Agni Chopra : ರಣಜಿ ಇತಿಹಾಸದಲ್ಲಿ ವಿನೂತನ ದಾಖಲೆ ಬರೆದ 12th ಫೇಲ್​ ಸಿನಿಮಾ ನಿರ್ದೇಶಕನ ಪುತ್ರ - Vistara News

ಕ್ರೀಡೆ

Agni Chopra : ರಣಜಿ ಇತಿಹಾಸದಲ್ಲಿ ವಿನೂತನ ದಾಖಲೆ ಬರೆದ 12th ಫೇಲ್​ ಸಿನಿಮಾ ನಿರ್ದೇಶಕನ ಪುತ್ರ

Agni Chopra: ಚಲನಚಿತ್ರ ನಿರ್ಮಾಪಕ ವಿಧು ವಿನೋದ್ ಚೋಪ್ರಾ ಅವರ ಪುತ್ರ ಅಗ್ನಿ ಚೋಪ್ರಾ ರಣಜಿ ಟ್ರೋಫಿಯಲ್ಲಿ ಸತತ ಐದು ಶತಕಗಳೊಂದಿಗೆ ಬಿರುಗಾಳಿ ಎಬ್ಬಿಸಿದ್ದಾರೆ.

VISTARANEWS.COM


on

Agni Chopra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖ್ಯಾತ ಚಲನಚಿತ್ರ ನಿರ್ಮಾಪಕ ವಿಧು ವಿನೋದ್ ಚೋಪ್ರಾ ಅವರ ಪುತ್ರ ಅಗ್ನಿ ಚೋಪ್ರಾ (Agni Chopra) ತಮ್ಮ ಮೊದಲ ನಾಲ್ಕು ರಣಜಿ ಟ್ರೋಫಿಯಲ್ಲಿ ಐದು ಶತಕಗಳನ್ನು ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ವಿಧು ಅವರು ಮಿಷನ್ ಕಾಶ್ಮೀರ್​ ಎಂಬ ಜನಪ್ರಿಯ ಚಿತ್ರದ ನಿರ್ದೇಶಕ. ಅದೇ ರೀತಿ ಅವರು ಇತ್ತೀಚೆಗೆ ನಿರ್ಮಾಣ ಮಾಡಿ, ನಿರ್ದೇಶಿಸಿದ 12th ಫೇಲ್​ ಸಿನಿಮಾ ಕೂಡ ಪ್ರಖ್ಯಾತಿ ಗಳಿಸಿತ್ತು.

ವಿಧು ಅವರ ಪುತ್ರ ರಣಜಿಯಲ್ಲಿ ಮಿಜೋರಾಂ ಪರ ಆಡುತ್ತಿದ್ದು ವಿಶ್ವ ದಾಖಲೆಯನ್ನು ಬರೆದಿದ್ದಾರೆ. 25 ವರ್ಷದ ಎಡಗೈ ಬ್ಯಾಟ್ಸ್ಮನ್ ಅಗ್ನಿ ತಮ್ಮ ಮೊದಲ ನಾಲ್ಕು ಪ್ರಥಮ ದರ್ಜೆ ಪಂದ್ಯಗಳಲ್ಲಿ ಸತತ ಐದು ಶತಕಗಳನ್ನು ಗಳಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಯುವ ಆಟಗಾರ ಇದುವರೆಗೆ ಎಂಟು ಪ್ರಥಮ ದರ್ಜೆ ಇನ್ನಿಂಗ್ಸ್​ಗಳಲ್ಲಿ 95.87 ಸ್ಟ್ರೈಕ್ ರೇಟ್ನಲ್ಲಿ 767 ರನ್ ಬಾರಿಸಿದ್ದಾರೆ.

ಸಿಕ್ಕಿಂ ವಿರುದ್ಧ ಮಿಜೋರಾಂ ಪರ 166 ರನ್ ಗಳಿಸಿದ್ದಾರೆ. ಅಗ್ನಿ 30 ಬೌಂಡರಿ ಹಾಗೂ 8 ಸಿಕ್ಸರ್ ಸಿಡಿಸಿದ್ದಾರೆ. ಅಗ್ನಿ ಅವರ ವೀರೋಚಿತ ಪ್ರದರ್ಶನದ ಹೊರತಾಗಿಯೂ ಮಿಜೋರಾಂ ತಂಡ ಸಿಕ್ಕಿಂ ವಿರುದ್ಧ ನಾಲ್ಕು ವಿಕೆಟ್​ಗಳ ಸೋಲು ಅನುಭವಿಸಿತು.

ಇದನ್ನೂ ಓದಿ : Mayank Agarwal : ಮಯಾಂಕ್ ಅಗರ್ವಾಲ್ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ನಾಗಾಲ್ಯಾಂಡ್ ವಿರುದ್ಧ ಪಂದ್ಯದಲ್ಲಿ ಅಗ್ನಿ 150 ಎಸೆತಗಳಲ್ಲಿ 164 ರನ್ ಗಳಿಸಿ ಮಿಜೋರಾಂ ತಂಡಕ್ಕೆ ಮುನ್ನಡೆ ಸಾಧಿಸಲು ನೆರವಾಗಿದ್ದರು. ಭಾರತದ ಪ್ರೀಮಿಯರ್ ರೆಡ್-ಬಾಲ್ ಪಂದ್ಯಾವಳಿಯಲ್ಲಿ ತಮ್ಮ ಮೊದಲ ಎರಡು ಪ್ರದರ್ಶನಗಳಲ್ಲಿ ಅವರು 21 ಬೌಂಡರಿಗಳು ಮತ್ತು ಮೂರು ಸಿಕ್ಸರ್​ಗಳನ್ನು ಬಾರಿಸಿದ್ದಾರೆ.

ಅಗ್ನಿಯ ವಿಶೇಷತೆಯೇನು?

ಅಗ್ನಿ ಬಗ್ಗೆ ಹೇಳುವುದಾದರೆ ಅವರು ನವೆಂಬರ್ 4, 1998 ರಂದು ಅಮೆರಿಕದ ಮಿಚಿಗನ್ ನ ಡೆಟ್ರಾಯಿಟ್ ನಲ್ಲಿ ಜನಿಸಿದ್ದಾರೆ. ಅವರು ಚಲನಚಿತ್ರ ನಿರ್ಮಾಪಕ ವಿಧು ವಿನೋದ್ ಚೋಪ್ರಾ ಮತ್ತು ಪ್ರಸಿದ್ಧ ಲೇಖಕಿ ಅನುಪಮಾ ಚೋಪ್ರಾ ಅವರ ಪುತ್ರ. ವಿಧು ಅವರ ಅಕ್ಟೋಬರ್ 27, 2023 ರಂದು ಬಿಡುಗಡೆಯಾದ ’12th ಫೇಲ್​’ ಚಿತ್ರದ ಯಶಸ್ಸಿನಲ್ಲಿದ್ದಾರೆ.

ಮುಂಬೈ ತಂಡಕ್ಕೆ ಪ್ರವೇಶ ಪಡೆಯಲು ವಿಫಲಗೊಂಡ ಅವರು ಉತ್ತಮ ಅವಕಾಶಗಳನ್ನು ಪಡೆಯುವ ಭರವಸೆಯೊಂದಿಗೆ ತಮ್ಮ ನೆಲೆಯನ್ನು ಮಿಜೋರಾಂಗೆ ಬದಲಾಯಿಸಿದ್ದಾರೆ. ಕಳೆದ ವರ್ಷ ಅಕ್ಟೋಬರ್​ನಲ್ಲಿ ಛತ್ತೀಸ್​ಗಢ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದಲ್ಲಿ ಮಿಜೋರಾಂ ಪರ ಮೊದಲ ಬಾರಿಗೆ ಕಾಣಿಸಿಕೊಡಿದ್ದರು. ಈವರೆಗೆ ಅವರು ಏಳು ಲಿಸ್ಟ್-ಎ ಮತ್ತು ಟಿ 20 ಪಂದ್ಯಗಳನ್ನು ಆಡಿದ್ದು, ಕ್ರಮವಾಗಿ 174 ಮತ್ತು 234 ರನ್ ಗಳಿಸಿದ್ದಾರೆ.

ಮಗನ ಸಾಧನೆ ಹೊಗಳಿದ ಅನುಪಮಾ ಚೋಪ್ರಾ


ಚಲನಚಿತ್ರ ವಿಮರ್ಶಕಿ ಅನುಪಮಾ ಚೋಪ್ರಾ ಅವರ ಪುತ್ರರಾಗಿರುವ ಅಗ್ನಿ 2024 ರ ರಣಜಿ ಟ್ರೋಫಿಯಲ್ಲಿ ತಮ್ಮ ಪ್ರಭಾವಶಾಲಿ ಪ್ರದರ್ಶನದಿಂದ ತಮ್ಮ ಹೆತ್ತವರಿಗೆ ಹೆಮ್ಮೆ ತಂದಿದ್ದಾರೆ. ಪ್ರತಿಭಾನ್ವಿತ ಬ್ಯಾಟರ್​​ನ ಸಾಧನೆಯನ್ನು ಅವರ ತಾಯಿ ಶ್ಲಾಘಿಸಿದ್ದಾರೆ. ತಮ್ಮ ಮೊದಲ 4 ಪಂದ್ಯಗಳಲ್ಲಿ ಶತಕಗಳೊಂದಿಗೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಹೊಸ ದಾಖಲೆಯನ್ನು ರಚಿಸಿದ್ದಕ್ಕೆ ಅಮೂಲ್ಯವಾದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹೆಮ್ಮೆಯ ತಾಯಿ ಎಂಬುದಾಗಿ ಅವರು ಬರೆದುಕೊಂಡಿದ್ದಾರೆ.

ಹೈದರಾಬಾದ್​ನಲ್ಲಿ ನಡೆಯಲಿರುವ ತನ್ನ ಕೊನೆಯ ಗ್ರೂಪ್ ಹಂತದ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಆಡುವ ಮೂಲಕ ಅಗ್ನಿ ಮಿಜೋರಾಂ ಪರ ಉತ್ತಮ ಫಾರ್ಮ್ ಮುಂದುವರಿಸಲು ಎದುರು ನೋಡುತ್ತಿದ್ದಾರೆ. ಮಿಜೋರಾಂ ಆಡಿರುವ 4 ಪಂದ್ಯಗಳಲ್ಲಿ 2 ಗೆಲುವು ಹಾಗೂ 1 ಡ್ರಾದೊಂದಿಗೆ 15 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಪ್ಲೇಟ್ ಗುಂಪಿನಲ್ಲಿ ಅಗ್ರ 4 ಸ್ಥಾನ ಪಡೆಯುವ ತಂಡಗಳು ಫೆ.24ರಿಂದ ಆರಂಭವಾಗಲಿರುವ ನಾಕೌಟ್ ಹಂತಕ್ಕೆ ಅರ್ಹತೆ ಪಡೆಯಲಿವೆ. ಪ್ಲೇಟ್ ಗುಂಪಿನ ಅಂತಿಮ ಸ್ಪರ್ಧಿಗಳು ಮುಂದಿನ ಋತುವಿನಲ್ಲಿ ಎಲೈಟ್ ವಿಭಾಗದಲ್ಲಿ ಆಡಲಿದ್ದಾರೆ. ಮುಂದಿನ ಋತುವಿನಲ್ಲಿ ಮಿಜೋರಾಂ ಎಲೈಟ್ ವಿಭಾಗಕ್ಕೆ ಅರ್ಹತೆ ಪಡೆಯಬೇಕಾದರೆ ಅಗ್ನಿ ಅವರ ಹೆಗಲ ಮೇಲೆ ಬಹಳಷ್ಟು ಇರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Euro 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಪೋರ್ಚುಗಲ್; ಫ್ರಾನ್ಸ್ ಎದುರಾಳಿ

Euro 2024: ಪೆನಾಲ್ಟಿ ಶೂಟೌಟ್​ನಲ್ಲಿ ಪೋರ್ಚುಗಲ್ ಪರ ರೊನಾಲ್ಡೊ, ಬ್ರುನೊ ಫೆರ್ನಾಂಡೀಸ್, ಸಿಲ್ವಾ ಗೋಲು ಬಾರಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

VISTARANEWS.COM


on

Euro 2024
Koo

ಡೆಸೆಲ್ ಡಾರ್ಫ್: ಯೂರೋಪಿಯನ್ ಫುಟ್ಬಾಲ್(Euro 2024) ಟೂರ್ನಿಯ 16ರ ಘಟ್ಟದ ಪಂದ್ಯದಲ್ಲಿ ಸ್ಲೊವಾನಿಯಾ(Slovenia ) ವಿರುದ್ಧ ಪೆನಾಲ್ಟಿ ಶೂಟೌಟ್​ನಲ್ಲಿ 3-0 ಗೋಲುಗಳ ಅಂತರದ ಜಯ ಸಾಧಿಸಿದ ಪೋರ್ಚುಗಲ್(Portugal )​ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದೆ. ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಬಲಿಷ್ಟ ಫ್ರಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವನ್ನು ಎಂಬಾಬೆ ಮತ್ತು ರೊನಾಲ್ಡೊ ನಡುವಣ ಫೈಟ್​ ಎಂದು ಬಿಂಬಿಸಲಾಗಿದೆ.

ಸೋಮವಾರ ತಡರಾತ್ರಿ ನಡೆದ ಈ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಮತ್ತು ಹೆಚ್ಚುವರಿ ಅವಧಿಯಲ್ಲಿ ಉಭಯ ತಂಡಗಳು ಯಾವುದೇ ಗೋಲು ಗಳಿಸಲು ಸಾಧ್ಯವಾಗದ ಕಾರಣ ಫಲಿತಾಂಶಕ್ಕಾಗಿ ಪೆನಾಲ್ಟಿ ಶೂಟೌಟ್​ ಮೊರೆ ಹೋಗಲಾಯಿತು. ಪೆನಾಲ್ಟಿ ಶೂಟೌಟ್​ನಲ್ಲಿ ಪೋರ್ಚುಗಲ್ ಪರ ರೊನಾಲ್ಡೊ, ಬ್ರುನೊ ಫೆರ್ನಾಂಡೀಸ್, ಸಿಲ್ವಾ ಗೋಲು ಬಾರಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ಮೊದಲ ಹೆಚ್ಚುವರಿ ಅವಧಿಯಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಅವರಿಗೆ ಪೆನಾಲ್ಟಿ ಅವಕಾಶವೊಂದು ಲಭಿಸಿತ್ತು. ಆದರೆ, ಇದನ್ನು ಗೋಲಾಗಿ ಪರಿವರ್ತಿಸುವಲ್ಲಿ ಅವರು ವಿಫಲರಾದರು. ಇದಕ್ಕೂ ಮುನ್ನ ಸ್ಲೋವಾಕಿಯಾ ಆಟಗಾರ ಬೆಂಜಮಿನ್ ಸೆಸ್ಕೊ ಕೂಡ ಗೋಲು ಬಾರಿಸುವ ಅವಕಾಶವೊಂದನ್ನು ಕಳೆದುಕೊಂಡಿದ್ದರು. ಒಂದೊಮ್ಮೆ ಅವರು ಗೋಲು ಬಾರಿಸುವಲ್ಲಿ ಯಶಸ್ಸು ಕಾಣುತ್ತಿದ್ದರೆ, ಪೋರ್ಚುಗಲ್​ ಸೋತು ಟೂರ್ನಿಯಿಂದ ಹೊರಬೀಳುತ್ತಿತ್ತು.

ಡಿಗೊ ಕೋಸ್ಟಾ ಗೆಲುವಿನ ಹೀರೊ


ಗೋಲ್ ಕೀಪರ್ ಡಿಗೊ ಕೋಸ್ಟಾ ಪೋರ್ಚುಗಲ್ ತಂಡದ ಗೆಲುವಿನ ಹೀರೊ ಎನಿಸಿಕೊಂಡರು. ಪೆನಾಲ್ಟಿ ಶೂಟೌಟ್ ನಲ್ಲಿ ಸ್ಲೋವಾಕಿಯಾದ ಎಲ್ಲ ಮೂರು ಪೆನಾಲ್ಟಿಗಳನ್ನು ಯಶಸ್ವಿಯಾಗಿ ತಡೆಯುವಲ್ಲಿ ಯಶಸ್ಸು ಸಾಧಿಸಿದರು.

ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟ ಫ್ರಾನ್ಸ್

ಫ್ರಾನ್ಸ್ ತಂಡ ಕೂಡ ಯುರೋ ಕಪ್‌ ಫುಟ್‌ಬಾಲ್ ಟೂರ್ನಿಯಲ್ಲಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದೆ. ಬೆಲ್ಜಿಯಂ ವಿರುದ್ಧ ರೋಚಕ 1-0 ಗೋಲು ಅಂತರದ ಗೆಲುವು ಸಾಧಿಸಿ 16 ಘಟಕ್ಕೆ ಪ್ರವೇಶ ಪಡೆದಿದೆ. ಪಂದ್ಯ ಮುಗಿಯುವ ಕೊನೆಯ ಕ್ಷಣದಲ್ಲಿ ಬೆಲ್ಜಿಯಂ ಪರ ಡಿಫೆಂಡರ್ ಜಾನ್ ವೆರ್ಟೊಂಗೆನ್ (85ನೇ ನಿಮಿಷ) ಗೋಲು ಬಾರಿಸಿ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟರು.

ಮತ್ತೊಂದು ಪಂದ್ಯದಲ್ಲಿ ಸ್ಪೇನ್ ತಂಡ 4-1 ರಿಂದ ಜಾರ್ಜಿಯಾ ತಂಡವನ್ನು ಮಣಿಸಿ, ಕ್ವಾರ್ಟರ್‌ ಫೈನಲ್ ಪ್ರವೇಶಿಸಿತು. ಜಾರ್ಜಿಯ ಪರ ರಾಬಿನ್ ಲೆ ನಾರ್ಮಂಡ್ (18ನೇ ನಿಮಿಷ) ಗೋಲು ಗಳಿಸಿ ತಂಡಕ್ಕೆ ಮುನ್ನಡೆ ಒದಗಿಸಿದರು. ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡ ಮೂರು ಗೋಲು ಗಳಿಸಿತು.

Continue Reading

ಕ್ರೀಡೆ

Jasprit Bumrah: ವಿಶ್ವಕಪ್​ ಗೆದ್ದ ಖುಷಿಯಲ್ಲಿ ಜಸ್​ಪ್ರೀತ್​ ಬುಮ್ರಾಗೆ ಟ್ರೀಟ್​ ಕೊಡಿಸಿದ ಪತ್ನಿ

Jasprit Bumrah:ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಮತ್ತು ಬುಮ್ರಾ ಅವರು 2021 ಮಾರ್ಚ್​ 15ರಂದು ಗೋವಾದಲ್ಲಿ ಮದುವೆಯಾಗಿದ್ದರು. ಮಹಾರಾಷ್ಟ್ರದವರಾದ ಸಂಜನಾ 2014ರ ಮಿಸ್ ಇಂಡಿಯಾ ಸ್ಪರ್ಧೆಯ ಫೈನಲ್ ತಲುಪಿದ್ದರು.

VISTARANEWS.COM


on

Jasprit Bumrah
Koo

ಬಾರ್ಬಡೋಸ್​: ಟಿ20 ವಿಶ್ವಕಪ್​(T20 World Cup) ಟೂರ್ನಿಯಲ್ಲಿ ಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಭಾರತ ತಂಡದ ವಿಶ್ವಕಪ್(India’s T20 World Cup win)​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ ಜಸ್​ಪ್ರೀತ್​ ಬುಮ್ರಾ(Jasprit Bumrah) ಅವರಿಗೆ ಪತ್ನಿ, ಕ್ರೀಡಾ ನಿರೂಪಕಿಯೂ ಆಗಿರುವ ಸಂಜನಾ ಗಣೇಶನ್(Sanjana Ganesan) ಐಸ್‌ ಕ್ರೀಂ ಪಾರ್ಟಿ ಕೊಡಿಸಿದ್ದಾರೆ. ಪತ್ನಿ ಐಸ್‌ ಕ್ರೀಂ ಟ್ರೀಟ್​ ಕೊಟ್ಟ ಫೋಟೊವನ್ನು ಬುಮ್ರಾ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಾಕಿದ್ದಾರೆ.

ಫೈನಲ್​ ಪಂದ್ಯದ ಬಳಿಕ ಸಂಜನಾ ಅವರು ಪತಿ ಬುಮ್ರಾರನ್ನು ಇಲ್ಲಿನ ಸ್ಥಳೀಯ ರೆಸ್ಟೋರೆಂಟ್​ಗೆ ಕರೆದುಕೊಂಡು ಹೋಗಿ ಐಸ್ ಕ್ರೀಂ ತಿನ್ನಿಸಿದ್ದಾರೆ. ‘ವಿಶ್ವ ಚಾಂಪಿಯನ್ ಜತೆಗೆ ಐಸ್ ಕ್ರೀಂ ತಿನ್ನುವ ಖುಷಿ’ ಎಂದು ಸಂಜನಾ ತಮ್ಮ ಇನ್​ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಐಸ್‌ ಕ್ರೀಂ ಟ್ರೀಟ್​ ಕೊಟ್ಟ ಪತ್ನಿಗೆ ಧನ್ಯವಾದಗಳು ಮೈ ಡಿಯರ್..ಎಂದು ಬುಮ್ರಾ ಹೇಳಿದ್ದಾರೆ.

ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಮತ್ತು ಬುಮ್ರಾ ಅವರು 2021 ಮಾರ್ಚ್​ 15ರಂದು ಗೋವಾದಲ್ಲಿ ಮದುವೆಯಾಗಿದ್ದರು. ಮಹಾರಾಷ್ಟ್ರದವರಾದ ಸಂಜನಾ 2014ರ ಮಿಸ್ ಇಂಡಿಯಾ ಸ್ಪರ್ಧೆಯ ಫೈನಲ್ ತಲುಪಿದ್ದರು. ಬುಮ್ರಾ ಅವರು ಕಳೆದ ವರ್ಷ ಗಂಡು ಮಗುವಿನ ತಂದೆಯಾಗಿದ್ದರು. ಮಗುವಿಗೆ ‘ಅಂಗದ್(Angad) ಜಸ್​ಪ್ರೀತ್​ ಬುಮ್ರಾ’ ಎಂದು ಹೆಸರಿಡಲಾಗಿದೆ. ಅಂಗದ್​ ಎಂದರೆ ಯೋಧ ಎಂದರ್ಥ. ರಾಮಾಯಣದಲ್ಲಿ ಬರುವ ವಾಲಿಯ ಪುತ್ರನ ಹೆಸರು ಕೂಡ ಅಂಗದ್​. ಇದೇ ಹೆಸರನ್ನು ಬುಮ್ರಾ ಅವರು ತಮ್ಮ ಮಗನಿಗೆ ಇಟ್ಟಿದ್ದಾರೆ.

ಭಾರತದ ಸ್ಟಾರ್ ವೇಗಿ ಬುಮ್ರಾ ಈ ಬಾರಿಯ ಟಿ20 ವಿಶ್ವಕಪ್ ಆವೃತ್ತಿಯಲ್ಲಿ ಯಾವುದೇ ಬೌಲರ್​​ಗೆ ಕಡಿಮೆ ಇಲ್ಲದ ಎಕಾನಮಿ ರೇಟ್ ಪ್ರದರ್ಶಿಸಿದರು. ಅವರು 8.26 ಸರಾಸರಿ ಮತ್ತು 4.17 ಎಕಾನಮಿ ರೇಟ್​​​ನಲ್ಲಿ 15 ವಿಕೆಟ್​ ಉರುಳಿಸಿ ಭಾರತದ ಗೆಲುವಿನ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ


ಕೆರಿಬಿಯನ್‌ ರಾಷ್ಟ್ರದಲ್ಲಿ(Caribbean country) ಬೀಸುತ್ತಿರುವ ಭಾರೀ ಚಂಡಮಾರುತದಿಂದಾಗಿ ಬಾರ್ಬಡೋಸ್​ನಲ್ಲಿಯೇ ಉಳಿದಿರುವ ಟೀಮ್​ ಇಂಡಿಯಾ(Team India stuck in Barbados), ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ. ಚಂಡಮಾರುತದ ಅಬ್ಬರ ಮತ್ತೆ ಹೆಚ್ಚಾಗಿರುವ ಕಾರಣ ಬಾರ್ಬಡೋಸ್​ನಲ್ಲಿ ವಿದ್ಯುತ್ ಮತ್ತು ನೀರು ಪೂರೈಕೆಗೆ ತೊಂದರೆಯಾಗಿದೆ. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿವೆ. ಹೀಗಾಗಿ ಆಟಗಾರರು ಭಾರತಕ್ಕೆ ಬರುವುದು ಇನ್ನೂ 2 ದಿನ ತಡವಾಗುವ ಸಾಧ್ಯತೆ ಕಂಡುಬಂದಿದೆ.

ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿದ್ದು, ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿದೆ.

ಸದ್ಯ ಟೀಮ್​ ಇಂಡಿಯಾದ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿದೆ. ಚಂಡಮಾರುತದ ಕಾರಣ, ಭಾರತೀಯ ಆಟಗಾರರಿರುವ ಹೊಟೇಲ್‌ ಸೇವೆಯಲ್ಲೂ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

Continue Reading

ಕ್ರಿಕೆಟ್

Virat Kohli: ನನ್ನ ​ಅಹಂಕಾರವೇ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣ ಎಂದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli: ಕೊಹ್ಲಿ ಅಹಂ ಬಗ್ಗೆ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ ಮಾಜಿ ಆಟಗಾರ ಅಂಬಾಟಿ ರಾಯುಡು ಹೇಳಿಕೆ ನೀಡಿದ್ದರು. ಕೊಹ್ಲಿ ತನ್ನ ತಂಡದಲ್ಲಿರುವ ಸಹ ಆಟಗಾರರಂತೆ ಪ್ರದರ್ಶನ ನೀಡಬೇಕು. ಕೊಂಚ ಸ್ಟಾಂಡರ್ಡ್​ ಕಮ್ಮಿ ಮಾಡುಕೊಳ್ಳುವುದು ಸೂಕ್ತ ಎಂದಿದ್ದರು.

VISTARANEWS.COM


on

Virat Kohli
Koo

ಬಾರ್ಬಡೋಸ್​: ಈ ಬಾರಿಯಾ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿರಾಟ್​ ಕೊಹ್ಲಿ(Virat Kohli) ತಾವು ಬ್ಯಾಟಿಂಗ್ ವೈಫಲ್ಯ ಕಾಣಲು ಕಾರಣ ಏನೆಂಬುದನ್ನು ತಿಳಿಸಿದ್ದಾರೆ. ಕೊಹ್ಲಿ ಈ ಮಾತು ಕೇಳಿ ಕೆಲವರಿಗೆ ಅಚ್ಚರಿಯಾಗಿದೆ. ಹೌದು, ಫೈನಲ್​ ಪಂದ್ಯದ ಬಳಿಕ ಮಾತನಾಡಿದ ಕೊಹ್ಲಿ, ನನ್ನ ​ಅಹಂಕಾರವೇ ಈ ವೈಫಲ್ಯಕ್ಕೆ ಕಾರಣ ಎಂದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಕಳೆದ ಶನಿವಾರ ನಡೆದ ಫೈನಲ್​ ಪಂದ್ಯದಲ್ಲಿ ಕೊಹ್ಲಿ ಅರ್ಧಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಫೈನಲ್​ ಪಂದ್ಯಕ್ಕೂ ಮುನ್ನ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಸಂಪೂರ್ಣ ವೈಫಲ್ಯ ಕಂಡಿದ್ದರು. ಇದುವರೆಗೂ ವಿಶ್ವಕಪ್​ ಟೂರ್ನಿಯಲ್ಲಿ ಶೂನ್ಯಕ್ಕೆ ಔಟಾಗದೆ ಇದ್ದ ಕೊಹ್ಲಿ ಈ ಬಾರಿ 2 ಸಲ ಶೂನ್ಯಕ್ಕೆ ಔಟಾಗುವ ಮೂಲಕ ಅವಮಾನ ಎದುರಿಸಿದ್ದರು.

ಫೈನಲ್​ ಪಂದ್ಯ ಬಳಿಕ ಮಾತನಾಡಿದ ಕೊಹ್ಲಿ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಈ ಟೂರ್ನಿಯಿಂದ ಜೀವನದಲ್ಲಿ ಹಲವು ಪಾಠ ಕಲಿತಿದ್ದೇನೆ. ನನ್ನ ಅಹಂ ಅನ್ನು ಬದಿಗೆ ಇಟ್ಟು ಹೇಳುವುದಾದರೆ, ನಾನೇ ಎಲ್ಲ, ನಾನೇ ಶ್ರೇಷ್ಠ ಎನ್ನುವ ಅಹಂ ಬಿಡಬೇಕು. ಅಹಂಕಾರದಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎನ್ನುವುದು ನನಗೆ ಈಗ ಅರ್ಥವಾಗಿದೆ. ಒಂದು ಕ್ಷಣದಲ್ಲಿ ಎದುರಾದ ಪರಿಸ್ಥಿತಿಗೆ ಗೌರವಿಸಿ, ತಲೆಬಾಗಲೇ ಬೇಕು. ಇದನ್ನು ಬಿಟ್ಟು ಅಹಂ ತೋರಿದರೆ ದೇವರು ಕೂಡ ಮೆಚ್ಚುವುದಿಲ್ಲ. ನನ್ನ ವಿಚಾರದಲ್ಲೂ ಕೂಡ ಅದೇ ಆಯಿತು” ಎಂದು ಕೊಹ್ಲಿ ಮುಕ್ತವಾಗಿ ಹೇಳಿಕೊಂಡರು.

ಇದನ್ನೂ ಓದಿ Virat Kohli : ಶುಭಾಶಯ ಕೋರಿದ ನರೇಂದ್ರ ಮೋದಿಗೆ ಪ್ರತಿಕ್ರಿಯೆ ಕೊಟ್ಟ ಕೊಹ್ಲಿ; ಇಲ್ಲಿದೆ ಅದರ ವಿವರ

ಕೊಹ್ಲಿ ಅಹಂ ಬಗ್ಗೆ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ ಮಾಜಿ ಆಟಗಾರ ಅಂಬಾಟಿ ರಾಯುಡು ಹೇಳಿಕೆ ನೀಡಿದ್ದರು. ಕೊಹ್ಲಿ ತನ್ನ ತಂಡದಲ್ಲಿರುವ ಸಹ ಆಟಗಾರರಂತೆ ಪ್ರದರ್ಶನ ನೀಡಬೇಕು. ಕೊಂಚ ಸ್ಟಾಂಡರ್ಡ್​ ಕಮ್ಮಿ ಮಾಡುಕೊಳ್ಳುವುದು ಸೂಕ್ತ ಎಂದಿದ್ದರು. ಆದರೆ ಈ ವೇಳೆ ಕೊಹ್ಲಿ ಅಭಿಮಾನಿಗಳು ರಾಯುಡು ವಿರುದ್ಧ ಕಿಡಿ ಕಾರಿದ್ದರು. ಇದೀಗ ಕೊಹ್ಲಿಯೇ ತಮ್ಮ ಅಹಂ ಬಗ್ಗೆ ಒಪ್ಪಿಕೊಂಡಿದ್ದಾರೆ.

ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದರು.

ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ. ಈ ಟಿ 20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ 59 ಎಸೆತಗಳಲ್ಲಿ 76 ರನ್ ಮಾಡುವ ಮೊದಲು ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 75 ರನ್ ಮಾತ್ರ ಗಳಿಸಿದ್ದರು.

Continue Reading

ಕ್ರೀಡೆ

Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

Team India stuck in Barbados: ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿದ್ದು, ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿದೆ.

VISTARANEWS.COM


on

Team India stuck in Barbados
Koo

ಬ್ರಿಜ್‌ಟೌನ್‌: ಟಿ20 ವಿಶ್ವಕಪ್‌ ಗೆದ್ದ ಬಳಿಕ ತವರಿಗೆ ಮರಳಲು ಸಜ್ಜಾಗಿ ನಿಂತಿರುವ ಟೀಮ್​ ಇಂಡಿಯಾ(Team India stuck in Barbados) ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ. ಕೆರಿಬಿಯನ್‌ ರಾಷ್ಟ್ರದಲ್ಲಿ(Caribbean country) ಬೀಸುತ್ತಿರುವ ಭಾರೀ ಚಂಡಮಾರುತದ ಅಬ್ಬರ ಮತ್ತೆ ಹೆಚ್ಚಾಗಿರುವ ಕಾರಣ ಬಾರ್ಬಡೋಸ್​ನಲ್ಲಿ ವಿದ್ಯುತ್ ಮತ್ತು ನೀರು ಪೂರೈಕೆಗೆ ತೊಂದರೆಯಾಗಿದೆ. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿವೆ. ಹೀಗಾಗಿ ಆಟಗಾರರು ಭಾರತಕ್ಕೆ ಬರುವುದು ಇನ್ನೂ 2 ದಿನ ತಡವಾಗುವ ಸಾಧ್ಯತೆ ಕಂಡುಬಂದಿದೆ.

ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿದ್ದು, ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿದೆ.

ಸದ್ಯ ಟೀಮ್​ ಇಂಡಿಯಾದ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿದೆ. ಚಂಡಮಾರುತದ ಕಾರಣ, ಭಾರತೀಯ ಆಟಗಾರರಿರುವ ಹೊಟೇಲ್‌ ಸೇವೆಯಲ್ಲೂ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

ಇದನ್ನೂ ಓದಿ Team India Coach: ಟೀಮ್​ ಇಂಡಿಯಾ ಕೋಚ್​ ಆಯ್ಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಜಯ್‌ ಶಾ

ಟೀಂ ಇಂಡಿಯಾಗೆ ಐತಿಹಾಸಿಕ ಗೆಲುವು

ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಮಣಿಸಿದ ಭಾರತ 2007ರ ಬಳಿಕ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ನಂತರ ಎರಡು ಬಾರಿ ಪಂದ್ಯಾವಳಿಯನ್ನು ಗೆದ್ದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ವಿರಾಟ್ ಕೊಹ್ಲಿ 76 ರನ್ ಗಳಿಸಿದರೆ, ಅಕ್ಷರ್ ಪಟೇಲ್ 47 ರನ್ ಗಳಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 169 ರನ್​ಗೆ ಹೋರಾಟ ಮುಗಿಸಿತು.

ವಿದಾಯ ಹೇಳಿದ ರೋಹಿತ್​– ಕೊಹ್ಲಿ


ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ವಿರಾಟ್​ ಕೊಹ್ಲಿ, ರವೀಂದ್ರ ಜಡೇಜ ಮತ್ತು ರೋಹಿತ್​ ಶರ್ಮ ಅವರು ಟಿ20 ಕ್ರಿಕೆಟ್​ಗೆ ವಿದಾಯ ಘೋಷಿಸಿದರು. ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

Continue Reading
Advertisement
self harming mysore
ಕ್ರೈಂ6 mins ago

Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

police constable commits suicide by jumping into well
ಬೆಂಗಳೂರು18 mins ago

Police constable : ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ ಮಡಿವಾಳ ಪೊಲೀಸ್‌ ಕಾನ್ಸ್‌ಟೇಬಲ್!

Euro 2024
ಕ್ರೀಡೆ20 mins ago

Euro 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಪೋರ್ಚುಗಲ್; ಫ್ರಾನ್ಸ್ ಎದುರಾಳಿ

Yogi Adityanath
ದೇಶ27 mins ago

Yogi Adityanath: ಉತ್ತರಪ್ರದೇಶಕ್ಕೆ ಅಪಮಾನ ಮಾಡಲು ರಾಹುಲ್‌ ಗಾಂಧಿ ಸಂಚು; ಯೋಗಿ ಕಿಡಿ

Good News For Farmers
ದೇಶ33 mins ago

Good News For Farmers: ಬಿಸಿಲಿನ ಝಳಕ್ಕೆ ಬಸವಳಿದ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಈ ತಿಂಗಳು ಉತ್ತಮ ವರ್ಷಧಾರೆ

train service
ಬೆಂಗಳೂರು52 mins ago

Train services: ಗೋಲಗುಂಬಜ್ ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಪರಿಷ್ಕರಣೆ; ಬೆಂಗಳೂರಿನಿಂದ ವಿಶೇಷ ರೈಲುಗಳ ಓಡಾಟ

Pawan Kalyan
ದೇಶ1 hour ago

Pawan Kalyan: ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ

actor darshan crazy fans
ವೈರಲ್ ನ್ಯೂಸ್1 hour ago

Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

Harshika Poonacha
ಸ್ಯಾಂಡಲ್ ವುಡ್1 hour ago

Harshika Poonacha: ಮದುವೆಯಾಗಿ ವರ್ಷದೊಳಗೆ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ ಪೂಣಚ್ಚ–ಭುವನ್

Jasprit Bumrah
ಕ್ರೀಡೆ1 hour ago

Jasprit Bumrah: ವಿಶ್ವಕಪ್​ ಗೆದ್ದ ಖುಷಿಯಲ್ಲಿ ಜಸ್​ಪ್ರೀತ್​ ಬುಮ್ರಾಗೆ ಟ್ರೀಟ್​ ಕೊಡಿಸಿದ ಪತ್ನಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌