Turkey Earthquake: ಫುಟ್ಬಾಲ್​ ಆಟಗಾರ ಕ್ರಿಶ್ಚಿಯನ್ ಅಟ್ಸು ನಾಪತ್ತೆ - Vistara News

ಕ್ರೀಡೆ

Turkey Earthquake: ಫುಟ್ಬಾಲ್​ ಆಟಗಾರ ಕ್ರಿಶ್ಚಿಯನ್ ಅಟ್ಸು ನಾಪತ್ತೆ

ಟರ್ಕಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಫುಟ್ಬಾಲ್​ ಆಟಗಾರ ಕ್ರಿಶ್ಚಿಯನ್ ಅಟ್ಸು ಅವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Christian Atsu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಂಕಾರ: ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭಯಾನಕ ಭೂಕಂಪದಲ್ಲಿ (Turkey Earthquake) ನ್ಯೂಕ್ಯಾಸಲ್(Newcastle) ತಂಡದ ಮಾಜಿ ಫುಟ್ಬಾಲ್​ ಆಟಗಾರ ಕ್ರಿಶ್ಚಿಯನ್ ಅಟ್ಸು(Christian Atsu) ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸೋಮವಾರ ಬೆಳಗಿನ ಜಾವ ಸಂಭವಿಸಿದ್ದ 7.8 ತೀವ್ರತೆಯ ಭೂಕಂಪಕ್ಕೆ ಪ್ರಮುಖ ನಗರಗಳು ನೆಲಸಮಗೊಂಡಿದೆ. ಇದುವರೆಗೆ ಮೃತಪಟ್ಟವರ ಸಂಖ್ಯೆ 4000ವನ್ನೂ ಮೀರಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ ಫುಟ್ಬಾಲ್​ ಆಟಗಾರ ಕ್ರಿಶ್ಚಿಯನ್ ಅಟ್ಸು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅಟ್ಸು ಅವರು ಅವಶೇಷಗಳಡಿಯಲ್ಲಿ ಸಿಕ್ಕಿ ಬಿದ್ದಿರುವ ಸಾಧ್ಯತೆ ಇದೆ ಎಂದು ಅವರ ಸ್ನೇಹಿತರೊಬ್ಬರು ಮಾಹಿತಿ ನೀಡಿದ್ದಾರೆ. ಇದಕ್ಕೂ ಮುನ್ನ ಅವಶೇಷಗಳಡಿಯಲ್ಲಿ ಸಿಲುಕಿದ್ದ ಇಬ್ಬರು ಫುಟ್ಬಾಲ್​ ಆಟಗಾರರನ್ನು ರಕ್ಷಿಸಲಾಗಿತ್ತು.

ಸದ್ಯ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಆದರೆ ತೀವ್ರ ಚಳಿಗಾಲದ ಹವಾಮಾನ ರಾತ್ರಿಯ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ರಾತ್ರಿ ಶೂನ್ಯ ತಾಪಮಾನ ಇದ್ದುದರಿಂದ ಅವಶೇಷಗಳಡಿಯಲ್ಲಿ ಸಿಲುಕಿರುವ ಅಥವಾ ನಿರಾಶ್ರಿತರಾದ ಜನರ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.

ಇದನ್ನೂ ಓದಿ IND VS AUS: ಬಾರ್ಡರ್​-ಗವಾಸ್ಕರ್ ಸರಣಿಯಲ್ಲಿ ಭಾರತಕ್ಕೆ ಪಂತ್ ಅವರ​ ಕೊರಗು ಕಾಡಲಿದೆ: ಚಾಪೆಲ್

31 ವರ್ಷದ ಕ್ರಿಶ್ಚಿಯನ್ ಅಟ್ಸು ನ್ಯೂಕ್ಯಾಸಲ್ ತಂಡ ತೊರೆದ ಬಳಿಕ ಕಳೆದ ವರ್ಷ ಹ್ಯಾಟೈಸ್‌ ಪೋರ್​ ತಂಡ ಸೇರಿದ್ದರು. ಕಳೆದ ವರ್ಷ ಸೌದಿ ಅರೇಬಿಯಾದಲ್ಲಿ ನಡೆದ ಫುಟ್ಬಾಲ್​ ಲೀಗ್​ನಲ್ಲಿ ಅವರು ಉತ್ತಮ ಪ್ರದರ್ಶನ ತೋರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Kerala Cyclist Reaches Paris: ನೀರಜ್​ ಚೋಪ್ರಾಗೆ ಬೆಂಬಲ ಸೂಚಿಸಲು ಬರೋಬ್ಬರಿ 22 ಸಾವಿರ ಕಿ.ಮೀ ಸೈಕಲ್​ ತುಳಿದು ಪ್ಯಾರಿಸ್​ ತಲುಪಿದ ಕೇರಳದ ಅಭಿಮಾನಿ

Kerala Cyclist Reaches Paris: ಕೇರಳದ ಸೈಕ್ಲಿಸ್ಟ್​ ಆಗಿರುವ ಫಯಿಸ್​ ಅಶ್ರಫ್​ ಅಲಿ, 2022ರ ಆಗಸ್ಟ್​ 15ರಂದು ಕಲ್ಲಿಕೋಟೆಯಿಂದ ತಮ್ಮ ಸೈಕಲ್​ ಪ್ರಯಾಣವನ್ನು ಆರಂಭಿಸಿ 30 ದೇಶಗಳನ್ನು ಸುತ್ತಿ ಇದೀಗ ಫ್ರಾನ್ಸ್​ ತಲುಪಿದ್ದಾರೆ.

VISTARANEWS.COM


on

Kerala Cyclist Reaches Paris
Koo

ಪ್ಯಾರಿಸ್​: ಜೀವನದಲ್ಲಿ ಅಸಾಧ್ಯವಾದುದನ್ನು ಸಾಧಿಸುವ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆ ಹಾದಿ ಸುಲಭ ಎಂಬ ಮಾತಿನಂತೆ ಕೇರಳದ ಸೈಕ್ಲಿಸ್ಟ್(Kerala Cyclist Reaches Paris)​ ಒಬ್ಬರು ಕಲ್ಲಿಕೋಟೆಯಿಂದ ಬರೋಬ್ಬರಿ 22 ಸಾವಿರ ಕಿಲೋಮೀಟರ್​ ಸೈಕಲ್​ ತುಳಿದು ಪ್ಯಾರಿಸ್​ ತಲುಪಿ(Paris Olympics) ಎಲ್ಲರ ಗಮನ ಸೆಳೆಯುಂತೆ ಮಾಡಿದ್ದಾರೆ.

ಹೌದು, ಪ್ಯಾರಿಸ್​ ಒಲಿಂಪಿಕ್ಸ್​ ನೋಡಲು ಮತ್ತು ತಮ್ಮ ನೆಚ್ಚಿನ ಕ್ರೀಡಾಪಟು ನೀರಜ್​ ಚೋಪ್ರಾ(Neeraj Chopra) ಅವರಿಗೆ ಬೆಂಬಲ ಸೂಚಿಸುವ ಸಲುವಾಗಿ ಈ ಸೈಕ್ಲೀಸ್​ 2 ವರ್ಷಗಳ ಕಾಲ ಸೈಕಲ್​ ಮೂಲಕ ಪ್ರಯಾಣಿಸಿ ಕೊನೆಗೂ ತಮ್ಮ ಗುರಿ ಮುಟ್ಟಿದ್ದಾರೆ. ಈ ಸಾಧಕನ ಹೆಸರು ಫಯಿಸ್​ ಅಶ್ರಫ್​ ಅಲಿ(Fayis Asraf Ali).

ಕೇರಳದ ಸೈಕ್ಲಿಸ್ಟ್​ ಆಗಿರುವ ಫಯಿಸ್​ ಅಶ್ರಫ್​ ಅಲಿ, 2022ರ ಆಗಸ್ಟ್​ 15ರಂದು ಕಲ್ಲಿಕೋಟೆಯಿಂದ ತಮ್ಮ ಸೈಕಲ್​ ಪ್ರಯಾಣವನ್ನು ಆರಂಭಿಸಿ 30 ದೇಶಗಳನ್ನು ಸುತ್ತಿ ಇದೀಗ ಫ್ರಾನ್ಸ್​ ತಲುಪಿದ್ದಾರೆ. ಕಳೆದ ವರ್ಷ ಆಗಸ್ಟ್​ನಲ್ಲಿ ಅವರು ಬುಡಾಪೆಸ್ಟ್​ ತಲುಪಿದ್ದರು. ಈ ವೇಳೆ ಅವರು ತಮ್ಮ ನೆಚ್ಚಿನ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಷಿಪ್​ ನಡೆಯುತ್ತಿತ್ತು.

ಜರ್ನಿ ಆರಂಭಿಸಿದ್ದು ಹೇಗೆ?


ಫಯಿಸ್​ ಅಶ್ರಫ್ ಕೇರಳದಿಂದ ಸೈಕಲ್​ ಜರ್ನಿ ಆರಂಭಿಸಿದಾಗ ಬಳಿಸಿದ್ದು 13 ಸಾವಿರ ರೂ. ಮೌಲ್ಯದ ಸೈಕಲ್. ಈ ಸೈಕಲ್​ನಲ್ಲಿ ಸಿಂಗಾಪುರ ತಲುಪಿದರು. ಬಳಿಕ 1 ಲಕ್ಷ ರೂ. ಮೌಲ್ಯದ ಸೈಕಲ್​ ಖರೀದಿಸಿದ್ದರು. ಅಂತಿಮವಾಗಿ ಪ್ಯಾರಿಸ್​ಗೆ ಪ್ರಯಾಣಿಸಲು ಅಶ್ರಫ್​​ ಅಲಿ 2.5 ಲಕ್ಷ ರೂ. ಮೌಲ್ಯದ ಅತ್ಯಾಧುನಿಕ ಸೈಕಲ್​ ಖರೀದಿಸಿದ್ದರು. ಪ್ರತಿದಿನ ಸರಾಸರಿ 150 ಕಿಲೋಮೀಟರ್​ ಪ್ರಯಾಣಿಸುತ್ತಿದ್ದರು. ಸೈಕಲ್​ ಜರ್ನಿಯಲ್ಲಿ ಅವರ ಜತೆಗಿದದ್ದು ಕೇವಲ 4 ಜತೆ ಬಟ್ಟೆ, ಒಂದು ಟೆಂಟ್​, ಮಲಗುವ ಬ್ಯಾಗ್​ ಮತ್ತು ಸುಮಾರು 50 ಕೆಜಿ ಭಾರದ ವಸ್ತುಗಳು. ಅವರು ಶುಕ್ರವಾರ ಪ್ಯಾರಿಸ್​ ತಲುಪಿದ ಫೋಟೊವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನೀರಜ್​ ಅವರು ಚಿನ್ನ ಗೆಲ್ಲುವುದನ್ನು ನೋಡಲು ಕಾತರವಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ Paris Olympics: ಮನು ಭಾಕರ್​-ಸರಬ್ಜೊತ್‌ ಸಿಂಗ್​ ಕಂಚಿನ ನಿರೀಕ್ಷೆ; ಭಾರತದ ಇಂದಿನ ಸ್ಪರ್ಧೆಗಳ ವಿವರ ಹೀಗಿದೆ

23 ವರ್ಷದ ನೀರಜ್ ಚೋಪ್ರಾ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಈ ಬಾರಿಯ ಒಲಿಂಪಿಕ್ಸ್​ನಲ್ಲಿ 90 ಮೀ. ದೂರ ಎಸೆಯುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಕಾಶಿನಾಥ್ ನಾಯ್ಕ್ ಅವರು ನೀರಜ್ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿಯೂ(neeraj chopra paris olympics) ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಆತ್ಮವಿಶ್ವಾಸದಿಂದ ಈ ಮಾತನ್ನು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿನಾಥ್, “ನಾನು 2015 ರಿಂದ ನೀರಜ್​ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು.​ ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್​ ಎಸೆಯುವದು ಪ್ರಮುಖ ಗುರಿ ಎಂದು ನೀರಜ್​ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದಾರೆ.

Continue Reading

ಕ್ರೀಡೆ

Manu Bhaker: ವಯಲಿನ್‌ ಮೂಲಕ ರಾಷ್ಟ್ರಗೀತೆ ನುಡಿಸಿದ ಮನು ಭಾಕರ್; ವಿಡಿಯೊ ವೈರಲ್​

Manu Bhaker: ವೈರಲ್​ ಆಗುತ್ತಿರುವ ವಿಡಿಯೊದಲ್ಲಿ ಮನು ಭಾಕರ್​ ಅವರು ಸ್ವಿಮ್ಮಿಂಗ್‌ ಪೂಲ್‌ ಬಳಿ ಕುಳಿತು ವಯಲಿನ್‌ ಮೂಲಕ ರಾಷ್ಟ್ರಗೀತೆ ಜನ ಗಣ ಮನವನ್ನು ಬಹಳ ಇಂಪಾಗಿ ನುಡಿಸಿದ್ದಾರೆ.

VISTARANEWS.COM


on

Manu Bhaker
Koo

ಪ್ಯಾರಿಸ್​: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ(paris olympics) 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ(Bronze Medalist Manu Bhaker) ಪದಕ ಗೆದ್ದು ಭಾರತೀಯರ ಮನಗೆದ್ದ ಮನು ಭಾಕರ್(Manu Bhaker) ಇದೀಗ ಮತ್ತೊಮ್ಮೆ ಭಾರತೀಯರ ಹೃದಯ ಗೆದ್ದಿದ್ದಾರೆ. ಅವರು ಭಾರತದ ರಾಷ್ಟ್ರಗೀತೆಯನ್ನು ವಯಲಿನ್‌ ಮೂಲಕ ನುಡಿಸಿದ ವಿಡಿಯೊವೊಂದು ವೈರಲ್ ಆಗಿದೆ.

ವೈರಲ್​ ಆಗುತ್ತಿರುವ ವಿಡಿಯೊದಲ್ಲಿ ಮನು ಭಾಕರ್​ ಅವರು ಸ್ವಿಮ್ಮಿಂಗ್‌ ಪೂಲ್‌ ಬಳಿ ಕುಳಿತು ವಯಲಿನ್‌ ಮೂಲಕ ರಾಷ್ಟ್ರಗೀತೆ ಜನ ಗಣ ಮನವನ್ನು ಬಹಳ ಇಂಪಾಗಿ ನುಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವರದಿಯಾದ ಪ್ರಕಾರ ಮನು ಕಂಚಿನ ಪದಕ ಗೆದ್ದ ಬಳಿಕ ವಯಲಿನ್‌ ನಡಿಸಿದ್ದು ಎನ್ನಲಾಗಿದೆ. ಆದರೆ, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು. ಇಂದು ನಡೆಯುವ 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ(Paris Olympics) ಸರಬ್ಜೊತ್‌ ಸಿಂಗ್‌ ಜತೆ ಕಂಚಿನ ಪದಕದ ಪ್ಲೇ ಆಫ್ ಸುತ್ತಿನಲ್ಲಿ ಮನು ಕಣಕ್ಕಿಳಿಯಲಿದ್ದಾರೆ. ಭಾರತದ ಈ ಜೋಡಿ ಕೊರಿಯಾದ ಒಹ್‌ ಯೆ ಜಿನ್‌-ಲೀ ವೊನ್ಹೊ ವಿರುದ್ಧ ಸ್ಪರ್ಧೆಗೆ ಇಳಿಯಲಿದ್ದಾರೆ.

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಇದು ಅವರ ಪದಾರ್ಪಣ ಒಲಿಂಪಿಕ್ಸ್​ ಕೂಟವಾಗಿತ್ತು. ಆಗ ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು. ಅಂದಿನ ನಿರಾಸೆಯನ್ನು ಈ ಬಾರಿ ಪ್ಯಾರಿಸ್​ನಲ್ಲಿ ಪದಕ ಗೆಲ್ಲುವ ಮೂಲಕ ನೀಗಿಸಿಕೊಂಡರು.

ಇದನ್ನೂ ಓದಿ Paris Olympics: ಮನು ಭಾಕರ್​-ಸರಬ್ಜೊತ್‌ ಸಿಂಗ್​ ಕಂಚಿನ ನಿರೀಕ್ಷೆ; ಭಾರತದ ಇಂದಿನ ಸ್ಪರ್ಧೆಗಳ ವಿವರ ಹೀಗಿದೆ

ಹರಿಯಾಣದ 22 ವರ್ಷದ ಮನು ಭಾಕರ್​ ಕಳೆದ ಅರ್ಹತಾ ಸುತ್ತಿನಲ್ಲಿ ಒಟ್ಟು 580 ಅಂಕ ಕಲೆ ಹಾಕಿ 3ನೇ ಸ್ಥಾನದೊಂದಿಗೆ ಫೈನಲ್​ಗೆ ಪ್ರವೇಶಿಸಿದ್ದರು. ಈ ಬಾರಿಯ ಒಲಿಂಪಿಕ್ಸ್​ ಪದಕ ನಿರೀಕ್ಷೆಯ ಕ್ರೀಡಾಪಟುಗಳಲ್ಲಿ ಮನು ಭಾಕರ್​ ಕೂಡ ಕಾಣಿಸಿಕೊಂಡಿದ್ದರು. ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಪದಕ ಗೆದ್ದು ಅವರ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.

Continue Reading

ಕ್ರೀಡೆ

SL vs IND 3rd T20I: ಇಂದು ಅಂತಿಮ ಟಿ20; ವೈಟ್‌ವಾಶ್‌ ಭೀತಿಯಿಂದ ಪಾರಾದೀತೇ ಶ್ರೀಲಂಕಾ?

SL vs IND 3rd T20I: ನೂತನ ನಾಯಕ ಸೂರ್ಯಕುಮಾರ್​ ಯಾದವ್​ ತಮ್ಮ ಎಂದಿನ ಹೊಡಿಬಡಿ ಶೈಲಿಯಲ್ಲೇ ಬ್ಯಾಟಿಂಗ್​ ನಡೆಸುತ್ತಾ ತಂಡಕ್ಕೆ ನೆರವಾಗುತ್ತಿದ್ದಾರೆ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಕೂಡ ಉತ್ತಮ ಬ್ಯಾಟಿಂಗ್​ ಲಯದಲ್ಲಿದ್ದಾರೆ.

VISTARANEWS.COM


on

SL vs IND 3rd T20I
Koo

ಪಲ್ಲೆಕೆಲೆ: ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿರುವ ಭಾರತ, ಅಂತಿಮ ಪಂದ್ಯವನ್ನು(SL vs IND 3rd T20I) ಆಡಲು ಸಜ್ಜಾಗಿದೆ. ಇತ್ತಂಡಗಳ ಈ ಅಂತಿಮ ಮುಖಾಮುಖಿ ಇಂದು(ಮಂಗಳವಾರ) ನಡೆಯಲಿದೆ. ಈ ಪಂದ್ಯವನ್ನು ಗೆದ್ದು ವೈಟ್‌ವಾಶ್‌ ಸಾಧಿಸುವುದು ಭಾರತದ ಗುರಿ.

ಭಾನುವಾರ ನಡೆದಿದ್ದ ದ್ವಿತೀಯ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತ್ತು. ಇದೀಗ ಇಂದು ನಡೆಯುವ ಪಂದ್ಯಕ್ಕೂ ಭಾರೀ ಮಳೆ ಮುನ್ಸೂಚನೆ ಇದೆ. ಕಳೆದ ಮಳೆಪೀಡಿತ ದ್ವಿತೀಯ ಪಂದ್ಯವನ್ನು ಭಾರತ 7 ವಿಕೆಟ್‌ಗಳಿಂದ ಗೆದ್ದು ಸರಣಿ ಗೆಲುವು ಸಾಧಿಸಿತ್ತು. ಯುವ ಭಾರತ ತಂಡ ಎಲ್ಲ ವಿಭಾಗಗಳಲ್ಲೂ ಬಲಿಷ್ಠವಾಗಿ ಗೋಚರಿಸಿದೆ. ಆದರೆ, ಸಂಜು ಸ್ಯಾಮ್ಸನ್​ ತಮಗೆ ಸಿಕ್ಕ ಅವಕಾಶವನ್ನು ಮತ್ತೆ ಕೈಚೆಲ್ಲಿದ್ದಾರೆ. ಕಳೆದ ಪಂದ್ಯಲ್ಲಿ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದ್ದರು. ಒಂದೊಮ್ಮೆ ಅಂತಿಮ ಪಂದ್ಯದಲ್ಲಿಯೂ ಆಡುವ ಅವಕಾಶ ಸಿಕ್ಕಿ ಇದನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲರಾದರೆ ಮತ್ತೆ ಅವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಕಷ್ಟಸಾಧ್ಯ.

ಇದನ್ನೂ ಓದಿ Paris Olympics: ಮನು ಭಾಕರ್​-ಸರಬ್ಜೊತ್‌ ಸಿಂಗ್​ ಕಂಚಿನ ನಿರೀಕ್ಷೆ; ಭಾರತದ ಇಂದಿನ ಸ್ಪರ್ಧೆಗಳ ವಿವರ ಹೀಗಿದೆ

ನೂತನ ನಾಯಕ ಸೂರ್ಯಕುಮಾರ್​ ಯಾದವ್​ ತಮ್ಮ ಎಂದಿನ ಹೊಡಿಬಡಿ ಶೈಲಿಯಲ್ಲೇ ಬ್ಯಾಟಿಂಗ್​ ನಡೆಸುತ್ತಾ ತಂಡಕ್ಕೆ ನೆರವಾಗುತ್ತಿದ್ದಾರೆ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಕೂಡ ಉತ್ತಮ ಬ್ಯಾಟಿಂಗ್​ ಲಯದಲ್ಲಿದ್ದಾರೆ. ಬೌಲಿಂಗ್​ನಲ್ಲಿ ಮೊಹಮ್ಮದ್​ ಸಿರಾಜ್​ ಹೊರತುಪಡಿಸಿ ಉಳಿದೆಲ್ಲ ಬೌಲರ್​ಗಳು ಸಂಘಟಿತ ಪ್ರದರ್ಶನ ತೋರುತ್ತಿದ್ದಾರೆ. ಸಿರಾಜ್​ ಆಡಿದ 2 ಪಂದ್ಯಗಳಲ್ಲಿಯೂ ಸರಿಯಾಗಿ ದಂಡಿಸಿಕೊಂಡಿದ್ದರು. ಹೀಗಾಗಿ ಅವರನ್ನು ಈ ಪಂದ್ಯದಿಂದ ಕೈಬಿಟ್ಟು ಖಲೀಲ್ ಅಹ್ಮದ್ ಅವರನ್ನು ಆಡಿಸುವ ಸಾಧ್ಯತೆ ಇದೆ. ಏಕದಿನ ಸರಣಿ ಆಡುವ ನಿಟ್ಟಿನಲ್ಲಿ ಗಿಲ್​ಗೆ ಈ ಪಂದ್ಯಕ್ಕೆ ವಿಶ್ರಾಂತಿ ನೀಡಬಹುದು. ಕುತ್ತಿಗೆ ನೋವಿಗೊಳಗಾಗಿದ್ದ ಕಾರಣ ಗಿಲ್​ ದ್ವಿತೀಯ ಪಂದ್ಯದಿಂದ ಹೊರಗುಳಿದಿದ್ದರು.

ಸಂಭಾವ್ಯ ತಂಡಗಳು


ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೀ), ಕುಸಲ್ ಪೆರೇರಾ, ಕಮಿಂದು ಮೆಂಡಿಸ್, ಚರಿತ್ ಅಸಲಂಕ (ನಾಯಕ), ದಸುನ್ ಶನಕ, ವನಿಂದು ಹಸರಂಗ, ರಮೇಶ್ ಮೆಂಡಿಸ್, ಮಹೀಶ್ ತೀಕ್ಷಣ, ಮತೀಶ ಪತಿರಣ, ಅಸಿತ ಫೆರ್ನಾಂಡೊ.

ಭಾರತ: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಭ್ ಪಂತ್ (ವಿಕೀ), ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ಅಕ್ಷರ್​ ಪಟೇಲ್, ಅರ್ಶದೀಪ್​ ಸಿಂಗ್, ರವಿ ಬಿಷ್ಣೋಯ್, ಖಲೀಲ್​ ಅಹ್ಮದ್​.

ಅಭ್ಯಾಸ ಆರಂಭಿಸಿದ ರೋಹಿತ್‌, ಕೊಹ್ಲಿ


ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಭಾರತ ತಂಡ ಲಂಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಆಗಸ್ಟ್​ 2ರಂದು ಮೊದಲ ಪಂದ್ಯ ನಡೆಯಲಿದೆ. ಈ ಸರಣಿಯನ್ನಾಡಲು ನಾಯಕ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಕೆ,ಎಲ್​ ರಾಹುಲ್​, ಜಸ್​ಪ್ರೀತ್​ ಬುಮ್ರಾ ಸೇರಿ ಕೆಲ ಆಟಗಾರರು ಈಗಾಗಲೇ ಲಂಕಾ ತಲುಪಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ. ಭಾರತದ ಏಕದಿನ ತಂಡದ ಸದಸ್ಯರು ಭಾನುವಾರ ಕೊಲಂಬೊಗೆ ಆಗಮಿಸಿದ್ದರು.

Continue Reading

ಕ್ರೀಡೆ

IPL 2025: ಆರ್​ಸಿಬಿ ಇನ್​ಸ್ಟಾಗ್ರಾಮ್​ ಖಾತೆ ಅನ್​ಫಾಲೋ ಮಾಡಿದ ಮ್ಯಾಕ್ಸ್​ವೆಲ್; ಕಾರಣವೇನು?

IPL 2025: ಈ ಬಾರಿಯ ಆವೃತ್ತಿಯಲ್ಲಿ ಮ್ಯಾಕ್ಸ್​ವೆಲ್​ ಆರ್​ಸಿಬಿ ಪರ ಅತ್ಯಂತ ಕಳಪೆ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆಡಿದ 10 ಪಂದ್ಯಗಳಲ್ಲಿ ಗಳಿಸಿದ್ದು ಕೇಲವ 52 ರನ್​ ಮಾತ್ರ. ಹೀಗಾಗಿ ಈ ಬಾರಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಅಸಾಧ್ಯ.

VISTARANEWS.COM


on

IPL 2025
Koo

ಬೆಂಗಳೂರು: ಮುಂದಿನ ಆವೃತ್ತಿಯ ಐಪಿಎಲ್(IPL 2025)​ ಆರಂಭಕ್ಕೂ ಮುನ್ನ ಆಟಗಾರರ ಮೆಗಾ ಹರಾಜು(IPL Mega Auction 2025) ನಡೆಯಲಿದೆ. ಡಿಸೆಂಬರ್​ನಲ್ಲಿ ಈ ಹರಾಜು ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಎಲ್ಲ ಫ್ರಾಂಚೈಸಿಗಳು ಬಿಸಿಸಿಐ ಜತೆ ನಾಳೆ(ಬುಧವಾರ) ಸಭೆ ನಡೆಸಲಿದ್ದು ಎಷ್ಟು ಆಟಗಾರರನ್ನು ರೀಟೈನ್​ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಿದೆ ಎನ್ನಲಾಗಿದೆ. ಈಗಾಗಲೇ ಆರ್​ಸಿಬಿ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಂಡು ಉಳಿದೆಲ್ಲ ಆಟಗಾರರನ್ನು ತಂಡದಿಂದ ಕೈ ಬಿಡಲಿದೆ ಎಂದು ವರದಿಯಾದೆ. ಇದರ ಬೆನ್ನಲ್ಲೇ ಆರ್​ಸಿಬಿ ಆಟಗಾರ ಗ್ಲೆನ್​ ಮ್ಯಾಕ್ಸ್​ವೆಲ್(Glenn Maxwell)​ ಅವರು ಆರ್​ಸಿಬಿ(RCB) ಇನ್​ಸ್ಟಾಗ್ರಾಮ್​(RCB On Instagram) ಖಾತೆಯನ್ನು ಅನ್​ಫಾಲೋ ಮಾಡಿದ್ದಾರೆ.

ಮೂಲಗಳ ಪ್ರಕಾರ ಆರ್​ಸಿಬಿ ವಿರಾಟ್​ ಕೊಹ್ಲಿ, ಇಂಗ್ಲೆಂಡ್​ನ ವಿಲ್ ಜಾಕ್ಸ್​ ಮತ್ತು ಮೊಹಮ್ಮದ್​ ಸಿರಾಜ್​ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ. ನಾಯಕ ಫಾಫ್​ ಡು ಪ್ಲೆಸಿಸ್, ಕ್ಯಾಮರೂನ್​ ಗ್ರೀನ್​ ಸೇರಿ ಉಳಿದೆಲ್ಲ ಆಟಗಾರರನ್ನು​ ಕೂಡ ಕೈಬಿಡಲಿದೆ ಎಂದು ಮೂಲಗಳು 2 ದಿನಗಳ ಹಿಂದೆ ಮಾಹಿತಿ ನೀಡಿತ್ತು. ಈ ಬೆಳವಣಿಗೆ ಕಂಡು ಬಂದ ಬೆನ್ನಲ್ಲೇ ಗ್ಲೆನ್​ ಮ್ಯಾಕ್ಸ್​ವೆಲ್​ ಆರ್​ಸಿಬಿಯ ಅಧಿಕೃತ ​ಸ್ಟಾಗ್ರಾಮ್​ ಖಾತೆಯನ್ನು ಅನ್​ಫಾಲೋ ಮಾಡಿದ್ದಾರೆ. ಇದನ್ನು ನೋಡುವಾಗ ಮ್ಯಾಕ್ಸ್​ವೆಲ್​ಗೆ ಆರ್​ಸಿಬಿಯಿಂದ ಗೇಟ್​ ಪಾಸ್​ ಸಿಕ್ಕಿರುವುದು ಬಹುತೇಕ ಖಚಿತ ಎನ್ನುವಂತಿದೆ.

ಈ ಬಾರಿಯ ಆವೃತ್ತಿಯಲ್ಲಿ ಮ್ಯಾಕ್ಸ್​ವೆಲ್​ ಆರ್​ಸಿಬಿ ಪರ ಅತ್ಯಂತ ಕಳಪೆ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆಡಿದ 10 ಪಂದ್ಯಗಳಲ್ಲಿ ಗಳಿಸಿದ್ದು ಕೇಲವ 52 ರನ್​ ಮಾತ್ರ. ಹೀಗಾಗಿ ಈ ಬಾರಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಅಸಾಧ್ಯ.

ಆರ್​ಸಿಬಿ ಸೇರಲಿದ್ದಾರಾ ರಾಹುಲ್​?


ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ಬೇಸರಗೊಂಡಿರುವ ಕೆ.ಎಲ್​ ರಾಹುಲ್ ಈ ಬಾರಿ ಲಕ್ನೋ ತಂನಡ ತೊರೆಯುವುದು ಖಚಿತವಾಗಿದೆ. ಮೂಲಗಳ ಪ್ರಕಾರ ಅವರು ಆರ್​ಸಿಬಿ ತಂಡ ಸೇರಲಿದ್ದಾರೆ ಎನ್ನಲಾಗಿದೆ. ಆರ್​ಸಿಬಿ ಪರ ಆಡುವುದು ಕೂಡ ಅವರ ಬಯಕೆಯಾಗಿದೆ. ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆ.ಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. 

ಇದನ್ನೂ ಓದಿ IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರಮುಖ ಬೇಡಿಕೆ ಮುಂದಿಟ್ಟ ಫ್ರಾಂಚೈಸಿಗಳು

ಕಳೆದ ಮೂರು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ. ಈ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ಮೂಲಕ 700ಕ್ಕೂ ಅಧಿಕ ರನ್​ ಕಲೆ ಹಾಕಿ ಟೂರ್ನಿಯ ಅತ್ಯಧಿಕ ಸ್ಕೋರ್​ ಎನಿಸಿಕೊಂಡಿದ್ದರು.

Continue Reading
Advertisement
Road Accident
ತುಮಕೂರು4 mins ago

Road Accident : ತುಮಕೂರಿನಲ್ಲಿ ಕಾರು-ಬೈಕ್‌ ಅಪಘಾತ; ಮಗಳು, ಮೊಮ್ಮಗಳ ಕಣ್ಣೇದುರೇ ಪ್ರಾಣಬಿಟ್ಟ ತಂದೆ

physical abuse
ದೇಶ5 mins ago

Physical Abuse: 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಭೀಕರ ಘಟನೆ ಬಳಿಕ ಮಹಿಳೆ ಸಾವು

Kerala Cyclist Reaches Paris
ಕ್ರೀಡೆ26 mins ago

Kerala Cyclist Reaches Paris: ನೀರಜ್​ ಚೋಪ್ರಾಗೆ ಬೆಂಬಲ ಸೂಚಿಸಲು ಬರೋಬ್ಬರಿ 22 ಸಾವಿರ ಕಿ.ಮೀ ಸೈಕಲ್​ ತುಳಿದು ಪ್ಯಾರಿಸ್​ ತಲುಪಿದ ಕೇರಳದ ಅಭಿಮಾನಿ

Gold Rate Today
ಚಿನ್ನದ ದರ27 mins ago

Gold Rate Today: ಆಭರಣ ಖರೀದಿಗೆ ಗೋಲ್ಡನ್‌ ಟೈಮ್‌; ಮತ್ತೆ ಇಳಿಮುಖವಾದ ಚಿನ್ನದ ದರ

murder case
ತುಮಕೂರು53 mins ago

Murder Case : ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

ITR Filing
ವಾಣಿಜ್ಯ58 mins ago

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯ ದಿನಾಂಕ 1 ತಿಂಗಳು ವಿಸ್ತರಣೆಗೆ ಮನವಿ

Brutal Murder
ದೇಶ1 hour ago

Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Actor Darshan
ಪ್ರಮುಖ ಸುದ್ದಿ1 hour ago

Actor Darshan: ದರ್ಶನ್‌ ಸೆಲ್‌ ಭದ್ರತೆಗೆ 7 ಜನ ಸಿಬ್ಬಂದಿ ನಿಯೋಜನೆ! ಕಾರಣ ಇದು

Train Accident
ದೇಶ2 hours ago

Train Accident: ಹೌರಾ-ಮುಂಬೈ ಮೇಲ್​ ಎಕ್ಸ್​ಪ್ರೆಸ್​​ ರೈಲು ಹಳಿ ತಪ್ಪಿ ದುರಂತ; ಸಾವಿನ ಸಂಖ್ಯೆ 2ಕ್ಕೆ ಏರಿಕೆ

Manu Bhaker
ಕ್ರೀಡೆ2 hours ago

Manu Bhaker: ವಯಲಿನ್‌ ಮೂಲಕ ರಾಷ್ಟ್ರಗೀತೆ ನುಡಿಸಿದ ಮನು ಭಾಕರ್; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ18 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ19 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ22 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌