Vinesh Phogat Disqualified: ತೂಕ ವಿಭಾಗ ಬದಲಿಸಿದ್ದೇ ವಿನೇಶ್​ ಹಿನ್ನಡೆಗೆ ಕಾರಣವಾಯಿತೇ? - Vistara News

ಕ್ರೀಡೆ

Vinesh Phogat Disqualified: ತೂಕ ವಿಭಾಗ ಬದಲಿಸಿದ್ದೇ ವಿನೇಶ್​ ಹಿನ್ನಡೆಗೆ ಕಾರಣವಾಯಿತೇ?

Vinesh Phogat Disqualified: ಫೈನಲ್‌ಗೆ ಪ್ರವೇಶಿಸಿದ ಬಳಿಕ ತಮ್ಮ ತೂಕ ಇಳಿಸಿಕೊಳ್ಳಲು ರಾತ್ರಿಪೂರ್ತಿ ವರ್ಕ್‌ಔಟ್‌ ಮಾಡಿದ್ದ ವಿನೇಶ್‌, ಇಂದು ನಿರ್ಜಲೀಕರಣದಿಂದಾಗಿ ಅಸ್ವಸ್ತಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Vinesh Phogat Disqualified
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಕುಸ್ತಿಯಲ್ಲಿ ಫೈನಲ್​ ಪ್ರವೇಶಿಸುವ ಮೂಲಕ ಐತಿಹಾಸಿಕ ಪದಕವೊಂದನ್ನು ಗೆಲ್ಲುವು ನಿರೀಕ್ಷೆಯಲಿದ್ದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಅವರನ್ನು ಒಲಿಂಪಿಕ್ಸ್​ ಸಮಿತಿ ಅನರ್ಹ ಮಾಡಿದೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ(Vinesh Phogat Disqualified) ಮಾಡಲಾಗಿದೆ. ಅವರ ಈ ಹಿನ್ನಡೆಗೆ ತೂಕ ಬದಲಾವಣೆಯೂ ಕಾರಣವಾಗಿರಬಹುದೆಂಬ ಚರ್ಚೆಗಳು ಇದೀಗ ಶುರುವಾಗಿದೆ.

ಹೌದು, ವಿನೇಶ್​ 50 ಕೆಜಿ ವಿಭಾಗದಲ್ಲಿ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಒಲಿಂಪಿಕ್ಸ್​ ಆರಂಭಕ್ಕೂ ಮುನ್ನ ನಡೆದಿದ್ದ ಸೀನಿಯರ್‌ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿಯೂ ವಿನೇಶ್​ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಚಿನ್ನದ ಪದಕ ಗೆದ್ದಿದ್ದರು. ಆದರೆ, 50 ಕೆಜಿ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಅವರು ಕಣಕ್ಕಿಳಿದ್ದರು. ಇದೀಗ ತೂಕ ಬದಲಿಸಿದ್ದೇ ಅವರ ಈ ಹಿನ್ನಡೆಗೆ ಕಾರಣ ಎಂದರೂ ತಪ್ಪಾಗಲಾರದು.

ಒಲಿಂಪಿಕ್ಸ್​ ಸ್ಪರ್ಧೆಗೂ ಮುನ್ನ ವಿನೇಶ್​ ಅವರ ತೂಕ 2 ಕೆಜಿ ಹೆಚ್ಚಳವಾಗಿತ್ತು. ಇದನ್ನು ಕಡಿಮೆ ಮಾಡಲೆಂದೆ ಅವರು ನಿದ್ದೆ, ಆಹಾರ ಬಿಟ್ಟು ಅತ್ಯಂತ ಕಠಿಣ ವ್ಯಾಯಾಮ ನಡೆಸಿ ಸುಮಾರು 1.90 ಕೆಜಿ ತೂಕ ಇಳಿಸಿಕೊಂಡಿದ್ದರು. ಆದರೆ 100 ಗ್ರಾಂ ಹೆಚ್ಚಳದಿಂದ ಇದೀಗ ಅವರ ಒಲಿಂಪಿಕ್ಸ್​ ಪದಕದ ಕನಸು ನುಚ್ಚುನೂರಾಗಿದೆ. ಒಂದೊಮ್ಮೆ ಅವರು ತಮ್ಮ ಈ ಹಿಂದಿನಂತೆ 53 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರೆ ಈ ಹಿನ್ನಡೆ ಉಂಟಾಗುತ್ತಿರಲಿಲ್ಲ.

ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ


ಅನರ್ಹವಾಗಿ ಆಘಾತದಲ್ಲಿರುವ ವಿನೇಶ್​ಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ ಹೇಳಿದ್ದಾರೆ. “ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನಿಮಗೆ ಮಾತ್ರವಲ್ಲದೆ ಇಡೀ ದೇಶವಾಸಿಗಳಿಗೆ ನೋವು ತಂದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ” ಎಂದು ಮೋದಿ ಟ್ವೀಟ್​ ಮಾಡಿದ್ದಾರೆ. ಜತೆತೆ ಅಂತಾರಾಷ್ಟ್ರೀಯ ಒಲಿಂಪಿಕ್​ ಸಮಿತಿಗೆ ಮತ್ತೊಮ್ಮೆ ಈ ನಿರ್ಧಾರವನ್ನು ಪರಿಶೀಲಿಸುವಂತೆ ಮೋದಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ Vinesh Phogat:‌ ರಾತ್ರಿಯಿಡೀ ಪ್ರಯತ್ನಪಟ್ಟರೂ ಇಳಿಯದೆ ವಿನೇಶ್‌ ಕನಸು ನುಚ್ಚುನೂರು ಮಾಡಿದ ಆ 100 ಗ್ರಾಂ!

ಆಸ್ಪತ್ರೆಗೆ ದಾಖಲು


ಫೈನಲ್‌ಗೆ ಪ್ರವೇಶಿಸಿದ ಬಳಿಕ ತಮ್ಮ ತೂಕ ಇಳಿಸಿಕೊಳ್ಳಲು ರಾತ್ರಿಪೂರ್ತಿ ವರ್ಕ್‌ಔಟ್‌ ಮಾಡಿದ್ದ ವಿನೇಶ್‌, ಇಂದು ನಿರ್ಜಲೀಕರಣದಿಂದಾಗಿ ಅಸ್ವಸ್ತಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ!

Vinesh Phogat: 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹಗೊಳಿಸಲಗಿದೆ. ಇದಕ್ಕೆ ಭಾರತದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಪಿ.ಟಿ. ಉಷಾ ಅವರಿಗೆ ಕರೆ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂಬುದಾಗಿ ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವೀಯ ತಿಳಿಸಿದ್ದಾರೆ.

VISTARANEWS.COM


on

Vinesh Phogat
Koo

ದೆಹಲಿ/ಪ್ಯಾರಿಸ್:‌ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ಖ್ಯಾತ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat) ಅವರು ಅನರ್ಹಗೊಂಡಿರುವುದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವಿನೇಶ್‌ ಫೋಗಟ್‌ ಪರವಾಗಿ ದೇಶವೇ ಒಗ್ಗೂಡಿ ನಿಂತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ವಿನೇಶ್‌ ಫೋಗಟ್‌ ಪರವಾಗಿ ನಿಂತಿದ್ದಾರೆ. ಇದರ ಬೆನ್ನಲ್ಲೇ, ಭಾರತೀಯ ಒಲಿಂಪಿಕ್ಸ್‌ ಅಸೋಷಿಯೇಷನ್‌ (IOA) ಅಧ್ಯಕ್ಷೆ ಪಿ.ಟಿ.ಉಷಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ಮಾಡಿದ್ದು, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಪಿ.ಟಿ.ಉಷಾ ಅವರಿಗೆ ನರೇಂದ್ರ ಮೋದಿ ಅವರು ಕರೆ ಮಾಡಿರುವ ಕುರಿತು ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವಿಯ ಅವರು ಸಂಸತ್‌ನಲ್ಲಿ ಮಾಹಿತಿ ನೀಡಿದ್ದಾರೆ. “50 ಕೆಜಿಗಿಂತ 100 ಗ್ರಾಂ ತೂಕ ಹೆಚ್ಚಿದ್ದ ಕಾರಣ ನೀಡಿ ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಲಾಗಿದೆ. ಈಗಾಗಲೇ ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಪ್ರತಿಭಟನೆ ವ್ಯಕ್ತಪಡಿಸಿದೆ. ನರೇಂದ್ರ ಮೋದಿ ಅವರೂ ಪಿ.ಟಿ. ಉಷಾ ಅವರಿಗೆ ಕರೆ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ” ಎಂದು ಸಚಿವ ತಿಳಿಸಿದ್ದಾರೆ.

ಪ್ರತಿಯೊಂದು ಹೆಜ್ಜೆಯಲ್ಲೂ ವಿನೇಶ್‌ ಫೋಗಟ್‌ ಅವರಿಗೆ ಕೇಂದ್ರ ಸರ್ಕಾರ ಸಹಕಾರ ನೀಡಿದೆ. ಅವರಿಗೆ ವೈಯಕ್ತಿಕ ಸಿಬ್ಬಂದಿಯನ್ನೂ ಭಾರತ ಕಳುಹಿಸಿದೆ. ಸಹಾಯಕ ಸಿಬ್ಬಂದಿಯನ್ನೂ ಅವರಿಗೆ ಒದಗಿಸಲಾಗಿದೆ. ಇದಕ್ಕೂ ಮೊದಲು ಕೂಡ ವಿನೇಶ್‌ ಫೋಗಟ್‌ ಅವರ ಸಾಧನೆಗೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಿದೆ. ಮುಂದಿನ ದಿನಗಳಲ್ಲೂ ನೆರವು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ವಿನೇಶ್‌ ಫೋಗಟ್‌ಗೆ ಬಾಲಿವುಡ್‌ ತಾರೆಯರ ಬೆಂಬಲ

ವಿನೇಶ್‌ ಫೋಗಟ್‌ ಅವರ ಪರವಾಗಿ ಬಾಲಿವುಡ್‌ ಸೆಲೆಬ್ರಿಟಿಗಳು ನಿಂತಿದ್ದಾರೆ. ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ವಿನೇಶ್ ಫೋಗಟ್ ನೀವು ಇಡೀ ದೇಶಕ್ಕೆ ಸ್ಫೂರ್ತಿ. ನಿಮ್ಮ ಸ್ಥೈರ್ಯವನ್ನು , ನಿಮ್ಮ ಧೈರ್ಯವನ್ನು ಯಾವುದೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮತ್ತು ಇತಿಹಾಸವನ್ನು ಸೃಷ್ಟಿಸಲು ನೀವು ಅನುಭವಿಸಿದ ಕಷ್ಟಗಳನ್ನು ಯಾವುದೂ ತೆಗೆದುಹಾಕುವುದಿಲ್ಲ! ನಾವು ನಿಮ್ಮೊಂದಿಗೆ ಇರುತ್ತೇವೆ. ನೀವೇ ಚಿನ್ನ – ನೀವೇ ಕಬ್ಬಿಣ ಮತ್ತು ನೀವೇ ಸ್ಟೀಲ್‌! ಯಾವುದೂ ನಿಮ್ಮಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ! ಯುಗಗಳ ಚಾಂಪಿಯನ್! ನಿಮ್ಮಂತೆ ಯಾರೂ ಇಲ್ಲʼʼ ಎಂದು ಬರೆದುಕೊಂಡಿದ್ದಾರೆ.

ಫರ್ಹಾನ್ ಅಖ್ತರ್ ಅವರು ಪೋಸ್ಟ್‌ನಲ್ಲಿ ವಿನೇಶ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ” ವಿನೇಶ್ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಮತ್ತು ನೀವು ಕ್ರೀಡೆಗಾಗಿ ಮಾಡಿದ್ದೀರಿʼʼ ಎಂದು ಬರೆದುಕೊಂಡಿದ್ದಾರೆ. ಜೋಯಾ ಅಖ್ತರ್ “ಚಾಂಪಿಯನ್ ನೀವು ಚಿನ್ನ! ನೀವು ಸಾಧಿಸಿದ್ದು ಪದಕಗಳನ್ನು ಮೀರಿದ್ದು. ತುಂಬಾ ಹೆಮ್ಮೆ. ಸ್ಫೂರ್ತಿʼʼಎಂದು ಬರೆದುಕೊಂಡಿದ್ದಾರೆ. ವಿಕ್ಕಿ ಕೌಶಲ್‌, ಪದಕಗಳನ್ನು ಮೀರಿದ ವಿಜೇತೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

Continue Reading

ಕ್ರೀಡೆ

Vinesh Phogat: ಫೈನಲ್​ಗೆ ಅನರ್ಹ; ವಿನೇಶ್ ಫೋಗಟ್​ ಕಡು ವೈರಿ ಬ್ರಿಜ್ ಭೂಷಣ್ ಮಗನ ಪ್ರತಿಕ್ರಿಯೆ ಏನು?

Vinesh Phogat: ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದು ದೇಶಕ್ಕೆ ಉಂಟಾದ ನಷ್ಟ. ಫೆಡರೇಶನ್ ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದೆ ಏನು ಮಾಡಬಹುದು ಎಂಬುದನ್ನು ಪರಿಶೀಲನೆ ನಡೆಸುತ್ತದೆ ಎಂದು ಹೇಳಿದ್ದಾರೆ.

VISTARANEWS.COM


on

Vinesh Phogat
Koo

ನವದೆಹಲಿ: ಅಪ್ಪನ(ಬ್ರಿಜ್​ ಭೂಷಣ್ ಶರಣ್​ ಸಿಂಗ್​) ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುಂತೆ ಮಾಡಿದ್ದ ವಿನೇಶ್ ಫೋಗಟ್(Vinesh Phogat)​ ಅವರು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಅನರ್ಹಗೊಂಡ ಬಗ್ಗೆ ಬ್ರಿಜ್​ ಭೂಷಣ್ ಪುತ್ರ(Brij Bhushan’s son Karan), ಬಿಜೆಪಿ ಸಂಸದ ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಪ್ರತಿಕ್ರಿಯೆ ನೀಡಿದ್ದಾರೆ.

​ಸಂಸತ್​ ಅಧಿವೇಶನಕ್ಕೆ ತೆರಳುತ್ತಿದ್ದ ಕರಣ್‌ ಭೂಷಣ್‌ ಸಿಂಗ್‌ ಮಾಧ್ಯಮದ ಜತೆ ಮಾತನಾಡುವ ವೇಳೆ, “ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದು ದೇಶಕ್ಕೆ ಉಂಟಾದ ನಷ್ಟ. ಫೆಡರೇಶನ್ ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದೆ ಏನು ಮಾಡಬಹುದು ಎಂಬುದನ್ನು ಪರಿಶೀಲನೆ ನಡೆಸುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಭಗತ್ ರಾಮ್ ವಿರುದ್ಧ ಕೈಸರ್‌ಗಂಜ್(Kaiserganj) ಲೋಕಸಭಾ ಕ್ಷೇತ್ರದಿಂದ 1.4 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದರು. ತಂದೆ ಬ್ರಿಜ್​ ಭೂಷಣ್(Brij Bhushan)​ 2019ರ ಲೋಕಸಭಾ ಚುನಾವಣೆಯಲ್ಲಿ, ಕೈಸರ್‌ಗಂಜ್‌ನಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. 

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಕಾರಣದಿಂದ ನಾಲ್ಕನೇ ಬಾರಿ ಟಿಕೆಟ್‌ ಕೈತಪ್ಪಿತ್ತು. ಹೀಗಾಗಿ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಲಾಗಿತ್ತು.

ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಪೋಗಟ್ ಅವರು ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದರು. ಇದೇ ವಿಚಾರವಾಗಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಒಲಿಂಪಿಕ್ ಪದಕ ವಿಜೇತರಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

ಇದನ್ನೂ ಓದಿ Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶ್​ ಫೈನಲ್​ ಪಂದ್ಯಕ್ಕೂ ಮುನ್ನ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Continue Reading

ಕ್ರೀಡೆ

Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

Vinesh Phogat: 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ(Vinesh Phogat Disqualified) ಮಾಡಲಾಗಿದೆ. ಅವರ ಈ ಹಿನ್ನಡೆಗೆ ತೂಕ ಬದಲಾವಣೆಯೂ ಕಾರಣವಾಗಿರಬಹುದೆಂಬ ಚರ್ಚೆಗಳು ಇದೀಗ ಶುರುವಾಗಿದೆ. ಘೋಷಣೆಯಾದ ಕೆಲವೇ ನಿಮಿಷಗಳಲ್ಲಿ, ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Vinesh Phogat support by Alia Bhatt Vicky Kaushal Olympics disqualification
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಕುಸ್ತಿಯಲ್ಲಿ ಫೈನಲ್​ ಪ್ರವೇಶಿಸುವ ಮೂಲಕ ಐತಿಹಾಸಿಕ ಪದಕವೊಂದನ್ನು ಗೆಲ್ಲುವು ನಿರೀಕ್ಷೆಯಲಿದ್ದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಅವರನ್ನು ಒಲಿಂಪಿಕ್ಸ್​ ಸಮಿತಿ ಅನರ್ಹ ಮಾಡಿದೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ(Vinesh Phogat Disqualified) ಮಾಡಲಾಗಿದೆ. ಅವರ ಈ ಹಿನ್ನಡೆಗೆ ತೂಕ ಬದಲಾವಣೆಯೂ ಕಾರಣವಾಗಿರಬಹುದೆಂಬ ಚರ್ಚೆಗಳು ಇದೀಗ ಶುರುವಾಗಿದೆ. ಘೋಷಣೆಯಾದ ಕೆಲವೇ ನಿಮಿಷಗಳಲ್ಲಿ, ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ವಿನೇಶ್ ಫೋಗಟ್ ನೀವು ಇಡೀ ದೇಶಕ್ಕೆ ಸ್ಫೂರ್ತಿ. ನಿಮ್ಮ ಸ್ಥೈರ್ಯವನ್ನು , ನಿಮ್ಮ ಧೈರ್ಯವನ್ನು ಯಾವುದೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮತ್ತು ಇತಿಹಾಸವನ್ನು ಸೃಷ್ಟಿಸಲು ನೀವು ಅನುಭವಿಸಿದ ಕಷ್ಟಗಳನ್ನು ಯಾವುದೂ ತೆಗೆದುಹಾಕುವುದಿಲ್ಲ! ನಾವು ನಿಮ್ಮೊಂದಿಗೆ ಇರುತ್ತೇವೆ. ನೀವೇ ಚಿನ್ನ – ನೀವೆ ಕಬ್ಬಿಣ ಮತ್ತು ನೀವೆ ಸ್ಟೀಲ್‌! ಯಾವುದೂ ನಿಮ್ಮಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ! ಯುಗಗಳ ಚಾಂಪಿಯನ್! ನಿಮ್ಮಂತೆ ಯಾರೂ ಇಲ್ಲʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

ಫರ್ಹಾನ್ ಅಖ್ತರ್ ಅವರು ಪೋಸ್ಟ್‌ನಲ್ಲಿ ವಿನೇಶ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ” ವಿನೇಶ್ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಮತ್ತು ನೀವು ಕ್ರೀಡೆಗಾಗಿ ಮಾಡಿದ್ದೀರಿʼʼ ಎಂದು ಬರೆದುಕೊಂಡಿದ್ದಾರೆ.

ಜೋಯಾ ಅಖ್ತರ್ “ಚಾಂಪಿಯನ್ ನೀವು ಚಿನ್ನ! ನೀವು ಸಾಧಿಸಿದ್ದು ಪದಕಗಳನ್ನು ಮೀರಿದ್ದು. ತುಂಬಾ ಹೆಮ್ಮೆ. ಸ್ಫೂರ್ತಿʼʼಎಂದು ಬರೆದುಕೊಂಡಿದ್ದಾರೆ. ವಿಕ್ಕಿ ಕೌಶಲ್ “ಪದಕಗಳನ್ನು ಮೀರಿದ ವಿಜೇತೆ ಎಂದು ಬರೆದುಕೊಂಡಿದ್ದಾರೆ.

ತಾಪ್ಸಿ ಪನ್ನು “ಇದು ಹೃದಯವಿದ್ರಾವಕವಾಗಿದೆ. ಆದರೆ ಪ್ರಾಮಾಣಿಕವಾಗಿ ಈ ಮಹಿಳೆ ಈಗಾಗಲೇ ಚಿನ್ನವನ್ನು ಮೀರಿ ತನ್ನ ಛಾಪು ಮೂಡಿಸಿದ್ದಾರೆರೆ!” ಸೋನಾಕ್ಷಿ ಸಿನ್ಹಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಹೀಗೆ ಬರೆದಿದ್ದಾರೆ, “ನಂಬಲಾಗುತ್ತಿಲ್ಲ! ನನಗೆ ಊಹಿಸಲು ಸಾಧ್ಯವಿಲ್ಲ ಮತ್ತು ನೀವು ಯಾವಾಗಲೂ ಚಾಂಪಿಯನ್ ಆಗಿರುತ್ತೀರಿ. ಹೇಳಬೇಕೆಂದು ನನಗೆ ತಿಳಿದಿಲ್ಲʼʼಎಂದು ಬರೆದುಕೊಂಡಿದ್ದಾರೆ.

ವಿನೇಶ್​ 50 ಕೆಜಿ ವಿಭಾಗದಲ್ಲಿ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಒಲಿಂಪಿಕ್ಸ್​ ಆರಂಭಕ್ಕೂ ಮುನ್ನ ನಡೆದಿದ್ದ ಸೀನಿಯರ್‌ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿಯೂ ವಿನೇಶ್​ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಚಿನ್ನದ ಪದಕ ಗೆದ್ದಿದ್ದರು. ಆದರೆ, 50 ಕೆಜಿ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಅವರು ಕಣಕ್ಕಿಳಿದ್ದರು. ಇದೀಗ ತೂಕ ಬದಲಿಸಿದ್ದೇ ಅವರ ಈ ಹಿನ್ನಡೆಗೆ ಕಾರಣ ಎಂದರೂ ತಪ್ಪಾಗಲಾರದು.

ಒಲಿಂಪಿಕ್ಸ್​ ಸ್ಪರ್ಧೆಗೂ ಮುನ್ನ ವಿನೇಶ್​ ಅವರ ತೂಕ 2 ಕೆಜಿ ಹೆಚ್ಚಳವಾಗಿತ್ತು. ಇದನ್ನು ಕಡಿಮೆ ಮಾಡಲೆಂದೆ ಅವರು ನಿದ್ದೆ, ಆಹಾರ ಬಿಟ್ಟು ಅತ್ಯಂತ ಕಠಿಣ ವ್ಯಾಯಾಮ ನಡೆಸಿ ಸುಮಾರು 1.90 ಕೆಜಿ ತೂಕ ಇಳಿಸಿಕೊಂಡಿದ್ದರು. ಆದರೆ 100 ಗ್ರಾಂ ಹೆಚ್ಚಳದಿಂದ ಇದೀಗ ಅವರ ಒಲಿಂಪಿಕ್ಸ್​ ಪದಕದ ಕನಸು ನುಚ್ಚುನೂರಾಗಿದೆ. ಒಂದೊಮ್ಮೆ ಅವರು ತಮ್ಮ ಈ ಹಿಂದಿನಂತೆ 53 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರೆ ಈ ಹಿನ್ನಡೆ ಉಂಟಾಗುತ್ತಿರಲಿಲ್ಲ.

Continue Reading

ಕ್ರೀಡೆ

Vinesh Phogat: ವಿನೇಶ್ ಫೋಗಟ್‌ ಅನರ್ಹತೆಗೆ ಸಂಸತ್‌ನಲ್ಲಿ ಸಚಿವ ಮಂಡಾವಿಯ ಆಕ್ರೋಶ; ನೆರವಿನ ಅಭಯ

Vinesh Phogat: ಫೈನಲ್‌ಗೆ ಪ್ರವೇಶಿಸಿದ ಬಳಿಕ ತಮ್ಮ ತೂಕ ಇಳಿಸಿಕೊಳ್ಳಲು ರಾತ್ರಿಪೂರ್ತಿ ವರ್ಕ್‌ಔಟ್‌ ಮಾಡಿದ್ದ ವಿನೇಶ್‌, ಇಂದು ನಿರ್ಜಲೀಕರಣದಿಂದಾಗಿ ಅಸ್ವಸ್ತಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಆದರೆ, ಅವರನ್ನು ಅನರ್ಹಗೊಳಿಸಿರುವ ಕುರಿತು ಭಾರತದಾದ್ಯಂತ ಆಕ್ರೋಶ ವ್ಯಕ್ತಪಡಿಸಿದೆ.

VISTARANEWS.COM


on

Vinesh Phogat
Koo

ಪ್ಯಾರಿಸ್:‌ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (paris olympics) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ಖ್ಯಾತ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat) ಅವರನ್ನು ಹೆಚ್ಚಿನ ತೂಕದ ಹಿನ್ನೆಲೆಯಲ್ಲಿ ಅನರ್ಹತೆಗೊಳಿಸಿರುವುದಕ್ಕೆ ಕೇಂದ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ. ವಿನೇಶ್‌ ಫೋಗಟ್‌ ಅನರ್ಹತೆ ಕುರಿತು ಸಂಸತ್‌ನಲ್ಲಿ ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವಿಯ (Mansukh Mandaviya) ಅವರು ಪ್ರಸ್ತಾಪಿಸಿದ್ದು, ಅನರ್ಹತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

100 ಗ್ರಾಂ ಹೆಚ್ಚು ತೂಕವಿದ್ದ ಕಾರಣ ಅವರು ಒಲಿಂಪಿಕ್ಸ್‌ನಿಂದ ಅನರ್ಹತೆ ಪಡೆದಿದ್ದಾರೆ. ಒಲಿಂಪಿಕ್ಸ್‌ ನಿಯಮಗಳ ಅನುಸಾರ ಅವರನ್ನು ಅನರ್ಹಗೊಳಿಸಲಾಗಿದೆ. ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಈಗ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಅಧ್ಯಕ್ಷೆ ಪಿ.ಟಿ. ಉಷಾ ಅವರಿಗೆ ಕರೆ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಸೂಚಿಸಿದ್ದಾರೆ ಎಂದು ಮಂಡಾವಿಯ ಹೇಳಿದ್ದಾರೆ.

ಪ್ರತಿಯೊಂದು ಹೆಜ್ಜೆಯಲ್ಲೂ ವಿನೇಶ್‌ ಫೋಗಟ್‌ ಅವರಿಗೆ ಸಹಕಾರ ನೀಡಲಾಗಿದೆ. ಅವರಿಗೆ ವೈಯಕ್ತಿಕ ಸಿಬ್ಬಂದಿಯನ್ನೂ ಭಾರತ ಕಳುಹಿಸಿದೆ. ಸಹಾಯಕ ಸಿಬ್ಬಂದಿಯನ್ನೂ ಅವರಿಗೆ ಒದಗಿಸಲಾಗಿದೆ. ಇದಕ್ಕೂ ಮೊದಲು ಕೂಡ ವಿನೇಶ್‌ ಫೋಗಟ್‌ ಅವರ ಸಾಧನೆಗೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಿದೆ. ಮುಂದಿನ ದಿನಗಳಲ್ಲೂ ನೆರವು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ತೂಕ ಇಳಿಸಿದ್ದೇ ಸಮಸ್ಯೆಗೆ ಕಾರಣ?

ವಿನೇಶ್​ 50 ಕೆಜಿ ವಿಭಾಗದಲ್ಲಿ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಒಲಿಂಪಿಕ್ಸ್​ ಆರಂಭಕ್ಕೂ ಮುನ್ನ ನಡೆದಿದ್ದ ಸೀನಿಯರ್‌ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿಯೂ ವಿನೇಶ್​ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಚಿನ್ನದ ಪದಕ ಗೆದ್ದಿದ್ದರು. ಆದರೆ, 50 ಕೆಜಿ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಅವರು ಕಣಕ್ಕಿಳಿದ್ದರು. ಇದೀಗ ತೂಕ ಬದಲಿಸಿದ್ದೇ ಅವರ ಈ ಹಿನ್ನಡೆಗೆ ಕಾರಣ ಎಂದರೂ ತಪ್ಪಾಗಲಾರದು.

ಒಲಿಂಪಿಕ್ಸ್​ ಸ್ಪರ್ಧೆಗೂ ಮುನ್ನ ವಿನೇಶ್​ ಅವರ ತೂಕ 2 ಕೆಜಿ ಹೆಚ್ಚಳವಾಗಿತ್ತು. ಇದನ್ನು ಕಡಿಮೆ ಮಾಡಲೆಂದೆ ಅವರು ನಿದ್ದೆ, ಆಹಾರ ಬಿಟ್ಟು ಅತ್ಯಂತ ಕಠಿಣ ವ್ಯಾಯಾಮ ನಡೆಸಿ ಸುಮಾರು 1.90 ಕೆಜಿ ತೂಕ ಇಳಿಸಿಕೊಂಡಿದ್ದರು. ಆದರೆ 100 ಗ್ರಾಂ ಹೆಚ್ಚಳದಿಂದ ಇದೀಗ ಅವರ ಒಲಿಂಪಿಕ್ಸ್​ ಪದಕದ ಕನಸು ನುಚ್ಚುನೂರಾಗಿದೆ. ಒಂದೊಮ್ಮೆ ಅವರು ತಮ್ಮ ಈ ಹಿಂದಿನಂತೆ 53 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರೆ ಈ ಹಿನ್ನಡೆ ಉಂಟಾಗುತ್ತಿರಲಿಲ್ಲ.

ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ

ಅನರ್ಹವಾಗಿ ಆಘಾತದಲ್ಲಿರುವ ವಿನೇಶ್​ಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ ಹೇಳಿದ್ದಾರೆ. “ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನಿಮಗೆ ಮಾತ್ರವಲ್ಲದೆ ಇಡೀ ದೇಶವಾಸಿಗಳಿಗೆ ನೋವು ತಂದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ” ಎಂದು ಮೋದಿ ಟ್ವೀಟ್​ ಮಾಡಿದ್ದಾರೆ. ಜತೆತೆ ಅಂತಾರಾಷ್ಟ್ರೀಯ ಒಲಿಂಪಿಕ್​ ಸಮಿತಿಗೆ ಮತ್ತೊಮ್ಮೆ ಈ ನಿರ್ಧಾರವನ್ನು ಪರಿಶೀಲಿಸುವಂತೆ ಮೋದಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Vinesh Phogat: ನೋ! ನೋ! ನೋ!; ವಿನೇಶ್​ ಫೋಗಟ್ ಅನರ್ಹತೆ ಕೆಟ್ಟ ಕನಸಾಗಿರಲಿ: ಆನಂದ್‌ ಮಹೀಂದ್ರಾ

Continue Reading
Advertisement
Kannada New Movie
ಕರ್ನಾಟಕ3 mins ago

Kannada New Movie: ʼಆಪರೇಷನ್ ಕೊಂಬುಡಿಕ್ಕಿʼ ಚಿತ್ರ ನಿರ್ಮಾಣ ಮಾಡಲು ಅಣಿಯಾದ ಅನುಪ್ ಹನುಮಂತೇಗೌಡ

CM Siddaramaiah
ಕರ್ನಾಟಕ7 mins ago

Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ

Bigg Boss Kannada host by rishab shetty sudeep Out
ಬಿಗ್ ಬಾಸ್10 mins ago

Bigg Boss Kannada: ಈ ಬಾರಿ ʻಬಿಗ್‌ ಬಾಸ್‌ ಕನ್ನಡʼ ಹೋಸ್ಟ್‌ ಮಾಡ್ತಿದ್ದಾರಂತೆ ರಿಷಬ್‌ ಶೆಟ್ಟಿ; ಕಿಚ್ಚ ಸುದೀಪ್ ಔಟ್‌?

Metro City
ಬೆಂಗಳೂರು15 mins ago

Metro City: ಬೆಂಗಳೂರಿಗೆ ‘ಮೆಟ್ರೊ ಸಿಟಿ’ ಸ್ಥಾನಮಾನ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ!

Vinesh Phogat
ಪ್ರಮುಖ ಸುದ್ದಿ21 mins ago

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ!

Vinesh Phogat
ಕ್ರೀಡೆ26 mins ago

Vinesh Phogat: ಫೈನಲ್​ಗೆ ಅನರ್ಹ; ವಿನೇಶ್ ಫೋಗಟ್​ ಕಡು ವೈರಿ ಬ್ರಿಜ್ ಭೂಷಣ್ ಮಗನ ಪ್ರತಿಕ್ರಿಯೆ ಏನು?

Bhoomige Banda Bhagavantha came to end
ಕಿರುತೆರೆ29 mins ago

Bhoomige Banda Bhagavantha: ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಮುಕ್ತಾಯ: ಅಂಕಿತಾ ಜಯರಾಮ್‌  ಭಾವುಕ ಪೋಸ್ಟ್‌!

Helicopter crashed
ವಿದೇಶ41 mins ago

Helicopter crashed: ನೇಪಾಳದಲ್ಲಿ ಹೆಲಿಕಾಪ್ಟರ್‌ ಪತನ; ನಾಲ್ವರ ದುರ್ಮರಣ

Electric Shock
ಕ್ರೈಂ52 mins ago

Electric Shock: ರಾಣೇಬೆನ್ನೂರಿನಲ್ಲಿ ವಿದ್ಯುತ್ ಶಾಕ್ ಹೊಡೆದು ತಂದೆ ಮಗ-ಸಾವು

Vinesh Phogat support by Alia Bhatt Vicky Kaushal Olympics disqualification
ಕ್ರೀಡೆ58 mins ago

Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು23 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ24 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌