ಐಪಿಎಲ್‌ನಲ್ಲಿ ಅವಕಾಶ ಕಳೆದುಕೊಂಡಿರುವ ಕ್ರಿಸ್‌ ಗೇಲ್‌ ಆರ್‌ಸಿಬಿ ಮಾಜಿ ಮಾಲೀಕ ವಿಜಯ್‌ ಮಲ್ಯ ಭೇಟಿಯಾಗಿದ್ದೇಕೆ? - Vistara News

ಕ್ರಿಕೆಟ್

ಐಪಿಎಲ್‌ನಲ್ಲಿ ಅವಕಾಶ ಕಳೆದುಕೊಂಡಿರುವ ಕ್ರಿಸ್‌ ಗೇಲ್‌ ಆರ್‌ಸಿಬಿ ಮಾಜಿ ಮಾಲೀಕ ವಿಜಯ್‌ ಮಲ್ಯ ಭೇಟಿಯಾಗಿದ್ದೇಕೆ?

ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ ಅವರನ್ನು ವಿಂಡೀಸ್‌ ಸ್ಫೋಟಕ ಬ್ಯಾಟ್ಸ್‌ಮನ್‌ ಕ್ರಿಸ್‌ ಗೇಲ್‌ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

VISTARANEWS.COM


on

ವಿಜಯ್‌ ಮಲ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೆಸ್ಟ್‌ ಇಂಡೀಸ್‌ ತಂಡದ ಸ್ಫೋಟಕ ಬ್ಯಾಟ್ಸ್‌ಮನ್‌ ಕ್ರಿಸ್‌ ಗೇಲ್‌ ಇತ್ತೀಚೆಗೆ ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅದರೆ, ಅವರದ್ದು ಸೌಹಾರ್ದ ಭೇಟಿ ಎಂಬುದಾಗಿ ಹೇಳಲಾಗಿದೆ.

42 ವರ್ಷದ ಕೆರಿಬಿಯನ್‌ ಆಟಗಾರ ೨೦೧೧ರಿಂದ ೨೦೧೭ರವರೆಗೆ ಐಪಿಎಲ್‌ನ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಆಡಿದ್ದರು. ಈ ಅವಧಿಯಲ್ಲಿ ಅವರು ಆರ್‌ಸಿಬಿ ಮಾಲೀಕರಾಗಿದ್ದ ವಿಜಯ್‌ ಮಲ್ಯ ಅವರನ್ನು ಭೇಟಿಯಾಗಿದ್ದರು. ಆ ಪರಿಚಯದ ಹಿನ್ನೆಲೆಯಲ್ಲಿ ಭಾರತದಿಂದ ಪರಾರಿಯಾಗಿ ಬ್ರಿಟನ್‌ನಲ್ಲಿ ನೆಲೆಯೂರಿರುವ ವಿಜಯ್‌ ಮಲ್ಯ ಅವರನ್ನು ಭೇಟಿಯಾಗಿರಬಹುದು ಎಂದು ಹೇಳಲಾಗಿದೆ.

ಗೇಲ್‌ ಮೆಚ್ಚಿದ ಮಲ್ಯ

ತಮ್ಮನ್ನು ಭೇಟಿಯಾದ ಕ್ರಿಸ್‌ ಗೇಲ್‌ ಅವರನ್ನು ವಿಜಯ್‌ ಮಲ್ಯ ಮೆಚ್ಚಿ ಮಾತನಾಡಿದ್ದಾರೆ. “ನನ್ನ ಗೆಳೆಯ ಯೂನಿವರ್ಸಲ್‌ ಬಾಸ್‌ ಖ್ಯಾತಿಯ ಕ್ರಿಸ್‌ ಗೇಲ್‌ ಅವರು ಮಾತುಕತೆಗೆ ಸಿಕ್ಕರು. ನಾನು ಅವರನ್ನು ಆರ್‌ಸಿಬಿಗೆ ಆಯ್ಕೆ ಮಾಡಿಕೊಂಡ ಬಳಿಕ ಉತ್ತಮ ಗೆಳೆತನ ಹೊಂದಿದ್ದೇವೆ. ಇವರು ಆರ್‌ಸಿಬಿ ಅತ್ಯುತ್ತಮ ಆಯ್ಕೆ ,ʼʼ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಕ್ರಿಸ್‌ ಗೇಲ್‌ ಆರ್‌ಸಿಬಿ ತಂಡದಲ್ಲಿದ್ದಷ್ಟು ದಿನ ಉತ್ತಮ ಪ್ರದರ್ಶನ ತೋರಿದ್ದರು. ಅಲ್ಲದೆ ಸ್ಫೋಟಕ ಬ್ಯಾಟಿಂಗ್‌ ಮೂಲಕ ತಂಡದ ಅವಿಭಾಜ್ಯ ಅಂಗವೇ ಆಗಿದ್ದರು. ಆ ವೇಳೆ ತಂಡದ ನಾಯಕರಾಗಿದ್ದ ವಿರಾಟ್‌ ಕೊಹ್ಲಿ ಜತೆಗೂ ಗೆಳೆತನ ಹೊಂದಿದ್ದರು.

ಆರ್‌ಸಿಬಿ ಪರ ೯೧ ಪಂದ್ಯಗಳನ್ನು ಆಡಿರುವ ಅವರು ೧೫೪. ೪೦ ಸ್ಟ್ರೈಕ್‌ ರೇಟ್‌ನಲ್ಲಿ ೩೪೨೦ ರನ್‌ ಬಾರಿಸಿದ್ದಾರೆ. ಅದರಲ್ಲಿ ೨೧ ಅರ್ಧ ಶತಕಗಳು ಹಾಗೂ ೫ ಶತಕಗಳು ಸೇರಿಕೊಂಡಿವೆ. ಅರ್‌ಸಿಬಿ ಪರ ಅಜೇಯ ೧೭೫ ರನ್‌ ಬಾರಿಸಿರುವುದು ಐಪಿಎಲ್‌ನಲ್ಲಿ ಅವರ ಗರಿಷ್ಠ ರನ್‌ ಎನಿಸಿಕೊಂಡಿದೆ.

ಇದನ್ನೂ ಓದಿ| ಬಟ್ಲರ್ ವಿಧ್ವಂಸಕ ಆಟ, ಹಲವು ದಾಖಲೆ ಧೂಳೀಪಟ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Paris Olympics: ಇದೇ ಮೊದಲ ಬಾರಿಗೆ ಐಎಸ್‌ಎಸ್‌ಎಫ್ ಫೈನಲ್‌ನಲ್ಲಿ ಸ್ಪರ್ಧಿಸಿದ್ದ ಮಹೇಶ್ವರಿ, ಭಾನುವಾರ ನಡೆದ ಚಿನ್ನದ ಪದಕದ ಹೋರಾಟದಲ್ಲಿ ಚಿಲಿಯ ಫ್ರಾನ್ಸಿಸ್ಕಾ ಕ್ರೊವೆಟ್ಟೊ ಚಾಡಿಡ್ ವಿರುದ್ಧ 3-4 ಸಣ್ಣ ಅಂತರದಲ್ಲಿ ಸೋತು ಬೆಳ್ಳಿಗೆ ತೃಪ್ತಿಪಟ್ಟರು.

VISTARANEWS.COM


on

Paris Olympics
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದು ಹಲವು ಭಾರತೀಯ ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳ ವಿಭಾಗದಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಒಲಿಂಪಿಕ್ಸ್​ ಅರ್ಹತೆ(Paris 2024 Olympic quota) ಪಡೆಯುತ್ತಿದ್ದಾರೆ. ಇದೀಗ ಭಾರತದ ಮಹೇಶ್ವರಿ ಚೌಹಾಣ್(Maheshwari Chauhan) ದೋಹಾದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ಫೈನಲ್ ಒಲಿಂಪಿಕ್ ಅರ್ಹತಾ ಚಾಂಪಿಯನ್‌ಷಿಪ್‌ನ ಮಹಿಳಾ ಸ್ಕೀಟ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್​ ಟಿಕೆಟ್​ ಗಿಟ್ಟಿಸಿಕೊಂಡಿದ್ದಾರೆ. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ 21 ನೇ ಕೋಟಾ ಭರ್ತಿಯಾಗಿದೆ.

ಇದೇ ಮೊದಲ ಬಾರಿಗೆ ಐಎಸ್‌ಎಸ್‌ಎಫ್ ಫೈನಲ್‌ನಲ್ಲಿ ಸ್ಪರ್ಧಿಸಿದ್ದ ಮಹೇಶ್ವರಿ, ಭಾನುವಾರ ನಡೆದ ಚಿನ್ನದ ಪದಕದ ಹೋರಾಟದಲ್ಲಿ ಚಿಲಿಯ ಫ್ರಾನ್ಸಿಸ್ಕಾ ಕ್ರೊವೆಟ್ಟೊ ಚಾಡಿಡ್ ವಿರುದ್ಧ 3-4 ಸಣ್ಣ ಅಂತರದಲ್ಲಿ ಸೋತು ಬೆಳ್ಳಿಗೆ ತೃಪ್ತಿಪಟ್ಟರು. ಈ ಸಾಧನೆ ಬಳಿಕ ಮಾತನಾಡಿದ ಮಹೇಶ್ವರಿ, ‘ಇಲ್ಲಿಗೆ ಬರಲು ಬಹಳಷ್ಟು ಕಠಿಣ ಪರಿಶ್ರಮಪಟ್ಟಿದ್ದೇನೆ. ಒಟ್ಟಾರೆಯಾಗಿ ನನ್ನ ಈ ಪ್ರದರ್ಶನ ತೃಪ್ತಿಕರವಾಗಿದೆ’ ಎಂದು ಹೇಳಿದರು.

ಕುಸ್ತಿಯಲ್ಲಿ ವಿನೇಶ್, ಅಂಶು ಮಲಿಕ್​ಗೆ ಒಲಿಂಪಿಕ್ಸ್​ ಟಿಕೆಟ್​


ಕಳೆದ ವಾರ ನಡೆದಿದ್ದ ಕುಸ್ತಿ ಸ್ಪರ್ಧೆಯಲ್ಲಿ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಾಂಪಿಯನ್ ವಿನೇಶ್ ಫೋಗಟ್(Vinesh Phogat) ಅವರು ಏಷ್ಯನ್ ಒಲಿಂಪಿಕ್ ಅರ್ಹತಾ ಸುತ್ತಿನ ಮಹಿಳೆಯರ 50 ಕೆಜಿ ಸ್ಪರ್ಧೆಯಲ್ಲಿ ಸೆಮಿಫೈನಲ್‌ನಲ್ಲಿ ಕಜಕಿಸ್ತಾನ್‌ನ ಲಾರಾ ಗ್ಯಾನಿಕಿಜಿ ಅವರನ್ನು 10-0 ಅಂತರದಿಂದ ಸೋಲಿಸುವ ಮೂಲಕ ಪ್ಯಾರಿಸ್​ ಒಲಿಂಪಿಕ್ಸ್​ಗೆ(Paris Olympics) ಅರ್ಹತೆ ಪಡೆದಿದ್ದಾರೆ. ಅತ್ಯಂತ ಶ್ರೇಷ್ಠ ಪ್ರದರ್ಶನ ತೋರಿದ ವಿನೇಶ್ ಎದುರಾಳಿಯನ್ನು ಕೇವಲ 4:18 ನಿಮಿಷದಲ್ಲಿ ಮಣಿಸಿದರು. 57 ಕೆಜಿ ವಿಭಾಗದಲ್ಲಿ ಅಂಶು ಮಲಿಕ್‌ ಕೂಡ ಒಲಿಂಪಿಕ್ಸ್​ಗೆ(Paris Olympics) ಅರ್ಹತೆ ಪಡೆದರು. ಇವರು ಉಜ್ಬೆಕ್ ಗ್ರಾಪ್ಲರ್ ಅವರನ್ನು 10-0 ಅಂತರದಿಂದ ಸೋಲಿಸಿ ಈ ಸಾಧನೆ ಮಾಡಿದರು.

ಇದನ್ನೂ ಓದಿ IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

ಜುಲೈ 26ಕ್ಕೆ ಒಲಿಂಪಿಕ್ಸ್​ ಆರಂಭ

ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭಕ್ಕೆ(paris olympics 2024 opening ceremony) ದಿನಾಂಕ ನಿಗದಿಯಾಗಿದೆ. ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕ್ರೀಡೆ

IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

IPL 2024: ಆರ್​ಸಿಬಿ ತಂಡ ಗುಜರಾತ್​ ವಿರುದ್ಧ ಗೆಲುವು ಸಾಧಿಸುವ ಮೂಲಕ ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲಿ ಅತಿ ಕಡಿಮೆ ಎಸೆತಗಳನ್ನು ಎದುರಿಸಿ 200 ರನ್​ ಚೇಸಿಂಗ್​ ಮಾಡಿದ ಮೊದಲ ತಂಡ ಎಂಬ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿತು. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ಇಂಡಿಯನ್ಸ್​ ತಂಡದ ಪರ ಇತ್ತು. 2023ರಲ್ಲಿ ಆರ್​ಸಿಬಿ ವಿರುದ್ಧವೇ ಮುಂಬೈ ಈ ದಾಖಲೆ ಬರೆದಿತ್ತು.

VISTARANEWS.COM


on

IPL 2024
Koo

ಅಹಮದಾಬಾದ್​: ಸತತ ಸೋಲಿನಿಂದ ಕಂಗೆಟ್ಟಿದ್ದ ಆರ್​ಸಿಬಿ ಇದೀಗ ಗೆಲುವಿನ ಹಳಿಗೆ ಮರಳಿದೆ. ಇಂದಿನ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್(Gujarat Titans)​ ವಿರುದ್ಧ ಗೆಲ್ಲುವು ಮೂಲಕ ಸತತ 2ನೇ ಹಾಗೂ ಒಟ್ಟಾರೆ ಮೂರನೇ ಗೆಲುವು ದಾಖಲಿಸಿದೆ. ಗುಜರಾತ್​ ವಿರುದ್ಧ 9 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಆರ್​ಸಿಬಿ(Royal Challengers Bengaluru) ಐಪಿಎಲ್​ನಲ್ಲಿ(IPL 2024) ನೂತನ ದಾಖಲೆಯೊಂದನ್ನು ನಿರ್ಮಿಸಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಗುಜರಾತ್​ ಟೈಟಾನ್ಸ್​, ಸಾಯಿ ಸುದರ್ಶನ್​(84*) ಮತ್ತು ಶಾರೂಖ್​ ಖಾನ್​(58) ಅವರ ಅರ್ಧಶತಕದ ಉಪಯುಕ್ತ ಬ್ಯಾಟಿಂಗ್​ ನೆರವಿನಿಂದ 20 ಓವರ್​ಗೆ 3 ವಿಕೆಟ್​ ಕಳೆದುಕೊಂಡು ಭರ್ತಿ 200 ರನ್​ ಪೇರಿಸಿತು. ಜವಾಬಿತ್ತ ಆರ್​ಸಿಬಿ ಫುಲ್​ ಬ್ಯಾಟಿಂಗ್​ ಜೋಶ್​ನೊಂದಿಗೆ ಕೇವಲ 16 ಓವರ್​ಗಳಲ್ಲಿ 1 ವಿಕೆಟ್​ನಷ್ಟಕ್ಕೆ ಇನ್ನೂ 24 ಎಸೆತಗಳು ಬಾಕಿ ಇರುವಂತೆಯೇ 206 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

ಈ ಗೆಲುವಿನ ಮೂಲಕ ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲಿ ಅತಿ ಕಡಿಮೆ ಎಸೆತಗಳನ್ನು ಎದುರಿಸಿ 200 ರನ್​ ಚೇಸಿಂಗ್​ ಮಾಡಿದ ಮೊದಲ ತಂಡ ಎಂಬ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿತು. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ಇಂಡಿಯನ್ಸ್​ ತಂಡದ ಪರ ಇತ್ತು. 2023ರಲ್ಲಿ ಆರ್​ಸಿಬಿ ವಿರುದ್ಧವೇ ಮುಂಬೈ ಈ ದಾಖಲೆ ಬರೆದಿತ್ತು.

ಅತಿ ಹೆಚ್ಚು ಬಾಲ್​ ಉಳಿಸಿ 200 ರನ್​ ಚೇಸಿಂಗ್​ ನಡೆಸಿದ ತಂಡಗಳು


ಆರ್​ಸಿಬಿ-24 ಎಸೆತ ಬಾಕಿ ಇರುವಂತೆ ಗೆಲುವು

ಮುಂಬೈ ಇಂಡಿಯನ್ಸ್​- 21 ಎಸೆತ ಬಾಕಿ ಇರುವಂತೆ ಗೆಲುವು

ಡೆಲ್ಲಿ ಕ್ಯಾಪಿಟಲ್ಸ್​-15 ಎಸೆತ ಬಾಕಿ ಇರುವಂತೆ ಗೆಲುವು

ಮುಂಬೈ ಇಂಡಿಯನ್ಸ್​-12 ಎಸೆತ ಬಾಕಿ ಇರುವಂತೆ ಗೆಲುವು

ಇದನ್ನೂ ಓದಿ RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

ಈ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ವಿಲ್​ ಜಾಕ್ಸ್​ 41 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 5 ಬೌಂಡರಿ ಬಾರಿಸಿ ಭರ್ತಿ 100 ರನ್​ ಪೇರಿಸಿದರು. ಈ ಮೂಲಕ ಐಪಿಎಲ್​ನಲ್ಲಿ ಚೊಚ್ಚಲ ಶತಕ ಪೂರ್ತಿಗೊಳಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ನೀಡಿದ ವಿರಾಟ್​ ಕೊಹ್ಲಿ ಕೇವಲ 32 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿ ಒಟ್ಟು 44 ಎಸೆತಗಳಿಂದ ಅಜೇಯ 70 ರನ್​ ಬಾರಿಸಿ ಮಿಂಚಿದರು.

ದಾಖಲೆ ಬರೆದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಆವೃತ್ತಿಯಲ್ಲಿ 500 ರನ್​ಗಳ ಗಡಿ ದಾಟುವ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 500 ರನ್ ಗಡಿ ದಾಡಿದ ಆಸ್ಟ್ರೇಲಿಯಾದ ಡೇವಿಡ್​ ವಾರ್ನರ್​ ಅವರ ದಾಖಲೆಯನ್ನು ಸರಿಗಟ್ಟಿದರು. ಉಭಯ ಆಟಗಾರರು ಕೂಡ 7 ಬಾರಿ ಈ ಸಾಧನೆ ಮಾಡಿದ್ದಾರೆ. ಗುಜರಾತ್​ ವಿರುದ್ಧ ಕೊಹ್ಲಿ ಬಾರಿಸಿದ ಮೂರನೇ ಅರ್ಧಶತಕ ಇದಾಗಿದೆ. ಒಂದು ಶತಕ ಕೂಡ ಒಳಗೊಂಡಿದೆ.

Continue Reading

ಕ್ರೀಡೆ

YAJAMANA PREMIER LEAGUE SEASON-3: ಈ ಬಾರಿ ಟಿ10 ಮಾದರಿಯಲ್ಲಿ ನಡೆಯಲಿದೆ ಯಜಮಾನ ಪ್ರೀಮಿಯರ್ ಲೀಗ್​

YAJAMANA PREMIER LEAGUE SEASON-3: ಈ ಬಾರಿ ISPL ಮಾದರಿಯಲ್ಲಿ ಯಜಮಾನ ಪ್ರೀಮಿಯರ್ ಲೀಗ್ T10 ಟಚ್ ಕೊಡಲಾಗಿದೆ. ಪ್ರತಿ ತಂಡಗಳಿಗೂ ಮೆಂಟರ್ಸ್ ಗಳಿದ್ದು, ಶ್ರೇಯಸ್ ಮಂಜು, ಸಿಂಪಲ್ ಸುನಿ, ರೋಷನ್ ಬಚ್ಚನ್, ಜಯರಾಮ್ ಕಾರ್ತಿಕ್ ಸೇರಿದಂತೆ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಾಥ್ ಕೊಟ್ಟಿದ್ದಾರೆ.

VISTARANEWS.COM


on

YAJAMANA PREMIER LEAGUE SEASON-3 (2)
Koo

ಬೆಂಗಳೂರು: ಮೂರನೇ ಆವೃತ್ತಿಯ ಯಜಮಾನ ಪ್ರೀಮಿಯರ್ ಲೀಗ್(ವೈಪಿಎಲ್-3)ನ(YAJAMANA PREMIER LEAGUE SEASON-3) ದಿನಾಂಕ ಪ್ರಕಟಗೊಂಡಿದೆ. ಮೇ 4 ಮತ್ತು 5 ರಂದು ಎರಡು ದಿನಗಳ ಕಾಲ‌ ಟೂರ್ನಿ ನಡೆಯಲಿದೆ. ಶನಿವಾರ ತಂಡದ ಜರ್ಸಿ ಕೂಡ ಬಿಡುಗಡೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಟ ಜಯರಾಮ್ ಕಾರ್ತಿಕ್ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದರು.

ಜೆರ್ಸಿ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ನಟ ಜಯರಾಮ್ ಕಾರ್ತಿಕ್, ಒಂದು ಕ್ರಿಕೆಟ್ ಪಂದ್ಯಾವಳಿ ನಡೆಸುವುದು ಎಷ್ಟು ಕಷ್ಟ ಎನ್ನುವುದನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಯಜಮಾನ ಪ್ರೀಮಿಯರ್ ಲೀಗ್​ ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ಇದು ಸಂತಸದ ವಿಚಾರ. ಈ ಲೀಗ್​ 100 ಆವೃತ್ತಿಯನ್ನು ಕಾಣಲಿ ಎಂದು ಹಾರೈಸುತ್ತೇನೆ. ವಿಷ್ಣು ಸರ್​ ಎಲ್ಲರಿಗೂ ಅಚ್ಚುಮೆಚ್ಚು. ಅವರ ಹೆಸರಿಗೆ ತಕ್ಕಂತೆ ಲೀಗ್​ಗೆ ಯಜಮಾನ ಲೀಗ್​ ಎಂದು ಹೆಸರಿಟ್ಟಿದ್ದು ಚೆನ್ನಾಗಿದೆ. ಇದು ನಮ್ಮ ಹೃದಯಕ್ಕೆ ಹತ್ತಿರವಾಗಿದೆ. ವಿಷ್ಣು ಸರ್ ನಮಗೆ ಸ್ಫೂರ್ತಿ. ಈ ಲೀಗ್​ನಲ್ಲಿ ಪಾಲ್ಗೊಳ್ಳುವ ಎಲ್ಲ ತಂಡಗಳಿಗೂ ಆಲ್ ದಿ ಬೆಸ್ಟ್ ಎಂದರು.


ಇದನ್ನೂ ಓದಿ RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

ಯದುನಂದನ್ ಗೌಡ ಮಾತನಾಡಿ, ಯಜಮಾನ ಪ್ರೀಮಿಯರ್ ಲೀಗ್ ನ ಮೂರು ವರ್ಷಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಶುರು ಮಾಡಿದ್ದೇವು.‌ ಪ್ರೀಮಿಯರ್, ಐಪಿಎಲ್ ಅಂತಾ ಕ್ರಿಕೆಟ್ ಪಂದ್ಯಾವಳಿ ಮಾಡುತ್ತಾರೆ. ನಾವು ಯಾಕೆ ವಿಷ್ಣು ಸರ್(Dr.Vishnu Sena Samiti) ಹೆಸರಿನಲ್ಲಿ ಮಾಡಬಾರದು ಎಂದು ಅವರ ಹೆಸರಲ್ಲಿ ಶುರು ಮಾಡಿದೆವು. ಕನ್ನಡ ಇಂಡಸ್ಟ್ರೀಗೆ ಕ್ರಿಕೆಟ್ ಪರಿಚಯಿಸಿದ್ದು,ನಮ್ಮ ಯಜಮಾನರು. ವಿಷ್ಣು ಸರ್ ಕನಸುಗಳಿಗೆ ಬಣ್ಣ ಹಚ್ಚುವ ಕೆಲಸ ನಡೆಯುತ್ತಿಲ್ಲ. ಹೀಗಾಗಿ ಅಭಿಮಾನಿಗಳೇ ಸೇರಿಕೊಂಡು ಯಜಮಾನ ಪ್ರೀಮಿಯರ್ ಲೀಗ್ ಪ್ರಾರಂಭಿಸಿದೆವು. ಸ್ಟಾರ್​ ವಾರ್​ ಬಿಟ್ಟು ಕನ್ನಡ ಚಿತ್ರರಂಗದ ಅಭಿಮಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಕೆಲಸವನ್ನು ಯಜಮಾನ ಪ್ರೀಮಿಯರ್ ಲೀಗ್ ಮೂಲಕ ಮಾಡಲಾಗಿದೆ. ನಿಮ್ಮ ಸಹಕಾರ ಇದ್ದರೆ ಈ ಪಂದ್ಯಾವಳಿಯನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದರು.

ಟಿ10 ಮಾದರಿಯಲ್ಲಿ ಟೂರ್ನಿ


ಬೆಂಗಳೂರಿನ ಅಶೋಕ್ ರೈಸಿಂಗ್ ಕ್ರಿಕೆಟ್ ಗ್ರೌಂಡ್ ನಲ್ಲಿ ಪಂದ್ಯಾವಳಿ ನಡೆಯಲಿದೆ. ಈ ಬಾರಿ ISPL ಮಾದರಿಯಲ್ಲಿ ಯಜಮಾನ ಪ್ರೀಮಿಯರ್ ಲೀಗ್ T10 ಟಚ್ ಕೊಡಲಾಗಿದೆ. ಪ್ರತಿ ತಂಡಗಳಿಗೂ ಮೆಂಟರ್ಸ್ ಗಳಿದ್ದು, ಶ್ರೇಯಸ್ ಮಂಜು, ಸಿಂಪಲ್ ಸುನಿ, ರೋಷನ್ ಬಚ್ಚನ್, ಜಯರಾಮ್ ಕಾರ್ತಿಕ್ ಸೇರಿದಂತೆ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಾಥ್ ಕೊಟ್ಟಿದ್ದಾರೆ. ವೈಪಿಎಲ್ ಅನ್ನು ವಿಷ್ಣು ಸೇನಾ ಸಮಿತಿಯ ಬೆಂಗಳೂರಿನ ಜಿಲ್ಲಾಧ್ಯಕ್ಷ ಯದುನಂದನ್ ಗೌಡ ನಡೆಸುತ್ತಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿಸಿ ಮಲ್ಲಿಕಾರ್ಜುನ್ ಅವರಿಗೆ ಸಾಥ್ ಕೊಡುತ್ತಿದ್ದಾರೆ.


ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ ಪಂದ್ಯ ಶುರು ಮಾಡಿದ ಕೀರ್ತಿ ಡಾ.ವಿಷ್ಣುವರ್ಧನ್ ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣುವರ್ಧನ್​ ಸದಾ ಕ್ರಿಕೆಟ್ ಆಡುತ್ತಿದ್ದರು. ವೃತ್ತಿಪರ ಕ್ರಿಕೆಟ್ ಆಟಗಾರರ ಜತೆಯೂ ಅವರು ಪಂದ್ಯಾವಳಿಗಳನ್ನು ಆಡಿದ್ದರು. ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಕೂಡ ‘ಯಜಮಾನ ಪ್ರೀಮಿಯರ್ ಲೀಗ್’ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದಾರೆ.

Continue Reading

ಕ್ರಿಕೆಟ್

Virat Kohli: ಟೀಕೆಗಳಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ ಕಿಂಗ್​ ಕೊಹ್ಲಿ​

Virat Kohli: ವಿರಾಟ್​ ಕೊಹ್ಲಿ ಅವರು ಈ ಆವೃತ್ತಿಯಲ್ಲಿ 500 ರನ್​ಗಳ ಗಡಿ ದಾಟುವ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 500 ರನ್ ಗಡಿ ದಾಡಿದ ಆಸ್ಟ್ರೇಲಿಯಾದ ಡೇವಿಡ್​ ವಾರ್ನರ್​ ಅವರ ದಾಖಲೆಯನ್ನು ಸರಿಗಟ್ಟಿದರು. ಉಭಯ ಆಟಗಾರರು ಕೂಡ 7 ಬಾರಿ ಈ ಸಾಧನೆ ಮಾಡಿದ್ದಾರೆ.

VISTARANEWS.COM


on

Virat Kohli
Koo

ಅಹಮದಾಬಾದ್​: ಭಾನುವಾರ ನಡೆದ ಐಪಿಎಲ್​ನ ಡಬಲ್​ ಹೆಡರ್​ನ ಹಗಲು ಪಂದ್ಯದಲ್ಲಿ ಬೊಂಬಾಟ್​ ಬ್ಯಾಟಿಂಗ್​ ನಡೆಸಿ ಅಜೇಯ ಅರ್ಧಶತಕ ಬಾರಿಸಿದ ಆರ್​ಸಿಬಿ(Royal Challengers Bengaluru) ಆಟಗಾರ ವಿರಾಟ್​ ಕೊಹ್ಲಿ(Virat Kohli) ಹಲವು ದಾಖಲೆಗಳನ್ನು ಬರೆದಿದ್ದಾರೆ. ಜತೆಗೆ ತಮ್ಮ ಬ್ಯಾಟಿಂಗ್​ ಬಗ್ಗೆ ಟೀಕೆ ಮಾಡಿದ ಎಲ್ಲರಿಗೂ ತೀಕ್ಷವಾದ ಮಾತುಗಳಿಂದ ಬಹಿರಂಗವಾಗಿಯೇ ತಿರುಗೇಟು ನೀಡಿದ್ದಾರೆ.

ವಿರಾಟ್​ ಕೊಹ್ಲಿ ಅವರು ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ರನ್​ ಕಲೆ ಹಾಕಿದರೂ ಕೂಡ ಅವರ ಬ್ಯಾಟಿಂಗ್​ ನಿಧಾನಗತಿಯಿಂದ ಕೂಡಿತ್ತು. ಇದೇ ಕಾರಣಕ್ಕೆ ಸುನೀಲ್​ ಗಾವಾಸ್ಕರ್​, ಆಕಾಶ್​ ಚೋಫ್ರಾ ಸೇರಿ ಅನೇಕ ಮಾಜಿ ಆಟಗಾರರು ಕೊಹ್ಲಿಯನ್ನು ಟೀಕಿಸಿದ್ದರು. ಕೊಹ್ಲಿಯ ಈ ಆಮೆಗತಿಯ ಬ್ಯಾಟಿಂಗ್​ನಿಂದಾಗಿಯೇ ಆರ್​ಸಿಬಿ ಸೋಲು ಕಾಣುತ್ತಿದೆ ಎಂದು ಹೇಳಿದ್ದರು.

ಕಳೆದ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸ್ಪಿನ್ನ್​ ಬೌಲಿಂಗ್​ ದಾಳಿ ಎದುರಿಸಲು ಸಂಪೂರ್ಣವಾಗಿ ಪರದಾಟ ನಡೆಸಿದ್ದರು. ಹೀಗಾಗಿ ಸ್ಪಿನ್​ ಬೌಲಿಂಗ್​ಗೆ ಕೊಹ್ಲಿಗೆ ಆಡಲು ಬರುವುದಿಲ್ಲ ಎನ್ನುವ ಮಾತುಗಳು ಕೂಡ ಕೇಳಿ ಬಂದಿತ್ತು. ಇಂದಿನ ಪಂದ್ಯದಲ್ಲಿ ಬೊಂಬಾಟ್​ ಬ್ಯಾಟಿಂಗ್​ ನಡೆಸಿದ ಕೊಹ್ಲಿ ಕೇವಲ 32 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿ ಒಟ್ಟು 44 ಎಸೆತಗಳಿಂದ ಅಜೇಯ 70 ರನ್​ ಬಾರಿಸಿ ಮಿಂಚಿದರು. ಪಂದ್ಯದ ಮುಕ್ತಾಯದ ಬಳಿಕ ಮಾತನಾಡುವ ವೇಳೆ ತನ್ನ ವಿರುದ್ಧ ಯಾರೆಲ್ಲ ಟೀಕೆ ಮಾಡಿದ್ದಾರೋ ಅವರಿಗೆಲ್ಲ ಮುಟ್ಟಿ ನೋಡುವಂತೆ ತಕ್ಕ ಉತ್ತರ ನೀಡಿದ್ದಾರೆ.

ದಾಖಲೆ ಬರೆದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಆವೃತ್ತಿಯಲ್ಲಿ 500 ರನ್​ಗಳ ಗಡಿ ದಾಟುವ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 500 ರನ್ ಗಡಿ ದಾಡಿದ ಆಸ್ಟ್ರೇಲಿಯಾದ ಡೇವಿಡ್​ ವಾರ್ನರ್​ ಅವರ ದಾಖಲೆಯನ್ನು ಸರಿಗಟ್ಟಿದರು. ಉಭಯ ಆಟಗಾರರು ಕೂಡ 7 ಬಾರಿ ಈ ಸಾಧನೆ ಮಾಡಿದ್ದಾರೆ. ಗುಜರಾತ್​ ವಿರುದ್ಧ ಕೊಹ್ಲಿ ಬಾರಿಸಿದ ಮೂರನೇ ಅರ್ಧಶತಕ ಇದಾಗಿದೆ. ಒಂದು ಶತಕ ಕೂಡ ಒಳಗೊಂಡಿದೆ.

ಇದನ್ನೂ ಓದಿ IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

ಪಂದ್ಯ ಗೆದ್ದ ಆರ್​ಸಿಬಿ


ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಗುಜರಾತ್​ ಟೈಟಾನ್ಸ್​ ಸಾಯಿ ಸುದರ್ಶನ್​(84*) ಮತ್ತು ಶಾರೂಖ್​ ಖಾನ್​(58) ಅರ್ಧಶತಕದ ಉಪಯುಕ್ತ ಬ್ಯಾಟಿಂಗ್​ ನೆರವಿನಿಂದ 20 ಓವರ್​ಗೆ 3 ವಿಕೆಟ್​ ಕಳೆದುಕೊಂಡು ಭರ್ತಿ 200 ರನ್​ ಪೇರಿಸಿತು. ಜವಾಬಿತ್ತ ಆರ್​ಸಿಬಿ ಫುಲ್​ ಬ್ಯಾಟಿಂಗ್​ ಜೋಶ್​ನೊಂದಿಗೆ ಕೇವಲ 16 ಓವರ್​ಗಳಲ್ಲಿ 1 ವಿಕೆಟ್​ನಷ್ಟಕ್ಕೆ 206 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ವಿಲ್​ ಜಾಕ್ಸ್​ 41 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 5 ಬೌಂಡರಿ ಬಾರಿಸಿ ಭರ್ತಿ 100 ರನ್​ ಪೇರಿಸಿದರು. ಈ ಮೂಲಕ ಐಪಿಎಲ್​ನಲ್ಲಿ ಚೊಚ್ಚಲ ಶತಕ ಪೂರ್ತಿಗೊಳಿಸಿದರು.

Continue Reading
Advertisement
Narendra Modi
Lok Sabha Election 20244 mins ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ32 mins ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ38 mins ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ47 mins ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ1 hour ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

IPL 2024
ಕ್ರೀಡೆ2 hours ago

IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

PUC Exam 2024
ಕರ್ನಾಟಕ2 hours ago

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

Money Guide
ಮನಿ-ಗೈಡ್2 hours ago

Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

lehar singh siroya
ದಾವಣಗೆರೆ2 hours ago

Lehar Singh Siroya: ಹರಿಹರದ ಪಂಚಮಸಾಲಿ ಜಗದ್ಗುರು ಪೀಠಕ್ಕೆ ರಾಜ್ಯಸಭಾ ಸದಸ್ಯ ಲೆಹರ್​ಸಿಂಗ್ ಭೇಟಿ

Car Accident
ಬೆಂಗಳೂರು2 hours ago

Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20247 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20249 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202411 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202411 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ14 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌