Vinesh Phogat: ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಪಿತೂರಿಯ ಬಗ್ಗೆ ಗಂಭೀರ ಆರೋಪ ಮಾಡಿದ್ದ ವಿನೇಶ್​; ವೈರಲ್​ ಟ್ವೀಟ್​ ಇಲ್ಲಿದೆ - Vistara News

ಕ್ರೀಡೆ

Vinesh Phogat: ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಪಿತೂರಿಯ ಬಗ್ಗೆ ಗಂಭೀರ ಆರೋಪ ಮಾಡಿದ್ದ ವಿನೇಶ್​; ವೈರಲ್​ ಟ್ವೀಟ್​ ಇಲ್ಲಿದೆ

Vinesh Phogat: ನಾಲ್ಕು ತಿಂಗಳ ಹಿಂದೆ ಅಂದರೆ ಎಪ್ರಿಲ್​ನಲ್ಲಿ ವಿನೇಶ್​ ಫೋಗಟ್​ ಅವರು ಭಾರತ ಕುಸ್ತಿ ಫೆಡರೇಷನ್ (WFI) ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ಗಂಭೀರ ಆರೋಪ ಮಾಡಿ ಟ್ವೀಟ್​ ಮಾಡಿದ್ದರು.

VISTARANEWS.COM


on

Vinesh Phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನಿಗದಿತ ತೂಕಗಿಂತ ಹೆಚ್ಚಿನ ಭಾರ ಇದ್ದ ಕಾರಣ ಚಿನ್ನದ ಪದಕದ ಸ್ಪರ್ಧೆಯಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಪೋಗಟ್‌ ವಿಚಾರದಲ್ಲಿ ಕೆಲವು ರಾಜಕೀಯ ನಾಯಕರು ಪರ ಮತ್ತು ವಿರೋಧದ ಚರ್ಚೆಗಳನ್ನು ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ವಿನೇಶ್​ ಪೋಗಟ್(Vinesh Phogat)​ ಅವರು ಒಲಿಂಪಿಕ್ಸ್​ ಆರಂಭಕ್ಕೂ 4 ತಿಂಗಳ ಹಿಂದೆಯೇ ಟ್ವೀಟ್​ ಮೂಲಕ ಭಾರತ ಕುಸ್ತಿ ಫೆಡರೇಷನ್ ವಿರುದ್ಧ ಗಂಭೀರ ಆರೋಪ ಆಡಿದ್ದರು. ಈ ಟ್ವಿಟ್​ ಇದೀಗ ವೈರಲ್​ ಆಗಿದೆ.

ನಾಲ್ಕು ತಿಂಗಳ ಹಿಂದೆ ಅಂದರೆ ಎಪ್ರಿಲ್​ನಲ್ಲಿ ವಿನೇಶ್​ ಫೋಗಟ್​ ಅವರು ಭಾರತ ಕುಸ್ತಿ ಫೆಡರೇಷನ್ (WFI) ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ಗಂಭೀರ ಆರೋಪ ಮಾಡಿದ್ದರು. ಆದರೆ, ಫೆಡರೇಷನ್ ಈ ಆರೋಪವನ್ನು ತಳ್ಳಿಹಾಕಿತ್ತು.

ವಿನೇಶ್​ ಮಾಡಿದ್ದ ಆರೋಪವೇನು?


“ಒಲಿಂಪಿಕ್ಸ್ ಅರ್ಹತಾ ಪಂದ್ಯಗಳಲ್ಲಿ ನನ್ನ ಭಾಗವಹಿಸುವಿಕೆ ತಡೆಯಲು ಡಬ್ಲ್ಯುಎಫ್‌ಐ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಡೋಪಿಂಗ್ ಪ್ರಕರಣದಲ್ಲಿ ತನ್ನನ್ನು ಸಿಲುಕಿಸುವ ಭಯವಿದೆ. ನಾನು ಅಭ್ಯಾಸದ ವೇಳೆ ಸೇವಿಸುವ ನೀರಿನಲ್ಲಿ ಡೋಪಿಂಗ್ ಅಂಶವುಳ್ಳ ಕೆಲ ರಾಸಾಯನಿಕವನ್ನು ಬೆರೆಸಿರುವ ಅನುಮಾನವಿದೆ” ಎಂದು ವಿನೇಶ್​ ಫೋಗಟ್‌ ಆರೋಪಿಸಿದ್ದರು.

ವಿನೇಶ್​ ಆರೋಪಕ್ಕೆ ಅಂದು ಪ್ರತಿಕ್ರಿಯೆ ನೀಡಿದ ಡಬ್ಲ್ಯುಎಫ್‌ಐ, ವಿನೇಶ್ ಅವರ ಕೋರಿಕೆಯ ಇ-ಮೇಲ್ ಮಾರ್ಚ್ 18 ರಂದು ಬಂದಿತ್ತು. ಆದರೆ ನೋಂದಣಿ ದಿನಾಂಕ ಮಾರ್ಚ್ 11 ಆಗಿದ್ದರಿಂದ ಅದಾಗಲೇ ಸ್ಪರ್ಧಿಗಳು, ತರಬೇತುದಾರರು ಮತ್ತು ವೈದ್ಯಕೀಯ ಸಿಬ್ಬಂದಿ ಪ್ರವೇಶಗಳನ್ನು ಯುಡಬ್ಲ್ಯುಡಬ್ಲ್ಯುಗೆ ಕಳುಹಿಸಲಾಗಿತ್ತು ಎಂದು ಸ್ಪಷ್ಟನೆ ನೀಡಿ ಆರೋಪವನ್ನು ತಳ್ಳಿ ಹಾಕಿತ್ತು. ಇದೀಗ ಅಂದು ವಿನೇಶ್​ ಹೇಳಿದಂತೆ ಫೈನಲ್​ ಪಂದ್ಯಕ್ಕೂ ಮುನ್ನ ಅವರು ಸೇವಿಸಿದ ನೀರಿನಲ್ಲಿ ರಾಸಾಯನಿಕ ಬಳಿಸಿ ಅವರನ್ನು ಉದ್ದೇಶಪೂರ್ವಕವಾಗಿ ಅನರ್ಹಗೊಳ್ಳುವಂತೆ ಮಾಡಲಾಯಿತೇ ಎಂಬ ಹೊಸ ಚರ್ಚೆಗಳು ಹುಟ್ಟಿಕೊಂಡಿದೆ.

ಇದನ್ನೂ ಓದಿ Vinesh Phogat: ವಿನೇಶ್​ರನ್ನು ಪ.ಬಂಗಾಳ ಸಿಎಂ ಮಾಡಿ; ಭಾರತ ರತ್ನ ಕೊಡಿ ಎಂದ ಟಿಎಂಸಿ ನಾಯಕನಿಗೆ ಸವಾಲ್!

ಮಂಗಳವಾರ ನಡೆದ ಅರ್ಹತಾ ಸುತ್ತಿಗೂ ಮುನ್ನ ವಿನೇಶ್‌ ಅವರ ತೂಕವನ್ನು ಲೆಕ್ಕ ಮಾಡಲಾಗಿತ್ತು. ಈ ವೇಳೆ ಅವರು 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ವಿನೇಶ್‌ ಫೋಗಟ್‌ ಅವರ ಸಹಾಯಕ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಭಾರತೀಯ ಕುಸ್ತಿ ಪ್ರಾಧಿಕಾರದ ಅಧ್ಯಕ್ಷ ಸಂಜಯ್‌ ಸಿಂಗ್‌ ಈಗಾಗಲೇ ಆಗ್ರಹಿಸಿದ್ದಾರೆ. ಇದು ವಿನೇಶ್‌ ಅವರ ತಪ್ಪಾಗಿರಲು ಸಾಧ್ಯವಿಲ್ಲ. ಅವರು ಉತ್ತಮವಾಗಿ ಭಾಗಿಯಾಗಿದ್ದರು. ಅವರ ಕೋಚ್‌, ನ್ಯೂಟ್ರಿಶಿಯನ್‌ ಮತ್ತು ಬೆಂಬಲ ಸಿಬ್ಬಂದಿ ಇದರ ಜವಾಬ್ದಾರಿ ಹೊರಬೇಕು ಎಂದು ಅವರು ಹೇಳಿದ್ದರು. ವಿನೇಶ್‌ ತೂಕ ಹೆಚ್ಚಳ ವಾಗದಂತೆ ಅವರು ನೋಡಿಕೊಳ್ಳಬೇಕಿತ್ತು. ಇದಕ್ಕೆ ಕಾರಣರಾದವರ ವಿರುದ್ಧ ಭಾರತ ಸರಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು.

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು. ಒಟ್ಟಾರೆ ಅಂದು ವಿನೇಶ್​ ಮಾಡಿದ ಆರೋಪ ಇದೀಗ ವಿಪಕ್ಷಗಳಿಗೆ ಆಹಾರವಾಗಿದೆ. ಇದೇ ವಿಚಾರವಾಗಿ ಸದನಲ್ಲಿ ಮತ್ತೆ ಕಿತ್ತಾಟ ನಡೆಯುವ ಸಾಧ್ಯತೆಯೊಂದು ಕಂಡು ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Neeraj Chopra : ವಿನೇಶ್ ಪೋಗಟ್​​ಗೆ ಅನರ್ಹತೆ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ; ಏನಂದ್ರು ಅವರು?

Neeraj Chopra : ಯುಯಿ ಸುಸಾಕಿಯನ್ನು ಸೋಲಿಸುವುದು ವಿನೇಶ್ ಗೆ ದೊಡ್ಡ ವಿಷಯ. ಅವಳು ಚಿನ್ನದ ಪದಕ ಪಡೆಯುವ ಹಾದಿಯಲ್ಲಿದ್ದರು. ಸುಸಾಕಿಯನ್ನು ಸೋಲಿಸುವುದು ದೊಡ್ಡ ವಿಷಯ. ಕುಸ್ತಿಯ ನಿಯಮಗಳು ನನಗೆ ಚೆನ್ನಾಗಿ ಅರ್ಥವಾಗುವುದಿಲ್ಲ. ಆದರೆ, ಅವರು ಆತ್ಮವಿಶ್ವಾಸದಿಂದ ಚಿನ್ನದ ಕಡೆಗೆ ಸಾಗುತ್ತಿದ್ದರು. ಬಳಿಕ ಅನರ್ಹತೆ) ಸಂಭವಿಸಿತು. ನನಗೆ ನಿಜವಾಗಿಯೂ ದುಃಖವಾಯಿತು, “ಎಂದು ನೀರಜ್ ಹೇಳಿದ್ದಾರೆ.

VISTARANEWS.COM


on

Neeraj Chopra
Koo

ನವದೆಹಲಿ: ಭಾರತದ ಜಾವೆಲಿನ್ ತಾರೆ ಮತ್ತು ಪ್ಯಾರಿಸ್ ಒಲಿಂಪಿಕ್ ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra) ಅವರು ಆಗಸ್ಟ್ 8 ರಂದು ನಡೆದ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಗೆದ್ದ ಬಳಿಕ ವಿನೇಶ್ ಫೋಗಟ್ (Vinesh Phogat) ಅನರ್ಹ ಘಟನೆ ಬಗ್ಗೆ ಮಾತನಾಡಿದ್ದಾರೆ. ಕುಸ್ತಿಪಟುವನ್ನು ಅವರನ್ನು ಅನರ್ಹಗೊಳಿಸಲಾಗಿದೆ ಎಂಬ ಸುದ್ದಿ ಕೇಳಿ ಬೇಸರವಾಯಿತು ಎಂದು ಹೇಳಿದ್ದಾರೆ. ಮಹಿಳೆಯರ 50 ಕೆ.ಜಿ ಕುಸ್ತಿ ಸ್ಪರ್ಧೆಯ ಫೈನಲ್​ಗೆ ಮುಂಚಿತವಾಗಿ ವಿನೇಶ್ 100 ಗ್ರಾಂ ಅಧಿಕ ತೂಕ ಹೊಂದಿದ್ದರಿಂದ ಅನರ್ಹಗೊಂಡಿದ್ದರು.

ಯುಯಿ ಸುಸಾಕಿಯನ್ನು ಸೋಲಿಸುವುದು ವಿನೇಶ್ ಗೆ ದೊಡ್ಡ ವಿಷಯ. ಅವಳು ಚಿನ್ನದ ಪದಕ ಪಡೆಯುವ ಹಾದಿಯಲ್ಲಿದ್ದರು. ಸುಸಾಕಿಯನ್ನು ಸೋಲಿಸುವುದು ದೊಡ್ಡ ವಿಷಯ. ಕುಸ್ತಿಯ ನಿಯಮಗಳು ನನಗೆ ಚೆನ್ನಾಗಿ ಅರ್ಥವಾಗುವುದಿಲ್ಲ. ಆದರೆ, ಅವರು ಆತ್ಮವಿಶ್ವಾಸದಿಂದ ಚಿನ್ನದ ಕಡೆಗೆ ಸಾಗುತ್ತಿದ್ದರು. ಬಳಿಕ ಅನರ್ಹತೆ) ಸಂಭವಿಸಿತು. ನನಗೆ ನಿಜವಾಗಿಯೂ ದುಃಖವಾಯಿತು, “ಎಂದು ನೀರಜ್ ಹೇಳಿದ್ದಾರೆ.

ವಿನೇಶ್ ಏನು ಮಾಡಿದರೂ ಅದು ಅದ್ಭುತ ಸಾಧನೆ

ಗಾಯಗಳು ಮತ್ತು ವೈಯಕ್ತಿಕ ಹಿನ್ನಡೆಯೊಂದಿಗೆ 2016 ರ ಒಲಿಂಪಿಕ್ಸ್ ನಂತರ ವಿನೇಶ್ ಅವರ ಕುಸ್ತಿ ಪ್ರಯಾಣ ಕಠಿಣವಾಗಿತ್ತು ಎಂಬುದನ್ನು ನೀರಜ್ ನೆನಪಿಸಿಕೊಂಡರು. ಪ್ಯಾರಿಸ್​​ನಲ್ಲಿ ಎಲ್ಲವೂ ಉತ್ತಮವಾಗಿ ನಡೆಯುತ್ತಿದೆ ಎಂದು ತಿಳಿದು ಖುಷಿಯಾಗಿತ್ತು. ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ವಿನೇಶ್ ಮಾಡಿದ ಸಾಧನೆ ಅದ್ಭುತ ಎಂದು ಜಾವೆಲಿನ್ ತಾರೆ ಅಭಿಪ್ರಾಯಪಟ್ಟರು.

2016 ರಲ್ಲಿ (ರಿಯೋ ಒಲಿಂಪಿಕ್ಸ್), ಅಂತಹ ಅಪಾಯಕಾರಿ ಗಾಯದಿಂದ ಹೊರಬರಲು ಮತ್ತು ನಂತರ 2020ರಲ್ಲಿ ಮತ್ತಷ್ಟು ಗಾಯಗಳನ್ನು ಮಾಡಿಕೊಂಡರು. ಅದೇ ರೀತಿ ಅವರು ಅನೇಕ ವೈಯಕ್ತಿಕ ಹಿನ್ನಡೆಗಳನ್ನು ಅನುಭವಿಸಿದ್ದಾರೆ” ಎಂದು ನೀರಜ್ ಚೋಪ್ರಾ ಹೇಳಿದ್ದಾರೆ.

ಅವಳು ಗಾಯಗಳಿಂದ ಸುಧಾರಿಸಿಕೊಳ್ಳಲು. ಅದರಿಂದ ಚೇತರಿಸಿಕೊಳ್ಳಲು ಮತ್ತು ಸ್ಥಾನಕ್ಕೆ ಬರಲು ಮತ್ತು ಮಾನಸಿಕವಾಗಿ ಬಲಶಾಲಿಯಾಗಲು ಸಾಕಷ್ಟು ಯತ್ನಿಸಿದ್ದರು. ಎಲ್ಲವೂ ಚೆನ್ನಾಗಿ ನಡೆಯುತ್ತಿತ್ತು. ಬಹುಶಃ ದೇವರು ಅವರಿಗೆ ಬೇರೆ ಏನನ್ನಾದರೂ ಬಯಸಿರಬಹುದು. ಆದರೆ ಅವಳು ಏನು ಮಾಡಿದರೂ ಅದು ಅದ್ಭುತವಾಗಿದೆ ಎಂದು ನಮಗೆ ತಿಳಿದಿದೆ ಎಂದು ನೀರಜ್ ಹೇಳಿದ್ದಾರೆ.

ಗಾಯದ ಸಮಸ್ಯೆಯಿಂದ ಬಳಲುತ್ತಲೇ ಒಲಿಂಪಿಕ್ಸ್​ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ!

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ(Paris Olympics 2024) ಬೆಳ್ಳಿ ಪದಕ ಗೆದ್ದ ನಂತರ ನೀರಜ್ ಚೋಪ್ರಾ (Neeraj Chopra) ತಮ್ಮ ಗಾಯದ ಸಮಸ್ಯೆಗಳ ಕುರಿತು ಮಾತನಾಡಿದ್ದಾರೆ. ತಾನು ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗಬಹುದು ಎಂದು 26 ವರ್ಷದ ಆಟಗಾರ ಬಹಿರಂಗಪಡಿಸಿದ್ದಾರೆ. ಗಾಯದ ಸಮಸ್ಯೆ ಉಲ್ಬಣಗೊಳ್ಳಬಹುದು ಎಂಬ ನಿರಂತರ ಭಯದಿಂದ ಸ್ಪರ್ಧಿಸಿದೆ ಎಂಬುದಾಗಿ ಅವರು ಹೇಳಿದ್ದಾರೆ. ಬೆಳ್ಳಿ ಪದಕ ವಿಜೇತ ಜಾವೆಲಿನ್ ಎಸೆತಗಾರ ಪ್ಯಾರಿಸ್ ಕ್ರೀಡಾಕೂಟಕ್ಕೆ ಮುಂಚಿತವಾಗಿ ತೊಡೆಯ ಸ್ನಾಯುವಿಗೆ ಸಂಬಂಧಿಸಿದ ಗಾಯದಿಂದ ಬಳಲುತ್ತಿದ್ದರು. ಆದಾಗ್ಯೂ, ಅವರು ತಮ್ಮ ಋತುವಿನ ಅತ್ಯುತ್ತಮ ಎಸೆತವಾದ 89.45 ಮೀಟರ್ ಎಸೆದು ಬೆಳ್ಳಿ ಪದಕ ಗಳಿಸಿದ್ದಾರೆ.

ಸ್ಪರ್ಧೆಗೆ ಹೋದಾಗ ನನ್ನ ಮನಸ್ಸಿನಲ್ಲಿ ಬಹಳಷ್ಟು ವಿಷಯಗಳಿರುತ್ತವೆ. ನಾನು ಭರ್ಜಿ ಎಸೆಯುವಾಗ ನನ್ನ ಶೇಕಡಾ 60-70 ರಷ್ಟು ಗಮನ ಗಾಯದ ಮೇಲೆ ಇರುತ್ತಿತ್ತು. ನಾನು ಮತ್ತೆ ಗಾಯಗೊಳ್ಳಲು ಬಯಸುವುದಿಲ್ಲ. ನಾನು ಎಸೆತಕ್ಕೆ ಹೋದಾಗಲೆಲ್ಲಾ, ನನ್ನ ವೇಗ ಕಡಿಮೆ ಇತ್ತು. ಹೀಗಾಗಿ ಸ್ಪರ್ಧೆ ಕಠಿಣವಾಯಿತು ಎಂದು ನೀರಜ್ ಪಿಟಿಐಗೆ ತಿಳಿಸಿದರು. ನೀರಜ್​ ಉತ್ತಮ ಸ್ನೇಹಿತ ಅರ್ಷದ್ ನದೀಮ್ ಅವರನ್ನು ಒಲಿಂಪಿಕ್ ಚಾಂಪಿಯನ್ ಸ್ಥಾನದಿಂದ ಕೆಳಗಿಳಿಸಿ ಪಾಕಿಸ್ತಾನಕ್ಕೆ ಮೊದಲ ಚಿನ್ನ ಗೆದ್ದಾರೆ.

ಇದನ್ನೂ ಓದಿ: PR Sreejesh : ಕಂಚು ಗೆದ್ದ ತಕ್ಷಣ ಗೋಲ್​ ಕೀಪಿಂಗ್​ ಗ್ಲವ್ಸ್​ಗೆ ದೀರ್ಘದಂಡ ನಮಸ್ಕಾರ ಹಾಕಿದ ಶ್ರೀಜೇಶ್​​​

ಕಳೆದ ವರ್ಷ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಪಾತ್ರರಾಗಿದ್ದರು. ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುವ ಅಪಾಯಕ್ಕೆ ಒಳಗಾಗಿದ್ದರು. ಆದರೆ, ಅವರು ಹೋಗಿರಲಿಲ್ಲ. ಇದು ಪ್ಯಾರಿಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅಡ್ಡಿಯಾಗುತ್ತಿತ್ತು.

Continue Reading

ಕ್ರೀಡೆ

Paris Olympics 2024: ಒಲಿಂಪಿಕ್ಸ್​ ಸಮಾರೋಪದಲ್ಲಿ ಮನು ಭಾಕರ್‌, ಶ್ರೀಜೇಶ್​ ತ್ರಿವರ್ಣ ಧ್ವಜಧಾರಿಗಳು

Paris Olympics 2024: ಮನು ಭಾಕರ್‌ ಮತ್ತು ಶ್ರೀಜೇಶ್​ ಪ್ಯಾರಿಸ್‌ ಒಲಿಂಪಿಕ್ಸ್‌ ಸಮಾರೋಪ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ. ಉಭಯ ಕ್ರೀಡಾಪಟುಗಳು ಈ ಕೂಟದಲ್ಲಿ ಶ್ರೇಷ್ಠ ಸಾಧನೆಗೈದಿದ್ದು, ಈ ಗೌರವಕ್ಕೆ ಅರ್ಹ ಹಾಗೂ ಅತ್ಯಂತ ಸೂಕ್ತವಾಗಿದ್ದಾರೆ ಎಂಬುದಾಗಿ ಐಒಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

VISTARANEWS.COM


on

Paris Olympics 2024
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics 2024) ಪದಕ ಗೆದ್ದ ಹಾಕಿ ಆಟಗಾರ ಪಿ.ಆರ್ ಶ್ರೀಜೇಶ್(PR Sreejesh)​ ಮತ್ತು ಅವಳಿ ಕಂಚಿನ ಪದಕ ವಿಜೇತೆ ಶೂಟರ್​ ಮನು ಭಾಕರ್​(Manu Bhaker) ಭಾರದ ಧ್ವಜಧಾರಿಗಳಾಗಿ( India’s Co-Flag Bearer) ಆಯ್ಕೆಯಾಗಿದ್ದಾರೆ. ಸಮಾರೋಪ ಸಮಾರಂಭ(Paris Olympics 2024 Closing Ceremony) ಭಾನುವಾರ ರಾತ್ರಿ ನಡೆಯಲಿದೆ.

ಮಹಿಳಾ ಧ್ವಜಧಾರಿಯಾಗಿ ಮನು ಭಾಕರ್​ ಅವರನ್ನು ಕಳೆದ ವಾರವೇ ಆಯ್ಕೆ ಮಾಡಲಾಗಿತ್ತು. ಆದರೆ, ಭಾರತದ ಪುರುಷ ಧ್ವಜಧಾರಿ ಕ್ರೀಡಾಳು ಆಯ್ಕೆಯಾಗಿರಲಿಲ್ಲ. ಇದೀಗ ಹಾಕಿಗೆ ವಿದಾಯ ಹೇಳಿರುವ ದಿಗ್ಗಜ ಗೋಲ್​ ಕೀಪರ್​ ಶ್ರೀಜೇಶ್​ ಅವರನ್ನು ಆಯ್ಕೆ ಮಾಡಲಾಗಿದೆ. ಉಭಯ ಕ್ರೀಡಾಪಟುಗಳು ಧ್ವಜಧಾರಿಯಾಗಿ ಸಮಾರೋಪ ಸಮಾರಂಭದಲ್ಲಿ ತ್ರಿವರ್ಣ ಧ್ವಜವನ್ನು ಹೊತ್ತು ಸಾಗಲಿದ್ದಾರೆ. ಉದ್ಘಾಟನ ಸಮಾರಂಭದಲ್ಲಿ ಪಿ.ವಿ ಸಿಂಧು ಮತ್ತು ಟೆಬಲ್​ ಟೆನಿಸ್​ ಆಟಗಾರ ಶರತ್‌ ಕಮಲ್‌ ಭಾರತದ ಧ್ವಜಧಾರಿಗಳಾಗಿದ್ದರು.

ಮನು ಭಾಕರ್‌ ಮತ್ತು ಶ್ರೀಜೇಶ್​ ಪ್ಯಾರಿಸ್‌ ಒಲಿಂಪಿಕ್ಸ್‌ ಸಮಾರೋಪ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ. ಉಭಯ ಕ್ರೀಡಾಪಟುಗಳು ಈ ಕೂಟದಲ್ಲಿ ಶ್ರೇಷ್ಠ ಸಾಧನೆಗೈದಿದ್ದು, ಈ ಗೌರವಕ್ಕೆ ಅರ್ಹ ಹಾಗೂ ಅತ್ಯಂತ ಸೂಕ್ತವಾಗಿದ್ದಾರೆ ಎಂಬುದಾಗಿ ಐಒಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರದಂದು ತವರಿಗೆ ಮರಳಿದ್ದ ಮನು ಭಾಕರ್​ ಶನಿವಾರ ಮತ್ತೆ ಪ್ಯಾರಿಸ್​ಗೆ ಮರಳಲಿದ್ದಾರೆ. 10 ಮೀ. ಏರ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ಕಂಚು ಗೆಲ್ಲುವ ಮೂಲಕ ಮನು ಭಾಕರ್‌ ಭಾರತದ ಪದಕ ಖಾತೆ ತೆರೆದಿದ್ದರು. ಬಳಿಕ ಸರಬ್ಜೋತ್‌ ಸಿಂಗ್‌ ಜತೆಗೂಡಿ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ಡಬಲ್ಸ್‌ನಲ್ಲೂ ಕಂಚಿಗೆ ಗುರಿ ಇರಿಸಿದ್ದರು.

ಇದನ್ನೂ ಓದಿ Paris Olympics: ಚೊಚ್ಚಲ ಪ್ರಯತ್ನದಲ್ಲೇ ಒಲಿಂಪಿಕ್ಸ್​ ಪದಕ ಗೆಲ್ಲಲು ಸಜ್ಜಾದ ಅಮನ್‌ ಸೆಹ್ರಾವತ್‌

36 ವಷದ ಕೇರಳದ ಶ್ರೀಜೇಶ್‌ ಭಾರತ ಪರ 336 ಪಂದ್ಯಗಳನ್ನು ಆಡಿದ್ದಾರೆ. 2 ಒಲಿಂಪಿಕ್ಸ್‌ ಕಂಚಿನ ಪದಕ, ಏಷ್ಯನ್‌ ಗೇಮ್ಸ್‌ನಲ್ಲಿ 2 ಚಿನ್ನ, 1 ಕಂಚು, ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ 2 ಬೆಳ್ಳಿ, ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿಯಲ್ಲಿ 2 ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. 2006ರಲ್ಲಿ ಭಾರತೀಯ ಹಾಕಿ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಕಳೆದ ಟೊಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಕಂಚಿನ ಪದಕ ಗೆದ್ದುಕೊಂಡಿತ್ತು. ಭಾರತ ತಂಡದ ಈ ಪದಕ ಗೆಲುವಿನಲ್ಲಿ ಶ್ರೀಜೇಶ್ ಪ್ರಮುಖ ಪಾತ್ರವಹಿಸಿದ್ದರು. ವಿಶ್ವದ ಅತ್ಯುತ್ತಮ ಗೋಲ್ ಕೀಪರ್ ಎಂಬ ಪುರಸ್ಕಾರವೂ ಸಂದಿತ್ತು. ಈ ಬಾರಿಯೂ ಶ್ರೀಜೇಶ್​ ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಭಾರತದ ಪದಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಭಾರತೀಯ ಹಾಕಿಗೆ ಶ್ರೀಜೇಶ್​ ನೀಡಿದ ಅಪಾರ ಸೇವೆಯನ್ನು ಪರಿಗಣಿಸಿ ಹಾಕಿ ಇಂಡಿಯಾ(Hockey India) ಶ್ರೀಜೇಶ್​ ಅವರನ್ನು ಭಾರತ ಜೂನಿಯರ್ ಪುರುಷರ ತಂಡದ ಹೊಸ ಮುಖ್ಯ ಕೋಚ್ ಆಗಿ ನೇಮಿಸಿದೆ.

Continue Reading

ಪ್ರಮುಖ ಸುದ್ದಿ

Neeraj Chopra : ಗಾಯದ ಸಮಸ್ಯೆಯಿಂದ ಬಳಲುತ್ತಲೇ ಒಲಿಂಪಿಕ್ಸ್​ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ!

Neeraj Chopra : ಸ್ಪರ್ಧೆಗೆ ಹೋದಾಗ ನನ್ನ ಮನಸ್ಸಿನಲ್ಲಿ ಬಹಳಷ್ಟು ವಿಷಯಗಳಿರುತ್ತವೆ. ನಾನು ಭರ್ಜಿ ಎಸೆಯುವಾಗ ನನ್ನ ಶೇಕಡಾ 60-70 ರಷ್ಟು ಗಮನ ಗಾಯದ ಮೇಲೆ ಇರುತ್ತಿತ್ತು. ನಾನು ಮತ್ತೆ ಗಾಯಗೊಳ್ಳಲು ಬಯಸುವುದಿಲ್ಲ. ನಾನು ಎಸೆತಕ್ಕೆ ಹೋದಾಗಲೆಲ್ಲಾ, ನನ್ನ ವೇಗ ಕಡಿಮೆ ಇತ್ತು. ಹೀಗಾಗಿ ಸ್ಪರ್ಧೆ ಕಠಿಣವಾಯಿತು ಎಂದು ನೀರಜ್ ಪಿಟಿಐಗೆ ತಿಳಿಸಿದರು. ನೀರಜ್​ ಉತ್ತಮ ಸ್ನೇಹಿತ ಅರ್ಷದ್ ನದೀಮ್ ಅವರನ್ನು ಒಲಿಂಪಿಕ್ ಚಾಂಪಿಯನ್ ಸ್ಥಾನದಿಂದ ಕೆಳಗಿಳಿಸಿ ಪಾಕಿಸ್ತಾನಕ್ಕೆ ಮೊದಲ ಚಿನ್ನ ಗೆದ್ದಾರೆ.

VISTARANEWS.COM


on

Neeraj Chopra
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ(Paris Olympics 2024) ಬೆಳ್ಳಿ ಪದಕ ಗೆದ್ದ ನಂತರ ನೀರಜ್ ಚೋಪ್ರಾ (Neeraj Chopra) ತಮ್ಮ ಗಾಯದ ಸಮಸ್ಯೆಗಳ ಕುರಿತು ಮಾತನಾಡಿದ್ದಾರೆ. ತಾನು ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗಬಹುದು ಎಂದು 26 ವರ್ಷದ ಆಟಗಾರ ಬಹಿರಂಗಪಡಿಸಿದ್ದಾರೆ. ಗಾಯದ ಸಮಸ್ಯೆ ಉಲ್ಬಣಗೊಳ್ಳಬಹುದು ಎಂಬ ನಿರಂತರ ಭಯದಿಂದ ಸ್ಪರ್ಧಿಸಿದೆ ಎಂಬುದಾಗಿ ಅವರು ಹೇಳಿದ್ದಾರೆ. ಬೆಳ್ಳಿ ಪದಕ ವಿಜೇತ ಜಾವೆಲಿನ್ ಎಸೆತಗಾರ ಪ್ಯಾರಿಸ್ ಕ್ರೀಡಾಕೂಟಕ್ಕೆ ಮುಂಚಿತವಾಗಿ ತೊಡೆಯ ಸ್ನಾಯುವಿಗೆ ಸಂಬಂಧಿಸಿದ ಗಾಯದಿಂದ ಬಳಲುತ್ತಿದ್ದರು. ಆದಾಗ್ಯೂ, ಅವರು ತಮ್ಮ ಋತುವಿನ ಅತ್ಯುತ್ತಮ ಎಸೆತವಾದ 89.45 ಮೀಟರ್ ಎಸೆದು ಬೆಳ್ಳಿ ಪದಕ ಗಳಿಸಿದ್ದಾರೆ.

ಸ್ಪರ್ಧೆಗೆ ಹೋದಾಗ ನನ್ನ ಮನಸ್ಸಿನಲ್ಲಿ ಬಹಳಷ್ಟು ವಿಷಯಗಳಿರುತ್ತವೆ. ನಾನು ಭರ್ಜಿ ಎಸೆಯುವಾಗ ನನ್ನ ಶೇಕಡಾ 60-70 ರಷ್ಟು ಗಮನ ಗಾಯದ ಮೇಲೆ ಇರುತ್ತಿತ್ತು. ನಾನು ಮತ್ತೆ ಗಾಯಗೊಳ್ಳಲು ಬಯಸುವುದಿಲ್ಲ. ನಾನು ಎಸೆತಕ್ಕೆ ಹೋದಾಗಲೆಲ್ಲಾ, ನನ್ನ ವೇಗ ಕಡಿಮೆ ಇತ್ತು. ಹೀಗಾಗಿ ಸ್ಪರ್ಧೆ ಕಠಿಣವಾಯಿತು ಎಂದು ನೀರಜ್ ಪಿಟಿಐಗೆ ತಿಳಿಸಿದರು. ನೀರಜ್​ ಉತ್ತಮ ಸ್ನೇಹಿತ ಅರ್ಷದ್ ನದೀಮ್ ಅವರನ್ನು ಒಲಿಂಪಿಕ್ ಚಾಂಪಿಯನ್ ಸ್ಥಾನದಿಂದ ಕೆಳಗಿಳಿಸಿ ಪಾಕಿಸ್ತಾನಕ್ಕೆ ಮೊದಲ ಚಿನ್ನ ಗೆದ್ದಾರೆ.

ಕಳೆದ ವರ್ಷ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಪಾತ್ರರಾಗಿದ್ದರು. ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುವ ಅಪಾಯಕ್ಕೆ ಒಳಗಾಗಿದ್ದರು. ಆದರೆ, ಅವರು ಹೋಗಿರಲಿಲ್ಲ. ಇದು ಪ್ಯಾರಿಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅಡ್ಡಿಯಾಗುತ್ತಿತ್ತು.

ಇದನ್ನೂ ಓದಿ: PR Sreejesh : ಕಂಚು ಗೆದ್ದ ತಕ್ಷಣ ಗೋಲ್​ ಕೀಪಿಂಗ್​ ಗ್ಲವ್ಸ್​ಗೆ ದೀರ್ಘದಂಡ ನಮಸ್ಕಾರ ಹಾಕಿದ ಶ್ರೀಜೇಶ್​​​

ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಳ್ಳುವಂತೆ ವೈದ್ಯರು ನನಗೆ ಹೇಳಿದರು. ಆದರೆ ವಿಶ್ವ ಚಾಂಪಿಯನ್​ಶಿಪ್​​ ಮೊದಲು ಅಥವಾ ವಿಶ್ವ ಚಾಂಪಿಯನ್​ಶಿಪ್​ ನಂತರ ಆ ನಿರ್ಧಾರ ತೆಗೆದುಕೊಳ್ಳಲು ನನಗೆ ಹೆಚ್ಚು ಸಮಯವಿರಲಿಲ್ಲ. ಒಲಿಂಪಿಕ್ಸ್​ಗೆ ತಯಾರಿ ನಡೆಸಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಪಿ.ವಿ.ಸಿಂಧು ಮತ್ತು ಸುಶೀಲ್ ಕುಮಾರ್ ನಂತರ ಸತತ ಒಲಿಂಪಿಕ್ ಪದಕಗಳನ್ನು ಗೆದ್ದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಪಾತ್ರರಾಗಿದ್ದಾರೆ.

ಗಾಯದ ಸಮಸ್ಯೆಯ ಜತೆ ಹೋರಾಟ


ನಾನು ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಸಂದರ್ಭವನ್ನು ಇನ್ನಷ್ಟು ದಿನ ಮುಂದೂಡುತ್ತಿದ್ದೇನೆ. ಇದು ಕ್ರೀಡೆಯಲ್ಲಿ ಒಳ್ಳೆಯದಲ್ಲ. ಸಮಸ್ಯೆಯನ್ನು ಮುಂದುವರಿಸುವುದು ಒಳ್ಳೆಯದಲ್ಲ. ನೀವು ಸುದೀರ್ಘ ವೃತ್ತಿಜೀವನವನ್ನು ನಡೆಸಲು ಬಯಸಿದರೆ ನೀವು ಸದೃಢ ಮತ್ತು ಆರೋಗ್ಯಕರವಾಗಿರಬೇಕು. ಆದರೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದ ಸ್ಪರ್ಧೆಗಳಿವೆ,” ಎಂದು ಅವರು ಹೇಳಿದ್ದಾರೆ.

ತಮ್ಮ ತಂಡದೊಂದಿಗೆ ಮಾತನಾಡಿ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ. ಫಿಟ್ನೆಸ್​ಗೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳು ಕಠಿಣವಾಗಿದ್ದವು ಎಂದು ಬಹಿರಂಗಪಡಿಸಿದ್ದಾರೆ.

ನಾನು ಇದನ್ನು 2017 ರಲ್ಲಿ ಅನುಭವಿಸಿದೆ. ಅದರ ನಂತರ, ನನಗೆ ಸಾಕಷ್ಟು ಚಿಕಿತ್ಸೆಗಳು ಎದುರಾದವು. ಅದಕ್ಕಾಗಿ ನಾನು ದೊಡ್ಡ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದರು.

Continue Reading

ಕ್ರೀಡೆ

Arshad-Neeraj: ಚಿನ್ನ, ಬೆಳ್ಳಿ ಸಾಧನೆಗಿಂತ ಮಿಗಿಲಾಗಿ ಹೃದಯ ಗೆದ್ದ ನೀರಜ್​-ಅರ್ಷದ್​ ತಾಯಂದಿರು

Arshad-Neeraj: ಫೈನಲ್​ನಲ್ಲಿ ಮೊದಲ ಎಸೆತದ ವೇಳೆ ಫೌಲ್ ಆಗಿದ್ದ ನದೀಮ್ ಎರಡನೇ ಎಸೆತದಲ್ಲಿ 92.97 ಮೀಟರ್‌ಗಳ ದೂರಕ್ಕೆ ಭರ್ಜಿ ಎಸೆದು ಹೊಸ ದಾಖಲೆ ಬರೆದರು.

VISTARANEWS.COM


on

Arshad-Neeraj
Koo

ಕರಾಚಿ/ಹರಿಯಾಣ: ಪ್ಯಾರಿಸ್​ ಒಲಿಂಪಿಕ್ಸ್(paris olympics)ನಲ್ಲಿ​ ಚಿನ್ನದ ಪದಕ ಗೆದ್ದ ಪಾಕ್​ನ ಅರ್ಷದ್ ನದೀಮ್(Arshad Nadeem) ಮತ್ತು ಬೆಳ್ಳಿ ಗೆದ್ದ ಭಾರತದ ನೀರಜ್​ ಚೋಪ್ರಾ(Neeraj Chopra) ಅವರ ಸಾಧನೆಗಿಂತ ಮಿಗಿಲಾಗಿ ಎಲ್ಲರ ಹೃದಯ ಗೆದ್ದಿರುವುದು ಉಭಯ(Arshad-Neeraj) ಆಟಗಾರರ ತಾಯಂದಿರು. ಇಬ್ಬರ ತಾಯಂದಿರೂ ಕೂಡ ಸಾಧನೆ ಮಾಡಿದ್ದು ನಮ್ಮ ಮಕ್ಕಳೇ ಎಂದು ಹರ್ಷ ವ್ಯಕ್ತಪಡಿಸುವ ಮೂಲಕ ತಾಯಿ ಮಮತೆ ತೋರಿದ್ದಾರೆ. ಇವರ ಈ ಮಮತೆಯ ಮುಂದೆ ಉಭಯ ದೇಶಗಳ ದ್ವೇಷ ಕೂಡ ಒಂದು ಕ್ಷಣ ಮರೆಯುಂತೆ ಮಾಡಿದೆ.

ನೀರಜ್​ ಚೋಪ್ರಾ ತಾಯಿ ಹೇಳಿದ್ದೇನು?

ನೀರಜ್​ ಬೆಳ್ಳಿ ಪದಕ ಗೆದ್ದ ಸಂತಸದಲ್ಲಿ ಎಎನ್‌ಐ ಜತೆ ಮಾತನಾಡಿದ ನೀರಜ್​ ಅವರ ತಾಯಿ ಸರೋಜ್ ದೇವಿ, “ಮಗನ ಸಾಧನೆ ಬಗ್ಗೆ ಅತೀವ ಸಂತಸವಿದೆ. ಆತ ಮನೆಗೆ ಮರಳಿದ ತಕ್ಷಣ ಪ್ರಿಯವಾದ ಅಡುಗೆ ಮಾಡಿ ಬಡಿಸಲು ಕಾಯುತ್ತಿದ್ದೇನೆ” ಎಂದು ಪ್ರತಿಕ್ರಿಯಿಸಿದರು. ಇದೇ ವೇಳೆ ಅರ್ಷದ್ ನದೀಮ್ ಸಾಧನೆಯನ್ನು ಕೂಡಾ ಮುಕ್ತಕಂಠದಿಂದ ಹೊಗಳಿದ್ದಾರೆ. ನದೀಮ್ ಚಿನ್ನ ಗೆದದ್ದು ಕೂಡ ನನಗೆ ಅಪಾರ ಸಂತಸವಿದೆ. ಆತ ಕೂಡಾ ನಮ್ಮ ಮಗ ಇದ್ದಂತೆ ಎಂದು ಹೇಳುವ ಮೂಲಕ ತಾಯಿ ಪ್ರೀತಿ ತೋರಿದ್ದರು.

ಅರ್ಷದ್​ ತಾಯಿ ಹೇಳಿದ್ದೇನು?


ಚಿನ್ನ ಗೆದ್ದ ಪಾಕಿಸ್ತಾನದ ಅರ್ಷದ್ ನದೀಮ್ ಅವರ ತಾಯಿ ಕೂಡ ತಮ್ಮ ಮಗನ ಸಾಧನೆ ಜತೆ ನೀರಜ್​ ಸಾಧನೆಯನ್ನು ಕೊಂಡಾಡಿದ್ದಾರೆ. ನೀರಜ್​ ಮತ್ತು ಅರ್ಷದ್​ ಉತ್ತಮ ಸ್ನೇಹಿತರು. ಆದರೆ, ನನಗೆ ಇಬ್ಬೂ ಕೂಡ ಮಕ್ಕಳಿದಂತೆ. ಯಾರೇ ಸಾಧನೆ ಮಾಡಿದರೂ ಕೂಡ ನನಗೆ ಸಂತಸವಾಗುತ್ತದೆ. ನೀರಜ್​ ತುಂಬಾ ಒಳ್ಳೆಯ ವ್ಯಕ್ತಿಯಾಗಿದ್ದಾನೆ. ನೀರಜ್​ ಇನ್ನೂ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುವ ಆಶೀರ್ವಾದ ದೇವರು ಅವರಿಗೆ ಕರಿಣಿಸಲಿ. ಎಂದು ಹೇಳುವ ಮೂಲಕ ಭಾರತೀಯರ ಹೃದಯ ಗೆದ್ದಿದ್ದಾರೆ. 5 ತಿಂಗಳ ಹಿಂದೆ ಜಾವೆಲಿನ್​ ಖರೀದಿಸಲು ಹೆಣಗಾಡುತ್ತಿದ್ದ ವೇಳೆ ನೀರಜ್​ ಅವರು ಅರ್ಷದ್​ಗೆ ಬೆಂಬಲ ಸೂಚಿಸಿದ್ದರು. ಚಿನ್ನ ಗೆದ್ದಾಗಲೂ ಕೂಡ ಈ ಸಾಧನೆಗೆ ನನ್ನ ಗೆಳೆಯ ನೀರಜ್​ ಅವರೇ ಸ್ಫೂರ್ತಿ ಎಂದು ಹೇಳುವ ಮೂಲಕ ನೀರಜ್​ ಸಹಾಯವನ್ನು ಅರ್ಷದ್​ ನೆನೆಸಿಕೊಂಡರು.

ಇದನ್ನೂ ಓದಿ Paris Olympics: ಚೊಚ್ಚಲ ಪ್ರಯತ್ನದಲ್ಲೇ ಒಲಿಂಪಿಕ್ಸ್​ ಪದಕ ಗೆಲ್ಲಲು ಸಜ್ಜಾದ ಅಮನ್‌ ಸೆಹ್ರಾವತ್‌

ಟೋಕಿಯೊನಲ್ಲಿ ಚಿನ್ನ ಗೆದ್ದಿದ್ದ ನೀರಜ್ ಮೇಲೆ ಈ ಬಾರಿಯೂ ಚಿನ್ನದ ಪದಕ ನಿರೀಕ್ಷೆ ಮಾಡಲಾಗಿತ್ತು. ಆದರೆ ಈ ನಿರೀಕ್ಷೆ ಹುಸಿಯಾಗಿದೆ. ಬೆಳ್ಳಿಗೆ ತೃಪ್ತಿಪಟ್ಟರು. ಮಂಗಳವಾರ ನಡೆದಿದ್ದ ಅರ್ಹತಾ ಸುತ್ತಿನ ‘ಬಿ’ ಗುಂಪಿನಲ್ಲಿ 89.34 ಮೀಟರ್‌ಗಳ ಬೃಹತ್ ಎಸೆತವನ್ನು ದಾಖಲಿಸಿ ಫೈನಲ್‌ಗೆ ಪ್ರವೇಶಿಸಿದ್ದರು. 2022 ರಲ್ಲಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 90 ಮೀ ಮಾರ್ಕ್ ದಾಟಿದ್ದ ಅರ್ಷದ್ ನದೀಮ್ ಅತ್ಯುತ್ತಮ ಥ್ರೋ 86.59 ಮೀ ನೊಂದಿಗೆ ಫೈನಲ್‌ಗೆ ಅರ್ಹತೆ ಪಡೆದಿದ್ದರು. ಆದರೆ ಫೈನಲ್​ನಲ್ಲಿ ಮೊದಲ ಎಸೆತದ ವೇಳೆ ಫೌಲ್ ಆಗಿದ್ದ ನದೀಮ್ ಎರಡನೇ ಎಸೆತದಲ್ಲಿ 92.97 ಮೀಟರ್‌ಗಳ ದೂರಕ್ಕೆ ಭರ್ಜಿ ಎಸೆದು ಹೊಸ ದಾಖಲೆ ಬರೆದರು.

Continue Reading
Advertisement
Oats or Quinoa
ಆರೋಗ್ಯ34 mins ago

Oats or Quinoa: ಓಟ್ಸ್‌, ಕಿನೊವಾ- ಇವೆರೆಡರಲ್ಲಿ ಯಾವುದು ಬೆಸ್ಟ್?

Waqf Bill
ದೇಶ56 mins ago

Waqf Bill: ವಕ್ಫ್‌ ಕಾಯ್ದೆಗೆ ತಿದ್ದುಪಡಿ; 21 ಸದಸ್ಯರ ಸಮಿತಿ ರಚಿಸಿದ ಕೇಂದ್ರ, ಓವೈಸಿ, ತೇಜಸ್ವಿ ಸೂರ್ಯಗೆ ಸ್ಥಾನ

Neeraj Chopra
ಕ್ರೀಡೆ56 mins ago

Neeraj Chopra : ವಿನೇಶ್ ಪೋಗಟ್​​ಗೆ ಅನರ್ಹತೆ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ; ಏನಂದ್ರು ಅವರು?

LOve case
ಬಾಗಲಕೋಟೆ1 hour ago

Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

Muda Scam
ಪ್ರಮುಖ ಸುದ್ದಿ1 hour ago

Muda Scam: ಸಿಎಂ ವಿರುದ್ಧದ ಖಾಸಗಿ ದೂರಿನ ಅರ್ಜಿ ವಿಚಾರಣೆ; ಆ.13ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Israel-Hamas War
ವಿದೇಶ1 hour ago

Israel-Hamas War: ಪುತ್ರರ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! ಯಾಕೆ ಹೀಗೆ?

Karnataka Nataka Akademi Award
ಉತ್ತರ ಕನ್ನಡ2 hours ago

Karnataka Nataka Akademi Award: ಉ.ಕ ಜಿಲ್ಲೆಯ ಮೂವರು ಕಲಾವಿದರಿಗೆ ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Duniya Vijay bheema movie review
ಸ್ಯಾಂಡಲ್ ವುಡ್2 hours ago

Duniya Vijay: ಹೇಗಿದೆ ‘ಭೀಮ’ ಸಿನಿಮಾ? ಪ್ರೇಕ್ಷಕರು ಹೇಳೋದೇನು?

Bengaluru power cut
ಬೆಂಗಳೂರು2 hours ago

Bengaluru Power Cut: ಆ.11ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Kannada New Movie
ಬೆಂಗಳೂರು2 hours ago

Kannada New Movie: ‘ಕೇದಾರ್ ನಾಥ್ ಕುರಿಫಾರಂ’ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌