Vinesh Phogat: ಖೇಲ್ ರತ್ನ ಪ್ರಶಸ್ತಿಯನ್ನು ಪಾದಚಾರಿ ಮಾರ್ಗದಲ್ಲಿ ತೊರೆದಿದ್ದ ವಿನೇಶ್ ಫೋಗಟ್​ಗೆ ಒಲಿದ ಒಲಿಂಪಿಕ್ಸ್​ ಟಿಕೆಟ್​ - Vistara News

ಕ್ರೀಡೆ

Vinesh Phogat: ಖೇಲ್ ರತ್ನ ಪ್ರಶಸ್ತಿಯನ್ನು ಪಾದಚಾರಿ ಮಾರ್ಗದಲ್ಲಿ ತೊರೆದಿದ್ದ ವಿನೇಶ್ ಫೋಗಟ್​ಗೆ ಒಲಿದ ಒಲಿಂಪಿಕ್ಸ್​ ಟಿಕೆಟ್​

Vinesh Phogat: ವಿನೇಶ್ ಫೋಗಟ್ ಅವರು ಬ್ರಿಜ್​ ಭೂಷಣ್​ ಅವರ ಆಪ್ತ ಸಂಜಯ್​ ಸಿಂಗ್​ ಅವರು ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದುದನ್ನು ಖಂಡಿಸಿ ತಾವು ಪಡೆದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ(Khel Ratna) ಮತ್ತು ಅರ್ಜುನ್(Arjuna ) ಪ್ರಶಸ್ತಿಯನ್ನು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ(Kartavya Path) ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದರು.

VISTARANEWS.COM


on

Vinesh Phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಾಂಪಿಯನ್ ವಿನೇಶ್ ಫೋಗಟ್(Vinesh Phogat) ಅವರು ಏಷ್ಯನ್ ಒಲಿಂಪಿಕ್ ಅರ್ಹತಾ ಸುತ್ತಿನ ಮಹಿಳೆಯರ 50 ಕೆಜಿ ಸ್ಪರ್ಧೆಯಲ್ಲಿ ಸೆಮಿಫೈನಲ್‌ನಲ್ಲಿ ಕಜಕಿಸ್ತಾನ್‌ನ ಲಾರಾ ಗ್ಯಾನಿಕಿಜಿ ಅವರನ್ನು 10-0 ಅಂತರದಿಂದ ಸೋಲಿಸುವ ಮೂಲಕ ಪ್ಯಾರಿಸ್​ ಒಲಿಂಪಿಕ್ಸ್​ಗೆ(Paris Olympics) ಅರ್ಹತೆ ಪಡೆದಿದ್ದಾರೆ. ಅತ್ಯಂತ ಶ್ರೇಷ್ಠ ಪ್ರದರ್ಶನ ತೋರಿದ ವಿನೇಶ್ ಎದುರಾಳಿಯನ್ನು ಕೇವಲ 4:18 ನಿಮಿಷದಲ್ಲಿ ಮಣಿಸಿದರು. 57 ಕೆಜಿ ವಿಭಾಗದಲ್ಲಿ ಅಂಶು ಮಲಿಕ್‌ ಕೂಡ ಒಲಿಂಪಿಕ್ಸ್​ಗೆ(Paris Olympics) ಅರ್ಹತೆ ಪಡೆದರು. ಇವರು ಉಜ್ಬೆಕ್ ಗ್ರಾಪ್ಲರ್ ಅವರನ್ನು 10-0 ಅಂತರದಿಂದ ಸೋಲಿಸಿ ಈ ಸಾಧನೆ ಮಾಡಿದರು.

ವಿನೇಶ್ ಫೋಗಟ್ ಅವರು ಕಳೆದ ವರ್ಷ, ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿಯೂ ಕೂಡ ಇವರೇ ಆಗಿದ್ದರು. ವಿಶ್ವಾದ್ಯಂತ ಈ ಪ್ರತಿಭಟನೆ ಭಾರೀ ಸುದ್ದು ಮಾಡಿತ್ತು.

ಬ್ರಿಜ್​ ಭೂಷಣ್​ ಅವರ ಆಪ್ತ ಸಂಜಯ್​ ಸಿಂಗ್​ ಅವರು ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದುದನ್ನು ಖಂಡಿಸಿ ತಾವು ಪಡೆದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ(Khel Ratna) ಮತ್ತು ಅರ್ಜುನ್(Arjuna ) ಪ್ರಶಸ್ತಿಯನ್ನು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ(Kartavya Path) ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದರು. ಇದು ಮಾತ್ರವಲ್ಲದೆ ಪ್ರಧಾನಿ ಮೋದಿಗೆ ಪತ್ರ ಬರೆದು ನನ್ನನ್ನು ಈ ಪರಿಸ್ಥಿತಿಗೆ ತಂದ ಸರ್ವಶಕ್ತನಿಗೆ ತುಂಬಾ ಧನ್ಯವಾದಗಳು ಎಂದು ಹೇಳಿದ್ದರು.

ಇದನ್ನೂ ಓದಿ Paris Olympics: ಟ್ರ್ಯಾಕ್‌-ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದರೆ 41.6 ಲಕ್ಷ ಬಹುಮಾನ!; ಐತಿಹಾಸಿಕ ನಿರ್ಧಾರ ಪ್ರಕಟಿಸಿದ ಡಬ್ಲ್ಯುಎ

ಕಳೆದ ವಾರವಷ್ಟೇ ಭಾರತ ಕುಸ್ತಿ ಫೆಡರೇಷನ್ (WFI) ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಗಂಭೀರ ಆರೋಪ ಮಾಡಿದ್ದರು. “ಒಲಿಂಪಿಕ್ಸ್ ಅರ್ಹತಾ ಪಂದ್ಯಗಳಲ್ಲಿ ನನ್ನ ಭಾಗವಹಿಸುವಿಕೆ ತಡೆಯಲು ಡಬ್ಲ್ಯುಎಫ್‌ಐ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಡೋಪಿಂಗ್ ಪ್ರಕರಣದಲ್ಲಿ ತನ್ನನ್ನು ಸಿಲುಕಿಸುವ ಭಯವಿದೆ. ನಾನು ಅಭ್ಯಾಸದ ವೇಳೆ ಸೇವಿಸುವ ನೀರಿನಲ್ಲಿ ಡೋಪಿಂಗ್ ಅಂಶವುಳ್ಳ ಕೆಲ ರಾಸಾಯನಿಕವನ್ನು ಬರೆಸಿರುವ ಅನುಮಾನವಿದೆ” ಎಂದು ವಿನೇಶ್​ ಫೋಗಟ್‌ ಆರೋಪಿಸಿದ್ದರು. ಇದೀಗ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಗಿಟ್ಟಿಸಿಕೊಂಡಿದ್ದಾರೆ. ಒಲಿಂಪಿಕ್ಸ್​ ಜುಲೈ 26 ರಿಂದ ಆಗಸ್ಟ್‌ 11ರವರೆಗೆ ನಡೆಯಲಿದೆ.

ಇತ್ತೀಚೆಗೆ ವಿನೇಶ್ ಫೋಗಟ್(Vinesh Phogat) ಸೀನಿಯರ್‌ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನ 55 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು. 55 ಕೆಜಿ ವಿಭಾಗದಲ್ಲಿ ವಿನೇಶ್​ ಅವರು ಮಧ್ಯಪ್ರದೇಶದ ಜ್ಯೋತಿ ಅವರನ್ನು 4-0 ಅಂತರದಿಂದ ಸೋಲಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. ರೈಲ್ವೆ ಸ್ಪೋರ್ಟ್ಸ್ ಪ್ರಮೋಷನ್ ಬೋರ್ಡ್ (ಆರ್‌ಎಸ್‌ಪಿಬಿ) ತಂಡದ ಪರ 29 ವರ್ಷದ ವಿನೇಶ್​ ಕಣಕ್ಕಿಳಿದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 : ರೋಹಿತ್​ ಶರ್ಮಾ ಬೆಂಚು ಕಾಯುವಂತೆ ಮಾಡಿದ ಹಾರ್ದಿಕ್ ಪಾಂಡ್ಯ

IPL 2024: ಐದು ಬಾರಿಯ ಚಾಂಪಿಯನ್ಸ್ ಮುಂಬಯಿ ಇಂಡಿಯನ್ಸ್ ತವರು ಸ್ಟೇಡಿಯಮ್​ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಅದ್ಭುತ ದಾಖಲೆಯನ್ನು ಹೊಂದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಕೋಲ್ಕತಾ ವಿರುದ್ಧ ಮುಂಬೈ ಇಂಡಿಯನ್ಸ್ ಆಡಿದ 10 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಸಾಧಿಸಿದೆ. ಪ್ರಸ್ತುತ ಮುಂಬೈನಲ್ಲಿ ಫಾರ್ಮ್​ನಲ್ಲಿ ಇಲ್ಲ. ಆದರೂ ಗೆಲುವಿಗಾಗಿ ಪ್ರಯತ್ನಿಸಲಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್ 2024 ರ (IPL 2024) 51 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಮುಂಬೈ ಇಂಡಿಯನ್ಸ್ ತನ್ನ ಕೊನೆಯ ನಾಲ್ಕು ಪಂದ್ಯಗಳನ್ನು ತವರಿನಲ್ಲಿ ಆಡಿದೆ ಮತ್ತು ಅದರಲ್ಲಿ ಮೂರನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ತವರಿನ ಪರಿಸ್ಥಿತಿಯನ್ನು ಸದುಪಯೋಗಪಡಿಸಿಕೊಂಡು ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿ ಮೂರು ಪಂದ್ಯಗಳ ಸೋಲಿನ ಸರಣಿಯನ್ನು ಕೊನೆಗೊಳಿಸುವ ವಿಶ್ವಾಸದಲ್ಲಿದೆ ಹಾರ್ದಿಕ್ ಪಾಂಡ್ಯ ಬಳಗ.

ಐದು ಬಾರಿಯ ಚಾಂಪಿಯನ್ಸ್ ಮುಂಬಯಿ ಇಂಡಿಯನ್ಸ್ ತವರು ಸ್ಟೇಡಿಯಮ್​ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಅದ್ಭುತ ದಾಖಲೆಯನ್ನು ಹೊಂದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಕೋಲ್ಕತಾ ವಿರುದ್ಧ ಮುಂಬೈ ಇಂಡಿಯನ್ಸ್ ಆಡಿದ 10 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಸಾಧಿಸಿದೆ. ಪ್ರಸ್ತುತ ಮುಂಬೈನಲ್ಲಿ ಫಾರ್ಮ್​ನಲ್ಲಿ ಇಲ್ಲ. ಆದರೂ ಗೆಲುವಿಗಾಗಿ ಪ್ರಯತ್ನಿಸಲಿದೆ.

ರೋಹಿತ್ ಶರ್ಮಾಗೆ ಇಲ್ಲ ಚಾನ್ಸ್​

ಶುಕ್ರವಾರ (ಮೇ 3) ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ನಂತರ ಆತಿಥೇಯರು ಆಟಕ್ಕಾಗಿ ವಿಶೇಷ ಪ್ಲೇಯಿಂಗ್ ಇಲೆವೆನ್ ಅನ್ನು ಘೋಷಿಸಿದರು. ಅಂದರೆ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಹೆಸರು ಆಡುವ ಹನ್ನೊಂದರಲ್ಲಿ ಕಾಣೆಯಾಗಿತ್ತು. ಆದರೆ, ಅವರು ಇಂಪ್ಯಾಕ್ಟ್​ ಪ್ಲೇಯರ್ ಆಗಿ ಆಡಿದರು. ಅವರು ಫೀಲ್ಡಿಂಗ್​ಗೆ ಬರಲಿಲ್ಲ.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡಕ್ಕೆ ಕೆ. ಎಲ್​ ರಾಹುಲ್​ ಬೇಡ ಅಂದಿದ್ದು ರೋಹಿತ್ ಶರ್ಮಾ; ಸ್ಫೋಟಕ ಮಾಹಿತಿ ಬಹಿರಂಗ

ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಮಾಡುತ್ತಿರುವುದರಿಂದ, ಅನುಭವಿ ಬ್ಯಾಟರ್​ ಮೈದಾನಕ್ಕೆ ಇಳಿಯಲಿಲ್ಲ. ಆದರೆ ಪಂದ್ಯದ ದ್ವಿತೀಯಾರ್ಧದಲ್ಲಿ ಬ್ಯಾಟಿಂಗ್ ಮಾಡಲು ಹೊರಬಂದರು. ಕಳೆದ ಮೂರು ಇನ್ನಿಂಗ್ಸ್​ಗಳಲ್ಲಿ ರೋಹಿತ್ ಎರಡಂಕಿಯ ಗಡಿ ತಲುಪಲು ಸಾಧ್ಯವಾಗಿಲ್ಲ. ಹೀಗಾಗಿ ಮರಳಲು ಎದುರು ನೋಡುತ್ತಿದ್ದಾರೆ.

ನಾವು ಬೌಲಿಂಗ್ ಮಾಡುತ್ತೇವೆ. ಇದು ಯಾವಾಗಲೂ ಹೆಮ್ಮೆಗಾಗಿ ಆಡುವ ಪಂದ್ಯ. ನಮಗೆ ಸಾಕಷ್ಟು ಕಠಿಣವಾಗಿ ಕಾಣುತ್ತದೆ ಆದರೆ ಅದೇ ಸಮಯದಲ್ಲಿ, ನಾವು ಉತ್ತಮ ಕ್ರಿಕೆಟ್ ಆಡಲು ಬಯಸುತ್ತೇವೆ. ತವರಿಗೆ ಮರಳಲು ಸಂತೋಷವಾಗಿದೆ. ಉತ್ತಮ ಟ್ರ್ಯಾಕ್​ನಂತೆ ಕಾಣುತ್ತದೆ. ಇದು ಹೊಸ ಪಿಚ್​ ಆದ್ದರಿಂದ ಮೊದಲು ಬೌಲಿಂಗ್ ಮಾಡುವುದು ಒಳ್ಳೆಯದು ಎಂದು ಭಾವಿಸಿದೆ. ನಬಿ ಬದಲಿಗೆ ನಮನ್ ಧೀರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ,” ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಪ್ಲೇಯಿಂಗ್ ಇಲೆವೆನ್ ಇಂತಿದೆ

ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೇಹಾಲ್ ವಧೇರಾ, ಹಾರ್ದಿಕ್ ಪಾಂಡ್ಯ (ಸಿ), ನಮನ್ ಧೀರ್, ಟಿಮ್ ಡೇವಿಡ್, ಜೆರಾಲ್ಡ್ ಕೊಟ್ಜೆ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.

ಕೋಲ್ಕತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್ (ವಿಕೆಟ್​ ಕೀಪರ್), ಸುನಿಲ್ ನರೈನ್, ಆಂಗ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣ್ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.

Continue Reading

ಕ್ರೀಡೆ

KL Rahul : ವಿಶ್ವ ಕಪ್​ ತಂಡಕ್ಕೆ ಕೆ. ಎಲ್​ ರಾಹುಲ್​ ಬೇಡ ಅಂದಿದ್ದು ರೋಹಿತ್ ಶರ್ಮಾ; ಆಂತರಿಕ ಮಾಹಿತಿ ಬಹಿರಂಗ

KL Rahul: ಆಯ್ಕೆದಾರರು ರಾಹುಲ್​ಗಿಂತ ಸ್ಯಾಮ್ಸನ್ ಮತ್ತು ಪಂತ್​​ಗೆ ಆದ್ಯತೆ ನೀಡಲು ಒಂದು ಕಾರಣವೆಂದರೆ ರಾಹುಲ್​ ಹೆಚ್ಚಾಗಿ ಅಗ್ರ ಕ್ರಮಾಂಕದಲ್ಲಿ ಆಡುತ್ತಾರೆ. ಟಿ20ಐನಲ್ಲಿ ರಾಹುಲ್ ಆರಂಭಿಕನಾಗಿ 54 ಇನ್ನಿಂಗ್ಸ್​ಗಳಲ್ಲಿ 3 ನೇ ಕ್ರಮಾಂಕದಲ್ಲಿ 10 ಇನ್ನಿಂಗ್ಸ್​ಗಳಲ್ಲಿ ಮತ್ತು 4 ನೇ ಕ್ರಮಾಂಕದಲ್ಲಿ ಕೇವಲ 4 ಇನ್ನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

VISTARANEWS.COM


on

KL Rahul
Koo

ನವದೆಹಲಿ: ಮುಂಬರುವ ಟಿ20 ವಿಶ್ವ ಕಪ್​​ನಲ್ಲಿ ಕೆ. ಎಲ್​ ರಾಹುಲ್ (KL Rahul) ಸ್ಥಾನ ಪಡೆಯದಿರಲು ನಾಯಕ ರೋಹಿತ್​ ಶರ್ಮಾ ಕಾರಣ ಎಂಬ ಮಾಹಿತಿ ಬಹಿರಂಗಗೊಂಡಿದೆ. ಐಪಿಎಲ್ 2024 ಪ್ರಾರಂಭವಾಗುವ ಮೊದಲು ಲಕ್ನೊ ಸೂಪರ್ ಜೈಂಟ್ಸ್ (LSG) ನಾಯಕ ಕೆಎಲ್ ರಾಹುಲ್ ಅವರನ್ನು 2024 ರ ಟಿ 20 ವಿಶ್ವಕಪ್ ತಂಡಕ್ಕೆ ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದರು ಎಂದು ಮೂಲಗಳು ತಿಳಿಸಿವೆ.

2024ರ ಟಿ 20 ವಿಶ್ವಕಪ್​​ಗಾಗಿ ರಾಹುಲ್ ಅವರನ್ನು ಮಂಗಳವಾರ ಭಾರತ ತಂಡದಿಂದ ಹೊರಗಿಡಲಾಗಿತ್ತು. ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ವರ್ಷದ ಐಪಿಎಲ್​​ನಲ್ಲಿ ರಾಹುಲ್ ಅವರ ಪ್ರಭಾವಶಾಲಿ ಪ್ರದರ್ಶನವನ್ನು ಪರಿಗಣಿಸಿ ಈ ನಿರ್ಧಾರವು ಹುಬ್ಬೇರುವಂತೆ ಮಾಡಿತ್ತು. ಅಲ್ಲಿ ಅವರು ಹತ್ತು ಇನ್ನಿಂಗ್ಸ್​ಗಳಲ್ಲಿ 40.60 ಸರಾಸರಿಯಲ್ಲಿ 406 ರನ್ ಗಳಿಸಿದ್ದಾರೆ. ಎಲ್ಎಸ್ಜಿ ಪರ 142.96 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಈ ಎಲ್ಲಾ ರನ್ ಗಳನ್ನು ಅಗ್ರ ಕ್ರಮಾಂಕದಲ್ಲಿ ಸ್ಕೋರ್ ಮಾಡಲಾಗಿದೆ.

ಎಲ್ಎಸ್ಜಿ ಮೂಲದ ಮಾಹಿತಿ ಏನು?

ಆಯ್ಕೆದಾರರು ರಾಹುಲ್​ಗಿಂತ ಸ್ಯಾಮ್ಸನ್ ಮತ್ತು ಪಂತ್​​ಗೆ ಆದ್ಯತೆ ನೀಡಲು ಒಂದು ಕಾರಣವೆಂದರೆ ರಾಹುಲ್​ ಹೆಚ್ಚಾಗಿ ಅಗ್ರ ಕ್ರಮಾಂಕದಲ್ಲಿ ಆಡುತ್ತಾರೆ. ಟಿ20ಐನಲ್ಲಿ ರಾಹುಲ್ ಆರಂಭಿಕನಾಗಿ 54 ಇನ್ನಿಂಗ್ಸ್​ಗಳಲ್ಲಿ 3 ನೇ ಕ್ರಮಾಂಕದಲ್ಲಿ 10 ಇನ್ನಿಂಗ್ಸ್​ಗಳಲ್ಲಿ ಮತ್ತು 4 ನೇ ಕ್ರಮಾಂಕದಲ್ಲಿ ಕೇವಲ 4 ಇನ್ನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಆದಾಗ್ಯೂ, ವಿಶ್ವಕಪ್ ಆಯ್ಕೆ ಸಮೀಪಿಸುತ್ತಿರುವುದರಿಂದ ಅವರು ಎಲ್ಎಸ್​​ಜಿ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾರೆ ಎಂಬ ಊಹಾಪೋಹಗಳು ಇದ್ದವು.

ಇದನ್ನೂ ಓದಿ: IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

ಎಲ್ಎಸ್​​ಜಿ ಓಪನರ್ ಆಗಿ ರಾಹುಲ್ ಬದಲಿಗೆ ಅಗ್ರ ಕ್ರಮಾಂಕದ ಆಟಗಾರ ದೇವದತ್ ಪಡಿಕ್ಕಲ್ ಅವರನ್ನು ಲಕ್ನೋ ಖರೀದಿಸಿತು. ಆದಾಗ್ಯೂ, ಅದು ಕೆಲಸ ಮಾಡಿಲ್ಲ. ಈಗ ಎಲ್ಎಸ್​​ಜಿ ಹತ್ತಿರದ ಮೂಲವು ರಾಹುಲ್ ತಮ್ಮ ಐಪಿಎಲ್ ಫ್ರಾಂಚೈಸಿಗಾಗಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡದಿರಲು ಕಾರಣವನ್ನು ಬಹಿರಂಗಪಡಿಸಿದೆ.

ಕೆಎಲ್ ರಾಹುಲ್ ಎಲ್ಎಸ್​ಜಿ ತಂಡ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧರಾಗಿದ್ದರು, ಅದಕ್ಕಾಗಿಯೇ ನಾವು ಪಡಿಕ್ಕಲ್ ಅವರನ್ನು ನಮ್ಮ ತಂಡಕ್ಕೆ ಕರೆತಂದಿದ್ದೆವು. ಆದರೆ ಕೆಲವು ದಿನಗಳ ಹಿಂದೆ ಕೆಎಲ್ ರೋಹಿತ್ ಅವರೊಂದಿಗೆ ಚಾಟ್ ಮಾಡಿದ್ದರು. ಅವರು ಕೆಎಲ್ ರಾಹುಲ್ ಅವರನ್ನು ತಂಡಕ್ಕೆ ಸೇರಿಸುವ ಸಾಧ್ಯತೆಗಳು ಇಲ್ಲ ಎಂದು ಹೇಳಿದ್ದರು. ಹೀಗಾಗಿ ಕೆಎಲ್ ಐಪಿಎಲ್​​ನಲ್ಲಿ ಓಪನರ್ ಆದರು”ಎಂದು ಎಲ್ಎಸ್ಜಿಗೆ ಹತ್ತಿರದ ಮೂಲಗಳು ತಿಳಿಸಿವೆ.

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ರಾಹುಲ್ ಅವರ ಸೀಮಿತ ಅನುಭವ ಗಮನಿಸಿದರೆ, ರಿಷಭ್ ಪಂತ್, ಸಂಜು ಸ್ಯಾಮ್ಸನ್ ಮತ್ತು ಶಿವಂ ದುಬೆ ಬದಲಿಗೆ ಅವರನ್ನು ಆಯ್ಕೆ ಮಾಡುವುದು ಸೂಕ್ತವಾಗಿದೆ.

Continue Reading

Latest

IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

Virat kohli: ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರವರು ಆಡುತ್ತಾರೆ. ಉತ್ತಮ ಬೌಲಿಂಗ್ ಮತ್ತು ಎಲ್ಲವೂ ಇದಕ್ಕೆ ಸೇರ್ಪಡೆಯಾಗುತ್ತದೆ. ಏನೇ ಹೇಳಿದರೂ ಪ್ರತಿಯೊಬ್ಬ ಕ್ರಿಕೆಟಿಗನನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಇರ್ಫಾನ್ ವೀಕ್ಷಕವಿವರಣೆಯ ಸಮಯದಲ್ಲಿ ಹೇಳಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್​ 2024ರ (IPL 2024) ಪಂದ್ಯದಲ್ಲಿ ಸನ್​​ರೈಸರ್ಸ್​ ಹೈದರಾಬಾದ್ (SRH) ತಂಡದ ಆರಂಭಿಕ ಬ್ಯಾಟರ್​ ಟ್ರಾವಿಸ್ ಹೆಡ್ (Travis Head)) 44 ಎಸೆತಗಳಲ್ಲಿ 58 ರನ್ ಗಳಿಸಿದ್ದಾರೆ. ಸಾಮಾನ್ಯವಾಗಿ, ಆಸ್ಟ್ರೇಲಿಯಾದ ಅಂತಾರಾಷ್ಟ್ರೀಯ ಆಟಗಾರ ಆರಂಭದಿಂದಲೂ ಬೌಲರ್​ಗಳನ್ನು ದಂಡಿಸುತ್ತಾರೆ. ಪವರ್​ಪ್ಲೇನಲ್ಲಿ ಪ್ರಾಬಲ್ಯ ಸಾಧಿಸುತ್ತಾರೆ. ಆದಾಗ್ಯೂ, ಅವರು ತಮ್ಮ ಪಾಲುದಾರರಾದ ಅಭಿಷೇಕ್ ಶರ್ಮಾ ಮತ್ತು ಅನ್ಮೋಲ್​ಪ್ರೀತ್​ ಸಿಂಗ್ ಅವರನ್ನು ಬೇಗನೆ ಕಳೆದುಕೊಂಡಿದ್ದರಿಂದ ಹೆಡ್ ಇನ್ನಿಂಗ್ಸ್ ಕಟ್ಟಲು ನಿರ್ಧರಿಸಿದ್ದರು. ಹೀಗಾಗಿ ಅವರು ಸ್ಟ್ರೈಕ್​​ರೇಟ್ (Strike Rate)​ ಕುಸಿಯಿತು.

ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಮತ್ತು ಮೊಹಮ್ಮದ್ ಕೈಫ್ ಇದನ್ನೇ ಉದಾಹರಣೆಯಾಗಿ ಇಟ್ಟುಕೊಂಡು ಕೊಹ್ಲಿಯ ಸ್ಟ್ರೈಕ್​ರೇಟ್​ ಬಗ್ಗೆ ಮಾತನಾಡುವವರಿಗೆ ಪಾಠ ಹೇಳಿದ್ದಾರೆ. ಒಂದು ವೇಳೆ ವಿರಾಟ್ ಕೊಹ್ಲಿ ಅಂತಹ ಇನ್ನಿಂಗ್ಸ್ ಆಡಿದ್ದರೆ ಅವರ ಸ್ಟ್ರೈಕ್ ರೇಟ್ ಬಗ್ಗೆ ಅನೇಕ ಚರ್ಚೆಗಳು ನಡೆಯುತ್ತಿದ್ದವು ಎಂದು ಅಭಿಪ್ರಾಯಪಟ್ಟಿದ್ದಾರೆ. ಸಾಕಷ್ಟು ರನ್ ಗಳಿಸಿ, ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೂ ಐಪಿಎಲ್ 2024 ರಾದ್ಯಂತ ಕೊಹ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆ ಎದುರಿಸಿದ್ದಾರೆ. ಹೆಡ್ ಅವರ ಇನ್ನಿಂಗ್ಸ್ ಅನ್ನು ನೋಡಿದ ಪಠಾಣ್ ಮತ್ತು ಕೈಫ್ ಕೊಹ್ಲಿಯ ರಕ್ಷಣೆಗೆ ಧಾವಿಸಿದ್ದಾರೆ. ಪ್ರತಿಯೊಬ್ಬ ಕ್ರಿಕೆಟಿಗನನ್ನು ಸಮಾನವಾಗಿ ಪರಿಗಣಿಸಬೇಕು ಎಂದು ವಾದ ಮಂಡಿಸಿದ್ದಾರೆ.

ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರವರು ಆಡುತ್ತಾರೆ. ಉತ್ತಮ ಬೌಲಿಂಗ್ ಮತ್ತು ಎಲ್ಲವೂ ಇದಕ್ಕೆ ಸೇರ್ಪಡೆಯಾಗುತ್ತದೆ. ಏನೇ ಹೇಳಿದರೂ ಪ್ರತಿಯೊಬ್ಬ ಕ್ರಿಕೆಟಿಗನನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಇರ್ಫಾನ್ ವೀಕ್ಷಕವಿವರಣೆಯ ಸಮಯದಲ್ಲಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೈಫ್​​ “ನೀವು ಹೇಳಿದ್ದು ಸರಿ. ಇದು ವಿರಾಟ್ ಕೊಹ್ಲಿ ಆಗಿದ್ದರೆ, ಜನರು 44 ಎಸೆತಗಳಲ್ಲಿ ಕೇವಲ 58 ರನ್ ಗಳಿಸುತ್ತಿದ್ದಾರೆ ಎಂದು ಟೀಕಿಸುತ್ತಿದ್ದರು. ಅದು ಕಡಿಮೆ ಎಂದು ಅವರು ಹೇಳುತ್ತಿದ್ದರು ಮತ್ತು ಅವರ ಸ್ಟ್ರೈಕ್ ರೇಟ್ ಬಗ್ಗೆ ಚರ್ಚೆಗಳು ನಡೆಯುತ್ತಿತ್ತು. ಇದು ಹೆಡ್ ಅವರ ಉತ್ತಮ ಇನ್ನಿಂಗ್ಸ್ ಎಂದು ನಾನು ನಂಬುತ್ತೇನೆ,” ಎಂದು ಕೈಫ್ ಹೇಳಿದರು.

ಇದನ್ನೂ ಓದಿ: IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

“ಆದರೆ ವಿರಾಟ್ ಕೊಹ್ಲಿ ಇದ್ದಿದ್ದರೆ, ಜನರು ಸ್ಟ್ರೈಕ್ ರೇಟ್​​ಗೆ ಅಂಟಿಕೊಳ್ಳುತ್ತಿದ್ದರು. ಆದರೆ ಇಲ್ಲಿ ನಾವು ತಂಡದ ಗೆಲುವಿನ ಜವಾಬ್ದಾರಿ ತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೇವೆ. ಆದ್ದರಿಂದ ದಯವಿಟ್ಟು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿ” ಎಂದು ಇರ್ಫಾನ್ ಅಭಿಪ್ರಾಯ ಮಂಡಿಸಿದರು.

ಹೆಡ್ ಅವರ 58 ಮತ್ತು ನಿತೀಶ್ ರೆಡ್ಡಿ ಅವರ 76* ರನ್​ಗಳ ನೆರವಿನಿಂದ ಎಸ್​ಆರ್​ಎಚ್​ ರಾಜಸ್ಥಾನ್ ವಿರುದ್ಧ 201 ರನ್ ಗಳಿಸಲು ನೆರವಾಯಿತು. ಚೇಸಿಂಗ್ ವಿಷಯಕ್ಕೆ ಬಂದಾಗ, ಸಂಜು ಸ್ಯಾಮ್ಸನ್ ನೇತೃತ್ವದ ತಂಡವು ಹೆಚ್ಚಿನ ಸಮಯ ಗೆಲುವಿಗಾಗಿ ಹಂಬಲಿಸಿತು. ಆದರೆ ಕೊನೆಯಲ್ಲಿ ಕೇವಲ ಒಂದು ರನ್​ನಿಂದ ಸೋತಿತು. ಈ ಗೆಲುವಿನೊಂದಿಗೆ ಹೈದರಾಬಾದ್ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದರೆ, ರಾಜಸ್ಥಾನ ಅಗ್ರಸ್ಥಾನದಲ್ಲಿದೆ.

Continue Reading

ಕ್ರೀಡೆ

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

IPL 2024: ಐಸಿಸಿ ವಿಶ್ವಕಪ್ 2023 ರ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತ ನಂತರ ಮೊಹಮ್ಮದ್ ಕೈಫ್ ಅವರ ಹೇಳಿಕೆಗಳು ಸಾಕಷ್ಟು ಟ್ರೋಲ್​​ಗೆ ಒಳಗಾಗಿದ್ದವು. ಪಂದ್ಯಾವಳಿಯಲ್ಲಿ ಸತತ 10 ಪಂದ್ಯಗಳನ್ನು ಗೆದ್ದರೂ ರೋಹಿತ್ ಶರ್ಮಾ ನೇತೃತ್ವದ ತಂಡವು ಫೈನಲ್ ಪಂದ್ಯದಲ್ಲಿ ಸೋತಿತ್ತು. ಆ ಸೋಲನ್ನು ಒಪ್ಪಿಕೊಳ್ಳವುದಕ್ಕೆ ಭಾರತದ ಮಾಜಿ ಕ್ರಿಕೆಟಿಗ ಸಿದ್ಧರಿರಲಿಲ್ಲ.

VISTARANEWS.COM


on

IPL 2024
Koo

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ(IPL 2024) ಗುರುವಾರ (ಮೇ 3) ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡ ಸೋತ ನಂತರ ಭಾರತದ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್ (Wasim Jafar) ಅವರು ಐಸಿಸಿ ವಿಶ್ವಕಪ್ 2023 ರ ಫೈನಲ್ ಕುರಿತ ಹೇಳಿಕೆಗಳನ್ನು ಮತ್ತೊಬ್ಬ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಅವರನ್ನು ಟ್ರೋಲ್ ಮಾಡಿದ್ದಾರೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವೆ ಪಂದ್ಯ ನಡೆದಿತ್ತು.

ಐಸಿಸಿ ವಿಶ್ವಕಪ್ 2023 ರ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತ ನಂತರ ಮೊಹಮ್ಮದ್ ಕೈಫ್ ಅವರ ಹೇಳಿಕೆಗಳು ಸಾಕಷ್ಟು ಟ್ರೋಲ್​​ಗೆ ಒಳಗಾಗಿದ್ದವು. ಪಂದ್ಯಾವಳಿಯಲ್ಲಿ ಸತತ 10 ಪಂದ್ಯಗಳನ್ನು ಗೆದ್ದರೂ ರೋಹಿತ್ ಶರ್ಮಾ ನೇತೃತ್ವದ ತಂಡವು ಫೈನಲ್ ಪಂದ್ಯದಲ್ಲಿ ಸೋತಿತ್ತು. ಆ ಸೋಲನ್ನು ಒಪ್ಪಿಕೊಳ್ಳವುದಕ್ಕೆ ಭಾರತದ ಮಾಜಿ ಕ್ರಿಕೆಟಿಗ ಸಿದ್ಧರಿರಲಿಲ್ಲ. ಅತ್ಯುತ್ತಮ ತಂಡ ಭಾರತದ ಸೋಲನ್ನು ನಾನು ಒಪ್ಪಿಕೊಳ್ಳುವುದಿಲ್ಲ ಎಂದು ಮೊಹಮ್ಮದ್ ಕೈಫ್ ಹೇಳಿಕೊಂಡಿದ್ದರು.

ಕಪ್​ ಗೆದ್ದಿರುವ ಆಸ್ಟ್ರೇಲಿಯಾಕ್ಕೆ ಅಭಿನಂದನೆಗಳು. ಆದರೆ ಅತ್ಯುತ್ತಮ ತಂಡವು ವಿಶ್ವಕಪ್ ಗೆದ್ದಿದೆ ಎಂದು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ. ಈ ಭಾರತೀಯ ತಂಡವು ಅತ್ಯುತ್ತಮ ತಂಡವಾಗಿತ್ತು. ಅವರು ಇಂದು ಸೋತರು. ಇದು ಆ ಕೆಟ್ಟ ದಿನಗಳಲ್ಲಿ ಒಂದಾಗಿದೆ ಎಂದು ವಿಶ್ವ ಕಪ್​ ಬಳಿಕ ಕೈಫ್​ ಹೇಳಿಕೆ ನೀಡಿದ್ದರು.

ಇದೀಗ ಕೆಲವು ತಿಂಗಳುಗಳ ನಂತರ, ಮೊಹಮ್ಮದ್ ಕೈಫ್ ಅವರನ್ನು ಟ್ರೋಲ್ ಮಾಡಲು ವಾಸಿಮ್ ಜಾಫರ್ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡರು. ಸನ್ರೈಸರ್ಸ್​​ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 1 ರನ್ ಸೋತ ನಂತರ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಚಿತ್ರ ಪೋಸ್ಟ್ ಮಾಡಿದ್ದಾರೆ. “ಕಾಗದದ ಮೇಲಿನ ಬಲಿಷ್ಠ ತಂಡವು ಪಂದ್ಯ ಕಳೆದುಕೊಂಡಾಗ ಮೊಹಮ್ಮದ್ ಕೈಫ್” ಎಂಬ ಉಲ್ಲೇಖ ನೀಡಿ ಚಿತ್ರ ಪೋಸ್ಟ್ ಮಾಡಿದ್ದಾರೆ.

ಐಪಿಎಲ್ 2024 ರಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ನಿರಾಶಾದಾಯಕ ಸೋಲು ಅನುಭವಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕೊನೆಯ ಎಸೆತದಲ್ಲಿ ಫಲಿತಾಂಶವನ್ನು ನಿರ್ಧಾರಗೊಂಡಿತು. ಇದು ಪಂದ್ಯಾವಳಿಯ ಅತ್ಯಂತ ರೋಮಾಂಚಕಾರಿ ಆಟಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

202 ರನ್ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಆರಂಭಿಕ ವಿಕೆಟ್​​ಗಳನ್ನು ಬೇ ಕಳೆದುಕೊಂಡಿತು. ಆದರೆ ಯಶಸ್ವಿ ಜೈಸ್ವಾಲ್ ಮತ್ತು ರಿಯಾನ್ ಪರಾಗ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಕೊನೆಯಲ್ಲಿ, ರೋವ್ಮನ್ ಪೊವೆಲ್ ಆಟವನ್ನು ಕೌತುಕಕ್ಕೆ ಕೊಂಡೊಯ್ದರು. ತ್ತು ಕೊನೆಯ ಎಸೆತದಲ್ಲಿ 2 ರನ್​ಗಳ ಅಗತ್ಯವಿದ್ದಾಗ ಅವರು ಔಟಾಗಿದ್ದರಿಂದ ಸನ್​ರೈಸರ್ಸ್​ ಹೈದರಾಬಾದ್ ಪಂದ್ಯವನ್ನು 1 ರನ್​ಗಳಿಂದ ಗೆದ್ದುಕೊಂಡಿತು.

ರೋಹಿತ್ ಶರ್ಮಾಗೆ ದೊಡ್ಡ ಅವಕಾಶ

ಮೊಹಮ್ಮದ್ ಕೈಫ್ ಇತ್ತೀಚೆಗೆ 2024 ರ ಟಿ 20 ವಿಶ್ವಕಪ್​​ ನಲ್ಲಿ ಭಾರತದ ಅವಕಾಶಗಳ ಬಗ್ಗೆ ಮಾತನಾಡಿದ್ದಾರೆ. ಮುಂಬರುವ ಪಂದ್ಯಾವಳಿಯು ನಾಯಕನಾಗಿ ರೋಹಿತ್ ಶರ್ಮಾಗೆ ಉತ್ತಮ ಅವಕಾಶವಾಗಿದೆ ಎಂದು ಅವರು ನುಡಿದಿದ್ದಾರೆ. ಐಸಿಸಿ ವಿಶ್ವಕಪ್ 2023 ರಲ್ಲಿ ಭಾರತವು ಅನುಭವಿಸಿದಂತಹ ಬೇಸರವನ್ನು ಎದುರಿಸುವುದಿಲ್ಲ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

“ರೋಹಿತ್ ಶರ್ಮಾ ಅವರು ಮುಂದಿನ 2 ರಿಂದ 3 ವರ್ಷಗಳವರೆಗೆ ಹೆಚ್ಚು ಕಾಲ ಆಡುವುದಿಲ್ಲ ಎಂದು ತಿಳಿದಿದೆ. ವಿರಾಟ್ ಕೊಹ್ಲಿ ಕೂಡ ಅದೇ ಹಾದಿಯಲ್ಲಿದ್ದಾರೆ. ನಾಯಕನಾಗಿ ರೋಹಿತ್​ಗೆ ಇದು ದೊಡ್ಡ ಅವಕಾಶ. ಪಂದ್ಯವು ಭಾರತದ ಕೈಯಲ್ಲಿದ್ದ ನಂತರ ಅವರು ಏಕದಿನ ವಿಶ್ವಕಪ್ ಫೈನಲ್​ನಲ್ಲಿ ಸೋತಿದ್ದಾರೆ. 10 ಪಂದ್ಯಗಳನ್ನು ಗೆದ್ದರೂ 1 ಪಂದ್ಯವನ್ನು ಸೋತಿತು.. ಟಿ 20 ವಿಶ್ವಕಪ್​​ನಲ್ಲಿ ಪರಿಸ್ಥಿತಿ ಒಂದೇ ರೀತಿ ಇರುವುದಿಲ್ಲ ಎಂದು ನಾನು ಭಾವಿಸುತ್ತೇನೆ, “ಎಂದು ಅವರು ಹೇಳಿದರು.

Continue Reading
Advertisement
Health Tips Kannada
ಆರೋಗ್ಯ3 mins ago

Health Tips Kannada : ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು?

Meeting with representatives of various political parties about MLC election in Hosapete
ವಿಜಯನಗರ6 mins ago

Vijayanagara News: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ; ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

Election campaign meeting for Kalaburgi Lok Sabha constituency BJP candidate Umesh Jadav at kalaburagi
ರಾಜಕೀಯ10 mins ago

Lok Sabha Election 2024: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಗ್ಯಾರಂಟಿ: ಬಿ.ಎಲ್. ಸಂತೋಷ್

Jai Shri Ram Slogan
ಕರ್ನಾಟಕ34 mins ago

Jai Shri Ram Slogan: ಜೈ ಶ್ರೀರಾಮ್ ಎಂದು ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದ ಕಾಂಗ್ರೆಸ್‌ ಮುಖಂಡ

Ballari Lok Sabha constituency Congress candidate E Tukaram election campaign in Kuduthini
ಬಳ್ಳಾರಿ36 mins ago

Lok Sabha Election 2024: ಕುಡುತಿನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಭರ್ಜರಿ ರೋಡ್‌ ಶೋ

IPL 2024
ಕ್ರೀಡೆ37 mins ago

IPL 2024 : ರೋಹಿತ್​ ಶರ್ಮಾ ಬೆಂಚು ಕಾಯುವಂತೆ ಮಾಡಿದ ಹಾರ್ದಿಕ್ ಪಾಂಡ್ಯ

Darshanam Mogulaiah
ದೇಶ43 mins ago

Darshanam Mogulaiah: 2 ವರ್ಷದ ಹಿಂದೆ ಪದ್ಮಶ್ರೀ ಪಡೆದ ಸಾಧಕ ಈಗ ಹೊಟ್ಟೆಪಾಡಿಗಾಗಿ ಕೂಲಿ ಕಾರ್ಮಿಕ!

Prajwal Revanna Case Who is the kingpin of Prajwal video pen drive HDK team is on its way
ಕ್ರೈಂ48 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

KL Rahul
ಕ್ರೀಡೆ58 mins ago

KL Rahul : ವಿಶ್ವ ಕಪ್​ ತಂಡಕ್ಕೆ ಕೆ. ಎಲ್​ ರಾಹುಲ್​ ಬೇಡ ಅಂದಿದ್ದು ರೋಹಿತ್ ಶರ್ಮಾ; ಆಂತರಿಕ ಮಾಹಿತಿ ಬಹಿರಂಗ

Physical Abuse
ಕರ್ನಾಟಕ1 hour ago

Physical Abuse: ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಸದ್ದಾಂ ಹುಸೇನ್ ಅರೆಸ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ6 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ17 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌