Kusal Perera: ವೇಗದ ಅರ್ಧಶತಕ ಬಾರಿಸಿ ದಾಖಲೆ ಬರೆದ ಕುಸಾಲ್ ಪೆರೇರಾ - Vistara News

ಕ್ರಿಕೆಟ್

Kusal Perera: ವೇಗದ ಅರ್ಧಶತಕ ಬಾರಿಸಿ ದಾಖಲೆ ಬರೆದ ಕುಸಾಲ್ ಪೆರೇರಾ

ಕುಸಾಲ್ ಪೆರೇರಾ ಅವರು ನ್ಯೂಜಿಲ್ಯಾಂಡ್​ ವಿರುದ್ಧದ ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ.

VISTARANEWS.COM


on

Kusal Perera
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನ್ಯೂಜಿಲ್ಯಾಂಡ್​ ವಿರುದ್ಧ ಸಾಗುತ್ತಿರುವ ವಿಶ್ವಕಪ್​ನ 41ನೇ ಪಂದ್ಯದಲ್ಲಿ ಶ್ರೀಲಂಕಾದ ಕುಸಾಲ್ ಪೆರೇರಾ(Kusal Perera) ಹಾಲಿ ಆವೃತ್ತಿಯ ವಿಶ್ವಕಪ್​ನಲ್ಲಿ(Fastest fifties in ODI World Cup 2023) ಅತಿ ವೇಗದ ಅರ್ಧಶತಕ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ(M.Chinnaswamy Stadium, Bengaluru) ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಲಂಕಾ ನಾಟಕೀಯ ಕುಸಿತ ಕಂಡು ಸಂಕಷ್ಟದಲ್ಲಿದೆ. ತಂಡಕ್ಕೆ ಆಸರೆಯಾದದ್ದು ಕುಸಾಲ್ ಪೆರೇರಾ ಮಾತ್ರ ಅವರು ಕಿವೀಸ್​ ಬೌಲರ್​ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿ ಕೇವಲ 22 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು. ಈ ಮೂಲಕ ಪ್ರಸಕ್ತ ವಿಶ್ವಕಪ್​ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಆಟಗಾರ ಎನಿಸಿಕೊಂಡರು. ಇದೇ ಆವೃತ್ತಿಯಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದ ಟ್ರಾವಿಸ್​ ಹೆಡ್​ ಅವರ ದಾಖಲೆ ಪತನಗೊಂಡಿತು.

ಕುಸಾಲ್ ಪೆರೇರಾ 22 ಎಸೆತಗಳಿಂದ ಅರ್ಧಶತಕ ಪೂರೈಸಿದರೂ, ಆ ಬಳಿಕದ 6 ಎಸೆತದಲ್ಲಿ ರನ್​ ಗಳಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 28 ಎಸೆತ ಎದುರಿಸಿದ 51 ರನ್​ಗೆ ವಿಕೆಟ್​ ಕೈಚೆಲ್ಲಿದರು. ಈ ವಿಕೆಟ್​ ಫರ್ಗ್ಯುಸನ್​ ಪಾಲಾಯಿತು. ಅವರ ಈ ಅರ್ಧಶತಕದ ಇನಿಂಗ್ಸ್​ನಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್​ ದಾಖಲಾಯಿತು.

ಇದನ್ನೂ ಓದಿ ಹಾಲಿ ಚಾಂಪಿಯನ್ ಇಂಗ್ಲೆಂಡ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಭಾರಿ ಬದಲಾವಣೆ

ಹಾಲಿ ವಿಶ್ವಕಪ್​ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಆಟಗಾರರು

ಕುಸಾಲ್ ಪೆರೇರಾ(22 ಎಸೆತ, ನ್ಯೂಜಿಲ್ಯಾಂಡ್​ ವಿರುದ್ಧ)

ಟ್ರಾವಿಸ್​ ಹೆಟ್​(25 ಎಸೆತ, ನ್ಯೂಜಿಲ್ಯಾಂಡ್​ ವಿರುದ್ಧ)

ಕುಸಲ್​ ಮೆಂಡೀಸ್​(25 ಎಸೆತ, ದಕ್ಷಿಣ ಆಫ್ರಿಕಾ ವಿರುದ್ಧ)

ವಿಶ್ವಕಪ್​ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಸಾಧಕರು

ಬ್ರೆಂಡನ್ ಮೆಕಲಮ್​: 2015ರಲ್ಲಿ ವೆಲ್ಲಿಂಗ್ಟನ್​ನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ 18 ಎಸೆತಗಳಲ್ಲಿ ಅರ್ಧಶಕ ಬಾರಿಸಿದ್ದರು. ಸದ್ಯ ಇದುವರೆಗಿನ ವಿಶ್ವಕಪ್​ ಇತಿಹಾಸದಲ್ಲಿ ಇದು ದಾಖಲೆಯಾಗಿಯೇ ಉಳಿದಿದೆ. ಇದಕ್ಕೂ ಮುನ್ನ 2007ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಕೆನಡಾ ವಿರುದ್ಧ ಇವರು 20 ಎಸೆತದಲ್ಲಿ ಅರ್ಧಶತಕ ಬಾರಿಸಿದ್ದರು.

ಏಂಜಲೋ ಮ್ಯಾಥ್ಯೂಸ್​: ಶ್ರೀಲಂಕಾದ ಅನುಭವಿ ಮತ್ತು ಹಿರಿಯ ಆಲ್​ ರೌಂಡರ್​ ಏಂಜಲೋ ಮ್ಯಾಥ್ಯೂಸ್ ಅವರು 2015ರ ವಿಶ್ವಕಪ್​ ಟೂರ್ನಿಯಲ್ಲಿ ಸ್ಕಾಟ್ಲೆಂಡ್​ ವಿರುದ್ಧ 20 ಎಸೆತದಲ್ಲಿ ಅರ್ಧಶತಕ ಬಾರಿಸಿದ್ದರು.

ಅತಿ ವೇಗದ ವಿಶ್ವಕಪ್​ ಶತಕ

ವಿಶ್ವಕಪ್​ ಟೂರ್ನಿಯಲ್ಲಿ ಅತಿ ವೇಗದ ಶತಕ ಬಾರಿಸಿದ ವಿಶ್ವ ದಾಖಲೆ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್​ವೆಲ್​ ಹೆಸರಿನಲ್ಲಿದೆ. ಅವರು ಇದೇ ಟೂರ್ನಿಯಲ್ಲಿ ಈ ದಾಖಲೆಯನ್ನು ಬರೆದಿದ್ದರು. 40 ಎಸೆತಗಳಿಂದ ಶತಕ ಬಾರಿಸಿದ್ದರು. ದಕ್ಷಿಣ ಆಫ್ರಿಕಾದ ಮಧ್ಯಮ ಕ್ರಮಾಂಕದ ಆಟಗಾರ ಐಡೆನ್​ ಮಾರ್ಕ್ರಮ್​ ಅವರು 49 ಎಸೆತಗಳಿಂದ ಶತಕ ಬಾರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ. 2015ರ ವಿಶ್ವಕಪ್​ನಲ್ಲಿ 51 ಎಸೆತಗಳಿಂದ ಮ್ಯಾಕ್ಸ್​ವೆಲ್​ ಶತಕ ಬಾರಿಸಿದ್ದರು.

ಇದನ್ನೂ ಓದಿ IND vs PAK: ಭಾರತ-ಪಾಕ್​ ಸೆಮಿಫೈನಲ್​ ಪಂದ್ಯಕ್ಕಿಂತ ದೊಡ್ಡ ಪಂದ್ಯ ಇನ್ನೊಂದಿಲ್ಲ; ಗಂಗೂಲಿ​ ವಿಶ್ವಾಸ

ಏಕದಿನ ಕ್ರಿಕೆಟ್​ನಲ್ಲಿ ಅತಿ ವೇಗದ ಶತಕ

ಏಕದಿನ ಕ್ರಿಕೆಟ್​ನಲ್ಲಿ ಅತಿ ವೇಗದ ಶತಕ ಬಾರಿಸಿದ ದಾಖಲೆ ದಕ್ಷಿಣ ಆಫ್ರಿಕಾ ತಂಡದ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್​ ಹೆಸರಿನಲ್ಲಿದೆ ಅವರು 2015ರಲ್ಲಿ ನಡೆದ ವೆಸ್ಟ್​ ಇಂಡೀಸ್​ ವಿರುದ್ಧದ ಪಂದ್ಯದಲ್ಲಿ 31 ಎಸೆತಗಳಲ್ಲಿ ಶತಕ ಬಾರಿಸಿದ್ದರು. 36 ಎಸೆತಗಳಿಂದ ಶತಕ ಬಾರಿಸಿದ ನ್ಯೂಜಿಲ್ಯಾಂಡ್​ನ ಕೋರಿ ಆ್ಯಂಡರ್ಸನ್​ ದ್ವಿತೀಯ ಸ್ಥಾನದಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

Team India: ತಂಡವು ವಿಮಾನ ನಿಲ್ದಾಣಕ್ಕೆ ಬಂದಾಗ ವಿಶ್ವಕಪ್ ವಿಜೇತರನ್ನು ಸ್ವಾಗತಿಸಲು ನೂರಾರು ಅಭಿಮಾನಿಗಳು ಮಳೆಯನ್ನು ಲೆಕ್ಕಿಸದೆ ವಿಮಾನ ನಿಲ್ದಾಣದ ಹೊರಗೆ ಸಾಲುಗಟ್ಟಿ ನಿಂತಿದ್ದರು. ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಲು ಮುಂಬೈಗೆ ತೆರಳುವ ಮೊದಲು ಭಾರತ ತಂಡವು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ನಿವಾಸದಲ್ಲಿ ಸಮಯ ಕಳೆಯಿತು.

VISTARANEWS.COM


on

Team India
Koo

ಮುಂಬಯಿ: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ (T20 World Cup) ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾದ (Team India) ವಿಜಯೋತ್ಸವ ಮುಗಿಲು ಮುಟ್ಟುತ್ತಿದೆ. ಗುರುವಾರ ಬೆಳಗ್ಗೆ ಡೆಲ್ಲಿಗೆ ಬಂದ ಅವರು ಪ್ರಧಾನಿ ಮೋದಿಯವರ ಆತಿಥ್ಯ ಸ್ವೀಕರಿಸಿದ್ದಾರೆ. ಬಳಿಕ ಆಟಗಾರರು ಮುಂಬಯಿಗೆ ಬಂದರು. ವಿಶೇಷ ವಿಮಾನದಲ್ಲಿ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದ ಅವರಿಗೆ ಇನ್ನಷ್ಟು ದೊಡ್ಡ ಗೌರವ ದೊರಕಿತು. ವಿಮಾನ ನಿಲ್ದಾಣದಲ್ಲಿ ಅವರ ವಿಮಾನಕ್ಕೆ ವಾಟರ್​ಜೆಟ್​ ಸೆಲ್ಯೂಟ್ ಹೊಡೆಯಲಾಯಿತು. ಅದೇ ರೀತಿ ಅವರ ವಿಮಾನವನ್ನು ಭಾರತದ ಧ್ವಜವನ್ನು ಹೊಂದಿರುವ ಜೀಪ್​ಗಳ ಮೂಲಕ ಪಾರ್ಕಿಂಗ್​ ಬೇ ತನಕ ಕರೆದುಕೊಂಡು ಬರಲಾಯಿತು. ಇಂಥ ಗೌರವಗಳು ಸಿಗುವುದು ಅಪರೂಪಕ್ಕೆ ಅಪರೂಪ ಎಂಬುದು ವಿಶೇಷ. ಇಂಥ ವಿಶೇಷ ಗೌರವವನ್ನು ಅವರು ಪಡೆದುಕೊಂಡರು.

ತಂಡವು ವಿಮಾನ ನಿಲ್ದಾಣಕ್ಕೆ ಬಂದಾಗ ವಿಶ್ವಕಪ್ ವಿಜೇತರನ್ನು ಸ್ವಾಗತಿಸಲು ನೂರಾರು ಅಭಿಮಾನಿಗಳು ಮಳೆಯನ್ನು ಲೆಕ್ಕಿಸದೆ ವಿಮಾನ ನಿಲ್ದಾಣದ ಹೊರಗೆ ಸಾಲುಗಟ್ಟಿ ನಿಂತಿದ್ದರು. ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಲು ಮುಂಬೈಗೆ ತೆರಳುವ ಮೊದಲು ಭಾರತ ತಂಡವು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ನಿವಾಸದಲ್ಲಿ ಸಮಯ ಕಳೆಯಿತು.

ಬಳಿಕ ವಿಸ್ತಾರಾ ಏರ್​ಲೈನ್ಸ್​ ವಿಮಾನ ಯಾನ ಸಂಸ್ಥೆಯು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಗೌರವ ಸಲ್ಲಿಸಿದೆ. ಭಾರತೀಯ ತಂಡಕ್ಕೆ ನಿಯೋಜಿಸಲಾದ ವಿಮಾನವು ‘ಯುಕೆ 1845’ ಕೋಡ್​ ಹೊಂದಿತ್ತು. ಕೋಡ್ ರೋಹಿತ್ ಮತ್ತು ಕೊಹ್ಲಿಯ ಜೆರ್ಸಿ ಸಂಖ್ಯೆಗಳನ್ನು ಪ್ರತಿನಿಧಿಸುತ್ತದೆ. ವಿಶ್ವಕಪ್ ಫೈನಲ್ ಪಂದ್ಯದ ನಂತರ ರೋಹಿತ್ ಮತ್ತು ಕೊಹ್ಲಿ ಇಬ್ಬರೂ ಟಿ 20 ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದರು.

ಇದನ್ನೂ ಓದಿ: Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

ಮುಂಬೈನಲ್ಲಿ ವಿಸ್ತಾರಾ ವಿಮಾನದಿಂದ ಭಾರತೀಯ ತಂಡವು ಹೊರಬರುವ ಮೊದಲೇ, ವಿಮಾನಯಾನ ಸಂಸ್ಥೆ ಮತ್ತೊಂದು ವಿಶೇಷತೆ ತೋರಿತು/ ವಿಮಾನವು ವಿಮಾನ ನಿಲ್ದಾಣದಲ್ಲಿ ಇಳಿದ ಕೂಡಲೇ, ಭಾರತೀಯ ತಂಡಕ್ಕೆ ಅದ್ಭುತ ವಾಟರ್ ಸೆಲ್ಯೂಟ್ ನೀಡಲಾಯಿತು. ಈ ವಿಶೇಷ ಕ್ಷಣದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಟೀಮ್ ಇಂಡಿಯಾ ಮರೀನ್ ಡ್ರೈವ್​ನಿಂದ ವಾಂಖೆಡೆ ಕ್ರೀಡಾಂಗಣಕ್ಕೆ ಓಪನ್-ಟಾಪ್ ಬಸ್​ನಲ್ಲಿ ವಿಜಯದ ಮೆರವಣಿಗೆ ನಡೆಸಿತು. ಭಾರತ ತಂಡದ ಆಗಮನಕ್ಕೂ ಮೊದಲೇ ಸಾವಿರಾರು ಅಭಿಮಾನಿಗಳು ಬೀದಿಗಿಳಿದಿದ್ದರು. ವಾಂಖೆಡೆ ಸ್ಟೇಡಿಯಂ ಕೂಡ ಸಂಪೂರ್ಣ ಭರ್ತಿಯಾಗಿದೆ. ಮೆರವಣಿಗೆಯ ನಂತರ, ಬಿಸಿಸಿಐ ಕ್ರೀಡಾಂಗಣದಲ್ಲಿ ಭಾರತೀಯ ತಂಡವನ್ನು ಸನ್ಮಾನಿಸಲಿದೆ.

ಟಿ20 ವಿಶ್ವಕಪ್​​ನಲ್ಲಿ ಭಾರತ ತಂಡದ ಕನಸಿನ ಓಟ

2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಅವರು ಸ್ಪರ್ಧೆಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲಲಿಲ್ಲ. ಗುಂಪು ಹಂತದಲ್ಲಿ ಭಾರತವು ಐರ್ಲೆಂಡ್, ಪಾಕಿಸ್ತಾನ ಮತ್ತು ಯುಎಸ್ಎಗಳನ್ನು ಸೋಲಿಸಿದರೆ, ಕೆನಡಾ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು.

ಸೂಪರ್ 8ರರಲ್ಲಿ ಭಾರತ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯಾವನ್ನು ಸೋಲಿಸಿತು. ಬಾರ್ಬಡೋಸ್​​ನ ಲ್ಲಿ ನಡೆದ ಸೆಮಿ ಫೈನಲ್​ನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ 68 ರನ್​ಗಳ ಜಯ ಸಾಧಿಸಿದರೆ, ಬಾರ್ಬಡೋಸ್​ನಲ್ಲಿ ನಡೆದ ಫೈನಲ್​​ನಲ್ಲಿ ಮೆನ್ ಇನ್ ಬ್ಲೂ ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಐಸಿಸಿ ಟ್ರೋಫಿ ಮತ್ತು ಟಿ 20 ವಿಶ್ವಕಪ್​ಗೆ ಮರಳಿತು.

Continue Reading

ಪ್ರಮುಖ ಸುದ್ದಿ

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Hardik Pandya : ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​​ನಿಂd ಟೀಮ್ ಇಂಡಿಯಾ ಗುರುವಾರ ಬೆಳಿಗ್ಗೆ ನವದೆಹಲಿಗೆ ಬಂದಿಳಿದಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ನಂತರ, ಭಾರತೀಯ ತಂಡವು ನಾರಿಮನ್ ಪಾಯಿಂಟ್​ನಿಂದ ತೆರೆದ ಬಸ್​​ನಲ್ಲಿ ಮೆರವಣಿಗೆ ಮಾಡುವ ಮೂಲಕ ವಾಂಖೆಡೆ ಕ್ರೀಡಾಂಗಣಕ್ಕೆ ತೆರಳಿತು. ಈ ವೇಳೆ ಅಭಿಮಾನಿಗಳು ಭಾರತದ ಪ್ರಸಿದ್ಧ 2007 ಟಿ 20 ವಿಶ್ವಕಪ್ ಗೆಲುವಿನ ನೆನಪುಗಳನ್ನು ಮರುಸೃಷ್ಟಿಸಿದರು.

VISTARANEWS.COM


on

Hardik Pandya
Koo

ಮುಂಬಯಿ: ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ನಡೆದ ವಿಶ್ವ ಕಪ್ ವಿಜೇತ ಭಾರತ ತಂಡಕ್ಕೆ ವಿಶೇಷ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಭಾರತ ತಂಡದ ಆಟಗಾರರಿಗೆ ಅಭಿಮಾನಿಗಳು ಜೈಕಾರ ಕೂಗಿದರು. ಈ ವೇಳೆ ವಿಶೇಷ ಅನಿಸಿದ್ದು ಹಾರ್ದಿಕ್ ಪಾಂಡ್ಯ. (Hardik Pandya) ಯಾಕೆಂದರೆ ಇದೇ ಸ್ಟೇಡಿಯಮ್​ನಲ್ಲಿ ಅವರು ಐಪಿಎಲ್​ ವೇಳೆ ಪ್ರೇಕ್ಷಕರಿಂದ ಲೇವಡಿಗೆ ಒಳಗಾಗಿದ್ದರು. ಅಲ್ಲೇ ಅವಮಾನದಿಂದ ಕುಸಿದಿದ್ದರು. ಅವರಿಂದಲೇ ಈಗ ಹಾರ್ದಿಕ್ ಜೈಕಾರ ಹಾಕಿಸಿಕೊಂಡು ಸಮಾಧಾನ ಮಾಡಿಕೊಂಡಿದ್ದಾರೆ.

ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​​ನಿಂd ಟೀಮ್ ಇಂಡಿಯಾ ಗುರುವಾರ ಬೆಳಿಗ್ಗೆ ನವದೆಹಲಿಗೆ ಬಂದಿಳಿದಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ನಂತರ, ಭಾರತೀಯ ತಂಡವು ನಾರಿಮನ್ ಪಾಯಿಂಟ್​ನಿಂದ ತೆರೆದ ಬಸ್​​ನಲ್ಲಿ ಮೆರವಣಿಗೆ ಮಾಡುವ ಮೂಲಕ ವಾಂಖೆಡೆ ಕ್ರೀಡಾಂಗಣಕ್ಕೆ ತೆರಳಿತು. ಈ ವೇಳೆ ಅಭಿಮಾನಿಗಳು ಭಾರತದ ಪ್ರಸಿದ್ಧ 2007 ಟಿ 20 ವಿಶ್ವಕಪ್ ಗೆಲುವಿನ ನೆನಪುಗಳನ್ನು ಮರುಸೃಷ್ಟಿಸಿದರು.

ಟಿ 20 ವಿಶ್ವಕಪ್​ನಲ್ಲಿ ಐರ್ಲೆಂಡ್ ವಿರುದ್ಧ ಭಾರತದ ಮೊದಲ ಪಂದ್ಯದೊಂದಿಗೆ ಪ್ರಾರಂಭವಾದ ಅಭಿಯಾನ ಮುಂಬೈನಲ್ಲಿ ತೆರೆದ ಬಸ್​ನಲ್ಲಿ ನಡೆದ ಮೆರವಣಿಗೆಯೊಂದಿಗೆ ಕೊನೆಗೊಂಡಿತು. ಆಟಗಾರರು ವಾಂಖೆಡೆ ಕ್ರೀಡಾಂಗಣ ತಲುಪುವ ಮೊದಲು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ತಮ್ಮ ಹೀರೋಗಳನ್ನು ಸ್ವಾಗತಿಸಿದರು.

ಈ ಮಧ್ಯೆ ವಾಂಖೆಡೆ ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳು ಹಾರ್ದಿಕ್ ಪಾಂಡ್ಯ ಹೆಸರನ್ನು ಕೂಗಿದರು. ಪಾಂಡ್ಯ ತಮ್ಮ ಅಂತಿಮ ಓವರ್​​ನಲ್ಲಿ 16 ರನ್ ಗಳನ್ನು ಕಾಪಾಡಿಕೊಂಡು ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು. ಅವರು ಡೇವಿಡ್ ಮಿಲ್ಲರ್ ಅವರ ಪ್ರಮುಖ ವಿಕೆಟ್ ಪಡೆದಿದ್ದರು.

ಇದನ್ನೂ ಓದಿ: Narendra Modi : ಭಾರತ ತಂಡಕ್ಕೆ ಆತಿಥ್ಯ ನೀಡಿದ ಬಳಿಕ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ನರೇಂದ್ರ ಮೋದಿ

ಕೇವಲ ಎರಡು ತಿಂಗಳ ಹಿಂದೆ ಮುಂಬೈ ಇಂಡಿಯನ್ಸ್ ಪರ ಪಾಂಡ್ಯ ಅವರ ನೀರಸ ನಾಯಕತ್ವ ಮತ್ತು ಒಟ್ಟಾರೆ ಪ್ರದರ್ಶನಕ್ಕಾಗಿ ದೂಷಣೆಗೆ ಒಳಗಾಗಿದ್ದರು. ಹೀಗಾಗಿ ಭಾರತದ ಟಿ 20 ವಿಶ್ವಕಪ್ ಗೆಲುವಿನ ನಂತರ ಪಾಂಡ್ಯ ಅವರ ಜೀವನವು ಅನೇಕ ರೀತಿಯಲ್ಲಿ ಬದಲಾವಣೆ ಕಂಡಿತು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಈಗಾಗಲೇ ಟಿ 20 ವಿಶ್ವಕಪ್ ಗೆಲುವಿನ ನಂತರ ಟಿ 20 ಐ ನಿವೃತ್ತಿಯನ್ನು ಘೋಷಿಸಿದ್ದಾರೆ. ಅವರು ಟೆಸ್ಟ್ ಮತ್ತು ಏಕದಿನ ಪಂದ್ಯಗಳನ್ನು ಆಡುವುದನ್ನು ಮುಂದುವರಿಸಲಿದ್ದಾರೆ. ಕೊಹ್ಲಿ ತಮ್ಮ ಕೊನೆಯ ಟಿ 20 ಐ ಇನ್ನಿಂಗ್ಸ್ ನಲ್ಲಿ 76 ರನ್ ಗಳಿಸಿದ್ದರು.

ಕಠಿಣ ದಿನಗಳನ್ನು ನೆನಪಿಸಿಕೊಂಡ ಹಾರ್ದಿಕ್ ಪಾಂಡ್ಯ

ಸ್ಮರಣೀಯ ಗೆಲುವಿನ ನಂತರ ಎಲ್ಲಾ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಕಣ್ಣೀರು ಹಾಕಿದರು. 11 ವರ್ಷಗಳ ಬಳಿಕ ಐಸಿಸಿ ಟ್ರೋಫಿಯ ಬರ ನೀಗಿಸಿದರು. 2011 ರ ಏಕದಿನ ವಿಶ್ವಕಪ್ ಗೆಲುವಿನ ನಂತರ ಭಾರತದ ಮೊದಲ ಪ್ರಮುಖ ಐಸಿಸಿ ಪ್ರಶಸ್ತಿಯಾಗಿದೆ.

“ಇದು ತುಂಬಾ ಭಾವನಾತ್ಮಕ, ನಾವು ತುಂಬಾ ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇವೆ. ಆದರೆ ಏನೂ ಕೆಲಸ ಮಾಡುತ್ತಿರಲಿಲ್ಲ. ಇಂದು ಇಡೀ ರಾಷ್ಟ್ರವು ಬಯಸಿದ್ದನ್ನು ನಾವು ಪೂರೈಸಿದ ದಿನ. ನನಗೆ ಹೆಚ್ಚು ವಿಶೇಷವಾಗಿದೆ, ನನ್ನ ಕೊನೆಯ 6 ತಿಂಗಳುಗಳು ಕಷ್ಟಕರವಾಗಿದ್ದವು. ನನಗೆ ತುಂಬಾ ಅನ್ಯಾಯವಾಗಿದೆ. ನಾನು ಕಷ್ಟಪಟ್ಟು ಕೆಲಸ ಮಾಡಿ ಸಾಧಿಸಿದೆ ಎಂದು ಹೇಳಿಕೊಂಡಿದ್ದಾರೆ.

Continue Reading

ಪ್ರಮುಖ ಸುದ್ದಿ

Narendra Modi : ಭಾರತ ತಂಡಕ್ಕೆ ಆತಿಥ್ಯ ನೀಡಿದ ಬಳಿಕ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ನರೇಂದ್ರ ಮೋದಿ

Narendra Modi: ಜೂನ್ 29 ರಂದು ಬಾರ್ಬಡೋಸ್​​ನಲ್ಲಿ ನಡೆದ ಟಿ 20 ವಿಶ್ವಕಪ್​ನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಮೆನ್ ಇನ್ ಬ್ಲೂ ತಮ್ಮ 11 ವರ್ಷಗಳ ಟ್ರೋಫಿ ಬರವನ್ನು ಕೊನೆಗೊಳಿಸಿತು. ರೋಚಕ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್ ಗಳ ಗೆಲುವು ಸಾಧಿಸಿತು.

VISTARANEWS.COM


on

Narendra modi
Koo

ಬೆಂಗಳೂರು ; ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸಕ್ಕೆ ಕರೆಸಿ ಆತಿಥ್ಯ ನೀಡಿದ್ದಾರೆ. ಭಾರತಕ್ಕೆ ಗುರುವಾರ ಬೆಳಗ್ಗೆ ಮರಳಿದ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಕ್ರಿಕೆಟ್​ ಗಣ್ಯರಿಗೆ ಆತಿಥ್ಯ ನೀಡಿದ ನಂತರ ನರೇಂದ್ರ ಮೋದಿ ತಮ್ಮ ಅಧಿಕೃತ ಹ್ಯಾಂಡಲ್​​ನಲ್ಲಿ ಈ ಬಗ್ಗೆ ಅಧಿಕೃತ ಪ್ರಕಟಣೆಗಳನ್ನು ಹ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಜೂನ್ 29 ರಂದು ಬಾರ್ಬಡೋಸ್​​ನಲ್ಲಿ ನಡೆದ ಟಿ 20 ವಿಶ್ವಕಪ್​ನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಮೆನ್ ಇನ್ ಬ್ಲೂ ತಮ್ಮ 11 ವರ್ಷಗಳ ವಿಶ್ವಕಪ್​ ಟ್ರೋಫಿ ಬರ ಕೊನೆಗೊಳಿಸಿತು. ರೋಚಕ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್ ಗಳ ಗೆಲುವು ಸಾಧಿಸಿತು. ಇದು ಭಾರತ ತಂಡದ ಎರಡನೇ ಟಿ 20 ವಿಶ್ವಕಪ್ ಟ್ರೋಫಿಯನ್ನು ಗುರುತಿಸಿತು.

ನರೇಂದ್ರ ಮೋದಿ ಬಣ್ಣನೆ

ಭಾರತ ತಂಡವು ಗುರುವಾರ ಸ್ವದೇಶಕ್ಕೆ ಮರಳಿತು ಮತ್ತು ಜುಲೈ 4 ರ ಗುರುವಾರ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ಮೋದಿ ನಿವಾಸಕ್ಕೆ ಭೇಟಿ ನೀಡಿತು. ನಾಯಕ ರೋಹಿತ್ ಶರ್ಮಾ, ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ ಮತ್ತು ತಂಡದ ಇತರ ಸದಸ್ಯರೊಂದಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಉಪಾಹಾರ ಮಾಡಿ ಮೋದಿ ಸಂವಾದ ನಡೆಸಿದರು.

ತಂಡಕ್ಕೆ ನರೇಂದ್ರ ಮೋದಿ ಒಂದು ಗಂಟೆ ಕಾಲ ಆತಿಥ್ಯ ನೀಡಿದರು. ನಂತರ, ಮೋದಿ ಫೋಟೋಗಳನ್ನು ಎಕ್ಸ್​ನಲ್ಲಿ ಪೋಟೋಗಳನ್ನು ಹಂಚಿಕೊಂಡರು. ನಮ್ಮ ಚಾಂಪಿಯನ್ ಗಳೊಂದಿಗೆ ಅತ್ಯುತ್ತಮ ಭೇಡಿ. ವಿಶ್ವಕಪ್ ವಿಜೇತ ತಂಡಕ್ಕೆ ಆತಿಥ್ಯ ವಹಿಸಿದ್ದೇನೆ ಮತ್ತು ಪಂದ್ಯಾವಳಿಯಾದ್ಯಂತ ಅವರ ಅನುಭವಗಳ ಬಗ್ಗೆ ಸಂಭಾಷಣೆ ನಡೆಸಿದ್ದೇನೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ZIM vs IND : ಭಾರತ ವಿರುದ್ಧ ಸರಣಿಗೂ ಮುನ್ನ ಜಿಂಬಾಬ್ವೆ ಬೌಲಿಂಗ್ ಕೋಚ್ ಆಗಿ ಚಾರ್ಲ್ ಲ್ಯಾಂಗೆವೆಲ್ಟ್ ನೇಮಕ

ಪ್ರಧಾನಿ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದ ನಂತರ, ಭಾರತೀಯ ಆಟಗಾರರು ಮುಂಬೈಗೆ ತೆರಳಿದರು. ಅಲ್ಲಿ ಬಿಸಿಸಿಐ ಮರೀನ್ ಡ್ರೈವ್​​ನಿಂದ ವಾಂಖೆಡೆ ಕ್ರೀಡಾಂಗಣ ತನಕ ತೆರೆದ ಬಸ್​ನಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಂದ ಭಾರತ ತಂಡ 125 ಕೋಟಿ ರೂ.ಗಳ ಬಹುಮಾನ ಸ್ವೀಕರಿಸಲಿದೆ.

ಹೃತ್ಪೂರ್ವಕ ಕೃತಜ್ಞತೆ: ಬಿಸಿಸಿಐ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಆತಿಥ್ಯ ನೀಡಿದ್ದಕ್ಕೆ ಬಿಸಿಸಿಐ ಕೃತಜ್ಞತೆ ಸಲ್ಲಿಸಿದೆ. ಅವರ ಸ್ಪೂರ್ತಿದಾಯಕ ಮಾತುಗಳು ಮತ್ತು ಅಚಲ ಬೆಂಬಲಕ್ಕಾಗಿ ಧನ್ಯವಾದ ಎಂದು ಹೇಳಿದ್ದಾರೆ. ಸಭೆಯ ನಂತರ ಆಟಗಾರರು ಪ್ರಧಾನಿಗೆ ಜರ್ಸಿಯನ್ನು ಉಡುಗೊರೆಯಾಗಿ ನೀಡಿದರು.

ವಿಜಯಶಾಲಿ ಭಾರತೀಯ ಕ್ರಿಕೆಟ್ ತಂಡವು ಇಂದು ಆಗಮಿಸಿದ ಭಾರತದ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿತು. ಬೆರಿಲ್ ಚಂಡಮಾರುತದಿಂದಾಗಿ ಭಾರತೀಯ ಕ್ರಿಕೆಟ್ ತಂಡವು ಸಹಾಯಕ ಸಿಬ್ಬಂದಿ, ಕುಟುಂಬಗಳು ಮತ್ತು ಮಾಧ್ಯಮ ಸಿಬ್ಬಂದಿಯೊಂದಿಗೆ ಬಾರ್ಬಡೋಸ್​​ನಲ್ಲಿ ಕಠಿಣ ಪರಿಸ್ಥಿತಿ ಎದುರಿಸಿತು. ಚಂಡಮಾರುತದಿಂದಾಗಿ ಬ್ರಿಡ್ಜ್ ಟೌನ್ ನಲ್ಲಿರುವ ಗ್ರಾಂಟ್ಲಿ ಆಡಮ್ಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೂರು ದಿನಗಳ ಕಾಲ ಮುಚ್ಚಲಾಗಿತ್ತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಜಯ್ ಶಾ ಅವರು ಬಾರ್ಬಡೋಸ್​​ನಿಂದ ಭಾರತಕ್ಕೆ ವಿಮಾನದಲ್ಲಿ ಪ್ರಯಾಣಿಸಲು ವ್ಯವಸ್ಥೆ ಮಾಡಿದರು. ತಂಡವು ಐಟಿಸಿ ಮೌರ್ಯ ಹೋಟೆಲ್​ಗೆ ತೆರಳಿತು. ಅಲ್ಲಿ ಅವರು ನರೇಂದ್ರ ಮೋದಿಯವರನ್ನು ಭೇಟಿಯಾಗುವ ಮೊದಲು ತಂಗಿದ್ದರು. ಹೋಟೆಲ್​ನಲ್ಲಿ ಅವರು ಟಿ 20 ವಿಶ್ವಕಪ್ ಟ್ರೋಫಿಯನ್ನು ಒಳಗೊಂಡ ವಿಶೇಷ ಕೇಕ್​ನೊಂದಿಗೆ ತಮ್ಮ ವಿಜಯೋತ್ಸವ ಆಚರಿಸಿದರು.

Continue Reading

ಪ್ರಮುಖ ಸುದ್ದಿ

ZIM vs IND : ಭಾರತ ವಿರುದ್ಧ ಸರಣಿಗೂ ಮುನ್ನ ಜಿಂಬಾಬ್ವೆ ಬೌಲಿಂಗ್ ಕೋಚ್ ಆಗಿ ಚಾರ್ಲ್ ಲ್ಯಾಂಗೆವೆಲ್ಟ್ ನೇಮಕ

ZIM vs IND: ಜುಲೈ 6, 7, 10, 13 ಮತ್ತು 14 ರಂದು ಪಂದ್ಯಗಳು ನಿಗದಿಯಾಗಿದೆ. ಜಿಂಬಾಬ್ವೆ ತಂಡವನ್ನು ಸಿಕಂದರ್ ರಾಜಾ ಮುನ್ನಡೆಸಿದರೆ ಭಾರತವನ್ನು ಯುವ ಬಲಗೈ ಬ್ಯಾಟರ್​ ಶುಬ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಸ್ಮರಣೀಯ ಟಿ 20 ವಿಶ್ವಕಪ್ ಗೆಲುವಿನ ನಂತರ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಮೂಲಕ ಬಿಸಿಸಿಐ ಅತ್ಯಂತ ಯುವ ಭಾರತೀಯ ತಂಡವನ್ನು ಹೆಸರಿಸಿದೆ

VISTARANEWS.COM


on

ZIM vs IND
Koo

ಬೆಂಗಳೂರು : ಮುಂಬರುವ ಭಾರತ ವಿರುದ್ಧದ ಟಿ 20 ಐ ಸರಣಿಗೆ ಮುಂಚಿತವಾಗಿ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಚಾರ್ಲ್ ಲ್ಯಾಂಗೆವೆಲ್ಟ್ ಅವರನ್ನು ಜಿಂಬಾಬ್ವೆ ತಂಡದ (ZIM vs IND) ಬೌಲಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ. ಐದು ಪಂದ್ಯಗಳ ಸರಣಿ ಜುಲೈ 6 ರಿಂದ 14 ರವರೆಗೆ ಆಯೋಜನೆಗೊಂಡಿದ್ದು, ಹರಾರೆ ಕ್ರಿಕೆಟ್ ಸ್ಟೇಡಿಯಮ್​ ಎಲ್ಲಾ ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ.

ಜುಲೈ 6, 7, 10, 13 ಮತ್ತು 14 ರಂದು ಪಂದ್ಯಗಳು ನಿಗದಿಯಾಗಿದೆ. ಜಿಂಬಾಬ್ವೆ ತಂಡವನ್ನು ಸಿಕಂದರ್ ರಾಜಾ ಮುನ್ನಡೆಸಿದರೆ ಭಾರತವನ್ನು ಯುವ ಬಲಗೈ ಬ್ಯಾಟರ್​ ಶುಬ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಸ್ಮರಣೀಯ ಟಿ 20 ವಿಶ್ವಕಪ್ ಗೆಲುವಿನ ನಂತರ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಮೂಲಕ ಬಿಸಿಸಿಐ ಅತ್ಯಂತ ಯುವ ಭಾರತೀಯ ತಂಡವನ್ನು ಹೆಸರಿಸಿದೆ. ಟಿ 20 ವಿಶ್ವಕಪ್​ಗೆ ಅರ್ಹತೆ ಪಡೆಯಲು ವಿಫಲವಾದ ನಂತರ ಜಿಂಬಾಬ್ವೆ ಟಿ 20 ವಿಶ್ವಕಪ್ ಚಾಂಪಿಯನ್ ಕಿರೀಟ ಧರಿಸಿದ ಭಾರತ ತಂಡವನ್ನು ಎದುರಿಸಲಿದೆ. ತಂಡವು ಕಡಿಮೆ ಅಂತರರಾಷ್ಟ್ರೀಯ ಅನುಭವವನ್ನು ಹೊಂದಿದ್ದರೂ, ಅವರ ಐಪಿಎಲ್ ಅನುಭವವು ಅವರನ್ನು ಸ್ಪರ್ಧಾತ್ಮಕ ತಂಡವನ್ನಾಗಿ ಮಾಡಿದೆ.

ಚಾರ್ಲ್ ಲ್ಯಾಂಗೆವೆಲ್ಟ್ ಈ ಹಿಂದೆ ಎರಡು ಅವಧಿಗಳಲ್ಲಿ ದಕ್ಷಿಣ ಆಫ್ರಿಕಾ ತಂಡದ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ್ದರು. ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ಟಿ 20 ವಿಶ್ವಕಪ್​​ಗೆ ಅರ್ಹತೆ ಪಡೆಯಲು ವಿಫಲವಾದ ನಂತರ ಜಿಂಬಾಬ್ವೆ ಟಿ 20 ವಿಶ್ವಕಪ್ ಚಾಂಪಿಯನ್ ಕಿರೀಟ ಧರಿಸಿದ ತಂಡವನ್ನು ಎದುರಿಸಲಿದೆ. ತಂಡವು ಕಡಿಮೆ ಅಂತಾರಾಷ್ಟ್ರೀಯ ಅನುಭವ ಹೊಂದಿದ್ದರೂ, ಅವರ ಐಪಿಎಲ್ ಅನುಭವವು ಅವರನ್ನು ಸ್ಪರ್ಧಾತ್ಮಕ ತಂಡವನ್ನಾಗಿ ಮಾಡುತ್ತದೆ.

ಇದನ್ನೂ ಓದಿ: Rohit Sharma : ನರೇಂದ್ರ ಮೋದಿ ರೋಹಿತ್​ ಶರ್ಮಾಗೆ ಗುಟ್ಟಾಗಿ ಹೇಳಿದ್ದೇನು? ಹೆಚ್ಚಿದ ಕುತೂಹಲ

ಚಾರ್ಲ್ ಲ್ಯಾಂಗೆವೆಲ್ಟ್ ಈ ಹಿಂದೆ ಎರಡು ಅವಧಿಗಳಲ್ಲಿ ದಕ್ಷಿಣ ಆಫ್ರಿಕಾ ತಂಡದ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ್ದರು. ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಆಗಿಯೂ ಅವರು ಕೆಲಸ ಮಾಡಿದ್ದಾರೆ.

ಜಿಂಬಾಬ್ವೆ ಈ ಹಿಂದೆ ಜಸ್ಟಿನ್ ಸಮ್ಮನ್ಸ್ ಅವರನ್ನು ಮುಖ್ಯ ಕೋಚ್ ಆಗಿ ಮತ್ತು ಡಿಯೋನ್ ಇಬ್ರಾಹಿಂ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಿಸಿತ್ತು. ಸಮ್ಮನ್ಸ್ ಈ ಹಿಂದೆ 2021 ರಿಂದ 2023 ರವರೆಗೆ ದಕ್ಷಿಣ ಆಫ್ರಿಕಾ ಪುರುಷರ ತಂಡದ ಬ್ಯಾಟಿಂಗ್ ಸಲಹೆಗಾರರಾಗಿ ಕೆಲಸ ಮಾಡಿದ್ದರು. ಡಿಯೋನ್ ಇಬ್ರಾಹಿಂ ಜಿಂಬಾಬ್ವೆ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದಾರೆ. ಅವರು 2001 ರಿಂದ 2005 ರವರೆಗೆ 29 ಟೆಸ್ಟ್ ಮತ್ತು 82 ಏಕದಿನ ಪಂದ್ಯಗಳನ್ನು ಆಡಿದ್ದಾರೆ ಮತ್ತು ಇತ್ತೀಚೆಗೆ ನ್ಯೂಜಿಲೆಂಡ್ ಹಿರಿಯ ಪುರುಷರ ತಂಡದೊಂದಿಗೆ ಕೆಲಸ ಮಾಡಿದ್ದಾರೆ.

ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಮೂಲಕ ಬಿಸಿಸಿಐ 17 ಸದಸ್ಯರ ಯುವ ತಂಡವನ್ನು ಪ್ರಕಟಿಸಿದೆ. ತುಷಾರ್ ದೇಶಪಾಂಡೆ, ರಿಯಾನ್ ಪರಾಗ್ ಮತ್ತು ಅಭಿಷೇಕ್ ಶರ್ಮಾ ತಮ್ಮ ಮೊದಲ ಭಾರತ ಕರೆಗಳನ್ನು ಗಳಿಸಿದ್ದಾರೆ. ಏತನ್ಮಧ್ಯೆ, ರಿಂಕು ಸಿಂಗ್ ಸೇರಿದಂತೆ ಇನ್ನೂ ಕೆಲವರು ನಂತರ ಅವರೊಂದಿಗೆ ಸೇರಲಿದ್ದಾರೆ.

ಆರಂಭಿಕ ತಂಡವನ್ನು ಹೆಸರಿಸಿದ ನಂತರ, ಬಿಸಿಸಿಐ ಶಿವಂ ದುಬೆ, ಸಂಜು ಸ್ಯಾಮ್ಸನ್ ಮತ್ತು ಯಶಸ್ವಿ ಜೈಸ್ವಾಲ್ ಅವರ ಬದಲಿ ಆಟಗಾರರನ್ನು ಘೋಷಿಸಿತು. ಅವರು ವಿಶ್ವ ಕಪ್​ ಗೆಲುವಿನ ಆಚರಣೆಯ ಭಾಗವಾಗಿ ಭಾರತಕ್ಕೆ ಬಂದಿದ್ದಾರೆ. ಸ್ಯಾಮ್ಸನ್, ಜೈಸ್ವಾಲ್ ಮತ್ತು ದುಬೆ ಕೊನೆಯ ಮೂರು ಪಂದ್ಯಗಳಿಗೆ ಜಿಂಬಾಬ್ವೆಯಲ್ಲಿ ತಂಡದ ಭಾಗವಾಗಿರುವುದರಿಂದ ಬಿಸಿಸಿಐ ಮೊದಲ ಎರಡು ಪಂದ್ಯಗಳಿಗೆ ಸಾಯಿ ಸುದರ್ಶನ್, ಜಿತೇಶ್ ಶರ್ಮಾ ಮತ್ತು ಹರ್ಷಿತ್ ರಾಣಾ ಅವರನ್ನು ಹೆಸರಿಸಿದೆ. 2010, 2015 ಮತ್ತು 2016ರ ಬಳಿಕ ಜಿಂಬಾಬ್ವೆಯಲ್ಲಿ ಟಿ20 ಸರಣಿ ಆಡಲು ಭಾರತ ತಂಡ ನಾಲ್ಕನೇ ಬಾರಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳುತ್ತಿದೆ.

ತಂಡಗಳು ಈ ರೀತಿ ಇವೆ

ಶುಬ್ಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಜಿಂಬಾಬ್ವೆ ತಂಡ: ಸಿಕಂದರ್ ರಾಜಾ (ನಾಯಕ), ಫರಾಜ್ ಅಕ್ರಮ್, ಬ್ರಿಯಾನ್ ಬೆನೆಟ್, ಜೋನಾಥನ್ ಕ್ಯಾಂಪ್ಬೆಲ್, ತೆಂಡೈ ಚಟಾರಾ, ಲ್ಯೂಕ್ ಜೊಂಗ್ವೆ, ಇನ್ನೋಸೆಂಟ್ ಕೈಯಾ, ಕ್ಲೈವ್ ಮಂಡೆ, ವೆಸ್ಲಿ ಮಡ್ವೆರೆ, ತಡಿವಾನಾಶೆ ಮಾರುಮಾನಿ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ರಾಂಡನ್ ಮಾವುಟಾ, ಬ್ಲೆಸ್ಸಿಂಗ್ ಮುಜರಬಾನಿ, ಡಿಯೋನ್ ಮೈಯರ್ಸ್, ಅಂಟಮ್ ನಖ್ವಿ, ರಿಚರ್ಡ್ ಎನ್ಗರವಾ, ಮಿಲ್ಟನ್ ಶುಂಬಾ.

Continue Reading
Advertisement
Team India
ಪ್ರಮುಖ ಸುದ್ದಿ22 mins ago

Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

BS Yediyurappa
ಕರ್ನಾಟಕ23 mins ago

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

Hatras Stampede
ದೇಶ24 mins ago

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

PF Interest
ದೇಶ42 mins ago

PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

Hardik Pandya
ಪ್ರಮುಖ ಸುದ್ದಿ54 mins ago

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Heavy rain in Uttara Kannada district district NDRF team for rescue says DC Gangubai Manakar
ಉತ್ತರ ಕನ್ನಡ55 mins ago

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Central Govt approves quadrilateral road in Shira at a cost of Rs 1000 rs crore says TB Jayachandra
ತುಮಕೂರು57 mins ago

Shira News: ಶಿರಾದಲ್ಲಿ 1,000 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಗೆ ಕೇಂದ್ರದಿಂದ ಅನುಮೋದನೆ: ಟಿ.ಬಿ ಜಯಚಂದ್ರ

Viral Video
Latest60 mins ago

Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

Robot Suicide
ತಂತ್ರಜ್ಞಾನ1 hour ago

Robot Suicide: ದ. ಕೊರಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣ?

Muda site allocation Politically motivated allegation says CM Siddaramaiah
ಕರ್ನಾಟಕ2 hours ago

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ5 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ6 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ7 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ9 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ10 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌