Vinesh Phogat: ಇಂದು ವಿನೇಶ್ ಫೋಗಟ್ ಬೆಳ್ಳಿ ಪದಕದ ತೀರ್ಪು ಪ್ರಕಟ - Vistara News

ಕ್ರೀಡೆ

Vinesh Phogat: ಇಂದು ವಿನೇಶ್ ಫೋಗಟ್ ಬೆಳ್ಳಿ ಪದಕದ ತೀರ್ಪು ಪ್ರಕಟ

Vinesh Phogat:ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿದ ಬೆನ್ನಲ್ಲೇ ವಿಶ್ವ ಕುಸ್ತಿ ಆಡಳಿತ ಮಂಡಳಿ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತಮ್ಮ ನಿಯಮದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ.

VISTARANEWS.COM


on

Vinesh Phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್: ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಅವರು ತಮ್ಮ 100 ಗ್ರಾಂ ಹೆಚ್ಚುವರಿ ತೂಕದ ಅನರ್ಹತೆಯನ್ನು ಪ್ರಶ್ನಿಸಿ ಕ್ರೀಡಾ ನ್ಯಾಯಮಂಡಳಿಗೆ ಸಲ್ಲಿಸಿರುವ ಮೇಲ್ಮನವಿಯ(Vinesh Phogat CAS Hearing) ತೀರ್ಪು (ಇಂದು) ಮಂಗಳವಾರ ಹೊರಳಬೀಳಲಿದೆ. ಪ್ಯಾರಿಸ್​ ಒಲಿಂಪಿಕ್ಸ್​ ಕುಸ್ತಿ ಫೈನಲ್​ ಪಂದ್ಯಕ್ಕೂ ಮುನ್ನ ದೇಹತೂಕ ಪರೀಕ್ಷೆಯಲ್ಲಿ 100 ಗ್ರಾಂ ಹೆಚ್ಚು ಕಂಡು ಬಂದ ಕಾರಣ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿತ್ತು. ಇದರಿಂದ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವ ಅವಕಾಶ ಕೈಜಾರಿತ್ತು.

ಅನರ್ಹ ಮಾಡಿದ್ದ ಬಗ್ಗೆ ಪ್ರಶ್ನಿಸಿ ವಿನೇಶ್ ಅವರು ತಮಗೆ ಜಂಟಿ ಬೆಳ್ಳಿ ಪದಕವನ್ನು ನೀಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಒಲಿಂಪಿಕ್ಸ್‌ನಲ್ಲಿರುವ ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿಚಾರಣೆ ನಡೆಸಿ ಒಲಿಂಪಿಕ್ಸ್​ ಮುಕ್ತಾಯಕ್ಕೂ ಮುನ್ನ ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು. ಆದರೆ 2 ಬಾರಿ ಈ ತೀರ್ಪು ಪ್ರಕಟ ಮುಂದೂಡಿಕೆಯಾಗಿತ್ತು. ಇದೀಗ ಇಂದು (ಆಗಸ್ಟ್​ 13) ಅಧಿಕೃತವಾಗಿ ತೀರ್ಪು ಪ್ರಕಟಿಸುವುದಾಗಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(CAS) ತಿಳಿಸಿದೆ. ರಾತ್ರಿ 9:30ಕ್ಕೆ ಈ ತೀರ್ಪು ಪ್ರಕಟಗೊಳ್ಳಲಿದೆ. ಒಂದೊಮ್ಮೆ ವಿನೇಶ್​ಗೆ ಬೆಳ್ಳಿ ಪದಕ ನೀಡುವಂತೆ ತೀರ್ಪು ಪ್ರಕಟಗೊಂಡರೆ ಭಾರತದ ಪದಕ ಸಂಖ್ಯೆ 7ಕ್ಕೆ ಏರಲಿದೆ. ಜತೆಗೆ ವಿನೇಶ್​ ಐತಿಹಾಸಿಕ ಪದಕ ಗೆದ್ದ ಭಾರತೀಯ ಮಹಿಳಾ ಕುಸ್ತಿಪಟು ಎನ್ನುವ ಹಿರಿಮೆಗೂ ಪಾತ್ರರಾಗಲಿದ್ದಾರೆ.

ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದುಶ್ಪತ್ ಸಿಂಘಾನಿಯಾ ಸೇರಿದಂತೆ ವಿನೇಶ್ ಅವರ ವಕೀಲರು ವಿನೇಶ್​ ಪರ ವಾದ ಮಾಡಿದ್ದಾರೆ. ತೂಕ ಹೆಚ್ಚಳವು ದೇಹದ ನೈಸರ್ಗಿಕ ಚೇತರಿಕೆ ಪ್ರಕ್ರಿಯೆಯಿಂದಾಗಿ ಮತ್ತು ದೇಹ ನೋಡಿಕೊಳ್ಳುವುದು ಕ್ರೀಡಾಪಟುವಿನ ಮೂಲಭೂತ ಹಕ್ಕು ಎಂದು ವಾದಿಸಿದ್ದಾರೆ. ಸ್ಪರ್ಧೆಯ 1ನೇ ದಿನದಂದು ಆಕೆಯ ದೇಹದ ತೂಕವು ನಿಗದಿತ ಮಿತಿಗಿಂತ ಕಡಿಮೆಯಾಗಿತ್ತು. ಬಳಿಕ ಏಕಾಏಕಿ ಏರಿಕೆಯಾಗಿದೆ. ಅದು ವಂಚನೆಯಲ್ಲ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ Vinesh Phogat : ವಿನೇಶ್​ ಫೋಗಟ್ ಎಫೆಕ್ಟ್​​; ತೂಕದ ನಿಯಮಗಳ ಬದಲಾವಣೆಗೆ ವಿಶ್ವ ಕುಸ್ತಿ ಒಕ್ಕೂಟ ನಿರ್ಧಾರ?

ಸೆಮಿಫೈನಲ್​ ವೇಳೆ ವಿನೇಶ್​ 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಮಹಿಳೆಯರ 50 ಕೆ.ಜಿ ಚಿನ್ನದ ಪದಕದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿದ ಬೆನ್ನಲ್ಲೇ ವಿಶ್ವ ಕುಸ್ತಿ ಆಡಳಿತ ಮಂಡಳಿ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತಮ್ಮ ನಿಯಮದಲ್ಲಿ ಬದಲಾವಣೆ ಮಾಡಲು ಮುಂದಾಗಿದೆ. ತೂಕದ ನಿಯಮಗಳು ಸಂಪೂರ್ಣವಾಗಿ ಬದಲಾಗುವ ಸಾಧ್ಯತೆಯಿಲ್ಲವಾದರೂ, ಕ್ರೀಡಾಪಟುಗಳ ಸುರಕ್ಷತೆ ಮತ್ತು ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ಸಣ್ಣ ಮಾರ್ಪಾಡುಗಳನ್ನು ಮಾಡಲಾಗುವುದು ಎಂದು ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Viral News: ಒಲಿಂಪಿಕ್ಸ್​ ಚಿನ್ನ ಗೆದ್ದ ಸಾಧಕನಿಗೆ ಎಮ್ಮೆ ಉಡುಗೊರೆ ಕೊಟ್ಟ ಮಾವ!

Viral News: ಚಿನ್ನ ಗೆದ್ದ ನದೀಮ್​ಗೆ ಪಾಕಿಸ್ತಾನ ಪ್ರಾಂತ್ಯದ ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ 10 ಕೋಟಿ ರೂ., ಸಿಂಧ್ ಸರ್ಕಾರ ಐದು ಕೋಟಿ ರೂ., ವಿಶ್ವ ಅಥ್ಲೀಟ್ ಫೆಡರೇಶನ್ ಒಂದು ಕೋಟಿ 40 ಲಕ್ಷ ಬಹುಮಾನ ಘೋಷಿಸಿದ್ದು, ಸಿಂಧ್ ಗವರ್ನರ್ ಕಮ್ರಾನ್ ತೆಸ್ಸೋರಿ, ಕ್ರಿಕೆಟಿಗ ಅಹ್ಮದ್ ಶೆಹಜಾದ್ ಮತ್ತು ಓರ್ಷ ಗಾಯಕ 30 ಲಕ್ಷಗಳನ್ನು ನೀಡಿದ್ದರು.

VISTARANEWS.COM


on

Viral News
Koo

ಕರಾಚಿ: ಸಾಮಾನ್ಯವಾಗಿ ಕ್ರೀಡೆಯಲ್ಲಿ ಪ್ರಶಸ್ತಿ ಗೆದ್ದಾಗ ಈ ಕ್ರೀಡಾಪಟುವಿಗೆ ನಗದು ಬಹುಮಾನ, ಕಾರು, ಬೈಕ್​ ಹೀಗೆ ಇತರ ಬೆಲೆ ಬಾಳುವ ವಸ್ತುಗಳನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ಆದರೆ, ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಜಾವೆಲಿನ್​ ಎಸೆತಗಾರ ಅರ್ಷದ್​ ನದೀಮ್​ಗೆ(Arshad Nadeem) ವಿಶೇಷ(Viral News) ಉಡುಗೊರೆಯೊಂದು ದೊರಕಿದೆ. ಅದು ಕೂಡ ಅವರ ಮಾವನಿಂದ.

ಹೌದು, ಅರ್ಷದ್​ಗೆ ಅವರ ಪತ್ನಿಯ ತಂದೆ(ಮಾವ) ಮಹಮ್ಮದ್​ ನವಾಜ್​ ಅವರು ಎಮ್ಮೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಹಮ್ಮದ್​ ನವಾಜ್​, “ನಮ್ಮ ಗ್ರಾಮದಲ್ಲಿ ಎಮ್ಮೆಯನ್ನು ಉಡುಗೊರೆಯಾಗಿ ನೀಡುವುದು ಶ್ರೇಷ್ಠ ಗೌರವವಾಗಿದೆ” ಎಂದು ಹೇಳಿದ್ದಾರೆ.

ಚಿನ್ನ ಗೆದ್ದ ನದೀಮ್​ಗೆ ಪಾಕಿಸ್ತಾನ ಪ್ರಾಂತ್ಯದ ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ 10 ಕೋಟಿ ರೂ., ಸಿಂಧ್ ಸರ್ಕಾರ ಐದು ಕೋಟಿ ರೂ., ವಿಶ್ವ ಅಥ್ಲೀಟ್ ಫೆಡರೇಶನ್ ಒಂದು ಕೋಟಿ 40 ಲಕ್ಷ ಬಹುಮಾನ ಘೋಷಿಸಿದ್ದು, ಸಿಂಧ್ ಗವರ್ನರ್ ಕಮ್ರಾನ್ ತೆಸ್ಸೋರಿ, ಕ್ರಿಕೆಟಿಗ ಅಹ್ಮದ್ ಶೆಹಜಾದ್ ಮತ್ತು ಓರ್ಷ ಗಾಯಕ 30 ಲಕ್ಷಗಳನ್ನು ನೀಡಿದ್ದರು.

ಪಾಕಿಸ್ತಾನದ ಪಂಜಾಬ್‌ನಲ್ಲಿರುವ ಮಿಯಾನ್‌ ಚಾನುವಿನಲ್ಲಿನ ಬಡ ಪಂಜಾಬಿ ಕುಟುಂಬದಲ್ಲಿ ಜನಿಸಿದ ಅರ್ಷದ್‌ ನದೀಮ್‌, ಇಂದು ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಬೇಕಾದರೆ ಅವರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ತಂದೆ ಮುಹಮ್ಮದ್‌ ಅಶ್ರಫ್‌ ಗಾರೆ ಮೇಸ್ತ್ರಿ ಆಗಿದ್ದ ಕಾರಣ, ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಅರ್ಷದ್‌ ನದೀಮ್‌ ಕೂಡ ತಂದೆಯ ಜತೆ ಗಾರೆ ಕೆಲಸವನ್ನು ಮಾಡಿದ್ದರು. ಇದರೆ ಜತೆಗೆ ಕ್ರೀಡೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಅರ್ಷದ್​ ಅವರು ರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹಲವು ಪದಕಗಳನ್ನು ಗೆದ್ದು ಕೊಟ್ಟರು ಕೂಡ ಪಾಕಿಸ್ತಾನ ಸರ್ಕಾರ ಅವರಿಗೆ ಕಿಂಚಿತ್ತು ಹಣಕಾಸಿಕ ನೆರವು ನೀಡಲೇ ಇಲ್ಲ. ಕಳೆದ ಟೋಕಿಯೋ ಒಲಿಂಪಿಕ್ಸ್‌ನಲ್ಲಿ, ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿಯೂ ನದೀಮ್ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅವರಿಗೆ ಪಾಕ್‌ ಸರ್ಕಾರದಿಂದ ಯಾವುದೇ ಬೆಂಬಲ ಸಿಕ್ಕಿರಲಿಲ್ಲ. ಊರಿನ ಜನರಿಂದ ಸಿಕ್ಕ ಹಣಕಾಸಿಕ ನೆರವಿನಿಂದ ಟೋಕಿಯೊದಲ್ಲಿ ಪಾಲ್ಗೊಂಡಿದ್ದರು. ಅಲ್ಲಿ 5ನೇ ಸ್ಥಾನ ಪಡೆದಿದ್ದರು. ಈ ಬಾರಿ ಪ್ಯಾರಿಸ್​ನಲ್ಲಿ ಚಿನ್ನದ ಪದಕ ಗೆದ್ದು ಸಂಭ್ರಮಿಸಿದರು.

ಇದನ್ನೂ ಓದಿ Viral News : ಪತ್ನಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಭೀಕರವಾಗಿ ಕೊಂದ ಪತಿ

ಅರ್ಷದ್​ ನದೀಮ್​ (Arshad Nadeem)ಗೆ ಪ್ರೋತ್ಸಾಹವಾಗಿ ಪಾಕಿಸ್ತಾನ ಸರ್ಕಾರ ಕಿಂಚಿತ್ತು ಸಹಾಯ ಮಾಡದಿದ್ದರೂ ಕೂಡ ಇದೀಗ ಅವರಿಗೆ ಕೋಟಿಗಟ್ಟಲೇ ತೆರಿಗೆ ಕಟ್ಟುವಂತೆ ಸೂಚಿಸಿದೆ. ಸುಮಾರು 3 ರಿಂದ 6 ಕೋಟಿ ರೂ. ತೆರಿಗೆ ಪಾವತಿಸುವಂತೆ ನದೀಮ್​ಗೆ ಸೂಚಿಸುವ ಮೂಲಕ ಶಾಕ್​ ಕೊಟ್ಟಿದೆ.

ಫೆಡರಲ್ ಬೋರ್ಡ್ ಆಫ್ ರೆವೆನ್ಯೂ ನಿಯಮಗಳು ಹೇಳುವ ಪ್ರಕಾರ, ಆಟಗಾರರರು ಪಡೆದ ಬಹುಮಾನದ ಹಣಕ್ಕೆ ಸಂಬಂಧಿಸಿದಂತೆ ತೆರಿಗೆ ಪಾವತಿಸಬೇಕಾಗುತ್ತದೆ. ಅರ್ಷದ್​ ನದೀಮ್​ ಈವರೆಗೂ 20 ಕೋಟಿ ರೂ. ಬಹುಮಾನ ಮೊತ್ತವನ್ನು ಸ್ವೀಕರಿಸಿದ್ದು, ಈ ಮೊತ್ತಕ್ಕೆ ಅವರು ತೆರಿಗೆಯನ್ನು ಪಾವತಿಸಬೇಕಿದೆ. ಫೈಲರ್‌ಗಳು ಮತ್ತು ನಾನ್‌ಫೈಲರ್‌ಗಳಿಗೆ ತೆರಿಗೆ ದರ ವಿಭಿನ್ನವಾಗಿದೆ. ಫೈಲರ್‌ಗಳು ಒಟ್ಟು ಮೊತ್ತದ ಶೇಕಡಾ 15 ರಷ್ಟು ಪಾವತಿಸಬೇಕಾಗುತ್ತದೆ, ಆದರೆ ಫೈಲ್ ಮಾಡದವರು ಸ್ವೀಕರಿಸಿರುವ ಮೊತ್ತದ ಶೇಕಡಾ 30 ರಷ್ಟು ಪಾವತಿಸಬೇಕಾಗುತ್ತದೆ. ಅರ್ಷದ್ ತೆರಿಗೆ ಸಲ್ಲಿಸುವವರಾಗಿದ್ದರೆ, ಅವರು ಬಹುಮಾನದ ಮೊತ್ತದಲ್ಲಿ 3 ಕೋಟಿ ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಒಂದು ವೇಳೆ ಇಲ್ಲವಾದಲ್ಲಿ 6 ಕೋಟಿ ರೂ. ಮೊತ್ತ ಪಾವತಿಸಬೇಕಾಗುತ್ತದೆ.

Continue Reading

ಕ್ರೀಡೆ

Neeraj Chopra: ಪ್ಯಾರಿಸ್‌ನಿಂದ ಜರ್ಮನಿಗೆ ತೆರಳಿದ ಚೋಪ್ರಾ; ಭಾರತಕ್ಕೆ ಮರಳುವುದು ವಿಳಂಬ

Neeraj Chopra: ಕುಟುಂಬದ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ನೀರಜ್​ ಸುಮಾರು ಒಂದು ತಿಂಗಳ ನಂತರ ಭಾರತಕ್ಕೆ ಮರಳಬಹುದು ಎನ್ನಲಾಗಿದೆ.

VISTARANEWS.COM


on

Neeraj Chopra
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​(paris olympics) ಬೆಳ್ಳಿ ಪದಕ ವಿಜೇತ ಭಾರತದ ಸ್ಟಾರ್​ ಜಾವೆಲಿನ್ ಎಸೆತಗಾರ ನೀರಜ್​ ಚೋಪ್ರಾ(Neeraj Chopra) ಅವರು ತವರಿಗೆ ಮರಳುವುದು ಕೊಂಚ ತಡವಾಗಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ನೀರಜ್​ ತಮ್ಮ ಗಾಯಕ್ಕೆ ಶಸ್ತ್ರಚಿಕಿತ್ಸೆಯ(neeraj chopra surgery) ಕುರಿತು ವೈದ್ಯರಿಂದ ಸಲಹೆ ಪಡೆಯಲು ಪ್ಯಾರಿಸ್‌ನಿಂದ ನೇರವಾಗಿ ಜರ್ಮನಿಗೆ ತೆರಳಿದ್ದಾರೆ. ಹೀಗಾಗಿ ಅವರು ಭಾರತಕ್ಕೆ ಮರಳುವುದು ವಿಳಂಬವಾಗಲಿದೆ.

ಕುಟುಂಬದ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ನೀರಜ್​ ಸುಮಾರು ಒಂದು ತಿಂಗಳ ನಂತರ ಭಾರತಕ್ಕೆ ಮರಳಬಹುದು ಎನ್ನಲಾಗಿದೆ. ‘ನೀರಜ್​ ಜರ್ಮನಿಯಲ್ಲಿ ವೈದ್ಯರನ್ನು ಭೇಟಿಯಾಗಲಿದ್ದಾರೆಂಬುದು ತಿಳಿದಿದೆ. ಆದರೆ, ಉಳಿದ ಯಾವುದೇ ಮಾಹಿತಿಗಳು ಗೊತ್ತಿಲ್ಲ’ ಎಂದು ನೀರಜ್ ಸಂಬಂಧಿಯೊಬ್ಬರು ಪಿಟಿಐಗೆ ಮಾಹಿ ನೀಡಿದ್ದಾರೆ.

ತೊಡೆಯ ಸ್ನಾಯುಗಳಿಗೆ ಸಂಬಂಧಿಸಿದ ನೋವಿನಿಂದ ಬಳಲುತ್ತಿರುವ ನೀರಜ್​ ನೋವಿನ ಮಧ್ಯೆಯೇ ಈ ಬಾರಿ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿದಿದ್ದರು. ಗಾಯದ ಬಗ್ಗೆ ಸ್ವತಃ ನೀರಜ್​ ಅವರೇ ಮಾಹಿತಿ ನೀಡಿದ್ದರು. ಜತೆಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದರೆ ಇದನ್ನು ಮಾಡಿಸುವುದಾಗಿ ತಿಳಿಸಿದ್ದರು.

ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ (Neeraj Chopra) ಮತ್ತು ಶೂಟರ್ ಮನು ಭಾಕರ್ (Manu Bhaker) ಕಾರ್ಯಕ್ರಮವೊಂದರಲ್ಲಿ ಗುಟ್ಟಾಗಿ ಮಾತನಾಡುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ. ಭಾರತದ ಕ್ರೀಡಾ ಕ್ಷೇತ್ರ ನವ ತಾರೆಗಳಾಗಿರುವ ಅವರಿಬ್ಬರೂ ಪರಸ್ಪರ ಸ್ನೇಹದ ಬಲೆಯಲ್ಲಿ ಬಿದ್ದಿದ್ದಾರೆ ಎಂಬುದಾಗಿ ಅಭಿಮಾನಿಗಳ ಅನುಮಾನ. ಅವರಿಬ್ಬರೂ ಮಾತನಾಡುತ್ತಿರುವ ವಿಡಿಯೊವನ್ನು ವೈರಲ್ ಮಾಡಿರುವ ನೆಟ್ಟಿಗರು ನಾನಾ ರೀತಿಯ ಪ್ರಶ್ನೆಗಳನ್ನು ಕೇಳಿದ್ದಾರೆ. ಅಲ್ಲದೆ ಇಬ್ಬರೂ ಮಾತನಾಡುವಾರ ಪರಸ್ಪರ ದೃಷ್ಟಿ ನೆಡದ ಕಾರಣ ಇವರೊಳಗೇನೋ ನಡಿತಾ ಇದೆ ಎಂಬುದಾಗಿ ನೆಟ್ಟಿಗರು ಅಂದಾಜಿಸಿದ್ದಾರೆ.

ಇದನ್ನೂ ಓದಿ Neeraj Chopra : ನೀರಜ್ ಚೋಪ್ರಾ ಭೇಟಿಯಾದ ಫುಟ್ಬಾಲ್ ತಂಡದ ನಾಯಕ ಸುನೀಲ್ ಛೆಟ್ರಿ

ಟೋಕಿಯೊ ಒಲಿಂಪಿಕ್ಸ್​ನಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದ ಚೋಪ್ರಾ ಅವರು ಚಿನ್ನ ಗೆದ್ದು ಭಾರೀ ಸುದ್ದಿಯಾಗಿದ್ದರು. ಈ ಬಾರಿ ನೋವಿನಲ್ಲೂ ಹೋರಾಟ ನಡೆಸಿ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ಒಲಿಂಪಿಕ್ ಪದಕಗಳನ್ನು ಪಡೆದ ಭಾರತದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಎಂಬ ಹಿರಿಮೆಗೆ ಭಾಜನರಾದರು.

ನೀರಜ್​ ಹಾಗೂ ಮನು ಹರಿಯಾಣದ ಮೂಲದವರು. ಇಬ್ಬರೂ ಕ್ರೀಡೆಯ ಪ್ರೇರಕ ಕುಟುಂಬಕ್ಕೆ ಸೇರಿದವರು. ಹೀಗಾಗಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡು ಮಾತನಾಡಿದ್ದು ಅಭಿಮಾನಿಗಳಲ್ಲಿ ನೂರು ಪ್ರಶ್ನೆಗಳನ್ನು ಸೃಷ್ಟಿಸಿತು. ಅವರು ಡೇಟಿಂಗ್ ಮಾಡುತ್ತಿರಬಹುದು ಎಂದು ಹಲವರು ಅಂದಾಜಿಸಿದ್ದಾರೆ. ಅವರಿಬ್ಬರು ಸಂಬಂಧದಲ್ಲಿಲ್ಲ ಎಂದು ತಿಳಿದಿದ್ದರೂ ಅನೇಕ ನಿಷ್ಠಾವಂತ ಅಭಿಮಾನಿಗಳು ಅವರು ದಂಪತಿಗಳಾಗಬೇಕೆಂದು ಆಶಿಸಿದರು. ಇಬ್ಬರೂ ಮಾತನಾಡುವ ವೀಡಿಯೊದ ಬಗ್ಗೆ ನಾನಾ ಬಗೆಯ ಕಾಮೆಂಟ್ ಮಾಡಿದ್ದಾರೆ.

ಇದೇ ರೀತಿ ಮನು ಭಾಕರ್ ಅವರ ತಾಯಿ ಸುಮೇಧಾ ಭಾಕರ್ ಅವರು ನೀರಜ್ ಅವರ ಕೈ ಹಿಡಿದುಕೊಂಡು ಮಾತನಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾಕರ್ ಅವರ ತಾಯಿ ನೀರಜ್ ಅವರನ್ನು ತಮ್ಮ ಮಗಳಿಗೆ ಸಂಭಾವ್ಯ ಜೋಡಿಯಾಗಿ ನಿರ್ಣಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅನೇಕ ಬಳಕೆದಾರರು ಪ್ರತಿಕ್ರಿಯೆ ಕೊಟ್ಟಿದ್ದಾರೆ.

Continue Reading

ಕ್ರೀಡೆ

 Emmanuel Macron : ಒಲಿಂಪಿಕ್ಸ್​ಗೆ ಆತಿಥ್ಯ ವಹಿಸುವ ಭಾರತದ ಉತ್ಸಾಹಕ್ಕೆ ಬೆಂಬಲ ನೀಡಿದ ಫ್ರಾನ್ಸ್​ ಪ್ರಧಾನಿ ಎಮ್ಯಾನುಯೆಲ್ ಮ್ಯಾಕ್ರೋನ್

Emmanuel Macron : ಭಾರತ ಮತ್ತು ಈಜಿಪ್ಟ್ ಎರಡೂ ಈ ಹಿಂದೆ ಒಲಿಂಪಿಕ್ಸ್ ಅನ್ನು ಆಯೋಜಿಸಿಲ್ಲ/ ಎರಡೂ ದೇಶಗಳು ತಮ್ಮ ಕ್ರೀಡಾ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿರುವುದರಿಂದ ಇದನ್ನು ಆದ್ಯತಾ ಕ್ರಮವೆಂದು ಲೆಕ್ಕಹಾಕಿದೆ. ಒಲಿಂಪಿಕ್ಸ್ ಆತಿಥ್ಯ ವಹಿಸುವುದು ತೀವ್ರ ಸ್ಪರ್ಧೆಯಾಗಿದೆ ಎಂದು ಒಪ್ಪಿಕೊಂಡ ಅವರು, ಭಾರತವು ತನ್ನ ಸಾಮರ್ಥ್ಯವನ್ನು ಕಡೆಗಣಿಸಬಾರದು ಎಂದರು. 2024ರ ಒಲಿಂಪಿಕ್ಸ್​ಗೆ ಬಿಡ್ ಮಾಡುವಾಗ ಅಮೆರಿಕದೊಂದಿಗಿನ ಸ್ಪರ್ಧೆಯನ್ನು ಅವರು ನೆನಪಿಸಿಕೊಂಡರು.

VISTARANEWS.COM


on

Emmanuel Macron
Koo

ಬೆಂಗಳೂರು: ಒಲಿಂಪಿಕ್ ಕ್ರೀಡಾಕೂಟದ ಆತಿಥ್ಯ ವಹಿಸುವ ಭಾರತದ ಸಾಮರ್ಥ್ಯದ ಬಗ್ಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ನಂಬಿಕೆ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಜಾಗತಿಕ ಕ್ರೀಡಾಕೂಟ ಆಯೋಜಿಸುವ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ. 2036 ರಲ್ಲಿ ಪ್ರತಿಷ್ಠಿತ ಅಂತರರಾಷ್ಟ್ರೀಯ ಕ್ರೀಡಾಕೂಟದ ಆತಿಥ್ಯ ವಹಿಸುವುದಕ್ಕಾಗಿ ಭಾರತ ಯತ್ನಿಸುತ್ತಿದೆ. ಈ ನಡುವೆ ಜಿಯೋ ಸಿನೆಮಾಗೆ ನೀಡಿದ ಸಂದರ್ಶನದಲ್ಲಿ, ಮ್ಯಾಕ್ರನ್ ಭಾರತದ ಸಾಮರ್ಥ್ಯದ ಬಗ್ಗೆ ತಮ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ 2026ರ ಒಲಿಂಪಿಕ್ಸ್​​ ಭಾರತ ಮತ್ತು ಈಜಿಪ್ಟ್ ಸೇರಿದಂತೆ ಹಲವಾರು ದೇಶಗಳು ಬಿಡ್ ಸಲ್ಲಿಸಿವೆ.

ಭಾರತ ಮತ್ತು ಈಜಿಪ್ಟ್ ಎರಡೂ ಈ ಹಿಂದೆ ಒಲಿಂಪಿಕ್ಸ್ ಅನ್ನು ಆಯೋಜಿಸಿಲ್ಲ. ಎರಡೂ ದೇಶಗಳು ತಮ್ಮ ಕ್ರೀಡಾ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿರುವುದರಿಂದ ಇದನ್ನು ಆದ್ಯತಾ ಕ್ರಮವೆಂದು ಲೆಕ್ಕಹಾಕಿದೆ. ಒಲಿಂಪಿಕ್ಸ್ ಆತಿಥ್ಯ ವಹಿಸುವುದು ತೀವ್ರ ಸ್ಪರ್ಧೆಯಾಗಿದೆ ಎಂದು ಒಪ್ಪಿಕೊಂಡ ಅವರು, ಭಾರತವು ತನ್ನ ಸಾಮರ್ಥ್ಯವನ್ನು ಕಡೆಗಣಿಸಬಾರದು ಎಂದರು. 2024ರ ಒಲಿಂಪಿಕ್ಸ್​ಗೆ ಬಿಡ್ ಮಾಡುವಾಗ ಅಮೆರಿಕದೊಂದಿಗಿನ ಸ್ಪರ್ಧೆಯನ್ನು ಅವರು ನೆನಪಿಸಿಕೊಂಡರು.

ನಾನು ನಿಮ್ಮ ದೇಶ ಮತ್ತು ನಿಮ್ಮ ದೇಶದ ಭವಿಷ್ಯದ ಬಗ್ಗೆ ಬಲವಾದ ನಂಬಿಕೆ ಹೊಂದಿದ್ದೇನೆ. ನಿಮಗೆ ಒಲಿಂಪಿಕ್​ನಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವಿದೆ. ಇದು ತೀವ್ರ ಸ್ಪರ್ಧೆ ವಿಚಾರ ಎಂದು ನಾನು ಭಾವಿಸುತ್ತೇನೆ. ಆ ಸಂಗತಿಯನ್ನು ಕಡಿಮೆ ಅಂದಾಜು ಮಾಡಬಾರದು. ಏಳು ವರ್ಷಗಳ ಹಿಂದೆ ನಾವು ಲೌಸಾನ್ ಗೆ ಹೋದಾಗ, ನಾವು ಆ ಸಮಯದಲ್ಲಿ ಯುಎಸ್ ನೊಂದಿಗೆ ಸ್ಪರ್ಧಿಸಿದ್ದೆವು. ಬಿಡ್​ಗಾಗಿ ಸ್ಪರ್ಧಿಸುವುದು ಉತ್ತಮ ಸಿದ್ಧತೆ” ಎಂದು ಮಾರ್ಕಾನ್ ಜಿಯೋ ಸಿನೆಮಾಗೆ ತಿಳಿಸಿದರು.

ಒಲಿಂಪಿಕ್ಸ್​​ ತಯಾರಿ ನಡೆಸುವಲ್ಲಿ ಫ್ರಾನ್ಸ್ ಮತ್ತು ಭಾರತದ ನಡುವಿನ ಸಹಯೋಗದ ಪ್ರಯತ್ನಗಳನ್ನು ಮ್ಯಾಕ್ರನ್ ಎತ್ತಿ ತೋರಿಸಿದರು. ಸಿದ್ಧತೆಗಳಲ್ಲಿ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್​​ ತಾಂತ್ರಿಕ ತಂಡವನ್ನು ವಿನಂತಿಸಿದ್ದಾರೆ. ಭಾರತೀಯ ಅಧಿಕಾರಿಗಳು ತಮ್ಮ ಅನುಭವದಿಂದ ಕಲಿಯಲು ಫ್ರೆಂಚ್ ತಂಡಗಳನ್ನು ಭೇಟಿ ಮಾಡಿದ್ದಾರೆ. ಒಲಿಂಪಿಕ್ಸ್​ಗೆ ಭಾರತದ ಸಂಭಾವ್ಯ ಬಿಡ್ ಅನ್ನು ಬೆಂಬಲಿಸಲು ತಂತ್ರಜ್ಞಾನವನ್ನು ನೀಡುವುದಾಗಿ ಹೇಳಿದರು.

ಇದಲ್ಲದೆ, ಒಲಿಂಪಿಕ್ಸ್ ಅನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಕ್ರೀಡಾ ಸಂಸ್ಥೆಗಳು, ಸ್ಥಳೀಯ ಸಮುದಾಯಗಳು ಮತ್ತು ರಾಜ್ಯ ಸೇರಿದಂತೆ ವಿವಿಧ ಮಧ್ಯಸ್ಥಗಾರರ ನಡುವೆ ಏಕತೆಯ ಮಹತ್ವವನ್ನು ಮ್ಯಾಕ್ರನ್ ಒತ್ತಿ ಹೇಳಿದರು. ಕಳೆದ ಏಳು ವರ್ಷಗಳಲ್ಲಿ ಈ ಕಾರ್ಯಕ್ರಮದಲ್ಲಿ ಫ್ರಾನ್ಸ್ ನ ಗಮನಾರ್ಹ ಹೂಡಿಕೆ ಮಾಡಿತ್ತು. ಸಿದ್ಧತೆ ಪ್ರಕ್ರಿಯೆಯಲ್ಲಿ ಉದ್ಭವಿಸುವ ಸವಾಲುಗಳನ್ನು ನಿವಾರಿಸುವಲ್ಲಿ ಸ್ಥಿರತೆ ಮತ್ತು ಬದ್ಧತೆ ನಿರ್ಣಾಯ ಎಂದು ನುಡಿದರು.

ಇದನ್ನೂ ಓದಿ: Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ

ನನ್ನ ಪ್ರಕಾರ, ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸಲು ಪ್ರಮುಖವಾದುದು ಸಮಗ್ರತೆ. ಸ್ಥಳೀಯ ಸಮುದಾಯಗಳು, ಸ್ಥಳೀಯ ಕ್ಷೇತ್ರಗಳು ಮತ್ತು ನಿಸ್ಸಂಶಯವಾಗಿ ರಾಜ್ಯಗಳ ನೆರವು ಬೇಕು. ಭದ್ರತೆಯಿಂದ ಸಂಘಟನೆಯವರೆಗೆ ಎಲ್ಲವೂ ವಿಶೇಷ.” ಎಂದು ಮ್ಯಾಕ್ರನ್ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ

Paris Olympics 2024 : ಪ್ಯಾರಿಸ್​ನಲ್ಲಿ ಭಾರತದ ಪದಕ ವಿಜೇತರ ಜತೆ ಪ್ರಧಾನಿ ಫೋನ್ ಮಾಡಿ ಮಾತನಾಡಿದ್ದರು. ವೇದಿಕೆ ಏರಿದ್ದ ಕ್ರೀಡಾಪಟುಗಳಿಗೆ ತಮ್ಮ ಬೆಂಬಲ ವ್ಯಕ್ತಡಪಡಿಸಿದ್ದರು. ಕುಸ್ತಿ ಫೈನಲ್​ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಬೆಂಬಲ ವ್ಯಕ್ತಪಡಿಸಿ ಮೋದಿ ಟ್ವೀಟ್ ಮಾಡಿದ್ದರು. ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಅಥ್ಲೀಟ್ಗಳು 6 ಪದಕಗಳನ್ನು ಗೆದ್ದಿದ್ದಾರೆ. ಟೋಕಿಯೊದಲ್ಲಿ ನಡೆದ ಹಿಂದಿನ ಒಲಿಂಪಿಕ್ಸ್​ನಲ್ಲಿ ಭಾರತ ಚಿನ್ನ ಸಮೇತ 7 ಪದಕ ಗೆದ್ದಿದ್ದರೆ, ಈ ಬಾರಿ ಭಾರತೀಯ ತಂಡವು 5 ಕಂಚಿನ ಪದಕಗಳು ಮತ್ತು ಒಂದು ಬೆಳ್ಳಿಯೊಂದಿಗೆ ಮರಳಿದೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics 2024) ಸ್ಪರ್ಧಿಸಿದ್ದ ಭಾರತದ ಅಥ್ಲೀಟ್​ಗಳ ನಿಯೋಗವನ್ನು ಭೇಟಿಯಾಗಲಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ನಂತರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪಿಎಂ ಮೋದಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಆಗಸ್ಟ್ 15 ರಂದು ನಡೆಯಲಿರುವ ಸಮಾರಂಭದಲ್ಲಿ 117 ಕ್ರೀಡಾಪಟುಗಳ ಸಂಪೂರ್ಣ ಭಾರತೀಯ ತಂಡ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗ್ಗಿನ ಕಾರ್ಯಕ್ರಮದ ನಂತರ ಪ್ರಧಾನಿ ಒಲಿಂಪಿಕ್ಸ್​​ನ ಭಾರತಕ್ಕೆ 6 ಪದಕಗಳನ್ನು ಮರಳಿ ತಂದ ಕ್ರೀಡಾಪಟುಗಳನ್ನು ಭೇಟಿ ಮಾಡಲಿದ್ದಾರೆ.

ಪ್ಯಾರಿಸ್​ನಲ್ಲಿ ಭಾರತದ ಪದಕ ವಿಜೇತರ ಜತೆ ಪ್ರಧಾನಿ ಫೋನ್ ಮಾಡಿ ಮಾತನಾಡಿದ್ದರು. ವೇದಿಕೆ ಏರಿದ್ದ ಕ್ರೀಡಾಪಟುಗಳಿಗೆ ತಮ್ಮ ಬೆಂಬಲ ವ್ಯಕ್ತಡಪಡಿಸಿದ್ದರು. ಕುಸ್ತಿ ಫೈನಲ್​ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಬೆಂಬಲ ವ್ಯಕ್ತಪಡಿಸಿ ಮೋದಿ ಟ್ವೀಟ್ ಮಾಡಿದ್ದರು. ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಅಥ್ಲೀಟ್ಗಳು 6 ಪದಕಗಳನ್ನು ಗೆದ್ದಿದ್ದಾರೆ. ಟೋಕಿಯೊದಲ್ಲಿ ನಡೆದ ಹಿಂದಿನ ಒಲಿಂಪಿಕ್ಸ್​ನಲ್ಲಿ ಭಾರತ ಚಿನ್ನ ಸಮೇತ 7 ಪದಕ ಗೆದ್ದಿದ್ದರೆ, ಈ ಬಾರಿ ಭಾರತೀಯ ತಂಡವು 5 ಕಂಚಿನ ಪದಕಗಳು ಮತ್ತು ಒಂದು ಬೆಳ್ಳಿಯೊಂದಿಗೆ ಮರಳಿದೆ.

ಪ್ಯಾರಿಸ್ 2024 ಒಲಿಂಪಿಕ್ಸ್​ನಲ್ಲಿ ಭಾರತದ ಪ್ರದರ್ಶನವು ಸಾಧನೆಗಳು ಮತ್ತು ನಿರಾಶೆಗಳ ಮಿಶ್ರಣವಾಗಿದೆ. ಈ ಒಲಿಂಪಿಕ್ಸ್​ನಲ್ಲಿ ಭಾರತವು 10 ಪದಕಗಳ ಮೈಲುಗಲ್ಲು ದಾಟಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೆಲವು ಕ್ರೀಡಾಪಟುಗಳು ನಾಲ್ಕನೇ ಸ್ಥಾನ ಪಡೆದಿದ್ದರಿಂದ ಅದು ಸಾಧ್ಯವಾಗಲಿಲ್ಲ.

ಟೋಕಿಯೊ 2020 ರಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ನೇತೃತ್ವದ ದೇಶದ ಅಥ್ಲೆಟಿಕ್ಸ್ ತಂಡವು ಗಮನಾರ್ಹ ಹೈಲೈಟ್ ಆಗಿದೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿಯೊಂದಿಗೆ ಚೋಪ್ರಾ ಅಥ್ಲೆಟಿಕ್ಸ್​​ನಲ್ಲಿ ಭಾರತದ ಏಕೈಕ ಪದಕ ಗೆದ್ದರು, ಒಲಿಂಪಿಕ್ಸ್​​ನಲ್ಲಿ ಅಥ್ಲೆಟಿಕ್ಸ್​​ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಎಂಬ ಇತಿಹಾಸ ನಿರ್ಮಿಸಿದರು.

ಶೂಟಿಂಗ್ ಸಾಧನೆ

ಭಾರತದ ಶೂಟಿಂಗ್ ತಂಡವೂ ಗಮನಾರ್ಹ ಪ್ರಗತಿ ಸಾಧಿಸಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಕಂಚಿನ ಪದಕ ಗೆದ್ದರು, ಒಲಿಂಪಿಕ್ ಶೂಟಿಂಗ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸರಬ್ಜೋತ್ ಸಿಂಗ್ ಅವರೊಂದಿಗೆ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಮತ್ತೊಂದು ಪದಕವನ್ನು ಗೆದ್ದಿದ್ದರೆ. ಒಲಿಂಪಿಕ್ಸ್​​ನ ಒಂದು ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಸ್ವತಂತ್ರ ಭಾರತದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದನ್ನೂ ಓದಿ: Manu Bhaker : ಮದುವೆಯಾಗ್ತೀರಾ ಹೇಗೆ? ನೀರಜ್​ ಚೋಪ್ರಾ- ಮನು ಭಾಕರ್​ ಭೇಟಿಯ ವಿಡಿಯೊ ವೈರಲ್ ಮಾಡಿದ ನೆಟ್ಟಿಗರು

ಸ್ಪೇನ್ ತಂಡವನ್ನು 2-1 ಅಂತರದಿಂದ ಮಣಿಸಿದ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದುಕೊಂಡಿತು. 1972ರ ಬಳಿಕ ಇದೇ ಮೊದಲ ಬಾರಿಗೆ ಭಾರತ ಸತತವಾಗಿ ಪದಕಗಳನ್ನು ಗೆದ್ದಿದೆ. ಹರ್ಮನ್ ಪ್ರೀತ್ ಸಿಂಗ್ ಗಳಿಸಿದ ಗೋಲಿನ ನೆರವಿನಿಂದ ಭಾರತ ಒಲಿಂಪಿಕ್ಸ್ ನಲ್ಲಿ ದಾಖಲೆಯ 13ನೇ ಹಾಕಿ ಪದಕ ಜಯಿಸಿದೆ.

ಟೇಬಲ್ ಟೆನಿಸ್ನಲ್ಲಿ ಮಣಿಕಾ ಬಾತ್ರಾ ಮತ್ತು ಶ್ರೀಜಾ ಅಕುಲಾ ಗಮನಾರ್ಹ ಪ್ರಗತಿ ಸಾಧಿಸಿದ್ದಾರೆ. ಬಾತ್ರಾ ಒಲಿಂಪಿಕ್ ಕ್ರೀಡಾಕೂಟದ ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಮೊದಲ ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರೆ, ಅಕುಲಾ 16 ನೇ ಸುತ್ತು ಪ್ರವೇಶಿಸಿದ್ದರು.

Continue Reading
Advertisement
Viral Video
Latest39 mins ago

Viral Video: ಚೀನಾದಲ್ಲಿ ಬಹಿರಂಗವಾಗಿ ಮಾರಾಟವಾಗುತ್ತದೆ ನಾಯಿ ಮಾಂಸದ ಖಾದ್ಯ; ಭಾರತೀಯ ಹುಡುಗಿ ಮಾಡಿದ ವಿಡಿಯೊ ವೈರಲ್

fraud case tumkur
ಕ್ರೈಂ49 mins ago

Fraud Case: ಅಸಲಿ ಮದುವೆ, ನಕಲಿ ಹೆಣ್ಣು! 3 ವರ್ಷದಲ್ಲಿ 5 ಮದುವೆಯಾಗಿ ವಂಚನೆ; ಮದುಮಗಳು ಮತ್ತು ಗ್ಯಾಂಗ್‌ ಆರೆಸ್ಟ್

70th National Film Awards
ಸಿನಿಮಾ57 mins ago

70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೇಸ್‌ನಲ್ಲಿ ರಿಷಬ್‌ ಶೆಟ್ಟಿ; ʼಕಾಂತಾರʼಕ್ಕೆ ಸಿಗುತ್ತಾ ಇನ್ನೊಂದು ಪ್ರತಿಷ್ಠಿತ ಗರಿ?

Viral News
ಕ್ರೀಡೆ1 hour ago

Viral News: ಒಲಿಂಪಿಕ್ಸ್​ ಚಿನ್ನ ಗೆದ್ದ ಸಾಧಕನಿಗೆ ಎಮ್ಮೆ ಉಡುಗೊರೆ ಕೊಟ್ಟ ಮಾವ!

raichur news misbehave
ಕ್ರೈಂ1 hour ago

Raichur News: ಶಿಕ್ಷಕಿಗೆ ಅಶ್ಲೀಲ ಮೆಸೇಜ್‌ ಕಳಿಸಿದ ಪ್ರಭಾರಿ ಪ್ರಾಚಾರ್ಯನಿಗೆ ಧರ್ಮದೇಟು

Neeraj Chopra
ಕ್ರೀಡೆ2 hours ago

Neeraj Chopra: ಪ್ಯಾರಿಸ್‌ನಿಂದ ಜರ್ಮನಿಗೆ ತೆರಳಿದ ಚೋಪ್ರಾ; ಭಾರತಕ್ಕೆ ಮರಳುವುದು ವಿಳಂಬ

Intermittent Fasting
ಆರೋಗ್ಯ2 hours ago

Intermittent Fasting: ಇಂಟರ್‌ ಮಿಟೆಂಟ್‌ ಫಾಸ್ಟಿಂಗ್‌ ಡಯಟ್‌ ಮಾಡುವವರೇ ಹುಷಾರ್! ಈ ಸಂಗತಿ ಗೊತ್ತಿರಲಿ

Kolkata Doctor Murder Case
ದೇಶ2 hours ago

Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಮರಣೋತ್ತರ ಪರೀಕ್ಷೆ ವರದಿ ಬಹಿರಂಗ; ಶಾಕಿಂಗ್‌ ಸಂಗತಿ ಬಯಲು

tungabhadra dam 19 crest gate
ಪ್ರಮುಖ ಸುದ್ದಿ2 hours ago

Tungabhadra Dam: ತುಂಗಭದ್ರಾ ಜಲಾಶಯದಿಂದ 15 ಟಿಎಂಸಿ ನೀರು ವ್ಯರ್ಥ; ಇಂದು ಸಿಎಂ ಸಿದ್ದರಾಮಯ್ಯ ಭೇಟಿ

Namma Metro
ಪ್ರಮುಖ ಸುದ್ದಿ2 hours ago

Namma Metro: ಹಸಿರು ಮಾರ್ಗದಲ್ಲಿ ಇಂದಿನಿಂದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು7 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ7 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌