Vinesh Phogat: ವಿನೇಶ್​ ವಿರುದ್ಧ ಸೆಮಿಯಲ್ಲಿ ಹೀನಾಯ ಸೋಲು ಕಂಡರೂ ಫೈನಲ್​ ಪ್ರವೇಶಿಸಿದ ಕ್ಯೂಬಾದ ಕುಸ್ತಿಪಟು - Vistara News

ಕ್ರೀಡೆ

Vinesh Phogat: ವಿನೇಶ್​ ವಿರುದ್ಧ ಸೆಮಿಯಲ್ಲಿ ಹೀನಾಯ ಸೋಲು ಕಂಡರೂ ಫೈನಲ್​ ಪ್ರವೇಶಿಸಿದ ಕ್ಯೂಬಾದ ಕುಸ್ತಿಪಟು

Vinesh Phogat: ಮಂಗಳವಾರ ನಡೆದಿದ್ದ ಮಹಿಳಾ 50 ಕೆಜಿ ವಿಭಾಗದ ಸೆಮಿಫೈನಲ್​ ಪಂದ್ಯದಲ್ಲಿ ಕ್ಯೂಬಾದ ಯಸ್ನಿಲಿಸ್​ ಗುಜ್ಮನ್​ ಲೋಪೆಜ್(Yusneylys Guzmán) ಭಾರತದ ವಿನೇಶ್​ ಫೋಗಟ್(Vinesh Phogat)​ ವಿರುದ್ಧ 5-0 ಅಂತರದಿಂದ ಹೀನಾಯವಾಗಿ ಸೋಲು ಕಂಡು ಕಣ್ಣೀರು ಸುರಿಸಿದ್ದರು. ಇದೀಗ ಅವರಿಗೆ ಅದೃಷ್ಟವೊಂದು ಕೈ ಹಿಡಿದಿದೆ.

VISTARANEWS.COM


on

Vinesh Phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಕೆಲವೊಮ್ಮೆ ಅದೃಷ್ಟ ಎನ್ನುವುದು ನಮಗೆ ಹೇಗೆ ಒಲಿದು ಬರುತ್ತದೆ ಎಂದು ಯಾರಿಗೂ ಊಹಿಸುವುದಕ್ಕೂ ಸಾಧ್ಯವಾಗುವುದಿಲ್ಲ. ಇದೇ ರೀತಿಯ ಒಂದು ಘಟನೆಯೊಂದು ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿಯೂ(paris olympics) ನಡೆದಿದೆ. ಮಂಗಳವಾರ ನಡೆದಿದ್ದ ಮಹಿಳಾ 50 ಕೆಜಿ ವಿಭಾಗದ ಸೆಮಿಫೈನಲ್​ ಪಂದ್ಯದಲ್ಲಿ ಕ್ಯೂಬಾದ ಯಸ್ನಿಲಿಸ್​ ಗುಜ್ಮನ್​ ಲೋಪೆಜ್(Yusneylys Guzmán) ಭಾರತದ ವಿನೇಶ್​ ಫೋಗಟ್(Vinesh Phogat)​ ವಿರುದ್ಧ 5-0 ಅಂತರದಿಂದ ಹೀನಾಯವಾಗಿ ಸೋಲು ಕಂಡು ಕಣ್ಣೀರು ಸುರಿಸಿದ್ದರು. ಇದೀಗ ಅವರಿಗೆ ಅದೃಷ್ಟವೊಂದು ಕೈ ಹಿಡಿದು ಫೈನಲ್​ ಆಡುವ ಸೌಭಾಗ್ಯ ಒದಗಿ ಬಂದಿದೆ.

ಹೌದು, ಸೆಮಿಫೈನಲ್​ನಲ್ಲಿ ಸೋಲು ಕಂಡಿದ್ದ ಯಸ್ನಿಲಿಸ್​ ಗುಜ್ಮನ್ ಇಂದು ಕಂಚಿನ ಪದಕಕ್ಕೆ ಸ್ಪರ್ಧಿಸಬೇಕಿತ್ತು. ಈ ಪಂದ್ಯ ಇನ್ನೇನು ಕೆಲವೇ ಗಂಟೆಗಳಲ್ಲಿ ಆರಂಭವಾಗಬೇಕು ಎನ್ನುವಷ್ಟರಲ್ಲಿ ಯಸ್ನಿಲಿಸ್​ ಗುಜ್ಮನ್​ಗೆ ಫೈನಲ್​ ಪಂದ್ಯದ ಕರೆ ಬಂದಿದೆ. ಇದಕ್ಕೆ ಕಾರಣ ವಿನೇಶ್ ಫೋಗಟ್(Vinesh Phogat) ಅವರನ್ನು ಅನರ್ಹಗೊಳಿಸಿದ್ದು. 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶ್​ ಫೈನಲ್ ಪಂದ್ಯಕ್ಕೂ ಮುನ್ನ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. ಹೀಗಾಗಿ ಫೈನಲ್​ ಆಡುವ ಅವಕಾಶ ಗುಜ್ಮನ್​ಗೆ ಲಭಿಸಿತು. ಫೈನಲ್​ನಲ್ಲಿ ಗುಜ್ಮನ್ ಅವರು​ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತೆ ಅಮೆರಿಕದ ಸೆರಾ ಹಿಲ್ದಿಬ್ರೇಟ್‌ ಸವಾಲು ಎದುರಿಸಲಿದ್ದಾರೆ. ಪಂದ್ಯ ರಾತ್ರಿ 11. 23ಕ್ಕೆ ನಡೆಯಲಿದೆ.

ಇದನ್ನೂ ಓದಿ Vinesh Phogat Disqualified: ತೂಕ ವಿಭಾಗ ಬದಲಿಸಿದ್ದೇ ವಿನೇಶ್​ ಹಿನ್ನಡೆಗೆ ಕಾರಣವಾಯಿತೇ?

ಇಂದು ಮುಂಜಾನೆ ನಡೆದ ತೂಕ ಪರಿಶೀಲನೆಯ ವೇಳೆ ವಿನೇಶ್‌ 50 ಕಿಲೋಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದರು. ಸ್ಪರ್ಧೆಯ ನಿಯಮಗಳ ಪ್ರಕಾರ ಫೋಗಟ್ ಇಂದು ಫೈನಲ್‌ನಲ್ಲಿ ಸ್ಪರ್ಧೀಸುವಂತಿಲ್ಲ. 50 ಕೆಜಿ ವಿಭಾಗದಲ್ಲಿ ಕೇವಲ ಚಿನ್ನ ಮತ್ತು ಕಂಚಿನ ಪದಕ ವಿಜೇತರಿರುತ್ತಾರೆ. ಮಂಗಳವಾರವೂ ಪಂದ್ಯಕ್ಕೆ ಮೊದಲು ವಿನೇಶ್‌ ತೂಕ ಅಳೆಯಲಾಗಿತ್ತು. ಆದರೆ ನಿಯಮದ ಪ್ರಕಾರ ಕುಸ್ತಿಪಟುಗಳು ಸ್ಪರ್ಧೆಯ ಎರಡೂ ದಿನಗಳಲ್ಲಿ ತಮ್ಮ ತೂಕದ ವಿಭಾಗದಲ್ಲಿ ಉಳಿಯಬೇಕು.

ಎಲ್ಲಾ ಅಡೆತಡೆಗಳನ್ನು ಧಿಕ್ಕರಿಸಿ ಫೈನಲ್ ತಲುಪಿದ ಕುಸ್ತಿಪಟು ವಿನೇಶ್‌, ಮಂಗಳವಾರ ರಾತ್ರಿ ಸರಿಸುಮಾರು 2 ಕಿಲೋಗಳಷ್ಟು ಅಧಿಕ ತೂಕ ಹೊಂದಿದ್ದರು ಎನ್ನಲಾಗಿದೆ. ಇದನ್ನು ಕರಗಿಸಲು ಆಕೆ ಇಡೀ ರಾತ್ರಿ ನಿದ್ರೆ ಮಾಡದೆ ವ್ಯಾಯಾಮದಲ್ಲಿ ನಿರತರಾಗಿದ್ದರು. ಜಾಗಿಂಗ್‌ನಿಂದ ಹಿಡಿದು ಸ್ಕಿಪ್ಪಿಂಗ್ ಮತ್ತು ಸೈಕ್ಲಿಂಗ್‌ವರೆಗೆ. ಆದರೆ ಇದು ಸಾಕಾಗಲಿಲ್ಲ. ಕೊನೆಯ 100 ಗ್ರಾಂಗಳನ್ನು ಕರಗಿಸಲು ಇನ್ನು ಸ್ವಲ್ಪ ಕಾಲಾವಕಾಶವನ್ನು ನೀಡುವಂತೆ ಭಾರತೀಯ ನಿಯೋಗ ಮನವಿ ಮಾಡಿತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ರಾತ್ರಿ ಪೂರ್ತಿ ವ್ಯಾಮಾಯ ಹಾಗೂ ತೂಕವಿಳಿಸುವ ಕಸರತ್ತು ಮಾಡಿದ ವಿನೇಶ್‌ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಫೋಗಟ್ 50 ಕೆಜಿ ವಿಭಾಗದಲ್ಲಿ ಭಾಗವಹಿಸಲು ಕಷ್ಟವಾಗಿರುವುದು ಇದೇ ಮೊದಲಲ್ಲ. ಅವಳು ಸಾಮಾನ್ಯವಾಗಿ ಸ್ಪರ್ಧಿಸುವ ವಿಭಾಗ 53 ಕೆಜಿ. ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿಯೂ ಸಹ ಅವರು ಇದೇ ರೀತಿಯ ಅಗ್ನಿಪರೀಕ್ಷೆಯನ್ನು ಎದುರಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ದಿಢೀರ್ 2-3 ಕೆ.ಜಿ ತೂಕ ಇಳಿಸಲು ಮುಂದಾದರೆ ದೇಹಕ್ಕೆ ಏನಾಗುತ್ತದೆ?

Vinesh Phogat:‌ 52 ಕೆ.ಜಿ ತೂಕ ಹೊಂದಿದ್ದ ವಿನೇಶ್‌ ಫೋಗಟ್‌ ಅವರು 2 ಕೆ.ಜಿ ತೂಕ ಇಳಿಸಲು ಇಡೀ ರಾತ್ರಿ ವರ್ಕೌಟ್‌ ಮಾಡಿದ್ದು, ನಿರ್ಜಲೀಕರಣದಿಂದಾಗಿ ಬೆಳಗ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಿದ ಬೆನ್ನಲ್ಲೇ, ರಾತ್ರೋರಾತ್ರಿ 2 ಕೆ.ಜಿ ತೂಕ ಇಳಿಸಲು ಮುಂದಾದರೆ ದೇಹದಲ್ಲಿ ಏನೆಲ್ಲ ಆಗುತ್ತದೆ, ವಿನೇಶ್‌ ಫೋಗಟ್‌ ಮಾಡಿದ್ದು ಸರಿಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಇದಕ್ಕೆ ತಜ್ಞರು ಏನು ಹೇಳುತ್ತಾರೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics) ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಮಾತ್ರವಲ್ಲ ಇಡೀ ಭಾರತೀಯರಿಗೆ ಆಘಾತವಾಗಿದೆ. ಕುಸ್ತಿಯಲ್ಲಿ ಫೈನಲ್‌ ತಲುಪಿ ಇತಿಹಾಸ ಸೃಷ್ಟಿಸಿದ್ದ ಅವರು ಇನ್ನೇನು ಚಿನ್ನದ ಪದಕಕ್ಕಾಗಿ ಕಾದಾಡಬೇಕು ಎನ್ನುವರಷ್ಟರಲ್ಲಿಯೇ ದೇಹದ ತೂಕ 100 ಗ್ರಾಂ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಿರುವುದು ಕುಸ್ತಿಪಟುವಿನ ಜತೆಗೆ ಇಡೀ ದೇಶದ ಜನರಿಗೆ ಅಸಮಾಧಾನ ಉಂಟಾಗಿದೆ. ಮತ್ತೊಂದೆಡೆ, 52 ಕೆ.ಜಿ ತೂಕ ಹೊಂದಿದ್ದ ವಿನೇಶ್‌ ಫೋಗಟ್‌ ಅವರು 2 ಕೆ.ಜಿ ತೂಕ ಇಳಿಸಲು ಇಡೀ ರಾತ್ರಿ ವರ್ಕೌಟ್‌ ಮಾಡಿದ್ದು, ನಿರ್ಜಲೀಕರಣದಿಂದಾಗಿ ಬೆಳಗ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಹೀಗೆ, ರಾತ್ರೋರಾತ್ರಿ ದೇಹದ ತೂಕವನ್ನು 2-3 ಕೆ.ಜಿ ಇಳಿಸಿದರೆ ದೇಹಕ್ಕೆ ಏನಾಗುತ್ತದೆ ಎಂಬುದರ ಕುರಿತು ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ತಜ್ಞರು ಮಾಹಿತಿ ನೀಡಿದ್ದಾರೆ.

ತಜ್ಞರು ಹೇಳುವುದೇನು?

‘ಒಂದೇ ರಾತ್ರಿಯಲ್ಲಿ ದೇಹದ ತೂಕವನ್ನು 2-3 ಕೆ.ಜಿ ಇಳಿಸುವುದು ಸಾಧ್ಯವೇ ಇಲ್ಲ ಅಂತಲ್ಲ. ಆದರೆ, ಹಾಗೆ ಮಾಡುವುದು ತುಂಬ ಅಪಾಯಕಾರಿ’ ಎಂದು ದೆಹಲಿಯ ಮಹಾರಾಜ ಅಗ್ರಸೇನ ಆಸ್ಪತ್ರೆಯ ಔಷಧ ತಜ್ಞ ಡಾ.ಸಂಜಯ್‌ ಗುಪ್ತಾ ತಿಳಿಸಿದ್ದಾರೆ. ಮತ್ತೊಬ್ಬ ಔಷಧ ತಜ್ಞರಾದ ಡಾ.ಮಂಜೀತಾ ನಾಥ್‌ ದಾಸ್‌ ಅವರು ಕೂಡ ಇದನ್ನೇ ಉಚ್ಚರಿಸಿದ್ದು, “ಹಾಗೆ ಮಾಡುವುದು ಪ್ರಾಣಕ್ಕೂ ಅಪಾಯಕಾರಿ” ಎಂದಿದ್ದಾರೆ.

“ನಮ್ಮ ದೇಹದ ತೂಕವು ಮೂಳೆ, ಮಾಂಸ ಹಾಗೂ ಬೊಜ್ಜನ್ನು ಆಧರಿಸಿರುತ್ತದೆ. ಆದರೆ, ನೀರು ಕುಡಿಯದೆ, ಉಪ್ಪು ಸೇವಿಸದೆ, ಕಾರ್ಬ್ಸ್‌ ಹಾಗೂ ಪ್ರೊಟೀನ್‌ಗಳನ್ನು ಮಾತ್ರ ಸೇವಿಸಿ ಇಡೀ ರಾತ್ರಿ ವರ್ಕೌಟ್‌ ಮಾಡಿದರೆ, 2-3 ಕೆ.ಜಿ ತೂಕ ಇಳಿಸಿದರೆ ದೇಹ ತಡೆದುಕೊಳ್ಳುವುದಿಲ್ಲ. ನಿರ್ಜಲೀಕರಣವು ದೇಹವನ್ನು ಬಾಧಿಸುತ್ತದೆ. ಅದರಲ್ಲೂ 29 ವರ್ಷದ ವಿನೇಶ್‌ ಫೋಗಟ್‌ ಅವರು ಇಂತಹ ದುಸ್ಸಾಹಸಕ್ಕೆ ಕೈಹಾಕಿದ್ದು ಅವರ ದೇಹದ ಮೇಲೆ ಪರಿಣಾಮ ಬೀರಿದೆ” ಎಂದು ಅವರು ತಿಳಿಸಿದ್ದಾರೆ.

ತೂಕ ಕಳೆದುಕೊಳ್ಳುವ ಪ್ರಸ್ತಾಪವೇ ಇಲ್ಲ

“ನೀರನ್ನೂ ಸೇವಿಸದೆ ರಾತ್ರಿಯಿಡೀ ವರ್ಕೌಟ್‌ ಮಾಡಿದರೆ ದೇಹವು ನಿರ್ಜಲೀಕರಣದಿಂದ ಬಸವಳಿದುಹೋಗುತ್ತದೆ. ಹಾಗೆ ಮಾಡಿದವರು ಬೆಳಗ್ಗೆ ಎದ್ದು ತಿರುಗಾಡಲು ಕೂಡ ಆಗುವುದಿಲ್ಲ. ಹೀಗೆ, ರಾತ್ರೋರಾತ್ರಿ ನೀರು ಕುಡಿಯದೆ, ವರ್ಕೌಟ್‌ ಮಾಡಿ, ತೂಕ ಕಳೆದುಕೊಳ್ಳುವಂತೆ ಸಾಮಾನ್ಯ ಜನರಿಗಾಗಲಿ, ಅಥ್ಲೀಟ್‌ಗಳಿಗಾಗಲಿ ವೈದ್ಯಕೀಯವಾಗಿ ಅನುಮತಿ ನೀಡಲು ಸಾಧ್ಯವೇ ಇಲ್ಲ” ಎಂಬುದಾಗಿ ಡಾ.ದಾಸ್‌ ತಿಳಿಸಿದ್ದಾರೆ.

ರಾತ್ರಿಯಿಡೀ ವರ್ಕೌಟ್‌ ಮಾಡುವುದು, ನೀರು ಸೇವಿಸದಿರುವುದರಿಂದ, ಕ್ಯಾಲರಿ ತೆಗೆದುಕೊಳ್ಳದಿರುವುದರಿಂದ ದೇಹದಲ್ಲಿ ಬ್ಲಡ್‌ ಶುಗರ್‌ ಲೆವೆಲ್‌ 70 ಮಿಲಿಗ್ರಾಂಗೆ (ಪ್ರತಿ ಡೆಸಿಲಿಟರ್‌ಗೆ) ಇಳಿಯಲಿದೆ. ದೇಹದ ಶಕ್ತಿಯ ಮೂಲವಾದ ಗ್ಲಿಕೋಜೆನ್‌ ಸಂಗ್ರಹವು ಕುಸಿತವಾಗುತ್ತದೆ. ಇದರಿಂದಾಗಿ ದೇಹವು ನಿಶ್ಯಕ್ತಿಗೊಳ್ಳುತ್ತದೆ ಎಂಬುದಾಗಿ ಡಾ.ಗುಪ್ತಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ!

Continue Reading

ಪ್ರಮುಖ ಸುದ್ದಿ

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ!

Vinesh Phogat: 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹಗೊಳಿಸಲಗಿದೆ. ಇದಕ್ಕೆ ಭಾರತದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಪಿ.ಟಿ. ಉಷಾ ಅವರಿಗೆ ಕರೆ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂಬುದಾಗಿ ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವೀಯ ತಿಳಿಸಿದ್ದಾರೆ.

VISTARANEWS.COM


on

Vinesh Phogat
Koo

ದೆಹಲಿ/ಪ್ಯಾರಿಸ್:‌ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ಖ್ಯಾತ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat) ಅವರು ಅನರ್ಹಗೊಂಡಿರುವುದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವಿನೇಶ್‌ ಫೋಗಟ್‌ ಪರವಾಗಿ ದೇಶವೇ ಒಗ್ಗೂಡಿ ನಿಂತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ವಿನೇಶ್‌ ಫೋಗಟ್‌ ಪರವಾಗಿ ನಿಂತಿದ್ದಾರೆ. ಇದರ ಬೆನ್ನಲ್ಲೇ, ಭಾರತೀಯ ಒಲಿಂಪಿಕ್ಸ್‌ ಅಸೋಷಿಯೇಷನ್‌ (IOA) ಅಧ್ಯಕ್ಷೆ ಪಿ.ಟಿ.ಉಷಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ಮಾಡಿದ್ದು, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಪಿ.ಟಿ.ಉಷಾ ಅವರಿಗೆ ನರೇಂದ್ರ ಮೋದಿ ಅವರು ಕರೆ ಮಾಡಿರುವ ಕುರಿತು ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವಿಯ ಅವರು ಸಂಸತ್‌ನಲ್ಲಿ ಮಾಹಿತಿ ನೀಡಿದ್ದಾರೆ. “50 ಕೆಜಿಗಿಂತ 100 ಗ್ರಾಂ ತೂಕ ಹೆಚ್ಚಿದ್ದ ಕಾರಣ ನೀಡಿ ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಲಾಗಿದೆ. ಈಗಾಗಲೇ ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಪ್ರತಿಭಟನೆ ವ್ಯಕ್ತಪಡಿಸಿದೆ. ನರೇಂದ್ರ ಮೋದಿ ಅವರೂ ಪಿ.ಟಿ. ಉಷಾ ಅವರಿಗೆ ಕರೆ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ” ಎಂದು ಸಚಿವ ತಿಳಿಸಿದ್ದಾರೆ.

ಪ್ರತಿಯೊಂದು ಹೆಜ್ಜೆಯಲ್ಲೂ ವಿನೇಶ್‌ ಫೋಗಟ್‌ ಅವರಿಗೆ ಕೇಂದ್ರ ಸರ್ಕಾರ ಸಹಕಾರ ನೀಡಿದೆ. ಅವರಿಗೆ ವೈಯಕ್ತಿಕ ಸಿಬ್ಬಂದಿಯನ್ನೂ ಭಾರತ ಕಳುಹಿಸಿದೆ. ಸಹಾಯಕ ಸಿಬ್ಬಂದಿಯನ್ನೂ ಅವರಿಗೆ ಒದಗಿಸಲಾಗಿದೆ. ಇದಕ್ಕೂ ಮೊದಲು ಕೂಡ ವಿನೇಶ್‌ ಫೋಗಟ್‌ ಅವರ ಸಾಧನೆಗೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಿದೆ. ಮುಂದಿನ ದಿನಗಳಲ್ಲೂ ನೆರವು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ವಿನೇಶ್‌ ಫೋಗಟ್‌ಗೆ ಬಾಲಿವುಡ್‌ ತಾರೆಯರ ಬೆಂಬಲ

ವಿನೇಶ್‌ ಫೋಗಟ್‌ ಅವರ ಪರವಾಗಿ ಬಾಲಿವುಡ್‌ ಸೆಲೆಬ್ರಿಟಿಗಳು ನಿಂತಿದ್ದಾರೆ. ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ವಿನೇಶ್ ಫೋಗಟ್ ನೀವು ಇಡೀ ದೇಶಕ್ಕೆ ಸ್ಫೂರ್ತಿ. ನಿಮ್ಮ ಸ್ಥೈರ್ಯವನ್ನು , ನಿಮ್ಮ ಧೈರ್ಯವನ್ನು ಯಾವುದೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮತ್ತು ಇತಿಹಾಸವನ್ನು ಸೃಷ್ಟಿಸಲು ನೀವು ಅನುಭವಿಸಿದ ಕಷ್ಟಗಳನ್ನು ಯಾವುದೂ ತೆಗೆದುಹಾಕುವುದಿಲ್ಲ! ನಾವು ನಿಮ್ಮೊಂದಿಗೆ ಇರುತ್ತೇವೆ. ನೀವೇ ಚಿನ್ನ – ನೀವೇ ಕಬ್ಬಿಣ ಮತ್ತು ನೀವೇ ಸ್ಟೀಲ್‌! ಯಾವುದೂ ನಿಮ್ಮಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ! ಯುಗಗಳ ಚಾಂಪಿಯನ್! ನಿಮ್ಮಂತೆ ಯಾರೂ ಇಲ್ಲʼʼ ಎಂದು ಬರೆದುಕೊಂಡಿದ್ದಾರೆ.

ಫರ್ಹಾನ್ ಅಖ್ತರ್ ಅವರು ಪೋಸ್ಟ್‌ನಲ್ಲಿ ವಿನೇಶ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ” ವಿನೇಶ್ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಮತ್ತು ನೀವು ಕ್ರೀಡೆಗಾಗಿ ಮಾಡಿದ್ದೀರಿʼʼ ಎಂದು ಬರೆದುಕೊಂಡಿದ್ದಾರೆ. ಜೋಯಾ ಅಖ್ತರ್ “ಚಾಂಪಿಯನ್ ನೀವು ಚಿನ್ನ! ನೀವು ಸಾಧಿಸಿದ್ದು ಪದಕಗಳನ್ನು ಮೀರಿದ್ದು. ತುಂಬಾ ಹೆಮ್ಮೆ. ಸ್ಫೂರ್ತಿʼʼಎಂದು ಬರೆದುಕೊಂಡಿದ್ದಾರೆ. ವಿಕ್ಕಿ ಕೌಶಲ್‌, ಪದಕಗಳನ್ನು ಮೀರಿದ ವಿಜೇತೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

Continue Reading

ಕ್ರೀಡೆ

Vinesh Phogat: ಫೈನಲ್​ಗೆ ಅನರ್ಹ; ವಿನೇಶ್ ಫೋಗಟ್​ ಕಡು ವೈರಿ ಬ್ರಿಜ್ ಭೂಷಣ್ ಮಗನ ಪ್ರತಿಕ್ರಿಯೆ ಏನು?

Vinesh Phogat: ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದು ದೇಶಕ್ಕೆ ಉಂಟಾದ ನಷ್ಟ. ಫೆಡರೇಶನ್ ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದೆ ಏನು ಮಾಡಬಹುದು ಎಂಬುದನ್ನು ಪರಿಶೀಲನೆ ನಡೆಸುತ್ತದೆ ಎಂದು ಹೇಳಿದ್ದಾರೆ.

VISTARANEWS.COM


on

Vinesh Phogat
Koo

ನವದೆಹಲಿ: ಅಪ್ಪನ(ಬ್ರಿಜ್​ ಭೂಷಣ್ ಶರಣ್​ ಸಿಂಗ್​) ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುಂತೆ ಮಾಡಿದ್ದ ವಿನೇಶ್ ಫೋಗಟ್(Vinesh Phogat)​ ಅವರು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಅನರ್ಹಗೊಂಡ ಬಗ್ಗೆ ಬ್ರಿಜ್​ ಭೂಷಣ್ ಪುತ್ರ(Brij Bhushan’s son Karan), ಬಿಜೆಪಿ ಸಂಸದ ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಪ್ರತಿಕ್ರಿಯೆ ನೀಡಿದ್ದಾರೆ.

​ಸಂಸತ್​ ಅಧಿವೇಶನಕ್ಕೆ ತೆರಳುತ್ತಿದ್ದ ಕರಣ್‌ ಭೂಷಣ್‌ ಸಿಂಗ್‌ ಮಾಧ್ಯಮದ ಜತೆ ಮಾತನಾಡುವ ವೇಳೆ, “ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದು ದೇಶಕ್ಕೆ ಉಂಟಾದ ನಷ್ಟ. ಫೆಡರೇಶನ್ ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದೆ ಏನು ಮಾಡಬಹುದು ಎಂಬುದನ್ನು ಪರಿಶೀಲನೆ ನಡೆಸುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಭಗತ್ ರಾಮ್ ವಿರುದ್ಧ ಕೈಸರ್‌ಗಂಜ್(Kaiserganj) ಲೋಕಸಭಾ ಕ್ಷೇತ್ರದಿಂದ 1.4 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದರು. ತಂದೆ ಬ್ರಿಜ್​ ಭೂಷಣ್(Brij Bhushan)​ 2019ರ ಲೋಕಸಭಾ ಚುನಾವಣೆಯಲ್ಲಿ, ಕೈಸರ್‌ಗಂಜ್‌ನಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. 

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಕಾರಣದಿಂದ ನಾಲ್ಕನೇ ಬಾರಿ ಟಿಕೆಟ್‌ ಕೈತಪ್ಪಿತ್ತು. ಹೀಗಾಗಿ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಲಾಗಿತ್ತು.

ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಪೋಗಟ್ ಅವರು ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದರು. ಇದೇ ವಿಚಾರವಾಗಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಒಲಿಂಪಿಕ್ ಪದಕ ವಿಜೇತರಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

ಇದನ್ನೂ ಓದಿ Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶ್​ ಫೈನಲ್​ ಪಂದ್ಯಕ್ಕೂ ಮುನ್ನ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Continue Reading

ಕ್ರೀಡೆ

Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

Vinesh Phogat: 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ(Vinesh Phogat Disqualified) ಮಾಡಲಾಗಿದೆ. ಅವರ ಈ ಹಿನ್ನಡೆಗೆ ತೂಕ ಬದಲಾವಣೆಯೂ ಕಾರಣವಾಗಿರಬಹುದೆಂಬ ಚರ್ಚೆಗಳು ಇದೀಗ ಶುರುವಾಗಿದೆ. ಘೋಷಣೆಯಾದ ಕೆಲವೇ ನಿಮಿಷಗಳಲ್ಲಿ, ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Vinesh Phogat support by Alia Bhatt Vicky Kaushal Olympics disqualification
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಕುಸ್ತಿಯಲ್ಲಿ ಫೈನಲ್​ ಪ್ರವೇಶಿಸುವ ಮೂಲಕ ಐತಿಹಾಸಿಕ ಪದಕವೊಂದನ್ನು ಗೆಲ್ಲುವು ನಿರೀಕ್ಷೆಯಲಿದ್ದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಅವರನ್ನು ಒಲಿಂಪಿಕ್ಸ್​ ಸಮಿತಿ ಅನರ್ಹ ಮಾಡಿದೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ(Vinesh Phogat Disqualified) ಮಾಡಲಾಗಿದೆ. ಅವರ ಈ ಹಿನ್ನಡೆಗೆ ತೂಕ ಬದಲಾವಣೆಯೂ ಕಾರಣವಾಗಿರಬಹುದೆಂಬ ಚರ್ಚೆಗಳು ಇದೀಗ ಶುರುವಾಗಿದೆ. ಘೋಷಣೆಯಾದ ಕೆಲವೇ ನಿಮಿಷಗಳಲ್ಲಿ, ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ವಿನೇಶ್ ಫೋಗಟ್ ನೀವು ಇಡೀ ದೇಶಕ್ಕೆ ಸ್ಫೂರ್ತಿ. ನಿಮ್ಮ ಸ್ಥೈರ್ಯವನ್ನು , ನಿಮ್ಮ ಧೈರ್ಯವನ್ನು ಯಾವುದೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮತ್ತು ಇತಿಹಾಸವನ್ನು ಸೃಷ್ಟಿಸಲು ನೀವು ಅನುಭವಿಸಿದ ಕಷ್ಟಗಳನ್ನು ಯಾವುದೂ ತೆಗೆದುಹಾಕುವುದಿಲ್ಲ! ನಾವು ನಿಮ್ಮೊಂದಿಗೆ ಇರುತ್ತೇವೆ. ನೀವೇ ಚಿನ್ನ – ನೀವೆ ಕಬ್ಬಿಣ ಮತ್ತು ನೀವೆ ಸ್ಟೀಲ್‌! ಯಾವುದೂ ನಿಮ್ಮಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ! ಯುಗಗಳ ಚಾಂಪಿಯನ್! ನಿಮ್ಮಂತೆ ಯಾರೂ ಇಲ್ಲʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

ಫರ್ಹಾನ್ ಅಖ್ತರ್ ಅವರು ಪೋಸ್ಟ್‌ನಲ್ಲಿ ವಿನೇಶ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ” ವಿನೇಶ್ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಮತ್ತು ನೀವು ಕ್ರೀಡೆಗಾಗಿ ಮಾಡಿದ್ದೀರಿʼʼ ಎಂದು ಬರೆದುಕೊಂಡಿದ್ದಾರೆ.

ಜೋಯಾ ಅಖ್ತರ್ “ಚಾಂಪಿಯನ್ ನೀವು ಚಿನ್ನ! ನೀವು ಸಾಧಿಸಿದ್ದು ಪದಕಗಳನ್ನು ಮೀರಿದ್ದು. ತುಂಬಾ ಹೆಮ್ಮೆ. ಸ್ಫೂರ್ತಿʼʼಎಂದು ಬರೆದುಕೊಂಡಿದ್ದಾರೆ. ವಿಕ್ಕಿ ಕೌಶಲ್ “ಪದಕಗಳನ್ನು ಮೀರಿದ ವಿಜೇತೆ ಎಂದು ಬರೆದುಕೊಂಡಿದ್ದಾರೆ.

ತಾಪ್ಸಿ ಪನ್ನು “ಇದು ಹೃದಯವಿದ್ರಾವಕವಾಗಿದೆ. ಆದರೆ ಪ್ರಾಮಾಣಿಕವಾಗಿ ಈ ಮಹಿಳೆ ಈಗಾಗಲೇ ಚಿನ್ನವನ್ನು ಮೀರಿ ತನ್ನ ಛಾಪು ಮೂಡಿಸಿದ್ದಾರೆರೆ!” ಸೋನಾಕ್ಷಿ ಸಿನ್ಹಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಹೀಗೆ ಬರೆದಿದ್ದಾರೆ, “ನಂಬಲಾಗುತ್ತಿಲ್ಲ! ನನಗೆ ಊಹಿಸಲು ಸಾಧ್ಯವಿಲ್ಲ ಮತ್ತು ನೀವು ಯಾವಾಗಲೂ ಚಾಂಪಿಯನ್ ಆಗಿರುತ್ತೀರಿ. ಹೇಳಬೇಕೆಂದು ನನಗೆ ತಿಳಿದಿಲ್ಲʼʼಎಂದು ಬರೆದುಕೊಂಡಿದ್ದಾರೆ.

ವಿನೇಶ್​ 50 ಕೆಜಿ ವಿಭಾಗದಲ್ಲಿ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಒಲಿಂಪಿಕ್ಸ್​ ಆರಂಭಕ್ಕೂ ಮುನ್ನ ನಡೆದಿದ್ದ ಸೀನಿಯರ್‌ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿಯೂ ವಿನೇಶ್​ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಚಿನ್ನದ ಪದಕ ಗೆದ್ದಿದ್ದರು. ಆದರೆ, 50 ಕೆಜಿ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಅವರು ಕಣಕ್ಕಿಳಿದ್ದರು. ಇದೀಗ ತೂಕ ಬದಲಿಸಿದ್ದೇ ಅವರ ಈ ಹಿನ್ನಡೆಗೆ ಕಾರಣ ಎಂದರೂ ತಪ್ಪಾಗಲಾರದು.

ಒಲಿಂಪಿಕ್ಸ್​ ಸ್ಪರ್ಧೆಗೂ ಮುನ್ನ ವಿನೇಶ್​ ಅವರ ತೂಕ 2 ಕೆಜಿ ಹೆಚ್ಚಳವಾಗಿತ್ತು. ಇದನ್ನು ಕಡಿಮೆ ಮಾಡಲೆಂದೆ ಅವರು ನಿದ್ದೆ, ಆಹಾರ ಬಿಟ್ಟು ಅತ್ಯಂತ ಕಠಿಣ ವ್ಯಾಯಾಮ ನಡೆಸಿ ಸುಮಾರು 1.90 ಕೆಜಿ ತೂಕ ಇಳಿಸಿಕೊಂಡಿದ್ದರು. ಆದರೆ 100 ಗ್ರಾಂ ಹೆಚ್ಚಳದಿಂದ ಇದೀಗ ಅವರ ಒಲಿಂಪಿಕ್ಸ್​ ಪದಕದ ಕನಸು ನುಚ್ಚುನೂರಾಗಿದೆ. ಒಂದೊಮ್ಮೆ ಅವರು ತಮ್ಮ ಈ ಹಿಂದಿನಂತೆ 53 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರೆ ಈ ಹಿನ್ನಡೆ ಉಂಟಾಗುತ್ತಿರಲಿಲ್ಲ.

Continue Reading
Advertisement
National Handloom day 2024
ಫ್ಯಾಷನ್36 mins ago

National Handloom day 2024: ಕರ್ನಾಟಕದ ಹೆಮ್ಮೆಯ ವಿಶ್ವ ಪ್ರಸಿದ್ಧ ಹ್ಯಾಂಡ್‌ ಲೂಮ್‌ ಸೀರೆಗಳಿವು

Viral Video
Latest46 mins ago

Viral Video: 11 ವರ್ಷಗಳ ಹಿಂದೆ ಸತ್ತಿದ್ದ ಗಂಡ ಕನಸಲ್ಲಿ ಬಂದು ʼಸೇರಿದʼ; ಹಾಗಾಗಿ ಮಗು ಹುಟ್ಟಿತು ಅಂತಿದ್ದಾಳೆ ಈ ಹೆಂಗಸು!

Vinesh Phogat
ಕ್ರೀಡೆ58 mins ago

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ದಿಢೀರ್ 2-3 ಕೆ.ಜಿ ತೂಕ ಇಳಿಸಲು ಮುಂದಾದರೆ ದೇಹಕ್ಕೆ ಏನಾಗುತ್ತದೆ?

Lalbagh Flower Show
ಕರ್ನಾಟಕ1 hour ago

Lalbagh Flower Show: ಲಾಲ್‌ಬಾಗ್ ಫ್ಲವರ್‌ ಶೋ; ನಾಳೆಯಿಂದ ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ

Viral Video
Latest1 hour ago

Viral Video: ರೀಲ್ಸ್‌ಗಾಗಿ ಬೆಡ್‌ರೂಮ್‌ನಲ್ಲಿ ಅರೆನಗ್ನ ಗೆಳತಿ ಕೈಗೆ ಪಿಸ್ತೂಲ್ ಕೊಟ್ಟ ಪೊಲೀಸ್ ಅಧಿಕಾರಿ!

Viral News
Latest2 hours ago

Viral News: ಚಹಾ ಮಾರಾಟದಿಂದ ಇವರಿಗೆ ಪ್ರತಿ ತಿಂಗಳು 2 ಲಕ್ಷ ರೂ. ಆದಾಯ!

Viral video
ವೈರಲ್ ನ್ಯೂಸ್2 hours ago

Viral Video: ಐದನೇ ಮಹಡಿಯಿಂದ ಬಾಲಕಿ ಮೇಲೆ ಬಿದ್ದ ಶ್ವಾನ; ಆಮೇಲೆ ಆಗಿದ್ದೇನು? ವಿಡಿಯೋ ಇದೆ

OTT Releases
ಸಿನಿಮಾ2 hours ago

OTT Releases: ಇಂಡಿಯನ್ 2, ಟರ್ಬೊ ಸೇರಿದಂತೆ ಹಲವು ಹೊಸ ಚಿತ್ರಗಳು ಈ ವಾರ ಒಟಿಟಿಯಲ್ಲಿ!

Gowri Movie Saanya Iyer Samar Lankesh eating dosa with together
ಸಿನಿಮಾ2 hours ago

Gowri Movie: ಸಮರ್ಜಿತ್‌ಗೆ ನಾಚಿಕೆಯಿಂದ ದೋಸೆ ತಿನ್ನಿಸಿದ ಸಾನ್ಯಾ ಅಯ್ಯರ್; ಇದೇನು ಡೇಟಿಂಗಾ ಎಂದು ಪ್ರಶ್ನೆ ಇಟ್ಟ ಫ್ಯಾನ್ಸ್!

Self Harming
ಕರ್ನಾಟಕ2 hours ago

Self Harming: ಇನ್‍ಸ್ಟಾಗ್ರಾಂ ಪ್ರೇಯಸಿ ಕೈಕೊಟ್ಟಿದ್ದಕ್ಕೆ ನೇಣಿಗೆ ಶರಣಾದ ಯುವಕ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 day ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 day ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌