CWG- 2022 | ಜೂಡೊದಲ್ಲಿ ಫೈನಲ್‌ಗೆ ಎಂಟ್ರಿ ಪಡೆದ ಭಾರತದ ತುಲಿಕಾ ಮಾನ್‌, ಇಲ್ಲೊಂದು ಪದಕ ನಿಶ್ಚಿತ - Vistara News

ಕಾಮನ್​ವೆಲ್ತ್​ ಗೇಮ್ಸ್​

CWG- 2022 | ಜೂಡೊದಲ್ಲಿ ಫೈನಲ್‌ಗೆ ಎಂಟ್ರಿ ಪಡೆದ ಭಾರತದ ತುಲಿಕಾ ಮಾನ್‌, ಇಲ್ಲೊಂದು ಪದಕ ನಿಶ್ಚಿತ

ಭಾರತದ ಮಹಿಳಾ ಜುಡೊ ಪಟು ತುಲಿಕಾ ಮಾನ್‌ ಕಾಮನ್ವೆಲ್ತ್‌ ಗೇಮ್ಸ್‌ (CWG- 2022) ಕ್ರೀಡಾಕೂಟದ ಫೈನಲ್‌ಗೆ ಪ್ರವೇಶ ಪಡೆದಿದ್ದಾರೆ.

VISTARANEWS.COM


on

CWG-2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬರ್ಮಿಂಗ್ಹಮ್‌ : ಕಾಮನ್ವೆಲ್ತ್‌ ಗೇಮ್ಸ್‌ (CWG-2022) ಕ್ರೀಡಾಕೂಟದ ಜುಡೂ ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಾತರಿಯಾಗಿದೆ. ಈ ಬಾರಿ ಚಿನ್ನ ಅಥವಾ ಬೆಳ್ಳಿ ಪದಕ ದೊರೆಯಬಹುದು. ಮಹಿಳಾ ಜುಡೊ ಪಟು ತುಲಿಕಾ ಶರ್ಮ ೭೮+ ಕೆ.ಜಿ ವಿಭಾಗದಲ್ಲಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದ್ದಾರೆ. ಸೆಮಿಫೈನಲ್ ಹಣಾಹಣಿಯಲ್ಲಿ ಅವರು ನ್ಯೂಜಿಲೆಂಡ್‌ನ ಸಿಡ್ನಿ ಆಂಡ್ರ್ಯೂಸ್‌ ವಿರುದ್ಧ ಜಯ ಸಾಧಿಸಿದ ಭಾರತೀಯ ಜುಡೊ ಸ್ಪರ್ಧಿ ಪ್ರಶಸ್ತಿ ಫೈಟ್‌ಗೆ ಪ್ರವೇಶ ಪಡೆದುಕೊಂಡರು.

ಬುಧವಾರ ನಡೆದ ಸೆಮಿಫೈನಲ್‌ ಹಣಾಹಣಿಯಲ್ಲಿ ಅವರು ಆಟದ ನಿಯಮಗಳನ್ನು ಮುರಿಯುವ ಮೂಲಕ ಪೆನಾಲ್ಟಿ ಅಂಕಗಳಿಗೆ ಈಡಾದರು. ಆದರೆ, ೫೩ನೇ ಸೆಕೆಂಡ್‌ನಲ್ಲಿ ಎದುರಾಳಿ ಸಂಪೂರ್ಣ ಪಾರಮ್ಯ ಮರೆದ ತುಲಿಕಾ ಏಕಪಕ್ಷೀಯ ಅಂಕಗಳನ್ನು ಸಂಪಾದಿಸುವುದರೊಂದಿಗೆ ಫೈನಲ್‌ಗೆ ಪ್ರವೇಶ ಪಡೆದುಕೊಂಡರು. ಫೈನಲ್‌ನಲ್ಲಿ ಅವರು ಸ್ಕಾಟ್ಲೆಂಡ್‌ನ ಅಡ್ಲಿಂಗ್ಟಾನ್‌ ವಿರುದ್ಧ ಜಯ ಸಾಧಿಸಲಿದ್ದಾರೆ.

ಅದಕ್ಕಿಂತ ಮೊದಲು ನಡೆದ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ತುಲಿಕಾ ಮಾನ್‌, ಮಾರಿಷಸ್‌ನ ಟ್ರೇಸಿ ಡುರ್ಹೋನ್‌ ವಿರುದ್ಧ ಜಯ ಸಾಧಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕ್ರೀಡೆ

Medal Biting: ಒಲಂಪಿಕ್ಸ್‌ನಲ್ಲಿ ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?

Medal Biting: ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ಪದಕಗಳನ್ನು ಕಚ್ಚಿ (Medal Biteing) ಫೋಟೋಗೆ ಪೋಸ್ ಕೊಡುತ್ತಾರೆ. ಇದು ಯಾಕಾಗಿ? ಪದಕದ ಶುದ್ಧತೆಯನ್ನು ಪರಿಶೀಲಿಸಲೇ ಅಥವಾ ಇದೊಂದು ಸಂಪ್ರದಾಯವೇ? ಇದು ಯಾವಾಗದಿಂದ ಆಚರಣೆಯಲ್ಲಿದೆ ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Medal Biteing
Koo

ಬೆಂಗಳೂರು: ಒಲಂಪಿಕ್ಸ್‌ನಲ್ಲಿ (Olympic) ಪದಕ ವಿಜೇತ ( winners ) ಕ್ರೀಡಾಪಟುಗಳು ಪದಕವನ್ನು ಕಚ್ಚಿ (Medal Biting) ಫೋಟೋಗೆ ಪೋಸ್ ಕೊಡುವುದನ್ನು ನೋಡಿರುತ್ತೇವೆ. ಇವರು ಯಾಕೆ ಹೀಗೆ ಮಾಡುತ್ತಾರೆ ಎನ್ನುವ ಪ್ರಶ್ನೆಯಂತೂ ಒಂದಲ್ಲಾ ಒಂದು ಬಾರಿ ನಮ್ಮ ಮನದಲ್ಲಿ ಮೂಡಿರುತ್ತದೆ. ಒಲಿಂಪಿಕ್ ಪದಕ ವಿಜೇತರು ಪದಕ ಕಚ್ಚಲು ಕಾರಣವಿದೆ ಮಾತ್ರವಲ್ಲ ಇದಕ್ಕೆ ದೊಡ್ಡ ಇತಿಹಾಸವೇ ಇದೆ.

ಒಲಿಂಪಿಕ್ಸ್ ಪದಕ ವಿಜೇತ ಗಣ್ಯ ಕ್ರೀಡಾಪಟುಗಳು ವೇದಿಕೆಯ ಮೇಲೆ ನಿಂತು ತಮ್ಮ ಪದಕಗಳನ್ನು ಕಚ್ಚುವುದು ಒಲಿಂಪಿಕ್ಸ್‌ನಲ್ಲಿ ಚಿರಪರಿಚಿತ ದೃಶ್ಯವಾಗಿದೆ. ಮೈಕೆಲ್ ಫೆಲ್ಪ್ಸ್, ಉಸೇನ್ ಬೋಲ್ಟ್ ಮತ್ತು ಸಿಮೋನ್ ಬೈಲ್ಸ್ ಅವರ ಇಂತಹ ಚಿತ್ರಗಳು ಇಂದಿಗೂ ಬಹುತೇಕ ಮಂದಿಯ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಒಲಿಂಪಿಯನ್‌ಗಳು ಹೀಗೆ ಪದಕಗಳನ್ನು ಏಕೆ ಕಚ್ಚುತ್ತಾರೆ, ಇದರ ಹಿಂದಿರುವ ಕಾರಣ ಏನು ಗೊತ್ತೇ?

ಶುದ್ಧತೆ ಪರಿಶೀಲನೆ?

ಒಲಿಂಪಿಕ್ಸ್ ನ ಆರಂಭಿಕ ದಿನಗಳು. ಬೆಲೆಬಾಳುವ ಚಿನ್ನವನ್ನು ಕರೆನ್ಸಿಯ ರೂಪದಲ್ಲಿ ಬಳಸಲು ಪ್ರಾರಂಭಿಸಲಾಯಿತು. ಚಿನ್ನದ ಪರಿಶುದ್ಧತೆಯನ್ನು ಪರಿಶೀಲಿಸಲು ವ್ಯಾಪಾರಿಗಳು ಚಿನ್ನದ ನಾಣ್ಯಗಳನ್ನು ಕಚ್ಚಿ ನೋಡುತ್ತಿದ್ದರು ಎಂದು ಇತಿಹಾಸ ಹೇಳುತ್ತದೆ. ಚಿನ್ನವು ಮೃದುವಾದ ಲೋಹವಾಗಿದೆ. ಇದರ ಮೇಲೆ ಸ್ವಲ್ಪ ಒತ್ತಡ ಬಿದ್ದರೂ ಗುರುತು ಬೀಳುತ್ತದೆ. ಹೀಗಾಗಿ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ತಮಗೆ ಸಿಗುವ ಚಿನ್ನದ ಪದಕವನ್ನು ಪರಿಶೀಲಿಸಲು ಹೀಗೆ ಮಾಡುತ್ತಿದ್ದರು. ಕ್ರಮೇಣ ಇದೊಂದು ಅಭ್ಯಾಸದ ಭಾಗವಾಯಿತು.


ಒಲಿಂಪಿಕ್ ಚಾಂಪಿಯನ್‌ಗಳು ತಮ್ಮ ಬಾಯಿಯಲ್ಲಿ ಚಿನ್ನದ ಪದಕವನ್ನು ಕಚ್ಚುವುದು ಈಗ ಶುದ್ಧತೆಯನ್ನು ಪರಿಶೀಲಿಸುವುದಕ್ಕಾಗಿ ಅಲ್ಲ. ಯಾಕೆಂದರೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) 1912 ರಲ್ಲಿ ಶುದ್ಧ ಚಿನ್ನದ ಪದಕಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಆದರೆ ಅದರ ಅಭ್ಯಾಸ ಕ್ರಮ ಇನ್ನೂ ಮುಂದುವರಿದಿದೆ.


ಕ್ರೀಡಾಪಟುಗಳು ಪದಕಗಳನ್ನು ಏಕೆ ಕಚ್ಚುತ್ತಾರೆ?

ಒಲಿಂಪಿಕ್ ಕ್ರೀಡಾಪಟುಗಳಿಗೆ ಪದಕಗಳನ್ನು ಕಚ್ಚಿ ಫೋಟೋಗೆ ಪೋಸ್ ಕೊಡಲು ಕ್ರೀಡಾ ಛಾಯಾಚಿತ್ರ ಗ್ರಾಹಕರು ಕೇಳುತ್ತಾರೆ. ಇದೀಗ ಗೀಳಾಗಿ ಪರಿಣಮಿಸಿದೆ ಎನ್ನುತ್ತಾರೆ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಒಲಿಂಪಿಕ್ ಇತಿಹಾಸಕಾರರ ಅಧ್ಯಕ್ಷ ಡೇವಿಡ್ ವಾಲೆಚಿನ್ಸ್ ಕಿ.

ಪದಕವನ್ನು ಕಚ್ಚುವ ಭಂಗಿಯು ಪತ್ರಿಕೆಗಳ ಮೊದಲ ಪುಟಕ್ಕೆ ಕೊಡಬಹುದಾದ ಚಿತ್ರ ಎಂದು ಅವರು ಪರಿಗಣಿಸುತ್ತಾರೆ ಹೀಗಾಗಿ ಕ್ರೀಡಾಪಟುಗಳಿಗೆ ಹಾಗೆ ಮಾಡಲು ಪತ್ರಕರ್ತರೇ ವಿನಂತಿಸುತ್ತಾರೆ. ಅವರು ಅದನ್ನು ಒಂದು ಸಾಂಪ್ರದಾಯ ಎನ್ನುವಂತೆ ನೋಡುತ್ತಾರೆ. ಅಥ್ಲೀಟ್‌ಗಳು ಇದನ್ನು ಸ್ವಂತವಾಗಿ ಮಾಡುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದು ವಾಲೆಚಿನ್ಸ್ ಕಿ ವಿವರಿಸಿದರು.


ಇದನ್ನೂ ಓದಿ: Suryakumar Yadav Catch: ಸೂರ್ಯಕುಮಾರ್​ ಕ್ಯಾಚ್ ಎಡವಟ್ಟು; ವಿಶ್ವಕಪ್​ ವಾಪಸ್​ ನೀಡಬೇಕಾ ಭಾರತ?

ಹಲ್ಲು ಮುರಿದುಕೊಂಡ ಡೇವಿಡ್ ಮೊಲ್ಲರ್

2010ರ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಜರ್ಮನ್ ಲೂಗರ್ ಡೇವಿಡ್ ಮೊಲ್ಲರ್ ಅವರಿಗೆ ಈ ಭಂಗಿಯಲ್ಲಿ ಫೋಟೋಗೆ ಪೋಸ್ ಕೊಡಲು ಪತ್ರಕರ್ತರು ಕೇಳಿಕೊಂಡರು, ಆದರೆ ಇದರಿಂದ ಬಳಿಕ ಅವರು ಒಂದು ಹಲ್ಲು ಮುರಿದುಕೊಂಡಿರುವುದಾಗಿ ಹೇಳಿಕೊಂಡಿದ್ದರು.

Continue Reading

ಕಾಮನ್​ವೆಲ್ತ್​ ಗೇಮ್ಸ್​

Wrestler | ಆಪ್‌ ನಾಯಕನ ಹೇಳಿಕೆಗೆ ತಿರುಗೇಟು ಕೊಟ್ಟ ಕಾಮನ್ವೆಲ್ತ್‌ ಪದಕ ವಿಜೇತೆ ದಿವ್ಯಾ ಕಾಕ್ರನ್‌

ಕುಸ್ತಿಪಟು ದಿವ್ಯಾ ಕಾಕ್ರನ್‌ ದಿಲ್ಲಿಯ ಆಪ್‌ ಶಾಸಕ ಸೌರಭ್‌ ಭಾರದ್ವಾಜ್‌ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

VISTARANEWS.COM


on

wrestling
Koo

ನವ ದೆಹಲಿ : ಕಾಮನ್ವೆಲ್ತ್‌ ಗೇಮ್ಸ್‌ ಕಂಚಿನ ಪದಕ ವಿಜೇತೆ ಕುಸ್ತಿಪಟು ದಿವ್ಯಾ ಕಾಕ್ರನ್‌, ದಿಲ್ಲಿ ಆಪ್‌ ಪಕ್ಷದ ಶಾಸಕನೊಬ್ಬನ ಹೇಳಿಕೆಗೆ ತಿರುಗೇಟು ಕೊಟ್ಟಿದ್ದು, ತಾವು ದಿಲ್ಲಿಯ ಪರವಾಗಿಯೇ ಸ್ಪರ್ಧಿಸಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ. ಜತೆಗೆ ದಿಲ್ಲಿ ಸರಕಾರ ತಮಗೆ ಯಾವುದೇ ಆರ್ಥಿಕ ನೆರವು ನೀಡಿಲ್ಲ ಎಂಬ ತಮ್ಮ ಹೇಳಿಕೆಯನ್ನು ಸಮರ್ಧಿಸಿಕೊಂಡಿದ್ದಾರೆ.

ಆಗಸ್ಟ್‌ ೬ರಂದು ಕಾಮನ್ವೆಲ್ತ್‌ ಗೇಮ್ಸ್‌ನ ೬೮ ಕೆ.ಜಿ ಮಹಿಳೆಯರ ಕುಸ್ತಿ ಸ್ಪರ್ಧೆಯಲ್ಲಿ ದಿವ್ಯಾ ಕಾಕ್ರನ್‌ ಅವರು ಕಂಚಿನ ಪದಕ ಗೆದ್ದುಕೊಂಡಿದ್ದರು. ಈ ಸಾಧಕಿ ಇದೀಗ ಭಾರತಕ್ಕೆ ವಾಪಸಾಗಿದ್ದು, ಭರ್ಜರಿ ಸ್ವಾಗತ ಪಡೆದುಕೊಂಡಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಮುಂದೆ ಮಾತನಾಡಿದ ದಿವ್ಯಾ ಅವರು ತಮಗೆ ದಿಲ್ಲಿ ಸರಕಾರದಿಂದ ಯಾವುದೇ ಆರ್ಥಿಕ ನೆರವು ನೀಡಿಲ್ಲ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ದಿಲ್ಲಿಯ ಆಪ್‌ ಶಾಸಕ ಸೌರಭ್‌ ಭಾರದ್ವಾಜ್‌ ಅವರು ಪ್ರತಿಕ್ರಿಯಿಸಿ, ದಿವ್ಯಾ ಅವರ ದಿಲ್ಲಿ ಪರವಾಗಿ ಅಡಿವುದು ಕಡಿಮೆ. ಉತ್ತರ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ದಿವ್ಯಾ ಅವರು ೨೦೧೧ರಿಂದ ೨೦೧೭ರವರೆಗೆ ತಾವು ದಿಲ್ಲಿ ಪರವಾಗಿ ಆಡುತ್ತಿದ್ದೆ. ಸಾಕ್ಷಿಯಾಗಿ ಇಲ್ಲಿದೆ ನೋಡಿ ಪ್ರಮಾಣಪತ್ರ ಎಂದು ಟ್ವೀಟ್‌ ಮಾಡಿದ್ದಾರೆ. ಜತೆಗೆ ಇನ್ನೂ ನಿಮಗೆ ನೆನಪಾಗದಿದ್ದರೆ ದಿಲ್ಲಿ ಪರವಾಗಿ ೧೭ ಬಂಗಾರದ ಪದಕ ಗೆದ್ದಿರುವ ಪ್ರಮಾಣಪತ್ರವನ್ನು ಇಲ್ಲಿ ಲಗತ್ತಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ | CWG-2022 | ಮಹಿಳೆಯರ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ದಿವ್ಯಾ ಕಾಕ್ರನ್‌

Continue Reading

ಕಾಮನ್​ವೆಲ್ತ್​ ಗೇಮ್ಸ್​

CWG- 2022 | ಬರ್ಮಿಂಗ್ಹಮ್‌ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತದ ಅಥ್ಲೀಟ್‌ಗಳ ಸಾಧನೆಗಳೇನು?

ಬರ್ಮಿಂಗ್ಹಮ್‌ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ (CWG-2022) ಭಾರತದ ಕ್ರೀಡಾಪುಟುಗಳು ಮಾಡಿರುವ ಸಾಧನೆಗಳು ಕುರಿತು ಸಂಕ್ಷಿಪ್ತ ವಿವರ ಇಲ್ಲಿದೆ

VISTARANEWS.COM


on

CWG-2022
Koo

ನವ ದೆಹಲಿ : ಕಾಮನ್ವೆಲ್ತ್‌ ಒಕ್ಕೂಟಗಳ ಮಹಾ ಕ್ರೀಡಾ ಸಂಗ್ರಾಮ ಕಾಮನ್ವೆಲ್ತ್‌ ಗೇಮ್ಸ್‌ ಸೋಮವಾರ ಸಮಾಪ್ತಿಗೊಂಡಿದೆ. ಇಂಗ್ಲೆಂಡ್‌ನ ಬರ್ಮಿಂಗ್ಹಮ್ ನಗರದಲ್ಲಿ ಉದ್ಘಾಟನಾ ಸಮಾರಂಭ ಸೇರಿ ಒಟ್ಟು ೧೧ ದಿನಗಳ ಕಾಲ ಈ ಪ್ರತಿಷ್ಠಿತ ಕ್ರೀಡಾಕೂಟ ನಡೆಯಿತು. ವಿಶ್ವದ ೫೦೫೪ ಕ್ರೀಡಾಪಟುಗಳು ಭಾಗವಹಿಸಿದ್ದ ಈ ಕ್ರೀಡಾ ಜಾತ್ರೆಗೆ ಭಾರತವೂ ೧೦೬ ಪುರುಷರ ಹಾಗೂ ೧೦೪ ಮಹಿಳೆಯರು ಸೇರಿ ೨೧೦ ಕ್ರೀಡಾಪಟುಗಳನ್ನು ಕಳುಹಿಸಿತ್ತು. ಇವರೆಲ್ಲರ ಸಾಧನೆಯ ಹಿನ್ನೆಲೆಯಲ್ಲಿ ಭಾರತಕ್ಕೆ ೬೧ ಪದಕಗಳು ಸಿಕ್ಕಿವೆ. ೨೨ ಚಿನ್ನದ ಪದಕ, ೧೬ ರಜತ ಪದಕ, ೨೩ ಕಂಚಿನ ಪದಕಗಳು ಭಾರತೀಯರ ಮುಡಿಗೇರಿಗೆ. ಅಂಕಪಟ್ಟಿಯಲ್ಲೂ ಭಾರತಕ್ಕೆ ೪ನೇ ಸ್ಥಾನ ದೊರಕಿದ್ದು ಕೂಡ ಕಡಿಮೆ ಸಾಧನೆಯೇನು ಅಲ್ಲ.

ಕ್ರೀಡಾಕೂಟದ ಸಮಾರೋಪ ಸಮಾರಂಭದ ದೃಶ್ಯಗಳು

೨೦೧೮ಕ್ಕೆ ಹೋಲಿಸಿದರೆ ಭಾರತದ ಸಾಧನೆ ಸ್ವಲ್ಪ ಪ್ರಮಾಣದಲ್ಲಿ ಮಂಕಾಗಿದೆ. ಅದಕ್ಕೆ ಶೂಟಿಂಗ್‌ ಸ್ಪರ್ಧೆಯನ್ನು ಕ್ರೀಡಾಕೂಟದಿಂದ ಹೊರಗಿಟ್ಟಿರುವುದೇ ಕಾರಣ ಎಂಬುದರಲ್ಲಿ ಅನುಮಾನವೇ ಇಲ್ಲ. ಯಾಕೆಂದರೆ, ಕಳೆದ ಆವೃತ್ತಿಯಲ್ಲಿ ಭಾರತದ ಶೂಟರ್‌ಗಳು ಏಳು ಚಿನ್ನ ಸೇರಿದಂತೆ ೧೬ ಪದಕಗಳನ್ನು ಗೆದ್ದಿದ್ದರು. ಇಷ್ಟೊಂದು ಪದಕಗಳು ಹಾಲಿ ಪಟ್ಟಿಗೆ ಸೇರ್ಪಡೆಯಾಗಿದ್ದರೆ ಭಾರತದ ಕ್ರೀಡಾ ಕ್ಷೇತ್ರದ ಸುಧಾರಣೆ ಎಲ್ಲರ ಅರಿವಿಗೆ ಬಂದಿರುತ್ತಿತ್ತು. ಆದರೆ, ವಾಸ್ತವನ್ನು ಒಪ್ಪಿಕೊಳ್ಳಲೇಬೇಕು. ಆದರೆ, ಲಾನ್‌ಬೌಲ್ಸ್‌ ಎಂಬ ಕ್ರೀಡೆಯಲ್ಲಿ ಭಾರತ ಒಂದು ಚಿನ್ನ ಹಾಗೂ ಒಂದು ಬೆಳ್ಳಿ ಗೆದ್ದಿರುವುದು ಆಶಾದಾಯಕ. ಅಂತೆಯೇ ಅಥ್ಲೆಟಿಕ್ಸ್‌ನಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ. ಕೆಲವೊಬ್ಬರು ಪದಕ ಗೆದ್ದಿದ್ದರೆ, ಇನ್ನೂ ಕೆಲವರು ಮಿಲಿ ಸೆಕೆಂಡ್‌ಗಳ ಅಂತರದಿಂದ ಪದಕ ಕಳೆದುಕೊಂಡಿದ್ದರು. ಹಿಮಾ ದಾಸ್‌ ಇದಕ್ಕೆ ಸ್ಪಷ್ಟ ಉದಾಹರಣೆ. ಅದೇನೆ ಇದ್ದರೂ, ದಿನದಿಂದ ದಿನಕ್ಕೆ ಬೆಳಗುತ್ತಿರುವ ಭಾರತದ ಕ್ರೀಡಾ ಕ್ಷೇತ್ರದ ಸಾಧನೆ ಬಗ್ಗೆ ಹೆಮ್ಮೆ ಪಡಲೇಬೇಕು. ಅದಕ್ಕಾಗಿ, ೨೦೨೨ರ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತ ಗೆದ್ದಿರುವ ಪದಕಗಳ ಪಟ್ಟಿಯ ಮೇಲೆ ಕಣ್ಣು ಹಾಯಿಸೋಣ.

ಕುಸ್ತಿ: ಭಾರತಕ್ಕೆ ಹೆಚ್ಚು ಚಿನ್ನದ ಪದಕಗಳನ್ನು ತಂದುಕೊಟ್ಟಿರುವುದು ಕುಸ್ತಿ. ಈ ಕ್ರೀಡೆಯ ಸಾಧಕರ ಪಟ್ಟಿ ಇಂತಿದೆ.

ಸಾಕ್ಷಿ ಮಲಿಕ್‌

ಚಿನ್ನ ಗೆದ್ದವರು: ಬಜರಂಗ್ ಪುನಿಯಾ (ಪುರುಷರ 65 ಕೆ.ಜಿ), ಸಾಕ್ಷಿ ಮಲಿಕ್‌ (ಮಹಿಳೆಯರ 62 ಕೆ.ಜಿ), ದೀಪಕ್ ಪುನಿಯಾ (ಪುರುಷರ86 ಕೆ.ಜಿ), ರವಿ ಕುಮಾರ್ ದಹಿಯಾ (ಪುರುಷರ 57 ಕೆ.ಜಿ) ವಿನೇಶ್ ಫೋಗಾಟ್‌ (ಮಹಿಳೆಯರ 53 ಕೆ.ಜಿ) ನವೀನ್ ಕುಮಾರ್‌ (ಪುರುಷರ 74 ಕೆ.ಜಿ). ಬೆಳ್ಳಿ ಗೆದ್ದವರು: ಅಂಶು ಮಲಿಕ್ (ಮಹಿಳೆಯರ 57 ಕೆ.ಜಿ), ಕಂಚು ಗೆದ್ದವರು: ದಿವ್ಯಾ ಕಾಕ್ರನ್‌ (ಮಹಿಳೆಯರ 68 ಕೆ.ಜಿ), ಮೋಹಿತ್ ಗ್ರೇವಾಲ್ (ಪುರುಷರ 125 ಕೆ.ಜಿ) , ಪೂಜಾ ಗೆಹ್ಲೋಟ್ (ಮಹಿಳೆಯರ 50 ಕೆ.ಜಿ), ಪೂಜಾ ಸಿಹಾಗ್ (ಮಹಿಳೆಯರ 76 ಕೆ.ಜಿ)

ಅಥ್ಲೆಟಿಕ್ಸ್: ಅಥ್ಲೆಟಿಕ್ಸ್‌ನಲ್ಲಿ ಭಾರತ ಈ ಸಲ ಸುಧಾರಣೆ ಕಂಡಿದ್ದು, ಭವಿಷ್ಯದಲ್ಲಿ ಇನ್ನಷ್ಟು ಪದಕಗಳನ್ನು ಗೆಲ್ಲುವ ಭರವಸೆ ಮೂಡಿಸಿದೆ.

ಎಲ್ದೋಸ್‌ ಪಾಲ್‌

ಚಿನ್ನ ಗೆದ್ದವರು: ಎಲ್ದೋಸ್ ಪಾಲ್(ಪುರುಷರ ಟ್ರಿಪಲ್ ಜಂಪ್). ಬೆಳ್ಳಿ ಗೆದ್ದವರು: ಅಬ್ದುಲ್ಲಾ ಅಬೂಬಕರ್ಪು (ಪುರುಷರ ಟ್ರಿಪಲ್ ಜಂಪ್), ಅವಿನಾಶ್ ಸಾಬ್ಲೆ (ಪುರುಷರ 3000ಮೀ ಸ್ಟೀಪಲ್‌ಚೇಸ್), ಪ್ರಿಯಾಂಕಾ ಗೋಸ್ವಾಮಿ (ಮಹಿಳೆಯರ 10 ಕಿಮೀ ರೇಸ್‌ವಾಕ್‌), ಎಂ ಶ್ರೀಶಂಕರ್ (ಪುರುಷರ ಲಾಂಗ್ ಜಂಪ್), ತೇಜಸ್ವಿನ್ ಶಂಕರ್ (ಪುರುಷರ ಹೈ ಜಂಪ್). ಕಂಚು ಗೆದ್ದವರು: ಅನ್ನು ರಾಣಿ (ಮಹಿಳೆಯರ ಜಾವೆಲಿನ್ ಥ್ರೋ), ಸಂದೀಪ್ ಕುಮಾರ್ (ಪುರುಷರ 10 ಕಿ.ಮೀ ರೇಸ್‌ ವಾಕ್‌_

ಬ್ಯಾಡ್ಮಿಂಟನ್: ಭಾರತದ ಜನಪ್ರಿಯ ಆಟ. ಈ ಕ್ಷೇತ್ರದ ಕ್ರೀಡಾಪಟುಗಳು ವಿಶ್ವ ಮಟ್ಟದಲ್ಲಿ ತಮ್ಮ ಸಾಮರ್ಥ್ಯ ಸಾಬೀತು ಮಾಡುತ್ತಿದ್ದು, ಇದೀಗ ಕಾಮನ್ವೆಲ್ತ್‌ನಲ್ಲೂ ಮಿಂಚಿದ್ದಾರೆ.

ಪಿ ವಿ ಸಿಂಧೂ

ಬಂಗಾರ ಗೆದ್ದವರು : ಪಿ. ವಿ ಸಿಂಧೂ (ಮಹಿಳೆಯರ ಸಿಂಗಲ್ಸ್) , ಲಕ್ಷ್ಯ ಸೇನ್ (ಪುರುಷರ ಸಿಂಗಲ್ಸ್), ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ (ಪುರುಷರ ಡಬಲ್ಸ್). ಬೆಳ್ಳಿ ಗೆದ್ದವರು : ಕಿಡಂಬಿ ಶ್ರೀಕಾಂತ್ (ಪುರುಷರ ಸಿಂಗಲ್ಸ್‌), ಸಾತ್ವಿಕ್ ಸಾಯಿರಾಜ್, ಬಿ ಸುಮೀತ್ ರೆಡ್ಡಿ, ಲಕ್ಷ್ಯ ಸೇನ್, ಚಿರಾಗ್ ಶೆಟ್ಟಿ, ತ್ರಿಸಾ ಜೊಲ್ಲಿ, ಆಕರ್ಷಿ ಕಶ್ಯಪ್, ಅಶ್ವಿನಿ ಪೊನ್ನಪ್ಪ, ಗಾಯತ್ರಿ ಗೋಪಿಚಂದ್, ಪಿ.ವಿ ಸಿಂಧೂ (ಮಿಶ್ರ ತಂಡ). ಕಂಚು ಗೆದ್ದವರು: ತ್ರಿಸಾ ಜೊಲ್ಲಿ ಮತ್ತು ಗಾಯತ್ರಿ ಗೋಪಿಚಂದ್ (ಮಹಿಳೆಯರ ಡಬಲ್ಸ್) ಕಿಡಂಬಿ ಶ್ರೀಕಾಂತ್ (ಪುರುಷರ ಸಿಂಗಲ್ಸ್).

ಬಾಕ್ಸಿಂಗ್: ಭಾರತಕ್ಕೆ ಪದಕಗಳ ಸುರಿಮಳೆಗೈದ ಇನ್ನೊಂದು ಸ್ಪರ್ಧೆ ಬಾಕ್ಸಿಂಗ್‌. ಕುಸ್ತಿಯಂತೆ ಬಾಕ್ಸಿಂಗ್‌ನಲ್ಲೂ ಭಾರತ ಆಟಗಾರ ವಿಶ್ವ ಮಟ್ಟದಲ್ಲಿ ಪ್ರಭಾವ ಬೀರುತ್ತದೆ.

ನಿಖತ್‌ ಜರೀನ್‌


ಬಂಗಾರ ಗೆದ್ದವರು: ನಿಖತ್ ಜರೀನ್ (ಮಹಿಳೆಯರ 50 ಕೆ.ಜಿ), ನೀತೂ ಗಂಗಾಸ್‌ (ಮಹಿಳೆಯರ 48 ಕೆ.ಜಿ), ಅಮಿತ್ ಪಂಘಾಲ್‌ (ಪುರುಷರ 51 ಕೆ.ಜಿ), ಬೆಳ್ಳಿ ಗೆದ್ದವರು: ಸಾಗರ್ ಅಹ್ಲಾವತ್ (ಪುರುಷರ 92 ಕೆ.ಜಿ). ಕಂಚು ಗೆದ್ದವರು: ರೋಹಿತ್ ಟೋಕಸ್‌ (ಪುರುಷರ 67 ಕೆ.ಜಿ), ಜಾಸ್ಮಿನ್‌ (ಮಹಿಳೆಯರ 60 ಕೆ.ಜಿ), ಮೊಹಮ್ಮದ್ ಹುಸಾಮುದ್ದೀನ್ (ಪುರುಷರ 57 ಕೆ.ಜಿ).

ವೇಟ್​ಲಿಫ್ಟಿಂಗ್: ಈ ಸ್ಪರ್ಧೆಯಲ್ಲಿ ಹಲವು ಪದಕಗಳು ಭಾರತಕ್ಕೆ ಬರಲಿವೆ ಎಂದು ಮೊದಲೇ ನಿರೀಕ್ಷಿಸಲಾಗಿತ್ತು. ಅದು ನಿಜವಾಗಿದೆ. ಬರ್ಮಿಂಗ್ಹಮ್‌ನಲ್ಲಿ ಈ ಕ್ರೀಡೆಯ ಸಾಧಕರು ಇವರು.

ಮೀರಾ ಬಾಯಿ ಚಾನು

ಚಿನ್ನ ಗೆದ್ದವರು : ಮೀರಾಬಾಯಿ ಚಾನು–(ಮಹಿಳೆಯರ 49 ಕೆ.ಜಿ), ಜೆರೆಮಿ ಲಾಲ್‌ರಿನುಂಗಾ (ಪುರುಷರ 67 ಕೆ.ಜಿ), ಅಚಿಂತಾ ಶೆಯುಲಿ (ಪುರುಷರ 73 ಕೆ.ಜಿ) ಬೆಳ್ಳಿ ಗೆದ್ದವರು: ಸಂಕೇತ್ ಮಹದೇವ್‌ ಸರ್ಗರ್ (ಪುರುಷರ 55 ಕೆ.ಜಿ), ಬಿಂದ್ಯಾರಾಣಿ ದೇವಿ (ಮಹಿಳೆಯರ 55 ಕೆ.ಜಿ), ವಿಕಾಸ್ ಠಾಕೂರ್ (ಪುರುಷರ 96 ಕೆ.ಜಿ) ಕಂಚು ಗೆದ್ದವರು: ಗುರುರಾಜ ಪೂಜಾರಿ (ಪುರುಷರ 61 ಕೆ.ಜಿ), ಹರ್ಜಿಂದರ್ ಕೌರ್–(ಮಹಿಳೆಯರ 71 ಕೆ.ಜಿ),–ಲವ್‌ಪ್ರೀತ್‌ ಸಿಂಗ್‌ (ಪುರುಷರ 109 ಕೆ.ಜಿ), ಗುರುದೀಪ್ ಸಿಂಗ್ (ಪುರುಷರ 109 ಕೆ.ಜಿ).

ಕ್ರಿಕೆಟ್ ತಂಡಕ್ಕೆ ಬೆಳ್ಳಿ : ಆಸ್ಟ್ರೇಲಿಯಾ ವಿರುದ್ಧ ಫೈನಲ್‌ನಲ್ಲಿ ಸೋತು ರಜತ ಪದಕ ಗೆದ್ದ ಮಹಿಳೆಯರ ಟಿ೨೦ ಸದಸ್ಯರು ಇವರು..

ಮಹಿಳೆಯರ ಟಿ೨೦ ತಂಡ

ಹರ್ಮನ್​ಪ್ರೀತ್ ಕೌರ್, ಸ್ಮೃತಿ ಮಂಧಾನಾ, ತಾನಿಯಾ ಭಾಟಿಯಾ, ಯಸ್ತಿಕಾ ಭಾಟಿಯಾ, ಹರ್ಲೀನ್ ದೇವಲ್, ರಾಜೇಶ್ವರಿ ಗಾಯಕ್ವಾಡ್, ಸಬ್ಬಿನೇನಿ ಮೇಘನಾ, ಸ್ನೇಹ್‌ ರಾಣಾ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್, ಪೂಜಾ ವಸ್ತ್ರಾಕರ್, ರಾಧಾ ಯಾದವ್‌.

ಪುರುಷರ ಹಾಕಿ ತಂಡಕ್ಕೆ ಬೆಳ್ಳಿ : ಆಸ್ಟ್ರೇಲಿಯಾ ವಿರುದ್ಧ ಫೈನಲ್‌ನಲ್ಲಿ ೦-೭ ಗೋಲ್‌ಗಳಿಂದ ಸೋತು ರಜತ ಪದಕ ತಮ್ಮದಾಗಿಸಿಕೊಂಡ ಭಾರತ ಹಾಕಿ ತಂಡದ ಸದಸ್ಯರು ಇವರು…

ಪುರುಷರ ಹಾಕಿ ತಂಡ

ಮನ್‌ಪ್ರೀತ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್, ಜರ್ಮನ್‌ಪ್ರೀತ್ ಸಿಂಗ್, ಅಭಿಷೇಕ್ ನೈನ್, ಸುರೇಂದರ್ ಕುಮಾರ್, ಹಾರ್ದಿಕ್ ಸಿಂಗ್, ಗುರ್ಜಂತ್ ಸಿಂಗ್, ಮನದೀಪ್ ಸಿಂಗ್, ಕ್ರಿಶನ್ ಬಹದ್ದೂರ್ ಪಾಠಕ್, ಲಲಿತ್ ಕುಮಾರ್ ಉಪಾಧ್ಯಾಯ, ಪಿ.ಆರ್ ಶ್ರೀಜೇಶ್, ನೀಲಕಂಠ ಶರ್ಮಾ, ಶಂಶೇರ್ ಸಿಂಗ್, ವರುಣ್ ಕುಮಾರ್, ಆಕಾಶದೀಪ್ ಸಿಂಗ್, ಅಮಿತ್ ರೋಹಿದಾಸ್, ಜಿಗರಾಜ್ ಸಿಂಗ್, ವಿವೇಕ್ ಸಾಗರ್ ಪ್ರಸಾದ್.

ಕಂಚು ಗೆದ್ದ ಮಹಿಳಾ ಹಾಕಿ ತಂಡ : ಕಂಚಿನ ಪದಕದ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡವನ್ನು ಪೆನಾಲ್ಟಿ ಶೂಟೌಟ್‌ ಗೋಲ್‌ ಮೂಲಕ ಸೋಲಿಸಿ ಕಂಚು ಗೆದ್ದ ಭಾರತ ಮಹಿಳೆಯರ ತಂಡದ ಸದಸ್ಯರು ಇವರು…

ಮಹಿಳೆಯರ ಹಾಕಿ ತಂಡ

ಸವಿತಾ ಪುನಿಯಾ, ಗುರ್ಜಿತ್ ಕೌರ್, ದೀಪ್ ಗ್ರೇಸ್ ಎಕ್ಕಾ, ಮೋನಿಕಾ, ಸೋನಿಕಾ, ಶರ್ಮಿಳಾ ದೇವಿ, ನಿಕ್ಕಿ ಪ್ರಧಾನ್, ರಜನಿ ಎಟಿಮಾರ್ಪು, ಸಂಗೀತಾ ಕುಮಾರಿ, ನಿಶಾ, ವಂದನಾ ಕಟಾರಿಯಾ, ಉದಿತಾ, ಲಾಲ್‌ರೆಮ್ಸಿಯಾಮಿ, ಜ್ಯೋತಿ, ನವನೀತ್ ಕೌರ್, ಸುಶೀಲಾ ಚಾನು, ಸಲಿಮಾ ಟೆಟೆ.

ಜುಡೊ: ಮಾರ್ಷಲ್‌ ಆರ್ಟ್‌ ಗುಂಪಿಗೆ ಸೇರಿದ ಈ ಕ್ರೀಡೆಯಲ್ಲೂ ಭಾರತ ಭರವಸೆ ಮೂಡಿಸಿದೆ.

ಸುಶೀಲಾ ದೇವಿ

ಬೆಳ್ಳಿ ಗೆದ್ದವರು: ಸುಶೀಲಾ ದೇವಿ ಲಿಕ್ಮಾಬಮ್ (ಮಹಿಳೆಯರ 48 ಕೆ.ಜಿ), ತುಲಿಕಾ ಮಾನ್ (ಮಹಿಳೆಯರ 78 ಕೆ.ಜಿ) ಕಂಚು ಗೆದ್ದವರು: ವಿಜಯ್ ಕುಮಾರ್ ಯಾದವ್ (ಪುರುಷರ 60 ಕೆ.ಜಿ)

ಲಾನ್ ಬೌಲ್ಸ್: ಮೊಟ್ಟ ಮೊದಲ ಬಾರಿಗೆ ಈ ಕ್ರೀಡೆಯಲ್ಲಿ ಭಾರತ ಸಾಧನೆ ಮಾಡಿದೆ. ಸಾಧಕರು ಇವರು..

ಲಾನ್‌ ಬೌಲ್ಸ್‌ ಮಹಿಳೆಯರ ತಂಡ

ಚಿನ್ನ ಗೆದ್ದವರು : ಮಹಿಳೆಯರ ಫೋರ್‌ ತಂಡದ ಸದಸ್ಯರಾದ ಲವ್ಲಿ ಚೌಬೆ, ರೂಪಾ ರಾಣಿ ಟಿರ್ಕಿ, ನೈನ್ಮೋನಿ ಸೈಕಿಯಾ, ಪಿಂಕಿ. ಬೆಳ್ಳಿ ಗೆದ್ದವರು : ಪುರುಷರ ಫೋರ್‌ ತಂಡದ ಸದಸ್ಯರಾದ ಚಂದನ್ ಕುಮಾರ್ ಸಿಂಗ್, ದಿನೇಶ್ ಕುಮಾರ್, ನವನೀತ್ ಸಿಂಗ್, ಸುನಿಲ್ ಬಹದ್ದೂರ್.

ಪವರ್ಲಿಫ್ಟಿಂಗ್: ಇಲ್ಲೂ ಒಂದು ಚಿನ್ನ ಗೆದ್ದ ಭಾರತ ಹೊಸ ಸಂಚಲನ ಮೂಡಿಸಿದೆ.
ಚಿನ್ನ ಗೆದ್ದವರು: ಸುಧೀರ್‌ (ಪುರುಷರ ಹೆವಿವೇಟ್)

ಸ್ಕ್ವ್ಯಾಷ್: ಭಾರತ ಈ ಕ್ರೀಡೆಯಲ್ಲಿ ಸ್ವಲ್ಪ ಮಟ್ಟಿಗೆ ಪ್ರಭಾವ ಹೊಂದಿದೆ. ಹೊಸ ಪೀಳಿಗೆಯ ಕ್ರೀಡಾಪಟುಗಳು ಈ ಮಾದರಿಯನ್ನು ಅಪ್ಪಿಕೊಳ್ಳುತ್ತಿದ್ದಾರೆ.

ದೀಪಿಕಾ ಪಲ್ಲಿಕಲ್‌ ಮತ್ತು ಸೌರವ್‌ ಘೋಷಾಲ್‌

ಕಂಚು ಗೆದ್ದವರು : ಸೌರವ್ ಘೋಷಾಲ್‌ (ಪುರುಷರ ಸಿಂಗಲ್ಸ್) ದೀಪಿಕಾ ಪಲ್ಲಿಕಲ್ ಮತ್ತು ಸೌರವ್ ಘೋಷಾಲ್‌ (ಮಿಶ್ರ ಡಬಲ್ಸ್).

ಟೇಬಲ್ ಟೆನಿಸ್ ಮತ್ತು ಪ್ಯಾರಾ ಟೇಬಲ್ ಟೆನಿಸ್: ಹಿಂದಿನ ಹಲವು ಕಾಮನ್ವೆಲ್ತ್‌ನಲ್ಲಿ ಭಾರತದ ಟಿಟಿ ಪಟುಗಳು ಸಾಧನೆ ಮಾಡಿದ್ದಾರೆ. ಅಂತೆಯೇ ಈ ಬಾರಿಯೂ ಉತ್ತಮ ಫಲಿತಾಂಶ ದೊರಕಿದೆ. ಈ ಕ್ರೀಡೆಯ ಸಾಧಕರು ಇಂತಿದ್ದಾರೆ.

ಶ್ರೀಜಾ ಅಕುಲಾ ಮತ್ತು ಅಚಂತಾ ಶರತ್‌ ಕಮಲ್‌

ಚಿನ್ನ ಗೆದ್ದವರು : ಅಚಂತ ಶರತ್ ಕಮಲ್ ಮತ್ತು ಶ್ರೀಜಾ ಅಕುಲಾ (ಮಿಶ್ರ ಡಬಲ್ಸ್), ಅಚಂತ ಶರತ್ ಕಮಲ್, ಸತ್ಯನ್ ಜ್ಞಾನಶೇಖರನ್, ಹರ್ಮೀತ್ ದೇಸಾಯಿ, ಸನಿಲ್ ಶೆಟ್ಟಿ (ಪುರುಷರ ತಂಡ) ಭಾವಿನಾ ಪಟೇಲ್–(ಮಹಿಳೆಯರ ಪ್ಯಾರಾ ಸಿಂಗಲ್ಸ್‌), ಅಚಂತ ಶರತ್ ಕಮಲ್ (ಪುರುಷರ ಸಿಂಗಲ್ಸ್). ಬೆಳ್ಳಿ ಗೆದ್ದವರು: ಅಚಂತ ಶರತ್ ಕಮಲ್ ಮತ್ತು ಸತ್ಯನ್ ಜ್ಞಾನಶೇಖರನ್ (ಪುರುಷರ ಡಬಲ್ಸ್). ಕಂಚು ಗೆದ್ದವರು : ಸತ್ಯನ್ ಜ್ಞಾನಶೇಖರನ್–(ಪುರುಷರ ಸಿಂಗಲ್ಸ್), ಸೋನಾಲ್ ಪಟೇಲ್ (ಮಹಿಳೆಯರ ಪ್ಯಾರಾ ಸಿಂಗಲ್ಸ್).

Continue Reading

ಕಾಮನ್​ವೆಲ್ತ್​ ಗೇಮ್ಸ್​

CWG- 2022 | ಕಾಮನ್ವೆಲ್ತ್‌ ಪದಕ ವಿಜೇತ ಕನ್ನಡಿಗನಿಗೆ ಕೊಲ್ಲೂರು ದೇಗುಲದಲ್ಲಿ ಪುಷ್ಟ ವೃಷ್ಟಿ

ಕೊಲ್ಲೂರು ದೇಗುಲಕ್ಕೆ ಹೋದ ಕಾಮನ್ವೆಲ್ತ್‌ ಗೇಮ್ಸ್‌ ಕಂಚಿನ ವಿಜೇತ ವೇಟ್‌ಲಿಫ್ಟರ್‌ ಗುರುರಾಜ ಪೂಜಾರಿಗೆ ಅವರಿಗೆ ಭಕ್ತರಿಂದ ಪುಷ್ಪವೃಷ್ಟಿ ಮಾಡಿಸಲಾಯಿತು.

VISTARANEWS.COM


on

CWG-2022
Koo

ಕೊಲ್ಲೂರು (ಉಡುಪಿ) : ಬರ್ಮಿಂಗ್ಹಮ್‌ ಕಾಮನ್ವೆಲ್ತ್‌ ಗೇಮ್ಸ್‌ನ ವೇಟ್‌ ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದ ಕನ್ನಡಿಗ ಗುರುರಾಜ ಪೂಜಾರಿ ಅವರು ಸೋಮವಾರ ಕೊಲ್ಲೂರಿನ ಮೂಕಾಂಬಿಕಾ ದೇಗುಲಕ್ಕೆ ಬೇಟಿ ನೀಡಿದ್ದ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಅವರಿಗೆ ಪುಷ್ಪ ವೃಷ್ಟಿ ಮಾಡಿ ಅಭಿನಂದಿಸಿದರು.

ಗುರುರಾಜ ಪೂಜಾರಿ ಅವರು ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟವರು. ಅಂತೆಯೇ ಅವರು ೨೦೧೮ರ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿಯೂ ಬೆಳ್ಳಿಯ ಪದಕ ಗೆದ್ದುಕೊಂಡಿದ್ದರು. ಹೀಗೆ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸುತ್ತಿರುವ ಕನ್ನಡಿಗನಿಗೆ ಕೊಲ್ಲೂರಿನ ಜನತೆ ಅಕ್ಕರೆ ತೋರಿದರು.

ಗುರುರಾಜ ಅವರು ದೇವಳದ ಒಳಾಂಗಣ ಪ್ರವೇಶ ಮಾಡಿದಾಗ ಜೈಕಾರ ಕೂಗಿದರಲ್ಲದೆ, ಪುಷ್ಪ ವೃಷ್ಟಿ ಮಾಡಿ ಅಭಿನಂದಿಸಿದರು. ಬಳಿಕ ದೇಗುಲದ ವತಿಯಿಂದ ಕಾಮನ್ವೆಲ್ತ್‌ ವೀರನಿಗೆ ಅಭಿನಂದನೆ ಮಾಡಲಾಯಿತು.

ಗುರುರಾಜ ಪೂಜಾರಿ ಕುಂದಾಪುರ ಸಮೀಪದ ಚಿತ್ತೂರಿನ‌ ನಿವಾಸಿ. ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯಾಗಿರುವ ಅವರು ಬಾಲ್ಯದಿಂದಲೇ ಕ್ರೀಡೆಯ ಕಡೆಗೆ ಒಲವು ಹೊಂದಿದ್ದರು.

ಇದನ್ನೂ ಓದಿ | CWG-2022 | ಕಂಚು ಗೆದ್ದ ಗುರುರಾಜ ಪೂಜಾರಿ ಮನೆಯಲ್ಲಿ ಸಂಭ್ರಮ

Continue Reading
Advertisement
Dina Bhavishya
ಭವಿಷ್ಯ3 ಗಂಟೆಗಳು ago

Dina Bhavishya : ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ; ಈ ರಾಶಿಯವರು ಅಗತ್ಯವಿದ್ದಷ್ಟೆ ಮಾತನಾಡಿ

Gode Bengaluru
ಬೆಂಗಳೂರು14 ಗಂಟೆಗಳು ago

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

Pralhad Joshi
ದೇಶ14 ಗಂಟೆಗಳು ago

Pralhad Joshi : ನನಗೆ ಸಹೋದರಿಯೇ ಇಲ್ಲ! ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ- ಪ್ರಲ್ಹಾದ ಜೋಶಿ

African boy successfully undergoes surgery for rare aplastic anemia
ಬೆಂಗಳೂರು15 ಗಂಟೆಗಳು ago

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Self Harming
ಚಿತ್ರದುರ್ಗ18 ಗಂಟೆಗಳು ago

Self Harming: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ; ಕಾಲೇಜು ಕಟ್ಟಡದ ಮೇಲಿಂದು ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Actress Amulyas brother film director Deepak aras passes away
ಸಿನಿಮಾ20 ಗಂಟೆಗಳು ago

Deepak Aras: ನಟಿ ಅಮೂಲ್ಯ ಸಹೋದರ ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದಿಂದ ನಿಧನ

Fraud case Union Minister Pralhad Joshis brother duped of ticket for Lok Sabha polls
ಬೆಂಗಳೂರು20 ಗಂಟೆಗಳು ago

Fraud Case : ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಕೋಟಿ ರೂ. ಲೂಟಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್‌ ದಾಖಲು

Dina bhavishya
ಭವಿಷ್ಯ1 ದಿನ ago

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

Gosavi samaj lathicharged Sri Ram Sene calls for bandh in Lakshmeshwara town on October 19
ಗದಗ2 ದಿನಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು2 ದಿನಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌