ಜೋತ್ ಸಿಂಗ್, ಸ್ವಪ್ನಿಲ್ ಕುಸಾಳೆ ,ಕುಸ್ತಿಪಟು ಅಮನ್ ಸೆಹ್ರಾವತ್ ಮತ್ತು ಭಾರತೀಯ ಹಾಕಿ ತಂಡವು ಇತರ ಕ್ರೀಡಾಪಟುಗಳು ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದರು. ತಮ್ಮ ಭೇಟಿಯ ಖುಷಿಯನ್ನು ಹಂಚಿಕೊಂಡ ಶ್ರೀಜೇಶ್, ಪ್ರಧಾನಿಯೊಂದಿಗೆ ತಮ್ಮ ಕುಟುಂಬದ ಫೋಟೋಗಳನ್ನು ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ ಮೋದಿ ಅವರು, ಶ್ರೀಜೇಶ್​ ಮಗ ಮತ್ತು ಮಗಳ ತಲೆ ಕೈ ಇಟ್ಟು ಆಶೀರ್ವದಿಸುವುದು ಕಂಡು ಬಂದಿದೆ.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಹಾಕಿ ತಂಡದ ಅದ್ಭುತ ಅಭಿಯಾನದಲ್ಲಿ ಶ್ರೀಜೇಶ್ ಮತ್ತೊಮ್ಮೆ ಪ್ರಮುಖ ಪಾತ್ರ ವಹಿಸಿದ್ದರು. ಸ್ಪೇನ್ ತಂಡವನ್ನು 2-1 ಗೋಲುಗಳ ಅಂತರದಿಂದ ಮಣಿಸಿದ ಭಾರತ ಸತತ ಎರಡನೇ ಬಾರಿ ಒಲಿಂಪಿಕ್ಸ್​​ ಕೂಟದಲ್ಲಿ ಕಂಚಿನ ಪದಕ ಗೆದ್ದುಕೊಂಡಿತು. ಆಟಗಾರರ ಸಾಮೂಹಿಕ ಪ್ರಯತ್ನಗಳ ಹಿನ್ನೆಲೆಯಲ್ಲಿ ಭಾರತೀಯ ಹಾಕಿ ತಂಡವು 52 ವರ್ಷಗಳ ನಂತರ ಒಲಿಂಪಿಕ್ಸ್​​ನಲ್ಲಿ ಸತತ ಪದಕಗಳನ್ನು ಗೆದ್ದಿದೆ. ಒಟ್ಟಾರೆ ಒಲಿಂಪಿಕ್ಸ್ ಪಟ್ಟಿಯಲ್ಲಿ 13 ನೇ ಪದಕ ತನ್ನದಾಗಿಸಿಕೊಂಡಿತು.

ಗಮನ ಸೆಳೆದ ಪಿ.ಆರ್. ಶ್ರೀಜೇಶ್

ಕಂಚು ಗೆದ್ದ ನಂತರ, ಗೋಲ್ ಕೀಪರ್ ಶ್ರೀಜೇಶ್​ ಗೌರವದಿಂದ ತಮ್ಮ ಗೋಲ್ ಕೀಪಿಂಗ್​​ ಗ್ಲವ್ಸ್​ ಸಮೇತ ಗೋಲ್​​ ಪೋಸ್ಟ್​​ಗೆ ನಮಸ್ಕರಿಸುವಾಗ ಅತ್ಯಂತ ಭಾವುಕರಾಗಿ ಕಾಣಿಸಿಕೊಂಡರು. ಟೋಕಿಯೊ ಒಲಿಂಪಿಕ್ಸ್​​ನಲ್ಲಿ ತಮ್ಮ ಪ್ರಸಿದ್ಧ ಸಂಭ್ರಮಾಚರಣೆಯ ಭಂಗಿಯನ್ನು ಅವರು ಪ್ಯಾರಿಸ್​ನಲ್ಲೂ ಮರುಸೃಷ್ಟಿಸಿದರು. ಇಡೀ ತಂಡ ಅವರ ಸಂಭ್ರಮದಲ್ಲಿ ಭಾಗಿಯಾಯಿತು.

18 ವರ್ಷಗಳ ವೃತ್ತಿಜೀವನದಲ್ಲಿ 278 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಶ್ರೀಜೇಶ್​ ವಿದಾಯ ಹೇಳಿರುವುದು ಭಾರತೀಯ ಹಾಕಿ ಅಭಿಮಾನಿಗಳ ಪಾಲಿಗೆ ಬೇಸರದ ವಿಷಯ. ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮನು ಭಾಕರ್ ಅವರೊಂದಿಗೆ ಕೇರಳ ಮೂಲದ ಆಟಗಾರನಿಗೆ ಭಾರತದ ಧ್ವಜಧಾರಿಯಾಗಿದ್ದರು. ಈ ಮೂಲಕ ಅವರಿಗೆ ವಿಶೇಷ ಗೌರವ ನೀಡಲಾಗಿದೆ.

ಇದನ್ನೂ ಓದಿ: Virat Kohli : ವಿರಾಟ್​​ ಮಾಲೀಕತ್ವದ ರೆಸ್ಟೋರೆಂಟ್​ಗೆ ಹೋದ ಡೂಪ್ಲಿಕೇಟ್​ ಕೊಹ್ಲಿ; ಗ್ರಾಹಕರು ಫುಲ್ ಕನ್​​ಫ್ಯೂಸ್​! ಇಲ್ಲಿದೆ ವಿಡಿಯೊ

ಸ್ಟಾರ್ ಶಟ್ಲರ್ ಪಿ.ವಿ.ಸಿಂಧು ಮತ್ತು ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರು ಪ್ರಧಾನಿಯೊಂದಿಗಿನ ಸಭೆಯಲ್ಲಿ ಹಾಜರಿರಲಿಲ್ಲ. ನೀರಜ್ ಅವರು ದೀರ್ಘಕಾಲದ ಸೊಂಟದ ಗಾಯಕ್ಕೆ ವೈದ್ಯಕೀಯ ಸಲಹೆಗಾಗಿ ಜರ್ಮನಿಗೆ ಹಾರಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ಕ್ರೀಡಾಪಟುಗಳ ನಡೆಸಿರುವ ಮಾತುಕತೆಯ ಸಂಪೂರ್ಣ ವಿವರ ಶೀಘ್ರದಲ್ಲೇ ಹೊರಬರುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

Virat Kohli : ವಿರಾಟ್​​ ಮಾಲೀಕತ್ವದ ರೆಸ್ಟೋರೆಂಟ್​ಗೆ ಹೋದ ಡೂಪ್ಲಿಕೇಟ್​ ಕೊಹ್ಲಿ; ಗ್ರಾಹಕರು ಫುಲ್ ಕನ್​​ಫ್ಯೂಸ್​! ಇಲ್ಲಿದೆ ವಿಡಿಯೊ

Virat Kohli : ಕಂಟೆಂಟ್ ಕ್ರಿಯೇಟರ್ ಸಾರ್ಥಕ್ ಸಚ್ದೇವ್ ಇನ್ಸ್ಟಾಗ್ರಾಮ್​​ನಲ್ಲಿ ಈ ವೀಡಿಯೊ ಹಂಚಿಕೊಂಡಿದ್ದಾರೆ. ಕೊಹ್ಲಿಯನ್ನೇ ಹೋಲುವ ಕಾರ್ತಿಕ್ ಶರ್ಮಾ ರೆಸ್ಟೋರೆಂಟ್​ಗೆ ಪ್ರವೇಶಿ ಮೊದಲು ಭದ್ರತಾ ಸಿಬ್ಬಂದಿಯನ್ನು ಗೊಂದಲಗೊಳಿಸುತ್ತಾರೆ,. ಅವರು ಕಾಯ್ದಿರಿಸದೆ ಟೇಬಲ್ ಅನ್ನು ನಿಗದಿಪಡಿಸುತ್ತಾರೆ. (ಈ ರೆಸ್ಟೋರೆಂಟ್​ಗೆ ಹೋಗುವ ಮೊದಲು ಟೇಬಲ್​ ಬುಕ್ ಮಾಡಲೇಬೇಕು) ಕಾರ್ತಿಕ್ ಅವರನ್ನು ಕೊಹ್ಲಿ ಎಂದು ತಪ್ಪಾಗಿ ಭಾವಿಸಿ ಹಲವಾರು ಜನರನ್ನು ವೀಡಿಯೊ ಮಾಡುತ್ತಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಸೆಲೆಬ್ರಿಟಿಗಳ ರೀತಿಯಲ್ಲೇ ಕಾಣುವ ವ್ಯಕ್ತಿಗಳಿಗೆ ಸೋಶಿಯಲ್​ ಮೀಡಿಯಾಗಳಲ್ಲಿ ದೊಡ್ಡ ಮಟ್ಟದ ಫ್ಯಾನ್ ಬೇಸ್ ಇರುತ್ತದೆ. ಅದರಲ್ಲೂ ಕ್ರಿಕೆಟಿಗರಂತೆ ಕಾಣುವ ವ್ಯಕ್ತಿಯಾದರೆ ಮುಗಿಯಿತು. ಅವರಿಗೂ ದೊಡ್ಡ ಪ್ರಮಾಣದಲ್ಲಿ ಅಭಿಮಾನಿ ವರ್ಗ ಇರುತ್ತದೆ. ಅಂತೆಯೇ ವಿರಾಟ್​ ಕೊಹ್ಲಿಯಂತೆ (Virat Kohli) ಕಾಣುವ ವ್ಯಕ್ತಿಯೊಬ್ಬರು ಆಗಾಗ ಸಾರ್ವಜನಿಕರಿಗೆ ಚಮಕ್ ಕೊಡುವುದಿದೆ. ಅವರೇ ಕಾರ್ತಿಕ್ ಶರ್ಮಾ. ಈ ಬಾರಿ ಅವರು ವಿರಾಟ್ ಕೊಹ್ಲಿ ಒಡೆತನ ರೆಸ್ಟೊರೆಂಟ್​ಗೆ ತೆರಳಿ ಅಲ್ಲಿನ ಸಿಬ್ಬಂದಿ ಹಾಗೂ ಗ್ರಾಹಕರಿಗೆ ಅಚ್ಚರಿ ಮೂಡಿಸಿದ್ದಾರೆ. ಕಾರ್ತಿಕ್ ಅವರು ಕ್ರಿಕೆಟಿಗನ ಜನಪ್ರಿಯ ರೆಸ್ಟೋರೆಂಟ್ ಒನ್ 8 ಕಮ್ಯೂನ್​ಗೆ ಭೇಟಿ ನೀಡಿ ಜನರನ್ನು ಗೊಂದಲಕ್ಕೀಡು ಮಾಡಿದ್ದಾರೆ.

ಕಂಟೆಂಟ್ ಕ್ರಿಯೇಟರ್ ಸಾರ್ಥಕ್ ಸಚ್ದೇವ್ ಇನ್ಸ್ಟಾಗ್ರಾಮ್​​ನಲ್ಲಿ ಈ ವೀಡಿಯೊ ಹಂಚಿಕೊಂಡಿದ್ದಾರೆ. ಕೊಹ್ಲಿಯನ್ನೇ ಹೋಲುವ ಕಾರ್ತಿಕ್ ಶರ್ಮಾ ರೆಸ್ಟೋರೆಂಟ್​ಗೆ ಪ್ರವೇಶಿ ಮೊದಲು ಭದ್ರತಾ ಸಿಬ್ಬಂದಿಯನ್ನು ಗೊಂದಲಗೊಳಿಸುತ್ತಾರೆ,. ಅವರು ಕಾಯ್ದಿರಿಸದೆ ಟೇಬಲ್ ಅನ್ನು ನಿಗದಿಪಡಿಸುತ್ತಾರೆ. (ಈ ರೆಸ್ಟೋರೆಂಟ್​ಗೆ ಹೋಗುವ ಮೊದಲು ಟೇಬಲ್​ ಬುಕ್ ಮಾಡಲೇಬೇಕು) ಕಾರ್ತಿಕ್ ಅವರನ್ನು ಕೊಹ್ಲಿ ಎಂದು ತಪ್ಪಾಗಿ ಭಾವಿಸಿ ಹಲವಾರು ಜನರನ್ನು ವೀಡಿಯೊ ಮಾಡುತ್ತಾರೆ. ವೇಟರ್ ಕೊಹ್ಲಿಯ ವಿಶೇಷ ಮೆನುವನ್ನು ಕಾರ್ತಿಕ್​ಗೆ ನೀಡಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಹಂಚಿಕೊಂಡ ಸಾರ್ಥಕ್, “ವಿರಾಜ್ ತೋಹ್ಲಿ” ಎಂದು ಶೀರ್ಷಿಕೆ ನೀಡಿದ್ದಾರೆ.

ವೈರಲ್ ವೀಡಿಯೊ ಮೂರು ದಶಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಉಲ್ಲಾಸಕರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. “ಮೀಶೋದಿಂದ ಖರೀದಿಸಿದ ವಿರಾಟ್ ಕೊಹ್ಲಿ” ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ.

ಇದನ್ನೂ ಓದಿ: Shocking Incident : ಮಹಿಳೆಯನ್ನು ನಗ್ನಗೊಳಿಸಿ ಶಸ್ತ್ರ ಚಿಕಿತ್ಸೆ ನಡೆಸಿದ ವಾರ್ಡ್​ ಬಾಯ್​! ವಿಡಿಯೊ ವೈರಲ್​

ರೆಸ್ಟೋರೆಂಟ್ ಪ್ರವೇಶವನ್ನು ಕಾರ್ತಿಕ್​ಗೆ ನಿಷೇಧಿಸುವುದು ಹೇಗೆ ಎಂದು ಮೂರನೇ ಬಳಕೆದಾರರು ಬರೆದಿದ್ದಾರೆ. “ಯಾರಾದರೂ ಅನುಷ್ಕಾ ಅವರನ್ನು ವೀಡಿಯೊದಲ್ಲಿ ನೋಡಿದ್ದಾರೆಯೇ ಎಂದು ಇನ್ನೊಬ್ಬ ಬಳಕೆದಾರರು ಹೇಳಿದ್ದಾರೆ.

ಕಾರ್ತಿಕ್​​ಗೆ ಇದೆ 7 ಲಕ್ಷ ಫಾಲೋಯರ್ಸ್​

ಸಾಫ್ಟ್​ವೇರ್​ ಎಂಜಿನಿಯರ್ ಕಾರ್ತಿಕ್ ಶರ್ಮಾ ಅವರು ವಿರಾಟ್ ಕೊಹ್ಲಿಯನ್ನು ಹೋಲುವ ಮೂಲಕ ಗಮನ ಸೆಳೆದಿದ್ದಾರೆ. ಏಳು ಲಕ್ಷಕ್ಕೂ ಹೆಚ್ಚು ಇನ್ಸ್ಟಾಗ್ರಾಮ್ ಫಾಲೋಯರ್ಸ್​ಗಳನ್ನು ಹೊಂದಿರುವ ಶರ್ಮಾ ಇತ್ತೀಚೆಗೆ ನೀಲಿ ಜರ್ಸಿ ಧರಿಸಿ, ತೋಳಿನ ಸುತ್ತ ಹಚ್ಚೆ ಹಾಕಿಸಿಕೊಂಡಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಗೊಂದಲ ಸೃಷ್ಟಿಸಿದ್ದರು. ಅವರು ಕೊಹ್ಲಿಯಂತೆ ಕಾಣುವ ಪ್ರಯತ್ನ ಮಾಡಿದ್ದರು. ಅಂದ ಹಾಗೆ ಶರ್ಮಾ ಯೂಟ್ಯೂಬ್ ಚಾನೆಲ್ ಕೂಡ ಹೊಂದಿದ್ದಾರೆ.

Continue Reading
Advertisement
Doctors protest
ಕರ್ನಾಟಕ3 mins ago

Doctors Protest: ನಾಳಿನ ಪ್ರತಿಭಟನೆಗೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ; ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಬಂದ್

Medicine
ಆರೋಗ್ಯ9 mins ago

Red Line on Medicine Strip: ಔಷಧ ಪ್ಯಾಕೇಟ್‌ ಮೇಲೆ ಕೆಂಪು ಗೆರೆ ಏಕಿರುತ್ತದೆ ಅನ್ನೋದು ಗೊತ್ತಾ?

Vijay Surya drusti bottu serial will start
ಕಿರುತೆರೆ18 mins ago

Vijay Surya: `ದೃಷ್ಟಿಬೊಟ್ಟು’ ಧಾರಾವಾಹಿ ಮೂಲಕ ಖಡಕ್‌ ಎಂಟ್ರಿ ಕೊಟ್ಟ ವಿಜಯ್ ಸೂರ್ಯ!

Visa Free Countries
ಪ್ರವಾಸ21 mins ago

Visa Free Countries: ಪ್ರವಾಸಿ ತಾಣಗಳಿಗೆ ಹೆಸರಾದ ಈ 10 ದೇಶಗಳಿಗೆ ಹೋಗಲು ವೀಸಾ ಬೇಕಿಲ್ಲ!

Indian Economy
ಪ್ರಮುಖ ಸುದ್ದಿ58 mins ago

Indian Economy : 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಐಎಂಎಫ್​ನ ಗೀತಾ ಗೋಪಿನಾಥ್

Kolkata Doctor Murder Case
Latest1 hour ago

Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Shiva Rajkumar 131st film set on Varamahalakshmi festival
ಸ್ಯಾಂಡಲ್ ವುಡ್1 hour ago

Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

Vinesh Phogat
ಪ್ರಮುಖ ಸುದ್ದಿ1 hour ago

Vinesh Phogat : ವಿನೇಶ್​ ಫೈನಲ್ ತಲುಪಿದ್ದೇ ಹೆಮ್ಮೆಯ ವಿಷಯ; ಫೋಗಟ್ ಸಾಧನೆಯನ್ನು ಕೊಂಡಾಡಿದ ಮೋದಿ

Donald Trump
ಪ್ರಮುಖ ಸುದ್ದಿ2 hours ago

Donald Trump : ಡೊನಾಲ್ಡ್​ ಟ್ರಂಪ್​, ಎಲಾನ್​ ಮಸ್ಕ್​ ಮಸ್ತ್​ ಡಾನ್ಸ್​; ಇದು ಕೃತಕ ಬುದ್ದಿಮತ್ತೆಯ ಕರಾಮತ್ತು!

70th National Film Awards Mammootty rishab shetty competition
ಸಿನಿಮಾ2 hours ago

70th National Film Awards: 70ನೇ ರಾಷ್ಟ್ರೀಯ ಪ್ರಶಸ್ತಿ ಕ್ಷಣಗಣನೆ; ರಿಷಬ್‌ ಶೆಟ್ಟಿ ಮೇಲೆ ಸಿನಿಪ್ರಿಯರ ಕಣ್ಣು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌