Vijay Hazare | ಕರ್ನಾಟಕ ವಿರುದ್ಧ 5 ವಿಕೆಟ್​ ಗೆಲುವು; ಫೈನಲ್​ಗೆ ಲಗ್ಗೆಯಿಟ್ಟ ಸೌರಾಷ್ಟ್ರ ತಂಡ - Vistara News

ಕ್ರಿಕೆಟ್

Vijay Hazare | ಕರ್ನಾಟಕ ವಿರುದ್ಧ 5 ವಿಕೆಟ್​ ಗೆಲುವು; ಫೈನಲ್​ಗೆ ಲಗ್ಗೆಯಿಟ್ಟ ಸೌರಾಷ್ಟ್ರ ತಂಡ

ವಿಜಯ್ ಹಜಾರೆ ಟ್ರೋಫಿ ಕೂಟದ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ 5 ವಿಕೆಟ್​ ಗೆಲುವು ಸಾಧಿಸಿದ ಸೌರಾಷ್ಟ್ರ ಫೈನಲ್​ ತಲುಪಿದೆ.

VISTARANEWS.COM


on

Saurashtra won by 5 wkts
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹ್ಮದಾಬಾದ್‌: ವಿಜಯ್ ಹಜಾರೆ ಟ್ರೋಫಿ(Vijay Hazare) ಕೂಟದ ಸೆಮಿಫೈನಲ್ ಪಂದ್ಯದಲ್ಲಿ ಮಯಾಂಕ್​ ಅಗರ್ವಾಲ್ ಸಾರಥ್ಯದ ಕರ್ನಾಟಕ ತಂಡ ಸೌರಾಷ್ಟ್ರ ವಿರುದ್ಧ ಐದು ವಿಕೆಟ್ ಸೋಲು ಕಂಡು ತನ್ನ ಅಭಿಯಾನ ಅಂತ್ಯಗೊಳಿಸಿದೆ. ಜಯ ಸಾಧಿಸಿದ ಸೌರಾಷ್ಟ್ರ ತಂಡವು ಫೈನಲ್ ಪ್ರವೇಶಿಸಿದೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಕರ್ನಾಟಕ ತಂಡ 49.1 ಓವರ್ ಗಳಲ್ಲಿ 171 ರನ್ ಗಳಿಸಿತು. ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಸೌರಾಷ್ಟ್ರ 36.2 ಓವರ್​ಗಳಲ್ಲಿ ಐದು ವಿಕೆಟ್​ ನಷ್ಟಕ್ಕೆ 172 ರನ್ ಪೇರಿಸಿ ಗೆಲುವಿನ ನಗೆ ಬೀರಿತು.

ಕರ್ನಾಟಕಕ್ಕೆ ಆರಂಭಿಕ ಆಘಾತ

ಟಾಸ್ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಕರ್ನಾಟಕಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನಾಯಕ ಮಯಾಂಕ್​ ಅಗವಾರ್ಲ್​ ಒಂದು ರನ್​ಗೆ ವಿಕೆಟ್​ ಒಪ್ಪಿಸಿ ನಿರಾಸೆ ಮೂಡಿಸಿದರು. ತಂಡದ ಮೊತ್ತ 47 ಆಗುವ ವೇಳೆ ತಂಡದ ನಾಲ್ಕು ವಿಕೆಟ್​ ಕಳೆದುಕೊಂಡಿತು. ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ನಿಂತು ಆಡಿದ ಆರ್​. ಸಮರ್ಥ್ 88 ರನ್ ಗಳಿಸಿದರು. ಉಳಿದಂತೆ ಮನೋಜ್ ಭಂಡಗೆ 22 ರನ್ ಗಳಿಸಿದ ಕಾರಣ ತಂಡ 150ರ ಗಡಿ ದಾಟುವಂತಾಯಿತು. ಸೌರಾಷ್ಟ್ರ ಪರ ನಾಯಕ ಜೈದೇವ್​ ಉನಾದ್ಕತ್ ನಾಲ್ಕು ವಿಕೆಟ್ ಪಡೆದರು, ಪ್ರೇರಕ್ ಮಂಕಡ್ ಎರಡು ವಿಕೆಟ್ ಕಿತ್ತರು.

ಜಯ್‌ ಗೋಹಿಲ್‌ ಅರ್ಧಶತಕ

ಗುರಿ ಬೆನ್ನಟ್ಟಿದ ಸೌರಾಷ್ಟ್ರ ತಂಡ ಖಾತೆ ತೆರೆಯುವ ಮುನ್ನವೇ ಎರಡು ವಿಕೆಟ್ ಕಳೆದುಕೊಂಡಿತು. ಆರಂಭಿಕರಾದ ಹಾರ್ವಿಕ್‌ ದೇಸಾಯ್ (0) ಮತ್ತು ಶೆಲ್ಡನ್ ಜಾಕ್ಸನ್ (0) ಅವರನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಜಯ್ ಗೋಹಿಲ್‌ 82 ಎಸೆತಗಳಲ್ಲಿ 61 ರನ್‌ ಬಾರಿಸಿ ಸೌರಾಷ್ಟ್ರ ತಂಡದ ಗೆಲುವಿಗೆ ನೆರವಾದರು. ಇವರಿಗೆ ಸಮರ್ಥ್‌ ವ್ಯಾಸ್‌ (33) ಮತ್ತು ಪ್ರೇರಕ್ ಮಂಕಡ್‌ (35) ಉತ್ತಮ ಸಾಥ್​ ನೀಡಿದರು. ಕರ್ನಾಟಕ ಪರ ಕೆ. ಗೌತಮ್‌ (50ಕ್ಕೆ 2) ಯಶಸ್ವಿ ಬೌಲರ್‌ ಎನಿಸಿದರು.

ಸಂಕ್ಷಿಪ್ತ ಸ್ಕೋರ್‌

ಕರ್ನಾಟಕ: 49.1 ಓವರ್‌ಗಳಲ್ಲಿ 171 ರನ್‌ಗಳಿಗೆ ಆಲ್‌ಔಟ್‌ (ಆರ್‌ ಸಮರ್ಥ್‌ 88, ಮನೋಜ್‌ ಭಾಂಡಗೆ 22; ಜೈದೇವ್​ ಉನಾದ್ಕತ್ 26ಕ್ಕೆ 4).

ಸೌರಾಷ್ಟ್ರ: 36.2 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 172 ರನ್‌ (ಜಯ್‌ ಗೋಹಿಲ್ 61, ಸಮರ್ಥ್ ವ್ಯಾಸ್‌ 33, ಪ್ರೇರಕ್ ಮಂಕಡ್‌ 35, ಕೆ. ಗೌತಮ್ 50ಕ್ಕೆ 2).

ಇದನ್ನೂ ಓದಿ | IND VS NZ | ಮಳೆಯಿಂದ ಅಂತಿಮ ಪಂದ್ಯ ರದ್ದು; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ನ್ಯೂಯಾರ್ಕ್​ಗೆ ಪ್ರಯಾಣಿಸಿದ ಮೊದಲ ಬ್ಯಾಚ್​; ವಿರಾಟ್​ ಕೊಹ್ಲಿ ಗೈರು, ಅಭ್ಯಾಸ ಪಂದ್ಯಕ್ಕೂ ಅನುಮಾನ

T20 World Cup 2024: “ಕೊಹ್ಲಿ ಅವರು ತಡವಾಗಿ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ನಮಗೆ ಮೊದಲೇ ತಿಳಿಸಿದ್ದರು. ಇದೇ ಕಾರಣಕ್ಕೆ ಬಿಸಿಸಿಐ ಅವರ ವೀಸಾವನ್ನು ಕಾಯ್ದಿರಿಸಿದೆ. ಅವರು ಮೇ 30 ರ ಮುಂಜಾನೆ ನ್ಯೂಯಾರ್ಕ್‌ಗೆ ಪ್ರಯಾಣಿಸುವ ನಿರೀಕ್ಷೆಯಿದೆ. ಅವರ ಮನವಿಗೆ ಬಿಸಿಸಿಐ ಒಪ್ಪಿಗೆ ನೀಡಿದೆ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

VISTARANEWS.COM


on

T20 World Cup 2024
Koo

ಮುಂಬಯಿ: ಜೂನ್​ 1ರಿಂದ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಭಾರತ ತಂಡದ(Team India) ಮೊದಲ ಬ್ಯಾಚ್ ನ್ಯೂಯಾರ್ಕ್​ಗೆ ಪ್ರಯಾಣಿಸಿದೆ. ಶನಿವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಿಂದ ತಂಡದ ನಾಯಕ ರೋಹಿತ್​, ಶರ್ಮ, ಕೋಚ್ ರಾಹುಲ್​ ದ್ರಾವಿಡ್​, ರವೀಂದ್ರ ಜಡೇಜಾ, ಕುಲ್​ದೀಪ್​ ಯಾದವ್​, ಮೊಹಮ್ಮದ್ ಸಿರಾಜ್​ ಸೇರಿ ಹಲವು ಆಟಗಾರರು ಮತ್ತು ಕೋಚಿಂಗ್​ ಸಿಬ್ಬಂದಿಗಳು ಪ್ರಯಾಣಿಸಿದರು. ಆದರೆ ವಿರಾಟ್​ ಕೊಹ್ಲಿ ಮಾತ್ರ ಪ್ರಯಾಣಿಸಿಲ್ಲ.

ವಿರಾಟ್​ ಕೊಹ್ಲಿ ಅವರು ಮೇ 30ಕ್ಕೆ ಏಕಾಂಗಿಯಾಗಿ ನ್ಯೂಯಾರ್ಕ್​ಗೆ ಪ್ರಯಾಣಿಸಲಿದ್ದಾರೆ ಎಂದು ವರದಿಯಾಗಿದೆ, ಜತೆಗೆ ಜೂನ್​ 1ರಂದು ನಡೆಯುವ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಕೊಹ್ಲಿ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ. “ಕೊಹ್ಲಿ ಅವರು ತಡವಾಗಿ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ನಮಗೆ ಮೊದಲೇ ತಿಳಿಸಿದ್ದರು. ಇದೇ ಕಾರಣಕ್ಕೆ ಬಿಸಿಸಿಐ ಅವರ ವೀಸಾವನ್ನು ಕಾಯ್ದಿರಿಸಿದೆ. ಅವರು ಮೇ 30 ರ ಮುಂಜಾನೆ ನ್ಯೂಯಾರ್ಕ್‌ಗೆ ಪ್ರಯಾಣಿಸುವ ನಿರೀಕ್ಷೆಯಿದೆ. ಅವರ ಮನವಿಗೆ ಬಿಸಿಸಿಐ ಒಪ್ಪಿಗೆ ನೀಡಿದೆ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೊಹ್ಲಿ ಅಲ್ಲದೆ, ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ತಡವಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ದುಬೈನಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ತಂಡ ಸೇರಲು ತಡವಾಗಲಿದೆ ಎಂದು ಸಂಜು ಈಗಾಗಲೇ ಬಿಸಿಸಿಐಗೆ ತಿಳಿಸಿರುವ ಕಾರಣ ಬಿಸಿಸಿಐ ಸ್ಯಾಮ್ಸನ್​ಗೆ ತಡವಾಗಿ ತಂಡ ಸೇರಲು ಅವಕಾಶ ನೀಡಿದೆ. ಭಾರತೀಯ ಆಟಗಾರರ ದ್ವಿತೀಯ ಬ್ಯಾಚ್ ಸೋಮವಾರ ಹೊರಡಲಿದೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಇದ್ನನೂ ಓದಿ T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರೀಡೆ

IPL 2024 Final: ಐಪಿಎಲ್​ ವಿನ್ನರ್​ & ರನ್ನರ್​ಗೆ ಸಿಗುವ ಮೊತ್ತವೆಷ್ಟು? ಈ ಬಾರಿ ಆರೆಂಜ್​ ಕ್ಯಾಪ್​, ಪರ್ಪಲ್​ ಕ್ಯಾಪ್​ ಯಾರಿಗೆ ಸಿಗಲಿದೆ?

IPL 2024 Final: ಫೈನಲ್​ನಲ್ಲಿ ವಿಜೇತ ತಂಡಕ್ಕೆ ಬಹುಮಾನ ಮೊತ್ತವಾಗಿ 20 ಕೋಟಿ ರೂಪಾಯಿ ಸಿಗಲಿದೆ. ಹಾಗೆಯೇ, ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ರಾಜಸ್ಥಾನ್​ಗೆ 7 ಕೋಟಿ ಮತ್ತು 4ನೇ ಸ್ಥಾನಿ ಆರ್​ಸಿಬಿಗೆ 6.5 ಕೋಟಿ ರೂ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

VISTARANEWS.COM


on

IPL 2024 Final
Koo

ಚೆನ್ನೈ: ಇಂದು (ಭಾನುವಾರ) ನಡೆಯಲಿರುವ 17ನೇ ಆವೃತ್ತಿಯ ಐಪಿಎಲ್(IPL 2024 Final)​ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ಮತ್ತು ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ವಿಶ್ವದಲ್ಲೇ ಅತ್ಯಂತ ಶ್ರೀಮಂತ ಟಿ20 ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ವಿಜೇತರು(IPL 2024 Prize money) ಎಷ್ಟು ಹಣ ಪಡೆಯುತ್ತಾರೆ ಎನ್ನುವ ಕುತೂಲಕಾರಿ ಮಾಹಿತಿ ಇಂತಿದೆ.

ಕೆಕೆಆರ್​ ಮತ್ತು ಹೈದರಾಬಾದ್ ಐಪಿಎಲ್‌ ಫೈನಲ್‌ನಲ್ಲಿ ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು. ಫೈನಲ್​ನಲ್ಲಿ ವಿಜೇತ ತಂಡಕ್ಕೆ ಬಹುಮಾನ ಮೊತ್ತವಾಗಿ 20 ಕೋಟಿ ರೂಪಾಯಿ ಸಿಗಲಿದೆ. ಹಾಗೆಯೇ, ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ರಾಜಸ್ಥಾನ್​ಗೆ 7 ಕೋಟಿ ಮತ್ತು 4ನೇ ಸ್ಥಾನಿ ಆರ್​ಸಿಬಿಗೆ 6.5 ಕೋಟಿ ರೂ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

ಸ್ವಾರಸ್ಯವೆಂದರೆ ಐಪಿಎಲ್​ ವಿಜೇತರಿಗಿಂತ ಅಧಿಕ ಮೊತ್ತ ಈ ಬಾರಿ ಆಸ್ಟ್ರೇಲಿಯಾದ ಆಟಗಾರರಾದ ಪ್ಯಾಟ್‌ ಕಮಿನ್ಸ್‌ ಮತ್ತು ಮಿಚೆಲ್​ ಸ್ಟಾರ್ಕ್​ಗೆ ಸಿಕ್ಕಿದೆ. ಪ್ಯಾಟ್‌ ಕಮಿನ್ಸ್‌ ಅವರನ್ನು ಹೈದರಾಬಾದ್‌ 20.5 ಕೋಟಿ ರೂ.ಗೆ ಖರೀದಿಸಿತ್ತು. ಅತ್ತ ಕೆಕೆಆರ್​ ವಿಚೆಲ್​ ಸ್ಟಾರ್ಕ್‌ ಅವರನ್ನು ಬರೋಬ್ಬರಿ 24.75 ಕೋಟಿ ರೂ. ನೀಡಿ ತನ್ನ ತಂಡಕ್ಕೆ ಸೇರಿಸಿಕೊಂಡಿತು.

ಇದನ್ನೂ ಓದಿ KKR vs SRH IPL 2024: ಐಪಿಎಲ್​ ಫೈನಲ್​ ಸಮಾರಂಭದಲ್ಲಿ ಸಂಗೀತ ರಸದೌತಣ ನೀಡಲಿದ್ದಾರೆ ಕೊಹ್ಲಿಯ ಅಪ್ಪಟ ಅಭಿಮಾನಿ

ಕೊಹ್ಲಿಗೆ ಆರೆಂಜ್​ ಕ್ಯಾಪ್​


ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಗೆದ್ದ ಆಟಗಾರರಿಗೆ 15 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸದ್ಯ ಆರ್​ಸಿಬಿ ತಂಡದ ವಿರಾಟ್​ ಕೊಹ್ಲಿ ಈ ಬಾರಿಯ ಟೂರ್ನಿಯಲ್ಲಿ 741 ರನ್​ ಬಾರಿಸಿ ಆರೆಂಜ್ ಕ್ಯಾಪ್ ಹೋಲ್ಡರ್​ ಆಗಿದ್ದಾರೆ. ಇವರ ರನ್​ ಹಿಂದಿಕ್ಕಲು ಇನ್ನು ಯಾರಿಗೂ ಅವಕಾಶ ಇಲ್ಲದ ಕಾರಣ ಈ ಪ್ರಶಸ್ತಿ ಇವರಿಗೇ ಸಿಗಲಿದೆ.

ಪರ್ಪಲ್​ ಕ್ಯಾಪ್​ ಸದ್ಯ 24 ವಿಕೆಟ್​ ಪಡೆದಿರುವ ಪಂಜಾಬ್ ಕಿಂಗ್ಸ್​​ ತಂಡದ ಹರ್ಷಲ್​ ಪಟೇಲ್​ ಬಳಿ ಇದೆ. ಆದರೆ ಈ ಕ್ಯಾಪ್​ ಪಡೆಯಲು ಕೆಕೆಆರ್​ ತಂಡದ ಸ್ಪಿನ್ನರ್​ ವರಣ್​ ಚರ್ಕವರ್ತಿಗೆ ಉತ್ತಮ ಅವಕಾಶವಿದೆ. ವರುಣ್​ ಸದ್ಯ 20 ವಿಕೆಟ್​ ಕಿತ್ತಿದ್ದಾರೆ. ಫೈನಲ್​ ಪಂದ್ಯದಲ್ಲಿ 5 ವಿಕೆಟ್​ ಕಿತ್ತರೆ ಈ ಕ್ಯಾಪ್​ ಇವರ ಪಾಲಾಗಲಿದೆ.

ಇತರ ಬಹುಮಾನ


ಪಂದ್ಯಾವಳಿಯ ಉದಯೋನ್ಮುಖ ಆಟಗಾರನಿಗೆ 20 ಲಕ್ಷ ರೂಪಾಯಿ ನಗದು ಬಹುಮಾನವನ್ನು ಸಿಗಲಿದೆ. ಋತುವಿನ ಅತ್ಯಂತ ಮೌಲ್ಯಯುತ ಆಟಗಾರ 12 ಲಕ್ಷ ರೂಪಾಯಿ, ಇತರ ಪ್ರಶಸ್ತಿಗಳಾದ-ಪವರ್ ಪ್ಲೇಯರ್ ಆಫ್ ದಿ ಸೀಸನ್, ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಮತ್ತು ಗೇಮ್ ಚೇಂಜರ್ ಆಫ್ ದಿ ಸೀಸನ್ ಪಡೆದ ಆಟಗಾರ ಕ್ರಮವಾಗಿ ರೂ 15 ಲಕ್ಷ ಮತ್ತು ರೂ 12 ಲಕ್ಷ ನಗದು ಬಹುಮಾನ ಪಡೆಯಲಿದ್ದಾರೆ.

Continue Reading

ಕ್ರೀಡೆ

KKR vs SRH IPL 2024: ಐಪಿಎಲ್​ ಫೈನಲ್​ ಸಮಾರಂಭದಲ್ಲಿ ಸಂಗೀತ ರಸದೌತಣ ನೀಡಲಿದ್ದಾರೆ ಕೊಹ್ಲಿಯ ಅಪ್ಪಟ ಅಭಿಮಾನಿ

KKR vs SRH IPL 2024: ಫೈನಲ್​ ಪಂದ್ಯಕ್ಕೂ ಮುನ್ನ ವಿಶ್ವ-ಪ್ರಸಿದ್ಧ ಅಮೇರಿಕನ್ ರಾಕ್ ಬ್ಯಾಂಡ್ ಇಮ್ಯಾಜಿನ್ ಡ್ರಾಗನ್ಸ್(Imagine Dragons) ತಂಡದಿಂದ ಅದ್ಧೂರಿ ಸಂಗೀತ ರಸದೌತಣ ಕಾರ್ಯಕ್ರಮ(IPL 2024 closing ceremony) ನಡೆಯಲಿದೆ.

VISTARANEWS.COM


on

KKR vs SRH IPL 2024
Koo

ಚೆನ್ನೈ: 17ನೇ ಆವೃತ್ತಿಯ ಐಪಿಎಲ್(IPL 2024)​ ಟೂರ್ನಿಗೆ ಒಂದು ಅಧಿಕೃತ ತೆರೆ ಬೀಳಲಿದೆ. ಚೆನ್ನೈಯಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(KKR vs SRH IPL 2024)​ ಮುಖಾಮುಖಿಯಾಗುವ ಮೂಲಕ ಟೂರ್ನಿ ಮುಕ್ತಾಯ ಕಾಣದಲಿದೆ. ಫೈನಲ್​ ಪಂದ್ಯಕ್ಕೂ ಮುನ್ನ ವಿಶ್ವ-ಪ್ರಸಿದ್ಧ ಅಮೇರಿಕನ್ ರಾಕ್ ಬ್ಯಾಂಡ್ ಇಮ್ಯಾಜಿನ್ ಡ್ರಾಗನ್ಸ್(Imagine Dragons) ತಂಡದಿಂದ ಅದ್ಧೂರಿ ಸಂಗೀತ ರಸದೌತಣ ಕಾರ್ಯಕ್ರಮ(IPL 2024 closing ceremony) ನಡೆಯಲಿದೆ. ಪ್ರೋಮೋ ಹಂಚಿಕೊಂಡು ಈ ವಿಚಾರವನ್ನು ಸ್ಟಾರ್​ ಸ್ಪೋರ್ಟ್ಸ್​ ತನ್ನ ಅಧಿಕೃತ ಟ್ವೀಟರ್​ ಎಕ್ಸ್​ನಲ್ಲಿ ಪ್ರಕಟಿಸಿದೆ.

ವಿರಾಟ್​ ಕೊಹ್ಲಿಯ(Virat Kohli) ಅಪ್ಪಟ ಅಭಿಮಾನಿಯಾಗಿರುವ ಅಮೆರಿಕನ್​ ಸಿಂಗರ್,​ ಡಾನ್ ರೆನಾಲ್ಡ್ಸ್ ಸಮಾರೋಪ ಕಾರ್ಯಕ್ರಮದಲ್ಲಿ ಹಲವು ಹಾಡುಗಳನ್ನು ಹಾಡಲಿದ್ದಾರೆ. ಸ್ಟಾರ್​ ಸ್ಪೋರ್ಟ್ಸ್​ ಜತೆ ಮಾತನಾಡುವ ವೇಳೆ ತಾನು ಕೊಹ್ಲಿಯ ಅಭಿಮಾನಿ, ಆತ ನಿಜವಾಗಿಯೂ ಗ್ರೇಟೆಸ್ಟ್​ ಆಲ್​ ಟೈಮ್​ ಎಂದರು. ಅಲ್ಲದೆ ಅವರ ಬ್ಯಾಟಿಂಗ್​ ನೋಡುವುದೇ ಒಂದು ಸುಂದರ ಅನುಭವ ಎಂದು ಕೊಹ್ಲಿಯನ್ನು ಗುಣಗಾನ ಮಾಡಿದರು. ಐಪಿಎಲ್​ ಸಮಾರೋಪ ಸಮಾರಂಭವು ಸಂಜೆ 6 ಗಂಟೆಯಿಂದ ಪ್ರಾರಂಭವಾಗಲಿದೆ. ಪಂದ್ಯ 7.30ಕ್ಕೆ ಆರಂಭಗೊಳ್ಳಲಿದೆ.

ಭಾರೀ ಪೈಪೋಟಿ ನಿರೀಕ್ಷೆ


ಕೋಲ್ಕತಾ ವಿರುದ್ಧದ ಲೀಗ್​ ಮತ್ತು ಕ್ವಾಲಿಫೈಯರ್​ ಪಂದ್ಯದಲ್ಲಿ ಸನ್​ರೈಸರ್ಸ್​ ಸೋಲು ಕಂಡಿದ್ದರೂ ಕೂಡ ಫೈನಲ್​ ಪಂದ್ಯದ ಗೇಮ್​ ಪ್ಲಾನ್​ ಬೇರೆಯೆ ಇರಲಿದೆ. ಇದಕ್ಕೆ ಕಾರಣ ಹೈದರಾಬಾದ್​ ತಂಡವನ್ನು ಮುನ್ನಡೆಸುತ್ತಿರುವ ಆಸ್ಟ್ರೇಲಿಯಾದ ನಾಯಕ ಪ್ಯಾಟ್​ ಕಮಿನ್​. ಆಸೀಸ್ ತಂಡ ಹಾಗೂ ಆಟಗಾರರು ಯಾವುದೇ ಫೈನಲ್​ನಲ್ಲಿ ಡಿಫರೆಂಟ್​ ಆಟಕ್ಕೆ ಹೆಸರುವಾಸಿ. ಟ್ರಾವಿಸ್​ ಹೆಡ್​ ಕೂಡ ಇದೇ ತಂಡದಲ್ಲಿದ್ದಾರೆ. ಅತ್ತ ಕೆಕೆಆರ್​ ಪರ ಮಿಚೆಲ್​ ಸ್ಟಾಕ್​ ಇದ್ದಾರೆ. ಜತೆಗೆ ವಿಂಡೀಸ್​ನ ಬಿಗ್​ ಹಿಟ್ಟರ್​ ಆ್ಯಂಡ್ರೆ ರಸೆಲ್​, ಸುನೀಲ್​ ನರೈನ್​ ಕಾಣಿಸಿಕೊಂಡಿದ್ದಾರೆ. ಉಭಯ ಆಟಗಾರರು ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡಕ್ಕೂ ಸೈ ಎನಿಸಿಕೊಂಡಿದ್ದಾರೆ. ಹೀಗಾಗಿ ಫೈನಲ್​ ಪಂದ್ಯ ರೋಚಕ ಮತ್ತು ತೀವ್ರ ಪೈಪೋಟಿಯಿಂದ ಕೂಡಿರಬಹುದು ಎಂದು ನಿರೀಕ್ಷೆ ಮಾಡಬಹುದು.

ಇದನ್ನೂ ಓದಿ KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

ಫೈನಲ್​ನಲ್ಲಿ ವಿಜೇತ ತಂಡ 20 ಕೋಟಿ ರೂಪಾಯಿ ಬಹುಮಾನವನ್ನು ಪಡೆಯಲಿದೆ. ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ತಂಡಕ್ಕೆ 7 ಕೋಟಿ ಮತ್ತು 4ನೇ ಸ್ಥಾನಿಗೆ 6.5 ಕೋಟಿ ರೂ ಸಿಗಲಿದೆ. ಈಗಾಗಲೇ ರಾಜಸ್ಥಾನ್​ ಮತ್ತು ಆರ್​ಸಿಬಿ ಪ್ಲೇ ಆಫ್​ನಲ್ಲಿ ಸೋಲಿ ಕಂಡು ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನ ಪಡೆದಿವೆ. ಹೀಗಾಗಿ ರಾಜಸ್ಥಾನ್​ಗೆ(7 ಕೋಟಿ) ಮತ್ತು ಆರ್​ಸಿಬಿಗೆ(6.5 ಕೋಟಿ) ಮೊತ್ತ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
 ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading

ಕ್ರೀಡೆ

Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Hardik Pandya: ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Hardik Pandya
Koo

ಲಂಡನ್​: ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರ ವಿವಾಹ ಮುರಿದು ಬಿದ್ದಿದೆಯೇ?, ಈ ಜೋಡಿ ವಿಚ್ಛೇದನಕ್ಕೆ ಪಡೆಯಲಿದೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ನತಾಶಾ ರಹಸ್ಯ ಪೋಸ್ಟ್ ಒಂದನ್ನು ಮಾಡಿದ್ದಾರೆ. ಈ ಪೋಸ್ಟ್​ ನೋಡುವಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿದೆ.

ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿದೆ. ಈ ಫೋಟೊವನ್ನು ಅವರು ತಮ್ಮ ಮುಂದಿನ ಜೀವನದ ಅರ್ಥ ಕಲ್ಪಿಸುವ ನಿಟ್ಟಿನಲ್ಲಿಯೇ ಹಾಕಿದಂತಿದೆ.


ವಿಚ್ಛೇದನದ ಸುದ್ದಿಯ ನಡುವೆ, ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದಾರೆ. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಸಾರ್ವಜನಿಕಗಾಗಿ ಹೋಗುತ್ತಿರುವ ವಿಡಿಯೊ ವೈರಲ್ ಆಗಿದ್ದು ಪಾಪರಾಜಿಗಳು (ಕ್ಯಾಮೆರಾಮನ್​ಗಳು) ಅವರಿಬ್ಬರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ನಟಿ ದಿಶಾ ಪಠಾಣಿ ಅವರ ವದಂತಿಯ ಗೆಳೆಯ ಅಲೆಕ್ಸಾಂಡರ್ ಅಲೆಕ್ಸ್ಲಿಕ್​ ಮತ್ತು ನತಾಶಾ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಪಾಪರಾಜಿಗಳಿಂದ ಸಾಕಷ್ಟು ವಿನಂತಿಗಳನ್ನು ಪಡೆದ ನಂತರ ನತಾಶಾ ಪೋಸ್ ನೀಡಿದ್ದಾರೆ. ಹೀಗಾಗಿ ಪಾಂಡ್ಯಾ ಜತೆಗಿನ ಡೈವೋರ್ಸ್​ ಪ್ರಕರಣವನ್ನು ಇನ್ನಷ್ಟು ಆಸಕ್ತಿದಾಯಕವಾಗಿದೆ. ಐಪಿಎಲ್ 2024 ರಲ್ಲಿ ಹಾರ್ದಿಕ್ ತಮ್ಮ ಉನ್ನತ ನಿರೀಕ್ಷೆಗಳಿಗೆ ತಕ್ಕ ಹಾಗೆ ಆಡಿಲ್ಲ. ಪತಿ ಸೋಲುತ್ತಿದ್ದರೂ ಒಂದೇ ಒಂದು ಬಾರಿಯೂ, ನತಾಶಾ ತಮ್ಮ ಪತಿಯ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ಟ್ಯಾಂಡ್​ಗಳಿಗೆ ಬಂದಿರಲಿಲ್ಲ.

ಇದನ್ನೂ ಓದಿ Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

Continue Reading
Advertisement
MLC Election
ಕರ್ನಾಟಕ2 mins ago

MLC Election: ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಿದ್ರೆ ಐತಿಹಾಸಿಕ ಫಲಿತಾಂಶ: ಎಚ್‌ಡಿಕೆ

Iran-Israel Conflict
ವಿದೇಶ10 mins ago

Iran-Israel Conflict: “ಅಚ್ಚರಿಯ ದಾಳಿ ನಿರೀಕ್ಷಿಸಿ”- ಇಸ್ರೇಲ್‌ಗೆ ಇರಾನ್‌ನಿಂದ ವಾರ್ನಿಂಗ್‌

Congress Karnataka
ಕರ್ನಾಟಕ1 hour ago

Congress Karnataka: ಬದಲಾಗ್ತಾರಾ ಕೆಪಿಸಿಸಿ ಅಧ್ಯಕ್ಷರು?; ಡಿಕೆಶಿ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆ ಶುರು!

Malaysia Masters Final
ಕ್ರೀಡೆ1 hour ago

Malaysia Masters Final: ಮಲೇಷ್ಯಾ ಮಾಸ್ಟರ್ಸ್ ಫೈನಲ್​ನಲ್ಲಿ ಸೋಲು ಕಂಡ ಪಿ.ವಿ.ಸಿಂಧು

Priyanka Upendra Red Rock Studio in collaboration with Comer Film Factory
ಸ್ಯಾಂಡಲ್ ವುಡ್1 hour ago

Priyanka Upendra: ’ಕಮರ್ ಫಿಲಂ ಫ್ಯಾಕ್ಟರಿ’ ಸಹಯೋಗದಲ್ಲಿ ‘ರೆಡ್ ರಾಕ್ ಸ್ಟುಡಿಯೊ’ ಶುಭಾರಂಭ: ಪ್ರಿಯಾಂಕ ಉಪೇಂದ್ರ ಸಾಥ್‌!

Mob Attacks
ವಿದೇಶ1 hour ago

Mob Attacks: ಕುರಾನ್ ಅಪವಿತ್ರ ನೆಪ; ಪಾಕಿಸ್ತಾನದಲ್ಲಿ ಕ್ರಿಶ್ಚಿಯನ್ನರ ಮೇಲೆ ಮುಸ್ಲಿಮರ ದಾಳಿ

theft Case
ಚಿಕ್ಕಬಳ್ಳಾಪುರ2 hours ago

Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

Flight Emergency Landing
ದೇಶ2 hours ago

Flight Emergency Landing: ತಪ್ಪಿದ ಮತ್ತೊಂದು ಭಾರೀ ಅವಘಡ; ಸ್ಪೈಸ್‌ ಜೆಟ್‌ ವಿಮಾನ ತುರ್ತು ಭೂಸ್ಪರ್ಶ

Lockup Death
ಪ್ರಮುಖ ಸುದ್ದಿ2 hours ago

Lockup Death: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್; 23 ಕಿಡಿಗೇಡಿಗಳ ಸೆರೆ

theft Case
ಬೆಂಗಳೂರು2 hours ago

Theft case : ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 week ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 week ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌